Tag: Kandahar

  • ಅಫ್ಘಾನಿಸ್ತಾನದ ಮಸೀದಿಯಲ್ಲಿ ಬಾಂಬ್ ಸ್ಫೋಟ – 32 ಸಾವು, 100ಕ್ಕೂ ಅಧಿಕ ಮಂದಿಗೆ ಗಾಯ

    ಅಫ್ಘಾನಿಸ್ತಾನದ ಮಸೀದಿಯಲ್ಲಿ ಬಾಂಬ್ ಸ್ಫೋಟ – 32 ಸಾವು, 100ಕ್ಕೂ ಅಧಿಕ ಮಂದಿಗೆ ಗಾಯ

    ಕಾಬೂಲ್: ಅಫ್ಘಾನಿಸ್ತಾನದ ಕುಂದುಜ್ ನಗರದ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆ ನಡೆಸುತ್ತಿದ್ದಾಗ ಬಾಂಬ್ ಸ್ಫೋಟ ಸಂಭವಿಸಿ 16 ಜನ ಸಾವನ್ನಪ್ಪಿದ್ದು, 100 ಕ್ಕೂ ಹೆಚ್ಚು ಗಂಭೀರವಾಗಿ ಗಾಯಗೊಂಡಿದ್ದಾರೆ.

    ವಾರದ ಪ್ರಾರ್ಥನೆಗಾಗಿ ಮಸೀದಿಗೆ ಆಗಮಿಸಿದವರನ್ನು ಗುರಿಯಾಗಿಸಿ ಮಸೀದಿ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆದಿದೆ ಎಂದು ತಾಲಿಬಾನ್ ಸ್ಪಷ್ಟಪಡಿಸಿದೆ. ಮಸೀದಿಯಲ್ಲಿ ನೂರಕ್ಕೂ ಹೆಚ್ಚು ಜನ ಪ್ರಾರ್ಥನೆ ಸಲ್ಲಿಸುತ್ತಿದ್ದರು. ಉಳಿದಂತೆ ಕೆಲ ಜನ ಪ್ರಾರ್ಥನೆಗೆ ಬರಲು ಸಿದ್ಧರಾಗುತ್ತಿದ್ದರು ಈ ವೇಳೆ ಬಾಂಬ್ ಸ್ಫೋಟಗೊಂಡಿದೆ. ಇದನ್ನೂ ಓದಿ: ಬೇಯಿಸಿದ ಮೊಟ್ಟೆಯಿಂದ ಪ್ರಾಣ ಬಿಟ್ಟ ಮಹಿಳೆ

    ಗಾಯಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗುತ್ತಿದ್ದು, ಸ್ಥಳದಲ್ಲಿ 15ಕ್ಕೂ ಹೆಚ್ಚು ಅಂಬುಲೆನ್ಸ್ ಗಳನ್ನು ನಿಯೋಜನೆ ಮಾಡಲಾಗಿದೆ. ಮಸೀದಿಯಲ್ಲಿ ರಕ್ತದ ಮಡುವಿನಲ್ಲಿ ನೂರಾರು ಹೆಣಗಳ ರಾಶಿ ಕಂಡುಬರುತ್ತಿದೆ. ಇದನ್ನೂ ಓದಿ: ಮತ್ತೆ ಸರ್ಜಿಕಲ್‌ ಸ್ಟ್ರೈಕ್‌? – ಪಾಕಿಸ್ತಾನಕ್ಕೆ ಅಮಿತ್‌ ಶಾ ಎಚ್ಚರಿಕೆ

    ದಾಳಿಯ ಬಗ್ಗೆ ಮಾತನಾಡಿರುವ ತಾಲಿಬಾನ್ ವಕ್ತಾರ ಜಬಿಹುಲ್ಲಾ ಮುಜಾಹಿದ್, ನಮ್ಮ ಶಿಯಾ ಪಂಗಡದ ದೇಶವಾಸಿಗಳ ಮಸೀದಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ. ಹಲವಾರು ಮಂದಿ ಸಾವನ್ನಪ್ಪಿ 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದಿದ್ದಾರೆ.

