Tag: kambala

  • ಕಂಬಳ ಕುರಿತಾಗಿ ಕನ್ನಡದಲ್ಲಿ ಮತ್ತೊಂದು ಸಿನಿಮಾ: ಒಂದಕ್ಕೆ ರಿಷಭ್ ಮತ್ತೊಂದಕ್ಕೆ ರಾಜೇಂದ್ರ ಸಿಂಗ್ ಬಾಬು ಡೈರೆಕ್ಟರ್

    ಕಂಬಳ ಕುರಿತಾಗಿ ಕನ್ನಡದಲ್ಲಿ ಮತ್ತೊಂದು ಸಿನಿಮಾ: ಒಂದಕ್ಕೆ ರಿಷಭ್ ಮತ್ತೊಂದಕ್ಕೆ ರಾಜೇಂದ್ರ ಸಿಂಗ್ ಬಾಬು ಡೈರೆಕ್ಟರ್

    ಗಾಗಲೇ ರಿಷಭ್ ಶೆಟ್ಟಿ ನಿರ್ದೇಶನದಲ್ಲಿ ‘ಕಾಂತಾರ’ ಹೆಸರಿನ ಸಿನಿಮಾವೊಂದು ಸೆಟ್ಟೇರಿದೆ. ಈ ಚಿತ್ರದಲ್ಲಿ ಕಂಬಳ ಕುರಿತಾಗಿಯೂ ಕಥೆಯಿದೆ. ಅಲ್ಲದೇ, ಇದೀಗ ಕಂಬಳ ಕುರಿತಾಗಿ ಮತ್ತೊಂದು ಸಿನಿಮಾ ಸೆಟ್ಟೇರುತ್ತಿದ್ದು,  ವೀರ ಕಂಬಳ ಹೆಸರಿನ ಈ ಸಿನಿಮಾವನ್ನು ರಾಜೇಂದ್ರ ಸಿಂಗ್ ಬಾಬು ನಿರ್ದೇಶನ ಮಾಡುತ್ತಿದ್ದಾರೆ. ತುಳುನಾಡಿನ ಜಾನಪದ ಕ್ರೀಡೆಗಳಲ್ಲಿ ಬಹುಮುಖ್ಯವಾದ ಕ್ರೀಡೆ ಕಂಬಳ. ಈ ಕಂಬಳದ ಕುರಿತು “ವೀರ ಕಂಬಳ” ಎಂಬ ಚಿತ್ರವನ್ನು ಖ್ಯಾತ  ಎಸ್ ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶಿಸುತ್ತಿದ್ದಾರೆ. ಅರುಣ್ ರೈ ತೋಡಾರ್ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರದ ಕುರಿತು ಚಿತ್ರತಂಡ ಮಾಧ್ಯಮದ ಮುಂದೆ ಮಾಹಿತಿ ಹಂಚಿಕೊಂಡದ್ದು ಹೀಗೆ‌. ಇದನ್ನೂ ಓದಿ : 17 ವರ್ಷ ಲವ್, 2 ಮಕ್ಕಳಾದ ನಂತರ ಮದುವೆಯಾದ ನಿರ್ದೇಶಕ ಹನ್ಸಲ್ ಮೆಹ್ತಾ, ಸಫೀನಾ ಹುಸೇನ್

    ನಾನು ಜನಪ್ರಿಯ ವಾರಪತ್ರಿಕೆಯೊಂದರಲ್ಲಿ “ಕಂಬಳ’ದ ಕುರಿತು ಬರುತ್ತಿದ್ದ ಬರಹಗಳನ್ನು ಓದುತ್ತಿದ್ದೆ. ಆ ವಾರಪತ್ರಿಕೆಯ ಮುಖ್ಯಸ್ಥರು ನನಗೆ ಪರಿಚಯ. ಅವರಿಂದ ಕಂಬಳದ ಬಗ್ಗೆ ಇದ್ದ ಸಾಕಷ್ಟು ಆರ್ಟಿಕಲ್ ಗಳನ್ನು ತರಿಸಿಕೊಂಡು ಓದಿ, ಇದರ ಬಗ್ಗೆ ಸಿನಿಮಾ ಮಾಡಬೇಕೆಂದು ನಿರ್ಧಾರ ಮಾಡಿದೆ. ನಂತರ ತುಳು ನಟ, ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರನ್ನು ಭೇಟಿ ಮಾಡಿದೆ. ಅವರಿಂದ ಕಂಬಳದ ಬಗ್ಗೆ ಸಾಕಷ್ಟು ಮಾಹಿತಿ ದೊರಕಿತು. ಅರುಣ್ ರೈ ತೋಡಾರ್ ಈ ಚಿತ್ರ ನಿರ್ಮಾಣಕ್ಕೆ ಮುಂದಾದರು. ಮೂಡುಬಿದಿರೆ ಬಳಿ ಇದಕ್ಕಾಗಿ ದೊಡ್ಡ ಕಂಬಳದ ಮೈದಾನ ಸಿದ್ದವಾಯಿತು. ಇಪ್ಪತ್ತು ಜೊತೆ ಕೋಣ. ಒಂದು ಕೋಣ ನೋಡಿಕೊಳ್ಳಲು ನಾಲ್ಕು ಜನ. ಸಹ ಕಲಾವಿದರು ಸೇರಿದಂತೆ ಸುಮಾರು 500 ಕ್ಕೂ ಹೆಚ್ಚು ಜನ ಒಂದು ದಿನದ ಚಿತ್ರೀಕರಣದಲ್ಲಿ ಭಾಗವಹಿಸುತ್ತಿದ್ದರು. ಕೋಣಗಳ ಮೂಡ್ ಒಂದೇ ತರಹ ಇರುವುದಿಲ್ಲ. ಅದನೆಲ್ಲಾ ನೋಡಿಕೊಂಡು ಚಿತ್ರೀಕರಣ ಮಾಡಬೇಕಿತ್ತು. ಒಂದು ಸಲ ಓಟದ ಶಾಟ್ ತೆಗೆದರೆ, ಸುಮಾರು ಒಂದು ಗಂಟೆ ವಿಶ್ರಾಂತಿ. ನಂತರ ಚಿತ್ರೀಕರಣ.  ಈ ಚಿತ್ರಕ್ಕೆ ಕಥೆಯೇ ಹೀರೋ. ಇದನ್ನೂ ಓದಿ : ಧನುಶ್ ನಟನೆಯ ಹಾಲಿವುಡ್ ಸಿನಿಮಾದ ಟ್ರೇಲರ್ ರಿಲೀಸ್ : ಎಲ್ಲಿದ್ದಾರೆ ಧನುಶ್?

