Tag: kannada cinema

  • ಭಾಸ್ಕರ್.ವಿ.ರೆಡ್ಡಿ ಕ್ಯಾಮೆರಾ ಕಣ್ಣಲ್ಲಿ ಸೆರೆಯಾದ ಮ್ಯೂಸಿಕಲ್ ಲವ್ ಸ್ಟೋರಿ ಸಿನಿಮಾ ‘ಮೈಸೂರು’

    ಭಾಸ್ಕರ್.ವಿ.ರೆಡ್ಡಿ ಕ್ಯಾಮೆರಾ ಕಣ್ಣಲ್ಲಿ ಸೆರೆಯಾದ ಮ್ಯೂಸಿಕಲ್ ಲವ್ ಸ್ಟೋರಿ ಸಿನಿಮಾ ‘ಮೈಸೂರು’

    ವಾಸುದೇವ ರೆಡ್ಡಿ ಚೊಚ್ಚಲ ನಿರ್ದೇಶನದಲ್ಲಿ ತೆರೆ ಕಾಣಲು ಸಜ್ಜಾಗಿರುವ ಸಿನಿಮಾ ‘ಮೈಸೂರು’. ಮಾರ್ಚ್ 4ರಂದು ಪ್ರೇಕ್ಷಕರೆದುರು ಬರಲು ಸಜ್ಜಾಗಿರುವ ಈ ಸಿನಿಮಾ ಈಗಾಗಲೇ ಸಿನಿಪ್ರಿಯರ ಮನಸ್ಸಲ್ಲಿ ಸಾಕಷ್ಟು ಕ್ಯೂರಿಯಾಸಿಟಿ ಬಿಲ್ಡ್ ಮಾಡಿದೆ. ಸಂಗೀತಮಯ ಸಿನಿಮಾದಲ್ಲಿ ಹಾಡುಗಳು ಒಂದಕ್ಕಿಂತ ಒಂದು ಮನಸೆಳೆದಂತೆ ಹಾಡಿನ ಜೊತೆಗೆ ಕಲರ್ ಫುಲ್ ಲೊಕೇಶನ್ ಗಳು ಕಣ್ಮನ ಸೆಳೆಯುತ್ತಿವೆ. ಇಂತಹ ಚೆಂದದ ಲೊಕೇಶನ್‍ಗಳನ್ನು ಮೈಸೂರಿಗಾಗಿಯೇ ಸೆರೆ ಹಿಡಿದಿದ್ದಾರೆ ಕ್ಯಾಮೆರಾ ಮ್ಯಾನ್ ಭಾಸ್ಕರ್.ವಿ.ರೆಡ್ಡಿ.

    ‘ಮೈಸೂರು’ ಎಂಬ ಶೀರ್ಷಿಕೆ ಮೂಲಕವೇ ಕ್ಯೂರಿಯಾಸಿಟಿ ಬಿಲ್ಡ್ ಮಾಡಿರುವ ನಿರ್ದೇಶಕರು ಹೆಸರಿಗೆ ತಕ್ಕಂತೆ ಮೈಸೂರನ್ನು ಅಷ್ಟೇ ಸೊಗಸಾಗಿ ತೆರೆ ಮೇಲೆ ತಂದಿದ್ದಾರೆ. ಇದೆಲ್ಲ ಸಾಧ್ಯವಾಗಿದ್ದು, ಛಾಯಾಗ್ರಾಹಕ ಭಾಸ್ಕರ್.ವಿ.ರೆಡ್ಡಿ ಅವರಿಂದ. ಮ್ಯೂಸಿಕಲ್ ಲವ್ ಸ್ಟೋರಿಗೆ ತಕ್ಕಂತೆ ಸಿನಿಮಾವನ್ನು ಸೆರೆ ಹಿಡಿಯಲಾಗಿದ್ದು, ಪ್ರಮುಖವಾಗಿ ಮೈಸೂರಿನಲ್ಲಿ ಹೆಚ್ಚಿನ ಚಿತ್ರೀಕರಣ ನಡೆಸಿದ್ದು, ಶ್ರೀರಂಗಪಟ್ಟಣ. ಸಕಲೇಶಪುರ, ಹೊನ್ನಾವರ, ಕಟಕ್, ಒಡಿಶಾ ಸೇರಿದಂತೆ ಹಲವು ಭಾಗಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಸಿನಿಪ್ರಿಯರಿಗೆ ಖಂಡಿತ ಈ ಸಿನಿಮಾ ವಿಶ್ಯುವಲ್ ಟ್ರೀಟ್ ನೀಡುತ್ತೆ ಎನ್ನುವುದು ಭಾಸ್ಕರ್ ವಿ ರೆಡ್ಡಿ ಅವರ ಅನಿಸಿಕೆಯಾಗಿದೆ. ಇದನ್ನೂ ಓದಿ: ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ವೈಭವಕ್ಕೆ ಇಂದು ಚಾಲನೆ

    ಚಿತ್ರರಂಗದಲ್ಲಿ ಅಸೋಸಿಯೇಟ್ ಕ್ಯಾಮೆರಾಮ್ಯಾನ್ ಆಗಿ ದುಡಿದ ಅನುಭವ ಭಾಸ್ಕರ್.ವಿ.ರೆಡ್ಡಿ ಅವರಿಗಿದೆ. ಪವನ್ ಒಡೆಯರ್ ನಟನೆಯ ‘ಪ್ರೀತಿ ಗೀತಿ ಇತ್ಯಾದಿ’ ಸಿನಿಮಾ ಮೂಲಕ ಸ್ವತಂತ್ರ ಛಾಯಾಗ್ರಹಕರಾಗಿ ಗುರುತಿಸಿಕೊಂಡರು. ನಂತರ ತಮ್ಮ ಅದ್ಭುತ ಕ್ಯಾಮೆರಾ ಕೈಚಳಕದಲ್ಲಿ ಪ್ರೇಮ ಗೀಮಾ ಜಾನೆದೋ, ಅನ್ನದಾತ ಸೇರಿದಂತೆ ಒರಿಯಾ ಭಾಷೆಯ ಸಿನಿಮಾಗಳಿಗೂ ಛಾಯಾಗ್ರಾಹಕರಾಗಿ ದುಡಿದಿದ್ದಾರೆ. ಹೀಗೆ ಸಾಕಷ್ಟು ಅನುಭವ ಹೊಂದಿರುವ ಭಾಸ್ಕರ್.ವಿ.ರೆಡ್ಡಿ ಮೈಸೂರು ಸಿನಿಮಾವನ್ನು ಸೊಗಸಾಗಿ ಸೆರೆ ಹಿಡಿದಿದ್ದಾರೆ.

    ಮಾರ್ಚ್ 4ರಂದು ಬಿಡುಗಡೆಯಾಗುತ್ತಿರುವ ಈ ಚಿತ್ರದಲ್ಲಿ ಸಂಹಿತ್ ಹಾಗೂ ಪೂಜಾ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಚಿತ್ರದಲ್ಲಿ ಒಟ್ಟು 5 ಹಾಡುಗಳಿದ್ದು, ಒಂದಕ್ಕಿಂತ ಒಂದು ಸುಂದರವಾಗಿ ಮೂಡಿಬಂದಿವೆ. ರಮಣಿ ಸುಂದರೇಶನ್, ಅನಿಲ್ ಕೃಷ್ಣ ಮತ್ತು ವಿಜಯ್ ರಾಜ್ ಐದು ಹಾಡುಗಳನ್ನು ಮೈಸೂರಿಗಾಗಿಯೇ ರೂಪಿಸಿದ್ದಾರೆ. ರಾಜೇಶ್ ಕೃಷ್ಣನ್, ಉಷಾ ಪ್ರಕಾಶ್, ಇಶಾ ಸುಚಿ, ಪಂಚಮ್, ಚೇತನ್ ನಾಯಕ್, ಪವನ್ ಪಾರ್ಥ ಮುಂತಾದವರು ಹಾಡುಗಳಿಗೆ ದನಿಯಾಗಿದ್ದಾರೆ. ಇದನ್ನೂ ಓದಿ: ಅಪ್ಪು ಜೊತೆಗಿನ ಸುಮಧುರ ಕ್ಷಣಗಳನ್ನು ಬಿಚ್ಚಿಟ್ಟ ಜನಾರ್ದನ ರೆಡ್ಡಿ ಪುತ್ರ!

    ತಾರಾಗಣದಲ್ಲಿ ಸತ್ಯಜಿತ್, ಕುರಿ ಪ್ರತಾಪ್, ಭಾಸ್ಕರ್ ಸೂರ್ಯ, ರವಿಶಂಕರ್, ಜ್ಯೂನಿಯರ್ ನರಸಿಂಹರಾಜು, ಜಯಶ್ರೀ, ಒಡಿಶಾದ ಖ್ಯಾತ ನೃತ್ಯ ಕಲಾವಿದೆ ಪ್ರತಿಭಾ ಫಂಡಾ ಮುಂತಾದವರ ತಾರಾಗಣವಿದೆ. ಎಸ್.ಆರ್.ಕಂಬೈನ್ಸ್ ಬ್ಯಾನರ್ ನಡಿ ನಿರ್ದೇಶಕರಾದ ವಾಸುದೇವ್ ರೆಡ್ಡಿ ಬಂಡವಾಳ ಹೂಡಿ ಚಿತ್ರವನ್ನು ತೆರೆ ಮೇಲೆ ತಂದಿದ್ದಾರೆ.

