Tag: Kangana

  • ಪಹಲ್ಗಾಮ್ ಉಗ್ರರ ದಾಳಿ ಖಂಡಿಸಿದ ಬಾಲಿವುಡ್ ಸ್ಟಾರ್ಸ್‌

    ಪಹಲ್ಗಾಮ್ ಉಗ್ರರ ದಾಳಿ ಖಂಡಿಸಿದ ಬಾಲಿವುಡ್ ಸ್ಟಾರ್ಸ್‌

    ಹಲ್ಗಾಮ್‌ನಲ್ಲಿ (Pahalgam Terrorist Attack) ನಡೆದಿರುವ ವಿಶ್ವಾಸಘಾತುಕ ಕೃತ್ಯ ಮತ್ತು ಅಮಾನವೀಯ ಹಿಂಸಾಚಾರದ ಬಗ್ಗೆ ದುಃಖ ಮತ್ತು ಕೋಪವನ್ನು ವ್ಯಕ್ತಪಡಿಸಲು ಪದಗಳು ಸಾಲದು ಎಂದು ಶಾರುಖ್ ಖಾನ್ ಖಂಡಿಸಿದ್ದಾರೆ. ಉಗ್ರರ ಅಟ್ಟಹಾಸದ ಕುರಿತು ಶಾರುಖ್, ಸಲ್ಮಾನ್ ಖಾನ್ ಸೇರಿದಂತೆ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಪಹಲ್ಗಾಮ್‌ನಲ್ಲಿ ನಡೆದ ಹಿಂಸಾಚಾರದ ಬಗ್ಗೆ ದುಃಖ ಮತ್ತು ಕೋಪವನ್ನು ವ್ಯಕ್ತಪಡಿಸಲು ಪದಗಳಿಲ್ಲ. ದುಃಖದಲ್ಲಿರುವ ಕುಟುಂಬಗಳಿಗೆ ದೇವರಲ್ಲಿ ಪ್ರಾರ್ಥಿಸೋಣ. ಈ ಹೇಯ ಕೃತ್ಯದ ವಿರುದ್ಧ ನಾವು ಒಗ್ಗಟ್ಟಾಗಿ, ಬಲವಾಗಿ ನಿಂತು ಈ ಕೃತ್ಯ ಮಾಡಿದವರಿಗೆ ತಕ್ಕ ಶಾಸ್ತಿಯಾಗಲಿ ಎಂದು ಹಾರೈಸೋಣ ಎಂದು ಶಾರುಖ್ ಖಾನ್ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

    ಭೂಮಿಯ ಮೇಲಿನ ಸ್ವರ್ಗವಾದ ಕಾಶ್ಮೀರ ನರಕವಾಗಿ ಬದಲಾಗುತ್ತಿದೆ. ಅಮಾಯಕ ಜನರನ್ನು ಗುರಿಯಾಗಿಸಿಕೊಂಡಿದ್ದಾರೆ. ನನ್ನ ಹೃದಯ ಅವರ ಕುಟುಂಬಗಳಿಗಾಗಿ ಮಿಡಿಯುತ್ತದೆ. ಒಬ್ಬ ಅಮಾಯಕ ವ್ಯಕ್ತಿಯನ್ನು ಕೊಲ್ಲುವುದು ಇಡೀ ರಾಷ್ಟ್ರವನ್ನೇ ಕೊಂದಂತೆ ಎಂದು ಸಲ್ಮಾನ್‌ ಖಾನ್‌ (Salman Khan) ಬರೆದಿದ್ದಾರೆ.

    ಕಂಗನಾ ರಣಾವತ್ (Kangana Ranaut) ಹಂಚಿಕೊಂಡಿರುವ ಸ್ಟೋರಿಯಲ್ಲಿ, ಆ ದುರುಳರು ಅಮಾಯಕರ ಮೇಲೆ ದಾಳಿ ಮಾಡಿದ್ದಾರೆ. ಅಮಾಯಕರ ಮೇಲೆ ದಾಳಿ ಮಾಡಿ ನಪುಂಸಕತನ ಮೆರೆದಿದ್ದಾರೆ. ಇತಿಹಾಸದಲ್ಲಿ ಪ್ರತಿ ಯುದ್ಧವೂ ಸಹ ಯುದ್ಧಭೂಮಿಯಲ್ಲೇ ನಡೆದಿದೆ. ಆದರೆ ಈ ನಪುಂಸಕರು ಅಮಾಯಕರ ಮೇಲೆ ನಿರಸ್ತ್ರರಾಗಿರುವವರ ಮೇಲೆ ದಾಳಿ ಮಾಡಿದ್ದಾರೆ. ಯುದ್ಧಭೂಮಿಯ ಹೊರಗೆ ಕಾದಾಟ ಮಾಡುತ್ತಿರುವ ಈ ನಪುಂಸಕರ ಮೇಲೆ ಯುದ್ಧವಾದರೂ ಮಾಡುವುದು ಹೇಗೆ ಎಂದು ಪ್ರಶ್ನೆ ಮಾಡಿದ್ದಾರೆ. ಭಯೋತ್ಪಾದಕರಿಗೆ ಧರ್ಮ ಇದೆ, ಸಂತ್ರಸ್ತರಿಗೂ ಧರ್ಮ ಇದೆ ಎಂದಿದ್ದಾರೆ. ಭಯೋತ್ಪಾದಕರ ಧರ್ಮದ ಬಗ್ಗೆ ಬಹಿರಂಗವಾಗಿ ಹೇಳದೆ, ಮುಸ್ಲಿಂ ಭಯೋತ್ಪಾದಕರಿಂದ ಹಿಂದುಗಳು ದಶಕಗಳಿಂದಲೂ ಜೀವ ಕಳೆದುಕೊಳ್ಳುತ್ತಿದ್ದಾರೆ ಎಂದಿದ್ದಾರೆ.

     

    View this post on Instagram

     

    A post shared by Priyanka (@priyankachopra)

    ಪ್ರಿಯಾಂಕಾ ಚೋಪ್ರಾ (Priyanka Chopra) ಹಂಚಿಕೊಂಡಿರುವ ಪೋಸ್ಟ್‌ನಲ್ಲಿ ಪಹಲ್ಗಾಮ್ ದಾಳಿಯ ಸುದ್ದಿ ಕೇಳಿ ತೀವ್ರ ದುಃಖವಾಗಿದೆ. ಇದೊಂದು ಅತ್ಯಂತ ಹೇಯ ಕೃತ್ಯ ಎಂದು ಬರೆದುಕೊಂಡಿದ್ದಾರೆ. ಭಯೋತ್ಪಾದನೆಯ ಈ ಅಮಾನವೀಯ ಕೃತ್ಯವನ್ನು ಅವರು ಖಂಡಿಸಿದ್ದಾರೆ. ಈ ದುಃಖದ ಸಮಯದಲ್ಲಿ ನನ್ನ ಆಲೋಚನೆಗಳು ಮತ್ತು ಪ್ರಾರ್ಥನೆಗಳು ಸಂತ್ರಸ್ತರ ಕುಟುಂಬದೊಂದಿಗೆ ಇವೆ. ಗಾಯಗೊಂಡಿರುವ ದಂಪತಿಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.

     

    View this post on Instagram

     

    A post shared by Anupam Kher (@anupampkher)

    ಈ ಬಗ್ಗೆ ಅನುಪಮ್ ಖೇರ್‌ (Anupam Kher) ಮಾತನಾಡಿ, ಇಂದು ಪಹಲ್ಗಾಮ್‌ನಲ್ಲಿ ಹಿಂದೂಗಳ ನರಮೇಧ ಆಗಿದೆ. 27 ಹಿಂದೂಗಳನ್ನು ಹುಡುಕಿ ಹುಡುಕಿ ಕೊಲ್ಲಲಾಗಿದೆ. ದುಃಖದ ಜೊತೆ ಕ್ರೋಧ, ಸಿಟ್ಟು ಬರುತ್ತದೆ. ನಾನು ಇದನ್ನು ಜೀವನದಲ್ಲಿ ಬಹಳಷ್ಟು ನೋಡಿದ್ದೇನೆ. ಕಾಶ್ಮೀರದಲ್ಲಿ ಹಿಂದೂಗಳ ಜನರೊಂದಿಗೆ ಜೊತೆ ಹೀಗೆ ಆಗ್ತಾನೇ ಇದೆ. ‘ಕಾಶ್ಮೀರ್ ಫೈಲ್ಸ್’ ಅವರ ಕಥೆಯಾಗಿದ್ದು, ಇದನ್ನು ಸಿನಿಮಾ ಮಾಡಿದಾಗ ಪ್ರೊಪಗಾಂಡ ಎಂದು ಕರೆದ್ರಿ. ದೇಶದ ವಿವಿಧ ಭಾಗಗಳಿಂದ ಜನರು ತಮ್ಮ ರಜಾದಿನಗಳನ್ನು ಕಳೆಯಲು ಕುಟುಂಬದ ಜೊತೆ ಕಾಶ್ಮೀರಕ್ಕೆ ಬಂದರು. ಈ ವೇಳೆ, ಅವರ ಧರ್ಮವನ್ನು ತಿಳಿದು ಕೊಲ್ಲಲಾಗಿದೆ ಎಂದು ಕೃತ್ಯವನ್ನು ಖಂಡಿಸಿದ್ದಾರೆ.

