Tag: Kanhaiya kumar

  • ಪ್ರಚಾರದಲ್ಲಿದ್ದ ಕಾಂಗ್ರೆಸ್ ಅಭ್ಯರ್ಥಿ ಕನ್ಹಯ್ಯಾ ಕುಮಾರ್ ಮೇಲೆ ಹಲ್ಲೆ

    ಪ್ರಚಾರದಲ್ಲಿದ್ದ ಕಾಂಗ್ರೆಸ್ ಅಭ್ಯರ್ಥಿ ಕನ್ಹಯ್ಯಾ ಕುಮಾರ್ ಮೇಲೆ ಹಲ್ಲೆ

    ನವದೆಹಲಿ: ಈಶಾನ್ಯ ದೆಹಲಿಯಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ ಕಾಂಗ್ರೆಸ್ (Congress) ಅಭ್ಯರ್ಥಿ ಕನ್ಹಯ್ಯಾ ಕುಮಾರ್ (Kanhaiya Kumar) ಮೇಲೆ ಹಲ್ಲೆ ಮಾಡಲಾಗಿದೆ. ಹೂ ಮಾಲೆ ಹಾಕುವ ನೆಪದಲ್ಲಿ ಬಂದು ದುಷ್ಕರ್ಮಿಗಳು ಸುತ್ತುವರಿದು ಕಪ್ಪು ಮಸಿ ಎರಚುವುದಲ್ಲದೇ ಕಪಾಳಕ್ಕೆ ಹೊಡೆದಿದ್ದಾರೆ ಎಂದು ವರದಿಯಾಗಿದೆ.

    ಕರ್ತಾರ್ ನಗರದ (Kartar Nagar) ಎಎಪಿ ಕಚೇರಿ ಬಳಿ ಘಟನೆ ನಡೆದಿದೆ ಎನ್ನಲಾಗಿದ್ದು, ಆಪ್ ಕಚೇರಿಯಿಂದ ಕನ್ಹಯ್ಯಾ ಅವರಿಗೆ ಬೀಳ್ಕೊಡಲು ಬಂದಾಗ ಮಸಿ ಎರಚಲಾಗಿದೆ. ದುಷ್ಕರ್ಮಿಗಳಿಂದ ಕನ್ಹಯ್ಯಾ ಅವರನ್ನು ರಕ್ಷಿಸಲು ಮಧ್ಯಪ್ರವೇಶ ಮಾಡಿದ ಎಎಪಿ ಮಹಿಳಾ ಕೌನ್ಸಿಲರ್ ಛಾಯಾ ಗೌರವ್ ಶರ್ಮಾ ಅವರೊಂದಿಗೂ ದುಷ್ಕರ್ಮಿಗಳು ಅನುಚಿತ ವರ್ತನೆ ಮಾಡಿದ್ದಾರೆ. ಇದನ್ನೂ ಓದಿ: ಮನೆಯಲ್ಲೇ ಮತದಾನ ಮಾಡಿದ ಅನ್ಸಾರಿ, ಮನಮೋಹನ್‌ ಸಿಂಗ್‌, ಜೋಶಿ

    ಈ ಬಗ್ಗೆ ದೂರು ದಾಖಲಿಸಿರುವ ಛಾಯಾ ಗೌರವ್ ಶರ್ಮಾ, ತಮ್ಮ ಪತಿಯನ್ನು ಪಕ್ಕಕ್ಕೆ ಕರೆದೊಯ್ದು ಬೆದರಿಕೆ ಹಾಕಿದ್ದಾರೆ. ಜನರ ಮೇಲೆ ಕಪ್ಪು ಮಸಿ ಎಸೆದಿದ್ದು, ಘಟನೆಯಲ್ಲಿ 3-4 ಮಹಿಳೆಯರು ಸೇರಿ ಕೆಲವರು ಗಾಯಗೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಇದನ್ನೂ ಓದಿ: ಸ್ವಾತಿ ಮಲಿವಾಲ್‌ ಮೇಲೆ ದೌರ್ಜನ್ಯ – ಕೇಜ್ರಿವಾಲ್‌ ಆಪ್ತ ಸಹಾಯಕ ಅರೆಸ್ಟ್‌

    ಈ ನಡುವೆ ದಾಳಿಕೋರರ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಂಡಿರುವ ದುಷ್ಕರ್ಮಿಗಳ ಪೈಕಿ ಇಬ್ಬರು ವ್ಯಕ್ತಿಗಳು ದಾಳಿಯ ಹೊಣೆಯನ್ನು ಹೊತ್ತುಕೊಂಡಿದ್ದಾರೆ. ಕನ್ಹಯ್ಯಾ ಕುಮಾರ್ ಅವರು ದೇಶವನ್ನು ವಿಭಜಿಸುವ ಬಗ್ಗೆ, ಭಾರತೀಯ ಸೇನೆಯ ವಿರುದ್ಧ ಮಾತನಾಡುತ್ತಾರೆ. ಅವರಿಗೆ ಇಂದು ನಾವು ಚಿಕಿತ್ಸೆ ನೀಡಿದ್ದೇವೆ ಎಂದು ದುಷ್ಕರ್ಮಿಗಳು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ತೀರ್ಥಯಾತ್ರೆ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಬಸ್‌ ಬೆಂಕಿಗಾಹುತಿ – 9 ಮಂದಿ ಭಕ್ತರು ಸಜೀವ ದಹನ!

