Tag: Kannada Nameplate

  • ಸರ್ಕಾರದ ಎಲ್ಲಾ ಇಲಾಖೆಗಳ ನಾಮಫಲಕವನ್ನ ಕಡ್ಡಾಯವಾಗಿ ಕನ್ನಡದಲ್ಲೇ ಪ್ರದರ್ಶಿಸಬೇಕು – CS ಆದೇಶ

    ಸರ್ಕಾರದ ಎಲ್ಲಾ ಇಲಾಖೆಗಳ ನಾಮಫಲಕವನ್ನ ಕಡ್ಡಾಯವಾಗಿ ಕನ್ನಡದಲ್ಲೇ ಪ್ರದರ್ಶಿಸಬೇಕು – CS ಆದೇಶ

    ಬೆಂಗಳೂರು: ಸರ್ಕಾರದ ಎಲ್ಲಾ ಇಲಾಖೆಗಳ ನಾಮಫಲಕ ಕಡ್ಡಾಯವಾಗಿ ಕನ್ನಡದಲ್ಲಿ (Kannada Nameplate) ಇರುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ (Shalini Rajneesh) ಆದೇಶ ಹೊರಡಿಸಿದ್ದಾರೆ.

    ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿರುತ್ತದೆ. ರಾಜ್ಯದಲ್ಲಿ ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022 ಹಾಗೂ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಅಧಿನಿಯಮ, 2024 ಜಾರಿಗೆ ಬಂದಿದೆ. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022 ರನ್ವಯ ಕನ್ನಡ ಭಾಷೆಯು ರಾಜ್ಯದ ಹಾಗೂ ಸ್ಥಳೀಯ ಪ್ರಾಧಿಕಾರದ ಅಧಿಕೃತ ಭಾಷೆಯಾಗಿದೆ. ಆದ್ದರಿಂದ, ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಇಲಾಖೆಗಳ ಅಧೀನದಲ್ಲಿ ಬರುವ ಎಲ್ಲಾ ಕ್ಷೇತ್ರ ಇಲಾಖೆಗಳಲ್ಲಿ, ಆಯುಕ್ತಾಲಯ, ನಿರ್ದೇಶನಾಲಯ, ನಿಗಮ, ಮಂಡಳಿ, ಪ್ರಾಧಿಕಾರಗಳ ಆವರಣಗಳಲ್ಲಿನ ಹೆಸರು, ಪದನಾಮ, ಸೇವಾ ಅವಧಿಯ ನಾಮಫಲಕಗಳು, ಮಾರ್ಗಗಳ ಸೂಚನಾ ಫಲಕಗಳು, ಇನ್ನಿತರೆ ಯಾವುದೇ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಟೀಚರ್ ಹೊಡೆದ್ರು ಅಂತಾ ವಿದ್ಯಾರ್ಥಿನಿ ಆತ್ಮಹತ್ಯೆ ಯತ್ನ – ಶಾಲಾ ಬಿಲ್ಡಿಂಗ್‌ನ 3ನೇ ಫ್ಲೋರ್‌ನಿಂದ ಏಕಾಏಕಿ ಜಿಗಿದ ವಿದ್ಯಾರ್ಥಿನಿ!

    ತೀರಾ ಅನಿವಾರ್ಯವಿದ್ದಲ್ಲಿ ಮಾತ್ರ ಕಡ್ಡಾಯವಾಗಿ ಕನ್ನಡ ಭಾಷೆಯು ಶೇ.60 ರಷ್ಟು ನಾಮಫಲಕದ ಮೇಲ್ಬಾಗದಲ್ಲಿರುವಂತೆ ಹಾಗೂ ಶೇ.40 ರಷ್ಟು ಆಂಗ್ಲಭಾಷೆಯಲ್ಲಿ ಪ್ರದರ್ಶಿಸಲು ಅಗತ್ಯ ಕ್ರಮ ವಹಿಸುವಂತೆ ಸರ್ಕಾರದ ‌ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಉಕ್ರೇನ್‌ಗೆ ಮೋದಿ ಭೇಟಿ – ಝೆಲೆನ್ಸ್ಕಿ ಜೊತೆ ಮಾತುಕತೆ; ಯುದ್ಧದಲ್ಲಿ ಮಡಿದ ಮಕ್ಕಳ ಸ್ಮಾರಕ ವೀಕ್ಷಿಸಿದ ಪ್ರಧಾನಿ!

