Tag: Kamal Pant

  • ಬೆಳ್ಳಂಬೆಳಗ್ಗೆ ಸರಗಳ್ಳರನ್ನು ಹಿಡಿದ ಪೊಲೀಸರ ತಂಡಕ್ಕೆ 25 ಸಾವಿರ ಬಹುಮಾನ

    ಬೆಳ್ಳಂಬೆಳಗ್ಗೆ ಸರಗಳ್ಳರನ್ನು ಹಿಡಿದ ಪೊಲೀಸರ ತಂಡಕ್ಕೆ 25 ಸಾವಿರ ಬಹುಮಾನ

    ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಇಸ್ಕಾನ್ ದೇವಸ್ಥಾನದ ಬಳಿ ಸರಗಳ್ಳರ ಕಾಲಿಗೆ ಗುಂಡೇಟು ನೀಡಿ ವಶಕ್ಕೆ ಪಡೆದ ಪೊಲೀಸರ ತಂಡವನ್ನು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಶ್ಲಾಘಿಸಿದ್ದಾರೆ. ಅಲ್ಲದೆ ತಂಡಕ್ಕೆ ನಗದು ಬಹುಮಾನವನ್ನು ನೀಡಲಾಗಿದೆ.

    ಈ ಸಂಬಂಧ ಟ್ವೀಟ್ ಮಾಡಿರುವ ಕಮಲ್ ಪಂತ್, ಮುಂಜಾನೆಯ ಕಾರ್ಯಾಚರಣೆಯಲ್ಲಿ ಮಹಾಲಕ್ಷ್ಮಿ ಲೇ ಔಟ್ ಬಿಸಿಪಿ ಸರಹದ್ದಿನಲ್ಲಿ ಸರಗಳ್ಳತನ ಪ್ರಕರಣಗಳಲ್ಲಿನ ಇಬ್ಬರು ಆರೋಪಿಗಳು ತಪ್ಪಿಸಿಕೊಳ್ಳಲೆತ್ನಿಸಿದಾಗ, ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಪ್ರಯತ್ನಿಸಿದ್ದು, ತಮ್ಮ ಆತ್ಮರಕ್ಷಣೆಗೋಸ್ಕರ ರಾಜಾಜಿನಗರ ಬಿಸಿಪಿ ತಂಡವು ಕಾನೂನು ಕ್ರಮ ಕೈಗೊಳ್ಳುವಲ್ಲಿ ಯಶಸ್ವಿಯಾಗಿದೆ. ತಂಡಕ್ಕೆ 25,000 ಬಹುಮಾನ ನೀಡಲಾಗಿದೆ ಎಂದು ಬರೆದುಕೊಂಡಿದ್ದಾರೆ.

    ಘಟನೆ ಏನು..?
    ವಾಕಿಂಗ್ ಮಾಡುತ್ತಿದ್ದ ವ್ಯಕ್ತಿಯೊಬ್ಬರಿಂದ ಇಬ್ಬರು ಕಳ್ಳರು ಸರಗಳವು ಮಾಡಿ ಎಸ್ಕೇಪ್ ಆಗುತ್ತಿದ್ದರು. ಈ ವಿಚಾರ ತಿಳಿದ ಪೊಲೀಸರು ಆರೋಪಿಗಳ ಬೈಕ್ ಚೇಸ್ ಮಾಡಿದ್ದಾರೆ. ಇಸ್ಕಾನ್ ದೇವಸ್ಥಾನದ ಬಳಿ ಆರೋಪಿಗಳು ಪೊಲೀಸರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಈ ವೇಳೆ ಆತ್ಮರಕ್ಷಣೆಗಾಗಿ ರಾಜಾಜಿನಗರ ಇನ್ಸ್‍ಪೆಕ್ಟರ್ ವೆಂಕಟೇಶ್, ಇಬ್ಬರು ಸರಗಳ್ಳರ ಕಾಲಿಗೆ ಗುಂಡು ಹೊಡೆದು ವಶಕ್ಕೆ ಪಡೆದಿದ್ದಾರೆ.

