Tag: kambala

  • Bengaluru Kambala- ಕರೆಯಲ್ಲಿ ಕೋಣಗಳ ಕಮಾಲ್ ಕಣ್ತುಂಬಿಕೊಂಡ ಜನ

    Bengaluru Kambala- ಕರೆಯಲ್ಲಿ ಕೋಣಗಳ ಕಮಾಲ್ ಕಣ್ತುಂಬಿಕೊಂಡ ಜನ

    ಬೆಂಗಳೂರು: ಸಿಲಿಕಾನ್ ಸಿಟಿ, ಕರಾವಳಿ ಜನರು ಕಾತುರದಿಂದ ಕಾಯ್ತಿದ್ದ ಆ ಕ್ಷಣ ಕೊನೆಗೂ ನನಸಾಗಿದೆ. ತುಳುನಾಡಿನ ಕಂಬಳ (Kambala) ಕಲೆಯನ್ನ ಕಣ್ತುಂಬಿಕೊಳ್ಳಲು ಕಾದಿದ್ದ ಜನರಿಗೆ ವೀಕೆಂಡ್‍ನಲ್ಲಿ ಕಂಬಳದ ಅಖಾಡ ಸಖತ್ ಮನರಂಜನೆ ನೀಡಿದೆ. ಇತಿಹಾಸದಲ್ಲಿ ಪ್ರಥಮಬಾರಿಗೆ ಬೆಂಗಳೂರಿನಲ್ಲಿ ನಡೆಯುತ್ತಿರೋ ಕಂಬಳದ ಮೊದಲ ದಿನದ ಝಲಕ್ ಅದ್ಭುತವಾಗಿತ್ತು.

    ಹೌದು. ಒಂದೆಡೆ ಸಿಂಗಾರ ಮಾಡಿಕೊಂಡ ಕೋಣಗಳು ಕರೆಯಲ್ಲಿ ಶರವೇಗದಲ್ಲಿ ಓಡುತ್ತಿದ್ರೆ,ಮತ್ತೊಂದೆಡೆ ಓಟಗಾರರನ್ನ ಹುರಿದುಂಬಿಸ್ತಿದ್ದ ಜನರಿಂದ ಅರಮನೆ ಮೈದಾನದಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿತ್ತು. ಶನಿವಾರ ಬೆಳಗ್ಗೆ 10.30ಕ್ಕೆ ಕಂಬಳದ ಕರೆಗೆ ಪೂಜೆ ಸಲ್ಲಿಸಿ ದೀಪ ಬೆಳಗುವ ಮೂಲಕ ಅಶ್ವಿನಿ ಪುನೀತ್ ರಾಜ್ ಕುಮಾರ್ (Ashwini PuneethRajkumar), ಬಿ.ಎಸ್.ಯಡಿಯೂರಪ್ಪ (BS Yediyurappa) ಸೇರಿ ಹಲವರು ಬೆಂಗಳೂರು ಕಂಬಳಕ್ಕೆ ಚಾಲನೆ ನೀಡಿದ್ರು. ಕಂಬಳಕ್ಕೆ ಚಾಲನೆ ಸಿಗ್ತಿದ್ದಂತೆ ಅಖಾಡಕ್ಕಿಳಿದ ಕೋಣಗಳು ಕರೆಯಲ್ಲಿ ನೀರು ಚಿಮ್ಮಿಸುತ್ತ ನೆರೆದಿದ್ದವರ ಹಾರ್ಟ್ ಬೀಟ್ ಹೆಚ್ಚುವಂತೆ ಮಾಡಿತ್ತು. ಕಂಬಳಕ್ಕೆ ಚಾಲನೆ ನೀಡಿ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ತುಳುನಾಡಿನ ಗಂಡುಕಲೆಯನ್ನ ಸಿಲಿಕಾನ್ ಸಿಟಿಯಲ್ಲಿ ಆಯೋಜಿಸಿದ್ದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

    ಸುಮಾರು 800 ವರ್ಷಗಳ ಇತಿಹಾಸ ಹೊಂದಿರುವ ಕಂಬಳದ ಕಂಪು, ಇಂದು ಸಿಲಿಕಾನ್ ಸಿಟಿಯಲ್ಲೂ ಪಸರಿಸೋ ಮೂಲಕ ತುಳುನಾಡಿನ ಸಾಂಪ್ರದಾಯಿಕ ಮಣ್ಣಿನ ಕಲೆಯನ್ನ ಪರಿಚಯಿಸಿತು. ಬೆಳಗ್ಗೆಯೇ ಕೋಣಗಳಿಗೆ ಸ್ನಾನ ಮಾಡಿಸಿದ ಓಟಗಾರರು ತಮ್ಮ ತಮ್ಮ ಕೋಣಗಳನ್ನ ಮುದ್ದಿನಿಂದ ಕಂಬಳದ ಕರೆಗೆ ತರುತ್ತಿದ್ರೆ, ಸುತ್ತಮುತ್ತ ನೆರೆದವರು ಕೋಣಗಳ ಆಕಾರ, ಗಂಭೀರನಡೆ,ಮಿಂಚಿನ ಓಟಕ್ಕೆ ಬೆಕ್ಕಸ ಬೆರಗಾಗಿ ನಿಂತಿದ್ರು. ವೀಕೆಂಡ್ ಮೂಡ್ ನಲ್ಲಿದ್ದ ಜನರು ಕಂಬಳವನ್ನ ಸಖತ್ ಎಂಜಾಯ್ ಮಾಡಿದರು.

    ಕಂಬಳದ ಆವರಣದಲ್ಲಿ ತುಳುನಾಡಿನ ಕಲೆಗಳ ಪ್ರದರ್ಶನ ಕಣ್ಣು ಕುಕ್ಕಿದ್ರೆ, ತುಳುನಾಡಿನ ಸಂಸ್ಕøತಿಯನ್ನ ಬಿಂಬಿಸುವ ದೃಶ್ಯಗಳು, ವಸ್ತು ಪ್ರದರ್ಶನಗಳು ಜನರ ಗಮನಸೆಳೆಯಿತು. ಕಂಬಳದ ಜೊತೆ ಜೊತೆಗೆ ತುಳುನಾಡಿನ ಬಗೆ ಬಗೆಯ ಖಾದ್ಯಗಳು ಜನರ ನಾಲಿಗೆ ತಣಿಸಿದ್ರೆ, ಹಬ್ಬದ ವಾತಾವರಣ, ಕಣ್ಣುಗಳಿಗೆ ಹಬ್ಬ ಉಂಟುಮಾಡಿತ್ತು. ಇದರ ಜೊತೆಗೆ ಕರಾವಳಿಯ ಕಲೆಗಳ ಸಾಂಸ್ಕೃತಿಕ ಕಾರ್ಯಕ್ರಮವೂ ಸಹ ಈ ಕಂಬಳದಲ್ಲಿದ್ದು, ಹುಲಿ ಕುಣಿತ ಸೇರಿದಂತೆ ಕರಾವಳಿಯ ಜನಪದ ಕಲೆಗಳ ಅನಾವರಣಕ್ಕೆ ವೇದಿಕೆ ಸಜ್ಜಾಗಿತ್ತು.

    ಸದ್ಯ ಮೊದಲ ದಿನದ ಕಂಬಳಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಸಿಲಿಕಾನ್ ಸಿಟಿ ಜನರು ಕರಾವಳಿಯ ಕಂಬಳವನ್ನ ಸಖತ್ ಎಂಜಾಯ್ ಮಾಡಿದ್ದಾರೆ.ನಾಳೆ ಕೂಡ ಕಂಬಳದ ಕಂಪು ಹರಡಲಿದ್ದು, ಹಲವು ಸೆಲೆಬ್ರೆಟಿಗಳು ಭಾಗಿಯಾಗೋ ನಿರೀಕ್ಷೆಯಿದೆ. ಒಟ್ಟಿನಲ್ಲಿ ತುಳುನಾಡಿನ ಕಂಬಳದ ಕಲರವ ಜೋರಾಗಿದ್ದು,ನಾಳೆ ವೀಕೆಂಡ್ ಇರೋದರಿಂದ ಮತ್ತಷ್ಟು ಜನರು ಕಂಬಳದ ಕಂಪು ಕಣ್ತುಂಬಿಕೊಳ್ಳೋ ಸಾಧ್ಯತೆ ಇದೆ.

