Tag: kannada films

  • ಹೆರಿಗೆಯ ವಿಡಿಯೋ ಹಂಚಿಕೊಂಡ ಸಂಜನಾ ಗಲ್ರಾನಿ

    ಹೆರಿಗೆಯ ವಿಡಿಯೋ ಹಂಚಿಕೊಂಡ ಸಂಜನಾ ಗಲ್ರಾನಿ

    ಸ್ಯಾಂಡಲ್‌ವುಡ್ ನಟಿ ಸಂಜನಾ ಮನೆಯಲ್ಲಿ ಸಂತಸ ಮನೆ ಮಾಡಿದೆ. ಮುದ್ದು ಮಗನ ಆಗಮನದ ಖುಷಿಯಲ್ಲಿದ್ದಾರೆ. ಈ ಮಧ್ಯೆ ತನ್ನ ಸಿಸೇರಿಯನ್ ಹೆರಿಗೆಯ ವಿಡಿಯೋ ಶೇರ್ ಮಾಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

    ಸಂಜನಾ ಗಲ್ರಾನಿ ಸಿನಿಮಾ ರಂಗದಲ್ಲಿ ಸಕ್ರಿಯರಾಗಿದ್ದರು. ನಂತರ ಜೀವನದಲ್ಲಿ ಸಾಕಷ್ಟು ಸಂಕಷ್ಟಗಳನ್ನು ಎದುರಿಸಿದ ನಂತರ ತಮ್ಮ ವೈಯಕ್ತಿಕ ಜೀವನದತ್ತ ಮುಖ ಮಾಡಿದ್ದಾರೆ. ಮದುವೆ, ಸಂಸಾರ ಅಂತಾ ತನ್ನದೇ ಪ್ರಪಂಚ ಕಟ್ಟಿಕೊಂಡು ಖುಷಿಯಾಗಿದ್ದಾರೆ. ಹೀಗಿರುವಾಗ ಇತ್ತೀಚೆಗಷ್ಟೇ ಗಂಡು ಮಗುವಿಗೆ ಸಂಜನಾ ತಾಯಿಯಾಗಿದ್ದರು. ಈ ಮೂಲಕ ಮನೆಗೆ ಹೊಸ ಅತಿಥಿಯ ಆಗಮನವಾಗಿತ್ತು. ತಮ್ಮ ಹೆರಿಗೆಯ ಅನುಭವ ಕಷ್ಟ ಹೇಗಿತ್ತು ಎಂಬ ಸಣ್ಣ ತುಣುಕನ್ನ ಸಂಜನಾ ಸಾಮಾಜಿಕ ಜಾತಾಣದಲ್ಲಿ ಶೇರ್ ಮಾಡಿದ್ದಾರೆ. ಇದನ್ನೂ ಓದಿ:ತಮಿಳು ಕಿರುತೆರೆಯತ್ತ `ಪಾರು’ ಖ್ಯಾತಿಯ ಮೋಕ್ಷಿತಾ ಪೈ

    ತಂಗಿ ನಿಕ್ಕಿ ಗಲ್ರಾನಿ ಮದುವೆಯ ದಿನವೇ ಮಗುವಿನ ಆಗಮನವಾಗಿತ್ತು. ಸಿಸೇರಿಯನ್ ಹೆರಿಗೆ ಸಂಜನಾಗೆ ಆಗಿತ್ತು. ಅಂದಿನ ದಿನ ಹೇಗಿತ್ತು. ಆ ದಿನ ಎಷ್ಟು ಕಷ್ಟವಾಗಿತ್ತು ಎಂಬುದನ್ನ ವಿಡಿಯೋ ಮುಖಾಂತರ ತಿಳಿಸಿದ್ದಾರೆ. ಈ ಮೂಲಕ ತಮಗೆ ಹೆರಿಗೆ ಮಾಡಿಸಿದ ಡಾಕ್ಟರ್ ಹೇಮಾ ನಂದಿನಿ ಅವರಿಗೆ ಸಂಜನಾ ಧನ್ಯವಾದ ತಿಳಿಸಿದ್ದಾರೆ. ಈ ವಿಡಿಯೋ ಈಗ ಅಭಿಮಾನಿಗಳಿಂದ ಮೆಚ್ಚುಗೆ ಪಡೆಯುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಈ ಕಾರಣಕ್ಕಾಗಿ ಫ್ಯಾಮಿಲಿ ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್

    ಈ ಕಾರಣಕ್ಕಾಗಿ ಫ್ಯಾಮಿಲಿ ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್

    ಸ್ಯಾಂಡಲ್‌ವುಡ್ ಸಿಂಡ್ರೆಲಾ ರಾಧಿಕಾ ಪಂಡಿತ್ ನಟನೆಯಿಂದ ಅಂತರ ಕಾಯ್ದುಕೊಂಡಿದ್ದರು. ಸಾಮಾಜಿಕ ಜಾಲತಾಣದಲ್ಲಿ ಆಕ್ಟೀವ್ ಆಗಿದ್ದಾರೆ. ಹೊಸ ಬಗೆಯ ಫೋಟೋಸ್ ಮೂಲಕ ಆಗಾಗ ನೆಟ್ಟಿಗರ ಗಮನ ಸೆಳೆಯುತ್ತಾರೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ 500ನೇ ಪೋಸ್ಟ್‌ಗಾಗಿ ವಿಶೇಷ ಫೋಟೋವನ್ನ ರಾಧಿಕಾ ಪಂಡಿತ್ ಹಂಚಿಕೊಂಡಿದ್ದಾರೆ.

