Tag: Kamal Pant

  • ಬೆಂಗಳೂರಿಗರೇ ಎಚ್ಚರ – ರಾತ್ರಿ ಅನಗತ್ಯ ಓಡಾಡಿದ್ರೆ ಬೀಳುತ್ತೆ ಕೇಸ್

    ಬೆಂಗಳೂರಿಗರೇ ಎಚ್ಚರ – ರಾತ್ರಿ ಅನಗತ್ಯ ಓಡಾಡಿದ್ರೆ ಬೀಳುತ್ತೆ ಕೇಸ್

    – ಎಂಜಿ ರೋಡ್, ಬ್ರಿಗೇಡ್ ರೋಡ್‌ಗಳಲ್ಲಿ ಸಿಸಿಟಿವಿ ಅಳವಡಿಕೆ
    – ನೈಟ್ ಕರ್ಫ್ಯೂ ವೇಳೆ ಯಾರಿಗೂ ಪಾಸ್ ನೀಡಲ್ಲ
    – ಅಬಕಾರಿ ಇಲಾಖೆಯಿಂದ ಸ್ಪೆಷಲ್ ಸ್ಕ್ವ್ಯಾಡ್‌ಗಳ ರಚನೆ

    ಬೆಂಗಳೂರು: ನೈಟ್ ಕರ್ಫ್ಯೂ ವೇಳೆ ಸರ್ಕಾರದ ಗೈಡ್‌ಲೈನ್‌ಗಳನ್ನು ಕಡ್ಡಾಯವಾಗಿ ಎಲ್ಲರೂ ಪಾಲನೆ ಮಾಡಬೇಕು. ಇಲ್ಲವಾದರೆ ಅವರ ಮೇಲೆ ದೂರು ದಾಖಲಿಸಲಾಗುವುದು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಹೇಳಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ತಡೆಗಟ್ಟುವ ಹಿನ್ನೆಲೆಯಲ್ಲಿ ಹತ್ತು ಗಂಟೆಯಿಂದ ಐದು ಗಂಟೆ ತನಕ ನೈಟ್ ಕರ್ಫ್ಯೂ ಜಾರಿಯಾಗಿದ್ದು, ಆ ಸಮಯದಲ್ಲಿ ಅನಾವಶ್ಯಕವಾಗಿ ಯಾರು ಹೊರಗಡೆ ಬರುವಂತಿಲ್ಲ. ಜೊತೆಗೆ ಯಾರಿಗೂ ಯಾವುದೇ ಪಾಸ್ ನೀಡಲಾಗುವುದಿಲ್ಲ. ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ಅವಕಾಶ ನೀಡಲಾಗಿದೆ. ಒಂದು ವೇಳೆ ತುರ್ತಾಗಿ ಆಸ್ಪತ್ರೆ, ರೈಲ್ವೆಗೆ ಹೋಗುವವರು ಕಡ್ಡಾಯವಾಗಿ ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ತೋರಿಸಬೇಕು. ಎಂದು ಖಡಕ್ ಸೂಚನೆ ನೀಡಿದರು.

    ಈಗಿರುವ ನಿಯಮಗಳಲ್ಲಿ ಯಾವುದೇ ರೀತಿಯ ಬದಲಾವಣೆಗಳಿಲ್ಲ. ಈಗಾಗಲೇ ಸಂಬಂಧಪಟ್ಟ ಪಬ್, ರೆಸ್ಟೋರೆಂಟ್ ಮಾಲೀಕರಿಗೆ ಮಾಹಿತಿ ನೀಡಿದ್ದೇವೆ. ಇವತ್ತು ಮತ್ತೊಮ್ಮೆ ಸಭೆ ಸೇರಿ ಪರಿಣಾಮಕಾರಿಯಾಗಿ ಜಾರಿ ಮಾಡಲು ತಿರ್ಮಾನ ಮಾಡುತ್ತೇವೆ. ಸರ್ಕಾರದ ಆದೇಶವನ್ನು ಅನುಸರಿಸುವುದು ನಮ್ಮ ಕರ್ತವ್ಯವಾಗಿದೆ ಎಂದ ಅವರು ಜನರು ಗುಂಪು ಸೇರದೆ, ಮಾರ್ಗಸೂಚಿಯನ್ನು ಅನುಸರಿಸಿ ಎಂದು ಮನವಿ ಮಾಡಿದರು.

    ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಎಂಜಿ ರೋಡ್, ಬ್ರಿಗೇಡ್ ರೋಡ್, ಇಂದಿರಾನಗರದಲ್ಲಿ ಪೊಲೀಸ್ ಸಿಬ್ಬಂದಿ ಹೆಚ್ಚಿಸುವುದರ ಜೊತೆಗೆ ಸಿಸಿಟಿವಿ ಅವಳಡಿಕೆ ಸಿದ್ಧತೆ ನಡೆಸಲಾಗುತ್ತಿದೆ. ಬಂದರೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ(ಎನ್‌ಡಿಎಂಎ) ಅಡಿ ಕೇಸ್ ದಾಖಲು ಮಾಡಿ ಕ್ರಮ ಕೈಗೊಳ್ಳುತ್ತೇವೆ. ಎಂಜಿ ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್‌ನಲ್ಲಿ ಹೆಚ್ಚುವರಿಯಾಗಿ 150 ಸಿಸಿಟಿವಿ ಕ್ಯಾಮರಾ ಅಳವಡಿಕೆ ಮಾಡಲಾಗಿದೆ ಜೊತೆಗೆ ನಾಕಾಬಂದಿ ಹಾಕಿ ಪರಿಶೀಲನೆ ನಡೆಸಲಾಗುತ್ತದೆ ಎಂದರು. ಇದನ್ನೂ ಓದಿ: ಕೊರೊನಾದೊಂದಿಗೆ ಪ್ರತಿಪಕ್ಷಗಳು ಸ್ನೇಹ ಬೆಳೆಸುತ್ತಿದೆ: ಯೋಗಿ ಆದಿತ್ಯನಾಥ್

    ಹೊಸವರ್ಷ ಆಚರಣೆಯ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆಯಿಂದ ಸ್ಪೆಷಲ್ ಸ್ಕ್ವ್ಯಾಡ್‌ಗಳ ರಚನೆ ಮಾಡಲಾಗಿದೆ. ಈ ಸಂಬಂಧ ಇದೇ ತಿಂಗಳ 29ರಿಂದ ಸ್ಪೆಷಲ್ ಸ್ಕ್ವ್ಯಾಡ್‌ಗಳು ಕಾರ್ಯಾಚರಣೆ ಕೈಗೊಳ್ಳುತ್ತಾರೆ. ಅಕ್ರಮವಾಗಿ ಮದ್ಯ ಸಂಗ್ರಹಣೆ ಮಾಡುವುದು, ಔಟ್ ಲೆಟ್‌ಗಳಲ್ಲಿ ಹೆಚ್ಚಿನ ಮದ್ಯ ಖರೀದಿಸುವುದರ ವಿರುದ್ಧ ಅಬಕಾರಿ ಇಲಾಖೆಯಿಂದ ವಿಚಕ್ಷಣ ದಳ ಕಾರ್ಯಾಚರಣೆ ಮಾಡಲಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ:  ನ್ಯೂ ಇಯರ್ ಎಲ್ಲಾದ್ರೂ ಮಾಡ್ಲಿ, ಕೊರೊನಾ ನಿಯಮ ಪಾಲಿಸಲಿ: ಬೊಮ್ಮಾಯಿ

  • ಸ್ಯಾಂಡಲ್‍ವುಡ್‍ಗೆ ಪೈರಸಿ ಭಯ – ನಿರ್ಮಾಪಕ ಸಂಘದಿಂದ ಪೊಲೀಸ್ ಕಮೀಷನರ್‌ಗೆ ದೂರು

    ಸ್ಯಾಂಡಲ್‍ವುಡ್‍ಗೆ ಪೈರಸಿ ಭಯ – ನಿರ್ಮಾಪಕ ಸಂಘದಿಂದ ಪೊಲೀಸ್ ಕಮೀಷನರ್‌ಗೆ ದೂರು

    ಬೆಂಗಳೂರು: ಕಳೆದ ಎರಡು ದಿನಗಳ ಹಿಂದಷ್ಟೇ ಕೋಟಿಗೊಬ್ಬ-3 ಚಿತ್ರವನ್ನು ಪೈರಸಿ ಮಾಡುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಬಂದಿದ್ದ ಬೆದರಿಕೆ ಸಂದೇಶ ಹಿನ್ನೆಲೆ ನಿರ್ಮಾಪಕ ಸೂರಪ್ಪಬಾಬು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಇದರ ಬೆನ್ನಲೇ ಎಚ್ಚೆತ್ತಿರುವ ಸ್ಯಾಂಡಲ್‍ವುಡ್ ನಿರ್ಮಾಪಕ ಸಂಘವು ಕನ್ನಡ ಚಿತ್ರಗಳ ಪೈರಸಿ ತಡೆಯಬೇಕೆಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್‍ಗೆ ದೂರು ನೀಡಿದೆ.

