Tag: Kannada Organization

  • ಕರ್ನಾಟಕಕ್ಕೆ ಮಹದಾಯಿ ನೀರು ಬಿಡಲ್ಲ ಎಂದ ಗೋವಾ ಕಾಂಗ್ರೆಸ್ – ಕೈ ನಾಯಕರ ಮನೆಗೆ ಮುತ್ತಿಗೆ

    ಕರ್ನಾಟಕಕ್ಕೆ ಮಹದಾಯಿ ನೀರು ಬಿಡಲ್ಲ ಎಂದ ಗೋವಾ ಕಾಂಗ್ರೆಸ್ – ಕೈ ನಾಯಕರ ಮನೆಗೆ ಮುತ್ತಿಗೆ

    ಬೆಂಗಳೂರು: ಮಹದಾಯಿ ನೀರನ್ನು ಗೋವಾಗೆ ಹರಿಸುವ ಭರವಸೆಯನ್ನು ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಬಿಡುಗಡೆ ಮಾಡಿದೆ. ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕನ್ನಡ ಪರ ಸಂಘಟನೆಗಳು ಕಾಂಗ್ರೆಸ್ ನಾಯಕರ ಮನೆಗಳಿಗೆ ಮುತ್ತಿಗೆ ಹಾಕಿವೆ.

    ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿಕೆಶಿ ಮನೆಗೆ ಮುತ್ತಿಗೆ ಹಾಕಿರುವ ಕನ್ನಡ ಪರ ಸಂಘಟನೆಗಳು ಕಾಂಗ್ರೆಸ್ ಇಬ್ಬಗೆ ನೀತಿ ಅನುಸರಿಸುತ್ತಿದೆ. ಇಲ್ಲಿ ಕಾಂಗ್ರೆಸ್ ಕಾವೇರಿಗಾಗಿ ನಮ್ಮ ನೀರು ನಮ್ಮ ಹಕ್ಕು ಎಂದು ಪಾದಯಾತ್ರೆ ಮಾಡುತ್ತದೆ. ಗೋವಾದಲ್ಲಿ ಮಹದಾಯಿಯನ್ನು ಅವರಿಗೆ ನೀಡುವ ಭರವಸೆ ನೀಡಿದೆ ಎಂದು ಕಿಡಿಕಾರಿದೆ.

    ಸಿದ್ದರಾಮಯ್ಯ ಮನೆ ಮುಂದೆ ಹೈಡ್ರಾಮಾ: ಸಿದ್ದರಾಮಯ್ಯನ ಮನೆ ಮುಂದೆ ಮುತ್ತಿಗೆ ಹಾಕಿದ ಪ್ರತಿಭಟನಾ ಮುಖಂಡರನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾದರು. ಈ ವೇಳೆ ಹೊಯ್ಸಳ ವಾಹನಕ್ಕೆ ಪ್ರತಿಭಟನಾಕಾರರು ಅಡ್ಡ ಮಲಗಿ ಆಕ್ರೋಶ ವ್ಯಕ್ತಪಡಿಸಿದರು. ಜೊತೆಗೆ ಮಹಿಳಾ ಕಾರ್ಯಕರ್ತರು ಹೊಯ್ಸಳ ಕಾರಿಗೆ ಅಡ್ಡ ನಿಂತಿರು.

    ಈ ಬಗ್ಗೆ ಕನ್ನಡಪರ ಸಂಘಟನೆಯ ರವಿಶೆಟ್ಟಿ ಮಾತನಾಡಿ, ಇವತ್ತು ಕಾಂಗ್ರೆಸ್ ಇಬ್ಬಗೆ ನೀತಿ ಪಾಲಿಸುತ್ತಿದೆ. ಗೋವಾ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಕರ್ನಾಟಕಕ್ಕೆ ಒಂದು ಹನಿ ನೀರು ಬಿಡಲ್ಲ ಎಂದು ಉಲ್ಲೇಖಿಸಿದೆ. ಇಲ್ಲಿ ಸಿದ್ದರಾಮಯ್ಯ, ಡಿಕೆಶಿ ನೀರಿಗಾಗಿ ಹೈಟೆಕ್ ಮೇಕೆದಾಟು ಪಾದಯಾತ್ರೆ ಮಾಡುತ್ತಿದ್ದಾರೆ. ಕರ್ನಾಟಕ ವೋಟು ಬ್ಯಾಂಕ್ ನಿಮಗೆ ಆಗಿದೆ. ಗೋವಾ, ಕರ್ನಾಟಕದಲ್ಲಿ ಬೇರೆ ಬೇರೆ ಕಾಂಗ್ರೆಸ್ ಇದ್ಯಾ ಎಂದು ಪ್ರಶ್ನಿಸಿದ ಅವರು, ವೋಟಿಗಾಗಿ ಬೇರೆ ಬೇರೆ ನೀತಿ ಅನುಸರಿಸುತ್ತಿದ್ದೀರಿ ಎಂದು ಕಿಡಿಕಾರಿದರು. ಇದನ್ನೂ ಓದಿ:  ಪಂಚರಾಜ್ಯ ಚುನಾವಣೆ: ಪ್ರಜಾಪ್ರಭುತ್ವದ ಹಬ್ಬ ಮಾಡಿ: ಮೋದಿ

    ಕಾಂಗ್ರೆಸ್‍ನವರು ಮೇಕೆದಾಟು, ಮಹಾದಾಯಿ ವಿಚಾರ ಬಾಯಿ ಬಿಡುವ ನೈತಿಕತೆ ಕಳೆದುಕೊಂಡಿದ್ದೀರಿ. ನೀವು ಯಾವ ಕಾರ್ಯಕ್ರಮಕ್ಕೆ ಹೋದರೂ ಕಪ್ಪು ಬಟ್ಟೆ ಧರಿಸಿ ಧರಣಿ ಮುಂದುವರಿಸುತ್ತೇವೆ. ಕಾಂಗ್ರೆಸ್ ಪಾದಯಾತ್ರೆ ಇನ್ನು ಮುಂದೆ ಮಾಡಿದರೆ ನಾವು ತಡೆಯುವ ಪಾದಯಾತ್ರೆ ಹೋರಾಟ ಇನ್ನು ಮುಂದೆ ಮಾಡುತ್ತೇವೆ ಎಂದು ಸಿದ್ದರಾಮಯ್ಯಗೆ ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಅಗತ್ಯ ಬಿದ್ದರೆ ಬೊಗಳುತ್ತೇನೆ, ಇಲ್ಲವೇ ಕಚ್ಚುತ್ತೇನೆ: ಹರೀಶ್ ರಾವತ್

    ಬೇರೆ ಬೇರೆ ಕಾಂಗ್ರೆಸ್ ನಾಯಕರ ಮನೆ ಮುಂದೆ ಧರಣಿ ತಡೆಯಲು ಪೊಲೀಸರು ಮುಂದಾಗಿದ್ದು, ಕ್ರಮ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕನ್ನಡಪರ ಸಂಘಟನೆ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಪ್ರಸ್ತುತ ಬಿಜೆಪಿ ಸರ್ಕಾರವು ಮಹದಾಯಿ ನದಿಯನ್ನು ಕರ್ನಾಟಕಕ್ಕೆ ಕೊಡುಗೆಯಾಗಿ ನೀಡಿದೆ. ನದಿ ನೀರನ್ನು ಮರಳಿ ಪಡೆಯುತ್ತೇವೆ. ಕರ್ನಾಟಕಕ್ಕೆ ನೀರನ್ನು ಹರಿಸಲು ಬಿಡುವುದಿಲ್ಲ. ಮಹಾದಾಯಿ ಹೋರಾಟಕ್ಕಾಗಿ ಖ್ಯಾತ ವಕೀಲರ ದಂಡೇ ತೊಡಗಿಕೊಳ್ಳಲಿದೆ ಎಂದು ಶುಕ್ರವಾರ ರಾಹುಲ್ ಗಾಂಧಿ ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಘೋಷಿಸಿದೆ.

  • ಮುಂದಿನ ವಾರ ಕನ್ನಡಪರ ಸಂಘಟನೆಗಳ ಸಭೆ ಕರೆದ ಹೆಚ್.ಡಿ.ಕುಮಾರಸ್ವಾಮಿ

    ಮುಂದಿನ ವಾರ ಕನ್ನಡಪರ ಸಂಘಟನೆಗಳ ಸಭೆ ಕರೆದ ಹೆಚ್.ಡಿ.ಕುಮಾರಸ್ವಾಮಿ

    ಬೆಂಗಳೂರು: ನೆಲ, ಜಲ ಮತ್ತು ಭಾಷೆಯ ವಿಚಾರದಲ್ಲಿ ರಾಜ್ಯವು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮುಂದಿನ ವಾರ ಎಲ್ಲ ಕನ್ನಡಪರ ಸಂಘಟನೆಗಳ ಮುಖಂಡರ ಜೊತೆ ಮಹತ್ವದ ಸಭೆ ನಡೆಸುವುದಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.