    ಇದರ ಬಗ್ಗೆ ಮಾತನಾಡೋಕೆ ಶಬ್ದವೇ ಸಿಗೋದಿಲ್ಲ. ಪತಿಯ ಮೃತ ದೇಹದ ಜೊತೆಗಿದ್ದ ಮಹಿಳೆಯನ್ನು ನಾನು ಮರೆಯಲು ಸಾಧ್ಯವಿಲ್ಲ. ನಾನು ಪಲ್ಲವಿ ಜಿ ಅವರ ಸಂದರ್ಶನ ನೋಡಿದೆ. ಪತಿಯನ್ನ ಕಣ್ಣೆದುರೇ ಸಾಯಿಸಿದಾಗ ನನ್ನನ್ನು ನನ್ನ ಮಗನನ್ನು ಸಾಯಿಸಿ ಅಂದಾಗ, ನಿಮ್ಮನ್ನು ಸಾಯಿಸಲ್ಲ ಮೋದಿಗೆ ಹೋಗಿ ಹೇಳಿ ಅಂದ್ರಲ್ಲ. ಬಹುಶಃ ಅವನು ಒಂದು ಸಂದೇಶವನ್ನು ನೀಡಲು ಬಯಸಿದ್ದಿರಬಹುದು ಎಂದಿದ್ದಾರೆ. ಮೋದಿಯವರು ಹಾಗೂ ಅಮಿತ್ ಶಾ ಅವರ ಬಳಿ ನಾನು ಕೇಳಿಕೊಳ್ಳುವುದೇನಂದರೆ ಉಗ್ರರಿಗೆ ನಾವು ಎಂಥಹ ಪಾಠ ಕಲಿಸಬೇಕು ಅಂದರೆ ಇನ್ನೂ ಏಳು ಜನ್ಮ ಎತ್ತಿ ಬಂದ್ರೂ ಇಂಥಹ ದುಷ್ಟ ಕೆಲಸ ಮಾಡುವ ಯೋಚನೆನೇ ಅವರಿಗೆ ಬರಬಾರದು ಎಂದಿದ್ದಾರೆ.

  • ದೀಪಿಕಾ ಪಡುಕೋಣೆ ಜೊತೆ ಕಾರು ಓಡಿಸೋ ಪೈಪೋಟಿಗಿಳಿದ ಸಾಹಸಗಳ ಬಗ್ಗೆ ವಿವರಿಸಿದ ಕಂಗನಾ

    ದೀಪಿಕಾ ಪಡುಕೋಣೆ ಜೊತೆ ಕಾರು ಓಡಿಸೋ ಪೈಪೋಟಿಗಿಳಿದ ಸಾಹಸಗಳ ಬಗ್ಗೆ ವಿವರಿಸಿದ ಕಂಗನಾ

    ಗೆಲ್ಲಾ ಮಹಿಳೆಯರು ಡ್ರೈವಿಂಗ್ ಮಾಡೋದು ಸಾಮಾನ್ಯ. ಆದರೆ ಬಾಲಿವುಡ್ ನಟಿ ಕಂಗನಾಗೆ (Kangana Ranaut) ಮಾತ್ರ ಜೀವನದಲ್ಲಿ ಕಾರು ಓಡಿಸೋದನ್ನ ಕಲಿಯುವುದೇ ದೊಡ್ಡ ಸಮಸ್ಯೆಯಾಗಿತ್ತು ಅನ್ನೋ ವಿಚಾರವನ್ನ ಇತ್ತೀಚೆಗೆ ಹೇಳಿದ್ದಾರೆ. ಗಾಡ್‌ಫಾದರ್ ಇಲ್ಲದೆ ಸಿನಿಮಾ ಹಾಗೂ ರಾಜಕೀಯದಲ್ಲಿ ಕ್ಷೇತ್ರಗಳಲ್ಲಿ ಶಕ್ತಿ ಪ್ರದರ್ಶನ ಮಾಡಿರುವಾಕೆ ನಟಿ ಕಮ್ ಸಂಸದೆ ಕಂಗನಾ ರಣಾವತ್. ಆದರೆ ಇದುವರೆಗೂ ಇವರಿಗೆ ಕಾರು ಚಾಲನೆ ಮಾತ್ರ ಸಾಧ್ಯವಾಗಲಿಲ್ಲ ಅನ್ನೋದೇ ದುರಂತ. ಕಾರು‌ ಡ್ರೈವಿಂಗ್ ಟ್ರೈನಿಂಗ್ ವೇಳೆ‌, ಎರಡು ಬಾರಿ ಆಗಿದ್ದ ಅನಾಹುತದಿಂದ ನಿರಾಸೆಗೊಂಡಿದ್ದ ನಟಿ. ಮುಂದೆ ಕಾರು ಓಡಿಸುವ ಪ್ರಯತ್ನವನ್ನೇ ನಿಲ್ಲಿಸಿ ಬಿಟ್ಟಿದ್ದರಂತೆ ಕಂಗನಾ.‌ ಇದನ್ನೂ ಓದಿ:ಕೊನೆಗೂ ಕಾರ್ತಿಕ್ ಮಹೇಶ್ ಮನೆಗೆ ಬಂತು ಬಿಗ್ ಬಾಸ್ ಶೋನಲ್ಲಿ ಗೆದ್ದ ಕಾರು

    ಸದ್ಯಕ್ಕೆ ‘ಎಮರ್ಜೆನ್ಸಿ’ ಸಿನಿಮಾದ ಸಂದರ್ಶನದಲ್ಲಿ ಮಾತನಾಡಿರುವ ಕಂಗನಾ, ಕಾರು ಓಡಿಸೋದನ್ನ ಕಲಿಯಲು ಮಾಡಿದ್ದ ಸಾಹಸಗಳ ಬಗ್ಗೆ ವಿವರಿಸಿದ್ದಾರೆ. ಇಂಡಸ್ಟ್ರಿಗೆ ಬಂದ ಆರಂಭದಲ್ಲಿ ಕಾರು ಓಡಿಸುವ ಮನಸಾಗಿ ಮುಂಬೈನ ಬಾಂದ್ರಾದಲ್ಲಿ ಡ್ರೈವಿಂಗ್ ಸ್ಕೂಲ್‌ವೊಂದಕ್ಕೆ ಸೇರಿಕೊಂಡಿದ್ರಂತೆ. ಅದೇ ಶಾಲೆಯಲ್ಲೇ ಆಗಷ್ಟೇ ಇಂಡಸ್ಟ್ರಿಗೆ ಕಾಲಿಟ್ಟಿದ್ದ ಇನ್ನೋರ್ವ ನಟಿ ದೀಪಿಕಾ ಪಡುಕೋಣೆ (Deepika Padukone) ಕೂಡ ತರಬೇತಿಗೆ ಬಂದಿರುತ್ತಾರೆ. ಸುಮಾರು 2006-07ರ ವೇಳೆ, ಹೀಗೆ ಒಂದು ದಿನ ಲೈಸೆನ್ಸ್ ಪಡೆಯಬೇಕಾದ ದಿನವೇ ಕಂಗನಾ ತಮ್ಮ ಕಾರನ್ನ ಬ್ರೇಕ್ ಒತ್ತುವ ಬದಲು ಆ್ಯಕ್ಸಿಲೇಟರ್ ಒತ್ತಿದ ಪರಿಣಾಮ ಮುಂದಿರುವ ಆಟೋ ರಿಕ್ಷಾಗೆ ಗುದ್ದಿದ್ರಂತೆ ಆ ಘಟನೆ ಬಳಿಕ ಭಯದಿಂದ ಕಂಗನಾ ಕಾರು ಓಡಿಸುವ ಆಸೆ ಕೈಬಿಡ್ತಾರೆ.