    `ಮೊಗ್ಗಿನ ಮನಸ್ಸು’ ಚಿತ್ರದಿಂದ ಸಿನಿಪಯಣ ಶುರು ಮಾಡಿದ್ದ ನಟಿ ಮದುವೆಯ ಬಳಿಕವೂ ಬೆಳ್ಳಿತೆರೆಯಲ್ಲಿ ಮಿಂಚಿದ್ದರು. `ಆದಿ ಲಕ್ಷ್ಮಿ ಪುರಾಣ’ ಚಿತ್ರದಲ್ಲಿ ಕಡೆಯದಾಗಿ ಕಾಣಿಸಿಕೊಂಡರು. ಮತ್ತೆ ರಾಧಿಕಾ ಅವರ ಕಂಬ್ಯಾಕ್‌ಗಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ. ಹೀಗಿರುವಾಗ ಅಭಿಮಾನಿಗಳ ಜತೆ ಸಾಮಾಜಿಕ ಜಾಲತಾಣದಲ್ಲಿ ನಿರಂತರ ಸಂಪರ್ಕದಲ್ಲಿದ್ದಾರೆ. ತಮ್ಮ ವೈಯಕ್ತಿಕ ಬದುಕಿನ ಸುಂದರ ಫೋಟೋಗಳನ್ನ ಶೇರ್ ಮಾಡುವ ಮೂಲಕ ಅಭಿಮಾನಿಗಳ ಗಮನ ಸೆಳೆಯುತ್ತಾರೆ. ಇದೀಗ ರಾಧಿಕಾ ಶೇರ್ ಮಾಡಿರುವ ಫೋಟೋ ಸಖತ್ ವೈರಲ್ ಆಗುತ್ತಿದೆ. ಇದನ್ನೂ ಓದಿ:ತೆಲುಗಿನ ಮಹೇಶ್ ಬಾಬುಗೆ ತಂದೆಯಾಗಿ ನಟಿಸ್ತಾರಾ ರಿಯಲ್ ಸ್ಟಾರ್ ಉಪೇಂದ್ರ

     

    View this post on Instagram

     

    A post shared by Radhika Pandit (@iamradhikapandit)

    ನಟಿಯ ಸೋಷಿಯಲ್‌ ಮೀಡಿಯಾದಲ್ಲಿ ಖಾತೆಯ 500ನೇ ಪೋಸ್ಟ್ ವಿಶೇಷ ಫೋಟೋನಿಂದ ಶೇರ್ ಮಾಡಿದ್ದಾರೆ. ರಾಧಿಕಾ ಜತೆ ಪತಿ ಯಶ್ ಮತ್ತು ಮುದ್ದಾದ ಇಬ್ಬರು ಮಕ್ಕಳು ಇರುವ ಚೆಂದದ ಫೋಟೋವನ್ನೇ ಶೇರ್ ಮಾಡಿದ್ದಾರೆ. ಮುದ್ದಾದ ಸ್ಮೈಲ್‌ನೊಂದಿಗೆ ಕ್ಯಾಮೆರಾ ಕಣ್ಣಿಗೆ ಪೋಸ್ ಕೊಟ್ಟಿರೋ ಯಶ್ ಕುಟುಂಬ ಫೋಟೋ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ. ಈ ಹ್ಯಾಪಿ ಕುಟುಂಬಕ್ಕೆ ಯಾರು ದೃಷ್ಟಿನು ಬೀಳದೇ ಇರಲಿ ಅಂತಾ ಮನಸಾರೆ ಶುಭಹಾರೈಸುತ್ತಿದ್ದಾರೆ. ಈಗ ರಾಧಿಕಾ ಕುಟುಂಬದ ನಯಾ ಫೋಟೋ ಸಖತ್ ವೈರಲ್ ಆಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಕಿರುತೆರೆಗೆ ಮರಳಿದ ಎವರ್‌ಗ್ರೀನ್ ನಟಿ ಸುಧಾರಾಣಿ

    ಕಿರುತೆರೆಗೆ ಮರಳಿದ ಎವರ್‌ಗ್ರೀನ್ ನಟಿ ಸುಧಾರಾಣಿ

    `ಆನಂದ್’ ಚಿತ್ರದ ಮೂಲಕ ಶಿವರಾಜ್‌ಕುಮಾರ್‌ಗೆ ನಾಯಕಿಯಾಗಿ ಎಂಟ್ರಿ ಕೊಟ್ಟಿದ್ದ ನಟಿ ಸುಧಾರಾಣಿ ಈಗ ಮೊದಲ ಬಾರಿಗೆ ಪೂರ್ಣ ಪ್ರಮಾಣದಲ್ಲಿ ಕಿರುತೆರೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ತಮ್ಮ ಅದ್ಬುತ ನಟನೆಯಿಂದ ಇವರು ದಶಕಗಳಿಂದ ಪ್ರೇಕ್ಷಕರ ಪ್ರೀತಿಯನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಈಗ ಕಿರುತೆರೆಯಲ್ಲೂ ಮನಗೆಲ್ಲಲು ರೆಡಿಯಾಗಿದ್ದಾರೆ.

    ಡಾ.ಸುಧಾರಾಣಿ ಅವರು ಖಾಸಗಿ ವಾಹಿನಿಯ ಧಾರಾವಾಹಿವೊಂದರಲ್ಲಿ ಮುಖ್ಯ ಪೋಷಕ ನಟಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಹೊರಗಿನ ಪ್ರಪಂಚವನ್ನು ಮರೆತು ತನ್ನ ಕುಟುಂಬವೇ ಒಂದು ಪ್ರಪಂಚ ಎಂದು ಬದುಕುತ್ತಿರುವ ಒಂದು ಹೆಣ್ಣು ತಾಯಿಯಾಗಿ, ಸೊಸೆಯಾಗಿ ಮನೆ ಹೀಗೆ ನಿಭಾಯಿಸಿಕೊಂಡು ಹೋಗುತ್ತಾಳೆ ಎಂಬ ಕಥೆಯಲ್ಲಿ ಮುಖ್ಯ ಪಾತ್ರಧಾರಿಯಾಗಿ ನಟಿಸಿದ್ದಾರೆ. ಈ ಮೂಲಕ ಕಿರುತೆರೆಯತ್ತ ಬಂದಿರುವ ಸುಧಾರಾಣಿ ಈಗ ಬೋಲ್ಡ್ ಆಗಿ ಫೋಟೋಶೂಟ್ ಕೂಡ ಮಾಡಿಸಿದ್ದಾರೆ.‌ ಇದನ್ನೂ ಓದಿ: ದುಬಾರಿ ಕಾರು ಖರೀದಿಸಿದ ನಟ ರಿಷಬ್ ಶೆಟ್ಟಿ

