Tag: Kane Williamson

  • ಲ್ಯಾಥಮ್‌ ಭರ್ಜರಿ ಶತಕ – ಕೀವಿಸ್‌ ಗೆ 7 ವಿಕೆಟ್‌ಗಳ ಜಯ

    ಲ್ಯಾಥಮ್‌ ಭರ್ಜರಿ ಶತಕ – ಕೀವಿಸ್‌ ಗೆ 7 ವಿಕೆಟ್‌ಗಳ ಜಯ

    ವೆಲ್ಲಿಂಗ್ಟನ್‌: ಟಾಮ್‌ಲ್ಯಾಥಮ್‌ (Tom Latham) ಭರ್ಜರಿ ಶತಕ ಹಾಗೂ ನಾಯಕ ಕೇನ್‌ ವಿಲಿಯಮ್ಸನ್‌ (Kane Williamson) ಅರ್ಧಶತಕದ ನೆರವಿನಿಂದ ಕಿವೀಸ್‌ ಪಡೆ ಟೀಂ ಇಂಡಿಯಾ (Team India) ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.

    ಆಕ್ಲೆಂಡ್‌ನ ಈಡನ್ ಪಾರ್ಕ್‌ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ (New Zealand) ನಡುವಿನ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟಾಸ್‌ ಸೋತು ಕ್ರೀಸ್‌ಗಿಳಿದ ಟೀಂ ಇಂಡಿಯಾ ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 306 ರನ್ ಗಳಿಸಿತ್ತು. 307 ರನ್‌ ಗುರಿ ಬೆನ್ನತ್ತಿದ ಆತಿಥೇಯ ನ್ಯೂಜಿಲೆಂಡ್ ತಂಡ 47.1 ಓವರ್‌ಗಳಲ್ಲಿ ಕೇವಲ 3 ವಿಕೆಟ್‌ ನಷ್ಟಕ್ಕೆ 309 ರನ್‌ ಗಳಿಸಿ ಗೆಲುವು ಸಾಧಿಸಿತು.

    ಕಿವೀಸ್‌ಗೆ ಆರಂಭಿಕ ಆಘಾತ:
    ಕಿವೀಸ್‌ ಪಡೆಗೆ ಆರಂಭದಲ್ಲೇ ಆಘಾತ ಎದುರಾಗಿತ್ತು. ಆರಂಭಿಕರಾಗಿ ಕಣಕ್ಕಿಳಿದ ಡಿವೋನ್‌ ಕಾನ್ವೆ ಮತ್ತು ಫಿನ್ ಅಲೆನ್ ಅತೀ ಬೇಗನೆ ಪೆವಿಲಿಯನ್‌ ಸೇರಿದರು. 7.3 ಓವರ್‌ನಲ್ಲಿ ಮೊದಲ ವಿಕೆಟ್‌ ಜೊತೆಯಾಟಕ್ಕೆ ಕೇವಲ 35 ರನ್‌ ದಾಖಲಿಸಿತ್ತು. ಫಿನ್‌ ಅಲೆನ್‌ 25 ಎಸೆತಗಳಲ್ಲಿ 25 ರನ್‌ ಗಳಿಸಿದ್ರೆ, ಡಿವೋನ್‌ ಕಾನ್ವೆ 42 ಎಸೆತಗಳಲ್ಲಿ 24 ರನ್‌ ಗಳಿಸಿ ಔಟಾದರು.

    ಈ ವೇಳೆ ನಾಯಕ ಕೇನ್‌ ವಿಲಿಯಮ್ಸನ್‌ ತಂಡಕ್ಕೆ ಆಸರೆಯಾದರು. ನಿಧಾನಗತಿಯಲ್ಲೇ ಬ್ಯಾಟಿಂಗ್‌ ಆರಂಭಿಸಿ ಜವಾಬ್ದಾರಿಯುತ ಅರ್ಧ ಶತಕ ಸಿಡಿಸಿದ್ರು. ಅವರೊಂದಿಗೆ ಜೊತೆಯಾದ ಟಾಮ್ ಲ್ಯಾಥಮ್ ಭರ್ಜರಿ ಬ್ಯಾಟಿಂಗ್‌ ಮೂಲಕ ಟೀಂ ಇಂಡಿಯಾ ಬೌಲರ್‌ಗಳ ದಾಳಿಯನ್ನ ಧೂಳಿಪಟ ಮಾಡಿ, ಕಿವೀಸ್‌ ಪಡೆಗೆ ಗೆಲುವು ತಂದುಕೊಟ್ಟರು.

    ಶತಕ ವಂಚಿತ ನಾಯಕ, ಲ್ಯಾಥಮ್‌ ಬ್ಯಾಟಿಂಗ್‌ ಮಿಂಚಿಂಗ್‌:
    2ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಕೊನೆಯವರೆಗೂ ಹೋರಾಡಿದ ಕೇನ್‌ ವಿಲಿಯಮ್ಸನ್‌ ಕೊನೆಗೂ ಶತಕ ವಂಚಿತರಾದರು. 98 ಎಸೆತಗಳಲ್ಲಿ 94 ರನ್‌ (7 ಬೌಂಡರಿ, 1 ಸಿಕ್ಸರ್)‌ ಸಿಡಿಸಿ ಜಯದ ಹಾದಿಗೆ ತಲುಪಿಸಿದ್ರು. ಮತ್ತೊಂದೆಡೆ ಸ್ಫೋಟಕ ಬ್ಯಾಟಿಂಗ್‌ ಮಾಡಿದ ಟಾಮ್‌ಲ್ಯಾಥಮ್‌ 104 ಎಸೆತಗಳಲ್ಲಿ 145 ಎನ್‌ ಪೇರಿಸಿ, ಟೀಂ ಇಂಡಿಯಾ ಬೌಲರ್‌ಗಳನ್ನು ಬೆಂಡೆತ್ತಿದರು. ಬರೋಬ್ಬರಿ 19 ಬೌಂಡರಿ, 5 ಸಿಕ್ಸರ್‌ ಸಿಡಿಸಿ ತಂಡಕ್ಕೆ ಆಸರೆಯಾದರು. ಪರಿಣಾಮ ಕಿವೀಸ್‌ ಪಡೆ 7 ವಿಕೆಟ್‌ಗಳ ಅಂತರದಿಂದ ಭರ್ಜರಿ ಜಯ ಸಾಧಿಸಿತು.

    ಟೀಂ ಇಂಡಿಯಾ ಪರ ಉಮ್ರಾನ್‌ ಮಲಿಕ್‌ 2 ವಿಕೆಟ್‌ ಪಡೆದರೆ, ಶಾರ್ದೂಲ್‌ ಠಾಕೂರ್‌ 1 ವಿಕೆಟ್‌ಗೆ ತೃಪ್ತಿಪಟ್ಟುಕೊಂಡರು.

    ಆಕ್ಲೆಂಡ್‌ನ ಈಡನ್ ಪಾರ್ಕ್‌ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಉತ್ತಮ ಸವಾಲಿನ ಗುರಿ ನೀಡಿತ್ತು. ಆರಂಭಿಕ ಆಟಗಾರರಾದ ಶಿಖರ್ ಧವನ್ ಮತ್ತು ಶುಭಮನ್ ಗಿಲ್ ಮೊದಲ ವಿಕೆಟ್ ಜೊತೆಯಾಟಕ್ಕೆ 23.1 ಓವರ್‌ಗಳಲ್ಲಿ 124 ರನ್ ಗಳಿಸಿದರು.

    ಶಿಖರ್‌, ಗಿಲ್‌, ಅಯ್ಯರ್‌ ಹೋರಾಟ ವ್ಯರ್ಥ:
    ಶಿಖರ್‌ ಧವನ್‌ (ShikharDhawan) 77 ಎಸೆತಗಳಲ್ಲಿ 13 ಬೌಂಡರಿಗಳೊಂದಿಗೆ 72 ರನ್‌ ಸಿಡಿಸಿದರೆ, ಗಿಲ್‌ 65 ಎಸೆತಗಳಲ್ಲಿ 50 ರನ್‌(1 ಬೌಂಡರಿ, 3 ಸಿಕ್ಸರ್)‌ ಗಳಿಸಿ, ಲಾಕಿ ಫರ್ಗುಸನ್‌ಗೆ ವಿಕೆಟ್ ಒಪ್ಪಿಸಿದರು. ನಂತರ ಕ್ರೀಸ್‌ಗಿಳಿದ ರಿಷಭ್‌ ಪಂತ್‌ 23 ಎಸೆತಗಳಲ್ಲಿ ಕೇವಲ 15 ರನ್‌ ಗಳಿಸಿ ಪೆವಿಲಿಯನ್‌ಗೆ ಮರಳಿದರು. ಇನ್ನೂ ಈ ಪಂದ್ಯದಲ್ಲಿ ಭಾರಿ ನಿರೀಕ್ಷೆ ಮೂಡಿಸಿದ್ದ ಟಿ20 ಸ್ಪೆಷಲಿಸ್ಟ್‌ ಸೂರ್ಯಕುಮಾರ್ ಯಾದವ್ (Suryakumar Yadav) ಕೇವಲ 4 ರನ್ ಬಾರಿಸಿ ಲಾಕಿ ಫರ್ಗುಸನ್‌ಗೆ ವಿಕೆಟ್ ಒಪ್ಪಿಸಿದರು. ಶಾರ್ದುಲ್‌ ಠಾಕುರ್‌ 1 ರನ್‌ ಗಳಿಸಿದರು.