    ಕೋಣಗಳನ್ನು ಓಡಿಸುವುದರಲ್ಲಿ ಪ್ರಸಿದ್ಧರಾಗಿರುವ ಶ್ರೀನಿವಾಸ ಗೌಡ ಹಾಗೂ ನಾಟಕ ಕಲಾವಿದ ಸ್ವರಾಜ್ ಶೆಟ್ಟಿ ಕಂಬಳ ಓಡಿಸುವವರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವಿಶೇಷಪಾತ್ರದಲ್ಲಿ ಆದಿತ್ಯ ಅಭಿನಯಿಸಿದ್ದಾರೆ. ‌ರಾಧಿಕಾ ಚೇತನ್ ಪೊಲೀಸ್ ಕಮಿಷನರ್ ಆಗಿ ಕಾಣಿಸಿಕೊಂಡಿದ್ದಾರೆ. ನವೀನ್ ಪಡೀಲ್, ಗೋಪಿನಾಥ್ ಭಟ್, ಭೋಜರಾಜ್ ವಾಮಾಂಜುರು ಸೇರಿದಂತೆ ಪ್ರಸಿದ್ದ ತುಳು ನಟರು ಈ ಚಿತ್ರದಲ್ಲಿದ್ದಾರೆ. ಬಹುತೇಕ ಚಿತ್ರೀಕರಣ ಮುಗಿದಿದೆ. ಸ್ವಲ್ಪ ಭಾಗದ ಚಿತ್ರೀಕರಣ ಮಾತ್ರ ಬಾಕಿಯಿದ್ದು, ಖ್ಯಾತ ನಟ ಪ್ರಕಾಶ್ ರಾಜ್ ಅವರನ್ನು ಅಭಿನಯಿಸಲು ಕೇಳಿದ್ದೇವೆ. ಅವರು ಒಪ್ಪಿಗೆ ನೀಡಿದ್ದಾರೆ. ಸೆಪ್ಟೆಂಬರ್ ಅಥವಾ ಅಕ್ಟೋಬರ್ ನಲ್ಲಿ “ವೀರ ಕಂಬಳ” ನಿಮ್ಮ ಮುಂದೆ ಬರಲಿದೆ.  ಈ ಚಿತ್ರಕ್ಕೆ ದೇಸಿ ಸಂಗೀತ ಬೇಕಿತ್ತು. ಹಾಗಾಗಿ ಅಲ್ಲಿನ ಬಗ್ಗೆ ತಿಳಿದಿರುವ ಮಣಿಕಾಂತ್ ಕದ್ರಿ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಗಿರಿ ಈ ಚಿತ್ರದ ಛಾಯಾಗ್ರಾಹಕರು. ತುಳು ಹಾಗೂ ಕನ್ನಡ ಭಾಷೆಗಳಲ್ಲಿ ಈ ಚಿತ್ರ ಬರುತ್ತಿದೆ. ತೆಲುಗು, ತಮಿಳು , ಹಿಂದಿ ಹಾಗೂ ಇಂಗ್ಲೀಷ್ ಭಾಷೆಗಳಿಗೆ ಡಬ್ ಆಗಲಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಬಿಡುಗಡೆಗೆ ಸಿದ್ದತೆ ನಡೆಯುತ್ತಿದೆ. ವಿದೇಶಗಳಲ್ಲಿ ಪ್ರೀಮಿಯರ್ ಶೋ ನಡೆಸುವ ಯೋಜನೆಯಿದೆ ಎಂದು “ವೀರ ಕಂಬಳ” ದ ಬಗ್ಗೆ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಮಾಹಿತಿ ನೀಡಿದರು. ನಂತರ ವಿಶ್ವದಾದ್ಯಂತ ಜಯಭೇರಿ ಬಾರಿಸುತ್ತಿರುವ “ಕೆ ಜಿ ಎಫ್ ೨” ಚಿತ್ರತಂಡಕ್ಕೆ ಶುಭ ಕೋರಿದ ರಾಜೇಂದ್ರ ಸಿಂಗ್ ಬಾಬು, ಮುಂದೆ ನಾನು ಸಹ ದರ್ಶನ್ ಅವರ  ಅಭಿನಯದಲ್ಲಿ ಅದ್ದೂರಿ ಚಿತ್ರವೊಂದನ್ನು ನಿರ್ದೇಶನ ಮಾಡುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ : ಕನ್ನಡದ ಖ್ಯಾತ ನಟಿಯೊಬ್ಬಳು ನಿರ್ದೇಶಕನನ್ನೇ ಮಂಚಕ್ಕೆ ಕರೆದ ಕಥೆಗೆ ಮೆಗಾ ಟ್ವಿಸ್ಟ್

    ನನಗೆ ತುಳು ಚಿತ್ರದಲ್ಲಿ ಅಭಿನಯಿಸುವ ಆಸೆ ಮುಂಚಿನಿಂದಲೂ ಇತ್ತು. ಏಕೆಂದರೆ ನನ್ನ ಅಜ್ಜಿ ಹಾಗೂ ಅಮ್ಮ ಇಬ್ಬರೂ ದಕ್ಷಿಣ ಕನ್ನಡದವರು. ನಾನು ಚಿತ್ರದಲ್ಲಿ ಅಭಿನಯಿಸುವ ವಿಷಯ ನನಗೆ ಗೊತ್ತಿರಲಿಲ್ಲ. ನಿರ್ಮಾಪಕರು ಈ ರೀತಿ ಪಾತ್ರವಿದೆ. ನೀವು ಮಾಡಬೇಕೆಂದರು. ವಿಭಿನ್ನ ಪಾತ್ರದಲ್ಲಿ ಅಭಿನಯಿಸಿದ್ದೇನೆ. ನಾನು ಮೊದಲ‌ ದಿನ‌ ಚಿತ್ರೀಕರಣಕ್ಕೆ ಸಿದ್ದವಾಗಿ ಬಂದಾಗ ಅಲ್ಲಿದವರೆಲ್ಲ ನನ್ನ ನೋಡಿ ಆಶ್ಚರ್ಯಪಟ್ಟರು. ಚಿತ್ರ ಬಿಡುಗಡೆಯಾದಾಗ ನನ್ನ ಪಾತ್ರದ ಬಗ್ಗೆ ನಿಮಗೂ ತಿಳಿಯಬಹುದು ಎಂದರು ನಟ ಆದಿತ್ಯ. ಎಷ್ಟೋ ಜನಕ್ಕೆ ನಾನು ತುಳುನಾಡಿನವಳೆಂದು ತಿಳಿದಿಲ್ಲ. ನನ್ನ ಮಾತೃ ಭಾಷೆ ಕೂಡ ತುಳು. ಈ ಚಿತ್ರದಲ್ಲಿ ಅಭಿನಯಿಸಲು ಅವಕಾಶ ಕೊಟ್ಟ ನಿರ್ದೇಶಕರಿಗೆ ವಂದನೆಗಳು. ಪೊಲೀಸ್ ಕಮಿಷನರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದೀನಿ ಎಂದರು ನಟಿ ರಾಧಿಕಾ ಚೇತನ್.

    ನಮ್ಮ ಊರಿನಲ್ಲಿ ನಡೆಯುವ ಕಂಬಳಕ್ಕೆ ರಾಜೇಂದ್ರ ಸಿಂಗ್ ಬಾಬು ಅವರನ್ನು ಆಹ್ವಾನಿಸಲು ಕಂಬಳದ ಅಧ್ಯಕ್ಷರು ಹೇಳಿದರು. ಬಾಬು ಸರ್ ನಮ್ಮ ಊರಿಗೆ ಬಂದರು. ಅಲ್ಲಿ ಈ ಚಿತ್ರದ ಮಾತುಕತೆಯಾಗಿ, ಚಿತ್ರ ಆರಂಭವಾಯಿತು. ನಾನು ರಾಜೇಂದ್ರ ಸಿಂಗ್ ಬಾಬು ಅವರ ದೊಡ್ಡ ಅಭಿಮಾನಿ. ಅವರು ನಮ್ಮ ಚಿತ್ರ ನಿರ್ದೇಶನ ಮಾಡುತ್ತಿರುವುದು ಸಂತೋಷ ತಂದಿದೆ ಎಂದರು ನಿರ್ಮಾಪಕ ಅರುಣ್ ರೈ ತೋಡಾರ್. ಇದನ್ನೂ ಓದಿ : ನಿಮ್ಮ ಬಾಡಿಯನ್ನು ನೀವೇ ಲವ್ ಮಾಡಬೇಕು : ರಾಗಿಣಿ

    ನಾನು ಮೂಲತಃ ರಂಗಭೂಮಿಯವನು. ತುಳು ಭಾಷೆಯ ಸಾಕಷ್ಟು ನಾಟಕಗಳಿಗೆ ಸಂಭಾಷಣೆ ಬರೆದಿದ್ದೇನೆ. ರಾಜೇಂದ್ರ ಸಿಂಗ್ ಬಾಬು ಅವರು ನನ್ನನ್ನು ಭೇಟಿಯಾಗಿ ಈ ಚಿತ್ರಕ್ಕೆ ತುಳು ಹಾಗೂ ಕನ್ನಡದಲ್ಲಿ ಸಂಭಾಷಣೆ ಬರೆಯಲು ಹೇಳಿದರು. ಈವರೆಗೂ ನಾನು ಕನ್ನಡ ಚಿತ್ರಕ್ಕೆ ಸಂಭಾಷಣೆ ಬರೆದಿರಲಿಲ್ಲ. ಇದೇ ಮೊದಲು. ಕನ್ನಡ ಚಿತ್ರರಂಗಕ್ಕೆ ಇದು ದೊಡ್ಡ ಚಿತ್ರವಾಗುತ್ತದೆ. ತುಳು ಭಾಷೆಯಲಂತೂ ಪ್ರಚಂಡ ಯಶಸ್ಸು ಕಾಣಲಿದೆ ಎಂದು  ಚಿತ್ರಕಥೆ , ಸಂಭಾಷಣೆ ಬರೆದಿರುವ ವಿಜಯ್ ಕುಮಾರ್ ಕಿಡಿಯಾಲ್ ಬೈಲ್ ತಿಳಿಸಿದರು. ಚಿತ್ರದಲ್ಲಿ ಅಭಿನಯಿಸಿರುವ ಶ್ರೀನಿವಾಸ ಗೌಡ ,  ಸ್ವರಾಜ್ ಶೆಟ್ಟಿ ಹಾಗೂ ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ “ವೀರ ಕಂಬಳ” ದ ಕುರಿತು ಮಾತನಾಡಿದರು. ಇದನ್ನೂ ಓದಿ : ಸದ್ದಿಲ್ಲದೇ ಶುರುವಾಯ್ತು ಪ್ರಶಾಂತ್ ನೀಲ್ ನಿರ್ದೇಶನದ ಸಿನಿಮಾ : ಮೊದಲ ದಿನವೇ ಫೋಟೋ ಲೀಕ್