     

    View this post on Instagram

     

    A post shared by chythrra (@getgorgeouswithchythrra)

    ಪಿಂಕ್ ಮತ್ತು ಆರೆಂಜ್ ಕಲರ್ ಡ್ರೆಸ್‌ನಲ್ಲಿ ಸುಧಾರಾಣಿ ಮತ್ತಷ್ಟು ಗ್ಲ್ಯಾಮರಸ್ ಆಗಿ ಕ್ಯಾಮೆರಾ ಕಣ್ಣಿಗೆ ಪೋಸ್ ಮಾಡಿದ್ದಾರೆ. ಮತ್ತಷ್ಟು ಯಂಗ್ ಆಗಿ ಕಾಣಿಸಿಕೊಂಡಿರುವ ಸುಧಾರಾಣಿಯ ಅವತಾರಕ್ಕೆ ಫ್ಯಾನ್ಸ್ ಕೂಡ ಫಿದಾ ಆಗಿದ್ದಾರೆ. ಸದ್ಯ ಈ ವಿಡಿಯೋ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.

    Live Tv

  • ಸಾಮಾಜಿಕ ಜಾಲತಾಣದಲ್ಲಿ ಹಲ್‌ಚಲ್ ಎಬ್ಬಿಸಿದ ರ‍್ಯಾಂಬೋ ನಟಿಯ ನಯಾ ಫೋಟೋಸ್

    ಸಾಮಾಜಿಕ ಜಾಲತಾಣದಲ್ಲಿ ಹಲ್‌ಚಲ್ ಎಬ್ಬಿಸಿದ ರ‍್ಯಾಂಬೋ ನಟಿಯ ನಯಾ ಫೋಟೋಸ್

    ಸ್ಯಾಂಡಲ್‌ವುಡ್‌ನ ʻರ‍್ಯಾಂಬೋʼ ಬ್ಯೂಟಿ ಆಶಿಕಾ ರಂಗನಾಥ್ `ಅವತಾರ ಪುರುಷ’ ಸಿನಿಮಾ ಆದ್ಮೇಲೆ ಸಿನಿಮಾ ಶೂಟಿಂಗ್‌ಗೆ ಬ್ರೇಕ್ ಕೊಟ್ಟು ಥೈಲ್ಯಾಂಡ್‌ಗೆ ಹೋಗಿದ್ದರು. ಹಳೆಯ ಫೋಟೋಗಳನ್ನ ಈಗ ಶೇರ್ ಮಾಡಿದ್ದಾರೆ. ಕಡಲ ತೀರದ ಮಧ್ಯೆ ಸಖತ್ ಹಾಟ್ ಆಗಿ ಕಾಣಿಸಿಕೊಂಡು ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ.

    `ರ‍್ಯಾಂಬೋ’ ಬೆಡಗಿ ಗ್ಯಾಮರಸ್ ಆಗಿ ಮತ್ತಷ್ಟು ಹಾಟ್ ಹಾಟ್ ಆಗಿ ಕಾಣಿಸಿಕೊಂಡು ಕ್ಯಾಮೆರಾ ಪೋಸ್ ಕೊಟ್ಟಿರೋದು ಪಡ್ಡೆಹುಡುಗರ ಹಾರ್ಟಿಗೆ ಕಚಗುಳಿ ಇಟ್ಟಂತಾಗಿದೆ. ಕೆಲ ದಿನಗಳ ಹಿಂದೆ ಥೈಲ್ಯಾಂಡ್‌ಗೆ ಆಶಿಕಾ ಪ್ರವಾಸಕ್ಕೆ ಹೋಗಿದ್ದರು. ಇದೀಗ ಈ ಫೋಟೋಗಳನ್ನ ಶೇರ್ ಮಾಡಿ, ಸೋಷಿಯಲ್ ಮೀಡಿಯಾದಲ್ಲಿ ಹಲ್‌ಚಲ್ ಏಬ್ಬಿಸುತ್ತಿದ್ದಾರೆ. ಇದನ್ನೂ ಓದಿ:ಕೊಠಡಿ ಮುಂದೆ ಹೈಡ್ರಾಮಾ- ಪವಿತ್ರ ಲೋಕೇಶ್, ನರೇಶ್ ಮೇಲೆ ಚಪ್ಪಲಿಯಿಂದ ಹಲ್ಲೆಗೆ ಯತ್ನಿಸಿದ ರಮ್ಯಾ

     

    View this post on Instagram

     

    A post shared by Ashika Ranganath (@ashika_rangnath)

    ಥೈಲ್ಯಾಂಡ್ ಚೆಂದದ ಕಡಲ ತೀರದ ಮಧ್ಯೆ ನಿಂತು ಹಾಟ್ ಆಗಿ ಕ್ಯಾಮೆರಾ ಕಣ್ಣಿಗೆ ಪೋಸ್ ಮಾಡಿದ್ದಾರೆ. ಇದೀಗ ಈ ಫೋಟೋಗಳು ನೋಡುಗರ ಗಮನ ಸೆಳೆಯುತ್ತಿದೆ.

    Live Tv

  • `ರಾ ರಾ ರಕ್ಕಮ್ಮ’ ನಂತರ ನಾಳೆ ಮತ್ತೊಂದು ಸಾಂಗ್ ರಿಲೀಸ್: ವಿಕ್ರಾಂತ್ ರೋಣ

    `ರಾ ರಾ ರಕ್ಕಮ್ಮ’ ನಂತರ ನಾಳೆ ಮತ್ತೊಂದು ಸಾಂಗ್ ರಿಲೀಸ್: ವಿಕ್ರಾಂತ್ ರೋಣ

    ಭಿನಯ ಚಕ್ರವರ್ತಿ ಸುದೀಪ್ `ವಿಕ್ರಾಂತ್ ರೋಣ’ ಚಿತ್ರತಂಡದಿಂದ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಸುದೀಪ್ ನಟನೆಯ ಪ್ಯಾನ್ ಇಂಡಿಯಾ `ವಿಕ್ರಾಂತ್ ರೋಣ’ ಚಿತ್ರದ ಮತ್ತೊಂದು ಸಾಂಗ್ ರಿಲೀಸ್‌ಗೆ ಸಜ್ಜಾಗಿದೆ. ರಾ ರಾ ರಕ್ಕಮ್ಮ ಸಾಂಗ್ ನಂತರ ಮತ್ತೊಂದು ಸಾಂಗ್‌ ನಾಳೆ ತೆರೆ ಕಾಣುತ್ತಿದೆ.

