Tag: kannada cinema

  • ಕೋವಿಡ್ ನಡುವೆಯೂ ಗೆಲುವು ತನ್ನದಾಗಿಸಿಕೊಂಡ ಮಂಸೋರೆ ಸಿನಿಮಾ

    ಕೋವಿಡ್ ನಡುವೆಯೂ ಗೆಲುವು ತನ್ನದಾಗಿಸಿಕೊಂಡ ಮಂಸೋರೆ ಸಿನಿಮಾ

    – ಯಶಸ್ವಿ 25 ದಿನ ಪೂರೈಸಿದ ‘ಆಕ್ಟ್ 1978’

    ಕೊರೊನಾ ಲಾಕ್‍ಡೌನ್ ಬಳಿಕ ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ತರುವಲ್ಲಿ ಯಶಸ್ವಿಯಾದ ಮಂಸೋರೆ ನಿರ್ದೇಶನದ ‘ಆಕ್ಟ್ 1978’ ಚಿತ್ರ 25 ದಿನ ಪೂರೈಸಿದ ಖುಷಿಯಲ್ಲಿದೆ. ನವೆಂಬರ್ 20ರಂದು ರಾಜ್ಯಾದ್ಯಂತ ಬಿಡುಗಡೆಯಾಗಿದ್ದ ‘ಆಕ್ಟ್ 1978’ ಚಿತ್ರ ಮೊದಲ ದಿನವೇ ಪ್ರೇಕ್ಷಕರು ಹಾಗೂ ವಿಮರ್ಶಕರ ಮನಸ್ಸನ್ನು ಗೆದ್ದಿತ್ತು. ಕೊರೊನಾ ನಡುವೆಯೂ ಚಿತ್ರಮಂದಿರದಲ್ಲೇ ಸಿನಿಮಾ ವೀಕ್ಷಿಸಿ, ಮೆಚ್ಚಿ 25 ದಿನಗಳ ಗೆಲುವನ್ನು ದಾಖಲಿಸಲು ಸಹಕರಿಸಿದ ಪ್ರೇಕ್ಷಕ ಪ್ರಭುಗಳಿಗೆ ಚಿತ್ರತಂಡ ಧನ್ಯವಾದ ತಿಳಿಸಿದೆ.

    ದಕ್ಷಿಣ ಭಾರತೀಯ ಚಿತ್ರರಂಗದಲ್ಲೇ ಲಾಕ್‍ಡೌನ್ ಬಳಿಕ ಮೊದಲ ಬಾರಿ ಬಿಡುಗಡೆಯಾದ ಕನ್ನಡ ಸಿನಿಮಾ ಎಂಬ ಹೆಗ್ಗಳಿಕೆ ಪಾತ್ರವಾಗಿದ್ದ ‘ಆಕ್ಟ್ 1978’ ಚಿತ್ರ ಇದೀಗ ಕೊರೊನಾ ಮಹಾಮಾರಿ ನಡುವೆಯೂ ಯಶಸ್ವಿ 25 ದಿನಗಳನ್ನು ಪೂರೈಸಿದ ಹೆಗ್ಗಳಿಕೆಯನ್ನು ತನ್ನದಾಗಿಸಿಕೊಂಡಿದೆ. ಚಿತ್ರಕ್ಕೆ ಸಿಕ್ಕ ಗೆಲುವು ಹಾಗೂ ಪ್ರತಿಕ್ರಿಯೆಯಿಂದ ಚಿತ್ರತಂಡ ಖುಷಿಯಾಗಿದ್ದು ಐವತ್ತು ದಿನಗಳ ಸಂಭ್ರಮದತ್ತ ಎದುರು ನೋಡುತ್ತಿದೆ.

    ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಮಂಸೋರೆ ನಿರ್ದೇಶನದ ಮೂರನೇ ಸಿನಿಮಾ ಇದಾಗಿದ್ದು, ಸೋಶಿಯಲ್ ಥ್ರಿಲ್ಲರ್ ಸಬ್ಜೆಕ್ಟ್ ಇರುವ ಚಿತ್ರಕ್ಕೆ ಸಿನಿರಸಿಕರಲ್ಲದೆ ಚಿತ್ರರಂಗದ ಗಣ್ಯರು ಕೂಡ ಸಿನಿಮಾ ನೋಡಿ ಭೇಷ್ ಎಂದಿದ್ದರು. ಸೋಶಿಯಲ್ ಥ್ರಿಲ್ಲರ್ ಸಬ್ಜೆಕ್ಟ್ ಒಳಗೊಂಡಿರುವ ಚಿತ್ರದಲ್ಲಿ ಯಜ್ಞಾ ಶೆಟ್ಟಿ ಅಮೋಘ ಅಭಿನಯ ಎಲ್ಲರ ಮನಸೆಳೆದಿತ್ತು. ಇನ್ನು ಅಚ್ಯುತ್ ಕುಮಾರ್, ಸುಧಾ ಬೆಳವಾಡಿ, ಪ್ರಮೋದ್ ಶೆಟ್ಟಿ, ಕೃಷ್ಣ ಹೆಬ್ಬಾಳೆ, ದತ್ತಣ್ಣ, ಸಂಚಾರಿ ವಿಜಯ್, ಶರಣ್ಯ, ಶ್ರುತಿ ಒಳಗೊಂಡಂತೆ ದೊಡ್ಡ ತಾರಾಬಳಗ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ‘ಆಕ್ಟ್ 1978’ ದೇವರಾಜ್.ಆರ್ ನಿರ್ಮಾಣದಲ್ಲಿ ಮೂಡಿ ಬಂದಿದ್ದು, ಚಿತ್ರಕ್ಕೆ ಖ್ಯಾತ ಛಾಯಾಗ್ರಾಹಕ ಸತ್ಯ ಹೆಗ್ಡೆ ಕ್ಯಾಮೆರಾ ನಿರ್ದೇಶನವಿದೆ.

     

  • ‘ವಿಂಡೋಸೀಟ್’ ಎರಡನೇ ಲಿರಿಕಲ್ ವೀಡಿಯೋ ಡಿ.18ಕ್ಕೆ ರಿಲೀಸ್

    ‘ವಿಂಡೋಸೀಟ್’ ಎರಡನೇ ಲಿರಿಕಲ್ ವೀಡಿಯೋ ಡಿ.18ಕ್ಕೆ ರಿಲೀಸ್

    ನಿರೂಪ್ ಭಂಡಾರಿ ಅಭಿನಯದ ಬಹು ನಿರೀಕ್ಷಿತ ಸಿನಿಮಾ ‘ವಿಂಡೋಸೀಟ್’ ಸ್ಯಾಂಡಲ್‍ವುಡ್ ಅಂಗಳದಲ್ಲಿ ಬಹು ನಿರೀಕ್ಷೆಯನ್ನು ಹುಟ್ಟು ಹಾಕಿದೆ. ಒಂದೊಂದೇ ಸ್ಯಾಂಪಲ್‍ಗಳ ಮೂಲಕ ಎಲ್ಲರ ಗಮನ ಸೆಳೆಯುತ್ತಿರುವ ‘ವಿಂಡೋಸೀಟ್’ ಚಿತ್ರತಂಡ ಮತ್ತೊಂದು ಲಿರಿಕಲ್ ವೀಡಿಯೋ ಸಾಂಗ್ ಬಿಡುಗಡೆ ಮಾಡಲು ಸಜ್ಜಾಗಿದೆ.

