ಮಂಗಳೂರು: ಕಂಬಳ ವೀರ ಶ್ರೀನಿವಾಸ್ ಗೌಡ ಅವರು ವಿಶ್ವದಾದ್ಯಂತ ಭಾರೀ ಸುದ್ದಿಯಾಗುತ್ತಿದ್ದಂತೆ ಸಿನಿಮಾ ಕ್ಷೇತ್ರ ಕೂಡ ಕಂಬಳ ಕ್ಷೇತ್ರದ ದಾಖಲೆಯನ್ನು ಮೂಲ ವಿಷಯವನ್ನಾಗಿ ಇಟ್ಟುಕೊಂಡು ಕನ್ನಡ ಸಿನಿಮಾ ತಯಾರಿಸಲ ನಿರ್ಮಾಪಕರೊಬ್ಬರು ಮುಂದಾಗಿದೆ.
ಮಂಗಳೂರು ಸಮೀಪ ಐಕಳದಲ್ಲಿ ಫೆಬ್ರವರಿ 2ರಂದು ನಡೆದ ಕಂಬಳದಲ್ಲಿ ಮೂಡಬಿದ್ರೆ ಮಿಜಾರು ಅಶ್ವತ್ಥಪುರದ ಶ್ರೀನಿವಾಸ್ ಗೌಡ ಅವರು ದಾಖಲೆ ಬರೆದು ವಿಶ್ವದ ಗಮನ ಸೆಳೆದಿದ್ದರು. ಈ ಹಿನ್ನೆಲೆಯಾಗಿಸಿ ಕಥೆ ತಯಾರಾಗಲಿದೆ. ಕರಾವಳಿ ಮೂಲದ ಉದ್ಯಮಿ ಲೋಕೇಶ್ ಶೆಟ್ಟಿ ಎಂಬವರು ಈಗಾಗಲೇ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಟೈಟಲ್ ರಿಜಿಸ್ಟರ್ ಮಾಡಿದ್ದು, ನಿಖಿಲ್ ಮಂಜು ಅವರು ನಿರ್ದೇಶನ ಮಾಡಲಿದ್ದಾರೆ. ಇದನ್ನೂ ಓದಿ: ಕಂಬಳ ಹೀರೋಗೆ ಸಖತ್ ಡಿಮ್ಯಾಂಡ್- ಒಲಂಪಿಕ್ಸ್ಗೆ ಇಳಿಯೋ ಮುನ್ನವೇ ಶೂ ಕಂಪನಿಗಳಿಂದ ಕರೆ
– ಶ್ರೀನಿವಾಸ ಗೌಡರ ದಾಖಲೆ ಮುರಿದ ನಿಶಾಂತ್ ಶೆಟ್ಟಿ
– ವರ್ಷಕ್ಕೆ 2 ಯಜಮಾನರ ಜೊತೆ ಒಪ್ಪಂದ
ಉಡುಪಿ: ಕರಾವಳಿಯ ಜಾನಪದ ಕ್ರೀಡೆ ಕಂಬಳ ವಿಶ್ವಮಟ್ಟದಲ್ಲಿ ಹೆಸರು ಮಾಡುತ್ತಿದೆ. ಕಂಬಳ ಕೋಣದ ಓಟಗಾರರು ಒಬ್ಬರಿಗಿಂತ ಒಬ್ಬರು ದಾಖಲೆಗಳನ್ನು ಮಾಡುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಅಶ್ವತ್ಥಪುರ ಶ್ರೀನಿವಾಸ ಗೌಡ ಉಸೇನ್ ಬೋಲ್ಟ್ ಗಿಂತ ಚೆನ್ನಾಗಿ ಓಡಿದರೆ, ಉಡುಪಿ ಬಜಗೋಳಿಯ ನಿಶಾಂತ್ ಶೆಟ್ಟಿ ಗೌಡರ ರೆಕಾರ್ಡ್ ಬ್ರೇಕ್ ಮಾಡಿದ್ದಾರೆ.
ಕಟ್ಟುಮಸ್ತಾದ ದೇಹ. ಆದರೆ ಒಂದು ದಿನವೂ ಜಿಮ್ಮಿಗೆ ಹೋದವರಲ್ಲ. ಗದ್ದೆ, ಹಟ್ಟಿ, ತೆಂಗಿನ ತೋಟದಲ್ಲಿ ಕೆಲಸ, ಅಮ್ಮ ರುಚಿರುಚಿಯಾದ ತಿಂಡಿ ಮಾಡಿದರೂ ನಿಶಾಂತ್ ಅವರು ತಿನ್ನುವುದು ಕುಚ್ಚಿಲು ಅಕ್ಕಿ ಗಂಜಿ. ಅದಕ್ಕೆ ಉಪ್ಪಿನಕಾಯಿ ಮತ್ತು ಚಟ್ನಿ. ಗಂಜಿ ಊಟ ಮಾಡಿದರೆ ಮತ್ತೆ ಅಡಿಕೆ ತೋಟದಲ್ಲಿ ಕೆಲಸ ಮಾಡಲು ಹೊರಡುತ್ತಾರೆ. ಇದನ್ನೂ ಓದಿ: ಶ್ರೀನಿವಾಸ ಗೌಡ್ರನ್ನು ಮೀರಿಸಿದ ಮತ್ತೋರ್ವ ಕಂಬಳ ಓಟಗಾರ- ಉಡುಪಿಯಲ್ಲಿ ನಿಶಾಂತ್ ಶೆಟ್ಟಿ ಸಾಧನೆ
ಕಾರ್ಕಳದ ಬಜಗೋಳಿಯ ಜೋಗಿಬೆಟ್ಟು ಎಂಬಲ್ಲಿ ನಿಶಾಂತ್ ಶೆಟ್ಟಿ ಅವರ ಮನೆಯಿದೆ. ಮನೆಯ ಸುತ್ತಲೂ ತೋಟ ಇದೆ. ತೋಟದಲ್ಲಿ ಕೆಲಸ ಮಾಡುತ್ತಾ ಹಟ್ಟಿಯಲ್ಲಿ ದನಗಳ ಜೊತೆ ಇರುವ ನಿಶಾಂತ್ ಶೆಟ್ಟಿ ಅವರು ರಾತ್ರಿ ಬೆಳಗಾಗುವುದರ ಒಳಗೆ ಕಂಬಳ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ. ಈಗಿನ್ನೂ ಇಪ್ಪತ್ತೆಂಟು ವಯಸ್ಸಿನ ನಿಶಾಂತ್ ಶೆಟ್ಟಿ ಕಂಬಳ ಕೋಣಗಳನ್ನು ಓಡಿಸಲು ಆರಂಭಿಸಿ ಕೇವಲ ಆರು ವರ್ಷ ಆಗಿದೆ. ಆರು ವರ್ಷದಲ್ಲೇ ನಿಶಾಂತ್ ಶೆಟ್ಟಿ ಐವತ್ತಕ್ಕಿಂತಲೂ ಹೆಚ್ಚು ಮೆಡಲ್ಗಳನ್ನು ಬಾಚಿದ್ದಾರೆ. ಇದನ್ನೂ ಓದಿ: ಶ್ರೀನಿವಾಸ ಗೌಡರಿಗೆ ಖಾಲಿ ಕವರ್ ನೀಡಿ ಪೋಸ್ಕೊಟ್ಟ ಸಿಟಿ ರವಿ, ಹೆಬ್ಬಾರ್
ದಕ್ಷಿಣ ಕನ್ನಡ ಜಿಲ್ಲೆಯ ಅಶ್ವತ್ಥಪುರ ಶ್ರೀನಿವಾಸ ಗೌಡ ಅವರು ಸದ್ಯ ಕಂಬಳ ಕ್ಷೇತ್ರದ ಸವ್ಯಸಾಚಿ. ಉಸೇನ್ ಬೋಲ್ಟ್ ಗಿಂತಲೂ ಒಂದು ಕೈ ಹೆಚ್ಚು ಮೀರಿ ಶ್ರೀನಿವಾಸ್ ಗೌಡ ದಾಖಲೆಗಳನ್ನು ಮಾಡಿದ್ದಾರೆ. ಶ್ರೀನಿವಾಸಗೌಡ ಕಿನ್ನಿಗೋಳಿಯ ಐಕಳದಲ್ಲಿ ಮಾಡಿದ ದಾಖಲೆಯನ್ನು ಉಡುಪಿಯ ನಿಶಾಂತ್ ಶೆಟ್ಟಿ ಒಂದು ವಾರದಲ್ಲಿ ಅಳಿಸಿ ಹಾಕಿದ್ದಾರೆ. ವೇಣೂರಿನಲ್ಲಿ ನಡೆದ ಸೂರ್ಯ ಚಂದ್ರ ಕಂಬಳದಲ್ಲಿ ಅತಿ ಹೆಚ್ಚು ವೇಗದಲ್ಲಿ ಓಡಿ ದಾಖಲೆಯನ್ನು ನಿರ್ಮಿಸಿದ್ದಾರೆ.
ನಿಶಾಂತ್ ಶೆಟ್ಟಿ ಕೃಷಿ ಮೂಲದಿಂದ ಬಂದವರು. ಎರಡು ಸಾವಿರ ಹದಿನಾರರ ಕಂಬಳ ಅಕಾಡೆಮಿ ನಡೆಸಿದ ತರಬೇತಿಯಲ್ಲಿ ಹತ್ತು ದಿವಸಗಳ ಓಟದ ತರಬೇತಿಯನ್ನು ಪಡೆದಿದ್ದಾರೆ. ಕೋಣಕ್ಕೆ ಆಹಾರ ಕೊಡುವುದು ಕೋಣಕ್ಕೆ ಹಗ್ಗ ಕಟ್ಟುವುದು, ನೇಗಿಲು ಬಿಗಿಯುವುದು, ಓಡಿಸುವುದು ಎಣ್ಣೆ ಹಚ್ಚುವುದು ಕೋಣಗಳ ಸಂಪೂರ್ಣ ಆರೈಕೆ ನಿಶಾಂತ್ ಶೆಟ್ಟಿ ಅವರಿಗೆ ಗೊತ್ತಿದೆ.
