ಎರಡು ದಿನಗಳ ಹಿಂದೆಯಷ್ಟೇ ‘ನಾನು ಎಂದಿಗೂ ರಜನಿಕಾಂತ್ ಅವರನ್ನು ದ್ವೇಷಿಸಿಲ್ಲ. ಅವರು ನನ್ನ ವೈರಿಯಲ್ಲ’ ಎಂದು ಕಮಲ್ ಹಾಸನ್ ಹೇಳಿದ ಬೆನ್ನೆಲ್ಲೇ, ರಜನಿ ಮನೆಗೆ ಕಮಲ್ ಹೋಗಿದ್ದಾರೆ. ಮನೆಗೆ ಬಂದ ಅತಿಥಿಯನ್ನು ಆತ್ಮೀಯವಾಗಿಯೇ ಬರಮಾಡಿಕೊಂಡಿದ್ದಾರೆ ರಜನಿ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದನ್ನೂ ಓದಿ : ಸದ್ದಿಲ್ಲದೇ ಶೂಟಿಂಗ್ ಮುಗಿಸಿದ ಮಂಸೋರೆ ನಿರ್ದೇಶನದ ‘19.20.21’ ಸಿನಿಮಾ
ರಜನಿಕಾಂತ್ ಮತ್ತು ಕಮಲ್ ಹಾಸನ್ ಒಟ್ಟೊಟ್ಟಿಗೆ ಸಿನಿಮಾ ರಂಗದಲ್ಲಿ ಬದುಕು ಕಟ್ಟಿಕೊಂಡವರು. ಒಟ್ಟೊಟ್ಟಿಗೆ ಸಿನಿಮಾ ಮಾಡಿದವರು. ಒಂದೇ ದಿನಕ್ಕೆ ಇಬ್ಬರೂ ಸಿನಿಮಾಗಳನ್ನು ರಿಲೀಸ್ ಮಾಡಿ ತೊಡೆತಟ್ಟಿದವರು. ಹೀಗಾಗಿ ಇಬ್ಬರ ಫ್ಯಾನ್ಸ್ ಕೂಡ ಆಗಾಗ್ಗೆ ಫ್ಯಾನ್ಸ್ ವಾರ್ ಮಾಡಿದ್ದಿದೆ. ನಮ್ಮಿಬ್ಬರ ಮಧ್ಯೆ ವೈರತ್ವ ಇಲ್ಲವೆಂದು ಇಬ್ಬರೂ ಹೇಳಿಕೊಂಡರೂ, ಅಭಿಮಾನಿಗಳು ಮಾತ್ರ ಅದನ್ನು ನಂಬಲು ತಯಾರಿಲ್ಲ. ಇದನ್ನೂ ಓದಿ : ಒಟಿಟಿಯಲ್ಲೂ ರಾಜಮೌಳಿ ‘RRR’ ದಾಖಲೆ
ಸದ್ಯ ಕಮಲ್ ಹಾಸನ್ ನಟನೆಯ ‘ವಿಕ್ರಮ್ ‘ ಸಿನಿಮಾ ರಿಲೀಸ್ ಆಗುತ್ತಿದೆ. ಇದೇ ವಾರವೇ ವಿಶ್ವದಾದ್ಯಂತ ಸಿನಿಮಾ ತೆರೆಗೆ ಬರುತ್ತಿದೆ. ಈ ಸಂದರ್ಭದಲ್ಲಿ ರಜನಿಕಾಂತ್ ಮನೆಗೆ ಕಮಲ್ ಹಾಸನ್ ಭೇಟಿ ನೀಡಿದ್ದಾರೆ. ವಿಕ್ರಮ್ ಸಿನಿಮಾ ನೋಡುವಂತೆ ಆಹ್ವಾನ ಮಾಡಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ರಜನಿ ಅಭಿಮಾನಿಗಳು ಕೂಡ ವಿಕ್ರಮ್ ಸಿನಿಮಾವನ್ನು ನೋಡಬಹುದು ಎನ್ನುವ ಅಂದಾಜಿದೆ. ಇದನ್ನೂ ಓದಿ : ಅಭಿಷೇಕ್ ಅಂಬರೀಶ್ ನಟನೆಯ ಕಾಳಿ ಸಿನಿಮಾ ಫಸ್ಟ್ ಲುಕ್ ರಿಲೀಸ್
ದಕ್ಷಿಣದಲ್ಲಿ ಕಮಲ್ ನಟನೆಯ ವಿಕ್ರಮ್ ಚಿತ್ರ ರಿಲೀಸ್ ಆಗುತ್ತಿದ್ದರೆ, ಬಾಲಿವುಡ್ ನಲ್ಲಿ ಅಕ್ಷಯ್ ಕುಮಾರ್ ಅವರ ಸಾಮ್ರಾಟ್ ಫೃಥ್ವಿರಾಜ್ ಸಿನಿಮಾ ಕೂಡ ತೆರೆಗೆ ಬರುತ್ತಿದೆ. ಆ ಸಿನಿಮಾ ಕೂಡ ನಿರೀಕ್ಷೆಯನ್ನು ಹೆಚ್ಚಿಸಿದೆ. ಹೀಗಾಗಿ ಸಹಜವಾಗಿಯೇ ಎರಡೂ ಚಿತ್ರಗಳ ಮಧ್ಯೆ ಪೈಪೋಟಿ ನಡೆಯಲಿದೆ. ಎರಡು ಸಿನಿಮಾಗಳಲ್ಲಿ ಪ್ರೇಕ್ಷಕ ಯಾರಿಗೆ ಒಲಿಯುತ್ತಾನೆ ಎನ್ನುವುದು ಸದ್ಯಕ್ಕಿರುವ ಕುತೂಹಲ.
ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ಖ್ಯಾತ ನಟ ಕಮಲ್ ಹಾಸನ್ ಒಟ್ಟಿಗೆ ಸಿನಿಮಾ ರಂಗಕ್ಕೆ ಬಂದವರು. ಅದರಲ್ಲೂ ಅನೇಕ ಚಿತ್ರಗಳಲ್ಲಿ ಒಟ್ಟಾಗಿ ನಟಿಸಿದ್ದಾರೆ. ಅದರಲ್ಲೂ ರಜನಿಯ ಮೊದಲ ಸಿನಿಮಾ ಅಪೂರ್ವ ರಾಗಂಗಳ್ ಚಿತ್ರದಲ್ಲಿ ಕಮಲ್ ಹಾಸನ್ ಕೂಡ ಪಾತ್ರ ನಿರ್ವಹಿಸಿದ್ದಾರೆ. ಇಷ್ಟಿದ್ದೂ ಒಬ್ಬರನ್ನು ಕಂಡರೆ ಒಬ್ಬರಿಗೆ ಆಗುವುದಿಲ್ಲ ಎನ್ನುವ ಸುದ್ದಿ ಹಲವು ವರ್ಷಗಳಿಂದ ಹರಿದಾಡುತ್ತಿದೆ. ಇದನ್ನೂ ಓದಿ : ಹಾಲಿವುಡ್ ಖ್ಯಾತ ನಟ ರೇ ಲಿಯೊಟ್ಟಾ ಮಲಗಿದ್ದಾಗಲೇ ನಿಧನ
ರಜನಿ ಮತ್ತು ಕಮಲ್ ಹಾಸನ್ ಸಿನಿಮಾಗಳು ಒಟ್ಟಿಗೆ ರಿಲೀಸ್ ಆದಾಗ, ಇಬ್ಬರ ಅಭಿಮಾನಿಗಳು ಹೊಡೆದಾಡಿಕೊಂಡಿದ್ದುಇದೆ. ಫ್ಯಾನ್ಸ್ ವಾರ್ ಗೆ ಹೆಸರಾದ ನಟರು ಇವರು. ಇಂತಿಪ್ಪ ರಜನಿ ಮತ್ತು ಕಮಲ್ ಹಾಸನ್ ಯಾವತ್ತು ವೈರತ್ವ ಸಾಧಿಸಿಲ್ಲ ಎನ್ನುವುದನ್ನು ಕಮಲ್ ಹಾಸನ್ ಹೇಳಿದ್ದಾರೆ. ಅವರ ವಿಕ್ರಮ್ ಸಿನಿಮಾದ ರಿಲೀಸ್ ಇವೆಂಟ್ ನಲ್ಲಿ ಮಾತನಾಡಿದ ಕಮಲ್ ಹಾಸನ್, ‘ನಾನು ಯಾವತ್ತೂ ರಜನಿಯನ್ನು ವೈರಿ ಎಂದು ಪರಿಗಣಿಸಿಲ್ಲ. ವೃತ್ತಿಯಲ್ಲಿ ಸ್ಪರ್ಧೆ ಇರುವುದು ಸಹಜ’ ಎಂದಿದ್ದಾರೆ. ಇದನ್ನೂ ಓದಿ : ಸಿನಿಮಾವಾಗಲಿದೆ ‘ಟೈಂಪಾಸ್’ ಬೆಡಗಿ ಪ್ರೋತಿಮಾ ಬೇಡಿ ಬಯೋಪಿಕ್
ಇಂಥದ್ದೇ ಮಾತನ್ನು ರಜನಿಕಾಂತ್ ಕೂಡ ಈ ಹಿಂದೆ ಹೇಳಿದ್ದರು. ‘ಕಮಲ್ ಹಾಸನ್ ಬಗ್ಗೆ ನಾನ್ಯಾಕೆ ವೈರತ್ವ ಬೆಳೆಸಿಕೊಳ್ಳಲಿ? ಅವರು ನನ್ನ ಉತ್ತಮ ಸ್ನೇಹಿತ. ನಾವಿಬ್ಬರೂ ಒಳ್ಳೆಯ ಬಾಂಧವ್ಯ ಹೊಂದಿದ್ದೇವೆ. ವೈರಿ ಅಂತ ಹೇಳ್ತಿರೋದು ಯಾರು? ನಾವು ಯಾವತ್ತಿಗೂ ಸ್ನೇಹವನ್ನು ಬಿಟ್ಟ ಕೊಡುವುದಿಲ್ಲ’ ಎಂದು ಹೇಳಿದ್ದರು.
ರಜನಿಕಾಂತ್ ಮತ್ತು ಕಮಲ್ ಹಾಸನ್ ಏನೇ ಹೇಳಿದರೂ, ಅಭಿಮಾನಿಗಳು ಮಾತ್ರ ತಮ್ಮ ನಟರೇ ಮೇಲು ಎಂದು ಯಾವಾಗಲೂ ಫ್ಯಾನ್ಸ್ ವಾರ್ ನಡೆಸುತ್ತಲೇ ಇರುತ್ತಾರೆ. ಅಲ್ಲದೇ, ರಾಜಕೀಯ ಭಿನ್ನಾಭಿಪ್ರಾಯಗಳು ಇರುವುದರಿಂದ ಸ್ನೇಹಿತರಾಗಲು ಸಾಧ್ಯವೇ ಇಲ್ಲ ಎಂದು ಅಭಿಮಾನಿಗಳು ಕಾಮೆಂಟ್ ಮಾಡಿದ್ದಾರೆ.
ದಕ್ಷಿಣದ ಭಾರತದ ಸಿನಿಮಾಗಳು ಭಾರೀ ಬಜೆಟ್ ನಲ್ಲಿ ನಿರ್ಮಾಣವಾಗಿ, ಹಲವು ಭಾಷೆಗಳಿಗೆ ಡಬ್ ಆಗಿ ಭಾರೀ ಹವಾ ಕ್ರಿಯೇಟ್ ಮಾಡುತ್ತಿವೆ. ಹೀಗಾಗಿಯೇ ಪ್ಯಾನ್ ಇಂಡಿಯಾ ಕಲ್ಪನೆಗೂ ತುಸು ಹೆಚ್ಚಾಗಿಯೇ ದಕ್ಷಿಣದ ಸಿನಿಮಾ ರಂಗದಲ್ಲಿ ಕಾಣಿಸಿಕೊಳ್ಳುತ್ತಿದೆ. ಅದರಲ್ಲೂ ಆರ್.ಆರ್.ಆರ್, ಕೆಜಿಎಫ್ 2 ಸಿನಿಮಾಗಳು ಬಾಕ್ಸ್ ಆಫೀಸಿನಲ್ಲಿ ದಾಖಲೆ ಬರೆದಾಗಿನಿಂದ, ಪ್ಯಾನ್ ಇಂಡಿಯಾ ಚಳವಳಿ ಹುಟ್ಟಿದ್ದು ಇದೇ ಸಿನಿಮಾಗಳಿಂದ ಎನ್ನುವಂತೆ ಬಿಂಬಿಸಲಾಗುತ್ತಿದೆ. ಈ ಮಾತಿಗೆ ಕಮಲ್ ಹಾಸನ್ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ : ಹಾಲಿವುಡ್ ಖ್ಯಾತ ನಟ ರೇ ಲಿಯೊಟ್ಟಾ ಮಲಗಿದ್ದಾಗಲೇ ನಿಧನ
ಕಮಲ್ ಹಾಸನ್ ನೀಡಿರುವ ಪ್ರತಿಕ್ರಿಯೆಯನ್ನು ರಾಜಮೌಳಿ ಅವರಿಗೆ ಕೊಟ್ಟ ಟಾಂಗ್ ಎಂದೇ ತಮಿಳು ಸಿನಿಮಾ ರಂಗದಲ್ಲಿ ಬಿಂಬಿಸಲಾಗುತ್ತಿದೆ. ಅಷ್ಟಕ್ಕೂ ಕಮಲ್ ಹಾಸನ್ ಹೇಳಿದ್ದೇನು ಅಂದರೆ, ‘ಪ್ಯಾನ್ ಇಂಡಿಯಾ ಸಿನಿಮಾಗಳು ಈಗ ಹುಟ್ಟಿಲ್ಲ. ಹಲವು ವರ್ಷಗಳ ಹಿಂದೆಯೇ ಪ್ಯಾನ್ ಇಂಡಿಯಾ ಸಿನಿಮಾಗಳನ್ನು ಮಾಡಲಾಗಿದೆ. ಅವುಗಳಿಗೆ ಪ್ಯಾನ್ ಇಂಡಿಯಾ ಅಂತ ಹೆಸರು ಇರಲಿಲ್ಲವಷ್ಟೆ. ಈಗ ಅದನ್ನೇ ದೊಡ್ಡದು ಮಾಡಿ ಹೇಳಲಾಗುತ್ತಿದೆ ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತ ಪಡಿಸಿದ್ದಾರೆ. ಇದನ್ನೂ ಓದಿ : ಸಿನಿಮಾವಾಗಲಿದೆ ‘ಟೈಂಪಾಸ್’ ಬೆಡಗಿ ಪ್ರೋತಿಮಾ ಬೇಡಿ ಬಯೋಪಿಕ್
ಆರ್.ಆರ್.ಆರ್, ಕೆಜಿಎಫ್ 2 ಸಿನಿಮಾಗಳಿಗಿಂತ ಮುಂಚೆಯೇ ಪ್ಯಾನ್ ಇಂಡಿಯಾ ಚಿತ್ರಗಳು ಬಂದಿವೆ. ಮಲಯಾಳಂನ ಚಮ್ಮೇನ್, ಮುಘಲ್ ಎ ಅಜಮ್ , ಪಡೋಸನ್ ರೀತಿಯ ಸಿನಿಮಾಗಳನ್ನು ಏನೆಂದು ಕರೆಯಬೇಕು? ನಮ್ಮದು ಹಲವು ಭಾಷೆಗಳನ್ನು ಹೊಂದಿದ ದೇಶ. ಅದನ್ನು ಅರ್ಥ ಮಾಡಿಕೊಂಡರೆ, ಎಲ್ಲವೂ ಅರ್ಥವಾದೀತು ಎಂದು ಮಾರ್ಮಿಕವಾಗಿ ಮಾತನಾಡಿದ್ದಾರೆ ಕಮಲ್ ಹಾಸನ್. ಇದನ್ನೂ ಓದಿ : ವಾರಕ್ಕೆ ಹತ್ತತ್ತು ಸಿನಿಮಾಗಳು ರಿಲೀಸ್ : ಥಿಯೇಟರ್ ಮಾತ್ರ ಖಾಲಿ ಖಾಲಿ
ಬಾಲಿವುಡ್ ಮತ್ತು ದಕ್ಷಿಣದ ಸಿನಿಮಾಗಳು ಎಂದು ಬೇರ್ಪಡಿಸುವುದನ್ನು ನಾನು ಒಪ್ಪಲಾರೆ ಎಂದಿರುವ ಕಮಲ್ ಹಾಸನ್, ಎಲ್ಲವೂ ನಮ್ಮದೇ ಎಂದು ಸಾಗಬೇಕು. ತಾಜ್ ಮಹಲ್ ನನ್ನದು, ಮಧುರೈ ಮೀನಾಕ್ಷಿ ದೇವಾಲಯ ಕೂಡ ನನ್ನದೇ ಎಂದು ಹೇಳುವ ಮೂಲಕ ದೇಶ, ಭಾಷೆಯನ್ನು ಒಡೆಯಬೇಡಿ ಎಂದಿದ್ದಾರೆ ಕಮಲ್ ಹಾಸನ್.