    ದಾಳಿಯ ಹೊಣೆಗಾರಿಕೆಯನ್ನು ಯಾವುದೇ ಸಂಘಟನೆ ಒಪ್ಪದೇ ಇದ್ದರೂ ತಾಲಿಬಾನ್‍ನ ವಿರೋಧಿ ಬಣವಾಗಿ ಗುರುತಿಸಿಕೊಂಡಿರುವ ಇಸ್ಲಾಮಿಕ್ ಸ್ಟೇಟ್ ದಾಳಿ ಮಾಡಿರುವ ಸಾಧ್ಯತೆ ಇದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ.

  • ಭಾರತೀಯ ರಾಯಭಾರ ಕಚೇರಿ ಮೇಲೆ ತಾಲಿಬಾನ್ ದಾಳಿ

    ಭಾರತೀಯ ರಾಯಭಾರ ಕಚೇರಿ ಮೇಲೆ ತಾಲಿಬಾನ್ ದಾಳಿ

    ಕಾಬೂಲ್: ಅಫ್ಘಾನಿಸ್ತಾನವನ್ನು ಹಿಡಿತಕ್ಕೆ ಪಡೆದಿರುವ ತಾಲಿಬಾನ್ ಭಯೋತ್ಪಾದಕರ ಅಟ್ಟಹಾಸ ನಿಂತಿಲ್ಲ. ಈಗ ಭಾರತೀಯ ರಾಯಭಾರ ಕಚೇರಿಗೆ ದಾಳಿ ಮಾಡಿ ದಾಖಲೆಗಳನ್ನು ಹುಡುಕಾಡಿದ್ದಾರೆ ಎಂದು ವರದಿಯಾಗಿದೆ.

    ಹೇರತ್ ಮತ್ತು ಕಂದಹಾರ್ ನಲ್ಲಿರುವ  ಭಾರತದ ರಾಯಭಾರ ಕಚೇರಿಗೆ ದಾಳಿ ಮಾಡಿರುವ ತಾಲಿಬಾನ್ ಉಗ್ರರು ದಾಖಲೆಗಳಿಗಾಗಿ ಹುಡುಕಾಡಿದ್ದಾರೆ ಮತ್ತು ರಾಯಭಾರ ಕಚೇರಿಯಲ್ಲಿದ್ದ ವಾಹನಗಳನ್ನು ಕೊಂಡೊಯ್ದಿದ್ದಾರೆ. ಕಾಬೂಲ್ ಮತ್ತು ಜಲಾಲಬಾದ್‍ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮೇಲೆ ದಾಳಿ ನಡೆದಿದ್ಯಾ ಇಲ್ಲವೋ ಎನ್ನುವುದು ತಿಳಿದು ಬಂದಿಲ್ಲ.

    ಭಯೋತ್ಪಾದಕ ಗುಂಪಿನ ಮುಖ್ಯಸ್ಥ ಮತ್ತು ತಾಲಿಬಾನ್‍ನ ಉಪನಾಯಕ ಸಿರಾಜುದ್ದೀನ್ ಹಕ್ಕಾನಿಯ ಸಹೋದರ ಅನಸ್ ಹಕ್ಕಾನಿ ನೇತೃತ್ವದ ಹಕ್ಕಾನಿ ನೆಟ್‍ವರ್ಕ್‍ನ ಸುಮಾರು 6 ಸಾವಿರ ಕಾರ್ಯಕರ್ತರು ರಾಜಧಾನಿಯಾದ ಕಾಬೂಲ್ ಮೇಲೆ ಹಿಡಿತ ಸಾಧಿಸಿದ್ದಾರೆ ಎಂದು ವರದಿಯಾಗಿದೆ.

    ಅಫ್ಘಾನಿಸ್ತಾನದ ಗುಪ್ತಚರ ಸಂಸ್ಥೆ ಎನ್‍ಡಿಎಸ್‍ನಲ್ಲಿ ಸೇವೆ ಸಲ್ಲಿಸುತ್ತಿದ್ದವರಿಗೆ ಮನೆ ಮನೆಯಲ್ಲೂ ತಾಲಿಬಾನ್ ಬಂದೂಕುಧಾರಿಗಳು ಹುಡುಕಾಡುತ್ತಿದ್ದಾರೆ.