  • ತುಕುಡೆ ಗ್ಯಾಂಗಿನ ನಾಯಕರ ಸಮಾಧಿ ಮೇಲೆ ಬಿಜೆಪಿ, ಸಂಘ ಬಲವಾಗಿ ಬೆಳೆದಿದೆ: ಸಿ.ಟಿ.ರವಿ

    ತುಕುಡೆ ಗ್ಯಾಂಗಿನ ನಾಯಕರ ಸಮಾಧಿ ಮೇಲೆ ಬಿಜೆಪಿ, ಸಂಘ ಬಲವಾಗಿ ಬೆಳೆದಿದೆ: ಸಿ.ಟಿ.ರವಿ

    ಚಿಕ್ಕಮಗಳೂರು: ತುಕುಡೆ ಗ್ಯಾಂಗಿನ ನಾಯಕರ ತಾತ, ಮುತ್ತಾತಂದಿರು ಈ ರೀತಿ ಹೇಳಿ ಮಣ್ಣಾಗಿದ್ದಾರೆ. ಅವರ ಮಣ್ಣಿನ ಮೇಲೆ ಬಿಜೆಪಿ ಹಾಗೂ ಸಂಘ ಬಲವಾಗಿ ಬೆಳೆದಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕಿಡಿಕಾರಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ನ ಕನ್ಹಯ್ಯ ಕುಮಾರ್ ಬಿಜೆಪಿಯನ್ನು ತುಕ್ಡೆ-ತುಕ್ಡೆ ಮಾಡುತ್ತೇವೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದರು. ಇವರ ತಾತ, ಮುತ್ತಾತರು ಇದೇ ಮಾತು ಹೇಳಿ ಕಳೆದು ಹೋಗಿದ್ದಾರೆ. ಆದರೂ ನಮ್ಮ ಸಂಘ, ಭಾರತೀಯ ಜನತಾ ಪಾರ್ಟಿ ಬಲವಾಗಿ ಬೆಳೆಯುತ್ತಲೇ ಬಂದಿದೆ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಸಮುದ್ರದ ಮಧ್ಯೆ ಡ್ರಗ್ಸ್ ಪಾರ್ಟಿ- ಸ್ಟಾರ್ ನಟನ ಮಗ ಸೇರಿ ಹತ್ತು ಮಂದಿ ವಶಕ್ಕೆ

    ಕನ್ಹಯ್ಯ ಕುಮಾರ್, ತುಕ್ಡೆ ಗ್ಯಾಂಗಿನ ಒಬ್ಬ ನಾಯಕ. ಹಿಟ್ಟು ಹಳಸಿತ್ತು, ಡ್ಯಾಷ್ ಕಾದಿತ್ತು ಎಂಬ ಗಾದೆ ಮಾತಿದೆ. ಇವತ್ತು ಕಾಂಗ್ರೆಸ್ ಪರಿಸ್ಥಿತಿ ಅದೇ ಆಗಿದೆ. ಕಾಂಗ್ರೆಸ್ ಒಂದರ ಹಿಂದೆ ಒಂದು ಚುನಾವಣೆಯಲ್ಲಿ ಸೋಲುತ್ತಿದೆ. ಆಂತರಿಕ ಪ್ರಜಾಪ್ರಭುತ್ವ ಇಲ್ಲದ ಪಕ್ಷ, ದೇಶಕ್ಕೆ ಏನು ಪ್ರಜಾಪ್ರಭುತ್ವದ ಪಾಠ ಮಾಡುತ್ತೆ ಎಂದು ವ್ಯಂಗ್ಯವಾಡಿದ್ದಾರೆ.

    ಯಾವ ಪಕ್ಷ ಆಂತರಿಕ ಪ್ರಜಾಪ್ರಭುತ್ವ ಹೊಂದಿರುತ್ತೋ ಅವರಿಗೆ ಮಾತ್ರ ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುವ ನೈತಿಕತೆ ಇರುತ್ತೆ. ಕಾಂಗ್ರೆಸ್ ನಲ್ಲಿ ಆಂತರಿಕ ಪ್ರಜಾಪ್ರಭುತ್ವ ಎಲ್ಲಿದೆ? ಅಲ್ಲಿರುವುದು ವಂಶ ಪಾರಂಪರ್ಯ ಪರಿವಾರ ವಾದ. ಒಮ್ಮೆ ಪರಿವಾರ ವಾದ ಬಂದರೆ ಅಲ್ಲಿ ಮಾಲೀಕತ್ವ ಬರುತ್ತೆ. ಇಲ್ಲಿ ಮಾಲೀಕರು ಮತ್ತು ನೌಕರರು ಇರುತ್ತಾರೆ. ಮಾಲೀಕರು ಮತ್ತು ಗುಲಾಮರು ಇರುತ್ತಾರೆ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಅಡುಗೆ ಎಣ್ಣೆ ಇನ್ನಷ್ಟು ದುಬಾರಿ