  • ಕರ್ನಾಟಕದಲ್ಲಿ ಕನ್ನಡ ಕಡ್ಡಾಯಕ್ಕೂ ಕ್ಯಾತೆ – ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಮಹಾರಾಷ್ಟ್ರ ಸರ್ಕಾರ ತೀರ್ಮಾನ

    ಕರ್ನಾಟಕದಲ್ಲಿ ಕನ್ನಡ ಕಡ್ಡಾಯಕ್ಕೂ ಕ್ಯಾತೆ – ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಮಹಾರಾಷ್ಟ್ರ ಸರ್ಕಾರ ತೀರ್ಮಾನ

    ಮುಂಬೈ/ಬೆಳಗಾವಿ: ಕನ್ನಡ ನಾಮಫಲಕ (Kannada Nameplate) ವಿಚಾರವಾಗಿ ಕರ್ನಾಟಕದೊಂದಿಗೆ ಮಹಾರಾಷ್ಟ್ರ ಸರ್ಕಾರ ಮತ್ತೊಮ್ಮೆ ಕ್ಯಾತೆಗೆ ಮುಂದಾಗಿದೆ.

    ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಮಾಡಿದ ರಾಜ್ಯ ಸರ್ಕಾರದ ತೀರ್ಮಾನವನ್ನು ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಪ್ರಶ್ನಿಸಲು ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಸರ್ಕಾರ ಸಜ್ಜಾಗ್ತಿದೆ. ಇದನ್ನೂ ಓದಿ: Loksabha Election 2024: ದೆಹಲಿಯಲ್ಲಿ ಕೈಗೆ 3 ಸ್ಥಾನ ಬಿಟ್ಟು ಕೊಟ್ಟು 4 ಸ್ಥಾನಗಳಲ್ಲಿ AAP ಸ್ಪರ್ಧೆ?

    ವಿಧಾನ ಪರಿಷತ್‌ನಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ಮಸೂದೆ ಅಂಗೀಕರಿಸಿದ ಮರುದಿನವೇ ಅಂದ್ರೆ ಮುಂಬೈನಲ್ಲಿ ಸಭೆ ನಡೆಸಿದ ಮಹಾರಾಷ್ಟ್ರ ಗಡಿ ಉಸ್ತುವಾರಿ ಸಚಿವ, ಸುಪ್ರೀಂ ಕೋರ್ಟ್ ಮೊರೆ ಹೋಗಲು ತೀರ್ಮಾನಿಸಿದ್ದಾರೆ.

    ಇದಕ್ಕೆ ಕನ್ನಡ ಸಂಸ್ಕೃತಿ ಸಚಿವರು ಪ್ರತಿಕ್ರಿಯಿಸಿ, ನಾವೇನು ಮಹಾರಾಷ್ಟ್ರದಲ್ಲಿ (Maharashtra) ಕನ್ನಡ ಬೋರ್ಡ್ ಹಾಕಿ ಅಂತಾ ಹೇಳಿಲ್ವಲ್ಲ ಎಂದಿದ್ದಾರೆ. ಮಹಾರಾಷ್ಟ್ರದವರು ಏನೇ ಕ್ಯಾತೆ ತೆಗೆದರೂ, ನಾಡು ನುಡಿ ಜಲದ ವಿಚಾರದಲ್ಲಿ ರಾಜೀ ಇಲ್ಲ, ನಮ್ಮ ರಾಜ್ಯದ ತಂಟೆಗೆ ಬಂದ್ರೆ ಹುಷಾರ್ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: IPL ಸ್ಟಾರ್‌ ಜೊತೆ ಗೆಳೆತನ ಹೊಂದಿದ್ದ ರೂಪದರ್ಶಿ ನಿಗೂಢ ಸಾವು – ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌!

    ಇನ್ನೂ, ವಿಧೇಯಕಕ್ಕೆ ರಾಜ್ಯಪಾಲರು ಸಹಿ ಹಾಕಿದ ತಕ್ಷಣವೇ ನಾಮಫಲಕದಲ್ಲಿ ಕನ್ನಡ ಕಡ್ಡಾಯ ನಿಯಮವನ್ನು ಬೆಂಗಳೂರಲ್ಲಿ ಜಾರಿ ಮಾಡುವಂತೆ ಬಿಬಿಎಂಪಿಗೆ ಶಿವರಾಜ್ ತಂಗಡಗಿ ಸೂಚಿಸಿದ್ದಾರೆ. ಇದನ್ನೂ ಓದಿ: 40,000 ರೈಲು ಬೋಗಿಗಳಿಗೆ ಸಿಗಲಿದೆ ವಂದೇ ಭಾರತ್‌ನಂತೆ ಹೈಟೆಕ್‌ ಸ್ಪರ್ಶ – ಏನೆಲ್ಲಾ ವಿಶೇಷತೆ ಇರಲಿದೆ?  