    ಥಿಯೇಟರ್ ಗಳಲ್ಲಿ ಪೂರ್ಣಾವಧಿ ಆಸನಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಅಕ್ಟೋಬರ್ ನಲ್ಲಿ ಸಾಲು-ಸಾಲು ಚಿತ್ರಗಳು ತೆರೆಕಾಣಲು ಸಜ್ಜಾಗಿವೆ. ಪ್ರಮುಖವಾಗಿ ಕೋಟಿಗೊಬ್ಬ-3, ಸಲಗ, ಭಜರಂಗಿ-2 ಸೇರಿದಂತೆ ಇನ್ನಿತರ ಬಿಗ್ ಬಜೆಟ್ ಸಿನಿಮಾಗಳು ರಿಲೀಸ್ ಆಗುತ್ತಿವೆ. ಕಷ್ಟಪಟ್ಟು ನಿರ್ಮಿಸಿದ ಚಿತ್ರಗಳಿಗೆ ಪೈರಸಿ ಆಗುವ ಆತಂಕ ನಿರ್ಮಾಪಕರಿಗೆ ಇರುವ ಹಿನ್ನೆಲೆಯಲ್ಲಿ ನಿರ್ಮಾಪಕ ಸಂಘದ ಅಧ್ಯಕ್ಷ ಪ್ರವೀಣ್ ನೇತೃತ್ವದ ನಿಯೋಗ ಕಮಲ್ ಪಂತ್‍ಗೆ ಪೈರಸಿ ತಡೆಯುವ ನಿಟ್ಟಿನಲ್ಲಿ ಸೂಕ್ತಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿಕೊಂಡಿದೆ. ಇದನ್ನೂ ಓದಿ: ನಾನು, ಸೌಜನ್ಯ ಲಿವಿಂಗ್ ಟುಗೆದರ್‌ನಲ್ಲಿ ಇರಲಿಲ್ಲ: ವಿವೇಕ್

    ಈ ಸಂಬಂಧ ಮಾತನಾಡಿದ ಪ್ರವೀಣ್, ಇಂದಿನಿಂದ ಥಿಯೇಟರ್ ಗಳಲ್ಲಿ ಶೇ.100ರಷ್ಟು ಪೂರ್ಣಾವಧಿ ಆಸನಕ್ಕೆ ಸರ್ಕಾರ ಅವಕಾಶ ನೀಡಿದೆ. ಹೀಗಾಗಿ ಈ ತಿಂಗಳಿಂದ ಸಾಲು-ಸಾಲು ಬಿಗ್ ಬಜೆಟ್ ಚಿತ್ರಗಳು ರಿಲೀಸ್ ಆಗುತ್ತಿವೆ. ಕೋಟ್ಯಂತರ ರೂಪಾಯಿ ಹಾಕಿ ನಿರ್ಮಾಪಕರು ಚಿತ್ರ ನಿರ್ಮಾಣ ಮಾಡುತ್ತಾರೆ. ತೆರೆಗೆ ಬರಲು ಕೆಲದಿನಗಳೇ ಇರಬೇಕಾದರೆ ಕಿಡಿಗೇಡಿಗಳು ಸೋಷಿಯಲ್ ಮೀಡಿಯಾದಲ್ಲಿ ಪೈರಸಿ ಮಾಡುತ್ತಾರೆ. ಇದರಿಂದ ಎಷ್ಟೋ ನಿರ್ಮಾಪಕರು ಬೀದಿಗೆ ಬೀಳುತ್ತಾರೆ. ಸಂಪೂರ್ಣವಾಗಿ ಪೈರಸಿ ತಡೆಯುವ ನಿಟ್ಟಿನಲ್ಲಿ ಇಂದು ಪೊಲೀಸ್ ಕಮೀಷನರ್ ಗೆ ದೂರು ನೀಡಿದ್ದೇವೆ. ನಮಗೆ ಸ್ಪಂದಿಸಿರುವ ಪೊಲೀಸ್ ಆಯುಕ್ತರು ಪೈರಸಿ ತಡೆಯುವ ನಿಟ್ಟಿನಲ್ಲಿ ಸಿಸಿಬಿಯಿಂದ ಪ್ರತ್ಯೇಕವಾಗಿ ಸ್ಕ್ವಾಡ್ ಟೀಮ್ ರಚಿಸಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದರು.

    ನಿರ್ಮಾಪಕ ಕೆ.ಮಂಜು ಮಾತನಾಡಿ ಪೊಲೀಸ್ ಕಮೀಷನರ್ ಕಮಲ್‍ಪಂತ್ ಅವರು ಪ್ರತ್ಯೇಕ ಸ್ವ್ಕಾಡ್ ಟೀಮ್ ಮಾಡಿ ಪೈರಸಿ ಮಾಡುವ ಕಿಡಿಗೇಡಿಗಳನ್ನು ಬಂಧಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಆಶ್ವಾಸನೆ ನೀಡಿದ್ದಾರೆ. ಸ್ವ್ಕಾಡ್ ಟೀಮ್ ರಚನೆಯಿಂದ ನಿರ್ಮಾಪಕರಿಗೆ ಸಾಕಷ್ಟು ಅನುಕೂಲವಾಗಲಿದೆ. ಈ ತಿಂಗಳಲ್ಲಿ ನಾಲ್ಕೈದು ಬಿಗ್ ಬಜೆಟ್ ಸಿನಿಮಾಗಳು ರಿಲೀಸ್ ಆಗಲಿವೆ. ದಯವಿಟ್ಟು ಚಿತ್ರಮಂದಿರಗಳಿಗೆ ಬಂದು ಸಿನಿಮಾ ನೋಡಿ ಎಂದು ಮನವಿ ಮಾಡಿಕೊಂಡರು. ಇದನ್ನೂ ಓದಿ: ಚಪಾತಿ, ಪಲ್ಯ ಮಾಡಿದ್ದೆ, ತಿನ್ನೋಕೆ ಮಗಳೇ ಬರಲಿಲ್ಲ- ನಟಿ ಸೌಜನ್ಯ ತಾಯಿ ಕಣ್ಣೀರು

  • ನಾನು ಸಿಎಂ ಆಪ್ತ, ಫೈನ್ ಕಟ್ಟಲ್ಲ- ಕಮಿಷನರ್ ಮುಂದೆ ಯುವಕ ಹೈಡ್ರಾಮಾ

    ನಾನು ಸಿಎಂ ಆಪ್ತ, ಫೈನ್ ಕಟ್ಟಲ್ಲ- ಕಮಿಷನರ್ ಮುಂದೆ ಯುವಕ ಹೈಡ್ರಾಮಾ

    ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಚೈನ್ ಲಿಂಕ್ ಕತ್ತರಿಸಲು ಲಾಕ್ ಡೌನ್ ಘೋಷಿಸಿದ್ದು, ಆದರೂ ಜನ ಅಡ್ಡಾಡುತ್ತಿದ್ದಾರೆ. ಅಂತೆಯೇ ಯುವಕನೊಬ್ಬನನ್ನು ತಡೆದಾಗ ಆತ ಪೊಲೀಸ್ ಕಮಿಷನರ್ ಗೆ ಅವಾಜ್ ಹಾಕಿರುವ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

    ಈ ಘಟನೆ ಹೆಬ್ಬಾಳದ ಸಿಬಿಐ ಬಳಿ ನಡೆದಿದ್ದು, ಇಲ್ಲಿ ಪೊಲಿಸರು ಯುವಕನನ್ನು ತಡೆದಿದ್ದಾರೆ. ಈ ವೇಳೆ ಆತ, ಇದು ಪೊಲೀಸರ ಕ್ರಮ ಸರಿ ಅಲ್ಲ, ನಾನು ಸಿಎಂ ಆಪ್ತ. ನಾನು ಫೈನ್ ಕಟ್ಟಲ್ಲ. ನಾನು ಮನೆಗೆ ಹೋಗ್ಬೇಕು ಬಿಡಿ. ನಾನು ಮನಸ್ಸು ಮಾಡಿದ್ರೆ ಏನಾಗುತ್ತೆ ಗೊತ್ತಾ ..? ಎಂದು ಪೊಲೀಸ್ ಕಮೀಷನರ್ ಕಮಲ್ ಪಂಥ್ ಮುಂದೆ ಹೈಡ್ರಾಮ ಮಾಡಿದ್ದಾನೆ.

