Tag: kannada cinema

  • ಹೊಸತು ಬೇಕು, ಹಳತು ಇರಲಿ- ಎರಡು ಬೆರತಾಗಲೇ ಹಳ್ಳಿಗಳಿಗೆ ಆನೆಬಲ

    ಹೊಸತು ಬೇಕು, ಹಳತು ಇರಲಿ- ಎರಡು ಬೆರತಾಗಲೇ ಹಳ್ಳಿಗಳಿಗೆ ಆನೆಬಲ

    ನೆಬಲ ಸಂಪೂರ್ಣ ಚಿತ್ರ ಹಳ್ಳಿ ಹಿನ್ನೆಲೆಯಲ್ಲೇ ನಡೆಯುತ್ತೆ. ಹಳ್ಳಿಯ ಆಚರಣೆ, ಸಂಪ್ರದಾಯ, ಕಟ್ಟುಪಾಡು, ಹಬ್ಬ, ಹೀಗೆ ಎಲ್ಲವನ್ನು ತೋರಿಸುತ್ತ ಸಂದೇಶವನ್ನು ನೀಡಿದ್ದಾರೆ ನಿರ್ದೇಶಕರು. ಮಹಾತ್ಮ ಗಾಂಧೀಜಿ ಹೇಳಿದ ಹಳ್ಳಿಗಳೇ ದೇಶದ ಅಭಿವೃದ್ಧಿಯ ಜೀವಾಳ ಅನ್ನೋದನ್ನ ಮತ್ತೆ ಮತ್ತೆ ನೆನಪಿಸಿದ್ದಾರೆ. ತ್ರಂತ್ರಜ್ಞಾನದ ಜೊತೆ ಹಳ್ಳಿಯ ಆಚರಣೆಗಳು, ಸಂಪ್ರದಾಯಗಳು ಕಳೆದು ಹೋಗ್ಬಾರ್ದು ಎರಡು ಒಟ್ಟೊಟ್ಟಿಗೆ ಸಾಗಬೇಕು ಎಂದು ಎಚ್ಚರಿಸುತ್ತಾ ಭರಪೂರ ಮನರಂಜನೆಯನ್ನು ನೀಡುತ್ತೆ.

    ಮಂಡ್ಯದಲ್ಲಿ ಹಿಂದಿನಿಂದಲೂ ಆಚರಣೆಯಲ್ಲಿರುವ ಮುದ್ದೆ ತಿನ್ನುವ ಸ್ಪರ್ಧೆಯೇ ಈ ಚಿತ್ರದ ಕಥಾವಸ್ತು. ಮುದ್ದೆ ತಿನ್ನುವ ಸ್ಪರ್ಧೆಯ ಸುತ್ತವೇ ಇಡೀ ಚಿತ್ರ ಸುತ್ತುತ್ತದೆ. ಎಲ್ಲಾ ಹಳ್ಳಿಗಳಲ್ಲೂ ಇರುವಂತೆ ಈ ಹಳ್ಳಿಯ ಬಗ್ಗೆ ಸದಾ ಆಲೋಚಿಸುವ ಶಿವು ಎಂಬ ಹುಡುಗ ಈ ಚಿತ್ರದ ಕಥಾ ನಾಯಕ. ಯಾವಾಗಲು ಸಕಾರಾತ್ಮಕ ಯೋಚನೆ ಜೊತೆಗೆ ಜಾಲಿಯಾಗಿರುವ ಹುಡುಗ ಶಿವು. ಹಳ್ಳಿಯ ಬಗ್ಗೆ, ಜನ್ರ ಬಗ್ಗೆ ಅಪಾರ ಅಭಿಮಾನ ಇಟ್ಟುಕೊಂಡಿರುತ್ತಾನೆ. ಜೊತೆಗೆ ಆತನ ಪ್ರೇಮ ಪುರಾಣವೂ ಚಿತ್ರದಲ್ಲಿ ಅಷ್ಟೇ ಇಂಟ್ರಸ್ಟಿಂಗ್ ಆಗಿದೆ. ಕೃಷಿಯೇ ಉಸಿರಾಗಿಸಿಕೊಂಡಿರುವ ಹಳ್ಳಿ ಜನ್ರು ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಬಳಸಬೇಕು ಆಗ ಜನ್ರ ಬದುಕು ಹಸನಾಗುತ್ತೆ, ಸುಧಾರಿಸುತ್ತೆ ಅನ್ನೋದು ಶಿವು ಆಲೋಚನೆ ಒಂದು ಕಡೆ ಆದ್ರೆ, ಹಿಂದಿನಿಂದ ನಡೆದುಬಂದ ಮುದ್ದೆ ತಿನ್ನುವ ಸ್ಪರ್ಧೆ ಇನ್ನೊಂದು ಕಡೆ. ಶಿವು ಕನಸು ಈಡೇರುತ್ತಾ? ಮುದ್ದೆ ತಿನ್ನುವ ಸ್ಪರ್ಧೆ ಹೇಗಿತ್ತು ಅನ್ನೋದಕ್ಕೆ ಆನೆಬಲ ಚಿತ್ರ ನೋಡಿಯೇ ತಿಳಿಯಬೇಕು.

    ನೈಜತೆಗೆ ಹತ್ತಿರವಾಗಿ ಸಾಗೋ ಆನೆಬಲ ಚಿತ್ರ ನೋಡುಗರನ್ನು ಸೆಳೆಯುತ್ತೆ. ಮಂಡ್ಯ ಆಡು ಭಾಷೆಯ ಸೊಗಡನ್ನು ತೆರೆ ಮೇಲೆ ಸವಿಯೋ ಆನಂದ ಚಿತ್ರದ ಮೇಲೆ ಇನ್ನಷ್ಟು ಸೆಳೆತ ಉಂಟು ಮಾಡುತ್ತೆ. ಸಿಲ್ವರ್ ಸ್ಕ್ರೀನ್ ಮೇಲೆ ಆಡಂಬರ ಅಬ್ಬರ ನೋಡಿ ಬೋರಾಗಿದ್ದ ಪ್ರೇಕ್ಷಕನಿಗೆ ಹಳ್ಳಿ ಸೊಬಗು, ಸೊಗಡು ಸವಿಯೋ ಅವಕಾಶವನ್ನು ಆನೆಬಲ ಚಿತ್ರ ತಂದಿದೆ. ನಿರ್ದೇಶಕರ ಈ ಪ್ರಯತ್ನಕ್ಕೆ ನಾವು ಶಬ್ಬಾಶ್ ಹೇಳಲೇಬೇಕು. ಒಟ್ಟಿನಲ್ಲಿ ಮುದ್ದೆ ಉಂಡಷ್ಟೇ ಖುಷಿಯನ್ನು ಆನೆಬಲ ಚಿತ್ರ ನೀಡುತ್ತೆ.

    ಚಿತ್ರ: ಆನೆಬಲ
    ನಿರ್ದೇಶನ: ಸೂನಗಹಳ್ಳಿ ರಾಜು
    ನಿರ್ಮಾಪಕ: ಎ.ವಿ.ವೇಣುಗೋಪಾಲ್ ಅಡಕಮಾರನಹಳ್ಳಿ
    ಸಂಗೀತ ನಿರ್ದೇಶನ: ಪೂರ್ಣಚಂದ್ರ ತೇಜಸ್ವಿ
    ಛಾಯಾಗ್ರಾಹಕ: ಜಿ.ಟಿ. ಬೆಟ್ಟೇಗೌಡ
    ತಾರಾಬಳಗ: ಸಾಗರ್, ರಕ್ಷಿತ, ಇತರರು

    ರೇಟಿಂಗ್-3.5/4

  • ಹಳ್ಳಿ ಹೈಕ್ಳ ನಿದ್ದೆ ಕೆಡಿಸುತ್ತಿದೆ ‘ಆನೆ ಬಲ’ ಹಾಡುಗಳು..!

    ಹಳ್ಳಿ ಹೈಕ್ಳ ನಿದ್ದೆ ಕೆಡಿಸುತ್ತಿದೆ ‘ಆನೆ ಬಲ’ ಹಾಡುಗಳು..!

