Tag: Kamal Haasan

  • ಏನಾಯಿತು ಕಮಲ್ ಹಾಸನ್ ಪುತ್ರಿಗೆ? ಆರೋಗ್ಯ ಸಮಸ್ಯೆ ಹಂಚಿಕೊಂಡ ಶ್ರುತಿ ಹಾಸನ್

    ಏನಾಯಿತು ಕಮಲ್ ಹಾಸನ್ ಪುತ್ರಿಗೆ? ಆರೋಗ್ಯ ಸಮಸ್ಯೆ ಹಂಚಿಕೊಂಡ ಶ್ರುತಿ ಹಾಸನ್

    ಮಿಳಿನ ಖ್ಯಾತ ನಟ ಕಮಲ್ ಹಾಸನ್ ಪುತ್ರಿ, ನಟಿ ಶ್ರುತಿ ಹಾಸನ್ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರಂತೆ. ಈ ಕುರಿತು ಅವರೇ ಸ್ವತಃ ಇನ್ಸ್ಟಾದಲ್ಲಿ ಬರೆದುಕೊಂಡು ಪೋಸ್ಟ್ ಮಾಡಿದ್ದಾರೆ. ಹಲವು ತಿಂಗಳುಗಳಿಂದ ಆ ಸಮಸ್ಯೆಯಿಂದ ಅವರು ಬಳಲುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಅಲ್ಲದೇ, ಅದಕ್ಕೆ ಟ್ರೀಟ್ ಮೆಂಟ್ ತಗೆದುಕೊಳ್ಳುವುದರ ಜೊತೆಗೆ ನಿತ್ಯ ವ್ಯಾಯಾಮ ಮಾಡುತ್ತಿರುವುದಾಗಿಯೂ ಅವರು ಹೇಳಿಕೊಂಡಿದ್ದಾರೆ.

    ಈಗಾಗಲೇ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಶ್ರುತಿ ಹಾಸನ್, ಒಳ್ಳೆಯ ಗಾಯಕಿ ಕೂಡ. ಈಗ ‍ಪ್ರಭಾಸ್ ಜೊತೆ ಸಲಾರ್ ಸಿನಿಮಾದ ಶೂಟಿಂಗ್ ನಲ್ಲಿ ಪಾಲ್ಗೊಂಡಿದ್ದಾರೆ. ಈ ನಡುವೆಯೇ ಅವರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ವಿಚಾರವನ್ನೂ ಹಂಚಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ತಾವು ಪಿಸಿಓಡಿಯಿಂದ ಬಳಲುತ್ತಿರುವುದಾಗಿ ಹೇಳಿದ್ದಾರೆ. ಅದರಿಂದ ಆಚೆ ಬರುವುದಕ್ಕೆ ಸಾಕಷ್ಟು ಶ್ರಮ ಪಡುತ್ತಿರುವುದಾಗಿಯೂ ಹೇಳಿದ್ದಾರೆ. ಇದನ್ನೂ ಓದಿ:`ರಾ ರಾ ರಕ್ಕಮ್ಮ’ ನಂತರ ನಾಳೆ ಮತ್ತೊಂದು ಸಾಂಗ್ ರಿಲೀಸ್: ವಿಕ್ರಾಂತ್ ರೋಣ

    ನಾನು ಎಂಡೊಮೆಟ್ರಿಯೋಸಿಸ್ ನೊಂದಿಗೆ ಹಾರ್ಮೋನ್ ಸಮಸ್ಯೆಗಳನ್ನು ಎದುರಿಸುತ್ತಿರುವೆ. ಇದೊಂದು ನೈಸರ್ಗಿಕ ಕ್ರಿಯೆ ಎಂದು ನನಗೆ ಗೊತ್ತಿದ್ದರೂ, ಅದರೊಂದಿಗೆ ಹೋರಾಟ ಮಾಡಲೇಬೇಕಿದೆ. ಶೂಟಿಂಗ್ ನಡುವೆಯೂ ನಿತ್ಯ ವ್ಯಾಯಾಮ ಮಾಡುತ್ತೇನೆ. ಸರಿಯಾದ ಊಟ ಮತ್ತು ವೇಳೆಗೆ ಸರಿಯಾಗಿ ನಿದ್ದೆ ಮಾಡಬೇಕಿದೆ. ಸದಾ ಸಂತೋಷದಿಂದ ಇರುವುದೇ ಇದಕ್ಕೆ ಪರಿಹಾರ ಎಂದು ಹಲವರು ಸೂಚಿಸಿದ್ದಾರೆ. ಹಾಗಾಗಿ ನಾನು ಸದಾ ಲವಲವಿಕೆಯಿಂದ ಇರುವೆ ಎಂದು ಹೇಳಿಕೊಂಡಿದ್ದಾರೆ ಶ್ರುತಿ ಹಾಸನ್.

    Live Tv

  • ವಿಕ್ರಮ್ ಸಿನಿಮಾ ಗೆಲುವು :  ಸಾಲ ತೀರಿಸಿದ ಕಮಲ್ ಹಾಸನ್

    ವಿಕ್ರಮ್ ಸಿನಿಮಾ ಗೆಲುವು : ಸಾಲ ತೀರಿಸಿದ ಕಮಲ್ ಹಾಸನ್

    ತತ ಸೋಲುಗಳನ್ನೇ ಅನುಭವಿಸುತ್ತಾ ಬಂದಿದ್ದ ಕಮಲ್ ಹಾಸನ್, ಅಚ್ಚರಿ ಪಡುವಷ್ಟು ಗೆಲುವು ಸಾಧಿಸಿದ್ದಾರೆ. ಇತ್ತೀಚೆಗಷ್ಟೇ ರಿಲೀಸ್ ಆಗಿರುವ ವಿಕ್ರಮ್ ಸಿನಿಮಾ ಗಲ್ಲಾಪೆಟ್ಟಿಗೆ ತುಂಬಿಸಿದೆ. ಈವರೆಗೂ ಮುನ್ನೂರು ಕೋಟಿಗೂ ಅಧಿಕ ಲಾಭವನ್ನು ವಿಕ್ರಮ್ ತಂದುಕೊಟ್ಟಿದೆ. ಹಾಗಾಗಿ ಕಮಲ್ ಹಾಸನ್ ಮುಖದಲ್ಲಿ ಮಂದಹಾಸ ಮೂಡಿದೆ. ಅದನ್ನು ಇತರರ ಜೊತೆಗೂ ಕಮಲ್ ಹಾಸನ್ ಹಂಚಿಕೊಂಡಿದ್ದಾರೆ.

