Tag: Kannada Organization

  • ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ಹಲ್ಲೆ, ದೌರ್ಜನ್ಯ

    ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ಹಲ್ಲೆ, ದೌರ್ಜನ್ಯ

    ಚಿಕ್ಕಬಳ್ಳಾಪುರ: ತಮಿಳುನಾಡಿನ ಮೇಲ್ ಮರವತ್ತೂರಿನಲ್ಲಿ ಕನ್ನಡಿಗರ ಮೇಲೆ ತಮಿಳಿಗರು ಮನಸ್ಸೋ ಇಚ್ಛೆ ಹಲ್ಲೆ ಮಾಡಿ ದೌರ್ಜನ್ಯ ಎಸಗಿರುವ ಘಟನೆ ನಡೆದಿದೆ.

    ಚಿಕ್ಕಬಳ್ಳಾಪುರ ನಗರ ಹಾಗೂ ಯಲಹಂಕ ಬಳಿಯ ಸಿಂಗನಾಯಕನಹಳ್ಳಿಯಿಂದ ಖಾಸಗಿ ಬಸ್ ಮೂಲಕ 53 ಮಂದಿ ಭಕ್ತರು ಮೇಲ್ ಮರವತ್ತೂರಿನ ಆದಿ ಪರಾಶಕ್ತಿ ಶ್ರೀ ಓಂ ಶಕ್ತಿ ದೇವಸ್ಥಾನಕ್ಕೆ ಗುರುವಾರ ತೆರಳಿದ್ದರು. ಶುಕ್ರವಾರ ಬೆಳಗ್ಗೆ ದೇವರ ದರ್ಶನ ಮುಗಿಸಿ ವಾಪಸ್ ಬರುವಾಗ ಪಾರ್ಕಿಂಗ್ ಜಾಗದ ಬಳಿ ತಮಿಳಿಗರು ಕಿರಿಕ್ ಮಾಡಿ, ಕನ್ನಡಿಗರ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಮೆರೆದಿದ್ದಾರೆ.

    ಪಾರ್ಕಿಂಗ್ ಜಾಗದಲ್ಲಿ ಬಸ್ ಹಾಕಿಲ್ಲ ಎಂದು ಕಿರಿಕ್ ತೆಗೆದ ತಮಿಳಿಗರು, ಮೊದಲು ಚಾಲಕನ ಜೊತೆ ಕಿರಿಕ್ ಮಾಡಿದ್ದಾರೆ. ನಂತರ ಅಲ್ಲಿಂದ ಬಸ್ ತೆಗೆಯಲು ಹೋದಾಗ ಟ್ರಾಫಿಕ್ ಜಾಮ್ ಉಂಟಾಗಿ ಸಮಸ್ಯೆ ಆಗಿದೆ. ಈ ವೇಳೆ ‘ಏನು ಮದ್ಯಪಾನ ಮಾಡಿ ಗಾಡಿ ಒಡಿಸ್ತೀದಿಯಾ’ ಎಂದು ಗಲಾಟೆ ಶುರು ಮಾಡಿದ್ದಾರೆ. ಈ ವಿಚಾರಕ್ಕೆ ಚಾಲಕ ಹಾಗೂ ತಮಿಳಿಗರ ನಡುವೆ ದೊಡ್ಡ ವಾಗ್ವಾದ ನಡೆದಿದೆ ಎನ್ನಲಾಗಿದೆ.

