Tag: Kannada film Chamber

  • SVR @ 50 – ಕನ್ನಡ ಚಿತ್ರರಂಗದ ಗಣ್ಯರು ಭಾಗಿ

    SVR @ 50 – ಕನ್ನಡ ಚಿತ್ರರಂಗದ ಗಣ್ಯರು ಭಾಗಿ

    ರಾಜೇಂದ್ರ ಸಿಂಗ್ ಬಾಬು (Rajendra Singh Babu) ಅವರು ಕನ್ನಡ ಇಂಡಸ್ಟ್ರಿಯಲ್ಲಿ 50 ವರ್ಷ ಪೂರೈಸಿದ ಹಿನ್ನೆಲೆ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಯ ನೇತೃತ್ವದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. 5 ದಿನಗಳ ಕಾಲ ಚಾಮರಾಜ ಪೇಟೆಯ ಕಲಾವಿದರ ಭವನದಲ್ಲಿ ಸಾಧನೆ..ಸಂಭ್ರಮ..ಚಿತ್ರೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅಕ್ಟೋಬರ್ 23 ರಿಂದ 27ರ ವರೆಗೆ ರಾಜೇಂದ್ರಸಿಂಗ್ ಬಾಬು ಅವರ ಸಿನಿಮಾಗಳ ಪ್ರದರ್ಶನ, ಸಂವಾದ ಸಂಕೀರ್ಣ ಕಾರ್ಯಕ್ರಮಕ್ಕೆ ಇಂದು (ಅ.27) ತೆರೆ ಎಳೆಯಲಾಗಿದೆ.

    ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಸ್ಯಾಂಡಲ್ ವುಡ್ ನ ನಟ, ನಟಿಯರು, ನಿರ್ದೇಶಕರು, ನಿರ್ಮಾಪಕರು, ರಾಜೇಂದ್ರ ಸಿಙಗ್ ಬಾಬು ಅವರ ಆಪ್ತರು, ಕುಟುಂಬಸ್ಥರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದ್ದಾರೆ.

    ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ನಾದಬ್ರಹ್ಮ ಹಂಸಲೇಖ, ನಟಿ ಸುಹಾಸಿನಿ, ನಿರ್ದೇಶಕ ನಾಗತ್ತಿಹಳ್ಳಿ ಚಂದ್ರಶೇಖರ್, ನಟ ಡಾ.ವಿ.ರವಿಚಂದ್ರನ್, ನಿರ್ದೇಶಕ ಟಿಎನ್ ಸೀತಾರಾಮ್, ಅರ್ಜುನ್ ಸರ್ಜಾ, ಧ್ರುವ ಸರ್ಜಾ ಸೇರಿ ಇಡೀ ಚಿತ್ರರಂಗದ ಗಣ್ಯರು ಸಾಕ್ಷಿಯಾದರು. ಈ ವೇಳೆ ರಾಜೇಂದ್ರ ಸಿಂಗ್ ಬಾಬು ಅವರಿಗೆ ಸನ್ಮಾನಿಸಿ ಗೌರವ ನೀಡಿದ್ದಾರೆ ಗಣ್ಯರು.

  • ಸಿನಿಮಾ ಟಿಕೆಟ್, OTT ಸಬ್‌ಸ್ಕ್ರಿಪ್ಶನ್ ಮೇಲೆ ಸೆಸ್‌ ವಿಧಿಸಲು ತೀರ್ಮಾನ – ಫಿಲ್ಮ್‌ ಚೇಂಬರ್‌ ಅಸಮಾಧಾನ

    ಸಿನಿಮಾ ಟಿಕೆಟ್, OTT ಸಬ್‌ಸ್ಕ್ರಿಪ್ಶನ್ ಮೇಲೆ ಸೆಸ್‌ ವಿಧಿಸಲು ತೀರ್ಮಾನ – ಫಿಲ್ಮ್‌ ಚೇಂಬರ್‌ ಅಸಮಾಧಾನ

