ಕಮಲಿ, ಬಿಗ್ ಬಾಸ್ (Bigg Boss Kannada) ಖ್ಯಾತಿಯ ಅಮೂಲ್ಯ ಗೌಡ (Amulya) ಇದೀಗ ತೆಲುಗಿನ (Telagu) ಕಿರುತೆರೆಯತ್ತ ಮುಖ ಮಾಡಿದ್ದಾರೆ. ಬಿಗ್ ಬಾಸ್ ಶೋ ಆದ್ಮೇಲೆ ಮೊದಲ ಬಾರಿಗೆ ಟಿವಿಪರದೆಯಲ್ಲಿ ಅಮೂಲ್ಯ ದರ್ಶನ ಕೊಡ್ತಿದ್ದಾರೆ.
‘ಗುಂಡೇನಿಂದ ಗುಡಿ ಗಂಟಲು’ ಎಂಬ ತೆಲುಗಿನ ಸೀರಿಯಲ್ ಮೂಲಕ ಅಮೂಲ್ಯ ಕಾಣಿಸಿಕೊಳ್ತಿದ್ದಾರೆ. ಗೃಹಿಣಿಯಾಗಿ ಅಮೂಲ್ಯ ಸೀರಿಯಲ್ನಲ್ಲಿ ಜೀವತುಂಬಿದ್ದಾರೆ. ಕುಡುಕ ಗಂಡನನ್ನು ಸರಿ ದಾರಿಗೆ ತರುವ ಪಾತ್ರದಲ್ಲಿ ನಟಿಸಿದ್ದಾರೆ.
ಕಮಲಿಯಾಗಿ (Kamali) ಕನ್ನಡ ಸಿನಿಪ್ರೇಕ್ಷಕರ ಮನಗೆದ್ದ ನಟಿ ಅಮೂಲ್ಯ ಬಳಿಕ ‘ಬಿಗ್ ಬಾಸ್’ನಲ್ಲಿ ಸ್ಪರ್ಧಿಯಾಗಿ ಕಾಣಿಸಿಕೊಂಡರು. ಫಿನಾಲೆ ತಲುಪುವ ಒಂದು ವಾರದ ಮುನ್ನ ದೊಡ್ಮನೆಯಿಂದ ಔಟ್ ಆದರು. ಇದನ್ನೂ ಓದಿ:ಸಮಂತಾ ಔಟ್, ರಶ್ಮಿಕಾ ಮಂದಣ್ಣಗೆ ಸಿಕ್ತು ಬಿಗ್ ಚಾನ್ಸ್
‘ಬಿಗ್ ಬಾಸ್’ ಶೋ ಬಳಿಕ ತೆಲುಗಿನ ಧಾರಾವಾಹಿ ಒಪ್ಪಿಕೊಳ್ಳುವ ಮೂಲಕ ನಟನೆಗೆ ಮರಳಿದ್ದಾರೆ. ಕನ್ನಡ ಚಿತ್ರಗಳಲ್ಲಿ ನಟಿಸಲು ಕಥೆ ಕೇಳ್ತಿದ್ದಾರೆ ಎನ್ನಲಾಗುತ್ತಿದೆ.
ಬಿಗ್ ಬಾಸ್ ಮನೆಯ (Bigg Boss) ವಾರದ ಪಂಚಾಯಿತಿಯಲ್ಲಿ ಕಳಪೆ ವಿಚಾರಕ್ಕೆ ಸಂವಾದ ನಡೆದಿದೆ. ಕಳಪೆ ಕೊಡುವ ವಿಚಾರವಾಗಿ ಅಮೂಲ್ಯ ನಡೆದುಕೊಂಡ ರೀತಿಗೆ ಕಿಚ್ಚ ಸುದೀಪ್ (Kiccha Sudeep) ಖಡಕ್ ಆಗಿ ಬೆಂಡೆತ್ತಿದ್ದಾರೆ. ಕಳಪೆ ಹಣೆಪಟ್ಟಿ ಕೊಡುವ ವಿಷ್ಯದಲ್ಲಿ ನಿಮಗೆ ಜಡ್ಜ್ ಮಾಡೋಕೆ ಬಂದಿಲ್ಲ ಎಂದು ಕಿಚ್ಚನ ಕ್ಲಾಸ್ ತೆಗೆದುಕೊಂಡಿದ್ದಾರೆ.
ಪ್ರತಿ ವಾರದಂತೆ ಈ ವಾರವು ಉತ್ತಮ ಮತ್ತು ಕಳಪೆ ಕೊಡುವ ಪದ್ಧತಿ ಇತ್ತು. ಅದರಂತೆ ಮನೆಮಂದಿ ಎಲ್ಲರೂ ಈ ಕುರಿತು ವೋಟ್ ಮಾಡಬೇಕು. ಆಗ ಅಮೂಲ್ಯ ಗೌಡ (Amulya Gowda) ನನ್ನನ್ನು ಕಳಪೆ ಎಂದು ಪರಿಗಣಿಸಲು ಸಾಧ್ಯವಿಲ್ಲ ಹಾಗಾಗಿ ನಾನು ಗುರೂಜಿ ಕಳಪೆ ಕೊಡುತ್ತೇನೆ. ಅದರೆ ಅವರು ಕಳಪೆ ಅಲ್ಲ ಎಂದು ಕೂಡ ಮಾತನಾಡಿದ್ದರು. ಈ ವಿಚಾರವಾಗಿ ಸುದೀಪ್, ವೀಕೆಂಡ್ನಲ್ಲಿ ಮಾತನಾಡಿದ್ದಾರೆ.