  • ಬೆಂಗಳೂರು ಕಂಬಳ : ಮೊದಲ ಕೆರೆ ಉದ್ಘಾಟಿಸಿದ ಅಶ್ವಿನಿ ಪುನೀತ್ ರಾಜಕುಮಾರ್

    ಬೆಂಗಳೂರು ಕಂಬಳ : ಮೊದಲ ಕೆರೆ ಉದ್ಘಾಟಿಸಿದ ಅಶ್ವಿನಿ ಪುನೀತ್ ರಾಜಕುಮಾರ್

    ದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ನಡೆಯುತ್ತಿರುವ ಕಂಬಳದ ಮೊದಲ ಕೆರೆ ಉದ್ಘಾಟನೆ ನಡೆದಿದೆ. ವಿಶೇಷ ದೀಪ ಬೆಳಗಿಸುವ ಮೂಲಕ ಕೆರೆಯನ್ನು ಉದ್ಘಾಟಿಸಿದ್ದಾರೆ ಪುನೀತ್ ಪತ್ನಿ ಅಶ್ವಿನಿ (Ashwini Puneet Rajkumar). ದೀಪಾ ಬೆಳಗಿಸಿ, ಗಂಗಾರಾತಿ ಮಾಡಿ ಕರೆಯನ್ನು ಉದ್ಘಾಟನೆ (Inauguration) ಮಾಡಲಾಗಿದೆ. ಕಂಬಳ ಸಮಿತಿ ಅಧ್ಯಕ್ಷ ಶಾಸಕ ಅಶೋಕ್ ರೈ ಹಾಗೂ ಬೆಂಗಳೂರು ಕಂಬಳ ಸಮಿತಿ ಸಂಘಟನಾ ಅಧ್ಯಕ್ಷ ಉಮೇಶ್ ಶೆಟ್ಟಿ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಹಾಜರಿದ್ದರು.

    ಕಂಬಳಕ್ಕೆ ತಾರೆಯರ ಸಾಥ್

    ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಕಂಬಳ (Bengaluru Kambala) ನಡೆಯುತ್ತಿದೆ. ಕಂಬಳಕ್ಕಾಗಿ ಅರಮನೆ ಮೈದಾನ ಸಂಪೂರ್ಣವಾಗಿ ಸಿದ್ಧಗೊಂಡಿದೆ. ಇಂದು ಮತ್ತು ನಾಳೆ ನಡೆಯಲಿರುವ ಕಂಬಳಕ್ಕೆ ಅನುಷ್ಕಾ ಶೆಟ್ಟಿ (Anushka Shetty), ರಿಷಬ್ ಶೆಟ್ಟಿ, ಪೂಜಾ ಹೆಗ್ಡೆ, ವಿವೇಕ್ ಒಬೆರಾಯ್, ಸೇರಿದಂತೆ ಹಲವು ತಾರೆಯರು ಮೆರಗು ನೀಡಲಿದ್ದಾರೆ.

    ಕರಾವಳಿ ಕಂಬಳ ಉತ್ಸವಕ್ಕೆ ಅನುಷ್ಕಾ ಶೆಟ್ಟಿ, ಪೂಜಾ ಹೆಗ್ಡೆ, ನಟ ದರ್ಶನ್ ಕಾಂತಾರ ಹೀರೋ ರಿಷಬ್(Rishab Shetty), ರಕ್ಷಿತ್ ಶೆಟ್ಟಿ, ಉಪೇಂದ್ರ, ಶಿವಣ್ಣ, ಆಶಿಶ್ ಬಲ್ಲಾಳ್, ರಾಜ್ ಬಿ ಶೆಟ್ಟಿ, ಮೇಘಾ ಶೆಟ್ಟಿ ಸೇರಿದಂತೆ ಹಲವರು ಭಾಗಿಯಾಗುತ್ತಿದ್ದಾರೆ.

    ಇದು ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಕರಾವಳಿಯ ಸಮಸ್ತ ಸಮುದಾಯದವರು ಒಂದೆಡೆ ಒಗ್ಗಟ್ಟಾಗಿ ಸೇರುವ ಬೃಹತ್ ವೇದಿಕೆ ಇದಾಗಲಿದೆ ಎಂದರು. ಇಂದಿನ ಸಮಾಲೋಚನಾ ಸಭೆಯಲ್ಲಿ ಕರಾವಳಿಯ ವಿವಿಧ ಭಾಷೆ-ಜಾತಿಗಳ 50ಕ್ಕೂ ಅಧಿಕ ಸಂಘಟನೆಗಳು ಭಾಗಿಯಾಗಿದ್ದು, ಅವರೊಂದಿಗೆ ಕಾರ್ಯಕ್ರಮದ ರೂಪುರೇಷೆ ಬಗ್ಗೆ ಮಾತುಕತೆ ನಡೆಸಲಾಗಿದೆ.

     

    ಬೆಂಗಳೂರು ಕಂಬಳಕ್ಕೆ ಈಗಾಗಲೇ 150ಕ್ಕೂ ಅಧಿಕ ಕೋಣಗಳ ನೋಂದಣಿ ಆಗಿದ್ದು, ಬೆಂಗಳೂರು ಕಂಬಳ ಬೆಂಗಳೂರಿನ ಅರಮನೆ ಮೈದಾನದ 70 ಎಕರೆ ಜಾಗದಲ್ಲಿ ನಡೆಯಲಿದೆ ಎಂದು ಬೆಂಗಳೂರಿನ ಕಂಬಳ ತಂಡ ತಿಳಿಸಿದೆ.

  • ಶನಿವಾರ, ಭಾನುವಾರ ಬೆಂಗಳೂರಲ್ಲಿ ಕಂಬಳ- ಮಾರ್ಗ ಬದಲಾವಣೆಗೆ ಸೂಚನೆ

    ಶನಿವಾರ, ಭಾನುವಾರ ಬೆಂಗಳೂರಲ್ಲಿ ಕಂಬಳ- ಮಾರ್ಗ ಬದಲಾವಣೆಗೆ ಸೂಚನೆ

    ಬೆಂಗಳೂರು: ಇತಿಹಾಸ ಪ್ರಸಿದ್ದ ಕರಾವಳಿ ಕಂಬಳಕ್ಕೆ (Karavali Kambala) ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್‍ನಲ್ಲಿ (Palace Ground Bengaluru) ಕೌಂಟ್‍ಡೌನ್ ಶುರುವಾಗಿದೆ.

    ನಾಳೆಯಿಂದ (ಶನಿವಾರ) 2 ದಿನಗಳ ಕಾಲ ನಡೆಯುವ ರೋಚಕ ಕಂಬಳಕ್ಕೆ ಎಲ್ಲಾ ರೀತಿಯ ಸಿದ್ಧತೆಗಳು ನಡೆದಿದೆ. ಕಂಬಳ ವೀಕ್ಷಣೆಗೆ ಲಕ್ಷಾಂತರ ಜನ ಬರುವ ನಿರೀಕ್ಷೆಯಿದ್ದು, ಹೆಬ್ಬಾಳ ರಸ್ತೆಯಲ್ಲಿ ಟ್ರಾಫಿಕ್ ಉಂಟಾಗುವ ನಿರೀಕ್ಷೆ ಇದೆ. ಹೀಗಾಗಿ ಸಂಚಾರದಲ್ಲಿ ಟ್ರಾಫಿಕ್ ಪೊಲೀಸರು ಒಂದಷ್ಟು ಬದಲಾವಣೆ ಮಾಡಿದ್ದಾರೆ.

    ಬದಲಿ ಮಾರ್ಗ ಬಳಸಲು ಸೂಚನೆ ನೀಡಿದ್ದಾರೆ. ಕಂಬಳಕ್ಕೆ ಬರುವ ಸಾರ್ವಜನಿಕರ ವಾಹನಗಳಿಗೆ ಕೃಷ್ಣವಿಹಾರ್ ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಸಿಬಿಡಿ ಕಡೆಯಿಂದ ಬರುವ ವಾಹನಗಳು ಮೇಖ್ರಿ ಸರ್ಕಲ್ ಬಳಿ ಯೂಟರ್ನ್ ಪಡೆದು ಕೃಷ್ಣವಿಹಾರ್ ತಲುಪುವುದು. ಬಳ್ಳಾರಿ ರಸ್ತೆಯಲ್ಲಿ ಬರುವ ವಾಹನಗಳು ಮೇಖ್ರಿ ಸರ್ಕಲ್ ಮೂಲಕ ಗೇಟ್ ನಂಬರ್ 1 ರಲ್ಲಿ ಅರಮನೆ ಮೈದಾನಕ್ಕೆ ಎಂಟ್ರಿಯಾಗಲಿದೆ. ಯಶವಂತಪುರ ಕಡೆಯಿಂದ ಬರುವ ವಾಹನಗಳು ಮೇಖ್ರಿ ಸರ್ಕಲ್ ನಲ್ಲಿ ಬಲ ತಿರುವು ಪಡೆದು ಅರಮನೆ ಮೈದಾನ ಎಂಟ್ರಿ. ಕ್ಯಾಬ್ ನಲ್ಲಿ ಬರುವ ಸಾರ್ವಜನಿಕರಿಗೆ ಗೇಟ್ 2 ರಲ್ಲಿ ಎಂಟ್ರಿಗೆ ಅವಕಾಶ ಕಲ್ಪಿಸಲಾಗಿದೆ. ಇದನ್ನೂ ಓದಿ: ಇತಿಹಾಸದಲ್ಲೇ ಮೊದಲ ಬಾರಿಗೆ ಬೆಂಗ್ಳೂರಲ್ಲಿ ನ. 25, 26ರಂದು ಕಂಬಳ