    ಇದೇ ಕಂಗನಾಗೆ ಮತ್ತೆ ಐದಾರು ವರ್ಷಗಳ ಬಳಿಕ ಕಾರು ಓಡಿಸುವ ಆಸೆ ಹುಟ್ಟಿಸುವುದು ಡ್ರೈವಿಂಗ್ ಸ್ಕೂಲ್ ಕ್ಲಾಸ್‌ಮೇಟ್ ಆಗಿದ್ದ ನಟಿ ದೀಪಿಕಾ ಪಡುಕೋಣೆ. ಯಾಕೆಂದರೆ ಕಾರ್ಯಕ್ರಮವೊಂದರಲ್ಲಿ ಕಂಗನಾ ಎದುರೇ ದೀಪಿಕಾ ಪಡುಕೋಣೆ ತಾವೇ ಕಾರ್ ಡ್ರೈವ್ ಮಾಡಿಕೊಂಡು ಬರುತ್ತಾರೆ. ಇದನ್ನ ಕಂಡ ಕಂಗನಾಗೆ ಮತ್ತೆ ಸ್ವತಂತ್ರವಾಗಿ ಕಾರು ಓಡಿಸೋದನ್ನ ಕಲಿಯುವ ಆಸೆಯಾಗುತ್ತೆ. ಮತ್ತೆ ಡ್ರೈವಿಂಗ್ ಸ್ಕೂಲ್‌ಗೆ ಹೋಗ್ತಾರೆ. ಆದರೆ ಎರಡನೇ ಬಾರಿಯೂ ನಟಿ ವಿಫಲರಾಗುತ್ತಾರೆ. ತರಬೇತಿ ದಿನ ತಮ್ಮ BMW ಕಾರ್‌ನ್ನ ಪೊಲೀಸ್ ಜೀಪಿನ ಮೇಲೆ ಹತ್ತಿಸಿಬಿಡ್ತಾರೆ. ಈ‌ ಪರಿಣಾಮ, ಕಂಗನಾ ಕಾರು ಬಹಳವೇ ಸ್ಕ್ರ್ಯಾಚ್ ಆಗಿರುತ್ತೆ. ಅಲ್ಲಿಗೆ ಕಾರು ಓಡಿಸುವ ದುಸ್ಸಾಹಸ ಬೇಡ ಎಂದು ತೀರ್ಮಾನಕ್ಕೆ ಬರುತ್ತಾರಂತೆ ಕಂಗನಾ. ಹೀಗೆ ಸಂಸದೆ ಕಂಗನಾ ಡ್ರೈವಿಂಗ್ ಕಥೆಯನ್ನ ಬಿಚ್ಚಿಟ್ಟಿದ್ದಾರೆ.

  • ಲೋಕಸಭಾ ಚುನಾವಣೆಯಲ್ಲಿ ಗೆದ್ದು ಬೀಗಿದ ಸಿನಿಮಾ ತಾರೆಯರು ಯಾರು?

    ಲೋಕಸಭಾ ಚುನಾವಣೆಯಲ್ಲಿ ಗೆದ್ದು ಬೀಗಿದ ಸಿನಿಮಾ ತಾರೆಯರು ಯಾರು?

    ಬಾರಿ ಲೋಕಸಭಾ ಚುನಾವಣೆಯಲ್ಲಿ (Loksabha Election 2024) ಯಾರೆಲ್ಲಾ ಸೆಲೆಬ್ರಿಟಿಗಳು ಗೆದ್ದರು. ಗದ್ದುಗೆಯ ಗುದ್ದಾಟದಲ್ಲಿ ಸೋತವರ್ಯಾರು, ಗೆದ್ದವರು ಯಾರು? ಎಂಬುದರ ಸಂಪೂರ್ಣ ವಿವರ ಇಲ್ಲಿದೆ. ಇದನ್ನೂ ಓದಿ:ಸುದೀಪ್‌ಗೆ ‘ಸಪ್ತಸಾಗರದಾಚೆ ಎಲ್ಲೋ’ ನಿರ್ದೇಶಕ ಆ್ಯಕ್ಷನ್ ಕಟ್

    ಲೋಕಸಭಾ ಚುನಾವಣೆಯಲ್ಲಿ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ವಿಕ್ರಮಾದಿತ್ಯ ಸಿಂಗ್ ಮುಂದೆ ಕ್ವೀನ್ ಕಂಗನಾ (Kangana Ranaut) ಗೆದ್ದಿದ್ದಾರೆ. ಹಿಮಾಚಲ ಪ್ರದೇಶ ಮಂಡಿಯಲ್ಲಿ ಗೆಲುವಿನ ನಗೆ ಬೀರಿದ್ದಾರೆ. 70000 ಸಾವಿರಕ್ಕೂ ಅಧಿಕ ಮತಗಳಿಂದ ನಟಿ ಗೆದ್ದಿದ್ದಾರೆ. ತಮ್ಮ ಮೊದಲ ಗೆಲುವನ್ನು ನರೇಂದ್ರ ಮೋದಿಗೆ ಅರ್ಪಿಸಿದ್ದಾರೆ.

    ಮೇ 13ರಂದು ನಡೆದ ಆಂಧ್ರಪ್ರದೇಶದ ಚುನಾವಣೆಯಲ್ಲಿ ಪವನ್ ಕಲ್ಯಾಣ್ ಪೀಠಾಪುರಂ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. 1,32,725 ಮತಗಳನ್ನು ಪಡೆಯುವ ಮೂಲಕ ಪವನ್ ಕಲ್ಯಾಣ್ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಜಗನ್ ಮೋಹನ್ ರೆಡ್ಡಿಗೆ ಪವನ್ ಠಕ್ಕರ್ ಕೊಟ್ಟಿದ್ದಾರೆ.

    ಬಾಲಿವುಡ್ ಡ್ರೀಮ್ ಗರ್ಲ್ ಹೇಮಾ ಮಾಲಿನಿ (Hema Malini) ಮಥುರಾದಲ್ಲಿ 3ನೇ ಬಾರಿ ಗೆಲುವಿನ ಭಾವುಟ ಹಾರಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮುಕೇಶ್ ವಿರುದ್ಧ ಭಾರೀ ಮತಗಳ ಅಂತರದಲ್ಲಿ ನಟಿ ಗೆದ್ದಿದ್ದಾರೆ.

    ಉತ್ತರ ಪ್ರದೇಶದ ಮೀರತ್ ಕ್ಷೇತ್ರದಿಂದ ರಾಮಾಯಣ ರಾಮನ ಪಾತ್ರಧಾರಿ ಅರುಣ್ ಗೋವಿಲ್ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದರು. ಮೊದಲ ಪ್ರಯತ್ನದಲ್ಲಿ ನಟ ಗೆಲುವು ಸಾಧಿಸಿದ್ದಾರೆ. ಬಾಲಿವುಡ್ ಹಿರಿಯ ನಟ ಶತ್ರುಜ್ಞ ಸಿನ್ಹಾ ಟಿಎಂಸಿ ಅಭ್ಯರ್ಥಿಯಾಗಿ ಪಶ್ಚಿಮ ಬಂಗಾಳದ ಅಸನ್ಸೋಲ್ ಕ್ಷೇತ್ರದಿಂದ ನಿಂತು ಗೆದ್ದಿದ್ದಾರೆ. ಮಲಯಾಳಂ ನಟ ಸುರೇಶ್ ಗೋಪಿ ಕೇರಳದ ತ್ರಿಶೂರ್ ಕ್ಷೇತ್ರದಿಂದ ಭಾರೀ ಮತದಿಂದ ಗೆಲುವು ಸಾಧಿಸಿದ್ದಾರೆ.

    ತೆಲುಗು ನಟ ನಂದಮೂರಿ ಬಾಲಕೃಷ್ಣ ಟಿಡಿಪಿ ಅಭ್ಯರ್ಥಿಯಾಗಿ ಹಿಂದೂಪುರದಿಂದ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ.

    ಗೀತಾ ಶಿವರಾಜ್‌ಕುಮಾರ್ (Geetha Shivarajkumar) ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಬಿ.ವೈ ರಾಘವೇಂದ್ರಗೆ ಪೈಪೋಟಿ ಕೊಡುವುದರಲ್ಲಿ ನಿರ್ಮಾಪಕಿ ಗೀತಾ ಸೋತಿದ್ದಾರೆ. ಉತ್ತರ ಪ್ರದೇಶದ ಅಮೇಥಿ ಕ್ಷೇತ್ರದಲ್ಲಿ ಸ್ಮೃತಿ ಇರಾನಿ ಸೋಲು ಕಂಡಿದ್ದಾರೆ.

    ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ನಟಿ ರೋಜಾ ಹೀನಾಯವಾಗಿ ಸೋತಿದ್ದಾರೆ. ತಮಿಳುನಾಡಿನ ವಿರುಧುನಗರ್ ಕ್ಷೇತ್ರದಿಂದ ನಟಿ ರಾಧಿಕಾ ಶರತ್‌ಕುಮಾರ್ ಬಿಜೆಪಿ ಸ್ಪರ್ಧಿಯಾಗಿ ಕಣಕ್ಕೆ ನಿಂತಿದ್ದರು. ನಟಿ ಹೀನಾಯವಾಗಿ ಸೋಲುಂಡಿದ್ದಾರೆ.

  • ದೇಶದಲ್ಲಿ ಮೋದಿ ಅಲೆ ಇದೆ :ಮತದಾನದ ಬಳಿಕ ಕಂಗನಾ ಪ್ರತಿಕ್ರಿಯೆ

    ದೇಶದಲ್ಲಿ ಮೋದಿ ಅಲೆ ಇದೆ :ಮತದಾನದ ಬಳಿಕ ಕಂಗನಾ ಪ್ರತಿಕ್ರಿಯೆ

    ಲೋಕಸಭೆ ಚುನಾವಣೆ (Loksabha Election 2024) ಜೂನ್ 1ರಂದು ಅಂತಿಮ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಲೋಕಸಭಾ ಚುನಾವಣೆ ಅಂತಿಮ ಹಂತದಲ್ಲಿದೆ. ಸದ್ಯ ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್ (Kangana Ranaut) ಮತದಾನ ಮಾಡಿದ್ದಾರೆ. ಸರದಿ ಸಾಲಿನಲ್ಲಿ ನಿಂತು ನಟಿ ವೋಟ್ ಮಾಡಿದ್ದಾರೆ. ಇದನ್ನೂ ಓದಿ:‘ಪುಷ್ಪ 2’ ದಿನವೇ ರಿಲೀಸ್ ಆಗಲಿದೆ ಕೀರ್ತಿ ಸುರೇಶ್ ನಟನೆಯ ಸಿನಿಮಾ

    ಜನಸಾಮಾನ್ಯರ ಜೊತೆ ಸಾಲಿನಲ್ಲಿ ನಿಂತು ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಲ್ಲಿ ಕಂಗನಾ ವೋಟ್ ಮಾಡಿದ್ದಾರೆ. ಮತದಾನದ ಬಳಿಕ ಕಂಗನಾ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಇದೀಗ ನನ್ನ ಮತವನ್ನು ಚಲಾಯಿಸಿದ್ದೇನೆ. ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗವಹಿಸಿ ಮತದಾನದ ಹಕ್ಕನ್ನು (Vote) ಚಲಾಯಿಸುವಂತೆ ಜನರಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ:ಬಿಟೌನ್ ಟಾಕ್: ನಟಿ ಮಲೈಕಾ ಅರೋರಾ- ಅರ್ಜುನ್‍ ಕಪೂರ್ ಬ್ರೇಕಪ್

    ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅಲೆ ಇದೆ. ಹಿಮಾಚಲ ಪ್ರದೇಶ, ಮಂಡಿ ಜನರು ನನ್ನನ್ನು ಹಾರೈಸುತ್ತಾರೆ ಎಂಬ ನಂಬಿಕೆಯಿದೆ. ರಾಜ್ಯದ ಎಲ್ಲಾ 4 ಸ್ಥಾನಗಳನ್ನು ನಾವು ಪಡೆಯುತ್ತೇವೆ ಎಂಬ ಭರವಸೆ ನನಗಿದೆ ಎಂದಿದ್ದಾರೆ.

    ಅಂದಹಾಗೆ, ಮಂಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿಕ್ರಮಾದಿತ್ಯ ಸಿಂಗ್ ವಿರುದ್ಧ ಸ್ಪರ್ಧಿಸಿದ್ದಾರೆ ನಟಿ ಕಂಗನಾ.

  • ಚಂದ್ರಮುಖಿ – 2 ಡ್ಯಾನ್ಸ್ ಪ್ರಾಕ್ಟಿಸ್ ಶುರು ಮಾಡಿದ ಕಂಗನಾ ರಣಾವತ್

    ಚಂದ್ರಮುಖಿ – 2 ಡ್ಯಾನ್ಸ್ ಪ್ರಾಕ್ಟಿಸ್ ಶುರು ಮಾಡಿದ ಕಂಗನಾ ರಣಾವತ್

    ಬಾಲಿವುಡ್ (Bollywood) ನಟಿ ಕಂಗನಾ ರಣಾವತ್ (Kangana Ranaut) ಸದಾ ಒಂದಲ್ಲಾ ಒಂದು ಕಾಂಟ್ರವರ್ಸಿ ಮೂಲಕ ಸುದ್ದಿಯಲ್ಲಿರುತ್ತಾರೆ. ನಟಿಯ ಈ ನಡೆಯಿಂದ ಆಫರ್ಸ್ ಕೂಡ ಕಮ್ಮಿಯಾಗಿದೆ. ಸದ್ಯ `ಚಂದ್ರಮುಖಿ 2’ನಲ್ಲಿ (Chandramukhi 2) ಕಂಗನಾ ನಟಿಸುತ್ತಿದ್ದಾರೆ.

    ಸಿನಿಮಾಗಿಂತ ಕಾಂಟ್ರವರ್ಸಿ ಮೂಲಕ ಸದ್ದು ಮಾಡುವ ನಟಿ ಕಂಗನಾ ರಣಾವತ್ ಸದ್ಯ `ಎಮರ್ಜೆನ್ಸಿ’ (Emergency) ಚಿತ್ರದಲ್ಲಿ ಇಂದಿರಾ ಗಾಂಧಿ (Indira Gandi) ಪಾತ್ರ ಮಾಡಿದ ನಂತರ `ಚಂದ್ರಮುಖಿ 2′ ಚಿತ್ರವನ್ನು ಕೈಗೆತ್ತಿಕೊಂಡಿದ್ದಾರೆ. ಈ ಸಿನಿಮಾಗಾಗಿ ನಟಿಯ ತಯಾರಿ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಅಪ್‌ಡೇಟ್ ನೀಡಿದ್ದಾರೆ.

    ನಟಿ ಕಂಗನಾ ಈಗ `ಚಂದ್ರಮುಖಿ 2′ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದಲ್ಲಿ ಕಂಗನಾ ರಾಜನ ಆಸ್ಥಾನ ನರ್ತಕಿ ಚಂದ್ರಮುಖಿ ಪಾತ್ರದಲ್ಲಿ ನಟಿಸಲಿದ್ದಾರೆ. ಕಂಗನಾ ಅವರು ಚಂದ್ರಮುಖಿ -2 ರ ಕ್ಲೈಮ್ಯಾಕ್ಸ್ ಸಾಂಗ್ ಪ್ರಾಕ್ಟೀಸ್ ಶುರು ಮಾಡಿದ್ದಾರೆ. ಈ ವಿಚಾರನ್ನು ಟ್ವಿಟ್ಟರ್‌ನಲ್ಲಿ ಶೇರ್ ಮಾಡಿದ್ದಾರೆ.‌ ಇದನ್ನೂ ಓದಿ: ಶುರುವಾಯ್ತು ‘ದಳಪತಿ 67’ ಚಿತ್ರ: ಲೋಕೇಶ್ ಕನಗರಾಜ್ ನಿರ್ದೇಶನ

    ನಾನು ಕಲಾ ಮಾಸ್ಟರ್‌ಜಿ ಅವರೊಂದಿಗೆ `ಚಂದ್ರಮುಖಿ 2′ ಸಿನಿಮಾದ ಕ್ಲೈಮ್ಯಾಕ್ಸ್ ಹಾಡನ್ನು ಅಭ್ಯಾಸ ಮಾಡಲು ಪ್ರಾರಂಭಿಸಿದ್ದೇನೆ. ಈ ಹಾಡನ್ನು ಗೋಲ್ಡನ್ ಗ್ಲೋಬ್ ವಿಜೇತ ಶ್ರೀ ಎಂಎಂ ಕೀರವಾಣಿ ಅವರು ಸಂಯೋಜಿಸಿದ್ದಾರೆ. ಶ್ರೀ ಪಿ.ವಾಸು ಈ ಸಿನಿಮಾ ನಿರ್ದೇಶಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