    ಶ್ರೇಯಸ್‌ ಭರ್ಜರಿ ಬ್ಯಾಟಿಂಗ್‌:
    ಒಂದೆಡೆ ವಿಕೆಟ್ ಉರುಳುತ್ತಿದ್ದರೂ, ಮಿಂಚಿನ ದಾಳಿ ನಡೆಸಿದ ಶ್ರೇಯಸ್‌ ಅಯ್ಯರ್‌ (Shreyas Iyer) ಕಿವೀಸ್‌ ಪಡೆಯ ಬೌಲರ್‌ಗಳನ್ನು ಬೆಂಡೆತ್ತಿದರು. ಈ ವೇಳೆ ಸಂಜು ಸ್ಯಾಮ್ಸನ್‌ ಸಹ ಜೊತೆಯಾಗಿ, 94 ರನ್‌ಗಳ ಜೊತೆಯಾಟ ನೀಡಿದರು. ಶ್ರೇಯಸ್‌ 76 ಎಸೆತಗಳಲ್ಲಿ 80 ರನ್‌ (4 ಬೌಂಡರಿ, 4 ಸಿಕ್ಸರ್)‌ ಚಚ್ಚಿದರೆ, ಸ್ಯಾಮ್ಸನ್‌ 36 ರನ್‌ಗಳಿಸಿದರು. ತಂಡದ ಮೊತ್ತ 254 ರನ್‌ಗಳಾಗಿದ್ದಾಗ 36 ರನ್ ಗಳಿಸಿ ಆಡುತ್ತಿದ್ದ ಸಂಜು ಸ್ಯಾಮ್ಸನ್ ಸಿಕ್ಸ್‌ ಸಿಡಿಸುವ ಬರದಲ್ಲಿ ಕ್ಯಾಚ್‌ ನೀಡಿ ಔಟಾದರು.

    ಕೊನೆಯಲ್ಲಿ ವಾಷಿಂಗ್ಟನ್‌ ಅಬ್ಬರ:
    ಕೊನೆಯಲ್ಲಿ ಕಣಕ್ಕಿಳಿದ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಸ್ಫೋಟಕ ಬ್ಯಾಟಿಂಗ್‌ ಮೂಲಕ ಸಿಕ್ಸ್‌, ಬೌಂಡರಿ ಸಿಡಿಸಿದ್ರು. ಕೇವಲ 16 ಎಸೆತಗಳಲ್ಲಿ 37 ರನ್‌ (3 ಸಿಕ್ಸರ್‌, 3 ಬೌಂಡರಿ) ಚಚ್ಚಿದರು. ಕೊನೆಗೆ ಭಾರತ 7 ವಿಕೆಟ್ ನಷ್ಟಕ್ಕೆ 306 ರನ್ ಕಲೆಹಾಕಿತು.

    ನ್ಯೂಜಿಲೆಂಡ್ ಪರ ಲಾಕಿ ಫರ್ಗುಸನ್ ಮತ್ತು ಟಿಮ್ ಸೌಥಿ ತಲಾ 3 ವಿಕೆಟ್ ಪಡೆದು ಮಿಂಚಿದರೆ, ಆಡಮ್ ಮಿಲ್ನೆ 1 ವಿಕೆಟ್‌ಗೆ ತೃಪ್ತಿಪಟ್ಟುಕೊಂಡರು.

    Live Tv
    [brid partner=56869869 player=32851 video=960834 autoplay=true]

  • 3ನೇ T20 ಪಂದ್ಯದಿಂದ ವಿಲಿಯಮ್ಸನ್ ಔಟ್ – ಕಳೆದ ಪಂದ್ಯದ ಹ್ಯಾಟ್ರಿಕ್ ವೀರನಿಗೆ ನಾಯಕತ್ವದ ಪಟ್ಟ

    3ನೇ T20 ಪಂದ್ಯದಿಂದ ವಿಲಿಯಮ್ಸನ್ ಔಟ್ – ಕಳೆದ ಪಂದ್ಯದ ಹ್ಯಾಟ್ರಿಕ್ ವೀರನಿಗೆ ನಾಯಕತ್ವದ ಪಟ್ಟ

    ವೆಲ್ಲಿಂಗ್ಟನ್: ಭಾರತ (India) ಹಾಗೂ ನ್ಯೂಜಿಲೆಂಡ್ (New Zealand) ನಡುವಿನ ಮೂರನೇ ಟಿ20 ಪಂದ್ಯದಿಂದ ಕೀವಿಸ್ ನಾಯಕ ಕೇನ್ ವಿಲಿಯಮ್ಸನ್ (Kane Williamson) ಹೊರನಡೆದಿದ್ದಾರೆ. ನಾಯಕನ ಅನುಪಸ್ಥಿತಿಯಲ್ಲಿ ಕಳೆದ ಪಂದ್ಯದ ಹ್ಯಾಟ್ರಿಕ್ ವೀರ ಟಿಮ್ ಸೌಥಿಗೆ (Tim Southee) ನಾಯಕತ್ವದ ಪಟ್ಟ ಕಟ್ಟಲಾಗಿದೆ.

    ವಿಲಿಯಮ್ಸನ್ ಮೆಡಿಕಲ್ ಚೆಕಪ್‌ಗೆ ಒಳಗಾಗುವ ಕಾರಣ ಮೂರನೇ ಟಿ20 ಪಂದ್ಯ ಆಡುತ್ತಿಲ್ಲ. ಅವರ ಬದಲಿಗೆ ಟಿಮ್ ಸೌಥಿ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ನ್ಯೂಜಿಲೆಂಡ್ ಕೋಚ್ ಗ್ಯಾರಿ ಸ್ಟೇಡ್ ತಿಳಿಸಿದ್ದಾರೆ. ಎರಡನೇ ಟಿ20 ಪಂದ್ಯದಲ್ಲಿ ಟಿಮ್ ಸೌಥಿ ಕೊನೆಯ ಓವರ್‌ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದು ಮಿಂಚಿದ್ದರು. ಇದನ್ನೂ ಓದಿ: ಶತಕ ಸಿಡಿಸಿ ಮೆರೆದ ಸೂರ್ಯ – ಕೀವಿಸ್ ಕಿವಿ ಹಿಂಡಿದ ಭಾರತ

    ಟೀಂ ಇಂಡಿಯಾ ವಿರುದ್ಧ ನ್ಯೂಜಿಲೆಂಡ್ ತವರಿನಲ್ಲಿ ಮೂರು ಟಿ20 ಪಂದ್ಯಗಳ ಸರಣಿ ಆಡುತ್ತಿದೆ. ಮೊದಲ ಪಂದ್ಯ ಮಳೆಯಿಂದ ರದ್ದಾದರೆ, ಎರಡನೇ ಪಂದ್ಯದಲ್ಲಿ ಭಾರತ 65 ರನ್‍ಗಳ ಭರ್ಜರಿ ಜಯ ಸಾಧಿಸಿ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ. ಇದನ್ನೂ ಓದಿ: ಸಿಕ್ಸರ್‌ ವೀರ ಸೂರ್ಯ Vs ಎಬಿಡಿ – ಇಬ್ಬರಲ್ಲಿ ಯಾರು ಬೆಸ್ಟ್‌? – ಟ್ವಿಟ್ಟರ್‌ನಲ್ಲಿ ಟ್ರೆಂಡ್‌

    ಕೊನೆಯ ಟಿ20 ಪಂದ್ಯದಿಂದ ಇದೀಗ ಕೇನ್ ವಿಲಿಯಮ್ಸನ್ ಹೊರಗುಳಿದಿದ್ದು, ಸರಣಿಯನ್ನು ಸಮಬಲಗೊಳಿಸಲು ನ್ಯೂಜಿಲೆಂಡ್ ತಂಡ ಹೋರಾಡಬೇಕಾಗಿದೆ. ಇತ್ತ ಭಾರತ ತಂಡ ನಾಯಕನ ಅನುಪಸ್ಥಿತಿಯ ಲಾಭವೆತ್ತಿ ಸರಣಿ ಗೆಲ್ಲುವ ತವಕದಲ್ಲಿದೆ.