    ವಿಕ್ರಮ್ ಸಿನಿಮಾ ಗೆದ್ದು, ನೂರಾರು ಕೋಟಿ ತಂದುಕೊಟ್ಟರೆ, ಮೊದಲು ನನ್ನ ಸಾಲಗಳನ್ನು ತೀರಿಸುತ್ತೇನೆ ಎಂದು ಕಮಲ್ ಹಾಸನ್ ನುಡಿದಿದ್ದರು. ಹೇಳಿದಂತೆಯೇ ನಡೆದುಕೊಳ್ಳುತ್ತಿದ್ದಾರಂತೆ ಕಮಲ್. ಯಾರೊಂದಿಗೆ ಸಾಲ ಮಾಡಿಕೊಂಡಿದ್ದರೋ, ಅವರ ಸಾಲಗಳನ್ನು ತೀರಿಸುತ್ತಾ ಬಂದಿದ್ದಾರಂತೆ. ಹಾಗಾಗಿ ಕಮಲ್ ಮಾತ್ರವಲ್ಲ, ಸಾಲ ಕೊಟ್ಟವರು ಕೂಡ ಖುಷಿ ಪಡುವಂತಾಗಿದೆ. ಅಲ್ಲಿಗೆ ಈ ಸಿನಿಮಾದಿಂದ ಕಮಲ್ ಸಾಲುಮುಕ್ತರಾಗಲಿದ್ದಾರೆ. ಇದನ್ನೂ ಓದಿ : ಚಾಮುಂಡಿ ದರ್ಶನ ಮುಗಿಸಿ ಮೈಸೂರಿನಲ್ಲಿ ಉಪಾಧ್ಯಕ್ಷನನ್ನು ಭೇಟಿಯಾದ ಶಿವರಾಜ್ ಕುಮಾರ್

    ನಿರ್ಮಾಪಕರು ಮತ್ತ ಮುಖ್ಯ ಪಾತ್ರಧಾರಿ ಕಮಲ್ ಹಾಸನ್ ಅವರೇ ಆಗಿರುವುದರಿಂದ ಈ ಸಿನಿಮಾದಿಂದ ಬಂದ ಲಾಭದಲ್ಲಿ ನಿರ್ದೇಶಕರಿಗೆ ದುಬಾರಿ ಬೆಲೆಯ ಕಾರು ಗಿಫ್ಟ್ ನೀಡಿದ್ದರು. ಅಲ್ಲದೇ, ಸಹ ನಿರ್ದೇಶಕರಿಗೂ ಕೂಡ ಬೈಕ್ ನೀಡಿದ್ದರು. ಇದೀಗ ಸಾಲ ತೀರಿಸಿದ್ದಾರೆ. ಅಲ್ಲಿಗೆ ವಿಕ್ರಮ್ ಸಿನಿಮಾ ಕಮಲ್ ಜೀವನಕ್ಕೆ ಖುಷಿ ಮತ್ತು ಅವರ ವೃತ್ತಿ ಬದುಕಿಗೆ ದೊಡ್ಡದೊಂದು ಬ್ರೇಕ್ ನೀಡಿದೆ.

    Live Tv

  • ವಿಕ್ರಮ್ ಸಿನಿಮಾದಿಂದ ಕಮಲ್ ಹಾಸನ್ ಗಳಿಸಿದ್ದು 300 ಕೋಟಿ – ಬಂದ ಹಣದಿಂದ ಸಾಲ ತೀರಿಸ್ತೀನಿ ಅಂದ ನಟ

    ವಿಕ್ರಮ್ ಸಿನಿಮಾದಿಂದ ಕಮಲ್ ಹಾಸನ್ ಗಳಿಸಿದ್ದು 300 ಕೋಟಿ – ಬಂದ ಹಣದಿಂದ ಸಾಲ ತೀರಿಸ್ತೀನಿ ಅಂದ ನಟ

    ತ್ತು ದಿನಗಳ ಹಿಂದೆಯಷ್ಟೇ ವಿಶ್ವದಾದ್ಯಂತ ರಿಲೀಸ್ ಆಗಿರುವ ಕಮಲ್ ಹಾಸನ್ ನಟನೆಯ ವಿಕ್ರಮ್ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಧೂಳ್ ಎಬ್ಬಿಸುತ್ತಿದೆ. ನಿರೀಕ್ಷೆ ಮಾಡದೇ ಇರುವಷ್ಟು ಅದು ಹಣ ತಂದುಕೊಡುತ್ತಿದೆ. ಎರಡನೇ ವಾರಕ್ಕೂ ಶರವೇಗದಲ್ಲಿ ಮುನ್ನುಗ್ಗುತ್ತಿರುವ ಚಿತ್ರವು ಹತ್ತು ದಿನಕ್ಕೆ ಬರೋಬ್ಬರಿ 300 ಕೋಟಿ ಗಳಿಸಿದೆ ಎಂದು ಅಂದಾಜು ಮಾಡಲಾಗಿದೆ. ಹಾಗಾಗಿ ಸಹಜವಾಗಿಯೇ ಸಿನಿಮಾ ತಂಡ ಖುಷಿ ಆಗಿದೆ.

    ವಿಕ್ರಮ್ ಸಿನಿಮಾ ನೂರು ಕೋಟಿ ಕ್ಲಬ್ ಸೇರುತ್ತಿದ್ದಂತೆಯೇ ನಿರ್ದೇಶಕ ಲೋಕೇಶ್ ಕನಗರಾಜ್ ಅವರಿಗೆ ದುಬಾರಿ ಕಾರನ್ನು ಉಡುಗೊರೆಯಾಗಿ ನೀಡಿದ್ದರು ಕಮಲ್. ಅಲ್ಲದೇ, ಈ ಚಿತ್ರಕ್ಕಾಗಿ ಕೆಲಸ ಮಾಡಿದ ಸಹ ನಿರ್ದೇಶಕರು ಬೈಕ್ ನೀಡಿದ್ದರು. ಸಿನಿಮಾದ ಕ್ಲೈಮ್ಯಾಕ್ಸ್ ನಲ್ಲಿ ನಟಿಸಿದ್ದ ನಟ ಸೂರ್ಯ ಅವರಿಗೆ ದುಬಾರಿ ವಾಚ್ ನೀಡಿದ್ದರು. ಇದೀಗ ವಿಕ್ರಮ್ ಸಿನಿಮಾದಿಂದ ಬಂದಿರುವ ಹಣವನ್ನು ಸಾಲದ ಮರುಪಾವತಿಗೆ ಬಳಸಿಕೊಳ್ಳುತ್ತಾರಂತೆ. ಇದನ್ನೂ ಓದಿ: ನಾನು ‘ಸಂಚಾರಿ ವಿಜಯ್’ ಹಾಗೂ ರಾಷ್ಟ್ರೀಯ ಹೆದ್ದಾರಿ 4 : ನಿರ್ದೇಶಕ ಮಂಸೋರೆ ಮನದಾಳ