    ಬದಲಿ ಮಾರ್ಗ: ಅರಮನೆ ರಸ್ತೆಯಿಂದ- ಮೈಸೂರು ಬ್ಯಾಂಕ್ ಸರ್ಕಲ್, ಎಂವಿ ಜಯರಾಮ ರಸ್ತೆ- ಅರಮನೆ ರಸ್ತೆ, ಬಳ್ಳಾರಿ ರಸ್ತೆ- ಮೇಖ್ರಿ ಸರ್ಕಲ್ ನಿಂದ ಎಲ್ ಆರ್ ಡಿಇ ಜಂಕ್ಷನ್ ವರೆಗೆ, ಕನ್ನಿಂಗ್ ಹ್ಯಾಮ್ ರಸ್ತೆ- ಬಾಳೆಕುಂದ್ರಿ ಸರ್ಕಲ್ ನಿಂದ ಲೀ ಮೆರಿಡಿಯನ್ ಅಂಡರ್ ಪಾಸ್, ಮಿಲ್ಲರ್ ರಸ್ತೆಯಿಂದ ಎಲ್ ಆರ್ ಡಿಇ ಜಂಕ್ಷನ್, ಜಯಮಹಲ್ ರಸ್ತೆ ಹಾಗೂ ಪ್ಯಾಲೇಸ್ ಸುತ್ತಮುತ್ತಲಿನ ರಸ್ತೆಗಳ ಬದಲಿಗೆ ಪರ್ಯಾಯ ಮಾರ್ಗ ಬಳಸಲು ಸೂಚನೆ ನೀಡಲಾಗಿದೆ.

    ಪಾರ್ಕಿಂಗ್ ನಿಷೇಧ ಏರಿಯಾಗಳು: ಎಂವಿ ಜಯರಾಮ ರಸ್ತೆ, ವಸಂತನಗರ, ನಂದಿದುರ್ಗ ರಸ್ತೆ, ಜಯಮಹಲ್ ರಸ್ತೆ, ರಮಣ ಮಹರ್ಷಿ ರಸ್ತೆ, ತರಳಬಾಳು ರಸ್ತೆ, ಸಿ ವಿ ರಾಮನ್ ರಸ್ತೆಯಲ್ಲಿ ಪಾಕಿರ್ಂಗ್ ನಿಷೇಧ ಹೇರಲಾಗಿದೆ.‌

    ಭಾರೀ ವಾಹನಗಳಿಗೂ ನಿಷೇಧ: ಇಂದಿನಿಂದ ಮೂರು ದಿನ ಕಂಟ್ಮೋನೆಂಟ್ ರೈಲ್ವೆ ಸ್ಟೇಷನ್, ಬಿಎಲ್, ಹೆಬ್ಬಾಳ ಜಂಕ್ಷನ್, ಕಾವೇರಿ ಜಂಕ್ಷನ್, ಬಸವೇಶ್ವರ ಜಂಕ್ಷನ್, ಐಐಎಸ್‍ಸಿ ಜಂಕ್ಷನ್ ಸುತ್ತಮುತ್ತ ಭಾರೀ ವಾಹನಗಳನ್ನು ನಿಷೇಧಿಸಲಾಗಿದೆ. ಬೆಳಗ್ಗೆ 7 ರಿಂದ ಮಧ್ಯಾಹ್ನ 12 ಗಂಟೆ, ಮಧ್ಯಾಹ್ನ 3 ರಿಂದ ರಾತ್ರಿ 10 ಗಂಟೆಯವರೆಗೆ ನಿಷೇಧ ಹೇರಲಾಗಿದೆ.

  • Kambala: ಬೆಂಗಳೂರಿನಲ್ಲಿನ ಕರಾವಳಿ ಉತ್ಸವಕ್ಕೆ ಸಾಕ್ಷಿಯಾಗಲಿದ್ದಾರೆ ಈ ಕಲಾವಿದರು

    Kambala: ಬೆಂಗಳೂರಿನಲ್ಲಿನ ಕರಾವಳಿ ಉತ್ಸವಕ್ಕೆ ಸಾಕ್ಷಿಯಾಗಲಿದ್ದಾರೆ ಈ ಕಲಾವಿದರು

    ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಕಂಬಳ (Bengaluru Kambala) ನಡೆಯುತ್ತಿದೆ. ಕಂಬಳಕ್ಕಾಗಿ ಅರಮನೆ ಮೈದಾನ ಸಂಪೂರ್ಣವಾಗಿ ಸಿದ್ಧಗೊಂಡಿದೆ. ನವೆಂಬರ್ 25, 26ರಂದು ನಡೆಯಲಿರುವ ಕಂಬಳಕ್ಕೆ ಅನುಷ್ಕಾ ಶೆಟ್ಟಿ (Anushka Shetty), ರಿಷಬ್ ಶೆಟ್ಟಿ, ಪೂಜಾ ಹೆಗ್ಡೆ, ವಿವೇಕ್ ಒಬೆರಾಯ್, ಸೇರಿದಂತೆ ಹಲವು ತಾರೆಯರು ಮೆರಗು ನೀಡಲಿದ್ದಾರೆ. ಇದನ್ನೂ ಓದಿ:ರಶ್ಮಿಕಾ ಮಂದಣ್ಣ ನಟನೆಯ ‘ಅನಿಮಲ್‌’ ಟ್ರೈಲರ್‌ಗೆ ಪ್ರಭಾಸ್‌ ರಿಯಾಕ್ಷನ್‌

    ಕರಾವಳಿ ಕಂಬಳ ಉತ್ಸವಕ್ಕೆ ಅನುಷ್ಕಾ ಶೆಟ್ಟಿ, ಪೂಜಾ ಹೆಗ್ಡೆ, ನಟ ದರ್ಶನ್ ಕಾಂತಾರ ಹೀರೋ ರಿಷಬ್(Rishab Shetty), ರಕ್ಷಿತ್ ಶೆಟ್ಟಿ, ಉಪೇಂದ್ರ, ಶಿವಣ್ಣ, ಆಶಿಶ್ ಬಲ್ಲಾಳ್, ರಾಜ್ ಬಿ ಶೆಟ್ಟಿ, ಮೇಘಾ ಶೆಟ್ಟಿ ಸೇರಿದಂತೆ ಹಲವರು ಭಾಗಿಯಾಗುತ್ತಿದ್ದಾರೆ.

    ನವೆಂಬರ್ 25, 26ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳ ತಯಾರಿ ಸಲುವಾಗಿ ಬೆಂಗಳೂರಿನ ಬಂಟರ ಸಂಘದಲ್ಲಿ ಕರಾವಳಿಯ ವಿವಿಧ ಜಾತಿ-ಭಾಷಾ ಸಂಘಟನೆಗಳ ಜೊತೆ ನಡೆದ ಬೃಹತ್ ಸಮಾಲೋಚನಾ ಸಭೆ ಮಾಡಲಾಗಿದೆ.

    ಇದು ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಕರಾವಳಿಯ ಸಮಸ್ತ ಸಮುದಾಯದವರು ಒಂದೆಡೆ ಒಗ್ಗಟ್ಟಾಗಿ ಸೇರುವ ಬೃಹತ್ ವೇದಿಕೆ ಇದಾಗಲಿದೆ ಎಂದರು. ಇಂದಿನ ಸಮಾಲೋಚನಾ ಸಭೆಯಲ್ಲಿ ಕರಾವಳಿಯ ವಿವಿಧ ಭಾಷೆ-ಜಾತಿಗಳ 50ಕ್ಕೂ ಅಧಿಕ ಸಂಘಟನೆಗಳು ಭಾಗಿಯಾಗಿದ್ದು, ಅವರೊಂದಿಗೆ ಕಾರ್ಯಕ್ರಮದ ರೂಪುರೇಷೆ ಬಗ್ಗೆ ಮಾತುಕತೆ ನಡೆಸಲಾಗಿದೆ.

    ಬೆಂಗಳೂರು ಕಂಬಳಕ್ಕೆ ಈಗಾಗಲೇ 150ಕ್ಕೂ ಅಧಿಕ ಕೋಣಗಳ ನೋಂದಣಿ ಆಗಿದ್ದು, ಬೆಂಗಳೂರು ಕಂಬಳ ಬೆಂಗಳೂರಿನ ಅರಮನೆ ಮೈದಾನದ 70 ಎಕರೆ ಜಾಗದಲ್ಲಿ ನಡೆಯಲಿದೆ ಎಂದು ಬೆಂಗಳೂರಿನ ಕಂಬಳ ತಂಡ ತಿಳಿಸಿದೆ.