    Live Tv
    [brid partner=56869869 player=32851 video=960834 autoplay=true]

  • ಭಾರತ-ಕಿವೀಸ್ ಸರಣಿ ಆರಂಭಕ್ಕೂ ಮುನ್ನ ಕಪ್ ಹಿಡಿದು ಹೊರಟ ವಿಲಿಯಮ್ಸನ್

    ಭಾರತ-ಕಿವೀಸ್ ಸರಣಿ ಆರಂಭಕ್ಕೂ ಮುನ್ನ ಕಪ್ ಹಿಡಿದು ಹೊರಟ ವಿಲಿಯಮ್ಸನ್

    ವೆಲ್ಲಿಂಗ್ಟನ್: ಟಿ20 ವಿಶ್ವಕಪ್ (T20 World Cup) ಸೆಮಿಫೈನಲ್‍ನಲ್ಲಿ ಸೋಲಿನ ಬಳಿಕ ನ್ಯೂಜಿಲೆಂಡ್ (New Zealand) ಮತ್ತು ಭಾರತ (India) ತಂಡ ದ್ವಿಪಕ್ಷೀಯ ಸರಣಿಗೆ ಸಿದ್ಧಗೊಂಡಿದೆ. ಕಿವೀಸ್ ಪ್ರವಾಸ ಕೈಗೊಂಡಿರುವ ಟೀಂ ಇಂಡಿಯಾ 3 ಟಿ20 ಮತ್ತು 3 ಏಕದಿನ ಪಂದ್ಯಗಳ ಸರಣಿ ಆಡಲಿದೆ.

    ನ.18 ರಿಂದ ಟಿ20 ಸರಣಿ ಆರಂಭವಾಗುತ್ತಿದೆ. ಈ ನಡುವೆ ಸರಣಿ ಆರಂಭಕ್ಕೂ ಮೊದಲೇ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ (Kane Williamson) ಕಪ್ ಹಿಡಿದು ಹೊರಟಿದ್ದಾರೆ. ಇಂದು ಎರಡೂ ತಂಡಗಳ ನಾಯಕರಾದ ವಿಲಿಯಮ್ಸನ್ ಮತ್ತು ಹಾರ್ದಿಕ್ ಪಾಂಡ್ಯ (Hardik Pandya)  ಟಿ20 ಸರಣಿಯ ಟ್ರೋಫಿ ಜೊತೆ ಫೋಟೋ ತೆಗೆಸಿಕೊಂಡರು. ಈ ವೇಳೆ ಫೋಟೋಶೂಟ್‍ಗೂ ಮುನ್ನ ಟ್ರೋಫಿ ಗಾಳಿಗೆ ಹಾರಿದೆ. ಪಕ್ಕದಲ್ಲಿದ್ದ ವಿಲಿಯಮ್ಸನ್ ಕೂಡಲೇ ಬೀಳುತ್ತಿದ್ದ ಟ್ರೋಫಿ ಹಿಡಿದಿದ್ದಾರೆ. ಅಲ್ಲದೆ ಟ್ರೋಫಿ ಜೊತೆ ಹೊರಡಲು ಸಿದ್ಧರಾದಂತೆ ಕಂಡು ಬಂದರು. ಇದನ್ನೂ ಓದಿ: ರಿಟೈನ್ ಪಟ್ಟಿಯಲ್ಲಿ RCB ಗೇಮ್ ಪ್ಲಾನ್ – 10 ತಂಡಗಳ ರಿಟೈನ್-ರಿಲೀಸ್‌ ಲಿಸ್ಟ್

    ಈ ಮೊದಲು ಫೋಟೋಗಾಗಿ ಇಬ್ಬರು ನಾಯಕರು Crocodile Bike ನಲ್ಲಿ ಬಂದರು. ಟಿ20 ಸರಣಿಯ ಮೂರು ಪಂದ್ಯಗಳು ನ.18, 20 ಮತ್ತು 22 ರಂದು ನಡೆಯಲಿದೆ. ಟಿ20 ಸರಣಿಯಲ್ಲಿ ಟೀಂ ಇಂಡಿಯಾವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ. 3 ಪಂದ್ಯಗಳ ಏಕದಿನ ಸರಣಿ ನ.25, 27 ಮತ್ತು 30 ರಂದು ನಡೆಯಲಿದ್ದು, ಟೀಂ ಇಂಡಿಯಾವನ್ನು ಶಿಖರ್ ಧವನ್ ಮುನ್ನಡೆಸಲಿದ್ದಾರೆ. ಟಿ20 ಮತ್ತು ಏಕದಿನ ತಂಡಕ್ಕೆ ಪ್ರತ್ಯೇಕ ನಾಯಕರನ್ನು ನೇಮಿಸಲಾಗಿದೆ. ಈ ಸರಣಿಯಿಂದ ರೋಹಿತ್ ಶರ್ಮಾ, ಕೊಹ್ಲಿ ಸಹಿತ ಅನುಭವಿ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ.

    ಟಿ20 ತಂಡ:
    ಹಾರ್ದಿಕ್ ಪಾಂಡ್ಯ (ನಾಯಕ), ರಿಷಬ್ ಪಂತ್, ಶುಭಮನ್ ಗಿಲ್, ಇಶಾನ್ ಕಿಶನ್, ದೀಪಕ್ ಹೂಡಾ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಾಹಲ್, ಕುಲ್‍ದೀಪ್ ಯಾದವ್, ಅರ್ಶ್‍ದೀಪ್ ಸಿಂಗ್, ಹರ್ಷಲ್ ಪಟೇಲ್ , ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್. ಇದನ್ನೂ ಓದಿ: ಐಪಿಎಲ್‌ಗೆ ಗುಡ್‌ಬೈ ಹೇಳಿದ್ರೂ ಮುಂಬೈ ತಂಡದಲ್ಲೇ ಇರಲಿದ್ದಾರೆ ಪೋಲಾರ್ಡ್‌

    ಏಕದಿನ ತಂಡ:
    ಶಿಖರ್ ಧವನ್ (ನಾಯಕ), ರಿಷಬ್ ಪಂತ್, ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಶಹಬಾಜ್ ಅಹ್ಮದ್, ಯಜುವೇಂದ್ರ ಚಾಹಲ್, ಕುಲ್‍ದೀಪ್ ಯಾದವ್, ಅರ್ಶ್‍ದೀಪ್ ಸಿಂಗ್, ದೀಪಕ್ ಚಾಹರ್, ಕುಲದೀಪ್ ಸೇನ್, ಉಮ್ರಾನ್ ಮಲಿಕ್.

    Live Tv
    [brid partner=56869869 player=32851 video=960834 autoplay=true]

  • ಪಾಕ್-ಕಿವೀಸ್ ಸೆಮಿಫೈನಲ್‌ – T20 ವಿಶ್ವಕಪ್ ಕ್ರಿಕೆಟ್‌ನಲ್ಲಿಂದು ಬಿಗ್ ಫೈಟ್

    ಪಾಕ್-ಕಿವೀಸ್ ಸೆಮಿಫೈನಲ್‌ – T20 ವಿಶ್ವಕಪ್ ಕ್ರಿಕೆಟ್‌ನಲ್ಲಿಂದು ಬಿಗ್ ಫೈಟ್

    ಕ್ಯಾನ್ಬೆರಾ: ನ್ಯೂಜಿಲೆಂಡ್ (New Zealand) ಹಾಗೂ ಪಾಕಿಸ್ತಾನ (Pakistan) ತಂಡಗಳು ಇಂದಿನ ಮೊದಲ ಸೆಮಿಫೈನಲ್ (1st Semi Final) ಪಂದ್ಯದಲ್ಲಿ ಸೆಣಸಾಡಲಿವೆ. ಇಂದಿನ ಪಂದ್ಯದಲ್ಲಿ ಗೆದ್ದು ಫೈನಲ್‌ಗೆ ಲಗ್ಗೆ ಹಾಕಲು ಉಭಯ ತಂಡಗಳು ರಣತಂತ್ರ ಹೆಣೆದಿವೆ.