    ಮಾಧ್ಯಮಗಳ ಜೊತೆ ಮಾತನಾಡಿದ ಕಮಲ್ ಹಾಸನ್, “ನಾನು ಈ ಸಿನಿಮಾ ಚೆನ್ನಾಗಿಯೇ ದುಡ್ಡು ಮಾಡುತ್ತದೆ ಎಂದು ಹೇಳಿದೆ. ಸುಮ್ನೆ ಹೇಳುತ್ತಾನೆ ಅಂದುಕೊಂಡರು. ಇದೀಗ ಹಣ ಹರಿದು ಬರುತ್ತಿದೆ. ಮೊದಲು ನನ್ನ ಸಾಲಗಳನ್ನು ಮರುಪಾವತಿ ಮಾಡುತ್ತೇನೆ. ಕುಟುಂಬ ಮತ್ತು ಸ್ನೇಹಿತರಿಗೆ ಸಹಾಯ ಮಾಡುವೆ. ನೆಮ್ಮದಿಯಾಗಿ ಊಟ ಮಾಡುವೆ. ಸಾಲ ತೀರಿದ ನಂತರ ಒಳ್ಳೆಯ ಮನುಷ್ಯನಾಗಿ ಬದುಕುವೆ ಎಂದು ಹೇಳಿದ್ದಾರೆ ಕಮಲ್.

     

     

    Live Tv

  • ನಿರ್ದೇಶಕನಿಗೆ ಐಷಾರಾಮಿ ಕಾರು, ಸಹ ನಿರ್ದೇಶಕರಿಗೆ ದುಬಾರಿ ಬೈಕ್ ಗಿಫ್ಟ್ ಮಾಡಿದ ಕಮಲ್ ಹಾಸನ್

    ನಿರ್ದೇಶಕನಿಗೆ ಐಷಾರಾಮಿ ಕಾರು, ಸಹ ನಿರ್ದೇಶಕರಿಗೆ ದುಬಾರಿ ಬೈಕ್ ಗಿಫ್ಟ್ ಮಾಡಿದ ಕಮಲ್ ಹಾಸನ್

    ಚಾರ್ಯ ಸಿನಿಮಾ ಸೋತಿದ್ದಕ್ಕೆ ತೆಲುಗು ನಟ ಚಿರಂಜೀವಿ ತಮ್ಮ ಸಿನಿಮಾ ನಿರ್ದೇಶಕನಿಂದ ಮೂವತ್ತು ಕೋಟಿ ರೂಪಾಯಿಯನ್ನು ವಿತರಕರಿಗೆ ಮರುಪಾವತಿಸುವಂತೆ ಹೇಳಿದರೆ, ಇತ್ತ ತಮಿಳು ಚಿತ್ರದ ಖ್ಯಾತ ನಟ ಕಮಲ್ ಹಾಸನ್ ತಮ್ಮ ವಿಕ್ರಮ್ ಸಿನಿಮಾ ಗೆದ್ದಿರುವುದಕ್ಕೆ ನಿರ್ದೇಶಕರ ತಂಡಕ್ಕೆ ಭಾರೀ ಉಡುಗೊರೆ ನೀಡಿದ್ದಾರೆ. ಕಮಲ್ ಹಾಸನ್ ಈ ನಡೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಇದನ್ನೂ ಓದಿ : ಚಿರಂಜೀವಿ ನಟನೆಯ ‘ಆಚಾರ್ಯ’ ಸಿನಿಮಾ ಸೋಲು : ಹೊಣೆಹೊತ್ತು ಹಣ ಮರಳಿಸಿದ್ರಾ ನಿರ್ದೇಶಕ ಶಿವ

    ಕಮಲ್ ಹಾಸನ್ ನಟನೆಯ ವಿಕ್ರಮ್ ಸಿನಿಮಾ ನಾಲ್ಕೇ ದಿನಕ್ಕೆ 175 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ. ಈ ವಾರದಲ್ಲಿ ಸಿನಿಮಾ ಇನ್ನೂರು ಕೋಟಿ ಕ್ಲಬ್ ಗೆ ಸೇರಲಿದೆ ಎಂದು ಅಂದಾಜಿಸಲಾಗಿದೆ. ಈ ಖುಷಿಗಾಗಿ ಕಮಲ್ ಹಾಸನ್, ತಮ್ಮ ಸಿನಿಮಾದ ನಿರ್ದೇಶಕ ಲೋಕೇಶ್ ಕನಗರಾಜ್ ಅವರಿಗೆ ದುಬಾರಿ ಕಾರನ್ನು ಉಡುಗೊರೆಯಾಗಿ ನೀಡಿದದ್ದಾರೆ. ಈ ಕಾರಿಗೆ ಅಂದಾಜು 70 ಲಕ್ಷ ರೂಪಾಯಿ ಎಂದು ಹೇಳಲಾಗುತ್ತಿದೆ. ಈ ವಿಷಯವನ್ನು ನಿರ್ದೇಶಕರೇ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ : ನಿಖಿಲ್ ಕುಮಾರ್ ಸ್ವಾಮಿ ಪುತ್ರನಿಗೆ ಇಟ್ಟ ಹೆಸರೇನು? ಆ ಹೆಸರಿನ ಅರ್ಥ ಏನು?

    ಕೇವಲ ನಿರ್ದೇಶಕರಿಗೆ ಮಾತ್ರವಲ್ಲ, ಸಹ ನಿರ್ದೇಶನದ ತಂಡಕ್ಕೂ ಕೂಡ ದುಬಾರಿ ಬೈಕ್ ಕೊಡಿಸಿದ್ದಾರೆ ಎನ್ನಲಾಗುತ್ತಿದೆ. ಒಟ್ಟು 18 ಜನರಿಗೆ ಈ ಬೈಕ್ ದೊರೆತಿದೆ. ವಿಕ್ರಮ್ ಸಿನಿಮಾ ಗೆಲುವಿಗೆ ಚಿತ್ರತಂಡವೇ ಕಾರಣ ಎನ್ನುವ ಕಾರಣಕ್ಕಾಗಿ ಇಂಥದ್ದೊಂದು ಉಡುಗೊರೆಯನ್ನು ಕಮಲ್ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ವಿಶ್ವದಾದ್ಯಂತ ಚಿತ್ರಕ್ಕೆ ಭರ್ಜರಿ ಗೆಲುವು ಸಿಕ್ಕಿದೆ. ಅಲ್ಲದೇ, ಕರ್ನಾಟಕದಲ್ಲೂ ಈ ಸಿನಿಮಾ ಚೆನ್ನಾಗಿಯೇ ದುಡ್ಡು ಮಾಡಿದೆ.