  • ಇತಿಹಾಸದಲ್ಲೇ ಮೊದಲ ಬಾರಿಗೆ ಬೆಂಗ್ಳೂರಲ್ಲಿ ನ. 25, 26ರಂದು ಕಂಬಳ

    ಇತಿಹಾಸದಲ್ಲೇ ಮೊದಲ ಬಾರಿಗೆ ಬೆಂಗ್ಳೂರಲ್ಲಿ ನ. 25, 26ರಂದು ಕಂಬಳ

    – ಮುಖ್ಯ ವೇದಿಕೆಗೆ ಪುನೀತ್ ರಾಜ್ ಕುಮಾರ್ ಹೆಸರು
    – 8 ಕೋಟಿ ಖರ್ಚಿನಲ್ಲಿ ಕಂಬಳ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕರಾವಳಿ ಕಂಬಳಕ್ಕೆ (Bengaluru Kambala) ಕೌಂಟ್ ಡೌನ್ ಆರಂಭವಾಗಿದೆ. ಇತಿಹಾದಲ್ಲೇ ಮೊದಲ ಬಾರಿಗೆ ನವೆಂಬರ್ 25, 26 ರಂದು ನಗರದ ಪ್ಯಾಲೆಸ್ ಗ್ರೌಂಡ್‍ನಲ್ಲಿ ಕಂಬಳ ನಡೆಯಲಿದೆ.

    ಈ ಸಂಬಂಧ ಕಂಬಳ ಸಮಿತಿಯ ಗೌರವಾಧ್ಯಕ್ಷ ಪ್ರಕಾಶ್ ಶೆಟ್ಟಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿ, 200 ಜೋಡಿ ಕೋಣಗಳು ಕರಾವಳಿ ಕಂಬಳದಲ್ಲಿ ಕಮಾಲ್ ಮಾಡಲಿವೆ. ಹಾಸನದಿಂದ ದೊಡ್ಡ ಮೆರವಣಿಯ ಮೂಲಕ ಬೆಂಗಳೂರಿಗೆ ಕೋಣಗಳು ಬರಲಿದೆ. ಕಂಬಳದ ಮುಖ್ಯ ವೇದಿಕೆಗೆ ಪುನೀತ್ ರಾಜ್ ಕುಮಾರ್ (Puneeth Raj Kumar) ಅಂತಾ ಹೆಸರಿಟ್ಟು ನಾಮಕರಣ ಮಾಡಲಾಗಿದೆ ಎಂದರು.

    ಇದೇ ವೇಳೆ ಕಂಬಳ ಸಮಿತಿಯ ಅಧ್ಯಕ್ಷ, ಪುತ್ತೂರು ಶಾಸಕ ಆಶೋಕ್ ರೈ (Ashok Rai) ಮಾತನಾಡಿ, ಬೆಂಗಳೂರಿನ ಕಂಬಳ ರೆಕಾರ್ಡ್ ಬ್ರೇಕ್ ಆಗಲಿದೆ. ಕರಾವಳಿ ಭಾಗದಲ್ಲಿ 147 ಕೆರೆ ಇರಲಿದೆ. ಆದರೆ ಬೆಂಗಳೂರಿನ ಕೆರೆ 155 ಮೀಟರ್ ಉದ್ದ ಇರಲಿದೆ. ಕಂಬಳದ ಕೋಣಗಳಿಗೆ ನೀರು ಬೈಹುಲ್ಲು, ಹುರುಳಿ ಎಲ್ಲವೂ ಊರಿಂದ ತರಿಸಲಾಗಿದೆ ಎಂದರು.

    ನೀರು ಕೂಡ ಬದಲಾವಣೆ ಆದರೆ ಅವುಗಳಿಗೆ ಆರೋಗ್ಯ ಸಮಸ್ಯೆ ಆಗಲಿದೆ. ಹೀಗಾಗಿ ಎಲ್ಲಾ ರೀತಿಯ ಮುನ್ನೆಚ್ಚರಿಕೆ ವಹಿಸಲಾಗಿದೆ. ಗೆದ್ದ ಕಂಬಳದ ಕೋಣಗಳ ಮಾಲೀಕರಿಗೆ 16 ಗ್ರಾಂ. ಬಂಗಾರ ಮತ್ತು ಒಂದು ಲಕ್ಷ ರೂ. ಬಹುಮಾನ ಕೊಡಲಾಗುತ್ತೆ ಎಂದು ಹೇಳಿದರು.

    ಬ್ರಿಜ್ ಭೂಷಣ್ ಆಗಮನ ಗೊಂದಲ ಉಂಟಾಗಿತ್ತು. ಹೀಗಾಗಿ ಅವ್ರಿಗೆ ಖುದ್ದಾಗಿ ವಿರೋಧದ ಬಗ್ಗೆಯೂ ಅವರಿಗೆ ಹೇಳಿದ್ದೇವೆ. ಹೊಸ ಆಮಂತ್ರಣ ಪತ್ರಿಕೆಯನ್ನು ಕೂಡ ತಯಾರು ಮಾಡುತ್ತಿದ್ದೇವೆ. ಒಟ್ಟು ಎಂಟು ಕೋಟಿ ಖರ್ಚಿನಲ್ಲಿ ಕಂಬಳ ನಡೆಯಲಿದೆ. ಎರಡು ದಿನದ ಕಾರ್ಯಕ್ರಮಕ್ಕೆ ಒಟ್ಟು ಆರು ಲಕ್ಷ ಜನ ಬರುವ ನಿರೀಕ್ಷೆ ಇದೆ ಎಂದು ವಿವರಿಸಿದರು.

    ಐಶ್ವರ್ಯಾ ರೈ ಕಂಬಳಕ್ಕೆ ಬರೋದು ಅನುಮಾನ ಇದೆ. ಅವರ ತಾಯಿಗೆ ಆರೋಗ್ಯದ ಸಮಸ್ಯೆ ಇರೋದ್ರಿಂದ ಬರೋದು ಡೌಟು. ಆದರೆ ಬೇರೆ ಎಲ್ಲಾ ಗೆಸ್ಟ್ ಬರುತ್ತಿದ್ದಾರೆ ಎಂದು ಗುರುಕಿರಣ್ (Guru Kiran) ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.

  • ಬೆಂಗಳೂರು ಕಂಬಳಕ್ಕೆ ಬರಲಿದ್ದಾರೆ ಅನುಷ್ಕಾ ಶೆಟ್ಟಿ, ಐಶ್ವರ್ಯಾ ರೈ

    ಬೆಂಗಳೂರು ಕಂಬಳಕ್ಕೆ ಬರಲಿದ್ದಾರೆ ಅನುಷ್ಕಾ ಶೆಟ್ಟಿ, ಐಶ್ವರ್ಯಾ ರೈ

    ದೇ ಪ್ರಥಮ ಬಾರಿಗೆ ರಾಜಧಾನಿ ಬೆಂಗಳೂರಿನಲ್ಲಿ (Bengaluru) ನಡೆಯಲಿರುವ ‘ಬೆಂಗಳೂರು ಕಂಬಳ’ಕ್ಕೆ (Kambala) ಕನಿಷ್ಠ 3ರಿಂದ 5 ಲಕ್ಷ ಜನರು ಬರುವ ನಿರೀಕ್ಷೆ ಇದ್ದು, ಅದಕ್ಕೆ ತಕ್ಕಂತೆ ತಯಾರಿ ಮಾಡಿಕೊಳ್ಳಲಾಗುತ್ತಿದೆ ಎಂದು ಬೆಂಗಳೂರು ಕಂಬಳ ಸಮಿತಿ (ರಿ.) ಗೌರವಾಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಹೇಳಿದರು.

    ಈ ಬಾರಿ ನಡೆಯಲಿರುವ ಬೆಂಗಳೂರು ಕಂಬಳಕ್ಕೆ ಬಾಲಿವುಡ್ ನಟಿ ಐಶ್ವರ್ಯಾ ರೈ(Aishwarya Rai), ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ (Anushka Shetty) ಸೇರಿದಂತೆ ವಿವಿಧ ಚಿತ್ರರಂಗಗಳಲ್ಲಿ ಇರುವ ಕರಾವಳಿ ಮೂಲದ ಸಿನಿಮಾತಾರೆಯರು ಆಗಮಿಸಲಿದ್ದಾರೆ ಎಂದು ಸಮಿತಿ ಸಂಘಟನಾ ಅಧ್ಯಕ್ಷ ಉಮೇಶ್ ಶೆಟ್ಟಿ ತಿಳಿಸಿದ್ದಾರೆ.

