Tag: Kamal Haasan

  • ಸ್ಟಾರ್ ನಟರಿಗೆ ಟಾಂಗ್ ಕೊಟ್ಟ ‘ದಿ ಕೇರಳ ಸ್ಟೋರಿ’ ನಟಿ ಅದಾ ಶರ್ಮಾ

    ಸ್ಟಾರ್ ನಟರಿಗೆ ಟಾಂಗ್ ಕೊಟ್ಟ ‘ದಿ ಕೇರಳ ಸ್ಟೋರಿ’ ನಟಿ ಅದಾ ಶರ್ಮಾ

    ಸಾಕಷ್ಟು ಸದ್ದು ಮಾಡಿ, ಬಾಕ್ಸ್ ಆಫೀಸಿನಲ್ಲಿ ದುಡ್ಡೂ ಮಾಡಿರುವ ದಿ ಕೇರಳ ಸ್ಟೋರಿ ನಟಿ ಅದಾ ಶರ್ಮಾ (Adah Sharma)  ಕೆಲ ಸ್ಟಾರ್ ನಟರಿಗೆ ತಮ್ಮ ಮಾತಿನಲ್ಲೇ ತಿವಿದಿದ್ದಾರೆ. ‘ದಿ ಕೇರಳ ಸ್ಟೋರಿ’ ಸಿನಿಮಾ ವಿರೋಧಿಸಿ ಮಾತನಾಡಿದ್ದ ಕಮಲ್ ಹಾಸನ್, ನಾಸಿರುದ್ದೀನ್ ಶಾ ಸೇರಿದಂತೆ ಹಲವರಿಗೆ ತಮ್ಮ ಮಾತಿನಲ್ಲೇ ಏಟು ನೀಡಿದ್ದಾರೆ ಅದಾ. ‘ನಮ್ಮ ಸಿನಿಮಾದ ಓಟವನ್ನು ಕಟ್ಟಿ ಹಾಕಲು ಕೆಲವು ನಟರು ಪ್ರಯತ್ನಪಟ್ಟರು. ಆದರೆ, ಅದು ಆಗಲಿಲ್ಲ. ಯಾರ ಸಾಮರ್ಥ್ಯ ಏನು ಅಂತ ಗೊತ್ತಾಗಿದೆ’ ಎಂದು ಮಾತನಾಡಿದ್ದಾರೆ.

    ಈ ಹಿಂದೆ ಬಾಲಿವುಡ್ ಖ್ಯಾತ ನಟ ನಾಸಿರುದ್ದೀನ್ ಶಾ (Naseeruddin Shah) ‘ದಿ ಕೇರಳ ಸ್ಟೋರಿಬಗ್ಗೆ ಕಾಮೆಂಟ್ ಮಾಡಿದ್ದರು. ಸಿನಿಮಾವನ್ನು ತಾವು ಯಾವತ್ತೂ ನೋಡುವುದಿಲ್ಲ ಎಂದಿದ್ದ ಅವರು,  ಸಿನಿಮಾ ಗೆದ್ದಿದೆ ಎಂದ ಮಾತ್ರಕ್ಕೆ ಅದು ಒಳ್ಳೆಯ ಗೆಲುವಲ್ಲ. ಅದೊಂದು ಕೆಟ್ಟ ಟ್ರೆಂಡಿನ ಗೆಲುವು ಎಂದು ಪ್ರತಿಕ್ರಿಯಿಸಿದ್ದರು. ದ್ವೇಷವನ್ನು ಹಂಚುತ್ತಿರುವ ಕುರಿತು ಅವರು ಕಳವಳವನ್ನು  ವ್ಯಕ್ತಪಡಿಸಿದ್ದು, ಸಮಾಜದಲ್ಲಿ ಇನ್ನೆಷ್ಟು ದಿನ ದ್ವೇಷವನ್ನು ಹಂಚುತ್ತೀರಿ ಎಂದು ಪ್ರಶ್ನೆ ಮಾಡಿದ್ದರು.

    ಬಾಕ್ಸ್ ಆಫೀಸಿನಲ್ಲಿ ಇನ್ನೂರಕ್ಕೂ ಹೆಚ್ಚು ಕೋಟಿ ರೂಪಾಯಿ ಕಲೆಕ್ಷನ್ ಮಾಡಿ, ಇನ್ನೂ ಹಲವಾರು ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿರುವ ದಿ ಕೇರಳ ಸ್ಟೋರಿ ಬಗ್ಗೆ ಹಿಂದೆ ಕಮಲ್ ಹಾಸನ್ (Kamal Haasan) ಕೂಡ ಮಾತನಾಡಿದ್ದರು. ಅದೊಂದು ಪ್ರೊಪಗಾಂಡ ಸಿನಿಮಾ ಎಂದು ಟೀಕಿಸಿದ್ದರು. ಸತ್ಯವನ್ನು ಹೇಳದೇ ಅಸತ್ಯವನ್ನೇ ತುಂಬಿರುವಂತಹ ಚಿತ್ರವದು ಎಂದು ಮಾತನಾಡಿದ್ದರು. ಇದನ್ನೂ ಓದಿ:ಗಂಡು ಮಗುವಿಗೆ ಜನ್ಮ ನೀಡಿದ ನಟಿ, ಡೆಲಿವರಿ ಆಗ್ತಿದ್ದಂತೆ ಶೂಟಿಂಗ್ ಹಾಜರಾದ ಮಮತಾ

    ಅಬುಧಾಬಿಯಲ್ಲಿ ನಡೆದ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗಿಯಾಗಿದ್ದ ಕಮಲ್ ಹಾಸನ್,   ಸಂದರ್ಭದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ, ‘ನಾನು ದಿ ಕೇರಳ ಸ್ಟೋರಿ ಸಿನಿಮಾವನ್ನು ವಿರೋಧಿಸುತ್ತಲೇ ಬಂದಿದ್ದೇನೆ. ಅದಕ್ಕಾಗಿ ನನ್ನನ್ನೂ ವಿರೋಧಿಸಿದ್ದಾರೆ. ಸಿನಿಮಾದಲ್ಲಿ ಸತ್ಯ ಘಟನೆ ಆಧರಿಸಿದ ಸಿನಿಮಾ ಎಂದು ಹೇಳಿದರೆ ಸಾಲದು. ಅದರಲ್ಲಿ ಸತ್ಯ ಇರಬೇಕುಎಂದು ಪ್ರತಿಕ್ರಿಯಿಸಿದ್ದರು.

    ದಿ ಕೇರಳ ಸ್ಟೋರಿ’ (The Kerala Story) ಸಿನಿಮಾದ ಕಥೆಯೇ ಬೋಗಸ್ ಎಂದು ಹಲವರು ಈಗಾಗಲೇ ಹಲವರು ವಾದ ಮಾಡಿದ್ದಾರೆ. ಅವರು ಹೇಳಿದ ಪ್ರಮಾಣದಲ್ಲಿ ಮಹಿಳೆಯರು ಇಸ್ಲಾಂ ಮೂಲಭೂತವಾದಕ್ಕೆ ಸಿಲುಕಿಲ್ಲ ಎಂದು ಚರ್ಚೆ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಸಿನಿಮಾ ಟೀಮ್ ಮಾಧ್ಯಮಗೋಷ್ಠಿ ನಡೆಸಿ, ಅಲ್ಲಿಗೆ ಸಂತ್ರಸ್ತರನ್ನು ಕರೆತಂದಿದ್ದರು. ಒಬ್ಬೊಬ್ಬರ ಕಥೆಯನ್ನು ಸಿನಿಮಾ ಟೀಮ್ ಮಾಧ್ಯಮಗಳ ಮುಂದೆ ಬಿಚ್ಚಿಟ್ಟಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಮಲ್ ಹಾಸನ್ ನಿರ್ಮಾಣದ ಸಿನಿಮಾದಲ್ಲಿ ನಟಿ ಜಾನ್ವಿ

    ಕಮಲ್ ಹಾಸನ್ ನಿರ್ಮಾಣದ ಸಿನಿಮಾದಲ್ಲಿ ನಟಿ ಜಾನ್ವಿ

    ಗಾಗಲೇ ಬಹುಭಾಷಾ ನಟಿಯಾಗಿ ಶ್ರೀದೇವಿ ಕಪೂರ್ (Sridevi Kapoor) ಪುತ್ರಿ  ಜಾನ್ವಿ ಕಪೂರ್ (Janhavi Kapoor)  ಎರಡು ತೆಲುಗು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಜ್ಯೂನಿಯರ್ ಎನ್.ಟಿ.ಆರ್ ನಟನೆಯ ದೇವರ ಚಿತ್ರದಲ್ಲಿ ಅವರು ನಟಿಸುತ್ತಿದ್ದು,  ಅಖಿಲ್ ಅಕ್ಕಿನೇನಿ ಹೊಸ ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ. ಈ ನಡುವೆ ತಮಿಳು ಚಿತ್ರೋದ್ಯಮಕ್ಕೂ ಜಾನ್ವಿ ಹಾರಿದ್ದು, ಈ ಸಿನಿಮಾವನ್ನು ಕಮಲ್ ಹಾಸನ್ (Kamal Haasan) ನಿರ್ಮಾಣ ಮಾಡುತ್ತಿದ್ದಾರೆ.