ಕಳಪೆ ಮತ್ತು ಉತ್ತಮ ಎಂದು ಹೇಗೆ ಪರಿಗಣಿಸುತ್ತೇವೆ. ಬಿಗ್ ಬಾಸ್ (Bigg Boss) ಏನಾದ್ರು ಕಳಪೆಗೆ ರೂಲ್ಸ್ ಹೇಳಿದ್ದಾರಾ ಎಂದು ಸುದೀಪ್ ಕೇಳಿದ್ದಾರೆ. ಅಮೂಲ್ಯ ಅವರ ನಡೆಯ ಬಗ್ಗೆ ಕಿಚ್ಚ ಪ್ರಶ್ನೆ ಮಾಡಿದ್ದಾರೆ. ಎಲ್ಲರೂ ಈ ವಾರ ಚೆನ್ನಾಗಿ ಅಡಿದ್ದರು. ಒಬ್ಬರಿಗೆ ಕಳಪೆ ಕೊಡೋದು ಕಷ್ಟವಾಗಿತ್ತು. ಹಾಗೇ ನೋಡಿದ್ರೆ ನಾನು ಈ ವಾರ ಕೆಲ ಆಟದಲ್ಲಿ ಸೋತಿದ್ದೆ ಎಂದು ಅಮೂಲ್ಯ ಮಾತನಾಡಿದ್ದಾರೆ. ಇದನ್ನೂ ಓದಿ: ರಾಜಣ್ಣ ಮನೆಯ ಮಿಸ್ಟರ್ ಗರಗಸ ಎಂದು ಕಿಚ್ಚನ ಬಳಿ ದೂರಿಟ್ಟ ಮನೆಮಂದಿ
ಬಳಿಕ ಸುದೀಪ್, ನಿಮಗೆ ಕಳಪೆ ಕೊಡುವ ವಿಚಾರದಲ್ಲಿ ಜಡ್ಜ್ ಮಾಡೋಕೆ ಬರಲಿಲ್ಲ ಎಂದು ಹೇಳಿ ಎಂದು ಕಿಚ್ಚ ಕೊಂಚ ಖಾರವಾಗಿಯೇ ಅಮೂಲ್ಯಗೆ ಮಾತನಾಡಿದ್ದಾರೆ.
Live Tv
[brid partner=56869869 player=32851 video=960834 autoplay=true]
`ಕಮಲಿ’ (Kamali Serial) ಧಾರಾವಾಹಿಯ ಮೂಲಕ ಮನೆಮಾತಾದ ನಟಿ ಅಮೂಲ್ಯ ಗೌಡ (Amulya Gowda) ಇದೀಗ ಬಿಗ್ ಬಾಸ್ (Bigg Boss) ಮನೆಗೆ ಕಾಲಿಟ್ಟಿದ್ದಾರೆ. ತಮ್ಮ ಹಾಟ್ ಲುಕ್ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ. ಇದೀಗ ಚಿಕ್ಕ ವಯಸ್ಸಿನಲ್ಲಿ ತಾವು ಮನೆಯಲ್ಲಿ ಕಳ್ಳತನ ಮಾಡಿರುವ ಕಥೆಯನ್ನ ನಟಿ ರಿವೀಲ್ ಮಾಡಿದ್ದಾರೆ. ತಮ್ಮ ತರಲೆ ಕೆಲಸದ ಬಗ್ಗೆ ಅಮೂಲ್ಯ ಬಾಯ್ಬಿಟ್ಟಿದ್ದಾರೆ.
ಮೂರನೇ ವಾರದತ್ತ ದೊಡ್ಮನೆಯ ಆಟ ಮುನ್ನುಗ್ಗುತ್ತಿದೆ. ಸಾಕಷ್ಟು ಸ್ಪರ್ಧಿಗಳ ಮಧ್ಯೆ ವಿಶಿಷ್ಟ ವ್ಯಕ್ತಿತ್ವ ಮತ್ತು ಕಾರ್ಯ ವೈಖರಿಯ ಮೂಲಕ ಅನೇಕರ ಗಮನ ಸೆಳೆದಿದ್ದಾರೆ. ಟಾಸ್ಕ್ಗಳಲ್ಲಿ ಸ್ಟ್ರಾಂಗ್ ಆಗಿ ಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದಾರೆ. ಇನ್ನೂ ಮನೆಯಿಂದ ಹೊರಹೋಗಲು ನಾಮೀನೇಟ್ ಆಗಿದ್ದರು ಕೂಡ ಅತೀ ಹೆಚ್ಚು ವೋಟ್ ಪಡೆದು ಸೇವ್ ಆಗಿದ್ದಾರೆ. ಸದ್ಯ ತಮ್ಮ ಬಾಲ್ಯದ ತರಲೆ ಕೆಲಸದ ಬಗ್ಗೆ ಮನೆಮಂದಿಯ ಜೊತೆ ನಟಿ ಹಂಚಿಕೊಂಡಿದ್ದಾರೆ.
ಬಾಲ್ಯದಲ್ಲಿ ಅಣ್ಣ ನಾನು ಆವಾಗವಾಗ ಮನೆಯಲ್ಲಿ ದುಡ್ಡು ಎತ್ತುತ್ತಿದ್ವಿ. ನಮ್ಮ ಮನೆಯಲ್ಲಿ ಜಾಸ್ತಿ ಹಣ ಕದ್ರೆ ಅದು ನಮ್ಮ ಅಣ್ಣ ಮಾಡಿದ್ದಾನೆ ಅಂತ. 100 ರೂಪಾಯಿ ಕಡಿಮೆ ಕದ್ದರೆ ಅದು ನಾನು ಮಾಡಿದೆ ಅಂತ. ಅವನೇ ಮಾಡಿದ್ದರೂ ಅದು ನನ್ನ ಮೇಲೆ ಬರುತ್ತಿತ್ತು. ಇದೆಲ್ಲಾ ಕಾಲೇಜ್ ಟೈಂನಲ್ಲಿ ಆಗಿರುವುದು. ಅಮ್ಮಂಗೂ ಗೊತ್ತು ನಾವು ದುಡ್ಡು ಎತ್ತುತ್ತಿದ್ವಿ ಅಂತ ಅವರು ಬಿಡು ಮಕ್ಕಳು ಅಲ್ವಾ ಅಂತ ಸುಮ್ಮನಿದ್ದರು.