  • ಕಮಲ್ ಹಾಸನ್ ನಟನೆಯ ‘ವಿಕ್ರಮ್’ ಸಿನಿಮಾ : ಬಾಕ್ಸ್ ಆಫೀಸ್ ಧೂಳಿಪಟ

    ಕಮಲ್ ಹಾಸನ್ ನಟನೆಯ ‘ವಿಕ್ರಮ್’ ಸಿನಿಮಾ : ಬಾಕ್ಸ್ ಆಫೀಸ್ ಧೂಳಿಪಟ

    ನಾಲ್ಕು ದಿನಗಳ ಹಿಂದೆಯಷ್ಟೇ ರಿಲೀಸ್ ಆಗಿರುವ ಕಮಲ್ ಹಾಸನ್ ನಟನೆಯ ವಿಕ್ರಮ್ ಸಿನಿಮಾ ವಿಶ್ವದಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ರಿಲೀಸ್ ಆದ ನಾಲ್ಕೇ ದಿನಕ್ಕೆ 175 ಕೋಟಿಗೂ ಅಧಿಕ ಕಲೆಕ್ಷನ್ ಮಾಡುವ ಮೂಲಕ ಒಳ್ಳೆಯ ಓಪನಿಂಗ್ ಪಡೆದುಕೊಂಡಿದೆ. ಕರ್ನಾಟಕದಲ್ಲೂ ಅದು ದಾಖಲೆಯ ಮೊತ್ತವನ್ನೇ ಕಲೆಹಾಕಿದೆಯಂತೆ. ದನ್ನೂ ಓದಿ: ಡೊಳ್ಳು ಚಿತ್ರಕ್ಕೆ ಪ್ರಶಸ್ತಿಗಳ ಸುರಿಮಳೆ : ದಾಖಲೆಯ ರೀತಿಯಲ್ಲಿ ಪ್ರಶಸ್ತಿ ಪಡೆದ ಪವನ್ ಒಡೆಯರ್

    ದಕ್ಷಿಣದ ವಿಕ್ರಮ್ ಸಿನಿಮಾ ಬಾಲಿವುಡ್ ನ ಸಾಮ್ರಾಟ್ ಪೃಥ್ವಿರಾಜ್ ಸಿನಿಮಾ ಏಕಕಾಲಕ್ಕೆ ಬಿಡುಗಡೆ ಆಗಿದ್ದವು. ಪೃಥ್ವಿರಾಜ್ ಸಿನಿಮಾವನ್ನು ಪ್ರೇಕ್ಷಕರು ಕೈ ಹಿಡಿಯದೇ ಇರುವ ಕಾರಣಕ್ಕಾಗಿ ವಿಕ್ರಮ್ ಲುಕ್ ಡಬಲ್ ಆಗಿ ಬದಲಾಗಿದೆ. ಹಾಗಾಗಿ ಅತೀ ವೇಗದಲ್ಲೇ ವಿಕ್ರಮ್ ಸಿನಿಮಾ ಇನ್ನೂರು ಕೋಟಿ ಕ್ಲಬ್ ಕೂಡ ತಲುಪಲಿದೆ. ಕೇವಲ ಬಾಕ್ಸ್ ಆಫೀಸ್ ಮಾತ್ರವಲ್ಲ, ಸಿನಿಮಾ ಮೇಕಿಂಗ್ ಬಗ್ಗೆ ಕೂಡ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದನ್ನೂ ಓದಿ : Exclusive – ವಾಣಿಜ್ಯ ಮಂಡಳಿಯಲ್ಲಿ ಕೋಟ್ಯಂತರ ದುರುಪಯೋಗ? : ರಾಜೇಂದ್ರ ಸಿಂಗ್ ಬಾಬು ಹೇಳಿದ್ದೇನು?

    ವಿಶ್ವದಾದ್ಯಂತ ನಾಲ್ಕು ದಿನಕ್ಕೆ 175 ಕೋಟಿಗೂ ಅಧಿಕ ಬಾಕ್ಸ್ ಆಫೀಸ್ ನಿಂದ ಹಣ ಹರಿದು ಬಂದಿದ್ದರೆ, ಕರ್ನಾಕದಲ್ಲೇ 15 ಕೋಟಿ ಕಲೆಕ್ಷನ್ ಆಗಿದೆ ಎನ್ನುವ ಮಾಹಿತಿ ಇದೆ. ದಿನದಿಂದ ದಿನಕ್ಕೆ ನೋಡುಗರ ಸಂಖ್ಯೆ ಹೆಚ್ಚಾಗುತ್ತಿದೆ ಎನ್ನುತ್ತಿದೆ ಬಾಕ್ಸ್ ಆಫೀಸ್ ಪಂಡಿತರ ಲೆಕ್ಕಾಚಾರ. ಅತ್ತ ಅಕ್ಷಯ್ ಕುಮಾರ್ ನಟನೆಯ ಸಾಮ್ರಾಟ್ ಪೃಥ್ವಿರಾಜ್ ಬಹುತೇಕ ಕಡೆ ನೆಲಕಚ್ಚಿರುವುದರಿಂದ ವಿಕ್ರಮ್ ಓಟಕ್ಕೆ ಸುಲಭ ದಾರಿಯೂ ಸಿಕ್ಕಂತಾಗಿದೆ.

  • ಅಕ್ಷಯ್ ಕುಮಾರ್ ಸಿನಿಮಾ ವಿದೇಶದಲ್ಲಿ ಬ್ಯಾನ್, ಸ್ವದೇಶದಲ್ಲಿ ಕಲೆಕ್ಷನ್ ಕಡಿಮೆ

    ಅಕ್ಷಯ್ ಕುಮಾರ್ ಸಿನಿಮಾ ವಿದೇಶದಲ್ಲಿ ಬ್ಯಾನ್, ಸ್ವದೇಶದಲ್ಲಿ ಕಲೆಕ್ಷನ್ ಕಡಿಮೆ

    ಕ್ಷಯ್ ಕುಮಾರ್ ನಟನೆಯ ಸಾಮ್ರಾಟ್ ಪೃಥ್ವಿರಾಜ್ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಭಾರೀ ಕಮಾಯಿ ಮಾಡಲಿದೆ ಎಂದು ನಂಬಲಾಗಿತ್ತು. ಸಿನಿಮಾ ಬಿಡುಗಡೆಗೂ ಮುನ್ನ ಚಿತ್ರ ವೀಕ್ಷಿಸಿದ್ದ ಸೆಲೆಬ್ರಿಟಿಗಳು ಕೂಡ ಚಿತ್ರವನ್ನು ಮೆಚ್ಚಿಕೊಂಡಿದ್ದರು. ಇಂತಹ ಸಿನಿಮಾವನ್ನು ಜನರಿಗೆ ತೋರಿಸಲೇಬೇಕೆಂದು ಉತ್ತರ ಪ್ರದೇಶ ಸರ್ಕಾರ ಕೂಡ ತೆರಿಗೆ ರಿಯಾಯತಿ ಘೋಷಣೆ ಮಾಡಿತ್ತು. ಆದರೂ ಅಂದುಕೊಂಡಷ್ಟು ಸಿನಿಮಾ ದುಡ್ಡು ಮಾಡುತ್ತಿಲ್ಲ.