    ಯುವಕನ ಮಾತಿನಿಂದ ಸಿಟ್ಟಿಗೆದ್ದ ಕಮಿಷನರ್ ಮುಲಾಜಿಲ್ಲದೇ ಆತನ ವಾಹನ ಸೀಜ್ ಮಾಡುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

    ಒಟ್ಟಿನಲ್ಲಿ ಕೊರೊನಾ ಚೈನ್ ಲಿಂಕ್ ಕತ್ತರಿಸಲು ಲಾಕ್ ಡೌನ್ ಹೇರಿದ್ರೆ ಜನ ಸುಳ್ಳು ಕಥೆಗಳನ್ನು ಹೇಳಿ ರಸ್ತೆಗೆ ಇಳಿಯುತ್ತಿದ್ದಾರೆ. ಇವರನ್ನು ನಿಯಂತ್ರಿಸಲು ಪೊಲಿಸರು ಹರಸಾಹಸ ಪಡುವಂತಾಗಿದೆ.

  • ಅನಾವಶ್ಯಕ ಓಡಾಟ, ಕಡ್ಡಾಯವಾಗಿ ವಾಹನ ಪರಿಶೀಲಿಸಿ- ಕಮಲ್ ಪಂಥ್ ಸೂಚನೆ

    ಅನಾವಶ್ಯಕ ಓಡಾಟ, ಕಡ್ಡಾಯವಾಗಿ ವಾಹನ ಪರಿಶೀಲಿಸಿ- ಕಮಲ್ ಪಂಥ್ ಸೂಚನೆ

    ಬೆಂಗಳೂರು: ಲಾಕ್‍ಡೌನ್ ವೇಳೆಯೂ ಅನಾವಶ್ಯಕ ವಾಹನಗಳ ಓಡಾಡ ಹೆಚ್ಚಳವಾಗಿದ್ದು, ಕಡ್ಡಾಯವಾಗಿ ಎಲ್ಲ ವಾಹನಗಳ ಪರಿಶೀಲನೆ ನಡೆಸಬೇಕು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ತಿಳಿಸಿದ್ದಾರೆ.

    ಈ ಸಂಬಂಧ ಹಿರಿಯ ಅಧಿಕಾರಿಗಳ ಜೊತೆಗೆ ನಗರದ ಪೊಲೀಸ್ ಆಯುಕ್ತ ಕಮಲ್ ಪಂಥ್ ಸಭೆ ನಡೆಸಿದ್ದು, ವಾಹನಗಳ ಅನಾವಶ್ಯಕ ಓಡಾಟಕ್ಕೆ ಬ್ರೇಕ್ ಹಾಕುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಬೆಳಗ್ಗೆ 10 ಗಂಟೆ ನಂತರವೂ ವಾಹನಗಳ ಓಡಾಡ ಹೆಚ್ಚಾಗುತ್ತಿದೆ. ಪೊಲೀಸರು ಪರಿಶೀಲನೆ ಮಾಡುತ್ತಿಲ್ಲ ಎಂಬ ದೂರುಗಳು ಕೇಳಿ ಬಂದಿವೆ. ಹೀಗಾಗಿ ಕಡ್ಡಾಯವಾಗಿ ವಾಹನಗಳನ್ನು ತಡೆದು ಪರಿಶೀಲನೆ ಮಾಡಬೇಕು. ಅನಾವಶ್ಯಕವಾಗಿ ರಸ್ತೆಗಿಳಿದರೆ ವಾಹನಗಳನ್ನು ಸೀಜ್ ಮಾಡಬೇಕು ಎಂದು ಆದೇಶಿಸಿದ್ದಾರೆ.

    ಕೊರೊನಾ ಮಾರ್ಗಸೂಚಿಗಳ ಉಲ್ಲಂಘನೆಯಾಗದಂತೆ ನೋಡಿಕೊಳ್ಳುವುದು, ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮೌಖಿಕವಾಗಿ ಸೂಚಿಸಿದ್ದಾರೆ. ಲಾಕ್‍ಡೌನ್ ಜಾರಿಯಲ್ಲಿದ್ದರೂ ಕಳೆದ ಕೆಲ ದಿನಗಳಿಂದ ಬೆಳಗ್ಗೆ 10 ಗಂಟೆ ನಂತರವೂ ಹೆಚ್ಚು ವಾಹನಗಳು ಸಂಚರಿಸುತ್ತಿವೆ. ಪೊಲೀಸರು ತಪಾಸಣೆ ನಡೆಸುತ್ತಿಲ್ಲ ಎಂಬ ದೂರು ಸಹ ಕೇಳಿ ಬಂದಿವೆ. ಹೀಗಾಗಿ ಕಮಲ್ ಪಂತ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

  • ಬೆಳಗ್ಗೆ 10 ಗಂಟೆ ಬಳಿಕ ಯಾವುದೇ ಅಂಗಡಿ ಓಪನ್ ಇರಲ್ಲ, ನಿಯಮ ಉಲ್ಲಂಘಿಸಿದರೆ ಶಿಸ್ತು ಕ್ರಮ: ಕಮಲ್ ಪಂಥ್

    ಬೆಳಗ್ಗೆ 10 ಗಂಟೆ ಬಳಿಕ ಯಾವುದೇ ಅಂಗಡಿ ಓಪನ್ ಇರಲ್ಲ, ನಿಯಮ ಉಲ್ಲಂಘಿಸಿದರೆ ಶಿಸ್ತು ಕ್ರಮ: ಕಮಲ್ ಪಂಥ್

    – ಅನಗತ್ಯವಾಗಿ ಓಡಾಡಿದರೆ ವಾಹನ ಸೀಜ್, ದೇವಸ್ಥಾನಗಳೂ ತೆರೆದಿರಲ್ಲ
    – ಮದುವೆಗೆ ಬಿಬಿಎಂಪಿಯಿಂದ ಅನುಮತಿ ಪಡೆಯುವುದು ಕಡ್ಡಾಯ, 50ಕ್ಕೂ ಹೆಚ್ಚು ಜನ ಸೇರಂಗಿಲ್ಲ

    ಬೆಂಗಳೂರು: ಬೆಳಗ್ಗೆ 10 ಗಂಟೆ ಬಳಿಕ ಯಾವುದೇ ಅಂಗಡಿ ತೆರೆದಿರುವುದಿಲ್ಲ, ಕರ್ಫ್ಯೂ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ನಿಯಮ ಉಲ್ಲಂಘಿಸಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ತಿಳಿಸಿದ್ದಾರೆ.

    ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಸರ್ಕಾರ ಆದೇಶ ಹೊರಡಿಸಿರುವ ಪ್ರಕಾರ ಇಂದು ರಾತ್ರಿ 9 ಗಂಟೆಯಿಂದ ಹೊಸ ಗೈಡ್‍ಲೈನ್ಸ್ ಜಾರಿಯಾಗಲಿದೆ. ಬೆಳಗ್ಗೆ 6 ಗಂಟೆಯಿಂದ 10 ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಇದೆ. ಮತ್ತೆ ರಾತ್ರಿ 9 ಗಂಟೆಯಿಂದ ಬೆಳಗ್ಗೆ ಆರು ಗಂಟೆವರೆಗೂ ನೈಟ್ ಕರ್ಫ್ಯೂ ಜಾರಿ ಇರುತ್ತೆ. ಬೆಳಗ್ಗೆ 10 ಗಂಟೆ ಬಳಿಕ ಯಾವುದೇ ಅಂಗಡಿಗಳು ತೆರೆದಿರುವುದಿಲ್ಲ. ಹೋಮ್ ಡೆಲಿವರಿ, ಇ ಕಾಮರ್ಸ್ ಗೆ ಅವಕಾಶ ಇದೆ. ಬಾರ್, ಪಬ್ ಗಳಲ್ಲಿ ಪಾರ್ಸಲ್ ಗೆ ಅವಕಾಶ ಇದೆ. ಬೆಳಗ್ಗೆ ಹತ್ತು ಗಂಟೆ ಬಳಿಕ ಯಾವುದೇ ಅಂಗಡಿ ಓಪನ್ ಇರಲ್ಲ ಎಂದರು.