ಒಂದು ದಿನ ಅಣ್ಣ 6 ಸಾವಿರ ರೂಪಾಯಿ ತೆಗೆದುಕೊಂಡಿದ್ದಾನೆ. ನಮ್ಮ ಮನೆಯಲ್ಲಿ ಹೇಗೆ ಅಂದ್ರೆ ಒಂದು ತಿಂಗಳು ಆ ಹಣದ ಬಗ್ಗೆ ಮಾತನಾಡುತ್ತಿರಲಿಲ್ಲ ಆಮೇಲೆ ನಾವು ಅವತ್ತು ಅಲ್ಲಿ ಹುಡುಕುತ್ತಿದ್ದ ಹಣ ನಾನೆ ಎತ್ಕೊಂಡಿದ್ದು ಅಂತಿದ್ವಿ. ಆ 6 ಸಾವಿರ ರೂಪಾಯಿ ಅಣ್ಣನ ಪ್ಯಾಂಟ್ನಲ್ಲಿತ್ತು. ಹೊರಗಡೆ ಹೋಗಿ ಬಂದಿದ್ದ. ಅವತ್ತು ಅವನ ಜೇಬಿಗೆ ಕೈ ಹಾಕಿದ್ದರೆ ಹಣ ಜಾಸ್ತಿ ಇದೆ. ಮನೆಯಲ್ಲಿ ಯಾರೇ ಕದ್ದಿದ್ದರು ಅದು ನಮಗೆ ಗೊತ್ತಿರುತ್ತೆ ಏಕೆಂದರೆ ಒಂದು ಅವನು ಮಾಡಬೇಕು ಇಲ್ಲ ನಾನು ಮಾಡಬೇಕು. ಇದನ್ನೂ ಓದಿ:ಬಿಗ್ಬಾಸ್ ಮನೆಯಿಂದ ನವಾಜ್ ಔಟ್- ಇಷ್ಟವಾಗಲಿಲ್ಲ ಹುಡುಗನ ನಡೆ
ಅಣ್ಣ ಮಾಡಿದ ಪಿಕ್ಪಾಕೆಟ್ನಲ್ಲಿ ಅವನಿಗೆ ಗೊತ್ತಾಗದ ಹಾಗೇ ಪಾಕೆಟ್ನಿಂದ ದುಡ್ಡು ತೆಗೆದುಕೊಂಡೆ. ಗೊತ್ತಾದರೆ ಬೈಯುತ್ತಾನೆ ಎಂದು ಸಣ್ಣದಾಗಿ ಜೇಬಿಗೆ ತೂತು ಮಾಡಿದೆ ಅಂದ್ರೆ ಎಲ್ಲೂ ತೂತಾಗಿ ಬಿದಿತ್ತು ಅಂದುಕೊಳ್ಳಬೇಕು ಅಂತ. ಒಂದು ವಾರ ಅವನು ನನ್ನ ಜೊತೆ ಮಾತನಾಡಲಿಲ್ಲ. ಒಂದು ತಿಂಗಳು ಆದ ಮೇಲೆ ಅಮ್ಮಂಗೆ ಹೇಳಿದ. ಅಮ್ಮ ನಿನ್ನ ಮಗಳು ಎಷ್ಟು ಛತ್ರಿ ಅಂದ್ರೆ ನಾನೇ ನಿಮ್ಮ ಲಾಕರ್ನಿಂದ ಹಣ ತೆಗೆದಿದ್ದೆ, ಅವಳು ನನ್ನ ಪಾಕೆಟ್ನಿಂದ ತೆಗೆದುಕೊಂಡು ಪಾಕೆಟ್ ತೂತು ಮಾಡಿಟ್ಟಿದ್ದಾಳೆ ಎಂದು ಸತ್ಯ ಹೇಳಿದ್ದ ಎಂದು ತಮ್ಮ ಬಾಲ್ಯದಲ್ಲಿ ತನ್ನ ಛತ್ರಿ ಕೆಲಸದ ಬಗ್ಗೆ ಮಾತನಾಡಿದ್ದಾರೆ. ಅಮೂಲ್ಯ(Amulya Gowda) ಮಾಡಿದ್ದ ತರಲೆ ಕೆಲಸ ಕೇಳಿ ಮನೆ ಮಂದಿ ನಕ್ಕಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬಿಗ್ ಬಾಸ್ ಮನೆಯಲ್ಲಿ(Bigg Boss House) ಒಂದಲ್ಲಾ ಒಂದು ವಿಚಾರವಾಗಿ ಸದಾ ಸುದ್ದಿಯಲ್ಲಿರುವ ಆರ್ಯವರ್ಧನ್ ಗುರೂಜಿ (Aryavardhan Guruji), ನಂಬರ್ ಅಂದ್ರೆ ನಾನು ಎಂದು ಹೇಳುವ ಮೂಲಕ ಸಖತ್ ಹೈಲೆಟ್ ಆಗಿದ್ದರು. ಜ್ಯೋತಿಷ್ಯವನ್ನೇ ನಂಬಿ ಬದುಕುತ್ತಿರುವ ಗುರೂಜಿ ಇದೀಗ ದೊಡ್ಮನೆಯಲ್ಲಿ ಅಮೂಲ್ಯ ತುಟಿ ನೋಡಿ ಜ್ಯೋತಿಷ್ಯ ಹೇಳಿದ್ದಾರೆ.
ದೊಡ್ಮನೆ ಈಗ ಎರಡನೇ ವಾರಕ್ಕೆ ಕಾಲಿಟ್ಟಿದೆ. ಸಾಕಷ್ಡು ರೋಚಕ ತಿರುವುಗಳನ್ನ ಪಡೆದುಕೊಳ್ಳುತ್ತಿರುವ ಬಿಗ್ ಬಾಸ್ ಮನೆಯಲ್ಲಿ ಕಾಲಿಗೆ ಒಂದು ಕಾಲ ಎಂಬ ಟಾಸ್ಕ್ ಅನ್ನು ಕೊಡಲಾಗಿದೆ. ದಿವ್ಯಾ ಉರುಡುಗ(Divya Uruduga) ಮತ್ತು ಸಾನ್ಯ (Sanya Iyer) ಒಂದು ಜೋಡಿ ಮತ್ತು ದೀಪಿಕಾ ಮತ್ತು ರೂಪೇಶ್ ಮತ್ತೊಂದು ಜೋಡಿಯಾಗಿ ಎರಡು ತಂಡಗಳ ಜಟಾಪಟಿ ನಡೆದಿದೆ. ಈ ವೇಳೆ ಗುರೂಜಿ ಮತ್ತು ನಟಿ ಅಮೂಲ್ಯ ಸಂಭಾಷಣೆ ಎಲ್ಲರ ನಗುವಿಗೆ ಕಾರಣವಾಗಿದೆ.