    ಈಗಾಗಲೇ ಯೋಗರಾಜ್ ಭಟ್ ಸಾಹಿತ್ಯ ಕೃಷಿಯಲ್ಲಿ ಅರಳಿರೋ ‘ಅತಿ ಚೆಂದದ ಹೂಗೊಂಚಲು’ ಲಿರಿಕಲ್ ವಿಡಿಯೋ ಸಾಂಗ್ ಬಿಡುಗಡೆಯಾಗಿ ಹಿಟ್ ಆಗಿದೆ. ಇದೀಗ ಅದೇ ಖುಷಿಯಲ್ಲಿ ಚಿತ್ರತಂಡ ‘ಖಾಲಿ ಆಕಾಶ’ ಎಂಬ ಮತ್ತೊಂದು ಲಿರಿಕಲ್ ವೀಡಿಯೋ ಸಾಂಗ್ ಬಿಡುಗಡೆ ಮಾಡುತ್ತಿದ್ದು, ಡಿಸೆಂಬರ್ 18ಕ್ಕೆ ಆನಂದ್ ಆಡಿಯೋನಲ್ಲಿ ಈ ಲಿರಿಕಲ್ ವೀಡಿಯೋ ಬಿಡುಗಡೆಯಾಗುತ್ತಿದೆ. ಮೊದಲ ಲಿರಿಕಲ್ ವೀಡಿಯೋಗೆ ಸಿಕ್ಕ ಪ್ರತಿಕ್ರಿಯೆಯಿಂದ ಖುಷಿಯಲ್ಲಿರುವ ‘ವಿಂಡೋಸೀಟ್’ ಚಿತ್ರತಂಡ ‘ಖಾಲಿ ಆಕಾಶ’ ಹಾಡಿಗೆ ಯಾವ ರೀತಿ ಪ್ರೇಕ್ಷಕ ಪ್ರಭುವಿನ ಪ್ರತಿಕ್ರಿಯೆ ಸಿಗುತ್ತೆ ಅನ್ನೋದನ್ನ ಎದುರು ನೋಡುತ್ತಿದೆ.

    ‘ವಿಂಡೋಸೀಟ್’ ರೊಮ್ಯಾಂಟಿಕ್ ಥ್ರಿಲ್ಲರ್ ಜಾನರ್ ಸಿನಿಮಾವಾಗಿದ್ದು ನಟಿ ಶೀತಲ್ ಶೆಟ್ಟಿ ಈ ಚಿತ್ರದ ಮೂಲಕ ಚೊಚ್ಚಲ ಬಾರಿಗೆ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಜಾಕ್ ಮಂಜುನಿರ್ಮಾಣದಲ್ಲಿ ಮೂಡಿ ಬರ್ತಿರೋ ‘ವಿಂಡೋಸೀಟ್’ ಚಿತ್ರದಲ್ಲಿ ಸಂಜನಾ ಆನಂದ್, ಅಮೃತಾ ಐಯ್ಯಂಗಾರ್ ನಿರೂಪ್ ಭಂಡಾರಿ ಜೊತೆ ನಾಯಕಿಯರಾಗಿ ಸ್ಕ್ರೀನ್ ಶೇರ್ ಮಾಡಿದ್ದಾರೆ. ರವಿಶಂಕರ್, ಮಧುಸೂದನ್ ರಾವ್, ಲೇಖಾ ನಾಯ್ಡು, ಸೂರಜ್ ಸೇರಿದಂತೆ ಹಲವು ಕಲಾವಿದರು ಚಿತ್ರದಲ್ಲಿ ಅಭಿನಯಿಸಿದ್ದು, ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತ ಸಂಯೋಜನೆಯಲ್ಲಿ ಚಿತ್ರದ ಹಿನ್ನೆಲೆ ಸಂಗೀತ ಹಾಗೂ ಹಾಡುಗಳು ಮೂಡಿ ಬಂದಿವೆ.

  • ಶೂಟಿಂಗ್‍ಗೆ ಸಜ್ಜಾದ ಆರ್.ಚಂದ್ರು ನಿರ್ದೇಶನದ ‘ಕಬ್ಜ’ ಚಿತ್ರ ತಂಡ

    ಶೂಟಿಂಗ್‍ಗೆ ಸಜ್ಜಾದ ಆರ್.ಚಂದ್ರು ನಿರ್ದೇಶನದ ‘ಕಬ್ಜ’ ಚಿತ್ರ ತಂಡ

    ಸ್ಯಾಂಡಲ್‍ವುಡ್‍ನ ಪ್ರತಿಭಾವಂತ ನಿರ್ದೇಶಕ ಆರ್.ಚಂದ್ರು ‘ಕಬ್ಜ’ ಚಿತ್ರದಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ರಿಯಲ್ ಸ್ಟಾರ್ ಉಪೇಂದ್ರ ನಾಯಕ ನಟನಾಗಿ ನಟಿಸುತ್ತಿರುವ ಈ ಚಿತ್ರ ಏಳು ಭಾಷೆಯಲ್ಲಿ ತೆರೆಗೆ ಬರಲಿದೆ. ಈಗಾಗಲೇ ಚಿತ್ರದ ಕೆಲ ತುಣುಕುಗಳು ಸೋಶಿಯಲ್ ಮೀಡಿಯಾದಲ್ಲಿ ಬೇಜಾನ್ ಸದ್ದು ಮಾಡಿವೆ.

    ಏಳು ಭಾಷೆಯಲ್ಲಿ ಸಿನಿಮಾ ತೆರೆಗೆ ತರುವ ಸಾಹಸಕ್ಕೆ ಕೈಹಾಕಿರುವ ಆರ್.ಚಂದ್ರು ಈ ನಡುವೆ ಶೂಟಿಂಗ್‍ನಿಂದ ಕೊಂಚ ಬಿಡುವು ಮಾಡಿಕೊಂಡು ಸ್ನೇಹಿತರ ಜೊತೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ನೀರಾವರಿ ಸಚಿವರಾದ ರಮೇಶ್ ಜಾರಕಿಹೊಳಿ, ರಾಮಚಂದ್ರೇಗೌಡ, ಲಕ್ಷ್ಮಿಪ್ರಸನ್ನ ಅವರ ಜೊತೆಗೂಡಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ನಿರ್ದೇಶಕ ಆರ್.ಚಂದ್ರು ಸಂತಸಪಟ್ಟಿದ್ದಾರೆ.

    ‘ಕಬ್ಜ’ ಆರ್.ಚಂದ್ರು, ರಿಯಲ್ ಸ್ಟಾರ್ ಉಪೇಂದ್ರ ಜೋಡಿಯ ಹ್ಯಾಟ್ರಿಕ್ ಕಾಂಬಿನೇಷನ್ ಸಿನಿಮಾ. ದುಬಾರಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಬ್ಜ ಚಿತ್ರದ ಮೇಲೆ ಇಡೀ ಭಾರತೀಯ ಚಿತ್ರರಂಗದಲ್ಲೇ ಅಪಾರ ನಿರೀಕ್ಷೆ ಮೂಡಿದೆ. ‘ಕಬ್ಜ’ ಮಾಸ್ ಹಾಗೂ ಆಕ್ಷನ್ ಓರಿಯೆಂಟೆಡ್ ಸಿನಿಮಾವಾಗಿದ್ದು ಭೂಗತಲೋಕದ ಕಹಾನಿ ಚಿತ್ರದಲ್ಲಿದೆ. ಚಿತ್ರದಲ್ಲಿನ ಉಪೇಂದ್ರ ಅವರ ಲುಕ್ ಎಲ್ಲರಿಗೂ ಪ್ರಿಯವಾಗಿದ್ದು ಉಪ್ಪಿ ಅಭಿಮಾನಿಗಳು ಕೂಡ ಕಬ್ಜ ಚಿತ್ರಕ್ಕಾಗಿ ಎದುರು ನೋಡುತ್ತಿದ್ದಾರೆ.


    ಕಬೀರ್ ದುಹಾನಿ ಸಿಂಗ್, ಕೋಟ ಶ್ರೀನಿವಾಸ್ ರಾವ್, ಜಯಪ್ರಕಾಶ್, ಪ್ರಕಾಶ್‍ರಾಜ್, ಅವಿನಾಶ್, ಜಗಪತಿಬಾಬು ಒಳಗೊಂಡಂತೆ ಘಟಾನುಘಟಿ ಕಲಾವಿದರ ದಂಡು ಕಬ್ಜ ಚಿತ್ರದಲ್ಲಿದೆ. ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಸಂಗೀತ ನಿರ್ದೇಶನದಲ್ಲಿ ‘ಕಬ್ಜ’ ಚಿತ್ರದ ಬ್ಯಾಕ್ ಗ್ರೌಂಡ್ ಸ್ಕೋರ್ ಹಾಗೂ ಹಾಡುಗಳು ಮೂಡಿಬರಲಿದೆ. ಎ.ಜೆ. ಶೆಟ್ಟಿ ಕ್ಯಾಮೆರಾ ಕೈಚಳಕದಲ್ಲಿ ಮೂಡಿಬರ್ತಿರೋ ಕಬ್ಜ ಚಿತ್ರಕ್ಕೆ ಆರ್.ಚಂದ್ರಶೇಖರ್ ಬಂಡವಾಳ ಹಾಕಿದ್ದಾರೆ. ಕೊರೊನಾದಿಂದಾಗಿ ಶೂಟಿಂಗ್‍ಗೆ ಬ್ರೇಕ್ ಹಾಕಿದ್ದ ‘ಕಬ್ಜ’ ಟೀಂ ಇದೇ ತಿಂಗಳಿನಲ್ಲಿ ಚಿತ್ರೀಕರಣಕ್ಕೆ ಹೊರಡಲಿದೆ.

  • ಶೀಘ್ರದಲ್ಲೇ ನಟನೆಗೆ ಮರಳುತ್ತೇನೆ: ಮೇಘನಾ ರಾಜ್ ಸರ್ಜಾ

    ಶೀಘ್ರದಲ್ಲೇ ನಟನೆಗೆ ಮರಳುತ್ತೇನೆ: ಮೇಘನಾ ರಾಜ್ ಸರ್ಜಾ

    ಬೆಂಗಳೂರು: ನಟಿ ಮೇಘನಾ ರಾಜ್ ಸರ್ಜಾ ಮತ್ತೆ ನಟನೆಗೆ ಹಿಂದಿರುಗುವದಾಗಿ ಹೇಳಿದ್ದಾರೆ. ಇದಕ್ಕೆ ತಮ್ಮ ಪತಿ ಚಿರಂಜೀವಿ ಸರ್ಜಾ ಕಾರಣ ಎಂದಿದ್ದಾರೆ.

    ನಟನೆ ನನ್ನ ಬದುಕಾಗಿದ್ದು, ಅದು ನನ್ನ ರಕ್ತದಲ್ಲಿ ಇದೆ. ಪತಿ ಚಿರಂಜೀವಿ ಸರ್ಜಾ, ಇಷ್ಟಪಡುವ ವಸ್ತು ಅಥವಾ ಕೆಲಸದಿಂದ ಎಂದೂ ಹಿಂದೆ ಸರಿಯಕೂಡದು ಅಂತ ಹೇಳುತ್ತಿದ್ದರು. ಹಾಗಾಗಿ ಮತ್ತೆ ಸಿನಿಮಾಗಳಲ್ಲಿ ನಟಿಸುತ್ತೇನೆ. ನನ್ನಿಂದ ಎಲ್ಲಿಯವರೆಗೂ ಸಾಧ್ಯವೂ ಅಲ್ಲಿಯವರೆಗೂ ಕಲಾ ವೃತ್ತಿಯಲ್ಲಿ ತೊಡಗಿಕೊಂಡಿರುತ್ತೇನೆ. ಶೀಘ್ರದಲ್ಲೇ ಖಂಡಿತವಾಗಿ ನಟನೆಗೆ ಮರಳುತ್ತೇನೆ ಎಂದು ಮೇಘನಾ ಹೇಳಿಕೊಂಡಿದ್ದಾರೆ.

    ಸದ್ಯ ಮೇಘನಾ ಸರ್ಜಾ ಮತ್ತು ಅವರ ಮಗನಿಗೂ ಕೊರೊನಾ ಸೋಂಕು ತಗುಲಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇದಕ್ಕೂ ಮೊದಲು ಮೇಘಾನ ಅವರ ತಾಯಿ ಪ್ರಮಿಳಾ ಜೋಷಾಯ್ ಮತ್ತು ತಂದೆ ಸುಂದರ್ ರಾಜ್ ಕೊರೊನಾ ಸೋಂಕು ತಗುಲಿತ್ತು. ಜೋಕುಮಾರಸ್ವಾಮಿ ಸಿನಿಮಾದಲ್ಲಿ ಬಾಲ ನಟಿಯಾಗಿ ನಟಿಸುವ ಮೂಲಕ ಮೇಘನಾ ರಾಜ್ ಬಣ್ಣದ ಲೋಕ ಪ್ರವೇಶಿಸಿದ್ದರು.

  • 2ನೇ ವಾರವೂ ‘ಆ್ಯಕ್ಟ್ 1978’ ಚಿತ್ರ ಹೌಸ್‍ಫುಲ್: ಮಂಸೂರೆ ಚಿತ್ರಕ್ಕೆ ಡೈನಾಮಿಕ್ ಪ್ರಿನ್ಸ್, ನಿರಂಜನ್ ದೇಶಪಾಂಡೆ ಫಿದಾ

    2ನೇ ವಾರವೂ ‘ಆ್ಯಕ್ಟ್ 1978’ ಚಿತ್ರ ಹೌಸ್‍ಫುಲ್: ಮಂಸೂರೆ ಚಿತ್ರಕ್ಕೆ ಡೈನಾಮಿಕ್ ಪ್ರಿನ್ಸ್, ನಿರಂಜನ್ ದೇಶಪಾಂಡೆ ಫಿದಾ

    ಸ್ಯಾಂಡಲ್‍ವುಡ್ ಅಂಗಳದಲ್ಲಿ ಕೊರೊನಾ ಲಾಕ್‍ಡೌನ್ ಬಳಿಕ ಹೊಸ ಅಲೆ ಸೃಷ್ಟಿಸಿರುವ ‘ಆ್ಯಕ್ಟ್ 1978’ ಚಿತ್ರ ಪ್ರತಿಯೊಬ್ಬರಿಂದ ಬಹುಪರಾಕ್ ಹೇಳಿಸಿಕೊಳ್ಳುತ್ತ ಮುನ್ನುಗ್ಗುತ್ತಿದೆ. ಪ್ರೇಕ್ಷಕ ಮಹಾಪ್ರಭು ಹಾಗೂ ಸಿನಿ ದಿಗ್ಗಜರಿಂದ ಅಭೂತ ಪೂರ್ವ ಮೆಚ್ಚುಗೆ ಪಡೆದುಕೊಂಡಿರುವ ‘ಆ್ಯಕ್ಟ್ 1978’ ಚಿತ್ರಕ್ಕೆ ಇದೀಗ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್, ಬಿಗ್ ಬಾಸ್ ಸ್ಪರ್ಧಿ ನಿರಂಜನ್ ದೇಶಪಾಂಡೆ ಫಿದಾ ಆಗಿದ್ದಾರೆ.

