Tag: kannada board

  • ಕೃಷ್ಣ ಮಠದ ಫಲಕದಲ್ಲಿ ಕನ್ನಡ ಮಾಯ – ಪರ್ಯಾಯ ಅದಮಾರು ಮಠದಿಂದ ಸ್ಪಷ್ಟನೆ

    ಕೃಷ್ಣ ಮಠದ ಫಲಕದಲ್ಲಿ ಕನ್ನಡ ಮಾಯ – ಪರ್ಯಾಯ ಅದಮಾರು ಮಠದಿಂದ ಸ್ಪಷ್ಟನೆ

    ಉಡುಪಿ: ಶ್ರೀ ಕೃಷ್ಣ ಮಠದ ಬೋರ್ಡ್ ಬದಲಾವಣೆ ವಿಚಾರ ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿದೆ. ಬೋರ್ಡ್ ನಲ್ಲಿ ಕನ್ನಡ ಕಾಣೆಯಾಗಿರುವ ಬಗ್ಗೆ ಕನ್ನಡಪರ ಸಂಘಟನೆಗಳು ಮಠದ ಭಕ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಷ್ಟಾಗುತ್ತಲ್ಲೇ ಪರ್ಯಾಯ ಅದಮಾರು ಮಠದಿಂದ ಸ್ಪಷ್ಟನೆ ನೀಡಿದೆ.

    ಕೃಷ್ಣ ಮಠದ ಪುನಶ್ಚೇತನಗೊಳಿಸುವ ಜವಾಬ್ದಾರಿ ಹೊತ್ತಿರುವ ಕಲಾವಿದ ಪುರುಷೋತ್ತಮ ಅಡ್ವೆ ಮಾತನಾಡಿದ್ದಾರೆ. ಉಡುಪಿ ಕೃಷ್ಣ ಮಠವನ್ನು ಪುನಶ್ಚೇತನಗೊಳಿಸಲಾಗುತ್ತಿದೆ. ಪುನಶ್ಚೇತನದ ಸಂದರ್ಭ ಮಖ್ಯದ್ವಾರದ ಪ್ಲಾಸ್ಟಿಕ್ ಬೋರ್ಡ್ ತೆಗೆಯಲಾಗಿದೆ. ಮರದಲ್ಲಿ ತಯಾರಿಸಿ ಬೋರ್ಡ್ ಅಳವಡಿಸುವ ಯೋಜನೆ ಇದೆ. ದ್ವಾರದ ಮೇಲ್ಭಾಗದಲ್ಲಿ ಕನ್ನಡ ಬೋರ್ಡ್ ಅಳವಡಿಸುತ್ತೇವೆ. ಕೆಳಭಾಗದಲ್ಲಿ ಸಂಸ್ಕೃತ, ತುಳುವಿನಲ್ಲಿ ಬೋರ್ಡ್ ಅಳವಡಿಸಲಾಗುವುದು. ಈ ಬಗ್ಗೆ ಪರ್ಯಾಯ ಅದಮಾರು ಮಠಾಧೀಶರು ಸೂಚನೆಯನ್ನು ಕೊಟ್ಟಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ ಎಂದು ಹೇಳಿದರು.

    ಬೋರ್ಡ್ ಕಾಮಗಾರಿ ಪೂರ್ಣಗೊಳ್ಳುವ ಮೊದಲು ಲಕ್ಷದೀಪೋತ್ಸವ ಬಂದಿದೆ. ಮಠದ ಮುಖ್ಯದ್ವಾರಕ್ಕೆ ಬೋರ್ಡ್ ಅಳವಡಿಸಬೇಕಾದ ಪ್ರಮೇಯ ಬಂತು. ಕನ್ನಡದ ಬೋರ್ಡ್ ಇನ್ನಷ್ಟೇ ತಯಾರು ಆಗಬೇಕಾಗಿದೆ. ಸಂಸ್ಕೃತ ಮತ್ತು ತುಳುವಿನ ಬೋರ್ಡ್ ಮೊದಲೇ ಸಿದ್ಧವಾಗಿರುವ ಕಾರಣ ಅದನ್ನು ಅಳವಡಿಸಲಾಗಿದೆ. ತುಳುವಿಗೆ ಮಾನ್ಯತೆ ಕೊಡುವ ಉದ್ದೇಶದಿಂದ ಈ ಬೋರ್ಡ್ ಅಳವಡಿಸಲಾಗಿದೆ. ಕನ್ನಡ ಬೋರ್ಡ್ ಸಿದ್ಧವಾದ ಕೂಡಲೇ ಅದನ್ನು ಮೇಲ್ಭಾಗದಲ್ಲಿ ಅಳವಡಿಸುತ್ತೇವೆ ಎಂದರು.