    ಲೀಗ್ ಪಂದ್ಯಗಳಲ್ಲಿ ಬಲಿಷ್ಠ ತಂಡಗಳನ್ನ ಬಗ್ಗು ಬಡಿದಿರೋ ನ್ಯೂಜಿಲೆಂಡ್ (New Zealand), ಕೇವಲ ಒಂದು ಪಂದ್ಯದಲ್ಲಿ ಸೋಲುಂಡಿದೆ. ಇತ್ತ, ಪಾಕ್ ಪಡೆ ಲೀಗ್ ಪಂದ್ಯದಲ್ಲಿ ಆರಂಭಿಕ 2 ಪಂದ್ಯಗಳನ್ನ ಕೈಚೆಲ್ಲಿ ನಂತರ ಫಿನಿಕ್ಸ್‌ನಂತೆ ಎದ್ದು ಸೆಮಿಸ್‌ಗೆ ಎಂಟ್ರಿ ಕೊಟ್ಟಿದೆ. ಇದನ್ನೂ ಓದಿ: ನೆಟ್ ಪ್ರಾಕ್ಟೀಸ್ ವೇಳೆ ರೋಹಿತ್ ಶರ್ಮಾ ಬಲಗೈಗೆ ಪೆಟ್ಟು – ಟೀಂ ಇಂಡಿಯಾಗೆ ಆಘಾತ

    ಇಂದು ಮಧ್ಯಾಹ್ನ 1.30ಕ್ಕೆ ಇತ್ತಂಡಗಳು ಸಿಡ್ನಿಯ ಕ್ರೀಡಾಂಗಣದಲ್ಲಿ ಅಖಾಡಕ್ಕಿಳಿಯಲಿವೆ. ಇತ್ತಂಡಗಳಲ್ಲೂ ಬಲಿಷ್ಠ ಬ್ಯಾಟಿಂಗ್ ಹಾಗೂ ಬೌಲರ್‌ಗಳ ದಂಡೇ ಇದ್ದು ಭಾರೀ ಜಿದ್ದಾ-ಜಿದ್ದಿ ನಿರೀಕ್ಷಿಸಬಹುದಾಗಿದೆ. ಇದನ್ನೂ ಓದಿ: ಮುಂಬೈ ಗಲ್ಲಿಯಲ್ಲಿ ಅಭಿಮಾನಿಗಳ ಜೊತೆ ಕ್ರಿಕೆಟ್ ಆಡಿದ ಎಬಿಡಿ

    ನ್ಯೂಜಿಲೆಂಡ್ ಹಾಗೂ ಪಾಕ್ ತಂಡಗಳ ಟಿ-20 ವಿಶ್ವಕಪ್ (T20 Worldcup) ಮುಖಾಮುಖಿಯ ರೆಕಾರ್ಡ್ ನೋಡೋದಾದ್ರೆ, ಎರಡು ತಂಡಗಳು 6 ಬಾರಿ ಮುಖಾಮುಖಿಯಾಗಿದ್ದು, ಇದರಲ್ಲಿ ಪಾಕಿಸ್ತಾನ 4 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ರೆ, ನ್ಯೂಜಿಲೆಂಡ್ ಕೇವಲ 2 ಜಯ ಸಾಧಿಸಿದೆ. ಇಂದಿನ ಪಂದ್ಯದಲ್ಲಿ ಯಾರು ಗೆಲುವು ಸಾಧಿಸುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ಬಲಿಷ್ಠ ತಂಡಗಳ ಹಣಾ-ಹಣಿ ಇಂದು – ಐಪಿಎಲ್ ಪ್ರಿಯರಿಗೆ ಡಬಲ್ ಧಮಾಕ

    ಬಲಿಷ್ಠ ತಂಡಗಳ ಹಣಾ-ಹಣಿ ಇಂದು – ಐಪಿಎಲ್ ಪ್ರಿಯರಿಗೆ ಡಬಲ್ ಧಮಾಕ

    ಮುಂಬೈ: ತಲಾ 3 ಪಂದ್ಯಗಳನ್ನು ಗೆದ್ದು ವಿಶ್ವಾಸದಲ್ಲಿರುವ ಕನ್ನಡಿಗ ಮಯಾಂಕ್ ಅಗರ್ವಾಲ್ ನಾಯಕತ್ವದ ಕಿಂಗ್ಸ್ ಪಂಜಾಬ್ ಮತ್ತು ಕೇನ್ ವಿಲಿಯಮ್ಸನ್ ನಾಯಕತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಇಂದು ಸೆಣಸಲಿವೆ.

    ಸಂಜೆ 7.30ಕ್ಕೆ ನಡೆಯುವ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಹಾಗೂ ಹಾಲಿ ಚಾಂಪಿಯನ್ ಚೆನ್ನೈ ಸೂಪರ್‌ಕಿಂಗ್ಸ್ ತಂಡಗಳು ಹಣಾಹಣಿ ನಡೆಸಲಿವೆ. ಇದನ್ನೂ ಓದಿ: ಡಿಕೆ ಸ್ಫೋಟಕ ಫಿಫ್ಟಿ – ಕೊಹ್ಲಿ ಸ್ಟನ್ನಿಂಗ್ ಕ್ಯಾಚ್‌ – ಡೆಲ್ಲಿ ವಿರುದ್ಧ ಆರ್​ಸಿಬಿಗೆ 16 ರನ್‍ಗಳ ಜಯ

    IPL 2022 SRH (1)

    ಡಿ.ವೈ.ಪಾಟೀಲ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂಜಾಬ್ ಮತ್ತು ಎಸ್‌ಆರ್‌ಎಚ್ ನಡುವಿನ ಪಂದ್ಯವು ರೋಚಕ ಹಣಾಹಣಿಗೆ ಸಾಕ್ಷಿಯಾಗಲಿವೆ. ಎರಡೂ ತಂಡಗಳೂ ಈ ಟೂರ್ನಿಯಲ್ಲಿ ಸಿಹಿ, ಕಹಿಯನ್ನು ಸಮನಾಗಿ ಅನುಭವಿಸಿದ್ದು, 5ಕ್ಕೆ ತಲಾ 3 ಪಂದ್ಯಗಳಲ್ಲಿ ಜಯ ಸಾಧಿಸಿವೆ. ಈವರೆಗೆ 17 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, 5 ಪಂದ್ಯಗಳಲ್ಲಿ ಪಂಜಾಬ್ ಹಾಗೂ 12 ಪಂದ್ಯಗಳಲ್ಲಿ ಹೈದರಾಬಾದ್ ಗೆಲುವು ಸಾಧಿಸಿದೆ.

    ಮೊದಲೆರಡು ಪಂದ್ಯಗಳಲ್ಲಿ ಸೋತ ನಂತರ ಹೈದ್ರಾಬಾದ್ ತಂಡವು ಸತತ 3 ಪಂದ್ಯಗಳಲ್ಲಿ ಜಯ ಸಾಧಿಸಿತು. ಬ್ಯಾಟಿಂಗ್ ಲಯಕ್ಕೆ ಮರಳಿರುವ ಜೇಸನ್ ರಾಯ್ ಮತ್ತು ಕೇನ್ ವಿಲಿಯಮ್ಸನ್ ತಂಡವನ್ನು ಮುನ್ನಡೆಸುತ್ತಿದ್ದರೆ, ಜೇಸನ್ ಹೋಲ್ಡರ್, ಭುವನೇಶ್ವರ್ ಕುಮಾರ್, ರಶೀದ್ ಖಾನ್ ಬೌಲಿಂಗ್‌ನಲ್ಲಿ ತಮ್ಮ ಪ್ರಾಬಲ್ಯ ಮೆರೆಯುತ್ತಾ ಗೆಲುವಿನ ಹಾದಿಗೆ ತರುತ್ತಿದ್ದಾರೆ.

    IPL 2022 CSK (1)

    ಪಂಜಾಬ್ ತಂಡವು ಆರ್‌ಸಿಬಿ, ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳನ್ನು ಸೋಲಿಸಿದೆ. ಅಲ್ಲದೆ ತಾನು ಸೋತ ಎರಡು ಪಂದ್ಯಗಳಲ್ಲಿಯೂ ಉತ್ತಮ ಪ್ರದರ್ಶನವನ್ನೇ ನೀಡಿತ್ತು. ಮಯಾಂಕ್ ಅಗರ್ವಾಲ್, ಶಿಖರ್ ಧವನ್, ಹೊಸಪ್ರತಿಭೆ ಜಿತೇಶ್ ಶರ್ಮಾ ಉತ್ತಮ ಲಯದಲ್ಲಿದ್ದಾರೆ. ಇದನ್ನೂ ಓದಿ: 7 ವಿಕೆಟ್‌ಗಳಿಂದ ಗೆದ್ದ ಟೀಂ ಇಂಡಿಯಾಗೆ ಶೇ.20ರಷ್ಟು ದಂಡ

    ಆಲ್‌ರೌಂಡರ್‌ಗಳ ಸವಾಲ್
    ಮೊದಲ ಬಾರಿಗೆ ಐಪಿಎಲ್ ನಾಯಕತ್ವದ ಹೊಣೆ ಹೊತ್ತಿರುವ ಭಾರತ ಕ್ರಿಕೆಟ್ ತಂಡದ ಇಬ್ಬರು ಆಲ್‌ರೌಂಡರ್‌ಗಳಾದ ರವೀಂದ್ರ ಜಡೇಜಾ ಮತ್ತು ಹಾರ್ದಿಕ್ ಪಾಂಡ್ಯ ನಾಯಕತ್ವದ ತಂಡಗಳು ಇಂದು ಮುಖಾಮುಖಿಯಾಗವೆ. ಗುಜರಾತ್ ಹೊಸ ತಂಡದ ಸೇರ್ಪಡೆಯಿಂದ ಇದೇ ಮೊದಲಬಾರಿಗೆ ತಂಡಗಳು ಮುಖಾಮುಖಿಯಾಗುತ್ತಿದ್ದು, ಪಂದ್ಯವು ಸಂಜೆ 7.30ಕ್ಕೆ ಪುಣೆಯಲ್ಲಿರುವ ಮಹಾರಾಷ್ಟç ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಇದನ್ನೂ ಓದಿ: ಅಯ್ಯರ್‌ಗೆ 12 ಲಕ್ಷ ದಂಡ – ಐಪಿಎಲ್‌ನಲ್ಲಿ ದಂಡ ಹಾಕೋದು ಯಾಕೆ?