    ನವೆಂಬರ್ 25, 26ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳ ತಯಾರಿ ಸಲುವಾಗಿ ಇಂದು ಬೆಂಗಳೂರಿನ ಬಂಟರ ಸಂಘದಲ್ಲಿ ಕರಾವಳಿಯ ವಿವಿಧ ಜಾತಿ-ಭಾಷಾ ಸಂಘಟನೆಗಳ ಜೊತೆ ನಡೆದ ಬೃಹತ್ ಸಮಾಲೋಚನಾ ಸಭೆ ಬಳಿಕ ಆಯೋಜಿಸಿದ ಬಹಿರಂಗ ಸಮಾವೇಶದಲ್ಲಿ ಅವರು ಈ ವಿಷಯ ತಿಳಿಸಿದರು. ಇದನ್ನೂ ಓದಿ:ರಾಮ್ ಚರಣ್ ನಟನೆಯ ‘ಗೇಮ್ ಚೇಂಜರ್’ ಸಾಂಗ್ ಲೀಕ್: ಕೇಡಿಗಳ ಅರೆಸ್ಟ್

    ಇದು ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಕರಾವಳಿಯ ಸಮಸ್ತ ಸಮುದಾಯದವರು ಒಂದೆಡೆ ಒಗ್ಗಟ್ಟಾಗಿ ಸೇರುವ ಬೃಹತ್ ವೇದಿಕೆ ಇದಾಗಲಿದೆ ಎಂದರು. ಇಂದಿನ ಸಮಾಲೋಚನಾ ಸಭೆಯಲ್ಲಿ ಕರಾವಳಿಯ ವಿವಿಧ ಭಾಷೆ-ಜಾತಿಗಳ 50ಕ್ಕೂ ಅಧಿಕ ಸಂಘಟನೆಗಳು ಭಾಗಿಯಾಗಿದ್ದು ಅವರೊಂದಿಗೆ ಕಾರ್ಯಕ್ರಮದ ರೂಪುರೇಷೆ ಬಗ್ಗೆ ಮಾತುಕತೆ ನಡೆಸಲಾಗಿದೆ ಎಂದರು.

    ಬೆಂಗಳೂರು ಕಂಬಳಕ್ಕೆ ಈಗಾಗಲೇ 150ಕ್ಕೂ ಅಧಿಕ ಕೋಣಗಳ ನೋಂದಣಿ ಆಗಿದ್ದು, ಆ ಎಲ್ಲ ಕೋಣಗಳನ್ನು ನ.23ರಂದು ಉಪ್ಪಿನಂಗಡಿಯಲ್ಲಿ ಬೀಳ್ಕೊಡುಗೆ ಮಾಡಿ ಕಳಿಸಿಕೊಡಲಾಗುವುದು ಎಂದು ಕಂಬಳ ಸಮಿತಿ ಅಧ್ಯಕ್ಷ, ಶಾಸಕ ಅಶೋಕ್ ರೈ ತಿಳಿಸಿದರು. ಅಷ್ಟೂ ಕೋಣಗಳನ್ನು ಹಾಸನ ಹಾಗೂ ನೆಲಮಂಗಲದಲ್ಲಿ ಅದ್ಧೂರಿಯಾಗಿ ಸ್ವಾಗತಿಸಿಕೊಳ್ಳಲಾಗುವುದು. ಅಲ್ಲದೆ ಪ್ರತಿ ತಾಲೂಕಲ್ಲೂ ಸ್ವಾಗತ-ಬೀಳ್ಕೊಡುಗೆ ಇರಲಿದೆ ಎಂದರು.

    ಬೆಂಗಳೂರು ಕಂಬಳ ಬೆಂಗಳೂರಿನ ಅರಮನೆ ಮೈದಾನದ 70 ಎಕರೆ ಜಾಗದಲ್ಲಿ ನಡೆಯಲಿದೆ ಎಂದು ಸಮಿತಿ ಕಾರ್ಯಾಧ್ಯಕ್ಷ, ಸಂಗೀತ ನಿರ್ದೇಶಕ ಗುರುಕಿರಣ್ ತಿಳಿಸಿದರು. ‘ಬೆಂಗಳೂರು ಕಂಬಳ ನಮ್ಮ ಕಂಬಳ’ ಎಂಬ ಥೀಮ್ ಸಾಂಗ್ ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು. ಈ ಥೀಮ್ ಸಾಂಗ್ ವಿ.ಮನೋಹರ್ ಸಾಹಿತ್ಯ, ಗುರುಕಿರಣ್ ಸಂಗೀತ ಸಂಯೋಜನೆ, ಮಣಿಕಾಂತ್ ಕದ್ರಿ ಪ್ರೋಗ್ರಾಮಿಂಗ್‌ನಲ್ಲಿ ಮೂಡಿ ಬಂದಿದೆ. ಇನ್ನೂ ಬೆಂಗಳೂರು ಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 1 ಕೋಟಿ ರೂ. ಅನುದಾನ ಘೋಷಿಸಿದ್ದಾರೆ ಎಂದು ಕಂಬಳ ಸಮಿತಿ ಉಪಾಧ್ಯಕ್ಷ ಗುಣರಂಜನ್ ಶೆಟ್ಟಿ ತಿಳಿಸಿದ್ದಾರೆ.

  • ಬೆಂಗಳೂರು ಕಂಬಳಕ್ಕೆ 1 ಕೋಟಿ ರೂ. ಘೋಷಿಸಿದ ಸಿಎಂ – ಐಶ್ವರ್ಯಾ ರೈ, ಅನುಷ್ಕಾ ಶೆಟ್ಟಿ ಸಿನಿಸ್ಟಾರ್ಸ್ ಭಾಗಿ

    ಬೆಂಗಳೂರು ಕಂಬಳಕ್ಕೆ 1 ಕೋಟಿ ರೂ. ಘೋಷಿಸಿದ ಸಿಎಂ – ಐಶ್ವರ್ಯಾ ರೈ, ಅನುಷ್ಕಾ ಶೆಟ್ಟಿ ಸಿನಿಸ್ಟಾರ್ಸ್ ಭಾಗಿ

    ಬೆಂಗಳೂರು: ಇದೇ ಪ್ರಥಮ ಬಾರಿಗೆ ರಾಜಧಾನಿ ಬೆಂಗಳೂರಿನಲ್ಲಿ ನಡೆಯಲಿರುವ ‘ಬೆಂಗಳೂರು ಕಂಬಳ’ಕ್ಕೆ (Bengaluru Kambala) ಕನಿಷ್ಠ 3 ರಿಂದ 5 ಲಕ್ಷ ಜನರು ಬರುವ ನಿರೀಕ್ಷೆ ಇದ್ದು, ಅದಕ್ಕೆ ತಕ್ಕಂತೆ ತಯಾರಿ ಮಾಡಿಕೊಳ್ಳಲಾಗುತ್ತಿದೆ ಎಂದು ಬೆಂಗಳೂರು ಕಂಬಳ ಸಮಿತಿ ಗೌರವಾಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಹೇಳಿದರು.

    ನ. 25, 26ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳ ತಯಾರಿ ಸಲುವಾಗಿ ಇಂದು ಬೆಂಗಳೂರಿನ ಬಂಟರ ಸಂಘದಲ್ಲಿ ಕರಾವಳಿಯ ವಿವಿಧ ಜಾತಿ-ಭಾಷಾ ಸಂಘಟನೆಗಳ ಜೊತೆ ನಡೆದ ಬೃಹತ್ ಸಮಾಲೋಚನಾ ಸಭೆ ಬಳಿಕ ಆಯೋಜಿಸಿದ ಬಹಿರಂಗ ಸಮಾವೇಶದಲ್ಲಿ ಅವರು ಈ ವಿಷಯ ತಿಳಿಸಿದರು. ಇದನ್ನೂ ಓದಿ: ಉದ್ಯೋಗದ ಆಸೆಗೆ ಬಿದ್ದು ಕಾಂಬೋಡಿಯಾದಲ್ಲಿ ಸಿಲುಕಿದ್ದ ಕಾಫಿನಾಡಿನ ಯುವಕನ ರಕ್ಷಣೆ

    ಇದು ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಕರಾವಳಿಯ ಸಮಸ್ತ ಸಮುದಾಯದವರು ಒಂದೆಡೆ ಒಗ್ಗಟ್ಟಾಗಿ ಸೇರುವ ಬೃಹತ್ ವೇದಿಕೆ ಇದಾಗಲಿದೆ ಎಂದರು. ಇಂದಿನ ಸಮಾಲೋಚನಾ ಸಭೆಯಲ್ಲಿ ಕರಾವಳಿಯ ವಿವಿಧ ಭಾಷೆ-ಜಾತಿಗಳ 50ಕ್ಕೂ ಅಧಿಕ ಸಂಘಟನೆಗಳು ಭಾಗಿಯಾಗಿದ್ದು ಅವರೊಂದಿಗೆ ಕಾರ್ಯಕ್ರಮದ ರೂಪುರೇಷೆ ಬಗ್ಗೆ ಮಾತುಕತೆ ನಡೆಸಲಾಗಿದೆ ಎಂದರು.