  • ಪೊಲೀಸ್ ಇಲಾಖೆ ನ್ಯಾಯ ಕೊಡ್ಬೇಕು – ಕಮಲ್ ಪಂತ್ ಹೇಳಿಕೆಗೆ ಇಂದ್ರಜಿತ್ ಪ್ರತಿಕ್ರಿಯೆ

    ಪೊಲೀಸ್ ಇಲಾಖೆ ನ್ಯಾಯ ಕೊಡ್ಬೇಕು – ಕಮಲ್ ಪಂತ್ ಹೇಳಿಕೆಗೆ ಇಂದ್ರಜಿತ್ ಪ್ರತಿಕ್ರಿಯೆ

    ಬೆಂಗಳೂರು: ಪೊಲೀಸ್ ಇಲಾಖೆ ನ್ಯಾಯ ಕೊಡಬೇಕು. ಚಿತ್ರರಂಗ ಸ್ವಚ್ಛ ಆಗಬೇಕು ಅನ್ನೋದು ನನ್ನ ಉದ್ದೇಶ ಎಂದು ಪೊಲೀಸ್ ಕಮಿಷನರ್ ಕಮಲ್ ಪಂತ್ ಹೇಳಿಕೆಗೆ ಇಂದ್ರಜಿತ್ ಲಂಕೇಶ್ ಪ್ರತಿಕ್ರಿಯೆ ನೀಡಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಇಂದ್ರಜಿತ್ ಲಂಕೇಶ್, ಪೊಲೀಸ್ ಕಮಿಷನರ್ ಅವರ ತನಿಖೆಗೆ ಸಹಕರಿಸುತ್ತೀನಿ, ಭದ್ರತೆ ಕೊಡುತ್ತೀನಿ ಅಂತ ಹೇಳಿರೋದು ಸಂತೋಷ. ಆದರೆ ಪೊಲೀಸ್ ಇಲಾಖೆ ಚಿತ್ರರಂಗಕ್ಕೆ ನ್ಯಾಯ ಕೊಡಬೇಕು ಎಂದು ಕಮಲ್ ಪಂತ್ ಅವರ ಹೇಳಿಕೆಯನ್ನು ಸ್ವಾಗತಿಸಿದ್ದಾರೆ. ಇದನ್ನೂ ಓದಿ: ಎನ್‍ಸಿಬಿ ಸಹಕಾರ ಕೇಳಿದ್ರೆ ನಾವು ಪೂರ್ಣ ಪ್ರಮಾಣದಲ್ಲಿ ಸಹಕರಿಸ್ತೇವೆ: ಕಮಲ್ ಪಂತ್

    ಅಲ್ಲದೇ ಚಿತ್ರರಂಗ ಸ್ವಚ್ಛ ಆಗಬೇಕು ಅನ್ನೋದು ನನ್ನ ಉದ್ದೇಶ. ಚಿತ್ರರಂಗಕ್ಕೆ ನನ್ನಿಂದ ಯಾವುದೇ ಧಕ್ಕೆ ಆಗಲ್ಲ. ಚಿತ್ರರಂಗದ ಮಂದಿ ಡ್ರಗ್ಸ್ ಮಾಫಿಯಾದಲ್ಲಿ ಸಿಲುಕಿದೆ ಅಂದಾಗ ಫಿಲಂ ಚೇಂಬರ್ ಮಾತನಾಡಬೇಕಿತ್ತು. ಈ ಹಿಂದೆ ಹನಿಟ್ರ್ಯಾಪ್ ಆರೋಪ ಕೇಳಿ ಬಂದಿತ್ತು. ಆಗಲೂ ಫಿಲಂ ಚೇಂಬರ್ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿದರು.

    ಕಮಲ್ ಪಂತ್ ಹೇಳಿಕೆ?
    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಕಮಲ್ ಪಂತ್ ಅವರು, ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ಮಾಫಿಯಾದ ಬಗ್ಗೆ ಎನ್‍ಸಿಬಿ ತನಿಖೆ ನಡೆಸುತ್ತಿದೆ. ಎನ್‍ಸಿಬಿ ಅಧಿಕಾರಿಗಳು ಹೊರಗಡೆಯಿಂದ ಬರುತ್ತಿದ್ದಾರೆ ಎಂದು ನಮಗೆ ಗೊತ್ತಾಗಿದೆ. ಒಂದು ವೇಳೆ ಎನ್‍ಸಿಬಿ ತಂಡ ನಮ್ಮ ಸಹಕಾರ, ಬೆಂಬಲವನ್ನು ಕೇಳಿದರೆ ನಾವು ಪೂರ್ಣ ಪ್ರಮಾಣದಲ್ಲಿ ಅವರಿಗೆ ಸಹಕಾರ ಕೊಡುತ್ತೇವೆ ಎಂದಿದ್ದರು.

     

    ಇಂದ್ರಜಿತ್ ಲಂಕೇಶ್ ಹೇಳಿಕೆ ಬಗ್ಗೆ ನಮ್ಮ ಪೊಲೀಸರು ಗಮನಿಸಿದ್ದಾರೆ. ಸುಮೋಟೋ ತೆಗೆದುಕೊಳ್ಳುವ ಬಗ್ಗೆ ಚರ್ಚೆ ನಡೆದಿದೆ. ರಕ್ಷಣೆ ಬೇಕು ಅಂದರೆ ಕೊಡೋಣ. ಬಳಿಕ ಸಮನ್ಸ್ ಕೊಡುವುದರ ಬಗ್ಗೆ ಚಿಂತನೆ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಹೇಳಿದ್ದರು.