    ಮಿಲಿ, ಗುಡ್ ಲಕ್ ಜರಿ ಸಿನಿಮಾಗಳ ಮೂಲಕ ಬಾಲಿವುಡ್‌ನಲ್ಲಿ (Bollywood) ಮೋಡಿ ಮಾಡಿರುವ ಹಾಟ್ ಬ್ಯೂಟಿ ಜಾನ್ವಿ ಕಪೂರ್ ತೆಲುಗಿನತ್ತ ಮುಖ ಮಾಡಿದಾಗ ಹುಬ್ಬೇರಿಸಿದವರೇ ಹೆಚ್ಚು. ಶ್ರೀದೇವಿ ಅವರು ಹೇಗೆ ಒಂದೊಂದೇ ಯಶಸ್ಸಿನ ಮೆಟ್ಟಿಲನ್ನು ಏರಿದ್ದರೋ ಅದೇ ರೀತಿ ಸೌತ್ ಸಿನಿಮಾ ಸ್ಕ್ರಿಪ್ಟ್‌ಗಳಿಗೆ ಜಾನ್ವಿ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿರುವುದು ಥೇಟ್ ಅಮ್ಮನ ನಡೆಯನ್ನೇ ಅನುಸರಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

    ಜ್ಯೂನಿಯರ್ ಎನ್‌ಟಿಆರ್ (Jr.ntr) ಜೊತೆಗಿನ ದೇವರ ಸಿನಿಮಾ ರಿಲೀಸ್ ಆಗುವ ಮುನ್ನವೇ ಮತ್ತೊಂದು ಬಂಪರ್ ಆಫರ್‌ ಅನ್ನ ನಟಿ ತಮ್ಮದಾಗಿಸಿಕೊಂಡಿದ್ದಾರೆ. ಜಾನ್ವಿ ಇದೀಗ ಮತ್ತೊಬ್ಬ ತೆಲುಗಿನ ನಟನ ಜೊತೆ ನಟಿಸಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಹೊಸ ಬಗೆಯ ಕಥೆಯಲ್ಲಿ ಜಾನ್ವಿ ಕಮಾಲ್‌ ಮಾಡಲಿದ್ದಾರೆ. ಇದನ್ನೂ ಓದಿ:‘ಟೋಬಿ’ ಶೆಟ್ಟರ ಕೆನ್ನೆಗೆ ಮುತ್ತಿಟ್ಟ ಚೈತ್ರಾ- ರಾಜ್ ಬಿ ಶೆಟ್ಟಿ ಸ್ಪಷನೆ

    ಹೊಸ ಸಿನಿಮಾಗೆ ನಾಗಾರ್ಜುನ ಪುತ್ರ ಅಖಿಲ್ ಅಕ್ಕಿನೇನಿಗೆ (Akhil Akkineni)  ನಾಯಕಿಯಾಗಿ ಜಾನ್ವಿ ಕಪೂರ್ ಸೆಲೆಕ್ಟ್ ಆಗಿದ್ದಾರೆ. ಯುವ ನಿರ್ದೇಶಕ ಅನಿಲ್ ಕುಮಾರ್ (Anil Kumar) ನಿರ್ದೇಶನದಲ್ಲಿ ಅಖಿಲ್- ಜಾನ್ವಿ ಆಕ್ಟ್ ಮಾಡಲಿದ್ದಾರೆ. ಅನಿಲ್ ಈ ಹಿಂದೆ ಪ್ರಭಾಸ್ ನಟನೆಯ ‘ಸಾಹೋ’ (Saho) ಚಿತ್ರದಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದಾರೆ.

     

    ಮೊದಲ ಬಾರಿಗೆ ಜಾನ್ವಿ- ಅಖಿಲ್‌ ತೆರೆಯ ಮೇಲೆ ಒಂದಾಗುತ್ತಿದ್ದು, ಈ ಫ್ರೆಶ್‌ ಫೇರ್‌ ಅದೆಷ್ಟರ ಮಟ್ಟಿಗೆ ಮೋಡಿ ಮಾಡಲಿದೆ ಎಂಬುದನ್ನ ಮುಂದಿನ ದಿನಗಳವರೆಗೂ ಕಾದುನೋಡಬೇಕಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಮಲ್ ನಟನೆಯ ಮತ್ತೊಂದು ಸಿನಿಮಾ ಘೋಷಣೆ : ಕುತೂಹಲ ಮೂಡಿಸುತ್ತಿದೆ ಪೋಸ್ಟರ್

    ಕಮಲ್ ನಟನೆಯ ಮತ್ತೊಂದು ಸಿನಿಮಾ ಘೋಷಣೆ : ಕುತೂಹಲ ಮೂಡಿಸುತ್ತಿದೆ ಪೋಸ್ಟರ್

    ದ್ಯ ಕೈಯಲ್ಲಿರುವ ಸಿನಿಮಾ ಮುಗಿಸಿಕೊಂಡು ಕಮಲ್ ಹಾಸನ್ (Kamal Haasan) ಸಕ್ರೀಯ ರಾಜಕಾರಣಕ್ಕೆ ಇಳಿಯಲಿದ್ದಾರೆ ಎಂದು ಹೇಳಲಾಗಿತ್ತು. ಅದಕ್ಕಾಗಿ ಅವರು ತೆರೆ ಮರೆಯಲ್ಲಿ ಸಿದ್ದತೆಯನ್ನೂ ಮಾಡಿಕೊಳ್ಳುತ್ತಿದ್ದಾರೆ ಎಂದು ಅಂದಾಜಿಸಲಾಗಿತ್ತು. ಆದರೆ, ರಾಜಕಾರಣಕ್ಕೆ ಬರುವಂತಹ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಏಕೆಂದರೆ ಸಿನಿಮಾ ಮೇಲೆ ಸಿನಿಮಾ ಒಪ್ಪಿಕೊಳ್ಳುತ್ತಿದ್ದಾರೆ ಕಮಲ್.

    ಈಗ ಅವರು ಶಂಕರ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಇಂಡಿಯನ್ 2 ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇದಾದ ನಂತರ ಭಾರತೀಯ ಸಿನಿಮಾ ರಂಗದ ಖ್ಯಾತ ನಿರ್ದೇಶಕ ಮಣಿರತ್ನಂ ನಿರ್ದೇಶನದ ಚಿತ್ರದಲ್ಲಿ ನಟಿಸಬೇಕಿದೆ. ಈ ಸಿನಿಮಾಗಳ ಮಧ್ಯೆಯೇ ಮತ್ತೊಂದು ಸಿನಿಮಾ (New Cinema) ಘೋಷಿಸಿದ್ದಾರೆ ಕಮಲ್ ಹಾಸನ್. ಆ ಸಿನಿಮಾದ ಪೋಸ್ಟರ್ (Poster) ಅನ್ನು ಕೂಡ ರಿಲೀಸ್ ಮಾಡಿದ್ದಾರೆ. ಇದು ಅವರ 233ನೇ (KH 233) ಸಿನಿಮಾವಾಗಿದೆ. ಇದನ್ನೂ ಓದಿ:‘ಕೆಡಿ’ ಸಿನಿಮಾದಲ್ಲಿ ಧ್ರುವ ಸರ್ಜಾ: ರೆಟ್ರೋ ಲುಕ್ ಫೋಟೋ ಲೀಕ್

    ಈ ಹೊಸ ಚಿತ್ರವನ್ನು ಎಚ್.ವಿನೋದ್ (H. Vinod) ನಿರ್ದೇಶನ ಮಾಡಲಿದ್ದು, ಸ್ವತಃ ಕಮಲ್ ಹಾಸನ್ ಇದಕ್ಕೆ ಹಣ ಹೂಡುತ್ತಿದ್ದಾರೆ. ಅವರದ್ದೇ ಬ್ಯಾನರ್ ನಲ್ಲಿ ಈ ಸಿನಿಮಾ ತಯಾರಾಗಲಿದೆ. ಪೋಸ್ಟರ್ ನಲ್ಲಿ ಕಮಲ್ ಜನನಾಯಕನ ರೀತಿಯಲ್ಲಿ ಪೋಸ್ ನೀಡಿದ್ದಾರೆ. ಹೀಗಾಗಿ ಈ ಚಿತ್ರದಲ್ಲಿ ರಾಜಕೀಯ ಕಥೆಯನ್ನು ಹೇಳುತ್ತಾರಾ ಎನ್ನುವ ಅನುಮಾನ ಕೂಡ ಮೂಡಿದೆ.