    – ಹೆಚ್ಚುವರಿ ಸೆಸ್ ತೆಗೆಯುವಂತೆ ಸಿಎಂಗೆ ಮನವಿ

    ಬೆಂಗಳೂರು: ಸಿನಿಮಾ ಟಿಕೆಟ್‌ & ಒಟಿಟಿ ವೇದಿಕೆಗಳ ಸಬ್‌ಸ್ಕ್ರಿಪ್ಷನ್‌ ಶುಲ್ಕಗಳ ಮೇಲೆ ಸೆಸ್‌ (Cess) ವಿಧಿಸಲು ರಾಜ್ಯ ಸರ್ಕಾರ (Karnataka Government) ಮುಂದಾಗಿರುವುದಕ್ಕೆ ಫಿಲ್ಮ್ ಚೇಂಬರ್ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೇ ಬಿಲ್‌ ಪುನರ್‌ ಪರಿಶೀಲಿಸುವಂತೆ ಮನವಿ ಮಾಡಿರುವುದಾಗಿ ಚೇಂಬರ್ ಅಧ್ಯಕ್ಷ ಎನ್.ಎಂ ಸುರೇಶ್ (NM Suresh) ತಿಳಿಸಿದ್ದಾರೆ.

    ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎನ್.ಎಂ ಸುರೇಶ್ ಅವರು, ಕಾರ್ಮಿಕ ಕಲ್ಯಾಣ ನಿಧಿಗೋಸ್ಕರ ಸರ್ಕಾರ ಸಿನಿಮಾ ಟಿಕೆಟ್‌ & ಒಟಿಟಿ ವೇದಿಕೆಗಳ ಸಬ್‌ಸ್ಕ್ರಿಪ್ಷನ್‌ ಶುಲ್ಕಗಳ ಮೇಲೆ ಹೆಚ್ಚುವರಿ ಸೆಸ್ ವಿಧಿಸಲು ಸರ್ಕಾರ ತೀರ್ಮಾನ ಮಾಡಿದೆ. ಇದರಿಂದ ನಿರ್ಮಾಪಕರಿಗೆ ಹೊರೆಯಾಗುತ್ತೆ. ಸದ್ಯ ಚಿತ್ರರಂಗ ಸಂಕಷ್ಟದಲ್ಲಿದೆ. ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನ ಭೇಟಿಯಾಗಿ ಮನವಿ ಸಹ ಕೊಟ್ಟಿದ್ದೇವೆ. ಹೆಚ್ಚುವರಿ 2% ತೆರೆಗೆ ವಿಧಿಸದಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಪುನರ್ ಪರಿಶೀಲನೆ ಮಾಡಿ ಸರ್ಕಾರ ಹೆಚ್ಚುವರಿ ಸೆಸ್ ತೆಗೆದು ಹಾಕುವಂತೆ ಸಿಎಂ ಅವ್ರಿಗೂ ಮನವಿ ಮಾಡಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪುನೀತ್ ಕೆರೆಹಳ್ಳಿ ಮೇಲೆ ಪೊಲೀಸರ ದೌರ್ಜನ್ಯ ಆರೋಪ – ಹಿಂದೂ ಸಂಘಟನೆಗಳ ಒಕ್ಕೂಟದಿಂದ ಕಮಿಷನರ್‌ಗೆ ದೂರು