  • ಎನ್‍ಸಿಬಿ ಸಹಕಾರ ಕೇಳಿದ್ರೆ ನಾವು ಪೂರ್ಣ ಪ್ರಮಾಣದಲ್ಲಿ ಸಹಕರಿಸ್ತೇವೆ: ಕಮಲ್ ಪಂತ್

    ಎನ್‍ಸಿಬಿ ಸಹಕಾರ ಕೇಳಿದ್ರೆ ನಾವು ಪೂರ್ಣ ಪ್ರಮಾಣದಲ್ಲಿ ಸಹಕರಿಸ್ತೇವೆ: ಕಮಲ್ ಪಂತ್

    ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ಮಾಫಿಯಾದ ಬಗ್ಗೆ ಎನ್‍ಸಿಬಿ (Narcotics Control Bureau) ತನಿಖೆ ನಡೆಸುತ್ತಿದೆ. ಅವರು ನಮ್ಮ ಸಹಕಾರ ಕೇಳಿದರೆ ನಾವು ಸಹಾಯ ಮಾಡುತ್ತೇವೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ. ಇದನ್ನೂ ಓದಿ: ಈ ಹಿಂದೆ ತೀರಿಕೊಂಡ ನಟನ ಪೋಸ್ಟ್ ಮಾರ್ಟಂ ಆಗಿಲ್ಲ ಏಕೆ?: ಇಂದ್ರಜಿತ್

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ಮಾಫಿಯಾದ ಬಗ್ಗೆ ಎನ್‍ಸಿಬಿ ತನಿಖೆ ನಡೆಸುತ್ತಿದೆ. ಎನ್‍ಸಿಬಿ ಅಧಿಕಾರಿಗಳು ಹೊರಗಡೆಯಿಂದ ಬರುತ್ತಿದ್ದಾರೆ ಎಂದು ನಮಗೆ ಗೊತ್ತಾಗಿದೆ. ಒಂದು ವೇಳೆ ಎನ್‍ಸಿಬಿ ತಂಡ ನಮ್ಮ ಸಹಕಾರ, ಬೆಂಬಲವನ್ನು ಕೇಳಿದರೆ ನಾವು ಪೂರ್ಣ ಪ್ರಮಾಣದಲ್ಲಿ ಅವರಿಗೆ ಸಹಕಾರ ಕೊಡುತ್ತೇವೆ ಎಂದರು.

    ಹೊರಗಡೆಯಿಂದ ಬರುತ್ತಿರುವ ಅಧಿಕಾರಿಗಳು ನಮ್ಮ ಬಳಿ ಬರುವ ನಿರೀಕ್ಷೆ ಇದೆ. ಅವರಿಗೆ ಅನುಕೂಲವಾದಾಗ ಪ್ರಕರಣವನ್ನು ನಮಗೆ ನೀಡಿದರೆ ನಾವು ಖಂಡಿತ ತನಿಖೆಯನ್ನು ಮುಂದುವರಿಸಿಕೊಂಡು ಹೋಗುತ್ತೇವೆ. ಸಹಕಾರ ನೀಡಲು ಪೊಲೀಸರು ಬದ್ಧರಾಗಿದ್ದೇವೆ. ಎನ್‍ಸಿಬಿ ಅಧಿಕಾರಿಯಿಂದ ನಮಗೆ ಇಲ್ಲಿವರೆಗೂ ಯಾವುದೇ ಮಾಹಿತಿ ತಿಳಿಸಿಲ್ಲ. ಎನ್‍ಸಿಬಿ ಮಾಹಿತಿ ಶೇರ್ ಮಾಡುತ್ತಾರೆ. ನಂತರ ನಾವು ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

    ಇಂದ್ರಜಿತ್ ಲಂಕೇಶ್ ಹೇಳಿಕೆ ಬಗ್ಗೆ ನಮ್ಮ ಪೊಲೀಸರು ಗಮನಿಸಿದ್ದಾರೆ. ಸುಮೋಟೋ ತೆಗೆದುಕೊಳ್ಳುವ ಬಗ್ಗೆ ಚರ್ಚೆ ನಡೆದಿದೆ. ರಕ್ಷಣೆ ಬೇಕು ಅಂದರೆ ಕೊಡೋಣ. ಬಳಿಕ ಸಮನ್ಸ್ ಕೊಡುವುದರ ಬಗ್ಗೆ ಚಿಂತನೆ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದರು.