    ಒಂದಷ್ಟು ಸೋಲಿನ ಬಳಿಕ ಕಮಲ್ ನಟನೆಯ ವಿಕ್ರಮ್ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಸಖತ್ ಕಮಾಯಿ ಮಾಡಿತು. ಮತ್ತೆ ಕಮಲ್ ಗೆ ಅದು ಮರುಜೀವ ನೀಡಿತು. ಈ ಸಿನಿಮಾ ಸಾಕಷ್ಟು ದುಡ್ಡು ಮಾಡುತ್ತಿದ್ದಂತೆಯೇ ಕಮಲ್ ಮತ್ತೆ ಬ್ಯುಸಿಯಾಗಿದ್ದಾರೆ. ಹಲವು ಸಿನಿಮಾಗಳಿಗೆ ಸಹಿ ಮಾಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಇಂಡಿಯನ್ 2’ ನಿರ್ದೇಶಕನಿಗೆ ದುಬಾರಿ ವಾಚ್ ಗಿಫ್ಟ್ ಮಾಡಿದ ಕಮಲ್ ಹಾಸನ್

    ‘ಇಂಡಿಯನ್ 2’ ನಿರ್ದೇಶಕನಿಗೆ ದುಬಾರಿ ವಾಚ್ ಗಿಫ್ಟ್ ಮಾಡಿದ ಕಮಲ್ ಹಾಸನ್

    ಮಿಳು ನಟ ಕಮಲ್ ಹಾಸನ್ (Kamal Haasan) ಸದಾ ಒಂದಲ್ಲಾ ಒಂದು ವಿಚಾರವಾಗಿ ಸುದ್ದಿಯಾಗುತ್ತಲೇ ಇರುತ್ತಾರೆ. ಇತ್ತೀಚಿಗೆ ಮಹಿಳಾ ಬಸ್ ಡ್ರೈವರ್ ಕಾರ್ ಗಿಫ್ಟ್ ಕೊಡುವ ಮೂಲಕ ಅಭಿಮಾನಿಗಳ ಪ್ರಶಂಸೆಗೆ ನಟ ಪಾತ್ರರಾಗಿದ್ದರು. ಮಹಿಳೆಯರು ಎಲ್ಲಾ ಕ್ಷೇತ್ರದಲ್ಲೂ ಮುಂದೆ ಬರಬೇಕು ಎಂಬ ಕಾರಣದಿಂದ ಮಹಿಳಾ ಬಸ್ ಡ್ರೈವರ್ ಕಾರು ಗಿಫ್ಟ್ ಮಾಡಿದ್ರು. ಈಗ ಮತ್ತೆ ಗಿಫ್ಟ್ ವಿಚಾರವಾಗಿ ನಟ ಕಮಲ್ ಹಾಸನ್ ಸುದ್ದಿಯಲ್ಲಿದ್ದಾರೆ. ನಿರ್ದೇಶಕ ಶಂಕರ್‌ಗೆ(Director Shankar) ದುಬಾರಿ ವಾಚ್‌ವೊಂದನ್ನ ಉಡುಗೊರೆಯಾಗಿ ನೀಡಿದ್ದಾರೆ. ಇದನ್ನೂ ಓದಿ:ಆಸ್ಕರ್ ಜ್ಯೂರಿಯಾಗುವ ಅವಕಾಶ ಪಡೆದ ರಾಮ್‌ಚರಣ್- ಜ್ಯೂ.ಎನ್‌ಟಿಆರ್

    ‘ವಿಕ್ರಮ್’ ಸಿನಿಮಾದ ಸೂಪರ್ ಸಕ್ಸಸ್ ನಂತರ ಕಮಲ್ ಹಾಸನ್ ಅವರು ಶಂಕರ್ ನಿರ್ದೇಶನದ ‘ಇಂಡಿಯನ್ 2’ (Indian 2) ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ವಿಕ್ರಮ್ ಚಿತ್ರದಂತೆಯೇ ಇಂಡಿಯನ್ 2 ಕೂಡ ಸೂಪರ್ ಸಕ್ಸಸ್ ಕಾಣಬೇಕು ಅಂತಾ ಕಮಲ್ ಹಾಸನ್ ಕೆಲಸದಲ್ಲಿ ನಿರತರಾಗಿದ್ದಾರೆ.

    ಶಂಕರ್ ಸಾರಥ್ಯದ ಈ ಸಿನಿಮಾ ಸೆಟ್ಟೇರಿ ಅನೇಕ ವರ್ಷಗಳೇ ಆಗಿವೆ. ಅನೇಕ ಅಡೆತಡೆಗಳ ಬಳಿಕ ಇಂಡಿಯಾ-2 ಮುಕ್ತಾಯ ಹಂತ ತಲುಪಿದೆ. ಸದ್ಯ ಯಶಸ್ವಿಯಾಗಿ ಚಿತ್ರೀಕರಣ ಮುಗಿಯುತ್ತಿರುವ ಬೆನ್ನಲ್ಲೇ ಕಮಲ್ ಹಾಸನ್ ದುಬಾರಿ ವಾಚ್ ಉಡುಗೊರೆಯಾಗಿ ನೀಡಿದ್ದಾರೆ. ಅಷ್ಟಕ್ಕೂ ಕಮಲ್ ಈ ಉಡುಗೊರೆ ಕೊಡಲು ಕಾರಣ ಇಂಡಿಯನ್ -2 ಸಿನಿಮಾ. ಚಿತ್ರದ ಕೆಲವು ದೃಶ್ಯಗಳನ್ನು ಇಂಪ್ರೆಸ್ ಆದ ಕಮಲ್ ಈ ಗಿಫ್ಟ್ ನೀಡಿದ್ದಾರೆ. ಈ ಬಗ್ಗೆ ಸ್ವತಃ ಅವರೇ ಬರೆದುಕೊಂಡಿದ್ದಾರೆ.

    ಶಂಕರ್ ಕೈಗೆ ಸ್ವತಃ ಕಮಲ್ ಹಾಸನ್ ವಾಚ್ ಕಟ್ಟುವ ಫೋಟೋವನ್ನು ಶೇರ್ ಮಾಡಿ ಬಹಿರಂಗಪಡಿಸಿದ್ದಾರೆ. ನಾನು ಇಂದು ಇಂಡಿಯನ್ 2 ಚಿತ್ರದ ಪ್ರಮುಖ ದೃಶ್ಯಗಳನ್ನು ನೋಡಿದೆ. ಶಂಕರ್‌ಗೆ ನನ್ನ ಶುಭಾಶಯಗಳು. ಇದು ನಿಮ್ಮ ದೊಡ್ಡ ಸಿನಿಮಾ ಆಗಬಹುದು ಎಂಬುದು ನನ್ನ ಸಲಹೆ. ಏಕೆಂದರೆ ಇದು ನಿಮ್ಮ ಕಲಾ ಜೀವನದ ಅತ್ಯುನ್ನತ ಹಂತವಾಗಿದೆ. ಹೆಮ್ಮೆಯಿಂದಿರಿ ಎಂದು ಕಮಲ್ ಹಾಸನ್ ಬರೆದುಕೊಂಡಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶ್ರುತಿ ಹಾಸನ್ ಸೈಕೋ, ಡ್ರಗ್ಸ್ ವ್ಯಸನಿ : ಟ್ವೀಟ್ ಮಾಡಿದ ಉಮೈರ್ ಸಂಧು

    ಶ್ರುತಿ ಹಾಸನ್ ಸೈಕೋ, ಡ್ರಗ್ಸ್ ವ್ಯಸನಿ : ಟ್ವೀಟ್ ಮಾಡಿದ ಉಮೈರ್ ಸಂಧು

    ಬಾಲಿವುಡ್ ನ ವಿವಾದಿತ ಸಿನಿಮಾ ವಿಮರ್ಶಕನೆಂದೇ ಖ್ಯಾತನಾಗಿರುವ ಉಮೈರ್ ಸಂಧು (Umair Sandhu) , ಮೊದ ಮೊದಲು ಸಿನಿಮಾ ರಿಲೀಸ್ ಗೂ ಮುನ್ನ ಚಿತ್ರದ ಬಗ್ಗೆ ವಿಮರ್ಶೆ ಮಾಡಿ ಸಂಚಲನ ಸೃಷ್ಟಿಸುತ್ತಿದ್ದ. ಅದರಲ್ಲೂ ವಿದೇಶದಲ್ಲಿ ರಿಲೀಸ್ ಆಗುವ ಸಿನಿಮಾಗಳಿಗೆ ನಾನು ಸೆನ್ಸಾರ್ ಮಂಡಳಿಯ ಸದಸ್ಯನೆಂದು ಹೇಳಿಕೊಂಡು, ರಿಲೀಸ್ ಗೂ ಮುನ್ನವೇ ಚಿತ್ರ ವಿಮರ್ಶೆ ಪ್ರಕಟಿಸುತ್ತಿದ್ದ. ಇತ್ತೀಚಿನ ದಿನಗಳಲ್ಲಿ ಉಮೈರ್ ಸಿಲೆಬ್ರಿಟಿಗಳ ಹಿಂದೆ ಬಿದ್ದಿದ್ದಾನೆ.