    ಮುದ್ದೆ ತಿಂದು ಒಳ್ಳೆ ನಿದ್ದೆ ಮಾಡು ಅನ್ನೋ ಮಾತಿದೆ. ಅದ್ರಲ್ಲೂ ನಾಟಿ ಕೋಳಿ ಸಾರು ಮಾಡಿದಾಗ ರಾಗಿ ಮುದ್ದೆ ಇಲ್ಲಂದ್ರೆ ಊಟದ ರುಚಿ ಗೊತ್ತಾಗೋದೆ ಇಲ್ಲ. ಇಂತ ರಾಗಿ ಮುದ್ದೆಯನ್ನೇ ಆಧಾರವಾಗಿಟ್ಟುಕೊಂಡು ಸೂನಗಹಳ್ಳಿ ರಾಜು ‘ಆನೆ ಬಲ’ ಎಂಬ ಸಿನಿಮಾವನ್ನು ಸಿದ್ಧ ಮಾಡಿದ್ದಾರೆ. ಇದೇ 28 ರಂದು ಸಿನಿಮಾ ತೆರೆ ಮೇಲೆ ರಾರಾಜಿಸಲಿದೆ. ಸಿನಿಮಾ ಈಗಾಗಲೇ ಟ್ರೇಲರ್ ನಿಂದಲೇ ಸದ್ದು ಮಾಡಿರುವ ‘ಆನೆ ಬಲ’ದಲ್ಲಿ ಮತ್ತಷ್ಟು ವಿಶೇಷತೆಗಳಿವೆ. ಯೋಗರಾಜ್ ಭಟ್ಟರ ಸಾಹಿತ್ಯ ಈ ಸಿನಿಮಾದಲ್ಲಿದೆ.

    ಯೋಗರಾಜ್ ಭಟ್ಟರ ಸಾಹಿತ್ಯ ಅಂದ್ರೆ ಯುವಕರಿಗೆ ಎಲ್ಲಿಲ್ಲದ ಕ್ರೇಜು. ಅವರ ಹಾಡುಗಳು ಅಂದ್ರೆ ಯುವಕರಿಗೆ ಮತ್ತೇರಿಸುವಂತಿರುತ್ತದೆ. ಈ ಸಿನಿಮಾದಲ್ಲೂ ಯೋಗರಾಜ ಭಟ್ಟರ ಸಾಹಿತ್ಯವಿದ್ದು ಇನ್ನಷ್ಟು ನಿರೀಕ್ಷೆಯನ್ನ ಹುಟ್ಟಿಸಿದೆ. ಜಾನಪದ ಶೈಲಿಗೆ, ಯೋಗರಾಜ ಭಟ್ಟರ ಸಾಹಿತ್ಯ ಬೆರೆತರೆ ಅಲ್ಲೊಂದು ಹುಚ್ಚೆಬ್ಬಿಸುವ ಹಾಡುಗಳು ಕಿವಿಗೆ ಬೀಳದೆ ಇರಲು ಸಾಧ್ಯವೇ ಇಲ್ಲ. ಯೋಗರಾಜ್ ಭಟ್ಟರ ಸಾಹಿತ್ಯಕ್ಕೆ ಪೂರ್ಣಚಂದ್ರ ತೇಜಸ್ವಿಯವರ ಸಂಗೀತವಿದೆ.

    ಪೂರ್ಣಚಂದ್ರ ತೇಜಸ್ವಿಯವರ ಹಾಡುಗಳಿಗೆ ಫಿದಾ ಆಗದವರೇ ಇಲ್ಲ. ಹಳ್ಳಿ ಸೊಗಡಿನ ಕಥೆಗೆ ಅದ್ಭುತವಾದ ಸಾಹಿತ್ಯ ನೀಡಿರುವ ಯೋಗರಾಜ್ ಭಟ್ಟರು ಒಂದು ಕಡೆಯಾದ್ರೆ, ಯುವಕರ ಹೃದಯ ತಟ್ಟುವಂತ, ವಾವ್ ಎನ್ನಿಸುವಂತ ಸಂಗೀತ ನೀಡುವ ಪೂರ್ಣಚಂದ್ರ ತೇಜಸ್ವಿಯವರು ಇನ್ನೊಂದು ಕಡೆ. ಹೀಗಾಗಿ ಒಂದೊಳ್ಳೆ ಹಾಡುಗಳು ಸಿನಿಮಾದಲ್ಲಿ ಮೂಡಿ ಬಂದಿವೆ. ಈಗಾಗಲೇ ರಿಲೀಸ್ ಆಗಿರುವ ‘ಮಳವಳ್ಳಿ ಜಾತ್ರೆಲಿ, ರಾಗಿ ಮುದ್ದೆ’ ಹಾಡುಗಳು ಹಿಟ್ ಆಗಿವೆ. ಸಿನಿಮಾದಲ್ಲಿ ಜಾನಪದ ಶೈಲಿಯ ಹಾಡುಗಳು ಕಿವಿಗೆ ಇಂಪು ನೀಡುತ್ತವೆ.

    ಜನತಾ ಟಾಕೀಸ್ ನ ಚೊಚ್ಚಲ ಕಾಣಿಕೆಯೇ ಈ ‘ಆನೆ ಬಲ’. ಎ.ವಿ ವೇಣುಗೋಪಾಲ್ ಅಡಕಿಮಾರನಹಳ್ಳಿ ಈ ಸಿನಿಮಾದ ನಿರ್ಮಾಣದ ಹೊಣೆ ಹೊತ್ತಿದ್ದಾರೆ. ಸೂನಗಹಳ್ಳಿ ರಾಜು ನಿರ್ದೇಶನ ಮಾಡಿದ್ದಾರೆ. ಸಾಗರ್ ನಾಯಕನಾಗಿದ್ದು, ರಕ್ಷಿತಾ ನಾಯಕಿಯಾಗಿದ್ದಾರೆ. ಮಲ್ಲರಾಜು, ಉದಯ್ ಕುಮಾರ್, ಮುತ್ತು ರಾಜ್ ಸೇರಿದಂತೆ ಅನೇಕರು ತಾರಾಬಳಗದಲ್ಲಿದ್ದಾರೆ. ಇದೆ ತಿಂಗಳ 28 ರಂದು ಸಿನಿಮಾ ತೆರೆಗೆ ಬರಲು ಸಿದ್ಧವಾಗಿದೆ.

  • ಬೇರೆ ಭಾಷೆ ಸಿನಿಮಾಗಿಂತ ‘ಜಂಟಲ್ ಮ್ಯಾನ್’ ಯಾವುದರಲ್ಲೂ ಕಡಿಮೆ ಇಲ್ಲ..!

    ಬೇರೆ ಭಾಷೆ ಸಿನಿಮಾಗಿಂತ ‘ಜಂಟಲ್ ಮ್ಯಾನ್’ ಯಾವುದರಲ್ಲೂ ಕಡಿಮೆ ಇಲ್ಲ..!

    ಪ್ರಜ್ವಲ್ ದೇವರಾಜ್ ಅಭಿನಯದ ‘ಜಂಟಲ್ ಮ್ಯಾನ್’ ಸಿನಿಮಾ ತೆರೆಕಂಡು ಯಶಸ್ಸಿನ ಹಾದಿಯಲ್ಲಿ ಓಡುತ್ತಿದೆ. ಕನ್ನಡ ಚಿತ್ರ ವಿಮರ್ಶಕರು ಅಷ್ಟು ಸುಲಭದಲ್ಲಿ ಒಂದು ಸಿನಿಮಾವನ್ನು ಕಂಪ್ಲೀಟ್ ಒಪ್ಪುವುದಿಲ್ಲ. ಆದ್ರೆ ‘ಜಂಟಲ್ ಮ್ಯಾನ್’ ಚಿತ್ರ ಎಲ್ಲಾ ವರ್ಗದವರಿಂದಲೂ ಹೊಗಳಿಕೆಯ ಮಹಾಪೂರವನ್ನೇ ಸ್ವೀಕರಿಸಿದೆ. ಕಮರ್ಷಿಯಲ್ ಅಂಶಗಳನ್ನೂ ಒಳಗೊಂಡಂತೆ ಪರಭಾಷೆಯ ಯಾವ ಚಿತ್ರಕ್ಕೂ ಕಡಿಮೆ ಇಲ್ಲವೆಂಬಂತೆ ‘ಜಂಟಲ್ ಮ್ಯಾನ್’ ಸಿನಿಮಾ ರೂಪುಗೊಂಡಿದೆ.