    IPL 2022 SRH (1)

    ಬಲಿಷ್ಠ ತಂಡಗಳ ಪೈಕಿ ಈಗಾಗಲೇ ವೋಟಿಂಗ್‌ಪೋಲ್ ನಡೆಸಲಾಗುತ್ತಿದ್ದು, ಪಂಜಾಬ್ ಗೆಲುವಿಗೆ 19,764 ಮಂದಿ, ಎಸ್‌ಆರ್‌ಎಚ್‌ಗೆ 20,554 ಮಂದಿ ಬೆಂಬಲಿಸಿದ್ದಾರೆ. ಅಂತೆಯೇ ಗುಜರಾತ್ ಟೈಟನ್ಸ್‌ಗೆ 9,682 ಮಂದಿ ಪ್ರೋತ್ಸಾಹಿಸಿದ್ದು, ಚೆನ್ನೈ 10,618 ಜನರ ಬೆಂಬಲ ಗಳಿಸಿದೆ. ಚೆನ್ನೈ ಈಗಾಗಲೇ ಐಪಿಎಲ್ ಕ್ರಮಾಂಕದಲ್ಲಿ ಕೆಳಕ್ಕೆ ಕುಸಿದಿದ್ದು, ಪ್ಲೆ-ಆಫ್ ತಲುಪಲು ಮುಂದಿನ ಎಲ್ಲ ಪಂದ್ಯಗಳಲ್ಲಿ ಗೆಲುವು ಸಾಧಿಸುವುದು ಅನಿವಾರ್ಯವಾಗಿದೆ.

  • ಜೇಸನ್ ರಾಯ್ ಅಬ್ಬರಕ್ಕೆ ಮಕಾಡೆ ಮಲಗಿದ ರಾಜಸ್ಥಾನ್ ರಾಯಲ್ಸ್: ಹೈದರಾಬಾದ್‍ಗೆ ಜಯ

    ಜೇಸನ್ ರಾಯ್ ಅಬ್ಬರಕ್ಕೆ ಮಕಾಡೆ ಮಲಗಿದ ರಾಜಸ್ಥಾನ್ ರಾಯಲ್ಸ್: ಹೈದರಾಬಾದ್‍ಗೆ ಜಯ

    ದುಬೈ: ರಾಜಸ್ಥಾನ್ ರಾಯಲ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ 7 ವಿಕೆಟ್‍ಗಳ ಭರ್ಜರಿ ಜಯಗಳಿಸುವ ಮೂಲಕ ಐಪಿಎಲ್‌ ಟೂರ್ನಿಯಲ್ಲಿ ಎರಡನೇ ಜಯ ದಾಖಲಿಸಿದೆ.

    ರಾಜಸ್ಥಾನ ನೀಡಿದ್ದ 165 ರನ್‍ಗಳ ಗುರಿಯನ್ನು ಬೆನ್ನತ್ತಿದ ಹೈದರಾಬಾದ್, 18.3 ಓವರ್‌ಗಳಲ್ಲಿ 167 ರನ್ ಗಳಿಸಿ ಜಯದ ನಗೆ ಬೀರಿತು. ಈ ಮೂಲಕ ಯುಎಇನಲ್ಲಿ ಮೊದಲ ಜಯವನ್ನು ತನ್ನದಾಗಿಸಿಕೊಂಡಿತು.

    ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್, ದುಬೈ ಪಿಚ್‍ನಲ್ಲಿ ನಿಧಾನವಾಗಿ ಉತ್ತಮ ಮೊತ್ತ ಕಲೆ ಹಾಕಿತು. ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 164ರನ್ ಪೇರಿಸಿತು. ರಾಜಸ್ಥಾನ್ ಪರ ಜೈಸ್ವಾಲ್ 36 ರನ್ (23 ಎಸೆತ, 5 ಬೌಂಡರಿ, 1 ಸಿಕ್ಸರ್) ಗಳಿಸಿದರು. ಮಹಿಪಾಲ್ ಲೊಮರ್ 29ರನ್ (28 ಎಸೆತ, 1 ಬೌಂಡರಿ, 1 ಸಿಕ್ಸರ್) ಸಿಡಿಸಿದರೆ, ನಾಯಕ ಸಂಜು ಸ್ಯಾಮ್ಸನ್ 82 ರನ್ (57 ಎಸೆತ, 7 ಬೌಂಡರಿ, 3 ಸಿಕ್ಸರ್) ಸಿಡಿಸುವ ಮೂಲಕ ಹೈದರಾಬಾದ್ ಬೌಲರ್‍ಗಳನ್ನು ಬೆಂಡೆತ್ತಿದರು. ಸನ್ ರೈಸರ್ಸ್ ಹೈದರಾಬಾದ್ ಪರ ಸಿದ್ದಾರ್ಥ್ ಕೌಲ್ 2, ರಶೀದ್ ಖಾನ್ 1, ಭುವನೇಶ್ವರ್ ಕುಮಾರ್ 1 ವಿಕೆಟ್ ಪಡೆದರು. ಇದನ್ನೂ ಓದಿ: ಟಿ20 ಕ್ರಿಕೆಟ್‍ನಲ್ಲಿ ವಿರಾಟ್ ಕೊಹ್ಲಿ 10ಏ ಕಿಂಗ್

    165 ರನ್‍ಗಳ ಗುರಿ ಬೆನ್ನತ್ತಿದ ಹೈದರಾಬಾದ್‍ಗೆ ಜೇಸನ್ ರಾಯ್ ಹಾಗೂ ವೃದ್ಧಿಮಾನ್ ಸಹಾ ಉತ್ತಮ ಆರಂಭ ಒದಗಿಸಿದರು. ಮೊದಲ ವಿಕೆಟ್‍ಗೆ ಈ ಜೋಡಿ, 5.1 ಓವರ್‌ಗಳಲ್ಲಿ 57 ರನ್ ಜೊತೆಯಾಟವಾಡುವ ಮೂಲಕ ತಂಡಕ್ಕೆ ಭದ್ರ ಅಡಿಪಾಯ ಹಾಕಿಕೊಟ್ಟರು. ಉತ್ತಮವಾಗಿ ಆಡುತ್ತಿದ್ದ ವೃದ್ಧಿಮಾನ್ ಸಹಾ 18 ರನ್ (11 ಎಸೆತ, 2 ಬೌಂಡರಿ, 1 ಸಿಕ್ಸರ್) ಮಹಿಪಾಲ್‍ಗೆ ವಿಕೆಟ್ ಒಪ್ಪಿಸಿದರು. ರಾಜಸ್ಥಾನ್ ಬೌಲರ್‌ಗಳನ್ನು ಮನ ಬಂದಂತೆ ದಂಡಿಸಿದ ಜೇಸನ್ ರಾಯ್ 60 ರನ್ (42 ಎಸೆತ, 8 ಬೌಂಡರಿ, 1 ಸಿಕ್ಸರ್) ಚಚ್ಚಿ ಚೇತನ್ ಸಕರಿಯಾಗೆ ವಿಕೆಟ್ ಕೊಟ್ಟು ಹೊರ ನಡೆದರು. ನಂತರ ನಾಯಕ ಕೇನ್ ವಿಲಿಯಮ್ಸನ್ ಹಾಗೂ ಅಭಿಷೇಕ್ ಶರ್ಮಾ ಉತ್ತಮ ಆಟವಾಡಿ ಸನ್ ರೈಸರ್ಸ್ ಹೈದರಾಬಾದ್‍ಗೆ ಗೆಲುವು ದೊರಕಿಸಿಕೊಟ್ಟರು. ಇದನ್ನೂ ಓದಿ: 5 ಎಸೆತದಲ್ಲಿ 21 ರನ್ ಚಚ್ಚಿದ ಜಡೇಜಾ – ಕೊನೆಯ ಎಸೆತದಲ್ಲಿ ಚೆನ್ನೈಗೆ ರೋಚಕ ಜಯ

    ಭರ್ಜರಿ ಬ್ಯಾಟಿಂಗ್ ಮಾಡಿದ ನಾಯಕ ಕೇನ್ ವಿಲಿಯಮ್ಸನ್, 51 ರನ್ (41 ಎಸೆತ, 5 ಬೌಂಡರಿ, 1 ಸಿಕ್ಸರ್) ಸಿಡಿಸುವ ಮೂಲಕ ತಂಡಕ್ಕೆ ಗೆಲುವು ತಂದುಕೊಟ್ಟರು. ಇವರಿಗೆ ಉತ್ತಮ ಸಾಥ್ ನೀಡಿದ ಅಭಿಷೇಕ್ ಶರ್ಮಾ 21 ರನ್ (16 ಎಸೆತ, 1 ಬೌಂಡರಿ, 1 ಸಿಕ್ಸರ್) ಚಚ್ಚುವ ಮೂಲಕ ತಂಡದ ಗೆಲುವಿಗೆ ಸಹಕಾರಿಯಾದರು.