  • ಉಪಗ್ರಹವಾದ ಪುನೀತ್ ರಾಜ್ ಕುಮಾರ್: 100 ಸಾಹಸಿ ಮಕ್ಕಳ ಕೆಲಸವಿದು

    ಉಪಗ್ರಹವಾದ ಪುನೀತ್ ರಾಜ್ ಕುಮಾರ್: 100 ಸಾಹಸಿ ಮಕ್ಕಳ ಕೆಲಸವಿದು

    ಬೆಂಗಳೂರಿನ 20 ಸರಕಾರಿ ಶಾಲೆಯ 100 ಮಕ್ಕಳು ಸೇರಿ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಉಪಗ್ರಹ ತಯಾರಿಸುತ್ತಿದ್ದಾರೆ. ಪುನೀತ್ ರಾಜ್ ಕುಮಾರ್ ಹೆಸರಿನ ಈ ಉಪಗ್ರಹ ಉಡಾವಣೆಗೆ ಸ್ವತಃ ರಾಜ್ಯ ಸರ್ಕಾರ ಮುಂದಾಗಿದ್ದು, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಿಂದ ಈ ಮಹತ್ವದ ನಿರ್ಧಾರವಾಗಿದೆ ಎಂದು ಸಚಿವ ಅಶ್ವಥ್ ನಾರಾಯಣ ಘೋಷಣೆ ಮಾಡಿದ್ದಾರೆ. ಉಪಗ್ರಹ ಉಡಾವಣೆ ಯೋಜನೆಗೆ ಸಚಿವರೇ ಚಾಲನೆ ನೀಡಿದ್ದಾರೆ. ಇದನ್ನೂ ಓದಿ : ಮೊದಲ ಬಾರಿಗೆ ಒಂದಾದ ಶಿವರಾಜ್ ಕುಮಾರ್ ಮತ್ತು ನಿರ್ದೇಶಕ ರಾಜಮೌಳಿ

    ಸ್ವಾತಂತ್ರ್ಯ ಬಂದು 75 ವರ್ಷ ಆಗುತ್ತಿರೋ ಹಿನ್ನೆಲೆಯಲ್ಲಿ ಇಂಡಿಯನ್ ಟೆಕ್ನಾಲಜಿ ಕಾಂಗ್ರೆಸ್ ಅಸೋಸಿಯೇಷನ್ 75 ಉಪಗ್ರಹಗಳನ್ನ ಉಡಾವಣೆ ಮಾಡುತ್ತಿದೆ. ಇದರಲ್ಲಿ ಒಂದು ಉಪಗ್ರಹವನ್ನು ರಾಜ್ಯ ಸರ್ಕಾರದ ಸಹಕಾರದಲ್ಲಿ ಕರ್ನಾಟಕ ಸರ್ಕಾರಿ  ಶಾಲಾ ವಿದ್ಯಾರ್ಥಿಗಳು ದೇಶದಲ್ಲಿ ಮೊದಲ ಬಾರಿಗೆ ನಿರ್ಮಾಣ ಮಾಡುತ್ತಿರುವುದು ವಿಶೇಷ. ಈ ವಿದ್ಯಾರ್ಥಿಗಳು ನಿರ್ಮಾಣ ಮಾಡುತ್ತಿರೋ ಉಪಗ್ರಹಕ್ಕೆ ಪುನೀತ್ ರಾಜ್ ಕುಮಾರ್ ಉಪಗ್ರಹ ಅಂತ ಹೆಸರು ಇಡಲಾಗಿದೆ. ಇದನ್ನೂ ಓದಿ : ಕ್ರೇಜಿಸ್ಟಾರ್ ವಿ.ರವಿಚಂದ್ರನ್ ತಾಯಿ ವಿಧಿವಶ

    ಉಪಗ್ರಹ ತಯಾರಿಕೆಗಾಗಿ ಬೆಂಗಳೂರಿನ ಸರಕಾರಿ ಶಾಲೆಯ 100 ವಿದ್ಯಾರ್ಥಿಗಳ ಆಯ್ಕೆ ಕೂಡ ವಿಶೇಷವಾಗಿದೆ. ಈ  ವಿದ್ಯಾರ್ಥಿಗಳನ್ನ ವಿವಿಧ ಸ್ಪರ್ಧೆಗಳು, ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ವಿದ್ಯಾರ್ಥಿಗಳು ಇಂಡಿಯನ್ ಟೆಕ್ನಾಲಜಿ ಕಾಂಗ್ರೆಸ್ ಅಸೋಸಿಯೇಷನ್ ಜೊತೆಗೂ ಉಪಗ್ರಹ ನಿರ್ಮಾಣ ಮಾಡಲಿದ್ದಾರೆ.  ಇದನ್ನೂ ಓದಿ : ನಿಜ ಜೀವನದಲ್ಲಿಯೂ ಹೀರೋಯಿನ್ ಆದ ಶ್ವೇತಾ ಶ್ರೀವಾತ್ಸವ್.

    ಉಪಗ್ರಹ ನಿರ್ಮಾಣಕ್ಕೆ 1.90 ಕೋಟಿ ಹಣ ಖರ್ಚು ಆಗಲಿದ್ದು, ಸುಮಾರು 1.5 ಕೆಜಿ ಉಪಗ್ರಹದ ತೂಕ ಇರಲಿದೆ. ಸೆಪ್ಟೆಂಬರ್-ಅಕ್ಟೋಬರ್ ವೇಳೆಗೆ ಉಪಗ್ರಹ ನಿರ್ಮಾಣ ಕಾರ್ಯ ಮುಕ್ತಾಯ ಅಗಲಿದೆ. ನಂತರ ಉಡಾವಣೆಗೆ ದಿನಾಂಕ ನಿಗಧಿಯಾಗಲಿದೆಯಂತೆ.

  • ತಾಯಿಯ ಸಾವಿನ ನೋವಲ್ಲೂ ವೃತ್ತಿ ಪರತೆ ಮೆರೆದ ರಘು ದೀಕ್ಷಿತ್

    ತಾಯಿಯ ಸಾವಿನ ನೋವಲ್ಲೂ ವೃತ್ತಿ ಪರತೆ ಮೆರೆದ ರಘು ದೀಕ್ಷಿತ್

    ನೆನ್ನೆ (ಫೆ.24)ಯಷ್ಟೇ ರಘು ದೀಕ್ಷಿತ್ ಅವರ ತಾಯಿ ಮೈಸೂರಿನಲ್ಲಿ ನಿಧನ ಹೊಂದಿದ್ದರು. ತಾಯಿಯನ್ನು ಅಪಾರವಾಗಿ ಪ್ರೀತಿಸುತ್ತಿದ್ದ ರಘು, ತಾಯಿಯ ನಿಧನದ ದಿನ ಅವರ ಜತೆ ಇರಲಿಲ್ಲ. ಮೈಸೂರಿನಲ್ಲಿ ತಾಯಿ ಕೊನೆಯುಸಿರೆಳೆದಿದ್ದರೆ, ಅತ್ತ ರಘು ಒಪ್ಪಿಕೊಂಡಿದ್ದ ಕಾರ್ಯಕ್ರಮಕ್ಕಾಗಿ ದುಬೈನಲ್ಲಿದ್ದರು. ವಿಷಯ ತಿಳಿಯುತ್ತಿದಂತೆ ಕಾರ್ಯಕ್ರಮವನ್ನು ಮೊಟಕುಗೊಳಿಸಿ ಮೈಸೂರಿಗೆ ಆಗಮಿಸಿದರು. ನೆನ್ನೆಯೇ ತಾಯಿಯ ಅಂತ್ಯ ಸಂಸ್ಕಾರ ಮಾಡಿರುವ ರಘು, ಇವತ್ತು ಮತ್ತೆ ದುಬೈಗೆ ಹಾರುತ್ತಿದ್ದಾರೆ.

    https://twitter.com/Raghu_Dixit/status/1497093549875032070

    ಒಪ್ಪಿಕೊಂಡ ಕಾರ್ಯಕ್ರಮವನ್ನು ರದ್ದುಗೊಳಿಸುವುದು ಕಷ್ಟವಾಗಿದ್ದರಿಂದ, ತಾಯಿ ಕಳೆದುಕೊಂಡ ನೋವಿನಲ್ಲೇ ಅವರು ಸಂಗೀತ ಕಾರ್ಯಕ್ರಮ ನೀಡಲಿದ್ದಾರೆ. ಕೆಲಸದ ಮೂಲಕವೇ ತಾಯಿಗೆ ನಮನ ಸಲ್ಲಿಸುವುದಾಗಿ ಅವರು ಸಂಕಲ್ಪ ಮಾಡಿದ್ದಾರೆ. ಇದನ್ನೂ ಓದಿ : ಪುನೀತ್ ನಿರ್ಮಾಣದ ಫ್ಯಾಮಿಲಿ ಪ್ಯಾಕ್ ಚಿತ್ರ ನಿರ್ದೇಶಕನಿಗೆ ಟಾಲಿವುಡ್ ನಿಂದ ಮೆಗಾ ಆಫರ್

    ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ರಘು, “ತಾಯಿಯ ಸಂತಾಪ ಸಂದೇಶಗಳನ್ನು ಕಳುಹಿಸಿದ ಮತ್ತು ಕರೆ ಮಾಡಿ ಧೈರ್ಯ ತುಂಬಿದ ಎಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಅಮ್ಮನ ಅಂತಿಮ ವಿಧಿ ವಿಧಾನಗಳನ್ನು ಕಾವೇರಿ ನದಿಯಲ್ಲಿ ಪೂರ್ಣಗೊಳಿಸಿದ್ದೇನೆ. ಈಗ ಅಮ್ಮನ ಆತ್ಮವು ದೈವಿಕ ಬೆಳಕನ್ನು ಸೇರಿದೆ. ದಿ ಶೋ ಮಸ್ಟ್ ಗೊ ಆನ್” ಎಂದು ಬರೆದುಕೊಂಡಿದ್ದಾರೆ.  ಇದನ್ನೂ ಓದಿ : ಫೆ.27ಕ್ಕೆ ಡಾ.ಅಂಬರೀಶ್ ಸ್ಮಾರಕ ಶಂಕು ಸ್ಥಾಪನೆ : ಸಿಎಂ ಬಸವರಾಜ ಬೊಮ್ಮಾಯಿ ಭಾಗಿ