    `ವಿಕ್ರಾಂತ್‌ರೋಣ’ ಸಿನಿಮಾದ ಸುದೀಪ್ ಮತ್ತು ಜಾಕ್ವೇಲಿನ್ ಕಾಂಬಿನೇಷನ್ `ರಾ ರಾ ರಕ್ಕಮ್ಮ’ ಯೂತ್ಸ್ಗೆ ಅಡಿಕ್ಟ್ ಆಗಿರುವ ಬೆನ್ನಲ್ಲೇ ಮತ್ತೊಂದು ಕಲರ್‌ಫುಲ್ ಸಾಂಗ್ ತೆರೆ ಕಾಣಲು ರೆಡಿಯಾಗಿದೆ. ತಂದೆ ಮತ್ತು ಮಗಳ ಬಾಂಧವ್ಯ ಸಾರುವ ಮತ್ತೊಂದು ಚೆಂದದ ಲಿರಿಕಲ್ ಸಾಂಗ್ ಲಹರಿ ಮ್ಯೂಸಿಕ್ ಆಡಿಯೋದಲ್ಲಿ ರಿಲೀಸ್ ಆಗುತ್ತಿದೆ.

    ಕನ್ನಡದಲ್ಲಿ ಜುಲೈ 2ಕ್ಕೆ 5.02ಕ್ಕೆ ತೆರೆ ಕಾಣಲಿದೆ. ಹೀಗೆ ಒಂದು ದಿನದ ಅಂತರದಲ್ಲಿ ಬೇರೇ ಭಾಷೆಗಳಲ್ಲಿ ಜುಲೈ 6ರವರೆಗೂ ರಿಲೀಸ್ ಆಗಲಿದೆ. ಅನೂಪ್ ಭಂಡಾರಿ ನಿರ್ದೇಶನದ ಜತೆ `ರಾಜಕುಮಾರಿ’ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ಸುದೀಪ್ ತಂದೆಯ ಪಾತ್ರಕ್ಕೆ ಜೀವತುಂಬಿದ್ದು, ಈ ಚಿತ್ರದ ಏಮೋಷನಲ್ ಸಾಂಗ್ ನೋಡಲು ಕಾಯ್ತಿದ್ದಾರೆ. ಇದನ್ನೂ ಓದಿ:ಸ್ವಿಮ್ ಸೂಟ್‌ನಲ್ಲಿ ಹಾಟ್‌ ಆಗಿ ಕಾಣಿಸಿಕೊಂಡ `ರಾ’ಗಿಣಿ

    ಇನ್ನು ಈಗಾಗಲೇ ಟ್ರೈಲರ್ ಮೂಲಕ ಹೈಪ್ ಕ್ರಿಯೇಟ್ ಮಾಡಿರುವ  ವಿಕ್ರಾಂತ್ ರೋಣ ಇದೇ ಜುಲೈ 28ಕ್ಕೆ ತೆರೆಗೆ ಬರಲು ಸಜ್ಜಾಗಿದೆ. ಸುದೀಪ್ ಜತೆ ನಿರೂಪ್ ಭಂಡಾರಿ, ನೀತಾ ಅಶೋಕ್, ಹೀಗೆ ಸಾಕಷ್ಟು ಕಲಾವಿದರು ಚಿತ್ರದಲ್ಲಿ ಸಾಥ್ ನೀಡಿದ್ದಾರೆ.

    Live Tv

  • ಸೀಮಂತ ಸಂಭ್ರಮದಲ್ಲಿ `ನೀಲಕಂಠ’ ನಟಿ ನಮಿತಾ

    ಸೀಮಂತ ಸಂಭ್ರಮದಲ್ಲಿ `ನೀಲಕಂಠ’ ನಟಿ ನಮಿತಾ

    ಸೌತ್ ಸಿನಿರಂಗದಲ್ಲಿ ಸಾಕಷ್ಟು ಸಿನಿಮಾಗಳ ಮೂಲಕ ಸಂಚಲನ ಮೂಡಿಸಿದ ನಾಯಕಿ ನಮಿತಾ, ಕನ್ನಡ ಸಿನಿಮಾಗಳಿಂದ ಕೂಡ ಕನ್ನಡ ಸಿನಿಪ್ರೇಕ್ಷಕರಿಗೆ ಹತ್ತಿರವಾಗಿದ್ದಾರೆ. ಸದ್ಯ ತಾಯ್ತನದ ಖುಷಿಯ ಕ್ಷಣಗಳನ್ನ ಕಳೆಯುತ್ತಿದ್ದಾರೆ. ಇತ್ತೀಚೆಗಷ್ಟೇ ನಟಿ ನಮಿತಾ ಸೀಮಂತದ ಶಾಸ್ತ್ರದ ಸಂಭ್ರಮ ಅದ್ದೂರಿಯಾಗಿ ನೆರವೇರಿದ್ದು, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

    ತೆಲುಗು, ತಮಿಳು ಸಿನಿಮಾಗಳ ಜತೆ ಕನ್ನಡದ `ನೀಲಕಂಠ’ ಮತ್ತು `ಹೂ’ ಚಿತ್ರದಲ್ಲಿ ರವಿಚಂದ್ರನ್ ಜತೆ ನಮಿತಾ ಡ್ಯುಯೇಟ್ ಹಾಡಿದ್ದರು. ಹಾಗಾಗಿ ಕನ್ನಡ ಸಿನಿಪ್ರೇಕ್ಷಕರ ಮನದಲ್ಲಿ ನಮಿತಾ ಸ್ಥಾನ ಗಿಟ್ಟಿಸಿಕೊಂಡರು. ಚಿತ್ರರಂಗ ಜತೆ ರಾಜಕೀಯ ರಂಗದಲ್ಲೂ ನಮಿತಾ ಗುರುತಿಸಿಕೊಂಡಿದ್ದಾರೆ. ಇದನ್ನೂ ಓದಿ:ಸ್ವಿಮ್ ಸೂಟ್‌ನಲ್ಲಿ ಹಾಟ್‌ ಆಗಿ ಕಾಣಿಸಿಕೊಂಡ `ರಾ’ಗಿಣಿ