    ಬೆಂಗಳೂರು ಕಂಬಳಕ್ಕೆ ಈಗಾಗಲೇ 150ಕ್ಕೂ ಅಧಿಕ ಕೋಣಗಳ ನೋಂದಣಿ ಆಗಿದ್ದು, ಆ ಎಲ್ಲ ಕೋಣಗಳನ್ನು ನ.23ರಂದು ಉಪ್ಪಿನಂಗಡಿಯಲ್ಲಿ ಬೀಳ್ಕೊಡುಗೆ ಮಾಡಿ ಕಳಿಸಿಕೊಡಲಾಗುವುದು ಎಂದು ಕಂಬಳ ಸಮಿತಿ ಅಧ್ಯಕ್ಷ, ಶಾಸಕ ಅಶೋಕ್ ರೈ ತಿಳಿಸಿದರು. ಅಷ್ಟೂ ಕೋಣಗಳನ್ನು ಹಾಸನ ಹಾಗೂ ನೆಲಮಂಗಲದಲ್ಲಿ ಅದ್ಧೂರಿಯಾಗಿ ಸ್ವಾಗತಿಸಿಕೊಳ್ಳಲಾಗುವುದು. ಅಲ್ಲದೆ ಪ್ರತಿ ತಾಲೂಕಲ್ಲೂ ಸ್ವಾಗತ-ಬೀಳ್ಕೊಡುಗೆ ಇರಲಿದೆ ಎಂದು ಹೇಳಿದರು. ಇದನ್ನೂ ಓದಿ: ಹೆಣ್ಣುಮರಿಗೆ ಜನ್ಮ ನೀಡಿದ ಸಕ್ರೆಬೈಲಿನ ಭಾನುಮತಿ ಆನೆ

    ಬೆಂಗಳೂರು ಕಂಬಳ ಬೆಂಗಳೂರಿನ ಅರಮನೆ ಮೈದಾನದ 70 ಎಕರೆ ಜಾಗದಲ್ಲಿ ನಡೆಯಲಿದೆ ಎಂದು ಸಮಿತಿ ಕಾರ್ಯಾಧ್ಯಕ್ಷ, ಸಂಗೀತ ನಿರ್ದೇಶಕ ಗುರುಕಿರಣ್ ತಿಳಿಸಿದರು. ‘ಬೆಂಗಳೂರು ಕಂಬಳ ನಮ್ಮ ಕಂಬಳ’ ಎಂಬ ಥೀಮ್ ಸಾಂಗ್ ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು. ಈ ಥೀಮ್ ಸಾಂಗ್‌ ವಿ.ಮನೋಹರ್ ಸಾಹಿತ್ಯ, ಗುರುಕಿರಣ್ ಸಂಗೀತ ಸಂಯೋಜನೆ, ಮಣಿಕಾಂತ್ ಕದ್ರಿ ಪ್ರೋಗ್ರಾಮಿಂಗ್‌ನಲ್ಲಿ ಮೂಡಿ ಬಂದಿದೆ.

    1 ಕೋಟಿ ರೂ. ಘೋಷಿಸಿದ ಸಿಎಂ
    ಬೆಂಗಳೂರು ಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 1 ಕೋಟಿ ರೂ. ಅನುದಾನ ಘೋಷಿಸಿದ್ದಾರೆ ಎಂದು ಕಂಬಳ ಸಮಿತಿ ಉಪಾಧ್ಯಕ್ಷ ಗುಣರಂಜನ್ ಶೆಟ್ಟಿ ತಿಳಿಸಿದ್ದಾರೆ.

    ತಾರಾಕಳೆ: ಬೆಂಗಳೂರು ಕಂಬಳಕ್ಕೆ ಬಾಲಿವುಡ್ ನಟಿ ಐಶ್ವರ್ಯಾ ರೈ, ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ ಸೇರಿದಂತೆ ವಿವಿಧ ಚಿತ್ರರಂಗಗಳಲ್ಲಿ ಇರುವ ಕರಾವಳಿ ಮೂಲದ ಸಿನಿಮಾತಾರೆಯರು ಆಗಮಿಸಲಿದ್ದಾರೆ ಎಂದು ಸಮಿತಿ ಸಂಘಟನಾ ಅಧ್ಯಕ್ಷ ಉಮೇಶ್ ಶೆಟ್ಟಿ ತಿಳಿಸಿದ್ದಾರೆ. ಬೆಂಗಳೂರು ಕಂಬಳಕ್ಕೆ ಆಭರಣ ಜುವೆಲ್ಲರ್ಸ್ ಅವರು ಶೀರ್ಷಿಕೆ ಪ್ರಾಯೋಜಕರಾಗಿದ್ದು, ಆಭರಣ ಜುವೆಲ್ಲರ್ಸ್‌ನ ವ್ಯವಸ್ಥಾಪಕ ನಿರ್ದೇಶಕ ಪ್ರಕಾಶ್ ಕಾಮತ್ ಉಪಸ್ಥಿತರಿದ್ದರು.

  • ಕಂಬಳದಲ್ಲಿ ಭಾಗವಹಿಸಲು 100ಕ್ಕೂ ಅಧಿಕ ಜೊತೆ ಕೋಣಗಳು ಬೆಂಗಳೂರಿಗೆ: ಅಶೋಕ್ ರೈ

    ಕಂಬಳದಲ್ಲಿ ಭಾಗವಹಿಸಲು 100ಕ್ಕೂ ಅಧಿಕ ಜೊತೆ ಕೋಣಗಳು ಬೆಂಗಳೂರಿಗೆ: ಅಶೋಕ್ ರೈ

    ಮಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಇದೇ ಮೊತ್ತಮೊದಲ ಬಾರಿಗೆ ಕಂಬಳ (Kambala) ಆಯೋಜನೆಗೊಳ್ಳುತ್ತಿದೆ. ನವೆಂಬರ್ 25 ಮತ್ತು 26ರಂದು ನಡೆಯುವ ಕಂಬಳದಲ್ಲಿ ಭಾಗವಹಿಸಲು ದಕ್ಷಿಣ ಕನ್ನಡ, ಉಡುಪಿ ಮತ್ತು ಕೇರಳದ ಕಾಸರಗೋಡು ಜಿಲ್ಲೆಯ 100ಕ್ಕೂ ಅಧಿಕ ಜೋಡಿ ಕೋಣಗಳು (Buffalo) ಮಂಗಳೂರಿನಿಂದ (Mangaluru) ಮೆರವಣಿಗೆ ಮೂಲಕ ಬೆಂಗಳೂರಿಗೆ ತೆರಳಲಿದೆ ಎಂದು ಬೆಂಗಳೂರು ಕಂಬಳ ಸಮಿತಿಯ ಅಧ್ಯಕ್ಷ, ಶಾಸಕ ಅಶೋಕ್ ಕುಮಾರ್ ರೈ (Ashok Kumar Rai) ತಿಳಿಸಿದ್ದಾರೆ.

    ಬೆಂಗಳೂರಿನಲ್ಲಿ ನಡೆಯುವ ಕಂಬಳಕ್ಕೆ ಸಂಬಂಧಿಸಿದಂತೆ ಕಂಬಳ ಕೋಣಗಳ ಮಾಲೀಕರ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ನವೆಂಬರ್ 23ರಂದು ಮೆರವಣಿಗೆಯ ಮೂಲಕ ಕೋಣಗಳನ್ನು ಲಾರಿಯಲ್ಲಿ ಬೆಂಗಳೂರಿಗೆ ಕೊಂಡೊಯ್ಯಲಾಗುತ್ತದೆ. ಹಾಸನದಲ್ಲಿ ಎರಡು ಗಂಟೆಗಳ ಕಾಲ ಕೋಣಗಳಿಗೆ ವಿಶ್ರಾಂತಿ ಮತ್ತು ಆಹಾರ ನೀಡಲಾಗುತ್ತದೆ. ಬಳಿಕ ಚನ್ನರಾಯಪಟ್ಟಣ, ತುಮಕೂರಿನಲ್ಲಿ ವಿಶ್ರಾಂತಿ ಪಡೆದು ಬೆಂಗಳೂರಿಗೆ ಹೋಗಲಾಗುವುದು. ಹಾಸನ, ಚನ್ನರಾಯಪಟ್ಟಣ ಮತ್ತು ತುಮಕೂರಿನಲ್ಲಿ ಕರಾವಳಿಯ ಜನರು ಸೇರಿದಂತೆ ಸ್ಥಳೀಯರು ಕೋಣಗಳಿಗೆ ಸ್ವಾಗತಿಸಲಿದ್ದಾರೆ. ಈ ಕೋಣಗಳನ್ನು ಕೊಂಡೊಯ್ಯುವಾಗ ಪಶು ವೈದ್ಯಾಧಿಕಾರಿಗಳು ಮತ್ತು ಪಶು ಅಂಬುಲೆನ್ಸ್‌ಗಳು ಜೊತೆಗಿರಲಿದೆ ಎಂದರು. ಇದನ್ನೂ ಓದಿ: ಲಿಂಗಾಯತರ ವಿರುದ್ಧ ಸಿಎಂ ಪದೇ ಪದೇ ದ್ವೇಷ ಸಾಧಿಸುತ್ತಿದ್ದಾರೆ: ಬಿಜೆಪಿ ಟೀಕೆ