    ನಟಿ ಕಂಗನಾ ಕೈಯಲ್ಲಿ ಈಗ ಹೇಳಿಕೊಳ್ಳುವಂತಹ ಸಿನಿಮಾಗಳೇನು ಇಲ್ಲಾ. ಎಮರ್ಜೆನ್ಸಿ, ಚಂದ್ರಮುಖಿ ೨ ಬಿಟ್ಟರೆ ಹೇಳಿಕೊಳ್ಳುವಂತಹ ಅವಕಾಶಗಳೇನು ಅವರಿಗೆ ಅರಸಿ ಬರುತ್ತಿಲ್ಲ. `ದಾಕಡ್’ ಚಿತ್ರದ ಸೋಲಿನ ನಂತರ ಮುಂಬರುವ ಚಿತ್ರಗಳ ಮೂಲಕ ಬಾಲಿವುಡ್‌ನಲ್ಲಿ ಗಟ್ಟಿ ನೆಲೆ ಸಿಗುತ್ತಾ ಎಂಬುದನ್ನ ಕಾದುನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಂಬಿದ್ರೆ ನಂಬಿ, ಬಿಟ್ಟರೆ ಬಿಡಿ, ಇಂದಿರಾ ಗಾಂಧಿ ಈ ವಿಡಿಯೋದಲ್ಲಿ ಕಂಗನಾ ರೀತಿ ಮಾಡ್ತಿದ್ದಾರೆ: ಆರ್‌ಜಿವಿ

    ನಂಬಿದ್ರೆ ನಂಬಿ, ಬಿಟ್ಟರೆ ಬಿಡಿ, ಇಂದಿರಾ ಗಾಂಧಿ ಈ ವಿಡಿಯೋದಲ್ಲಿ ಕಂಗನಾ ರೀತಿ ಮಾಡ್ತಿದ್ದಾರೆ: ಆರ್‌ಜಿವಿ

    ಬಾಲಿವುಡ್‌ನ ವಿವಾದಿತ ನಟಿ ಕಂಗನಾ ನಟಿಸಿರುವ ಇತ್ತೀಚಿನ ಸಿನಿಮಾಗಳು ಗಲ್ಲಾಪೆಟ್ಟಿಗೆಯಲ್ಲಿ ಸೌಂಡ್ ಮಾಡುವುದರಲ್ಲಿ ಸೋತಿದ್ದಾರೆ. ಅವರ ವಿವಾದಾತ್ಮಕ ಹೇಳಿಕೆಗಳೇ ಅವರ ಪಾಲಿಗೆ ಮುಳುವಾಗಿದೆ. ಆದರೂ ಕಂಗನಾಗೆ ಸಿನಿಮಾ ಆರ‍್ಸ್ ಕಿಂಚಿಂತೂ ಕಮ್ಮಿಯಾಗಿಲ್ಲ. ಸದ್ಯ ʻಎಮರ್ಜೆನ್ಸಿʼ ಚಿತ್ರದ ಮೂಲಕ ಸದ್ದು ಮಾಡ್ತಿರುವ ಈ ನಟಿಗೆ ಸ್ಟಾರ್ ಡೈರೆಕ್ಷರ್ ರಾಮ್ ಗೋಪಾಲ್ ವರ್ಮಾ ಅಚ್ಚರಿಯ ಹೇಳಿಕೆ ನೀಡಿ, ಇಂದಿರಾ ಗಾಂಧಿ ವಿಡಿಯೋ ಶೇರ್ ಮಾಡಿ ಕಂಗನಾ ಕುರಿತು ಮಾತನಾಡಿದ್ದಾರೆ.

    ಸದ್ಯ ಕಂಗನಾ ರಣಾವತ್ ಗಮನವೆಲ್ಲ ಇಂದಿರಾ ಗಾಂಧಿ ಬಯೋಪಿಕ್‌ನತ್ತ ಇದೆ. ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡೆ ಸಿನಿಮಾದಲ್ಲಿ ತಲ್ಲೀನರಾಗಿದ್ದಾರೆ. ಈಗ ಕಂಗನಾ ಕುರಿತು ನಿರ್ದೇಶಕ ಆರ್‌ಜಿವಿ ನೀಡಿರುವ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ಸೌಂಡ್ ಮಾಡುತ್ತಿದೆ. ಇಂದಿರಾ ಗಾಂಧಿ ಈ ವಿಡಿಯೋದಲ್ಲಿ ಕಂಗನಾ ರೀತಿ ಮಾಡ್ತಿದ್ದಾರೆ ಅಂತಾ ಆರ್‌ಜಿವಿ ಟ್ವೀಟ್ ಮಾಡಿದ್ದಾರೆ.

    1984ರಲ್ಲಿ ಇಂದಿರಾ ಗಾಂಧಿ ನೀಡಿದ ವಿಶೇಷ ವಿಡಿಯೋ ಸಂದರ್ಶನದ ತುಣುಕನ್ನು ಆರ್‌ಜಿವಿ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಆ ಕಾಲದಲ್ಲಿ ಪಂಜಾಬ್‌ನಲ್ಲಿ ಇದ್ದ ಪರಿಸ್ಥಿತಿಯ ಬಗ್ಗೆ ಇಂದಿರಾ ಗಾಂಧಿ ಮಾತನಾಡಿದ್ದರು. ಈ ಸಂದರ್ಶನವನ್ನು ಕಂಡು ಆರ್‌ಜಿವಿ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ನಂಬಿದ್ರೆ ನಂಬಿ, ಬಿಟ್ಟರೆ ಬಿಡಿ. ಈ ವಿಡಿಯೋದಲ್ಲಿ ಇಂದಿರಾ ಗಾಂಧಿ ಅವರು ಕಂಗನಾ ರೀತಿ ಮಾಡ್ತಿದ್ದಾರೆ ಎಂದು ರಾಮ್ ಗೋಪಾಲ್ ವರ್ಮಾ ಕ್ಯಾಪ್ಷನ್ ನೀಡಿ, ಮೆಚ್ಚುಗೆ ತಿಳಿಸಿದ್ದಾರೆ. ಇದನ್ನೂ ಓದಿ:ಸಿನಿಮಾಗೆ `ಗುಡ್‌ ಬೈ’ ಹೇಳಲಿದ್ದಾರೆ ರಶ್ಮಿಕಾ ಮಂದಣ್ಣ: ಅಸಲಿ ಕಾರಣವೇನು?

    ಇನ್ನು ಆರ್‌ಜಿವಿ ಟ್ವೀಟ್ ನೋಡಿ, ಕಂಗನಾ ರಣಾವತ್ ಸಖತ್ ಖುಷಿ ಆಗಿದ್ದಾರೆ. ಆರ್‌ಜಿವಿ ಅವರ ಈ ಮಾತನ್ನು ಹೊಗಳಿಕೆಯ ರೀತಿ ಅವರು ಸ್ವೀಕರಿಸಿದ್ದಾರೆ. ಇಂದಿರಾ ಗಾಂಧಿ ಪಾತ್ರಕ್ಕೆ ತಮ್ಮ ಆಯ್ಕೆ ಸೂಕ್ತವಾಗಿದೆ ಎಂಬುದನ್ನು ಕಂಗನಾ ಖಚಿತಪಡಿಸಿಕೊಂಡಿದ್ದಾರೆ. ಕೆಲ ದಿನಗಳ ಹಿಂದೆ ಬಿಡುಗಡೆ ಆದ ಕಂಗನಾ ಫಸ್ಟ್ ಲುಕ್ ನೋಡಿರುವ ಎಲ್ಲರೂ ಅಚ್ಚರಿ ವ್ಯಕ್ತಪಡಿಸಿ, ಶುಭಹಾರೈಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ಕಂಗನಾ ರಣಾವತ್ ಏನಿದು ಅವತಾರ ಎಂದ ನೆಟ್ಟಿಗರು