  • ಮಾಡಿದ್ದ ತಪ್ಪನ್ನು ತಿದ್ದಿಕೊಂಡ ಬಿಬಿಎಂಪಿ

    ಮಾಡಿದ್ದ ತಪ್ಪನ್ನು ತಿದ್ದಿಕೊಂಡ ಬಿಬಿಎಂಪಿ

    ಬೆಂಗಳೂರು: ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಿದ ಸಂದರ್ಭದಲ್ಲಿ, ಬಿಬಿಎಂಪಿ ಹಾಕಿದ್ದ ಸ್ವಾಗತ ಫಲಕದಲ್ಲಿ ಕನ್ನಡವನ್ನು ಬಳಸದೆ ಸುದ್ದಿಯಾಗಿತ್ತು.

    ಮೋದಿ ಅವರು ಕಳೆದ ವಾರ ರಾಜಭವನದಲ್ಲಿ ಒಂದು ದಿನ ವಾಸ್ತವ್ಯ ಹೂಡಿದ್ದರು. ಆ ಸಮಯದಲ್ಲಿ ಬಿಬಿಎಂಪಿ ರಾಜಭವನದ ಹೊರಭಾಗದಲ್ಲಿ ದೊಡ್ಡದಾಗಿ ಹೂವಿನಿಂದ ಅಲಂಕಾರ ಮಾಡಿದ್ದ ಸ್ವಾಗತ ಫಲಕವನ್ನ ಹಾಕಿತ್ತು. ಆ ಸ್ವಾಗತ ಫಲಕದಲ್ಲಿ ಕನ್ನಡವನ್ನೇ ಬಳಸದೇ ಇಂಗ್ಲಿಷ್‍ನಲ್ಲಿ ಮೋದಿಗೆ ವೆಲ್‍ಕಮ್ ಹೇಳಿತ್ತು. ಆ ಸ್ವಾಗತ ಫಲಕದ ಫೋಟೋ ಸಿಕ್ಕಪಟ್ಟೆ ವೈರಲ್ ಆಗಿ ಬಿಬಿಎಂಪಿಯ ಕನ್ನಡ ದ್ರೋಹಿ ಕೆಲಸಕ್ಕೆ ಕನ್ನಡಿಗರು ಛೀಮಾರಿ ಹಾಕಿದ್ದರು.

    ಈ ಬಗ್ಗೆ ಪಬ್ಲಿಕ್ ಟಿವಿಯಲ್ಲಿ ವರದಿ ಸಹ ಬಿತ್ತರವಾಗಿತ್ತು. ಈಗ ಎಚ್ಚೆತ್ತಿರೋ ಬಿಬಿಎಂಪಿ ರಾಜ್ಯಕ್ಕೆ ಇಂದು ಆಗಮಿಸುತ್ತಿರೋ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರಿಗೆ ಕನ್ನಡದಲ್ಲೇ ಸ್ವಾಗತ ಫಲಕ ಹಾಕಿದ್ದಾರೆ. ಬೆಂಗಳೂರಿಗೆ ಆಗಮಿಸುತ್ತಿರೋ ಉಪರಾಷ್ಟ್ರಪತಿಗಳಿಗೆ ರಾಜಭವನದ ಮುಂದೆ ದೊಡ್ಡ ಹೂವಿನ ಸ್ವಾಗತ ಫಲಕ ಹಾಕಿರೋ ಬಿಬಿಎಂಪಿ ಸಂಪೂರ್ಣವಾಗಿ ಕನ್ನಡದಲ್ಲೇ ಸ್ವಾಗತ ಫಲಕ ಹಾಕಿ ತನ್ನ ಹಿಂದಿನ ತಪ್ಪನ್ನು ತಿದ್ದಿಕೊಂಡಿದೆ.

  • ಕನ್ನಡ ಕಡ್ಡಾಯ ಎನ್ನುವ ಬಿಬಿಎಂಪಿ ನೋಟಿಸ್ ಇಂಗ್ಲೀಷ್‌ಮಯ

    ಕನ್ನಡ ಕಡ್ಡಾಯ ಎನ್ನುವ ಬಿಬಿಎಂಪಿ ನೋಟಿಸ್ ಇಂಗ್ಲೀಷ್‌ಮಯ

    ಬೆಂಗಳೂರು: ಹೇಳುವುದೊಂದು ಮಾಡೋದು ಮತ್ತೊಂದು ಎಂಬ ಮಾತಿಗೆ ಬಿಬಿಎಂಪಿ ಮಾಡುವ ಕೆಲಸ ಸರಿಯಾಗಿ ಹೋಲಿಕೆಯಾಗುತ್ತದೆ. ಎಲ್ಲರಿಗೂ ಕನ್ನಡ ಕಡ್ಡಾಯ, ನಾಮಫಲಕದಲ್ಲಿ ಕನ್ನಡಕ್ಕೆ ಅಗ್ರಸ್ಥಾನ ನೀಡಬೇಕೆಂದು ಹೇಳುವ ಪಾಲಿಕೆಯೇ ಇಂಗ್ಲಿಷ್‍ನಲ್ಲಿ ನೋಟಿಸ್ ಕೊಟ್ಟು ಎಡವಟ್ಟು ಮಾಡಿದೆ.