    ಎ.ಆರ್.ಪ್ರೊಡಕ್ಷನ್ಸ್ ಲಾಂಛನದಲ್ಲಿ ಅರುಣ್ ರೈ ತೋಡಾರ್ ನಿರ್ಮಾಣ ಮಾಡುತ್ತಿರುವ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ ಎಸ್ .ವಿ .ರಾಜೇಂದ್ರ ಸಿಂಗ್ ಬಾಬು. ಅರ್ ಗಿರಿ ಛಾಯಾಗ್ರಹಣ, ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ ಹಾಗೂ ಶ್ರೀನಿವಾಸ್ ಆರ್ ಬಾಬು ಸಂಕಲನವಿರುವ ಈ ಚಿತ್ರಕ್ಕೆ ವಿಜಯ್ ಕುಮಾರ್ ಕಿಡಿಯಾಲ್ ಬೈಲ್ ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ರಾಜೇಶ್ ಕುಡ್ಲ ಅವರ ನಿರ್ಮಾಣ ನಿರ್ವಹಣೆ “ವೀರ ಕಂಬಳ” ಚಿತ್ರಕ್ಕಿದೆ. ಆದಿತ್ಯ, ರಾಧಿಕಾ ಚೇತನ್, ಗೋಪಿನಾಥ್ ಭಟ್, ಭೋಜರಾಜ್ ವಾಮಾಂಜೂರು, ಮೈಮ್ ರಮೇಶ್, ರಾಜಶೇಖರ ಕೋಟ್ಯಾನ್, ಉಷಾ ಭಂಡಾರಿ, ಶ್ರೀನಿವಾಸ ಗೌಡ, ಸ್ವರಾಜ್ ಶೆಟ್ಟಿ, ವೀಣಾ ಪೊನ್ನಪ್ಪ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

  • ಶಿರಸಿಯಲ್ಲಿ ಸಹಬಾಳ್ವೆ ಸಾರುವ ಕೈ ಚಕ್ಕುಲಿ ಕಂಬಳ

    ಶಿರಸಿಯಲ್ಲಿ ಸಹಬಾಳ್ವೆ ಸಾರುವ ಕೈ ಚಕ್ಕುಲಿ ಕಂಬಳ

    ಕಾರವಾರ: ಗಣೇಶ ಚತುರ್ಥಿ ಬಂತು ಎಂದರೇ ಬಹುತೇಕ ಹಳ್ಳಿಗಳಲ್ಲಿ ಹಬ್ಬಕ್ಕಾಗಿ ಭರದ ಸಿದ್ಧತೆಗಳು ನಡೆಯುತ್ತವೆ. ಶಿರಸಿಯಲ್ಲಿ ಸಹಬಾಳ್ವೆ ಸಾರುವ ಕೈ ಚಕ್ಕುಲಿ ಕಂಬಳವನ್ನು ಮಾಡಲಾಗುತ್ತಿದೆ.

    ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಹಲವು ಗ್ರಾಮದಲ್ಲಿ ಊರಿನವರೆಲ್ಲಾ ಒಟ್ಟಿಗೆ ಸೇರಿ ಕೈ ನಿಂದ ಹೊಸೆದು ಮಾಡುವ ಚಕ್ಕುಲಿ ಕಂಬಳ ನಡೆಸುವ ಮೂಲಕ ಗ್ರಾಮದಲ್ಲಿ ತಮ್ಮ ನಡುವಿನ ಬಾಂಧವ್ಯ ಮತ್ತಷ್ಟು ಗಟ್ಟಿಗೊಳಿಸಿಕೊಳ್ಳುತ್ತಾರೆ. ಇದನ್ನೂ ಓದಿ: ಆರ್ಚರಿ ಕಂಚಿನ ಪದಕ ಗೆದ್ದ ಹರ್ವಿಂದರ್ ಸಿಂಗ್

    ಕೈ ಚಕ್ಕುಲಿ ಕಂಬಳ ವಿಶೇಷ ಏನು?
    ಶಿರಸಿ ತಾಲೂಕಿನ ಕಲ್ಮನೆ, ಹೆಗಡೆಕಟ್ಟಾ, ಹೆಗ್ಗಾರ ಭಾಗದಲ್ಲಿ ಪ್ರತಿ ವರ್ಷ ಬರಿಗೈ ನಿಂದ ಹೊಸೆದು ಮಾಡುವ ಚಕ್ಕುಲಿ ಸಿದ್ದಪಡಿಸಲಾಗುತ್ತದೆ. ಶನಿವಾರದಿಂದ ಚಕ್ಕುಲಿ ಕಂಬಳಕ್ಕೆ ಚಾಲನೆ ನೀಡಲಾಗಿದೆ. ವಾರವಿಡಿ ದಿನದಲ್ಲಿ ಒಂದು ಬಾರಿಯಂತೆ ಒಂದಲ್ಲಾ ಒಂದು ಮನೆಯಲ್ಲಿ ಈ ಕೈ ಚಕ್ಕಲಿ ಕಂಬಳ ಮಾಡಲಾಗುತ್ತದೆ. ಇದಾಕ್ಕಾಗಿ ನಿಗದಿ ಮಾಡಿದ ಮನೆಗೆ ಗ್ರಾಮದ ಜನರು ಹೋಗಿ ಬರಿಗೈನಲ್ಲಿ ಚಕ್ಕುಲಿ ಹೊಸೆದು ಮಾಡಲಾಗುತ್ತದೆ.

    ಮಹಿಳೆಯರು, ಪುರುಷರೆನ್ನದೇ ಎಲ್ಲರೂ ಒಗ್ಗಟ್ಟಾಗಿ ಸೇರಿ ಚಕ್ಕುಲಿ ತೆಯಾರಿಸುತ್ತಾರೆ. ಈ ಸಂದರ್ಭದಲ್ಲಿ ಒಟ್ಟಿಗೆ ಸೇರಿ ಹಾಡುಗಳು, ಕೃಷಿ ಹಾಗೂ ಇತರೆ ವಿಷಯಗಳ ಬಗ್ಗೆ ಚರ್ಚೆ ನಡೆಸುತ್ತಾರೆ. ಈ ಮೂಲಕ ಒಬ್ಬರಿಗೊಬ್ಬರು ತಮ್ಮಲ್ಲಿರುವ ವಿಚಾರಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ. ಗಮ-ಗಮ ಚಕ್ಕುಲಿ ಸಿದ್ಧವಾದ ನಂತರ ಎಲ್ಲರೂ ಸವಿದು ಚಹ, ಕಾಫಿಗಳನ್ನು ಕುಡಿದು ವೀಳ್ಯದೆಲೆ ಅಡಿಕೆ ಅಗೆದು ನಾಲಿಗೆ, ತುಟಿ ಕೆಂಪಾಗಿಸಿ ತಮ್ಮ ತಮ್ಮ ಮನೆಗಳಿಗೆ ತೆರಳುತ್ತಾರೆ. ಈ ಮೂಲಕ ಊರಿನಲ್ಲಿ ತಮ್ಮ ತಮ್ಮ ಬಾಂದವ್ಯವನ್ನು ಪ್ರತಿ ವರ್ಷ ಗಣೇಶ ಚತುರ್ಥಿಗೂ ಮೊದಲು ವೃದ್ಧಿಸಿಕೊಳ್ಳುವ ಈ ಗ್ರಾಮದವರು ತಲೆ ತಲಾಂತರದಿಂದ ಈ ಕಂಬಳವನ್ನು ಜೀವಂತವಾಗಿಸಿಕೊಂಡು ಬಂದಿದ್ದಾರೆ. ಇದನ್ನೂ ಓದಿ: ಮೈಸೂರಿನಲ್ಲಿ ಮತ್ತೊಂದು ಪ್ರಕರಣ – ಕಾಲೇಜು ವಿದ್ಯಾರ್ಥಿನಿ ಮೇಲೆ ಹಲ್ಲೆ, ಅತ್ಯಾಚಾರ ಯತ್ನ

