Tag: kannada medium

  • ಆಟೋ ಚಾಲಕನ ಮಗ ಎಸ್‌ಎಸ್‌ಎಲ್‌ಸಿಯಲ್ಲಿ ರಾಜ್ಯಕ್ಕೆ ಪ್ರಥಮ

    ಆಟೋ ಚಾಲಕನ ಮಗ ಎಸ್‌ಎಸ್‌ಎಲ್‌ಸಿಯಲ್ಲಿ ರಾಜ್ಯಕ್ಕೆ ಪ್ರಥಮ

    ದಾವಣಗೆರೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ದಾವಣಗೆರೆಯ ಹರಿಹರ ತಾಲೂಕಿನ ಎಂಕೆಇಟಿ ಶಾಲೆಯ ಅಭಿಷೇಕ್‌ ಕನ್ನಡ ಮಾಧ್ಯಮದಲ್ಲಿ 625ಕ್ಕೆ 623 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ‌ ಸ್ಥಾನ ಪಡೆದುಕೊಂಡಿದ್ದಾನೆ.

    ಗುತ್ತೂರು ಗ್ರಾಮದ ಮಂಜುನಾಥ್ ಹಾಗೂ ನೇತ್ರಾವತಿ ಅವರ ಮೊದಲನೇ ಮಗ ಅಭಿಷೇಕ್ ಬಡತನಲ್ಲಿ ಬೆಳೆದು ಛಲದಿಂದ ಓದಿ ಈ ಸಾಧನೆ ಮಾಡಿದ್ದಾನೆ. ತಂದೆ ಅಟೋ‌ಚಾಲನೆ ಮಾಡುತ್ತಿದ್ದರೆ ತಾಯಿ ಕೂಲಿ‌ ಕೆಲಸ ಮಾಡಿಕೊಂಡು ಸಂಸಾರವನ್ನು ಸಾಗಿಸುತ್ತಿದ್ದಾರೆ. ಇವರ ಕಷ್ಟ ನೋಡಿದ ಅಭಿಷೇಕ್ ಅತ್ಯಂತ ಶ್ರಮವಹಿಸಿ ಓದಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾನೆ.

    ಮನೆಯಿಂದ‌ ಶಾಲೆಗೆ ಆರು ಕಿಲೋಮೀಟರ್ ಇದ್ದು ಅಷ್ಟು ದೂರ ಸೈಕಲ್‌ನಲ್ಲಿ ಹೋಗುತ್ತಿದ್ದ. ಮನೆಯ ಬಡತನವನ್ನು ನೋಡಿ ಗುತ್ತೂರು ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕಿ ಗೀತಾ ಈತನ ಓದಿನ ಖರ್ಚನ್ನು ಭರಿಸಿ ಎಂಕೆಇಟಿ ಪ್ರೌಢಶಾಲೆಗೆ ಸೇರಿಸಿದ್ದರು.
    ಇದನ್ನೂ ಓದಿ: ಎಸ್‌ಎಸ್‌ಎಲ್‌ಸಿ ರಿಸಲ್ಟ್‌ – ಈ ಬಾರಿ ಜಿಲ್ಲೆಗಳಿಗೆ ಗ್ರೇಡ್‌ ನೀಡಿದ್ದು ಯಾಕೆ?