    ಪ್ರತಿ ವರ್ಷವೂ ರಘು ಆರು ತಿಂಗಳು ಭಾರತದಲ್ಲಿದ್ದರೆ, ಇನ್ನಾರು ತಿಂಗಳು ಬೇರೆ ಬೇರೆ ದೇಶಗಳಲ್ಲಿ ಕಾರ್ಯಕ್ರಮ ಕೊಡಲು ಮೀಸಲಿಡುತ್ತಾರೆ. ಕೋವಿಡ್ ಕಾರಣದಿಂದಾಗಿ ಎರಡು ವರ್ಷಗಳಿಂದ ಅವರು ವಿದೇಶದಲ್ಲಿ ಯಾವುದೇ ಕಾರ್ಯಕ್ರಮ ನೀಡಿರಲಿಲ್ಲ. ಇದೀಗ ತಾನೆ ಕಾರ್ಯಕ್ರಮ ಶುರು ಮಾಡಿದ್ದರು. ಅಷ್ಟರಲ್ಲಿ ಅವರ ಬದುಕಿನಲ್ಲಿ ಇಂಥದ್ದೊಂದು ಘಟನೆ ನಡೆದು ಹೋಗಿದೆ.

  • ನಟ ಚೇತನ್ ಬಂಧನ ಹಿಂದಿನ ರೋಚಕ ಸ್ಟೋರಿ : ಜೈಲಿನಲ್ಲಿ ಚೇತನ್ 4ನೇ ದಿನ

    ನಟ ಚೇತನ್ ಬಂಧನ ಹಿಂದಿನ ರೋಚಕ ಸ್ಟೋರಿ : ಜೈಲಿನಲ್ಲಿ ಚೇತನ್ 4ನೇ ದಿನ

    ಟ ಚೇತನ್ ನ್ಯಾಯಾಧೀಶರ ಕುರಿತಾಗಿ ಮಾನಹಾನಿ ಮಾಡುವಂತಹ ಟ್ವಿಟ್ ಹಾಕಿದರು ಎನ್ನುವ ಕಾರಣಕ್ಕಾಗಿ ಶೇಷಾದ್ರಿಪುರಂ ಪೊಲೀಸ್ ಅಧಿಕಾರಿಗಳು ಬಂಧಿಸಿದ್ದರು. ನಂತರ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನವಿಧಿಸಿ ಕೋರ್ಟ್ ಆದೇಶಿಸಿತ್ತು. ನಾಲ್ಕು ದಿನಗಳಿಂದ ಚೇತನ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಜಾಮೀನಿಗಾಗಿ ಚೇತನ್ ಕುಟುಂಬ ನ್ಯಾಯಾಲಯಕ್ಕೆ ಅರ್ಜಿ ಕೂಡ ಸಲ್ಲಿಸಿದೆ. ಈ ಸಂದರ್ಭದಲ್ಲಿ ಬಂಧನ ದಿನದಿಂದ ಈವರೆಗೂ ಏನೆಲ್ಲ ಬೆಳವಣಿಗೆ ಆಯಿತು ಎನ್ನುವ ಕುರಿತು ಚೇತನ್ ಪತ್ನಿ ಮೇಘಾ ಸುದೀರ್ಘವಾಗಿ ಫೇಸ್ ಬುಕ್ ನಲ್ಲಿ ಈ ರೀತಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ : ದುನಿಯಾ ವಿಜಯ್ ನಿರ್ದೇಶನದ ಎರಡನೇ ಸಿನಿಮಾ ಅನೌನ್ಸ್

    ನಟ ಚೇತನ್ ಅವರ ಬಂಧನಕ್ಕೆ ಸಂಬಂಧಿಸಿದಂತೆ ನಾವು ಒಂದು ಪೊಲೀಸ್ ಠಾಣೆಯಿಂದ ಮತ್ತೊಂದು ಪೊಲೀಸ್ ಠಾಣೆಗೆ ಸತತ 8 ಗಂಟೆಗಳ ಕಾಲ ಅಲೆದಾಡಿದ ನಂತರವಷ್ಟೇ ನಮಗೆ ಚೇತನ್ ಅವರನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ತಿಳಿದುಬರುತ್ತದೆ ಮತ್ತು FIR ಪ್ರತಿ ನಮ್ಮ ಕೈಗೆ ಸಿಕ್ಕಿರುತ್ತದೆ‌. ನಮಗೆ ಯಾವುದೇ ಮಾಹಿತಿ ನೀಡದೆ ಚೇತನ್ ಅವರನ್ನು ಮನೆಯಿಂದ ಏಕಾಏಕಿ ಕರೆದುಕೊಂಡು ಹೋಗಿದ್ದಾರೆ. ನಾನು ಪೊಲೀಸ್ ಠಾಣೆಗೆ ಹೋಗುವವರೆಗೂ ಚೇತನ್ ಬಂಧನವಾಗಿದ್ದಾರೆ ಎಂಬ ಮಾಹಿತಿಯನ್ನೇ ಪೊಲೀಸರು ನನಗೆ ನೀಡಿಲ್ಲ. ಅಕಸ್ಮಾತ್ ನಾನು ಪೊಲೀಸ್ ಠಾಣೆಗೆ ಹೋಗದೇ ಇದಿದ್ದರೆ ಬಂಧನ ವಿಷಯ ನನಗೆ ತಿಳಿಯುತ್ತಿರಲಿಲ್ಲ ಮತ್ತು ತಿಳಿಸುವ ಉದ್ದೇಶವು ಪೊಲೀಸರಿಗೆ ಇಲ್ಲ ಅನ್ನುವುದು ಇದರಿಂದ ಸ್ಪಷ್ಟವಾಗಿ ಕಾಣುತ್ತದೆ. ಇದನ್ನೂ ಓದಿ : ರಾಮ್ ಗೋಪಾಲ್ ವರ್ಮಾ ಭೇಟಿ ಮಾಡಿ ಕುತೂಹಲ ಮೂಡಿಸಿದ ಉಪ್ಪಿ

    ಚೇತನ್ ಇರುವಿಕೆಯ ಬಹಿರಂಗಪಡಿಸಲು ನಾನು ಅರ್ಜಿ ಸಲ್ಲಿಸಿದ ನಂತರವಷ್ಟೇ ಅವರನ್ನು ಸೂಮೋಟೊ ದೂರಿನ ಮೇರೆಗೆ ಅವರನ್ನು ಪೊಲೀಸ್ ಕಸ್ಟಡಿಯಲ್ಲಿ ಇರಿಸಲಾಗಿದೆ ಎಂಬ ಮಾಹಿತಿ ತಿಳಿದುಬರುತ್ತದೆ. ಆದರೆ ಚೇತನ್ ಅವರು ಎಲ್ಲಿದ್ದಾರೆ ಎಂಬ ಮಾಹಿತಿ ಮಾತ್ರ ಬಹಿರಂಗಪಡಿಸಲಿಲ್ಲ. ಅಂತಿಮವಾಗಿ, ರಾತ್ರಿ 10 ಗಂಟೆಗೆ ನಮಗೆ ಎಫ್‌ಐಆರ್ ಪ್ರತಿ ಸಿಗುತ್ತದೆ. ನ್ಯಾಯಮೂರ್ತಿಯ ಬಗ್ಗೆ ಮಾಡಿದ ಟ್ವೀಟ್‌ಗಾಗಿ ಚೇತನ್ ವಿರುದ್ಧ ಸೆಕ್ಷನ್ 504 ಮತ್ತು 505(2) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ : ಉಕ್ರೇನ್ ನಲ್ಲಿ ಸಿಲುಕಿಕೊಂಡ ನಟಿ ಶ್ವೇತಾ ಚೆಂಗಪ್ಪ ಗೆಳತಿ

    ಅತ್ಯಾಚಾರದಿಂದ ಸುಸ್ತಾಗಿ ಮಲಗಿಬಿಟ್ಟೆ ಎಂದು ಹೇಳುವುದು ಭಾರತೀಯ ನಾರಿಯ ಲಕ್ಷಣವಲ್ಲ. ನಮ್ಮ ನಾಡಿನ ಮಹಿಳೆಯರು ಅವರ ಮೇಲೆ ಆಕ್ರಮಣವಾದಾಗ ನಡೆದುಕೊಳ್ಳುವ ರೀತಿಯೂ ಇದಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿ ಅತ್ಯಾಚಾರ ಪ್ರಕರಣದ ಆರೋಪಿಗೆ  2020 ಜೂನ್ 22ರಲ್ಲಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.  ನಂತರ ಸರ್ಕಾರದಿಂದ ಮನವಿ ಸ್ವೀಕರಿಸಿದ ಬಳಿಕ ಈ ಆದೇಶ ಪತ್ರದಲ್ಲಿದ್ದ ಈ ಹೇಳಿಕೆಯನ್ನು ತೆಗೆಯಲಾಗಿತ್ತು. ಈ ಒಂದು ಅಸೂಕ್ಷ್ಮ ಹೇಳಿಕೆಗೆ ಚೇತನ್ ಟ್ವೀಟ್ ಮೂಲಕ ಬೇಸರ ವ್ಯಕ್ತಪಡಿಸಿದ್ದರು. ಇದನ್ನೂ ಓದಿ : ಧ್ರುವ ಸರ್ಜಾ ಅಂಡರ್ ವರ್ಲ್ಡ್ ಡಾನ್