    ಇಂದ್ರಜಿತ್ ಹೇಳಿದ್ದೇನು?
    ಹಲವಾರು ರೇವ್ ಪಾರ್ಟಿಗಳು ನಡೆಯುತ್ತಾ ಇರುತ್ತವೆ. ಯುವ ನಟ ಹಾಗೂ ನಟರು ಇದರಲ್ಲಿ ಸಿಲುಕಿದ್ದಾರೆ. ನನಗೆ ಪರಿಚಯ ಇರುವಂತಹ ಹಾಗೂ ಈಗಾಗಲೇ ಖ್ಯಾತಿಯಲ್ಲಿರುವವವರು ಯಾರೂ ಮಾಡಲ್ಲ ಅಂತ ನಾನು ಖಂಡಿತವಾಗಿ ಹೇಳಬಹುದು. ಆದರೆ ಸಡನ್ ಆಗಿ ಪ್ರಚಾರ ಪಡೆಯುತ್ತಿರುವಂತಹ ಯುವ ನಟ-ನಟಿಯರು ಪಾರ್ಟಿ ಹಾಗೂ ಈ ರೀತಿಗಳಲ್ಲಿ ತಮ್ಮನ್ನು ತಾವು ತೊಡಿಸಿಕೊಳ್ಳುತ್ತಾರೆ ಅಂತ ನಾನು ಕೇಳಿದ್ದೀನಿ. ಹಲವಾರು ಘಟನೆಗಳು ಕೂಡ ನನಗೆ ತಿಳಿದಿದೆ. ಬಾಲಿವುಡ್ ನಟಿ ಕಂಗನಾ ರಣಾವತ್ ಹೇಳಿದಂತೆ ನನಗೂ ರಕ್ಷಣೆ ಕೊಟ್ಟರೆ ನಾನೂ ಕೆಲವೊಂದು ವಿಚಾರಗಳನ್ನು ಬಹಿರಂಗಪಡಿಸಲು ಸಿದ್ಧನಿದ್ದೇನೆ ಎಂದು ತಿಳಿಸಿದ್ದರು.

  • ದಕ್ಷ ಅಧಿಕಾರಿಯನ್ನು ಏಜೆಂಟ್ ಎಂದಿರೋದನ್ನ ಖಂಡಿಸ್ತೀನಿ: ಡಿಕೆಶಿಗೆ ಬೊಮ್ಮಾಯಿ ತಿರುಗೇಟು

    ದಕ್ಷ ಅಧಿಕಾರಿಯನ್ನು ಏಜೆಂಟ್ ಎಂದಿರೋದನ್ನ ಖಂಡಿಸ್ತೀನಿ: ಡಿಕೆಶಿಗೆ ಬೊಮ್ಮಾಯಿ ತಿರುಗೇಟು

    ಬೆಂಗಳೂರು: ದಕ್ಷ ಪೊಲೀಸ್ ಅಧಿಕಾರಿ ಕಮಲ್ ಪಂಥ್ ಅವರನ್ನು ಡಿ.ಕೆ ಶಿವಕುಮಾರ್ ಅವರು ಏಜೆಂಟ್ ಎಂದಿರುವುದನ್ನು ಗೃಹ ಮಂತ್ರಿ ಬಸವರಾಜ್ ಬೊಮ್ಮಾಯಿ ಬಲವಾಗಿ ಖಂಡಿಸುತ್ತೇನೆ.

    ದೇವರಾಜ್ ಅರಸರ ಜನ್ಮದಿನದಂದೇ `ಬಿಜೆಪಿ ವಿರುದ್ಧ ಕಾಂಗ್ರೆಸ್ ಜನಧ್ವನಿ’ ಹೆಸರಲ್ಲಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಇಂದು ಪ್ರತಿಭಟನೆ ನಡೆಸಿದೆ. ಈ ವೇಳೆ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ ಸಂಬಂಧ ಮಾತನಾಡಿದ ಡಿಕೆಶಿ, ಮಿಸ್ಟರ್ ಪೊಲೀಸ್ ಕಮೀಷನರ್ ಬೆಂಗಳೂರಿನಲ್ಲಿ ನಡೆದ ಗಭೆಯಲ್ಲಿ ನೀವು ಬಿಜೆಪಿ ಏಜೆಂಟ್ ರೀತಿ ವರ್ತಿಸುತ್ತಿದ್ದೀರಿ ಎಂದು ಆರೋಪ ಮಾಡಿದ್ದರು. ಇದನ್ನೂ ಓದಿ: ಮಿಸ್ಟರ್ ಪೊಲೀಸ್ ಕಮೀಷನರ್ ಬೆಂಗ್ಳೂರು ಗಲಭೆಯಲ್ಲಿ ನೀವು ಬಿಜೆಪಿ ಏಜೆಂಟ್ ರೀತಿ ವರ್ತಿಸ್ತಿದ್ದೀರಿ: ಡಿಕೆಶಿ