    150ಕ್ಕೂ ಹೆಚ್ಚು ಕನ್ನಡ ಸಂಘಟನೆಗಳ ಮುಖಂಡರು ಕುಮಾರಸ್ವಾಮಿ ಅವರ ಬಿಡದಿ ತೋಟದಲ್ಲಿ ಭೇಟಿಯಾಗಿ ಅವರ ಜೊತೆ ಮಾತುಕತೆ ನಡೆಸಿದರು. ಸಭೆಯ ನಂತರ ಕುಮಾರಸ್ವಾಮಿ ಅವರು ಮಾಧ್ಯಮಗಳ ಜೊತೆ ಮಾತನಾಡಿದ್ದು, ರಾಜ್ಯವು ಅನೇಕ ಜ್ವಲಂತ ಸಮಸ್ಯೆಗಳನ್ನು ಎದುರಿಸುತ್ತಿದೆ. ನೆಲ, ಜಲ ಹಾಗೂ ಭಾಷೆ ವಿಚಾರದಲ್ಲಿ ನಾವು ಅನೇಕ ಕಠಿಣ ಸವಾಲುಗಳನ್ನು ಎದುರಿಸುತ್ತಿದ್ದೇವೆ. ಇವುಗಳನ್ನು ಪರಿಣಾಮಕಾರಿಯಾಗಿ ಎದುರಿಸಬೇಕಾದರೆ ಎಲ್ಲ ಸಂಘಟನೆಗಳು ಒಟ್ಟಾಗಿ ಕೆಲಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ಚರ್ಚೆ ಮಾಡಲು ಸಭೆ ಕರೆದಿದ್ದೇನೆ ಎಂದರು. ಇದನ್ನೂ ಓದಿ: ಪಿಸ್ತೂಲ್ ತೋರಿಸಿ ಧಮ್ಕಿ ಹಾಕಿದ್ದ ಬಿಜೆಪಿ ಮುಖಂಡನ ಮೇಲೆ ಪ್ರಕರಣ ದಾಖಲು

    ರಾಜ್ಯದಲ್ಲಿ ಕನ್ನಡ ಸಂಘಟನೆಗಳ ಜೊತೆಗೆ ರೈತಪರ, ನೀರಾವರಿ ವಿಷಯಗಳನ್ನಿಟ್ಟುಕೊಂಡು ಹೋರಾಟ ನಡೆಸುತ್ತಿರುವ ಅನೇಕ ಸಂಘಟನೆಗಳಿವೆ. ಅವೆಲ್ಲವನ್ನು ಒಗ್ಗೂಡಿಸುವ ಕೆಲಸ ಮಾಡಲಾಗುವುದು ಎಂದು ವಿಶ್ವಾಸದ ಮಾತುಗಳನ್ನು ಆಡಿದರು.

    ನಮ್ಮ ಸಮಸ್ಯೆಗಳ ಬಗ್ಗೆ ನಾವೇ ಹೋರಾಟ ನಡೆಸಿ ಸಾಧಿಸಿಕೊಳ್ಳಬೇಕಿದೆ. ಆ ಗುರಿ ಸಾಧನೆಗಾಗಿ ಪ್ರಾದೇಶಿಕ ರಾಜಕೀಯ ಶಕ್ತಿಯ ಅಗತ್ಯವಿದೆ. ಈ ದಿಕ್ಕಿನಲ್ಲಿ ಜೆಡಿಎಸ್ ಪಕ್ಷ ಇಂಥ ಸಂಘಟನೆಗಳನ್ನು ಒಗ್ಗೂಡಿಸಿ ಮುಂದಿನ ಕಾರ್ಯತಂತ್ರ ರೂಪಿಸುವ ಕೆಲಸ ಮಾಡಲಾಗುತ್ತಿದೆ ಎಂದು ವಿವರಿಸಿದರು.

    ಬೆಂಗಳೂರಿನಲ್ಲಿ ಸಭೆ:
    ಇಂದು ಸುಮಾರು ನೂರೈವತ್ತಕ್ಕೂ ಹೆಚ್ಚು ಕನ್ನಡ ಮುಖಂಡರ ಜೊತೆ ಚರ್ಚೆ ನಡೆಸಿದ್ದೇನೆ. ಮುಂದಿನ ವಾರ ಬೆಂಗಳೂರಿನಲ್ಲಿ ಬೆಳಗ್ಗೆಯಿಂದ ಸಂಜೆವರೆಗೂ ಇವರೆಲ್ಲರ ಜೊತೆ ಮುಕ್ತವಾಗಿ ಮಾತುಕತೆ ನಡೆಸಲಿದ್ದೇನೆ. ಕನ್ನಡಿಗರ ನಿರುದ್ಯೋಗ ಸಮಸ್ಯೆ, ಖಾಸಗಿ ಹಾಗೂ ಕೇಂದ್ರ ಸರ್ಕಾರದ ಮಟ್ಟದಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯ ಇತ್ಯಾದಿ ವಿಷಯಗಳ ಬಗ್ಗೆ ಮುಖಂಡರಿಂದ ಮಾಹಿತಿ ಪಡೆದುಕೊಳ್ಳುತ್ತೇನೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ರಾಜ್ಯವನ್ನು ಯಾವ ದಿಕ್ಕಿನಲ್ಲಿ ತೆಗೆದುಕೊಂಡು ಹೋಗಬೇಕು ಎನ್ನುವ ನಿಟ್ಟಿನಲ್ಲಿ ಚರ್ಚೆ ಮಾಡಲಾಗುತ್ತದೆ. ಪ್ರಾದೇಶಿಕ ಪಕ್ಷದ ಸರ್ಕಾರ ತರುವ ದಿಸೆಯಲ್ಲಿ ಕಾರ್ಯಕ್ರಮ ರೂಪಿಸಲಾಗುವುದು ಎಂದು ಹೇಳಿದರು.

    ರಾಷ್ಟ್ರೀಯ ಪಕ್ಷಗಳು ತಿರಸ್ಕೃತ:
    ದೇಶದಲ್ಲಿ ರಾಷ್ಟ್ರೀಯ ಪಕ್ಷಗಳನ್ನು ಜನರು ತಿರಸ್ಕರಿಸುತ್ತಿದ್ದಾರೆ. ಪ್ರಾದೇಶಿಕ ಪಕ್ಷಗಳಿಗೆ ಹೆಚ್ಚೆಚ್ಚು ಮಣೆ ಹಾಕುತ್ತಿದ್ದಾರೆ. ಕರ್ನಾಟಕದ ಮಟ್ಟಿಗೆ ಹೇಳುವುದಾದರೆ ಕಳೆದ 75 ವರ್ಷಗಳಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳು ನೀರಾವರಿ ಸೇರಿದಂತೆ ವಿವಿಧ ವಲಯಗಳಲ್ಲಿ ಭಾರೀ ಅನ್ಯಾಯ ಮಾಡಿವೆ. ಆದರೆ, ಅಧಿಕಾರದಲ್ಲಿದ್ದ ಅಲ್ಪಸ್ವಲ್ಪ ಅವಧಿಯಲ್ಲೇ ಜೆಡಿಎಸ್ ಪಕ್ಷವು ಜನರ ಆಶೋತ್ತರಗಳನ್ನು ಈಡೇರಿಸಿದೆ. ಈ ಬಗ್ಗೆ ಸರ್ಕಾರದ ಬಳಿ ನೈಜ ದಾಖಲೆಗಳೇ ಇವೆ. ಹಾಗೆಯೇ ಭಾಷೆಗೆ ಸಂಬಂಧಿಸಿದಂತೆ ಕನ್ನಡವು ದೆಹಲಿಯಿಂದ ನಾನಾ ರೀತಿಯ ಕಿರುಕುಳ ಅನುಭವಿಸುತ್ತಿದೆ. ಇದನ್ನು ತಪ್ಪಿಸಬೇಕಿದೆ ಎಂದು ಕರೆ ನೀಡಿದರು.

    ಈ ಸಂಘಟನೆಯಲ್ಲಿ ರೈತ ಮುಖಂಡರನ್ನೂ ಒಗ್ಗೂಡಿಲಾಗುವುದು. ಜಾತಿ, ಮತ ಮತ್ತು ಧರ್ಮವನ್ನು ಮೀರಿ ಎಲ್ಲರನ್ನೂ ಒಂದು ವೇದಿಕೆಗೆ ತಂದು ಕಾರ್ಯಕ್ರಮ ರೂಪಿಸಲಾಗುವುದು. ಎಲ್ಲ ಮುಖಂಡರ ಜತೆ ಮುಕ್ತವಾಗಿ ಚರ್ಚೆ ನಡೆಸಲು ನಾನು ಸಿದ್ಧನಿದ್ದೇನೆ. ಎರಡನೇ ಬಾರಿ ನಾನು ಮುಖ್ಯಮಂತ್ರಿಯಾದಾಗ ನನ್ನ 14 ತಿಂಗಳ ಆಡಳಿತಾವಧಿಯಲ್ಲಿ ನಾಲ್ಕೈದು ಬಾರಿ ವಿಧಾನಸಭೆಯಲ್ಲೇ ರೈತರ ಸಭೆ ಮಾಡಿದ್ದೇನೆ. ಆದರೆ ಸರ್ಕಾರ ಅಂಥ ಒಂದು ಸಭೆಯನ್ನೂ ಮಾಡಿಲ್ಲ ಎಂದು ವಿರೋಧ ವ್ಯಕ್ತಪಡಿಸಿದರು. ಇದನ್ನೂ ಓದಿ: ‘ನಿಮಗಾಗಿ ಆಸ್ತಿ ಮಾಡಿಲ್ಲ’ – ಹೆಂಡತಿಗೆ ಮರಣಪತ್ರ ಬರೆದು ಕಂದಾಯ ನೌಕರ ಆತ್ಮಹತ್ಯೆ

    ಉತ್ತಮ ನಡವಳಿಕೆ ಅಲ್ಲ!
    ಆಡಳಿತ ಪಕ್ಷದ ಶಾಸಕರೇ ಸರ್ಕಾರದ ಬಗ್ಗೆ ಹಾದಿಬೀದಿಯಲ್ಲಿ ಲಘುವಾಗಿ ಮಾತನಾಡುವುದು, ಮಂತ್ರಿಗಳ ಬಗ್ಗೆ ಹೇಳಿಕೆಗಳನ್ನು ನೀಡುವುದು ಉತ್ತಮ ನಡವಳಿಕೆ ಅಲ್ಲ ಎಂದು ಅಭಿಪ್ರಾಯಪಟ್ಟರು.