    ಫೆಬ್ರವರಿ 22ರಂದು ಚೇತನ್ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ನಾವು ಇಂದು ಜಾಮೀನಿನ ನಿರೀಕ್ಷಣೆಯಲಿದ್ದೆವು, ಆದರೆ ಜಾಮೀನಿಗೆ ಸಂಬಂಧಿಸಿದ ಆದೇಶವನ್ನು ಫೆಬ್ರವರಿ 25 ರವರಗೆ ಕಾಯ್ದಿರಿಸಿದೆ. ಹಾಗಾಗಿ ಚೇತನ್ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ನಿಮ್ಮ ಬೆಂಬಲಕ್ಕಾಗಿ ನಾನು ನಿಮ್ಮೆಲ್ಲರಿಗೂ ಧನ್ಯವಾದ ಹೇಳಲು ಬಯಸುತ್ತೇನೆ. ನ್ಯಾಯಾಲಯವು ವ್ಯಕ್ತಿಗಳ ಅಭಿವ್ಯಕ್ತಿ ಸ್ವಾತಂತ್ರ್ಯದ ಪ್ರಜಾಸತ್ತಾತ್ಮಕ ಹಕ್ಕನ್ನು ಎತ್ತಿಹಿಡಿಯುತ್ತದೆ ಮತ್ತು ವಿಳಂಬವಿಲ್ಲದೆ ನಮಗೆ ನ್ಯಾಯವನ್ನು ನೀಡುತ್ತದೆ ಎಂದು ಆಶಿಸೋಣ

    ಎಂದು ಮೇಘಾ ಸ್ವತಃ ಚೇತನ್ ಅವರ ಅಧಿಕೃತ ಫೇಸ್ ಬುಕ್ ಪೇಜ್ ನಲ್ಲಿ ಪತ್ರಬರೆದು ಅಭಿಮಾನಿಗಳಿಗೆ ಅಪ್ ಡೇಟ್ ನೀಡಿದ್ದಾರೆ.

  • ರಾಮ್ ಗೋಪಾಲ್ ವರ್ಮಾ ಭೇಟಿ ಮಾಡಿ ಕುತೂಹಲ ಮೂಡಿಸಿದ ಉಪ್ಪಿ

    ರಾಮ್ ಗೋಪಾಲ್ ವರ್ಮಾ ಭೇಟಿ ಮಾಡಿ ಕುತೂಹಲ ಮೂಡಿಸಿದ ಉಪ್ಪಿ

    ಭಾರತೀಯ ಸಿನಿಮಾ ರಂಗದ ಮೋಸ್ಟ್ ಡೆಡ್ಲಿ ಡೈರೆಕ್ಟರ್ ರಾಮ್ ಗೋಪಾಲ್ ವರ್ಮಾ ಅವರನ್ನು ಉಪೇಂದ್ರ ಭೇಟಿ ಮಾಡಿದ್ದಾರೆ. ಈ ಕುರಿತು ಸ್ವತಃ ರಾಮ್ ಗೋಪಾಲ್ ವರ್ಮಾ ಟ್ವಿಟ್ ಮಾಡಿ, ಉಪೇಂದ್ರ ಜತೆಗಿನ ಫೋಟೋವನ್ನು ಹಂಚಿಕೊಂಡಿದ್ದಾರೆ. ಇತ್ತ ರಾಮ್ ಗೋಪಾಲ್ ವರ್ಮಾ ಹಸಿ ಹಸಿ ಕಾಮನೆಗಳ ಚಿತ್ರ ಮಾಡುತ್ತಿದ್ದಾರೆ, ಅತ್ತ ಉಪೇಂದ್ರ ಹೊಸ ಸಿನಿಮಾದ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಈ ಸಂದರ್ಭದಲ್ಲಿನ ಭೇಟಿ ಭಾರೀ ಕುತೂಹಲವನ್ನಂತೂ ಮೂಡಿಸಿದೆ. ಇದನ್ನೂ ಓದಿ : ಉಕ್ರೇನ್ ನಲ್ಲಿ ಸಿಲುಕಿಕೊಂಡ ನಟಿ ಶ್ವೇತಾ ಚೆಂಗಪ್ಪ ಗೆಳತಿ

     

    ಉಪೇಂದ್ರ ನಿರ್ದೇಶನ ಮಾಡಲಿರುವ ಸಿನಿಮಾ ಬಜೆಟ್ ಗಾತ್ರ ದೊಡ್ಡದು. ಅಲ್ಲದೇ, ದಕ್ಷಿಣದ ತಾರೆಯರು ಕೂಡ ಈ ಸಿನಿಮಾದಲ್ಲಿ ಇರಲಿದ್ದಾರೆ ಎನ್ನಲಾಗುತ್ತಿದೆ. ಎರಡು ಸಾವಿರಕ್ಕೂ ಹೆಚ್ಚು ಕಲಾವಿದರು ಈ ಸಿನಿಮಾಗೆ ಬೇಕಾಗಿದ್ದರಿಂದ, ಆಡಿಷನ್ ಕೂಡ ನಡೆದಿದೆ. ಅಷ್ಟೊಂದು ಕಲಾವಿದರನ್ನು ಹುಡುಕುವುದು ಕಷ್ಟಸಾಧ್ಯವಾಗಿದ್ದರಿಂದ ಎರಡು ತಿಂಗಳುಗಳ ಕಾಲ ಕಲಾವಿದರ ಹುಡುಕಾಟಕ್ಕೆ ಅವರು ಮೀಸಲಿಟ್ಟಿದ್ದಾರಂತೆ. ಇದನ್ನೂ ಓದಿ : ಧ್ರುವ ಸರ್ಜಾ ಅಂಡರ್ ವರ್ಲ್ಡ್ ಡಾನ್

    ಈಗಾಗಲೇ ಸಿನಿಮಾದ ಟೈಟಲ್ ಕೂಡ ಲಾಂಚ್ ಮಾಡಿದ್ದಾರೆ ಉಪೇಂದ್ರ. ಈ ಟೈಟಲ್ ಅನ್ನು ಹೇಗೆ ಕರೆಯಬೇಕು ಎನ್ನುವ ಗೊಂದಲದಲ್ಲಿದ್ದಾರೆ ಅಭಿಮಾನಿಗಳು. ಅದೊಂದು ಧಾರ್ಮಿಕ ಚಿಹ್ನೆಯೂ ಆಗಿರುವುದರಿಂದ ಮತ್ತು ‘ಯು’ ಹಾಗೂ ‘ಐ” ಇಂಗ್ಲಿಷ್ ಅಕ್ಷರಗಳು ಇರುವುದರಿಂದ ನಿಮಗೆ ಇಷ್ಟ ಬಂದಂತೆ ಕರೆದುಕೊಳ್ಳಿ ಎನ್ನುವಂತೆ ಅಭಿಮಾನಿಗಳಿಗೆ ಬಿಟ್ಟಿದ್ದಾರೆ. ಇದನ್ನೂ ಓದಿ : ಖ್ಯಾತ ಗಾಯಕ ರಘು ದೀಕ್ಷಿತ್ ತಾಯಿ ನಿಧನ : ದುಬೈನಲ್ಲಿದ್ದಾರೆ ರಘು

    ‘ನೀನು’ ಮತ್ತು ‘ನಾನು’ ಎನ್ನುವ ಎರಡು ಗೂಢಾರ್ಥದ ಶಬ್ದಗಳೊಂದಿಗೆ ಈವರೆಗೂ ಸಿನಿಮಾ ಮಾಡಿರುವ ಉಪೇಂದ್ರ, ಹೊಸ ಸಿನಿಮಾದಲ್ಲೂ ಅದೇ ಹುಳು ಬಿಟ್ಟಿದ್ದಾರೆ. ಈ ಎರಡೇ ಶಬ್ದಗಳಲ್ಲಿ ಇಡೀ ಸಿನಿಮಾ ಅಡಗಿದೆ ಎನ್ನಲಾಗುತ್ತಿದೆ. ಆದರೆ, ಈವರೆಗೂ ಉಪೇಂದ್ರ ಹೊಸ ಸಿನಿಮಾದ ಕಥೆಯ ಬಗ್ಗೆ ಯಾವ ಸುಳಿವನ್ನೂ ಬಿಟ್ಟುಕೊಟ್ಟಿಲ್ಲ. ಇದನ್ನೂ ಓದಿ : ಅಶರೀರವಾಣಿ ಆಲ್ಬಂಗೆ ನೀನಾಸಂ ಸತೀಶ್ ಸಿಂಗರ್ : ಮಗಳೊಂದಿಗೆ ಹಾಡಿದ ಸ್ಟಾರ್ ನಟ

    ಈ ಎಲ್ಲದನ್ನು ಗಮನಿಸಿದಾಗ ರಾಮ್ ಗೋಪಾಲ್ ವರ್ಮಾ ಜತೆ ಉಪೇಂದ್ರ ಇನ್ನೇನು ಚರ್ಚೆ ಮಾಡಿರಬಹುದು ಎನ್ನುವ ಕ್ಯೂರಿಯಾಸಿಟಿಯಂತೂ ಅಭಿಮಾನಿಗಳಲ್ಲಿ ಮೂಡಿದೆ. ಯಾವತ್ತಾದರೂ ಒಂದು ದಿನ ರಾಮ್ ಗೋಪಾಲ್ ವರ್ಮಾ ಈ ಗುಟ್ಟನ್ನು ರಟ್ಟು ಮಾಡುವುದಂತೂ ಗ್ಯಾರಂಟಿ.