    ದೇವಸ್ಥಾನ ಸಹ ಓಪನ್ ಇರಲ್ಲ, ಪ್ರಯಾಣಿಕರು ಟ್ರಾವೆಲ್ ಟಿಕೆಟ್ ತೋರಿಸಬೇಕು. ಹೊರ ರಾಜ್ಯಗಳಿಗೆ ಹೋಗಲು ಅವಕಾಶ ಇದೆ. ಅನುಮತಿ ಇರುವ ಕಂಪನಿ ಉದ್ಯೋಗಿಗಳು ಐಡಿ ಕಾರ್ಡ್ ತೋರಿಸುವುದು ಕಡ್ಡಾಯವಾಗಿದೆ. ಅವಕಾಶ ದುರುಪಯೋಗ ಮಾಡಿದರೆ ಶಿಸ್ತು ಕ್ರಮ ಜರುಗಿಸಲಾಗುವುದು. ಮದುವೆಗೆ ಐವತ್ತು ಮಂದಿಗೆ ಮಾತ್ರ ಅವಕಾಶವಿದೆ. ಏರ್‍ಪೋರ್ಟ್ ಗೆ ಹೋಗುವರಿಗೆ ಅವಕಾಶವಿದೆ. ನೈಟ್ ಪಾಳಿಯ ಐಟಿ ಉದ್ಯೋಗಿಗಳು ಐಡಿ ಕಾರ್ಡ್ ಇರಬೇಕು. ಮೇ 12ರ ವೆರೆಗೆ ಕೋವಿಡ್ ರೂಲ್ಸ್ ಫಾಲೋ ಮಾಡಬೇಕು ಎಂದು ತಿಳಿಸಿದರು.

    ರೈತರಿಗೆ ಯಾವುದೇ ಸಮಸ್ಯೆ ಇಲ್ಲ, ಗೂಡ್ಸ್ ವಾಹನಗಳಿಗೆ ಅವಕಾಶ ಇದೆ. ಹೂ ಹಣ್ಣು, ತರಕಾರಿ ಮಾರುಕಟ್ಟೆಗೆ ತರಲು ಸಮಸ್ಯೆ ಇಲ್ಲ. ಮದುವೆಗೆ ಬಿಬಿಎಂಪಿಯಿಂದ ಅನುಮತಿ ಪಡೆಯಬೇಕು. ನಾವು ಕ್ಲಿಯರೆನ್ಸ್ ಕೊಡುತ್ತೇವೆ. ಅಗತ್ಯ ವಸ್ತುಗಳ ಖರೀದಿ ವೇಳೆ ಸಾಮಾಜಿಕ ಅಂತರ ಕಾಪಾಡುವುದು ಆ ಅಂಗಡಿ ಮಾಲೀಕರದ್ದೇ ಜವಾಬ್ದಾರಿಯಾಗಿದೆ. ಕೆ.ಆರ್.ಮಾರ್ಕೆಟ್‍ನಲ್ಲಿ ನಿಯಮ ಪಾಲನೆ ಆಗುತ್ತಿಲ್ಲ. ಈ ಬಗ್ಗೆ ಬಿಬಿಎಂಪಿ ಆಯುಕ್ತರ ಜೊತೆ ಮಾತನಾಡುತ್ತೇವೆ. ವೀಕೆಂಡ್ ಕರ್ಫ್ಯೂ ಯಾವ ರೀತಿ ಸಿದ್ಧತೆ ಇತ್ತೋ ಅದೇ ರೀತಿ ಹದಿನೈದು ದಿನ ಇರುತ್ತೆ. ಅನಗತ್ಯವಾಗಿ ಓಡಾಡಿದರೆ ಗಾಡಿ ಸೀಜ್ ಮಾಡಲಾಗುತ್ತದೆ. ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.

  • ನೈಟ್ ಕರ್ಫ್ಯೂ- ರಾತ್ರಿ 9ಕ್ಕೆ ಎಲ್ಲ ಅಂಗಡಿ, ಮುಂಗಟ್ಟುಗಳು ಬಂದ್

    ನೈಟ್ ಕರ್ಫ್ಯೂ- ರಾತ್ರಿ 9ಕ್ಕೆ ಎಲ್ಲ ಅಂಗಡಿ, ಮುಂಗಟ್ಟುಗಳು ಬಂದ್

    ಬೆಂಗಳೂರು: ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಎಚ್ಚೆತ್ತಕೊಂಂಡಿದ್ದು, ನೈಟ್ ನೈಟ್ ಕರ್ಫ್ಯೂ ಹಾಕಲಾಗುತ್ತಿದೆ. ರಾತ್ರಿ 10 ಗಂಟೆ ಬಳಿಕ ಸಂಚರಿಸುವ ವಾಹನಗಳನ್ನು ಸೀಜ್ ಮಾಡುವುದಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.

    ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಕಮಲ್ ಪಂಥ್ ಹಾಗೂ ಜಂಟಿ ಆಯುಕ್ತ ರವಿಕಾಂತೇಗೌಡ, ರಾತ್ರಿ 9 ರಿಂದಲೇ ಎಲ್ಲ ಕಡೆ ಪೊಲೀಸರನ್ನು ನಿಯೋಜಿಸಲಾಗುತ್ತದೆ. ಅಂಗಡಿ, ಮುಂಗಟ್ಟುಗಳನ್ನು ಸಮಯಕ್ಕೆ ಸರಿಯಾಗಿ ಬಂದ್ ಮಾಡಿದರೆ ಅವರ ಸಿಬ್ಬಂದಿ ಮನೆಗೆ ತೆರಳಲು ಅನುಕೂಲವಾಗುತ್ತದೆ. ಇಂದು ಸಂಜೆಯಿಂದಲೇ ಬಂದೋಬಸ್ತ್ ಕೈಗೊಳ್ಳಲಾಗುವುದು, ರಾತ್ರಿ 9 ರಿಂದ ನಮ್ಮ ಸಿಬ್ಬಂದಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವಂತೆ ಸೂಚಿಸಲಿದ್ದಾರೆ. ಜನರನ್ನೂ ಸಹ ವಾಪಸ್ ಕಳುಹಿಸಲಿದ್ದಾರೆ. ಆದೇಶದಲ್ಲಿ ರಿಯಾಯಿತಿ ನೀಡಿದವರನ್ನು ಹೊರತುಪಡಿಸಿ ರಾತ್ರಿ 9ರ ಬಳಿಕ ಸಂಚರಿಸಲು ಯಾರಿಗೂ ಅವಕಾಶವಿಲ್ಲ. ಸುಖಾಸುಮ್ಮನೆ ರಸ್ತೆಯಲ್ಲಿ ಓಡಾಡಿ ದುರ್ವರ್ತನೆ ತೋರಬಾರದು ಎಂದು ಮನವಿ ಮಾಡಿದ್ದಾರೆ.

    ನಾವು ಯಾರಿಗೂ ಪಾಸ್ ನೀಡುತ್ತಿಲ್ಲ. ಯಾರೂ ಪಾಸ್ ಕೇಳಲು ಆಗಮಿಸಬಾರದು. ರಸ್ತೆಗಳಲ್ಲಿ ಬೇಕಾಬಿಟ್ಟಿಯಾಗಿ ಸಂಚರಿಸಿದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಪ್ರಮುಖ ಮೇಲ್ಸೇತುವೆ, ರಸ್ತೆಗಳನ್ನು ಬಂದ್ ಮಾಡಲಾಗಿದೆ. ಆದೇಶದಲ್ಲಿ ತಿಳಿಸಿದಂತೆ ತುರ್ತು ಕಾರಣವಿದ್ದರೆ ಮಾತ್ರ ಹೊರಗಡೆ ಬರಬೇಕು. ರಾತ್ರಿ 10 ಗಂಟೆ ಬಳಿಕ ರಾತ್ರಿ ಯಾರೂ ಹೊರಗೆ ಬರಬಾರದು, ಅಷ್ಟರಲ್ಲಿ ಎಲ್ಲರೂ ಮನೆಯೊಳಗಿರಬೇಕು. ಅಂಗಡಿ, ಮುಂಗಟ್ಟು ಸೇರಿದಂತೆ ಇತರೆ ಸ್ಥಳಗಳನ್ನು ಬಂದ್ ಮಾಡಬೇಕು. ರಾತ್ರಿ 10ರೊಳಗೆ ಎಲ್ಲರೂ ಮನೆಯಲ್ಲಿರಬೇಕು, ಯಾರೂ ಹೊರಗಡೆ ಬರಬಾರದು ಎಂದು ಕಮಲ್ ಪಂಥ್ ಮನವಿ ಮಾಡಿದರು.

    ಹಾಲು, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳನ್ನು ಸಾಗಿಸಲು ಅನುಮತಿ ಇದೆ. ಆದರೆ ಈ ಅವಕಾಶವನ್ನು ಯಾರೂ ದುರ್ಬಳಕೆ ಮಾಡಿಕೊಳ್ಳಬಾರದು ಎಂದು ಕಮಲ್ ಪಂಥ್ ಮನವಿ ಮಾಡಿದರು.