    ನಮ್ಮ ಜನ ತಾಯ್ನಾಡಿ, ತಾಯಿ ನೆಲದ ಸಿನಿಮಾಗಳನ್ನ ನೋಡಿ, ಹೊಗಳುವುದಕ್ಕಿಂತ ಪಕ್ಕದ ತಮಿಳು, ತೆಲುಗಿನ ಸಿನಿಮಾಗಳಿಗೆ ಮನಃಪೂರ್ವಕ ಹೊಗಳುತ್ತಾರೆ. ಕನ್ನಡದಲ್ಲಿ ಒಳ್ಳೆ ಸಿನಿಮಾಗಳೇ ಬರುವುದಿಲ್ಲ ಎಂಬ ಕೊಂಕು ಮಾತುಗಳನ್ನು ಆಡುವವರು ಕೆಲವರಿದ್ದಾರೆ. ಆ ಭಾವನೆಯನ್ನ ಮೊದಲು ತೆಗೆದು ಹಾಕಿ ಕನ್ನಡ ಸಿನಿಮಾಗಳು ರಿಲೀಸ್ ಆದಾಗ ಚಿತ್ರಮಂದಿರಕ್ಕೆ ಬಂದು ಆ ಸಿನಿಮಾಗಳನ್ನು ನೋಡಬೇಕು. ಆಗ ಅಂತ ವರ್ಗಕ್ಕೆ ಕನ್ನಡದಲ್ಲೂ ಇಂಥ ಸಿನಿಮಾಗಳು ಇವೆ ಅನ್ನೋದು ಅರಿವಿಗೆ ಬರುತ್ತೆ. ಅದನ್ನು ಮಾಡದೇ ಸೋಶಿಯಲ್ ಮೀಡಿಯಾದಲ್ಲೆಲ್ಲೋ ಸಿನಿಮಾ ಬಗ್ಗೆ ವಿಮರ್ಶೆ ಬಂದಾಗ ಕೇವಲ ಒಂದು ಲೈಕ್ ಅಥವಾ ಕಮೆಂಟ್ ಮಾಡಿ ಸುಮ್ಮನಾಗಿ ಬಿಡುತ್ತಾರೆ.

    ಸದ್ಯ ಕನ್ನಡ ಚಿತ್ರರಂಗದ ಸ್ಥಿತಿಯೂ ಹಾಗೇ ಇದೆ. ಬರುವ ಎಲ್ಲಾ ಸಿನಿಮಾಗಳು ಉತ್ತಮವಾಗಿಯೇ, ಒಳ್ಳೆ ಕಂಟೆಂಟ್ ಹೊಂದಿದ ಸಿನಿಮಾಗಳು ಬರುತ್ತವೆಂದು ಹೇಳುವುದಕ್ಕಾಗಲ್ಲ. ಅದರ ನಡುವೆಯೂ ಒಳ್ಳೆ ಕಂಟೆಂಟ್ ಹೊಂದಿದ ಸಿನಿಮಾಗಳು ಸಾಕಷ್ಟು ಬರುತ್ತವೆ. ಅಂತ ಚಿತ್ರಗಳಲ್ಲೊಂದು ಪ್ರಜ್ವಲ್ ದೇವರಾಜ್ ನಟನೆಯ ‘ಜಂಟಲ್ ಮನ್’.

    ಜಂಟಲ್ ಮನ್ ಚಿತ್ರದ ನಿರ್ದೇಶಕ ನಿಜಕ್ಕೂ ಪ್ರತಿಭಾವಂತ. ಮೊದಲ ಸಿನಿಮಾದಲ್ಲೇ ನಿರ್ದೇಶಕನಾಗಿ ಕಸುಬುದಾರಿಕೆ ತೋರಿದ್ದವರು. ಈ ಸಲವಂತೂ ತಮ್ಮ ಎಲ್ಲಾ ಶ್ರಮವನ್ನು ಧಾರೆಯೆರೆದು ಅಪರೂಪದ ಚಿತ್ರ ಮಾಡಿದ್ದಾರೆ. ಸಂಚಾರಿ ವಿಜಯ್ ಅವರಂಥಾ ನಟ ಕೂಡಾ ತಮ್ಮ ಪ್ರತಿಭೆಯ ಮತ್ತೊಂದು ಮುಖವನ್ನು ತೆರೆದಿಟ್ಟಿದ್ದಾರೆ. ಗುರು ದೇಶಪಾಂಡೆ ಸ್ವತಃ ನಿರ್ದೇಶಕರಾಗಿದ್ದೂ ಗಟ್ಟಿ ಕಥೆ ಹೊಂದಿದೆ ಎನ್ನುವ ಕಾರಣಕ್ಕೆ ಇಷ್ಟು ದಿನ ತಾವು ದುಡಿದದ್ದನ್ನೆಲ್ಲಾ ಸೇರಿಸಿ, ಅದರೊಟ್ಟಿಗೆ ಎಲ್ಲೆಲ್ಲಿಂದಲೋ ಹಣ ತಂದು ‘ಜಂಟಲ್ ಮ್ಯಾನ್’ ಚಿತ್ರವನ್ನು ಮಾಡಿದ್ದಾರೆ. ಪ್ರಜ್ವಲ್ ದೇವರಾಜ್ ಅವರಂತೂ ತಮ್ಮ ಸಿನಿಮಾ ಬದುಕಿನಲ್ಲೇ ಮೈಲಿಗಲ್ಲಾಗಿ ಉಳಿಯುವಂಥಾ ಪಾತ್ರದಲ್ಲಿ, ತಮ್ಮನ್ನು ತಾವು ಅರ್ಪಿಸಿಕೊಂಡು ನಟಿಸಿದ್ದಾರೆ. ಇವರೆಲ್ಲರ ಶ್ರಮಕ್ಕೆ ಪ್ರತಿಫಲ ದೊರೆಯಬೇಕೆಂದರೆ ಪ್ರೇಕ್ಷಕರು ಉತ್ಸಾಹದಿಂದ ಚಿತ್ರಮಂದಿರಕ್ಕೆ ಬರಬೇಕಲ್ಲವೇ? ನಮ್ಮ ಕನ್ನಡದ ಪ್ರೇಕ್ಷಕರ ಮನತಣಿಸಲು ಜಂಟಲ್ ಮನ್ ಗಿಂತಾ ಸಿನಿಮಾ ಬೇಕೇ? ಇಷ್ಟೆಲ್ಲ ಇದ್ದರೂ ಯಾಕೆ ನಮ್ಮವರು ಅಸಡ್ಡೆ ಮನೋಭಾವನೆ ತೋರುತ್ತಿದ್ದಾರೆ? ಎಂಬ ಬೇಸರ ಚಿತ್ರತಂಡದವರಲ್ಲಿ ಮೂಡಿದೆ.

    ‘ಜಂಟಲ್ ಮ್ಯಾನ್’ ನಲ್ಲಿರುವಂತ ಕಥೆ ಹಿಂದೆಂದೂ ಕೂಡ ನಾವೂ ನೋಡಿರುವುದಕ್ಕೆ ಸಾಧ್ಯವಿಲ್ಲ. ಅಂತದ್ದೊಂದು ಅಪರೂಪದ ಕಥೆ ಹೆಣೆದಿದ್ದಾರೆ. ಅಂತ ಅಪರೂಪದ ಕಾಯಿಲೆಯಿಂದ ಬಳಲುತ್ತಿರುವವರಿಗೂ ಕೂಡ ಈ ಸಿನಿಮಾದಿಂದ ಮನಸ್ಥೈರ್ಯ ಸಿಗುವ ಭರವಸೆ ಹೆಚ್ಚಾಗಿದೆ. ಕನ್ನಡದಲ್ಲೂ ಇನ್ನು ಉತ್ತಮ ಸಿನಿಮಾಗಳು ಬರಬೇಕು. ಆ ರೀತಿ ಬರಬೇಕೆಂದೆಲ್ಲಿ ಪ್ರೇಕ್ಷಕರ ಸಹಕಾರ ಅಷ್ಟೇ ಮುಖ್ಯವಾಗುತ್ತೆ. ಕನ್ನಡಿಗರೇ ಕನ್ನಡ ಸಿನಿಮಾಗಳನ್ನ ಉಳಿಸಲಿಲ್ಲ ಅಂದ್ರೆ ಹೇಗೆ? ನಿರ್ಮಾಪಕರಿಗೆ ಧೈರ್ಯ ಬರಬೇಕಾದಲ್ಲಿ ಚಿತ್ರಮಂದಿರಗಳು ತುಂಬಿರಬೇಕು. ‘ಜಂಟಲ್ ಮ್ಯಾನ್’ ಅದ್ಬುತ ಚಿತ್ರ ಎಂಬುದರಲ್ಲಿ ಎರಡು ಮಾತಿಲ್ಲ. ನೋಡದೆ ಇರುವವರು ಚಿತ್ರ ನೋಡಿ ಖಂಡಿತ ಇಷ್ಟವಾಗುತ್ತೆ.

  • ಈ ವಾರ ಸಿನಿರಸಿಕರನ್ನು ರಂಜಿಸಲು ತೆರೆಗೆ ಬರ್ತಿದೆ ‘ಸಾಗುತ ದೂರ ದೂರ’ ಚಿತ್ರ!

    ಈ ವಾರ ಸಿನಿರಸಿಕರನ್ನು ರಂಜಿಸಲು ತೆರೆಗೆ ಬರ್ತಿದೆ ‘ಸಾಗುತ ದೂರ ದೂರ’ ಚಿತ್ರ!