    ಕುವೈತ್ ಸೇರಿದಂತೆ ಹಲವು ರಾಷ್ಟ್ರಗಳು ಈ ಸಿನಿಮಾವನ್ನು ಬ್ಯಾನ್ ಮಾಡಿದರೆ, ಭಾರತದಲ್ಲೇ ಈ ಸಿನಿಮಾವನ್ನು ನೋಡುಗರು ಸ್ವೀಕರಿಸಿಲ್ಲ. ಹೀಗಾಗಿ ದಿನದಿಂದ ದಿನಕ್ಕೆ ಬಾಕ್ಸ್ ಆಫೀಸ್ ಕಲೆಕ್ಷನ್ ಇಳಿಮುಖವಾಗುತ್ತಿದೆ. ಹೀಗಾಗಿ ಅಕ್ಷಯ್ ಅಂಡ್ ಟೀಮ್ ಸಖತ್ ತಲೆ ಕೆಡಿಸಿಕೊಂಡು ಕೂತಿದೆ. ಹೇಗಾದರೂ, ಈ ಸಿನಿಮಾವನ್ನು ಜನರಿಗೆ ತೋರಿಸಲೇಬೇಕೆಂದು ಪ್ಲ್ಯಾನ್ ಮಾಡುತ್ತಿದೆ. ಇನ್ನೂ ಓದಿ : ಪಠ್ಯ ಪುಸ್ತಕ ಪರಿಷ್ಕರಣೆ ಆಕ್ರೋಶ ಹೊರ ಹಾಕಿದ ನಟ ಚೇತನ್ : ಗಾಂಧಿ, ನೆಹರು ನಮ್ ವಿರೋಧಿಗಳು ಎಂದ ನಟ

    ಕಮಲ್ ಹಾಸನ್ ನಟನೆಯ ವಿಕ್ರಮ್ ಮತ್ತು ಅಕ್ಷಯ್ ನಟನೆಯ ಪೃಥ್ವಿರಾಜ್ ಸಿನಿಮಾ ಒಂದೇ ದಿನ ಬಿಡುಗಡೆ ಆಗಿವೆ. ಬಾಲಿವುಡ್ ಸೇರಿದಂತೆ ಅನೇಕ ರಾಜ್ಯಗಳಲ್ಲಿ ವಿಕ್ರಮ್ ಚಿತ್ರಕ್ಕೆ ಒಳ್ಳೆಯ ಪ್ರತಿಕ್ರಿಯೆ ಬಂದಿದೆ. ರಿಲೀಸ್ ಆಗಿ ಮೂರೇ ದಿನಕ್ಕೆ ವಿಕ್ರಮ್ ನೂರು ಕೋಟಿ ಕ್ಲಬ್ ಸೇರಿಕೊಂಡಿದೆ. ಆದರೆ, ಪೃಥ್ವಿರಾಜ್ ಮಾತ್ರ ಅಂದುಕೊಂಡಷ್ಟು ದುಡ್ಡು ಮಾಡಿಲ್ಲ. ಇದಕ್ಕೆ ಕಾರಣ ಏನು ಅನ್ನುವುದರ ಹುಡುಕಾಟದಲ್ಲಿ ನಿರತವಾಗಿದೆ ಪೃಥ್ವಿರಾಜ್ ಟೀಮ್.

  • ಕಮಲ್ ಹಾಸನ್ ಸಿನಿಮಾ ಮುಂದೆ ಅಕ್ಷಯ್ ಕುಮಾರ್ ಸಾಮ್ರಾಟ್ ಪೃಥ್ವಿರಾಜ್ ಡಲ್ಲೋ ಡಲ್ಲು

    ಕಮಲ್ ಹಾಸನ್ ಸಿನಿಮಾ ಮುಂದೆ ಅಕ್ಷಯ್ ಕುಮಾರ್ ಸಾಮ್ರಾಟ್ ಪೃಥ್ವಿರಾಜ್ ಡಲ್ಲೋ ಡಲ್ಲು

    ಬಾಲಿವುಡ್ ಸಿನಿಮಾಗಳಿಗೆ ಮತ್ತೆ ಸೆಡ್ಡು ಹೊಡೆದು ನಿಂತಿದೆ ದಕ್ಷಿಣದ ಸಿನಿಮಾ. ಬಾಹುಬಲಿ, ಕೆಜಿಎಫ್ 2 ನಂತರ ದಕ್ಷಿಣದ ‘ವಿಕ್ರಮ್’ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಮಕಾಡೆ ಮಲಗಿಸಿದೆ. ‘ಸಾಮ್ರಾಟ್ ಪೃಥ್ವಿರಾಜ್’ ಸಿನಿಮಾ ಗಳಿಕೆಯಲ್ಲಿ ವಿಕ್ರಮ್ ಗಿಂತ ಹಿಂದಿದೆ. ಹಾಗಾಗಿ, ಬಿಟೌನ್ ಮತ್ತೊಮ್ಮೆ ಆತಂಕ ಎದುರಿಸಬೇಕಾಗಿದೆ.

    ಕಮಲ್ ಹಾಸನ್ ನಟನೆಯ ‘ವಿಕ್ರಮ್’ ಮತ್ತು ಅಕ್ಷಯ್ ಕುಮಾರ್ ನಟನೆಯ ‘ಸಾಮ್ರಾಟ್ ಪೃಥ್ವಿರಾಜ್’ ಸಿನಿಮಾ ನಿನ್ನೆ ಒಟ್ಟಿಗೆ ರಿಲೀಸ್ ಆಗಿವೆ. ಎರಡೂ ಸಿನಿಮಾಗಳು ಕೂಡ ಅಷ್ಟೇ ನಿರೀಕ್ಷೆ ಮೂಡಿಸಿದ್ದವು. ಅಕ್ಷಯ್ ಕುಮಾರ್ ಸಿನಿಮಾ ನೋಡಿದ ಅಮಿತ್ ಶಾ, ಯೋಗಿ ಆದಿತ್ಯ ನಾಥ್ ಸೇರಿದಂತೆ ಅನೇಕ ಗಣ್ಯರು ಮೆಚ್ಚುಗೆಯ ಮಾತುಗಳನ್ನು ಆಡಿದ್ದರು. ಬಾಕ್ಸ್ ಆಫೀಸಿನಲ್ಲಿ ಈ ಸಿನಿಮಾ ನಿರೀಕ್ಷಿತ ಹಣ ತಂದುಕೊಟ್ಟಿಲ್ಲ. ಇದನ್ನೂ ಓದಿ : Exclusive : ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಮೊದಲ ವರ್ಷದ ಪುಣ್ಯಸ್ಮರಣೆ : ಪುತ್ಥಳಿ ಅನಾವರಣ