    ಸಂಚಾರಿ ಪೊಲೀಸ್ ಜಂಟಿ ಆಯುಕ್ತ ರವಿಕಾಂತೇಗೌಡ ಮಾತನಾಡಿ, ರಾತ್ರಿ 9.50ಕ್ಕೆ ಎಲ್ಲ ಮೇಲ್ಸೇತುವೆ, ಪ್ರಮುಖ ರಸ್ತೆಗಳನ್ನು ಬಂದ್ ಮಾಡಲಾಗುತ್ತದೆ. ಅಗತ್ಯ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಅಂಗಡಿಗಳನ್ನು ಬಂದ್ ಮಾಡುವವರು ಈ ಬಗ್ಗೆ ಯೋಚಿಸಬೇಕು, 10 ಗಂಟೆಗೆ ಅಂಗಡಿ ಬಂದ್ ಮಾಡುವುದಲ್ಲ, ಸಿಬ್ಬಂದಿ ಮನೆ ತೊಲುಪಲು ಎಷ್ಟು ಸಮಯ ಬೇಕು ಎಂಬುದನ್ನು ಅಂದಾಜಿಸಿ 10 ಗಂಟೆ ಒಳಗೆ ಅವರು ಮನೆ ತಲುಪುವಂತೆ ಕಳುಹಿಸಬೇಕು ಎಂದರು.

    ಲಾಕ್‍ಡೌನ್ ಸಮಯದಲ್ಲಿ ಇದ್ದ ರೀತಿಯಲ್ಲೇ ಒಂದು ಬದಿಯ ರಸ್ತೆಯಲ್ಲಿ ಒಡಾಡೋದಕ್ಕೆ ಅವಕಾಶ ನೀಡಲಾಗುವುದು. ಅಗತ್ಯ ಸೇವೆ ವಾಹನಗಳನ್ನು ಬಿಡುತ್ತೇವೆ. ಅನವಶ್ಯಕವಾಗಿ ಸಂಚರಿಸುಬರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ವೀಡಿಯೋ ವಾಲ್ ದಿನದ 24 ಗಂಟೆಯೂ ಕೆಲಸ ಮಾಡಲಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಬೈಕ್ ಗಳಿಗೆ ಮೀರರ್ ಹಾಗೂ ಇಂಡಿಕೇಟರ್ ಗಳು ಕಡ್ಡಾಯವಾಗಿದ್ದುಯ, ಹಾಕದೇ ಇರುವವಗೆ 500 ರೂಪಾಯಿ ದಂಡ ವಿಧಿಸಲಾಗುವುಯದು ಎಂದು ರವಿಕಾಂತೇಗೌಡ ತಿಳಿಸಿದರು. 1,500 ಪೊಲೀಸರು ಹಾಗೂ ಹೋಮ್ ಗಾರ್ಡ್ ಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.

  • ಡಿ.31ರಂದು ರಾತ್ರಿ 8ರಿಂದ ಆಯ್ದ ರಸ್ತೆಗಳಲ್ಲಿ ವಾಹನ ಓಡಾಟಕ್ಕೆ ನಿರ್ಬಂಧ – ಹೋಟೆಲ್ ಟಿಕೆಟ್ ಇದ್ರೆ ಮಾತ್ರ ಅವಕಾಶ

    ಡಿ.31ರಂದು ರಾತ್ರಿ 8ರಿಂದ ಆಯ್ದ ರಸ್ತೆಗಳಲ್ಲಿ ವಾಹನ ಓಡಾಟಕ್ಕೆ ನಿರ್ಬಂಧ – ಹೋಟೆಲ್ ಟಿಕೆಟ್ ಇದ್ರೆ ಮಾತ್ರ ಅವಕಾಶ

    – ಕುಡಿದು ವಾಹನ ಚಲಿಸುವವರಿಗೆ ರಕ್ತ ತಪಾಸಣೆ
    – ನಗರದ ಸುತ್ತ ನಾಕಾಬಂದಿ, ಹೊರಗೆ ತೆರಳದಂತೆ ಕ್ರಮ

    ಬೆಂಗಳೂರು: ರಾತ್ರಿ ಕರ್ಫ್ಯೂ ವಿವಾದದ ಬಳಿಕ ಇದೀಗ ಪೊಲೀಸರು ಎಚ್ಚೆತ್ತುಕೊಂಡಿದ್ದು, ಹೊಸ ವರ್ಷದ ಅಂಗವಾಗಿ ಅನಗತ್ಯ ತಿರುಗಾಟಕ್ಕೆ ಬ್ರೇಕ್ ಹಾಕಲು ಸಿದ್ಧತೆ ಮಾಡಿಕೊಂಡಿದ್ದಾರೆ. ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದ್ದು, ಡಿ.31ರ ರಾತ್ರಿ 8 ಗಂಟೆಯಿಂದಲೇ ಆಯ್ದ ರಸ್ತೆಗಳಲ್ಲಿ ವಾಹನ ಓಡಾಟ ನಿರ್ಬಂಧಿಸಲಾಗುತ್ತಿದೆ.

    ಹೊಸ ವರ್ಷದ ಆಚರಣೆ ಅಂಗವಾಗಿ ವಿವಿಧ ಕ್ರಮ ಕೈಗೊಂಡಿರುವ ಕುರಿತು ಸಂಚಾರಿ ಪೊಲೀಸ್ ಜಂಟಿ ಆಯುಕ್ತ ರವಿಕಾಂತೇಗೌಡ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಹೊಸ ವರ್ಷಕ್ಕೆ ಸಂಚಾರಿ ನಿಯಮ ಹಾಗೂ ಮಾರ್ಗಸೂಚಿಗಳ ಕುರಿತು ವಿವರಿಸಿದ್ದಾರೆ. ಹೊಸ ವರ್ಷಾಚರಣೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಬೆಂಗಳೂರಿನಲ್ಲಿ ವಿಶೇಷ ಬಂದೋಬಸ್ತ್ ಗೆ ತೀರ್ಮಾನಿಸಲಾಗಿದೆ. ಕಳೆದ ವರ್ಷ ಕೇಂದ್ರ, ವಾಣಿಜ್ಯ ವಲಯಗಳಲ್ಲಿ ಜನಸಂದಣಿಗೆ ಅವಕಾಶ ಇರುತ್ತಿತ್ತು. ಈ ಬಾರಿ ಎಲ್ಲಿಯೂ ಹೊರಗಡೆ ಹಾಗೂ ರಸ್ತೆಯ ಮೇಲೆ ಆಚರಣೆಗೆ ಅವಕಾಶವಿಲ್ಲ ಎಂದು ಮಾಹಿತಿ ನೀಡಿದರು.

    ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಮ್ಯೂಸಿಯಂ ರಸ್ತೆ, ಚರ್ಚ್ ಸ್ಟ್ರೀಟ್, ರೆಸ್ಟ್ ಹೌಸ್ ರಸ್ತೆಯಲ್ಲಿ ನಾಳೆ ರಾತ್ರಿ ಎಂಟು ಗಂಟೆಯಿಂದ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ರಾತ್ರಿ ಎಂಟು ಗಂಟೆಯ ಬಳಿಕ ಈ ರಸ್ತೆಯಲ್ಲಿ ವಾಹನಗಳಿಗೆ ಅವಕಾಶವಿಲ್ಲ. ಹೋಟೆಲ್‍ಗಳು ನೀಡಿರುವ ಪಾಸ್, ಟಿಕೆಟ್ ಇದ್ದರೆ ಮಾತ್ರ ವಾಹನ ಓಡಾಟಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

    ಮೇಲ್ಸೇತುವೆಗಳಲ್ಲಿ ಡ್ರ್ಯಾಗ್ ರೇಸ್, ವ್ಹೀಲಿಂಗ್ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ರಾತ್ರಿ 10 ಗಂಟೆಯ ನಂತರ ಎಲ್ಲ ಫ್ಲೈ ಓವರ್‍ಗಳನ್ನು ಬಂದ್ ಮಾಡಲಾಗುವುದು. ವಿಮಾನ ನಿಲ್ದಾಣ ರಸ್ತೆಯ ಎಲಿವೆಟೆಡ್ ಫ್ಲೈ ಓವರ್ ಸಹ ಬಂದ್ ಮಾಡಲಾಗುವುದು. ಮಾತ್ರವಲ್ಲದೆ ಹಲವಾರು ಮಾರ್ಗ ಬದಲಾವಣೆಗಳನ್ನು ಸಹ ಮಾಡಲಾಗಿದೆ ಎಂದರು.