    ಕಂಗನಾ ರಣಾವತ್ ಏನಿದು ಅವತಾರ ಎಂದ ನೆಟ್ಟಿಗರು

    ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಕಂಗನಾ ರಣಾವತ್ ಬೇಸಿಗೆಯ ಉರಿಬಿಸಿಲಿನಲ್ಲೂ ಅವರ ಅಭಿಮಾನಿಗಳಿಗೆ ಅಭಿಮಾನಿಗಳನ್ನು ಮತ್ತಷ್ಟು ಹಾಟ್ ಹಾಟ್ ಆಗಿ ಇಟ್ಟಿದ್ದಾರೆ. ಇನ್ ಸ್ಟಾಗ್ರಾಮ್ ಪೇಜ್ ನಲ್ಲಿ ಹಾಟ್ ಹಾಟ್ ಆಗಿರುವ ಹೊಸ ಫೋಟೋ ಶೂಟ್ ಫೋಟೋವೊಂದನ್ನು ಪೋಸ್ಟ್ ಮಾಡಿದ್ದು, ಈ ನಡೆಗೆ ಇಡೀ ಅಭಿಮಾನಿ ಪಡೆ ದಂಗಾಗಿದೆ. ಇದನ್ನೂ ಓದಿ : ಪುನೀತ್‌ಗೆ ಅವಮಾನ: ತಿರುಪತಿ ತಿರುಮಲ ದೇವಸ್ಥಾನಕ್ಕೆ ಅಭಿಮಾನಿಗಳು ಮುತ್ತಿಗೆ

    ಸದಾ ವಿವಾದಗಳ ಮೂಲಕವೇ ಹೆಚ್ಚು ಸುದ್ದಿಯಾಗುತ್ತಿದ್ದ ಕಂಗನಾ ರಣಾವತ್ ಈ ಬಾರಿ ಹಾಟ್ ಹಾಟ್ ಫೋಟೋ ಕಾರಣದಿಂದಾಗಿ ಪ್ರಚಾರದ ತುತ್ತತುದಿ ಏರಿ ಕೂತಿದ್ದಾರೆ. ಕೇವಲ ಅಭಿಮಾನಿಗಳು ಮಾತ್ರವಲ್ಲ, ಬಿಟೌನ್ ಕೂಡ ಶಾಕ್ ಆಗಿ ಕೂತಿದೆ. ಕಂಗನಾ ಅವತಾರ ಕಂಡು ಬೆಚ್ಚಿ ಬಿದ್ದಿದೆ.

     

    View this post on Instagram

     

    A post shared by Kangana Dhaakad (@kanganaranaut)

    ಸದ್ಯ ಕಂಗನಾ ರಣಾವತ್ ಲಾಕ್ ಅಪ್ ರಿಯಾಲಿಟಿ ಶೋ ನಡೆಸಿಕೊಡುತ್ತಿದ್ದಾರೆ. ಈ ಶೋನಲ್ಲಿ ಅತೀ ಹೆಚ್ಚು ಸ್ಪರ್ಧಿಗಳಾಗಿದ್ದು ವಿವಾದಿತ ತಾರೆಯರು. ದಿನವೂ ಒಂದಿಲ್ಲೊಂದು ವಿವಾದ ಮಾಡುವ ಮೂಲಕ ಶೋ ಅನ್ನು ಟಾಪ್ ನಲ್ಲಿ ಇಟ್ಟಿದ್ದಾರೆ. ಅವರು ಮಾತ್ರವಲ್ಲ, ಅವರ ಮಾತಿಗೆ ಪ್ರತ್ಯುತ್ತರವಾಗಿ ಮಾತನಾಡುವ ಕಂಗನಾ ಕೂಡ ತಮ್ಮ ಜೀವನದಲ್ಲಿ ನಡೆದ ಕಹಿ ಘಟನೆಗಳನ್ನು ಹೇಳುವ ಮೂಲಕ ಅಚ್ಚರಿ ಮೂಡಿಸುತ್ತಲೇ ಇರುತ್ತಾರೆ. ಇದನ್ನೂ ಓದಿ : ಖ್ಯಾತ ನಿರ್ದೇಶಕ ಅರವಿಂದ್ ಕೌಶಿಕ್ ಅರೆಸ್ಟ್

    ಇಂದು ಕಂಗನಾ ರಣಾವತ್ ನಟನೆಯ ‘ಧಾಕಡ್’ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಇಂದು ರಿಲಿಸ್ ಆದ ಟ್ರೇಲರ್ ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಈ ಸಂದರ್ಭದಲ್ಲಿ ರಂಗನಾ ಈ ರೀತಿಯ ಕಾಸ್ಟ್ಯೂಮ್ ನಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ಕೆಲವರು ಈ ಫೋಸ್ಟ್ ಗೆ ಮೆಚ್ಚುಗೆ ಸೂಚಿಸಿದ್ದರೆ, ಇನ್ನೂ ಕೆಲವರು ಇದೆಂಥ ಸಂಸ್ಕೃತಿ ಎಂದು ನೆಗೆಟಿವ್ ಕಾಮೆಂಟ್ ಹಾಕಿದ್ದಾರೆ.

  • ಜನಪ್ರಿಯ ಡೈರೆಕ್ಟರ್ ಜೊತೆಗೆ ಮಂದನಾ ಕರಿಮಿ ಅಫೇರ್ – ಪ್ರೆಗ್ನೆಂಟ್ ಆಗಿ ಮೋಸ ಹೋದದ್ದು ಕೇಳಿ ಕಂಗನಾ ಕಣ್ಣೀರು

    ಜನಪ್ರಿಯ ಡೈರೆಕ್ಟರ್ ಜೊತೆಗೆ ಮಂದನಾ ಕರಿಮಿ ಅಫೇರ್ – ಪ್ರೆಗ್ನೆಂಟ್ ಆಗಿ ಮೋಸ ಹೋದದ್ದು ಕೇಳಿ ಕಂಗನಾ ಕಣ್ಣೀರು

    ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ನಿರೂಪಕಿ ಆಗಿ ನಡೆಸಿಕೊಡುತ್ತಿರುವ ಲಾಕಪ್ ರಿಯಾಲಿಟಿ ಶೋ ಬಿಟೌನ್‍ನಲ್ಲಿ ಭಾರೀ ಸದ್ದು ಮಾಡುತ್ತಿದೆ. ಬಿಗ್‍ಬಾಸ್ ಮಾದರಿಯೇ ಇರುವ ಈ ರಿಯಾಲಿಟಿ ಶೋನಲ್ಲಿ ಅನೇಕ ವಿವಾದಾತ್ಮಕ ಸೆಲೆಬ್ರಿಟಿಗಳು ಭಾಗವಹಿಸಿದ್ದಾರೆ. ಈ ರಿಯಾಲಿಟಿ ಶೋ ಮೂಲಕ ಸೆಲೆಬ್ರಿಟಿಗಳು ಇಷ್ಟು ದಿನ ಮುಚ್ಚಿಟ್ಟಿದ್ದ ಕೆಲವು ಸತ್ಯಗಳನ್ನು ಒಂದೊಂದೇ ಕ್ಯಾಮೆರಾ ಮುಂದೆ ಬಾಯ್ಬಿಡುತ್ತಿದ್ದಾರೆ.

    ಸದ್ಯ ಬಿಗ್‍ಬಾಸ್ ಸೀಸನ್-9ರಲ್ಲಿ ಭಾಗವಹಿಸಿ 2ನೇ ರನ್ನರ್ ಅಪ್ ಆಗಿದ್ದ ಮಾಡೆಲ್ ಕಮ್ ನಟಿ ಮಂದನಾ ಕರಿಮಿ ಅವರು ತಮ್ಮ ಜೀವನದಲ್ಲಿ ನಡೆದ ಕಹಿ ಘಟನೆಯನ್ನು ಕಂಗನಾ ಅವರ ಮುಂದೆ ರಿವೀಲ್ ಮಾಡಿದ್ದಾರೆ. ಇವರ ಕಥೆ ಕೇಳಿ ಸ್ವತಃ ಕಂಗನಾ ಅವರು ಕಣ್ಣೀರು ಹಾಕಿದ್ದಾರೆ. ಅಲ್ಲದೇ ಇತರ ಸ್ಪರ್ಧಿಗಳು ಕೂಡ ಭಾವುಕರಾಗಿದ್ದಾರೆ.