ಪ್ರಕೃತಿ ಕಂಬಳದ ಗದ್ದೆಯಲ್ಲಿ ಚಾಕಚಕ್ಯತೆ ಕೇವಲ ಓಡಿಸುವುದು ಮಾತ್ರ ಅಲ್ಲ. ಕೋಣಗಳನ್ನು ಓಡುವಂತೆ ಮಾಡುವ ಚಾಕಚಕ್ಯತೆಯೂ ಬೇಕು. ಈ ಎರಡೂ ನಿಶಾಂತ್ ಶೆಟ್ಟಿ ಅವರಲ್ಲಿದೆ. ಶ್ರೀನಿವಾಸ ಗೌಡ ಅವರು ಅದು ಮನೆತನದ ಎಂಟರಿಂದ ಹತ್ತು ಕೋಣಗಳನ್ನು ಓಡಿಸಿದರೆ ನಿಶಾಂತ್ ಕೇವಲ ಎರಡು ಜೊತೆ ಕೋಣಗಳನ್ನು ಓಡಿಸುತ್ತಾರೆ.
ಪ್ರತಿ ವರ್ಷ ಎರಡು ಯಜಮಾನರ ಕೋಣಗಳನ್ನು ಓಡಿಸುವ ನಿಶಾಂತ್ ಮುಂದಿನ ವರ್ಷ ಮತ್ತೆ ಬೇರೆ ಕೋಣಗಳತ್ತ ಮುಖ ಮಾಡುತ್ತಾರೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ನೂರ ಐವತ್ತು ಜೊತೆ ಕೋಣಗಳು ಕಂಬಳ ಕ್ರೀಡೆಯಲ್ಲಿ ಪಾಲ್ಗೊಳ್ಳುತ್ತವೆ. ಹದಿನೈದಕ್ಕಿಂತಲೂ ಹೆಚ್ಚು ಕೋಣದ ಯಜಮಾನರು ನಿಶಾಂತ್ ಶೆಟ್ಟಿ ಅವರಿಗೆ ಬೇಡಿಕೆಯನ್ನು ಇಡುತ್ತಾರೆ. ಆದರೆ ನಿಶಾಂತ್ ಶೆಟ್ಟಿ ಇಬ್ಬರ ನಾಲ್ಕು ಜೊತೆ ಕೋಣವನ್ನು ಮಾತ್ರ ಓಡಿಸುತ್ತಾರೆ.
ಮಾಂಸಾಹಾರ ಸೇವನೆಯಿಲ್ಲ:
ಕಾರ್ಕಳ ತಾಲೂಕು ಬಜಗೋಳಿಯ ಜೋಗಿ ಬೆಟ್ಟುವಿನ ನಿಶಾಂತ್ ಶೆಟ್ಟಿ ಅವರು ಜಾತಿಯಲ್ಲಿ ಬಂಟರು. ಶೇಕಡಾ ನೂರು ಬಂಟರು ನಾನ್ವೆಜ್ ಪ್ರಿಯರು ಎಂದರೆ ತಪ್ಪಲ್ಲ. ಆದರೆ ನಿಶಾಂತ್ ಶೆಟ್ಟಿ ಕಂಬಳಕ್ಕೋಸ್ಕರ ನಾನ್ವೆಜ್ ತ್ಯಾಗ ಮಾಡಿದ್ದಾರೆ. ತರಕಾರಿಯಲ್ಲಿರುವ ಶಕ್ತಿ ನಾನ್ವೆಜ್ನಲ್ಲಿ ಇಲ್ಲ ಎನ್ನುವುದು ಅವರ ಅನುಭವವಾಗಿದೆ.
ಬೆಳಗಿನ ಗಂಜಿ ಊಟ ಮಧ್ಯಾಹ್ನದ ಊಟ ರಾತ್ರಿಯ ಊಟ ಎಲ್ಲವನ್ನೂ ತರಕಾರಿಯ ಜೊತೆಯೇ ಮಾಡುತ್ತಾರೆ. ಮೀನು ಮತ್ತು ಕೋಳಿಯಲ್ಲಿ ಕೊಬ್ಬು ಮತ್ತು ಜಿಡ್ಡು ಇರೋದರಿಂದ ಚಾಕಚಕ್ಯತೆಯಿಂದ ಓಡಾಡಲು ಸಾಧ್ಯವಿಲ್ಲ ಮತ್ತು ಚುರುಕುತನ ಹೊಂದಲು ಸಾಧ್ಯವಿಲ್ಲ ಎನ್ನುವುದು ನಿಶಾಂತ್ ಶೆಟ್ಟಿ ಅವರ ಲೆಕ್ಕಾಚಾರವಾಗಿದೆ.
ದೊಡ್ಡ ಅಭಿಮಾನಿ:
ನಿಶಾಂತ್ ಶೆಟ್ಟಿ ಅವರ ತಂದೆ ಕೂಡ ಕಂಬಳದ ದೊಡ್ಡ ಅಭಿಮಾನಿಯಾಗಿದ್ದಾರೆ. ಹಾಗಂತ ಅವರು ಕ್ರೀಡೆಯ ಕಂಬಳದಲ್ಲಿ ಓಟವನ್ನು ಮಾಡಿಲ್ಲ. ಗದ್ದೆಗಳಲ್ಲಿ ತಮ್ಮ ಕೃಷಿ ಚಟುವಟಿಕೆಯ ಸಂದರ್ಭದಲ್ಲಿ ಕೋಣಗಳನ್ನು ಓಡಿಸುತ್ತಿದ್ದರು. ಕಳೆದ ಐದಾರು ವರ್ಷಗಳಿಂದ ನಿಶಾಂತ್ ಶೆಟ್ಟಿ ಕಂಬಳ ಕ್ಷೇತ್ರದಲ್ಲಿ ಮಾಡುತ್ತಿರುವ ಸಾಧನೆ ಕಂಡು ಅವರ ತಂದೆ ಹಿಗ್ಗಿ ಹೋಗಿದ್ದಾರೆ. ಮಗನ ಓಟ ಮತ್ತು ಆತನಿಗೆ ಕಂಬಳ ಕ್ಷೇತ್ರದಲ್ಲಿ ಸಿಕ್ಕಿರುವ ಹೆಸರು ಕಂಡು ಬಹಳ ಖುಷಿಪಟ್ಟಿದ್ದಾರೆ.
ನಿಶಾಂತ್ ಶೆಟ್ಟಿ ಅವರ ತಾಯಿ ತಾರಾ ಮನೆಯನ್ನು ನೋಡುವ ಜೊತೆ ಮಗನ ಕಂಬಳ ಕ್ಷೇತ್ರಕ್ಕೂ ಬೆನ್ನೆಲುಬಾಗಿ ನಿಂತಿದ್ದಾರೆ. ಹೊತ್ತು ಹೊತ್ತಿಗೆ ಯಾವುದೇ ಆರೋಗ್ಯಕ್ಕೆ ಸಮಸ್ಯೆ ಆಗುವಂತಹ ಆಹಾರವನ್ನು ಅವರು ಕೊಡುವುದಿಲ್ಲ.
ಕಂಬಳ ಸೀಸನ್ನಲ್ಲಿ ಕಂಬಳ ಬಿಟ್ಟರೆ ನಿಶಾಂತ್ ಶೆಟ್ಟಿ ಸಂಪೂರ್ಣವಾಗಿ ಕೃಷಿಯಲ್ಲಿ ತೊಡಗಿಕೊಳ್ಳುತ್ತಾರೆ. ಕಂಬಳ ಕ್ಷೇತ್ರದಲ್ಲಿ ಹೆಸರು ಗಳಿಸಿದರೂ ನಿಶಾಂತ್ ಶೆಟ್ಟಿ ಅವರ ಜೀವನೋಪಾಯಕ್ಕೆ ಅರಸಿದ್ದು ಕೃಷಿ. ಅಡಕೆ ತೋಟ, ಭತ್ತದ ಬೇಸಾಯ ಇವರ ಪ್ರಮುಖ ಬೆಳೆಗಳು. ಹಸು ಸಾಕಣೆ ಮತ್ತು ಎಮ್ಮೆ ಸಾಕಣೆಯನ್ನು ಕೂಡ ಅವರು ಹವ್ಯಾಸವನ್ನಾಗಿ ಮಾಡಿಕೊಂಡಿದ್ದಾರೆ.
ಬೆಂಗಳೂರು: ಕಂಬಳದ ಹೀರೋ ಶ್ರೀನಿವಾಸ್ಗೌಡ ಈಗ ಟಾಕ್ ಆಫ್ ದಿ ಟೌನ್ ಆಗಿದ್ದಾರೆ. ಹಳ್ಳಿ ಹೈದನ ಮಿಂಚಿನ ಓಟ ಈಗ ದೇಶದಲ್ಲಿ ಸಖತ್ ಸೌಂಡ್ ಮಾಡುತ್ತಿದೆ.