    ಕೈ ಚಕ್ಕುಲಿ ಮಹತ್ವ ಏನು?
    ಚಕ್ಕುಲಿಯನ್ನು ಬರಿಗೈ ನಿಂದ ಹೊಸೆದು ಸುತ್ತಿ ತೆಯಾರಿಸುವ ಚಕ್ಕುಲಿಯೇ ಕೈಚಕ್ಕುಲಿ. ಆದರೆ ಇಂದಿನ ದಿನಗಳಲ್ಲಿ ಹಿಟ್ಟನ್ನು ಚಕ್ಕುಲಿ ಹುಟ್ಟಿನಲ್ಲಿ ಹಾಕಿ ಒತ್ತಿ ಚಕ್ಕುಲಿ ಮಾಡುತ್ತಾರೆ. ಈ ಚಕ್ಕುಲಿ ಕೈನಿಂದ ಹೊಸೆದು ಮಾಡುತ್ತಾರೆ. ಹೀಗಾಗಿ ಬಾಳಿಕೆ ರುಚಿಯಲ್ಲಿ ಇದಕ್ಕೆ ವಿಶೇಷ ಮಹತ್ವವಿದೆ.

    ಗಣೇಶ ಚತುರ್ಥಿ ಮುಗಿಯುವವರೆಗೂ ಈ ಚಕ್ಕುಲಿ ಕಂಬಳ ಈ ಭಾಗದಲ್ಲಿ ನಡೆಯುವುದು ವಿಶೇಷವಾಗಿದೆ. ಕೆಜಿಗಟ್ಟಲೇ ಗ್ರಾಮದವರೆಲ್ಲಾ ಸೇರಿ ಮಾಡುವ ಚಕ್ಕುಲಿಯನ್ನು ನೆಂಟರಿಷ್ಟರು ಹಾಗೂ ಪರಿಚಿತ ಸೇಹಿತರಿಗೂ ನೀಡಿ ಸಹಬಾಳ್ಳೆಯ ಮಹತ್ವವನ್ನು ಈ ಗ್ರಾಮದ ಜನ ಕೈ ಚಕ್ಕುಲಿ ಕಂಬಳದ ಮೂಲಕ ಸಾರುವ ಮೂಲಕ ಮಾದರಿ ಯಾಗಿದ್ದಾರೆ.

  • 8.78 ಸೆಕೆಂಡ್ ಗಳಲ್ಲಿ 100 ಮೀಟರ್ – ದಾಖಲೆ ಬರೆದ ಕಂಬಳವೀರ

    8.78 ಸೆಕೆಂಡ್ ಗಳಲ್ಲಿ 100 ಮೀಟರ್ – ದಾಖಲೆ ಬರೆದ ಕಂಬಳವೀರ

    ಮಂಗಳೂರು: ಕಂಬಳದ ಉಸೇನ್ ಬೋಲ್ಟ್ ಖ್ಯಾತಿಯ ಶ್ರೀನಿವಾಸ್ ಗೌಡ ಭಾನುವಾರ ಹೊಸ ದಾಖಲೆ ಬರೆದಿದ್ದಾರೆ. 8.78 ಸೆಕೆಂಡ್ ನಲ್ಲಿ 100 ಮೀಟರ್ ಓಡಿ ವಿಶ್ವದಾಖಲೆ ಬರೆದಿದ್ದಾರೆ. ಬಂಟ್ವಾಳದ ಕಕ್ಕೆಪದವುನಲ್ಲಿ ನಡೆದ ಕಂಬಳ ಕೂಟ ಈ ದಾಖಲೆಗೆ ಸಾಕ್ಷಿಯಾಯ್ತು.

    ಸತ್ಯ-ಧರ್ಮ ಜೋಡುಕರೆ ಕಂಬಳದಲ್ಲಿ ಶ್ರೀನಿವಾಸ್ ಗೌಡ ದಾಖಲೆ ಬರೆದಿದ್ದಾರೆ, ಕೆಲ ದಿನಗಳ ಹಿಂದೆ ವೇಣೂರಿನಲ್ಲಿ ನಡೆದಿದ್ದ 8.89 ಸೆಕೆಂಡ್ ಗಳಲ್ಲಿ 100 ಮೀಟರ್ ಗುರಿಯನ್ನ ತಲುಪಿದ್ದರು. ಇದೀಗ ತಮ್ಮ ದಾಖಲೆಯನ್ನ ಬ್ರೇಕ್ ಮಾಡಿದ್ದಾರೆ.

    ಕಳೆದ ವರ್ಷ 15 ಕಂಬಳಗಳಲ್ಲಿ 45 ಪದಕಗಳನ್ನ ಶ್ರೀನಿವಾಸ್ ಗೌಡರು ತಮ್ಮದಾಗಿಸಿಕೊಳ್ಳುವ ಮೂಲಕ ಚಾಂಪಿಯನ್ ಆಗಿದ್ದರು. ಮೂರು ಕಂಬಳಗಳ ನಾಲ್ಕು ವಿಭಾಗಗಳಲ್ಲಿ ಪದಕ ಗೆಲ್ಲುವ ಮೂಲಕ ದಾಖಲೆ ಬರೆದಿದ್ದರು.

  • 8.96 ಸೆಕೆಂಡ್‍ನಲ್ಲಿ 100 ಮೀ. ಕ್ರಮಿಸಿ ಕಂಬಳದಲ್ಲಿ ತಮ್ಮದೇ ದಾಖಲೆ ಸರಗಟ್ಟಿದ ಶ್ರೀನಿವಾಸ್ ಗೌಡ

    8.96 ಸೆಕೆಂಡ್‍ನಲ್ಲಿ 100 ಮೀ. ಕ್ರಮಿಸಿ ಕಂಬಳದಲ್ಲಿ ತಮ್ಮದೇ ದಾಖಲೆ ಸರಗಟ್ಟಿದ ಶ್ರೀನಿವಾಸ್ ಗೌಡ

    ಮಂಗಳೂರು: ಇಂಡಿಯನ್ ಉಸೇನ್ ಬೋಲ್ಟ್ ಎಂದೇ ಜನಪ್ರಿಯರಾಗಿರುವ ಕಂಬಳದ ವೀರ ಮಿಜಾರು ಶ್ರೀನಿವಾಸ್ ಗೌಡ ಅವರು ಈ ಹಿಂದಿನ ತಮ್ಮದೇ ದಾಖಲೆ ಮುರಿದಿದ್ದು, ಕೇವಲ 9.96 ಸೆಕೆಂಡ್‍ಗಳಲ್ಲಿ 100 ಮೀಟರ್ ದೂರವನ್ನು ಕ್ರಮಿಸಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ನಡೆಯುತ್ತಿರುವ ಸೂರ್ಯ-ಚಂದ್ರ ಜೋಡುಕೆರೆ ಕಂಬಳದಲ್ಲಿ ಶ್ರೀನಿವಾಸಗೌಡ ಹೊಸ ದಾಖಲೆ ಬರೆದಿದ್ದಾರೆ.

    ಕೇವಲ 8.96 ಸೆಕೆಂಡ್‍ಗಳಲ್ಲಿ 100 ಮೀಟರ್ ದೂರವನ್ನು ಕ್ರಮಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ನೇಗಿಲು ಹಿರಿಯ ವಿಭಾಗದ ಕೋಣಗಳನ್ನು ಓಡಿಸಿದ ಶ್ರೀನಿವಾಸ್ ಗೌಡ, ಕೇವಲ 11.21 ಸೆಕೆಂಡ್‍ಗಳಲ್ಲಿ 125 ಮೀಟರ್ ದೂರವನ್ನು ಕ್ರಮಿಸಿದ್ದಾರೆ. ಅಂದರೆ ಕೇವಲ 8.96 ಸೆಕೆಂಡ್‍ಗಳಲ್ಲಿ 100 ಮೀಟರ್ ತಲುಪಿದ್ದು, ಈ ಮೂಲಕ ಹಿಂದಿನ ಎಲ್ಲ ದಾಖಲೆಗಳನ್ನು ಸರಗಟ್ಟಿದ್ದಾರೆ.