    ಬಳಿಕ 2017ರಲ್ಲಿ ಉದ್ಯಮಿ ವೀರೇಂದ್ರ ಚೌಧರಿ ಜತೆ ಹಸೆಮಣೆ ಏರಿದ್ದರು. ಇತ್ತೀಚೆಗೆ ತಮ್ಮ ಹುಟ್ಟುಹಬ್ಬದಂದು ತಾವು ತಾಯಿಯಾಗುತ್ತಿರುವ ವಿಚಾರವನ್ನು ನಮಿತಾ ಹೇಳಿಕೊಂಡಿದ್ದರು. ಈಗ ಸೀಮಂತ ಶಾಸ್ತ್ರದ ಸಂಭ್ರಮದಲ್ಲಿದ್ದಾರೆ. ಸೀಮಂತದಲ್ಲಿ ತುಂಬಾ ಮುದ್ದಾಗಿ ಕಾಣಿಸಿಕೊಂಡಿದ್ದಾರೆ.

    ಇತ್ತೀಚೆಗೆ ನಟಿ ನಮಿತಾ ಆಪ್ತರು, ಕುಟುಂಬಸ್ಥರ ಸಮ್ಮುಖದಲ್ಲಿ ಸೀಮಂತ ಶಾಸ್ತ್ರವನ್ನು ಅದ್ದೂರಿಯಾಗಿ ಆಚರಿಸಿಕೊಂಡಿದ್ದಾರೆ. ನಮಿತಾ ಅವರ ಆಪ್ತ ಚಿತ್ರರಂಗದ ಸ್ನೇಹಿತರು ಭಾಗಿಯಾಗಿ ಶುಭಹಾರೈಸಿದ್ದಾರೆ. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

    ಇನ್ನು ಮದುವೆಯ ಬಳಿಕವೂ ಚಿತ್ರರಂಗದಲ್ಲಿ ಆಕ್ಟೀವ್ ಆಗಿದ್ದ ಬಹುಭಾಷಾ ನಟಿ ನಮಿತಾ ಈಗ ಹೊಸ ಅತಿಥಿಯ ಬರುವಿಕೆಯ ಖುಷಿಯಲ್ಲಿದ್ದಾರೆ. ತುಂಬು ಗರ್ಭೀಣಿಯಾಗಿರುವ ನಟಿ ಸದ್ಯ ತಾಯ್ತನದ ಖುಷಿಯಲ್ಲಿದ್ದಾರೆ. ಮಗುವಿನ ಆಗಮನದ ನಂತರ ಮತ್ತೆ ಚಿತ್ರರಂಗದಲ್ಲಿ ಆಕ್ಟೀವ್ ಆಗಲಿದ್ದಾರೆ. ಮತ್ತೆ ಚಿತ್ರಗಳಲ್ಲಿ ನಮಿತಾ ಕಾಣಿಸಿಕೊಳ್ಳಲಿದ್ದಾರೆ.

    Live Tv

  • ಆರೋಗ್ಯದಲ್ಲಿ ಚೇತರಿಕೆ, ನಟ ದಿಗಂತ್ ಆಸ್ಪತ್ರೆಯಿಂದ ಡಿಸ್ಚಾರ್ಜ್

    ಆರೋಗ್ಯದಲ್ಲಿ ಚೇತರಿಕೆ, ನಟ ದಿಗಂತ್ ಆಸ್ಪತ್ರೆಯಿಂದ ಡಿಸ್ಚಾರ್ಜ್

    ಗೋವಾ ಟ್ರಿಪ್‌ಗೆ ಹೋಗಿ ಸೊಮರ್ ಸಾಲ್ಟ್‌ನಿಂದಾಗಿ ಆಸ್ಪತ್ರೆ ಸೇರಿಕೊಂಡಿದ್ದ ದಿಗಂತ್ ಅವರ ಆರೋಗ್ಯದಲ್ಲಿ ಭಾರೀ ಚೇತರಿಕೆ ಕಾಣಿಸಿಕೊಂಡಿದೆ. ನಿನ್ನೆ ಅವರಿಗೆ ಶಸ್ತ್ರ ಚಿಕಿತ್ಸೆ ನೀಡಲಾಗಿತ್ತು. ಇಂದು ಅವರನ್ನು ಐಸಿಯುನಲ್ಲಿ ಇಡಲಾಗಿತ್ತು. ಇದೀಗ ನಟ ದಿಗಂತ್ ಅವರನ್ನು ಆಸ್ಪತ್ರೆಯಿಂದ ಡಿಸ್ಚಾಜ್ ಮಾಡಲಾಗಿದೆ.

    ಕುಟುಂಬದ ಜತೆ ಗೋವಾ ಟ್ರಿಪ್‌ಗೆ ಹೋಗಿ ಸೊಮರ್ ಸಾಲ್ಟ್ ಮಾಡಿದ ಪರಿಣಾಮ ಬೆಂಗಳೂರಿನ ಮಣಿಪಾಲ್ ಆಸ್ವತ್ರೆಗೆ ದಾಖಲಿಸಿ, ನಿನ್ನೆ ಶಸ್ತ್ರ ಚಿಕಿತ್ಸೆ ನೀಡಲಾಗಿತ್ತು. ಇದೀಗ ನಟನ ಆರೋಗ್ಯ ಚೇತರಿಕೆ ಕಂಡಿದ್ದು, ಆಸ್ಪತ್ರೆಯಿಂದ ನಟ ದಿಗಂತ್ ಅವರ ದಿಸ್ಚಾರ್ಜ್ ಮಾಡಿದ್ದಾರೆ. ಇದನ್ನೂ ಓದಿ:ಪತಿ ದಿಗಂತ್ ನೆನೆದು ಭಾವುಕರಾದ ನಟಿ ಐಂದ್ರಿತಾ ರೇ : ಈಗ ಹೇಗಿದ್ದಾರೆ ನಟ ದಿಗಂತ್?