    ಅಕ್ರಮ ಮಳಿಗೆಗಳ ತೆರವಿಗೆ ಕೆ.ಆರ್ ಮಾರುಕಟ್ಟೆಯಲ್ಲಿ ನೋಟಿಸ್ ನೀಡುವಾಗ ಬಿಬಿಎಂಪಿ ಎಡವಟ್ಟು ಮಾಡಿದೆ. ಇಂಗ್ಲಿಷ್‍ನಲ್ಲಿ ಪತ್ರ ಬರೆದು ಈಗ ಆಕ್ಷೇಪಕ್ಕೆ ಸಿಲುಕಿದೆ. ವೆಸ್ಟ್ ಸಹಾಯಕ ಕಂದಾಯಾಧಿಕಾರಿಗೆ ನೋಟಿಸ್ ನೀಡುವಾಗ ಇಡೀ ಪತ್ರವನ್ನ ಇಂಗ್ಲಿಷ್‍ನಲ್ಲಿ ಬರೆಯಲಾಗಿದೆ. ಒಂದೆಡೆ ಜನರಿಗೆ ಕನ್ನಡದ ಪಾಠ ಮಾಡೋ ಪಾಲಿಕೆ ಈಗ ತಾನೇ ತಪ್ಪು ಮಾಡಿ ಪೇಚಿಗೆ ಸಿಲುಕಿದೆ.

    ಈ ಹಿಂದೆ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಕನ್ನಡ ಭಾಷೆಗೆ ಅಗ್ರಸ್ಥಾನ ನೀಡುವ ವಿಚಾರವಾಗಿ ಎಫ್‍ಕೆಸಿಸಿಐ(ಫೆಡರೇಶನ್ ಆಫ್ ಕರ್ನಾಟಕ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ) ಬಿಬಿಎಂಪಿಗೆ ಪತ್ರ ಬರೆದಿತ್ತು. ಸದ್ಯ ಸಿಲಿಕಾನ್ ಸಿಟಿಯಲ್ಲಿ 10 ಸಾವಿರ ಕೈಗಾರಿಕೋದ್ಯಮ ಮತ್ತು 20 ಸಾವಿರ ವ್ಯಾಪಾರೋದ್ಯಮಿಗಳು ಈ ನಿಯಮಕ್ಕೆ ಒಳಪಡಲಿದ್ದಾರೆ. ಹೀಗಾಗಿ ವಾಣಿಜ್ಯ ಮಳಿಗೆಗಳು ಕನ್ನಡದಲ್ಲಿ ನಾಮಫಲಕ ಅಳವಡಿಕೆಗೆ ಏಪ್ರಿಲ್ 30ರವರೆಗೂ ಸಮಯಾವಕಾಶ ಬೇಕಾಗಿದೆ ಎಂದು ಬಿಬಿಎಂಪಿಗೆ ಎಫ್‍ಕೆಸಿಸಿಐ ಪತ್ರದಲ್ಲಿ ತಿಳಿಸಿತ್ತು.

    ಪತ್ರದಲ್ಲಿ ಸಮಯಾವಕಾಶದ ಜೊತೆಗೆ ಬಿಬಿಎಂಪಿಗೆ ಚುರುಕು ಸಹ ಮುಟ್ಟಿಸಿತ್ತು. ನಗರದಲ್ಲಿ ರಸ್ತೆ ಗುಂಡಿ ಸಮಸ್ಯೆ, ಕಸ ನಿರ್ವಹಣೆ, ಟ್ರಾಫಿಕ್ ಸಮಸ್ಯೆ, ಕಳಪೆ ಕಾಮಗಾರಿ ಒತ್ತಡ, ಮಳೆ ನೀರು ನಿರ್ವಹಣೆ ಹೀಗೆ ಸಮಸ್ಯೆಗಳ ಪಟ್ಟಿ ಮಾಡಿ, ಇದನ್ನು ಬಿಬಿಎಂಪಿ ಸೂಕ್ತವಾಗಿ ನಿರ್ವಹಿಸಬೇಕಾಗಿದೆ. ಅಲ್ಲದೆ ಬಿಬಿಎಂಪಿ ಕನ್ನಡ ನಾಮಫಲಕ ಅಳವಡಿಕೆ ಹೆಸರಲ್ಲಿ ಕಿರುಕುಳ ಸೃಷ್ಟಿಸಬಾರದೆಂದು ಎಫ್‍ಕೆಸಿಸಿಐ ಪತ್ರದಲ್ಲಿ ಉಲ್ಲೇಖಿಸಿತ್ತು.