Tag: kannada cinema

  • `ದಿಲ್‍ಮಾರ್’ ಚಿತ್ರಕ್ಕೆ ಚಾಲನೆ

    `ದಿಲ್‍ಮಾರ್’ ಚಿತ್ರಕ್ಕೆ ಚಾಲನೆ

    ಶ್ರೀ ವಿಘ್ನೇಶ್ವರ ಸಿನಿಮಾಸ್ ಲಾಂಛನದಲ್ಲಿ ನಾಗರಾಜ್ ಭದ್ರಾವತಿ ಅವರು ನಿರ್ಮಿಸುತ್ತಿರುವ `ದಿಲ್‍ಮಾರ್` ಚಿತ್ರದ ಮುಹೂರ್ತ ಸಮಾರಂಭ ಮಹಾಲಕ್ಷ್ಮೀ ಲೇಔಟ್‍ನ ಗಣಪತಿ ದೇವಸ್ಥಾನದಲ್ಲಿ ಕಳೆದ ಭಾನುವಾರ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಲಹರಿ ಸಂಸ್ಥೆಯ ವೇಲು ಅವರು ಆರಂಭ ಫಲಕ ತೋರಿದರು. ಸಂಜೀವ್ ಕ್ಯಾಮೆರಾ ಚಾಲನೆ ಮಾಡಿದರು. ಮಹೇಶ್ ಕೆ ಈ ಚಿತ್ರದ ಸಹ ನಿರ್ಮಾಪಕರು.

    ವಿಶ್ವದಾದ್ಯಂತ ಹೆಸರು ಮಾಡಿರುವ ಕೆ.ಜಿ.ಎಫ್ ಚಿತ್ರಕ್ಕೆ ಸಂಭಾಷಣೆ ಬರೆದಿದ್ದ ಎಂ.ಚಂದ್ರಮೌಳಿ ಈ ಚಿತ್ರದ ನಿರ್ದೇಶಕರು. ಈ ಹಿಂದೆ ರಥಾವರ ಚಿತ್ರಕ್ಕೆ ಗೀತರಚನೆ ಮಾಡಿದ್ದ ಚಂದ್ರಮೌಳಿ ಅವರು ಕೆಲವು ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಪ್ರಸ್ತುತ ಚಾಲೆಂಜಿಂಗ್ ಸ್ಟಾರ್ ಅಭಿನಯದ ರಾಬರ್ಟ್ ಚಿತ್ರಕ್ಕೂ ಸಂಭಾಷಣೆ ಬರೆಯುತ್ತಿದ್ದಾರೆ. ಇದು ಇವರ ಚೊಚ್ಚಲ ನಿರ್ದೇಶನದ ಚಿತ್ರ. ಮೊದಲ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ಸಾಗುತ್ತಿದ್ದು, ನಂತರ ಮೈಸೂರು ಮಂಗಳೂರಿನಲ್ಲಿ ಚಿತ್ರೀಕರಣ ನಡೆಯಲಿದೆ.

    ನಿರ್ದೇಶಕರೆ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಚಿತ್ರದಲ್ಲಿ ಐದು ಹಾಡುಗಳಿದ್ದು, ತೆಲುಗಿನ ಅರ್ಜುನ್ ರೆಡ್ಡಿ ಚಿತ್ರಕ್ಕೆ ಸಂಗೀತ ನೀಡಿದ್ದ ರದನ್ ಸಂಗೀತ ನೀಡುತ್ತಿದ್ದಾರೆ. ಡಾ.ವಿ.ನಾಗೇಂದ್ರಪ್ರಸಾದ್ ಹಾಗೂ ಬಹದ್ದೂರ್ ಚೇತನ್ ಚಿತ್ರದ ಹಾಡುಗಳನ್ನು ರಚಿಸಿದ್ದಾರೆ. ಗಿರೀಶ್ ಆರ್ ಗೌಡ ಛಾಯಾಗ್ರಹಣ, ಶ್ರೀಕಾಂತ್ ಸಂಕಲನ, ಮೋಹನ್ ನೃತ್ಯ ನಿರ್ದೇಶನ, ವಿಕ್ರಂ ಮೋರ್ ಸಾಹಸ ನಿರ್ದೇಶನ ಹಾಗೂ ಜಿ.ಮೂರ್ತಿ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

    ರಾಮ್ ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದು, ಆಂಧ್ರ ಮೂಲದ ಡಿಂಪಲ್ ಹಯಾತಿ ಈ ಚಿತ್ರದ ನಾಯಕಿ. ಖ್ಯಾತ ನಟ ಸಾಯಿಕುಮಾರ್ ಖಳನಾಯಕನ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಶರತ್ ಲೋಹಿತಾಶ್ವ ಮುಂತಾದವರ ತಾರಾಬಳಗ ಈ ಚಿತ್ರಕ್ಕಿದೆ.

  • ಕನ್ನಡ ಸಿನಿಮಾಗಳಿಗೆ ಬರೋಬ್ಬರಿ 10 ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

    ಕನ್ನಡ ಸಿನಿಮಾಗಳಿಗೆ ಬರೋಬ್ಬರಿ 10 ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

    ಬೆಂಗಳೂರು: 66ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದ್ದು, ಈ ಬಾರಿ ಕನ್ನಡಕ್ಕೆ ಬರೋಬ್ಬರಿ 10 ಪ್ರಶಸ್ತಿಗಳು ಲಭಿಸಿದೆ. ಆ ಮೂಲಕ ಭಾರತೀಯ ಭಾಷೆಗಳ ಪೈಕಿ ಅತೀ ಹೆಚ್ಚು ಪ್ರಶಸ್ತಿ ಕನ್ನಡಕ್ಕೆ ಒಲಿದಿದೆ.

    ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಹತ್ತು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಲಭಿಸಿದೆ. ಅಲ್ಲದೇ ಒಂದು ಸಿನಿಮಾ ನ್ಯಾಷನಲ್ ಫಿಲ್ಮ್ ಆರ್ಕೈವ್‍ಗೆ ಆಯ್ಕೆಯಾಗಿದೆ.

    ‘ರಾಮ ರಾಮ ರೇ’ ಸಿನಿಮಾ ನಿರ್ದೇಶನ ಮಾಡಿದ್ದ ಸತ್ಯ ಪ್ರಕಾಶ್ ಅವರ ಒಂದಲ್ಲ ಎರಡಲ್ಲ ಸಿನಿಮಾ ರಾಷ್ಟ್ರೀಯ ಏಕೀಕರಣ ಮತ್ತು ಅತ್ಯುತ್ತಮ ಬಾಲ ನಟ ಪ್ರಶಸ್ತಿ ವಿಭಾಗದಲ್ಲಿ ಆಯ್ಕೆ ಆಗಿದೆ. ಅಲ್ಲದೇ ರಿಷಬ್ ಶೆಟ್ಟಿ ನಿರ್ದೇಶನದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಕಾಸರಗೋಡು ಸಿನಿಮಾ ಅತ್ಯುತ್ತಮ ಮಕ್ಕಳ ಚಿತ್ರ ವಿಭಾಗದಲ್ಲಿ ಪ್ರಶಸ್ತಿಯನ್ನು ಪಡೆದಿದೆ.

    ನಿರ್ದೇಶಕ ಮಂಸೋರೆ ನಿರ್ದೇಶನದಲ್ಲಿ ಮೂಡಿ ಬಂದಿದ್ದ ನಾತಿಚರಾಮಿ ಸಿನಿಮಾ ಬರೋಬ್ಬರಿ 5 ವಿಭಾಗದಲ್ಲಿ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಅತ್ಯುತ್ತಮ ಪ್ರಾದೇಶಿಕ ಚಲನಚಿತ್ರ, ಅತ್ಯುತ್ತಮ ಹಿನ್ನೆಲೆ ಗಾಯಕಿ, ಅತ್ಯುತ್ತಮ ಸಾಹಿತ್ಯ, ಅತ್ಯುತ್ತಮ ಎಡಿಟಿಂಗ್ ಹಾಗೂ ಸಿನಿಮಾ ನಟಿ ಶೃತಿ ಹರಿಹರನ್ ಅವರಿಗೆ ವಿಶೇಷ ಅಭಿನಯದ ವಿಭಾಗದಲ್ಲಿ ಪ್ರಶಸ್ತಿ ಲಭಿಸಿದೆ.

