Tag: Kanakadasa Jayanti

  • ಈದ್ಗಾ ಮೈದಾನದಲ್ಲಿ ಶಾಂತಿಯುತ ಕನಕದಾಸ ಜಯಂತಿ

    ಈದ್ಗಾ ಮೈದಾನದಲ್ಲಿ ಶಾಂತಿಯುತ ಕನಕದಾಸ ಜಯಂತಿ

    ಹುಬ್ಬಳ್ಳಿ: ರಾಣಿ ಚೆನ್ನಮ್ಮ ಈದ್ಗಾ ಮೈದಾನದಲ್ಲಿ (Idgah Maidan) ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಬೆನ್ನಲ್ಲೇ, ಇಂದು ಶ್ರೀರಾಮಸೇನೆಯಿಂದ ದಾಸ ಶ್ರೇಷ್ಠ ಕನಕದಾಸರ ಜಯಂತಿಯನ್ನು (Kanakadasa Jayanti) ಶ್ರದ್ಧಾ ಮತ್ತು ಭಕ್ತಿ ಪೂರ್ವಕವಾಗಿ ಆಚರಣೆ ಮಾಡಲಾಯಿತು.

    ಎಐಎಂಐಎಂ (AIMIM) ಪಕ್ಷದಿಂದ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಅನುಮತಿ ಕೇಳಿಬಂದ ಹಿನ್ನೆಲೆ, ಶ್ರೀರಾಮಸೇನೆಯೂ ಸಹ ಕನಕದಾಸರ ಜಯಂತಿ ಆಚರಣೆಗೆ ಅನುಮತಿ ಕೋರಿ ಪಾಲಿಕೆಗೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಗಳನ್ನು ಪರಿಶೀಲನೆ ನಡೆಸಿದ್ದ ಮೇಯರ್ ಸರ್ವ ಪಕ್ಷಗಳ ಸಭೆ ನಡೆಸಿ, ಮೈದಾನದಲ್ಲಿ ಎಲ್ಲಾ ಸಮುದಾಯಗಳ ಜಯಂತಿ ಆಚರಣೆಗೆ ಅನುಮತಿ ನೀಡುವ ಮೂಲಕ, ವಿವಾದಿತ ಸ್ಥಳವನ್ನು ಸಾರ್ವಜನಿಕವಾಗಿಸಿದ್ದರು. ಹೀಗಾಗಿ ಶ್ರೀರಾಮಸೇನೆಯಿಂದ ಕನಕದಾಸ ಜಯಂತಿಯನ್ನು ಶಾಂತಿಯುತವಾಗಿ ಆಚರಣೆ ಮಾಡಲಾಯಿತು.

    ಜಯಂತಿ ಆಚರಣೆಗೆ ಕೇವಲ 1 ಗಂಟೆ ಅವಕಾಶ ನೀಡಲಾಗಿತ್ತು. ಅಲ್ಲದೆ ಈ ಹಿಂದಿನಂತೆ ಮೈದಾನದ ನಡುವೆ ಪರದೆಯನ್ನು ಕಟ್ಟಲಾಗಿತ್ತು. ಈ ಹಿಂದೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದ ಸ್ಥಳದಲ್ಲಿಯೇ, ಅದೇ ಅಳತೆಯ ಪೆಂಡಾಲ್ ಟೆಂಟ್ ಹಾಕಲಾಗಿತ್ತು. ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ (Pramod Muthalik), ಕನಕದಾಸರ ಚಿಂತನೆಗಳನ್ನು ಸ್ಮರಣೆ ಮಾಡಿದರು. ಇದನ್ನೂ ಓದಿ: ನಾವೇನಾದರೂ ಸಿಡಿದೆದ್ದರೆ ನೀವು ಉಳಿಯುವುದಿಲ್ಲ – ಕಾಂಗ್ರೆಸ್‍ಗೆ ಮುತಾಲಿಕ್ ವಾರ್ನಿಂಗ್

    ಇದಕ್ಕೂ ಮುನ್ನ ಮುತಾಲಿಕ್ ಮೈದಾನಕ್ಕೆ ಬರುತ್ತಿದ್ದಂತೆ, ನಿನ್ನೆ ಟಿಪ್ಪು ಜಯಂತಿ ಮಾಡಿದ್ದ ಸ್ಥಳದಲ್ಲಿ ಗೋ ಮೂತ್ರ ಸಿಂಪಡಣೆ ಮಾಡಿ ಸ್ಥಳ ಶುದ್ಧೀಕರಣ ಮಾಡಿದ್ದಾರೆ. ಇದನ್ನೂ ಓದಿ: ಪ್ರಧಾನಿಗೆ ಕಿನ್ನಾಳ ಕಲೆಯ ಕಾಮಧೇನು ಉಡುಗೊರೆ ನೀಡಿದ ಸಚಿವೆ ಶಶಿಕಲಾ ಜೊಲ್ಲೆ

    Live Tv
    [brid partner=56869869 player=32851 video=960834 autoplay=true]

  • 159 ಕೋಟಿ ವೆಚ್ಚ – ಈ ವರ್ಷವೇ ರಾಯಣ್ಣ ಸೈನಿಕ ಶಾಲೆ ಪ್ರಾರಂಭ

    ಬೆಂಗಳೂರು: ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಹೆಸರಿನಲ್ಲಿ ಸೈನಿಕ ಶಾಲೆಯನ್ನು ಪ್ರಾರಂಭ ಮಾಡುತ್ತಿದ್ದೇವೆ. ಈಗಾಗಲೇ 109 ಕೋಟಿ ಖರ್ಚಾಗಿದೆ. ಈ ವರ್ಷ 50 ಕೋಟಿ ಖರ್ಚು ಮಾಡಿ, ಅದನ್ನು ಪೂರ್ಣ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