    ಸಮಸ್ಯೆಗಳಿದ್ದರೆ ಪಕ್ಷದ ಚೌಕಟ್ಟಿನೊಳಗೆ ಬಗೆಹರಿಸಿಕೊಳ್ಳಬೇಕು. ಆದು ಬಿಟ್ಟು ಶಿಸ್ತಿನ ಪಕ್ಷ ಎಂದು ‘ಟ್ಯಾಗ್‍ಲೈನ್’ ಹಾಕಿಕೊಂಡ ಪಕ್ಷದಲ್ಲಿ ದಿನನಿತ್ಯ ಶಾಸಕರು ಸರ್ಕಾರ, ಮಂತ್ರಿಗಳ ಬಗ್ಗೆ ಮಾತನಾಡುವುದು ಉತ್ತಮ ಬೆಳವಣಿಗೆ ಅಲ್ಲ ಎಂದರು.

  • ಕನ್ನಡ ಸಂಘಟನೆಗಳು ಬಂದ್ ಕರೆಯನ್ನು ಕೈಬಿಡಬೇಕು: ಅಶ್ವತ್ಥ ನಾರಾಯಣ

    ಕನ್ನಡ ಸಂಘಟನೆಗಳು ಬಂದ್ ಕರೆಯನ್ನು ಕೈಬಿಡಬೇಕು: ಅಶ್ವತ್ಥ ನಾರಾಯಣ

    ಬೆಂಗಳೂರು: ಜನ ಈಗಾಗಲೇ ಸಂಕಷ್ಟದಲ್ಲಿದ್ದಾರೆ. ಜನತೆಗೆ ಬಂದ್ ಮೂಲಕ ತೊಂದರೆ ಕೊಡುವುದು ಬೇಡ. ಕನ್ನಡ ಸಂಘಟನೆಗಳು ಬಂದ್ ಕರೆಯನ್ನು ಕೈಬಿಡಬೇಕು. ಸರ್ಕಾರ ನಿಮ್ಮ ಜೊತೆಗಿದೆ. ಹೀಗಿರುವಾಗ ಬಂದ್ ಕೈಬಿಟ್ಟು ಸಹಕರಿಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಮನವಿ ಮಾಡಿದರು.

    ನೆಲ, ಜಲ ವಿಷಯದಲ್ಲಿ ರಾಜಿ ಮಾಡಿಕೊಳ್ಳಲ್ಲ. ಹಿತ ಕಾಯಲು ಬದ್ಧರಾಗಿದ್ದೇವೆ. ಗಡಿ ತಂಟೆಗೆ ಬರುವವರು, ಧ್ವಜ ಸುಡುವವರು, ಶಾಂತಿ ಕದಡುವ ನಾಡದ್ರೋಹಿಗಳ ಮೇಲೆ ಗೂಂಡಾ ಕಾಯ್ದೆಯಡಿ, ನಾಡದ್ರೋಹದ ಕೇಸ್ ಹಾಕುತ್ತೇವೆ. ಮುಲಾಜು ಕೂಡ ತೋರಿಸಲ್ಲ ಎಂದರು. ಇದನ್ನೂ ಓದಿ: ಲುಧಿಯಾನ ಕೋರ್ಟ್ ಸ್ಫೋಟ – ಡ್ರಗ್ ಕೇಸ್‌ನಲ್ಲಿ ವಜಾಗೊಂಡಿದ್ದ ಪೊಲೀಸ್ ಅಧಿಕಾರಿಯೇ ಬಾಂಬರ್

    ಎಂಇಎಸ್ ವಿಚಾರದಲ್ಲಿ ಸದನದಲ್ಲಿಯೇ ಸಿಎಂ ಸ್ಪಷ್ಟವಾಗಿ ಸಂದೇಶ ಕೊಟ್ಟಿದ್ದಾರೆ. ನಾಡಿನ ವಿಚಾರದಲ್ಲಿ ನಮ್ಮ ಭಾಷೆ, ನೆಲ, ಜಲ ಎಲ್ಲ ವಿಚಾರದಲ್ಲಿ ಕಾಂಪ್ರಮೈಸ್ ಆಗುವ ಪ್ರಶ್ನೆಯೇ ಇಲ್ಲ. ಯಾರೇ ಕಿಡಿಗೇಡಿಗಳು ಸಣ್ಣ ಕೃತ್ಯ ಮಾಡಿದರೂ ಅವರನ್ನು ಬಗ್ಗು ಬಡಿಯುತ್ತೇವೆ. ನಾಡಿನ ಹಿತರಕ್ಷಣೆ ಮಾಡುವುದಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ. ಕನ್ನಡಪರ ಸಂಘಟನೆ ಬಂದ್ ಉಚಿತವೂ ಅಲ್ಲ, ಸೂಕ್ತವೂ ಅಲ್ಲ ಎಂದ ಹೇಳಿದರು

    ಸರ್ಕಾರಕ್ಕೆ ಸಲಹೆ ಸೂಚನೆ ಕೊಡಲಿ, ಅವುಗಳನ್ನು ಪರಿಗಣಿಸುತ್ತೇವೆ. ಬಂದ್ ನಿಂದ ಜನ ಸಮಸ್ಯೆಗೆ ಸಿಲುಕುತ್ತಾರೆ. ಹೀಗಾಗಿ ಬಂದ್ ಬೇಕಿಲ್ಲ. ಸರ್ಕಾರ ಕನ್ನಡ ಸಂಘಟನೆಗಳ ಸಲಹೆಗಳಿಗೆ ಕಣ್ಣು ಕಿವಿಯಾಗಿದೆ. ಹೀಗಾಗಿ ಬಂದ್ ಮಾಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಬಟ್ಟೆ ಮಾಸ್ಕ್ ಬೇಡ.. ಎನ್95, ಕೆ95 ಮಾಸ್ಕ್‌ಗಳನ್ನೇ ಬಳಸಿ – ತಜ್ಞರ ಸಲಹೆ 

    ಸಿಎಂ ಜೊತೆ ಬಂದು ಮಾತನಾಡಿ, ನಿಮ್ಮ ಸಲಹೆಗಳಿಗೆ ಗೌರವಿಸುತ್ತೇವೆ. ಬಂದ್‍ಗೆ ಕರೆ ಕೊಟ್ಟಿದ್ದನ್ನು ಹಿಂಪಡೆಯಿರಿ. ಸರ್ಕಾರ ಕನ್ನಡ ಪರ ಸಂಘಟನೆ ಜೊತೆಗೆ ಮಾತುಕತೆಗೆ ಸಿದ್ಧವಿದೆ. ಈಗಾಗಲೇ ಬೆಳಗಾವಿ ಕೃತ್ಯದಲ್ಲಿ ಬಂಧಿಸಿದ ವ್ಯಕ್ತಿಗಳ ವಿಚಾರಣೆ ನಡೆಯುತ್ತಿದೆ. ಯಾವುದೇ ಸಂಘಟನೆ ಸಮಾಜಕ್ಕೆ ಕಂಟಕ ಆದರೂ ಅದಕ್ಕೆ ಅವಕಾಶ ಇಲ್ಲ ಎಂದರು.

  • ಪ್ರತಿಮೆ ಭಗ್ನ ಮಾಡೋರು ನೀವೇ, ಗೌರವ ಸಲ್ಲಿಸೋರು ನೀವೇ – ಸಿದ್ದು ವಿರುದ್ಧ ಬಿಜೆಪಿ ಕಿಡಿ

    ಪ್ರತಿಮೆ ಭಗ್ನ ಮಾಡೋರು ನೀವೇ, ಗೌರವ ಸಲ್ಲಿಸೋರು ನೀವೇ – ಸಿದ್ದು ವಿರುದ್ಧ ಬಿಜೆಪಿ ಕಿಡಿ

    ಬೆಂಗಳೂರು: ಸಿದ್ದರಾಮಯ್ಯನವರೇ ಪ್ರತಿಮೆ ಭಗ್ನ ಮಾಡುವವರೂ ನೀವೇ, ಗೌರವ ಸಲ್ಲಿಸುವವರೂ ನೀವೇ. ಇದೆಲ್ಲ ಹೇಗೆ ಸಾಧ್ಯ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಟ್ವೀಟ್ ಮಾಡುವ ಮೂಲಕ ಪ್ರಶ್ನಿಸಿದೆ.

    ಕುಂದಾನಗರಿ ಬೆಳಗಾವಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮುಖದ ಭಾಗ, ಮೂಗು ಮತ್ತು ಕತ್ತಿಯನ್ನು ಕಿಡಿಗೇಡಿಗಳು ಶನಿವಾರದ ಮುಂಜಾವಿನಲ್ಲಿ ವಿರೂಪಗೊಳಿಸಿದ್ದರು. ರಾಯಣ್ಣ ಹಿಡಿದಿದ್ದ ಕಠಾರಿಯನ್ನು ರಸ್ತೆಯ ಬದಿಗೆ ಎಸೆದಿದ್ದರು. ಜೊತೆಗೆ ಬಸ್ ಹಾಗೂ ಮನೆಗಳ ಮೇಲೆ ಕಲ್ಲುತೂರಾಟ ನಡೆಸಿ, ಹೋಟೆಲ್‍ವೊಂದರ ಮುಂದೆ ಇದ್ದ ಕನ್ನಡ ನಾಮಫಲಕವನ್ನು ಕೆಳಕ್ಕುರುಳಿಸಿದ್ದರು. ಇದರಿಂದಾಗಿ ಕನ್ನಡ ಪರ ಸಂಘಟನೆಗಳು ರೊಚ್ಚಿಗೆದ್ದಿದ್ದು, ಬೆಳಗಾವಿಯಲ್ಲಿ ಎಂಇಎಸ್ ಅನ್ನು ನಿಷೇಧಿಸಬೇಕೆಂದು ಪ್ರತಿಭಟನೆ ನಡೆಸುತ್ತಿದೆ. ಇನ್ನೂ ಕನ್ನಡ ಪರ ಕಾರ್ಯಕರ್ತರನ್ನು ನಿಭಾಯಿಸಲು ಪೊಲೀಸರು ಪರದಾಡುತ್ತಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರುಪ್ರತಿಷ್ಠಾಪನೆ

    ಸದ್ಯ ಈ ಘಟನೆಗೆ ಕಾರಣ ಕಾಂಗ್ರೆಸ್ ಎಂದು ಬಿಜೆಪಿ ಟ್ವೀಟ್ ಮಾಡುವ ಮೂಲಕ ನೇರವಾಗಿ ದಾಳಿ ನಡೆಸಿದೆ. ಮಹಾರಾಷ್ಟ್ರದಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿದ್ದು ಕಾಂಗ್ರೆಸ್ ಕಾರ್ಯಕರ್ತರು. ಕನ್ನಡಿಗರ ವಾಹನ ಪುಡಿಮಾಡಿದ್ದು ಕಾಂಗ್ರೆಸ್ ಕಾರ್ಯಕರ್ತರು. ಶಿವಾಜಿ ಪ್ರತಿಮೆಗೆ ಮಸಿ ಬಳಿದಿದ್ದು ಕಾಂಗ್ರೆಸ್ ಕಾರ್ಯಕರ್ತರು. ಮೂರೂ ಘಟನೆಗಳ ಸೂತ್ರದಾರರು ಈಗ ಘಟನೆಯ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ. ಸಿದ್ದರಾಮಯ್ಯನವರೇ ಪ್ರತಿಮೆ ಭಗ್ನ ಮಾಡುವವರೂ ನೀವೇ, ಗೌರವ ಸಲ್ಲಿಸುವವರೂ ನೀವೇ. ಇದೆಲ್ಲ ಹೇಗೆ ಸಾಧ್ಯ ಎಂದು ಪ್ರಶ್ನಿಸುವ ಮೂಲಕ ಕಿಡಿಕಾರಿದೆ.

    ಮಹಾರಾಷ್ಟ್ರದಲ್ಲಿರುವ ಆಡಳಿತ ಪಕ್ಷ ಕನ್ನಡ ಬಾವುಟ ಸುಡುತ್ತದೆ, ಕನ್ನಡಿಗರ ವಾಹನ ಧ್ವಂಸ ಮಾಡುತ್ತದೆ. ಕರ್ನಾಟಕದ ವಿರೋಧ ಪಕ್ಷ ಶಿವಾಜಿ ಪ್ರತಿಮೆಗೆ ಮಸಿ ಬಳಿಯುತ್ತಿದೆ. ಕ್ರಿಯೆ ಮತ್ತು ಪ್ರತಿಕ್ರಿಯೆ ಎರಡೂ ಕೆಪಿಸಿಸಿ ಕಚೇರಿಯಿಂದ ಹೊರಟ ಆಜ್ಞೆ ಎಂದು ಆರೋಪಿಸಿದೆ. ಇದನ್ನೂ ಓದಿ: ಶಾಂತಿ ಕದಡುವುದೇ ನಾಡದ್ರೋಹಿ ಕಾಂಗ್ರೆಸ್ ಉದ್ದೇಶ – ಕೈ ವಿರುದ್ಧ ಬಿಜೆಪಿ ಟ್ವೀಟ್ ದಾಳಿ

  • ಎರಡು ಕ್ಷೇತ್ರಗಳಲ್ಲಿ ಹೆಚ್ಚಿನ ಬಹುಮತದಿಂದ ಗೆಲ್ಲುವ ವಿಶ್ವಾಸವಿದೆ: ಸಿಎಂ

    ಬೆಳಗಾವಿ: ಸಿಂದಗಿ ಹಾಗೂ ಹಾನಗಲ್ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಬಹುಮತದಿಂದ ಗೆಲ್ಲುವ ವಿಶ್ವಾಸವಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದರು.

    ಬೆಳಗಾವಿಯಲ್ಲಿ ಬೊಮ್ಮಾಯಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ನಿನ್ನೆ ಸಿಂದಗಿಯಲ್ಲಿ ಪ್ರಚಾರ ಮಾಡಿ ಇವತ್ತು ಬೆಂಗಳೂರು ಹೋಗುತ್ತಿದ್ದೇನೆ. ವಾಲ್ಮೀಕಿ ಜಯಂತಿಯಲ್ಲಿ ಪಾಲ್ಗೊಂಡು ಇಂದು ಸಂಜೆ ಹಾನಗಲ್‍ಗೆ ವಾಪಾಸ್ ಆಗ್ತೇನಿ. ಮೂರು ದಿನಗಳ ಕಾಲ ಹಾನಗಲ್ ನಲ್ಲಿ ಪ್ರಚಾರ ಮಾಡುತ್ತೇನೆ. 23ರಂದು ಬೆಳಗಾವಿಗೆ ಬಂದು ಕಿತ್ತೂರು ಚನ್ನಮ್ಮ ಉತ್ಸವದಲ್ಲಿ ಭಾಗಿಯಾಗುತ್ತೇನೆ. ಎರಡು ಕ್ಷೇತ್ರಗಳಲ್ಲಿ ಹೆಚ್ಚಿನ ಬಹುಮತದಿಂದ ಗೆಲ್ಲುವ ವಿಶ್ವಾಸವಿದೆ ಎಂದು ತಿಳಿಸಿದರು. ಇದನ್ನೂ ಓದಿ: ಉತ್ತರಾಖಂಡ್ ಪ್ರವಾಹಪೀಡಿತ ಭಾಗದಲ್ಲಿ 10 ಕನ್ನಡಿಗರಿಗೆ ಸಂಕಷ್ಟ

    ಅದ್ದೂರಿ ರಾಜ್ಯೋತ್ಸವ ಆಚರಣೆ ಕುರಿತು ಕನ್ನಡಪರ ಸಂಘಟನೆಗಳ ಒತ್ತಾಯ ವಿಚಾರವಾಗಿ ಮಾತನಾಡಿದ ಅವರು, ಅದರ ಬಗ್ಗೆ ತೀರ್ಮಾನ ಮಾಡುತ್ತೇವೆ. ಕೋವಿಡ್ ಕಡಿಮೆಯಾದ ಹಿನ್ನೆಲೆ ಮೆರವಣಿಗೆ ಬಗ್ಗೆ ಇನ್ನೂ ಅಂತಿಮ ತೀರ್ಮಾನ ಆಗಿಲ್ಲ. ತಜ್ಞರ ಜತೆಗೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ.

    ಈ ವೇಳೆ ಕಿತ್ತೂರು ಕರ್ನಾಟಕ ಘೋಷಣೆ ವಿಚಾರವಾಗಿ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಕ್ಯಾಬಿನೆಟ್ ನಲ್ಲಿ ತೀರ್ಮಾನವಾಗಬೇಕು ಚರ್ಚಿಸಿ ಸೂಕ್ತ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ

  • ಬಲವಂತದ ಬಂದ್‍ಗೆ ಅವಕಾಶ ಕೊಡಲ್ಲ: ಬಿಎಸ್‍ವೈ

    ಬಲವಂತದ ಬಂದ್‍ಗೆ ಅವಕಾಶ ಕೊಡಲ್ಲ: ಬಿಎಸ್‍ವೈ

    ಬೆಂಗಳೂರು: ರಾಜ್ಯದಲ್ಲಿ ಎಲ್ಲಿಯೂ ಬಲವಂತದ ಬಂದ್ ಗೆ ಸರ್ಕಾರ ಅವಕಾಶ ಕೊಡಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಕನ್ನಡ ಪರ ಸಂಘಟನೆಗಳಿಗೆ ಎಚ್ಚರಿಕೆ ನೀಡಿದ್ದಾರೆ. ಮರಾಠ ಪ್ರಾಧಿಕಾರ ರಚನೆ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಡಿಸೆಂಬರ್ 5ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ.

    ವಿಶ್ವ ಮೀನುಗಾರಿಕಾ ದಿನಾಚರಣೆಗೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ, ನಾನು ಕನ್ನಡದ ಪರವಾಗಿ, ಕನ್ನಡಿಗರ ಪರವಾಗಿ ಇರುವಂಥವನು. ಕನ್ನಡಿಗರಿಗೆ ಬೇಕಾದ ಹೆಚ್ಚಿನ ಸೌಲಭ್ಯ ಒದಗಿಸಲು ನಾನು ಸಿದ್ಧನಿದ್ದೇನೆ. ಬಂದ್ ಕರೆ ನೀಡುವುದು ಸೂಕ್ತ ಅಲ್ಲ. ಜನರು ಸಹ ಈ ನಡೆಯಲ್ಲ ಮೆಚ್ಚುವದಿಲ್ಲ. ಬಲವಂತದಿಂದ ಬಂದ್ ಮಾಡಲು ಎಲ್ಲಿಯೂ ನಾನು ಅವಕಾಶ ಕೊಡಲ್ಲ. ಪ್ರತಿಕೃತಿ ದಹನ ಮಾಡೋದು, ಕೆಟ್ಟದಾಗಿ ನಡೆದುಕೊಳ್ಳುತ್ತಿರುವುದನ್ನ ಗಮನಿಸಿದ್ದೇನೆ. ಬಹಳ ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ಸಂದೇಶವನ್ನ ರವಾನಿಸಿದರು.