    ಗೋವಾದ ಕಡಲ ತೀರದಲ್ಲಿ ಸೊಮರ್ ಸಾಲ್ಟ್ ಜಂಪ್ ಮಾಡಲು ಹೋಗಿ ಸ್ಪೈಲನ್‌  ಕಾರ್ಡ್‌ಗೆ ಗಾಯ ಮಾಡಿಕೊಂಡಿದ್ರು. ಬಳಿಕ ಏರ್‌ಲಿಫ್ಟ್ ಮಾಡಿ ದಿಗಂತ್‌ರನ್ನ ಬೆಂಗಳೂರಿನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಮೂರು ಗಂಟೆಗಳ ಕಾಲ ಆಪರೇಷನ್ ಮಾಡಿದ್ದರು. ಆರೋಗ್ಯದಲ್ಲಿ ಸ್ಥಿರವಿರುವ ಕಾರಣ ನಟ ದಿಗಂತ್ ಅವರನ್ನು ಮನೆಯಲ್ಲಿಯೇ ಮೂರು ತಿಂಗಳು ಬೆಡ್ ರೆಸ್ಟ್‌ ಮಾಡಲು ಡಾ.ವಿಧ್ಯಾಧರ್ ತಿಳಿಸಿದ್ದಾರೆ.

    Live Tv

  • ಮೋಹಕತಾರೆ ರಮ್ಯಾ ಅಭಿಮಾನಿಗಳಿಗೆ ಗುಡ್ ನ್ಯೂಸ್

    ಮೋಹಕತಾರೆ ರಮ್ಯಾ ಅಭಿಮಾನಿಗಳಿಗೆ ಗುಡ್ ನ್ಯೂಸ್

    ಸ್ಯಾಂಡಲ್‌ವುಡ್ ಪದ್ಮಾವತಿ ರಮ್ಯಾ ಮತ್ತೆ ಚಿತ್ರರಂಗದಲ್ಲಿ ಆಕ್ಟೀವ್ ಆಗಿದ್ದಾರೆ. ಸಾಕಷ್ಟು ಸಿನಿಮಾ ಸಮಾರಂಭಗಳಿಗೆ ರಮ್ಯಾ ಸಾಥ್ ನೀಡುತ್ತಿದ್ದಾರೆ. ಹೀಗಿರುವಾಗ ರಮ್ಯಾ ಮತ್ತೆ ಚಿತ್ರಗಳಲ್ಲಿ ನಟಿಸುತ್ತಾರಾ ಅಂತಾ ಕೇಳ್ತಿದ್ದ ಅಭಿಮಾನಿಗಳಿಗೆ ಇದೀಗ ಗುಡ್ ನ್ಯೂಸ್ ಸಿಕ್ಕಿದೆ.

    ಪುನೀತ್ ರಾಜ್‌ಕುಮಾರ್‌ಗೆ ನಾಯಕಿಯಾಗುವ ಮೂಲಕ ದಶಕಗಳ ಕಾಲ ಚಂದನವನವನ್ನು ಆಳಿದ ನಟಿ ರಮ್ಯಾ ನಂತರ ರಾಜಕೀಯದಲ್ಲಿ ಬ್ಯುಸಿಯಾಗಿದ್ದರು. ರಾಜಕೀಯ ಮತ್ತು ಸಿನಿಮಾ ಎರಡರಲ್ಲೂ ಸೈ ಎನಿಸಿಕೊಂಡಿದ್ದ ರಮ್ಯಾ ಅದೇನ್ ಆಯ್ತೋ ಎನೋ ಏಕಾಏಕಿ ಎರಡು ರಂಗವನ್ನು ತೊರೆದು ದೂರದ ಊರಿನಲ್ಲಿ ಸಿಂಗಲ್ ಲೈಫ್ ಲೀಡ್ ಮಾಡುತ್ತಿದ್ದಾರೆ. ಈಗ ಮತ್ತೆ ಚಿತ್ರರಂಗದಲ್ಲಿ ಆಕ್ಟೀವ್ ಆಗುವ ಮೂಲಕ ಸಿನಿಮಾಗೆ ಬರುವ ಸೂಚನೆಯನ್ನ ನೀಡಿದ್ದಾರೆ.

    ಇತ್ತೀಚೆಗಷ್ಟೇ ನಡೆದ ಖಾಸಗಿ ಅವಾರ್ಡ್ ಫಂಕ್ಷನ್‌ವೊಂದರಲ್ಲಿ ರಮ್ಯಾ ಸಾಧನೆಯನ್ನ ಗುರುತಿಸಿ ಅವಾರ್ಡ್ ನೀಡಲಾಯಿತು. ಈ ವೇಳೆ ಚಿತ್ರರಂಗಕ್ಕೆ ರಮ್ಯಾ ಕಂಬ್ಯಾಕ್ ಕುರಿತು ಕೇಳಲಾಯಿತು. ಇದಕ್ಕೆ ಪ್ರತಿಕ್ರಿಯಿಸಿರೋ ನಟಿ, ಹೌದು ನಾನು ಮತ್ತೆ ಸಿನಿಮಾದಲ್ಲಿ ನಟಿಸುತ್ತೇನೆ. ಒಂದೊಳ್ಳೆ ಪಾತ್ರ ಮತ್ತು ಚಿತ್ರಕಥೆಯ ಮೂಲಕ ಬೆಳ್ಳಿಪರದೆಯಲ್ಲಿ ಕಾಣಿಸಿಕೊಳ್ಳುವುದಾಗಿ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಹಾಟ್ ಲುಕ್‌ನಿಂದ ಪಡ್ಡೆಹುಡುಗರ ಟೆಂಪ್ರೇಚರ್ ಹೆಚ್ಚಿಸಿದ ಸಮಂತಾ