    ಚಾಲಕನ ಪರ ಹೋದ ಕನ್ನಡಿಗ ಭಕ್ತರ ಮೇಲೂ 10-15 ಮಂದಿಯ ಗುಂಪು ದೌರ್ಜನ್ಯ ಮಾಡಿ ಬಸ್ ಹತ್ತಿಸಿರೋ ದೃಶ್ಯ ಮೊಬೈಲ್‍ನಲ್ಲಿ ಸೆರೆಯಾಗಿದೆ. ಚಾಲಕ ಹಾಗೂ ಕ್ಲೀನರ್ ಗೆ ಮನಸ್ಸೋ ಇಚ್ಛೆ ಕೋಲಿನಿಂದ ಥಳಿಸಿದ್ದಾರೆ. ಅಲ್ಲದೇ ಅವರಿಗೆ ಎದುರು ಮಾತನಾಡಿದ ಭಕ್ತರ ಮೇಲೆಯೂ ಹಲ್ಲೆ ಮಾಡಲಾಗಿದೆ. ಹಲ್ಲೆಯ ದೃಶ್ಯ ಸೆರೆ ಹಿಡಿದವರ ಮೊಬೈಲ್‍ಗಳನ್ನು ಸಹ ಕಸಿದುಕೊಳ್ಳಲಾಗಿದೆ. ಕೊನೆಗೆ ಕನ್ನಡಿಗರು ಸುಮ್ಮನಾಗಿ ವಾಪಸ್ ಬಂದಿದ್ದಾರೆ.

    ಸದ್ಯಕ್ಕೆ ಹಲ್ಲೆ ವಿಚಾರ ಕಸ್ತೂರಿ ಕನ್ನಡಪರ ಸಂಘಟನೆ ಪದಾಧಿಕಾರಿಗಳ ಗಮನಕ್ಕೆ ಬಂದಿದ್ದು, ಇಂದು ದೂರು ಕೊಡಲು ಮುಂದಾಗಿದ್ದಾರೆ. ಇದೆಲ್ಲಾ ಬಸ್‍ನ ಹಿಂಭಾಗ ಕನ್ನಡದ ಧ್ವಜ ಕಟ್ಟಿಕೊಂಡು ಹೋಗಿದ್ದಕ್ಕೆ ಕಿರಿಕ್ ಮಾಡಿ ತಮಿಳಿಗರು ಈ ರೀತಿ ಹಲ್ಲೆ ನಡೆಸಿದ್ದಾರೆ ಎಂಬುದು ಕನ್ನಡಪರ ಸಂಘಟನೆಯ ಆರೋಪವಾಗಿದೆ.

  • ಆರು ಸಂಘಟನೆ, ಒಬ್ಬರೇ ಅಧ್ಯಕ್ಷ – ಸರ್ಕಾರದಿಂದ ಅನುದಾನದ ಮೇಲೆ ಅನುದಾನ

    ಆರು ಸಂಘಟನೆ, ಒಬ್ಬರೇ ಅಧ್ಯಕ್ಷ – ಸರ್ಕಾರದಿಂದ ಅನುದಾನದ ಮೇಲೆ ಅನುದಾನ

    – ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಡೆಗೆ ಸಂಘಟನೆಗಳ ಆಕ್ರೋಶ

    ಬೆಂಗಳೂರು: ಕನ್ನಡ ಅಭಿವೃದ್ಧಿಗಾಗಿ ಅನೇಕ ಸಂಘ ಸಂಸ್ಥೆಗಳು, ಕನ್ನಡ ಸಂಘಟನೆಗಳು ತೆರೆಮರೆಯಲ್ಲಿ ಕೆಲಸ ಮಾಡುತ್ತಲೇ ಇವೆ. ಇದಕ್ಕಾಗಿ ಇಲಾಖೆ ಪ್ರತೀ ವರ್ಷ ವಿವಿಧ ಸಂಘ ಸಂಸ್ಥೆಗಳಿಗೆ ಅನುದಾನ ನೀಡುತ್ತದೆ. ಆದರೆ ಅನುದಾನ ನೀಡಿಕೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಆರೋಪವೊಂದು ಕೇಳಿಬಂದಿದೆ.