    ಸಿನಿ ಶುಕ್ರವಾರ ಸಿನಿರಸಿಕರ ಫೇವರೇಟ್ ದಿನ. ತಮ್ಮ ನೆಚ್ಚಿನ ಸಿನಿಮಾವನ್ನು ಚಿತ್ರಮಂದಿರದಲ್ಲಿ ನೋಡಿ ಎಂಜಾಯ್ ಮಾಡಲು ಕಾತುರದಿಂದ ಕಾಯುತ್ತಿರುತ್ತಾರೆ. ಈ ವಾರ ಪ್ರೇಕ್ಷಕ ಪ್ರಭುಗಳನ್ನು ರಂಜಿಸಲು ಬಹು ನಿರೀಕ್ಷಿತ `ಸಾಗುತ ದೂರ ದೂರ’ ಚಿತ್ರ ಚಿತ್ರಮಂದಿರಕ್ಕೆ ಬರ್ತಿದೆ.

    ಇಂಟ್ರಸ್ಟಿಂಗ್ ಕಥಾಹಂದರ, ಕಲರ್ ಫುಲ್ ಲೋಕೇಷನ್, ಕದ್ರಿ ಮಣಿಕಾಂತ್ ಮ್ಯೂಸಿಕ್ ಸಾಗುತ ದೂರ ದೂರ ಚಿತ್ರದ ಪ್ರಮುಖ ಆಕರ್ಷಣೆಯಾಗಿದೆ. ಜರ್ನಿಯಲ್ಲೇ ಸಾಗೋ ಚಿತ್ರದ ಕಥೆಯು ಪ್ರೇಕ್ಷಕರಿಗೆ ಥ್ರಿಲ್ ನೀಡಲಿದ್ದು ಹೊಸ ಅನುಭವ ನೀಡಲಿದೆ. ರವಿತೇಜ ಈ ಚಿತ್ರವನ್ನು ನಿರ್ದೇಶನ ಮಾಡಿದ್ದು ತುಂಬಾ ಪ್ಯಾಶನೇಟ್ ಆಗಿ ಸಿನಿಮಾವನ್ನು ನಿರ್ದೇಶನ ಮಾಡಿ ಬಿಡುಗಡೆ ಹಂತಕ್ಕೆ ತಂದಿದ್ದಾರೆ. ಅಮಿತ್ ಪೂಜಾರಿ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಖುಷಿ ಕನಸು ಬ್ಯಾನರ್ ನಡಿ ‘ಸಾಗುತ ದೂರ ದೂರ’ ಚಿತ್ರ ನಿರ್ಮಾಣವಾಗಿದೆ.

    ತಾಯಿ ಮಗನ ಸೆಂಟಿಮೆಂಟ್ ಚಿತ್ರದಲ್ಲಿದ್ದು, ಕಥೆಯೇ ಚಿತ್ರದ ಜೀವಾಳವಾಗಿರೋ ಈ ಚಿತ್ರದಲ್ಲಿ ಅಪೇಕ್ಷಾ ಪುರೋಹಿತ್, ಜಾನ್ವಿ ಜ್ಯೋತಿ, ಮಹೇಶ್, ಮಾಸ್ಟರ್ ಆಶಿಕ್, ಉಷಾ ಬಂಡಾರಿ, ನವೀನ್, ವಿಜಯ್ ತಾರಾಬಳಗದಲ್ಲಿ ಮಿಂಚಿದ್ದಾರೆ. ಇನ್ನೂರು ಸುಂದರ ಲೊಕೇಷನ್ ಗಳಲ್ಲಿ ಈ ಚಿತ್ರವನ್ನು ಸೆರೆ ಹಿಡಿಯಲಾಗಿದ್ದು, ಅಭಿ ಕ್ಯಾಮೆರಾ ಕೈಚಳಕ ಚಿತ್ರದಲ್ಲಿದೆ. ಚಿತ್ರದ ಬಗ್ಗೆ ಎಲ್ಲಾ ಕಡೆಗಳಲ್ಲೂ ಒಳ್ಳೆಯ ಟಾಕ್ ಕ್ರಿಯೇಟ್ ಆಗಿದ್ದು ಈ ಶುಕ್ರವಾರ ಚಿತ್ರ ರಾಜ್ಯಾದ್ಯಂತ ಯಶಸ್ವಿಯಾಗಿ ಬಿಡುಗಡೆಯಾಗಲಿದೆ.

  • ಅಂಡು ಬಗ್ಗಿಸಿ ಕನ್ನಡ ಸಿನಿಮಾ ನೋಡಿ: ದರ್ಶನ್

    ಅಂಡು ಬಗ್ಗಿಸಿ ಕನ್ನಡ ಸಿನಿಮಾ ನೋಡಿ: ದರ್ಶನ್

    ಬೆಂಗಳೂರು: ಅಂಡು ಬಗ್ಗಿಸಿಕೊಂಡು ಕನ್ನಡ ಸಿನಿಮಾ ನೋಡಿ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ.

    ನಟ ಪ್ರಜ್ವಲ್ ದೇವರಾಜ್ ಅಭಿನಯದ ‘ಜಂಟಲ್‍ಮೆನ್’ ಸಿನಿಮಾದ ಆಡಿಯೋ ಲಾಂಚ್ ಮಾಡಿ ಮಾತನಾಡಿದ ದರ್ಶನ್, ಯಾವುದಾದರೂ ಆಡಿಯೋ ಲಾಂಚ್ ಕಾರ್ಯಕ್ರಮಕ್ಕೆ ಹೋಗಿ ಚಿತ್ರತಂಡಕ್ಕೆ ಶುಭಕೋರಿ ಹೋಗುತ್ತೀವಿ. ಆದರೆ ಈ ಬಾರಿ ನಾನು ಚಿತ್ರತಂಡಕ್ಕೆ ಶುಭಕೋರಲ್ಲ. ದಯವಿಟ್ಟು ನಮ್ಮ ಕನ್ನಡ ಜನ ಎದ್ದೇಳಿ. ಯಾಕೆ ಈ ಮಾತನ್ನು ಹೇಳುತ್ತಿದ್ದೀನಿ ಎಂದರೆ ನಟ ಸಂಚಾರಿ ವಿಜಯ್ ದೊಡ್ಡ ನಟ. ‘ನಾನು ಅವನಲ್ಲ ಅವಳು’ ಸಿನಿಮಾ ನೋಡಿ ಅವರಿಗೆ ಫಿದಾ ಆದೆ. ಒಂದು ಒಳ್ಳೆಯ ಪ್ರಯತ್ನ ಮಾಡಿದ್ದಾರೆ. ಆದರೆ ಪರಭಾಷೆಯಲ್ಲಿ ಆಗಿದ್ರೆ ಕನ್ನಡದವರು ಸೇರಿ ಬೆನ್ನು ತಟ್ಟಿ, ಚಪ್ಪಾಳೆ ತಟ್ಟಿ ಜೊತೆಗೆ ದುಡ್ಡು ಕೊಟ್ಟು ಕಳುಹಿಸುತ್ತೇವೆ ಎಂದರು.

    ನಿಜವಾಗಿಯೂ ಅಸಹ್ಯವಾಗುತ್ತದೆ. ನಾವು ಹೆಮ್ಮೆಯಿಂದ ಕನ್ನಡದವರು ಎಂದು ಹೇಳುತ್ತೇವೆ. ಆದರೆ ನಾವು ಏನೂ ಮಾಡಲ್ಲ. ಈಕಡೆ ಆಕಡೆಯವರನ್ನು ನೋಡಿಕೊಂಡು ನಮ್ಮವರನ್ನು ನಾವು ಬಿಟ್ಟು ಬಿಡುತ್ತೇವೆ. ಸ್ವಲ್ಪ ಅಂಡು ಬಗ್ಗಿಸಿ ಕನ್ನಡ ಸಿನಿಮಾ ನೋಡಿ. ಆಗ ಕನ್ನಡ ಸಿನಿಮಾ ಏನು ಎಂಬುದು ಗೊತ್ತಾಗುತ್ತದೆ ಎಂದರು.

    ಕೆಲವರು ನಾನು ತಮಿಳಿನಲ್ಲಿ ಆ ಸಿನಿಮಾ ನೋಡಿದೆ, ತೆಲುಗಿನಲ್ಲಿ ಈ ಸಿನಿಮಾ ನೋಡಿದೆ ಎಂದು ಹೇಳುತ್ತಾರೆ. ಮೊದಲು ನಮ್ಮವರನ್ನು ನಾವು ಬೆನ್ನು ತಟ್ಟೋಣ. ಕನ್ನಡ ಸಿನಿಮಾ ಪ್ರೋತ್ಸಾಹ ಕೊಡಿ. ಜೊತೆಗೆ ಕನ್ನಡ ಸಿನಿಮಾಗೆ ಆದ್ಯತೆ ಕೊಡಿ ಎಂದು ಮನವಿ ಮಾಡಿಕೊಂಡರು.