    ಇಡೀ ಭಾರತ ಚಿತ್ರರಂಗವನ್ನೇ ಕನ್ನಡ ಸಿನಿಮಾದತ್ತ ತಿರುಗಿ ನೋಡುವಂತೆ ಮಾಡಿದ್ದ ಕೆಜಿಎಫ್ ಸಿನಿಮಾಗೆ ಅತ್ಯುತ್ತಮ ವಿಎಫ್‍ಎಕ್ಸ್ ಹಾಗೂ ಅತ್ಯುತ್ತಮ ಸಾಹಸ ನಿರ್ದೇಶನ ವಿಭಾಗದಲ್ಲಿ ಪ್ರಶಸ್ತಿ ಲಭಿಸಿದೆ. ಮುಕಜ್ಜಿಯ ಕನಸುಗಳು ಸಿನಿಮಾ ನ್ಯಾಷನಲ್ ಫಿಲ್ಮ್ ಆರ್ಕೈವ್‍ಗೆ ಆಯ್ಕೆ ಆಗಿದೆ. ಈ ಬಾರಿಯ ಪ್ರಶಸ್ತಿಯ ರೇಸ್‍ನಲ್ಲಿ 40ಕ್ಕೂ ಹೆಚ್ಚು ಕನ್ನಡ ಸಿನಿಮಾಗಳು ಆಯ್ಕೆಯಾಗಿದ್ದವು.

  • ಮೈಸೂರಲ್ಲಿ ಪವರ್ ಸ್ಟಾರ್ – ರಾಕಿಂಗ್ ಸ್ಟಾರ್ ಸಮಾಗಮ!

    ಮೈಸೂರಲ್ಲಿ ಪವರ್ ಸ್ಟಾರ್ – ರಾಕಿಂಗ್ ಸ್ಟಾರ್ ಸಮಾಗಮ!

    ನ್ನಡ ಚಿತ್ರರಂಗದಲ್ಲಿ ಎಲ್ಲರೂ ಗೆಳೆಯರೇ. ಸ್ಟಾರ್ ವಾರ್ ಮುಂತಾದವುಗಳ ಮೂಲಕ ಕೆಲ ಸಂದರ್ಭಗಳಲ್ಲಿ ಊಹಾಪೋಹಗಳು ಹರಿದಾಡಿದರೂ ಇಲ್ಲಿನ ಸ್ಟಾರ್ ಗಳು ಸದಾ ಒಬ್ಬರಿಗೊಬ್ಬರು ಬೆಂಬಲವಾಗುತ್ತಾ, ಭೇಟಿಯಾಗುತ್ತಾ ಸ್ನೇಹದಿಂದಿದ್ದಾರೆ. ಈ ಕಾರಣದಿಂದಲೇ ಪರಸ್ಪರ ಸಿನಿಮಾ ಸೆಟ್‍ಗಳಿಗೆ ಭೇಟಿ ನೀಡಿ ಮಾತಾಡಿಸೋದು, ಒಂದೇ ಪ್ರದೇಶದಲ್ಲಿ ಚಿತ್ರೀಕರಣ ನಡೆಯುತ್ತಿದ್ದರೆ ಭೇಟಿಯಾಗೋದೆಲ್ಲ ನಡೆಯುತ್ತಿರುತ್ತೆ. ಹಾಗೆಯೇ ಮೈಸೂರಿನಲ್ಲಿ ಚಿತ್ರೀಕರಣದ ಬಿಡುವಲ್ಲಿ ರಾಕಿಂಗ್ ಸ್ಟಾರ್ ಯಶ್ ಮತ್ತು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಸಮಾಗಮದ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಬಿಟ್ಟಿದೆ.

    ಇದೀಗ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ 2 ಚಿತ್ರದ ಚಿತ್ರೀಕರಣ ಮೈಸೂರಿನಲ್ಲಿ ನಡೆಯುತ್ತಿದೆ. ಇದೇ ಸಮಯದಲ್ಲಿಯೇ ಪವರ್ ಸ್ಟಾರ್ ಪನೀತ್ ಕೂಡಾ ಮೈಸೂರಿನಲ್ಲಿ ಯುವರತ್ನ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಇಬ್ಬರೂ ಬ್ಯುಸಿಯಾಗಿದ್ದರೂ ಕೂಡಾ ಭೇಟಿಯಾಗಿ ಕೂತು ಮಾತಾಡಿದ್ದಾರಂತೆ. ಹೀಗೆ ಈ ಭೇಟಿಯ ಸಂದರ್ಭದಲ್ಲಿ ತೆಗೆದ ರಾಕಿಂಗ್ ಸ್ಟಾರ್ ಮತ್ತು ಪವರ್ ಸ್ಟಾರ್ ಫೋಟೋ ಈಗ ಸೋಶಿಯಲ್ ಮೀಡಿಯಾ ತುಂಬಾ ಹರಿದಾಡುತ್ತಿದೆ.

    ಅಷ್ಟಕ್ಕೂ ಪುನೀತ್ ರಾಜ್ ಕುಮಾರ್ ಮತ್ತು ಯಶ್ ಒಳ್ಳೆ ಗೆಳೆಯರು. ಆದರೆ ತಂತಮ್ಮ ಚಿತ್ರಗಳಲ್ಲಿ ಬ್ಯುಸಿಯಾಗಿದ್ದ ಅವರು ಬಹು ಕಾಲದ ನಂತರ ಮೈಸೂರಲ್ಲಿ ಭೇಟಿಯಾಗಿದ್ದಾರೆ. ಪರಸ್ಪರರ ಚಿತ್ರಗಳ ಬಗ್ಗೆ ವಿಚಾರ ವಿನಿಮಯ ಮಾಡಿಕೊಂಡಿದ್ದಾರಂತೆ. ಈ ಭೇಟಿಯಿಂದ ರಾಕಿಂಗ್ ಸ್ಟಾರ್ ಮತ್ತು ಪವರ್ ಸ್ಟಾರ್ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.

  • ಮೈಂಡ್ ಗೇಮ್ ಆಧಾರಿತ ‘ಆಪರೇಷನ್ ನಕ್ಷತ್ರ’

    ಮೈಂಡ್ ಗೇಮ್ ಆಧಾರಿತ ‘ಆಪರೇಷನ್ ನಕ್ಷತ್ರ’

    ಬೆಂಗಳೂರು: ಆಪರೇಷನ್ ನಕ್ಷತ್ರ ಫೈವ್ ಸ್ಟಾರ್ ಫಿಲಂ ಲಾಂಛನದಲ್ಲಿ ನಿರ್ಮಾಣವಾಗಿರುವ ಚಿತ್ರ. ಈ ಚಿತ್ರಕ್ಕೆ ಮಧುಸೂದನ್ ಕೆ.ಆರ್. ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ. ನಂದಕುಮಾರ್ ಎನ್, ಅರವಿಂದ ಟಿ.ಎಸ್. ರಾಧಾಕೃಷ್ಣ ಸಿ.ಎಸ್, ಕಿಶೋರ್ ಕುಮಾರ್ ಮೇಗಳ ಮನೆ ಈ ಚಿತ್ರಕ್ಕೆ ಬಂಡವಾಳ ಹೂಡಿ, ನಿರ್ಮಾಣ ಮಾಡಿದ್ದಾರೆ. ನಿರ್ದೇಶಕರು ಸೇರಿ ಈ 5 ಜನರು ಹುಟ್ಟು ಹಾಕಿರುವ ಸಂಸ್ಥೆಯೇ ಫೈವ್ ಸ್ಟಾರ್ ಫಿಲಮ್ಸ್ ಈ ಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭ ರೇಣುಕಾಂಬಾ ಥಿಯೇಟರ್ ನಲ್ಲಿ ನೆರವೇರಿತು.

    ನಿರಂಜನ್ ಒಡೆಯರ್, ಲಿಖಿತ್ ಸೂರ್ಯ, ಅದಿಥಿ ಪ್ರಭುದೇವ ಹಾಗೂ ಯಜ್ಞಾಶೆಟ್ಟಿ ಚಿತ್ರದ 4 ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಗೋವಿಂದೇಗೌಡ (ಕಾಮಿಡಿ ಕಿಲಾಡಿಗಳು), ಪ್ರಶಾಂತ್, ನಟನಾ, ಶ್ರೀನಿವಾಸ್ ಪ್ರಭು, ದೀಪಕ್ ರಾಜ್ ಶೆಟ್ಟಿ, ವಿಕ್ಟರಿ ವಾಸು ಕೂಡ ಈ ಚಿತ್ರದಲ್ಲಿದ್ದಾರೆ.

    ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ ಮಧುಸೂದನ್ ಕಾನ್ಫಿಡಾದಲ್ಲಿ ಡೈರೆಕ್ಷನ್ ಕೋರ್ಸ್ ಮುಗಿಸಿದ ನಂತರ ಸ್ನೇಹಿತರೆಲ್ಲರ ಸಲಹೆಯ ಮೇರೆಗೆ ಥ್ರಿಲ್ಲರ್ ಕಥೆಯೊಂದನ್ನು ರೆಡಿ ಮಾಡಿದೆ. ಕಲಾವಿದರನ್ನೆಲ್ಲ ಫೈನಲ್ ಮಾಡಿಕೊಂಡು ಬೆಂಗಳೂರು, ಗೋವಾದಲ್ಲಿ 40 ದಿನಗಳ ಕಾಲ ಚಿತ್ರೀಕರಣ ನಡೆಸಿದ್ದೇವೆ. ಇದು ಮೈಂಡ್ ಗೇಮ್ ಮೇಲೆ ನಡೆಯುವ ಕಥೆ. 4 ಜನ ಪಾತ್ರಧಾರಿಗಳ ಜೀವನದಲ್ಲಿ ಬಂದು ಹೋಗುವ ಘಟನೆಗಳು ಅವರ ಜೀವನದಲ್ಲಿ ಹೇಗೆ ಟ್ವಿಸ್ಟ್ ಆಂಡ್ ಟರ್ನ್ ಕೊಡುತ್ತವೆ ಎಂದು ಆಪರೇಷನ್ ನಕ್ಷತ್ರ ಚಿತ್ರದ ಮೂಲಕ ಹೇಳಲು ಟ್ರೈ ಮಾಡಿದ್ದೇವೆ. ಈ ಎಲ್ಲಾ ಕ್ಯಾರೆಕ್ಟರ್‍ಗಳನ್ನು ಬಿಟ್ಟು ಮತ್ತೊಂದು ಪ್ರಮುಖ ಪಾತ್ರವಿದೆ. ಅದನ್ನು ತೆರೆಯ ಮೇಲೆ ನೋಡಬೇಕು ಎಂದು ಹೇಳಿದರು. ಜನರಿಗೆ ನಾವು ಮೋಸ ಮಾಡಲು ಪ್ರಯತ್ನಿಸಿದರೆ ಆಗ ನಾವೇ ಹೇಗೆ ಮೋಸ ಹೋಗ್ತೀವಿ ಎನ್ನುವುದೇ ಚಿತ್ರದ ಕಥೆ ಎನ್ನುವುದು ನಿರ್ದೇಶಕರ ಮಾತಾಗಿತ್ತು.

    ಚಿತ್ರದ ನಿರ್ಮಾಪಕರಲ್ಲೊಬ್ಬರಾದ ಅರವಿಂದ್ ಮೂರ್ತಿ ಮಾತನಾಡಿ, ಈ ಕಥೆಯಲ್ಲಿರುವ ರೋಚಕ ಟ್ವಿಸ್ಟ್‍ಗಳು ನಮಗೆ ತುಂಬಾ ಇಷ್ಟವಾದವು. ಬಜೆಟ್ ಅಂದುಕೊಂಡದ್ದಕ್ಕಿಂತ ಸ್ವಲ್ಪ ಜಾಸ್ತಿಯಾದರೂ ಚಿತ್ರ ಚೆನ್ನಾಗಿ ಮೂಡಿಬಂದಿರುವುದರಿಂದ ನಮಗೆ ತೃಪ್ತಿಯಾಗಿದೆ ಎಂದು ಹೇಳಿದರು.

    ನಾಯಕ ನಟ ನಿರಂಜನ್ ಒಡೆಯರ್ ಮಾತನಾಡಿ ಪ್ರತಿ ನಿಸ್ವಾರ್ಥ ಮುಖದ ಹಿಂದೆ ಸ್ವಾರ್ಥ ಮನಸ್ಸಿರುತ್ತದೆ. ಅದು ಏನೇನು ಮಾಡಬಹುದು. ಅದರಲ್ಲೂ ಹಣ ಅಂತ ಬಂದಾಗ ಏನು ಮಾಡುತ್ತದೆ ಈ ಚಿತ್ರದಲ್ಲಿ ಹೇಳಲಾಗಿದೆ. ಹಿನ್ನೆಲೆ ಸಂಗೀತವೇ ಈ ಚಿತ್ರದಲ್ಲಿ ಹೀರೋ, ಕಥೆ ಚಿತ್ರದ ಮತ್ತೊಬ್ಬ ನಾಯಕ ಎಂದು ಹೇಳಿದರು. ನಾಯಕಿ ಅದಿತಿ ಪ್ರಭುದೇವ ಮಾತನಾಡಿ ನನಗೆ ಮೊದಲಿನಿಂದಲೂ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರಗಳೆಂದರೆ ತುಂಬಾ ಇಷ್ಟ. ನನ್ನ ಪಾತ್ರದ ಹೆಸರು ತುಂಬಾ ಚೆನ್ನಾಗಿದೆ. ಜೀವನದಲ್ಲಿ ತುಂಬಾ ಎಥಿಕ್ಸ್ ಇಟ್ಟುಕೊಂಡ ಹುಡುಗಿ. ಇದು ನನಗೆ ಅದೃಷ್ಟದ ಸಿನಿಮಾ. ಏಕೆಂದರೆ ಇದರಲ್ಲಿ ಆಕ್ಟ್ ಮಾಡುವಾಗಲೇ ನನಗೆ ತುಂಬಾ ಆಫರ್‍ಗಳು ಬಂದವು ಎಂದು ಹೇಳಿದರು. ಮತ್ತೊಬ್ಬ ನಾಯಕಿ ಯಜ್ಞಶೆಟ್ಟಿ, ಸಂಗೀತ ನಿರ್ದೇಶಕ ವೀರ ಸಮರ್ಥ್, ನಟ ಲಿಖಿತ್ ಸೂರ್ಯ ಕೂಡ ಈ ಚಿತ್ರದ ಕುರಿತಂತೆ ಮಾತನಾಡಿದರು.

  • ‘ಮಾರ್ಲಾಮಿ’ ಚಿತ್ರಕ್ಕೆ ನಟ ಪ್ರಥಮ್ ಚಾಲನೆ

    ‘ಮಾರ್ಲಾಮಿ’ ಚಿತ್ರಕ್ಕೆ ನಟ ಪ್ರಥಮ್ ಚಾಲನೆ

    ಬೆಂಗಳೂರು: ಮನೆಯ ಹಿರಿಯರನ್ನು ಸ್ಮರಿಸುವುದಕ್ಕಾಗಿಯೇ ಒಂದು ತಿಂಗಳನ್ನು ನಮ್ಮ ಹಿಂದೂ ಶಾಸ್ತ್ರದಲ್ಲಿ ಮೀಸಲಿಡಲಾಗಿದೆ. ಆ ತಿಂಗಳನ್ನು ಪಿತೃ ಪಕ್ಷವೆಂದು ಕರೆಯುತ್ತಾರೆ. ಆ ಒಂದು ಆಚರಣೆಗೆ ಮಾರ್ಲಾಮಿ ಹಬ್ಬವೆಂದೂ ಕರೆಯುತ್ತಾರೆ. ಈ ಆಚರಣೆ ಹೇಗೆ ಬಂತು? ಇದರ ಹಿನ್ನೆಲೆ ಏನು? ಈ ಹಬ್ಬದ ವಿಶೇಷತೆಗಳೇನು? ಈ ಎಲ್ಲಾ ಸಂಗತಿಗಳನ್ನು ಇಟ್ಟುಕೊಂಡು ಈಗ ಸ್ಯಾಂಡಲ್‍ವುಡ್‍ನಲ್ಲಿ ಚಲನಚಿತ್ರವೊಂದು ನಿರ್ಮಾಣವಾಗುತ್ತಿದೆ.

    ಟಿ.ವಿನಯ್‍ಕುಮಾರ್ ಅವರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರದ ಮುಹೂರ್ತ ಸಮಾರಂಭ ಕಳೆದ ಸೋಮವಾರ ನೆರವೇರಿತು. ಗವಿಪುರಂ ಗುಟ್ಟಹಳ್ಳಿಯ ಬಂಡೆ ಮಹಾಕಾಳಿಯ ದೇವಸ್ಥಾನದಲ್ಲಿ ನಡೆದ ಮುಹೂರ್ತದ ದೃಶ್ಯಕ್ಕೆ ಬಿಗ್‍ಬಾಸ್ ಖ್ಯಾತಿಯ ಪ್ರಥಮ್ ಕ್ಲ್ಯಾಪ್ ಮಾಡಿದರೆ ಧಾತ್ರಿ ಮಂಜುನಾಥ್ ಕ್ಯಾಮರಾ ಚಾಲನೆ ಮಾಡಿದರು.

    ಸರಿಗಮಪ ರಿಯಾಲಿಟಿ ಶೋ ವಿನ್ನರ್ ಚನ್ನಪ್ಪ ನಾಯಕನಾಗಿ ಕಾಣಿಸಿಕೊಳ್ಳುತ್ತಿರುವ ಮಾರ್ಲಾಮಿ ಚಿತ್ರದ ನಾಯಕಿಯಾಗಿ ಪದ್ಮಾವತಿ ಧಾರವಾಹಿ ಖ್ಯಾತಿಯ ವರ್ಷಿತ ವರ್ಮ ನಟಿಸುತ್ತಿದ್ದಾರೆ. ಎರಿಕ್ ವಿ.ಜಿ. ಅವರ ಛಾಯಾಗ್ರಹಣ ಹಾಗೂ ಅರುಣ್ ಆಂಡ್ರೋ ಅವರ ಸಂಗೀತ ಈ ಚಿತ್ರಕ್ಕಿದೆ.