    ಮಂದನಾ ಕರಿಮಿ ಅವರು ಉದ್ಯಮಿ ಗೌರವ್ ಗುಪ್ತಾ ಅವರನ್ನು ಮದುವೆಯಾಗಿ ಕೆಲವೇ ತಿಂಗಳು ಕಳೆಯುವುದರಲ್ಲಿ ಅವರ ಸಂಸಾರದಲ್ಲಿ ಬಿರುಕು ಮೂಡಿದ್ದು, ಈ ವೇಳೆ ಖ್ಯಾತ ನಿರ್ದೇಶಕನೊಂದಿಗೆ ಗುಟ್ಟಾಗಿ ಸಂಬಂಧಹೊಂದಿರುವ ಬಗ್ಗೆ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಬೆಂಕಿ ಬಿರುಗಾಳಿ ಎಬ್ಬಿಸಿದ ಕಂಗನಾ ಶೋ: ಪತಿ ಜತೆ ಮಲಗಿದವರ ಲಿಸ್ಟ್ ಹೇಳಿದ ನಟಿ ಮಂದರಾ

    ನಾನು ನನ್ನ ಖಾಸಗಿ ಜೀವನದಲ್ಲಿ ಬಹಳ ಕಷ್ಟದ ಪರಿಸ್ಥಿತಿಯಲ್ಲಿದ್ದ ವೇಳೆ ನಾನು ಗುಟ್ಟಾಗಿ ಒಂದು ಸಂಬಂಧ ಇಟ್ಟುಕೊಂಡಿದ್ದೆ. ನಾನು ಸಂಬಂಧ ಇಟ್ಟುಕೊಂಡಿದ್ದ ವ್ಯಕ್ತಿ ಓರ್ವ ಖ್ಯಾತ ನಿರ್ದೇಶಕನಾಗಿದ್ದ. ಆತ ಮಹಿಳೆಯರ ಹಕ್ಕುಗಳ ಬಗ್ಗೆ ಮಾತನಾಡುತ್ತಾನೆ. ಅನೇಕ ಜನರಿಗೆ ಅವನು ಸ್ಫೂರ್ತಿ. ನಾವಿಬ್ಬರೂ ಪ್ರೆಗ್ನಿನ್ಸಿ ಪ್ಲಾನ್ ಮಾಡಿದ್ದೇವು. ಆದರೆ ಪ್ರೆಗ್ನೆಂಟ್ ಆದಾಗ.. ಎಂದು ಹೇಳುತ್ತಾ ಬಿಕ್ಕಿಬಿಕ್ಕಿ ಅತ್ತಿದ್ದಾರೆ. ಇದನ್ನು ನೋಡಿ ಕಂಗನಾ ಕೂಡ ಕಣ್ಣೀರು ಹಾಕಿದ್ದಾರೆ. ಅಲ್ಲದೇ ಉಳಿದ ಸ್ಪರ್ಧಿಗಳು ಅಳುತ್ತಿದ್ದ ಮಂದನಾ ಕರಿಮಿ ಅವರಿಗೆ ಸಮಾಧಾನ ಹೇಳುತ್ತಾ ಬಹಳ ಎಮೋಷನಲ್ ಆಗಿದ್ದಾರೆ. ಇದನ್ನೂ ಓದಿ:  ಕೊನೆಗೂ ಮದುವೆಯ ವಿಚಾರ ಖಚಿತಪಡಿಸಿದ ಆಲಿಯಾ!

    ಸದ್ಯ ಲಾಕಪ್ ರಿಯಾಲಿಟಿ ಶೋ ಬಿಡುಗಡೆ ಮಾಡಿರುವ ಹೊಸ ಪ್ರೋಮೋದಲ್ಲಿ ಇಷ್ಟು ಮಾತ್ರ ರಿವೀಲ್ ಆಗಿದ್ದು, ಈ ವೀಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದ್ದು, ಈ ಎಪಿಸೋಡ್ ನೋಡಲು ಜನ ಕಾತುರದಿಂದ ಕಾಯುತ್ತಿದ್ದಾರೆ.

  • ಮತ್ತೆ ಕಂಗನಾಗೆ ಬಂತು ಕಂಟಕ – ‘ಲಾಕ್‍ಆಪ್’ ವಿರುದ್ಧ ಕಾಪಿರೈಟ್

    ಮತ್ತೆ ಕಂಗನಾಗೆ ಬಂತು ಕಂಟಕ – ‘ಲಾಕ್‍ಆಪ್’ ವಿರುದ್ಧ ಕಾಪಿರೈಟ್

    ಮುಂಬೈ: ಹೈದರಾಬಾದ್ ಉದ್ಯಮಿ ‘ಲಾಕ್ ಅಪ್’ ಶೋ ವಿರುದ್ಧ ಕಾಪಿರೈಟ್ ಪ್ರಕರಣವನ್ನು ದಾಖಲಿಸಿದ್ದು, ಈ ಶೋ ಮುಂದೂಡುವ ಸಾಧ್ಯತೆಯಿದೆ ಎಂದು ಮೂಲಗಳಿಂದ ಕೇಳಿಬರುತ್ತಿದೆ.

    ಬಾಲಿವುಡ್ ತಲೈವಿ ಕಂಗನಾ ಹೋಸ್ಟ್ ಮಾಡುತ್ತಿರುವ ‘ಲಾಕ್‍ಆಪ್’ ಶೋ ವಿರುದ್ಧ ಹೈದರಾಬಾದ್ ಮೂಲದ ಉದ್ಯಮಿ ಸನೋಬರ್ ಬೇಗ್ ಕಾಪಿರೈಟ್ ಪ್ರಕರಣವನ್ನು ದಾಖಲಿಸಿದ್ದಾರೆ. ಪ್ರಸ್ತುತ ಅವರು ದೂರನ್ನು ಹೈದರಾಬಾದ್‍ನ ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಕೊಟ್ಟಿದ್ದಾರೆ. ಈ ದೂರಿನಲ್ಲಿ ನನ್ನ ಐಡಿಯಾವನ್ನು ಕದ್ದು ‘ಲಾಕ್ ಅಪ್’ ಶೋ ಮಾಡುತ್ತಿದ್ದಾರೆ. ಈ ಹಿಂದೆ ನಾನು ಎಂಡೆಮೊಲ್ ಶೈನ್ ಇಂಡಿಯಾದ ಅಭಿಷೇಕ್ ಅವರೊಂದಿಗೆ ಈ ನನ್ನ ಪರಿಕಲ್ಪನೆಯನ್ನು ಹಂಚಿಕೊಂಡಿದ್ದೆ. ಅವನು ನನ್ನ ಐಡಿಯಾಗಳನ್ನು ಕದ್ದು ಬೆನ್ನಿಗೆ ಚೂರಿ ಹಾಕುವ ಕೆಲಸವನ್ನು ಮಾಡಿದ್ದಾನೆ ಎಂದು ತಿಳಿಸಿದರು. ಇದನ್ನೂ ಓದಿ:  ಸಾವು ಗೆದ್ದು ಬಂದವಳ ‘ಸಾಹಸ’ ಕಥೆ : ಇದು ಕಥೆಯಲ್ಲ ಜೀವನ

     

    View this post on Instagram

     

    A post shared by Erk❤️rek (@ektarkapoor)

    ದೂರಿನ ಆಧಾರದ ಮೇಲೆ ಸಿವಿಲ್ ನ್ಯಾಯಾಲಯವು ‘ಲಾಕ್‍ಆಪ್’ ಕಾರ್ಯಕ್ರಮವನ್ನು ಯಾವುದೇ ಪ್ಲಾಟ್‍ಫಾರ್ಮ್‍ನಲ್ಲಿ ಪ್ರದರ್ಶನ ಮಾಡಬಾರದು ಎಂದು ‘ಲಾಕ್ ಅಪ್’ ತಯಾರಕರಿಗೆ ನೋಟಿಸ್ ನೀಡಿದೆ.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ನನ್ನ ಐಡಿಯಾ ಬಗ್ಗೆ 2018 ರಲ್ಲೇ ನೋಂದಾಯಿಸಿಕೊಂಡಿದ್ದೇನೆ. ನಂತರ ಈ ಬಗ್ಗೆ ಕೆಲಸ ಮಾಡಲು ನಿರ್ದೇಶಕ ಶಾಂತನು ರೆ ಅವರನ್ನು ನನ್ನ ಜೊತೆಗೆ ಸೇರಿಸಿಕೊಂಡೆ. ನಾವು ಈ ಐಡಿಯಾ ಬಗ್ಗೆ ಓಟಿಟಿವೊಂದಕ್ಕೆ ತಿಳಿಸಿದ್ದೆವು. ಆದರೆ ಇದರಿಂದ ಯಾವುದೇ ಪ್ರಯೋಜವಾಗಿಲ್ಲ. ನಮ್ಮ ಕೆಲಸ ಕಾರ್ಯರೂಪಕ್ಕೆ ಬರಲಿಲ್ಲ. ತದನಂತರ ಕೊರೊನಾದಿಂದ ಈ ಶೋ ಮಾಡುವುದು ಮತ್ತಷ್ಟು ವಿಳಂಬವಾಯಿತು ಎಂದು ವಿವರಿಸಿದರು.

    Lock Upp to GET postponed? Hyderabad businessman files copyright case against Lock Upp; DEETS INSIDE!