    ತುಕುಡೆ ಗ್ಯಾಂಗಿನ ನಾಯಕರಿಗೆ ಗತಿ ಇರಲಿಲ್ಲ. ಚುನಾವಣೆಯಲ್ಲಿ ಸೋತರು, ಮೊದಲು ಕಮ್ಯುನಿಸ್ಟ್ ಪಾರ್ಟಿ ಎಂದು ಇಟ್ಟುಕೊಂಡರು. ಅಲ್ಲಿ ವಿಫಲರಾದರು, ಚುನಾವಣೆಯಲ್ಲಿ ಸೋತರು. ಸೋತ ಮೇಲೆ ಕಾಂಗ್ರೆಸ್ ಗೆ ಹೋಗಿ ಸೇರಿದ್ದಾರೆ. ಇವರ ತಾತ, ಮುತ್ತಾತರು ಈ ರೀತಿ ಮಾತನಾಡಿ ಮಣ್ಣಾಗಿದ್ದಾರೆ. ಭಾರತೀಯ ಜನತಾ ಪಾರ್ಟಿ, ಆರ್.ಎಸ್.ಎಸ್. ಅವರ ಮಣ್ಣಿನ ಮೇಲೆ ಬಲವಾಗಿ ಬೆಳೆದಿದೆ ಎಂದರು.

    ಇದೇ ವೇಳೆ ಮತಾಂತರದ ನಿಷೇಧ ಕಾಯ್ದೆ ಬಗ್ಗೆ ಮಾತನಾಡಿದ ಅವರು, ಮತಾಂತರ ದೇಶಾಂತರಕ್ಕೆ ಸಮ. ಮತಾಂತರಿಯಾದವನು ತನ್ನ ಸಂಸ್ಕøತಿಯನ್ನು ಬದಲಿಸುತ್ತಾನೆ. ಮುಂದಿನ ದಿನಗಳಲ್ಲಿ ದೇಶಾಂತರದ ಬಗ್ಗೆ ಯೋಚನೆ ಮಾಡುತ್ತಾನೆ. ಎಲ್ಲಿ ಮತಾಂತರದ ಹಾವಳಿ ಜಾಸ್ತಿ ಆಗಿದೆಯೋ, ಅಲ್ಲಿ ನಾವು ಭಾರತೀಯರಲ್ಲ ಎಂಬ ಮನೋಭಾವನೆ ಬೆಳೆಯುತ್ತೆ ಅನ್ನೋದು ಗಾಂಧಿಜೀಯವರ ಮಾತು. ಗಾಂಧಿಜೀಯೇ ಹಾಗೇ ಹೇಳಿದ್ದರು ಅಂದರೆ ಅವರು ಅಪಾಯವನ್ನು ಗ್ರಹಿಸಿದ್ದರು ಎಂದರ್ಥ ಎಂದರು.

    ಮತಾಂತರ ಇಂದು ಹಲವು ರೀತಿಯಲ್ಲಿ ನಡೆಯುತ್ತಿದೆ. ಹಣ, ಆರೋಗ್ಯದ ದುರ್ಬಲತೆ, ಅಸಹಾಯಕತೆ ಹಾಗೂ ಹೆಣ್ಣನ್ನು ತೋರಿಸಿ ಮತಾಂತರ ನಡೆಯುತ್ತಿದೆ. ಈ ಬಗ್ಗೆ ಸಮಾಜ ಯೋಚನೆ ಮಾಡಬೇಕು. ಸರ್ಕಾರ ಏನು ನಿರ್ಣಯ ತೆಗೆದುಕೊಳ್ಳುತ್ತೋ ಕಾದು ನೋಡುತ್ತಿದ್ದೇವೆ. ಮತಾಂತರ ನಿಷೇಧಕ್ಕೆ ಕಠಿಣ ಕ್ರಮ ಕೈಗೊಂಡರೆ ನಮ್ಮ ಸ್ವಾತಗವಿದೆ ಎಂದರು

  • ಬಿಜೆಪಿಯನ್ನು ತುಕ್ಡೆ ತುಕ್ಡೆ ಮಾಡುತ್ತೇನೆ: ಕನ್ಹಯ್ಯ ಕುಮಾರ್

    ಬಿಜೆಪಿಯನ್ನು ತುಕ್ಡೆ ತುಕ್ಡೆ ಮಾಡುತ್ತೇನೆ: ಕನ್ಹಯ್ಯ ಕುಮಾರ್

    ನವದೆಹಲಿ: ಸಿಪಿಎಂ ಪಕ್ಷ ತೊರೆದು ಕಾಂಗ್ರೆಸ್ ಸೇರಿರುವ ಜೆಎನ್‍ಯು ವಿದ್ಯಾರ್ಥಿ ಸಂಘದ ಮಾಜಿ ಮುಖಂಡ ಕನ್ಹಯ್ಯಾ ಕುಮಾರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಇಂದು ರಾಷ್ಟ್ರೀಯ ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ನಾನು ಬಿಜೆಪಿಯನ್ನು ತುಕ್ಡೆ-ತುಕ್ಡೆ( Tukde-Tukde) ಮಾಡುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ:  ಕಾಂಗ್ರೆಸ್ ಇಲ್ಲದೆ ದೇಶ ಉಳಿಯಲು ಸಾಧ್ಯವಿಲ್ಲ: ಕನ್ನಯ್ಯ ಕುಮಾರ್

    ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬಹುದು ಎಂದು ದೃಢವಾಗಿ ನಂಬಿದ್ದೇನೆ. ಆ ಪಕ್ಷದ ಸೋಲನ್ನು ನಾನು ನೋಡುತ್ತೇನೆ. ಬಿಜೆಪಿ ನನ್ನನ್ನು ತುಕ್ಡೆ ತುಕ್ಡೆ ಗ್ಯಾಂಗ್ ಎಂದು ಕರೆಯುತ್ತದೆ. ನಾನು ಬಿಜೆಪಿಯನ್ನು ತುಕ್ಡೆ ತುಕ್ಡೆ ಮಾಡುತ್ತೇನೆ. ಬಿಜೆಪಿ ಪಕ್ಷವು ಗೋಡ್ಸೆಯನ್ನು ರಾಷ್ಟ್ರಪಿತ ಎಂದು ಪರಿಗಣಿಸುತ್ತದೆ ಹೊರತು, ಗಾಂಧೀಜಿಯನ್ನಲ್ಲ ಎಂದು ಕಿಡಿ ಕಾರಿದ್ದಾರೆ.

    ಮಹಾತ್ಮ ಗಾಂಧೀಯವರ ಹಂತಕ ನಾಥೂರಾಮ್ ಗೋಡ್ಸೆಯನ್ನು ಉಲ್ಲೇಖಿಸಿದ ಕನ್ಹಯ್ಯ ಕುಮಾರ್, ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತಾ ಶಾ ಅವರನ್ನು ನಾಥೂರಾಮ್- ಬನಾಯಿ ಜೋಡಿ ಎಂದು ಕರೆದಿದ್ದಾರೆ. ಬಿಜೆಪಿ ಪಕ್ಷದ ಸಿದ್ಧಾಂತ ರಾಷ್ಟ್ರಪಿತನ ವಿರುದ್ಧ ಸಂಪೂರ್ಣ ವಿರುದ್ಧವಾಗಿದೆ ಎಂದಿದ್ದಾರೆ.

    ನಾನು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ, ಏಕೆಂದರೆ ಇದು ಕೇವಲ ಪಕ್ಷವಲ್ಲ, ಒಂದು ಆಲೋಚನೆ. ಇದು ದೇಶದ ಅತಿ ಹಳೆಯ ಮತ್ತು ಅತ್ಯಂತ ಪ್ರಜಾಸತ್ತಾತ್ಮಕ ಪಕ್ಷ. ಕಾಂಗ್ರೆಸ್ ಪಕ್ಷ ಇಲ್ಲದೆ ದೇಶ ಉಳಿಯಲು ಸಾಧ್ಯವಿಲ್ಲ ಎಂದು ಕನ್ನಯ್ಯ ಕುಮಾರ್ ಈ ಹಿಂದೆ ಹೇಳಿದ್ದರು.

  • ನವಜೋತ್ ಸಿಂಗ್ ಸಿಧುನಂತೆ ಕನ್ಹಯ್ಯ ಕುಮಾರ್ ಕಾಂಗ್ರೆಸ್ಸನ್ನು ನಾಶ ಮಾಡುತ್ತಾರೆ: ಆರ್​​ಜೆಡಿ

    ನವಜೋತ್ ಸಿಂಗ್ ಸಿಧುನಂತೆ ಕನ್ಹಯ್ಯ ಕುಮಾರ್ ಕಾಂಗ್ರೆಸ್ಸನ್ನು ನಾಶ ಮಾಡುತ್ತಾರೆ: ಆರ್​​ಜೆಡಿ

    ಪಾಟ್ನಾ: ಕನ್ಹಯ್ಯ ಮತ್ತೊಬ್ಬ ಸಿಧು, ಕಾಂಗ್ರೆಸ್ಸನ್ನು ನಾಶ ಮಾಡುತ್ತಾರೆ ಎಂದು ಬಿಹಾರದ ಪ್ರಮುಖ ವಿರೋಧ ಪಕ್ಷವಾದ ಆರ್​​ಜೆಡಿ ( RJD) ಕನ್ಹಯ್ಯ ಕುಮಾರ್ ಕಾಂಗ್ರೆಸ್‍ಗೆ ಸೇರ್ಪಡೆ ಆಗಿದ್ದನ್ನು ಗೇಲಿ ಮಾಡಿದೆ.

    ಜೆಎನ್‍ಯುನ ಮಾಜಿ ವಿದ್ಯಾರ್ಥಿಯು ಇನ್ನೊಬ್ಬ ನವಜೋತ್ ಸಿಂಗ್ ಸಿಧುನಂತೆ ಇದ್ದಾರೆ. ಅವರು ಹಳೆಯ ಪಕ್ಷವನ್ನು ನಾಶಪಡಿಸುತ್ತಾರೆ. ಎಂದು ಆರ್​​ಜೆಡಿ ವಾಗ್ದಾಳಿ ಮಾಡಿದೆ. ಇದೇ ವೇಳೆ  ಕಾಂಗ್ರೆಸ್ ಮುಳುಗುವ ಹಡಗು ಎಂದಿದ್ದನ್ನು ವ್ಯಂಗ್ಯವಾಡಿದ ಹಿರಿಯ ಆರ್ ಜೆಡಿ ನಾಯಕ ಶಿವಾನಂದ್ ತಿವಾರಿ (Shivanand Tiwari), ಕನ್ಹಯ್ಯ ಕುಮಾರ್ ಅವರ ಸೇರ್ಪಡೆಯಿಂದ ಪಕ್ಷದಲ್ಲಿ ಯಾವುದೇ ಬದಲಾವಣೆ ಆಗಲ್ಲ ಎಂದು ಹೇಳಿದರು. ಇದನ್ನೂ ಓದಿಕಾಂಗ್ರೆಸ್ ಇಲ್ಲದೆ ದೇಶ ಉಳಿಯಲು ಸಾಧ್ಯವಿಲ್ಲ: ಕನ್ನಯ್ಯ ಕುಮಾರ್