    ಕಮಲ್ ಹಾಸನ್ ನಟನೆಯ ವಿಕ್ರಮ್ ಸಿನಿಮಾ ರಿಲೀಸ್ ದಿನ ಬಾಕ್ಸ್ ಆಫೀಸು ತುಂಬಿಸಿದೆ. ಕಮಲ್ ಜೊತೆ ವಿಜಯ್ ಸೇತುಪತಿ, ಫಹಾದ್ ಫಾಸಿಲ್ ನಂತಹ ಪ್ರತಿಭಾವಂತ ಕಲಾವಿದರು ಈ ಸಿನಿಮಾದಲ್ಲಿದ್ದರು. ಈ ಮೂವರು ಅಭಿಮಾನಿಗಳು ಸೇರಿ, ವಿಕ್ರಮ್ ಸಿನಿಮಾವನ್ನು ಕೊಂಡಾಡುತ್ತಿದ್ದಾರೆ. ಹಾಗಾಗಿ ಮೊದಲ ದಿನವೇ ಈ ಸಿನಿಮಾ 34 ಕೋಟಿ ಸಂಪಾದಿಸಿದೆ ಎಂದು ಸಿನಿ ಪಂಡಿತರ ಲೆಕ್ಕಾಚಾರ. ಸದ್ಯದಲ್ಲೇ 100 ಕೋಟಿ ಕ್ಲಬ್ ಸೇರಲಿದೆ ಎಂದು ಭವಿಷ್ಯ ಕೂಡ ನುಡಿದಿದ್ದಾರೆ.

    ಅಕ್ಷಯ್ ಕುಮಾರ್ ನಟನೆಯ ಸಾಮ್ರಾಟ್ ಪೃಥ್ವಿರಾಜ್ ಸಿನಿಮಾದ ಮೊದಲ ದಿನದ ಗಳಿಕೆ ಕೇವಲ 11 ಕೋಟಿ ಎನ್ನಲಾಗುತ್ತಿದೆ. ಶನಿವಾರ ಮತ್ತು ಭಾನುವಾರ ಗಳಿಕೆಯಲ್ಲಿ ಚೇತರಿಕೆ ಕಾಣಿಸಬಹುದಾ ಎಂದು ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದ್ದಾರಂತೆ ನಿರ್ಮಾಪಕರು.

  • ಕಮಲ್ ಹಾಸನ್ ಸಿನಿಮಾ ‘ವಿಕ್ರಮ್’ ರಿಲೀಸ್ : ಕರ್ನಾಟಕದಲ್ಲಿ ಬೈಕಾಟ್ ಎಂದ ಡಬ್ಬಿಂಗ್ ಪರ ಹೋರಾಟಗಾರರು

    ಕಮಲ್ ಹಾಸನ್ ಸಿನಿಮಾ ‘ವಿಕ್ರಮ್’ ರಿಲೀಸ್ : ಕರ್ನಾಟಕದಲ್ಲಿ ಬೈಕಾಟ್ ಎಂದ ಡಬ್ಬಿಂಗ್ ಪರ ಹೋರಾಟಗಾರರು

    ನಿನ್ನೆಯಷ್ಟೇ ಬೆಂಗಳೂರಿಗೆ ಕಮಲ್ ಹಾಸನ್ ಆಗಮಿಸಿ, ತಮ್ಮ ‘ವಿಕ್ರಮ್’ ಸಿನಿಮಾದ ಭರ್ಜರಿ ಪ್ರಚಾರ ಮಾಡಿದರು. ಈ ಸಂದರ್ಭದಲ್ಲಿ ಅವರು ಕನ್ನಡ ಮತ್ತು ಕರ್ನಾಟಕದ ಜೊತೆಗಿನ ಸಂಬಂಧವನ್ನು ಹಂಚಿಕೊಂಡರು. ಡಾ.ರಾಜ್ ಕುಮಾರ್ ತಮಗೆಷ್ಟು ಸ್ಫೂರ್ತಿ ಎಂದೆಲ್ಲ ಮಾತನಾಡಿದರು. ಅಲ್ಲದೇ, ಅವರು ರಾಮಾ ಭಾಮಾ ಶಾಮಾ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ಆ ಕುರಿತು ಮಾತನಾಡಿದರು. ಇದನ್ನೂ ಓದಿ : ನಿತ್ಯಾನಂದ ಕುರಿತು ಸಾಕ್ಷ್ಯಚಿತ್ರ : ದೇವಮಾನವನ ನಿಜಬಣ್ಣ ಬಟಾಬಯಲು

    ಇಂದು ಕಮಲ್ ಹಾಸನ್ ನಟಿಸಿ, ನಿರ್ಮಾಣ ಮಾಡಿರುವ ‘ವಿಕ್ರಮ್ ಸಿನಿಮಾ ವಿಶ್ವದಾದ್ಯಂತ ರಿಲೀಸ್ ಆಗಿದೆ. ಕರ್ನಾಟಕದಲ್ಲಿ ನೂರಾರು ಸ್ಕ್ರೀನ್ ಗಳಲ್ಲಿ ತೆರೆಕಂಡಿದೆ. ಆದರೆ, ಈ ಸಿನಿಮಾವನ್ನು ಕನ್ನಡಕ್ಕೆ ಡಬ್ ಮಾಡಿ ರಿಲೀಸ್ ಮಾಡಿಲ್ಲ ಎನ್ನುವ ಕಾರಣಕ್ಕಾಗಿ ಡಬ್ಬಿಂಗ್ ಪರ ಹೋರಾಟಗಾರರು ‘ಬೈಕಾಟ್ ವಿಕ್ರಮ್’ ಅಭಿಯಾನವನ್ನು ಶುರು ಮಾಡಿದ್ದಾರೆ. ಇದನ್ನೂ ಓದಿ : ಉಪೇಂದ್ರ ನಿರ್ದೇಶಿಸಿ, ನಟಿಸಲಿರುವ ಸಿನಿಮಾಗೆ ಮುಹೂರ್ತ : ಹಣೆ ಮೇಲೆ ಟೈಟಲ್ ಹಾಕಿಕೊಂಡು ಬಂದ ಚಿತ್ರತಂಡ