ಕಂಬಳದ ಕೆಸರು ಗದ್ದೆಯಲ್ಲಿ ಶ್ರೀನಿವಾಸ್ ಗೌಡ ಓಡಿದ ಪರಿಗಂತೂ ಅವರಿಗೆ ಈಗ ಕರ್ನಾಟಕದ ಉಸೇನ್ ಬೋಲ್ಟ್ ಅನ್ನುವ ಬಿರುದನ್ನು ನೀಡಿದೆ. ಮಿಂಚಿನ ಓಟದ ಶ್ರೀನಿವಾಸ್ ಗೌಡ ದೇಹದಾರ್ಢ್ಯ ಕೂಡ ಎಲ್ಲರ ಗಮನ ಸೆಳೆದಿತ್ತು. ಸಿಕ್ಸ್ ಪ್ಯಾಕ್ ಹೊಂದಿರುವ ಕಂಬಳದ ವೀರನ ಮೈಕಟ್ಟಿಗೆ ಎಲ್ಲರೂ ಫಿದಾ ಆಗಿದ್ದರು. ಇದನ್ನೂ ಓದಿ: ಉಸೇನ್ ಬೋಲ್ಟ್ ದಾಖಲೆ ಮುರಿದ ತುಳುನಾಡ ಕಂಬಳ ಓಟಗಾರ ಶ್ರೀನಿವಾಸ್
ಸಾಮಾನ್ಯವಾಗಿ ಜಿಮ್ನಲ್ಲಿ ಕಸರತ್ತು ಮಾಡಿ ಬೆವರಿಳಿಸಿದಷ್ಟೆ ಸಿಕ್ಸ್ ಪ್ಯಾಕ್ ಬರುತ್ತೆ ಅನ್ನೋ ಕಲ್ಪನೆ ಎಲ್ಲರಿಗೂ ಇದೆ. ಅಸಲಿಗೆ ಶ್ರೀನಿವಾಸ್ ಗೌಡ ಜಿಮ್ ಮೆಟ್ಟಿಲೇ ಹತ್ತಿಲ್ಲ. ಇದನ್ನೂ ಓದಿ: ಮತ್ತೆ ಚಿನ್ನದ ಪದಕ ಬಾಚಿದ ಕಂಬಳದ ಉಸೇನ್ ಬೋಲ್ಟ್
ನಮ್ಮಂತ ಬಡವರಿಗೆ ಜಿಮ್ ಎಲ್ಲಿ ಸಾರ್ ನಾನು ಮೈಬಗ್ಗಿಸಿ ಗದ್ದೆಯಲ್ಲಿ ದುಡಿಮೆ ಮಾಡ್ತೀನಿ. ಗಾರೆ ಕೆಲಸ, ಮಳೆಗಾಲ ಬಂದರೆ ಬೇರೆಯವರ ಹೊಲದಲ್ಲಿ ಕೆಲಸ ಮಾಡುತ್ತೇನೆ. ಸಾಗುವಾಳಿ ಕೃಷಿ ಕೆಲಸ ಮಾಡುತ್ತೀನಿ. ಬಿಡುವಿಲ್ಲದ ಕೆಲಸದಿಂದ ನಂಗೆ ಸಿಕ್ಸ್ ಪ್ಯಾಕ್ ಬಂದಿದೆ ಎಂದು ಪಬ್ಲಿಕ್ ಟಿವಿ ಜೊತೆ ಶ್ರೀನಿವಾಸ್ ಸಿಕ್ಸ್ ಪ್ಯಾಕ್ ಸೀಕ್ರೆಟ್ ಹಂಚಿಕೊಂಡರು.
ಜೊತೆಗೆ ಯುವಕರು ಕೃಷಿ ಕೆಲಸ ಮಾಡಿದರೆ, ಉಳುಮೆ ಮಾಡಿದರೆ ಆರೋಗ್ಯದ ಜೊತೆಗೆ ಫಿಟ್ ಆಗಿರುತ್ತಾರೆ ಎಂಬ ಮೆಸೇಜ್ ಕೂಡ ಕೊಟ್ಟರು.
ಶ್ರೀನಿವಾಸ್ ಗೌಡ ಕಡು ಬಡತನದ ಕುಟುಂಬದಿಂದ ಬಂದಿದ್ದಾರೆ. ಮೂಡುಬಿದ್ರೆಯ ಮಿಜಾರಿನ ಅಶ್ವತ್ಥಪುರದ ನಿವಾಸಿಯಾಗಿರುವ ಶ್ರೀನಿವಾಸ್ ಗೌಡ, ಪರಿಶಿಷ್ಟ ವರ್ಗಕ್ಕೆ ಸೇರಿದ ಕುಡುಂಬಿ ಜನಾಂಗದ ವ್ಯಕ್ತಿ. ಆದರೆ ಕಂಬಳದಲ್ಲಿ ಮಾಡಿದ ಸಾಧನೆ ಮಾತ್ರ ಶ್ರೀನಿವಾಸ್ ಅವರನ್ನು ಖ್ಯಾತಿಯ ಉತ್ತುಂಗಕ್ಕೆ ಏರಿಸಿದೆ. ಅತಿ ವೇಗದ ಓಟದ ದಾಖಲೆಯ ಉಸೇನ್ ಬೋಲ್ಟ್ ಮೀರಿಸುವ ಸಾಧನೆ ಮಾಡಿದ್ದಾಗಿ ಹೋಲಿಸಲಾಗುತ್ತಿದೆ. ಇಂಥ ಖ್ಯಾತಿ ಬಂದಿದ್ದರೂ, ಶ್ರೀನಿವಾಸ್ ಮಾತ್ರ ಎಂದಿನಂತೇ ಕಂಬಳದಲ್ಲಿ ತೊಡಗಿಸಿಕೊಂಡಿದ್ದಾರೆ. ಕಂಬಳ ಬಿಟ್ಟರೆ ಕಟ್ಟಡ ಕೆಲಸದ ಕಾರ್ಮಿಕನಾಗಿ ದುಡಿಯುತ್ತಿದ್ದಾರೆ.
ಶ್ರೀನಿವಾಸ್ ಗೌಡರ ಸಾಧನೆ ವಿಶ್ವದ ಗಮನ ಸೆಳೆದಿದ್ದರೂ, ಪದಕದ ಬೇಟೆ ನಿಂತಿಲ್ಲ. ಭಾನುವಾರ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ನಡೆದ ಕಂಬಳದಲ್ಲಿ ಮೂರು ವಿಭಾಗದಲ್ಲಿ ಮತ್ತೆ ಮೂರು ಚಿನ್ನದ ಪದಕ ಗೆದ್ದು ಬೀಗಿದ್ದಾರೆ. ಈ ಬಾರಿಯ ಕಂಬಳದ ಋತುವಿನಲ್ಲಿ ಸತತವಾಗಿ ಚಿನ್ನದ ಪದಕ ಗೆಲ್ಲುತ್ತಾ ಬಂದು ದಾಖಲೆ ಮಾಡಿದ್ದಾರೆ. ಈ ಬಾರಿ ಇನ್ನೆರಡು ಕಂಬಳ ಮಾತ್ರ ಉಳಿದಿದ್ದು, ನಾಲ್ಕು ಕೋಣಗಳ ಜೊತೆ ಓಡುವ ಶ್ರೀನಿವಾಸ್ ಗೌಡ ಚಿನ್ನಕ್ಕೆ ಲಗ್ಗೆಯಿಟ್ಟು ಹೊಸ ದಾಖಲೆ ನಿರ್ಮಿಸುವ ಇರಾದೆಯಲ್ಲಿದ್ದಾರೆ.
ಉಡುಪಿ: ಕರಾವಳಿಯ ಜಾನಪದ ಕ್ರೀಡೆ ಕಂಬಳದಲ್ಲಿ ದಾಖಲೆಯ ಮೇಲೆ ದಾಖಲೆಗಳು ನಡೆಯುತ್ತಲೇ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಅಶ್ವಥಪುರ ನಿವಾಸಿ ಶ್ರೀನಿವಾಸ ಗೌಡರನ್ನು ಈಗಾಗಲೇ ಕಂಬಳದ ಉಸೇನ್ ಬೋಲ್ಟ್ ಗೆ ಹೋಲಿಸಲಾಗಿದೆ. ಇದೀಗ ನಿಶಾಂತ್ ಶೆಟ್ಟಿ ಎಂಬವರು ಇವರನ್ನೂ ಮೀರಿಸಿದ್ದಾರೆ.
ಹೌದು. ಕಿನ್ನಿಗೋಳಿಯ ಐಕಳದಲ್ಲಿ ನಡೆದ ಕಂಬಳದಲ್ಲಿ ಶ್ರೀನಿವಾಸ್ ಗೌಡ ಕಂಬಳದ ದಾಖಲೆ ಬರೆದಿದ್ದರು. ಆದರೆ ಇದೀಗ ಶ್ರೀನಿವಾಸಗೌಡರ ದಾಖಲೆಯನ್ನು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬಜಗೊಳಿ ನಿಶಾಂತ್ ಶೆಟ್ಟಿ ಮುರಿದಿದ್ದಾರೆ.