    ಕಾಂಗ್ರೆಸ್ ದೊಡ್ಡ ಹಡಗು ಅದನ್ನು ಉಳಿಸಬೇಕಾಗಿದೆ ಎಂದು ಕನ್ಹಯ್ಯ ಮಾತನ್ನು ಉಲ್ಲೇಖಿಸಿದ ತಿವಾರಿ, ಪಕ್ಷವನ್ನು ಮತ್ತಷ್ಟು ನಾಶ ಮಾಡುವ ಇನ್ನೊಬ್ಬ ನವಜೋತ್ ಸಿಂಗ್ ಸಿಧುವಿನಂತಿದ್ದಾರೆ ಎಂದು ಹೇಳಿದರು.

    ತೇಜಸ್ವಿ ಯಾದವ್ ನೇತೃತ್ವದ ಪಕ್ಷವನ್ನು ಸಂಪರ್ಕಿಸದೆ ಕುಮಾರ್ ಅವರನ್ನು ಕಾಂಗ್ರೆಸ್ಸಿಗೆ ಸೇರಿಸಿಕೊಂಡಿದ್ದಕ್ಕೆ ಪಕ್ಷವು ಅತೃಪ್ತಿ ಹೊಂದಿದೆ ಎಂದು ಆರ್ ಜೆಡಿ ಮೂಲಗಳು ತಿಳಿಸಿವೆ. ಕಾಂಗ್ರೆಸ್ ಆರ್ ಜೆಡಿ ನೇತೃತ್ವದ ವಿರೋಧ ಮೈತ್ರಿಕೂಟದ ಮಹಾಘಟಬಂಧನ್‍ನ ಒಂದು ಭಾಗವಾಗಿದ್ದು, ಅದು 2020 ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‍ಡಿಎ ವಿರುದ್ಧ ಹೋರಾಡಿದೆ. ಬಿಹಾರ ಕಾಂಗ್ರೆಸ್ ನಾಯಕರು ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

  • ಕಾಂಗ್ರೆಸ್ ಇಲ್ಲದೆ ದೇಶ ಉಳಿಯಲು ಸಾಧ್ಯವಿಲ್ಲ: ಕನ್ನಯ್ಯ ಕುಮಾರ್

    ಕಾಂಗ್ರೆಸ್ ಇಲ್ಲದೆ ದೇಶ ಉಳಿಯಲು ಸಾಧ್ಯವಿಲ್ಲ: ಕನ್ನಯ್ಯ ಕುಮಾರ್

    ನವದೆಹಲಿ: ದೇಶದ ಅತಿ ಹಳೆಯ ಮತ್ತು ಅತ್ಯಂತ ಪ್ರಜಾಸತ್ತಾತ್ಮಕ ಪಕ್ಷ. ಕಾಂಗ್ರೆಸ್ ಪಕ್ಷ ಇಲ್ಲದೆ ದೇಶ ಉಳಿಯಲು ಸಾಧ್ಯವಿಲ್ಲ ಎಂದು ಕನ್ನಯ್ಯ ಕುಮಾರ್ ಹೇಳಿದ್ದಾರೆ.

    ನಾನು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ, ಏಕೆಂದರೆ ಇದು ಕೇವಲ ಪಕ್ಷವಲ್ಲ, ಒಂದು ಆಲೋಚನೆ. ಇದು ದೇಶದ ಅತಿ ಹಳೆಯ ಮತ್ತು ಅತ್ಯಂತ ಪ್ರಜಾಸತ್ತಾತ್ಮಕ ಪಕ್ಷ. ಕಾಂಗ್ರೆಸ್ ಪಕ್ಷ ಇಲ್ಲದೆ ದೇಶ ಉಳಿಯಲು ಸಾಧ್ಯವಿಲ್ಲ ಎಂದು ಕನ್ನಯ್ಯ ಕುಮಾರ್ ಹೇಳಿದ್ದಾರೆ. ಇದನ್ನೂ ಓದಿ: ವೈದ್ಯರ ಎಡವಟ್ಟು- ಕೊರೊನಾ ಲಸಿಕೆ ಬದಲು ರೇಬಿಸ್ ವ್ಯಾಕ್ಸಿನ್

    ಬಿಜೆಪಿಯ ಸಿದ್ಧಾಂತಗಳು ಭಾರತದ ಮೌಲ್ಯಗಳು, ಸಂಸ್ಕೃತಿ, ಇತಿಹಾಸ ಮತ್ತು ಭವಿಷ್ಯವನ್ನು ಹಾಳುಮಾಡುತ್ತಿವೆ. ಕಾಂಗ್ರೆಸ್ 200 ಕ್ಷೇತ್ರಗಳಲ್ಲಿ ಬಿಜೆಪಿ ಜತೆಗೆ ನೇರ ಹಣಾಹಣಿ ನಡೆಸುತ್ತದೆ. ಕಾಂಗ್ರೆಸ್ ಉಳಿಯದಿದ್ದರೆ, ದೇಶ ಉಳಿಯುವುದಿಲ್ಲ. ಹೀಗಾಗಿ ನಾನು ಕಾಂಗ್ರೆಸ್ ಸೇರುತ್ತಿದ್ದೇನೆ ತಿಳಿಸಿದ್ದಾರೆ.