ಟಾಸ್ಕ್ ವೀಕ್ಷಿಸುವ ಸಮಯದಲ್ಲಿ ಗುರೂಜಿ ಅಮೂಲ್ಯ ತುಟಿ ನೋಡಿ ಭವಿಷ್ಯ ನುಡಿದಿದ್ದಾರೆ. ನಿಮ್ಮ ತುಟಿ ಮೇಲೆ ಚೂಪಾಗಿದೆ. ಹೀಗಿದ್ದರೆ ಒಳ್ಳೆಯದು ಎಲ್ಲರೂ ನಿಮ್ಮನ್ನು ಇಷ್ಟಪಡುತ್ತಾರೆ ಎಂದು ಗುರೂಜಿ ಹೇಳಿದ್ದಾರೆ. ಅವರ ಮಾತಿಗೆ ಅಮೂಲ್ಯ ನಕ್ಕಿದ್ದಾರೆ. ಇದೇ ವೇಳೆ ರಾಕೇಶ್ ಅಡಿಗ ನನ್ನ ತುಟಿ ಭವಿಷ್ಯ ಹೇಳಿ ಎಂದು ಕೇಳಿದ್ದಾರೆ. ಆಗ ಗುರೂಜಿ, ನಿನ್ನ ಹಿಂದೆ ಯಾರು ಬೀಳಲ್ಲ, ನೀನೇ ಎಲ್ಲರ ಹಿಂದೆ ಹೋಗುತ್ತಿಯಾ ಟಾಂಗ್ ಕೊಟ್ಟಿದ್ದಾರೆ. ಗುರೂಜಿ ಮಾತಿಗೆ ಮನೆಮಂದಿಯೆಲ್ಲಾ ಬಿದ್ದು ಬಿದ್ದು ನಕ್ಕಿದ್ದಾರೆ. ಇದನ್ನೂ ಓದಿ:ಒಂದು ವಾರಕ್ಕೆ ‘ಕಾಂತಾರ’ದ ಕಲೆಕ್ಷನ್ 50 ಕೋಟಿ: ಸಿನಿ ಪಂಡಿತರ ಅಚ್ಚರಿಯ ಲೆಕ್ಕಾಚಾರ
ಇದೇ ವೇಳೆ ಅರುಣ್ ಸಾಗರ್ ಕೂಡ ನನ್ನ ತುಟಿ ನೋಡಿ ಭವಿಷ್ಯ ಹೇಳಿ ಎಂದಿದ್ದಾರೆ. ನೀವು ಮೊದಲು ಮೀಸೆ ಬೊಳಿಸಿಕೊಂಡು ಬನ್ನಿ ಎಂದು ಗುರೂಜಿ ಚಮಕ್ ಕೊಟ್ಟಿದ್ದಾರೆ. ಈ ಮೂಲಕ ಗುರೂಜಿ ಬಿಗ್ ಬಾಸ್ ಮನೆಯಲ್ಲಿ ನೇರ ಮಾತಿನ ಮೂಲಕ ಹೈಲೆಟ್ ಆಗಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬಿಗ್ ಬಾಸ್ ಓಟಿಟಿ ಮುಗಿಯುತ್ತಿದ್ದಂತೆ ಟಿವಿ ಬಿಗ್ ಬಾಸ್ ನ (Bigg Boss Season 9) ಹವಾ ಜೋರಾಗಿದೆ. ಯಾರೆಲ್ಲಾ ಸ್ಪರ್ಧಿಗಳು ಬರಲಿದ್ದಾರೆ ಎಂಬ ಕೂತೂಹಲಕ್ಕೆ ತೆರೆಗೆ ಬಿದ್ದಿದೆ. ಇದೀಗ ಅಸಲಿ ಆಟ ಕೂಡ ಶುರುವಾಗಿದ್ದು, ನಿಧಾನಕ್ಕೆ ಒಬ್ಬರ ಪರಿಚಯದ ಜತೆ ಸ್ನೇಹ ಕೂಡ ಚಿಗುರುತ್ತಿದೆ. ರಾಕೇಶ್ ಮತ್ತು ಅಮೂಲ್ಯ (Amulya Gowda) ನಡುವೆ ಸ್ನೇಹದ ಬೆಸುಗೆ ಶುರುವಾಗಿದ್ದು, ಅಮೂಲ್ಯ ಪಾತ್ರೆ ತೊಳೆಯುವುದನ್ನು ನೋಡಿ, ಗಾಡಿ ತೊಳಿತಿದ್ದೀರಾ ಎಂದು ರಾಕೇಶ್ ಕಾಲೆಳೆದಿದ್ದಾರೆ.
ದೊಡ್ಮನೆಯಲ್ಲಿ ಆಟ ಜೋರಾಗಿದ್ದ, ಭಿನ್ನ ರೀತಿಯ 18 ಸ್ಪರ್ಧಿಗಳನ್ನು ನೋಡಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಇನ್ನೂ ಅಮೂಲ್ಯ ಮತ್ತು ರಾಕೇಶ್ (Rakesh Adiga) ನಡುವಿನ ಮಾತುಕತೆ ನೋಡುಗರಿಗೆ ಮನರಂಜನೆ ಕೊಟ್ಟಿದೆ. ರಾಕೇಶ್ ಪಾತ್ರೆ ತೊಳೆಯುತ್ತಾ ಇದ್ದರು. ನೀವು ಕೆಲಸ ಮಾಡುತ್ತೀರಾ ಎಂದು ಅಮೂಲ್ಯ ಗೆ ಕೇಳಿದ್ದಾರೆ. ಆಗ ಹೌದು.. ಫ್ರಿ ಇದ್ದಾಗ ಕೆಲಸ ಮಾಡುತ್ತೀನಿ ಎಂದಿದ್ದಾರೆ. ಹಬ್ಬದ ಸಮಯದಲ್ಲಿ ಕೆಲಸ ಮಾಡುತ್ತೀರಾ ಎಂದು ಮತ್ತೆ ರಾಕಿ ಕೌಂಟರ್ ಕೊಟ್ಟಿದ್ದಾರೆ. ಇದನ್ನೂ ಓದಿ:`ಕಮಲಿ’ ಖ್ಯಾತಿಯ ಅಮೂಲ್ಯಗೌಡರ ಹಾಟ್ ಫೋಟೋ ವೈರಲ್
ಬಳಿಕ ಅಮೂಲ್ಯ ಪಾತ್ರೆ ತೊಳೆಯುವ ವೈಖರಿ ನೋಡಿ ನೀವು ಗಾಡಿ ತೊಳಿಯುತ್ತಿದ್ದೀರಾ ಎಂದು ರಾಕೇಶ್ ತಮಾಷೆ ಮಾಡಿದ್ದಾರೆ. ಅದಕ್ಕೆ ಅಮೂಲ್ಯ, ರಾಕಿಗೆ ಸ್ಮೈಲ್ ಮಾಡಿದ್ದಾರೆ. ಈ ಹಿಂದಿನ ಓಟಿಟಿಯಲ್ಲಿ ಸೋನು (Sonu Srinivas Gowda) ಜತೆಗಿನ ರಾಕೇಶ್ ಸಂಭಾಷಣೆ ನೋಡುಗರಿಗೆ ಮನರಂಜನೆ ನೀಡಿತ್ತು. ಅದೇ ರೀತಿ ಟಿವಿ ಸೀಸನ್ ನಲ್ಲಿ ರಾಕಿ ಮತ್ತು ಅಮೂಲ್ಯ ಜೋಡಿ ಮೋಡಿ ಮಾಡಬಹುದಾ ಕಾದುನೋಡಬೇಕಿದೆ.