    ಶಾಂತಿಯುತವಾಗಿ ಪ್ರತಿಭಟನೆ ಮಾಡಲಿ. ಆದರೆ ಪ್ರತಿಭಟನೆಗೆ ಬೇರೆ ಸ್ವರೂಪ ಕೊಡೋದು ಬೇಡ. ಎಲ್ಲ ವರ್ಗಗಳಿಗೂ ಸರ್ಕಾರ ನ್ಯಾಯ ಒದಗಿಸೋ ಕೆಲಸ ಸರ್ಕಾರ ಮಾಡುತ್ತಿದೆ. ಸರ್ಕಾರ ಯಾರಿಗೂ ಭೇದ ಭಾವ ಮಾಡುತ್ತಿಲ್ಲ. ಸರ್ಕಾರದ ಉದ್ದೇಶ ಅರ್ಥ ಮಾಡಿಕೊಂಡು ಸಹಕಾರ ಕೊಡಲಿ ಎಂದು ಸಿಎಂ ಹೇಳಿದರು.

  • ಬೈ ಎಲೆಕ್ಷನ್ ಗೆಲ್ಲಲು ಬಿಜೆಪಿಯ ಮರಾಠಿ ಮೋಹ – ಕಿಚ್ಚು ಹೊತ್ತಿಸಿದ ಮರಾಠ ಅಭಿವೃದ್ಧಿ ನಿಗಮ

    ಬೈ ಎಲೆಕ್ಷನ್ ಗೆಲ್ಲಲು ಬಿಜೆಪಿಯ ಮರಾಠಿ ಮೋಹ – ಕಿಚ್ಚು ಹೊತ್ತಿಸಿದ ಮರಾಠ ಅಭಿವೃದ್ಧಿ ನಿಗಮ

    – ಬಿಎಸ್‍ವೈ ಸರ್ಕಾರದಿಂದ ಮರಾಠ ಸಮುದಾಯದ ಓಲೈಕೆ ಏಕೆ?

    ಬೆಂಗಳೂರು: ಉಪ ಚುನಾವಣೆ ಗೆಲ್ಲಲು ಬಿಜೆಪಿ ಮರಾಠಿ ಮಂತ್ರ ಜಪಿಸುತ್ತಿದ್ದು, ರಾಜ್ಯದಲ್ಲಿ ಸರ್ಕಾರ ಘೋಷಿಸಿರುವ ಮರಾಠ ಅಭಿವೃದ್ಧಿ ನಿಗಮ ಕರುನಾಡಿನಲ್ಲಿ ಕಿಚ್ಚು ಹೊತ್ತಿಸಿದೆ.

    ಬಿಎಸ್‍ವೈ ಸರ್ಕಾರ ಶಿರಾ ಬೈ ಎಲೆಕ್ಷನ್ ಗೆಲ್ಲಲು ಕಾಡುಗೊಲ್ಲ ಸಮುದಾಯದ ಅಭಿವೃದ್ಧಿ ನಿಗಮ ರಚಿಸಿ, 50 ಕೋಟಿ ಮೀಸಲಿರಿಸಿತ್ತು. ಎರಡು ದಿನಗಳ ಹಿಂದೆ ಮಠ ಮಾನ್ಯಗಳಿಗೆ 88 ಕೋಟಿ ರೂಪಾಯಿಯ ಹೊಳೆ ಹರಿಸಿತ್ತು. ಬೆಳಗಾವಿ ಲೋಕಸಭೆ ಉಪ ಚುನಾವಣೆ ಮತ್ತು ಬಸವಕಲ್ಯಾಣ ವಿಧಾನಸಭೆ ಉಪಚುನಾವಣೆ ಗೆಲ್ಲುವ ಸಲುವಾಗಿ ನಿನ್ನೆಯಷ್ಟೇ ಮರಾಠ ಅಭಿವೃದ್ಧಿ ನಿಗಮ ರಚಿಸಿ, ಅದಕ್ಕೂ 50 ಕೋಟಿ ಮೀಸಲಿರಿಸಿದೆ. ಮರಾಠ ಸಮುದಾಯದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಸಚಿವ ಪ್ರಭು ಚೌಹಾಣ್ ಬಹಿರಂಗವಾಗಿ ಘೋಷಿಸಿದ್ದಾರೆ.

    ಈ ಮೂಲಕ ಸಮುದಾಯಗಳ ಓಲೈಕೆ ಪಾಲಿಟಿಕ್ಸ್ ನ್ನು ಬಿಜೆಪಿ ಸರ್ಕಾರ ಮುಂದುವರಿಸಿದೆ. ಕಾರಣ ಬಸವ ಕಲ್ಯಾಣದಲ್ಲಿ ಮರಾಠ ಸಮುದಾಯದ 40 ಸಾವಿರ ಮತಗಳು ಇವೆ. ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಕೂಡ ಯಾರೇ ಗೆಲ್ಲಬೇಕಿದ್ರೂ ಮರಾಠ ಸಮುದಾಯದ ಬೆಂಬಲ ಬೇಕೇಬೇಕು. ಅಲ್ಲಿ ಅಂದಾಜು 6 ಲಕ್ಷಕ್ಕೂ ಹೆಚ್ಚು ಮರಾಠ ಮತಗಳಿವೆ. ಈ ಮತಗಳನ್ನು ಗುರಿಯಾಗಿಸಿಕೊಂಡೇ ಮರಾಠ ಸಮುದಾಯ ಅಭಿವೃದ್ಧಿ ನಿಗಮದ ಅಸ್ತ್ರವನ್ನು ಬಿಎಸ್‍ವೈ ಸರ್ಕಾರ ಪ್ರಯೋಗಿಸಿದೆ. ಇದನ್ನೂ ಓದಿ: ದುರ್ದೈವದಿಂದ KSRTC, BMTC ನೌಕರರ ಸಂಬಳ ನೀಡಲು ಆಗಿಲ್ಲ: ಲಕ್ಷ್ಮಣ ಸವದಿ

    ಕೇವಲ ಮತಕ್ಕಾಗಿ ನಾಡದ್ರೋಹಿಗಳು ಎನಿಸಿಕೊಂಡ ಮರಾಠ ಸಮುದಾಯವನ್ನು ಈ ರೀತಿ ಓಲೈಸುವುದು ಎಷ್ಟು ಸರಿ ಅನ್ನೋದು ಕನ್ನಡ ಪರ ಹೋರಾಟಗಾರರ ಪ್ರಶ್ನೆ. ಸರ್ಕಾರ ಕೂಡಲೇ ಅಭಿವೃದ್ಧಿ ನಿಗಮ ರಚನೆಯ ಆದೇಶವನ್ನು ಹಿಂಪಡೆಯಬೇಕು. ಇಲ್ಲದೇ ಇದ್ರೇ ನಾಡಿದ್ದು ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಕನ್ನಡ ಪರ ಹೋರಾಟಗಾರರು ಎಚ್ಚರಿಸ್ತಿದ್ದಾರೆ.

    ಬೆಳಗಾವಿ- ಮರಾಠ ಸಮುದಾಯದ ಓಲೈಕೆ ಏಕೆ?
    ಬೆಳಗಾವಿಯ 17 ಲಕ್ಷ ಮತಗಳ ಪೈಕಿ 6.5 ಲಕ್ಷಕ್ಕೂ ಹೆಚ್ಚು ಮರಾಠ ಮತಗಳಿವೆ. ಮರಾಠ ಸಮುದಾಯದ ಬೆಂಬಲ ಗಿಟ್ಟಿಸಿದ್ದ ಬಿಜೆಪಿಯ ಸುರೇಶ್ ಅಂಗಡಿ ಈಗಿಲ್ಲ. ಸುರೇಶ್ ಅಂಗಡಿ ಅನುಪಸ್ಥಿತಿಯಲ್ಲಿ ಮರಾಠ ವೋಟ್ ಬ್ಯಾಂಕ್ ಛಿದ್ರವಾಗುವ ಭೀತಿ ಬಿಜೆಪಿಗೆ ಕಾಡುತ್ತಿದೆ. ಮಹಾರಾಷ್ಟ್ರದ ರಾಜಕೀಯ ಉಪ ಲೋಕಸಮರದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳು ದಟ್ಟವಾಗಿವೆ. ಕಾಂಗ್ರೆಸ್ ಜೊತೆ ಶಿವಸೇನೆ ಇರುವ ಕಾರಣ, ಮರಾಠ ಮತಗಳು ಕೈಗೆ ಹೋಗುವ ಸಂಭವ ಹೆಚ್ಚು ಎನ್ನಲಾಗಿದೆ. ಹೀಗಾಗಿಯೇ ಮರಾಠ ಸಮುದಾಯದ ಓಲೈಕೆಗಾಗಿ ಸರ್ಕಾರ ಅಭಿವೃದ್ಧಿ ನಿಗಮ ರಚಿಸಿದೆ ಎಂದು ಹೇಳಲಾಗುತ್ತಿದೆ.