ತಮಿಳಿನ ಸೂಪರ್ ಸ್ಟಾರ್ ಕಮಲ್ ಹಾಸನ್ ನಟನೆಯ ‘ವಿಕ್ರಮ್’ ಸಿನಿಮಾದ ಹಾಡು ಇತ್ತೀಚೆಗಷ್ಟೇ ರಿಲೀಸ್ ಆಗಿದೆ. ಬಿಡುಗಡೆ ಆದ ಕೆಲವೇ ಗಂಟೆಗಳಲ್ಲೇ ಈ ಹಾಡು ಸಾಕಷ್ಟು ಸದ್ದು ಮಾಡಿತ್ತು. ‘ಪಾತಾಳ.. ಪಾತಾಳ’ ಎಂಬ ಸಾಹಿತ್ಯದಿಂದ ಶುರುವಾಗುವ ಈ ಗೀತೆಗೆ ಕಂಟಕ ಎದುರಾಗಿದೆ. ಈ ಹಾಡಿನಲ್ಲಿ ಕೇಂದ್ರ ಸರಕಾರವನ್ನು ಅಣಕ ಮಾಡಲಾಗಿದೆ ಎಂಬ ಕಾರಣಕ್ಕಾಗಿ ದೂರು ದಾಖಲಾಗಿದೆ. ಇದನ್ನೂ ಓದಿ : Exclusive- ಅಮೆಜಾನ್ ಪ್ರೈಮ್ನಲ್ಲಿ ‘ಕೆಜಿಎಫ್ 2’ : ಫಸ್ಟ್ ಟೈಮ್ ಮೆಂಬರ್ ಅಲ್ಲದವರೂ ಸಿನಿಮಾ ನೋಡಬಹುದು
ಈ ಹಾಡನ್ನು ಸ್ವತಃ ಕಮಲ್ ಹಾಸನ್ ಅವರೇ ಬರೆದಿರುವುದರಿಂದ ಉರಿವ ಬೆಂಕಿಗೆ ತುಪ್ಪ ಹಾಕಿದಂತಾಗಿದೆ. ಅಷ್ಟಕ್ಕೂ ಈ ಹಾಡಿನಲ್ಲಿ ಏನಿದೆ ಎಂದರೆ, ಕೇಂದ್ರ ಸರಕಾರ ಯೋಜನೆ ಮತ್ತು ಕೋವಿಡ್ ನಿಧಿ ಸಂಗ್ರಹದ ಕುರಿತಾಗಿ ನಕಾರಾತ್ಮಕ ಸಾಲುಗಳನ್ನು ಬರೆಯಲಾಗಿದೆ ಎನ್ನುವುದು ಈ ಹಾಡಿನ ಮೇಲಿರುವ ಆರೋಪ. ಇದನ್ನೂ ಓದಿ : ಕಾಲೇಜು ದಿನಗಳಲ್ಲೇ ರಮ್ಯಾ ಮೇಲೆ ಕ್ರಶ್ ಆಗಿದೆ : ರಕ್ಷಿತ್ ಶೆಟ್ಟಿ
ಖಜಾನೆ ಖಾಲಿ ಖಾಲಿ, ಖಜಾನೆಯಲ್ಲಿ ಹಣವೇ ಇಲ್ಲ. ರೋಗಗಳು ಹೆಚ್ಚುತ್ತಿರುವ ಈ ಸಮಯದಲ್ಲಿ ಖಜಾನೆ ಖಾಲಿ ಖಾಲಿ. ಅಲ್ಲದೇ, ಕೀ ಕಳ್ಳನ ಬಳಿ ಇದೆ ಎಂದು ಅರ್ಥ ಬರುವ ಸಾಲುಗಳನ್ನು ಹಾಡಾಗಿಸಿದ್ದಾರೆ ಎಂದು ಚೆನ್ನೈನ ಕೊರುಕ್ಕುಪೆಟ್ಟೈ ನಿವಾಸಿಯಾದ ಸೆಲ್ವಂ ಅನ್ನುವವರು ಕಮಲ್ ವಿರುದ್ಧ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ : ಪತಿ ಉಪ್ಪಿಗಿಂತಲೂ ಪತ್ನಿ ಪ್ರಿಯಾಂಕಾ ಉಪೇಂದ್ರ ಫಾಸ್ಟ್ : ಡಿಟೆಕ್ಟೀವ್ ತೀಕ್ಷ್ಣ @ 50
ಮೇ 12 ರಂದು ಚೆನ್ನೈ ಪೊಲೀಸ್ ಕಮಿಷ್ನರ್ ಬಳಿ ದೂರು ದಾಖಲಿಸಿರುವ ಸೆಲ್ವಂ, ಪೊಲೀಸ್ ನವರು ಅಗತ್ಯ ಕ್ರಮ ತಗೆದುಕೊಳ್ಳದೇ ಇದ್ದರೆ, ತಾವು ಮದರಾಸ್ ಹೈಕೋರ್ಟ್ ಮೊರೆ ಹೋಗುವುದಾಗಿಯೂ ತಿಳಿಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆಯೇ ನೋಡುಗರ ಸಂಖ್ಯೆ ಮತ್ತೆ ಹೆಚ್ಚಿದೆ. ಈಗಾಗಲೇ 15 ಮಿಲಿಯನ್ ಗೂ ಹೆಚ್ಚು ಜನರು ಈ ಹಾಡನ್ನು ವೀಕ್ಷಿಸಿದ್ದಾರೆ. ಇದನ್ನೂ ಓದಿ : ಸೀಮಂತದ ಖುಷಿಯಲ್ಲಿ ಸಂಜನಾ: ತಿಂಗಳಾಂತ್ಯಕ್ಕೆ ಮಡಿಲಿಗೆ ಮಗುವಿನ ಆಗಮನ
ಜೂನ್ 3 ರಂದು ತೆರೆಗೆ ಬರಲಿರುವ ವಿಕ್ರಮ್ ಸಿನಿಮಾ ಈಗಾಗಲೇ ನಿರೀಕ್ಷೆ ಹೆಚ್ಚಿಸಿದೆ. ಲೋಕೇಶ್ ಕನಗರಾಜ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಸಿನಿಮಾಗೆ ಅನಿರುದ್ಧ ರವಿಚಂದ್ರನ್ ಸಂಗೀತ ಸಂಯೋಜನೆ ಮಾಡಿದ್ದಾರೆ. ವಿಶ್ವರೂಪಮ್ 2 ಸಿನಿಮಾದ ನಾಲ್ಕು ವರ್ಷದ ನಂತರ ಈ ಸಿನಿಮಾ ರಿಲೀಸ್ ಆಗುತ್ತಿರುವುದರಿಂದ ನಿರೀಕ್ಷೆಯಂತೂ ಹೆಚ್ಚಿದೆ.