Live Tv
[brid partner=56869869 player=32851 video=960834 autoplay=true]
ಜೀ ಕನ್ನಡ (Zee Kannada) ವಾಹಿನಿಯಲ್ಲಿ ಪ್ರಸಾರವಾಗುವ ಜನಪ್ರಿಯ ಧಾರಾವಾಹಿ `ಕಮಲಿ'(Kamali) ಈ ಸೀರಿಯಲ್ನಲ್ಲಿ ಕಮಲಿಯಾಗಿ ಅಭಿನಯಿಸಿರೋ ಅಮೂಲ್ಯ ಗೌಡ (Amulya Gowda) ಹೆಸರು ಚಿರಪರಿಚಿತ.
ಮೂಲತಃ ಮೈಸೂರಿನವರೇ ಆದ ಅಮೂಲ್ಯ ಸ್ವಾತಿ ಮುತ್ತು ಧಾರಾವಾಹಿಯಲ್ಲಿ ನಟಿಸುವ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಜೀ ವಾಹಿನಿಯ ಕಮಲಿ ಧಾರವಾಹಿ ಇವರಿಗೆ ಮತ್ತಷ್ಟು ಜನಪ್ರಿಯತೆ ತಂದುಕೊಟ್ಟಿತು. ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಮತ್ತೆ ಮೂರು ಅಚ್ಚರಿಯ ಹೆಸರುಗಳು
ಅಷ್ಟೇ ಅಲ್ಲ ಪುನರ್ ವಿವಾಹ, ಅರಮನೆ ಸೇರಿದಂತೆ ಹಲವು ಕನ್ನಡ ಧಾರಾವಾಹಿಗಳಲ್ಲಿ ಇವರು ನಟಿಸಿದ್ದಾರೆ. ತೆಲುಗಿನ ಕಾರ್ತಿಕ ದೀಪಂ ಧಾರಾವಾಹಿಯಲ್ಲೂ ನಟಿಸಿದ್ದಾರೆ. ಇವರ ಪೂರ್ತಿ ಹೆಸರು ಅಮೂಲ್ಯ ಓಂಕಾರ ಗೌಡ. ಇದೀಗ ಅಮೂಲ್ಯ ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದು, ಈ ಬೆನ್ನಲ್ಲೇ ಅಮೂಲ್ಯಗೌರಡ ಹಾಟ್ ಫೋಟೋಗಳು ವೈರಲ್ ಆಗಿವೆ.
Live Tv
[brid partner=56869869 player=32851 video=960834 autoplay=true]
ಪ್ರತಿ ವರ್ಷವೂ ಬಿಗ್ ಬಾಸ್ (Bigg Boss Season 9) ಮನೆಯಲ್ಲಿರುವ ಸದಸ್ಯರಲ್ಲಿ ಅತೀ ಹೆಚ್ಚು ಕಿರುತೆರೆಯ ಲೋಕದವರೇ ಇರುತ್ತಾರೆ. ಈ ಬಾರಿಯೂ ಅದಕ್ಕೆ ಹೊರತಾಗಿಲ್ಲ. ಕಲರ್ಸ್ ಕನ್ನಡ ವಾಹಿನಿಯಲ್ಲೇ ಪ್ರಸಾರವಾದ ನಾನಾ ಧಾರಾವಾಹಿಗಳ ಫೇಮಸ್ ಕಲಾವಿದರು ಈ ಬಾರಿ ಬಿಗ್ ಬಾಸ್ ಮನೆಯಲ್ಲಿ ಇರಲಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಈ ತಾರೆಯರು ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದಾರೆ ಎಂದೂ ಹೇಳಲಾಗಿತ್ತು. ಯಾರೆಲ್ಲ ಕಲಾವಿದರು ಈ ಬಾರಿ ಬಿಗ್ ಬಾಸ್ ಮನೆಯಲ್ಲಿ ಇರಲಿದ್ದಾರೆ ಎನ್ನುವುದು ಇವತ್ತಷ್ಟೇ ಗೊತ್ತಾಗಲಿದೆ. ಅದಕ್ಕೂ ಮುನ್ನ ಕೆಲವು ಹೆಸರುಗಳು ಹರಿದಾಡುತ್ತಿವೆ.