  • ‘ಮೌನಂ’ ಟ್ರೈಲರ್ ಬಿಡುಗಡೆ ಮಾಡಲಿದ್ದಾರೆ ಚಾಲೆಂಜಿಂಗ್ ಸ್ಟಾರ್ ದರ್ಶನ್

    ‘ಮೌನಂ’ ಟ್ರೈಲರ್ ಬಿಡುಗಡೆ ಮಾಡಲಿದ್ದಾರೆ ಚಾಲೆಂಜಿಂಗ್ ಸ್ಟಾರ್ ದರ್ಶನ್

    ಸ್ಯಾಂಡಲ್‍ವುಡ್‍ನಲ್ಲಿ ಬಿಡುಗಡೆಗೆ ಸಿದ್ಧವಾಗಿರೋ ವಿಭಿನ್ನ ಪ್ರಯೋಗದ ಚಿತ್ರ ‘ಮೌನಂ’. ವಿಶಿಷ್ಟ ಹಾಗೂ ವಿಭಿನ್ನ ಕಥಾಹಂದರವನ್ನೊಳಗೊಂಡ ಈ ಚಿತ್ರದ ಟ್ರೈಲರ್ ನಾಳೆ ಡಿ ಬೀಟ್ಸ್ ಯೂಟ್ಯೂಬ್ ಚಾನೆಲ್‍ನಲ್ಲಿ ಬಿಡುಗಡೆಯಾಗುತ್ತಿದೆ. ಸದಾ ಹೊಸಬರ ಪ್ರಯತ್ನಗಳಿಗೆ ಸಾರಥಿಯಾಗಿ ನಿಲ್ಲೋ ಚಾಲೆಂಜಿಂಗ್ ಸ್ಟಾರ್ ದರ್ಶನ್ ‘ಮೌನಂ’ ಚಿತ್ರದ ಟ್ರೈಲರ್ ಬಿಡುಗಡೆ ಮಾಡಲಿದ್ದಾರೆ.

    ನಿಶಬ್ಧಕ್ಕೂ ಶಬ್ಧವಿದೆ ಎಂಬ ಟ್ಯಾಗ್ಲೈನ್ ಮೂಲಕ ಗಮನ ಸೆಳೆದಿರುವ ‘ಮೌನಂ’ ಚಿತ್ರದಲ್ಲಿ ಬಾಲಾಜಿ ಶರ್ಮಾ, ನಟಿ ಮಯೂರಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಹಿರಿಯ ನಟ ಅವಿನಾಶ್ ಚಿತ್ರದ ಮುಖ್ಯ ಪಾತ್ರವೊಂದಕ್ಕೆ ಬಣ್ಣಹಚ್ಚಿದ್ದಾರೆ. ಸೈಕಾಲಾಜಿಕಲ್ ಸಬ್ಜೆಕ್ಟ್ ಇರೋ ಈ ಚಿತ್ರಕ್ಕೆ ರಾಜ್ ಪಂಡಿತ್ ನಿರ್ದೇಶನ ಮಾಡಿದ್ದಾರೆ. ಟೀಸರ್ ಚಿತ್ರದ ಮೇಲಿನ ಕ್ಯೂರಿಯಾಸಿಟಿಯನ್ನು ಹುಟ್ಟಿಸಿದ್ದು, ಟ್ರೈಲರ್ ಯಾವ ರೀತಿ ನಿರೀಕ್ಷೆಯನ್ನು ಮೂಡಿಸುತ್ತೆ ಅನ್ನೋದು ನಾಳೆ ರಿವೀಲ್ ಆಗಲಿದೆ.

    ರಿತೇಶ್, ಕಾಮಿಡಿ ಕಿಲಾಡಿ ಖ್ಯಾತಿಯ ನಯನ, ಸಿಂಚನ, ಕೆಂಪೇಗೌಡಸೇರಿದಂತೆ ಹಲವು ಕಲಾವಿದರು ‘ಮೌನಂ’ ಚಿತ್ರದಲ್ಲಿ ನಟಿಸಿದ್ದಾರೆ. ಚಿತ್ರದಲ್ಲಿ ಮೂರು ಹಾಡುಗಳಿದ್ದು, ಆರವ್ ರಿಶೀಕ್ ಸಂಗೀತ ಸಂಯೋಜನೆಯಲ್ಲಿ ಚಿತ್ರ ಮೂಡಿ ಬಂದಿದೆ. ಶ್ರೀಹರಿ `ಮೌನಂ’ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಚಿತ್ರದ ಪ್ರಮೋಶನಲ್ ಆಕ್ಟಿವಿಟೀಸ್‍ನಲ್ಲಿ ಬ್ಯುಸಿಯಾಗಿರುವ ಚಿತ್ರತಂಡ ಸದ್ಯದಲ್ಲೇ ಚಿತ್ರವನ್ನು ತೆರೆ ಮೇಲೆ ತರಲಿದೆ. ಚಾಲೆಂಜಿಂಗ್ ಸ್ಟಾರ್ ಚಿತ್ರದ ಟ್ರೈಲರ್ ಬಿಡುಗಡೆ ಮಾಡ್ತಿರೋದು ಚಿತ್ರತಂಡಕ್ಕೆ ಸಂತಸ ನೀಡಿದೆ. ಜೊತೆಗೆ ಚಿತ್ರತಂಡದ ಕಾನ್ಫಿಡೆನ್ಸ್ ಕೂಡ ದುಪ್ಪಟ್ಟಾಗಿದೆ. ಅಂದಹಾಗೆ, ಫೆಬ್ರವರಿ 21ಕ್ಕೆ `ಮೌನಂ’ ಚಿತ್ರ ರಿಲೀಸ್ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ.

  • ಪಾಪ ಪ್ರಜ್ಞೆ ಕಾಡುತ್ತಿದೆ – ರಿಷಬ್ ಚಿತ್ರ ನೋಡಿ 200 ರೂ. ಕಳುಹಿಸಿಕೊಟ್ಟ ಅಭಿಮಾನಿ

    ಪಾಪ ಪ್ರಜ್ಞೆ ಕಾಡುತ್ತಿದೆ – ರಿಷಬ್ ಚಿತ್ರ ನೋಡಿ 200 ರೂ. ಕಳುಹಿಸಿಕೊಟ್ಟ ಅಭಿಮಾನಿ

    ಬೆಂಗಳೂರು: ರಿಷಬ್ ಶೆಟ್ಟಿ ನಿರ್ದೇಶನದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರ ನೋಡಿ ಅಭಿಮಾನಿಯೋರ್ವ ಅವರಿಗೆ ಪತ್ರ ಬರೆದು ಜೊತೆಗೆ 200 ರೂ. ದುಡ್ಡನ್ನು ಕಳುಹಿಸಿಕೊಟ್ಟಿದ್ದಾರೆ.

    ರಿಷಬ್ ಶೆಟ್ಟಿ ನಿರ್ದೇಶನ ಮಾಡಿದ್ದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರ 2018 ರಲ್ಲಿ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿತ್ತು. ಈ ಚಿತ್ರವನ್ನು ಈಗ ನೋಡಿದ ಮೈಸೂರಿನ ಅಭಿಮಾನಿಯೋರ್ವ ರಿಷಬ್ ಶೆಟ್ಟಿಗೆ ಪತ್ರ ಬರೆದು ಕ್ಷಮೆ ಕೇಳಿ ಜೊತೆಗೆ 200 ರೂ. ದುಡ್ಡನ್ನು ಕಳುಹಿಸಿಕೊಟ್ಟಿದ್ದಾರೆ.

    ರಿಷಬ್‍ಗೆ ಪತ್ರ ಬರೆದಿರುವ ಮೈಸೂರಿನ ಅಭಿಮಾನಿ ಭರತ್ ರಾಮಸ್ವಾಮಿ, ನನ್ನ ಹೆಸರು ಭರತ್ ರಾಮಸ್ವಾಮಿ, ನಾನು ಮೈಸೂರಿನವನು. ವೃತ್ತಿಯಲ್ಲಿ ಒಬ್ಬ ಪುಸ್ತಕ ಪ್ರಕಾಶಕ. ನಾನು ಜನವರಿ 12 ರಂದು ನೀವು ನಿರ್ದೇಶನ ಮಾಡಿದ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಎಂಬ ಸಿನಿಮಾವನ್ನು ಒಂದು ವೆಬ್‍ಸೈಟಿನಲ್ಲಿ ನೋಡಿದೆ. ಈ ಚಿತ್ರ ನನ್ನ ಊಹೆಗೂ ಮೀರಿದ್ದಾಗಿತ್ತು. ನಾನೊಬ್ಬ ಚಿತ್ರ ರಸಿಕ. ನಿಮ್ಮ ನಿರೂಪಣಾ ಶೈಲಿ ಮತ್ತು ಸ್ಕ್ರೀನ್ ಪ್ಲೇ ಅತ್ಯದ್ಭುತವಾಗಿದೆ ಎಂದು ಹೊಗಳಿದ್ದಾರೆ.