  • ದುಬೈನಲ್ಲಿಂದು ಡೆಲ್ಲಿ ಕ್ಯಾಪಿಟಲ್ಸ್ – ಸನ್ ರೈಸರ್ಸ್ ನಡುವೆ ಕಾದಾಟ

    ದುಬೈನಲ್ಲಿಂದು ಡೆಲ್ಲಿ ಕ್ಯಾಪಿಟಲ್ಸ್ – ಸನ್ ರೈಸರ್ಸ್ ನಡುವೆ ಕಾದಾಟ

    ದುಬೈ: ಐಪಿಎಲ್ ದ್ವಿತೀಯಾರ್ಧದ 4ನೇ ಪಂದ್ಯದಲ್ಲಿ ಇಂದು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಹೈದರಾಬಾದ್ ಸನ್ ರೈಸರ್ಸ್ ತಂಡಗಳು ಸೆಣಸಾಡಲಿವೆ.

    ಈವರೆಗೂ ನಡೆದಿರುವ ಒಟ್ಟು 8 ಪಂದ್ಯಗಳಲ್ಲಿ, 6 ಪಂದ್ಯಗಳನ್ನು ಗೆದ್ದಿರುವ ಡೆಲ್ಲಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಏಳು ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯ ಗೆದ್ದಿರುವ ಸನ್ ರೈಸರ್ಸ್ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಇದನ್ನೂ ಓದಿ: ಕೊನೆಯ ಓವರಿನಲ್ಲಿ ತ್ಯಾಗಿ ಜಾದೂ – ರಾಜಸ್ಥಾನಕ್ಕೆ 2 ರನ್‍ಗಳ ರೋಚಕ ಜಯ

    ಭಾರತದಲ್ಲಿ ನಡೆದ ಮೊದಲಾರ್ಧದ ಐಪಿಎಲ್ ಪಂದ್ಯಗಳಲ್ಲಿ ಸಾಲು ಸಾಲು ಪಂದ್ಯಗಳನ್ನು ಸೋತಿರುವ ಹೈದರಾಬಾದ್ ಸನ್ ರೈಸರ್ಸ್, ಟೂರ್ನಿಯಲ್ಲಿ ಮತ್ತೆ ಗೆಲುವಿನ ಲಯಕ್ಕೆ ಮರಳಲು ಸಿದ್ಧತೆ ನಡೆಸಿದೆ. ಟೂರ್ನಿಯಲ್ಲಿ ಸತತ ಗೆಲುವಿನೊಂದಿಗೆ ಅಬ್ಬರಿಸುತ್ತಿರುವ ಡೆಲ್ಲಿ ಚೊಚ್ಚಲ ಐಪಿಎಲ್ ಕಿರೀಟ ಗೆಲ್ಲುವ ತವಕದಲ್ಲಿದೆ. ಉಭಯ ತಂಡದಲ್ಲೂ ಸ್ಟಾರ್ ಆಟಗಾರರ ಪಡೆಯೇ ಇದೆ. ಇದನ್ನೂ ಓದಿ: ಸ್ಟೇಡಿಯಂನಲ್ಲಿ ಮಹಿಳಾ ಪ್ರೇಕ್ಷಕರು ಇದ್ದಾರೆ, ಪ್ರಸಾರ ಮಾಡಬೇಡಿ – ಅಫ್ಘಾನಿಸ್ಥಾನದಲ್ಲಿ ಐಪಿಎಲ್ ಬ್ಯಾನ್

    ಉಭಯ ತಂಡಗಳ ಬಲಾಬಲ ನೋಡುವುದಾದರೆ ಹೈದರಾಬಾದ್‍ಗಿಂತ, ಡೆಲ್ಲಿ ತಂಡ ಸಮತೋಲನದಿಂದ ಕೂಡಿದೆ. ಡೆಲ್ಲಿ ತಂಡದ ಬ್ಯಾಟಿಂಗ್ ಬಳಗದಲ್ಲಿ ಪೃಥ್ವಿ ಶಾ, ಶಿಖರ್ ಧವನ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ಶಿಮ್ರಾನ್ ಹೆಟ್ಮಿಯರ್ ರಂತ ಹೊಡಿಬಡಿ ಆಟಗಾರರಿದ್ದಾರೆ. ಪ್ರಸ್ತುತ ಈ ಆಟಗಾರರೆಲ್ಲ ಫಾರ್ಮ್‍ನಲ್ಲಿರುವುದು ಡೆಲ್ಲಿ ತಂಡಕ್ಕೆ ಪ್ಲಸ್ ಆಗಲಿದೆ. ಇನ್ನು ಬೌಲಿಂಗ್ ವಿಭಾಗದಲ್ಲಿ ಆರ್, ಅಶ್ವಿನ್, ಅಮಿತ್ ಮಿಶ್ರಾ, ಕಗಿಸೊ ರಬಾಡ, ಎದುರಾಳಿ ತಂಡದ ಆಟಗಾರರನ್ನು ಕಟ್ಟಿಹಾಕಬಲ್ಲ ಸಾಮರ್ಥ್ಯ ಹೊಂದಿದ್ದಾರೆ.

    ಹೈದರಾಬಾದ್ ತಂಡದಲ್ಲಿ ನಾಯಕ ಕೇನ್ ವಿಲಿಯಮ್‍ಸನ್, ಡೇವಿಡ್ ವಾರ್ನರ್, ಮನೀಶ್ ಪಾಂಡೆ, ವಿಜಯ್ ಶಂಕರ್ ಬ್ಯಾಟಿಂಗ್ ವಿಭಾಗದಲ್ಲಿ ತಂಡಕ್ಕೆ ಬಲ ತುಂಬಾಲಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಚಾಂಪಿಯನ್ ಬೌಲರ್ ರಶೀದ್ ಖಾನ್, ಭುವನೇಶ್ವರ್ ಕುಮಾರ್, ಟಿ.ನಟರಾಜನ್, ಸಂದೀಪ್ ಶರ್ಮಾ ಎದುರಾಳಿಗಳನ್ನು ಕಟ್ಟಿಹಾಕಬಲ್ಲರು. ಆದರೆ ಭಾರತದಲ್ಲಿ ಸನ್ ರೈಸರ್ಸ್ ತಂಡದ ಆಟಗಾರರು ಹೇಳಿಕೊಳ್ಳುವಂತ ಪ್ರದರ್ಶನ ನೀಡದಿಲ್ಲದಿರುವು ತಂಡಕ್ಕೆ ಕೊಂಚ ಹಿನ್ನಡೆಯಾಗಬಲ್ಲದು. ಅಲ್ಲದೆ ಸ್ಟಾರ್ ಆಟಗಾರ ಜಾನಿ ಬೈರ್ ಸ್ಟೊ ಈ ಬಾರಿ ಐಪಿಎಲ್‍ನಲ್ಲಿ ಆಡದಿರಲು ನಿರ್ಧಾರಿಸಿದ್ದು ತಂಡಕ್ಕೆ ದೊಡ್ಡ ಹೊಡೆತ ಬಿದ್ದಿದೆ.

    ಡೆಲ್ಲಿ ತಂಡದಲ್ಲಿ ನಾಯಕ ರಿಷಭ್ ಪಂತ್ ಉತ್ತಮ ಫಾರ್ಮ್‍ನಲ್ಲಿದ್ದು, ಇಂದು ಕೂಡ ಉತ್ತಮ ಪ್ರದರ್ಶನ ನೀಡುವ ಹಂಬಲದಲ್ಲಿದ್ದಾರೆ. ಇನ್ನು ಸೋತು ಸುಣ್ಣವಾಗಿರುವ ಹೈದಾರಬಾದ್ ತಂಡ ಗೆಲುವಿನ ಟ್ರ್ಯಾಕ್‍ಗೆ ಮರಳುವ ತವಕದಲ್ಲಿದೆ. ರಾತ್ರಿ 7:30ಕ್ಕೆ ಪಂದ್ಯ ಆರಂಭಗೊಳ್ಳಲಿದ್ದು ಗೆಲುವಿಗಾಗಿ ಉಭಯ ತಂಡಗಳು ಕಾದಾಟ ನಡೆಸಲಿವೆ.