    ಬಸವಕಲ್ಯಾಣ- ಮರಾಠ ಸಮುದಾಯದ ಓಲೈಕೆ ಏಕೆ?
    ಬಸವಕಲ್ಯಾಣ ವಿಧಾನಸಭಾ ಕ್ಷೇತ್ರ 2.40 ಲಕ್ಷ ಮತಗಳನ್ನು ಹೊಂದಿದೆ. ಇದರಲ್ಲಿ ಮರಾಠ ಸಮುದಾಯದ ಅಂದಾಜು 45,000 ಮತಗಳಿವೆ. ಇಲ್ಲಿ ಯಾರೇ ಗೆಲ್ಲಬೇಕಿದ್ದರೂ ಮರಾಠ ಮತಗಳು ಬೇಕೇಬೇಕು. ಬಸವಕಲ್ಯಾಣದ ಮೇಲೆಯೂ ‘ಮಹಾ’ ಪಾಲಿಟಿಕ್ಸ್ ಪರಿಣಾಮ ಬೀರುವ ಸಾಧ್ಯತೆಗಳು ಹೆಚ್ಚು. ಹೀಗಾಗಿಯೇ, ಸಮುದಾಯದ ಓಲೈಕೆಗಾಗಿ ಮರಾಠ ಅಭಿವೃದ್ಧಿ ನಿಗಮದ ಅಸ್ತ್ರ ಪ್ರಯೋಗಿಸಿದೆ ಎಂಬುವುದು ರಾಜಕೀಯ ಅಂಗಳದ ಮಾತು.

    ವಿರೋಧ ಏಕೆ?: ಮರಾಠ ಅಭಿವೃದ್ಧಿ ನಿಗಮಕ್ಕೆ 50 ಕೋಟಿ ರೂ. ಅನುದಾನ ಘೋಷಣೆ ಮಾಡಲಾಗಿದ್ದು, ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸರ್ಕಾರದಿಂದ ಕಡಿಮೆ ಅನುದಾನ ನೀಡಲಾಗಿದೆ. ಈ ವರ್ಷ ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಕೇವಲ 2 ಕೋಟಿ ರೂ. ನೀಡಲಾಗಿದೆ. ಈ ಮೊದಲು ವಾರ್ಷಿಕ 5 ಕೋಟಿ ರೂ. ನೀಡಲಾಗಗುತ್ತಿತ್ತು. 2 ಕೋಟಿ ಎಲ್ಲಿ?50 ಕೋಟಿ ಎಲ್ಲಿ? ಕನ್ನಡಕ್ಕಿಂತ ಮರಾಠಿನೇ ಮುಖ್ಯನಾ ಎಂದು ಕನ್ನಡ ಪರ ಹೋರಾಟಗಾರರು ಪ್ರಶ್ನೆ ಮಾಡುತ್ತಿದ್ದಾರೆ.

    ಪ್ರತಿ ವರ್ಷ ನ.1ರಂದು ಮರಾಠಿಗರಿಂದ ಕರಾಳ ದಿನ ಆಚರಣೆ ಮಾಡುತ್ತಾರೆ. ಹೀಗಿದ್ದರೂ ಮರಾಠಿ ಸಮುದಾಯದ ಮೇಲೆ ಸರ್ಕಾರಕ್ಕೆ ಪ್ರೀತಿ ಏಕೆ?. ಹೀಗಾಗಿಯೇ ಕನ್ನಡ ಪರ ಹೋರಾಟಗಾರರಿಂದ ಮರಾಠ ನಿಗಮಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

    ಬೊಕ್ಕಸದಲ್ಲಿ ದುಡ್ಡಿಲ್ಲ ಎಂಬ ನೆಪ ಹೆಳಿ, ವಿವಿಧ ಪ್ರಶಸ್ತಿಗಳು, ಪಿಹೆಚ್‍ಡಿ, ಎಂಫಿಲ್ ಮಾಡೋರ ವಿದ್ಯಾರ್ಥಿ ವೇತನಕ್ಕೂ ಕತ್ತರಿ ಹಾಕಿರೋದು ಕನ್ನಡ ಪರ ಹೋರಾಟಗಾರರನ್ನು ಸಿಟ್ಟಿಗೆಬ್ಬಿಸಿದೆ.

  • ಕನ್ನಡಪರ ಸಂಘಟನೆಯವ್ರು ಅಂತ ಹೇಳ್ಕೊಂಡು ಬಂದವರಿಗೇ ಮಹಿಷಿ ವರದಿ ಬಗ್ಗೆ ಗೊತ್ತಿಲ್ಲವಾ?

    ಕನ್ನಡಪರ ಸಂಘಟನೆಯವ್ರು ಅಂತ ಹೇಳ್ಕೊಂಡು ಬಂದವರಿಗೇ ಮಹಿಷಿ ವರದಿ ಬಗ್ಗೆ ಗೊತ್ತಿಲ್ಲವಾ?

    – ಸಿಎಂ ನಿವಾಸದೆದುರು ಪೇಚಿಗೆ ಸಿಲುಕಿದ ಕನ್ನಡಪರ ಕಾರ್ಯಕರ್ತರು

    ಬೆಂಗಳೂರು: ಕನ್ನಡಪರ ಸಂಘಟನೆಯವರು ಎಂದು ಹೇಳಿಕೊಂಡು ಬಂದವರಿಗೆ ಸರೋಜಿನಿ ಮಹಿಷಿ ವರದಿ ಬಗ್ಗೆ ಗೊತ್ತಿಲ್ಲವಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

    ಸರೋಜಿನಿ ಮಹಿಷಿ ವರದಿ ಸಂಬಂಧ ಚರ್ಚೆಗೆ ಸಿಎಂ ಯಡಿಯೂರಪ್ಪನವರು ಕನ್ನಡಪರ ಸಂಘಟನೆಗಳ ಮುಖಂಡರಿಗೆ ಮಾತುಕತೆಗೆ ಆಹ್ವಾನ ಕೊಟ್ಟಿದ್ದರು. ಆದರೆ ಬಂದ್ ಗೆ ಕರೆಕೊಟ್ಟ ಯಾವ ಸಂಘಟನೆಗಳ ಪ್ರತಿನಿಧಿಗಳೂ ಸಿಎಂ ಜೊತೆ ಮಾತುಕತೆಗೆ ಬರಲಿಲ್ಲ. ಬದಲಾಗಿ ಬಂದ್ ಗೆ ಬೆಂಬಲ ಇಲ್ಲದ ಕನ್ನಡಪರ ಸಂಘಟನೆಯೊಂದರ ಬೆರಳೆಣಿಕೆಯಷ್ಟು ಕಾರ್ಯಕರ್ತರು ಇವತ್ತು ಸಿಎಂ ಭೇಟಿಗೆ ಡಾಲರ್ಸ್ ಕಾಲೋನಿ ನಿವಾಸದ ಬಳಿ ಬಂದಿದ್ದರು. ಕನ್ನಡಿಗರಿಗೆ ಉದ್ಯೋಗದಲ್ಲಿ ಶೇ.85 ಮೀಸಲಾತಿ ಕುರಿತು ಮುಂಬರುವ ರಾಜ್ಯ ಬಜೆಟ್ ನಲ್ಲಿ ಘೋಷಣೆ ಮಾಡಬೇಕು ಅನ್ನೋದು ಈ ಕನ್ನಡ ಸಂಘಟನೆ ಕಾರ್ಯಕರ್ತರ ಒತ್ತಾಯ ಆಗಿತ್ತು.

    ಕೆಲ ಹೊತ್ತಿನ ಬಳಿಕ ಮುಖ್ಯಮಂತ್ರಿಗಳು ವಿಧಾನಸೌಧಕ್ಕೆ ಹೋಗಲು ಧವಳಗಿರಿ ನಿವಾಸದಿಂದ ಹೊರಬಂದರು. ಈ ವೇಳೆ ಕನ್ನಡಪರ ಕಾರ್ಯಕರ್ತರು ಎಂದು ಹೇಳಿಕೊಂಡವರು ಸಿಎಂಗೆ ತಮ್ಮ ಮನವಿ ಪತ್ರ ಕೊಟ್ಟು ಬಜೆಟ್ ನಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಶೇ.85 ರಷ್ಟು ಮೀಸಲಾತಿಗೆ ಒತ್ತಾಯಿಸಿದರು. ಅಲ್ಲದೇ ಬಜೆಟ್ ನಲ್ಲಿ ಘೋಷಣೆ ಮಾಡಲಿಲ್ಲ ಅಂದ್ರೆ ವಿಧಾನಸೌಧದ ಮುಂದೆ ವಿಷ ಕುಡಿಯಬೇಕಾಗುತ್ತೆ ಎಂದೂ ಈ ಕನ್ನಡ ಪರ ಕಾರ್ಯಕರ್ತರು ಸಿಎಂ ಗೆ ಎಚ್ಚರಿಕೆ ನೀಡಿದರು. ಇವರ ಈ ಎಚ್ಚರಿಕೆಗೆ ಸಿಎಂ ಯಡಿಯೂರಪ್ಪ, ಹಾಗೆಲ್ಲ ಎಚ್ಚರಿಕೆ ಕೊಡೋಕೆ ಬರಬೇಡಿ ಎಂದು ಸಿಟ್ಟಾದ್ರು. ಸಿಟ್ಟಲ್ಲೇ ಸಿಎಂ ವಿಧಾನಸೌಧಕ್ಕೆ ತೆರಳಿದರು.