142.5 ಮೀಟರ್ ಕಂಬಳ ಗದ್ದೆಯನ್ನು ಕ್ರಮಿಸಲು ಶ್ರೀನಿವಾಸ ಗೌಡ 13.62 ಸೆಕೆಂಡ್ ತೆಗೆದುಕೊಂಡಿದ್ದರು. ಶ್ರೀನಿವಾಸಗೌಡ ಮಾಡಿದ ದಾಖಲೆಯನ್ನು ಒಂದೇ ವಾರದಲ್ಲಿ ನಿಶಾಂತ್ ಶೆಟ್ಟಿ ಮುರಿದಿದ್ದಾರೆ. ವೇಣೂರಿನಲ್ಲಿ ನಡೆದ ಕಂಬಳದಲ್ಲಿ ನಿಶಾಂತ್ ಶೆಟ್ಟಿ 143 ಮೀಟರನ್ನು 13.61 ಸೆಂಕೆಡಲ್ಲಿ ಓಡಿದ್ದಾರೆ. ಇದನ್ನೂ ಓದಿ: ಕರಾವಳಿಯ ಕಂಬಳ ಓಟಗಾರ ದೇಶಾದ್ಯಂತ ಟ್ರೆಂಡಿಂಗ್- ಕೇಂದ್ರವನ್ನೂ ತಲುಪಿದ ಸಾಧನೆ
ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ನಿಶಾಂತ್ ಶೆಟ್ಟಿ, ಇದರಲ್ಲಿ ನಮ್ಮ ಸಾಧನೆ ಏನೂ ಇಲ್ಲ. ಕೋಣಗಳು ಓಡಿದಾಗ ನಾವು ಬೆನ್ನತ್ತಿ ಓಡುತ್ತೇವೆ. ಶ್ರೀನಿವಾಸಗೌಡರ ಸಾಧನೆಯ ಮುಂದೆ ನಮ್ಮದೇನೂ ಇಲ್ಲ. ಅವರು 150ಕ್ಕಿಂತಲೂ ಹೆಚ್ಚು ಮೆಡಲ್ ಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಕೆಲವು ದಿನ ಕೆಲವು ಕೋಣಗಳು ಚೆನ್ನಾಗಿ ಓಡುತ್ತವೆ. ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹತ್ತಕ್ಕಿಂತಲೂ ಹೆಚ್ಚು ಉತ್ತಮ ಓಟಗಾರರು ಇದ್ದೇವೆ. ಕಂಬಳದ ಓಟಗಾರರಿಗೆ ಕರ್ನಾಟಕ ಸರ್ಕಾರ ವಿಮಾ ಸೌಲಭ್ಯವನ್ನು ಕೊಡಬೇಕು ಎಂದು ಮಾಧ್ಯಮಗಳ ಮೂಲಕ ನಿಶಾಂತ್ ಶೆಟ್ಟಿ ಒತ್ತಾಯಿಸಿದರು. ಇದನ್ನೂ ಓದಿ: ಕಂಬಳ ಹೀರೋಗೆ ಸಖತ್ ಡಿಮ್ಯಾಂಡ್- ಒಲಂಪಿಕ್ಸ್ಗೆ ಇಳಿಯೋ ಮುನ್ನವೇ ಶೂ ಕಂಪನಿಗಳಿಂದ ಕರೆ
ಶ್ರೀನಿವಾಸ ಗೌಡ ಅವರು ಫೆಬ್ರವರಿ 1ರಂದು ಮಂಗಳೂರು ಸಮೀಪದ ಐಕಳದಲ್ಲಿ ನಡೆದ ಕಂಬಳ ಕ್ರೀಡೆಯಲ್ಲಿ 142.50 ಮೀಟರ್ ದೂರವನ್ನು ಕೇವಲ 13.62 ಸೆಕೆಂಡಲ್ಲಿ ಕ್ರಮಿಸಿದ್ದರು. ಇದು ಕಂಬಳ ಕ್ರೀಡೆಯಲ್ಲಿ ಇದೂವರೆಗಿನ ಅತ್ಯಂತ ವೇಗದ ದಾಖಲೆಯೆಂದು ಪರಿಗಣಿಸಲಾಗಿದೆ. ಶ್ರೀನಿವಾಸ್ ಗೌಡ ಅವರು ಗುರಿ ತಲುಪಲು ತೆಗೆದುಕೊಂಡ ಸಮಯವನ್ನು 100 ಮೀ. ಓಟದೊಂದಿಗೆ ತಾಳೆ ಹಾಕಿದರೆ 9.55 ಸೆಕೆಂಡ್ನಲ್ಲಿ ಓಟ ಪೂರ್ಣಗೊಳಿಸಿ ಬೋಲ್ಟ್ ದಾಖಲೆಯನ್ನು ಉಡಾಯಿಸಿದ್ದರು. ಇದನ್ನೂ ಓದಿ: ಶ್ರೀನಿವಾಸ ಗೌಡರಿಗೆ ಖಾಲಿ ಕವರ್ ನೀಡಿ ಪೋಸ್ಕೊಟ್ಟ ಸಿಟಿ ರವಿ, ಹೆಬ್ಬಾರ್
ಶ್ರೀನಿವಾಸ್ ಗೌಡ, ಇಡೀ ದೇಶಕ್ಕೆ ದೇಶವೇ ಈ ಕಂಬಳದ ಕೆಸರುಗದ್ದೆಯಲ್ಲಿ ಓಡಿದವನನ್ನು ಬೆರಗುಗಣ್ಣಿನಿಂದ ನೋಡುತ್ತಿದೆ. ಕಂಬಳದಲ್ಲಿ 145 ಮೀಟರ್ ದೂರವನ್ನು 13.61 ಸೆಕೆಂಡಿನಲ್ಲಿ ಓಡಿ, ಕರ್ನಾಟಕದ ಉಸೇನ್ ಬೊಲ್ಟ್ ಅಂತ ಕರೆಸಿಕೊಂಡಿದ್ದಾರೆ.
ಮಂಗಳೂರಿನ ಕಂಬಳ ಹೀರೋ ಅದೆಂಥ ಕಡು ಬಡತನದಲ್ಲಿ ಬೆಳೆದು ಬಂದರು ಅಂದರೆ ಇದೂವರೆಗೆ ಕಾಲಿಗೆ ಶೂವನ್ನೇ ಧರಿಸಲ್ಲವಂತೆ. ಹವಾಯಿ ಚಪ್ಪಲಿಯಷ್ಟೇ ಶ್ರೀನಿವಾಸ್ಗೆ ಆಸರೆ. ಬರಿಗಾಲಲ್ಲಿ ಕುದುರೆ ಕೆನೆತದಂತೆ ಓಡುವ ಈ ಹೀರೋಗೆ ಶೂ ಧರಿಸಿಯೇ ಗೊತ್ತಿಲ್ಲವಂತೆ. ಇದನ್ನೂ ಓದಿ: ಮತ್ತೆ ಚಿನ್ನದ ಪದಕ ಬಾಚಿದ ಕಂಬಳದ ಉಸೇನ್ ಬೋಲ್ಟ್
ಕಂಬಳದಲ್ಲಿ ಮಿಂಚಿನ ಓಟದ ಮೂಲಕ ಗಮನ ಸೆಳೆದ, ಶೂವನ್ನು ಧರಿಸಲು ಹಣವಿಲ್ಲದ ಶ್ರೀನಿವಾಸ್ಗೆ ಈಗ ಅಂತರಾಷ್ಟ್ರೀಯ ಬ್ರ್ಯಾಂಡೆಡ್ ಶೂ ಕಂಪನಿಯವರೇ ಕರೆ ಮಾಡುತ್ತಿದ್ದಾರೆ. ಒಲಂಪಿಕ್ಸ್ಗೆ ಫೀಲ್ಡ್ಗಿಳಿಯುವ ಮುನ್ನವೇ ಬ್ರ್ಯಾಂಡೆಡ್ ಶೂ ಕಂಪನಿಯವರು ಕಂಬಳ ವೀರನಿಗಾಗಿ ಸ್ಪೆಷಲ್ ಶೂ ತಯಾರಿಯಲ್ಲಿ ತೊಡಗಿದ್ದಾರೆ ಎಂದು ಕಂಬಳ ಸಂರಕ್ಷಣಾ ಸಮಿತಿ ಅಧ್ಯಕ್ಷ ಗುಣಪಾಲ್ ಕಡಂಬ ತಿಳಿಸಿದ್ದಾರೆ.
ಒಟ್ಟಿನಲ್ಲಿ ಕಂಬಳ ವೀರನ ಓಟದ ಬದುಕಿನಷ್ಟೇ ಅವರ ಬದುಕಿನ ಹೋರಾಟ ಕೂಡ ಅಚ್ಚರಿಗೊಳಿಸುತ್ತೆ.
ಫೆಬ್ರವರಿ 1ರಂದು ಮಂಗಳೂರು ಸಮೀಪದ ಐಕಳದಲ್ಲಿ ನಡೆದ ಕಂಬಳ ಕ್ರೀಡೆಯಲ್ಲಿ ಶ್ರೀನಿವಾಸ್ ಗೌಡ 142.50 ಮೀಟರ್ ದೂರವನ್ನು ಕೇವಲ 13.62 ಸೆಕೆಂಡಲ್ಲಿ ಕ್ರಮಿಸಿದ್ದರು. ಇದು ಕಂಬಳ ಕ್ರೀಡೆಯಲ್ಲಿ ಇದೂವರೆಗಿನ ಅತ್ಯಂತ ವೇಗದ ದಾಖಲೆಯಾಗಿದೆ. ಶ್ರೀನಿವಾಸ್ ಗೌಡ ಗುರಿ ತಲುಪಲು ತೆಗೆದುಕೊಂಡ ಸಮಯವನ್ನು 100 ಮೀ. ಓಟದೊಂದಿಗೆ ತಾಳೆ ಹಾಕಿದರೆ 9.55 ಸೆಕೆಂಡ್ನಲ್ಲಿ ಓಟ ಪೂರ್ಣಗೊಳಿಸಿ ಬೋಲ್ಟ್ ದಾಖಲೆಯನ್ನು ಉಡಾಯಿಸಿದ್ದರು.
– ವಿಧಾನಸೌಧದಲ್ಲಿ ಸಿಎಂ ಸನ್ಮಾನ – ಅರ್ಧ ಗಂಟೆ ತಡವಾಗಿ ಬಂತು 3 ಲಕ್ಷದ ಚೆಕ್
ಬೆಂಗಳೂರು: ಕಂಬಳ ವೀರ ಶ್ರೀನಿವಾಸ್ಗೌಡರನ್ನು ಕೆಲ ಸಚಿವರು ತಮ್ಮ ಪ್ರಚಾರಕ್ಕಾಗಿ ಬಳಸಿಕೊಂಡ್ರಾ ಎನ್ನುವ ಪ್ರಶ್ನೆ ಎದ್ದಿದೆ. ಇವತ್ತು ಮಂಗಳೂರಿನ ಶ್ರೀನಿವಾಸ್ಗೌಡರನ್ನು ವಿಧಾನಸೌಧಕ್ಕೆ ಕರೆಸಿಕೊಂಡ ಸಿಎಂ ಯಡಿಯೂರಪ್ಪ, ಸನ್ಮಾನ ಮಾಡಿದರು.
ಸನ್ಮಾನದ ಬಳಿಕ ಚೆಕ್ ವಿತರಿಸುವಂತೆ ಸೂಚಿಸಿ ಸಿಎಂ ಅಲ್ಲಿಂದ ನಿರ್ಗಮಿಸಿದರು. ಆದರೆ ಚೆಕ್ ಬರುವುದು ತಡವಾದ ಕಾರಣ ಶ್ರೀನಿವಾಸ್ ಗೌಡರಿಗೆ ಖಾಲಿ ಕವರ್ ನೀಡಿ ಸಚಿವರಾದ ಸಿಟಿ ರವಿ ಮತ್ತು ಶಿವರಾಮ್ ಹೆಬ್ಬಾರ್ ಪೋಸ್ ನೀಡಿದರು.