    ಉಮೈರ್ ಸಂಧು ಸಿಲೆಬ್ರಿಟಿಗಳ ಬಗ್ಗೆ ಕಾಮೆಂಟ್ ಮಾಡುವುದು, ಅವರ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವುದು ಹೊಸದೇನೂ ಅಲ್ಲ. ಈವರೆಗೂ ಬಾಲಿವುಡ್ ನಟ ನಟಿಯರ ಬಗ್ಗೆ ಕಾಮೆಂಟ್ ಮಾಡುತ್ತಿದ್ದವರು. ಇದೀಗ ದಕ್ಷಿಣದ ತಾರೆಯರ ಹಿಂದೆ ಬಿದ್ದಿದ್ದಾರೆ. ಈ ಬಾರಿ ಕಮಲ್ ಹಾಸನ್ (Kamal Haasan) ಪುತ್ರಿ ಶ್ರುತಿ ಹಾಸನ್ ಬಗ್ಗೆ ಟ್ವೀಟ್ ಮಾಡಿದ್ದಾರೆ ಉಮೈರ್. ಇದನ್ನೂ ಓದಿ:ಕಿಚ್ಚನ ಮುಂದಿನ ಚಿತ್ರಕ್ಕೆ ಹೊಸ ನಿರ್ದೇಶಕ: ಅವರನ್ನ ಬಿಟ್ಟು ಇವರಾರು?

    ಶ್ರುತಿ ಹಾಸನ್ (Shruti Haasan) ಬಗ್ಗೆ ಟ್ವೀಟ್ ಮಾಡಿರುವ ಉಮೈರ್, ‘ಶ್ರುತಿ ಹಾಸನ್ ಸೈಕೋ (Psycho) ವುಮನ್. ಅವರು ಇತ್ತೀಚಿನ ದಿನಗಳಲ್ಲಿ ಆಂಟಿ ಡಿಪ್ರೆಸೆಂಟ್ ಔಷಧಿ ತೆಗೆದುಕೊಳ್ಳುತ್ತಿದ್ದಾರೆ. ಅವರ ಬಾಯ್ ಫ್ರೆಂಡ್ ಜೊತೆ ನಿತ್ಯವೂ ಅವರು ಡ್ರಗ್ಸ್ (Drugs) ಸೇವಿಸುತ್ತಾರೆ. ನಿನ್ನೆ ರಾತ್ರಿ ಕೂಡ ಶ್ರುತಿ ಅವರು ತಮ್ಮ ತಂದೆ ಕಮಲ್ ಹಾಸನ್ ಜೊತೆ ಜಗಳ ಮಾಡಿಕೊಂಡಿದ್ದರು’ ಎಂದು ಟ್ವೀಟ್ ಮಾಡಿದ್ದಾರೆ.

     

    ಉಮೈರ್ ಸಂಧು ಮಾಡಿರುವ ಟ್ವೀಟ್ ಸಾಕಷ್ಟು ವೈರಲ್ ಆಗಿದೆ. ಅನೇಕರು ಈ ಟ್ವೀಟ್ ಗೆ ಕಾಮೆಂಟ್ ಮಾಡಿದ್ದಾರೆ. ಶ್ರುತಿ ಹಾಸನ್ ಅವರು ಶಂತನು ಹಜಾರಿಕಾ (Shantanu Hazarika) ಅವರ ಜೊತೆ ಡೇಟಿಂಗ್ ಮಾಡುತ್ತಿರುವುದು ಗುಟ್ಟಿನ ವಿಚಾರವೇನೂ ಅಲ್ಲ. ಇಬ್ಬರೂ ಒಂದೇ ಮನೆಯಲ್ಲಿ ವಾಸವಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೆ, ಡ್ರಗ್ಸ್ ತೆಗೆದುಕೊಳ್ಳುವ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • ಬಸ್ ಚಾಲಕಿಗೆ ಕಮಲ್ ಹಾಸನ್ ಕಾರು ಗಿಫ್ಟ್ : ಇದರ ಹಿಂದಿದೆ ಗೊಂದಲದ ಸ್ಟೋರಿ

    ಬಸ್ ಚಾಲಕಿಗೆ ಕಮಲ್ ಹಾಸನ್ ಕಾರು ಗಿಫ್ಟ್ : ಇದರ ಹಿಂದಿದೆ ಗೊಂದಲದ ಸ್ಟೋರಿ

    ರಡ್ಮೂರು ದಿನಗಳಿಂದ ತಮಿಳಿನ ಸ್ಟಾರ್ ನಟ ಕಮಲ್ ಹಾಸನ್ (Kamal Haasan) ಅವರು, ಕೊಯಮತ್ತೂರಿನ ಮೊದಲ ಮಹಿಳಾ ಬಸ್ ಚಾಲಕಿಯನ್ನು (Bus Driver) ಕರೆಯಿಸಿಕೊಂಡು ಕಾರು (Car)  ಗಿಫ್ಟ್ ನೀಡಿರುವ ಸುದ್ದಿ ಸಿನಿಮಾ ರಂಗದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಬರೀ ಸಿನಿಮಾ ರಂಗದಲ್ಲಿ ಮಾತ್ರವಲ್ಲ, ಇದೀಗ ತಮಿಳು ನಾಡಿನ ರಾಜಕೀಯ ವಲಯದಲ್ಲೂ ಅದು ಚರ್ಚೆಗೆ ಕಾರಣವಾಗಿದೆ. ಮೇಲ್ನೋಟಕ್ಕೆ ಇದು ರಾಜಕೀಯ ಪ್ರೇರಿತ ನಡೆ ಎಂದು ಹೇಳಲಾಗುತ್ತಿದ್ದು, ಕಾರು ಕೊಟ್ಟಿರುವ ಕಮಲ್ ಬಗ್ಗೆ ಮೆಚ್ಚುಗೆಯೂ ವ್ಯಕ್ತವಾಗುತ್ತಿದೆ.

    ಏನಿದು ಪ್ರಕರಣ?

    ಶರ್ಮಿಳಾ (Sharmila) ಕೊಯಮತ್ತೂರಿನ ಮೊದಲ ಮಹಿಳಾ ಬಸ್ ಚಾಲಕಿ. ಅವತ್ತು ಮಹಿಳಾ ಚಾಲಕಿಯರನ್ನು ಗೌರವಿಸುವುದಕ್ಕಾಗಿ ಡಿಎಂಕೆ ಸಂಸದೆ ಕನಿಮೊಳಿ (Kanimozhi) ಕೊಯಮತ್ತೂರಿಗೆ ಬಂದಿದ್ದರು. ಚಾಲಕಿಯರನ್ನು ಗೌರವಿಸಿದ ಕೆಲವೇ ಗಂಟೆಗಳಲ್ಲೇ ಕನಿಮೊಳಿ ಅವರು ಶರ್ಮಿಳಾ ಚಲಾಯಿಸುತ್ತಿದ್ದ ಬಸ್ ಏರಿದ್ದಾರೆ. ಇಲ್ಲಿಯೇ ಎಡವಟ್ಟು ಆಗಿದೆ.