    125 ಜೋಡಿ ಕೋಣಗಳಿಗೆ ಬೆಂಗಳೂರಿನಲ್ಲಿ ಟೆಂಟ್ ಮತ್ತು ನೀರಿನ ವ್ಯವಸ್ಥೆ ಮಾಡಲಾಗಿದೆ. ಕೋಣಗಳ ಮಾಲೀಕರಿಗೆ ಕೊಠಡಿ ವ್ಯವಸ್ಥೆಯನ್ನು ಮಾಡಲಾಗಿದೆ. ಕೋಣಗಳಿಗೆ ನೀರಿನ ವ್ಯತ್ಯಾಸವಾಗಬಾರದೆಂಬ ನೆಲೆಯಲ್ಲಿ ಮಂಗಳೂರಿನಿಂದಲೇ 5 ಟ್ಯಾಂಕರ್ ನೀರನ್ನು ಅಲ್ಲಿಗೆ ಕೊಂಡೊಯ್ಯಲಾಗುತ್ತದೆ. ಕೋಣಗಳಿಗೆ ಬೈಹುಲ್ಲು, ಹುರುಳಿಯನ್ನು ಇಲ್ಲಿಂದಲೇ ಕೊಂಡೊಯ್ದು ಅಲ್ಲಿಯೇ ತಯಾರಿಸಿ ಕೊಡಲಾಗುತ್ತದೆ. ಈ ವರ್ಷ ಆರಂಭಿಸಲಾದ ಕಂಬಳಕ್ಕೆ ಉತ್ತಮ ಸ್ಪಂದನೆ ಸಿಕ್ಕಿದರೆ ಇದನ್ನು ಪ್ರತೀ ವರ್ಷ ಮುಂದುವರಿಸಲಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಮತ್ತೆ ಕಾಂಗ್ರೆಸ್‌ನಲ್ಲಿ ಲಿಂಗಾಯತ ಬಾಂಬ್‌: ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾಗ್ತಾರಾ ಸಿಎಂ?

    ಅರಮನೆ ಮೈದಾನದಲ್ಲಿ ಕಂಬಳ ನಡೆಯಲಿದ್ದು, ಸ್ಯಾಂಡಲ್‌ವುಡ್, ಬಾಲಿವುಡ್ ಸ್ಟಾರ್ ನಟ-ನಟಿಯರು ಕಂಬಳಕ್ಕೆ ಬರುವ ನಿರೀಕ್ಷೆಯಿದೆ. ಈ ಕಾರ್ಯಕ್ರಮದಲ್ಲಿ ಸಿಎಂ, ಡಿಸಿಎಂ ಸೇರಿದಂತೆ ಎಲ್ಲಾ ಪಕ್ಷಗಳ ಪ್ರಮುಖರು ಭಾಗಿಯಾಗಲಿದ್ದಾರೆ. ಈ ಕಂಬಳದಲ್ಲಿ 7 ರಿಂದ 8 ಲಕ್ಷ ಜನ ಸೇರುವ ನಿರೀಕ್ಷೆಯಿದೆ. 2,000 ಮಂದಿ ವಿಐಪಿಗಳಿಗೆ ಆಸನ ವ್ಯವಸ್ಥೆ ಮಾಡಲಾಗುತ್ತದೆ. 15 ಸಾವಿರ ಮಂದಿಗೆ ಗ್ಯಾಲರಿಯಲ್ಲಿ ವ್ಯವಸ್ಥೆ ಮಾಡಲಾಗುತ್ತದೆ. ಒಂದೆಡೆ ಕಂಬಳ ನಡೆಯುತ್ತಿದ್ದರೆ, ಮತ್ತೊಂದೆಡೆ ಕರಾವಳಿಯ ಸಂಸ್ಕೃತಿಯನ್ನು ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು, ನೂರಕ್ಕೂ ಅಧಿಕ ಮಳಿಗೆಗಳಲ್ಲಿ ಕರಾವಳಿಯ ಆಹಾರ ಮಳಿಗೆಗಳನ್ನು ಅಳವಡಿಸಲಾಗುತ್ತದೆ ಎಂದರು. ಇದನ್ನೂ ಓದಿ: ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆ 209ರೂ. ಏರಿಕೆ

    ಕಂಬಳವನ್ನು ವಿಶ್ವಮಟ್ಟಕ್ಕೆ ಕೊಂಡೊಯ್ಯಲು ಬೆಂಗಳೂರು ಕಂಬಳವನ್ನು ಕರಾವಳಿಯಲ್ಲಿ ನಡೆಯುವ ಕಂಬಳದಂತೆ ಆಯೋಜಿಸಲಾಗುತ್ತದೆ. ಕಂಬಳಕ್ಕೆ ಸಂಬಂಧಿಸಿದಂತೆ ನೀತಿ ನಿಯಮಗಳನ್ನು, ಕಾನೂನುಗಳನ್ನು, ಸುಪ್ರೀಂ ಕೋರ್ಟ್ ಆದೇಶಗಳನ್ನು ಪಾಲಿಸಿಕೊಂಡು ವ್ಯವಸ್ಥೆ ಮಾಡಲಾಗುತ್ತಿದೆ. ಸುಮಾರು 5ರಿಂದ 6 ಕೋಟಿ ರೂ. ವೆಚ್ಚದಲ್ಲಿ ಕಂಬಳ ಮಾಡಲಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಅ.7 ರವರೆಗೆ 2,000 ರೂ. ನೋಟು ಬದಲಿಸಿಕೊಳ್ಳಲು ದಿನ ವಿಸ್ತರಿಸಿದ RBI

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಕಂಬಳ’ ಉದ್ಘಾಟನೆಗಾಗಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಅನುಷ್ಕಾ ಶೆಟ್ಟಿ

    ‘ಕಂಬಳ’ ಉದ್ಘಾಟನೆಗಾಗಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಅನುಷ್ಕಾ ಶೆಟ್ಟಿ

    ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ (Ashok Kumar Rai) ನೇತೃತ್ವದಲ್ಲಿ ನಡೆಯಲಿರುವ ಕರಾವಳಿ ಜಾನಪದೀಯ ಕ್ರೀಡೆ ಕಂಬಳ ಉದ್ಘಾಟನೆಗೆ ಮಂಗಳೂರು ಮೂಲದ ನಟಿ ಅನುಷ್ಕಾ ಶೆಟ್ಟಿ (Anushka Shetty) ಅವರನ್ನು ಆಹ್ವಾನಿಸಲಾಗಿದೆ. ಈ ಬಾರಿ ಕಂಬಳವನ್ನು (Kambala) ಬೆಂಗಳೂರಿನಲ್ಲಿ ಆಯೋಜನೆ ಮಾಡಿದ್ದು, ಬೆಂಗಳೂರಿನ ಅರಮನೆ ಮೈದಾನದಲ್ಲಿ  ಈ ಕ್ರೀಡೆ ನಡೆಯಲಿದೆ.

    ಇದೇ ನವೆಂಬರ್ 25 ಮತ್ತು 26ರಂದು ಕಂಬಳವನ್ನು ಆಯೋಜನೆ ಮಾಡಿದ್ದು, ದಕ್ಷಿಣದ ತಾರೆ ಅನುಷ್ಕಾ ಶೆಟ್ಟಿ ಅವರಿಗೆ ಆಹ್ವಾನ ನೀಡಲಾಗಿದೆ. ಅವರು ಉದ್ಘಾಟನಾ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಭಾಗಿಯಾಗಲಿದ್ದಾರೆ. ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತ ಸಿನಿಮಾ ರಂಗದಲ್ಲಿ ಅಪಾರ ಅಭಿಮಾನಿಗಳನ್ನೂ ಹೊಂದಿರುವ ಮತ್ತು ಮಂಗಳೂರು ಮೂಲದವರು ಆಗಿರುವ ಕಾರಣದಿಂದಾಗಿ ಅನುಷ್ಕಾ ಅವರನ್ನು ಆಹ್ವಾನಿಸಲಾಗಿದೆ.