    ನಿನ್ನೆಯಿಂದಲೇ ಕೆಲವು ಡಬ್ಬಿಂಗ್ ಪರ ಹೋರಾಟಗಾರರು ವಿಕ್ರಮ್ ಸಿನಿಮಾದ ಪೋಸ್ಟರ್ ಮೇಲೆ ಬೈಕಾಟ್ ವಿಕ್ರಮ್ ಎಂದು ಬರೆಯಿಸಿ ಸೋಷಿಯಲ್ ಮೀಡಿಯಾದಲ್ಲಿ ಹಂಚುತ್ತಿದ್ದಾರೆ. ನೀವು ಕನ್ನಡದಲ್ಲಿ ಡಬ್ ಮಾಡಿ ಸಿನಿಮಾ ರಿಲೀಸ್ ಮಾಡದೇ ಇದ್ದರೆ, ನಾವು ಈ ಚಿತ್ರವನ್ನೇ ನೋಡುವುದಿಲ್ಲ ಎಂದು ವಿರೋಧ ವ್ಯಕ್ತ ಪಡಿಸುತ್ತಿದ್ದಾರೆ. ಇದನ್ನೂ ಓದಿ : ಕನ್ನಡದ ಬಹುತೇಕ ದಿಗ್ಗಜರ ಜೊತೆ ನಟಿಸಿರುವ ನಟ ಉದಯ್ ಹುತ್ತಿನಗದ್ದೆ ನಿಧನ

    ಈ ಕುರಿತು ವಿತರಕರಾಗಲಿ ಅಥವಾ ಕಮಲ್ ಹಾಸನ್ ಆಗಲಿ ಯಾವುದೇ ಪ್ರತಿಕ್ರಿಯೆ ಕೊಟ್ಟಿಲ್ಲ. ಆದರೆ, ವಿಕ್ರಮ್ ಸಿನಿಮಾ ಕರ್ನಾಟಕದಲ್ಲಿ ತಮಿಳು ಭಾಷೆಯಲ್ಲೇ ರಿಲೀಸ್ ಆಗಿದ್ದು, ಒಂದೊಳ್ಳೆ ಪ್ರತಿಕ್ರಿಯೆ ಸಿಕ್ಕಿದೆ. ಕಮಲ್ ಅಭಿಮಾನಿಗಳು ಥಿಯೇಟರ್ ಮುಂದೆ ಹಬ್ಬದಂತೆ ಸಂಭ್ರಮಿಸುತ್ತಿದ್ದಾರೆ.

  • ಬಾಲಿವುಡ್ ನಿದ್ದೆ ಕೆಡಿಸಿದ ಮತ್ತೊಂದು ದಕ್ಷಿಣದ ಸಿನಿಮಾ : ರಿಲೀಸ್ ಗೂ ಮುನ್ನ ಕೋಟಿ ಕೋಟಿ ಬಾಚಿಕೊಂಡ ಕಮಲ್ ಹಾಸನ್

    ಬಾಲಿವುಡ್ ನಿದ್ದೆ ಕೆಡಿಸಿದ ಮತ್ತೊಂದು ದಕ್ಷಿಣದ ಸಿನಿಮಾ : ರಿಲೀಸ್ ಗೂ ಮುನ್ನ ಕೋಟಿ ಕೋಟಿ ಬಾಚಿಕೊಂಡ ಕಮಲ್ ಹಾಸನ್

    ದೇ ಶುಕ್ರವಾರ ಕಮಲ್ ಹಾಸನ್ ನಟನೆಯ ‘ವಿಕ್ರಮ್’ ಸಿನಿಮಾ ರಿಲೀಸ್ ಆಗುತ್ತಿದೆ. ಬಿಡುಗಡೆಗೂ ಮುನ್ನ ಈ ಸಿನಿಮಾ ಕೋಟಿ ಕೋಟಿ ಬಾಚಿಕೊಂಡಿದೆ ಎಂದು ಬಾಕ್ಸ್ ಆಫೀಸ್ ರಿಪೋರ್ಟ್ ಹೇಳುತ್ತಿದೆ. ಹೀಗಾಗಿ ದಕ್ಷಿಣದ ಸಿನಿಮಾವೊಂದು ಮತ್ತೆ ಬಾಲಿವುಡ್ ಮಂದಿಯನ್ನು ನಿದ್ದೆಗೆಡಿಸಿದೆ. ಆರ್.ಆರ್.ಆರ್ ಮತ್ತು ಕೆಜಿಎಫ್ 2 ನಂತರ ವಿಕ್ರಮ್ ಕೂಡ ಬಾಕ್ಸ್ ಆಫೀಸಿನಲ್ಲಿ ದೊಡ್ಡ ಮಟ್ಟದಲ್ಲಿ ಗೆಲುವು ಸಾಧಿಸಲಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕನಿಗೆ ಆಕ್ಸ್ ಫರ್ಡ್ ಯೂನಿವರ್ಸಿಟಿಯಲ್ಲಿ ಅವಮಾನ

    ಕಮಲ್ ಹಾಸನ್, ವಿಜಯ್ ಸೇತು ಪತಿ ಮತ್ತು ಫಾಸಿಲ್ ಕಾಂಬಿನೇಷನ್ ನ ಸಿನಿಮಾ ಇದಾಗಿದ್ದರಿಂದ ಸಿನಿಮಾ ರಿಲೀಸ್ ಗೂ ಮುನ್ನ 250 ಕೋಟಿ ರೂಪಾಯಿ ಬಾಚಿದೆಯಂತೆ. ಸಿನಿಮಾ ಬಿಡುಗಡೆಗೆ ಇನ್ನೂ ಎರಡು ದಿನ ಇರುವಾಗಲೇ ಬಹುತೇಕ ಚಿತ್ರಮಂದಿರಗಳಲ್ಲಿ ಹೌಸ್ ಫುಲ್ ಬೋರ್ಡ್ ಕೂಡ ಬಿದ್ದಿದೆಯಂತೆ. ತಮಿಳು ನಾಡಿನಲ್ಲಿ ಮೊದಲೆರಡು ದಿನಗಳ ಟಿಕೆಟ್ ಗಳು ಖಾಲಿ ಖಾಲಿ. ಹಿಂದಿಯಲ್ಲೂ ಸಿನಿಮಾ ಕೂಡ ಕಾಯುತ್ತಿದ್ದಾರೆ ಎನ್ನಲಾಗುತ್ತಿದೆ.  ಇದನ್ನೂ ಓದಿ : ಕಮಲ್ ಹಾಸನ್ ‘ವಿಕ್ರಮ್’ ಚಿತ್ರಕ್ಕೆ 13 ಕಡೆ ಕತ್ತರಿ : ಸೆನ್ಸಾರ್ ಮಂಡಳಿ ಸೂಚನೆ ಏನಿತ್ತು?

