Tag: Kanakagiri Police

  • 100 ರೂಪಾಯಿಗೆ ಅಜ್ಜಿಯನ್ನೇ ಕೊಂದ ಮೊಮ್ಮಗ

    100 ರೂಪಾಯಿಗೆ ಅಜ್ಜಿಯನ್ನೇ ಕೊಂದ ಮೊಮ್ಮಗ

    ಕೊಪ್ಪಳ: ಕೇವಲ 100 ರೂ. ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ಮೊಮ್ಮಗ ಅಜ್ಜಿಯನ್ನೇ ಕೊಲೆ ಮಾಡಿರುವ ಘಟನೆ ಕೊಪ್ಪಳದ(Kopala) ಕನಕಗಿರಿ(Kanakagiri) ಪಟ್ಟಣದಲ್ಲಿ ನಡೆದಿದೆ.

    ಕನಕಮ್ಮ ನಾಗಪ್ಪ ಬೊಕ್ಕಸದ(82) ಕೊಲೆಯಾದ ವೃದ್ಧೆ. ಮೊಮ್ಮಗ ಚೇತನ್ ಕುಮಾರ್ ಕೊಲೆ ಮಾಡಿರುವ ಆರೋಪಿ. ಇದನ್ನೂ ಓದಿ: ರಾಜ್ಯದಲ್ಲಿ ಭಾರೀ ಮಳೆ – 16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಜಾರಿ

    ಚೇತನ್ ಹಣ ನೀಡುವಂತೆ ತಂದೆ, ತಾಯಿ ಹಾಗೂ ಅಜ್ಜಿಯನ್ನು ಪ್ರತಿದಿನ ಪೀಡಿಸುತ್ತಿದ್ದ. ಅಜ್ಜಿ ಕನಕಮ್ಮನ ಕೈಕಾಲು ಹಿಡಿದಿದ್ದ. ಆದರೂ ಕನಕಮ್ಮ ಹಣ ಕೊಟ್ಟಿರಲಿಲ್ಲ. ಇದರಿಂದ ಕೋಪಗೊಂಡ ಚೇತನ್ ಅಜ್ಜಿ ಕನಕಮ್ಮನ ತಲೆಯ ಮೇಲೆ ರುಬ್ಬುವ ಕಲ್ಲು ಎತ್ತಿಹಾಕಿದ್ದ. ಕನಕಮ್ಮಳ ತಲೆಯ ಭಾಗಕ್ಕೆ ಪೆಟ್ಟಾಗಿದ್ದು, ತೀವ್ರ ರಕ್ತಸ್ರಾವದಿಂದ ಮನೆಯಲ್ಲಿಯೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಮಳೆಯಿಂದ ಪಂದ್ಯ ರದ್ದು, ಕೋಲ್ಕತ್ತಾ ಔಟ್‌ – ಪ್ಲೇ ಆಫ್‌ ಸನಿಹದಲ್ಲಿ ಆರ್‌ಸಿಬಿ

    ಘಟನಾ ಸ್ಥಳಕ್ಕೆ ಡಿವೈಎಸ್ಪಿ ಸಿದ್ದಲಿಂಗಪ್ಪಗೌಡ ಪಾಟೀಲ್, ಪಿಐ ಎಂ.ಡಿ ಫೈಜುಲ್ಲಾ ಭೇಟಿ ನೀಡಿ, ಪರಿಶೀಲಿಸಿದರು. ಆರೋಪಿ ಚೇತನ್‌ಕುಮಾರ್‌ನನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಚೇತನ್ ತಂದೆ ವೆಂಕಟೇಶ್ ದೂರಿನಾಧರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ಗುಂಪು ಘರ್ಷಣೆಗೆ ಇಬ್ಬರು ಬಲಿ – ಕೊಪ್ಪಳದ ಹುಲಿಹೈದರ್ ಗ್ರಾಮದಲ್ಲಿ ನಿಷೇಧಾಜ್ಞೆ

    ಗುಂಪು ಘರ್ಷಣೆಗೆ ಇಬ್ಬರು ಬಲಿ – ಕೊಪ್ಪಳದ ಹುಲಿಹೈದರ್ ಗ್ರಾಮದಲ್ಲಿ ನಿಷೇಧಾಜ್ಞೆ

    ಕೊಪ್ಪಳ: ಗುಂಪು ಘರ್ಷಣೆಗೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮ ಬೆಚ್ಚಿಬಿದ್ದಿದೆ.