    ಈಗ ಈ ವಿಚಾರದ ಬಗ್ಗೆ ಟ್ವೀಟ್ ಮಾಡಿರುವ ಬೊಮ್ಮಾಯಿ, ಡಿಕೆ ಶಿವಕುಮಾರ್ ಅವರು ದಕ್ಷ ಪೊಲೀಸ್ ಅಧಿಕಾರಿಯಾದ ಕಮಲ್ ಪಂಥ್ ಕುರಿತು ಏಜೆಂಟ್ ಎಂದು ನೀಡಿರುವ ಹೇಳಿಕೆಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ಇದು ಗಲಭೆಕೋರರನ್ನು ಪರೋಕ್ಷವಾಗಿ ರಕ್ಷಣೆ ಮಾಡುವ ಮತ್ತೊಂದು ತಂತ್ರವಾಗಿದೆ. ಇದು ಯಾವುದು ನಡೆಯುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನಾವು ಯಾವ ಅಮಾಯಕರನ್ನೂ ಅರೆಸ್ಟ್ ಮಾಡಿಲ್ಲ – ಕಾಂಗ್ರೆಸ್ ನಾಯಕರಿಗೆ ಕಮಿಷನರ್ ಕಮಲ್‍ಪಂತ್ ತಿರುಗೇಟು

    ಗಲಭೆಯ ವಿಡಿಯೋಗಳಲ್ಲಿ ಸ್ಪಷ್ಟವಾಗಿದ್ದು, ಗಲಭೆಕೋರರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಪೊಲೀಸ್ ಕಮಿಷನರ್ ಕೈಗೊಂಡ ಕ್ರಮವನ್ನು ರಾಜ್ಯದ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪೊಲೀಸರನ್ನು ಏಜೆಂಟರನ್ನಾಗಿ ನಡೆಸಿಕೊಳ್ಳುವುದು ಅವರ ಸಂಸ್ಕೃತಿ. ಪೋಲಿಸರ ನಿಷ್ಪಕ್ಷಪಾತವಾಗಿ ತನಿಖೆಯನ್ನು ಮಾಡುತ್ತಿದ್ದಾರೆ. ಇದರಲ್ಲಿ ಯಾರದ್ದೇ ಪ್ರಭಾವ ನಡೆಯುವುದಿಲ್ಲ ಎಂದು ಕೈ ನಾಯಕರಿಗೆ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.

  • ಕರ್ಫ್ಯೂ ತೆಗೆಯಿರಿ, ಒಂದು ವೇಳೆ ಅಲ್ಲಿ ಮತ್ತೆ ಏನಾದ್ರೂ ಆದರೆ ಅದಕ್ಕೆ ನಾವು ಜವಾಬ್ದಾರರಲ್ಲ

    ಕರ್ಫ್ಯೂ ತೆಗೆಯಿರಿ, ಒಂದು ವೇಳೆ ಅಲ್ಲಿ ಮತ್ತೆ ಏನಾದ್ರೂ ಆದರೆ ಅದಕ್ಕೆ ನಾವು ಜವಾಬ್ದಾರರಲ್ಲ

    – ಪೊಲೀಸ್‌ ಆಯುಕ್ತರನ್ನು ಭೇಟಿ ಮಾಡಿದ್ದ ಮುಸ್ಲಿಮ್‌ ಮುಖಂಡರು
    – ಆಯುಕ್ತರಿಗೆ ನೀಡಿದ್ದು ಮನವಿಯೇ? ಅಥವಾ ಎಚ್ಚರಿಕೆಯೇ?

    ಬೆಂಗಳೂರು: ದೇವರಜೀವನಹಳ್ಳಿ ಮತ್ತು ಕಾಡುಗೊಂಡನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಭೆ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಶಾಂತಿನಗರದ ಕಾಂಗ್ರೆಸ್‌ ಶಾಸಕ ಹ್ಯಾರಿಸ್‌ ಜೊತೆ ಮೌಲ್ವಿಗಳು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂಥ್‌ ಅವರನ್ನು ಭೇಟಿಯಾಗಿ ಚರ್ಚಿಸಿದ್ದರು. ಈ ವೇಳೆ ಮೌಲ್ವಿಗಳು ಆರೋಪಿಗಳ ಪರವಾಗಿ ಆಯುಕ್ತರ ಬಳಿ ಮನವಿ ಮಾಡಿದ್ದಾರೋ ಎಚ್ಚರಿಕೆ ನೀಡಿದ್ದಾರೋ ಎಂಬ ಪ್ರಶ್ನೆ ಎದ್ದಿದೆ.