    ಶರ್ಮಿಳಾ ಚಲಾಯಿಸುತ್ತಿದ್ದ ಬಸ್ ಏರಿದ್ದ ಕನಿಮೊಳಿಗೆ ಆ ಬಸ್ ನಲ್ಲಿದ್ದ ಕಂಡಕ್ಟರ್ ಟಿಕೆಟ್ ತಗೆದುಕೊಳ್ಳುವಂತೆ ಹೇಳಿದ್ದಾರೆ. ಇದಕ್ಕೆ ಶರ್ಮಿಳಾ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. ಸಂಸದರು ನಮ್ಮನ್ನು ಗೌರವಿಸುವುದಕ್ಕಾಗಿ ಬಸ್ ಏರಿದ್ದಾರೆ. ಬಸ್‍ ನಲ್ಲಿ ಅವರು ಪ್ರಯಾಣಿಸುತ್ತಿರುವುದು ನಮಗೆ ಗೌರವ. ಟಿಕೆಟ್ ತಗೆದುಕೊಳ್ಳುವುದು ಬೇಡ ಎಂದಿದ್ದಾರೆ ಶರ್ಮಿಳಾ. ಈ ವಿಚಾರವಾಗಿ ಕಂಡಕ್ಟರ್ ಗೂ ಮತ್ತು ಶರ್ಮಿಳಾಗೂ ಗಲಾಟೆ ಆಗಿದೆ. ಈ ಗಲಾಟೆಗೆ ಈಗ ನಾನಾ ಬಣ್ಣಗಳು ಮೆತ್ತಿಕೊಂಡಿವೆ. ಇದನ್ನೂ ಓದಿ:‘ಕಬಾಲಿ’ ನಿರ್ಮಾಪಕ ಅರೆಸ್ಟ್ ಬೆನ್ನಲ್ಲೇ ಡ್ರಗ್ಸ್ ಪ್ರಕರಣದಲ್ಲಿ ನಟಿ ಅಶು ರೆಡ್ಡಿ ಹೆಸರು

    ಈ ಘಟನೆಯಾದ ಕೆಲವೇ ಗಂಟೆಗಳಲ್ಲೇ ಶರ್ಮಿಳಾ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ ಸುದ್ದಿ ಒಂದು ಕಡೆಯಾದರೆ, ಮತ್ತೊಂದು ಕಡೆ ಬಸ್ ಮಾಲೀಕರೆ ಶರ್ಮಿಳಾರನ್ನು ಕೆಲಸದಿಂದ ತಗೆದುಹಾಕಿದ್ದಾರೆ ಎನ್ನುವ ಸುದ್ದಿಯೂ ಇದೆ. ಸ್ವಯಂ ಪ್ರಚಾರಕ್ಕಾಗಿ ಸಿಲೆಬ್ರಿಟಿಗಳನ್ನು ಬಸ್ ನಲ್ಲಿ ಹತ್ತಿಸಿಕೊಂಡಿದ್ದಾರೆ ಎನ್ನುವ ಕಾರಣಕ್ಕಾಗಿ ಬಸ್ ಮಾಲೀಕರು ಶರ್ಮಿಳಾರನ್ನು ಕೆಲಸದಿಂದ ತಗೆದು ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಈ ಸುದ್ದಿಯನ್ನು ಮಾಲೀಕರು ನಿರಾಕರಿಸಿದ್ದಾರೆ.

    ಮತ್ತೊಂದು ಕಡೆ ಶರ್ಮಿಳಾ ಡಿಎಂಕೆ (DMK) ಬೆಂಬಲಿಗರು. ಹಾಗಾಗಿ ಕನಿಮೊಳಿ ಅವರ ಬೆಂಬಲಕ್ಕೆ ನಿಂತು ಟಿಕೆಟ್ ರಹಿತ ಪ್ರಯಾಣ ಮಾಡಿಸಲು ಮುಂದಾಗಿದ್ದರು ಎನ್ನುವ ಮಾತು ಕೇಳಿ ಬರುತ್ತಿದೆ. ಇದೇ ಏನೇ ಆದರೂ ಕೆಲಸ ಕಳೆದುಕೊಂಡು ಶರ್ಮಿಳಾಗೆ ಕಮಲ್ ಹಾಸನ್ ಕಾರು ಗಿಫ್ಟ್ ನೀಡುವ ಮೂಲಕ ಅವರ ಬದುಕಿಗೆ ನೆರವಾಗಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • ಪ್ರಭಾಸ್ ಜೊತೆ ನಟಿಸೋಕೆ ಕಮಲ್ ಪಡೆದ ಸಂಭಾವನೆ 100 ಕೋಟಿ ರೂ

    ಪ್ರಭಾಸ್ ಜೊತೆ ನಟಿಸೋಕೆ ಕಮಲ್ ಪಡೆದ ಸಂಭಾವನೆ 100 ಕೋಟಿ ರೂ

    ನಿನ್ನೆಯಷ್ಟೇ ಪ್ರಭಾಸ್ (Prabhas) ನಟನೆಯ ‘ಪ್ರಾಜೆಕ್ಟ್ ಕೆ’ ಸಿನಿಮಾದಲ್ಲಿ ತಮಿಳಿನ ಹೆಸರಾಂತ ನಟ ಕಮಲ್ ಹಾಸನ್ ನಟಿಸುತ್ತಿರುವ ವಿಷಯ ಅಧಿಕೃತವಾಗಿಯೇ ಬಹಿರಂಗವಾಗಿತ್ತು. ತಮ್ಮ  ಸಿನಿಮಾದಲ್ಲಿ ಕಮಲ್ ನಟಿಸುತ್ತಿರುವ ಕುರಿತು ಅಧಿಕೃತ ಮಾಹಿತಿಯನ್ನೇ ನಿರ್ಮಾಣ ಸಂಸ್ಥೆ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿತ್ತು.

    ಪ್ರಾಜೆಕ್ಟ್ ಕೆ (Project K)  ನಿರ್ಮಾಣ ಸಂಸ್ಥೆಯಾದ ವೈಜಯಂತಿ ಮೂವೀಸ್ ಕಡೆಯಿಂದಲೇ ಅಧಿಕೃತ ಮಾಹಿತಿ ಹೊರ ಬಿದ್ದು, ‘ಇವರು ಲೆಜೆಂಡ್. ಈ ಪಾತ್ರವು ಯಾರನ್ನು ನಿರೀಕ್ಷೆ ಮಾಡುತ್ತಿತ್ತೋ ಅವರು ನಮಗೆ ಸಿಕ್ಕಿದ್ದಾರೆ. ಕಮಲ್ ಹಾಸನ್ (Kamal Haasan) ಅವರಿಂದ ನಾನು ಸಾಕಷ್ಟು ಕಲಿಯಬಹುದು. ಆ ಕ್ಷಣಕ್ಕಾಗಿ ನಾನಂತೂ ಕಾಯುತ್ತಿದ್ದೇನೆ’ ಎಂದು ನಿರ್ದೇಶಕ ನಾಗ್ ಅಶ್ವಿನ್ (Nag Ashwin) ಹೇಳಿಕೊಂಡಿದ್ದರು. ಇದನ್ನೂ ಓದಿ: ಕಿಚ್ಚ ಸುದೀಪ್ ಕುಟುಂಬದಿಂದ ಸ್ಯಾಂಡಲ್‌ವುಡ್‌ಗೆ ಮತ್ತೊಬ್ಬ ಸ್ಟಾರ್ ಎಂಟ್ರಿ

    ಪ್ರಾಜೆಕ್ಟ್ ಕೆ ಸಿನಿಮಾದಲ್ಲಿ ಕಮಲ್ ಹಾಸನ್ ನಟಿಸುತ್ತಿದ್ದಾರೆ ಎಂದು ಅಧಿಕೃತ ಹೇಳಿಕೆ ಹೊರ ಬೀಳುತ್ತಿದ್ದಂತೆಯೇ ಅವರು ಆ ಸಿನಿಮಾಗಾಗಿ ಎಷ್ಟು ಸಂಭಾವನೆ (Remuneration) ಪಡೆದಿದ್ದಾರೆ ಎನ್ನುವ ವಿಚಾರವೂ ಚರ್ಚೆಯಾಗುತ್ತಿದೆ. ಕಮಲ್ ಹಾಸನ್ ಅವರ ಆಪ್ತರು ಹೇಳುವ ಪ್ರಕಾರ ಈ ಚಿತ್ರಕ್ಕಾಗಿ ಕಮಲ್ ಬರೋಬ್ಬರಿ 100 ಕೋಟಿ ರೂಪಾಯಿಯನ್ನು ಸಂಭಾವನೆಯಾಗಿ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಇದು ಅಧಿಕೃತ ಮಾಹಿತಿ ಅಲ್ಲ.