    ಅಫ್ಘಾನಿಸ್ತಾನದಲ್ಲಿ ಇನ್ನೂ 450 ಭಾರತೀಯರು ಸಿಲುಕಿಕೊಂಡಿದ್ದು ಅವರನ್ನು ಭಾರತಕ್ಕೆ ವಾಪಸ್ ಕರೆತರುವುದೇ ಈಗ ಸರ್ಕಾರಕ್ಕೆ ಸವಾಲಾಗಿದೆ. ಅಮೆರಿಕ ಮತ್ತು ಇತರೆ ರಾಯಭಾರ ಕಚೇರಿಗಳ ಮೂಲಕ ಭಾರತೀಯರನ್ನು ಕರೆತರುವ ಪ್ರಯತ್ನವನ್ನು ವಿದೇಶಾಂಗ ಸಚಿವಾಲಯ ಮಾಡುತ್ತಿದೆ. ಇದನ್ನೂ ಓದಿ: ವಿಮಾನದಿಂದ ಬಿದ್ದವರ ಗುರುತು ಪತ್ತೆ- ಮೂವರಲ್ಲಿ ಒಬ್ಬ ಯುವ ಫುಟ್‍ಬಾಲ್ ಆಟಗಾರ 

    ಅಫ್ಘಾನಿಸ್ತಾನವನ್ನು ತಾಲಿಬಾನಿಗಳು ವಶಪಡಿಸಿಕೊಂಡು ನಾಲ್ಕು ದಿನವಾದ್ರೂ ಇನ್ನೂ ಅಲ್ಲಿ ಸರ್ಕಾರ ರಚನೆ ಆಗಿಲ್ಲ. ಅಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ವಿಮಾನ ನಿಲ್ದಾಣಕ್ಕೆ ಕರೆತರುವುದೇ ಹರಸಾಹಸವಾಗಿದೆ. ಪ್ರತಿ ಚೆಕ್‍ಪೋಸ್ಟ್‍ಗಳಲ್ಲೂ ಬಂದೂಕುಧಾರಿ ತಾಲಿಬಾನಿಗಳು ತಪಾಸಣೆ ಮಾಡ್ತಿರುವ ಕಾರಣ ತಾಲಿಬಾನಿಗಳ ಅಧಿಕೃತ ಒಪ್ಪಿಗೆ ಸಿಗದ ಹೊರತು ಜೀವಭಯದಿಂದಾಗಿ ಕಾಬೂಲ್‍ನಲ್ಲಿ ಸಿಲುಕೊಂಡಿರುವ ಕೆಲವು ಭಾರತೀಯರು ಮನೆಬಿಟ್ಟು ಹೊರಬರಲು ಸಿದ್ಧರಿಲ್ಲ.

    ಕಾಬೂಲ್ ವಿಮಾನ ನಿಲ್ದಾಣದಿಂದ ಭಾರತದ ರಾಯಭಾರ ಕಚೇರಿಗೆ 10 ಕಿಲೋ ಮೀಟರ್ ದೂರವಿದೆ. ವಿಮಾನ ನಿಲ್ದಾಣಕ್ಕೆ ಅಮೆರಿಕ ಸೈನಿಕರ ಪಹರೆ ಇದ್ದರೂ ಹೊರಗಿನ ಭದ್ರತೆ ಅಮೆರಿಕ ಸೈನಿಕರ ಕೈಯಲ್ಲಿ ಇಲ್ಲ. ಹೀಗಾಗಿ ತಾಲಿಬಾನಿಗಳ ಸ್ಥಳೀಯ ನಾಯಕರೊಂದಿಗೆ ಸಂಪರ್ಕ ಸಾಧಿಸುವುದು ಕೂಡಾ ಸವಾಲಾಗಿದೆ ಎಂದು ವರದಿ ಆಗಿದೆ. ಇದನ್ನೂ ಓದಿ: ಪ್ರಜಾಪ್ರಭುತ್ವ ಸರ್ಕಾರ ಇಲ್ಲ, ಷರಿಯಾ ಕಾನೂನುಗಳೇ ಜಾರಿ – ತಾಲಿಬಾನ್