    ಹೌದು, ಈ ಪ್ರಶ್ನೆ ಏಳಲು ಕಾರಣ ಪಬ್ಲಿಕ್‌ ಟಿವಿಗೆ ಒಂದು ವಿಡಿಯೋ ಲಭ್ಯವಾಗಿದೆ. ಈ ವಿಡಿಯೋದಲ್ಲಿ ಕರ್ಫ್ಯೂ ಬಗ್ಗೆ ಉಲ್ಲೇಖಿಸಿ, ಅಲ್ಲಿ ವಿಧಿಸಿರುವ ಕರ್ಫ್ಯೂ ತೆಗೆಯಿರಿ. ಒಂದು ವೇಳೆ ಅಲ್ಲಿ ಮತ್ತೆ ಏನಾದ್ರೂ ಆದರೆ ಅದಕ್ಕೆ ನಾವು ಜವಾಬ್ದಾರರಲ್ಲ ಎಂದು ಹೇಳಿದ್ದಾರೆ.

    ವಿಡಿಯೋದಲ್ಲಿ ಏನಿದೆ?
    ಪೊಲೀಸರು ಚೆನ್ನಾಗಿ ಕೆಲಸ ಮಾಡ್ತಾ ಇದ್ದಾರೆ ಅನ್ನೋ ಮೆಸೇಜ್ ನಾವು ಕಳೆದ ಶುಕ್ರವಾರ ಎಲ್ಲರಿಗೂ ಕಳಿಸಿದ್ದೇವೆ. ನಮ್ಮ ಸಂಘಟನೆಗಳು 28 ಜಿಲ್ಲೆಗಳಲ್ಲಿದ್ದು, ನಾವು ಎಲ್ಲಿಯೂ ಪ್ರತಿಭಟನೆ ಮಾಡಿಲ್ಲ. ಇನ್ನೆರಡು ದಿನಗಳಲ್ಲಿ ಶುಕ್ರವಾರ ಬರಲಿದೆ. ಎರಡು ವಾರ ಅಲ್ಲಿ ಹೇಗೆ ಕರ್ಫ್ಯೂ ಮಾಡ್ತಾರೆ ಅಂತ ಜನ ನಮ್ಮನ್ನ ಕೇಳ್ತಾ ಇದ್ದಾರೆ. ಜನ ಭಯಭೀತರಾಗಿದ್ದಾರೆ. ಶುಕ್ರವಾರದ ಪ್ರಾರ್ಥನೆಯಲ್ಲಿ ಗಲಾಟೆಯ ಬಗ್ಗೆ ಯಾವುದೇ ಚರ್ಚೆಗಳು ನಡೆಯಲ್ಲ. ಹಾಕಿರೋ ಕರ್ಫ್ಯೂ ತೆಗೆಯಿರಿ ಅಂತ ನಾವು ಮನವಿ ಮಾಡಿಕೊಳ್ಳುತ್ತೇವೆ.

    ನಾವು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಸ್ಥಿತಿ ಚೆನ್ನಾಗಿಲ್ಲ. ಅಲ್ಲಿಯ ಪರಿಸ್ಥಿತಿಯನ್ನು ಸಹಜ ಸ್ಥಿತಿಗೆ ತರಲು ನಾವು ಸಂಪೂರ್ಣ ಸಹಕಾರ ನೀಡ್ತೀವಿ. ಸಹಜ ಸ್ಥಿತಿಗೆ ತರಲು ನೀವು ಹೇಳಿದ ಹಾಗೆ ನಾವು ಕೇಳಲು ರೆಡಿ. ಎಲ್ಲರೂ ಒಂದಾಗಿ ಅಲ್ಲಿಯ ಪರಿಸ್ಥಿತಿ ಸಹಜ ಸ್ಥಿತಿಗೆ ಬರುವಂತೆ ಮಾಡೋಣ. ಆದ್ರೆ ಅಲ್ಲಿ ವಿಧಿಸಿರುವ ಕರ್ಫ್ಯೂ ತೆಗೆಯಿರಿ. ಒಂದು ವೇಳೆ ಅಲ್ಲಿ ಮತ್ತೆ ಏನಾದ್ರೂ ಆದ್ರೆ ನಾವು ಜವಾಬ್ದಾರರಲ್ಲ. ನಿನ್ನೆ ಬಾಣಸವಾಡಿಯಲ್ಲಿ 16 ಜನರನ್ನ ಬಂಧಿಸಿದ್ದಾರೆ. ಅವರಿಗೂ ಈ ಪ್ರಕರಣಕ್ಕೆ ಏನು ಸಂಬಂಧ? ಬಂಧಿತರ ಪೋಷಕರು ನಮ್ಮ ಮಕ್ಕಳು ಅಮಾಯಕರು, ಅಪ್ರಾಪ್ತರು ಅಂತಾ ಹೇಳ್ತಾರೆ.