  • ಧ್ರುವ ಸರ್ಜಾ ಅಂಡರ್ ವರ್ಲ್ಡ್ ಡಾನ್

    ಧ್ರುವ ಸರ್ಜಾ ಅಂಡರ್ ವರ್ಲ್ಡ್ ಡಾನ್

    ಸ್ಯಾಂಡಲ್ ವುಡ್ ಅಂಗಳದಿಂದ ಧ್ರುವ ಸರ್ಜಾ ಅಭಿಮಾನಿಗಳಿಗೆ ಭರ್ಜರಿ ಸುದ್ದಿ ಸಿಕ್ಕಿದೆ. ಇದೇ ಮೊದಲ ಬಾರಿಗೆ ಧ್ರುವ ಹೊಸ ರೂಪದ ಕಥೆಯನ್ನು ಒಪ್ಪಿಕೊಂಡಿದ್ದಾರಂತೆ. ಅಲ್ಲದೇ, ಈ ಸಿನಿಮಾದಲ್ಲಿ ಅವರು ಅಂಡರ್ ವರ್ಲ್ಡ್ ಡಾನ್ ಆಗಿ ಕಾಣಿಸಿಕೊಳ್ಳಲಿದ್ದಾರಂತೆ. ಇದು ನೈಜ ಘಟನೆ ಮತ್ತು ವ್ಯಕ್ತಿಗಳನ್ನು ಆಧರಿಸಿದ ಸಿನಿಮಾವಾಗಿದೆ ಎನ್ನುವುದು ವಿಶೇಷ. ಇದನ್ನೂ ಓದಿ : ಖ್ಯಾತ ಗಾಯಕ ರಘು ದೀಕ್ಷಿತ್ ತಾಯಿ ನಿಧನ : ದುಬೈನಲ್ಲಿದ್ದಾರೆ ರಘು

    ಎಪ್ಪತ್ತರ ದಶಕದ ಕಥೆ

    ಮದ್ರಾಸ್ ಪ್ರಾಂತ್ಯದ 70ರ ದಶಕದಲ್ಲಿ ನಡೆದ ಘಟನೆಯನ್ನು ಈ ಸಿನಿಮಾಗೆ ಆಯ್ಕೆ ಮಾಡಿಕೊಂಡಿದ್ದಾರಂತೆ ನಿರ್ದೇಶಕರು. ಈ ದಶಕವನ್ನು ಕಟ್ಟಿಕೊಡುವುದಕ್ಕಾಗಿ ಈಗಾಗಲೇ ಸೆಟ್‍ಗಳು ಕೂಡ ನಿರ್ಮಾಣವಾಗುತ್ತಿವೆಯಂತೆ. ಸೀಗೆಹಳ್ಳಿ ಸಮೀಪದಲ್ಲಿ ಈ ಬೃಹತ್ ಸೆಟ್ ಗಳು ಈಗಾಗಲೇ ಸಿದ್ಧವಾಗುತ್ತಿವೆ. ಬಹುತೇಕ ಚಿತ್ರೀಕರಣ ಈ ಅದ್ಧೂರಿ ಸೆಟ್ ನಲ್ಲಿಯೇ ನಡೆಯಲಿದೆ ಎನ್ನುವ ಮಾಹಿತಿ ಇದೆ. ಇದನ್ನೂ ಓದಿ : ಶಿವರಾಜ್ ಕುಮಾರ್ ಭೇಟಿಯಾದ ಜಗ್ಗೇಶ್

    ಹಾಗಾದರೆ ನಿರ್ದೇಶಕರು ಯಾರು?

    70ರ ದಶಕದ ಕಥೆಯನ್ನು ಕೈಗೆತ್ತಿಕೊಂಡಿರುವ ನಿರ್ದೇಶಕರು ಬೇರೆ ಯಾರೂ ಅಲ್ಲ, ಜೋಗಿ ಪ್ರೇಮ್. ಲಾಂಗ್ ಮಚ್ಚುಗಳ ಚಿತ್ರಗಳಿಗೆ ಫೇಮಸ್ ಆಗಿರುವ ಪ್ರೇಮ್, ಈ ಬಾರಿಯೂ ಭೂಗತ ಜಗತ್ತಿನ ಕಥೆಯೊಂದಿಗೆ ಮತ್ತೆ ಪ್ರೇಕ್ಷಕರಿಗೆ ಎದುರಾಗಲಿದ್ದಾರೆ. ಕೆಲವೇ ದಿನಗಳಲ್ಲಿ ಈ ಹೊಸ ಸಿನಿಮಾದ ಮುಹೂರ್ತ ಕೂಡ ನಡೆಯಲಿದೆಯಂತೆ. ಇದನ್ನೂ ಓದಿ : ಅಶರೀರವಾಣಿ ಆಲ್ಬಂಗೆ ನೀನಾಸಂ ಸತೀಶ್ ಸಿಂಗರ್ : ಮಗಳೊಂದಿಗೆ ಹಾಡಿದ ಸ್ಟಾರ್ ನಟ

    ಗೊಂದಲ ಗೂಡಾಗಿರುವ ಪ್ರಾಜೆಕ್ಟ್

    ದರ್ಶನ್ ಮತ್ತು ಪ್ರೇಮ್ ಕಾಂಬಿನೇಷನ್ ನಲ್ಲಿ ಸಿನಿಮಾವೊಂದು ಮೂಡಿ ಬರಲಿದೆ ಎಂದು ಕೆಲ ವರ್ಷಗಳಿಂದ ಸುದ್ದಿ ಹರಿದಾಡುತ್ತಿತ್ತು. ಈ ಸಿನಿಮಾವನ್ನು ಉಮಾಪತಿ ನಿರ್ಮಾಣ ಮಾಡಲಿದ್ದಾರೆ ಎನ್ನುವ ಸುದ್ದಿಯೂ ಇತ್ತು. ಇದೀಗ ಆ ಕಥೆಯನ್ನೇ ಧ್ರುವಗಾಗಿ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೇ, ಉಮಾಪತಿ ಅವರ ಬದಲು ಬೇರೆ ನಿರ್ಮಾಣ ಸಂಸ್ಥೆಯು ಈ ಸಿನಿಮಾವನ್ನು ಮಾಡಲಿದೆ ಎಂದೂ ಹೇಳಲಾಗುತ್ತಿದೆ. ಈ ಕುರಿತು ಸ್ಪಷ್ಟ ಮಾಹಿತಿ ಸಿಗಬೇಕಿದೆ.

  • ಸಿನಿಮಾರಂಗದಲ್ಲಿ ಉತ್ತಮ ನಟನಾಗಿ ಯಶಸ್ವಿಯಾಗುವ ಪ್ಲಾನ್ ಇದೆ: ನಿಖಿಲ್ ಕುಮಾರಸ್ವಾಮಿ

    ಸಿನಿಮಾರಂಗದಲ್ಲಿ ಉತ್ತಮ ನಟನಾಗಿ ಯಶಸ್ವಿಯಾಗುವ ಪ್ಲಾನ್ ಇದೆ: ನಿಖಿಲ್ ಕುಮಾರಸ್ವಾಮಿ

    ಚಿಕ್ಕಬಳ್ಳಾಪುರ: ನಾನು ಜೀವನದಲ್ಲಿ ಏನನ್ನೂ ಪ್ಲಾನ್ ಮಾಡಿದವನಲ್ಲ. ಆದ್ರೆ ಸಿನಿಮಾರಂಗದಲ್ಲಿ ಉತ್ತಮ ನಟನಾಗಿ ಯಶಸ್ವಿಯಾಗುವ ಪ್ಲಾನ್ ಇದೆ ಎಂದು ಚಿಕ್ಕಬಳ್ಳಾಪುರ ನಗರದ ಬಾಲಾಜಿ ಚಿತ್ರಮಂದಿರದಲ್ಲಿ ನಟ ನಿಖಿಲ್ ಕುಮಾರಸ್ವಾಮಿ ಹೇಳಿದರು.

    ‘ರೈಡರ್’ ಸಿನಿಮಾ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಹಿನ್ನೆಲೆ ಬಾಲಾಜಿ ಚಿತ್ರಮಂದಿರಕ್ಕೆ ಭೇಟಿ ನೀಡಿದ ನಿಖಿಲ್ ಅವರು, ಕೆಲಕಾಲ ಅಭಿಮಾನಿಗಳ ಜೊತೆ ಸಿನಿಮಾ ವೀಕ್ಷಣೆ ಮಾಡಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಲ್ಲ ಕಡೆ ‘ರೈಡರ್’ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ ಎಂದು ಸಂತೋಷ ವ್ಯಕ್ತಪಡಿಸಿದರು. ಇದನ್ನೂ ಓದಿ: ನಾಡು, ನುಡಿ ವಿಚಾರಕ್ಕೆ ಬಂದ್ರೆ ನಾನು ಜೊತೆಯಾಗಿರುತ್ತೇನೆ: ನಿಖಿಲ್ ಕುಮಾರಸ್ವಾಮಿ

    ಕುಟುಂಬಸ್ಥರ ಜೊತೆ ಇಂದು ಸಂಜೆ ಒರಾಯನ್ ಮಾಲ್ ನಲ್ಲಿ ಸಿನಿಮಾ ವೀಕ್ಷಣೆ ಮಾಡಲಿದ್ದೇನೆ. ತಂದೆ-ತಾಯಿ, ತಾತ-ಅಜ್ಜಿ ಸಂಜೆ ಸಿನಿಮಾ ನೋಡಲು ಬರ್ತಿದ್ದಾರೆ ಎಂದರು. ಇದೇ ವೇಳೆ ಎಂಇಎಸ್ ಪುಂಡಾಟಿಕೆ ಕುರಿತು ಮಾತನಾಡಿದ್ದು, ಎಂಇಎಸ್ ವಿರುದ್ಧ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಮುಂದೆ ಈ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳುಬೇಕು ಎಂದು ಆಗ್ರಹಿಸಿದರು.