  • ನಾಮಫಲಕ ಗುಮ್ಮ – ಕನ್ನಡವಿಲ್ಲದ ನಾಮಫಲಕ್ಕೆ ಶಾಸಕರ ಬೆಂಬಲ

    ನಾಮಫಲಕ ಗುಮ್ಮ – ಕನ್ನಡವಿಲ್ಲದ ನಾಮಫಲಕ್ಕೆ ಶಾಸಕರ ಬೆಂಬಲ

    ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕನ್ನಡಕ್ಕೆ ಅಗ್ರಸ್ಥಾನ ನೀಡದ ಅಂಗಡಿ ಮುಂಗಟ್ಟುಗಳ ನಾಮಫಲಕಗಳ ತೆರವು ಕಾರ್ಯಾಚರಣೆ ಇಂದು ನಗರದ ಹಲವೆಡೆ ನಡೆಯಿತು.

    ಆರೋಗ್ಯಾಧಿಕಾರಿ ಭಾಗ್ಯಲಕ್ಷ್ಮಿ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ಜಯನಗರ ಶಾಪಿಂಗ್ ಕಾಂಪ್ಲೆಕ್ಸ್ ತಂಡ ಭೇಟಿ ನೀಡಿದಾಗ ಕನ್ನಡ ನಾಮಫಲಕ ಹಾಕದ ಮಳಿಗೆಗಳ ಬೋರ್ಡ್ ತೆರವು ಮಾಡಲಾಯಿತು. ಈ ವೇಳೆ ಶಾಸಕರಿಂದ ಕರೆ ಮಾಡಿಸಿ ವ್ಯಾಪಾರಿಗಳು ಸಮಯವಾಕಾಶ ನೀಡುವಂತೆ ಒತ್ತಡ ತಂತ್ರವನ್ನು ಪ್ರಯೋಗಿಸಿದರು. ಆದರೆ ನಿಯಮವನ್ನು ವಿವರಿಸಿದ್ದೇವೆ ಎಂದು ಭಾಗ್ಯಲಕ್ಷ್ಮಿ ತಿಳಿಸಿದರು.

    ಈ ಮಧ್ಯೆ ತೆರವಿನ ಭಯದಿಂದ ಹಲವು ವ್ಯಾಪಾರಿಗಳು ಖುದ್ದು ಅವರೇ ನಾಮಫಲಕ ತೆರವು ಮಾಡಿದ್ದರು. ಇನ್ನೂ ಕೆಲವರು ನಾಮಫಲಕದಲ್ಲಿನ ಇಂಗ್ಲಿಷ್ ಅಕ್ಷರ ಇರುವ ಭಾಗಕ್ಕೆ ಪೇಪರ್ ಹಾಕಿ ಮುಚ್ಚಿದ ಸನ್ನಿವೇಶವೂ ಎದುರಾಯಿತು. ಇತ್ತ ಮಾಜಿ ಮೇಯರ್ ಮಂಜುನಾಥ್ ರೆಡ್ಡಿ ಸಂಬಂಧಿಗಳ ಜೈಲ್ ಹೋಟೆಲ್ ನಾಮಫಲಕದಲ್ಲೂ ಇಂಗ್ಲೀಷ್ ಕಾರುಬಾರು ಜೋರಾಗಿತ್ತು. ಈ ನಾಮಫಲಕವನ್ನು ಸಹ ತೆರವು ಮಾಡಲಾಯಿತು. ನಗರಾದ್ಯಂತ ಸುಮಾರು 800ಕ್ಕೂ ಹೆಚ್ಚು ಬೋರ್ಡ್ ಗಳನ್ನು ತೆರವು ಮಾಡಲಾಗಿದೆ ಎಂದು ವಲಯ ಆರೋಗ್ಯಾಧಿಕಾರಿ ಡಾ.ಶಿವಕುಮಾರ್ ಮಾಹಿತಿ ನೀಡಿದರು.

    ಇಷ್ಟೆಲ್ಲ ಹೈಡ್ರಾಮಾದ ನಡುವೆ ಒತ್ತಡಕ್ಕೆ ಮಣಿದ ಅಧಿಕಾರಿಗಳು ತೆರವು ಮಾಡಿದ ನಾಮಫಲಕಗಳನ್ನು ಮತ್ತೆ ವ್ಯಾಪಾರಿಗಳಿಗೆ ಹಿಂತಿರುಗಿಸಿದ ಸನ್ನಿವೇಶ ನಡೆಯಿತು. ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡಕ್ಕೆ ಆದ್ಯತೆ ಕಡ್ಡಾಯ ವಿಚಾರ ಮುಂದಿನ ದಿನಗಳಲ್ಲಿ ಎಷ್ಟರಮಟ್ಟಿಗೆ ಅಳವಡಿಕೆಯಾಗುತ್ತದೆ? ಈ ಕಾರ್ಯಚರಣೆ ಹೇಗೆ ಫಲ ನೀಡುತ್ತದೆ ಎಂದು ಕಾದುನೋಡಬೇಕಿದೆ.