    ನಾನು ಪ್ರಜಾಪ್ರಭುತ್ವದ ಬಗ್ಗೆ ಒಲವು ಹೊಂದಿದ್ದೇನೆ. ನಾನು ಮಾತ್ರವಲ್ಲ, ದೇಶದ ಅನೇಕರು ಕಾಂಗ್ರೆಸ್ ಇಲ್ಲ, ಕಾಂಗ್ರೆಸ್ ಒಂದು ದೊಡ್ಡ ಹಡಗು. ಅದು ಉಳಿದರೆ ಅನೇಕ ಜನರ ಮಹತ್ವಾಕಾಂಕ್ಷೆಗಳು, ಮಹಾತ್ಮ ಗಾಂಧಿ ಅವರ ಏಕತ್ವ, ಭಗತ್ ಸಿಂಗ್ ಅವರ ಧೈರ್ಯ ಮತ್ತು ಬಿಆರ್ ಅಂಬೇಡ್ಕರ್ ಅವರ ಸಮಾನತೆಯ ನೀತಿಗಳೂ ರಕ್ಷಣೆಯಾಗುತ್ತವೆ. ಹೀಗಾಗಿಯೇ ನಾನು ಅದನ್ನು ಸೇರಿಕೊಂಡಿದ್ದೇನೆ ಎಂದು ತಿಳಿಸಿದರು.

  • ಸೆ.28 ರಂದು ಕಾಂಗ್ರೆಸ್ ಸೇರಲಿದ್ದಾರೆ ಜಿಗ್ನೇಶ್ ಮೇವಾನಿ, ಕನ್ಹಯ್ಯ ಕುಮಾರ್

    ಸೆ.28 ರಂದು ಕಾಂಗ್ರೆಸ್ ಸೇರಲಿದ್ದಾರೆ ಜಿಗ್ನೇಶ್ ಮೇವಾನಿ, ಕನ್ಹಯ್ಯ ಕುಮಾರ್

    ಅಹ್ಮದಾಬಾದ್: ಗುಜರಾತ್‍ನಲ್ಲಿ ಪಕ್ಷೇತರ ಶಾಸಕರಾಗಿರುವ ಜಿಗ್ನೇಶ್ ಮೇವಾನಿ ಹಾಗೂ ಕಮ್ಯೂನಿಸ್ಟ್ ಪಕ್ಷದ ನಾಯಕ ಕನ್ಹಯ್ಯ ಕುಮಾರ್ ಸೆಪ್ಟೆಂಬರ್ 28ರಂದು ಕಾಂಗ್ರೆಸ್ ಸೇರುತ್ತಿರುವ ಕುರಿತು ಘೋಷಿಸಿದ್ದಾರೆ.

    ಭಗತ್ ಸಿಂಗ್ ಜನ್ಮದಿನಾಚರಣೆಯಂದು ಕಾಂಗ್ರೆಸ್ ಸೇರಲು ಪ್ಲ್ಯಾನ್ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜಿಗ್ನೇಶ್ ಮೇವಾನಿ ಗುಜರಾತ್‍ನ ವಡ್ಗಮ್ ಕ್ಷೇತ್ರದ ಪಕ್ಷೇತರ ಶಾಸಕರಾಗಿದ್ದಾರೆ. ಜಿಗ್ನೇಶ್ ಕಾಂಗ್ರೆಸ್ ಸೇರುತ್ತಿದ್ದಂತೆ ಗುಜರಾತ್‍ನ ಕಾರ್ಯಾಧ್ಯಕ್ಷರನ್ನಾಗಿ ಮಾಡಲು ಕಾಂಗ್ರೆಸ್ ಯೋಜಿಸಿದೆ. ಇದನ್ನೂ ಓದಿ: ಭದ್ರತಾ ಮಂಡಳಿ ಜೊತೆ ಎನ್‍ಎಸ್‍ಜಿಯಲ್ಲೂ ಭಾರತ ಇರಬೇಕು: ಬೈಡನ್

    ಕನ್ಹಯ್ಯ ಕುಮಾರ್ ಈ ಹಿಂದೆ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಯೂನಿಯನ್ ಅಧ್ಯಕ್ಷರಾಗಿದ್ದಾರೆ. ಕನ್ಹಯ್ಯ ಅವರ ಜೊತೆಗೆ ಇನ್ನಷ್ಟು ಎಡಪಂಥೀಯ ನಾಯಕರನ್ನು ಕಾಂಗ್ರೆಸ್‍ಗೆ ಸೇರಿಸುವ ನಿರೀಕ್ಷೆ ಇದೆ.