    15 ಕಡೆ ವಾಹನ ನಿಲುಗಡೆಗೆ ನಿಷೇಧ ಹೇರಲಾಗಿದೆ. ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಇನ್ಫೆಂಟ್ರಿ ರಸ್ತೆ, ಇಂದಿರಾನಗರ 100 ಫೀಟ್ ಸೇರಿದಂತೆ 15 ಕಡೆ ವಾಹನ ಪಾರ್ಕಿಂಗ್ ನಿಷೇಧಿಸಲಾಗಿದೆ. 668 ಕಡೆಗಳ ರಸ್ತೆಗಳಲ್ಲಿ ಸಂಚಾರಿ ಪೊಲೀಸರನ್ನು ನಿಯೋಜಿಸಲಾಗಿದೆ. ನೈಸ್ ರಸ್ತೆಯ ಮೇಲೂ ನಿಗಾ ವಹಿಸಲಾಗಿದೆ. 2,600 ಟ್ರಾಫಿಕ್ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

    ನಗರದ ಹೊರಗಡೆ ತೆರಳುವ ಎಲ್ಲ ಮಾರ್ಗಗಳಲ್ಲಿ ನಾಕಾಬಂದಿ ಹಾಕಲಾಗುವುದು. ಎರಡ್ಮೂರು ಬಾರಿ ಓಡಾಡಿದರೆ ರಿಜಿಸ್ಟರ್ ನಲ್ಲಿ ಎಂಟ್ರಿ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ ಎಂದರು.

    191 ಚೆಕ್ ಪಾಯಿಂಟ್ ಗಳಲ್ಲಿ ಪೊಲೀಸಲು ವಾಹನ ತಪಾಸಣೆ ಮಾಡಲಿದ್ದಾರೆ. ಮದ್ಯ ಸೇವನೆ ಮಾಡಿ ತೆರಳುವವರ ಮೇಲೆ ನಿಗಾ ವಹಿಸಲಾಗುತ್ತದೆ. ಈ ಬಗ್ಗೆ ಹೋಟೆಲ್ ಗಳ ಮಾಲೀಕರ ಜೊತೆ ಮಾತುಕತೆ ನಡೆಸಲಾಗಿದೆ. ಯಾರಾದರೂ ಚಾಲಕರು ಮದ್ಯ ಸೇವನೆ ಮಾಡಿದರೆ ಮೊದಲಿಗೆ ಅವರಿಗೆ ತಿಳಿಸಲಾಗುತ್ತೆ. ಪಬ್ ಬಾರ್ ನವರು ಬೇರೆ ವ್ಯವಸ್ಥೆ ಮಾಡೋದಕ್ಕೆ ತಯಾರಿದ್ದಾರೆ. ಇದನ್ನು ಹೊರತುಪಡಿಸಿ ಓಲಾ ಉಬರ್ ವ್ಯವಸ್ಥೆ ಮಾಡಿಕೊಳ್ಳಬಹುದು ಎಂದರು.

    191 ಕಡೆ ಪೊಲೀಸ್ ಪಿಕ್ ಅಪ್ ಪಾಯಿಂಟ್ ಮಾಡಲಾಗಿದೆ. ಕುಡಿದವರನ್ನು ಪಿಕ್ ಮಾಡಿಕೊಂಡು ರಕ್ತ ಪರೀಕ್ಷೆಗೆ ಕರೆದೊಯ್ಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೋವಿಡ್ ಇರುವುದರಿಂದ ಡಿಡಿ ಚೆಕ್ ಮಾಡುವುದಿಲ್ಲ. ಆದರೆ ಕುಡಿದು ವಾಹನ ಚಾಲನೆ ಮಾಡಿದರೆ ಕಾನೂನಿನ ಕ್ರಮ ಕೈಗೊಳ್ಳಲಾಗುವುದು. ಚಾಲನಾ ಪರವಾನಗಿಯನ್ನು ಸಹ ಮುಟ್ಟುಗೋಲು ಹಾಕಿಕೊಳ್ಳಲು ಶಿಫಾರಸ್ಸು ಮಾಡಲಾಗಿದೆ. ಸಿಆರ್‍ಪಿಸಿ ಅಡಿ ಕಾನೂನಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

    ಈ ಕುರಿತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸಹ ಟ್ವೀಟ್ ಮಾಡಿದ್ದು, ಚಾಲ್ತಿಯಲ್ಲಿರುವ ಕೊರೊನಾ ರೋಗದ ನಡುವೆ ರೊಪಾಂತರಗೊಂಡಿರುವ ಹೊಸ ವೈರಸ್ ವ್ಯಾಪಕವಾಗಿ ಹರಡುತ್ತಿರುವುದರಿಂದ ಮುಂಬರುವ ಹೊಸ ವರ್ಷದ ಸಂಭ್ರಮಾಚರಣೆಗೆ ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ಬೆಂಗಳೂರಿನಲ್ಲಿ ಡಿಸೆಂಬರ್ 31 ಸಂಜೆ 6 ರಿಂದ ಜನವರಿ 1 ಬೆಳಗ್ಗೆ 6 ರವರೆಗೆ ಸೆಕ್ಷನ್ 144 ಜಾರಿ ಮಾಡಲಾಗಿದೆ. ಸಾರ್ವಜನಿಕ ಸ್ಥಳಗಳಾದ ಮುಖ್ಯ ರಸ್ತೆ, ಪಾರ್ಕ್, ಪ್ಲೇಗ್ರೌಂಡ್‍ಗಳಲ್ಲಿ ಯಾವುದೇ ರೀತಿಯ ಗುಂಪುಗೂಡುವುದನ್ನು ನಿಷೇಧಿಸಲಾಗಿದೆ.

    ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಚರ್ಚ್‍ಸ್ಟ್ರೀಟ್, ಕೋರಮಂಗಲ, ಇಂದಿರಾ ನಗರಗಳನ್ನು ಸಂಚಾರ ನಿಷೇಧಿತ ವಲಯವೆಂದು ಪರಿಗಣಿಸಲಾಗಿದೆ. ಅದೇ ರೀತಿ ಅನವಶ್ಯಕ ಸಂಚಾರ, ಬೈಕ್ ಸುತ್ತಾಟ, ವ್ಹೀಲಿಂಗ್ ಮಾಡುವುದನ್ನು ನಿಷೇಧಿಸಲಾಗಿದೆ. ನಗರದ ಎಲ್ಲಾ ಫ್ಲೈಓವರ್‍ಗಳನ್ನು ಮುಚ್ಚಲಾಗಿರುತ್ತದೆ ಮತ್ತು ಕೆಲವೆಡೆ ಸಂಚಾರ ನಿಯಂತ್ರಣ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.

    ಮನೆಗಳಲ್ಲಿ, ಪ್ರೈವೇಟ್ ಕ್ಲಬ್, ರೆಸಿಡೆನ್ಯಿಯಲ್ ಕಾಂಪ್ಲೆಕ್ಸ್‍ಗಳಲ್ಲಿ ಸದಸ್ಯರು ಮಾತ್ರ ಆಚರಿಸಲು ಅವಕಾಶವಿದೆ. ಮುಂಚಿತವಾಗಿ ಬುಕ್ಕಿಂಗ್ ಮಾಡಿರುವ ಸದಸ್ಯರಿಗೆ ಮಾತ್ರ ಕ್ಲಬ್, ರೆಸ್ಟಾರೆಂಟ್‍ಗಳಿಗೆ ಪ್ರವೇಶವಿರುತ್ತದೆ ಎಂದಿದ್ದಾರೆ. ಈ ಆದೇಶಗಳನ್ನು ಉಲ್ಲಂಘಿಸಿದರೆ ದಂಡದ ಜೊತೆಗೆ, ಐಪಿಸಿ ಸೆಕ್ಷನ್ 188 ಹಾಗೂ ಎನ್‍ಡಿಎಮ್‍ಎ ಕಾಯ್ದೆಯಡಿ ಪ್ರಕರಣ ದಾಖಲಿಸುದಾಗಿ ಎಚ್ಚರಿಕೆ ನೀಡಿದ್ದಾರೆ.

  • ಬೆಂಗ್ಳೂರು ರಸ್ತೆಯಲ್ಲಿ ಪಾರ್ಟಿ ಇಲ್ಲ – ಪಬ್, ಕ್ಲಬ್, ಬಾರ್ ಎಲ್ಲ ಓಪನ್

    ಬೆಂಗ್ಳೂರು ರಸ್ತೆಯಲ್ಲಿ ಪಾರ್ಟಿ ಇಲ್ಲ – ಪಬ್, ಕ್ಲಬ್, ಬಾರ್ ಎಲ್ಲ ಓಪನ್

    – ಇಡೀ ರಾತ್ರಿ ಡ್ರಿಂಕ್ ಆ್ಯಂಡ್ ಡ್ರೈವ್ ಚೆಕ್ಕಿಂಗ್
    – ಶೇ.50ರಷ್ಟು ಗ್ರಾಹಕರಿಗೆ ಮಾತ್ರ ಅವಕಾಶ
    – ಡಿ.31ರ ಸಂಜೆಯಿಂದ 144 ಸೆಕ್ಷನ್ ಜಾರಿ

    ಬೆಂಗಳೂರು: ಕೊರೊನಾ ಹಿನ್ನೆಲೆ ಹೊಸ ವರ್ಷದ ಪಾರ್ಟಿಗೆ ನಿರ್ಬಂಧಗಳನ್ನು ಹೇರಲಾಗಿದ್ದು, ರಸ್ತೆ, ಹೊರ ಜಾಗಗಳಲ್ಲಿ ಯಾವುದೇ ರೀತಿಯ ಪಾರ್ಟಿ ಆಯೋಜಿಸುವಂತಿಲ್ಲ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂಥ್ ತಿಳಿಸಿದ್ದಾರೆ. ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಸೇರಿದಂತೆ ನ್ಯೂ ಇಯರ್ ಪಾರ್ಟಿ ನಡೆಯುತ್ತಿದ್ದ ಪ್ರಮುಖ ರಸ್ತೆಗಳಲ್ಲಿ ಪಾರ್ಟಿಗೆ ಅವಕಾಶವಿಲ್ಲ ಎಂದು ತಿಳಿಸಿದ್ದಾರೆ.

    ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಡಿಸೆಂಬರ್ 31 ರಂದು ರಾತ್ರಿ 144 ಸೆಕ್ಷನ್ ಜಾರಿಯಲ್ಲಿರುತ್ತದೆ. ರಸ್ತೆ, ಹೊರಜಾಗದಲ್ಲಿ ನ್ಯೂ ಇಯರ್ ಪಾರ್ಟಿ ಮಾಡುವಂತಿಲ್ಲ. ಖಾಸಗಿ ಜಾಗಗಳಲ್ಲಿ ಪಾರ್ಟಿ ಮಾಡಿಕೊಳ್ಳಬಹುದು. ಆದರೆ ಯಾವುದೇ ವಿಶೇಷ ಕಾರ್ಯಕ್ರಮಗಳಿಗೆ ಅವಕಾಶ ಇಲ್ಲ. ಪಬ್, ಬಾರ್, ಕ್ಲಬ್ ಗಳಲ್ಲಿ ಯಾವುದೇ ಸಂಗೀತ ಕಾರ್ಯಕ್ರಮ, ಡ್ಯಾನ್ಸ್, ಮ್ಯೂಸಿಕ್ ಇರುವುದಿಲ್ಲ. ಸಾಮಾನ್ಯವಾಗಿ ಅಳವಡಿಸುವ ಮ್ಯೂಸಿಕ್ ಹಾಕಿಕೊಳ್ಳಬಹುದು ಎಂದು ವಿವರಿಸಿದರು.

    ಪಬ್, ಬಾರ್, ಕ್ಲಬ್ ಗಳಲ್ಲಿ ಶೇ.50ರಷ್ಟು ಗ್ರಾಹಕರಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಎಂ.ಜಿ.ರಸ್ತೆ, ಕೋರಮಂಗಲ, ಇಂದಿರಾ ನಗರಗಳಲ್ಲಿ ಪ್ರವೇಶಕ್ಕೆ ಸಂಬಂಧಪಟ್ಟ ಹೋಟೆಲ್, ಪಬ್‍ನ ಪಾಸ್ ಅಥವಾ ಕೂಪನ್ ಹೊಂದಿರಬೇಕು. ಇಲ್ಲವಾದಲ್ಲಿ ಈ ಪ್ರದೇಶಗಳಲ್ಲಿ ಅನವಶ್ಯಕವಾಗಿ ಸಂಚರಿಸುವವರಿಗೆ ಅವಕಾಶವಿಲ್ಲ. ಮಾರ್ಗಸೂಚಿ ಉಲ್ಲಂಘನೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕೊರೊನಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಯಾವುದೇ ರೀತಿಯ ಉಲ್ಲಂಘನೆ ಕಂಡುಬಂದರೆ ಸಾರ್ವಜನಿಕರು ದೂರು ನೀಡಬಹುದು ಎಂದು ಕಮಲ್ ಪಂಥ್ ತಿಳಿಸಿದರು.

    ಡಿಸೆಂಬರ್ 31ರಂದು ಅನವಶ್ಯಕವಾಗಿ ಯಾರೂ ಹೊರಗಡೆ ಓಡಾಡಬಾರದು. ಆ ರೀತಿ ತಿರುಗಾಡೋದು ಕಂಡು ಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ವ್ಹೀಲಿಂಗ್ ಮಾಡಿದರೆ ವಾಹನ ಜಪ್ತಿ ಮಾಡಲಾಗುವುದು. ಡಿಸೆಂಬರ್ 31ರ ಸಂಜೆ 6 ಗಂಟೆಯಿಂದ ಜನವರಿ 1 ಬೆಳಗ್ಗೆ 6 ಗಂಟೆಯವರೆಗೆ 144 ಸೆಕ್ಷನ್ ಜಾರಿಯಲ್ಲಿರುತ್ತದೆ.

    ಮೇಟ್ರೋ ಓಡಾಟದ ಬಗ್ಗೆ ಬಿಎಮ್‍ಆರ್‍ಸಿಎಲ್ ತಿರ್ಮಾನ ತೆಗೆದುಕೊಳ್ಳುತ್ತದೆ. ಆದರೆ ಇಡೀ ರಾತ್ರಿ ಡ್ರಿಂಕ್ ಆ್ಯಂಡ್ ಡ್ರೈವ್ ಚೆಕ್ಕಿಂಗ್ ಇರುತ್ತೆ. ಪಬ್ ಆ್ಯಂಡ್ ಬಾರ್‍ಗಳಿಗೆ ಯಾವುದೇ ಸಮಯ ಇರುವುದಿಲ್ಲ. ಈ ಹಿಂದಿನಂತೆ ಓಪನ್ ಇರುತ್ತವೆ. ಲೈಸೆನ್ಸ್‍ನಲ್ಲಿ ಎಷ್ಟು ಸಮಯದವರೆಗೆ ವ್ಯಾಪಾರ ಮಾಡಬಹುದು ಎಂದು ಅನುಮತಿ ಪಡೆದಿದ್ದಾರೋ ಅಲ್ಲಿಯವರೆಗೆ ಓಪನ್ ಮಾಡಬಹುದಾಗಿದೆ.

  • ಸಿಎಂ ಪೊಲೀಸ್ರನ್ನು ಮಾರುವೇಷದಲ್ಲಿ ಕಳಿಸಿ ಅನಾಹುತ ನಡೆದ್ರೆ ನಾವು ಹೊಣೆಯಲ್ಲ: ವಾಟಾಳ್

    ಸಿಎಂ ಪೊಲೀಸ್ರನ್ನು ಮಾರುವೇಷದಲ್ಲಿ ಕಳಿಸಿ ಅನಾಹುತ ನಡೆದ್ರೆ ನಾವು ಹೊಣೆಯಲ್ಲ: ವಾಟಾಳ್

    – ಕಮಿಷನರ್ ಕಮಲ್ ಪಂಥ್‍ಗೂ ತಿರುಗೇಟು

    ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪೊಲೀಸರನ್ನು ಮಾರುವೇಷದಲ್ಲಿ ಕಳುಹಿಸಿ ಏನಾದರೂ ಅನಾಹಿತ ಸಂಭವಿಸಿದರೆ ನಾವು ಹೊಣೆಯಲ್ಲ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಕಿಡಿಕಾರಿದ್ದಾರೆ.

    ನಗರದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ನಾಳೆ ನಾವೇನು ಚೇಷ್ಟೆ ಮಾಡಲ್ಲ. ಯಡಿಯೂರಪ್ಪ ಪೊಲೀಸರನ್ನು ಮಾರು ವೇಷದಲ್ಲಿ ಕಳಿಸಿ ಏನಾದ್ರೂ ಅನಾಹುತ ಮಾಡಿದ್ರೆ ನಾವು ಜವಾಬ್ದಾರಿಯಲ್ಲ. ನಮ್ಮ ಬಗ್ಗೆ ಹಗುರವಾಗಿ ಮಾತಾನಾಡಬೇಡಿ ಎಂದು ಹೇಳುವ ಮೂಲಕ ಪೊಲೀಸ್ ಕಮೀಷನರ್ ಗೆ ಖಡಕ್ ತಿರುಗೇಟು ಕೊಟ್ಟಿದ್ದಾರೆ.

    ನಾವ್ ಯಾಕೆ ಅನುಮತಿ ಕೇಳಬೇಕು. ಇತಿಹಾಸದಲ್ಲಿ ಕರ್ನಾಟಕ ಬಂದ್ ಗೆ ನಾವು ಪೊಲೀಸರ ಅನುಮತಿ ಕೇಳಿಲ್ಲ ಕೇಳಲ್ಲ. ನಾಳೆ ರ್ಯಾಲಿ ಇರುತ್ತೆ, ನಾವ್ಯಾರಿಗೂ ಜಗ್ಗಲ್ಲ. ಗುಂಡೇಟು ಹೊಡೀತಾರಾ ಹೊಡಿಲಿ ನೋಡೋಣ ಎಂದು ವಾಟಾಳ್ ಸವಾಲೆಸೆದಿದ್ದಾರೆ.