ಸ್ಯಾಂಡಲ್ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್-2 ಸಿನಿಮಾ ದೇಶಾದ್ಯಂತ ಬಾಕ್ಸ್ ಆಫೀಸ್ನಲ್ಲಿ ಭಾರೀ ಸದ್ದು ಮಾಡುತ್ತಿದೆ. ಕೆಜಿಎಫ್-2 ಸಿನಿಮಾ ರಿಲೀಸ್ ಆಗಿ 16ನೇ ದಿನಕ್ಕೆ ಮುನ್ನುಗ್ಗುತ್ತಿದ್ದು, ಸಿನಿಮಾ ರಿಲೀಸ್ ಆಗಿ ಇಷ್ಟು ದಿನವಾದರೂ ಅಭಿಮಾನಿಗಳಲ್ಲಿ ಮಾತ್ರ ಸಿನಿಮಾದ ಕ್ರೇಜ್ ಇನ್ನೂ ಕಡಿಮೆ ಆಗಿಲ್ಲ. ದಿನೇ ದಿನೆ ಸಿನಿಮಾ ನೋಡಲು ಸಿನಿ ಪ್ರೇಕ್ಷಕರು ಥಿಯೇಟರ್ನತ್ತ ಮುಖ ಮಾಡುತ್ತಿದ್ದಾರೆ. ಈ ಎಲ್ಲದರ ನಡುವೆ ಸಂಗೀತ ಲೋಕದ ದಿಗ್ಗಜ, ಸಂಗೀತ ಮಾಂತ್ರಿಕ ಇಳಯರಾಜ ಹಾಗೂ ಕಾಲಿವುಡ್ ನಟ ಕಮಲ್ ಹಾಸನ್ ಕೆಜಿಎಫ್-2 ಸಿನಿಮಾವನ್ನು ಒಟ್ಟಿಗೆ ಕುಳಿತು ವೀಕ್ಷಿಸಿದ್ದಾರೆ.
ಹೌದು, ಕೇವಲ ಕರ್ನಾಟಕದಲ್ಲಿ ಮಾತ್ರವಲ್ಲದೇ ರಾಷ್ಟ್ರಮಟ್ಟದಲ್ಲಿ ಸಖತ್ ಸೌಂಡ್ ಮಾಡುತ್ತಿರುವ ಕೆಜಿಎಫ್-2 ಸಿನಿಮಾ ಹಲವಾರು ದಾಖಲೆಗಳನ್ನು ಬ್ರೇಕ್ ಮಾಡಿ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈಗಾಗಲೇ ಹಲವಾರು ಸೆಲೆಬ್ರಿಟಿಗಳು ಕೆಜಿಎಫ್-2 ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ತಮಿಳಿನ ಖ್ಯಾತ ನಟ ಕಮಲ್ ಹಾಸನ್ ಹಾಗೂ ಸಂಗೀತಾ ನಿರ್ದೇಶಕ ಇಳಯರಾಜ ಅವರು ಚೆನ್ನೈನಲ್ಲಿ ಕೆಜಿಎಫ್-2 ಸಿನಿಮಾದ ಶೋ ವೀಕ್ಷಿಸಿದ್ದಾರೆ. ಸದ್ಯ ಇವರಿಬ್ಬರು ಒಟ್ಟಿಗೆ ಕುಳಿತು ಕೆಜಿಎಫ್-2 ಸಿನಿಮಾ ವೀಕ್ಷಿಸಿದ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: ಬಂಗಾರದ ಬೆಳೆ ತೆಗೆದ `ಕೆಜಿಎಫ್ 2′: ಬಾಕ್ಸ್ಆಫೀಸ್ನಲ್ಲಿ 336 ಕೋಟಿ ಕಲೆಕ್ಷನ್
ಪ್ರಶಾಂತ್ನೀಲ್ ಮತ್ತು ಯಶ್ ಕಾಂಬಿನೇಷನ್ನ `ಕೆಜಿಎಫ್ 2′ ಸಿನಿಮಾ ಏಪ್ರಿಲ್ 14ರಂದು ರಿಲೀಸ್ ಆಗಿತ್ತು. ಬಿಡುಗಡೆಯಾಗಿ 16 ದಿನಗಳಾದರೂ ಕಲೆಕ್ಷನ್ನಲ್ಲಿ ಹಿಂದುಳಿದಿಲ್ಲ. ಕನ್ನಡ, ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿಯಲ್ಲಿ ಒಂದೇ ದಿನ ಬಿಡುಗೆಯಾದ ಕೆಜಿಎಫ್-2 ಸಿನಿಮಾ 1,000ಕ್ಕೂ ಹೆಚ್ಚು ಕೋಟಿ ಕಲೆಕ್ಷನ್ ಮಾಡುವ ಮೂಲಕ ಮುನ್ನುಗ್ಗುತ್ತಿದೆ. ಪರಭಾಷೆಗಳಲ್ಲಿ ಕೂಡ ಕೆಜಿಎಫ್-2 ಹೊಸ ದಾಖಲೆ ಸೃಷ್ಟಿಸುವ ಮುನ್ನ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುತ್ತಿದೆ ಎಂದರೆ ತಪ್ಪಾಗಲಾರದು. ಇದನ್ನೂ ಓದಿ: ರಾಷ್ಟ್ರ ಭಾಷೆ ವಿವಾದದ ನಡುವೆಯೂ ಹಿಂದಿ ಬಾಕ್ಸ್ಆಫೀಸ್ನಲ್ಲಿ 343 ಕೋಟಿ ಬಾಚಿದ `ಕೆಜಿಎಫ್ 2′
ಕಮಲ್ ಹಾಸನ್ ಪುತ್ರಿ, ನಟಿ ಶ್ರುತಿ ಹಾಸನ್ ವಿಚಿತ್ರ ಸಮಸ್ಯೆಯೊಂದರಿಂದ ಹೈರಾಣಾಗಿದ್ದಾರಂತೆ. ಕೋವಿಡ್ ಗಿಂತಲೂ ಈ ಸಮಸ್ಯೆ ತುಂಬಾ ಬಾಧಿಸುತ್ತಿದೆ ಎಂದು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಕಳೆದ ಒಂದು ತಿಂಗಳ ಹಿಂದೆ ಶ್ರುತಿ ಹಾಸನ್ ಅವರಿಗೆ ಕೋವಿಡ್ ಲಕ್ಷಣಗಳು ಕಾಣಿಸಿಕೊಂಡಿದ್ದವು. ಅವರು ಕೊರೋನಾಗೆ ಬೇಕಾದ ಅಗತ್ಯ ಚಿಕಿತ್ಸೆಯನ್ನು ಪಡೆದುಕೊಂಡರು. ಬರೋಬ್ಬರಿ ಒಂದು ತಿಂಗಳ ಕಾಲ ವಿಶ್ರಾಂತಿ ಪಡೆದರು. ಆದರೂ, ಕೋವಿಡ್ ನಂತರ ಅವರಿಗೆ ಬೇರೆ ಬೇರೆ ಸಮಸ್ಯೆಗಳು ಕಾಣಿಸಿಕೊಂಡಿವೆಯಂತೆ. ಇದನ್ನೂ ಓದಿ : ಪುನೀತ್ ಅಭಿಮಾನಿಗಳಿಗೆ ಭಾರೀ ನಿರಾಸೆ : ಮೆರವಣಿಗೆ ಇಲ್ಲ, ಹೆಲಿಕಾಪ್ಟರ್ ಗೆ ಅನುಮತಿ ಕೊಟ್ಟಿಲ್ಲ
ಕೋವಿಡ್ ಗೆ ಚಿಕಿತ್ಸೆ ಪಡೆದುಕೊಂಡ ನಂತರ ವಿಪರೀತ ತಲೆನೋವು ಶುರುವಾಗಿದೆ. ದೇಹ ಆಯಾಸಗೊಳ್ಳುತ್ತದೆ. ನಿದ್ರಾಹೀನತೆಯಿಂದ ಬಳಲುತ್ತಿದ್ದೇವೆ. ಇದರಿಂದಾಗಿ ಬೇರೆ ಬೇರೆ ಸಮಸ್ಯೆಗಳು ನನ್ನಲ್ಲಿ ಶುರುವಾಗಿವೆ ಎಂದು ಹೇಳಿಕೊಂಡಿದ್ದಾರೆ. ಅಲ್ಲದೇ, ಕೋವಿಡ್ ನಿಂದಾದ ಪರಿಣಾಮನಾ ಇದು ಎಂದು ಕೇಳಿದ್ದಾರೆ. ಇದನ್ನೂ ಓದಿ : ದುನಿಯಾ ವಿಜಯ್ ನಟನೆಯ ತೆಲುಗು ಸಿನಿಮಾದ ಫಸ್ಟ್ ಲುಕ್ ರಿಲೀಸ್ : ಯಾರದು ಪ್ರತಾಪ್ ರೆಡ್ಡಿ?