     

    ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕಂಬಳ ಆಯೋಜನೆಯಾಗಿದ್ದು, ಇದಕ್ಕಾಗಿ ಭಾರೀ ಸಿದ್ಧತೆ ಕೂಡ ಮಾಡಲಾಗುತ್ತಿದೆ. ರಾಜಧಾನಿಗೆ ಬರಲು ಕಂಬಳದ ಕೋಣಗಳು ಕೂಡ ರೆಡಿಯಾಗತ್ತಿವೆ. ಮಂಗಳೂರಿನಿಂದ ಬೆಂಗಳೂರಿಗೆ ಬರಲಿರುವ ಕಂಬಳ ಕೋಣಗಳು, ಇಲ್ಲಿನ ಜನರಿಗೆ ಸಖತ್ ಮನರಂಜನೆ ಕೂಡ ನೀಡಲಿವೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜಲ್ಲಿಕಟ್ಟುಗೆ ಸುಪ್ರೀಂ ಅನುಮತಿ – ಕಂಬಳಕ್ಕೂ ಗ್ರೀನ್ ಸಿಗ್ನಲ್

    ನವದೆಹಲಿ: ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಗೆ (PCA Act) ತಮಿಳುನಾಡು ಸರ್ಕಾರ ಮಾಡಿರುವ ತಿದ್ದುಪಡಿಯ ಸಂವಿಧಾನಿಕ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ (Supreme Court) ಎತ್ತಿ ಹಿಡಿದಿದೆ. ಈ ಮೂಲಕ ಎತ್ತುಗಳನ್ನು ಬಳಸಿ ನಡೆಸಲಾಗುವ ಜಲ್ಲಿಕಟ್ಟು (Jallikattu) ಕ್ರೀಡೆಯ ಜೊತೆಗೆ ಕಂಬಳಕ್ಕೂ (Kambala) ಇದ್ದ ಕಂಟಕ ನಿವಾರಣೆಯಾಗಿದೆ.

    ನ್ಯಾಯಮೂರ್ತಿ ಕೆ.ಎಂ.ಜೋಸೆಫ್, ಅಜಯ್ ರಸ್ತೋಗಿ, ಅನಿರುದ್ಧ ಬೋಸ್, ಹೃಷಿಕೇಶ್ ರಾಯ್ ಮತ್ತು ಸಿ.ಟಿ.ರವಿಕುಮಾರ್ ಅವರನ್ನೊಳಗೊಂಡ ಸಂವಿಧಾನ ಪೀಠವು (Constitution Bench) ಎತ್ತುಗಳ ನೋವು ಮತ್ತು ಸಂಕಟವನ್ನು ಕಡಿಮೆ ಮಾಡಲು ಕಾಯ್ದೆಯ ತಿದ್ದುಪಡಿ ಮಾಡಲಾಗಿದೆ. ನಿಯಮದ ಅನುಸಾರ ಜಲ್ಲಿಕಟ್ಟು ಮುಂದುವರೆಸಬಹುದು ಎಂದು ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ: ಮಾಡೆಲ್ ಹೇರ್‌ಸ್ಟೈಲ್‌ ಹಾಳು ಮಾಡಿದ್ದಕ್ಕೆ 2 ಕೋಟಿ ಪರಿಹಾರ – ಆದೇಶಕ್ಕೆ ಸುಪ್ರೀಂ ತಡೆ

     

    ರಾಜ್ಯದ ಕಾಯ್ದೆಯಲ್ಲಿ ಯಾವುದೇ ಲೋಪವಿಲ್ಲ. ನಿಯಮಗಳ ಪ್ರಕಾರ ಭಾಗವಹಿಸುವಿಕೆಯನ್ನು ಅನುಮತಿಸಲಾಗುವುದು. ಕಾಯ್ದೆಯೂ ಸಂವಿಧಾನದ 48 ನೇ ವಿಧಿ ಗೋಹತ್ಯೆ ವಿಚಾರಕ್ಕೆ ಇದು ಸಂಬಂಧಿಸಿಲ್ಲ ಎಂದು ನ್ಯಾಯಾಲಯ ಹೇಳಿದೆ. ಅಲ್ಲದೆ ಕರ್ನಾಟಕ (Karnataka) ಮತ್ತು ಮಹಾರಾಷ್ಟ್ರದಲ್ಲಿ (Maharashtra) ನಡೆಸಲಾಗುವ ಕಂಬಳ ಮತ್ತು ಎತ್ತಿನ ಬಂಡಿ (Bull cart racing) ಓಟಕ್ಕೂ ಅನುಮತಿಸುವ ಕಾನೂನನ್ನು ನ್ಯಾಯಾಲಯ ಎತ್ತಿಹಿಡಿದಿದೆ.

    ಈ ಮೇಲೆ ಉಲ್ಲೇಖಿಸಲಾದ ಕ್ರೀಡೆಗಳು, ಆರ್ಟಿಕಲ್ 51ಎ(ಜಿ) ಎಲ್ಲಾ ಜೀವಿಗಳ ಮೇಲೆ ಸಹಾನೂಭೂತಿ ಹೊಂದಿರುವುದು ಮತ್ತು 51ಎ(ಹೆಚ್) ಹಿಂಸೆಯನ್ನು ನಡೆಸದೇ ಇರುವುದನ್ನು ಉಲ್ಲಂಘಿಸುವುದಿಲ್ಲ. ಹೀಗಾಗಿ ಭಾರತದ ಸಂವಿಧಾನದ 14 ಮತ್ತು 21 ನೇ ವಿಧಿಗಳಲ್ಲಿನ ಮೂಲಭೂತ ಹಕ್ಕುಗಳನ್ನು ಇದು ಉಲ್ಲಂಘಿಸುವುದಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಅಲ್ಲದೆ ತಿದ್ದುಪಡಿ ಮಾಡಲಾದ ಕಾಯಿದೆಗಳು ಹಾಗೂ ಕಾನೂನುಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು. ಈ ಅನುಷ್ಠಾನ ಜಿಲ್ಲಾಧಿಕಾರಿಗಳ ಜವಬ್ದಾರಿಯಾಗಿದೆ ಎಂದು ನ್ಯಾಯಾಲಯ ಎಚ್ಚರಿಸಿದೆ.

    ತಮಿಳುನಾಡಿನಲ್ಲಿ (Tamil Nadu) ಜನಪ್ರಿಯವಾಗಿರುವ ಜಲ್ಲಿಕಟ್ಟು ಪ್ರಾಣಿಗಳ ಹಕ್ಕುಗಳು ಹಾಗೂ ಕ್ರೌರ್ಯ ತಡೆ (ಪಿಸಿಎ) ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು 2014ರ ಮೇ ತಿಂಗಳಿನಲ್ಲಿ ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. ನಿರ್ದಿಷ್ಟವಾಗಿ ಕ್ರೀಡೆಯ ಸಾಂಸ್ಕøತಿಕ ಅಂಶಕ್ಕೆ ಸಂಬಂಧಿಸಿದ ಆಚರಣೆಯಲ್ಲಿರುವಂತೆ ಜಲ್ಲಿಕಟ್ಟು ತಮಿಳುನಾಡಿನ ಸಂಸ್ಕೃತಿ ಅಥವಾ ಸಂಪ್ರದಾಯವಾಗಿರಲಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿತ್ತು. ಆದ್ದರಿಂದ ಆಚರಣೆಯನ್ನು ನಿಯಂತ್ರಿಸುವ ತಮಿಳುನಾಡು ಜಲ್ಲಿಕಟ್ಟು ನಿಯಂತ್ರಣ ಕಾಯಿದೆ 2009ನ್ನು ರದ್ದುಪಡಿಸಿತ್ತು.

    ಜನವರಿ 2016 ರಲ್ಲಿ, ಕೇಂದ್ರ ಸರ್ಕಾರವು (Central government) ಪಿಸಿಎ ಕಾಯ್ದೆಯ ವ್ಯಾಪ್ತಿಯಿಂದ ಜಲ್ಲಿಕಟ್ಟು ಮತ್ತು ಎತ್ತಿನ ಬಂಡಿ ಓಟಗಳಿಗೆ ವಿನಾಯಿತಿ ನೀಡುವ ಹೊಸ ಅಧಿಸೂಚನೆಯನ್ನು ಹೊರಡಿಸಿತು. ನಂತರ ರಾಜ್ಯ ಸರ್ಕಾರವು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ (ತಿದ್ದುಪಡಿ) ಕಾಯಿದೆ 2017 ಅನ್ನು ಜಾರಿಗೊಳಿಸಿತು. ಈ ಕಾಯ್ದೆಯ ಸಿಂಧುತ್ವವನ್ನು ಸುಪ್ರೀಂನಲ್ಲಿ ಪ್ರಶ್ನಿಸಲಾಗಿತ್ತು. ಇದನ್ನೂ ಓದಿ: ಧರ್ಮಗುರು ಹೆಂಡತಿಯನ್ನು ಹೇಗೆ ಕೊಂದ? – ಗೂಗಲ್ ಸರ್ಚ್‍ನಿಂದ ಸಿಕ್ಕಿಬಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