    ಮುಹೂರ್ತದ ನಂತರ ಚಿತ್ರದ ವಿಶೇಷತೆಗಳ ಬಗ್ಗೆ ಮಾತನಾಡಿದ ನಿರ್ದೇಶಕ ವಿನಯ್ ಕುಮಾರ್ ಪಕ್ಕಾ ಗ್ರಾಮೀಣ ಹಿನ್ನೆಲೆಯಲ್ಲಿ ನಡೆಯುವ ಕಥೆಯೇ ಇದು. ಪಿತೃಪಕ್ಷವನ್ನು ಗ್ರಾಮೀಣ ಪ್ರದೇಶಗಳಲ್ಲಿ ತುಂಭಾ ಭಯ ಭಕ್ತಿಯಿಂದ ಆಚರಿಸುತ್ತಾರೆ. ಈ ಹಬ್ಬವನ್ನು ತೋರಿಸುವ ಮೂಲಕ ಸಮಾಜಕ್ಕೆ ಸಂದೇಶ ಹೇಳಲು ಪ್ರಯತ್ನಿಸುತ್ತಿದ್ದೇನೆ. ಈ ಚಿತ್ರದಲ್ಲಿ ಕಥೆಯೇ ಹೀರೋ. ಕಥೆಯಲ್ಲಿ ಸಾಕಷ್ಟು ಟ್ವಿಸ್ಟ್ ಆಂಡ್ ಟರ್ನ್ ಇದೆ. ಚೆನ್ನಪ್ಪ ಅವರ ಪಾತ್ರ ಚಿತ್ರಕ್ಕೆ ಹೊಸ ತಿರುವು ಕೊಡುತ್ತದೆ. ಇದರ ಜೊತೆಗೆ ಹಾರರ್ ಟಚ್ ಕೂಡ ಇದೆ. ಚನ್ನರಾಯಪಟ್ಟಣ ಸುತ್ತಮುತ್ತ ನಡೆಯುವ ಕಥೆ ಇದಾಗಿದ್ದು, 95% ಅಲ್ಲೇ ಚಿತ್ರೀಕರಣ ಮಾಡುತ್ತಿದ್ದೇವೆ. ಉಳಿದಂತೆ ಸಿಟಿ ಬ್ಯಾಕ್ ಡ್ರಾಪ್‍ನಲ್ಲಿ ನಡೆಯುತ್ತಿದೆ ಎಂದು ಹೇಳಿದರು.

    ಈ ಚಿತ್ರಕ್ಕೆ ಕುಮಾರ್ ಬಂಡವಾಳ ಹಾಕಿದ್ದು, ಚಿತ್ರದ ಕುರಿತಂತೆ ಮಾತನಾಡುತ್ತಾ, ಮಂಡ್ಯ, ಹಾಸನ ಏರಿಯಾದಲ್ಲಿ ನಡೆಯುವ ಕಥೆ ಇದು. ನಿರ್ದೇಶಕರು ಈ ಕಥೆ ಹೇಳಿದಾಗ ನನಗೆ ತುಂಬಾ ಇಷ್ಟವಾಯಿತು. ಕಥೆಯಲ್ಲಿ ಒಂದಿಷ್ಟು ಸಸ್ಪೆನ್ಸ್ ಹಾರರ್ ಕೂಡ ಇದೆ. ಈ ಚಿತ್ರದ ಕಾನ್ಸೆಪ್ಟ್ ಹೇಗಿರುತ್ತದೆ ಎಂಬುದನ್ನು ಚಿತ್ರ ಮುಗಿದ ನಂತರ ಟ್ರೈಲರ್ ಮಾಡಿ ಅದರ ಮೂಲಕ ಜನರಿಗೆ ಹೇಳಬೇಕೆಂದು ಪ್ಲಾನ್ ಹಾಕಿಕೊಂಡಿದ್ದೇವೆ ಎಂದು ಹೇಳಿದರು. ಮುಖ್ಯ ಅತಿಥಿಯಾಗಿದ್ದ ಪ್ರಥಮ್ ಮಾತನಾಡಿ ನಮ್ಮನ್ನಗಲಿರುವ ಹಿರಿಯರನ್ನು ನೆನಪಿಸಿಕೊಂಡು ಮಾಡುವ ಪೂಜೆಯನ್ನು ಮಾರ್ಲಾಮಿ ಎನ್ನುತ್ತೇವೆ. ಈ ತರದ ಹಳ್ಳಿ ಸೊಗಡಿನ ಸಿನಿಮಾಗಳು ಇನ್ನು ಹೆಚ್ಚು ಬರಬೇಕೆಂದು ಶುಭ ಹಾರೈಸಿದರು. ಚಿತ್ರದಲ್ಲಿ 5 ಹಾಡುಗಳಿದ್ದು, ಅರುಣ್ ಆಂಡ್ರೋ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ. ವರುಣ್ ಮೋಹನ್ ಜುನೇಜ, ಶೋಭರಾಜ್, ಮುನಿ ಕೆಂಪೇಗೌಡ, ಸುಧಾ, ದಿನೇಶ್ ಗುರೂಜಿ, ರೆಮೋ ಉಳಿದ ತಾರಾಬಳಗದಲ್ಲಿದ್ದಾರೆ.

  • ‘ಸಿಂಗ’ನ ಟ್ರೈಲರ್ ಲಾಂಚ್‍ಗೆ ಫಿಕ್ಸಾಯ್ತು ಮುಹೂರ್ತ!

    ‘ಸಿಂಗ’ನ ಟ್ರೈಲರ್ ಲಾಂಚ್‍ಗೆ ಫಿಕ್ಸಾಯ್ತು ಮುಹೂರ್ತ!

    ಬೆಂಗಳೂರು: ಚಿರಂಜೀವಿ ಸರ್ಜಾ ಅಭಿನಯದ ಸಿಂಗ ಚಿತ್ರ ಪಕ್ಕಾ ಮಾಸ್ ಕಂಟೆಂಟಿನ ಮುನ್ಸೂಚನೆಯೊಂದಿಗೆ ಅಬ್ಬರಿಸಲಾರಂಭಿಸಿದೆ. ಯುಕೆಎಂ ಸ್ಟುಡಿಯೋಸ್ ಲಾಂಛನದಲ್ಲಿ ಉದಯ್ ಮೆಹ್ತಾ ನಿರ್ಮಾಣ ಮಾಡಿರೋ ಈ ಚಿತ್ರವೀಗ ಚಿತ್ರೀಕರಣ, ಕೆಲಸ ಕಾರ್ಯಗಳನ್ನೆಲ್ಲ ಮುಗಿಸಿಕೊಂಡು ತೆರೆಗೆ ಬರಲು ಸಿದ್ಧವಾಗಿದೆ. ಈ ಕಡೆಯ ಕ್ಷಣಗಳಲ್ಲಿ ಬಿಸಿಯೇರಿಸುವ ಸಲುವಾಗಿಯೇ ಟ್ರೈಲರ್ ಒಂದನ್ನು ಲಾಂಚ್ ಮಾಡಲು ಚಿತ್ರತಂಡ ಅಣಿಗೊಂಡಿದೆ.

    ಇದೇ ಜೂನ್ 14ರಂದು ಸಿಂಗ ಟ್ರೈಲರ್ ಲಾಂಚ್ ಆಗಲಿದೆ. ಈ ಹಿಂದೆ ರಾಮ್ ಲೀಲಾ ಎಂಬ ಚಿತ್ರ ನಿರ್ದೇಶನ ಮಾಡಿದ್ದ ವಿಜಯ್ ಕಿರಣ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಈ ಚಿತ್ರದ ಕೆಲ ಪೋಸ್ಟರ್ ಗಳ ಮೂಲಕವೇ ಇದೊಂದು ಪಕ್ಕಾ ಮಾಸ್ ಸಬ್ಜೆಕ್ಟಿನ ಚಿತ್ರ ಅನ್ನೋದೂ ನಿಖರವಾಗಿಯೇ ಮನದಟ್ಟಾಗಿದೆ. ಚಿರಂಜೀವಿ ಸರ್ಜಾ ಇದುವರೆಗೂ ಸಾಕಷ್ಟು ಚಿತ್ರಗಳಲ್ಲಿ ಮಾಸ್ ಲುಕ್ಕಿನಲ್ಲಿ ನಟಿಸಿದ್ದಾರೆ. ಆದರೆ ಸಿಂಗದಲ್ಲಿ ಅವರ ಪಾತ್ರಕ್ಕಿರೋ ರೌದ್ರ ಸ್ಪರ್ಶ ಪ್ರೇಕ್ಷಕರನ್ನು ಬೆರಗಾಗಿಸಲಿದೆ ಅನ್ನೋದು ಚಿತ್ರತಂಡದ ಭರವಸೆ.