ತೆಲುಗು ಮತ್ತು ತಮಿಳು ಸಿನಿಮಾಗಳನ್ನು ಒಪ್ಪಿಕೊಂಡಿರುವ ಶ್ರುತಿ, ಈಗ ಅವುಗಳ ಚಿತ್ರೀಕರಣದಲ್ಲಿ ಪಾಲ್ಗೊಳ್ಳಬೇಕಿದೆ. ಹಾಗಾಗಿ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯ. ಈ ಸಮಸ್ಯೆಗಳ ನಡುವೆಯೂ ಅವು ನಿರಂತರವಾಗಿ ವ್ಯಾಯಾಮ ಮಾಡುತ್ತಿದ್ದಾರಂತೆ. ಆದರೆ, ನಿದ್ರೆ ಸಮಸ್ಯೆಯೇ ಅವರನ್ನು ಗಂಭೀರವಾಗಿ ಕಾಡುತ್ತಿದೆ ಎಂದು ಬರೆದುಕೊಂಡಿದ್ದಾರೆ.
ಚೆನ್ನೈ: ನಾನು ಇಂತಹ ರಾಜಕೀಯದ ವಿರುದ್ಧ ಸತ್ತಿದ್ದೇನೆ ಎಂದು ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಖಂಡಿಸಿ ಮಕ್ಕಳ ನೀತಿ ಮಯ್ಯಂ ಮುಖ್ಯಸ್ಥ ಕಮಲ್ ಹಾಸನ್ ಹೇಳಿದ್ದಾರೆ.
ಮಹಾತ್ಮಾ ಗಾಂಧಿಯವರ ಹತ್ಯೆಯ ಬಗ್ಗೆ ಮಾತನಾಡಿದ ಅವರು, ನಾವು 1948ರ ಜನವರಿ 30 ರಿಂದ ಕೊಲೆಯನ್ನು ಪ್ರಾರಂಭಿಸಿದ್ದೇವೆ. ಅದು ಇನ್ನೂ ಮುಂದುವರೆದಿದೆ ಎಂದಿದ್ದಾರೆ. ಭಾನುವಾರ ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷ ಎಂಬಾತನನ್ನು ಹತ್ಯೆ ಮಾಡಲಾಗಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಿಜಬ್ ಮತ್ತು ಕೊಲೆ ನಡುವೆ ಸಂಬಂಧವಿರುವುದನ್ನು ನಿರಾಕರಿಸಿದ್ದಾರೆ. ಇದನ್ನೂ ಓದಿ: ಇಂಟಲಿಜೆನ್ಸ್ ಈಶ್ವರಪ್ಪ ಹತ್ರ ಇದೆಯಾ..?- ಪ್ರಿಯಾಂಕ್ ಖರ್ಗೆ ಕಿಡಿ
ಈ ಹತ್ಯೆಯ ನಂತರ ಬಳಿಕ ಶಿವಮೊಗ್ಗದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದ್ದು, ಪ್ರಕರಣ ಸಂಬಂಧ ತನಿಖೆ ನಡೆಸಲು ವಿಶೇಷ ತಂಡವನ್ನು ರಚಿಸಲಾಗಿದೆ. ಅಲ್ಲದೇ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ಷಿಪ್ರ ಕಾರ್ಯಾಚರಣೆ ಪಡೆಯನ್ನು ನಿಯೋಜಿಸಲಾಗಿದೆ. ಸದ್ಯ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: 2 ವರ್ಷದ ಹಿಂದೆಯೇ 10 ಲಕ್ಷಕ್ಕೆ ಸುಪಾರಿ ಕೊಟ್ಟಿದ್ದರು: ಮೃತನ ಸಂಬಂಧಿ ಹೇಳಿಕೆ
ಚೆನ್ನೈ: ಹಿಜಬ್ ವಿವಾದ ಇದೀಗ ರಾಷ್ಟ್ರ-ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಈ ವಿಚಾರವಾಗಿ ನಟ, ನಟಿಯರು ಗಣ್ಯರು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ನಿಲುವನ್ನು ವ್ಯಕ್ತಪಡಿಸುತ್ತಿದ್ದಾರೆ. ಈ ವಿಚಾರವಾಗಿ ನಟ ಹಾಗೂ ಮಕ್ಕಳ ನಿಧಿ ಮಯಂ (ಎಂಎನ್ಎಂ) ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಟ್ವೀಟ್ ಮಾಡಿದ್ದಾರೆ.
ಟ್ವೀಟ್ನಲ್ಲಿ ಏನಿದೆ?: ಕರ್ನಾಟಕದಲ್ಲಿ ಹಿಜಬ್ ವಿವಾದ ಅಶಾಂತಿ ಹುಟ್ಟುಹಾಕುತ್ತಿದೆ. ವಿದ್ಯಾರ್ಥಿಗಳ ಮಧ್ಯೆ ಧಾರ್ಮಿಕ ವಿಷದ ಗೋಡೆ ನಿರ್ಮಾಣ ಮಾಡಲಾಗುತ್ತಿದೆ. ಕರ್ನಾಟಕದ ವಿವಾದ ತಮಿಳುನಾಡಿಗೆ ಬರುವುದು ಬೇಡ. ಪ್ರಗತಿಪರ ಶಕ್ತಿಗಳು ಹೆಚ್ಚು ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಹಿಳೆಯರ ಬಟ್ಟೆ ನೋಡಿ ಪುರುಷರು ಉದ್ವೇಗಕ್ಕೆ ಒಳಗಾಗುತ್ತಾರೆ: ರೇಣುಕಾಚಾರ್ಯ
கர்நாடகாவில் நடப்பது கலக்கத்தைத் தூண்டுகிறது. கள்ளமில்லா மாணவர்கள் மத்தியில் மதவாத விஷச் சுவர் எழுப்பப்படுகிறது. ஒற்றைச் சுவர் தாண்டியிருக்கும் பக்கத்து மாநிலத்தில் நடப்பது தமிழ்நாட்டுக்கும் வந்துவிடக் கூடாது. முற்போக்கு சக்திகள் மேலும் கவனமாக இருக்க வேண்டிய காலம் இது.