    ನಾಲ್ಕು ದಿನಗಳ ಹಿಂದೆ ಭಾರತದ ರಾಜತಾಂತ್ರಿಕ ಸಿಬ್ಬಂದಿ, ಸೈನಿಕರನ್ನು ಕರೆತರುವ ವೇಳೆ ಚೆಕ್‍ಪೋಸ್ಟ್ ನಲ್ಲಿ ತಾಲಿಬಾನಿಗಳು ತಡೆಹಾಕಿದ್ದರು. ಆ ಬಳಿಕ ಅಲ್ಲಿಂದ ವಿಮಾನ ನಿಲ್ದಾಣಕ್ಕೆ ಕರೆತರಲು ಭಾರತಕ್ಕೆ 1 ದಿನ ಹಿಡಿದಿತ್ತು.

  • ಕಂದಹಾರ್‌ಗೆ ನುಗ್ಗಿದ ತಾಲಿಬಾನ್ ಉಗ್ರರು

    ಕಂದಹಾರ್‌ಗೆ ನುಗ್ಗಿದ ತಾಲಿಬಾನ್ ಉಗ್ರರು

    – ಇರಾನ್ ಗಡಿಪೋಸ್ಟ್ ವಶ
    – ಅಫ್ಘಾನ್ ಸೇನೆ, ತಾಲಿಬಾನ್ ಸಂಘರ್ಷ ತೀವ್ರ

    ಕಾಬೂಲ್: ಅಮೆರಿಕ ಸೇನೆ ಮತ್ತು ನ್ಯಾಟೋ ಪಡೆಗಳು ಮರಳುತ್ತಿದ್ದಂತೆ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸ ಹೆಚ್ಚಾಗುತ್ತಿದೆ. ಈಗ ದೇಶದ 2ನೇ ಅತಿದೊಡ್ಡ ನಗರವಾಗಿರುವ 6 ಲಕ್ಷ ಜನಸಂಖ್ಯೆಯುಳ್ಳ ಕಂದಹಾರ್ ನಗರವನ್ನು ಪ್ರವೇಶಿಸಿದ್ದಾರೆ.

    ವಿದೇಶಿ ಪಡೆಗಳು ತೆರಳುತ್ತಿದ್ದಂತೆ ಒಂದೊಂದೇ ಪ್ರದೇಶವನ್ನು ವಶಪಡಿಸಿಕೊಳ್ಳುತ್ತಿರುವ ಉಗ್ರರು ಈಗಾಗಲೇ ದೇಶದ ಶೇ.85ರಷ್ಟುಭಾಗವನ್ನು ವಶಪಡಿಸಿಕೊಂಡಿರುವುದಾಗಿ ಪ್ರಕಟಿಸಿದ್ದಾರೆ. ಇಷ್ಟೇ ಅಲ್ಲದೇ ಇರಾನ್ ಜೊತೆಗಿನ ವ್ಯಾಪಾರ ನಡೆಸುವ ಗಡಿ ಚೆಕ್ ಪೋಸ್ಟ್  ವಶಕ್ಕೆ ಪಡೆದಿದ್ದಾರೆ.

    https://twitter.com/TGhazniwal1/status/1414152231973179392

    ಕಂದಹಾರ್ ಗವರ್ನರ್ ವಕ್ತಾರರಾದ ಬಹಿರ್ ಅಹಮದಿ ಅವರು, ದೇಶದ ಎರಡನೇ ಅತಿದೊಡ್ಡ ನಗರ ಕಂದಹಾರ್ ಅನ್ನು ಕಳೆದ ಶುಕ್ರವಾರ ಉಗ್ರರು ಪ್ರವೇಶಿಸಿದ್ದಾರೆ ಎಂದು ತಿಳಿಸಿದ್ದಾರೆ. ಉಗ್ರರು ಮುನ್ನುಗ್ಗುತ್ತಿರುವುದನ್ನು ನೋಡಿದರೆ ಅಫ್ಘಾನಿಸ್ತಾನ ಪೂರ್ಣ ಪ್ರಮಾಣದಲ್ಲಿ ತಾಲಿಬಾನ್ ಕೈವಶವಾಗುವ ಅಪಾಯವಿದೆ ಎಂಬ ವಿಶ್ಲೇಷಣೆ ಕೇಳಿ ಬಂದಿದೆ. ಇದನ್ನೂ ಓದಿ: ಪಕ್ಷೇತರರಾಗಿ ಅಖಾಡಕ್ಕಿಳೀತಾರಾ ಜಿಟಿಡಿ?