    ಜವಾಬ್ದಾರಿಯುತ ನಾಗರೀಕನಾಗಿ ಬಂದ್ ಕೇವಲ ಮಾಧ್ಯಮಗಳ ಗಮನ ಸೆಳೆಯುವ ಕೆಲಸ ಆಗಬಾರದು. ಉಪಯೋಗ ಅಗೋದಿದ್ರೆ ಬಂದ್ ಮುಂದುವರೆಸಲಿ. ಶುಕ್ರವಾರ ಬಹಳ ಸಿನಿಮಾಗಳು ರಿಲೀಸ್ ಆಗಲಿವೆ. ಬಂದ್ ಆದ್ರೆ ಸಿನಿಮಾಗಳಿಗೆ ಹೊಡೆತ ಬೀಳಲಿದೆ. ಜನಕ್ಕೆ ಒಳ್ಳೆಯದಾಗುತ್ತೆ ಅನ್ನೋದಾದ್ರೆ ಬಂದ್ ಮಾಡಿ ಎಂದು ಮನವಿ ಮಾಡಿದರು.

    ನಾನು ಸಿನಿಮಾರಂಗದಲ್ಲಿ ಉತ್ತಮ ಯಶಸ್ವಿ ನಟನಾಗಬೇಕು. ನಾನು ಪ್ಲಾನ್ ಮಾಡಿಕೊಂಡು ಜೀವನ ಮಾಡಿಲ್ಲ. ಸಿನಿಮಾರಂಗದಲ್ಲಿ ಉತ್ತಮ ನಟನಾಗಿ ಯಶಸ್ವಿಯಾಗಬೇಕು ಎಂಬ ಪ್ಲಾನ್ ಇದೆ. ಮುಂದಿನ ಚುನಾವಣೆ ಬಗ್ಗೆ ರಾಜಕೀಯ ವೇದಿಕೆಗಳಲ್ಲಿ ಚರ್ಚೆ ಮಾಡ್ತೇನೆ. ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಬಗ್ಗೆ ಪಕ್ಷ ತೀರ್ಮಾನ ಮಾಡುತ್ತೆ. 2023ರ ಚುನಾವಣೆಯಲ್ಲಿ ನಮ್ಮ ಗುರಿ ನಮ್ಮ ಉದ್ದೇಶ ಬೇರೆ. ನಾನು ಎಂಎಲ್‍ಎ ಆಗೋದು ಎಂಪಿ ಆಗೋದು ಮುಂದಿನ ದಿನಗಳಲ್ಲಿ ಪ್ರಸ್ತಾಪ ಮಾಡ್ತೇನೆ. ಅಂತಹ ಸಂದರ್ಭ ಬಂದ್ರೆ ಜನ ಆ ತೀರ್ಮಾನ ಮಾಡಲಿದ್ದಾರೆ ಎಂದು ತಿಳಿಸಿದರು.

    ಚಿತ್ರಮಂದಿರದಲ್ಲಿ ನಿಖಿಲ್ ಅಭಿಮಾನಿಗಳ ಜೊತೆ ಕಾಲಕಳೆಯಬೇಕಾದರೆ ಅಭಿಮಾನಿಯೊಬ್ಬರು ಸೆಲ್ಫಿ ತೆಗೆದುಕೊಂಡು ಮುತ್ತು ನೀಡಿ, ಕೈ ಕುಲುಕಿ ವಿಶ್ ಮಾಡಿದರು.

  • ನಗಿಸುತ್ತಲೇ ನೈಜತೆಯನ್ನು ಹೇಳಿ ಕಣ್ಣಂಚಲಿ ನೀರು ತರಿಸುವ ‘ಪುಕ್ಸಟ್ಟೆ ಲೈಫು’

    ನಗಿಸುತ್ತಲೇ ನೈಜತೆಯನ್ನು ಹೇಳಿ ಕಣ್ಣಂಚಲಿ ನೀರು ತರಿಸುವ ‘ಪುಕ್ಸಟ್ಟೆ ಲೈಫು’

    ಚಿತ್ರ: ಪುಕ್ಸಟ್ಟೆ ಲೈಫು
    ನಿರ್ದೇಶನ : ಅರವಿಂದ್ ಕುಪ್ಳೀಕರ್
    ನಿರ್ಮಾಣ : ಸರ್ವಸ್ವ ಪ್ರೊಡಕ್ಷನ್ಸ್
    ಸಂಗೀತ : ವಾಸು ದೀಕ್ಷಿತ್
    ಹಿನ್ನೆಲೆ ಸಂಗೀತ : ಪೂರ್ಣಚಂದ್ರ ತೇಜಸ್ವಿ
    ಛಾಯಾಗ್ರಹಣ : ಅಧ್ವೈತ್ ಗುರುಮೂರ್ತಿ
    ತಾರಾಗಣ: ಸಂಚಾರಿ ವಿಜಯ್, ಅಚ್ಯುತ್ ಕುಮಾರ್, ರಂಗಾಯಣ ರಘು, ಮಾತಂಗಿ ಪ್ರಸನಾ, ಇತರರು.

    ಪ್ರೇಕ್ಷಕ ವಲಯದಲ್ಲಿ ಹಾಗೂ ಚಿತ್ರರಂಗದಲ್ಲಿ ಬಹು ನಿರೀಕ್ಷೆ ಹುಟ್ಟುಹಾಕಿದ್ದ ‘ಪುಕ್ಸಟ್ಟೆ ಲೈಫು’ ಇಂದು ಚಿತ್ರಮಂದಿರಕ್ಕೆ ಕಾಲಿಟ್ಟಿದೆ. ನಿರೀಕ್ಷೆಯಂತೆ‌ ಚಿತ್ರ ಮೊದಲ ದಿನ ಎಲ್ಲಾ ಕಡೆಗಳಲ್ಲೂ ಉತ್ತಮ ಓಪನಿಂಗ್ ಪಡೆದುಕೊಂಡಿದೆ.

    ನಾಯಕ ಶಹಜಾನ್ ಬೀಗ ರಿಪೇರಿ‌ ಮಾಡುವ ಪ್ರಾಮಾಣಿಕ ಮುಸ್ಲಿಂ ಯುವಕ. ಅಪ್ಪನಿಲ್ಲದ‌ ಮನೆಗೆ ತಾನೇ ಆಧಾರ ಸ್ತಂಭ. ಎಲ್ಲರನ್ನೂ ಪ್ರೀತಿಯಿಂದ ಆದರಿಸುವ ವ್ಯಕ್ತಿತ್ವ ಆತನದು. ಇರೋದ್ರಲ್ಲಿ ಸುಖ ಕಾಣುತ್ತಿದ್ದ ಆತನಿಗೆ ಪಕ್ಕದ‌ ಮನೆಯ ಹುಡುಗಿ ಶಾರದಾಳ ಮೇಲೆ ಒಲವು. ಮನೆಯ ಜವಾಬ್ದಾರಿ, ಶಾರದಾಳ ಜೊತೆಗಿನ ಪ್ರೀತಿಯ ಸುತ್ತಾಟ.. ಹೀಗೆ ಆತನ ದಿನಗಳು ಖುಷಿಯಿಂದ ಕೂಡಿತ್ತು. ಹೀಗಿರುವಾಗ ಅಚಾನಕ್ ಆಗಿ ಶಹಜಾನ್ ಸ್ವತಃ ತಾವೇ ನುಂಗುಬಾಕರಾಗಿದ್ದ ಪೊಲೀಸರ ಕೈಗೆ‌ ಸಿಕ್ಕಿಹಾಕಿಕೊಳ್ಳುತ್ತಾನೆ. ಮುಂದೆ ಅವರು ಮಾಡುವ ಎಲ್ಲಾ ಅಪರಾಧ, ದೋಚುವ ಕೆಲಸಕ್ಕೆ ಶಹಜಾನ್ ಅಮಾಯಕ ದಾಳವಾಗಿ ಬಳಕೆಯಾಗುತ್ತಾನೆ. ಇದೇನಾಯ್ತು ಎನ್ನುವಾಗಲೇ ಶಹಜಾನ್ ಇದಕ್ಕಿದ್ದಂತೆ ಕಣ್ಮರೆಯಾಗುತ್ತಾನೆ. ಇದರ‌ ಜೊತೆಗೆ ಸೀಟಿನ ಅಂಚಿಗೆ ಕೂರಿಸೋ ಟ್ವಿಸ್ಟ್‌ಗಳು, ಒಂದಿಷ್ಟು ನಗು ತರಿಸೋ ಕಾಮಿಡಿ, ಗಂಭೀರಗೊಳಿಸುವ ಕೆಲ ವಿಚಾರಗಳ ಜೊತೆ‌ ಕಥೆ ಸಾಗುತ್ತೆ.

    ಪ್ರಾಮಾಣಿಕ ಹುಡುಗ ಶಹಜಾನ್ ಪೊಲೀಸರ ಕೈಗೆ ಸಿಕ್ಕಿದ್ದು ಹೇಗೆ, ಇಷ್ಟೆಲ್ಲ ಘಟನೆ ನಂತರ ಆತ ಹೇಗೆ ಪಾರಾಗುತ್ತಾನೆ, ಇದಕ್ಕಿದ್ದಂತೆ ಯಾಕೆ ಕಣ್ಮರೆಯಾಗುತ್ತಾನೆ, ಮುಂದೇನಾಗುತ್ತೆ ಎನ್ನುವುದೇ ಸಸ್ಪೆನ್ಸ್.