ಕರ್ನಾಟಕದಲ್ಲಿ ಹಿಜಬ್ ಧರಿಸಿ ಕಾಲೇಜು ಕ್ಯಾಂಪಸ್ ಒಳಗೆ, ಕ್ಲಾಸ್ರೂಮ್ನೊಳಗೆ ಬರಬೇಡಿ ಎಂದು ಹೇಳಿದ್ದಕ್ಕೆ ಮುಸ್ಲಿಂ ಹುಡುಗಿಯರು ಪ್ರತಿಭಟನೆ ಶುರುವಿಟ್ಟುಕೊಂಡಿದ್ದಾರೆ. ಅದಕ್ಕೆ ಪ್ರತಿಯಾಗಿ ಹಿಂದೂ ಸಮುದಾಯದವರು ಕೇಸರಿಶಾಲು ಹಾಕಿಕೊಂಡು ಬರುತ್ತಿದ್ದಾರೆ. ಅವರು ಕ್ಲಾಸ್ರೂಂನಲ್ಲೂ ಧರ್ಮಾಚರಣೆ ಮಾಡುತ್ತಾರೆ ಎಂದಾದರೆ, ನಾವೂ ನಮ್ಮ ಧರ್ಮಾಚರಣೆ ಮಾಡುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ. ಒಟ್ಟಿನಲ್ಲಿ ಇದೀಗ ರಾಷ್ಟ್ರ-ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುತ್ತಿದೆ.
ಕಳೆದ ಕೆಲ ದಿನಗಳಿಂದ ರಾಜ್ಯದ ವಿವಿಧ ಕಾಲೇಜುಗಳಲ್ಲಿ ನಡೆಯುತ್ತಿರುವ ಹಿಜಾಬ್-ಕೇಸರಿ ಶಾಲು ಸಂಘರ್ಷ ಹಿಂಸಾಚಾರಕ್ಕೆ ತಿರುಗಿದ್ದು, ಮಂಗಳವಾರ ರಾಜ್ಯದ 18 ಜಿಲ್ಲೆಗಳ 54ಕ್ಕೂ ಹೆಚ್ಚು ಕಾಲೇಜುಗಳಲ್ಲಿ ವಿವಾದ ಭುಗಿಲೆದ್ದಿದ್ದು. ಈ ಪೈಕಿ 4 ಜಿಲ್ಲೆಗಳ 6 ಕಾಲೇಜುಗಳಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ವಿದ್ಯಾರ್ಥಿಗಳ ಗುಂಪು ಘರ್ಷಣೆ, ಕಲ್ಲು ತೂರಾಟ ನಡೆಸಿದ್ದರು.
ಚೆನ್ನೈ: ಕಾಲಿವುಡ್ ನಟ ಕಮಲ್ ಹಾಸನ್ ಅವರು ಎರಡು ವಾರಗಳ ಬಳಿಕ ಕೊರೊನಾ ವೈರಸ್ನಿಂದ ಚೇತರಿಸಿಕೊಂಡು ಇಂದು ಚೆನ್ನೈನ ಶ್ರೀ ರಾಮಚಂದ್ರ ವೈದ್ಯಕೀಯ ಕೇಂದ್ರದಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕಮಲ್ ಹಾಸನ್ ಆಸ್ಪತ್ರೆಯಿಂದ ಹೊರಬರುತ್ತಿರುವ ಫೋಟೋಗಳು ಮತ್ತು ವೀಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಕಮಲ್ ಹಾಸನ್ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಕುರಿತ ಮಾಹಿತಿಯನ್ನು ತಮ್ಮ ಟ್ವಿಟ್ಟರ್ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಕೊಹ್ಲಿ ಪುತ್ರಿಯನ್ನು ರೇಪ್ ಮಾಡ್ತಿನಿ ಅಂದಿದ್ದ ಐಐಟಿ ಪದವೀಧರನಿಗೆ ಜಾಮೀನು
ನವೆಂಬರ್ 22 ರಂದು ಕಮಲ್ ಹಾಸನ್ ಅವರಿಗೆ ಕೊರೊನಾ ವೈರಸ್ ದೃಢಪಟ್ಟ ನಂತರ ಅವರು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನವೆಂಬರ್ನಲ್ಲಿ ಕಮಲ್ ಹಾಸನ್ ಅವರು ಯುಎಸ್ನ ಚಿಕಾಗೋದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದರು. ನಂತರ ಹಿಂದಿರುಗಿದ ಬಳಿಕ ಅವರಿಗೆ ಸ್ವಲ್ಪ ಕೆಮ್ಮು ಕಾಣಿಸಿಕೊಂಡಿತ್ತು. ಅವರು ಎರಡು ವಾರಗಳ ಕಾಲ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿದ್ದರು. ಇದನ್ನೂ ಓದಿ: ನಟ ಕಮಲ್ ಹಾಸನ್ಗೆ ಕೊರೊನಾ ಸೋಂಕು ದೃಢ
முன்னெச்சரிக்கைகள் முடிந்தவரை காக்கும். அவற்றையும் மீறி சுகம் கெட்டால், நாம் எடுத்த நடவடிக்கைகளே நம்மை விரைவில் குணப்படுத்தவும் கூடும். தொற்றுத் தாக்கியும் விரைந்து மீண்டிருக்கிறேன். எத்தனை உள்ளங்கள் என்னலம் சிந்தித்தன என்றெண்ணியெண்ணி மகிழ்ந்து இருக்கிறேன். pic.twitter.com/IScdLsBjOL
ಇಂದು ಕಮಲ್ ಹಾಸನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಮನೆಗೆ ಹೋಗುವ ಮುನ್ನ ಆಸ್ಪತ್ರೆಯ ಹೊರಗೆ ತಮಗೆ ಚಿಕಿತ್ಸೆ ನೀಡಿದ ವೈದ್ಯರೊಂದಿಗೆ ಫೋಟೋ ತೆಗೆಸಿಕೊಂಡರು. ಇದೀಗ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳು ಸಾಧ್ಯವಾದಷ್ಟು ನಮ್ಮನ್ನು ರಕ್ಷಿಸುತ್ತದೆ. ಅದನ್ನು ಮೀರಿ ಅಸ್ವಸ್ಥರಾದರೆ, ನಾವು ತೆಗೆದುಕೊಳ್ಳುವ ಕ್ರಮ ನಮ್ಮನ್ನು ತ್ವರಿತವಾಗಿ ಗುಣಪಡಿಸಬಹುದು. ನಾನು ಸದ್ಯ ಸೋಂಕಿನಿಂದ ಚೇತರಿಸಿಕೊಳ್ಳುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಡಾ. ರಾಜ್ಕುಮಾರ್ ಕುಟುಂಬದೊಂದಿಗೆ ಅಂದಿನಿಂದಲೂ ಉತ್ತಮ ಬಾಂಧವ್ಯ ಹೊಂದಿರುವ ಟಾಲಿವುಡ್ ನಟ ಮೆಗಾಸ್ಟಾರ್ ಚಿರಂಜೀವಿ ಅವರು ತಮ್ಮ ಟ್ವಿಟ್ಟರ್ನಲ್ಲಿ, ಪುನೀತ್ ಇಷ್ಟು ಬೇಗ ಹೋಗಿದ್ದು, ಆಘಾತಕಾರಿ, ಅರಗಿಸಿಕೊಳ್ಳಲು ಆಗದಂತಹ ಮತ್ತು ಹೃದಯ ವಿದ್ರಾವಕ ಸುದ್ದಿಯಾಗಿದೆ. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ. ನಿಮ್ಮ ಕುಟುಂಬಕ್ಕೆ ನನ್ನ ಸಂತಾಪ. ಒಟ್ಟಾರೆಯಾಗಿ ಕನ್ನಡ/ಭಾರತೀಯ ಚಲನಚಿತ್ರ ಬಂಧುಗಳಿಗೆ ಇದು ಒಂದು ದೊಡ್ಡ ನಷ್ಟ. ಈ ದುಃಖವನ್ನು ಭರಿಸುವ ಶಕ್ತಿ ಎಲ್ಲರಿಗೂ ನೀಡಲಿ ಎಂದು ಟ್ವೀಟ್ ಮಾಡಿದ್ದಾರೆ.