    2020ರ ಫೆಬ್ರವರಿ 1ರಂದು ಮಂಗಳೂರು ಸಮೀಪದ ಐಕಳದಲ್ಲಿ ನಡೆದ ಕಂಬಳ ಕ್ರೀಡೆಯಲ್ಲಿ ಮೂಡಬಿದ್ರೆ ಮಿಜಾರು ಅಶ್ವತ್ಥಪುರದ ಶ್ರೀನಿವಾಸ್ ಗೌಡ ಅವರು ದಾಖಲೆ ಬರೆದು ವಿಶ್ವದ ಗಮನ ಸೆಳೆದಿದ್ದರು.

    ಶ್ರೀನಿವಾಸ್ ಗೌಡ 142.50 ಮೀಟರ್ ದೂರವನ್ನು ಕೇವಲ 13.62 ಸೆಕೆಂಡಲ್ಲಿ ಕ್ರಮಿಸಿದ್ದರು. ಇದು ಕಂಬಳ ಕ್ರೀಡೆಯಲ್ಲಿ ಇದೂವರೆಗಿನ ಅತ್ಯಂತ ವೇಗದ ದಾಖಲೆಯಾಗಿದೆ. ಶ್ರೀನಿವಾಸ್ ಗೌಡ ಗುರಿ ತಲುಪಲು ತೆಗೆದುಕೊಂಡ ಸಮಯವನ್ನು 100 ಮೀ. ಓಟದೊಂದಿಗೆ ತಾಳೆ ಹಾಕಿದರೆ 9.55 ಸೆಕೆಂಡ್‍ನಲ್ಲಿ ಓಟ ಪೂರ್ಣಗೊಳಿಸಿ ಬೋಲ್ಟ್ ದಾಖಲೆಯನ್ನು ಉಡಾಯಿಸಿದ್ದರು. ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಎಂಬಂತೆ 8.96 ಸೆಕೆಂಡ್‍ನಲ್ಲಿ 100 ಮೀಟರ್ ಕ್ರಮಿಸುವ ಮೂಲಕ ತಮ್ಮದೇ ದಾಖಲೆಯನ್ನು ಮುರಿದಿದ್ದಾರೆ.

    ಈಗಾಗಲೇ ಕಂಬಳದ ವೀರನ ಸಾಧನೆ ಕುರಿತು ಸಿನಿಮಾ ಮಾಡಲಾಗುತ್ತಿದ್ದು, ಕರಾವಳಿ ಮೂಲದ ಉದ್ಯಮಿ ಲೋಕೇಶ್ ಶೆಟ್ಟಿ ಎಂಬವರು ಈಗಾಗಲೇ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಟೈಟಲ್ ರಿಜಿಸ್ಟರ್ ಮಾಡಿದ್ದಾರೆ. ಈ ಚಿತ್ರವನ್ನು ನಿಖಿಲ್ ಮಂಜು ಅವರು ನಿರ್ದೇಶನ ಮಾಡುತ್ತಿದ್ದಾರೆ.

  • ಕರಾವಳಿಯ ಜಾನಪದ ಕ್ರೀಡೆ ಕಂಬಳಕ್ಕೆ ಸರ್ಕಾರದಿಂದ 1 ಕೋಟಿ ಸಹಾಯಧನ

    ಕರಾವಳಿಯ ಜಾನಪದ ಕ್ರೀಡೆ ಕಂಬಳಕ್ಕೆ ಸರ್ಕಾರದಿಂದ 1 ಕೋಟಿ ಸಹಾಯಧನ

    – ಪ್ರವಾಸೋದ್ಯಮ ಇಲಾಖೆಯಿಂದ ಉಡುಗೊರೆ

    ಮಂಗಳೂರು: ಕರಾವಳಿಯ ಜಾನಪದ ಕ್ರೀಡೆಯಾದ ಕಂಬಳವನ್ನು ಪ್ರೋತ್ಸಾಹಿಸಲು ಸಹಾಯಧನ ನೀಡಲು ತೀರ್ಮಾನಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

    ಕರಾವಳಿಯ ಜಾನಪದ ಕ್ರೀಡೆಯಾದ ಪ್ರತಿ ಕಂಬಳಕ್ಕೆ 5 ಲಕ್ಷ ಸಹಾಯಧನ ನೀಡಲು ಸರ್ಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ಕಂಬಳಗಳನ್ನು ನಡೆಸಲು 5 ಲಕ್ಷಗಳಂತೆ ಒಟ್ಟು 50 ಲಕ್ಷ ಮತ್ತು ಉಡುಪಿ ಜಿಲ್ಲೆಯಲ್ಲಿ 10 ಕಂಬಳಗಳನ್ನು ನಡೆಸಲು 5 ಲಕ್ಷಗಳಂತೆ ಒಟ್ಟು 50 ಲಕ್ಷ ಸೇರಿ ಒಂದು ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ.

    ಪ್ರವಾಸೋದ್ಯಮ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವರಾದ ಸಿ.ಪಿ.ಯೋಗೇಶ್ವರ್ ಅವರು ಕೆಲವು ದಿನಗಳ ಹಿಂದೆ ಪ್ರವಾಸೋದ್ಯಮ ಇಲಾಖೆಯ ಪ್ರಗತಿ ಪರಿಶೀಲನೆಗಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಎರಡು ದಿನಗಳ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಕಂಬಳ ವೀಕ್ಷಿಸಿ ಸ್ಥಳದಲ್ಲಿಯೇ ಪ್ರತಿ ಕಂಬಳಕ್ಕೆ 5 ಲಕ್ಷಗಳ ಸಹಾಯಧನ ಘೋಷಣೆ ಮಾಡಿದ್ದರು. ಈ ಘೋಷಣೆಯ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ಸಹಾಯಧನ ಬಿಡುಗಡೆ ಆದೇಶವನ್ನು ಗುರುವಾರ ಹೊರಡಿಸಿದೆ.

  • ಕೋಣ ಓಡ್ಸೋದೇ, ಮೆಡಲ್ ಗೆಲ್ಲೋದೇ- ವೀರ ಗ್ರಾಮೀಣ ಕ್ರೀಡೆ ಕಂಬಳ ಗದ್ದೆಗಿಳಿದ ಉಡುಪಿಯ ಪೋರಿ

    ಕೋಣ ಓಡ್ಸೋದೇ, ಮೆಡಲ್ ಗೆಲ್ಲೋದೇ- ವೀರ ಗ್ರಾಮೀಣ ಕ್ರೀಡೆ ಕಂಬಳ ಗದ್ದೆಗಿಳಿದ ಉಡುಪಿಯ ಪೋರಿ

    ಉಡುಪಿ: ಕರಾವಳಿಯ ವೀರ ಕ್ರೀಡೆ ಕಂಬಳದಲ್ಲಿ ಆಗಿಂದ್ದಾಗ್ಗೆ ಬದಲಾವಣೆಗಳು ನಡೆಯುತ್ತಾನೇ ಇದೆ. ಕೃಷಿಕರ ವಿರಾಮದ ಕಾಲದಲ್ಲಿ ಆರಂಭವಾದ ಕಂಬಳ ಇದೀಗ ಅಂತಾರಾಷ್ಟ್ರೀಯ ಸೆಳೆತ ಪಡೆದುಕೊಂಡಿದೆ. ಪುರುಷರ ಪೌರುಷದ ಗ್ರಾಮೀಣ ಕ್ರೀಡೆಗೆ ಮಹಿಳೆಯರ ಎಂಟ್ರಿ ಕೊಡುವ ಕಾಲ ಸನ್ನಿಹಿತವಾಗಿದೆ.

    ಕರಾವಳಿ ಅವಳಿ ಜಿಲ್ಲೆಗಳಲ್ಲಿ ಕಂಬಳದ ಸೀಜನ್ ನಡೀತಿದೆ. ಕೊಬ್ಬಿದ ಕೋಣಗಳು ಜಿದ್ದಿಗಿಳಿದು ಕರೆಗಳಲ್ಲಿ ಓಡುತ್ತಿವೆ. ಕೃಷಿ ಪರಂಪರೆಯ ಕಂಬಳದಲ್ಲಿ ಹೊಸ ದಾಖಲೆ, ಪ್ರಯೋಗ ನಡೆದಿದೆ. ಜಬರ್ದಸ್ತ್ ಕೋಣಗಳ ಜೊತೆ ಈಗ ಬಾಲಕಿಯೋರ್ವಳು ಕಂಬಳ ಕರೆಗೆ ಇಳಿಯುವ ಮೂಲಕ ಕರಾವಳಿಯ ಕಂಬಳ ಕ್ರೀಡೆಗೆ ಹೊಸ ಭಾಷ್ಯ ಬರೆದಿದ್ದಾಳೆ.