    ಒಂದು ಕಡೆ ಕಮಲ್ ಹಾಸನ್ ರಂಥ ದಿಗ್ಗಜರು ಈ ಸಿನಿಮಾದಲ್ಲಿದ್ದರೆ ಮತ್ತೊಂದು ಕಡೆ ಬಾಲಿವುಡ್ ನ ಖ್ಯಾತ ನಟಿ ದೀಪಿಕಾ ಪಡುಕೋಣೆ (Deepika Padukone) ಕೂಡ ಈ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. `ಪಠಾಣ್’ (Pathaan) ಚಿತ್ರದ ಸೂಪರ್ ಸಕ್ಸಸ್‌ ನಂತರ ದೀಪಿಕಾ ಅವರು ಪ್ರಭಾಸ್ ಜೊತೆ `ಪ್ರಾಜೆಕ್ಟ್ ಕೆ’ ಸಿನಿಮಾದಲ್ಲಿ ನಟಿಸುವುದಕ್ಕಾಗಿ ಭರ್ಜರಿ ಸಂಭಾವನೆ ಪಡೆದಿದ್ದಾರೆ ಎಂದೂ ಹೇಳಲಾಗುತ್ತಿದೆ.

    ಐಶ್ವರ್ಯಾ’ (Aishwarya Kannada Film) ಸಿನಿಮಾ ಮೂಲಕ ರಿಯಲ್ ಸ್ಟಾರ್ ಉಪ್ಪಿಗೆ (Upendra)  ನಾಯಕಿಯಾಗುವ ಮೂಲಕ ಬಣ್ಣದ ಲೋಕಕ್ಕೆ ಕನ್ನಡತಿ ದೀಪಿಕಾ ಪಡುಕೋಣೆ ಎಂಟ್ರಿ ಕೊಟ್ಟರು. ಬಳಿಕ ಶಾರುಖ್ ಖಾನ್‌ಗೆ (Sharukh Khan) ನಾಯಕಿಯಾಗಿ `ಓಂ ಶಾಂತಿ ಓಂ’ ಚಿತ್ರದಿಂದ ಬಾಲಿವುಡ್‌ಗೆ ಲಗ್ಗೆ ಇಟ್ಟರು. ಸಾಕಷ್ಟು ಹಿಂದಿ ಸಿನಿಮಾಗಳಲ್ಲಿ ಸ್ಟಾರ್ ನಟರ ಜೊತೆ ತೆರೆಹಂಚಿಕೊಂಡು ಸೈ ಎನಿಸಿಕೊಂಡಿದ್ದಾರೆ.

    ಈ ವರ್ಷ `ಪಠಾಣ್’ ಚಿತ್ರದ ಮೂಲಕ ಭರ್ಜರಿ ಓಪನಿಂಗ್ಸ್ ಪಡೆದಿದ್ದಾರೆ. ಶಾರುಖ್ ನಾಯಕಿಯಾಗಿ ದೀಪಿಕಾ ಮಿಂಚಿದ್ದಾರೆ. ಸಿನಿಮಾ 1000 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಹೊಸ ದಾಖಲೆ ಬರೆದಿದೆ. ಹಾಗಾಗಿ ತಮ್ಮ ಮುಂದಿನ ಸಿನಿಮಾ `ಪ್ರಾಜೆಕ್ಟ್ ಕೆ’ ಚಿತ್ರಕ್ಕೆ ದುಬಾರಿ ಸಂಭಾವನೆಯನ್ನೇ ನಟಿ ಪಡೆದಿದ್ದಾರೆ.

     

    ಈ ಸಿನಿಮಾಗಾಗಿ ಅವರು ದೊಡ್ಡ ಕಾಲ್‌ಶೀಟ್ ನೀಡಿದ್ದಾರೆ. ಹಲವು ದಿನಗಳನ್ನ ಈ ಚಿತ್ರಕ್ಕಾಗಿ ಮುಡಿಪಿಟ್ಟಿದ್ದಾರೆ. ನಾಗ್ ಅಶ್ವೀನ್ ನಿರ್ದೇಶನದ ಈ ಚಿತ್ರಕ್ಕೆ 10 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗುತ್ತಿದೆ. ಕೆಲ ಸ್ಟಾರ್ ಹೀರೋಗಳು ಕೂಡ ಇಷ್ಟು ಸಂಭಾವನೆ ಪಡೆಯಲ್ಲ ಅನ್ನೋದು ಗಮಿನಿಸಬೇಕಾದ ವಿಷಯ. ಪ್ರಭಾಸ್ ಜೊತೆಗಿನ ಈ ಚಿತ್ರ ಮುಂದಿನ ವರ್ಷ ತೆರೆಗೆ ಅಪ್ಪಳಿಸಲಿದೆ. ಭಾರೀ ತಾರಾಗಣದ ಕಾರಣದಿಂದಾಗಿ ಸಿನಿಮಾ ಕುತೂಹಲ ಮೂಡಿಸಿದೆ.

  • ‘ಪ್ರಾಜೆಕ್ಟ್ ಕೆ’ ಮೂಲಕ 50 ವರ್ಷದ ನಂತರ ಒಂದಾದ ಅಶ್ವಿನಿ ದತ್ ಮತ್ತು ಕಮಲ್

    ‘ಪ್ರಾಜೆಕ್ಟ್ ಕೆ’ ಮೂಲಕ 50 ವರ್ಷದ ನಂತರ ಒಂದಾದ ಅಶ್ವಿನಿ ದತ್ ಮತ್ತು ಕಮಲ್

    ಡಾರ್ಲಿಂಗ್ ಪ್ರಭಾಸ್ (Prabhas) ಮತ್ತು ಬಿಗ್ ಬಿ ಅಮಿತಾಭ್ ಬಚ್ಚನ್, ದೀಪಿಕಾ ಪಡುಕೋಣೆ, ದಿಶಾ ಪಠಾಣಿ ನಟಿಸುತ್ತಿರುವ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಪ್ರಾಜೆಕ್ಟ್ K (Project K). ಮುಂದಿನ ವರ್ಷದ ಸಂಕ್ರಾಂತಿ ಹಬ್ಬಕ್ಕೆ ತೆರೆಗೆ ಬರಲಿದ್ದು, ಇದೀಗ ಈ ಚಿತ್ರದಿಂದ ಕ್ರೇಜಿ ಅಪ್ ಡೇಟ್ ವೊಂದು ಹೊರಬಿದಿದ್ದೆ. ಎಲ್ಲರ ನಿರೀಕ್ಷೆಯಂತೆ ಉಳಗ ನಾಯಗನ್ ಕಮಲ್ ಹಾಸನ್ (Kamal Haasan) ಪ್ರಾಜೆಕ್ಟ್ K ಭಾಗವಾಗಿದ್ದಾರೆ. ಸ್ಪೆಷಲ್ ವಿಡಿಯೋ ಝಲಕ್ ಮೂಲಕ ಕಮಲ್ ಎಂಟ್ರಿ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿ ನೀಡಿದೆ.

    ಕಳೆದೊಂದು ತಿಂಗಳಿನಿಂದ ಪ್ರಾಜೆಕ್ಟ್ K ಸಿನಿಮಾದಲ್ಲಿ ಕಮಲ್ ಹಾಸನ್ ಅವರು ಪ್ರಭಾಸ್ ಎದುರು ವಿಲನ್ ಆಗಿ ನಟಿಸಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಅದರಂತೆ ಈಗ ಚಿತ್ರತಂಡ ಕಮಲ್ ಎಂಟ್ರಿ ಬಗ್ಗೆ  ಘೋಷಿಸಿದೆ. ಆದರೆ ಪ್ರಭಾಸ್ ಅವರಿಗೆ ಉಳಗ ನಾಯಗನ್ ಖಳನಾಯಕ ಅನ್ನೋದರ ಬಗ್ಗೆ ಯಾವುದೇ ಗುಟ್ಟು ಬಿಟ್ಟು ಕೊಟ್ಟಿಲ್ಲ. ಪ್ರಮುಖ ಪಾತ್ರವೊಂದರಲ್ಲಿ ಕಮಲ್ ಹಾಸನ್ ನಟಿಸಲಿದ್ದಾರೆ ಎಂದಷ್ಟೇ ತಿಳಿಸಿದೆ. ಇದನ್ನೂ ಓದಿ:ಕಾಸ್ಟಿಂಗ್ ಕೌಚ್ ಬಗ್ಗೆ ಕಿಡಿಕಾರಿದ ನಟ ರಾಜೀವ್ ಖಂಡೇಲ್ವಾಲ್