Shocking ,devastating & heartbreaking! #PuneethRajkumar gone too soon. ????
Rest in Peace! My deepest sympathies and tearful condolences to the family. A huge loss to the Kannada / Indian film fraternity as a whole.Strength to all to cope with this tragic loss!
ಪುನೀತ್ಗೆ ಬಹಳ ಅಚ್ಚುಮೆಚ್ಚಿನ ಗೆಳೆಯರಾಗಿದ್ದ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅವರು ತಮ್ಮ ಟ್ವಿಟ್ಟರ್ನಲ್ಲಿ ಫೋಟೋ ಹಂಚಿಕೊಳ್ಳುವುದರ ಜೊತೆಗೆ, ಸಂಪೂರ್ಣವಾಗಿ ಶಾಕ್ ಆಗಿದೆ. ಪದಗಳಲ್ಲಿ ನಷ್ಟವನ್ನು ಹೇಳಲಾಗುವುದಿಲ್ಲ. ನನ್ನ ಬಹುಕಾಲದ ಗೆಳೆಯ ಪುನೀತ್ ಇನ್ನಿಲ್ಲ. ನಾವು ಪರಸ್ಪರ ಗೌರವ ಮತ್ತು ಪ್ರೀತಿ ಹೊಂದಿದ್ದೇವೆ. ಈಗಲೂ ನಂಬಲು ಆಗುತ್ತಿಲ್ಲ. ಅವರ ವಿನಮ್ರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಟ್ವೀಟ್ ಮಾಡಿದ್ದಾರೆ. ಹಲವಾರು ಸಮಾರಂಭಗಳಲ್ಲಿ ಪುನೀತ್ ಅವರ ಡ್ಯಾನ್ಸ್ ಎಂದರೆ ನನಗೆ ಬಹಳ ಇಷ್ಟ ಎಂದು ಅಲ್ಲು ಅರ್ಜುನ್ ಹೇಳಿದ್ದರು. ಇದನ್ನೂ ಓದಿ: ಚೆನ್ನೈನಲ್ಲಿ ಹುಟ್ಟಿ ಕನ್ನಡನಾಡಲ್ಲಿ ಬೆಳೆದ ಪವರ್ ಸ್ಟಾರ್ ಲೈಫ್ ಜರ್ನಿ ಇಲ್ಲಿದೆ
Absolutely Shocked . In loss of words . My old friend Puneeth garu no more . We had such mutual respect & liking for each other . Still Can’t believe it . May his humble soul rest in peace ???? pic.twitter.com/GTijO7Fz5T
ಟಾಲಿವುಡ್ ನಟ ಜ್ಯೂನಿಯರ್ ಎನ್ಟಿಆರ್ ಪುನೀತ್ ಫೋಟೋವನ್ನು ತಮ್ಮ ಟ್ವಿಟ್ಟರ್ನಲ್ಲಿ ಶೇರ್ ಮಾಡಿಕೊಳ್ಳುವುದರ ಜೊತೆಗೆ, ಎದೆ ಗುಂದಿದೆ. ನೀವು ಇಷ್ಟು ಬೇಗ ಹೋಗಿದ್ದೀರಾ ಎಂದು ನಂಬಲು ಆಗುತ್ತಿಲ್ಲ ಎಂದು ಕ್ಯಾಪ್ಷನ್ನಲ್ಲಿ ಬರೆದುಕೊಂಡಿದ್ದಾರೆ. ಪುನೀತ್ ಹಾಗೂ ಎನ್ಟಿಆರ್ ಅತ್ಯುತ್ತಮ ಗೆಳೆಯರಾಗಿದ್ದು, ಪುನೀತ್ ಅಭಿನಯದ ಚಕ್ರವ್ಯೂಹ ಸಿನಿಮಾದಲ್ಲಿ ಅಪ್ಪುವಿಗಾಗಿ ಗೆಳೆಯ, ಗೆಳೆಯ ಹಾಡನ್ನು ಹಾಡಿದ್ದರು.
ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಅವರು, ಪುನೀತ್ ರಾಜ್ಕುಮಾರ್ ಅವರ ನಿಧನದ ಸುದ್ದಿಯಿಂದ ಆಘಾತ ಮತ್ತು ತೀವ್ರ ದುಃಖವಾಗಿದೆ. ನಾನು ಭೇಟಿಯಾದ ಮತ್ತು ಸಂವಹನ ನಡೆಸಿದ ಅತ್ಯಂತ ವಿಶಾಲ ಹೃದಯದ ವ್ಯಕ್ತಿಗಳಲ್ಲಿ ಪುನೀತ್ ಒಬ್ಬರು. ಅವರ ಕುಟುಂಬ ಮತ್ತು ಪ್ರೀತಿ ಪಾತ್ರರಿಗೆ ನನ್ನ ಹೃತ್ಪೂರ್ವಕ ಸಂತಾಪ ಎಂದು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ: ಪತಿ ನಿಧನದ ಸುದ್ದಿ ಕೇಳ್ತಿದ್ದಂತೆ ಕಣ್ಣೀರಿಡುತ್ತಲೇ ಮೌನಕ್ಕೆ ಶರಣಾದ ಪತ್ನಿ ಅಶ್ವಿನಿ
Shocked and deeply saddened by the tragic news of Puneeth Rajkumar’s demise. One of the most humble people I’ve met and interacted with. Heartfelt condolences to his family and loved ones ????
ಮತ್ತೊಂದೆಡೆ ಕಾಲಿವುಡ್ ನಟ ಕಮಲ್ ಹಾಸನ್ ಅವರು ನನ್ನ ಪ್ರೀತಿಯ ಕಿರಿಯ ಸಹೋದರ ಪುನೀತ್ ರಾಜ್ಕುಮಾರ್ ಅವರ ನಿಧನ ಅತ್ಯಂತ ಅನಿರೀಕ್ಷಿತವಾಗಿತ್ತು. ನಾವು ಪರಸ್ಪರ ಪ್ರೀತಿ ಹೊಂದಿದ್ದೇವೆ. ಅವರ ಕುಟುಂಬಕ್ಕೆ ಮತ್ತು ಕರ್ನಾಟಕದಲ್ಲಿರುವ ಅವರ ಅಭಿಮಾನಿಗಳಿಗೆ ನನ್ನ ಆಳವಾದ ಸಂತಾಪಗಳು ಎಂದು ಟ್ವಿಟ್ಟರ್ನಲ್ಲಿ ಬರೆದುಕೊಂಡಿದ್ದಾರೆ.