    ಇವರಿಗೆ ಮಹಿಷಿ ವರದಿ ಬಗ್ಗೆ ಗೊತ್ತೇ ಇಲ್ಲವಾ?:
    ಅಸಲಿ ವಿಷಯ ಈಗ ಇರೋದು. ಅಷ್ಟಕ್ಕೂ ಈ ಸಂಘಟನೆಯ ರಾಜ್ಯಾಧ್ಯಕ್ಷ ಅಂತ ಹೇಳಿಕೊಂಡಿರುವ ವ್ಯಕ್ತಿಗೇ ಸರೋಜಿನಿ ಮಹಿಷಿ ವರದಿ ಬಗ್ಗೆ ಮಾಹಿತಿ ಗೊತ್ತಿರಲಿಲ್ಲ. ಈ ಕನ್ನಡಪರ ಸಂಘಟನೆ ಮುಖಂಡರಿಗೆ ಮಹಿಷಿ ವರದಿ ಬಗ್ಗೆ ಮಾಹಿತಿ ಗೊತ್ತಿಲ್ಲದೇ ಸಿಎಂಗೆ ಮನವಿ ಕೊಡಲು ಬಂದು ಪೇಚಿಗೆ ಸಿಲುಕಿದ ಪ್ರಸಂಗ ನಡೆಯಿತು. ಸಿಎಂ ಭೇಟಿ ಬಳಿಕ ಈ ಕನ್ನಡಪರ ಸಂಘಟನೆಯ ಅಧ್ಯಕ್ಷರಿಗೆ ಮಾಧ್ಯಮದವರು ಸರೋಜಿನಿ ಮಹಿಷಿ ವರದಿ ಬಗ್ಗೆ ಹಲವು ಪ್ರಶ್ನೆಗಳನ್ನು ಕೇಳಿದರು. ಆದರೆ ಸಂಘಟನೆಯ ಅಧ್ಯಕ್ಷರಿಗೇ ಸರೋಜಿನಿ ಮಹಿಷಿ ಯಾರು, ಅವರ ವರದಿ ಯಾವಾಗ ಬಂತು ಅನ್ನೋ ಮಾಹಿತಿ ಗೊತ್ತಿಲ್ಲ. ಇನ್ನು ಮಹಿಷಿ ವರದಿ ಪರಿಷ್ಕರಣೆ ಯಾವಾಗಾಯ್ತು ಎಂಬುದೂ ಗೊತ್ತಿಲ್ಲ.

    ಸರೋಜಿನಿ ಮಹಿಷಿ ವರದಿಯಲ್ಲಿರೋ ಶಿಫಾರಸ್ಸು ಅಂಶಗಳೂ ಈ ಸಂಘಟನೆ ಅಧ್ಯಕ್ಷರಿಗೆ ಗೊತ್ತಿಲ್ಲ. ವರದಿ ಅನುಷ್ಠಾನ ಯಾವಾಗಾಯ್ತು ಎಂದರೆ ಒಬ್ಬಬ್ಬರದ್ದೂ ಒಂದೊಂದು ಮಾತು. ಅಧ್ಯಕ್ಷ ಮಾಧ್ಯಮಗಳಿಗೆ ವರದಿ ಯಾವಾಗ ಆಯ್ತು ಅಂತ ತಪ್ಪು ಹೇಳ್ತಿದ್ರೆ, ಹಿಂದೆ ನಿಂತಿದ್ದ ಸಂಘಟನೆಯ ಇತರೇ ಕಾರ್ಯಕರ್ತರು ತಲೆ ತಲೆ ಚಚ್ಚಿಕೊಂಡ ಪ್ರಸಂಗವೂ ಸಹ ನಡೆಯಿತು.

  • ಕರ್ನಾಟಕ ಬಂದ್ – ಏನು ಇರುತ್ತೆ? ಏನು ಇರಲ್ಲ? ಬೆಂಬಲ ನೀಡಿದವರು ಯಾರು?

    ಕರ್ನಾಟಕ ಬಂದ್ – ಏನು ಇರುತ್ತೆ? ಏನು ಇರಲ್ಲ? ಬೆಂಬಲ ನೀಡಿದವರು ಯಾರು?

    ಬೆಂಗಳೂರು: ಸರೋಜಿನಿ ಮಹಿಷಿ ವರದಿ ಜಾರಿ ವಿಚಾರವಾಗಿ ಫೆ.13 ಗುರುವಾರ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‍ಗೆ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ಬರೋಬ್ಬರೀ 400 ಕನ್ನಡ ಸಂಘಟನೆಗಳಿಂದ ಬಂದ್‍ಗೆ ಬೆಂಬಲ ವ್ಯಕ್ತಪಡಿಸಿದೆ.

    ಯಾರೆಲ್ಲಾ ಬೆಂಬಲ ನೀಡುತ್ತಿದ್ದಾರೆ?
    ಬರೋಬ್ಬರಿ 400 ಕನ್ನಡ ಸಂಘಟನೆಗಳಿಂದ ಬಂದ್‍ಗೆ ಬೆಂಬಲ ವ್ಯಕ್ತಪಡಿಸಿದೆ. ಕನ್ನಡ ಸಂಘಟನೆಗಳ ಒಕ್ಕೂಟ, ಓಲಾ-ಉಬರ್ ಕಾರು ಚಾಲಕರ ಸಂಘ, ಚಾಲಕರ ಸಂಘಟನೆಗಳ ಒಕ್ಕೂಟ, ಆಟೋ-ಟ್ಯಾಕ್ಸಿ ಚಾಲಕರ ಸಂಘ ಕರ್ನಾಟಕ ಬಂದ್‍ಗೆ ಬೆಂಬಲ ಸೂಚಿಸಿದೆ. ಇತ್ತ ನಮ್ಮ ಕನ್ನಡ ರಕ್ಷಣಾ ವೇದಿಕೆ, ಜಯ ಕರ್ನಾಟಕ, ದಲಿತ ಪರ ಸಂಘಟನೆಗಳ ಒಕ್ಕೂಟ, ಮಹಿಳಾ ಸಂಘಟನೆಗಳ ಒಕ್ಕೂಟ, ರೈತ ಹೋರಾಟ ಸಂಘಗಳು, ಸಿಐಟಿಯು ಸೇರಿದಂತೆ ಕಾರ್ಮಿಕ ಸಂಘಟನೆಗಳಿಂದಲೂ ಬೆಂಬಲ ವ್ಯಕ್ತವಾಗಿದೆ.

    ಬೀದಿವ್ಯಾಪಾರಿಗಳ ಸಂಪೂರ್ಣ ಬೆಂಬಲ:
    ಬೀದಿ ಬದಿ ಹೋಟೆಲ್, ಬಟ್ಟೆಯಂಗಡಿ, ಪಾನಿಪೂರಿ ಅಂಗಡಿ, ಬೀದಿ ಬದಿ ತರಕಾರಿ, ಹೂವು, ಹಣ್ಣಿನಂಗಡಿ ಬಂದ್‍ಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ. ರಾಜ್ಯದ 4,80,000 ಹಾಗೂ ಬೆಂಗಳೂರಿನಲ್ಲಿ 80 ಸಾವಿರ ಬೀದಿ ವ್ಯಾಪಾರಿಗಳು ಗುರುವಾರ ವ್ಯಾಪಾರ ಸ್ಥಗಿತಗೊಳಿಸಲಿದ್ದಾರೆ. ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಸಂಪೂರ್ಣ ಬಂದ್‍ಗೆ ಬೆಂಬಲ ನೀಡಲು ನಿರ್ಧರಿಸಿದ್ದಾರೆ. ಈ ಬಗ್ಗೆ ಬೀದಿ ವ್ಯಾಪಾರಿಗಳ ಒಕ್ಕೂಟದ ಅಧ್ಯಕ್ಷ ಸಿ.ಇ ರಂಗಸ್ವಾಮಿ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.

    ಶಾಲಾ-ಕಾಲೇಜು ರಜೆ ಇರುತ್ತಾ?
    ಹೀಗಾಗಿ ಸಾರಿಗೆ ಬಸ್‍ಗಳ, ಆಟೋಗಳ ಸಂಚಾರ ಇರುತ್ತಾ? ಇಲ್ಲವಾ ಎನ್ನುವ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಶಾಲಾ ಕಾಲೇಜುಗಳಿಗೆ ರಜೆ ಇರುತ್ತಾ ಎನ್ನುವ ಬಗ್ಗೆ ಕೂಡ ನಿಖರ ಮಾಹಿತಿ ಲಭ್ಯವಾಗಿಲ್ಲ. ಆದರೆ ಫೆ. 12ರಂದು ನಮ್ಮ ತೀರ್ಮಾನ ತಿಳಿಸುತ್ತೇವೆ ಎಂದು ಅನೇಕ ಸಂಘಟನೆಗಳು ಹೇಳುತ್ತಿವೆ. ಹೀಗಾಗಿ ಫೆ. 13ರಂದು ಬಂದ್‍ಗೆ ಇನ್ನು ಹೆಚ್ಚು ಬೆಂಬಲ ವ್ಯಕ್ತವಾದರೆ ಬೆಂಗಳೂರು ಸ್ಥಬ್ಧವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

    ಇತ್ತ ಕರ್ನಾಟಕ ಬ್ಯಾಂಕ್ ಎಂಪ್ಲಾಯಿಸ್ ಫೆಡರಲ್ ಅಸೋಸಿಯೇಶನ್ ಬಂದ್‍ಗೆ ನೈತಿಕ ಬೆಂಬಲಕ್ಕೆ ನೀಡುವ ಸಾಧ್ಯತೆ ಇದೆ. ಆದರೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಿ ಬಂದ್ ಮಾಡಬೇಕಾ? ಇಲ್ವ? ಎಂದು ತೀರ್ಮಾನ ಮಾಡುತ್ತೇವೆ ಎಂದು ಅಸೋಸಿಯೇಷನ್ ಕಾರ್ಯದರ್ಶಿ ಅಜೇಯ್ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.