    ಪ್ರಾಜೆಕ್ಟ್ K ಸಿನಿಮಾದಲ್ಲಿ ನಟಿಸುತ್ತಿರುವುದರ ಬಗ್ಗೆ ಕಮಲ್ ಹಾಸನ್ ಮಾತನಾಡಿ, ನಾನು 50 ವರ್ಷದ ಹಿಂದೆ ನೃತ್ಯ ಸಹಾಯಕ ಮತ್ತು ಸಹಾಯಕ ನಿರ್ದೇಶಕನಾಗಿದ್ದಾಗ ನಿರ್ಮಾಣ ವಲಯದಲ್ಲಿ ಅಶ್ವಿನಿ ದತ್  (Ashwini Dutt) ಹೆಸರು ದೊಡ್ಡ ಮಟ್ಟದಲ್ಲಿ ಖ್ಯಾತಿಗೊಳಿಸಿತ್ತು. ಐವತ್ತು ವರ್ಷದ ನಂತರ ನಾವು ಒಂದಾಗುತ್ತಿದ್ದೇವೆ. ಇಂದಿನ ಪೀಳಿಗೆಯ ಅದ್ಭುತ ನಿರ್ದೇಶಕ ನಾಗ್ ಅಶ್ವಿನ್ (Nag Ashwin), ನನ್ನ ಸಹನಟರಾದ ಪ್ರಭಾಸ್, ದೀಪಿಕಾ ಪಡುಕೋಣೆ, ಅಮಿತಾಭ್ ಜಿ ಜೊತೆ ನಟಿಸುತ್ತಿರುವುದು ಖುಷಿಕೊಟ್ಟಿದೆ. ಪ್ರಾಜೆಕ್ಟ್ K ಸಿನಿಮಾಗಾಗಿ ನಾನು ಕುತೂಹಲದಿಂದ ಕಾಯುತ್ತಿದ್ದೇನೆ ಎಂದರು.

    ನಿರ್ಮಾಪಕ ಅಶ್ವಿನಿ ದತ್, ಸುದೀರ್ಘವಾದ ವೃತ್ತಿ ಜೀವನದಲ್ಲಿ ‌ನಿಮ್ಮೊಟ್ಟಿಗೆ ಕೆಲಸ ಮಾಡುವುದು ನನ್ನ ಕನಸಾಗಿತ್ತು. ಪ್ರಾಜೆಕ್ಟ್ ಕೆ ಮೂಲಕ ಅದು ನನಸಾಗಿದೆ. ಕಮಲ್ ಹಾಸನ್-ಅಮಿತಾಭ್ ಜಿ ಅವರೊಟ್ಟಿಗಿನ ಕೆಲಸ ಮಾಡುವ ಅವಕಾಶ ದೊರೆತಿರುವುದು ನನಗೆ ಆಶೀರ್ವಾದ ಎಂದರು. ನಿರ್ದೇಶಕ ನಾಗ್ ಅಶ್ವಿನ್, ಕಮಲ್ ಸರ್ ಜೊತೆ ಕೆಲಸ ಮಾಡಲು ಉತ್ಸುಕರಾಗಿದ್ದೇನೆ. ನಮ್ಮ ಜಗತ್ತನ್ನು ಪೂರ್ಣಗೊಳಿಸಲು ಅವರು ಒಪ್ಪಿಕೊಂಡಿರುವುದು ಸಂತಸ ಎಂದರು.

    ವೈಯಂತಿ ಮೂವೀಸ್ ಬ್ಯಾನರ್‌ನಲ್ಲಿ ಅದ್ಧೂರಿಯಾಗಿ ಮೂಡಿ ಬರುತ್ತಿರುವ ಮಲ್ಟಿ ಸ್ಟಾರ್  ಪ್ರಾಜೆಕ್ಟ್ ಕೆ ಸಿನಿಮಾಗೆ ಮಹಾನಟಿ ಸಿನಿಮಾ ಖ್ಯಾತಿಯ ನಾಗ್ ಅಶ್ವಿನ್ ಆಕ್ಷನ್ ಕಟ್ ಹೇಳಿದ್ದಾರೆ.

  • ಪ್ರಭಾಸ್ ಎದುರಾಗಿ ನಿಲ್ಲಲಿದ್ದಾರೆ ಉಳುಗ ನಾಯಗನ್ ಕಮಲ್ ಹಾಸನ್

    ಪ್ರಭಾಸ್ ಎದುರಾಗಿ ನಿಲ್ಲಲಿದ್ದಾರೆ ಉಳುಗ ನಾಯಗನ್ ಕಮಲ್ ಹಾಸನ್

    ಪ್ರಭಾಸ್ (Prabhas) ಮತ್ತು ದೀಪಿಕಾ ಪಡುಕೋಣೆ ಕಾಂಬಿನೇಷನ್ ‘ಪ್ರಾಜೆಕ್ಟ್ ಕೆ’ (Project K) ಸಿನಿಮಾದಲ್ಲಿ ತಮಿಳಿನ ಹೆಸರಾಂತ ನಟ ಕಮಲ್ ಹಾಸನ್ ನಟಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಈವರೆಗೂ ಅದರ ಕುರಿತು ಚಿತ್ರತಂಡವಾಗಲಿ, ನಿರ್ಮಾಣ ಸಂಸ್ಥೆಯಾಗಲಿ ಅಧಿಕೃತವಾಗಿ ಹೇಳಿಕೆ ನೀಡಿರಲಿಲ್ಲ. ಇದೀಗ ಕಮಲ್ ಹಾಸನ್ ಆ ಸಿನಿಮಾದಲ್ಲಿ ನಟಿಸುತ್ತಿರುವ ಕುರಿತು ಅಧಿಕೃತ ಮಾಹಿತಿಯೇ ಹೊರ ಬಿದ್ದಿದೆ.

    ಪ್ರಾಜೆಕ್ಟ್ ಕೆ ನಿರ್ಮಾಣ ಸಂಸ್ಥೆಯಾದ ವೈಜಯಂತಿ ಮೂವೀಸ್ ಕಡೆಯಿಂದಲೇ ಅಧಿಕೃತ ಮಾಹಿತಿ ಹೊರ ಬಿದ್ದಿದ್ದು, ‘ಇವರು ಲೆಜೆಂಡ್. ಈ ಪಾತ್ರವು ಯಾರನ್ನು ನಿರೀಕ್ಷೆ ಮಾಡುತ್ತಿತ್ತೋ ಅವರು ನಮಗೆ ಸಿಕ್ಕಿದ್ದಾರೆ. ಕಮಲ್ ಹಾಸನ್ (Kamal Haasan) ಅವರಿಂದ ನಾನು ಸಾಕಷ್ಟು ಕಲಿಯಬಹುದು. ಆ ಕ್ಷಣಕ್ಕಾಗಿ ನಾನಂತೂ ಕಾಯುತ್ತಿದ್ದೇನೆ’ ಎಂದು ನಿರ್ದೇಶಕ ನಾಗ್ ಅಶ್ವಿನ್ (Nag Ashwin) ಹೇಳಿಕೊಂಡಿದ್ದಾರೆ.

    ಒಂದು ಕಡೆ ಕಮಲ್ ಹಾಸನ್ ರಂಥ ದಿಗ್ಗಜರು ಈ ಸಿನಿಮಾದಲ್ಲಿದ್ದರೆ ಮತ್ತೊಂದು ಕಡೆ ಬಾಲಿವುಡ್ ನ ಖ್ಯಾತ ನಟಿ ದೀಪಿಕಾ ಪಡುಕೋಣೆ (Deepika Padukone) ಕೂಡ ಈ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. `ಪಠಾಣ್’ (Pathaan) ಚಿತ್ರದ ಸೂಪರ್ ಸಕ್ಸಸ್‌ ನಂತರ ದೀಪಿಕಾ ಅವರು ಪ್ರಭಾಸ್ ಜೊತೆ `ಪ್ರಾಜೆಕ್ಟ್ ಕೆ’ ಸಿನಿಮಾದಲ್ಲಿ ನಟಿಸುವುದಕ್ಕಾಗಿ ಭರ್ಜರಿ ಸಂಭಾವನೆ ಪಡೆದಿದ್ದಾರೆ.