  • WTC ಫೈನಲ್ ಟಾಸ್ ಗೆದ್ದ ಕೇನ್ ವಿಲಿಯಮ್ಸನ್-ಬ್ಯಾಟಿಂಗ್‍ ಆರಂಭಿಸಿದ ಭಾರತ

    WTC ಫೈನಲ್ ಟಾಸ್ ಗೆದ್ದ ಕೇನ್ ವಿಲಿಯಮ್ಸನ್-ಬ್ಯಾಟಿಂಗ್‍ ಆರಂಭಿಸಿದ ಭಾರತ

    ಲಂಡನ್: ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಐತಿಹಾಸಿಕ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದ ಟಾಸ್ ಗೆದ್ದ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಬೌಲಿಂಗ್ ಆಯ್ದುಕೊಂಡಿದ್ದಾರೆ.

    ಇಂಗ್ಲೆಂಡ್‍ನ ಸೌಥಂಪ್ಟನ್‍ನಲ್ಲಿ ನಡೆಯುತ್ತಿರುವ ಪಂದ್ಯಕ್ಕೆ ಶುಕ್ರವಾರ ಮಳೆ ಅಡ್ಡಿಯಾಗಿತ್ತು. ಹಾಗಾಗಿ ಇಂದಿನಿಂದ ಪಂದ್ಯ ಆರಂಭವಾಗಿದೆ. ಇಂದು ಟಾಸ್ ಪ್ರಕ್ರಿಯೆ ನಡೆದು ಕೇನ್ ವಿಲಿಯಮ್ಸನ್ ಭಾರತ ತಂಡವನ್ನು ಬ್ಯಾಟಿಂಗ್‍ಗೆ ಆಹ್ವಾನಿಸಿದ್ದಾರೆ. ಭಾರತ ಪರ ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ಆರಂಭಿಕರಾಗಿ ಕಣಕ್ಕಿಳಿದಿದ್ದಾರೆ. ಇದನ್ನೂ ಓದಿ: 18 ವರ್ಷಗಳಿಂದ ಐಸಿಸಿ ಟೂರ್ನಿಯಲ್ಲಿ ಕೀವಿಸ್ ವಿರುದ್ಧ ಭಾರತ ಗೆದ್ದಿಲ್ಲ – ಈ ಬಾರಿ ಗೆಲುವು ಯಾರಿಗೆ?

    ಶುಕ್ರವಾರ ಪಂದ್ಯ ಆರಂಭವಾಗಬೇಕಿತ್ತು ಅದರೆ ಮಳೆಯಿಂದ ಟಾಸ್ಕ್ ಪ್ರಕ್ರಿಯೆ ನಡೆಸಲು ಸಾಧ್ಯವಾಗಿರಲಿಲ್ಲ. ಬಳಿಕ ಮಳೆ ಬಿಟ್ಟರು ಕೂಡ ಮೈದಾನ ಒದ್ದೆಯಾಗಿದ್ದರಿಂದಾಗಿ ಪಂದ್ಯವನ್ನು ಇಂದಿಗೆ ಮುಂದೂಡಲ್ಪಟ್ಟಿತ್ತು. ಇದೀಗ ವಿಶ್ವದ ಎರಡು ಬಲಾಢ್ಯ ತಂಡಗಳು ಟೆಸ್ಟ್ ವಿಶ್ವಚಾಂಪಿಯನ್ ಪಟ್ಟಕ್ಕಾಗಿ ಸೆಣಸಾಡುತ್ತಿವೆ.

  • ಕೊಹ್ಲಿ, ವಿಲಿಯಮ್ಸನ್ ನಾಯಕತ್ವ ರೆಕಾರ್ಡ್ – ಯಾರು ಬೆಸ್ಟ್ ?

    ಕೊಹ್ಲಿ, ವಿಲಿಯಮ್ಸನ್ ನಾಯಕತ್ವ ರೆಕಾರ್ಡ್ – ಯಾರು ಬೆಸ್ಟ್ ?

    ಲಂಡನ್: ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವೆ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್‍ಗೆ ಇನ್ನೂ ಎರಡು ದಿನ ಮಾತ್ರ ಬಾಕಿ ಉಳಿದುಕೊಂಡಿದೆ. ಭಾರತ ತಂಡವನ್ನು ವಿರಾಟ್ ಕೊಹ್ಲಿ ಮುನ್ನಡೆಸಿದರೆ ನ್ಯೂಜಿಲೆಂಡ್ ತಂಡವನ್ನು ಕೇನ್ ವಿಲಿಯಮ್ಸನ್ ಮುನ್ನಡೆಸುತ್ತಿದ್ದಾರೆ. ಇವರಿಬ್ಬರು ಕೂಡ ನಾಯಕತ್ವದಲ್ಲಿ ಮತ್ತು ವೈಯಕ್ತಿಕವಾಗಿ ತಮ್ಮ ತಮ್ಮ ತಂಡಕ್ಕೆ ಬೆನ್ನೆಲುಬಾಗಿ ನಿಂತಿದ್ದಾರೆ.

    ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್‍ಗೆ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಆಯ್ಕೆಗೊಳ್ಳುವ ಮೊದಲು ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಒಟ್ಟು 60 ಟೆಸ್ಟ್ ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿ 36 ಪಂದ್ಯಗಳನ್ನು ಗೆದ್ದು, 14 ಪಂದ್ಯಗಳಲ್ಲಿ ಸೋತು 10 ಪಂದ್ಯಗಳನ್ನು ಡ್ರಾ ಮಾಡಿಕೊಂಡಿದ್ದಾರೆ.

    ನ್ಯೂಜಿಲೆಂಡ್ ತಂಡದ ನಾಯಕ ವಿಲಿಯಮ್ಸನ್, ಒಟ್ಟು 36 ಟೆಸ್ಟ್ ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿ 21 ಪಂದ್ಯ ಜಯ, 8 ಪಂದ್ಯ ಸೋಲು ಮತ್ತು 7 ಪಂದ್ಯ ಡ್ರಾ ಮಾಡಿಕೊಂಡಿದ್ದಾರೆ. ಇದನ್ನೂ ಓದಿ:ಲಂಕಾ ಪ್ರವಾಸಕ್ಕೆ ಶಿಖರ್ ಧವನ್ ನಾಯಕ-ತಂಡದಲ್ಲಿ ಮೂವರು ಕನ್ನಡಿಗರಿಗೆ ಸ್ಥಾನ

    ವಿರಾಟ್ ಭಾರತ ತಂಡದ ಪ್ರಮುಖ ಬ್ಯಾಟಿಂಗ್ ಅಸ್ತ್ರವಾದರೆ, ವಿಲಿಯಮ್ಸನ್ ನ್ಯೂಜಿಲೆಂಡ್ ತಂಡದ ಪ್ರಮುಖ ಶಕ್ತಿ. ಇವರಿಬ್ಬರು ನಾಯಕತ್ವದೊಂದಿಗೆ ತಮ್ಮ ವೈಯಕ್ತಿಕ ದಾಖಲೆಯನ್ನು ಬರೆದುಕೊಂಡಿದ್ದಾರೆ. ಭಾರತವನ್ನು ಮುನ್ನಡೆಸಿದ 60 ಟೆಸ್ಟ್ ಪಂದ್ಯದಲ್ಲಿ ವಿರಾಟ್ ಒಟ್ಟು 5,392 ರನ್ ಗಳಿಸಿದ್ದು ಇದರಲ್ಲಿ 20 ಶತಕಗಳು ದಾಖಲಾಗಿದೆ. ಸೌತ್ ಆಫ್ರಿಕಾ ವಿರುದ್ಧ 2019ರಲ್ಲಿ ಸಿಡಿಸಿದ 254 ರನ್ ವೈಯಕ್ತಿಕ ಅಧಿಕ ಮೊತ್ತವಾಗಿದೆ. ಇತ್ತ ವಿಲಿಯಮ್ಸನ್ ಒಟ್ಟು 36 ಟೆಸ್ಟ್ ಪಂದ್ಯಗಳಿಂದ 3092 ರನ್ ಕಳೆಹಾಕಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧ ಸಿಡಿಸಿದ 251 ರನ್ ವಿಲಿಯಮ್ಸನ್ ಅವರ ವೈಯಕ್ತಿಕ ಅಧಿಕ ರನ್ ಆಗಿದೆ.