    ಮಾಲ್‍ಗಳು ಇಲ್ಲಿಯವರಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಮಾಲ್ ಮುಚ್ಚಬೇಕಾ? ತೆಗೆಯಬೇಕಾ ಎನ್ನುವುದು ಸ್ಪಷ್ಟವಾಗಿಲ್ಲ. ಮಾಲ್‍ಗಳ ಮಾಲೀಕರ ಜತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಮಾಲ್‍ಗಳಿಗೆ ಎಂದಿನಂತೆ ನೆಟ್ ಹಾಕಿ ರಕ್ಷಿಸಲು ತೀರ್ಮಾನ ಮಾಡಲಾಗಿದ್ದು, ಮಾಲ್ ಮುಂದೆ ಕನ್ನಡ ಬಾವುಟ ಹಾಕಬೇಕು, ನೈತಿಕ ಬೆಂಬಲ ಕೊಡಬೇಕೆಂದು ಕನ್ನಡಪರ ಸಂಘಟನೆಗಳು ಮಾಲ್ ಮಾಲೀಕರ ನಡುವೆ ಚರ್ಚೆಯಲ್ಲಿ ತೀರ್ಮಾನಿಸಲಾಗಿದೆ ಎನ್ನಲಾಗುತ್ತಿದೆ.

    ಖಾಸಗಿ ಬಸ್ ಅಸೋಸಿಯೇಷನ್‍ಗೆ ಬಂದ್ ಮಾಡುವಂತೆ ಯಾರು ಪ್ರಸ್ತಾವನೆಯೇ ನೀಡಿಲ್ಲ. ಕನ್ನಡ ಪರ ಸಂಘಟನೆಗಳ ಬಂದ್ ಕರೆ ಬಗ್ಗೆ ಮಾಹಿತಿಯೇ ಇಲ್ಲ. ಕನ್ನಡಕ್ಕಾಗಿ ಬಂದ್ ಮಾಡಿದ್ದರೆ ಒಳಿತು. ನಮ್ಮನ್ನು ಯಾವುದಾದರೂ ಸಂಘಟನೆಯವರು ಕರೆ ಮಾಡಿ ಬೆಂಬಲ ಕೇಳಿದರೆ ತೀರ್ಮಾನ ಮಾಡುತ್ತೇವೆ ಎಂದು ಖಾಸಗಿ ಬಸ್ ಅಸೋಸಿಯೇಷನ್‍ಗೆ ಕಾರ್ಯದರ್ಶಿ ಸತ್ಯಪ್ಪ ಅವರು ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ. ಹಾಗೆಯೇ ಕರ್ನಾಟಕ ರಾಜ್ಯ ಟ್ರಾವೆಲ್ ಮಾಲೀಕರ ಸಂಘ ಇನ್ನು ಅಂತಿಮ ತೀರ್ಮಾನ ಮಾಡಿಲ್ಲ. ಆದರೆ ನೈತಿಕ ಬೆಂಬಲ ಈಗಲೂ ಇದೆ ಎಂದು ಸಂಘದ ಅಧ್ಯಕ್ಷ ರಾಧಕೃಷ್ಣ ಹೊಳ ಪ್ರತಿಕ್ರಿಯಿಸಿದ್ದಾರೆ.

    ಪ್ರವೀಣ್ ಕುಮಾರ್ ಶೆಟ್ಟಿ ಬಣದಿಂದ ಬೆಂಬಲವಿಲ್ಲ:
    ಬಂದ್‍ಗೆ ಬೆಂಬಲ ಕೊಡಬೇಕೋ? ಬೇಡವೋ ಎಂದು ಇಂದು ಸಂಜೆ ನಿರ್ಧಾರ ಪ್ರಕಟಿಸುತ್ತೇವೆ. ಈ ಬಗ್ಗೆ ಚರ್ಚಿಸಲು ಪ್ರವೀಣ್ ಕುಮಾರ್ ಶೆಟ್ಟಿ ಅವರು ರಾಜ್ಯ ಮಟ್ಟದ ಪದಾಧಿಕಾರಿಗಳ ಸಭೆ ಕರೆದಿದ್ದಾರೆ. ಕೆಲ ಬೆರಳಿಕೆ ಸಂಘಟನೆಗಳು ಬಂದ್‍ಗೆ ಕರೆ ಕೊಟ್ಟರೆ ಬಂದ್ ಆಗಲ್ಲ. ಬಂದ್‍ನಿಂದ ಕನ್ನಡಿಗರಿಗೆ ಹೊರೆಯಾಗುತ್ತೆ ಬಿಟ್ಟರೆ ಇದರಿಂದ ಸರೋಜಿನಿ ಮಹಿಷಿ ವರದಿ ಜಾರಿಯಾಗಲ್ಲ. ಈ ವರದಿ ಜಾರಿಯನ್ನು ಮುಖ್ಯಮಂತ್ರಿಗಳೇ ಜಾರಿ ಮಾಡಬೇಕಿದೆ. ಹೀಗಾಗಿ ಮುಖ್ಯಮಂತ್ರಿಗಳನ್ನ ಎಚ್ಚರಿಸುವ ಕೆಲಸ ಆಗಬೇಕಿದೆ. ಬಂದ್ ಮಾಡುವುದರಿಂದ ಜನ ಸಾಮಾನ್ಯರಿಗೆ ತೊಂದರೆಯಾಗುತ್ತೆ. ಬಂದ್ ಬಗ್ಗೆ ನಾವು ಗಮನ ಹರಿಸಿಲ್ಲ. ಇದೇ ವರದಿ ಜಾರಿಗೆಗೆ ಆಗ್ರಹಿಸಿ ನಾವು ಅತ್ತಿಬೆಲೆಯಿಂದ ಜಾಥ ನಡೆಸಿ ಸಿಎಂಗೆ ಮನವಿ ಮಾಡ್ತೇವೆ. ಜಾಥ ನಡೆಸುವ ಕುರಿತು ಶೀಘ್ರದಲ್ಲೇ ದಿನಾಂಕ ಪ್ರಕಟ ಮಾಡ್ತೇವೆ ಎಂದು ಪ್ರವೀಣ್ ಕುಮಾರ್ ಶೆಟ್ಟಿ ಹೇಳಿಕೆ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.

  • ರಸ್ತೆಯಲ್ಲಿ ಸಂಕ್ರಾಂತಿ ಆಚರಿಸಿ ಪ್ರತಿಭಟಿಸಿದ ಕನ್ನಡ ಸಂಘಟನೆಯ ಸದಸ್ಯರು

    ರಸ್ತೆಯಲ್ಲಿ ಸಂಕ್ರಾಂತಿ ಆಚರಿಸಿ ಪ್ರತಿಭಟಿಸಿದ ಕನ್ನಡ ಸಂಘಟನೆಯ ಸದಸ್ಯರು

    ಬೆಂಗಳೂರು: ಸಂಕ್ರಾಂತಿ ಹಬ್ಬ ಅಂದರೆ ಸಡಗರ ಸಂಭ್ರಮ ಜೋರಾಗಿರುತ್ತೆ. ಮನೆಯ ಮುಂದೆ ಬಣ್ಣದ ರಂಗೋಲಿ ಹಾಕಿ, ಎಳ್ಳು ಬೆಲ್ಲ ಬೀರಿ, ಕಬ್ಬು ಸವಿದು ಹಬ್ಬದೂಟ ಮಾಡುವ ಖುಷಿ ಇರುತ್ತೆ. ಆದರೆ ಬೆಂಗಳೂರಿನಲ್ಲಿ ಮಾತ್ರ ಕನ್ನಡ ಸಂಘಟನೆ ಕಾರ್ಯಕರ್ತರು, ಮಹಿಳೆಯರು ರಸ್ತೆಯಲ್ಲೇ ಸಂಕ್ರಾಂತಿ ಆಚರಿಸಿದರು.

    ಸರೋಜಿನಿ ಮಹಿಷಿ ವರದಿ ಜಾರಿಗಾಗಿ ಮೌರ್ಯ ಸರ್ಕಲ್‍ನಲ್ಲಿ ಸಾಕಷ್ಟು ದಿನದಿಂದ ಕನ್ನಡ ಸಂಘಟನೆಯವರು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ರಸ್ತೆಯಲ್ಲಿಯೇ ರಂಗೋಲಿ ಹಾಕಿ, ರಸ್ತೆಯಲ್ಲಿ ಓಡಾಡೋ ಜನರಿಗೆ ಎಳ್ಳು ಬೆಲ್ಲ ಕೊಟ್ಟು, ಹಬ್ಬದ ಖಾದ್ಯವನ್ನು ಅಲ್ಲಿಯೇ ತಯಾರಿಸಿ ಭಿನ್ನವಾಗಿ ಕನ್ನಡ ಸಂಘಟನೆ ಕಾರ್ಯಕರ್ತರು ಹಾಗೂ ಮಹಿಳೆಯರು ಪ್ರತಿಭಟನೆ ನಡೆಸಿದರು.

    ರಸ್ತೆಯಲ್ಲಿ ಹಬ್ಬ ಆಚರಿಸಿದ ಬಗ್ಗೆ ಮಾತನಾಡಿದ ಕಾರ್ಯಕರ್ತರು, ಹಬ್ಬ ಅಂದರೆ ಸಂಭ್ರಮವಿರುತ್ತದೆ. ಆದರೆ ನಾವು ಕನ್ನಡಕ್ಕಾಗಿ, ಕನ್ನಡಿಗರ ಅಭಿವೃದ್ಧಿಗಾಗಿ ಸಂಕ್ರಾಂತಿಯನ್ನು ಇಲ್ಲೇ ಆಚರಣೆ ಮಾಡುತ್ತಿದ್ದೇವೆ. ಮುಂದೆ ಸರೋಜಿನಿ ಮಹಿಷಿ ವರದಿ ಜಾರಿಯಾಗದೇ ಇದ್ದರೆ ತಿಥಿನೂ ಇಲ್ಲೇ ಮಾಡುತ್ತೇವೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.