ಇದು ಖಾಲಿ ಕವರ್ ಅಂತಾ ಕೈ ಸನ್ನೆಯಲ್ಲೇ ಸಿಟಿ ರವಿ ತಿಳಿಸುವ ಪ್ರಯತ್ನ ಮಾಡಿದರು. ಅರ್ಧಗಂಟೆ ಬಳಿಕ ಕಾರ್ಮಿಕ ಇಲಾಖೆ ಅಧಿಕಾರಿಗಳು ಶ್ರೀನಿವಾಸ್ ಗೌಡರಿಗೆ 3 ಲಕ್ಷ ರೂಪಾಯಿಯ ಚೆಕ್ ವಿತರಿಸಿದರು. ಇದನ್ನೂ ಓದಿ: ಉಸೇನ್ ಬೋಲ್ಟ್ ದಾಖಲೆ ಮುರಿದ ತುಳುನಾಡ ಕಂಬಳ ಓಟಗಾರ ಶ್ರೀನಿವಾಸ್
ಈಗ ಹೋಗಲ್ಲ: ಕಂಬಳ ಸ್ಪರ್ಧೆಗಳು ಇರುವ ಕಾರಣ ಸದ್ಯಕ್ಕೆ ಭಾರತೀಯ ಕ್ರೀಡಾ ಪ್ರಾಧಿಕಾರಕ್ಕೆ ತೆರಳದೇ ಇರಲು ಶ್ರೀನಿವಾಸ್ಗೌಡ ತೀರ್ಮಾನಿಸಿದ್ದಾರೆ. ನಂಗೆ ಕಂಬಳದ ಗದ್ದೆಯೇ ಇಷ್ಟ ಎಂದಿದ್ದಾರೆ.
ಈ ಮೊದಲೇ ನಾನು ಕಂಬಳದಲ್ಲಿ ಭಾಗವಹಿಸುತ್ತೇನೆ ಎಂದು ಕೋಣದ ಯಜಮಾನರಿಗೆ ಮಾತು ನೀಡಿದ್ದೇನೆ. ಈ ಋತುವಿನ ಎರಡು ಕಂಬಳ ಬಾಕಿಯಿದೆ. ಈ ಸಂಬಂಧ ಈಗಾಗಲೇ ನಾನು ಒಪ್ಪಂದ ಮಾಡಿಕೊಂಡಿದ್ದೇನೆ. ಕಂಬಳದ ಋತು ಮುಗಿದ ಬಳಿಕ ಸಾಯ್ ಮೌಲ್ಯಮಾಪನಕ್ಕೆ ಹಾಜರಾಗುತ್ತೇನೆ ಎಂದಿದ್ದಾರೆ.
ವೇಣೂರು- ಪೆಂರ್ಬುಡ ‘ಸೂರ್ಯ-ಚಂದ್ರ’ ಜೋಡುಕರೆ ಕಂಬಳದಲ್ಲೂ ಶ್ರೀನಿವಾಸ ಗೌಡ ಅವರ ಮೂರು ಚಿನ್ನದ ಪದಕವನ್ನು ಗೆದ್ದಿದ್ದಾರೆ. ಈ ಮೂಲಕ ಗೌಡರು ಗೆದ್ದ ಪದಕಗಳ ಸಂಖ್ಯೆ 157ಕ್ಕೆ ಏರಿಕೆಯಾಗಿದೆ.
ಶ್ರೀನಿವಾಸರ ಪ್ರತಿಭೆಯನ್ನು ಗುರುತಿಸಿ, ಒಲಿಂಪಿಕ್ಸ್ ಗೆ ಅವರ ಕೌಶಲವನ್ನು ಅಣಿಗೊಳಿಸಲು ತರಬೇತಿ ನೀಡುವುದಾಗಿ ತಿಳಿಸಿರುವ ಕೇಂದ್ರ ಕ್ರೀಡಾ ಸಚಿವ ಶ್ರೀ ಕಿರೆಣ್ ರಿಜಿಜು ಅವರಿಗೆ ನನ್ನ ಅಭಿನಂದನೆಗಳು. #Kambala@KirenRijiju#Olympics#Karnataka
ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡ ಅವರು ಕನ್ನಡದಲ್ಲಿ ಟ್ವೀಟ್ ಮಾಡಿ,”ಶ್ರೀನಿವಾಸರ ಪ್ರತಿಭೆಯನ್ನು ಗುರುತಿಸಿ, ಒಲಿಂಪಿಕ್ಸ್ ಗೆ ಅವರ ಕೌಶಲವನ್ನು ಅಣಿಗೊಳಿಸಲು ತರಬೇತಿ ನೀಡುವುದಾಗಿ ತಿಳಿಸಿರುವ ಕೇಂದ್ರ ಕ್ರೀಡಾ ಸಚಿವ ಶ್ರೀ ಕಿರೆಣ್ ರಿಜಿಜು ಅವರಿಗೆ ನನ್ನ ಅಭಿನಂದನೆಗಳು. ಕಂಬಳ ಸ್ಪರ್ಧೆಯ ವೇಳೆ ಅಪರೂಪದ ಸಾಧನೆ ಮಾಡಿ, ಉಸೇನ್ ಬೋಲ್ಟ್ ನೊಂದಿಗೆ ಹೋಲಿಸಲ್ಪಡುತ್ತಿರುವ ಕರ್ನಾಟಕದ ಶ್ರೀನಿವಾಸ ಗೌಡ ಕೀರ್ತಿ ಪಡೆದಿದ್ದಾರೆ. ದೇಶದಲ್ಲಿ ಸಾಕಷ್ಟು ಸುಪ್ತ ಪ್ರತಿಭೆಗಳಿದ್ದು, ಅವರ ಪೂರ್ಣ ಸಾಮರ್ಥ್ಯದ ಸಾಕಾರಕ್ಕಾಗಿ ಅದನ್ನು ತಿಳಿಯುವ, ಮನ್ನಣೆ ನೀಡುವ, ಗೌರವಿಸುವ ಮತ್ತು ಪೋಷಿಸುವ ಅಗತ್ಯವಿದೆ” ಎಂದು ಬರೆದು ಶ್ಲಾಘಿಸಿದ್ದರು.
ಶ್ರೀನಿವಾಸ ಗೌಡ ಕಡು ಬಡತನದ ಕುಟುಂಬದಿಂದ ಬಂದಿದ್ದಾರೆ. ಮೂಡುಬಿದ್ರೆಯ ಮಿಜಾರಿನ ಅಶ್ವತ್ಥಪುರದ ನಿವಾಸಿಯಾಗಿರುವ ಶ್ರೀನಿವಾಸ ಗೌಡ, ಪರಿಶಿಷ್ಟ ವರ್ಗಕ್ಕೆ ಸೇರಿದ ಕುಡುಂಬಿ ಜನಾಂಗದ ವ್ಯಕ್ತಿ. ಆದರೆ,ಕಂಬಳದಲ್ಲಿ ಮಾಡಿದ ಸಾಧನೆ ಮಾತ್ರ ಶ್ರೀನಿವಾಸ ಅವರನ್ನು ಖ್ಯಾತಿಯ ಉತ್ತುಂಗಕ್ಕೆ ಏರಿಸಿದೆ. ಅತಿ ವೇಗದ ಓಟದ ದಾಖಲೆಯ ಉಸೇನ್ ಬೋಲ್ಟ್ ಮೀರಿಸುವ ಸಾಧನೆ ಮಾಡಿದ್ದಾಗಿ ಹೋಲಿಸಲಾಗುತ್ತಿದೆ.ಇಂಥ ಖ್ಯಾತಿ ಬಂದಿದ್ದರೂ, ಶ್ರೀನಿವಾಸ ಮಾತ್ರ ಎಂದಿನಂತೇ ಕಂಬಳದಲ್ಲಿತೊಡಗಿಸಿಕೊಂಡಿದ್ದಾರೆ. ಕಂಬಳ ಬಿಟ್ಟರೆ ಕಟ್ಟಡ ಕೆಲಸದ ಕಾರ್ಮಿಕನಾಗಿ ದುಡಿಯುತ್ತಿದ್ದಾರೆ.
ಶ್ರೀನಿವಾಸ ಗೌಡರ ಸಾಧನೆ ವಿಶ್ವದ ಗಮನ ಸೆಳೆದಿದ್ದರೂ, ಪದಕದ ಬೇಟೆ ನಿಂತಿಲ್ಲ. ನಿನ್ನೆ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ನಡೆದ ಕಂಬಳದಲ್ಲಿ ಮೂರು ವಿಭಾಗದಲ್ಲಿ ಮತ್ತೆ ಮೂರು ಚಿನ್ನದ ಪದಕ ಗೆದ್ದು ಬೀಗಿದ್ದಾರೆ. ಈ ಬಾರಿಯ ಕಂಬಳದ ಋತುವಿನಲ್ಲಿ ಸತತವಾಗಿ ಚಿನ್ನದ ಪದಕ ಗೆಲ್ಲುತ್ತಾ ಬಂದು ದಾಖಲೆ ಮಾಡಿದ್ದಾರೆ. ಈ ಬಾರಿ ಇನ್ನೆರಡು ಕಂಬಳ ಮಾತ್ರ ಉಳಿದಿದ್ದು, ನಾಲ್ಕು ಕೋಣಗಳ ಜೊತೆ ಓಡುವ ಶ್ರೀನಿವಾಸ ಗೌಡ ಚಿನ್ನಕ್ಕೆ ಲಗ್ಗೆಯಿಟ್ಟು ಹೊಸ ದಾಖಲೆ ನಿರ್ಮಿಸುವ ಇರಾದೆಯಲ್ಲಿದ್ದಾರೆ.
– ಸಿಎಂ ಯಡಿಯೂರಪ್ಪರಿಂದ ಸನ್ಮಾನ
– ಟ್ರ್ಯಾಕ್ನಲ್ಲಿ ಓಡಲ್ಲ, ಕಂಬಳದಲ್ಲೇ ಸಾಧನೆ
ಮಂಗಳೂರು: ಕರಾವಳಿಯಲ್ಲಿ ಈಗ ವಿಶ್ವದ ಅತೀ ವೇಗದ ಓಟಗಾರ ಉಸೇನ್ ಬೋಲ್ಟ್ ದಾಖಲೆ ಸರಿಗಟ್ಟಿದ ಕಂಬಳ ಓಟಗಾರ ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡರದ್ದೇ ಹವಾ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಪೆರ್ಮುಡದಲ್ಲಿ ನಡೆದ ಸೂರ್ಯ ಚಂದ್ರ ಕಂಬಳದಲ್ಲಿ ಮೂರು ಚಿನ್ನವನ್ನು ಉಡಾಯಿಸಿದ ಶ್ರೀನಿವಾಸ್ ಭಾನುವಾರ ಕಮಾಲ್ ಮಾಡಿದರು.