    ಸಿಂಗ ಎಂಬ ಮಾಸ್ ಟೈಟಲ್ಲೇ ಹೇಳುವಂತೆ ಇದೊಂದು ಸಾಹಸ ಪ್ರಧಾನವಾದ ಚಿತ್ರ. ಇದರಲ್ಲಿ ಮೈ ನವಿರೇಳಿಸುವಂಥಾ ಸಾಹಸ ಸನ್ನಿವೇಶಗಳಿವೆ. ಅದೆಲ್ಲವನ್ನು ಡಾ.ಕೆ ರವಿವರ್ಮಾ ಮತ್ತು ಪಳನಿರಾಜ್ ನಿರ್ದೇಶನ ಮಾಡಿದ್ದಾರೆ. ಡಾ. ವಿ ನಾಗೇಂದ್ರ ಪ್ರಸಾದ್, ಕವಿರಾಜ್ ಮತ್ತು ಚೇತನ್ ಹಾಡುಗಳನ್ನು ಬರೆದಿದ್ದಾರೆ. ಈಗಾಗಲೇ ಈ ಚಿತ್ರದ ಶ್ಯಾನೇ ಟಾಪಗೌವ್ಳೆ ಅನ್ನೋ ಹಾಡಂತೂ ಟ್ರೆಂಡ್ ಸೆಟ್ ಮಾಡಿದೆ. ಸಿಂಗ ಮೂಲಕ ಚಿರಂಜೀವಿ ಸರ್ಜಾಗೆ ನಾಗಕನ್ನಿಕೆ ಖ್ಯಾತಿಯ ಅದಿತಿ ಪ್ರಭುದೇವ ಜೋಡಿಯಾಗಿದ್ದಾರೆ.

  • ಆರ್. ಚಂದ್ರು ಅದೆಷ್ಟು ಶ್ರದ್ಧೆಯಿಂದ ಐ ಲವ್ ಯೂ ಅಂದಿದ್ದಾರೆ ಗೊತ್ತಾ?

    ಆರ್. ಚಂದ್ರು ಅದೆಷ್ಟು ಶ್ರದ್ಧೆಯಿಂದ ಐ ಲವ್ ಯೂ ಅಂದಿದ್ದಾರೆ ಗೊತ್ತಾ?

    ಬೆಂಗಳೂರು: ತಾಜ್‍ಮಹಲ್, ಚಾರ್ ಮಿನಾರ್ ನಂಥಾ ಸದಾ ಕಾಡುವ ಪ್ರೇಮಕಾವ್ಯಗಳನ್ನು ಕಟ್ಟಿ ಕೊಟ್ಟವರು ನಿರ್ದೇಶಕ ಆರ್ ಚಂದ್ರು. ಇದೀಗ ಅವರು ನಿರ್ದೇಶನ ಮಾಡಿರೋ ಐ ಲವ್ ಯೂ ಚಿತ್ರ ತೆರೆ ಕಾಣಲು ರೆಡಿಯಾಗಿದೆ. ಈಗಾಗಲೇ ಭಾರೀ ನಿರೀಕ್ಷೆಗೆ ಕಾರಣವಾಗಿರೋ ಐ ಲವ್ ಯೂ ಜೂನ್ 14ರಂದು ತೆರೆ ಕಾಣುತ್ತಿದೆ. ಯಾವುದೇ ಚಿತ್ರಗಳನ್ನು ಮಾಡುವಾಗಲೂ ಅಚ್ಚುಕಟ್ಟಾದ ಪೂರ್ವ ತಯಾರಿ, ಒಂದೇ ಒಂದು ತೊಡಕೂ ಸಂಭವಿಸದಂತೆ ಮುಂದಡಿಯಿಡೋ ಎಚ್ಚರ ಮತ್ತು ಕಥೆಯನ್ನು ಕಣ್ಣಲ್ಲಿ ಕಣ್ಣಿಟ್ಟು ರೂಪಿಸೋ ಕಲಾವಂತಿಕೆ ಚಂದ್ರು ಅವರ ಟ್ರೇಡ್ ಮಾರ್ಕುಗಳಿದ್ದಂತೆ. ಬಿಡುಗಡೆಯ ಪೂರ್ವದಲ್ಲಿಯೇ ಐ ಲವ್ ಯೂ ಇಂಥಾದ್ದೊಂದು ಕ್ರೇಜ್ ಹುಟ್ಟು ಹಾಕಿರೋದರ ಹಿಂದೆಯೂ ಅಂಥಾದ್ದೇ ಪರಿಶ್ರಮಗಳ ಕಥೆಯಿದೆ!

    ಆರ್. ಚಂದ್ರು ವರ್ಷಕ್ಕೊಂದು ಅಚ್ಚುಕಟ್ಟಾದ ಚಿತ್ರ ಮಾಡೋ ಪರಿಪಾಠವನ್ನು ರೂಢಿಸಿಕೊಂಡು ಬಂದಿದ್ದಾರೆ. ತಮ್ಮ ಪ್ರೇಕ್ಷಕರು ಏನನ್ನು ನಿರೀಕ್ಷಿಸುತ್ತಾರೆಂಬ ನಾಡಿಮಿಡಿತವನ್ನು ಅರ್ಥೈಸಿಕೊಂಡಿರೋ ಅವರು ಕಾಡುವಂಥಾ ಕಥೆಗೊಂದು ಅಂತಿಮ ಸ್ಪರ್ಶ ನೀಡಿಯಾದ ಮೇಲಷ್ಟೇ ಹೀರೋ, ನಾಯಕಿ, ತಾರಾಗಣ ಮುಂತಾದವುಗಳ ಬಗ್ಗೆ ಗಮನ ಹರಿಸುತ್ತಾರೆ. ಹೀಗೆಯೇ ನಿರ್ದೇಶಕರಾಗಿ ಸಾಗಿ ಬಂದಿರೋ ಚಂದ್ರು ಅವರ ಪಾಲಿಗೇ ಐ ಲವ್ ಯೂ ಚಿತ್ರ ಸ್ಪೆಷಲ್ ಅನ್ನಿಸಲು ಹಲವಾರು ಕಾರಣಗಳಿವೆ.

    ಈ ಚಿತ್ರದ ವಿಚಾರದಲ್ಲಿ ನಿರ್ದೇಶಕನಾಗಿ, ನಿರ್ಮಾಪಕರಾಗಿಯೂ ಚಂದ್ರು ಜವಾಬ್ದಾರಿ ಹೊತ್ತುಕೊಂಡಿರೋದು ಗೊತ್ತೇ ಇದೆ. ಹೀಗೆ ಎರಡೆರಡು ಭಾರವಿದ್ದರೂ ಕೂಡಾ ಈ ಸಿನಿಮಾವನ್ನು ಅವರು ಏಕ ಕಾಲದಲ್ಲಿಯೇ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ರೂಪಿಸಿರೋದೊಂದು ಸಾಹಸ. ಚಂದ್ರು ಈ ಹಿಂದೆಯೂ ತೆಲುಗಿನಲ್ಲೊಂದು ಚಿತ್ರವನ್ನ ನಿರ್ದೇಶನ ಮಾಡಿದ್ದರು. ಆದ್ದರಿಂದಲೇ ಅವರಲ್ಲಿನ ಪ್ರೇಕ್ಷಕ ವರ್ಗಕ್ಕೆ ಚಿರಪರಿಚಿತರು. ಉಪೇಂದ್ರ ಕೂಡಾ ತೆಲುಗು ಪ್ರೇಕ್ಷಕರ ಮನ ಗೆದ್ದಿದ್ದಾರೆ. ಈ ದಿಸೆಯಲ್ಲಿ ಐ ಲವ್ ಯೂ ಚಿತ್ರವನ್ನು ತೆಲುಗಿನಲ್ಲಿಯೂ ರೂಪಿಸುವ ನಿರ್ಧಾರಕ್ಕೆ ಬಂದು ಚಂದ್ರು ಅದರಲ್ಲಿಯೂ ಯಶ ಕಂಡಿದ್ದಾರೆ.