    ಮುಂದಿನ ವರ್ಷ ನಡೆಯಲಿರುವ ಗುಜರಾತ್ ವಿಧಾನಸಭೆ ಚುನಾವಣೆ ಹಾಗೂ ಮುಂದಿನ ಲೋಕಸಭಾ ಚುನಾವಣೆಗೆ ಹೊಸ ಯುವ ನಾಯಕರ ಮುಖ ಪರಿಚಯಿಸುವ ಉದ್ದೇಶದಿಂದ ಕಾಂಗ್ರೆಸ್ ಈ ಪ್ರಯೋಗ ಮಾಡುತ್ತಿದೆ. ದೆಹಲಿಯಲ್ಲಿ ನಡೆಯಲಿರುವ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಗುಜರಾತ್ ಕಾಂಗ್ರೆಸ್ ಅಧ್ಯಕ್ಷ ಹಾರ್ದಿಕ್ ಪಟೇಲ್ ಸಹ ಭಾಗವಹಿಸುತ್ತಿದ್ದಾರೆ.

  • ಪ್ರಧಾನಿ ಅಣ್ಣನ ಮಗಳ ಪರ್ಸ್ ಗೆ ಇರುವ ಬೆಲೆ ವಿದ್ಯಾರ್ಥಿಯ ಜೀವಕ್ಕಿಲ್ವಾ: ಕನ್ನಯ್ಯ ಪ್ರಶ್ನೆ

    ಪ್ರಧಾನಿ ಅಣ್ಣನ ಮಗಳ ಪರ್ಸ್ ಗೆ ಇರುವ ಬೆಲೆ ವಿದ್ಯಾರ್ಥಿಯ ಜೀವಕ್ಕಿಲ್ವಾ: ಕನ್ನಯ್ಯ ಪ್ರಶ್ನೆ

    – ಉಪನ್ಯಾಸ ತಡೆದು ಮತ್ತಷ್ಟು ಪ್ರಚಾರ ಕೊಟ್ರು
    – ಮೋದಿ, ಬಿಜೆಪಿ ವಿರುದ್ಧ ಕನ್ನಯ್ಯ ಕಿಡಿ

    ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಅಣ್ಣನ ಮಗಳ ಪರ್ಸ್ ಗೆ ಇರುವ ಬೆಲೆ ವಿದ್ಯಾರ್ಥಿಯ ಜೀವಕ್ಕೆ ಇಲ್ವಾ ಎಂದು ಜೆಎನ್‍ಯು ವಿದ್ಯಾರ್ಥಿ ಸಂಘಟನೆಯ ಮಾಜಿ ಅಧ್ಯಕ್ಷ ಕನ್ನಯ್ಯ ಕುಮಾರ್ ಪ್ರಶ್ನಿಸಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ಇತ್ತೀಚೆಗಷ್ಟೇ ಪ್ರಧಾನಿ ಮೋದಿ ಅಣ್ಣನ ಪುತ್ರಿ ದಮಯಂತಿ ಬೆನ್ ಮೋದಿ ಅವರ ಪರ್ಸ್ ಅನ್ನು ಕಳ್ಳರು ಕಿತ್ತುಕೊಂಡು ಪರಾರಿಯಾಗಿದ್ದರು. ಆ ಕಳ್ಳರಿಗಾಗಿ ಏಳು ನೂರು ಪೊಲೀಸರು ಶೋಧ ಕಾರ್ಯ ನಡೆಸಿ ಬಂಧಿಸಿದ್ದಾರೆ. ಆದರೆ ಜೆಎನ್‍ಯು ವಿದ್ಯಾರ್ಥಿ ನಜೀಬ್ ನಾಪತ್ತೆಯಾಗಿ ವರ್ಷಗಳೇ ಕಳೆದರೂ ಹುಡುಕುವ ಕೆಲಸ ಆಗುತ್ತಿಲ್ಲ.  ನಜೀಬ್ ತಾಯಿ ಇಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹಾಗಾದರೆ ಆ ವಿದ್ಯಾರ್ಥಿಯ ಜೀವಕ್ಕೆ ಬೆಲೆ ಇಲ್ವಾ ಎಂದು ಕಿರಿಕಾರಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿ ಸಹೋದರನ ಪುತ್ರಿಯ ಪರ್ಸ್ ಎಗರಿಸಿದ ಖದೀಮರು

    ನಜೀಬ್ ನಾಪತ್ತೆ ಪ್ರಕರಣ ಸಂಬಂಧ ಯಾವುದೇ ಮಾಹಿತಿ ಸಿಗುತ್ತಿಲ್ಲ ಅಂತ ಸಿಬಿಐ ಹೇಳುತ್ತಿದೆ. ಒಂದು ಪ್ರಕರಣದ ಬಗ್ಗೆ ಮಾಹಿತಿ ಸಂಗ್ರಹಿಸಲು ಸಾಧ್ಯವಾಗದ ಸಿಬಿಐ ಯಾಕಿದೆ? ಬಿಜೆಪಿ ವಿರುದ್ಧ ಮಾತನಾಡುವವರ ಮನೆಯ ಮೇಲೆ ದಾಳಿ ಮಾಡಲು ಸಿಬಿಐ ಇದೇಯಾ ಎಂದು ಗುಡುಗಿದರು.

    ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿನ ಉಪನ್ಯಾಸ ಕಾರ್ಯಕ್ರಮ ರದ್ದು ಪಡಿಸಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಕನ್ನಯ್ಯ, ಕಾನೂನು ಸುವ್ಯವಸ್ಥೆ ಕಾಪಾಡಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಉಪ ಕುಲಪತಿ ತಿಳಿಸಿದ್ದಾರೆ. ಹಾಗಾದರೆ ಪೊಲೀಸರು ಯಾಕಿದ್ದಾರೆ? ಅವರ ಸಹಾಯದಿಂದ ಉಪನ್ಯಾಸ ಕಾರ್ಯಕ್ರಮ ನಡೆಸಬಹುದಿತ್ತು. ಬಲ ಪಂಥೀಯರ ಬೆದರಿಕೆಗೆ ಹೆದರಿ ಅನುಮತಿ ನಿರಾಕರಿಸಿದ್ದು ಸರಿಯಲ್ಲ ಎಂದು ಅಸಮಾಧಾನ ಹೊರ ಹಾಕಿದರು.

    ರಾಜ್ಯ ಸರ್ಕಾರ ನನ್ನ ಕಾರ್ಯಕ್ರಮ ರದ್ದು ಪಡಿಸಬಹುದೇ ಹೊರತು ನನ್ನ ಧ್ವನಿ ಅಡಗಿಸಲು ಸಾಧ್ಯವಿಲ್ಲ. ಸಂಶೋಧನಾ ವಿಷಯದ ಮೇಲೆ ನಾನು ಮಾತನಾಡುವುದಿಲ್ಲ ಎನ್ನುವ ಕಾರಣವೊಡ್ಡಿ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಲಾಗಿದೆ. ನಾನು ಸಂಶೋಧನೆ ಮಾಡಿಯೇ ಪಿಎಚ್.ಡಿ ಪೂರ್ಣಗೊಳಿಸಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಂಶೋಧನೆ ಆಧಾರಿಸಿದ ಭಾಷಣ ಮಾಡಲು ಆಗುತ್ತಾ? ಅವರ ಭಾಷಣದಲ್ಲಿ ಎಷ್ಟು ಸತ್ಯವಿದೆ. ಪದವಿ ಶಿಕ್ಷಣ ಪಡೆಯದವರು ದೇಶ ನಡೆಸುತ್ತಿದ್ದಾರೆ. ಅವರು ಉಪ ಕುಲಪತಿಗಳ ಮೂಲಕ ನನ್ನ ಉಪನ್ಯಾಸ ಕಾರ್ಯಕ್ರಮ ರದ್ದುಪಡಿಸಿದ್ದಾರೆ ಎಂದು ಗುಡುಗಿದರು.

    ಇದು ವಿಶ್ವ ಗುರು ಬಸವಣ್ಣನವರ ಭೂಮಿ. ವಿದ್ಯಾರ್ಥಿಗಳಿಂದ ಆಮಂತ್ರಣ ನೀಡಿದ್ದಕ್ಕೆ ನಾನು ಬಂದಿದ್ದೇನೆ. ಆದರೆ ರಾಜಕೀಯದವರ ಒತ್ತಡಕ್ಕೆ ಮಣಿದು ನನ್ನ ಉಪನ್ಯಾಸ ರದ್ದುಗೊಳಿಸಲಾಗಿದೆ. ವಿಶ್ವವಿದ್ಯಾಲಯಕ್ಕೆ ರಾಜಕಾರಣಿಗಳು ಬಂದು ರಾಜಕೀಯ ಭಾಷಣ ಮಾಡುತ್ತಾರೆ. ಹಾಗಾದರೆ ಇದು ಎಷ್ಟು ಸರಿ ಎಂದು ಪ್ರಶ್ನಿಸಿದರು.

    ಇದೇ ಮೊದಲ ಬಾರಿಗೆ ಕಲಬುರಗಿಗೆ ಬಂದಿದ್ದೇನೆ. ನನ್ನ ಉಪನ್ಯಾಸ ರದ್ದುಗೊಳಿಸಿದರೂ ಪ್ರಚಾರ ಸಿಗುತ್ತದೆ. ನನ್ನ ಉಪನ್ಯಾಸದಿಂದ ವಂಚಿತರಾದ ವಿದ್ಯಾರ್ಥಿಗಳು ಗೂಗಲ್, ಯೂಟ್ಯೂಬ್‍ನಲ್ಲಿ ನನ್ನ ಬಗ್ಗೆ ತಿಳಿದುಕೊಳ್ಳುತ್ತಾರೆ. ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ಸಾವಿರಾರು ಜನರು ಸೇರುತ್ತಾರೆ. ತಮ್ಮ ಮೊಬೈಲ್‍ನಲ್ಲಿ ಉಪನ್ಯಾಸವನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಾರೆ ಎಂದು ತಿಳಿಸಿದರು.

    ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ನನ್ನ ಉಪನ್ಯಾಸ ಕಾರ್ಯಕ್ರಮವನ್ನು ಕೆಲವರು ಕುತಂತ್ರಿ ಬುದ್ಧಿಯಿಂದ ತಡೆದಿರಬಹುದು. ಆದರೆ ಸಾಮಾಜಿಕ ಜಾಲತಾಣದಲ್ಲಿ ಯಾರಿಂದಲೂ ನಮ್ಮ ಭಾಷಣವನ್ನು ತಡೆಯಲು ಸಾಧ್ಯವಿಲ್ಲ. ನನ್ನ ಭಾಷಣ, ವಿಚಾರಧಾರೆಗಳು ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ತಲುಪುತ್ತವೆ ಎಂದರು.