    ಕಾರ್ಕಳ ತಾಲೂಕು ಮಿಯಾರಿನ ಲವಕುಶ ಜೋಡುಕರೆ ಕಂಬಳದಲ್ಲಿ ಬೈಂದೂರಿನ ಪರಮೇಶ್ವರ ಭಟ್ – ರಮ್ಯಾ ಅವರ ಪುತ್ರಿ ಚೈತ್ರಾ ಮೊತ್ತಮೊದಲ ಬಾರಿಗೆ ಕಂಬಳ ಕರೆಗೆ ಇಳಿದಿದ್ದಾಳೆ. ಈ ಮೂಲಕ ಪುರುಷ ಪ್ರಧಾನವಾಗಿರುವ ಕಂಬಳ ಕ್ರೀಡೆಯಲ್ಲಿ ಬಾಲಕಿಯ ಪ್ರವೇಶವಾಗಿದೆ.

    ಕಾಲ್ತೊಡು ಸರ್ಕಾರಿ ಶಾಲೆಯಲ್ಲಿ ಆರನೇ ತರಗತಿ ಓದುತ್ತಿರುವ ಈಕೆಗೆ ಚಿಕ್ಕಂದಿನಿಂದ ಕಂಬಳದ ಆಸಕ್ತಿ ಕೊಣಗಳ ಮೇಲೆ ಅಕ್ಕರೆ. ಹಗ್ಗ ಹಿಡಿದು, ಕೋಣಗಳ ಯಜಮಾನಿಕೆ ಹೊತ್ತು ಕಂಬಳ ಕರೆಗೆ ಇಳಿಯುವ ಗತ್ತಿಗೆ ಜಾನಪದ ಕ್ರೀಡೆಯ ಅಭಿಮಾನಿಗಳು ಹುಬ್ಬೇರಿಸಿದ್ದಾರೆ. ಈಕೆಯ ಸಹೋದರ ರಾಮ್ ಭಟ್ ಕೂಡ ಕಂಬಳಪ್ರೇಮಿ. ಕೋಣಗಳಿಗೆ ಸ್ನಾನ, ಹುರುಳಿ ಬೇಯಿಸಿ ತಿನ್ನಿಸೋದು ಎಲ್ಲಾ ಮಾಡ್ತಾಳೆ ಚೈತ್ರಾ ಭಟ್. ವಾರಾಂತ್ಯ ಬಂದ್ರೆ ಸಾಕು ಟೀಶರ್ಟ್ ಹಾಕಿ ಮುಂಡಾಸು ಕಟ್ಟಿ ಹೊರಡುತ್ತಾಳೆ.

    ಓಟಗಾರ ಶ್ರೀನಿವಾಸ ಗೌಡ ಅವರ ಫ್ಯಾನ್ ಈಕೆ. ಪುರುಷ ಪ್ರಧಾನ ಕಂಬಳ ಗದ್ದೆಗೆ ಆಯೋಜಕರು ಶಾಲು ಹಾಕಿ ಸ್ವಾಗತ ಮಾಡಿದ್ದಾರೆ. ಮುಂದೆ ಚೈತ್ರಾ ಕೋಣಗಳನ್ನು ಓಡಿಸಿ ಮೆಡಲ್ ಗೆಲ್ಲುವ ಕನಸು ಇಟ್ಟುಕೊಂಡಿದ್ದಾಳೆ. ಮಹಿಳಾ ಓಟಗಾರರಿಗೂ ಪ್ರಾಶಸ್ತ್ಯ ನೀಡುವ ಬಗ್ಗೆ ಕಂಬಳ ಅಕಾಡೆಮಿಯಲ್ಲಿ ಚರ್ಚೆ ನಡೆದಿದೆ. ಕೋಣ ಓಡಿಸದಿದ್ದರೂ ಕಂಬಳ ಗದ್ದೆಗೆ ಹೆಣ್ಮಗಳು ಇಳಿದಿರೋದು ದಾಖಲೆಯಾಗಿದೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿ, ನನಗೆ ಚಿಕ್ಕಂದಿನಿಂದ ಕೋಣಗಳು ಅಂದ್ರೆ ಭಾರೀ ಇಷ್ಟ. ಕಂಬಳಕ್ಕೆ ಹೋಗುತ್ತಾ ಇದ್ದೇನೆ. ಕೋಣ ಓಡಿಸ್ಬೇಕು ಅಂತ ಬಹಳ ಆಸೆಯಿದೆ. ಅವಕಾಶ ಸಿಕ್ಕರೆ ಕನೆ ಹಲಗೆ, ಕಿರಿಯ ವಿಭಾಗದಲ್ಲಿ ಕೋಣ ಓಡಿಸುತ್ತೇನೆ. ಮೀಯಾರ್ ಕಂಬಳದಲ್ಲಿ ಕಂಬಳ ಕರೆಯಲ್ಲೇ ಸನ್ಮಾನ ಮಾಡಿದ್ದಾರೆ ಬಹಳ ಖುಷಿಯಾಗುತ್ತದೆ. ಯಕ್ಷಗಾನದಲ್ಲಿ ಮಹಿಳೆಯರಿಗೆ ಅವಕಾಶ ಸಿಕ್ಕಹಾಗೆ ಕಂಬಳದಲ್ಲೂ ಸಿಗಬೇಕು ಅಂತಾಳೆ 11ರ ಹರೆಯದ ಚೈತ್ರಾ.

    ತಂದೆ ಪರಮೇಶ್ವರ ಭಟ್ ಮಾತನಾಡಿ, ಕಂಬಳ ಕ್ಷೇತ್ರಕ್ಕೆ ಮಹಿಳೆಯರು ಬರಬೇಕೆಂದು ನಾನು ಬಹಳ ಹಿಂದಿನಿಂದ ಯೋಚಿಸುತ್ತಿದ್ದೆ. ನನ್ನ ಮಗಳೇ ಆ ಆಸಕ್ತಿ ಹೊಂದಿರೋದ್ರಿಂದ ಬೆಂಬಲಿಸುತ್ತಿದ್ದೇನೆ. ಕೋಣಗಳ ಪಾಲನೆ ಪೋಷಣೆ ಮಾಡುತ್ತಾಳೆ. ಅವುಗಳ ನಿಯಂತ್ರಣ ಸದ್ಯಕ್ಕೆ ಕಷ್ಟವಾಗಬಹುದು. ಸಿದ್ಧ ಮಾಡಿ ಕೊಟ್ಟರೆ ಓಡಿಸುವ ಕಲೆ ಬೆಳೆಸಿಯಾಳು ಎಂದರು.

  • ಕೋಣ ಓಡಿಸುತ್ತಿರೋವಾಗ್ಲೇ ಕುಸಿದು ಬಿದ್ದ ಕಂಬಳದ ಉಸೇನ್ ಬೋಲ್ಟ್

    ಕೋಣ ಓಡಿಸುತ್ತಿರೋವಾಗ್ಲೇ ಕುಸಿದು ಬಿದ್ದ ಕಂಬಳದ ಉಸೇನ್ ಬೋಲ್ಟ್

    ಮಂಗಳೂರು: ಕಂಬಳದ ಉಸೇನ್ ಬೋಲ್ಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಶ್ರೀನಿವಾಸ ಗೌಡ ಈ ಬಾರಿಯ ಮೊದಲ ಕಂಬಳದಲ್ಲೇ ಕುಸಿದು ಬಿದ್ದು ಗಾಯಗೊಂಡಿದ್ದಾರೆ.