ನೇಹಾ ಗೌಡ (ಲಕ್ಷ್ಮಿ ಬಾರಮ್ಮ)
ಆರು ವರ್ಷಗಳ ಅಧಿಕ ಕಾಲ ಪ್ರಸಾರವಾದ ಲಕ್ಷ್ಮಿ ಬಾರಮ್ಮ (Lakshmi Baramma) ಧಾರಾವಾಹಿಯಲ್ಲಿ ಗೊಂಬೆ ಅಂತಾನೇ ಫೇಮಸ್ ಆಗಿರುವ ನಟಿ ನೇಹಾ ಗೌಡ (Neha Gowda). ಈ ಬಾರಿ ಅವರು ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಕನ್ನಡದ ಹೆಸರಾಂತ ನಟಿ ಸೋನು ಗೌಡ ಅವರ ಸಹೋದರಿ ಕೂಡ ಇವರಾಗಿದ್ದಾರೆ. ನಾಲ್ಕು ವರ್ಷಗಳ ಹಿಂದೆಯೇ ಮದುವೆ ಆಗಿರುವ ನೇಹಾ ಗೌಡ, ಇದೀಗ ಧಾರಾವಾಹಿ ಲೋಕದಲ್ಲಿ ಅಷ್ಟೇನೂ ಸಕ್ರಿಯರಾಗಿಲ್ಲವಾದರೂ, ಹಲವಾರು ಧಾರಾವಾಹಿಗಳಲ್ಲಿ ನಟಿಸಿದ್ದರಿಂದ, ಅವರ ಅಭಿಮಾನಿಗಳ ಸಂಖ್ಯೆ ಕಡಿಮೆಯೇನೂ ಇಲ್ಲ. ಇದನ್ನೂ ಓದಿ :ಈ ಬಾರಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿರುವ ಎಕ್ಸ್ಕ್ಲೂಸಿವ್ ಸೆಲೆಬ್ರಿಟಿಗಳು
ರಮೋಲಾ (ಕನ್ನಡತಿ)
ಕಲರ್ಸ್ ಕನ್ನಡದಲ್ಲೇ ಪ್ರಸಾರವಾಗುತ್ತಿರುವ ಕನ್ನಡತಿ (Kannadathi)ಧಾರಾವಾಹಿಯ ಸಾನಿಯಾ ಪಾತ್ರದ ಮೂಲಕ ಫೇಮಸ್ ಆದವರು ರಮೋಲಾ. ಈ ಧಾರಾವಾಹಿಯು ಇವರಿಗೆ ಸಾಕಷ್ಟು ಹೆಸರು ತಂದು ಕೊಟ್ಟಿದೆ. ಅದೊಂದು ನೆಗೆಟಿವ್ ಪಾತ್ರವಾದರೂ, ರಮೋಲಾ (Ramola) ಒಪ್ಪಿಕೊಂಡು ಪಾತ್ರ ನಿರ್ವಹಿಸಿದ ರೀತಿ ಮೆಚ್ಚುವಂಥದ್ದು. ಈಗಾಗಲೇ ಮೂರ್ನಾಲ್ಕು ಸಿನಿಮಾಗಳಲ್ಲಿ ಅವರು ನಟಿಸಿದ್ದರೂ, ಈವರೆಗೂ ಒಂದೂ ಸಿನಿಮಾ ಬಿಡುಗಡೆ ಆಗಿಲ್ಲ. ಮೊನ್ನೆಯಷ್ಟೇ ಕನ್ನಡತಿ ಧಾರಾವಾಹಿಯಿಂದ ಈ ನಟಿ ಹೊರ ನಡೆದಿದ್ದರು. ಇದು ಬಿಗ್ ಬಾಸ್ ಮನೆಗೆ ಹೋಗುವ ಕಾರಣಕ್ಕಾಗಿಯೇ ಆದ ಘಟನೆ ಎಂದು ಹೇಳಲಾಗಿತ್ತು. ಅದೀಗ ನಿಜವಾಗಿದೆ. ಸದ್ಯ ಫ್ಯಾಷನ್ ಡಿಸೈನ್ ಕೋರ್ಸ್ ಕೂಡ ಮಾಡುತ್ತಿದ್ದಾರೆ ರಮೋಲಾ.
ಕಾವ್ಯಶ್ರೀ ಗೌಡ (ಮಂಗಳಗೌರಿ ಮದುವೆ)
ಮಂಗಳಗೌರಿ ಮದುವೆ ಧಾರಾವಾಹಿಯಲ್ಲಿ ಮಂಗಳಗೌರಿಯಾಗಿ ನಟಿಸಿದವರು ಕಾವ್ಯಶ್ರೀ ಗೌಡ (Kavyashree Gowda). ಕಥಾನಾಯಕಿಯ ಪಾತ್ರವೇ ಅದಾಗಿದ್ದರಿಂದ ಅತೀ ಬೇಗ ಜನರಿಗೆ ಹತ್ತಿರವಾದರು. ನಿರೂಪಕಿಯಾಗಿಯೂ ಕೆಲಸ ಮಾಡಿರುವ ಕಾವ್ಯಶ್ರೀ, ಮೂಲತಃ ಚನ್ನಪಟ್ಟಣದವರು. ಮನೆಯೇ ಮಂತ್ರಾಲಯ ಧಾರಾವಾಹಿ ಮೂಲಕ ಬಣ್ಣದ ಪ್ರಪಂಚಕ್ಕೆ ಕಾಲಿಟ್ಟ ಕಾವ್ಯಶ್ರೀ, ಇದೀಗ ಬಿಗ್ ಬಾಸ್ ಮನೆಯನ್ನೂ ಪ್ರವೇಶ ಮಾಡಿದ್ದಾರೆ. ಈ ಹಿಂದೆ ಪುನೀತ್ ರಾಜ್ ಕುಮಾರ್ ಜೊತೆ ನಟಿಸುವ ಆಸೆಯನ್ನೂ ಅವರು ವ್ಯಕ್ತಪಡಿಸಿದ್ದರು. ಆದರೆ ಅದು ಕನಸಾಗಿಯೇ ಉಳಿಯಿತು.