    RAMYA

    ಇನ್ನು ಕನ್ನಡ ಚಿತ್ರರಂಗದ ಹಿಟ್ ಜೋಡಿಗಳಲ್ಲಿ ಪವರ್ ಸ್ಟಾರ್ ಪುನೀತ್ ಹಾಗೂ ನಟಿ ರಮ್ಯಾ ಅವರ ಜೋಡಿಯೂ ಒಂದು. ತಮ್ಮ ಮೊದಲ ಚಿತ್ರ ಅಭಿಯಲ್ಲಿ ರಮ್ಯಾ ಪುನೀತ್ ಜೊತೆ ನಟಿಸಿದ್ದರು. ಅದು ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿತ್ತು. ಬಳಿಕ ಹಿಟ್ ಎನಿಸಿಕೊಂಡ ಆ ಜೋಡಿ, ಆಕಾಶ್, ಅರಸು ಸಿನಿಮಾಗಳಲ್ಲಿ ಮೋಡಿ ಮಾಡಿತ್ತು. ಅದಾದ ಮೇಲೆ ರಮ್ಯಾ ಹಾಗೂ ಪುನೀತ್ ತೆರೆ ಮೇಲೆ ಒಂದಾಗಿರಲಿಲ್ಲ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಪುನೀತ್ ರಾಜ್‌ಕುಮಾರ್ ಜೊತೆ ರಮ್ಯಾ ಸಿನಿಮಾದಲ್ಲಿ ನಟಿಸಬೇಕಿತ್ತು. ಈ ಚಿತ್ರದ ಮೂಲಕ ರಮ್ಯಾ ಕಂಬ್ಯಾಕ್ ಆಗಬೇಕಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು. ಒಟ್ನಲ್ಲಿ ರಮ್ಯಾ ಮತ್ತೆ ಚಿತ್ರರಂಗಕ್ಕೆ ವಾಪಾಸ್ ಆಗೋದರ ಕುರಿತು ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಸಿನಿಮಾಗಾಗಿ ಕಾಯ್ತಿದ್ದಾರೆ.

  • ಮತ್ತೆ ಸಾಲು ಸಾಲು ಸಿನಿಮಾಗಳಲ್ಲಿ `ರಾಟೆ’ ನಟಿ ಶೃತಿ ಹರಿಹರನ್ ಬ್ಯುಸಿ

    ಮತ್ತೆ ಸಾಲು ಸಾಲು ಸಿನಿಮಾಗಳಲ್ಲಿ `ರಾಟೆ’ ನಟಿ ಶೃತಿ ಹರಿಹರನ್ ಬ್ಯುಸಿ

    ಸ್ಯಾಂಡಲ್‌ವುಡ್ ನಟಿ ಶೃತಿ ಹರಿಹರನ್ ಚಿತ್ರರಂಗಕ್ಕೆ ಮತ್ತೆ ಕಮ್‌ಬ್ಯಾಕ್ ಆಗಿದ್ದಾರೆ. ಸಾಲು ಸಾಲು ಸಿನಿಮಾಗಳಿಗೆ ಗ್ರೀನ್ ಸಿಗ್ನಲ್ ಕೊಡುವ ಮೂಲಕ ಶ್ರುತಿ ಮತ್ತೆ ಸುದ್ದಿಯಲ್ಲಿದ್ದಾರೆ.

    `ಲೂಸಿಯಾ’ ಚಿತ್ರದಲ್ಲಿ ಸತೀಶ್ ನೀನಾಸಂಗೆ ನಾಯಕಿಯಾಗುವ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಿತರಾದ ನಟಿ ಶೃತಿ ಹರಿಹರನ್, ಕನ್ನಡ ಮತ್ತು ಪರಭಾಷಾ ಚಿತ್ರಗಳಲ್ಲೂ ಬಿಗ್ ಸ್ಟಾರ್‌ಗಳ ಜೊತೆ ತೆರೆಹಂಚಿಕೊಂಡಿರೋ ಪ್ರತಿಭಾವಂತ ನಾಯಕಿ ಶೃತಿ ಮತ್ತೆ ಚಿತ್ರರಂಗದಲ್ಲಿ ಹೊಸ ಚಿತ್ರಗಳ ಮೂಲಕ ಸದ್ದು ಮಾಡ್ತಿದ್ದಾರೆ. ಇದನ್ನೂ ಓದಿ: ತಮ್ಮದೇ ಹೆಸರಿನ ಚಿತ್ರದಲ್ಲಿ ತೆಲುಗಿನ ಸ್ಟಾರ್ ನಟ ಬಾಲಕೃಷ್ಣ

    ಜೀವನದಲ್ಲಿ ಸಾಕಷ್ಟು ಸವಾಲುಗಳನ್ನ ಎದುರಿಸಿದ ಬಳಿಕ ಮದುವೆ, ಸಂಸಾರ ಅಂತಾ ಬ್ಯುಸಿಯಿದ್ದ `ರಾಟೆ’ ನಟಿ ಶೃತಿ ಪವರ್‌ಫುಲ್ ಪಾತ್ರಗಳ ಮೂಲಕ ಕಮಾಲ್ ಮಾಡಲು ಮತ್ತೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

    ಇನ್ನು ಶೃತಿ ಬತ್ತಳಿಕೆಯಲ್ಲಿ ಇದೀಗ ಅಧಿಕೃತವಾಗಿ ನಾಲ್ಕು ಸಿನಿಮಾಗಳಿವೆ. `ಸಾಲುಗಾರ’, `ಸ್ಟ್ರಾಬೆರಿ’, ಡಾಲಿ ಜೊತೆ `ಹೆಡ್‌ಬುಷ್’, `ಏಜೆಂಜ್ ಕನ್ನಾಯಿರಾಮ್’, ಜತೆಗೆ ಶಂಕರ್ ಎನ್. ಸೊಂಡೂರ್ ನಿರ್ದೇಶನದ ಹೆಸರಿಡದ ಚಿತ್ರದಲ್ಲಿ ಶೃತಿ ನಾಯಕಿಯಾಗಿ ಕಾಣಿಸಿಕೊಳ್ತಿದ್ದಾರೆ. ಈ ವರ್ಷದ ಕೊನೆಯಿಂದ ಶೃತಿ ಮೇನಿಯಾ ಶುರುವಾಗೋದು ಗ್ಯಾರೆಂಟಿ.

  • ಅಪ್ಪು ‘ಜೇಮ್ಸ್’ ನಂತರ ‘ಗಂಧದ ಗುಡಿ’ಗಾಗಿ ಸಿದ್ಧವಾಗ್ತಿವೆ ಕರುನಾಡ ಥಿಯೇಟರ್ಸ್‌ 

    ಅಪ್ಪು ‘ಜೇಮ್ಸ್’ ನಂತರ ‘ಗಂಧದ ಗುಡಿ’ಗಾಗಿ ಸಿದ್ಧವಾಗ್ತಿವೆ ಕರುನಾಡ ಥಿಯೇಟರ್ಸ್‌ 

    ರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್ ನಟನೆಯ `ಜೇಮ್ಸ್’ ಸಿನಿಮಾ ರಿಲೀಸ್ ಆಗಿ ೨೫ನೇ ದಿನದತ್ತ ಮುನ್ನುಗ್ಗುತ್ತಿದೆ. ಪುನೀತ್ ಅವರ ಕೊನೆಯ `ಜೇಮ್ಸ್’ ಚಿತ್ರವನ್ನ ಹಬ್ಬದ ರೀತಿಯಲ್ಲಿ ಅಭಿಮಾನಿಗಳು ಸೆಲೆಬ್ರೇಟ್ ಮಾಡಿದ್ದಾಯ್ತು. ಈಗ ಅಪ್ಪು ಕನಸಿನ ಪ್ರಾಜೆಕ್ಟ್ `ಗಂಧದ ಗುಡಿ’ ತೆರೆಗೆ ಅಬ್ಬರಿಸಲು ಸಿದ್ದವಾಗ್ತಿದೆ.

    ಸ್ಯಾಂಡಲ್‌ವುಡ್‌ನ ಪವರ್‌ಸ್ಟಾರ್ ಪುನೀತ್ ಮತ್ತು ಅಮೋಘ ವರ್ಷ ಕಾಂಬಿನೇಷನ್‌ನಲ್ಲಿ ಮೂಡಿ ಬಂದಿರೋ ಈ `ಗಂಧದ ಗುಡಿ’ ರಿಲೀಸ್‌ಗೆ ಕೌಂಟ್‌ಡೌನ್ ಶುರುವಾಗಿದೆ. ಪುನೀತ್, ಕರ್ನಾಟಕದ ಹಲವು ಜಾಗಗಳಿಗೆ ಭೇಟಿ ನೀಡಿ, ಬೆಟ್ಟ ಗುಡ್ಡ ಪರಿಸರಗಳ ಮಧ್ಯೆ ಚಿತ್ರೀಸಿರೋ ಈ ಚಿತ್ರ, ಇದೇ ಮೇ ತಿಂಗಳ ಕೊನೆಯ ವಾರದಲ್ಲಿ ತೆರೆಗೆ ಬದರಲು ಸಿದ್ದವಾಗಿದೆ ಎನ್ನುತ್ತಿದೆ ಗಾಂಧಿನಗರದ ಮೂಲಗಳು.

    ಈ ಚಿತ್ರ ನೈಜವಾಗಿ ಮೂಡಿ ಬರಬೇಕು ಎಂದು ಮೇಕಪ್ ಹಚ್ಚದೇ ಪುನೀತ್ ನಟಿಸಿರೋ ಸಿನಿಮಾವಿದು. `ಗಂಧದ ಗುಡಿ’ ಟೈಟಲ್ ಹೊತ್ತು ಕರ್ನಾಟಕದ ಮೂಲೆ ಮೂಲೆಯಲ್ಲೂ ಶೂಟ್ ಮಾಡಿ ಕರುನಾಡ ಬಗ್ಗೆ ಡಾಕ್ಯುಮೆಂಟರಿ ಸಿದ್ದಪಡಿಸಿ ಹಸಿರಿನ ಕಥೆಯನ್ನು ಹೇಳೋಕೆ ಹೊರಟಿದ್ದಾರೆ ನಿರ್ದೇಶಕ ಅಮೋಘ ವರ್ಷ. ಈ ಡಾಕ್ಯುಮೆಂಟರಿ ಮಾದರಿಯ ಈ ಸಿನಿಮಾ ಪಿಆರ್‌ಕೆ ಪ್ರೋಡಕ್ಷನ್ ಮೂಲಕ ಅಪ್ಪು ಕನಸಿನ ಚಿತ್ರವಾಗಿ ತೆರೆಗೆ ಬರಲಿದೆ.ಇದನ್ನು ಓದಿ:ತೆಲುಗಿನ ನಟ ನಿತಿನ್ ಜೊತೆ ಭರಾಟೆ ಬೆಡಗಿ ಶ್ರೀಲೀಲಾ ರೊಮ್ಯಾನ್ಸ್

    ತಮ್ಮ ನೆಚ್ಚಿನ ಕಲಾವಿದ ನಟಿಸಿರೋ ಈ ಚಿತ್ರವನ್ನು ನೋಡೋದಕ್ಕೆ ಅಪ್ಪು ಫ್ಯಾನ್ಸ್ ಸಿದ್ಧರಾಗಿದ್ದಾರೆ. `ಜೇಮ್ಸ್’ ಸೂಪರ್ ಸಕ್ಸಸ್ ನಂತರ `ಗಂಧದ ಗುಡಿ’ ಮೂವಿ, ಭಿನ್ನ ಕಾನ್ಸೆಪ್ಟ್ ಆಗಿ ನಿಲ್ಲುವುದರಲ್ಲಿ ಅನುಮಾನವೇ ಇಲ್ಲ. `ಜೇಮ್ಸ್’ ಚಿತ್ರ ನೋಡಿ ಕಣ್ತುಂಬಿಕೊAಡಿದ್ದ ಅಪ್ಪು ಅಭಿಮಾನಿಗಳು ಈಗ ಅಪ್ಪು ಕನಸಿನ ಸಿನಿಮಾ ನೋಡಲು ಕಾಂಟ್ ವೈಟ್ ಅನ್ನುತ್ತಿದ್ದಾರೆ.