The demise of my dear younger brother Puneeth Rajkumar was most unexpected.We were mutually very fond of each other. My deepest sympathy to his family and his fans in Karnataka.(1/2)#PuneethRajkumar
ಕಾಲಿವುಡ್ ನಟ ಸೂರ್ಯ ಅವರು, ಈ ನಷ್ಟವನ್ನು ಭರಿಸಲು ಸಾಧ್ಯವಿಲ್ಲ. ಆತ್ಮೀಯ ಪುನೀತ್ ರಾಜ್ಕುಮಾರ್ ಅವರು, ನನ್ನ ಸಹೋದರ ಮತ್ತು ಸಹ ಪ್ರಯಾಣಿಕ. ನಿಮ್ಮ ಪ್ರೀತಿಯ ಸ್ನೇಹ ಮತ್ತು ಸಹೋದರತ್ವವನ್ನು ನಾನು ಯಾವಾಗಲೂ ಗೌರವಿಸುತ್ತೇನೆ. ನಿಮ್ಮ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಸಂತಾಪಗಳು. ನಾನು ಈಗಲೂ ಶಾಕ್ನಲ್ಲಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ರಾಜಕುಮಾರನಂತೆ ಬಾಳಬೇಕಿದ್ದ ನನ್ನ ತಮ್ಮ ಇನ್ನಿಲ್ಲ ಅಂತಂದ್ರೆ ನಂಬಲು ಅಸಾಧ್ಯ: ಸುಧಾರಾಣಿ
Unable to come to terms with this loss! Farewell dear Puneet Rajkumar, my brother & fellow traveller… I will always cherish your fond friendship and brotherhood. My deepest condolence to family & friends. I’m just devastated & still in shock. pic.twitter.com/G9zfmY9VlU
ಸೂಪರ್ ಸ್ಟಾರ್ ರಜನಿಕಾಂತ್ ಅಳಿಯ ನಟ ಧನುಷ್ ಅವರು, ನನ್ನ ಸ್ನೇಹಿತ ಪುನೀತ್ ನನ್ನ ಹೃದಯ ಹೊಡೆದು ಹೋಯಿತು. ನನ್ನ ಸ್ನೇಹಿತ ಶಾಂತಿಯಿಂದ ವಿಶ್ರಾಂತಿ ಪಡೆಯಿರಿ. ನೀವು ಉತ್ತಮ ಸ್ಥಳದಲ್ಲಿರುವಿರಿ ಎಂದು ಭಾವಿಸುತ್ತೇನೆ. ಅವರ ಕುಟುಂಬ, ಸ್ನೇಹಿತರು ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಸಹೋದರ ಪುನೀತ್ ಈ ವಿಚಾರವನ್ನು ನನಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
Puneet my friend ???????? This is so heartbreaking. Rest in peace my friend. Hope you are in a better place. My heartfelt condolences to his family , friends and fans.
ಪುನೀತ್ ಜೊತೆ ಯುವರತ್ನ ಸಿನಿಮಾದಲ್ಲಿ ಜೋಡಿಯಾಗಿ ನಟಿಸಿದ್ದ ನಟಿ ಸಯೀಶಾ ಅವರು, ಪುನೀತ್ ಅವರು ನನ್ನ ಸ್ನೇಹಿತ, ನನ್ನ ಕುಟುಂಬ, ರತ್ನ. ನನಗೆ ಆಗುತ್ತಿರುವ ದುಃಖವನ್ನು ವಿವರಿಸಲು ನನ್ನಲ್ಲಿ ಪದಗಳಲ್ಲ. ಇದು ತುಂಬಲಾರದ ನಷ್ಟ. ಅವರ ಪತ್ನಿ ಅಶ್ವಿನಿ ಅಕ್ಕ ಮತ್ತು ಅವರ ಪುತ್ರಿಯರಿಗೆ ನನ್ನ ಆಳವಾದ ಸಂತಾಪಗಳು. ಅವರ ಕುಟುಂಬ, ಅವರ ಲಕ್ಷಾಂತರ ಅಭಿಮಾನಿಗಳು ಮತ್ತು ಸ್ನೇಹಿತರೊಂದಿಗೆ ನನ್ನ ಹೃದಯವು ಒಂದಾಗಿದೆ. ಪುನೀತ್ ಅವರೇ ನಿಮ್ಮೊಂದಿಗೆ ಸ್ಕ್ರೀನ್ ಶೇರ್ ಮಾಡಿದ ಗೌರವ ನನಗಿದೆ ಎಂದು ಇನ್ಸ್ಟಾಗ್ರಾಮ್ನಲ್ಲಿ ಕ್ಯಾಪ್ಷನ್ನಲ್ಲಿ ಬರೆದುಕೊಂಡಿದ್ದಾರೆ. ಯುವರತ್ನ ಪುನೀತ್ ಅಭಿನಯಿಸಿದ ಕೊನೆಯ ಚಿತ್ರವಾಗಿದೆ.
ಪವರ್ ಸಿನಿಮಾದಲ್ಲಿ ಪುನೀತ್ ಜೊತೆ ಅಭಿನಯಿಸಿದ್ದ ನಟಿ ತ್ರಿಷಾ ಅವರು ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಇದನ್ನು ಹೇಳಲು ನಿರಾಕರಿಸುತ್ತೇನೆ ಎಂದು ಬರೆದುಕೊಳ್ಳುವುದರ ಜೊತೆಗೆ ಹೊಡೆದು ಹೋಗಿರುವ ಹಾರ್ಟ್ ಎಮೋಜಿಯನ್ನು ಹಾಕಿದ್ದಾರೆ. ಪವರ್ ಸಿನಿಮಾದ ನಂತರ ತ್ರಿಷಾ ಪುನೀತ್ ಜೊತೆಗೆ ಮತ್ತೊಂದು ಸಿನಿಮಾದಲ್ಲಿ ಅಭಿನಯಿಸಲು ಸಹಿಹಾಕಿದ್ದರು.
ಪುನೀತ್ ಜೊತೆ ಮಿಲನ ಹಾಗೂ ಪೃಥ್ವಿ ಎರಡು ಸಿನಿಮಾಗಳಲ್ಲಿ ಬಣ್ಣ ಹಚ್ಚಿದ ನಟಿ ಪಾರ್ವತಿ ಮೆನನ್ ಅವರು, ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಪುನೀತ್ ಫೋಟೋ ಶೇರ್ ಮಾಡಿಕೊಳ್ಳುವುದರ ಜೊತೆಗೆ ಇದನ್ನು ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಾಗದಷ್ಟು ನೋವುಂಟು ಮಾಡಿದೆ ಎಂದು ಸಂತಾಪ ಸೂಚಿಸಿದ್ದಾರೆ.
ಬಿಂದಾಸ್ ಸಿನಿಮಾದಲ್ಲಿ ಪುನೀತ್ ಜೊತೆಗೆ ಸ್ಕ್ರೀನ್ ಶೇರ್ ಮಾಡಿದ ನಟಿ ಹನ್ಸಿಕಾ ಮೊಟ್ವಾನಿ ಅವರು ಕೂಡ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಇದು ಹೃದಯ ವಿದ್ರಾವಕ. ಇದು ನಿಜವಾಗದಿರಲಿ ಎಂದು ನಾನು ಭಾವಿಸುತ್ತೇನೆ. ಪುನೀತ್ ರಾಜ್ ಕುಮಾರ್ ಅವರು ಇನ್ನೂ ಯುವಕರಾಗಿದ್ದಾರೆ ಎಂದು ಪುನೀತ್ ಫೋಟೋ ಶೇರ್ ಮಾಡಿಕೊಳ್ಳುವುದರ ಜೊತೆಗೆ ಬರೆದುಕೊಂಡಿದ್ದಾರೆ.