    ಹೊಸ ಅಲೆಯ ಸಿನಿಮಾಗಳು ಬರುತ್ತಿವೆ ಎಂದು ಮಾತನಾಡುತ್ತಿರುತ್ತೇವೆ. ಆದ್ರೆ ಇಲ್ಲಿ ‘ಪುಕ್ಸಟ್ಟೆ ಲೈಫು’ ಹೊಸ ಅಲೆಯನ್ನು ಸೃಷ್ಟಿಸಿದೆ ಎಂದರೆ ಅತಿಶಯೋಕ್ತಿಯಾಗಲಾರದು. ಅಂತಹ ಅದ್ಭುತ ಕಥಾ ಹೂರಣವನ್ನು ಸಿನಿಮಾ ಹೊಂದಿದೆ. ಬಹುಶಃ ಪ್ರೇಕ್ಷಕರಿಗೂ ಈ ಸಿನಿಮಾ ಬೇರೆಯದ್ದೇ ರೀತಿಯ ಫೀಲ್ ನೀಡಿರೋದ್ರಲ್ಲಿ ಡೌಟೇ ಇಲ್ಲ. ಇದನ್ನೂ ಓದಿ: ರಾಯನ್‍ಗೆ 11 ತಿಂಗಳು- ಕ್ಯೂಟ್ ವೀಡಿಯೋ ಹಂಚಿಕೊಂಡ ಮೇಘನಾ

    ಸಿನಿಮಾ ನೋಡಿದ ಮೇಲೆ ಕನ್ನಡಕ್ಕೊಬ್ಬ ಅದ್ಭುತ ಹಾಗೂ ಪ್ರತಿಭಾವಂತ ‌ನಿರ್ದೇಶಕ ಸಿಕ್ಕಿದ್ರು ಎನ್ನುವ ಭಾವ‌ ಹೊಮ್ಮದೇ ಇರದು. ಕಥೆಯ ಮೇಲಿನ ನಿರ್ದೇಶಕರ ಹಿಡಿತ, ಪ್ರತಿ ಕಲಾವಿದರಿಗೂ ನೀಡಿದ ಪಾತ್ರ, ಎಲ್ಲೆ ಮೀರದ ಅಭಿನಯ‌ ಮತ್ತು ಡೈಲಾಗ್ ಪ್ರತಿಯೊಂದು ಕುಸುರಿ ಕೆಲಸವೂ ನಿರ್ದೇಶಕ ಅರವಿಂದ್ ಕುಪ್ಳೀಕರ್ ಪ್ರತಿಭೆಗೆ‌ ಹಿಡಿದ ಕನ್ನಡಿ.

    ಚಿತ್ರದ ಕಥೆ ಹೇಗೆ ಗಟ್ಟಿತನ ಹೊಂದಿದೆಯೋ ಅದಕ್ಕೆ ಆಯ್ಕೆ ಮಾಡಿಕೊಂಡ ಕಲಾವಿದರು ಅಷ್ಟೇ ಪ್ರತಿಭಾವಂತರೂ. ಮೇಲಾಗಿ ಎಲ್ಲರೂ ರಂಗಭೂಮಿ ಹಿನ್ನೆಲೆಯುಳ್ಳವರೇ. ಹಾಗಾಗಿ ಸಿನಿಮಾವನ್ನು ನೈಜವಾಗಿ ತೆರೆ ಮೇಲೆ ಕಟ್ಟಿಕೊಡಲು ಇದು ಒಂದು ಮುಖ್ಯ ಕಾರಣ. ಪ್ರತಿಯೊಬ್ಬರದ್ದು ತಮ್ಮ ಪ್ರತಿಭೆಯನ್ನು ತಾವೇ ಒರೆಗೆ ಹಚ್ಚಿ ನೋಡುವಂತ ಅಭಿನಯ. ಯಾರ ನಟನೆಯೂ ಸುಮಾರಾಗಿತ್ತು ಎನ್ನುವ ಮಾತೇ ಬಾರದ ಹಾಗೆ ಪ್ರತಿ ಪಾತ್ರವೂ ಜೀವ ತುಂಬಿ ನಟಿಸಿವೆ.

    ಸಂಚಾರಿ ವಿಜಯ್ ಮುಸ್ಲಿಂ ಯುವಕನ ಪಾತ್ರಕ್ಕೆ ತುಂಬಿದ ಜೀವ ಅವರನ್ನು ಬಿಟ್ಟು ಇನ್ನಾರು ಮಾಡಲಾರರೇನೋ ಎನ್ನುವಂತಿದೆ. ನಟ ದೈತ್ಯ ಪ್ರತಿಭೆಗಳಾದ ಅಚ್ಯುತ್ ಕುಮಾರ್, ರಂಗಾಯಣ ರಘು ಅಭಿನಯಕ್ಕೆ ಸರಿಸಾಟಿ ಇಲ್ಲದಂತೆ ನಟಿಸಿದ್ದಾರೆ. ಇಬ್ಬರ ನಟನಾ ತಾಕತ್ತು ತೆರೆ ಮೇಲೆ ಕಣ್ಣಿಗೆ ಹಬ್ಬ ನೀಡುತ್ತದೆ. ನಾಯಕಿ ಮಾತಂಗಿ ಪ್ರಸನ್ ತಮ್ಮ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದು, ನೈಜ ಅಭಿನಯದ ಮೂಲಕ ಎಲ್ಲರನ್ನು ಸೆಳೆಯುತ್ತಾರೆ.

    ವಾಸು ದೀಕ್ಷಿತ್ ಸಂಗೀತ ಚಿತ್ರಕ್ಕೆ ಪೂರಕವಾಗಿದ್ದು ಮನಸ್ಸಿಗೂ ಹತ್ತಿರವೆನಿಸುತ್ತೆ. ಪೂರ್ಣಚಂದ್ರ ತೇಜಸ್ವಿ ಹಿನ್ನೆಲೆ ಸಂಗೀತ ನಿರ್ದೇಶಕರ ವಿಷನ್ ಹಾಗೂ ಕ್ಯಾಮೆರಾ ಕೆಲಸ ಇವೆರಡಕ್ಕೂ ಪರಿಪೂರ್ಣತೆ ನೀಡಿದೆ.

    ನಗುವಿನ ಹೂರಣ, ಗಂಭೀರತೆಯ ಲೇಪನ, ಒಂದೊಳ್ಳೆ ಸಂದೇಶ ಜೊತೆಗೆ ಒಂದೊಳ್ಳೆ ಅನುಭವ ನೀಡುತ್ತಾ, ಸಂಚಾರಿ ವಿಜಯ್ ಇರಬಾರದಿತ್ತಾ ಎನಿಸಿ ಕಣ್ಣಂಚಲಿ ನೀರು‌ ತರಿಸುತ್ತಾ ಕಾಡುವ ಸಿನಿಮಾ ‘ಪುಕ್ಸಟ್ಟೆ ಲೈಫು’.

    ಪಬ್ಲಿಕ್ ರೇಟಿಂಗ್: 4/5

  • ಜಗ್ಗೇಶ್ ಜೊತೆ ಹೊಂಬಾಳೆ ಫಿಲ್ಮ್ಸ್ ಹೊಸ ಸಿನಿಮಾ ‘ರಾಘವೇಂದ್ರ ಸ್ಟೋರ್’

    ಜಗ್ಗೇಶ್ ಜೊತೆ ಹೊಂಬಾಳೆ ಫಿಲ್ಮ್ಸ್ ಹೊಸ ಸಿನಿಮಾ ‘ರಾಘವೇಂದ್ರ ಸ್ಟೋರ್’

    ಸ್ಯಾಂಡಲ್‌ವುಡ್‌ನಲ್ಲಿ ಬಿಗ್ ಬಜೆಟ್ ಸಿನಿಮಾಗಳನ್ನ ನಿರ್ಮಾಣ ಮಾಡುವುದರಲ್ಲಿ ಖ್ಯಾತಿ ಪಡೆದಿರುವ ಹೊಂಬಾಳೆ ಫಿಲ್ಮ್ಸ್ ಈಗ ಮತ್ತೊಂದು ಚಿತ್ರಕ್ಕೆ ಚಾಲನೆ ಕೊಡಲು ಸಜ್ಜಾಗಿದೆ. ಇದು ಈ ಬ್ಯಾನರ್ ನ 12ನೇ ಸಿನಿಮಾವಾಗಿದೆ.

    ಹೊಂಬಾಳೆ ಫಿಲ್ಮ್ಸ್ ನ ವಿಜಯ್ ಕಿರಗಂದೂರು ಅವರು ತಮ್ಮ ಬ್ಯಾನರ್ ನ 12ನೇ ಚಿತ್ರವನ್ನು ಇಂದು ಘೋಷಣೆ ಮಾಡಿದ್ದು, ಚಿತ್ರಕ್ಕೆ ರಾಘವೇಂದ್ರ ಸ್ಟೋರ್ ಎಂದು ಹೆಸರಿಟ್ಟಿದ್ದಾರೆ. ಈ ಚಿತ್ರಕ್ಕೆ ಸಂತೋಷ್ ಆನಂದ್ ರಾಮ್ ನಿರ್ದೇಶನವಿದ್ದು, ನವರಸ ನಾಯಕ ಜಗ್ಗೇಶ್ ಹೀರೋ ಆಗಿ ಕಾಣಿಸಿಕೊಳ್ಳಲಿದ್ದಾರೆ.