ಅಮೂಲ್ಯ ಗೌಡ (ಕಮಲಿ)
ಕನ್ನಡ ಮತ್ತು ತೆಲುಗು ಧಾರಾವಾಹಿಯಲ್ಲಿ ಚಿರಪರಿಚಿತ ಹೆಸರು ಅಮೂಲ್ಯ ಗೌಡ (Amulya Gowda) ಅವರದ್ದು. ಕನ್ನಡದ ಪ್ರೇಕ್ಷಕರಿಗೆ ಕಮಲಿ (Kamali) ಆಗಿಯೇ ಪರಿಚಯವಾದವರು. ಅದೊಂದು ಸಾಂಪ್ರದಾಯಿಕ ಹುಡುಗಿಯ ಪಾತ್ರವಾಗಿದ್ದರಿಂದ ನೋಡುಗರಿಗೆ ಬೇಗನೇ ಹತ್ತಿರವಾದ ನಟಿ. ಸ್ವಾತಿ ಮುತ್ತು, ಪುನರ್ ವಿವಾಹ, ಅರಮನೆ ಸೇರಿದಂತೆ ಹಲವು ಕನ್ನಡ ಧಾರಾವಾಹಿಗಳಲ್ಲಿ ಇವರು ನಟಿಸಿದ್ದಾರೆ. ತೆಲುಗಿನ ಕಾರ್ತಿಕ ದೀಪಂ ಧಾರಾವಾಹಿಯಲ್ಲೂ ನಟಿಸಿದ್ದಾರೆ. ಇವರ ಪೂರ್ತಿ ಹೆಸರು ಅಮೂಲ್ಯ ಓಂಕಾರ ಗೌಡ. ಇದೀಗ ಅಮೂಲ್ಯ ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
Live Tv
[brid partner=56869869 player=32851 video=960834 autoplay=true]
ಓಟಿಟಿ ಬಿಗ್ ಬಾಸ್(Bigg boss) ಆಟಕ್ಕೆ ಬ್ರೇಕ್ ಬಿದ್ದಿದೆ. ಟಿವಿ ಸೀಸನ್ನ ಬಿಗ್ ಬಾಸ್ ಶುರುವಾಗಲು ಕೌಂಟ್ ಡೌನ್ ಶುರುವಾಗಿದೆ. ಬಿಗ್ ಬಾಸ್ ಸೀಸನ್ 9ಕ್ಕೆ ಯಾರೆಲ್ಲಾ ಸ್ಪರ್ಧಿಗಳು ಇರಲಿದ್ದಾರೆ ಎಂಬುದರ ಬಗ್ಗೆ ಈಗಾಗಲೇ ಅಭಿಮಾನಿಗಳ ವಲಯದಲ್ಲಿ ಚರ್ಚೆ ಶುರುವಾಗಿದೆ.
ಕಿರುತೆರೆ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಬರಲು, ಕೇವಲ ಒಂದು ವಾರ ಬಾಕಿ ಉಳಿದಿದೆ. ಈ ಹಿಂದಿನ 8 ಸೀಸನ್ಗಳಲ್ಲಿ ಭಾಗವಹಿಸಿದ್ದ ಸ್ಪರ್ಧಿಗಳ ಜೊತೆ ಹೊಸ ಸ್ಪರ್ಧಿಗಳು ಇರಲಿದ್ದಾರೆ. ಬಿಗ್ ಬಾಸ್ ಓಟಿಟಿಯಿಂದ ರೂಪೇಶ್, ಸಾನ್ಯ, ಆರ್ಯವರ್ಧನ್, ರಾಕೇಶ್ ಟಿವಿ ಬಿಗ್ ಬಾಸ್ನಲ್ಲಿರದ್ದಾರೆ. ಈ ಸೀಸನ್ನಲ್ಲಿ ನಟ ಅನಿರುದ್ಧ ಹೆಸರು ಕೇಲಿ ಬಂದ ಬೆನ್ನಲ್ಲೇ `ಕಮಲಿ’ ಖ್ಯಾತಿಯ ನಟಿ ಅಮೂಲ್ಯ ಓಂಕಾರ್ ಗೌಡ (Amulya Omkar Gowda) ಕೂಡ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ:ಸಾನ್ಯ ಶೆಟ್ಟಿ ಎಂದು ಕರೆದರೆ ನನಗಿಷ್ಟ: ಸಾನ್ಯ ಅಯ್ಯರ್
ಕಿರುತೆರೆ `ಕಮಲಿ’ (Kamali Serial) ಧಾರಾವಾಹಿ ಮೂಲಕ ಮನೆಮಾತಾಗಿರುವ ನಟಿ ಅಮೂಲ್ಯ ಇದೀಗ ಬಿಗ್ ಬಾಸ್ಗೆ ಬರಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ತಮ್ಮ ಮುದ್ದು ಮುಖ, ಖಡಕ್ ನಟನೆಯ ಕರ್ನಾಟಕದ ಮನಗೆದ್ದಿರುವ ನಟಿ ಟಿವಿ ಬಿಗ್ ಬಾಸ್ಗೆ ಬರೋದು ಪಕ್ಕಾ ಎನ್ನಲಾಗುತ್ತಿದೆ.
ಅಷ್ಟಕ್ಕೂ ನಟಿ ಅಮೂಲ್ಯ ಬಿಗ್ ಬಾಸ್ಗೆ ಬರೋದು ನಿಜಾನಾ ಅಥವಾ ಸುಳ್ಳು ಸುದ್ದಿನ ಎಂಬುದು ಕೆಲವೇ ದಿನಗಳಲ್ಲಿ ತಿಳಿಯಲಿದೆ. ಇನ್ನೂ ಟಿವಿ ಬಿಗ್ ಬಾಸ್ ಸೆಪ್ಟೆಂಬರ್ 24ರಿಂದ ಖಾಸಗಿ ವಾಹಿನಿಯಲ್ಲಿ ಶುರುವಾಗಲಿದೆ.
Live Tv
[brid partner=56869869 player=32851 video=960834 autoplay=true]
ಕಿರುತೆರೆಯ ಜನಪ್ರಿಯ ಧಾರಾವಾಹಿ `ಕಮಲಿ’ ಖ್ಯಾತಿಯ ಗೇಬ್ರಿಯೆಲಾ ಮತ್ತು ಸುಹಾಸ್ ಇದೀಗ ಹೊಸ ಬಾಳಿಗೆ ಕಾಲಿಡಲು ಸಜ್ಜಾಗಿದ್ದಾರೆ. ಸದ್ಯ ತಮ್ಮ ಪ್ರೀ ವೆಡ್ಡಿಂಗ್ ಫೋಟೋಶೂಟ್ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದ್ದಾರೆ.