    ಈಗಾಗಲೇ ಈ ಚಿತ್ರದ ಬಗ್ಗೆ ತಮಿಳಿನಲ್ಲಿ ವಿರೋಧವೂ ಕೇಳಿ ಬಂದಿದೆ. ಅಲ್ಲದೇ, ಸೆನ್ಸಾರ್ ಮಂಡಳಿಯು ಸಿನಿಮಾದಲ್ಲಿ ಹಿಂಸೆ ಇದ್ದ ಕಾರಣದಿಂದಾಗಿ 13 ಕಡೆ ಕತ್ತರಿ ಪ್ರಯೋಗ ಮಾಡಿದೆ. ಈ ಎಲ್ಲದರ ಮಧ್ಯಯೂ ಅದ್ಭುತ ರೆಸ್ಪಾನ್ಸ್ ಸಿಗುತ್ತಿದೆಯಂತೆ. ಹಾಗಾಗಿ ನಾಲ್ಕು ಸಾವಿರ ಚಿತ್ರಮಂದಿರಗಳಲ್ಲಿ ವಿಕ್ರಮ್ ಸಿನಿಮಾ ತೆರೆ ಕಾಣುತ್ತಿದೆ.

  • ಕಮಲ್ ಹಾಸನ್ ‘ವಿಕ್ರಮ್’ ಚಿತ್ರಕ್ಕೆ 13 ಕಡೆ ಕತ್ತರಿ : ಸೆನ್ಸಾರ್ ಮಂಡಳಿ ಸೂಚನೆ ಏನಿತ್ತು?

    ಕಮಲ್ ಹಾಸನ್ ‘ವಿಕ್ರಮ್’ ಚಿತ್ರಕ್ಕೆ 13 ಕಡೆ ಕತ್ತರಿ : ಸೆನ್ಸಾರ್ ಮಂಡಳಿ ಸೂಚನೆ ಏನಿತ್ತು?

    ವಾರ ಕಮಲ್ ಹಾಸನ್ ನಟನೆಯ ‘ವಿಕ್ರಮ್’ ಸಿನಿಮಾ ವಿಶ್ವದಾದ್ಯಂತ ರಿಲೀಸ್ ಆಗುತ್ತಿದೆ. ಜೂ.3 ರಂದು ತೆರೆ ಕಾಣುತ್ತಿರುವ ಈ ಸಿನಿಮಾವನ್ನು ನೋಡಲು ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ. ಈ ನಡುವೆ ನಿನ್ನೆಯಷ್ಟೇ ಚಿತ್ರಕ್ಕೆ ಸೆನ್ಸಾರ್ ಆಗಿದೆ. ಯು/ಎ ಪ್ರಮಾಣ ಪತ್ರ ಸಿಕ್ಕಿದೆ. ಈ ಸರ್ಟಿಫಿಕೇಟ್ ಸಿಗಲು ಕಮಲ್ ಹಾಸನ್ ಅಂಡ್ ಟೀಮ್ ಮಾಡಿದ ಸಾಹಸ ಅಷ್ಟಿಷ್ಟಲ್ಲ. ಇದನ್ನೂ ಓದಿ : ಪ್ರಭುದೇವ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾಗೆ ಸಂದೇಶ್ ನಾಗರಾಜ್ ನಿರ್ಮಾಪಕ

    ವಿಕ್ರಮ್ ಸಿನಿಮಾದಲ್ಲಿ ಹಿಂಸೆಯಲ್ಲಿ ವೈಭವೀಕರಿಸಲಾಗಿದೆ ಎನ್ನುವ ಮಾಹಿತಿ ಇದೆ. ಹಲವು ದೃಶ್ಯಗಳಲ್ಲಿ ತುಂಬಾ ಹಿಂಸೆಯನ್ನು ತೋರಿಸಿದ್ದಾರಂತೆ. ಹಾಗಾಗಿ 13 ಕಡೆ ಸಿನಿಮಾಗೆ ಕತ್ತರಿ ಹಾಕಲು ಸೆನ್ಸಾರ್ ಮಂಡಳಿ ಸೂಚಿಸಿತ್ತು ಎನ್ನಲಾಗುತ್ತಿದೆ. ಸೆನ್ಸಾರ್ ಮಂಡಳಿಯು ಸೂಚಿಸಿದ ಎಲ್ಲ ಸಲಹೆಗಳನ್ನು ಚಿತ್ರತಂಡ ಸ್ವೀಕರಿಸಿದ ನಂತರವೇ ಯು/ಎ ಪ್ರಮಾಣ ಪತ್ರವನ್ನು ನೀಡಲಾಗಿದೆ. ಇದನ್ನೂ ಓದಿ : ಅಕ್ಟೋಬರ್ 3ಕ್ಕೆ ಅಭಿಷೇಕ್ ಅಂಬರೀಶ್ ಹೊಸ ಸಿನಿಮಾಗೆ ಮುಹೂರ್ತ

    ಈಗಾಗಲೇ ವಿಕ್ರಮ್ ಸಿನಿಮಾದ ಬಗ್ಗೆ ಕಮಲ್ ಹಾಸನ್ ಒಳ್ಳೆಯ ಮಾತುಗಳನ್ನು ಆಡಿದ್ದಾರೆ. ವಿಜಯ್ ಸೇತುಪತಿ ಸೇರಿದಂತೆ ಪ್ರತಿಭಾವಂತ ಕಲಾವಿದರ ದಂಡೇ ಸಿನಿಮಾದಲ್ಲಿದೆ. ಅಲ್ಲದೇ, ರಜನಿಕಾಂತ್ ಸೇರಿದಂತೆ ಹಲವು ಕಲಾವಿದರನ್ನು ಸಿನಿಮಾ ವೀಕ್ಷಣೆಗೆ ಕಮಲ್ ಆಹ್ವಾನಿಸಿದ್ದಾರೆ. ಹಾಗಾಗಿ ಸಹಜವಾಗಿಯೇ ಚಿತ್ರದ ಬಗ್ಗೆ ಕುತೂಹಲ ಮೂಡಿದೆ.  ಇದನ್ನೂ ಓದಿ : ‘ಮಾ ಇಷ್ಟಂ’ ಸಿನಿಮಾಗೆ ತಡೆಯಾಜ್ಞೆ ತಂದವರ ವಿರುದ್ಧವೇ ನಕಲಿ ಸಹಿ ದೂರು ನೀಡಿದ ವರ್ಮಾ

    ಫಹಾದ್ ಫಾಸಿಲ್, ಕಮಲ್ ಹಾಸನ್ ಮತ್ತು ವಿಜಯ್ ಸೇತುಪತಿ ಮೂವರು ಕಾಂಬಿನೇಷನ್ ನ ಮೊದಲ ಚಿತ್ರ ಇದಾಗಿದ್ದು, ಮೂವರು ಅಭಿಮಾನಿಗಳು ಈ ಚಿತ್ರಕ್ಕಾಗಿ ಕಾಯುತ್ತಿದ್ದಾರೆ. ಸ್ವತಃ ಕಮಲ್ ಹಾಸನ್ ಅವರೇ ಈ ಚಿತ್ರದ ನಿರ್ಮಾಪಕರು ಕೂಡ ಆಗಿದ್ದಾರೆ.