ಎರಡು ದಿನಗಳ ಕಾಲ ನಡೆದ ಹೊನಲು ಬೆಳಕಿನ ಕಂಬಳದಲ್ಲಿ ಶ್ರೀನಿವಾಸನ ಓಟ ನೋಡಲೆಂದೇ ಕಂಬಳ ಅಭಿಮಾನಿಗಳು ಆಗಮಿಸಿದರು. ಅದಕ್ಕೆ ಕಾರಣ ಶ್ರೀನಿವಾಸ ಗೌಡ ಉಸೇನ್ ಬೋಲ್ಟ್ ವೇಗವನ್ನ ಹಿಂದಿಕ್ಕಿ ಪ್ರಸಿದ್ಧಿಯಾದ ಬಳಿಕ ಆಡುತ್ತಿರುವ ಮೊದಲನೇ ಕಂಬಳ. ಓಟದ ಬ್ರೇಕ್ ಸಿಕ್ಕಾಗ ಸಿನಿಮಾ ನಟರ ಜೊತೆ ಸೆಲ್ಪಿ ತೆಗೆಸಿಕೊಳ್ಳುವಂತೆ ಜನ ಮುಗಿಬಿದ್ದಿದ್ರು. ಶ್ರೀನಿವಾಸ ನಾಚುತ್ತಲೇ ಸೆಲ್ಫಿಗೆ ಪೋಸ್ ನೀಡುತ್ತಿದ್ರು. ಈ ಮಧ್ಯೆ ಕರಾವಳಿ ಉಸೇನ್ ಬೋಲ್ಟ್ ಶ್ರೀನಿವಾಸ ಗೌಡ ಕೋಣಗಳನ್ನು ಮಿಂಚಿನ ವೇಗದಲ್ಲಿ ಓಡಾಡಿಸುತ್ತಿದ್ರೆ ಶಿಳ್ಳೆ, ಚಪ್ಪಾಳೆಗಳ ಅಬ್ಬರವೇ ತುಂಬಿ ಹೋಗುತ್ತಿತ್ತು. ಹೀಗಿರೋವಾಗಲೇ ಆಟದ ಕಣಕ್ಕೆ ಎಂಟ್ರಿ ಕೊಟ್ಟ ಶ್ರೀನಿವಾಸ್ ಭರ್ಜರಿಯಾಗಿ ಓಡಿ ಎಲ್ಲರನ್ನು ರಂಜಿಸಿದ್ರು. ಇದನ್ನೂ ಓದಿ: ಕಂಬಳ ವೀರ ಶ್ರೀನಿವಾಸ್ಗೌಡಗೆ ಕಾರ್ಮಿಕ ಇಲಾಖೆಯಿಂದ ಸೌಲಭ್ಯ
ಶ್ರೀನಿವಾಸ್ ಗೌಡ ಅವರ ಈ ರೀತಿಯ ಮಿಂಚಿನ ಓಟದಿಂದಲೇ ವಿಶ್ವದ ಗಮನವನ್ನು ತನ್ನತ್ತ ಸೆಳೆದಿದ್ದಾರೆ. ಹೀಗಾಗಿ ಕೇಂದ್ರ, ರಾಜ್ಯ ಸರ್ಕಾರಗಳೂ ಅವರ ಸಾಧನೆಯನ್ನು ಗುರುತಿಸಿದೆ. ಇಂದು ಮಧ್ಯಾಹ್ನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಶ್ರೀನಿವಾಸ ಗೌಡ ಅವರಿಗೆ ಸನ್ಮಾನ ನಡೆಸಲಿದ್ದಾರೆ. ಶ್ರೀನಿವಾಸ್ ಅವರು ಕಟ್ಟಡ ಕಾರ್ಮಿಕರಾಗಿರೋದ್ರಿಂದ ಕಾರ್ಮಿಕ ಮತ್ತು ಕ್ರೀಡಾ ಇಲಾಖೆಗಳು ಜಂಟಿಯಾಗಿ ಸನ್ಮಾನ ಏರ್ಪಡಿಸಿಕೊಂಡಿದ್ದು ಎರಡು ಇಲಾಖೆಯ ಸಚಿವರುಗಳು ಭಾಗವಹಿಸಿಲಿದ್ದಾರೆ.
ದೆಹಲಿಗೆ ಹೋಗಿ ಕೇಂದ್ರ ಕ್ರೀಡಾ ಸಚಿವರ ಅನ್ನು ಭೇಟಿಯಾಗುವ ಬಗ್ಗೆ ಕೂಡ ಇಂದು ಚರ್ಚೆಯಾಗಲಿದೆ. ಆದರೆ ತನಗೆ ಟ್ರ್ಯಾಕ್ ನಲ್ಲಿ ಓಡಲು ಸಾಧ್ಯವಿಲ್ಲ, ನಾನೇನಿದ್ದರೂ ಕಂಬಳ ಗದ್ದೆಯಲ್ಲೇ ಕೋಣಗಳ ಜೊತೆ ಓಡುವವನು. ಹೀಗಾಗಿ ಮುಂದೆಯೂ ಕಂಬಳದಲ್ಲೇ ಸಾಧನೆ ಮಾಡಬೇಕೆಂದುಕೊಂಡಿದ್ದೇನೆ ಎಂದು ವಿನಯದಿಂದಲೇ ಶ್ರೀನಿವಾಸ ಗೌಡ ಹೇಳುತ್ತಾರೆ. ಇದನ್ನೂ ಓದಿ: ಕರಾವಳಿಯ ಕಂಬಳ ಓಟಗಾರ ದೇಶಾದ್ಯಂತ ಟ್ರೆಂಡಿಂಗ್- ಕೇಂದ್ರವನ್ನೂ ತಲುಪಿದ ಸಾಧನೆ
ಶ್ರೀನಿವಾಸ ಗೌಡ ಕಂಬಳದ ಚಿನ್ನದ ಮಗ:
28 ವರ್ಷ ವಯಸ್ಸಿನ ಶ್ರೀನಿವಾಸ್ ಗೌಡ ಅವರು ತನ್ನ 18ನೇ ವಯಸ್ಸಿನಲ್ಲಿ ಕಂಬಳದ ಓಟಗಾರನಾಗಬೇಕೆಂದು ಬಂದಿದ್ದು, ಅಂದಿನಿಂದ ನಿಷ್ಠೆಯಿಂದ ಕಂಬಳವನ್ನು ಮೈಗೂಡಿಸಿಕೊಂಡಿದ್ದಾರೆ. ಹೀಗಾಗಿ ಅವರು ಓಡಿಸುವ ಕೋಣಗಳ ಮಾಲಕರಿಗೂ ಶ್ರೀನಿವಾಸ ಎಂದರೆ ಅಚ್ಚುಮೆಚ್ಚು. ಆತ ಕಂಬಳದ ಚಿನ್ನದ ಮಗನಾಗಿರೋದ್ರಿಂದ ಕಂಬಳದಲ್ಲೇ ಮುಂದುವರಿದರೆ ಒಳ್ಳೆಯದು. ಜೊತೆಗೆ ಇನ್ನೂ ಎತ್ತರಕ್ಕೆ ಏರಿ ದೇಶಕ್ಕೆ ಹೆಸರು ತರೋದಾದ್ರೂ ಹೆಮ್ಮೆಯ ವಿಚಾರ ಎಂದು ಶ್ರೀನಿವಾಸ ಓಡಿಸುವ ಕಂಬಳ ಕೋಣದ ಮಾಲಕ ಹರ್ಷವರ್ಧನ್ ಪಡಿವಾಳ್ ಹಾಗೂ ಇರುವೈಲು ಪಣಿಲ ಬಾಡು ಪೂಜಾರಿ ಹೇಳಿದ್ದಾರೆ.
ಮನೆ ಬಾಗಿಲಿಗೆ ಬಂದ ಅಧಿಕಾರಿಗಳು:
ಶ್ರೀನಿವಾಸ್ ಗೌಡ ಒಬ್ಬ ಕಟ್ಟಡ ನಿರ್ಮಾಣ ಕಾರ್ಮಿಕ. ಹೀಗಾಗಿ ಕಾರ್ಮಿಕರ ಸ್ಮಾರ್ಟ್ ಕಾರ್ಡ್ ಗಾಗಿ ಅವರ ಮನೆಗೆ ನಿನ್ನೆ ಕಾರ್ಮಿಕ ಇಲಾಖೆ ಅಧಿಕಾರಿಗಳು ತೆರಳಿ ದಾಖಲೆಗಳನ್ನು ಪಡೆದುಕೊಂಡರು. ಇಲಾಖೆಯಿಂದ ಸಿಗಬೇಕಾದ ಸವಲತ್ತಿನ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.
ಸದ್ಯ ದೇಶವೇ ಈಗ ಶ್ರೀನಿವಾಸ ಗೌಡರ ಕಡೆ ನೋಡುತ್ತಿದ್ದು ಸಿಂಥೆಟಿಕ್ ಟ್ರ್ಯಾಕ್ ನಲ್ಲಿ ಓಡುತ್ತಾರಾ ಇಲ್ವಾ ಅನ್ನೋ ಕುತೂಹಲ ಎಲ್ಲರಲ್ಲೂ ಇದೆ. ಒಟ್ಟಿನಲ್ಲಿ ಶ್ರೀನಿವಾಸ ಗೌಡರ ಸಾಧನೆ ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳಗಲಿ ಅನ್ನೋದೇ ಎಲ್ಲರ ಆಶಯವಾಗಿದೆ.
ಬೆಂಗಳೂರು: ಕರಾವಳಿಯ ಕಂಬಳ ವೀರ ಶ್ರೀನಿವಾಸ್ ಗೌಡಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಕೇಂದ್ರ ಕ್ರೀಡಾ ಸಚಿವರು, ಉಪರಾಷ್ಟ್ರಪತಿ ಸೇರಿದಂತೆ ಆನೇಕರು ಪ್ರಶಂಸೆಯ ಸುರಿಮಳೆಯನ್ನೆ ಸುರಿಸುತ್ತಿದ್ದಾರೆ. ಕಂಬಳ ವೀರನ ಶರವೇಗದ ಓಟ ತಿಳಿದು ಕೇಂದ್ರ ಸಚಿವರು ದೆಹಲಿಗೆ ಬರುವಂತೆ ಬುಲಾವ್ ನೀಡಿದ್ದಾರೆ.
ಓಟಗಾರ ಉಸೇನ್ ಬೋಲ್ಟ್ ಗಿಂತ ವೇಗವಾಗಿ ಓಡಿದ ಮೂಡು ಬಿದಿರೆಯ ಕಂಬಳ ವೀರನಿಗೆ ಒಲಂಪಿಕ್ನಲ್ಲಿ ಭಾಗವಹಿಸಲು ಪೂರ್ವ ತಯಾರಿಯಾಗಿ ಕೋಚಿಂಗ್ ನೀಡುವ ಮಾತುಗಳು ಕೇಳಿ ಬರುತ್ತಿವೆ.
ಇದರ ಮಧ್ಯದಲ್ಲಿ ವಿಶ್ವ ದಾಖಲೆ ಮಾಡಿರುವ ಕಂಬಳ ವೀರನಿಗೆ ರಾಜ್ಯ ಕಾರ್ಮಿಕ ಇಲಾಖೆ ಸೌಲಭ್ಯ ನೀಡಲು ಮುಂದಾಗಿದೆ. ಈ ಹಿನ್ನೆಲೆ ಇಲಾಖೆಯ ಹಿರಿಯ ಅಧಿಕಾರಿಗಳು ಶ್ರೀನಿವಾಸ್ ಅವರ ಮನೆಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಕಾರ್ಮಿಕ ಇಲಾಖೆಯ ಹಿರಿಯ ತನಿಖಾಧಿಕಾರಿಗಳಾದ ಮೇರಿ ಹಾಗೂ ವಿರೇಂದ್ರ ಅವರು ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಮೂಡುಬಿದರೆಯ ಮಿಯಾರಿನ ಯುವಕ ಶ್ರೀನಿವಾಸ್ ಗೌಡ ಅವರಿಗೆ ಕಾರ್ಮಿಕ ಇಲಾಖೆ ಸೌಲಭ್ಯ ನೀಡಲು ಮುಂದಾಗಿದೆ ಎಂಬುದನ್ನ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ತಮ್ಮ ಟ್ವಿಟ್ಟರಿನಲ್ಲಿ ಬರೆದುಕೊಂಡಿದ್ದಾರೆ. ಇದನ್ನು ಓದಿ: ಕರಾವಳಿಯ ಕಂಬಳ ಓಟಗಾರ ದೇಶಾದ್ಯಂತ ಟ್ರೆಂಡಿಂಗ್- ಕೇಂದ್ರವನ್ನೂ ತಲುಪಿದ ಸಾಧನೆ
ಕರಾವಳಿಯ ಗ್ರಾಮೀಣ ಕ್ರೀಡೆ ಕಂಬಳದಲ್ಲಿ ವಿಶ್ವದಾಖಲೆ ಮಾಡಿರುವ ಮೂಡುಬಿದಿರೆಯ ಮೀಯಾರಿನ ಯುವಕ ಶ್ರೀನಿವಾಸ ಗೌಡ ಅವರಿಗೆ ಇಲಾಖೆಯಿಂದ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಇಂದು ಕಾರ್ಮಿಕ ಇಲಾಖೆಯ ಹಿರಿಯ ತನಿಖಾಧಿಕಾರಿಗಳಾದ ಮೇರಿ ಹಾಗೂ ವಿರೇಂದ್ರ ಅವರು ಭೇಟಿಯಾಗಿ ಮಾಹಿತಿ ಪಡೆದರು.
ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಐಕಳದಲ್ಲಿ ನಡೆದ ಕಂಬಳದ ಓಟದಲ್ಲಿ 145.5 ಮೀ ದೂರವನ್ನು 13.63 ಸೆಕೆಂಡುಗಳಲ್ಲಿ ಕ್ರಮಿಸುವ ಮೂಲಕ ಶ್ರೀನಿವಾಸ ಗೌಡ ಮಾಡಿರುವ ಸಾಧನೆ ದೇಶದ ಗಮನ ಸೆಳೆದಿದೆ. ಅಲ್ಲದೆ ಕಂಬಳ ಗದ್ದೆಯಲ್ಲಿ ಕೋಣಗಳೊಂದಿಗೆ 100 ಮೀ ದೂರವನ್ನು 9.55 ಸೆಕೆಂಡುಗಳಲ್ಲಿ ಕ್ರಮಿಸುವ ಮೂಲಕ ಸಾಧನೆ ಮಾಡಿದ್ದಾರೆ. ಕ್ರೀಡಾ ಪೋತ್ಸಾಹ ನೀಡಲು ಮುಂದಾಗಿರುವ ಕಾರ್ಮಿಕ ಇಲಾಖೆಯು ಯಾವ ರೀತಿ ಸೌಲಭ್ಯ ಮತ್ತು ಪ್ರೋತ್ಸಾಹ ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಬೆಂಗಳೂರು: ವಿಶ್ವದ ಅತ್ಯಂತ ವೇಗದ ಓಟಗಾರ ಉಸೇನ್ ಬೋಲ್ಟ್ ನನ್ನೇ ಮೀರಿಸಿದ ಕರಾವಳಿಯ ಕುವರ ಶ್ರೀನಿವಾಸ ಗೌಡ ಇಂದು ರಾಷ್ಟ್ರಾದ್ಯಂತ ಮಿಂಚುತ್ತಿದ್ದಾರೆ. ಟ್ಟಿಟ್ಟರ್ ಟ್ರೆಂಡಿಂಗ್ ನಲ್ಲಿ ಸ್ಥಾನ ಪಡೆದ ತುಳುನಾಡಿನ ಯುವಕನ ಸಾಧನೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಕೊಂಡಾಡುತ್ತಿದ್ದಾರೆ.
ಹೌದು. ಶ್ರೀನಿವಾಸ್ ಗೌಡ ಅವರು ವೇಗದಲ್ಲಿ ಉಸೇನ್ ಬೋಲ್ಟ್ ದಾಖಲೆಯನ್ನು ಹೊಸ ದಾಖಲೆ ಬರೆದಿದ್ದಾರೆ. ಈ ವಿಚಾರ ದೇಶಾದ್ಯಂತ ಸುದ್ದಿಯಾಗುತ್ತಿದ್ದ ಬೆನ್ನಲ್ಲೇ ಉದ್ಯಮಿ ಆನಂದ್ ಮಹಿಂದ್ರಾ ಅವರು ಕೇಂದ್ರ ಕ್ರೀಡಾ ಸಚಿವರಾದ ಕಿರಿಣ್ ರಿಜಿಜು ಅವರಿಗೆ, ಕಂಬಳವನ್ನು ಒಲಂಪಿಕ್ಸ್ ಗೆ ಸೇರಿಸಿದರೆ ಶ್ರೀನಿವಾಸ್ಗೆ ಚಿನ್ನದ ಪದಕ ಸಿಗುವುದು ಖಚಿತ ಎಂದು ಟ್ವೀಟ್ ಮಾಡಿದ್ದಾರೆ.
ಆನಂದ್ ಮಹಿಂದ್ರಾ ಟ್ವೀಟ್ನಲ್ಲೇನಿದೆ..?
ಒಮ್ಮೆ ಈ ವ್ಯಕ್ತಿಯ ಮೈಕಟ್ಟನ್ನು ಗಮನಿಸಿ. ಈತ ಅಸಾಧಾರಣ ಸಾಹಸ ಮಾಡಲು ಸಮರ್ಥನಾಗಿದ್ದಾನೆ. ಈತನಿಗೆ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು 100 ಮೀ ಓಟಗಾರನಾಗಲು ಸಮರ್ಥ ತರಬೇತಿಯನ್ನು ನೀಡಲು ಅವಕಾಶ ಕಲ್ಪಿಸಬೇಕು. ಇಲ್ಲವೇ ಓಲಂಪಿಕ್ನಲ್ಲಿ ಕಂಬಳವನ್ನು ಸೇರಿಸಬೇಕು. ಏನೇ ಆಗಲಿ ಶ್ರೀನಿವಾಸ್ ಗೌಡ ಅವರಿಗೆ ಚಿನ್ನದ ಪದಕ ಧಕ್ಕಬೇಕು ಎಂದು ಶ್ರೀನಿವಾಸ್ ಗೌಡರ ಸಾಧನೆ ಕುರಿತು ಪ್ರಕಟವಾದ ವರದಿಯನ್ನು ತಮ್ಮ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಈ ಟ್ವೀಟನ್ನು ಕಿರಣ್ ರಿಜಿಜು ಅವರಿಗೆ ಟ್ಯಾಗ್ ಮಾಡಿದ್ದಾರೆ.
ಕಿರಣ್ ರಿಜಿಜು ಉತ್ತರವೇನು?
ಆನಂದ್ ಮಹೀಂದ್ರಾ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಕಿರಣ್ ರಿಜಿಜು, ನಾನು ಶ್ರೀನಿವಾಸ್ ಗೌಡಗೆ ಫೋನ್ ಮಾಡುತ್ತೇನೆ. ಭಾರತೀಯ ಕ್ರೀಡಾ ಪ್ರಾಧಿಕಾರ (ಸಾಯ್) ಕೋಚ್ಗಳಿಂದ ತರಬೇತಿ ನೀಡಲು ಆಹ್ವಾನಿಸುತ್ತೇವೆ. ಭಾರತದ ಯಾವ ಪ್ರತಿಭೆಯೂ ಪರೀಕ್ಷೆಗೊಳಪಡದೇ ಇರಬಾರದು ಎನ್ನುವುದನ್ನು ಖಚಿತಪಡಿಸಿಕೊಳ್ಳುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಫೆಬ್ರವರಿ 1ರಂದು ಮಂಗಳೂರು ಸಮೀಪದ ಐಕಳದಲ್ಲಿ ನಡೆದ ಕಂಬಳ ಕ್ರೀಡೆಯಲ್ಲಿ ಶ್ರೀನಿವಾಸ್ ಗೌಡ 142.50 ಮೀಟರ್ ದೂರವನ್ನು ಕೇವಲ 13.62 ಸೆಕೆಂಡಲ್ಲಿ ಕ್ರಮಿಸಿದ್ದಾರೆ. ಇದು ಕಂಬಳ ಕ್ರೀಡೆಯಲ್ಲಿ ಇದೂವರೆಗಿನ ಅತ್ಯಂತ ವೇಗದ ದಾಖಲೆಯಾಗಿದೆ. ಶ್ರೀನಿವಾಸ್ ಗೌಡ ಗುರಿ ತಲುಪಲು ತೆಗೆದುಕೊಂಡ ಸಮಯವನ್ನು 100 ಮೀ. ಓಟದೊಂದಿಗೆ ತಾಳೆ ಹಾಕಿದರೆ 9.55 ಸೆಕೆಂಡ್ನಲ್ಲಿ ಓಟ ಪೂರ್ಣಗೊಳಿಸಿ ಬೋಲ್ಟ್ ದಾಖಲೆಯನ್ನು ಉಡಾಯಿಸಿದ್ದಾರೆ.
ಒಟ್ಟಿನಲ್ಲಿ ವಿಶ್ವದ ಫಾಸ್ಟೆಸ್ಟ್ ರನ್ನರ್ ಉಸೇನ್ ಬೋಲ್ಟ್ ನ ದಾಖಲೆಯನ್ನು ಪುಡಿಪುಡಿ ಮಾಡಿ ಹೊಸ ಭಾಷ್ಯ ಬರೆದಿದ್ದಾರೆ. ಉಸೇನ್ ಬೋಲ್ಟ್ 100 ಮೀ. ಓಟವನ್ನು ಕೇವಲ 9.58 ಸೆಕೆಂಡ್ ಅವಧಿಯಲ್ಲಿ ಕ್ರಮಿಸಿದರೆ, ಶ್ರೀನಿವಾಸ್ ಗೌಡ ಕಂಬಳ ಗದ್ದೆಯ ಕೆಸರಿನಲ್ಲಿ ಕೋಣಗಳ ಜೊತೆ 100 ಮೀಟರನ್ನು ಕೇವಲ 9.55 ಸೆಕೆಂಡ್ಗಳಲ್ಲಿ ಪೂರ್ಣಗೊಳಿಸಿ ದಾಖಲೆ ಬರೆದು ಸುದ್ದಿಯಾಗಿದ್ದಾರೆ.
ಮಂಗಳೂರು: ಉಸೇನ್ ಬೋಲ್ಟ್ ಜಗತ್ತಿನ ಅತೀ ವೇಗದ ಓಟಗಾರ. ಮಿಂಚಿನಂತೆ ಕ್ಷಣ ಮಾತ್ರದಲ್ಲಿ ಗುರಿತಲುಪುವ ಸಾಧಕ. ಉಸೇನ್ ಬೋಲ್ಟ್ನ ದಾಖಲೆಗಳನ್ನು ಬ್ರೇಕ್ ಮಾಡೋಕೆ ಸಾಧ್ಯನೇ ಇಲ್ಲ ಅಂತ ತಿಳಿದುಕೊಂಡವರಿಗೆ ಮಾತ್ರ ಇದು ಶಾಕಿಂಗ್ ನ್ಯೂಸ್. ಹೌದು ವೇಗದಲ್ಲಿ ಉಸೇನ್ ಬೋಲ್ಟ್ ದಾಖಲೆಯನ್ನು ಹಿಂದಿಕ್ಕಿ ಕರ್ನಾಟಕದ ಕರಾವಳಿಯ ಕಂಬಳ ಕೋಣಗಳ ಓಟಗಾರ ಶ್ರೀನಿವಾಸ್ ಹೊಸ ದಾಖಲೆ ಬರೆದಿದ್ದಾರೆ.
ಸದೃಢ ಮೈಕಟ್ಟು, ಜಿಮ್ಗೆ ಹೋಗದೆ ಬೆಳೆದ ನ್ಯಾಚುರಲ್ ಸಿಕ್ಸ್ ಪ್ಯಾಕ್, ಕಂಬಳದ ಗದ್ದೆಗೆ ಇಳಿದರೆ ಸಾಕು ಚಿರತೆಯನ್ನೇ ನಾಚಿಸುವಂತಹ ವೇಗದಲ್ಲಿ ಓಡುವ ಶ್ರೀನಿವಾಸ ಗೌಡ ಈಗ ಕರಾವಳಿಯಲ್ಲಿ ಸಖತ್ ಫೆಮಸ್ ಆಗಿಬಿಟ್ಟಿದ್ದಾರೆ. ಕಂಬಳ ಕ್ರೀಡೆಯಲ್ಲಿ ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ ಎಂದೇ ಇವರು ಹೆಸರುವಾಸಿ. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯ ಅಶ್ವಥಪುರ ನಿವಾಸಿ ಕಂಬಳ ಕೋಣದ ಓಟಗಾರ ಶ್ರೀನಿವಾಸ ಗೌಡ ಈಗ ಹೊಸ ದಾಖಲೆಯನ್ನು ಬರೆದಿದ್ದಾರೆ.
ವಿಶ್ವದ ಫಾಸ್ಟೆಸ್ಟ್ ರನ್ನರ್ ಉಸೇನ್ ಬೋಲ್ಟ್ನ ದಾಖಲೆಯನ್ನು ಪುಡಿಪುಡಿ ಮಾಡಿ ಹೊಸ ಭಾಷ್ಯ ಬರೆದಿದ್ದಾರೆ. ಉಸೇನ್ ಬೋಲ್ಟ್ 100 ಮೀ. ಓಟವನ್ನು ಕೇವಲ 9.58 ಸೆಕೆಂಡ್ ಅವಧಿಯಲ್ಲಿ ಕ್ರಮಿಸಿದರೆ, ಶ್ರೀನಿವಾಸ ಗೌಡ ಕಂಬಳ ಗದ್ದೆಯ ಕೆಸರಿನಲ್ಲಿ ಕೋಣಗಳ ಜೊತೆ 100 ಮೀಟರ್ನ್ನು ಕೇವಲ 9.55 ಸೆಕೆಂಡ್ಗಳಲ್ಲಿ ಪೂರ್ಣಗೊಳಿಸಿ ದಾಖಲೆ ಬರೆದಿದ್ದಾರೆ.
ಫೆಬ್ರವರಿ 1ರಂದು ಮಂಗಳೂರು ಸಮೀಪದ ಐಕಳದಲ್ಲಿ ನಡೆದ ಕಂಬಳ ಕ್ರೀಡೆಯಲ್ಲಿ ಶ್ರೀನಿವಾಸ ಗೌಡ 142.50 ಮೀಟರ್ ದೂರವನ್ನು ಕೇವಲ 13.62 ಸೆಕೆಂಡಲ್ಲಿ ಕ್ರಮಿಸಿದ್ದಾರೆ. ಇದು ಕಂಬಳ ಕ್ರೀಡೆಯಲ್ಲಿ ಇದುವರೆಗಿನ ಅತ್ಯಂತ ವೇಗದ ದಾಖಲೆಯಾಗಿದೆ. ಶ್ರೀನಿವಾಸ ಗೌಡ ಗುರಿ ತಲುಪಲು ತೆಗೆದುಕೊಂಡ ಸಮಯವನ್ನು 100 ಮೀ. ಓಟದೊಂದಿಗೆ ತಾಳೆ ಹಾಕಿದರೆ 9.55 ಸೆಕೆಂಡ್ನಲ್ಲಿ ಓಟ ಪೂರ್ಣಗೊಳಿಸಿ ಬೋಲ್ಟ್ ದಾಖಲೆಯನ್ನು ಉಡಾಯಿಸಿದ್ದಾರೆ.
ಸಿಂಥೆಟಿಕ್ ಟ್ರ್ಯಾಕ್ ಮೇಲೆ ಓಡಿ ಉಸೇನ್ ಬೋಲ್ಟ್ ಮಾಡಿದ ದಾಖಲೆಯನ್ನು ಶ್ರೀನಿವಾಸಗೌಡ ಕಾಲು ಹೂತು ಹೋಗುವ ಕಂಬಳದ ಕೆಸರುಗದ್ದೆಯಲ್ಲಿ ಓಡಿ ಮುರಿದಿದ್ದಾರೆ. ಈ ಮೂಲಕ ಎಲ್ಲರನ್ನೂ ಆಶ್ಚರ್ಯ ಚಕಿತಗೊಳಿಸಿದ್ದಾರೆ.
ಕಂಬಳದ ಗದ್ದೆಯಲ್ಲಿ ಮೊಣಕಾಲಿನವರೆಗೆ ಕೆಸರು ತುಂಬಿದ್ದು, ಒಂದು ಕೈಯಲ್ಲಿ ಕೋಣಗಳ ಹಗ್ಗ ಮತ್ತೊಂದು ಕೈಯಲ್ಲಿ ಬಾರುಕೋಲು ಹಿಡಿದು, ಸಮಚಿತ್ತದಿಂದ ಓಡಬೇಕಾಗುತ್ತದೆ. ಪ್ರತಿಕೂಲ ಪರಿಸ್ಥಿತಿಯಲ್ಲಿ ಓಡುವ ಶ್ರೀನಿವಾಸ ಗೌಡ ಅವರೇ ಬೋಲ್ಟಿಗಿಂತ ಕೂದಲೆಳೆಯ ಅಂತರದಲ್ಲಿ ಮುಂದಿದ್ದಾರೆ.
ಯಾವ ತರಬೇತಿಯನ್ನೂ ಪಡೆಯದೆ ಶ್ರೀನಿವಾಸ ಗೌಡ ತಮ್ಮ ಸ್ವಂತ ಆಸಕ್ತಿಯಿಂದ ಕಂಬಳ ಕ್ಷೇತ್ರದಲ್ಲಿ ತೊಡಗಿಸಿಕೊಂಡು ದಾಖಲೆ ಮಾಡಿದ್ದಾರೆ. ಈ ಋತುವಿನ ಕಂಬಳ ಕ್ರೀಡಾಕೂಟದಲ್ಲಿ ಅತೀ ಹೆಚ್ಚು ಚಿನ್ನದ ಪದಕಗಳನ್ನು ಪಡೆಯುವ ಮೂಲಕ ಕಂಬಳ ಕೂಟದ ಚಿನ್ನದ ಓಟಗಾರನಾಗಿ ಪ್ರಸಿದ್ಧಿಯಾಗಿದ್ದಾರೆ.