    ಕ್ಷುಲ್ಲಕ ಕಾರಣಕ್ಕೆ ನಡೆದ ಗುಂಪು ಘರ್ಷಣೆಯಲ್ಲಿ ಯಂಕಪ್ಪ(60) ಮತ್ತು ಭಾಷಾವಲಿ(22) ಮೃತಪಟ್ಟಿದ್ದು, ಧರ್ಮಣ್ಣ ಹರಿಜನ್ ಗಂಭೀರವಾಗಿ ಗಾಯಗೊಂಡು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಇದನ್ನೂ ಓದಿ: ಸ್ಯಾಂಡಲ್‍ವುಡ್ ಹಿರಿಯ ನಿರ್ಮಾಪಕ ನರ್ಗಿಸ್ ಬಾಬು ಇನ್ನಿಲ್ಲ

    ಮುಸ್ಲಿಂ ಸಮುದಾಯದ ಹುಡುಗಿಯರನ್ನು ಎಸ್.ಟಿ ಸಮುದಾಯದವರು ಮದುವೆಯಾಗಿದ್ದಾರೆ ಎಂಬ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ಮುಸ್ಲಿಂ ಸಮುದಾಯದವರೇ ಚಾಕು ಹಿಡಿದುಕೊಂಡು ಬಂದು ಹಲ್ಲೆ ಮಾಡಿದ್ದಾರೆ ಅಂತ ಮೃತ ಯಂಕಪ್ಪ ಮನೆಯವರು ಆರೋಪಿಸಿದ್ದಾರೆ. ಅಲ್ಲದೇ ಈ ಗಲಾಟೆ ಹಿಂದೆ ಮಾಜಿ ಸಚಿವ ಶಿವರಾಜ್ ತಂಗಡಗಿ ಆಪ್ತ ಹನುಮೇಶ್ ನಾಯಕ್ ಕಾರಣ ಎಂಬ ಆರೋಪವು ಕೇಳಿ ಬಂದಿದೆ. 

    ಸದ್ಯ ಎರಡು ಗುಂಪುಗಳ ನಡುವೆ ನಡೆದ ಗಲಾಟೆಗೆ ಇಡೀ ಗ್ರಾಮವೇ ಬೂದಿ ಮುಚ್ಚಿದ ಕೆಂಡದಂತಿದೆ. ಗ್ರಾಮದಲ್ಲಿ ಆಗಸ್ಟ್ 20ರವರೆಗೂ 144 ಸೆಕ್ಷನ್ ಜಾರಿ ಮಾಡಿದ್ದು, 70ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಸಿಸಿ ಕ್ಯಾಮೆರಾ ಆಧರಿಸಿ ಈ ಸಂಬಂಧ ಕನಕಗಿರಿ ಠಾಣೆಯಲ್ಲಿ 58 ಮಂದಿ ವಿರುದ್ಧ ದೂರು ದಾಖಲಾಗಿದ್ದು, ಖಾದರಭಾಷಾ ಹಾಗೂ ಹಂಪಮ್ಮ ದೂರು ಪ್ರತಿ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಸಿಲಿಕಾನ್ ಸಿಟಿಗೆ ಮತ್ತಷ್ಟು ಎಲೆಕ್ಟ್ರಿಕ್ ಬಸ್‍ಗಳು – ಆಗಸ್ಟ್ 15ಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ

    Live Tv
    [brid partner=56869869 player=32851 video=960834 autoplay=true]