    ಅಮಾಯಕರನ್ನ ಅರೆಸ್ಟ್ ಮಾಡಬಾರದು, ಪೋಷಕರು ಸ್ಟೇಷನ್‍ಗೆ ಹೋದ್ರೆ ಪೊಲೀಸರು ನಾವು ಅರೆಸ್ಟ್ ಮಾಡಿಲ್ಲ ಅಂತಾರೆ, ಬೇರೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ ಅಂತಾರೆ. ಪೊಲೀಸರು ಹೀಗೆ ಹೇಳಿದ್ರೆ ಏನು ಮಾಡೋದು, ಕಾನೂನಿನಲ್ಲಿ ಹೀಗಿದೆಯಾ? ಯಾರೋ ಬಂದು ಅರೆಸ್ಟ್ ಮಾಡ್ತಾರೆ ಅಂದ್ರೆ ಹೇಗೆ? ಸೋಶಿಯಲ್ ಮೀಡಿಯಾದಲ್ಲಿ ಎಲ್ಲೆಲ್ಲಿ ಅರೆಸ್ಟ್ ಆಯ್ತು ಅನ್ನೋದರ ಬಗ್ಗೆ ಅಪ್ಡೇಟ್ ಮಾಡಲಾಗ್ತಿದೆ.

  • ಅಧಿಕಾರ ಹಸ್ತಾಂತರ – ಕಣ್ಣೀರು ಹಾಕಿ ಬೆಂಗಳೂರು ಜನತೆಗೆ ನಮಸ್ಕರಿಸಿದ ಭಾಸ್ಕರ್ ರಾವ್

    ಅಧಿಕಾರ ಹಸ್ತಾಂತರ – ಕಣ್ಣೀರು ಹಾಕಿ ಬೆಂಗಳೂರು ಜನತೆಗೆ ನಮಸ್ಕರಿಸಿದ ಭಾಸ್ಕರ್ ರಾವ್

    ಬೆಂಗಳೂರು: ಅಧಿಕಾರ ಹಸ್ತಾಂತರದ ವೇಳೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು, ಕಣ್ಣೀರು ಹಾಕಿ ಬೆಂಗಳೂರು ಜನರಿಗೆ ತಲೆಬಾಗಿ ನಮಸ್ಕಾರ ಮಾಡಿದ್ದಾರೆ.

    ಕಳೆದ ಒಂದು ವರ್ಷಗಳ ಕಾಲ ಬೆಂಗಳೂರು ನಗರದ ಪೊಲೀಸ್ ಕಮಿಷನರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಅವರನ್ನು ಶುಕ್ರವಾರ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ನೂತನ ಕಮಿಷನರ್ ಆಗಿ ಕಮಲ್ ಪಂತ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಇಂದು ಭಾಸ್ಕರ್ ರಾವ್ ಅವರು ಕಮಲ್ ಪಂತ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು.

    ಬ್ಯಾಟನ್ ನೀಡುವ ಮೂಲಕ ಭಾಸ್ಕರ್ ರಾವ್ ಅವರು ನೂತನ ಕಮಿಷನರ್ ಅಧಿಕಾರ ಹಸ್ತಾಂತರಿಸಿದರು. ಇದೇ ವೇಳೆ ಭಾವುಕರಾದ ಬಾಸ್ಕರ್ ರಾವ್ ಅವರು ಬೆಂಗಳೂರು ಜನತೆಗೆ ನಮಸ್ಕರಿಸಿ ನಿರ್ಗಮನ ಮಾಡಿದರು. ಈ ವೇಳೆ ಪೊಲೀಸರಿಂದ ನೂತನ ಕಮಿಷನರ್ ಗೆ ಗಾಡ್ ಅಪ್ ಹಾನರ್ ನೀಡಲಾಯ್ತು. ಇದಾದ ಬಳಿಕ ನಿರ್ಗಮಿತ ಕಮಿಷನರ್ ಹಾಗೂ ಹಾಲಿ ಕಮಿಷನರ್ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿದರು.