    ಏನಿದು ಬಿಲ್‌?
    ಸಿನಿಮಾ ಟಿಕೆಟ್‌ & ಒಟಿಟಿ ವೇದಿಕೆಗಳ ಸಬ್‌ಸ್ಕ್ರಿಪ್ಷನ್‌ ಶುಲ್ಕಗಳ ಮೇಲೆ ಸೆಸ್‌ ವಿಧಿಸಲು ರಾಜ್ಯ ಸರ್ಕಾರ ಯೋಜಿಸಿದೆ. ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ವಿಧೇಯಕ-2024 ಮಂಡಿಸಲಾಗಿದೆ. ಶೇ.1 ಮೀರದಂತೆ ಶೇ.2 ಕ್ಕಿಂತ ಕಡಿಮೆಯಾಗದಂತೆ ಸೆಸ್‌ ವಿಧಿಸಲು ಸರ್ಕಾರ ಮುಂದಾಗಿದ್ದು, ಇದರಿಂದ ಸಿನಿಮಾ, ಸಾಂಸ್ಕೃತಿಕ ಕಲಾವಿದರಿಗೆ ಅನುಕೂಲವಾಗುವ ರೀತಿ ತೆರಿಗೆ ಸಂಗ್ರಹ ನಡೆಯಲಿದೆ ಎಂದು ಹೇಳಲಾಗಿದೆ. ಸಿನಿ, ಸಾಂಸ್ಕೃತಿಕ ಕಾರ್ಯಕರ್ತರ ಕ್ಷೇಮಾಭಿವೃದ್ಧಿಗೆ ಮಂಡಳಿ ಸ್ಥಾಪನೆ ಮಾಡಿ. ರಾಜ್ಯದಲ್ಲಿ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರಿಗೆ ಸಾಮಾಜಿಕ ಭದ್ರತೆ ಒದಗಿಸಲು ಅವಕಾಶ ಮಾಡಿಕೊಡುವ ವಿಧೇಯಕ ಇದಾಗಿದೆ. ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ ನೋಂದಣಿ, ಕ್ಷೇಮಾಭಿವೃದ್ಧಿ ನಿಧಿಗಾಗಿ ಸಿನಿಮಾ ಟಿಕೆಟ್ ಮೇಲೆ ಉಪ ಕರ ವಿಧಿಸುವುದು ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ ಎಂದು ಉನ್ನದ ಮೂಲಗಳು ತಿಳಿಸಿವೆ. ಇದನ್ನೂ ಓದಿ: ನಾಯಿ ಸ್ವಲ್ಪ ಟಚ್‌ ಆದ್ರೂ ಮಸೀದಿಯೊಳಕ್ಕೆ ಹೋಗಲ್ಲ, ಅಂತಹದ್ದರಲ್ಲಿ ಮಾಂಸ ತರೋಕಾಗುತ್ತಾ? – ಅಬ್ದುಲ್‌ ರಜಾಕ್‌

    ವಿಧೇಯಕದ ಉದ್ದೇಶವೇನು?
    ಕಲಾವಿದರಿಗೆ ಒಳಿತು ಮಾಡುವುದೇ ಈ ಮಸೂದೆಯ ಉದ್ದೇಶ ಎಂದು ಹೇಳಲಾಗುತ್ತಿದೆ. ಕಲಾವಿದ, ತಂತ್ರಜ್ಞ, ನಿರ್ಮಾಪಕರು ಹೀಗೆ ನಾನಾ ವಿಭಾಗಗಳಲ್ಲಿ ಕೆಲಸ ಮಾಡುವವರು ಈ ನಿಧಿಯ ಭಾಗವಾಗಿರಲಿದ್ದಾರೆ. ಇದರ ಜೊತೆಗೆ ಮುಂದಿನ ದಿನಗಳಲ್ಲಿ ರಂಗಭೂಮಿಯಲ್ಲಿದ್ದವರಿಗೂ ಕೂಡ ಈ ಪ್ರಯೋಜನ ಸಿಗುವಂತೆ ಮಾಡುವ ಆಶಯ ಹೊಂದಿದೆ. ಸರ್ಕಾರವು ರಾಜ್ಯದಲ್ಲಿನ ಸಿನಿಮಾ, ಸಾಂಸ್ಕೃತಿಕ ಕಾರ್ಯಕರ್ತರಿಗೆ ಅನುಕೂಲವಾಗುವ ರೀತಿಯಲ್ಲಿ ‘ಕರ್ನಾಟಕ ಸಿನಿ, ಸಾಂಸ್ಕೃತಿಕ ಕಾರ್ಯಕರ್ತರ ಸಾಮಾಜಿಕ ಭದ್ರತೆ & ಕಲ್ಯಾಣ ನಿಧಿ ಹೆಸರಿನಲ್ಲಿ ನಿಧಿ ಸ್ಥಾಪಿಸಲು ವಿಧೇಯಕವನ್ನು ಪ್ರಸ್ತಾಪಿಸಲಾಗಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: Paris Olympics 2024: ಭಾರತದ ಮನು ಭಾಕರ್‌ ಫೈನಲ್‌ಗೆ ಎಂಟ್ರಿ – 20 ವರ್ಷಗಳ ಬಳಿಕ ವಿಶೇಷ ಸಾಧನೆ!