    ಈ ಚಿತ್ರದ ವಿಶೇಷತೆ ಏನು ಎಂಬ ಪ್ರಶ್ನೆ ಎದುರಾದರೆ ಚಂದ್ರು ಅವರು ಥಟ್ಟನೆ ಗಟ್ಟಿಯಾದ ಕಥೆ ಮತ್ತು ಯಾವ ಆಲೋಚನೆಗಳ ನಿಲುಕಿಗೂ ಸಿಗದ ಗಟ್ಟಿಯಾದ ಕಥೆ ಅನ್ನುತ್ತಾರೆ. ಅವರ ಈ ಹಿಂದಿನ ಚಿತ್ರಗಳ ಜೀವಾಳವೂ ಗಟ್ಟಿ ಕಥೆಯೇ. ಆದರೆ ಐ ಲವ್ ಯೂ ವಿಚಾರದಲ್ಲದು ಮತ್ತಷ್ಟು ಗಟ್ಟಿಯಾಗಿದೆಯಂತೆ. ಐ ಲವ್ ಯೂ ಅಂದರೆ ಪ್ರೇಮದ ಮೊದಲ ಪುಳಕಗಳು ಸಾಲುಗಟ್ಟಿ ನಿಲ್ಲುತ್ತವೆ. ಹಾಗೆಂದ ಮೇಲೆ ಇದೊಂದು ಅದ್ಭುತ ಪ್ರೇಮ ಕಥಾನಕ ಅನ್ನೋದರಲ್ಲಿ ಯಾವ ಡೌಟೂ ಇಲ್ಲ. ಆದರೆ ಅದರಾಚೆಗೂ ಕಥೆಯ ವಿಚಾರಗಳಲ್ಲಿ ಅಚ್ಚರಿಗಳು ಪ್ರೇಕ್ಷಕರಿಗಾಗಿ ಕಾದು ಕೂತಿವೆ. ಅದೇನೆಂಬುದೇ ಪ್ರಧಾನವಾದ ಸರ್ಪ್ರೈಸ್!

    ಐ ಲವ್ ಯೂ ಫ್ಯಾಮಿಲಿ ಸಮೇತ ಕೂತು ನೋಡಿ ಎಂಜಾಯ್ ಮಾಡುವಂಥಾ ಸಿನಿಮಾ ಮಾತ್ರವಲ್ಲ; ಫ್ಯಾಮಿಲಿ ಸಮೇತ ನೋಡಲೇ ಬೇಕಾದ ಚಿತ್ರ ಅನ್ನೋದು ಚಂದ್ರು ಅವರ ಭರವಸೆ. ಯಾಕೆಂದರೆ ಪ್ರೀತಿ ಪ್ರೇಮಗಳಾಚೆಗೂ ಇಲ್ಲಿ ಮೌಲ್ಯಯುತವಾದೊಂದು ಸಂದೇಶವಿದೆ. ಕ್ಲೈಮ್ಯಾಕ್ಸಿನಲ್ಲಿಯೂ ವಿಶೇಷತೆಗಳಿವೆ. ಇದೆಲ್ಲವೂ ಇದೇ ಜೂನ್ 14ರಂದು ಸ್ಪಷ್ಟವಾಗಿ ಪ್ರೇಕ್ಷಕರ ಮುಂದೆ ತೆರೆದುಕೊಳ್ಳಲಿದೆ.

  • ಪ್ರಸ್ಥಕ್ಕೆ ಕಾಯುತ್ತಿರೋ ಬ್ರಹ್ಮಚಾರಿಗೆ ಬರ್ತ್ ಡೇ ಗಿಫ್ಟ್!

    ಪ್ರಸ್ಥಕ್ಕೆ ಕಾಯುತ್ತಿರೋ ಬ್ರಹ್ಮಚಾರಿಗೆ ಬರ್ತ್ ಡೇ ಗಿಫ್ಟ್!

    ಬೆಂಗಳೂರು: ಅಯೋಗ್ಯ ಎಂಬ ಚಿತ್ರದ ಅದ್ಭುತ ಯಶಸ್ಸಿನ ನಂತರದಲ್ಲಿ ನಟ ನೀನಾಸಂ ಸತೀಶ್ ಅವರ ನಸೀಬು ಬದಲಾಗಿ ಬಿಟ್ಟಿದೆ. ಆ ನಂತರದಲ್ಲಿ ಒಂದರ ಹಿಂದೊಂದರಂತೆ ಚಿತ್ರಗಳು ಅವರನ್ನು ಅರಸಿ ಬರುತ್ತಿವೆ. ಸದ್ಯ ಅವರೊಪ್ಪಿಕೊಂಡಿರೋ ಚಿತ್ರಗಳೆಲ್ಲವೂ ಭಿನ್ನ ಬಗೆಯವುಗಳೇ ಎಂಬುದು ವಿಶೇಷ. ಇದೀಗ ಸತೀಶ್ ಬ್ರಹ್ಮಚಾರಿ ಎಂಬ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರತಂಡವೀಗ ಹೀರೋ ಬರ್ತ್ ಡೇಗೆ ಗಿಫ್ಟೊಂದನ್ನು ಕೊಡಲು ತಯಾರಾಗಿದೆ!

    ಬ್ರಹ್ಮಚಾರಿ ಚಿತ್ರಕ್ಕೆ ಹಂಡ್ರೆಡ್ ಪರ್ಸೆಂಟ್ ವರ್ಜಿನ್ ಎಂಬ ಟ್ಯಾಗ್ ಲೈನ್ ಇದೆ. ಆದರೆ ಇದೀಗ ಬಿಡುಗಡೆಗೊಂಡಿರೋ ಪೋಸ್ಟರಿನಲ್ಲಿ ನೀನಾಸಂ ಸತೀಶ್, ನಾಯಕಿ ಅದಿತಿ ಪ್ರಭುದೇವರೊಂದಿಗೆ ಪ್ರಸ್ಥದ ಮೂಡಿನಲ್ಲಿರೋ ಫೋಟೋ ಅನಾವರಣಗೊಂಡಿದೆ. ಪ್ಯೂರ್ ವರ್ಜಿನ್ ಬ್ರಹ್ಮಚಾರಿಯ ಪ್ರಸ್ಥದ ಮೂಡಿನ ಬಗ್ಗೆ ಪ್ರೇಕ್ಷಕರು ಚಕಿತಗೊಂಡಿದ್ದಾರೆ.

    ಹೀಗೆ ಭಾರೀ ಕುತೂಹಲಕ್ಕೆ ಕಾರಣವಾಗಿರುವ ಪೋಸ್ಟರ್ ಬಿಡುಗಡೆ ಮಾಡಿರೋ ಚಿತ್ರತಂಡ ನೀನಾಸಂ ಸತೀಶ್ ಅವರಿಗೆ ಬರ್ತ್ ಡೇ ಗಿಫ್ಟ್ ಒಂದನ್ನು ಕೊಡಲು ತಯಾರಾಗಿರೋ ಸೂಚನೆ ನೀಡಿದೆ. ಇದೇ ತಿಂಗಳ ಇಪ್ಪತ್ತರಂದು ಸತೀಶ್ ಅವರ ಹುಟ್ಟುಹಬ್ಬವಿದೆ. ಆ ದಿನವೇ ಬ್ರಹ್ಮಚಾರಿಯದ್ದೊಂದು ಟೀಸರ್ ಬಿಡುಗಡೆಗೊಳಿಸಲು ತೀರ್ಮಾನಿಸಲಾಗಿದೆ. ಈ ಟೀಸರ್ ಹೇಗಿರಬಹುದೆಂಬ ಅಂದಾಜು ನೀಡೋ ಮಿನಿ ಟೀಸರೊಂದು 10ನೇ ತಾರೀಕಿನಂದು ಹೊರ ಬರಲಿದೆಯಂತೆ.

    ಬ್ರಹ್ಮಚಾರಿ ಚಿತ್ರ ಈಗಾಗಲೇ ಪೋಸ್ಟರುಗಳ ಮೂಲಕವೇ ವ್ಯಾಪಕ ಕುತೂಹಲಕ್ಕೆ ಕಾರಣವಾಗಿದೆ. ಆದರೆ ಈ ಮೂಲಕವೇ ಪ್ರೇಕ್ಷಕರನ್ನು ಗೊಂದಲಕ್ಕೆ ತಳ್ಳುತ್ತಾ, ಅದನ್ನೇ ಕ್ಯೂರಿಯಾಸಿಟಿಯಾಗಿ ಮಾರ್ಪಾಟು ಮಾಡೋ ಕಲೆಗಾರಿಕೆಯನ್ನ ಚಿತ್ರತಂಡ ಪ್ರದರ್ಶಿಸುತ್ತಿದೆ. ಸತೀಶ್ ಅಭಿಮಾನಿಗಳಂತೂ ಈ ಸಿನಿಮಾ ಬಗ್ಗೆ ಕಾತರರಾಗಿದ್ದಾರೆ. ಸತೀಶ್ ಬರ್ತ್ ಡೇಯಂದೇ ಅಭಿಮಾನಿಗಳೆಲ್ಲರಿಗೂ ಟೀಸರ್ ಕೊಡುಗೆ ಸಿಗಲಿದೆ.

  • ಹಫ್ತಾ: ಸ್ಯಾಂಡಲ್‍ವುಡ್‍ಗೆ ಆಗಮಿಸಿದ ಯುವ ನಿರ್ಮಾಪಕ ಬಾಲರಾಜ್!

    ಹಫ್ತಾ: ಸ್ಯಾಂಡಲ್‍ವುಡ್‍ಗೆ ಆಗಮಿಸಿದ ಯುವ ನಿರ್ಮಾಪಕ ಬಾಲರಾಜ್!

    ಬೆಂಗಳೂರು: ವರ್ಧನ್ ತೀರ್ಥಹಳ್ಳಿ ನಾಯಕನಾಗಿ ಪಾದಾರ್ಪಣೆ ಮಾಡುತ್ತಿರುವ `ಹಫ್ತಾ’ ಚಿತ್ರದ ಹವಾ ಅಡೆತಡೆಯಿಲ್ಲದೇ ಮುಂದುವರೆಯುತ್ತಿದೆ. ಈಗಾಗಲೇ ಬಿಡುಗಡೆಯಾಗಿರೋ ಟ್ರೈಲರ್, ಹಾಡುಗಳ ಮೂಲಕವೇ ಭರ್ಜರಿ ಟಾಕ್ ಕ್ರಿಯೇಟ್ ಮಾಡಿರೋ ಈ ಸಿನಿಮಾ ಬಗ್ಗೆ ವ್ಯಾಪಕವಾದ ಸಕಾರಾತ್ಮಕ ಪ್ರತಿಕ್ರಿಯೆಗಳೇ ಕೇಳಿ ಬರುತ್ತಿವೆ. ಯಾವುದೇ ಒಂದು ಸಿನಿಮಾ ಅಂದರೂ ಹೆಚ್ಚಿನದಾಗಿ ಹಲವರ ಅದೆಷ್ಟೋ ವರ್ಷದ ಕನಸು ನನಸಾದ ಕಥೆಗಳಿರುತ್ತವೆ. ಹಫ್ತಾ ಚಿತ್ರದ ವಿಚಾರದಲ್ಲಿಯೂ ಅಂಥವೇ ಒಂದಷ್ಟು ಮೊದಲ ಕನಸಿನ ಕಥೆಗಳಿವೆ. ಈ ಚಿತ್ರದ ನಿರ್ಮಾಪಕರಲ್ಲೊಬ್ಬರಾಗಿರೋ ಬಾಲರಾಜ್ ಟಿಸಿ ಪಾಳ್ಯ ಕೂಡಾ ವರ್ಷಾಂತರಗಳ ಕನಸೊಂದು ಹಫ್ತಾ ಮೂಲಕ ನನಸಾದ ಖುಷಿಯಲ್ಲಿದ್ದಾರೆ.

    ಹಫ್ತಾ ನಿರ್ದೇಶಕ ಪ್ರಕಾಶ್ ಹೆಬ್ಬಾಳ ಅವರ ಪಾಲಿಗೂ ಮೊದಲ ಹೆಜ್ಜೆ. ವರ್ಧನ್ ತೀರ್ಥಹಳ್ಳಿ ಈಗಾಗಲೇ ಹಲವಾರು ಚಿತ್ರಗಳಲ್ಲಿ ನಟಿಸಿದ್ದರೂ ನಾಯಕನಾಗಿ ಅವರಿಗೂ ಇದು ಮೊದಲ ಹೆಜ್ಜೆಯೇ. ಇನ್ನು ನಿರ್ಮಾಪಕರಾದ ಮೈತ್ರಿ ಮಂಜುನಾಥ್ ಅವರೂ ಇದೇ ಸಾಲಿನಲ್ಲಿದ್ದಾರೆ. ಅದೇ ರೀತಿ ತಮ್ಮದೇ ಬ್ಯುಸಿನೆಸ್, ವಹಿವಾಟು ಅಂತಿದ್ದರೂ ಸಿನಿಮಾ ಧ್ಯಾನವನ್ನು ಬಹುವಾಗಿ ಹಚ್ಚಿಕೊಂಡಿದ್ದ ಬಾಲರಾಜ್ ಕೂಡಾ ಹಫ್ತಾ ಮೂಲಕವೇ ನಿರ್ಮಾಪಕರಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ.

    ಬಾಲರಾಜ್ ಮೂಲ ಬೆಂಗಳೂರಿಗರೇ. ಟಿಸಿ ಪಾಳ್ಯ ಏರಿಯಾದಲ್ಲಿಯೇ ಹುಟ್ಟಿ ಬೆಳೆದ ಅವರು ಕಾಲೇಜು ದಿನಗಳಲ್ಲಿಯೇ ಸಹಜವೆಂಬಂಥಾ ಸಿನಿಮಾ ವ್ಯಾಮೋಹ ಹೊಂದಿದ್ದವರು. ತಾನೂ ಕೂಡಾ ಈ ಬಣ್ಣದ ಜಗತ್ತಿನ ಭಾಗವಾಗಬೇಕೆಂಬ ಕನಸನ್ನು ಆ ಕಾಲದಿಂದಲೇ ಕಾಪಿಟ್ಟುಕೊಂಡು ಬಂದಿದ್ದ ಬಾಲರಾಜ್ ಆ ನಂತರದಲ್ಲಿ ಜೀವನೋಪಾಯಕ್ಕಾಗಿ ತಮ್ಮದೇ ಬ್ಯುಸಿನೆಸ್‍ನ ಹಾದಿ ಹಿಡಿದಿದ್ದರು. ಈ ಜಂಜಾಟ, ಒತ್ತಡಗಳ ನಡುವೆಯೂ ಸಿನಿಮಾ ನಿರ್ಮಾಣ ಮಾಡಬೇಕೆಂಬ ಬಯಕೆ ಹೊಂದಿದ್ದ ಅವರಿಗೆ ಕಡೆಗೂ ಹಫ್ತಾ ಮೂಲಕ ಆ ಅವಕಾಶ ಕೂಡಿ ಬಂದಿದೆ.

    ಈ ಸಿನಿಮಾ ನಿರ್ದೇಶಕರಾದ ಪ್ರಕಾಶ್ ಹೆಬ್ಬಾಳ, ನಿರ್ಮಾಪಕ ಮೈತ್ರಿ ಮಂಜುನಾಥ್ ಹಾಗೂ ಬಾಲರಾಜ್ ಸ್ನೇಹಿತರು. ವರ್ಷಗಳ ಹಿಂದೆ ಪ್ರಕಾಶ್ ಹೆಬ್ಬಾಳ ಹಫ್ತಾ ಚಿತ್ರದ ಬಗ್ಗೆ ಹೇಳಿ, ಕಥೆಯನ್ನೂ ವಿವರಿಸಿ ಬಾಲರಾಜ್ ಮುಂದೆ ನಿರ್ಮಾಣದಲ್ಲಿ ಭಾಗಿಯಾಗುವ ಬಗ್ಗೆ ಆಫರ್ ಇಟ್ಟಿದ್ದರಂತೆ. ಆ ಕ್ಷಣವೇ ಒಪ್ಪಿಗೆ ಸೂಚಿಸಿದ್ದ ಬಾಲರಾಜ್ ಅಂಥಾದ್ದೊಂದು ಹಠಾತ್ ನಿರ್ಧಾರ ತಳೆಯಲು ಕಾರಣವಾದದ್ದು ಹಫ್ತಾದ ಡಿಫರೆಂಟ್ ಕಥೆ. ಆ ಬಳಿಕ ಅಂದುಕೊಂಡಂತೆಯೇ ಸಾಗಿ ಬಂದು ನಿರೀಕ್ಷೆಗೂ ಮೀರಿ ಈ ಚಿತ್ರವನ್ನು ಅಚ್ಚುಕಟ್ಟಾಗಿ ರೂಪಿಸಿರುವ ತೃಪ್ತಿ ಬಾಲರಾಜ್ ಅವರಲ್ಲಿದೆ.

    ಇಂಥಾ ಮೊದಲ ಹೆಜ್ಜೆಗಳು ಒಳ್ಳೆ ಅಭಿಪ್ರಾಯ, ಪ್ರೋತ್ಸಾಹಗಳಿಂದ ಮುದಗೊಳ್ಳುತ್ತವೆ. ಅದರಲ್ಲಿಯೂ ಗೆಲುವಿನ ಸೂಚನೆ ಸಿಕ್ಕಿದರಂತೂ ಉತ್ಸಾಹ ಇನ್ನೂ ಇಮ್ಮಡಿಸುತ್ತದೆ. ಬಾಲರಾಜ್ ಈಗ ಅಂಥಾದ್ದೇ ಮೂಡಿನಲ್ಲಿದ್ದಾರೆ. ಹಫ್ತಾ ಚಿತ್ರಕ್ಕೆ ಎಲ್ಲ ದಿಕ್ಕುಗಳಿಂದಲೂ ಸಕಾರಾತ್ಮಕ ಸ್ವಾಗತವೇ ಸಿಗುತ್ತಿದೆ. ಇನ್ನೇನು ತೆರೆಗೆ ಬರಲಿರೋ ಈ ಚಿತ್ರದ ಗೆಲುವಿನ ಸೂಚನೆ ಈಗಾಗಲೇ ಸಿಕ್ಕಿಬಿಟ್ಟಿದೆ. ಹಫ್ತಾ ಮೂಲಕವೇ ನಿರ್ಮಾಪಕರಾಗಿ ಅದೃಷ್ಟ ಪರೀಕ್ಷೆಗಿಳಿದಿರೋ ಬಾಲರಾಜ್ ಕೂಡಾ ಇದರಿಂದ ಖುಷಿಗೊಂಡು ದೊಡ್ಡ ಗೆಲುವೊಂದನ್ನು ಎದುರು ನೋಡುತ್ತಿದ್ದಾರೆ.

    https://www.youtube.com/watch?v=zZefRDFISRU

  • ಘೀಳಿಡಲು ಸಜ್ಜಾದ ಸಲಗ ಗೆಲ್ಲುವ ಸೂಚನೆ!

    ಘೀಳಿಡಲು ಸಜ್ಜಾದ ಸಲಗ ಗೆಲ್ಲುವ ಸೂಚನೆ!

    ಬೆಂಗಳೂರು: ದುನಿಯಾ ವಿಜಯ್ ಅಭಿನಯಿಸಿ ನಿರ್ದೇಶನವನ್ನೂ ಮಾಡುತ್ತಿರೋ ಚಿತ್ರ ಸಲಗ. ಬಂಡಿಮಾಕಾಳಮ್ಮ ದೇವಸ್ಥಾನದಲ್ಲಿ ಮುಹೂರ್ತ ಸಮಾರಂಭ ನಡೆಯೋ ಮೂಲಕ ಈ ಸಿನಿಮಾಗೆ ವಿದ್ಯುಕ್ತ ಚಾಲನೆ ಸಿಕ್ಕಿದೆ. ಸಲಗ ಎಂಬುದೇ ಪಕ್ಕಾ ಮಾಸ್ ಟೈಟಲ್. ದುನಿಯಾ ವಿಜಯ್ ಮೊದಲ ಹೆಜ್ಜೆಯಲ್ಲಿ ನಿರ್ದೇಶಕರಾಗಿ ಈ ಚಿತ್ರವನ್ನ ಹೇಗೆ ಸಂಭಾಳಿಸಲಿದ್ದಾರೆ, ಇದರ ಕಥೆ ಎಂಥಾದ್ದೆಂಬುದೂ ಸೇರಿದಂತೆ ಪ್ರೇಕ್ಷಕರಲ್ಲಿರೋ ಕುತೂಹಲ ಒಂದೆರಡಲ್ಲ. ಸಲಗ ಪ್ರೇಕ್ಷಕರ ನಡುವೆ ಈ ಪಾಟಿ ಘೀಳಿಟ್ಟು ಸದ್ದು ಮಾಡುತ್ತಿರೋದಕ್ಕೆ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿರೋದು ಕೆ.ಪಿ ಶ್ರೀಕಾಂತ್ ಅನ್ನೋದೂ ಕೂಡಾ ಕಾರಣ!

    ಕೆಪಿ ಶ್ರೀಕಾಂತ್ ಹಿಟ್ ಸಿನಿಮಾ ನಿರ್ಮಾಪಕರೆಂದೇ ಖ್ಯಾತರಾಗಿರುವವರು. ಸಿನಿಮಾವನ್ನು ವ್ಯವಹಾರದಾಚೆಗೆ ಪ್ರೀತಿಸುವ ಅವರು ಕಥೆಗೆ ಎಲ್ಲ ಕೋನದಿಂದಲೂ ಕಸುವಿದೆ ಅಂತ ಗೊತ್ತಾಗದೆ ಯಾವ ಚಿತ್ರವನ್ನೂ ನಿರ್ಮಾಣ ಮಾಡಲು ಮುಂದಾಗುವವರಲ್ಲ. ಹೆಚ್ಚೂಕಮ್ಮಿ ಒಂದು ದಶಕಕ್ಕೂ ಹೆಚ್ಚು ಕಾಲದಿಂದ ಚಿತ್ರರಂಗದ ಭಾಗವಾಗಿರುವ ಶ್ರೀಕಾಂತ್ ಬತ್ತಳಿಕೆಯಲ್ಲಿ ಈ ಮಾತಿಗೆ ಪೂರಕವಾದ ವಿಚಾರಗಳೇ ಇವೆ. ಇಂಥಾ ಶ್ರೀಕಾಂತ್ ಮತ್ತು ದುನಿಯಾ ವಿಜಯ್ ಸಲಗದ ಮೂಲಕ ಭಾರೀ ಯಶಸ್ಸೊಂದನ್ನು ತಮ್ಮದಾಗಿಸಿಕೊಳ್ಳಲಿದ್ದಾರೆಂಬ ಸೂಚನೆಗಳೇ ಎಲ್ಲ ದಿಕ್ಕಿನಿಂದಲೂ ಕಾಣಿಸುತ್ತಿವೆ.

    ಸಲಗ ಆರಂಭದಲ್ಲಿಯೇ ಎಂಥಾ ಸೆನ್ಸೇಷನ್ ಕ್ರಿಯೇಟ್ ಮಾಡಿದೆ ಅನ್ನೋದಕ್ಕೆ ಚಿತ್ರರಂಗದ ಗಣ್ಯರ ಪ್ರತಿಕ್ರಿಯೆಗಳಿಗಿಂತಲೂ ಬೇರೆ ಉದಾಹರಣೆ ಬೇಕಿಲ್ಲ. ಯುವ ನಿರ್ದೇಶಕ ಸಂತೋಷ್ ಆನಂದ್‍ರಾಮ್ ಈ ಚಿತ್ರದ ಮೂಲಕ ನಿರ್ದೇಶಕರಾಗುತ್ತಿರೋ ವಿಜಯ್ ಸೇರಿದಂತೆ ಇಡೀ ಚಿತ್ರ ತಂಡಕ್ಕೆ ಶುಭ ಕೋರಿದ್ದಾರೆ. ತರುಣ್ ಸುಧೀರ್ ಕೂಡಾ ತಮ್ಮ ಬಹುಕಾಲದ ಗೆಳೆಯನ ಈ ಸಾಹಸಕ್ಕೆ ಶುಭ ಕೋರಿದ್ದಾರೆ. ಕಾರ್ತಿಕ್ ಗೌಡ, ರಿಯಲ್ ಸ್ಟಾರ್ ಉಪೇಂದ್ರ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕರು ಸಲಗಕ್ಕೆ ಶುಭ ಕೋರಿದ್ದಾರೆ.

    ಇದು ಸಲಗ ಚಿತ್ರದ ಬಗ್ಗೆ ತಾನೇ ತಾನಾಗಿ ಹುಟ್ಟಿಕೊಂಡಿರೋ ಪಾಸಿಟಿವ್ ವಾತಾವರಣ. ದುನಿಯಾ ವಿಜಯ್ ಅವರೇನು ಏಕಾಏಕಿ ನಿರ್ದೇಶಕರಾಗಿ ಅವತರಿಸಿಲ್ಲ. ನಿರ್ದೇಶನಕ್ಕೆ ಬೇಕಾಗುವಂಥಾ ಎಲ್ಲ ಪಟ್ಟುಗಳನ್ನೂ ಕರಗತ ಮಾಡಿಕೊಂಡು ಎಲ್ಲದರಲ್ಲಿಯೂ ಪಕ್ಕಾ ಅನ್ನಿಸಿದ ನಂತರವಷ್ಟೇ ಅಖಾಡಕ್ಕಿಳಿದಿದ್ದಾರೆ. ವಿಜಯ್ ಅವರ ಇಂಥಾ ಶ್ರದ್ಧೆಯ ಯಾನಕ್ಕೆ ನಿರ್ಮಾಪಕ ಕೆ ಪಿ ಶ್ರೀಕಾಂತ್ ಕೂಡಾ ಸಾಥ್ ನೀಡಿದ್ದಾರೆ. ಇವರಿಬ್ಬರ ಕಾಂಬಿನೇಷನ್ನಿನಲ್ಲಿ ಕನ್ನಡ ಚಿತ್ರರಂಗದಲ್ಲೊಂದು ಮೈಲಿಗಲ್ಲೆನ್ನಬಹುದಾದ ಕಮಾಲ್ ನಡೆಯೋ ಲಕ್ಷಣಗಳೇ ಎಲ್ಲೆಡೆ ದಟ್ಟೈಸಿದೆ.