    ಈ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನೂತನ ಪೊಲೀಸ್ ಕಮಿಷನರ್ ಕಮಲ್ ಪಂತ್, ಸರ್ಕಾರದವರು ದೊಡ್ಡ ಜವಾಬ್ದಾರಿ ನೀಡಿದ್ದಾರೆ. ಸರ್ಕಾರ ಕೊಟ್ಟ ಜವಾಬ್ದಾರಿ ನಿರ್ವಹಣೆ ಮಾಡುತ್ತೇನೆ. ಕೋವಿಡ್ ಅನ್ನು ಪೊಲೀಸರು ಚೆನ್ನಾಗಿ ನಿರ್ವಹಣೆ ಮಾಡಿದ್ದಾರೆ. ಕೆಲವರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥನೆ ಮಾಡುತ್ತೇನೆ. ಜನರಿಗಾಗಿ ಒಳ್ಳೆಯ ಕೆಲಸ ಮಾಡುತ್ತೇನೆ. ಮಹಿಳೆ ಮತ್ತು ಮಕ್ಕಳ ಸುರಕ್ಷತೆಗೆ ಹೆಚ್ಚಿನ ಗಮನ ವಹಿಸಲಾಗುವುದರ ಜೊತೆಗೆ ರೌಡಿ ಚಟುವಟಿಕೆ ತಡೆಯಲು ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳಿದರು.

  • ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ವರ್ಗಾವಣೆ

    ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ವರ್ಗಾವಣೆ

    – ನೂತನ ಕಮಿಷನರ್ ಆಗಿ ಕಮಲ್ ಪಂಥ್ ನೇಮಕ

    ಬೆಂಗಳೂರು: ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರ ಒಂದು ವರ್ಷದ ಅವಧಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಸರ್ಕಾರ ಕಮಲ್ ಪಂಥ್ ಅವರನ್ನು ನೂತನ ಆಯುಕ್ತರನ್ನಾಗಿ ನೇಮಿಸಿ ಆದೇಶ ನೀಡಿದೆ.

    ಭಾಸ್ಕರ್ ರಾವ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ಆಗಿ ವಗಾವಣೆ ಮಾಡಲಾಗಿದೆ. ಉಳಿದಂತೆ ಕಮಲ್ ಪಂಥ್ ಜಾಗಕ್ಕೆ ದಯಾನಂದ ಅವರನ್ನು ಗುಪ್ತಚರ ಇಲಾಖೆಯ ಎಡಿಜಿಪಿ ಆಗಿ ನೇಮಕ ಮಾಡಲಾಗಿದೆ.

    ಆ.1ಕ್ಕೆ ಭಾಸ್ಕರ್ ರಾವ್ ಅವರು ಆಯುಕ್ತರಾಗಿ ಒಂದು ವರ್ಷ ಪೂರ್ಣಗೊಳ್ಳಲಿದ್ದಾರೆ. ಭಾಸ್ಕರ್ ರಾವ್ ಅವರು ಅಧಿಕಾರ ವಹಿಸಿಕೊಂಡ ಬಳಿಕ ಹಲವು ಸವಾಲುಗಳನ್ನು ಎದುರಿಸಿದ್ದು, ಕಾಶ್ಮೀರ 370 ಕಾಯ್ದೆ ರದ್ದು, ರಾಮ ಮಂದಿರ ತೀರ್ಪು, ಸಿಎಎ ಮತ್ತು ಎನ್‌ಆರ್‌ಸಿಗೆ ಸಂಬಂಧ ಹಲವು ಸಂದರ್ಭಗಳನ್ನು ಸಮರ್ಥವಾಗಿ ಎದುರಿಸಿ ಕಾರ್ಯನಿರ್ವಹಿಸಿದ್ದರು.

    ಅಂದಹಾಗೇ ನೂತನವಾಗಿ ಆಯ್ತುಕರಾಗಿರುವ ಕಮಲ್ ಪಂಥ್ ಅವರು ಭಾಸ್ಕರ್ ರಾವ್ ಅವರ ಆತ್ಮೀಯರಾಗಿದ್ದು, ಒಂದೇ ಬ್ಯಾಚ್ ಅಧಿಕಾರಿಗಳಾಗಿದ್ದಾರೆ. ಈ ಹಿಂದೆಯೇ ಕಮಲ್ ಪಂಥ್ ಅವರ ಹೆಸರು ಆಯುಕ್ತರ ಆಯ್ಕೆಯ ರೇಸ್‍ಬಲ್ಲಿತ್ತು. ಆದರೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ಭಾಸ್ಕರ್ ರಾವ್ ಅವರನ್ನು ಆಯುಕ್ತರನ್ನಾಗಿ ನೇಮಿಸಿದ್ದರು. ಈ ಬಾರಿ ಕಮಲ್ ಪಂಥ್ ಅವರನ್ನು ಆಯುಕ್ತರನ್ನಾಗಿ ನೇಮಿಸಲಾಗಿದೆ.