    ಎರಡನೇ ವಾರವೂ ಹೌಸ್‍ಫುಲ್ ಪ್ರದರ್ಶನ ಕಾಣುತ್ತಿರುವ ‘ಆ್ಯಕ್ಟ್ 1978′ ಚಿತ್ರವನ್ನು ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಹಾಗೂ ನಿರೂಪಕ, ಬಿಗ್‍ಬಾಸ್ ಸ್ಪರ್ಧಿ ನಿರಂಜನ್ ದೇಶಪಾಂಡೆ ಕೊಂಡಾಡಿದ್ದಾರೆ. ನಟ ಪ್ರಜ್ವಲ್ ದೇವರಾಜ್ ಮಾತನಾಡಿ ಈ ಚಿತ್ರದ ಬಗ್ಗೆ ಮಾತನಾಡೋದಕ್ಕೆ ನನಗೆ ತುಂಬಾ ಹೆಮ್ಮೆ ಆಗುತ್ತದೆ. ನಿಜ ಜೀವನಕ್ಕೆ ಹತ್ತಿರವಾದ ಈ ಸಿನಿಮಾ ನೋಡಿ ನಾನು ತುಂಬಾ ಭಾವುಕನಾದೆ ಎಂದಿದ್ದಾರೆ. ಇನ್ನು ನಿರಂಜನ್ ದೇಶಪಾಂಡೆ ಮಾತನಾಡಿ, ಕೆಲವು ಸಿನಿಮಾ ಬಗ್ಗೆ ಏನು ಮಾತನಾಡಬೇಕು ಅನ್ನೋದೇ ತಿಳಿಯೋದಿಲ್ಲ. ಸಿನಿಮಾ ನೋಡಿ ಆಚೆ ಬಂದ ಮೇಲೆ ಒಂದು ಕ್ಷಣ ಮೂಕವಿಸ್ಮಿತನಾದೆ. `ಆ್ಯಕ್ಟ್ 1978’ ಸಿನಿಮಾ ಒಂದು ರೆವಲೂಶನ್ ಕ್ರಿಯೇಟ್ ಮಾಡುವ ಚಿತ್ರ ಎಂದು ಪ್ರಶಂಸಿದ್ದಾರೆ. ಜೊತೆಗೆ ನಿರ್ದೇಶನ ಹಾಗೂ ಪಾತ್ರವರ್ಗಗಳ ನಟನೆಯನ್ನು ನಿರಂಜನ್ ದೇಶಪಾಂಡೆ ಕೊಂಡಾಡಿದ್ದಾರೆ.

    ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಮಂಸೂರೆ ನಿರ್ದೇಶನದ ‘ಆ್ಯಕ್ಟ್ 1978’ ಚಿತ್ರ ನವೆಂಬರ್ 20ರಂದು ಬಿಡುಗಡೆಯಾಗಿತ್ತು. ಬಿಡುಗಡೆಯಾದ ಮೊದಲ ದಿನವೇ ಚಿತ್ರತಂಡದ ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ಸಿನಿರಸಿಕರಿಂದ ಚಿತ್ರಕ್ಕೆ ಸಿಕ್ಕಿತ್ತು. ಎರಡನೇ ವಾರವೂ ಚಿತ್ರ ಜನಭರಿತ ಪ್ರದರ್ಶನವನ್ನು ಕಾಣುತ್ತಿದ್ದು, ಅಭೂತಪೂರ್ವ ಪ್ರತಿಕ್ರಿಯೆಯನ್ನು ಪಡೆದುಕೊಳ್ಳುತ್ತಿದೆ. ಚಿತ್ರದ ಬಗ್ಗೆ ಕೇಳಿ ಬರುತ್ತಿದ್ದ ಮಾತುಗಳಿಂದ ಪ್ರಭಾವಿತರಾಗಿ ಪುನೀತ್ ರಾಜ್‍ಕುಮಾರ್, ಸುದೀಪ್, ದರ್ಶನ್, ಶ್ರೀಮುರಳಿ, ಖ್ಯಾತ ಹಾಗೂ ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ, ನಟಿ ಆಶಿಕಾ ರಂಗನಾಥ್ ಸೇರಿದಂತೆ ಚಿತ್ರರಂಗದ ಖ್ಯಾತನಾಮರು ಹಾಗೂ ರಾಜಕೀಯ ನಾಯಕರು ಸಿನಿಮಾ ನೋಡಿ ಇಡೀ ಚಿತ್ರತಂಡಕ್ಕೆ ಶಹಬ್ಬಾಸ್ ಹೇಳಿ ‘ಆಕ್ಟ್ 1978’ ಚಿತ್ರದ ಯಶಸ್ಸಿನ ಪಯಣಕ್ಕೆ ಸಾಥ್ ನೀಡಿದ್ದರು.

    ದೇವರಾಜ್. ಆರ್ ನಿರ್ಮಾಣದಲ್ಲಿ ಮೂಡಿ ಬಂದಿರುವ ‘ಆ್ಯಕ್ಟ್ 1978’ ಚಿತ್ರದಲ್ಲಿ ಯಜ್ಞಾ ಶೆಟ್ಟಿ, ದತ್ತಣ್ಣ, ಅಚ್ಯುತ್ ಕುಮಾರ್, ಸಂಚಾರಿ ವಿಜಯ್, ಶ್ರುತಿ, ಸುಧಾ ಬೆಳವಾಡಿ ಸೇರಿದಂತೆ ಸ್ಟಾರ್ ಕಲಾವಿದರು ನಟಿಸಿದ್ದಾರೆ. ಕೊರೊನಾ ಭೀತಿ ನಡುವೆಯೂ ಜನ ಚಿತ್ರವನ್ನು ಚಿತ್ರಮಂದಿರಕ್ಕೆ ಬಂದು ನೋಡಿ ಪ್ರೀತಿ ತೋರಿಸುತ್ತಿರುವುದಕ್ಕೆ ಚಿತ್ರತಂಡ ದಿಲ್‍ಖುಷ್ ಆಗಿದೆ.

  • ಶೀತಲ್ ಶೆಟ್ಟಿ ನಿರ್ದೇಶನದ ‘ವಿಂಡೋಸೀಟ್’ ಚಿತ್ರದ ಅತಿ ಚೆಂದದ ಲಿರಿಕಲ್ ವಿಡಿಯೋ ಹಾಡಿನ ಕಚಗುಳಿ ಶುರು

    ಶೀತಲ್ ಶೆಟ್ಟಿ ನಿರ್ದೇಶನದ ‘ವಿಂಡೋಸೀಟ್’ ಚಿತ್ರದ ಅತಿ ಚೆಂದದ ಲಿರಿಕಲ್ ವಿಡಿಯೋ ಹಾಡಿನ ಕಚಗುಳಿ ಶುರು

    ‘ವಿಂಡೋಸೀಟ್’ ಚಿತ್ರದ “ಅತಿಚೆಂದದ ಹೂಗೊಂಚಲು ಕಿಟಕಿಯಾಚೆ ಕಂಡ ಹಾಗಿದೆ” ಹ್ಯಾಂಡ್ ಮೇಡ್ ಪೇಂಟಿಂಗ್ ಲಿರಿಕಲ್ ವಿಡಿಯೋ ಸಾಂಗ್ ಬಿಡುಗಡೆಯಾಗಿದೆ, ಫಸ್ಟ್ ಲುಕ್ ವಿಡಿಯೋ ತುಣುಕಿನಲ್ಲಿ ಈ ಹಾಡಿನ ಸಾಲು ಎಲ್ಲರ ಮನಸ್ಸಿಗೂ ಪ್ರಿಯವಾಗಿತ್ತು. ಯಾವಾಗ ಈ ಹಾಡು ಬಿಡುಗಡೆಯಾಗುತ್ತದೆ ಎಂದು ಎಲ್ಲರೂ ಕಾತುರದಿಂದ ಕಾಯುತ್ತಿದ್ರು. ಇದೀಗ ಮೋಸ್ಟ್ ಎಕ್ಸ್ ಪೆಕ್ಟೆಡ್ ಸಾಂಗ್ ‘ವಿಂಡೋಸೀಟ್’ ಚಿತ್ರತಂಡ ಬಿಡುಗಡೆ ಮಾಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ಕಮಾಲ್ ಮಾಡುತ್ತಿದೆ. ಎಲ್ಲರ ಬಾಯಲ್ಲೂ ಈಗ ಈ ಹಾಡಿನದ್ದೆ ಸಾಲುಗಳು ಗುನುಕೋಕೆ ಶುರುವಾಗಿದೆ. ಅಷ್ಟೇ ಅಲ್ಲ ಬಿಡುಗಡೆಯಾದ ಒಂದೇ ದಿನದಲ್ಲಿ ಒಂದು ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