    ನಾನು ಅಭಿಷೇಕ್ ರೇಗೆ ಅವರೊಂದಿಗೆ ಬಹಳ ಸಮಯದಿಂದ ಸಂಪರ್ಕದಲ್ಲಿದ್ದೆ. ಈ ರೀತಿಯ ಶೋ ಮಾಡುವ ಬಗ್ಗೆ ನಾನು ಹೈದರಾಬಾದ್‍ನಲ್ಲಿ ವಿಷಯದ ಬಗ್ಗೆ ಹಲವಾರು ಸಭೆಗಳನ್ನು ನಡೆಸಿದ್ದೇನೆ. ಕೊರೊನಾದಿಂದ ಎಲ್ಲ ಮುಕ್ತವಾದ ನಂತರ ಈ ಶೋ ಮಾಡುವುದಾಗಿ ಎಲ್ಲರೂ ಭರವಸೆಯನ್ನು ಕೊಟ್ಟಿದ್ದರು. ಆದರೆ ಒಂದು ವಾರದ ಹಿಂದೆ, ನನ್ನ ಕನಸುಗಳುನ್ನು ಬೇರೊಬ್ಬರು ವಾಸ್ತವಕ್ಕೆ ತಿರುಗಿರುವುದನ್ನು ನಾನು ನೋಡಿದೆ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ:  ಅಕ್ರಮದಲ್ಲಿ ಸಚಿವರು, ಶಾಸಕರ ಪಾತ್ರದ ಬಗ್ಗೆ ತನಿಖೆಯಾಗಲಿ: ಎಎಪಿ

    ಒಂದು ವಾರದ ಹಿಂದೆ ಲಾಕ್‍ಆಪ್ ಪ್ರೋಮೋಗಳನ್ನು ನೋಡಿದ ತಕ್ಷಣವೇ ನ್ಯಾಯಾಲಯದ ಮೊರೆ ಹೋಗಬೇಕು ಎಂದು ನಿರ್ಧರಿಸಿದ್ದೆ. ನ್ಯಾಯಕ್ಕಾಗಿ ಸುಪ್ರೀಂ ಕೋರ್ಟ್‍ನ ಮೊರೆಹೋಗಲು ಮತ್ತು ಹೋರಾಡಲು ಸಿದ್ಧ ಎಂದು ಉದ್ಯಮಿ ತಿಳಿಸಿದರು.

  • ‘ದುಡ್ಡಿಗಾಗಿ ವಂಚನೆ’ – ಸೋನು ಸೂದ್ ವಿರುದ್ಧದ ಪೋಸ್ಟ್‌ಗೆ ಲೈಕ್ ಕೊಟ್ಟ ಕಂಗನಾ

    ‘ದುಡ್ಡಿಗಾಗಿ ವಂಚನೆ’ – ಸೋನು ಸೂದ್ ವಿರುದ್ಧದ ಪೋಸ್ಟ್‌ಗೆ ಲೈಕ್ ಕೊಟ್ಟ ಕಂಗನಾ

    ಮುಂಬೈ: ಬಾಲಿವುಡ್ ನಟ ಸೋನು ಸೂದ್ ಕೋವಿಡ್-19 ಹೆಸರಿನಲ್ಲಿ ದುಡ್ಡು ಮಾಡುತ್ತಿದ್ದಾರೆ ಎಂಬ ಸೋಶಿಯಲ್ ಮೀಡಿಯಾದ ಪೋಸ್ಟ್‌ವೊಂದಕ್ಕೆ ನಟಿ ಕಂಗನಾ ರಣಾವತ್ ಲೈಕ್ ಕೊಡುವ ಮೂಲಕರ ನೆಟ್ಟಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

    ಕಳೆದ ವರ್ಷ ಕೋವಿಡ್ ಲಾಕ್‍ಡೌನ್ ಸಮಯದಲ್ಲಿ ಅನೇಕ ಮಂದಿಗೆ ಸೆಲೆಬ್ರೆಟಿಗಳು ಸಹಾಯ ಮಾಡಿದ್ದರು. ಇವರೆಲ್ಲರ ಮಧ್ಯೆ ನಟ ಸೋನು ಸೂದ್ ಕೂಡ ಸಂಕಷ್ಟದಲ್ಲಿದ್ದ ಅನೇಕ ಜನರಿಗೆ ನೆರವು ನೀಡಿ ರೀಲ್‍ನಲ್ಲಿ ಮಾತ್ರವಲ್ಲದೇ, ರಿಯಲ್ ಲೈಫ್‍ನಲ್ಲಿಯೂ ಹೀರೋ ಆಗಿ ಮಿಂಚುವ ಮೂಲಕ ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು. ಅಲ್ಲದೆ ಹಲವಾರು ಮಂದಿ ಸೋನು ಸೂದ್ ಪ್ರತಿಮೆಯನ್ನು ಸ್ಥಾಪಿಸಿ ದೇವರಂತೆ ಪೂಜೆ ಕೂಡ ಮಾಡುತ್ತಿದ್ದಾರೆ. ಆದರೆ ಈ ಎಲ್ಲದರ ಮಧ್ಯೆ ಸಹಿಸಲಾಗದ ಕೆಲವರು ಸೋನು ಸೂದ್‍ರವನ್ನು ಟ್ರೋಲ್ ಮಾಡುತ್ತಿದ್ದಾರೆ. ಅದರಲ್ಲಿ ಬಾಲಿವುಡ್ ನಟಿ ಕಂಗನಾ ರಣಾವತ್ ಕೂಡ ಒಬ್ಬರು. ಸದಾ ಒಂದಲ್ಲಾ ಒಂದು ಕಾಂಟ್ರವರ್ಸಿ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುವ ಕಂಗನಾ ರಣಾವತ್ ಸೋನು ಸೂದ್‍ರನ್ನು ಟೀಕೆ ಮಾಡಿದ್ದ ಪೋಸ್ಟ್‍ವೊಂದಕ್ಕೆ ಲೈಕ್ ಕೊಟ್ಟಿದ್ದಾರೆ.

    ಸದ್ಯ ಕೊರೊನಾ ತನ್ನ ಎರಡನೇ ಅಲೆ ಆರ್ಭಟ ಶುರು ಮಾಡಿದ್ದು, ಈ ಬಾರಿಯೂ ನಟ ಸೋನು ಸೂದ್ ಜನರಿಗೆ ತಮ್ಮ ಕೈಲಾದಷ್ಟು ಸಹಾಯ ಮಾಡಲು ಮುಂದಾಗಿದ್ದಾರೆ. ಜೊತೆಗೆ ಇತ್ತೀಚಿಗೆ ಸೋನು ಸೂದ್ ಆಕ್ಸಿಜನ್ ಸಿಲಿಂಡರ್ ಜಾಹೀರಾತು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಆಕ್ಸಿಜನ್ ಬೆಲೆ 2 ಲಕ್ಷ ಎಂದು ಉಲ್ಲೇಖಿಸಲಾಗಿದೆ ಸದ್ಯ ಈ ಜಾಹಿರಾತು ಪೋಸ್ಟ್‍ಗೆ ಕೆಲವರು ಸೋನು ಸೂದ್ ದುಡ್ಡಿಗಾಗಿ ಹೀಗೆ ಮಾಡುತ್ತಿದ್ದಾರೆ. ಸೋನು ಸೂದ್ ಮೋಸಗಾರ, ವಂಚಕ ಎಂದು ಟ್ರೋಲ್ ಮಾಡುತ್ತಿದ್ದಾರೆ. ಸೋನುಸೂದ್ ಕಾರ್ಯಕ್ಕೆ ಎಲ್ಲರೂ ಶ್ಲಾಘಿಸುತ್ತಿದ್ದಾರೆ ಕಂಗನಾ ರಣಾವತ್ ಮಾತ್ರ ಲೈಕ್ ನೀಡಿದ್ದಾರೆ.

    ಈ ವಿಚಾರ ಸೋನು ಸೂದ್ ಅವರ ಅಭಿಮಾನಿಗಳಿಗೆ ಬೇಸರ ತರಿಸಿದ್ದು, ಕಳೆದ ವರ್ಷದಿಂದ ಸಂಕಷ್ಟದಲ್ಲಿರುವ ಕನರಿಗೆ ಸಹಾಯ ಮಾಡುತ್ತಿರುವ ಸೋನು ಸೂದ್‍ಗೆ ವಂಚಕ ಮೋಸಗಾರ ಎನ್ನುತ್ತಿರುವುದು ಬಗ್ಗೆ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.