    ಇಂದು ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ್ದ ಸಿಎಂ, ಬಂದ್ ಮಾಡದಂತೆ ಮನವಿ ಮಾಡಿಕೊಂಡರು. ಬಂದ್ ಮಾಡಿ ಜನರಿಗೆ ತೊಂದರೆ ಕೊಡುವ ಕೆಲಸ ಮಾಡಬೇಡಿ. ಬಂದ್ ಮಾಡುವ ಅಗತ್ಯ ಇಲ್ಲ. ಎಲ್ಲ ಸಮಾಜವನ್ನೂ ಒಟ್ಟಾಗಿ ತೆಗೆದುಕೊಂಡು ಹೋಗುವ ಕೆಲಸ ಮಾಡುತ್ತೇವೆ. ಕನ್ನಡಕ್ಕೆ ಏನೇನೋ ಆದ್ಯತೆ ಕೊಡಬೇಕೋ, ಇನ್ನೂ ಹೆಚ್ಚಿನದಾಗಿ ಏನೇನೋ ಕೊಡಬೇಕೋ ಅದನ್ನು ಕೊಡಲು ನಾನು ಸಿದ್ಧನಿದ್ದೇನೆ. ಕನ್ನಡದ ಮುಖಂಡರು ಏನು ಹೇಳ್ತಾರೋ ಅದನ್ನು ನಾನು ಮಾಡಲು ಸಿದ್ಧನಿದ್ದೇನೆ. ದಯಮಾಡಿ ಬಂದ್ ಗೆ ಎಲ್ಲಿಯೂ ಕೂಡ ಅವಕಾಶ ಇಲ್ಲ. ಯಾರು ಕೂಡ ಬಂದ್ ಮಾಡಬೇಡಿ. ದಯವಿಟ್ಟು ಇದಕ್ಕೆ ಎಲ್ಲರು ಸಹಕರಿಸಿಬೇಕು ಎಂದು ಸಿಎಂ ಮತ್ತೊಮ್ಮೆ ಮನವಿ ಮಾಡಿಕೊಂಡಿದ್ದಾರೆ. ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪೊಲೀಸ್ ಕಮಿಷನರ್ ಕಮಲ್ ಪಂಥ್, ಕನ್ನಡಪರ ಹೋರಾಟಗಾರರಿಗೆ ಎಚ್ಚರಿಕೆ ನಿಡಿದರು.

  • ಮತ್ತೊಂದು ಡ್ರಗ್ಸ್ ಜಾಲದ ಮೇಲೆ ಸಿಸಿಬಿ ದಾಳಿ – 20 ಲಕ್ಷ ಮೌಲ್ಯದ ಡ್ರಗ್ಸ್ ವಶ

    ಮತ್ತೊಂದು ಡ್ರಗ್ಸ್ ಜಾಲದ ಮೇಲೆ ಸಿಸಿಬಿ ದಾಳಿ – 20 ಲಕ್ಷ ಮೌಲ್ಯದ ಡ್ರಗ್ಸ್ ವಶ

    – ಸರಗಳ್ಳತನ ಪ್ರಕರಣದ ಕಾರ್ಯಾಚರಣೆ
    – ಒಂದು ಮುಕ್ಕಾಲು ಕೆಜಿ ಚಿನ್ನ ವಶ

    ಬೆಂಗಳೂರು: ಸಿಸಿಬಿ ಪೊಲೀಸರು ಎರಡು ಕಾರ್ಯಾಚರಣೆ ನಡೆಸಿದ್ದು, ಮೊತ್ತೊಂದು ಡ್ರಗ್ಸ್ ದಂಧೆ ಜಾಲವನ್ನು ಪತ್ತೆ ಮಾಡಿದ್ದಾರೆ ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದರು.

    ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕಮಿಷನರ್ ಕಮಲ್ ಪಂತ್, ಸಿಸಿಬಿ ಪೊಲೀಸರು ಕೆ.ಆರ್.ಪುರಂ ವ್ಯಾಪ್ತಿಯಲ್ಲಿ ಮತ್ತೊಂದು ಡ್ರಗ್ಸ್ ಜಾಲದ ಮೇಲೆ ದಾಳಿ ಮಾಡಿದ್ದಾರೆ. ಕಾರ್ಯಾಚರಣೆ ವೇಳೆ 2 ಕೆಜಿ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಇದರ ಬೆಲೆ 20 ಲಕ್ಷಕ್ಕೂ ಅಧಿಕ ಬೆಲೆ ಇರಬಹುದು ಎಂದರು.

    ನಮಗೆ ಇರುವ ಮಾಹಿತಿಯ ಪ್ರಕಾರ ಡ್ರಗ್ಸ್ ಕಾಲೇಜುಗಳಲ್ಲೂ ಕಂಡು ಬರುತ್ತಿದೆ. ಇದರಲ್ಲಿ ಭಾಗಿಯಾಗಿದ್ದ ಮೂವರನ್ನು ಬಂಧಿಸಲಾಗಿದೆ. ಮೂವರನ್ನು ಕೇಳರ ಮೂಲದವರು ಎಂದು ಗುರುತಿಸಲಾಗಿದೆ. ಲಂಡನ್‍ನಲ್ಲಿ ಓದಿ ಬಂದಿದ್ದ ಯುವಕ ಡ್ರಗ್ಸ್ ದಂಧೆ ಮಾಡುತ್ತಿದ್ದನು. ಮನೆಯೊಂದರ ಮೇಲೆ ದಾಳಿ ನಡೆಸಿ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ ಎಂದು ಕಮಿಷನರ್ ಹೇಳಿದರು.

    ಕಾಲೇಜು, ಶಾಲೆಗಳಲ್ಲಿ ಡ್ರಗ್ಸ್ ಸೇವನೆ ಮಾಡುತ್ತಿರುವ ಬಗ್ಗೆ ದೂರು ಕೇಳಿ ಬರುತ್ತಿವೆ. ಹೀಗಾಗಿ ಕಾಲೇಜು, ಶಾಲಾ ಆಡಳಿತ ಮಂಡಳಿ ನಮಗೆ ಸಹಕರಿಸಬೇಕು. ಡ್ರಗ್ಸ್ ದಂಧೆಯನ್ನು ಕಡಿವಾಣ ಹಾಕಲು ಪ್ರಯತ್ನ ಮಾಡುತ್ತಿದ್ದೇವೆ. ಆಡಳಿತ ಮಂಡಳಿ ನಮ್ಮ ಜೊತೆ ಕೈ ಜೋಡಿಸಬೇಕು. ಯುವಕರು ಬೇರೆ ದೇಶದಿಂದ ಬಂದು ಡ್ರಗ್ಸ್ ಕೊಡುತ್ತಾರ ಅಥವಾ ಒಳಗಿನವರೇ ಕೊಡುತ್ತಾರ ಎಂಬ ಮಾಹಿತಿ ಗೊತ್ತಾದರೆ ಕೂಡಲೇ ನಮ್ಮ ಬಳಿ ಮಾಹಿತಿಯನ್ನು ಶೇರ್ ಮಾಡಿಕೊಳ್ಳಬೇಕು ಎಂದು ಕಮಲ್ ಪಂತ್ ಮನವಿ ಮಾಡಿಕೊಂಡರು.

    ಸಿಸಿಬಿ ಪೊಲೀಸರು ಮತ್ತೊಂದು ಕಾರ್ಯಾಚರಣೆ ಮಾಡಿದ್ದು, 1 ಕೆಜಿ 700 ಗ್ರಾಂ ಬಂಗಾರವನ್ನು ವಶಪಡಿಸಿಕೊಂಡಿದ್ದಾರೆ. 2017-2018ರಲ್ಲಿ ನಡೆದಿದ್ದ 37 ಸರಗಳ್ಳತನ ಕೇಸನ್ನು ಸಿಸಿಬಿ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಒಂದು ವಾರದೊಳಗೆ ಚಿನ್ನ ಕಳೆದುಕೊಂಡಿದವರಿಗೆ ಅವರ ಬಂಗಾರವನ್ನು ವಾಪಸ್ ಕೊಡಲಾಗುತ್ತದೆ. ಸಿಸಿಬಿ ಪೊಲೀಸರು ಒಳ್ಳೆಯ ಕಾರ್ಯಾಚರಣೆ ಮಾಡಿದ್ದಾರೆ ಎಂದು ಅವರನ್ನು ಕಮಿಷನರ್ ಕಮಲ್ ಪಂತ್ ಅಭಿನಂದಿಸಿದರು.