    ಈ ಇಬ್ಬರು ನಾಯಕರು ಕೂಡ ಗೆಲುವಿನ ಪಂದ್ಯದಲ್ಲಿ ಮತ್ತು ಪರಸ್ಪರ ಎದುರಾಳಿಯಾಗಿ ಕೂಡ ದಾಖಲೆ ಹೊಂದಿದ್ದು, ವಿರಾಟ್ ಕೊಹ್ಲಿ ಭಾರತ ಗೆದ್ದಂತಹ 36 ಪಂದ್ಯಗಳಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿ 20 ಶತಕ ಸಹಿತ 3328 ರನ್ ಸಿಡಿಸಿದ್ದಾರೆ. ಅಲ್ಲದೆ ನ್ಯೂಜಿಲೆಂಡ್ ವಿರುದ್ಧ 5 ಪಂದ್ಯಗಳಲ್ಲಿ ಕ್ಯಾಪ್ಟನ್ ಆಗಿ ಕಾರ್ಯ ನಿರ್ವಹಿಸಿ 3 ಪಂದ್ಯ ಗೆದ್ದು 2 ಪಂದ್ಯ ಸೋತಿದ್ದಾರೆ.  ಇದನ್ನೂ ಓದಿ: ಕೊಹ್ಲಿಗೆ ಓರ್ವ ನ್ಯೂಜಿಲೆಂಡ್ ಬೌಲರ್‌ನಿಂದ ಕಂಟಕವಿದೆ ಎಂದ ಬಾಲ್ಯದ ಕೋಚ್

    ವಿಲಿಯಮ್ಸನ್ ನ್ಯೂಜಿಲೆಂಡ್ ಗೆದ್ದಂತಹ 21 ಪಂದ್ಯಗಳಲ್ಲಿ 2,210 ರನ್ ಹೊಡೆದಿದ್ದಾರೆ. ಭಾರತ ವಿರುದ್ಧ ಈವರೆಗೆ ಒಟ್ಟು 4 ಪಂದ್ಯಗಳಲ್ಲಿ ನಾಯಕತ್ವ ನಿರ್ವಹಿಸಿ 2 ಪಂದ್ಯ ಗೆದ್ದು 2 ಪಂದ್ಯ ಸೋತಿದ್ದಾರೆ.  ಇದನ್ನೂ ಓದಿ:ಅಂದು ಧೋನಿಯೊಂದಿಗಿದ್ದ ಪುಟ್ಟ ಬಾಲಕ ಇಂದು ಸ್ಟಾರ್ ಕ್ರಿಕೆಟರ್!

    ಈ ಎಲ್ಲಾ ಅಂಕಿ ಅಂಶಗಳನ್ನು ನೋಡಿದಾಗ ಇಬ್ಬರು ನಾಯಕರು ಕೂಡ ಅವರವರ ತಂಡಕ್ಕೆ ಪ್ರಮುಖ ಅಸ್ತ್ರವಾಗಿ ಗೋಚರಿಸುತ್ತಿದ್ದು, ಯಾರು ಈ ಬಾರಿ ನಾಯಕತ್ವದಲ್ಲಿ ಯಶಸ್ಸು ಕಂಡು ಟೆಸ್ಟ್ ಚಾಂಪಿಯನ್‍ಶಿಪ್ ಗೆದ್ದ ನಾಯಕರಾಗಿ ಹೊರಹೊಮ್ಮುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.

  • ಕೊಹ್ಲಿ, ವಿಲಿಯಮ್ಸನ್ ನಡುವಿನ ನಾಯಕತ್ವ ವಿಭಿನ್ನತೆ ನೋಡಲು ಕಾತುರ-ಬ್ರೆಟ್ ಲೀ

    ಕೊಹ್ಲಿ, ವಿಲಿಯಮ್ಸನ್ ನಡುವಿನ ನಾಯಕತ್ವ ವಿಭಿನ್ನತೆ ನೋಡಲು ಕಾತುರ-ಬ್ರೆಟ್ ಲೀ

    ಸಿಡ್ನಿ: ಭಾರತ ಹಾಗೂ ನ್ಯೂಜಿಲ್ಯಾಂಡ್ ನಡುವೆ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್‍ಗೆ ಇನ್ನೂ ಕೆಲವೇ ದಿನಗಳು ಬಾಕಿ ಉಳಿದುಕೊಂಡಿದೆ. ಈ ನಡುವೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ನ್ಯೂಜಿಲ್ಯಾಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ನಡುವೆ ಇರುವಂತಹ ನಾಯಕತ್ವದ ವಿಭಿನ್ನತೆಯನ್ನು ನೋಡಲು ಕಾತುರನಾಗಿದ್ದೇನೆ ಎಂದು ಆಸ್ಟ್ರೇಲಿಯಾ ತಂಡದ ಮಾಜಿ ವೇಗಿ ಬ್ರೆಟ್ ಲೀ ತಿಳಿಸಿದ್ದಾರೆ.

    ಸ್ಥಳೀಯ ಮಾಧ್ಯಮವೊಂದರ ಸಂದರ್ಶನದಲ್ಲಿ ಭಾಗವಹಿಸಿ ಮಾತನಾಡಿದ ಬ್ರೆಟ್ ಲೀ, ಮುಂದೆ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್‍ನ ಎರಡು ತಂಡದ ನಾಯಕರ ನಾಯಕತ್ವ ಮತ್ತು ಆಟ ವಿಭಿನ್ನವಾಗಿದೆ ವಿಲಿಯಮ್ಸನ್ ಶಾಂತಚಿತ್ತದ ನಾಯಕನಾದರೆ, ಕೊಹ್ಲಿ ಆಕ್ರಮಣಕಾರಿ ನಾಯಕತ್ವವನ್ನು ತೋರುತ್ತಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ:ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್‍ಗೆ ಭಾರತ ತಂಡ ಪ್ರಕಟ -ಮೂವರು ಕನ್ನಡಿಗರಿಗೆ ಸ್ಥಾನ

    ವಿರಾಟ್ ನಾಯಕತ್ವ ಮತ್ತು ಬ್ಯಾಟಿಂಗ್ ಎರಡರಲ್ಲೂ ಆಕ್ರಮಣಕಾರಿಯಾಗಿ ಕಾಣಿಸಿಕೊಂಡರೆ, ವಿಲಿಯಮ್ಸನ್ ಶಾಂತಚಿತ್ತರಾಗಿ ನಾಯಕತ್ವ ನಿಭಾಯಿಸುತ್ತಾರೆ ಇದರೊಂದಿಗೆ ಅವರು ಸಮಯಕ್ಕೆ ಸರಿಯಾಗಿ ಬ್ಯಾಟಿಂಗ್‍ನಲ್ಲಿ ಆಕ್ರಮಣಕಾರಿ ಆಟಕ್ಕೆ ಮೊರೆ ಹೋಗುತ್ತಾರೆ ಎಂದಿದ್ದಾರೆ. ಇದನ್ನೂ ಓದಿ: ರೆಟ್ರೋ ಶೈಲಿಯ ಜೆರ್ಸಿಯಲ್ಲಿ ಮಿಂಚುತ್ತಿದ್ದಾರೆ ಟೀಂ ಇಂಡಿಯಾ ಆಟಗಾರರು

    ಈ ಇಬ್ಬರೂ ಆಟಗಾರರ ಆಟ ಮತ್ತು ನಾಯಕತ್ವ ಗುಣ ಬೇರೆ ಬೇರೆಯಾಗಿದ್ದು, ವಿಲಿಯಮ್ಸನ್ ಬೋರ್ ಆಗದ ರೀತಿಯಲ್ಲಿ ಸಾಂಪ್ರಾದಾಯಿಕ ನಾಯಕತ್ವನ್ನು ನಿಭಾಯಿಸುತ್ತಿದ್ದಾರೆ ಮತ್ತು ಅವರ ಕ್ರಿಕೆಟ್ ಜ್ಞಾನ ಮೆಚ್ಚುವಂತದ್ದಾಗಿದೆ. ಕೊಹ್ಲಿ ಕೂಡ ಕ್ರಿಕೆಟ್‍ನಲ್ಲಿ ಸಾಕಷ್ಟು ಅನುಭವ ಹೊಂದಿದ್ದು ಇದೀಗ ಈ ಇಬ್ಬರು ವಿಭಿನ್ನ ನಾಯಕರ ಕಾದಾಟ ನೋಡಲು ಕಾತುರನಾಗಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕ್ರಿಕೆಟ್ ವಿಶ್ವಕಪ್‍ಗಾಗಿ ಐಸಿಸಿ ಮಹತ್ವದ ನಿರ್ಧಾರ – ಬದಲಾವಣೆಯ ಪರ್ವ ಆರಂಭ

    ಭಾರತ ಹಾಗೂ ನ್ಯೂಜಿಲ್ಯಾಂಡ್ ತಂಡಗಳ ನಡುವೆ ಟೆಸ್ಟ್ ಚಾಂಪಿಯನ್‍ಶಿಪ್ ಜೂನ್ 18ರಿಂದ ಸೌಥಾಂಪ್ಟನ್‍ನಲ್ಲಿ ನಡೆಯಲಿದ್ದು, ಈಗಾಗಲೇ ಭಾರತ ತಂಡ ಇಂಗ್ಲೆಂಡ್‍ನಲ್ಲಿ ಕ್ವಾರಂಟೈನ್‍ಗೆ ಒಳಗಾಗಿದೆ.