    ಐಶ್ವರ್ಯಾ’ (Aishwarya Kannada Film) ಸಿನಿಮಾ ಮೂಲಕ ರಿಯಲ್ ಸ್ಟಾರ್ ಉಪ್ಪಿಗೆ (Upendra)  ನಾಯಕಿಯಾಗುವ ಮೂಲಕ ಬಣ್ಣದ ಲೋಕಕ್ಕೆ ಕನ್ನಡತಿ ದೀಪಿಕಾ ಪಡುಕೋಣೆ ಎಂಟ್ರಿ ಕೊಟ್ಟರು. ಬಳಿಕ ಶಾರುಖ್ ಖಾನ್‌ಗೆ (Sharukh Khan) ನಾಯಕಿಯಾಗಿ `ಓಂ ಶಾಂತಿ ಓಂ’ ಚಿತ್ರದಿಂದ ಬಾಲಿವುಡ್‌ಗೆ ಲಗ್ಗೆ ಇಟ್ಟರು. ಸಾಕಷ್ಟು ಹಿಂದಿ ಸಿನಿಮಾಗಳಲ್ಲಿ ಸ್ಟಾರ್ ನಟರ ಜೊತೆ ತೆರೆಹಂಚಿಕೊಂಡು ಸೈ ಎನಿಸಿಕೊಂಡಿದ್ದಾರೆ.

    K Project

    ಈ ವರ್ಷ `ಪಠಾಣ್’ ಚಿತ್ರದ ಮೂಲಕ ಭರ್ಜರಿ ಓಪನಿಂಗ್ಸ್ ಪಡೆದಿದ್ದಾರೆ. ಶಾರುಖ್ ನಾಯಕಿಯಾಗಿ ದೀಪಿಕಾ ಮಿಂಚಿದ್ದಾರೆ. ಸಿನಿಮಾ 1000 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಹೊಸ ದಾಖಲೆ ಬರೆದಿದೆ. ಹಾಗಾಗಿ ತಮ್ಮ ಮುಂದಿನ ಸಿನಿಮಾ `ಪ್ರಾಜೆಕ್ಟ್ ಕೆ’ ಚಿತ್ರಕ್ಕೆ ದುಬಾರಿ ಸಂಭಾವನೆಯನ್ನೇ ನಟಿ ಪಡೆದಿದ್ದಾರೆ.

     

    ಈ ಸಿನಿಮಾಗಾಗಿ ಅವರು ದೊಡ್ಡ ಕಾಲ್‌ಶೀಟ್ ನೀಡಿದ್ದಾರೆ. ಹಲವು ದಿನಗಳನ್ನ ಈ ಚಿತ್ರಕ್ಕಾಗಿ ಮುಡಿಪಿಟ್ಟಿದ್ದಾರೆ. ನಾಗ್ ಅಶ್ವೀನ್ ನಿರ್ದೇಶನದ ಈ ಚಿತ್ರಕ್ಕೆ 10 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗುತ್ತಿದೆ. ಕೆಲ ಸ್ಟಾರ್ ಹೀರೋಗಳು ಕೂಡ ಇಷ್ಟು ಸಂಭಾವನೆ ಪಡೆಯಲ್ಲ ಅನ್ನೋದು ಗಮಿನಿಸಬೇಕಾದ ವಿಷಯ. ಪ್ರಭಾಸ್ ಜೊತೆಗಿನ ಈ ಚಿತ್ರ ಮುಂದಿನ ವರ್ಷ ತೆರೆಗೆ ಅಪ್ಪಳಿಸಲಿದೆ. ಭಾರೀ ತಾರಾಗಣದ ಕಾರಣದಿಂದಾಗಿ ಸಿನಿಮಾ ಕುತೂಹಲ ಮೂಡಿಸಿದೆ.

  • ಕಮಲ್ ಹಾಸನ್ ಕಂಡರೆ ಹೊಟ್ಟೆ ಉರಿಯುತ್ತೆ-‌ ಹೀಗ್ಯಾಕಂದ್ರು ನಟ ಸಿದ್ಧಾರ್ಥ್

    ಕಮಲ್ ಹಾಸನ್ ಕಂಡರೆ ಹೊಟ್ಟೆ ಉರಿಯುತ್ತೆ-‌ ಹೀಗ್ಯಾಕಂದ್ರು ನಟ ಸಿದ್ಧಾರ್ಥ್

    ತೆಲುಗು- ತಮಿಳು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದ ನಟ ಸಿದ್ಧಾರ್ಥ್ (Siddarth) ಸದ್ಯ ‘ಟಕ್ಕರ್’ (Takkar) ಸಿನಿಮಾದ ಮೂಲಕ ಸದ್ದು ಮಾಡ್ತಿದ್ದಾರೆ. ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಿರುವ ಸಿದ್ಧಾರ್ಥ್, ಕಮಲ್ ಹಾಸನ್ (Kamal Haasan) ನೋಡಿದ್ರೆ ನನಗೆ ಹೊಟ್ಟೆ ಕಿಚ್ಚು ಅಂತಾ ಹೇಳಿಕೆ ನೀಡಿದ್ದಾರೆ. ಸಿನಿಮಾರಂಗದಲ್ಲಿ ನನ್ನ ತುಳಿಯುವ ಪ್ರಯತ್ನ ನಡೆಯುತ್ತಿದೆ ಎಂದು ಮಾತನಾಡಿದ್ದಾರೆ.

    ಬೊಮ್ಮರಿಲ್ಲು, ಬಾಯ್ಸ್, ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ‘ಮಹಾಸಮುದ್ರಂ’ ಚಿತ್ರದ ನಂತರ ಮತ್ತೆ ಭಿನ್ನ ಪಾತ್ರ, ಚಿತ್ರಗಳ ಮೂಲಕ ಸಿದ್ಧಾರ್ಥ್ ಸದ್ದು ಮಾಡ್ತಿದ್ದಾರೆ. ಇದನ್ನೂ ಓದಿ:ಪ್ರಣಿತಾ ಹಾಟ್‌ನೆಸ್‌ಗೆ ಸಂತೂರ್ ಮಮ್ಮಿ ಎಂದ ನೆಟ್ಟಿಗರು

     

    View this post on Instagram

     

    A post shared by Siddharth (@worldofsiddharth)

    ಜೂನ್ 9ಕ್ಕೆ ಟಕ್ಕರ್ ಸಿನಿಮಾ ರಿಲೀಸ್ ಆಗುತ್ತಿದೆ. ರಿಲೀಸ್ ಹೊಸ್ತಿಲಲ್ಲಿ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ವಿವಿಧ ಸಂದರ್ಶನಗಳಲ್ಲಿ ನಟ ಮಾತನಾಡುತ್ತಿದ್ದಾರೆ. ಈ ವೇಳೆ ಚಿತ್ರರಂಗದಲ್ಲಿ ತಮಗೆ ಹಿನ್ನಡೆ ಆಗುತ್ತಿದೆ. ಯಾಕೆ ಅಂತ ಗೊತ್ತಿಲ್ಲ, ನೇರವಾಗಿ ಹೇಳದೇ ಇದ್ದರೂ ಪರೋಕ್ಷವಾಗಿ ನನ್ನನ್ನು ಚಿತ್ರರಂಗದಲ್ಲಿ ತುಳಿಯಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಇಂಡಸ್ಟ್ರಿಯಲ್ಲಿ ಕೆಲವರು ನನ್ನ ಮೇಲೆ ಸಂಚು ರೂಪಿಸಿದ್ದಾರೆ ಎನ್ನುವ ಅರ್ಥದಲ್ಲಿ ಸಿದ್ಧಾರ್ಥ್ ಸಂದರ್ಶನದಲ್ಲಿ ಪ್ರತಿಕ್ರಿಯಿಸಿದ್ದಾರೆ.

    ಕಮಲ್ ಹಾಸನ್‌ನ ನೋಡಿದ್ರೆ ನನಗೆ ಹೊಟ್ಟೆಕಿಚ್ಚು. ಯಾಕಂದ್ರೆ ಅವರು ಹೀರೋ ಆದ ಸಂದರ್ಭದಲ್ಲಿ ತೆಲುಗಿನ ಖ್ಯಾತ ನಿರ್ದೇಶಕರ ಜೊತೆ ಅವರು ಸಿನಿಮಾ ಮಾಡಿದರು. ಅವರಿಗೆ ಸಿಕ್ಕ ಅವಕಾಶಗಳು ನನಗೆ ಸಿಗಲಿಲ್ಲ. ಆ ಸಮಯಲ್ಲಿ ನನ್ನ ಪ್ರತಿಭೆ ದೊಡ್ಡ ನಿರ್ದೇಶಕರಿಗೆ ಗೊತ್ತಾಗಲಿಲ್ಲ ಅಂತ ನಾನು ಹೇಳ್ತೀನಿ. ಫೀಕ್‌ನಲ್ಲಿ ಇದ್ದಾಗಲೇ ನನ್ನ ಪ್ರತಿಭೆ ಯಾರಿಗೂ ಗೊತ್ತಾಗಲಿಲ್ಲ ಎಂದು ಸಿದ್ಧಾರ್ಥ್ ಬೇಸರ ಹೊರಹಾಕಿದ್ದಾರೆ.