    ಕನ್ನಡದ ಅಸ್ಮಿತೆ ಮತ್ತು ಕನ್ನಡದ ಮೇಲೆ ನಮಗಿರುವ ಭಾವನೆಗಳನ್ನು ಅನಂತ್ ನಾಗ್ ಅವರು ಮಾಡಿರುವ ಪಾತ್ರದ ಮೂಲಕ ಹೇಳಿಸಿದ ಶೈಲಿ ಮನ ಮುಟ್ಟುವಂತಿತ್ತು. ಇಂತಹ ರಚನಾತ್ಮಕ ಆಲೋಚನೆಗಳಿಂದ ಕೂಡಿದ ಸಿನಿಮಾವನ್ನು ಇಷ್ಟು ತಡವಾಗಿ ನೋಡಿದ ಮತ್ತು ದುಡ್ಡು ಕೊಟ್ಟು ಚಿತ್ರಮಂದಿರದಲ್ಲಿ ನೋಡದ ಪಾಪ ಪ್ರಜ್ಞೆ ನನ್ನನ್ನು ಕಾಡುತ್ತಿದೆ. ಆದ್ದರಿಂದ ಈ ಪತ್ರದೊಡನೆ 200 ರೂಪಾಯಿ ಟಿಕೆಟ್ ದರವನ್ನು ನನ್ನ ಮೆಚ್ಚುಗೆಯ ಸಂಕೇತವಾಗಿ ಕಳುಹಿಸಿರುತ್ತೇನೆ ಎಂದು ಪತ್ರದಲ್ಲಿ ಭರತ್ ತಿಳಿಸಿದ್ದಾರೆ.

    ಈ ನನ್ನ ಕ್ರಿಯೆ ನಿಮಗೆ ಹಾಸ್ಯಾಸ್ಪದವೆನಿಸಿದರೂ ನನ್ನೊಳಗಿನ ಸಿನಿಮಾ ರಸಿಕನಿಗೆ ತೃಪ್ತಿ ತರುವಂತಾಗಿದೆ. ಮುಂದೆಯೂ ಇಂತಹುದೇ ಪ್ರಗತಿಪರ ಸಿನಿಮಾಗಳನ್ನು ನಿಮ್ಮ ಮೂಲಕ ತಯಾರಾಗಲಿ ಎಂದು ಆಶಿಸುತ್ತೇನೆ ಎಂದು ಪತ್ರದ ಮೂಲಕ ತಿಳಿಸಿದ್ದಾರೆ.

    ಅಭಿಮಾನಿಯ ಪತ್ರವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಫೋಟೋ ಸಮೇತ ಟ್ವೀಟ್ ಮಾಡಿರುವ ರಿಷಬ್ ಶೆಟ್ಟಿ, ಇಂತಹ ಚಿತ್ರಪ್ರೇಮಿಗಳಿರುವ ತನಕ ಒಳ್ಳೆಯ ಕನ್ನಡ ಚಿತ್ರಗಳಿಗೆ ಎಂದಿಗೂ ಸೋಲಿಲ್ಲ. ಪ್ರೇಕ್ಷಕರ ಒಲವೇ ಚಿತ್ರದ ನಿಜವಾದ ಗೆಲುವು. ಭರತ್ ರಾಮಸ್ವಾಮಿ ಅವರಿಗೆ ಧನ್ಯವಾದಗಳು. ನಿಮ್ಮ ಈ ಪ್ರೀತಿಯ ಕಾಣಿಕೆಯನ್ನು ಅದರ ದುಪ್ಪಟ್ಟು ಪ್ರೀತಿಯಿಂದ ಸ್ವೀಕರಿಸುತ್ತೇವೆ. (ಜೊತೆಗೆ ಚಿತ್ರದ ಕಲೆಕ್ಷನ್ ತಿದ್ದುಪಡಿ ಮಾಡಿಕೊಳ್ಳುತ್ತೇವೆ) ಎಂದು ಬರೆದುಕೊಂಡಿದ್ದಾರೆ.

    2018 ಆಗಸ್ಟ್ 24 ರಂದು ಬಿಡುಗಡೆಗೊಂಡಿದ್ದ ರಿಷಬ್ ಶೆಟ್ಟಿ ನಿರ್ದೇಶನದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು, ಬ್ಲಾಕ್ ಬಸ್ಟರ್ ಹಿಟ್ ಆಗಿತ್ತು. ಮಕ್ಕಳ ಜೊತೆ ಹಿರಿಯ ನಟ ಅನಂತ್ ನಾಗ್ ಅವರು ಮನಮಿಡಿಯುವಂತೆ ಅಭಿನಯಿಸಿದ್ದರು. ಕನ್ನಡ ಭಾಷೆ, ಕನ್ನಡ ಮಾಧ್ಯಮ ಶಾಲೆಯ ಅವಶ್ಯಕತೆಯನ್ನು ಮಕ್ಕಳ ಮೂಲಕ ಮನಮುಟ್ಟುವಂತೆ ಹೇಳಿದ್ದ ಈ ಚಿತ್ರಕ್ಕೆ ಅತ್ಯುತ್ತಮ ಮಕ್ಕಳ ಚಿತ್ರ ಎಂದು ರಾಷ್ಟ್ರೀಯ ಪ್ರಶಸ್ತಿ ಕೂಡ ಬಂದಿದೆ.

  • ಉಪ್ಪಿ ಅಪ್ಪಟ ಅಭಿಮಾನಿಯ ಆಸಿಂಕೋಜಿಲ್ಲ!

    ಉಪ್ಪಿ ಅಪ್ಪಟ ಅಭಿಮಾನಿಯ ಆಸಿಂಕೋಜಿಲ್ಲ!

    ಹೊಸ ವರ್ಷದ ಹೊಸ್ತಿಲಾಚೆಗೂ ಕನ್ನಡ ಚಿತ್ರರಂಗಕ್ಕೆ ಹೊಸತನದ ಗಂಧ ಗಾಳಿ ಅನೂಚಾನವಾಗಿ ಹಬ್ಬಿಕೊಂಡಿದೆ. ಕನ್ನಡ ಚಿತ್ರರಂಗದ ಘನತೆಯನ್ನು ಪರಭಾಷಾ ಚಿತ್ರರಂಗದ ಮಂದಿಯೂ ಕಣ್ಣರಳಿಸಿ ನೋಡಬೇಕೆಂಬ ಮನಸ್ಥಿತಿ ಇದೆಯಲ್ಲಾ? ಅಂಥಾದ್ದರ ಭೂಮಿಕೆಯಲ್ಲಿ ಎಳಿಕೊಂಡ ಸಿನಿಮಾಗಳು ಪ್ರೇಕ್ಷಕರಲ್ಲೊಂದು ಬೆರಗು ಮೂಡಿಸುವಷ್ಟು ಶಕ್ತವಾಗಿರುತ್ತವೆಂಬ ನಂಬಿಕೆ ಬಲವಾಗಿದೆ. ಅದನ್ನು ಈ ವರ್ಷಾರಂಭದಲ್ಲಿಯೇ ನಿಜವಾಗಿಸುವಂತಿರೋ ‘ಆಸಿಂಕೋಜಿಲ್ಲ’ ಎಂಬ ಚಿತ್ರ ಈ ವಾರ ಪ್ರೇಕ್ಷಕರ ಮುಂದೆ ಪ್ರತ್ಯಕ್ಷವಾಗಲಿದೆ.