    ಕಳೆದ ವರ್ಷ ಇದೇ ದಿನ ಅಂದರೆ 2020ರ ಫೆಬ್ರವರಿ 1 ರಂದು ನಡೆದ ಐಕಳ ಕಂಬಳದಲ್ಲಿ 100 ಮೀಟರ್ ಕಂಬಳಗದ್ದೆಯ ದೂರವನ್ನು ಕೇವಲ 9.55 ಸೆಕೆಂಡ್ ನಲ್ಲಿ ಕ್ರಮಿಸಿದ್ದರು. ಈ ಮೂಲಕ ಹೊಸ ದಾಖಲೆ ನಿರ್ಮಿಸಿದ್ದ ಮಿಜಾರು ಶ್ರೀನಿವಾಸ ಗೌಡ ಉಸೇನ್ ಬೋಲ್ಟ್ ಗಿಂತಲೂ ವೇಗಿ ಎಂದು ಗುರುತಿಸಲ್ಪಟ್ಟಿದ್ದರು. ಆದರೆ ಈ ಬಾರಿ ಆರಂಭಗೊಂಡ ಮೊದಲ ಕಂಬಳವಾದ ಹೊಕ್ಕಾಡಿಗೋಳಿ ಕಂಬಳದ ಪ್ರೀ ಕ್ವಾರ್ಟರ್ ಫೈನಲ್ ನಲ್ಲಿ ಇರುವೈಲು ಪಾಣಿಲ ಬಾಡ ಪೂಜಾರಿಯವರ ನೇಗಿಲು, ಹಿರಿಯ ವಿಭಾಗದ ಕೋಣಗಳನ್ನು ಓಡಿಸುತ್ತಿರುವಾಗ ಕರೆಯ ಮಧ್ಯಭಾಗಕ್ಕೆ ಶ್ರೀನಿವಾಸ ಗೌಡ ಡಿಕ್ಕಿ ಹೊಡೆದು ಅಲ್ಲೇ ಕುಸಿದು ಬಿದ್ದಿದ್ದರು.

    ಕೈ ಹಾಗೂ ಎದೆಯ ಭಾಗಕ್ಕೆ ಸ್ವಲ್ಪ ಪ್ರಮಾಣದ ಗಾಯಗಳಾಗಿದ್ದು ಬಳಿಕ ಯಾವುದೇ ಓಟದಲ್ಲಿ ಅವರು ಭಾಗಿಯಾಗಿಲ್ಲ. ಸಣ್ಣಪುಟ್ಟ ಗಾಯಗಳಾಗಿರೋದ್ರಿಂದ ಫೆ.6 ರಂದು ನಡೆಯುವ ಐಕಳ ಕಂಬಳದಲ್ಲಿ ಶ್ರೀನಿವಾಸ ಗೌಡ ಕೋಣಗಳನ್ನು ಓಡಿಸಲಿದ್ದಾರೆ ಎಂದು ಅವರ ಆಪ್ತರು ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.

    ಕಳೆದ 2020ರ ಸೀಸನ್ ನಲ್ಲಿ 11 ಕಂಬಳದಲ್ಲಿ ಕೋಣ ಓಡಿಸಿದ ಶ್ರೀನಿವಾಸ ಗೌಡ ಬರೋಬ್ಬರಿ 32 ಪದಕ ಗಳಿಸಿ ಕಂಬಳದ ಇತಿಹಾಸದಲ್ಲೇ ಹೊಸ ದಾಖಲೆ ಮಾಡಿದ್ದರು.

  • ಜ.30ರಂದು ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ

    ಜ.30ರಂದು ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ

    – ಕಂಬಳಕ್ಕೆ ಉಪಮುಖ್ಯಮಂತ್ರಿ ಸಹಿತ ಗಣ್ಯರ ದಂಡು

    ಮಂಗಳೂರು: ಬಂಟ್ವಾಳ ಮತ್ತು ಬೆಳ್ತಂಗಡಿ ತಾಲೂಕಿನ ಗಡಿ ಭಾಗದಲ್ಲಿರುವ ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿ ‘ವೀರ-ವಿಕ್ರಮ’ ಜೋಡುಕರೆ ಬಯಲು ಕಂಬಳ ಇದೇ 30ರಂದು ಶನಿವಾರ ನಡೆಯಲಿದೆ. ಜಿಲ್ಲೆಯ ಪ್ರಥಮ ಕಂಬಳಕ್ಕೆ ಭಾರೀ ಸಿದ್ಧತೆ ನಡೆಯುತ್ತಿದೆ. ಈಗಾಗಲೇ ಸ್ಥಳೀಯ ಎಲಿಯನಡುಗೋಡು, ಆರಂಬೋಡಿ ಮತ್ತಿತರ ಗ್ರಾಮಸ್ಥರು ಮತ್ತು ಕಂಬಳಾಸಕ್ತರು ಶ್ರಮದಾನ ಮೂಲಕ ಕಂಬಳ ಕೆರೆ ದುರಸ್ತಿಗೊಳಿಸಿದ್ದಾರೆ.

    ಈ ಬಾರಿ ಜಿಲ್ಲಾ ಕಂಬಳ ಸಮಿತಿ ನಿರ್ಧಾರದಂತೆ ಕೋವಿಡ್ ನಿಯಮಾವಳಿ ಪಾಲನೆ ಮಾಡಲಾಗುತ್ತದೆ. ಒಟ್ಟು 150ಕ್ಕೂ ಮಿಕ್ಕಿ ಜೋಡಿ ಕೋಣಗಳು ಕಂಬಳದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಕಂಬಳ ಸಮಿತಿ ಅಧ್ಯಕ್ಷ ನೋಣಾಲುಗುತ್ತು ರಶ್ಮಿತ್ ಶೆಟ್ಟಿ ಕೈತ್ರೋಡಿ ತಿಳಿಸಿದ್ದಾರೆ.

    ಮಹಿಷಮರ್ಧಿನಿ ಕಂಬಳ ಸಮಿತಿ ವತಿಯಿಂದ ನಡೆಯುವ ಈ ಕಂಬಳ ಕೂಟಕ್ಕೆ ಸ್ಥಳೀಯ ಪೂಂಜ ಕ್ಷೇತ್ರದ ಅಸ್ರಣ್ಣ ಕೃಷ್ಣಪ್ರಸಾದ್ ಆಚಾರ್ಯ ಚಾಲನೆ ನೀಡಲಿದ್ದು, ಪ್ರಧಾನ ಅರ್ಚಕ ಪ್ರಕಾಶ್ ಆಚಾರ್ಯ, ಮೂಡುಬಿದ್ರೆ ಚೌಟರ ಅರಮನೆ ಕುಲದೀಪ್ ಎಂ. ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.

    ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಅಧ್ಯಕ್ಷತೆ ವಹಿಸಲಿದ್ದು, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಸಹಿತ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಂದರು ಮತ್ತು ಮೀನುಗಾರಿಕಾ ಸಚಿವ ಎಸ್.ಅಂಗಾರ, ಭಟ್ಕಳ ಶಾಸಕ ಸುನಿಲ್ ನಾಯಕ್, ಸೊರಬ ಶಾಸಕ ಕುಮಾರ್ ಬಂಗಾರಪ್ಪ, ಶಾಸಕರಾದ ಹರೀಶ ಪೂಂಜ, ಉಮಾನಾಥ ಕೋಟ್ಯಾನ್, ಪ್ರತಾಪಸಿಂಹ ನಾಯಕ್, ಕೆ.ಹರೀಶ ಕುಮಾರ್, ಕಿಯೋನಿಕ್ಸ್ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ್,ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್, ಹೈಕೋರ್ಟ್ ನ ಎಡಿಷನಲ್ ಅಡ್ವೋಕೇಟ್ ಜನರಲ್ ಅರುಣ್ ಶ್ಯಾಮ್, ರಾಷ್ಟ್ರೀಯ ಕಬಡ್ಡಿ ಆಟಗಾರ ಸುಕೇಶ್ ಹೆಗ್ಡೆ, ಪ್ರಶಾಂತ್ ರೈ ,ಮಾಜಿ ಸಚಿವರಾದ ಬಿ.ರಮಾನಾಥ ರೈ, ಬಿ.ನಾಗರಾಜ ಶೆಟ್ಟಿ ಮತ್ತಿತರ ಹಲವು ಮಂದಿ ಗಣ್ಯರು ಭಾಗವಹಿಸಲಿದ್ದಾರೆ.