    ಕನ್ನಡ 125, ಇಂಗ್ಲಿಷ್ 100, ಹಿಂದಿ 100, ಗಣಿತ 100, ವಿಜ್ಞಾನ 100 ಹಾಗೂ ಸಮಾಜ ವಿಜ್ಞಾನದಲ್ಲಿ 98 ಅಂಕಗಳನ್ನು ಅಭಿಷೇಕ್‌ ಪಡೆದುಕೊಂಡಿದ್ದಾನೆ. ‌625ಕ್ಕೆ 625 ತೆಗೆಯುವ ಕನಸು ಎರಡು ಅಂಕಗಳಲ್ಲಿ ಹೋಗಿದೆ. ಇಡೀ ರಾಜ್ಯಕ್ಕೆ ಪ್ರಥಮ ಬಂದರೂ ಎರಡು ಅಂಕ‌ ಮಿಸ್ ಮಾಡಿಕೊಂಡೆ ಎನ್ನುವ ನೋವು ಅಭಿಷೇಕ್‌ನಲ್ಲಿದೆ. ಮುಂದೆ ಪಿಯುಸಿಯಲ್ಲಿ ವಿಜ್ಞಾನ ತೆಗೆದುಕೊಂಡು‌‌ ಎಂಜಿನಿಯರ್ ಆಗುವ ಆಸೆ ಹೊರ ಹಾಕಿದ್ದಾ‌ನೆ. ಇದನ್ನೂ ಓದಿ: 6 ಮಂದಿಗೆ 625 ಅಂಕ – ಪೂರ್ಣ ಅಂಕ ಪಡೆದ ವಿದ್ಯಾರ್ಥಿಗಳ ಪಟ್ಟಿ

    ಇಡೀ ಶಾಲೆಗೆ ನೀನು ಲೀಡರ್ ಆಗಬೇಕು ಎಂದಾಗ, ಇಲ್ಲ ಸರ್ ನಾನು ಓದಬೇಕು ನನ್ನ ಓದಿಗೆ ಅಡ್ಡವಾಗುತ್ತೆ ಎಂಬುದಾಗಿ ಅಭಿಷೇಕ್‌ ಹೇಳಿದ್ದ ಎಂದು ಶಿಕ್ಷಕರು ಹೇಳುತ್ತಾರೆ.

  • ಸರ್ಕಾರಿ ಶಾಲೆಯಲ್ಲಿ ಕನ್ನಡವೇ ಬೇಕು ಎನ್ನುತ್ತಿದ್ದಾರೆ ಮಾಜಿ ಸಿಎಂ..!

    ಸರ್ಕಾರಿ ಶಾಲೆಯಲ್ಲಿ ಕನ್ನಡವೇ ಬೇಕು ಎನ್ನುತ್ತಿದ್ದಾರೆ ಮಾಜಿ ಸಿಎಂ..!

    – ಸಿದ್ದರಾಮಯ್ಯ ಮೊಮ್ಮಕ್ಕಳು ಓದುತ್ತಿರೋದು ಇಂಗ್ಲಿಷ್ ಶಾಲೆಗಳಲ್ಲೇ

    ಬೆಂಗಳೂರು: ಸರ್ಕಾರಿ ಶಾಲೆಯಲ್ಲಿ ಇಂಗ್ಲೀಷ್ ಮಾಧ್ಯಮ ಬೇಡ. ಕನ್ನಡವೇ ಮಾಧ್ಯಮ ಆಗಿರಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾದ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ಕನ್ನಡವೇ ಸೌರ್ವಭಾಮ, ಇಂಗ್ಲೀಷ್ ಮಾಧ್ಯಮಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವ `ಕನ್ನಡ ಮೇಷ್ಟ್ರು’ ಸಿದ್ದರಾಮಯ್ಯ ಅವರ ಕನ್ನಡ ಪ್ರೇಮದ ಅಸಲಿಯತ್ತು ಇಲ್ಲಿದೆ.

    ಹೌದು. ಸಿದ್ದರಾಮಯ್ಯನವರ ಮೊಮ್ಮಕ್ಕಳು ಇಂಗ್ಲೀಷ್ ಶಾಲೆಗಳಲ್ಲೇ ಓದುತ್ತಿದ್ದಾರೆ. ಹಿರಿಯ ಮಗ ರಾಕೇಶ್ ಪುತ್ರ ಧವನ್ ಪುತ್ರ ಕೆನೆಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಓದುತ್ತಿದ್ದಾರೆ. ಈ ಶಾಲೆಯಲ್ಲಿ ವರ್ಷಕ್ಕೆ ಡೊನೇಶನ್ 5ರಿಂದ 6 ಲಕ್ಷ ರೂಪಾಯಿ ಇರುತ್ತದೆ. ಇನ್ನು ಸಿದ್ದರಾಮಯ್ಯರ ಎರಡನೇ ಮೊಮ್ಮಗಳು ತನ್ಮಯಾ ಕೂಡ ಇಂಗ್ಲೀಷ್ ಮೀಡಿಯಾಂನಲ್ಲೇ ಓದುತ್ತಿದ್ದು, ನ್ಯಾಷನಲ್ ಪಬ್ಲಿಕ್ ಸ್ಕೂಲ್‍ನಲ್ಲಿ ತನ್ಮಯಾ ವಿದ್ಯಾರ್ಥಿಯಾಗಿದ್ದಾರೆ.