    ಕನಕ ಜಯಂತಿ ಹಿನ್ನೆಲೆ ಶಾಸಕರ ಭವನದಲ್ಲಿರುವ ಕನಕದಾಸ ಪ್ರತಿಮೆಗೆ ಮಲಾರ್ಪಣೆ ಮಾಡಿ ಮಾತನಾಡಿದ ಅವರು, ಕನಕದಾಸರ ದಾಸ ಶ್ರೇಷ್ಠರು ಅವರು ಮೊದಲು ರಾಜ ಆಗಿದ್ದರು. ಕನ್ನಡ ನಾಡು ಕಂಡ ದಾಸ ಸಾಹಿತ್ಯಕ್ಕೆ ಅಪಾರ ಕೊಡುಗೆ ಕೊಟ್ಟ ತತ್ವಜ್ಞಾನಿ. ವಿಶ್ವಮಾನ ಕಲ್ಪನೆ ಸಾರಿದವರು, ಸತ್ಯವನ್ನು ಹೇಳಿದವರು. ಕನಕದಾಸರು ಶಿಗ್ಗಾಂವ ತಾಲೂಕಿನಲ್ಲಿ ಜನಿಸಿದರು. ಇವರ ಕರ್ಮ ಭೂಮಿ ಕಾಗಿನೆಲೆಯಾಗಿದೆ. ರಾಜ್ಯಾದ್ಯಂತ ದಾಸರ ಪದಗಳನ್ನು ಹಾಡುತ್ತಾ ಜನರಿಗೆ ಜೀವದ ದಾರಿ ತೋರಿಸಿದವರು. ಕುಲ ಕುಲ ಎಂದು ಬಡೆದಾಡದಿರಿ ಎಂದು ಮಾರ್ಮಿಕವಾಗಿ ಹೇಳಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಬೊಮ್ಮಾಯಿ ನಿಮ್ಮ ಹನಿಮೂನ್ ಕಾಲ ಮುಗಿದಿದೆ: ಸಿದ್ದರಾಮಯ್ಯ

    ಅವರ ತತ್ವ ಆದರ್ಶಗಳು ಇವತ್ತಿಗೂ ಪ್ರಸ್ತುತವಾಗಿದೆ. ಅವರ ವಿಚಾರಗಳನ್ನು ಇಟ್ಟುಕೊಂಡು ಬಾಡಗ್ರಾಮದಲ್ಲಿ ಕನಕದಾಸರ ಅರಮನೆ ನಿರ್ಮಾಣ ಮಾಡಲಾಗಿದೆ. ಕಾಗಿನೆಲೆಯಲ್ಲಿ ಸ್ಮಾರಕವನ್ನು ಕೂಡ ಮಾಡಿದ್ದೇವೆ. ಕನಕದಾಸರ ತ್ರಿಪದಿಗಳು, ದಾಸರ ಪದಗಳು ಆದರ್ಶ, ಸಂಕಲ್ಪವಾಗುವ ದಿನವಾಗಿದೆ ಎಂದರು. ಇದನ್ನೂ ಓದಿ: ವಿಧಾನ ಪರಿಷತ್ ಚುನಾವಣೆ, ಅಭ್ಯರ್ಥಿಗಳ ಆಯ್ಕೆಯಲ್ಲಿ ಬಿಕ್ಕಟ್ಟು – ಕಾಂಗ್ರೆಸ್‍ನಿಂದ ಟಿಕೆಟ್ ಘೋಷಣೆ ವಿಳಂಬ

    ಅದೇ ಮಾದರಿಯಲ್ಲಿ ಸಂಗೊಳ್ಳಿ ರಾಯಣ್ಣ ಸಮಾಧಿ ಅಭಿವೃದ್ಧಿ ಮಾಡುತ್ತಿದ್ದೇವೆ. ಈಗಾಗಲೇ 109 ಕೋಟಿ ಖರ್ಚಾಗಿದೆ. ಈ ವರ್ಷ 50 ಕೋಟಿ ಖರ್ಚು ಮಾಡಿ, ಅದನ್ನು ಪೂರ್ಣ ಮಾಡುತ್ತೇವೆ. ಯುವಕರಿಗಾಗಿ ಆದರ್ಶಪ್ರಾಯ ಮತ್ತು ಶಿಸ್ತಿನ ಶಾಲೆ ಮಾಡುತ್ತಿದ್ದೇವೆ. ಈ ಬಗ್ಗೆ ಕೇಂದ್ರದ ರಾಜನಾಥ್ ಸಿಂಗ್ ಅವರ ಜೊತೆಗೆ ಮಾತನಾಡಿದ್ದೇನೆ. ಜೊತೆಗೆ ಪತ್ರನೂ ಬರೆದಿದ್ದೇನೆ. ಸೈನಿಕ ಶಾಲೆ ಪೂರ್ಣವಾದ ಮೇಲೆ ಕೇಂದ್ರ ರಕ್ಷಣಾ ಇಲಾಖೆ ತೆಗೆದುಕೊಳ್ಳಬೇಕು. ಇದು ರಾಜ್ಯ ಸರ್ಕಾರದ ಇಚ್ಛೆಯಾಗಿದೆ. ಕೆಲಸ ಕಾರ್ಯಗಳು ನಿರಂತರವಾಗಿ ನಡೆಯುತ್ತಿವೆ ತಿಳಿಸಿದರು.