  • ಜನವರಿ ಅಂತ್ಯದಿಂದ ಕಂಬಳ ಪ್ರಾರಂಭ: ಕಟೀಲ್

    ಜನವರಿ ಅಂತ್ಯದಿಂದ ಕಂಬಳ ಪ್ರಾರಂಭ: ಕಟೀಲ್

    ಮಂಗಳೂರು:ಕರಾವಳಿ ಭಾಗದ ಜಾನಪದ ಕ್ರೀಡೆಯಾದ ಕಂಬಳವನ್ನು ಈ ಬಾರಿ ಕೋವಿಡ್ ಮಾರ್ಗಸೂಚಿಗಳನ್ನು ಚಾಚು ತಪ್ಪದೆ ಅನುಸರಿಸುವುದರೂಂದಿಗೆ ಆಯೋಜಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

    ಇಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಸ್ತುತ ಸಾಲಿನ ಕಂಬಳ ಕ್ರೀಡೆಯನ್ನು ಜಿಲ್ಲೆಯಲ್ಲಿ ಆಯೋಜಿಸುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಂಬಳ ಕರಾವಳಿ ಕರ್ನಾಟಕ ಭಾಗದ ಒಂದು ಜಾನಪದ ಕ್ರೀಡೆಯಾಗಿದ್ದು ಕರಾವಳಿ ಭಾಗದ ರೈತಾಪಿ ಜನರು ನವೆಂಬರ್- ಡಿಸೆಂಬರ್ ಮಾಸದಲ್ಲಿ ಭತ್ತದ ಕೊಯ್ಲಿನ ನಂತರದಿಂದ ಫೆಬ್ರವರಿ-ಮಾರ್ಚ್ ಮಾಯೆಯ ವರೆಗೆ ತಮ್ಮ ಮನೋರಂಜನೆಗಾಗಿ ಸಾಂಘಿಕ ಬಲದೂಂದಿಗೆ ಕಂಬಳವನ್ನು ನಡೆಸುತ್ತಾರೆ ಎಂದರು.

    ಕಂಬಳಕ್ಕೆ ನೂರಾರು ವರ್ಷದ ಇತಿಹಾಸವಿದ್ದು ರಾಜಮಹಾರಾಜರುಗಳು ಪ್ರೋತ್ಸಾಹ ನೀಡಿದ್ದಾರೆ ಎಂದ ಅವರು ಈ ಬಾರಿ ಕೋವಿಡ್ ಸೋಂಕಿನಿಂದಾಗಿ ರೈತರು ಜನವರಿ ಅಂತ್ಯವಾದರೂ ಪ್ರಾರಂಭಿಸಿಲ್ಲ. ಆಯೋಜಕರು ಕೋವಿಡ್ ಮಾರ್ಗಸೂಚಿಗಳನ್ನು ಚಾಚೂತಪ್ಪದೆ ಪಾಲಿಸುವುದರೊಂದಿಗೆ ಜನವರಿ 30 ರಿಂದ  ಜಿಲ್ಲೆಯಲ್ಲಿ 10 ಕಂಬಳ ಕಾರ್ಯಕ್ರಮವನ್ನು ಏರ್ಪಡಿಸಬಹುದಾಗಿದೆ ಎಂದರು .

    ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ .ವಿ ಮಾತನಾಡಿ, ಕೋವಿಡ್ ಸಂದರ್ಭವಾದ ಈ ದಿನಗಳಲ್ಲಿ ಅತಿ ಹೆಚ್ಚು ಜಾಗ್ರತೆ ವಹಿಸಬೇಕು, ಹೆಚ್ಚು ಜನರು ಸೇರಿದಂತೆ ಕ್ರಮವಹಿಸಬೇಕು. ರಾತ್ರಿ ಹತ್ತು ಗಂಟೆಯ ಒಳಗಾಗಿ ಕಂಬಳ ಕಾರ್ಯಕ್ರಮವನ್ನು ಪೂರ್ಣಗೊಳಿಸಬೇಕು. ಕಾರ್ಯಕ್ರಮಕ್ಕೆ ವಯಸ್ಸಾದವರು ಮತ್ತು ಮಕ್ಕಳು ಭಾಗವಹಿಸದಂತೆ ಎಚ್ಚರವಹಿಸಬೇಕು. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದು ಸೂಚಿಸಿದರು.

    ಕಂಬಳ ಸಮಿತಿಯ ಪದಾಧಿಕಾರಿಗಳು ಜಿಲ್ಲಾಡಳಿತ ವಿಧಿಸುವ ಎಲ್ಲಾ ನಿಯಮಗಳನ್ನು ಹಾಗೂ ಎಲ್ಲಾ ಮಾರ್ಗಸೂಚಿಗಳನ್ನು ಶಿಸ್ತುಬದ್ಧವಾಗಿ ಜರಗಿಸಲು ಹೆಚ್ಚಿನ ಕಾರ್ಯಕರ್ತರನ್ನು ತೊಡಗಿಸಿಕೊಳ್ಳಲಾಗುವುದು ಎಂದು ಹೇಳಿದರು.

    ಸಭೆಯಲ್ಲಿ ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಸದಸ್ಯ ಉಮಾನಾಥ್ ಕೋಟ್ಯಾನ್, ಮಂಗಳೂರು ವಿಧಾನ ಸಭಾ ಸದಸ್ಯ ಯು .ಟಿ ಖಾದರ್, ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮೀಪ್ರಸಾದ್, ಉಪ ಪೊಲೀಸ್ ಆಯುಕ್ತ ವಿನಯ್ ಗಾವಂಕರ್, ಪಶುಸಂಗೋಪನೆ ಇಲಾಖೆ ಉಪನಿರ್ದೇಶಕ ಡಾ. ಟಿ. ಜಿ. ಪ್ರಸನ್ನ ಹಾಗೂ ಕಂಬಳ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

  • ಮುಂದುವರಿದ ಕಂಬಳದ ಉಸೇನ್ ಬೋಲ್ಟ್ ಪದಕದ ಬೇಟೆ

    ಮುಂದುವರಿದ ಕಂಬಳದ ಉಸೇನ್ ಬೋಲ್ಟ್ ಪದಕದ ಬೇಟೆ

    ಮಂಗಳೂರು: ಕಂಬಳದ ಉಸೇನ್ ಬೋಲ್ಟ್ ಪದಕಗಳ ಸರದಾರ ಶ್ರೀನಿವಾಸ್‍ಗೌಡ ಅವರ ಕಂಬಳದ ಓಟದಲ್ಲಿ ಪದಕದ ಬೇಟೆ ಮುಂದುವರಿದಿದೆ.

    ಕಾಸರಗೋಡು ಜಿಲ್ಲೆಯ ಪೈವಳಿಕೆಯಲ್ಲಿ ಎರಡು ದಿನಗಳ ಕಾಲ ನಡೆದ ಹೊನಲು ಬೆಳಕಿನ ಅಣ್ಣ-ತಮ್ಮ ಜೋಡುಕೆರೆ ಕಂಬಳದಲ್ಲಿ ಮತ್ತೆ ನಾಲ್ಕು ಪದಕವನ್ನು ಶ್ರೀನಿವಾಸ್ ಗೌಡ ಗಳಿಸಿದ್ದಾರೆ. ಈ ಮೂಲಕ ಹಿಂದಿನ ಎಲ್ಲಾ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.

    ಹಗ್ಗ ಕಿರಿಯ, ನೇಗಿಲು ಕಿರಿಯ ವಿಭಾಗದಲ್ಲಿ ಪ್ರಥಮ ಸ್ಥಾನ, ನೇಗಿಲು ಹಿರಿಯ, ಹಗ್ಗ ಹಿರಿಯ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಮತ್ತೆ ಕಂಬಳದಲ್ಲಿ ಕಮಾಲ್ ಮಾಡಿದ್ದಾರೆ. ಅವರ ದಾಖಲೆಯನ್ನು ಇಂದು ಮತ್ತೆ ಅವರೇ ಮುರಿಯುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಈ ವರ್ಷದ 13ನೇ ಕಂಬಳ ಇದಾಗಿದ್ದು, ಈವರೆಗಿನ 13 ಕಂಬಳದಲ್ಲಿ 30 ಚಿನ್ನ ಹಾಗೂ 5 ಬೆಳ್ಳಿ ಪದಕ ಸಹಿತ ಒಟ್ಟು 35 ಪದಕಗಳನ್ನು ಪಡೆದ ಈ ಹಿಂದಿನ ಎಲ್ಲಾ ದಾಖಲೆಗಳನ್ನು ಶ್ರೀನಿವಾಸ ಗೌಡ ಮುರಿದಿದ್ದಾರೆ.