    ಈ ಸಿನಿಮಾ ಫಸ್ಟ್ ಲುಕ್ ಹೊಂಬಾಳೆ ಫಿಲ್ಮ್ಸ್ ಕೂ ಹಾಗೂ ಪ್ರಮುಖ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ. ಫಸ್ಟ್ ಲುಕ್ ಪೋಸ್ಟರ್ ಗಮನಿಸಿದರೆ ಇದೊಂದು ಹೋಟೆಲ್ ಕುರಿತಾದ ಕಥೆ ಎಂದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಇದನ್ನೂ ಓದಿ: ಪಿವಿ ಸಿಂಧು ಜೊತೆ ಬ್ಯಾಡ್ಮಿಂಟನ್ ಆಡಿದ ದೀಪಿಕಾ ಪಡುಕೋಣೆ

    ಸಾಲು ಸಾಲು ಚಿತ್ರ ಘೋಷಿಸಿರುವ ಹೊಂಬಾಳೆ ಫಿಲ್ಮ್ಸ್ ಅಡಿಯಲ್ಲಿ ನಿರ್ಮಾಪಕ ವಿಜಯ್ ಕಿರಗಂದೂರು ನಿರ್ಮಾಣ ಮಾಡಿದ ಮೊದಲ ಚಿತ್ರ ‘ನಿನ್ನಿಂದಲೇ’. 2014ರಲ್ಲಿ ಪುನೀತ್ ರಾಜ್‌ಕುಮಾರ್ ನಟನೆಯ ‘ನಿನ್ನಿಂದಲೇ’ ಚಿತ್ರ ತೆರೆಗೆ ಬಂದಿತ್ತು. ಬಳಿಕ ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಮಾಸ್ಟರ್‌ ಪೀಸ್’ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿತ್ತು.

    2017ರಲ್ಲಿ ಹೊಂಬಾಳೆ ಫಿಲ್ಮ್ಸ್ ಅಡಿಯಲ್ಲಿ ವಿಜಯ್ ಕಿರಗಂದೂರು ನಿರ್ಮಾಣ ಮಾಡಿದ ‘ರಾಜಕುಮಾರ’ ಚಿತ್ರ ಸೂಪರ್ ಡ್ಯೂಪರ್ ಹಿಟ್ ಆಯ್ತು. ಕನ್ನಡ ಚಿತ್ರರಂಗದಲ್ಲೇ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಚಿತ್ರಗಳ ಪೈಕಿ ‘ರಾಜಕುಮಾರ’ ಚಿತ್ರವೂ ಒಂದು ಎನಿಸಿಕೊಂಡಿತು.

  • ‘ಪುಕ್ಸಟ್ಟೆ ಲೈಫು’ ಚಿತ್ರದ ಟ್ರೇಲರ್ ಔಟ್ – ಸಂಚಾರಿ ವಿಜಯ್ ಹೊಸ ಅವತಾರ ಕಂಡು ಬೆರಗಾದ ಚಿತ್ರರಸಿಕರು

    ‘ಪುಕ್ಸಟ್ಟೆ ಲೈಫು’ ಚಿತ್ರದ ಟ್ರೇಲರ್ ಔಟ್ – ಸಂಚಾರಿ ವಿಜಯ್ ಹೊಸ ಅವತಾರ ಕಂಡು ಬೆರಗಾದ ಚಿತ್ರರಸಿಕರು

    ರಾಷ್ಟ್ರಪ್ರಶಸ್ತಿ ಪುರಸ್ಕೃತ ಸಂಚಾರಿ ವಿಜಯ್ ನಟನೆಯ ಬಹು ನಿರೀಕ್ಷಿತ ಚಿತ್ರ ‘ಪುಕ್ಸಟ್ಟೆ ಲೈಫು ಪುರುಸೊತ್ತೇ ಇಲ್ಲ’. ಅರವಿಂದ್ ಕುಪ್ಳಿಕರ್ ನಿರ್ದೇಶನವಿರುವ ಚಿತ್ರದ ಇಂಟ್ರಸ್ಟಿಂಗ್ ಟ್ರೇಲರ್ ಇಂದು ಬಿಡುಗಡೆಯಾಗಿ ಗಮನ ಸೆಳೆಯುತ್ತಿದೆ. ಎಂದಿನಂತೆ ಈ ಚಿತ್ರದಲ್ಲೂ ಹೊಸ ಪಾತ್ರಕ್ಕೆ ಸಂಚಾರಿ ವಿಜಯ್ ಜೀವ ತುಂಬಿದ್ದು, ಬೀಗ ರಿಪೇರಿ ಮಾಡುವ ಮುಸ್ಲಿಂ ಯುವಕನ ಪಾತ್ರದಲ್ಲಿ ಅಭಿನಯಿಸಿದ್ದಾರೆ.

    ಟ್ರೇಲರ್ ಪ್ರೇಕ್ಷಕರಲ್ಲಿ ಕುತೂಹಲ ಹುಟ್ಟುಹಾಕಿದೆ. ಸಂಚಾರಿ ವಿಜಯ್ ಪೊಲೀಸ್ ಜೊತೆ ಸೇರಿ ಕಳ್ಳತನಕ್ಕೆ ಇಳಿಯುವ ದೃಶ್ಯ ಟ್ರೇಲರ್ ನಲ್ಲಿದೆ. ಪೊಲೀಸ್ ಇನ್‍ಸ್ಪೆಕ್ಟರ್ ಪಾತ್ರದಲ್ಲಿ ಅಭಿನಯಿಸಿರುವ ಅಚ್ಯುತ್ ಕುಮಾರ್ ಕೂಡ ಕಳ್ಳತನದ ದಾರಿ ಹಿಡಿಯುವ ದೃಶ್ಯಗಳು ಕ್ಯೂರಿಯಾಸಿಟಿಯನ್ನು ಹೆಚ್ಚಿಸಿದ್ದು, ಚಿತ್ರದಲ್ಲೇನೋ ಹೊಸತನವಿದೆ ಎನ್ನುವುದು ಖಾತ್ರಿಯಾಗಿದೆ. ಸಿಸಿಬಿ ಅಧಿಕಾರಿಯಾಗಿ ರಂಗಾಯಣ ರಘು ಪಾತ್ರವನ್ನು ರಿವೀಲ್ ಮಾಡಲಾಗಿದೆ. ಒಟ್ನಲ್ಲಿ, ಒಂದಿಷ್ಟು ಸಂಗತಿಗಳು ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿಸಿದ್ದು ‘ಪುಕ್ಸಟ್ಟೆ ಲೈಫು’ ಪ್ರಪಂಚದಲ್ಲಿ ನಿರ್ದೇಶಕರು ಏನೇನು ಸೃಷ್ಟಿಸಿದ್ದಾರೆ ಅನ್ನೋದಕ್ಕೆ ಸಿನಿಮಾ ಬಿಡುಗಡೆಯವರೆಗೆ ಕಾಯಲೇಬೇಕು.

    ಮಧ್ಯಮ ವರ್ಗದ ವ್ಯಕ್ತಿ ಹಣದ ಹಿಂದೆ ಬಿದ್ದರೆ ಯಾವೆಲ್ಲ ರೀತಿಯ ಸಮಸ್ಯೆಗಳು ಶುರುವಾಗಬಹುದು ಎನ್ನುವುದು ಚಿತ್ರದ ಒನ್ ಲೈನ್ ಕಹಾನಿ. ವಿಜಯ್ ಕೆಳ ಮಧ್ಯಮ ವರ್ಗದ ಮುಸ್ಲಿಂ ಹುಡುಗನಾಗಿ ಬೀಗ ರಿಪೇರಿ ಮಾಡುವ ಪಾತ್ರದಲ್ಲಿ ಬಣ್ಣಹಚ್ಚಿದ್ದಾರೆ. ವಿಜಯ್ ಹೊಸ ಅವತಾರವನ್ನು ತೆರೆ ಮೇಲೆ ಕಣ್ತುಂಬಿಕೊಳ್ಳಲು ಪ್ರೇಕ್ಷಕರು ಕಾಯುತ್ತಿದ್ದಾರೆ. ರಂಗಭೂಮಿ ಕಲಾವಿದರಾದ ಅರವಿಂದ ಕುಪ್ಳಿಕರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಮೊದಲ ಸಿನಿಮಾ ಇದು. ಡಾರ್ಕ್ ಹ್ಯೂಮರ್ ಕಥಾಹಂದರ ಒಳಗೊಂಡಿರುವ ಈ ಚಿತ್ರ ಸೆಪ್ಟೆಂಬರ್ ನಲ್ಲಿ ತೆರೆಗೆ ಬರುವ ಸಾಧ್ಯತೆ ಇದೆ.

    ಮಾತಂಗಿ ಪ್ರಸನಾ ಚಿತ್ರದಲ್ಲಿ ನಾಯಕಿ ಪಾತ್ರದಲ್ಲಿ ಬಣ್ಣ ಹಚ್ಚಿದ್ದಾರೆ. ಉಳಿದಂತೆ ಅಚ್ಯುತ್ ಕುಮಾರ್, ರಂಗಾಯಣ ರಘು ಸೇರಿದಂತೆ ಹಲವು ರಂಗಭೂಮಿ ಕಲಾವಿದರು ತಾರಾಬಳಗದಲ್ಲಿದ್ದಾರೆ. ಅಧ್ವೈತ್ ಗುರುಮೂರ್ತಿ ಕ್ಯಾಮೆರಾ ವರ್ಕ್, ವಾಸು ದೀಕ್ಷಿತ್ ಸಂಗೀತ ಸಂಯೋಜನೆ, ಪೂರ್ಣಚಂದ್ರ ತೇಜಸ್ವಿ ಹಿನ್ನೆಲೆ ಸಂಗೀತ ಚಿತ್ರಕ್ಕಿದೆ. ಸರ್ವಸ್ವ ಪ್ರೊಡಕ್ಷನ್ಸ್ ಬ್ಯಾನರ್ ನಲ್ಲಿ ನಾಗರಾಜ್ ಸೋಮಯಾಜಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇದನ್ನೂ ಓದಿ: ಸಂಚಾರಿ ವಿಜಯ್‍ಗೆ ಅಮೆರಿಕದ ಥಿಯೇಟರ್ ನಿಂದ ಗೌರವ