ತೆರೆಯ ಮೇಲಿನ ಕಥೆಯೇ ಬೇರೆ, ತೆರೆಹಿಂದಿನ ಅಸಲಿ ವಿಚಾರವೇ ಬೇರೆ ಅನ್ನೋದಕ್ಕೆ ಈ ಜೋಡಿ ತಾಜಾ ಉದಾಹರಣೆ. ಕಮಲಿ ಧಾರಾವಾಹಿಯಲ್ಲಿ ಶತ್ರುಗಳಾಗಿ ಕಾಣಿಸಿಕೊಂಡಿರುವ ಅನಿಕಾ ಮತ್ತು ಶಂಭು ಇದೀಗ ರಿಯಲ್ ಲೈಫ್ನಲ್ಲಿ ಪ್ರೇಮಿಗಳಾಗಿದ್ದಾರೆ. ಇದೀಗ ಗುರುಹಿರಿಯರ ಸಮ್ಮುಖದಲ್ಲಿ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಸದ್ಯ ಕಪಲ್ ಫೋಟೋಶೂಟ್ ಮೂಲಕ ಮೋಡಿ ಮಾಡ್ತಿದ್ದಾರೆ. ಇದನ್ನೂ ಓದಿ:ವಿಜಯ್ ಸೇತುಪತಿ ಅಭಿಮಾನಿಗಳಿಗೆ ಡಬಲ್ ಧಮಾಕಾ: ‘ವಿಡುದಲೈ’ ಸಿನಿಮಾ ಎರಡು ಭಾಗಗಳಲ್ಲಿ ರಿಲೀಸ್
ಅನಿಕಾ ಅಲಿಯಾಸ್ ಗೇಬ್ರಿಯೆಲಾ ಕಮಲಿ ಧಾರಾವಾಹಿಯಲ್ಲಿ ಖಡಕ್ ವಿಲನ್ ಆಗಿ ಮಿಂಚಿದ್ದಾರೆ. ಇನ್ನು ಶುಂಭು ಅಲಿಯಾಸ್ ಸುಹಾಸ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸೀರಿಯಲ್ ಮೂಲಕ ಗೆಳೆತನ ಶುರುವಾಗಿ, ಇದೀಗ ದಾಂಪತ್ಯ ಜೀವನಕ್ಕೆ ಕಾಲಿಡುವ ಮಟ್ಟಿಗೆ ಬಂದು ನಿಂತಿದೆ. ಇನ್ನು ಫೋಟೋದಲ್ಲಿ ಗೇಬ್ರಿಯೆಲಾ ಬಿಳಿ ಬಣ್ಣದ ಗೌನ್ನಲ್ಲಿ ಮಿಂಚಿದ್ದಾರೆ. ಥೇಟ್ ಸಿಂಡ್ರೆಲ್ಲಾ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಸುಹಾಸ್ ಕೂಡ ವೈಟ್ ಶರ್ಟ್ ಮತ್ತು ನೀಲಿನಲ್ಲಿ ಸ್ಮಾರ್ಟ್ ಆಗಿ ಕಾಣಿಸಿಕೊಂಡಿದ್ದಾರೆ.
ಇತ್ತಿಚೆಗಷ್ಟೇ `ಕಮಲಿ’ ಖ್ಯಾತಿಯ ನಿಂಗಿ ಅಲಿಯಾಸ್ ಅಂಕಿತಾ ಹಸೆಮಣೆ ಏರಿದ ಬೆನ್ನಲ್ಲೇ ಇದೇ ಧಾರಾವಾಹಿಯ ಮತ್ತೊಂದು ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಅನಿಕಾ ಅಲಿಯಾಸ್ ಗೇಬ್ರಿಯೆಲಾ ಮತ್ತು ಸುಹಾಸ್ ಪರಸ್ಪರ ಪ್ರೀತಿಸುತ್ತಿದ್ದರು. ಇದೀಗ ಹೊಸ ಬಾಳಿಗೆ ಕಾಲಿಡಲು ಸಜ್ಜಾಗಿದ್ದಾರೆ.
ಈ ಜೋಡಿ `ಕಮಲಿ’ ಸೀರಿಯಲ್ನಲ್ಲಿ ಒಟ್ಟಿಗೆ ನಟಿಸುತ್ತಿದ್ದಾರೆ. ಅನಿಕಾ ಪಾತ್ರಧಾರಿಯಾಗಿ ಗೇಬ್ರಿಯೆಲಾ ಕಾಣಿಸಿಕೊಂಡ್ರೆ, ಸುಹಾಸ್ ಅವರು ಶಂಭು ಪಾತ್ರ ಮಾಡುತ್ತಿದ್ದಾರೆ. ಆರಂಭದಲ್ಲಿ ಇಬ್ಬರೂ ಸ್ನೇಹಿತರಾಗಿದ್ದರು ನಂತರ ಔಟ್ಡೋರ್ ಶೂಟಿಂಗ್ ವೇಳೆಯಲ್ಲಿ ಸುಹಾಸ್ ಮತ್ತು ಅನಿಕಾ ಮಧ್ಯೆ ಮಾತು ಹೆಚ್ಚಾಗಿ ಸ್ನೇಹ ಬೆಳೆದು, ಪ್ರೀತಿಯಾಗಿ ತಿರುಗಿತು. ಕಳೆದ ೩ ವರ್ಷಗಳಿಂದ ರಿಲೇಶನ್ಶಿಪ್ನಲ್ಲಿದ್ದ ಈ ಜೋಡಿ ಈಗ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.
ಇನ್ನು ನಟ ಸುಹಾಸ್ ಅವರೇ ಗೇಬ್ರಿಯೆಲಾ ಪ್ರೇಮ ನಿವೇದನೆ ಮಾಡಿದ್ದರು. ನಟಿ ಕೂಡ ಒಪ್ಪಿ, ಪರಸ್ಪರ ಮೂರು ವರ್ಷಗಳ ಕಾಲ ಪ್ರೀತಿ ಮಾಡಿ ಈಗ ಗುರುಹಿರಿಯರ ಸಮ್ಮತಿಯ ಮೇರೆ ಹೊಸ ಬಾಳಿಗೆ ಕಾಲಿಡುತ್ತಿಡುತ್ತಿದ್ದಾರೆ. ಇದೀಗ ಸುಹಾಸ್ ಪ್ರಪೋಸ್ ಮಾಡಿರುವ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ನಟಿ ಶೇರ್ ಮಾಡಿದ್ದಾರೆ.
Live Tv
[brid partner=56869869 player=32851 video=960834 autoplay=true]