    ಹೆಸರಲ್ಲಿಯೇ ಅದೆಂಥಾದ್ದೋ ನಿಗೂಢ, ಆಕರ್ಷಣೆಯನ್ನು ಬಚ್ಚಿಕೊಂಡಿರೋ ಆಸಿಂಕೋಜಿಲ್ಲ ಶಮನ್ ನಿರ್ದೇಶನದ ಚೊಚ್ಚಲ ಚಿತ್ರ. ವಿಶೇಷವೆಂದರೆ ಅವರು ರಿಯಲ್ ಸ್ಟಾರ್ ಉಪೇಂದ್ರರ ಅಪ್ಪಟ ಅಭಿಮಾನಿ. ಉಪ್ಪಿ ಅಂದರೇನೇ ಹೊಸತನ ಎಂಬಂಥಾ ಭಾವನೆ ಇದೆ. ಈ ಕಾರಣದಿಂದಲೇ ಹೊಸದಾಗಿ ಎಂಟ್ರಿ ಕೊಡುವ ಅದೆಷ್ಟೋ ಯುವ ನಿರ್ದೇಶಕರ ಪಾಲಿಗೆ ಉಪೇಂದ್ರ ಎವರ್ ಗ್ರೀನ್ ರೋಲ್ ಮಾಡೆಲ್ ಬಹುಶಃ ಶಮನ್ ನಿರ್ದೇಶನದ ವಿಚಾರದಲ್ಲಿ ಉಪ್ಪಿಯನ್ನೇ ಆರಾಧಿಸದೇ ಹೋಗಿದ್ದರೆ ಒಂದು ಹೊಸ ಬಗೆಯ ಕಥೆಯೊಂದಿಗೆ ಆಸಿಂಕೋಜಿಲ್ಲ ಎಂಬ ಕಥೆ ರೂಪುಗೊಳ್ಳುವುದು ಸಾಧ್ಯವೇ ಇರುತ್ತಿರಲಿಲ್ಲ.

    ಬೆಂಗಳೂರಿನವರೇ ಆದ ಶಮನ್‍ಗೆ ಉಪ್ಪಿಯ ಗುಂಗು ಹತ್ತಿಕೊಂಡಿದ್ದು ಶಾಲಾ ಕಾಲೇಜು ದಿನಗಳಲ್ಲಿಯೇ. ಉಪೇಂದ್ರ ಕಾರಣದಿಂದಲೇ ಎಲ್ಲವನ್ನೂ ಭಿನ್ನ ದೃಷ್ಟಿಕೋನದಿಂದ ನೋಡುವ ಕಲೆ ಸಿದ್ಧಿಸಿಕೊಂಡಿದ್ದ ಶಮನ್ ಕನ್ನಡ ಚಿತ್ರರಂಗ ಮಾತ್ರವಲ್ಲದೇ ಪರಭಾಷಾ ಚಿತ್ರರಂಗದ ಮಂದಿಯೂ ಬೆಕ್ಕಸ ಬೆರಗಾಗುವಂತಿರಬೇಕೆಂಬ ಹಂಬಲದೊಂದಿಗೇ ಈ ಕಥೆಯನ್ನು ಸಿದ್ಧಪಡಿಸಿದ್ದರಂತೆ. ಹಾಗಂತ ಪ್ರಯೋಗಾತ್ಮಕ ವಿಚಾರಗಳನ್ನು ಕೈಗೆತ್ತಿಕೊಂಡು ಕೆಲ ವರ್ಗದ ಪ್ರೇಕ್ಷಕರಿಗೆ ಮಾತ್ರವೇ ಆಸಿಂಕೋಜಿಲ್ಲ ಚಿತ್ರವನ್ನು ಸೀಮಿತಗೊಳಿಸುವ ಇರಾದೆಯೂ ಅವರಿಗಿರಲಿಲ್ಲ. ಈ ದೆಸೆಯಿಂದ ಎಲ್ಲ ವರ್ಗ, ವಯೋಮಾನದ ಪ್ರೇಕ್ಷಕರಿಗೂ ಇಷ್ಟವಾಗುವಂಥಾ ಹೂರಣದೊಂದಿಗೆ ಈ ಸಿನಿಮಾವನ್ನು ಅಣಿಗೊಳಿಸಿದ್ದಾರಂತೆ.

    ಸೋಮಶೇಖರ ರೆಡ್ಡಿ ನಿರ್ಮಾಣ ಮಾಡಿರುವ ಆಸಿಂಕೋಜಿಲ್ಲ ಎಂಬ ಪದವೇ ಎಲ್ಲರೂ ತಲೆ ಕೆದರಿಕೊಂಡು ಅರ್ಥ ಹುಡುಕುವಂತೆ ಮಾಡಿದೆ. ತೀರಾ ಗೂಗಲ್ಲಿನಲ್ಲಿ ಹುಡುಕಿದರೂ ಈ ಚಿತ್ರದ ವಿವರಗಳು ಮಾತ್ರವೇ ಸಿಗುತ್ತವೆ. ಹಾಗಾದರೆ ಈ ಪದದ ಅರ್ಥವೇನು? ಕಥಾ ಹಂದರವೆಂಥಾದ್ದೆಂಬ ಪ್ರಶ್ನೆಗಳು ಪ್ರೇಕ್ಷಕರ ವಲಯದಲ್ಲಿ ಮಿಜಿಗುಡಲಾರಂಭಿಸಿವೆ. ಅದೆಲ್ಲವನ್ನೂ ಗೌಪ್ಯವಾಗಿಡುವ ಮೂಲಕ ಚಿತ್ರತಂಡ ಕುತೂಹಲವನ್ನು ಮತ್ತಷ್ಟು ತೀವ್ರವಾಗಿಸಿದೆ. ಈ ವಾರವೇ ಅಂಥಾ ಎಲ್ಲ ಪ್ರಶ್ನೆಗಳಿಗೂ ಉತ್ತರ ಸಿಗಲಿದೆ. ಆ ಉತ್ತರ ಅತ್ಯಾಕರ್ಷಕವಾಗಿರಲಿದೆ ಎಂಬ ಭರವಸೆಯನ್ನಂತೂ ಚಿತ್ರತಂಡ ಆತ್ಮವಿಶ್ವಾಸದಿಂದಲೇ ಕೊಡುತ್ತಿದೆ.

  • ‘ಭರತ ಬಾಹುಬಲಿ’ ನೋಡಿದ್ರೆ ಒಂದು ಕೋಟಿ ರೂಪಾಯಿ ಸಿಗುತ್ತೆ!

    ‘ಭರತ ಬಾಹುಬಲಿ’ ನೋಡಿದ್ರೆ ಒಂದು ಕೋಟಿ ರೂಪಾಯಿ ಸಿಗುತ್ತೆ!

    ಮಾಸ್ಟರ್ ಪೀಸ್ ನಂತಹ ಸೂಪರ್ ಹಿಟ್ ಚಿತ್ರ ಕೊಟ್ಟ ಮಂಜು ಮಾಂಡವ್ಯ ನಟನಾಗಿ ಬರ್ತಾ ಇರೋದು ಎಲ್ಲರಿಗೂ ಗೊತ್ತೆ ಇದೆ. ನಿರ್ದೇಶನದಿಂದ ಬಡ್ತಿ ಪಡೆದು ‘ಶ್ರೀ ಭರತ ಬಾಹುಬಲಿ’ಯಾಗಿ ಕಂಗೊಳಿಸಲು ಸಜ್ಜಾಗಿದ್ದಾರೆ. ಈಗಾಗಲೇ ಸಿನಿಮಾದ ಶೂಟಿಂಗ್ ಮುಗಿದಿದ್ದು, ತೆರೆಗೆ ಬರಲು ಸಿದ್ಧತೆ ನಡೆಸಿದೆ. ಇದೇ ತಿಂಗಳು 17ರಂದು ಚಿತ್ರಮಂದಿರಕ್ಕೆ ‘ಭರತ ಬಾಹುಬಲಿ’ ಅಬ್ಬರಿಸಲಿದ್ದಾನೆ.

    ಸಿನಿಮಾ ಮಾಡೋದು ಎಷ್ಟು ಕಷ್ಟನೋ ಜನರನ್ನು ಚಿತ್ರಮಂದಿರಕ್ಕೆ ಕರೆತರುವುದು ಅಷ್ಟೇ ಕಷ್ಟ. ಹೀಗಾಗಿ ಎಲ್ಲಾ ಸಿನಿಮಾಗಳ ನಡುವೆ ‘ಭರತ ಬಾಹುಬಲಿ’ಯನ್ನು ನೋಡುವಂತೆ ಮಾಡಲು, ಚಿತ್ರತಂಡ ಹೊಸ ಪ್ಲಾನ್ ಒಂದನ್ನು ಹೆಣೆದಿದೆ. ಈ ಸಿನಿಮಾ ನೋಡುಗರಿಗೆ  ಒಂದು ಕೋಟಿ ರೂಪಾಯಿ ಮೊತ್ತದ ಬಹುಮಾನವನ್ನು ಘೋಷಿಸಿದೆ. ಬಹುಮಾನದಲ್ಲಿ 5 ಲಕ್ಷ ಬೆಲೆ ಬಾಳುವ 10 ಕಾರುಗಳು ಹಾಗೂ 5 ಲಕ್ಷ ಬೆಲೆಬಾಳುವ 10 ಚಿನ್ನದ ಆಭರಣಗಳನ್ನು ಚಿತ್ರತಂಡ ಘೋಷಿಸಿದೆ. 20 ಜನ ಅದೃಷ್ಟವಂತ ಪ್ರೇಕ್ಷಕರಿಗೆ ಈ ಬಹುಮಾನ ಸಿಗಲಿದೆ.