    https://twitter.com/TGhazniwal1/status/1414273311887011843

    7 ಪೊಲೀಸ್ ಜಿಲ್ಲಾ ಪ್ರದೇಶದ ಮೂಲಕ ಕಂದಹಾರ್ ನಗರವನ್ನು ಮೊದಲ ಬಾರಿಗೆ ಪ್ರವೇಶಿಸಿದ್ದು, ಅಫ್ಘಾನ್ ಸೇನೆ ದಾಳಿ ನಡೆಸಿ ತಿರುಗೇಟು ನೀಡುತ್ತಿದೆ. ಇದರಿಂದಾಗಿ ಎರಡೂ ಬಣಗಳ ನಡುವೆ ಸಂಘರ್ಷ ಜೋರಾಗಿದೆ.

    https://twitter.com/TGhazniwal1/status/1414202014301577218

    ಅಮೆರಿಕ ಹಿಂದೆ ಸರಿದಿದ್ದು ಯಾಕೆ?
    2001ರಲ್ಲಿ ವಿಶ್ವ ವಾಣಿಜ್ಯ ಕಟ್ಟಡದ ಮೇಲೆ ಉಗ್ರರ ದಾಳಿಯಿಂದ ಸಿಟ್ಟಾದ ಅಮೆರಿಕ ಅಲ್‍ ಖೈದಾ ಉಗ್ರರನ್ನು ಮಟ್ಟ ಹಾಕಲು ದೊಡ್ಡ ಕಾರ್ಯಾಚರಣೆ ಆರಂಭಿಸಿತು. ಕಳೆದ 20 ವರ್ಷಗಳಿಂದ ಅಮೆರಿಕ ಸೇನೆ ಮತ್ತು ನ್ಯಾಟೋ ಪಡೆಗಳು ಅಫ್ಘಾನಿಸ್ತಾನದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಿ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿತ್ತು. ಆದರೆ ಅಫ್ಘಾನಿಸ್ತಾನದಲ್ಲಿ ಸೈನ್ಯವನ್ನು ಕಳುಹಿಸಿದ್ದರಿಂದ ಅಮೆರಿಕಕ್ಕೆ ಭಾರೀ ಪ್ರಮಾಣದಲ್ಲಿ ನಷ್ಟವಾಗಿತ್ತು. ಈ ಹಿನ್ನೆಲೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಹಿಂದೆ ಸರಿಯುವ ನಿರ್ಧಾರವನ್ನು ಅಮೆರಿಕ ಕೈಗೊಂಡಿದ್ದು, ಮೇ 1ರಿಂದ ಆ ಪ್ರಕ್ರಿಯೆ ಆರಂಭವಾಗಿದೆ.

    https://twitter.com/TGhazniwal1/status/1413837949477732358

    ಭಾರತೀಯರು ವಾಪಸ್:
    ಕಂದಾಹರ್ ನಲ್ಲಿರುವ ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಸಿಬ್ಬಂದಿ ಸೇರಿದಂತೆ ಭಾರತೀಯ ರಾಜತಾಂತ್ರಿಕರು, ಅಧಿಕಾರಿಗಳು ಮತ್ತು ಇತರ ಸಿಬ್ಬಂದಿಯನ್ನು ಕರೆ ತರಲು ವಾಯು ಪಡೆಯ ವಿಶೇಷ ವಿಮಾನವನ್ನು ಭಾರತ ಕಳುಹಿಸಿದೆ. ಸದ್ಯ ಈಗ  ಕಾಬೂಲ್‍ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಭಾರತೀಯ ರಾಜತಾಂತ್ರಿಕರು ಮತ್ತು ಅಫ್ಘಾನ್ ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸುತ್ತಿದೆ.