    ವಿಕಟ ಕವಿ ಯೋಗರಾಜ್ ಭಟ್ ಸಾಹಿತ್ಯ, ಸ್ವರಮಾಂತ್ರಿಕ ವಿಜಯ್ ಪ್ರಕಾಶ್ ಕಂಠ, ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಮ್ಯೂಸಿಕ್ ಈ ಮೂವರು ಜೊತೆಯಾದ್ರೆ ಅಲ್ಲೊಂದು ರೆಕಾರ್ಡ್ ಕ್ರಿಯೇಟ್ ಆಗೋದು ಪಕ್ಕಾ. ಇದೀಗ ಈ ಮೂವರ ಕಾಂಬೀನೇಷನ್ ‘ವಿಂಡೋಸೀಟ್’ನ ಅತಿಚೆಂದದ ಹಾಡಿನಲ್ಲಿ ಎಲ್ಲರ ಮನಸೂರೆ ಮಾಡಿದೆ. ಎಲ್ಲರ ಮನಸಿಗೂ ಹಾಡು ಆವರಿಸಿದೆ. ಕೇಳುಗ ಪ್ರಿಯರು ರಿಪೀಟ್ ಮೂಡ್ ನಲ್ಲಿ ಮತ್ತೆ ಮತ್ತೆ ಹಾಡು ಕೇಳೋಕೆ ಶುರುಮಾಡಿಕೊಂಡಿದ್ದಾರೆ.

    ಯೋಗರಾಜ್ ಭಟ್ ಸಾಹಿತ್ಯ ಕೃಷಿಗೆ ಬೆರೆತ ಅರ್ಜುನ್ ಜನ್ಯ ಸಂಗೀತ, ವಿಜಯ್ ಪ್ರಕಾಶ್ ಇಂಪಾದ ದನಿ ಒಂದಕ್ಕೊಂದು ಹದವಾಗಿ ಪೋಣಿಸಿದಂತಿದೆ. ಶೀತಲ್ ಶೆಟ್ಟಿ ನಿರ್ದೇಶನದ `ವಿಂಡೋಸೀಟ್’ ಚಿತ್ರ ಆರಂಭದಿಂದಲೂ ಸದಾ ಸುದ್ದಿಯಲ್ಲಿದ್ದು ಇದೀಗ ಚಿತ್ರದ ಮೋಸ್ಟ್ ಎಕ್ಸ್ ಪೆಕ್ಟಡ್ ಹಾಡಿನ ಮೂಲಕ ಪ್ರೇಕ್ಷಕರ ಮನಸ್ಸನ್ನು ಸೂರೆಗೊಂಡಿದೆ. ನಿರೂಪ್ ಭಂಡಾರಿ ನಾಯಕ ನಟನಾಗಿ ನಟಿಸಿರೋ ಈ ಚಿತ್ರದಲ್ಲಿ ಸಂಜನ ಆನಂದ್, ಅಮೃತ ಐಯ್ಯಂಗಾರ್ ನಾಯಕನಟಿಯಾರಾಗಿ ಬಣ್ಣಹಚ್ಚಿದ್ದಾರೆ. ಜಾಕ್ ಮಂಜು ನಿರ್ಮಾಣದಲ್ಲಿ ಮೂಡಿ ಬರ್ತಿರೋ ‘ವಿಂಡೋಸೀಟ್’ ಚಿತ್ರಕ್ಕೆ ವಿಘ್ನೇಶ್ ರಾಜ್ ಕ್ಯಾಮೆರಾ ಕೈಚೆಳಕವಿದೆ. ರೊಮ್ಯಾಂಟಿಕ್ ಥ್ರಿಲ್ಲರ್ ಸಿನಿಮಾದಲ್ಲಿ ರವಿಶಂಕರ್, ಮಧುಸೂದನ್ ರಾವ್, ಲೇಖಾ ನಾಯ್ಡು, ಸೂರಜ್ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ.

  • ಇತಿಹಾಸದ ಅಚ್ಚರಿಗಳ ಮಹಾಪೂರ ‘ಗಡಿಯಾರ’

    ಇತಿಹಾಸದ ಅಚ್ಚರಿಗಳ ಮಹಾಪೂರ ‘ಗಡಿಯಾರ’

    ಡಿಯಾರ ಸಿನಿಮಾ ರಿಲೀಸ್ ಆಗಿ ಒಂದು ದಿನ ಕಳೆದಿದೆ. ಆದ್ರೆ ಇಷ್ಟು ಕಡಿಮೆ ಸಮಯದಲ್ಲೇ ‘ಗಡಿಯಾರ’ಕ್ಕೆ ಸಖತ್ ರೆಸ್ಪಾನ್ಸ್ ಸಿಕ್ಕಿದೆ. ಸಿನಿಮಾದಲ್ಲಿ ಇತಿಹಾಸಕ್ಕೆ ಕರೆದುಕೊಂಡು ಹೋಗುವ ದಾರಿ ಇದೆಯಲ್ಲಾ ಆ ದಾರಿಯಲ್ಲಿ ನಿರ್ದೇಶಕ ಅದ್ಭುತವಾಗಿ ಕರೆದುಕೊಂಡು ಹೋಗಿದ್ದಾರೆ. ಥಿಯೇಟರ್ ನಿಂದ ಹೊರ ಬಂದ ಪ್ರೇಕ್ಷಕನ ಮುಖದಲ್ಲಿ ಇತಿಹಾಸ ತಿಳಿದುಕೊಂಡ ತೃಪ್ತಿ ಕಾಣಿಸುತ್ತಿದೆ.

    ಎಷ್ಟೇ ಜನರೇಷನ್ ಕಳೆದರೂ ಹಳೆ ಕಾಲದಲ್ಲಿ ಹೂತಿಟ್ಟ ನಿಧಿ ವಿಷಯ ಯಾವಾಗಲೂ ಚಾಲ್ತಿಯಲ್ಲಿರುತ್ತೆ. ಗಡಿಯಾರದಲ್ಲೂ ನಿಧಿ ಶೋಧದ ಬಗ್ಗೆ ತೋರಿಸಲಾಗಿದೆ. ಇತಿಹಾಸ ಅರಿತ ಒಬ್ಬ ಪ್ರೊಫೆಸರ್ ಆ ನಿಧಿ ಪಡೆಯಲು ಏನೆಲ್ಲಾ ಗೇಮ್ ಫ್ಲ್ಯಾನ್ ಮಾಡುತ್ತಾನೆ. ತನಿಖೆ ಶುರುವಾದಾಗ ಪೊಲೀಸರ ಧಿಕ್ಕನ್ನೇ ಬದಲಾಯಿಸುವ ರೀತಿ, ಆ ನಿಧಿ ಕೇಸನ್ನು ಪತ್ರಕರ್ತೆಯಾಗಿ ಶೀತಲ್ ಶೆಟ್ಟಿ ನಿಭಾಯಿಸುವ ರೀತಿ ಎಲ್ಲವೂ ಪರಿಪೂರ್ಣವಾಗಿದೆ. ಸಿನಿಮಾದಲ್ಲಿ ಬರುವ ಒಂದೊಂದು ಎಳೆಯೂ ಮುಂದೆನು ಅನ್ನೋ ಪ್ರಶ್ನೆಯನ್ನ ಹುಟ್ಟು ಹಾಕುತ್ತೆ.

    ಗಡಿಯಾರ ಎಂಬ ಟೈಟಲ್ ಇಟ್ಟು ಕ್ಯೂರಿಯಾಸಿಟಿ ಹುಟ್ಟಿಸಿದ್ದ ನಿರ್ದೇಶಕ ಟೈಟಲ್ ಬಗ್ಗೆ ಕೊನೆಯಲ್ಲಿ ಅರ್ಥ ಮಾಡಿಸಿದ್ದಾರೆ. ಅದಕ್ಕೂ ಮುನ್ನ ಥಿಯೇಟರ್ ಒಳಗೆ ಕುಳಿತ ಪ್ರೇಕ್ಷಕ ಲೈಟ್ ಆಫ್ ಆಗುವವರೆಗೆ ತನ್ನದೇ ಲೋಕದಲ್ಲಿರುತ್ತಾನೆ. ಸಿನಿಮಾ ಆರಂಭವಾದ ನಂತರ ಪ್ರೇಕ್ಷನನ್ನ ತನ್ನಲ್ಲಿ ಹಿಡಿದಿಟ್ಟುಕೊಳ್ಳುವಂತೆ ಕಥೆಯ ಸಾರವನ್ನ ಎಣೆದಿದ್ದಾರೆ. ಒಂದೂವರೆ ಗಂಟೆಗಳ ಕಾಲ ವೀಕ್ಷಕನನ್ನ ಹಿಡಿದಿಟ್ಟುಕೊಂಡು ನಿರ್ದೇಶಕ ಪ್ರಬಿಕ್ ಮೊಗವೀರ್ ತನ್ನ ತಾಕತ್ತು ತೋರಿಸಿದ್ದಾರೆ. ಇಡೀ ಸಿನಿಮಾ ಸಸ್ಪೆನ್ಸ್, ಥ್ರಿಲ್ಲಿಂಗ್ ನಲ್ಲೇ ಸಾಗುತ್ತೆ.

    ಹಿಂದಿನ ಕಾಲದಲ್ಲಿ ಆಸ್ತಿಯನ್ನ ವಿಲ್ ಮಾಡಲಾಗುತ್ತಿರಲಿಲ್ಲ. ಅದೆಷ್ಟೋ ಆಸ್ತಿಗಳು ಲೆಕ್ಕಕ್ಕೆ ಇರುತ್ತಿರಲಿಲ್ಲ. ರಾಜಮನೆತನದವರ ಆಸ್ತಿ ಅಂತು ಎಲ್ಲೆಲ್ಲಿ ಇರುತ್ತಿತ್ತೋ ಈ ಬಗ್ಗೆ ಸಾಮಾನ್ಯ ಜನರಾದ ನಮಗೂ ನೂರೆಂಟು ಪ್ರಶ್ನೆಗಳಿದ್ದವು. ಅದಕ್ಕೆ ಈ ಸಿನಿಮಾದಲ್ಲಿ ಉತ್ತರ ಸಿಕ್ಕಿದೆ. ಅಷ್ಟೇ ಅಲ್ಲ ಕೈ ಮೇಲೆ ಆಗಿನ ಕಾಲದಲ್ಲಿ ಹಾಕುತ್ತಿದ್ದ ಅಚ್ಚೆ ಆಸ್ತಿ ಕಾಪಾಡುವ ಅಸ್ತ್ರವಾಗಿತ್ತು ಎಂಬ ಹೊಸ ವಿಚಾರವನ್ನು ನಿರ್ದೇಶಕರು ತಿಳಿಸಿದ್ದಾರೆ.

    ಪ್ರೊಫೆಸರ್ ಈ ವಿಚಾರವನ್ನೆ ಕೆದಕುತ್ತಾ ಹೋಗುತ್ತಾನೆ. ಈ ಮಧ್ಯೆ ಪೊಲೀಸರಿಗೆ ನಾಲ್ಕು ವಿದ್ಯಾರ್ಥಿಗಳು ಸಿಕ್ಕಿಬಿದ್ದು, ವಿಚಾರಣೆ ಎದುರಿಸುವಂತಾಗುತ್ತದೆ. ಆದ್ರೆ ಈ ಕೇಸ್ ನಲ್ಲಿ ವಿದ್ಯಾರ್ಥಿಗಳ ಪಾತ್ರವೇನು ಇರುವುದಿಲ್ಲ. ಇದರ ತನಿಖೆಯನ್ನ ಕೈಗೆತ್ತಿಕೊಂಡ ಪತ್ರಕರ್ತೆ ಶೀತಲ್ ಶೆಟ್ಟಿ ಇಡೀ ಚಿತ್ರಣವನ್ನೇ ಬದಲಾಯಿಸುತ್ತಾರೆ. ತನಿಖೆಯ ಹಾದಿ ಪ್ರೇಕ್ಷಕರನ್ನ ಕುಂತಲ್ಲೇ ಬಡಿದೆಬ್ಬಿಸುತ್ತಿರುತ್ತದೆ.

    ಉಳಿದಂತೆ ಸಿನಿಮಾದಲ್ಲಿ ಮೂರು ಹಾಡುಗಳಿದ್ದು, ಸುಭಾಷ್ ರಾಘವ್ ಸಂಗೀತ ನಿರ್ದೇಶನದಲ್ಲಿ ಇಂಪಾಗಿ ಮೂಡಿಬಂದಿವೆ. ಶ್ಯಾಮ್ ಸುಂದರ್ ಕ್ಯಾಮೆರಾ ಕೈಚಳಕ ಸುಂದರವಾಗಿದೆ. ಗಡಿಯಾರವನ್ನ ಒಮ್ಮೆ ನೋಡಿ ಬರಲು ಅಡ್ಡಿ ಇಲ್ಲ.

    ರೇಟಿಂಗ್: 3.5/5

  • ಇತಿಹಾಸ, ವಾಸ್ತವ ಎರಡನ್ನೂ ಹೇಳಲಿದೆ ಈ ‘ಗಡಿಯಾರ’ ಸಿನಿಮಾ

    ಇತಿಹಾಸ, ವಾಸ್ತವ ಎರಡನ್ನೂ ಹೇಳಲಿದೆ ಈ ‘ಗಡಿಯಾರ’ ಸಿನಿಮಾ

    ಸ್ಯಾಂಡಲ್‍ವುಡ್ ಅಂಗಳದಲ್ಲಿ ಮತ್ತೊಂದು ಸಿನಿಮಾ ಚಿತ್ರಮಂದಿರಕ್ಕೆ ಬರಲು ಸಿದ್ಧವಾಗಿದೆ. ಕಳೆದು ಹೋದ ಘಟನೆಗಳ ಜೊತೆ ವಾಸ್ತವವನ್ನು ತಿಳಿಸಲು ಬರುತ್ತಿರುವ ಈ ಚಿತ್ರದ ಹೆಸರು ‘ಗಡಿಯಾರ’. ಪ್ರಬಿಕ್ ಮೊಗವೀರ್ ನಿರ್ದೇಶನದ ‘ಗಡಿಯಾರ’ ಸಿನಿಮಾ ಕೋವಿಡ್ ಅನ್‍ಲಾಕ್ ಬಳಿಕ ಚಿತ್ರಮಂದಿರದಲ್ಲಿ ಬಿಡುಗಡೆಯಾಗುತ್ತಿರುವ ಎರಡನೇ ಚಿತ್ರ. ಇದೇ ವಾರ ನವೆಂಬರ್ 27ಕ್ಕೆ ಚಿತ್ರ ಬಿಡುಗಡೆಯಾಗುತ್ತಿದೆ.

    ಲಾಕ್‍ಡೌನ್ ಬಳಿಕ ಚಿತ್ರದ ತುಣುಕುಗಳ ಮೂಲಕ ಸದ್ದು ಮಾಡುತ್ತಿದ್ದ ಈ ಚಿತ್ರದ ಬಗ್ಗೆ ಈಗಾಗಲೇ ಸಾಕಷ್ಟು ನಿರೀಕ್ಷೆ ಗರಿಗೆದರಿದೆ. ಕಳೆದ ನವೆಂಬರ್ ನಲ್ಲಿ ಶೂಟಿಂಗ್ ಕಂಪ್ಲೀಟ್ ಮಾಡಿದ್ದ ‘ಗಡಿಯಾರ’ ಸಿನಿಮಾ ಮಾರ್ಚ್ ನಲ್ಲಿ ರಿಲೀಸ್‍ಗೆ ಸಿದ್ಧತೆ ಮಾಡಿಕೊಂಡಿತ್ತು. ಆದರೆ ಕೊರೊನಾದಿಂದಾಗಿ ಸಾಧ್ಯವಾಗಿರಲಿಲ್ಲ. ಈಗ ಬಹು ನಿರೀಕ್ಷೆಯೊಂದಿಗೆ ಸಿನಿಮಾ ತೆರೆಗೆ ತರಲು ಚಿತ್ರತಂಡ ಸಿದ್ಧವಾಗಿದೆ.

    ರಾಜಮನೆತನಗಳ ಇತಿಹಾಸ ನೆನಪಿಸುವುದರ ಜೊತೆಗೆ ಹಾರಾರ್, ಸಸ್ಪೆನ್ಸ್, ಕಾಮಿಡಿ, ಸಾಹಸ ಸೇರಿದಂತೆ ಪ್ರತಿಯೊಂದು ಕಮರ್ಶಿಯಲ್ ಎಳೆಯೂ ಚಿತ್ರದಲ್ಲಿದ್ದು ಪ್ರೇಕ್ಷಕರಿಗೆ ಭರಪೂರ ಮನರಂಜನೆ ನೀಡಲಿದೆ ಎನ್ನೋದು ಚಿತ್ರತಂಡದ ಮಾತು. ಸಿನಿಮಾ ಸೂತ್ರದಾರರಾದ ಪ್ರಬಿಕ್ ಮೊಗವೀರ್ ತಾವೇ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನದ ಜೊತೆ ನಿರ್ಮಾಣ ಜವಾಬ್ದಾರಿಯನ್ನು ಹೊತ್ತಿದ್ದಾರೆ.

    ರಾಜ್ ದೀಪಕ್ ಶೆಟ್ಟಿ, ಶೀತಲ್ ಶೆಟ್ಟಿ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಈ ಚಿತ್ರದಲ್ಲಿ ಯಶ್ ಶೆಟ್ಟಿ, ಸುಚೇಂದ್ರಪ್ರಸಾದ್, ಶರತ್ ಲೋಹಿತಾಶ್ವ, ಮನ್‍ದೀಪ್ ರಾಯ್, ಲೀಲಾಮೋಹನ್, ಗಣೇಶ್ ರಾವ್ ಸೇರಿದಂತೆ ದೊಡ್ಡ ಕಲಾವಿದರ ದಂಡು ಚಿತ್ರದಲ್ಲಿದೆ. ಇನ್ನೊಂದು ಇಂಟ್ರಸ್ಟಿಂಗ್ ಸಂಗತಿಯಂದ್ರೆ ಮಾಜಿ ಪೊಲೀಸ್ ಕಮಿಷನರ್ ಎಸ್.ಪಿ. ಸಾಂಗ್ಲಿಯಾನ, ಮಲಯಾಳಂ ನಟ ಎಂ.ಟಿ.ರಿಹಾಜ್, ಬಾಲಿವುಡ್ ನಟ ಗೌರಿಶಂಕರ್ ಅವರನ್ನು ಚಿತ್ರದ ವಿಶೇಷ ಸನ್ನಿವೇಶಕ್ಕಾಗಿ ತೆರೆ ಮೇಲೆ ಕರೆತರಲಾಗಿದೆ.

    ಆತ್ಮ ಸಿನಿಮಾಸ್ ಬ್ಯಾನರ್‍ನಡಿ ನಿರ್ಮಾಣವಾಗಿರೋ ‘ಗಡಿಯಾರ’ ಚಿತ್ರಕ್ಕೆ ಶ್ಯಾಮ್ ಸಿಂಧನೂರು ಕ್ಯಾಮೆರಾ ನಿರ್ದೇಶನ, ರಾಘವ್ ಸುಭಾಷ್ ಸಂಗೀತ ನಿರ್ದೇಶನವಿದೆ. ಸಾಕಷ್ಟು ಕುತೂಹಲವನ್ನು ಸಿನಿರಸಿಕರಲ್ಲಿ ಹುಟ್ಟುಹಾಕಿರುವ ಗರಿಯಾರ ಚಿತ್ರ ಪ್ರೇಕ್ಷಕರ ಮನಸ್ಸನ್ನು ಗೆಲ್ಲುತ್ತಾ ಎಂಬ ಪ್ರಶ್ನೆಗೆ ನಾಳೆ ಉತ್ತರ ಸಿಗಲಿದೆ.

  • ಅಂಬಿ ಪುಣ್ಯಸ್ಮರಣೆ – ಮಿಸ್ ಯೂ ಅಣ್ಣ ಅಂದ್ರು ಪ್ರತಾಪ್ ಸಿಂಹ

    ಅಂಬಿ ಪುಣ್ಯಸ್ಮರಣೆ – ಮಿಸ್ ಯೂ ಅಣ್ಣ ಅಂದ್ರು ಪ್ರತಾಪ್ ಸಿಂಹ

    ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್ ಅವರ ಎರಡನೇ ಪುಣ್ಯಸ್ಮರಣೆ ಹಿನ್ನೆಲೆ ಸಂಸದ ಪ್ರತಾಪ್ ಸಿಂಹ ಸಹ ಟ್ವಿಟ್ಟರ್ ನಲ್ಲಿ ಮಿಸ್ ಯೂ ಅಣ್ಣ ಎಂದು ಬರೆದುಕೊಂಡಿದ್ದಾರೆ.

    ಎರಡನೇ ಪುಣ್ಯಸ್ಮರಣೆ ಹಿನ್ನೆಲೆ ಕಲಾವಿದರು, ಗಣ್ಯರು ಸೇರಿದಂತೆ ಅಭಿಮಾನಿಗಳು ಅಂಬರೀಶ್ ಅವರ ಜೊತೆಗಿನ ಒಡನಾಟ ನೆನಪು ಮಾಡಿಕೊಳ್ಳುತ್ತಿದ್ದಾರೆ. ಅದೇ ರೀತಿ ಸಂಸದ ಪ್ರತಾಪ್ ಸಿಂಹ ಟ್ವಿಟ್ಟರ್ ನಲ್ಲಿ ಅಂಬರೀಶ್ ಜೊತೆ ಕ್ಲಿಕ್ಕಿಸಿಕೊಂಡಿರುವ ಫೋಟೋ ಹಂಚಿಕೊಂಡು ಟ್ವೀಟ್ ಮಾಡಿದ್ದಾರೆ.

    ಪ್ರತಾಪ್ ಸಿಂಹ ಟ್ವೀಟ್: ಎಲ್ಲರಿಂದಲೂ ಪ್ರೀತಿಸಲ್ಪಡುವುದಕ್ಕೂ, ಎಲ್ಲರೂ ಭಯಪಡುವುದಕ್ಕೂ ಬಹಳ ವ್ಯತ್ಯಾಸವಿದೆ. ಎಲ್ಲರ ಪ್ರೀತಿ, ಅಭಿಮಾನ ಗಳಿಸುವಂಥದ್ದಾಗಿತ್ತು ಅಂಬರೀಶಣ್ಣನ ವ್ಯಕ್ತಿತ್ವ. ಎಲ್ಲರಿಗೂ ಒಬ್ಬರೋ, ಇಬ್ಬರೋ ಅಥವಾ ನಾಲ್ಕೈದು ಜನರೋ ಆಪ್ತ ಸ್ನೇಹಿತರಿರುತ್ತಾರೆ. ಆದರೆ ನೂರಾರು ಜನ ಆಪ್ತ ಸ್ನೇಹಿತರಿದ್ದಿದ್ದು, ಭೇಟಿಯಾದವರಿಗೆಲ್ಲ ನನ್ನ ಆಪ್ತರು ಎಂಬ ಫೀಲಿಂಗ್. ಶಾಶ್ವತವಾದ ನೆನಪಿನ ಬುತ್ತಿ ಕೊಡುತ್ತಿದ್ದಿದ್ದು ಅಂಬರೀಶಣ್ಣ ಮಾತ್ರ ಮಿಸ್ ಯು ಅಣ್ಣ.

    ಸುಮಲತಾ ಅಂಬರೀಶ್, ಪುತ್ರ ಅಭಿಷೇಕ್, ದರ್ಶನ್ ಹಾಗೂ ಇತರ ಗಣ್ಯರು ಅಂಬಿ ಸಮಾಧಿಗೆ ತೆರಳಿ ಪೂಜೆ ಸಲ್ಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಭಿಷೇಕ್, ಅರ್ಜುನ್ ಸರ್ಜಾ ಅವರು ಮನೆಗೆ ಬಂದಿದ್ದ ಸಮಯದಲ್ಲಿ ಸುಮಾರು 4 ಗಂಟೆಗಳ ಕಾಲ ಅಪ್ಪನ ಬಗ್ಗೆ ಚರ್ಚೆ ಮಾಡಿದ್ವಿ. ನಿನ್ನೆ ಕೂಡ ನಾನು ಹಾಗೂ ದರ್ಶನ್ ಅಣ್ಣ ಇಬ್ಬರೇ ಮನೆಯಲ್ಲಿ ಕುಳಿತುಕೊಂಡು ಹಳೆಯ ನೆನಪುಗಳನ್ನು ಹಂಚಿಕೊಳ್ತಿದ್ವಿ. ಹೀಗೆ ಅಪ್ಪ ತುಂಬಾ ನೆನಪಾಗ್ತಾರೆ ಎಂದರು. ಇದನ್ನೂ ಓದಿ: ಅಂಬರೀಶ್ ಮಗನಾಗಿ ಹುಟ್ಟಿದ್ದು ನನ್ನ ಪುಣ್ಯ: ಅಭಿಷೇಕ್

    ಅಪ್ಪ ನನಗೆ ಪ್ರತಿದಿನ ನೆನಪಾಗ್ತಾರೆ. ಅದರಲ್ಲೂ ಪುಣ್ಯತಿಥಿ ಹತ್ತಿರ ಆಗ್ತಿದ್ದಂತೆ ಅವರ ಬಗ್ಗೆಯೇ ಚರ್ಚೆ ಶುರುವಾಗುತ್ತೆ. ಇಂದು ಅವರ ಹೆಸರಲ್ಲಿ ಒಳ್ಳೊಳ್ಳೆಯ ಕಾರ್ಯಗಳು ನಡೆಯುತ್ತವೆ. ಅದರಲ್ಲಿ ನಾವು ಸುಖ- ಸಂತೋಷವನ್ನು ಹುಡುಕಬೇಕು ಎಂದು ತಿಳಿಸಿದರು

  • ಯುವರತ್ನನ ‘ಪವರ್ ಆಫ್ ಯುಥ್’ ಆರ್ಭಟಕ್ಕೆ ನಿಗದಿಯಾಯ್ತು ಮುಹೂರ್ತ

    ಯುವರತ್ನನ ‘ಪವರ್ ಆಫ್ ಯುಥ್’ ಆರ್ಭಟಕ್ಕೆ ನಿಗದಿಯಾಯ್ತು ಮುಹೂರ್ತ

    ಬೆಂಗಳೂರು: ಪುನೀತ್ ರಾಜ್‍ಕುಮಾರ್ ಅಭಿನಯದ ಯುವರತ್ನ ಸಿನಿಮಾ ತಂಡದಿಂದ ಹೊಸ ಅಪ್‍ಡೇಟ್ ಹೊರ ಬಂದಿದ್ದು, ಡಿಸೆಂಬರ್ 2, 2020ರಂದು ಯುವರತ್ನ ಸಿನಿಮಾದ ಹಾಡು ರಿಲೀಸ್ ಆಗಲಿದೆ.

    ಇಂದು ಬೆಳಗ್ಗೆ 11 ಗಂಟೆಗೆ ಟ್ವೀಟ್ ಮೂಲಕ ಚಿತ್ರದ ಮಾಹಿತಿ ನೀಡಿರುವ ನಿರ್ದೇಶಕ ಸಂತೋಷ್ ಆನಂದರಾಮ್ ಸಾಂಗ್ ರಿಲೀಸ್ ದಿನಾಂಕ ರಿವೀಲ್ ಮಾಡಿದ್ದಾರೆ. ಭಾನುವಾರ ಟ್ವೀಟ್ ಮಾಡಿದ್ದ ಸಂತೋಷ್ ಆನಂದರಾಮ್, ನಾಳೆ ಅಭಿಮಾನಿಗಳಿಗೆ ಅಭಿಮಾನದ ಸುದ್ದಿಗಳು. ಯುವರತ್ನ ನಿಮ್ಮ ಸ್ವತ್ತು ಬೆಳೆಸಿ ಹರಿಸಿ. ಸೋಮವಾರ ಬೆಳಗ್ಗೆ 11 ಗಂಟೆಗೆ ಗುಡ್ ನ್ಯೂಸ್ ನೀಡೋದಾಗಿ ಬರೆದುಕೊಂಡಿದ್ದರು.

    ಪುನೀತ್ ರಾಜ್‍ಕುಮಾರ್ ಸಹ ಸಂತೋಷ್ ಆನಂದರಾಮ್ ಟ್ವೀಟ್ ನ್ನು ರಿಟ್ವೀಟ್ ಮಾಡಿಕೊಂಡಿದ್ದರು. ರಿಲೀಸ್ ಜೊತೆಗೂ ಮತ್ತೊಂದು ಸಿಹಿಯನ್ನ ಚಿತ್ರತಂಡ ನೀಡಿದೆ. ಡಿಸೆಂಬರ್ ಎರಡರಂದೇ ಯುವರತ್ನ ತೆಲಗು ಭಾಷೆಯಲ್ಲಿಯೂ ರಿಲೀಸ್ ಆಗಲಿದೆ.

    `ರಾಜಕುಮಾರ` ಸಿನಿಮಾಕ್ಕೆ ಆಕ್ಷನ್ ಕಟ್ ಹೇಳಿದ್ದ ನಿರ್ದೇಶಿಸಿದ ಸಂತೋಷ್ ಆನಂದ್ ರಾಮ್ ಅವರೇ `ಯುವರತ್ನ` ಸಿನಿಮಾವನ್ನು ನಿರ್ದೇಶಿಸಿದ್ದಾರೆ. ಸಿನಿಮಾದಲ್ಲಿ ಪವರ್ ಸ್ಟಾರ್ ಗೆ ಜೋಡಿಯಾಗಿ ಸಯೇಷ ಸೈಗಲ್ ಕಾಣಿಸಿಕೊಳ್ಳಲಿದ್ದು, ಇದರ ಜೊತೆಗೆ ಸೋನು, ಡಾಲಿ ಧನಂಜಯ್, ವಸಿಷ್ಠ ಸಿಂಹ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.