    ಡಾ. ಶರಣ ಬಸವ ಗದ್ದುಗೆ ಎಂಬ ವ್ಯಕ್ತಿ ಅಧ್ಯಕ್ಷರಾಗಿರುವ ಆರು ಸಂಘಟನೆಗಳಿಗೂ ಅನುದಾನ ನೀಡಲಾಗುತ್ತಿದೆ ಅಂತ ದೂರು ನೀಡಲಾಗಿದೆ. ಈ ಪ್ರಕರಣ ಉಳಿದ ಕನ್ನಡ ಸಂಘಟನೆಗಳ ಕಣ್ಣು ಕೆಂಪಾಗುವಂತೆ ಮಾಡಿದೆ. ದೂರಿನಲ್ಲಿ ನೀಡಿರುವ ಪ್ರಕಾರ ಡಾ. ಶರಣ ಬಸವ ಗದ್ದುಗೆ ಅಧ್ಯಕ್ಷರಾಗಿರುವ ಸಂಘಟನೆಗಳ ವಿವರ ಹೀಗಿದೆ.
    1. ಕರ್ನಾಟಕ ರಕ್ಷಣಾ ವೇದಿಕೆ ಉತ್ತರ ಕರ್ನಾಟಕ
    2. ಶ್ರೀ ಚರ ಬಸವೇಶ್ವರ ಸಂಗೀತ ಸೇವಾ ಸಮಿತಿ
    3. ಕರ್ನಾಟಕ ಸಂಸ್ಕೃತಿ ಹಾಗೂ ಭಾಷಾ ಅಭಿವೃದ್ಧಿ ಸಂಸ್ಥೆ
    4. ಸರಗನಾಡು ಸೇವಾ ಪ್ರತಿಷ್ಠಾನ
    5. ಶೃಷ್ಟಿ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ
    6. ಸರಗನಾಡು ಕಲಾ ವೇದಿಕೆ

    ಪ್ರತಿ ವರ್ಷ ಏನಿಲ್ಲವೆಂದ್ರೂ ಒಂದು ಸಂಘಟನೆಗೆ ಕನಿಷ್ಟ 1 ಲಕ್ಷದಿಂದ 5 ಲಕ್ಷದವರೆಗೆ ಅನುದಾನ ಸಿಗತ್ತದೆ. ಈ ಆರು ಸಂಘಟನೆಗಳಿಗೂ ಪ್ರತೀ ವರ್ಷ ಅನುದಾನ ನೀಡಲಾಗುತ್ತಿದೆ. ಇದಕ್ಕೆ ಇತರ ಕನ್ನಡ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು, ಬೇರೆ ಸಂಘಟನೆಗಳಿಗೆ ಸಿಗದ ಅನುದಾನ ಈ ಸಂಘಟನೆಗಳಿಗೆ ಹೇಗೆ ಸಿಕ್ತಿದೆ..? ಅಧಿಕಾರಿಗಳು ಶಾಮೀಲಾಗಿ ಅನುದಾನ ಬಿಡುಗಡೆಯಾಗುವಂತೆ ನೋಡಿಕೊಳ್ತಿದ್ದಾರೆ ಅಂತ ಕರ್ನಾಟಕ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಾಗೇಶ್ ಕಿಡಿಕಾರಿದ್ದಾರೆ.

    ದೂರು ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಡಾ. ಶರಣ ಬಸವ ಗದ್ದುಗೆ, ಮೊದ ಮೊದಲು ನಂದು ಕೇವಲ ಒಂದೇ ಸಂಘಟನೆ ಎಂದ್ರು. ನಂತರ ಒಂದಕ್ಕೆ ಸಂಸ್ಥಾಪಕ ಅಧ್ಯಕ್ಷ, ಇನ್ನೊಂದಕ್ಕೆ ಅಧ್ಯಕ್ಷನಾಗಿದ್ದೇನೆ ಅಂದ್ರು ಬಳಿಕ ಮೂರು ಸಂಘಟನೆಗಳಿಗೆ ಅಧಕ್ಷನಾಗಿರಬಹುದು. ಆದ್ರೆ ಸದಸ್ಯರುಗಳು ಬೇರೆ ಬೇರೆ ಇದ್ದಾರೆ ಎಂದು ಸಮಜಾಯಿಷಿ ನೀಡಿದರು.

    ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ವಿಶುಕುಮಾರ್ ಗಮನಕ್ಕೆ ತರಲಾಗಿದ್ದು, ನೋಟಿಸ್ ನೀಡಿ ಕ್ರಮಕೈಗೊಳ್ಳುವ ಭರವಸೆ ನೀಡದ್ದಾರೆ. ಸಚಿವೆ ಜಯಮಾಲಾ ಮೇಡಂ ಇಂಥ ಅಕ್ರಮಗಳಿಗೆ ಕಡಿವಾಣ ಹಾಕಿದ್ರೆ ಜನರ ತೆರಿಗೆ ಹಣವನ್ನ ಸಮರ್ಪಕವಾಗಿ ಬಳಸಿಕೊಳ್ಳಬಹುದು ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರಾಜರಥ ಸಿನಿಮಾ ತಂಡದ ವಿರುದ್ಧ ಮತ್ತೊಂದು ದೂರು ದಾಖಲು

    ರಾಜರಥ ಸಿನಿಮಾ ತಂಡದ ವಿರುದ್ಧ ಮತ್ತೊಂದು ದೂರು ದಾಖಲು

    ಬೆಂಗಳೂರು: ರಾಜರಥ ಸಿನಿಮಾ ತಂಡದ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು ದೂರು ದಾಖಲಾಗಿದೆ.

    ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆ ರಾಜರಥ ಸಿನಿಮಾ ತಂಡದ ವಿರುದ್ಧ ದೂರು ನೀಡಿದ್ದು, ತಕ್ಷಣ ರಾಜರಥ ಸಿನಿಮಾ ಪ್ರದರ್ಶನ ನಿಲ್ಲಿಸದೆ ಇದ್ದರೆ ಪ್ರತಿಭಟನೆ ನಡೆಸುವ ಕುರಿತು ಎಚ್ಚರಿಕೆ ನೀಡಿದೆ. ಅಲ್ಲದೇ ರಾಜರಥ ಸಿನಿಮಾ ನಟ ನಟಿ ಮತ್ತು ನಿರ್ದೇಶಕರನ್ನು ಆರು ತಿಂಗಳ ಕಾಲ ಚಿತ್ರೋದ್ಯಮದಿಂದ ಅಮಾನತು ಮಾಡಬೇಕು ಎಂದು ಸಂಘಟನೆಯ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಸಂದರ್ಶನದಲ್ಲಿ ಕನ್ನಡ ಸಿನಿಮಾವನ್ನ ನೋಡದೇ ಇರುವರು ಅಂತ ಹೇಳಿಲ್ಲ, ರಾಜರಥ ಸಿನಿಮಾವನ್ನ ನೋಡದೇ ಇರುವವರು ಕಚಡಾಗಳು ಎಂದು ಹೇಳಿಕೆ ಕೊಟ್ಟಿರುವುದು ನೋವುಂಟು ಮಾಡಿದೆ ಎಂದು ದೂರಿನಲ್ಲಿ ಸಂಘಟನೆ ಆರೋಪಿಸಿದೆ.

    ಕರ್ನಾಟಕ ಸಂಘಟನೆಗಳ ಒಕ್ಕೂಟ ಇದೇ ಕಾರಣಕ್ಕಾಗಿ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಚಿತ್ರ ತಂಡದ ವಿರುದ್ಧ ಮಂಗಳವಾರ ದೂರು ದಾಖಲಿಸಿತ್ತು.

    ಖಾಸಗಿ ರೇಡಿಯೋ ಕಾರ್ಯಕ್ರಮದಲ್ಲಿ ಭಾಗಿವಹಿಸಿದ್ದ ರಾಜರಥ ಸಿನಿಮಾ ತಂಡ, ರಾಜರಥ ಸಿನಿಮಾ ನೋಡದ ಪ್ರೇಕ್ಷಕ “ಕಚಡ ನನ್ಮಕ್ಳು” ಎನ್ನುವ ಹೇಳಿಕೆ ನೀಡಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ಸಾರ್ವಜನಿಕ ವಲಯದಿಂದ ತೀವ್ರ ಅಕ್ರೋಶ ವ್ಯಕ್ತವಾಗಿತ್ತು.  ಇದನ್ನೂ ಓದಿ: ರಾಜರಥ ಸಿನಿಮಾ ವಿವಾದದ ಕುರಿತಾಗಿ ಅಚ್ಚರಿಯ ಹೇಳಿಕೆ ನೀಡಿದ ರ‍್ಯಾಪಿಡ್ ರಶ್ಮಿ

