Tag: Kannada Organisation

  • Karnataka Bandh| ಮೈಸೂರಲ್ಲಿ ಪ್ರತಿಭಟನಾಕಾರರು ಪೊಲೀಸರ ವಶಕ್ಕೆ

    Karnataka Bandh| ಮೈಸೂರಲ್ಲಿ ಪ್ರತಿಭಟನಾಕಾರರು ಪೊಲೀಸರ ವಶಕ್ಕೆ

    – ಎರಡು ತಾಸು ಬಸ್ ಸಂಚಾರದಲ್ಲಿ ವ್ಯತ್ಯಯ

    ಮೈಸೂರು: ಕರ್ನಾಟಕ ಬಂದ್ (Karnataka Bandh) ಹಿನ್ನೆಲೆ ಮೈಸೂರಿನಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು (KSRTC Bus) ತಡೆದು ಪ್ರತಿಭಟನೆ ನಡೆಸುತ್ತಿದ್ದ ಕನ್ನಡ ಪರ ಸಂಘಟನೆಗಳ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಬಸ್‌ಗಳಿಗೆ ಅಡ್ಡಲಾಗಿ ಪ್ರತಿಭಟನೆ ನಡೆಸಲಾಗುತ್ತಿತ್ತು. ಕನ್ನಡ ಪರ ಸಂಘಟನೆಗಳ ಪ್ರತಿಭಟನೆಯಿಂದಾಗಿ ಎರಡು ತಾಸು ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಈ ಹಿನ್ನೆಲೆ ಪೊಲೀಸರು ಮೈಸೂರು ಕೇಂದ್ರೀಯ ಬಸ್ ನಿಲ್ದಾಣದ ಮುಂದೆ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಅಭಿಮಾನಿಗಳೇ ನಮ್ಮನೆ ದೇವ್ರು – ಎರಡು ಕೈ ಜೋಡಿಸಿ ಪಾಟಿದಾರ್‌ ಕೃತಜ್ಞತೆ

    ಮೈಸೂರು (Mysuru) ಗ್ರಾಮಾಂತರ ಬಸ್ ನಿಲ್ದಾಣದ ಎರಡು ಭಾಗಗಳಲ್ಲಿ ಪ್ರತಿಭಟನೆ ಮಾಡುತ್ತಿದ್ದ ಎಲ್ಲಾ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿದೆ. ಸದ್ಯ ಬಸ್ ಸಂಚಾರ ವ್ಯವಸ್ಥೆ ಸಹಜ ಸ್ಥಿತಿಗೆ ಮರಳಿದೆ. ಇದನ್ನೂ ಓದಿ: ಕರ್ನಾಟಕ ಬಂದ್ ಎಫೆಕ್ಟ್ – ಸ್ಯಾಟಲೈಟ್, ಮೆಜೆಸ್ಟಿಕ್‌ನಲ್ಲಿ ಪ್ರಯಾಣಿಕರ ಸಂಖ್ಯೆ ಇಳಿಕೆ

  • ಮಾರ್ಚ್ 22ರ ಕರ್ನಾಟಕ ಬಂದ್‌ಗೆ ಸರ್ಕಾರದ ಬೆಂಬಲ ಇಲ್ಲ: ಡಿಕೆಶಿ

    ಮಾರ್ಚ್ 22ರ ಕರ್ನಾಟಕ ಬಂದ್‌ಗೆ ಸರ್ಕಾರದ ಬೆಂಬಲ ಇಲ್ಲ: ಡಿಕೆಶಿ

    ಬೆಂಗಳೂರು: ಮಾರ್ಚ್ 22 ರಂದು ಕನ್ನಡ ಸಂಘಟನೆಗಳು (Kannada Organisations) ಕರೆ ಕೊಟ್ಟಿರುವ ಕರ್ನಾಟಕ ಬಂದ್‌ಗೆ (Karnataka Bundh) ಸರ್ಕಾರದ ಬೆಂಬಲ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ.

    ವಿಧಾನ ಪರಿಷತ್ ಕಲಾಪದ ವೇಳೆ ವಿಪಕ್ಷ ನಾಯಕ ನಾರಾಯಣಸ್ವಾಮಿ ವಿಷಯ ಪ್ರಸ್ತಾಪ ಮಾಡಿದರು. ಮಾರ್ಚ್ 22ರಂದು ಕನ್ನಡ ಸಂಘಟನೆಗಳು ಬಂದ್‌ಗೆ ಕರೆ ಕೊಟ್ಟಿದ್ದಾರೆ. ಮಾರ್ಚ್ 22ರಂದು ಎಸ್‌ಎಸ್‌ಎಲ್‌ಸಿ ಸೇರಿ ಅನೇಕ ಪರೀಕ್ಷೆಗಳು ನಡೆಯಲಿವೆ. ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಇದರಿಂದ ಮಕ್ಕಳಿಗಳು ಭಯ ಭೀತರಾಗಿದ್ದರು. ಸರ್ಕಾರ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯ ಮಾಡಿದರು. ಇದನ್ನೂ ಓದಿ: ಛತ್ತೀಸ್‌ಗಢ – ಪ್ರತ್ಯೇಕ ಪ್ರಕರಣದಲ್ಲಿ 22 ನಕ್ಸಲರ ಎನ್‌ಕೌಂಟರ್

    ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಉತ್ತರ ನೀಡಿ ಸದ್ಯಕ್ಕೆ ಈ ಬಂದ್ ಅವಶ್ಯಕತೆ ಇರಲಿಲ್ಲ. ಸಂಘಟನೆಗಳು ಸರ್ಕಾರದ ಜೊತೆ ಮಾತಾಡಬೇಕಿತ್ತು. ನಾನು ಕೂಡಾ ಮಾರ್ಚ್ 22ರಂದು ವರ್ಲ್ಡ್ ವಾಟರ್ ಡೇ ಮಾಡಬೇಕು ಅಂತ ಇದ್ದೆ. ಬಂದ್‌ಗೆ ನಾವು ಬೆಂಬಲ ಕೊಡಲ್ಲ. ನಾವು ಬಂದ್ ಮಾಡೋರಿಗೆ ತಿಳುವಳಿಕೆ ಕೊಡುತ್ತೇವೆ. ಮಕ್ಕಳಿಗೆ ಎಕ್ಸಾಂ ಶುರುವಾಗಿದೆ. ಅಧಿಕಾರಿಗಳ ಜೊತೆ ಮಾತಾಡಿ ಮತ್ತೊಮ್ಮೆ ಹೇಳಿಕೆ ಕೊಡೋದಾಗಿ ತಿಳಿಸಿದರು. ಇದನ್ನೂ ಓದಿ: ಯುಜಿಸಿಇಟಿ ಪರೀಕ್ಷೆ ನಂತರ ತಿದ್ದುಪಡಿಗೆ ಅವಕಾಶ: ಕೆಇಎ