    ಬಹುಮಾನ ಗೆಲ್ಲಬೇಕೆಂಬ ಪ್ರೇಕ್ಷಕರು ಮಾಡಬೇಕಾಗಿರುವುದು ಇಷ್ಟೇ, ಕರ್ನಾಟಕದ ಯಾವುದೇ ಚಿತ್ರಮಂದಿರದಲ್ಲಾದರೂ ‘ಭರತ ಬಾಹುಬಲಿ’ ಚಿತ್ರವನ್ನು ನೋಡಿ. ಈ ವೇಳೆ ಚಿತ್ರತಂಡ ಸಿನಿಮಾ ಟಿಕೆಟ್ ಜೊತೆಗೆ ನೀಡಲಾಗುವ ಕೂಪನ್ ಜೊತೆಗಿಟ್ಟುಕೊಂಡರೆ ಸಾಕು. ಚಿತ್ರ ತಂಡವು ಲಕ್ಕಿ ಪಿಕ್ ನಲ್ಲಿ 20 ಜನ ಅದೃಷ್ಟವಂತರನ್ನು ಆಯ್ಕೆ ಮಾಡಿ ನಂಬರ್ ಘೋಷಿಸುತ್ತದೆ. ಬಳಿಕ ಕಾರು ಹಾಗೂ ಆಭರಣಗಳನ್ನು ಅದೃಷ್ಟವಂತ ಪ್ರೇಕ್ಷಕರಿಗೆ ನೀಡಲಾಗುತ್ತದೆ.

    ಭರತ ಬಾಹುಬಲಿಗಾಗಿ ಈಗಾಗಲೇ ಕೋಟಿ ಕೋಟಿ ಹಣ ಖರ್ಚಾಗಿದೆ. ಪ್ರೇಕ್ಷಕರನ್ನು ಕರೆತರಲು ಮತ್ತೆ ನಿರ್ಮಾಪಕರಾದ ಟಿ. ಶಿವಪ್ರಕಾಶ್ ಕೋಟಿ ಹಣ ಖರ್ಚು ಮಾಡಲು ಮುಂದಾಗಿದ್ದಾರೆ. ಸಿನಿಮಾ ಅದ್ಭುತವಾಗಿ ಮೂಡಿ ಬಂದಿದ್ದು, ಇಂತದ್ದೊಂದು ಸಿನಿಮಾವನ್ನು ಚಿತ್ರಮಂದಿರದಲ್ಲೇ ನೋಡಿ, ಖುಷಿ ಪಡಲಿ ಅನ್ನೋದು ನನ್ನ ಉದ್ದೇಶ. ಒಳ್ಳೆ ಸಿನಿಮಾವನ್ನ ಜನ ಮಿಸ್ ಮಾಡಿಕೊಳ್ಳಬಾರದಲ್ವಾ ಅನ್ನೋದು ನಿರ್ಮಾಪಕರ ಮಾತು

    ಈಗಾಗಲೇ ಸಿನಿಮಾ ಸಾಕಷ್ಟು ವಿಚಾರಗಳಿಗೆ ಸದ್ದು ಮಾಡುತ್ತಿದೆ. ಬಿಡುಗಡೆಯಾಗಿರುವ ಹಾಡು, ಟ್ರೈಲರ್ ನೋಡಿದ್ರೇನೆ ಸಿನಿಮಾದ ಕ್ವಾಲಿಟಿ ಗೊತ್ತಾಗುತ್ತೆ. ಟ್ರೈಲರ್ ನೋಡಿದರವರಿಗೆ ಸಿನಿಮಾದ ಮೇಲೆ ಮತ್ತಷ್ಟು ಭರವಸೆ ಹೆಚ್ಚಾಗಿದೆ. ಜನವರಿ 17ರಂದು ಎಲ್ಲಾ ಥಿಯೇಟರ್ ಗೆ ಲಗ್ಗೆ ಇಡ್ತಾ ಇದೆ. ಚಿತ್ರಮಂದಿರಕ್ಕೆ ಹೋಗಿ ಸಿನಿಮಾ ನೋಡಿ, ನೀವೂ ಆ ಅದೃಷ್ಟವಂತರಲ್ಲಿ ಒಬ್ಬರಾದ್ರೂ ಆಗಬಹುದು.

  • ಯುವ ಸಾಮ್ರಾಟ್ ಚಿರುಗೆ ರಿಯಲ್ ಸ್ಟಾರ್ ಉಪ್ಪಿ ಸಾಥ್?

    ಯುವ ಸಾಮ್ರಾಟ್ ಚಿರುಗೆ ರಿಯಲ್ ಸ್ಟಾರ್ ಉಪ್ಪಿ ಸಾಥ್?

    – ಅಷ್ಟಕ್ಕೂ ಇವರಿಬ್ಬರು ಮಾಡ್ತಿರೋದೇನು ಗೊತ್ತಾ?

    ಪವರ್ ಫುಲ್ ಟೈಟಲ್, ಕ್ಯಾಚಿ ಟ್ಯಾಗ್ ಲೈನ್ ಮೂಲಕ ಸ್ಯಾಂಡಲ್ ವುಡ್‍ನಲ್ಲಿ ಸಂಚಲನ ಸೃಷ್ಟಿಸ್ತಿರೋ ಸಿನಿಮಾ ‘ಖಾಕಿ’. ಯುವ ಸಾಮ್ರಾಟ್ ಚಿರಂಜೀವಿ ಸರ್ಜಾ, ಬ್ಯೂಟಿಫುಲ್ ತನ್ಯಾ ಹೋಪ್ ನಟನೆಯ ಸಿನಿಮಾ. ಈಗಾಗಲೇ ಟೀಸರ್ ಮೂಲಕ ಸೌಂಡ್ ಮಾಡ್ತಿರೋ ಖಾಕಿ ಚಿತ್ರ ಟ್ರೇಲರ್ ಇದೇ ತಿಂಗಳ 8ರಂದು ರಿಲೀಸ್ ಆಗ್ತಿದೆ. ಇಂಟ್ರೆಸ್ಟಿಂಗ್ ಅಂದ್ರೆ ರಿಯಲ್ ಸ್ಟಾರ್ ಉಪೇಂದ್ರ ಟ್ರೇಲರ್ ಲಾಂಚ್ ಮಾಡಲಿದ್ದಾರೆ.

    ಅಂದಹಾಗೇ ಚಿತ್ರಕ್ಕೆ ನವೀನ್ ರೆಡ್ಡಿ ಆ್ಯಕ್ಷನ್ ಕಟ್ ಹೇಳಿದ್ದು, ಮಾಸ್ ಲೀಡರ್, ವಿಕ್ಟರಿ-2 ನಂತಹ ಅದ್ಭುತ ಸಿನಿಮಾಗಳನ್ನ ಕೊಟ್ಟಿರೋ ತರುಣ್ ಶಿವಪ್ಪ ಈ ಚಿತ್ರಕ್ಕೂ ಬಂಡವಾಳ ಹೂಡಿದ್ದಾರೆ. ಮೊದಲಿನಿಂದ್ಲೂ ತರುಣ್ ಟಾಕೀಸ್ ನಿಂದ ಹೊರ ಬಂದಿರೋ ಸಿನಿಮಾಗಳಲ್ಲಿ ತಾಂತ್ರಿಕ ಶ್ರೀಮಂತಿಕೆ ಎದ್ದು ಕಾಣುತ್ತದೆ. ಅಷ್ಟೇ ಅಲ್ಲದೇ ತಮ್ಮ ಸಿನಿಮಾಗಳಿಗೆ ಯಾವುದೇ ಅಗತ್ಯತೆ ಇದ್ದರೆ ಕೊರತೆಯಾಗದಂತೆ ನೋಡಿಕೊಳ್ತಾರೆ ತರುಣ್.

    ಇನ್ನು ಖಾಕಿ ಚಿತ್ರಕ್ಕಡ ರಿತ್ವಿಕ್ ಸಂಗೀತ ನೀಡಿದ್ದು, ಬಾಲಾ ಛಾಯಾಗ್ರಹಣ, ವಿನೋದ್ ಸಾಹಸ ನಿರ್ದೇಶನ, ಕೆ.ಎಂ. ಪ್ರಕಾಶ್ ಸಂಕಲನ ಚಿತ್ರಕ್ಕಿದೆ. ಇನ್ನು ಜನವರಿ 24 ರಂದು ಖಾಕಿ ಸಿನಮಾ ಕನ್ನಡ, ತೆಲುಗು ಎರಡು ಭಾಷೆಯಲ್ಲೂ ತೆರೆ ಕಾಣಲಿದೆ.