    ಈ ಕುರಿತು ಮಂಗಳವಾರ ಫೀಲ್ಮ ಚೇಂಬರ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಚಿತ್ರದ ನಿರ್ದೇಶಕ ಹಾಗೂ ನಾಯಕರಾದ ಭಂಡಾರಿ ಸಹೋದದರು ಚಿತ್ರರಂಗ ಹಾಗೂ ಕನ್ನಡ ಅಭಿಮನಿಗಳ ಕ್ಷಮೆ ಕೋರಿದ್ದರು. ರಾಜರಥ ಚಿತ್ರದ ಬಿಡುಗಡೆಗೆ ಮುನ್ನ ಭಾಗವಹಿಸಿದ ಒಂದು ಹಾಸ್ಯಮಯ ಕಾರ್ಯಕ್ರಮದ ಸಣ್ಣ ತುಣುಕು ನಿಮ್ಮೆಲ್ಲರಿಗು ನೋವುಂಟು ಮಾಡಿರುವುದಕ್ಕೆ ಕ್ಷಮೆ ಯಾಚಿಸುತ್ತೇವೆ. ಸಂದರ್ಶನಕ್ಕು ಮುನ್ನ, ಹಲವರು ಕನ್ನಡ ಸಿನಿಮಾ ನೋಡುವುದಿಲ್ಲ, ಹಲವಾರು ಒಳ್ಳೆ ಚಿತ್ರಗಳು ಬರುತ್ತಿವೆ ಆದರು ಏಕೆ ಹೀಗೆ, ಎಂದು ಚರ್ಚಿಸಿದ್ದೆವು. ಹಾಗೆ ಸಂದರ್ಶನದಲ್ಲಿ ಬಂದ ಪ್ರಶ್ನೆಗೆ ಆ ಹಿನ್ನೆಲೆಯಲ್ಲಿ ಕೊಟ್ಟ ತಪ್ಪು ಉತ್ತರವದು. ಇದು ಖಂಡಿತವಾಗಿಯು ಕನ್ನಡ ಪ್ರೇಕ್ಷಕರನ್ನುದ್ದೇಶಿಸಿ ಹೇಳಿದ ಮಾತಲ್ಲ. ನಾವು ಏನೇ ಯಶಸ್ಸು ಕಂಡಿದ್ದರೂ ಅದಕ್ಕೆ ಪ್ರೇಕ್ಷಕರೇ ಕಾರಣ. ನಮ್ಮ ಯಾವುದೇ ಬೇರೆ ಸಂದರ್ಶನಗಳನ್ನು ನೋಡಿದರೂ ನಮ್ಮ ಗೆಲುವಿಗೆ ಪ್ರೇಕ್ಷಕರೆ ಕಾರಣ ಎಂದು ಹಲವು ಬಾರಿ ಹೇಳಿದ್ದೇವೆ. ಕನ್ನಡ ಮತ್ತು ಕನ್ನಡ ಸಿನಿಮಾದ ಬಗ್ಗೆ ನಮಗೆ ಅಪಾರ ಅಭಿಮಾನ, ಅದಕ್ಕಾಗಿಯೇ ಪ್ರತಿ ಹಾಡಿನಲ್ಲೂ ಅಚ್ಚ ಕನ್ನಡವನ್ನೇ ಬಳಸುತ್ತೇವೆ. ಕಾರ್ಯಕ್ರಮದಲ್ಲಿ ತಪ್ಪಾಗಿ ಆಡಿದ ಮಾತುಗಳನ್ನು ದಯವಿಟ್ಟು ಮನ್ನಿಸಿ. ಯಾರಿಗೂ ನೋವುಂಟು ಮಾಡಬೇಕು ಅನ್ನುವ ಉದ್ದೇಶ ನಮ್ಮದಲ್ಲ. ನಿಮ್ಮ ಆಶಿರ್ವಾದ ನಮ್ಮ ಮೇಲೆ ಸದಾ ಇರಲಿ ಎಂದು ಬರೆದು ತನ್ನ ಫೇಸ್ ಬುಕ್ ಪೇಜ್ ನಲ್ಲಿ ಪೋಸ್ಟ್ ಮಾಡಿದ್ದಾರೆ.