    ಒಟ್ಟಿನಲ್ಲಿ ಸಿದ್ದರಾಮಯ್ಯನವರ ಮೊಮ್ಮಕ್ಕಳೆಲ್ಲಾ ಇಂಗ್ಲೀಷ್ ಮೀಡಿಯಂನಲ್ಲಿ ಓದಬಹುದು. ಬಡವರ ಮಕ್ಕಳಿಗೆ ಇಂಗ್ಲೀಷ್ ಮೀಡಿಯಂ ಬೇಡ್ವಾ..? ಸರ್ಕಾರಿ ಶಾಲೆಯಲ್ಲಿ ಇಂಗ್ಲೀಷ್ ಮೀಡಿಯಾಂನಲ್ಲಿ ಬಡವರ ಮಕ್ಕಳು ಓದಬಾರದಾ..? ನಿಮ್ಮ ಮೊಮ್ಮಕಳಿಗೊಂದು ನ್ಯಾಯ, ಬೇರೆಯವರಿಗೊಂದು ನ್ಯಾಯನಾ ಎಂಬಂತಹ ಪ್ರಶ್ನೆಗಳು ಇದೀಗ ಜನಸಾಮಾನ್ಯರಲ್ಲಿ ಮೂಡಿದೆ.

    ಮುಖ್ಯಮಂತ್ರಿ ಕುಮಾರಸ್ವಾಮಿ ಸರ್ಕಾರ ಮುಂದಿನ ವರ್ಷದಿಂದ 1 ಸಾವಿರ ಆಂಗ್ಲ ಮಾಧ್ಯಮ ಶಾಲೆ ತೆರೆಯಬೇಕು ಅನ್ನೋ ನಿಲುವಿಗೆ ಸಿದ್ದರಾಮಯ್ಯನವರು ಕಳೆದ ಒಂದು ವಾರದಿಂದ ಭಾರೀ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಗಳನ್ನು ಮಾಡಿ, ಕರ್ನಾಟಕದಲ್ಲಿ ಕನ್ನಡವೇ ಅಂತಿಮ ಭಾಷೆಯಾಗಬೇಕು. ಭಾಷೆಯ ವಿಚಾರದಲ್ಲಿ ಸರ್ಕಾರಕ್ಕೆ ಆದ್ಯತೆ ಬೇಕು. ಹೀಗಾಗಿ ಈ ಶಾಲೆಗಳನ್ನು ತೆರೆಯದಂತೆ ನಾನು ಕುಮಾರಸ್ವಾಮಿಗಳಿಗೆ ಮನವಿ ಮಾಡುವುದಾಗಿ ತಿಳಿಸಿದ್ದರು. ಸದನದಲ್ಲಿಯೂ ಕನ್ನಡ ವಿಚಾರವಾಗಿ ಎಲ್ಲರ ಕಾಲೆಳೆಯುವ ಸಿದ್ದರಾಮಯ್ಯನವರು ತಮ್ಮ ಮೊಮ್ಮಕ್ಕಳನ್ನು ಇಂಗ್ಲಿಷ್ ಮೀಡಿಯಂಗೆ ಯಾಕೆ ಕಳುಹಿಸುತ್ತಾರೆ ಎಂಬ ಪ್ರಶ್ನೆಗಳು ಇದೀಗ ತೀವ್ರ ಚರ್ಚೆಯಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv