Tag: KANNADA REALITY SHOW

  • ಬಿಗ್‌ಬಾಸ್ 12ರ ಮನೆಗೆ 19 ಸ್ಪರ್ಧಿಗಳ ಎಂಟ್ರಿ – ಒಂಟಿ, ಜಂಟಿ ಆಟಕ್ಕೆ ಕಾದಾಟ ಶುರು

    ಬಿಗ್‌ಬಾಸ್ 12ರ ಮನೆಗೆ 19 ಸ್ಪರ್ಧಿಗಳ ಎಂಟ್ರಿ – ಒಂಟಿ, ಜಂಟಿ ಆಟಕ್ಕೆ ಕಾದಾಟ ಶುರು

    ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್-12 (Bigg Boss Kannada  Season 12) ಶುರು ಆಗಿದೆ. ಈ ಬಾರಿ ಬಿಗ್‌ಬಾಸ್ ಮನೆಗೆ 19 ಸದಸ್ಯರು ಎಂಟ್ರಿ ಕೊಟ್ಟಿದ್ದು, ಒಬ್ಬೊಬ್ಬರು ಒಂದೊಂದು ವಿಭಿನ್ನ ಹಿನ್ನೆಲೆಯುಳ್ಳವರು ಮನೆ ಸೇರಿದ್ದಾರೆ. ಇಂದಿನಿಂದ ಬಿಗ್‌ಬಾಸ್ ಸೀಸನ್ 12ರ ಒಂಟಿ, ಜಂಟಿ ಆಟಕ್ಕೆ ಕಾದಾಟ ಶುರುವಾಗಿದೆ.

    ಈ ಬಾರಿ ಹಿಂದೆಂದೂ ಇರದಂತೆ ಗ್ರ್ಯಾಂಡ್‌ ಓಪನಿಂಗ್‌ಗೂ ಮೊದಲ ದಿನವೇ ಮೂವರು ಸ್ಪರ್ಧಿಗಳ ಹೆಸರನ್ನು ಬಹಿರಂಗಪಡಿಸಿದ್ದರು. ಅದರಂತೆ ಬಿಗ್‌ಬಾಸ್ ಮನೆಗೆ ಮೊದಲ ಸ್ಪರ್ಧಿಯಾಗಿ ಕಾಕ್ರೋಚ್ ಸುಧಿ, ಎರಡನೇಯದಾಗಿ ಕೊತ್ತಲವಾಡಿ ಸಿನಿಮಾದ ನಾಯಕಿ ಕಾವ್ಯಾ, ಮೂರನೇಯವರಾಗಿ ಕೋಟ್ಯಂತರ ರೂಪಾಯಿ ಮೌಲ್ಯದ ನಾಯಿಗಳನ್ನು ಖರೀದಿ ಮಾಡುವ ಡಾಗ್ ಸತೀಶ್ ಎಂಟ್ರಿ ಕೊಟ್ಟಿದ್ದಾರೆ.ಇದನ್ನೂ ಓದಿ: ಸ್ಟೇಜ್‌ನಲ್ಲೇ ನಕ್ಕು ನಗಿಸಿ ಬಿಗ್‌ಬಾಸ್ ಮನೆಗೆ ಎಂಟ್ರಿ ಕೊಟ್ಟ ಮಲ್ಲಮ್ಮ

    ನಾಲ್ಕನೇ ಸ್ಪರ್ಧಿಯಾಗಿ ಕಾಮಿಡಿ ಕಲಾವಿದ ಗಿಲ್ಲಿ, ಐದನೇ ಸ್ಪರ್ಧಿಯಾಗಿ ನಿರೂಪಕಿ, ನಟಿ ಜಾನ್ಹವಿ, ಆರನೇ ಸ್ಪರ್ಧಿಯಾಗಿ ಗೀತಾ ಧಾರಾವಾಹಿಯಲ್ಲಿ ವಿಜಯ್ ಪಾತ್ರದಲ್ಲಿ ನಟಿಸಿದ್ದ, ಹಿರಿತೆರೆಯಲ್ಲಿಯೂ ಕಾಣಿಸಿಕೊಂಡಿದ್ದ ನಟ ಧನುಶ್, ಏಳನೇ ಸ್ಪರ್ಧಿಯಾಗಿ ಗಿಚ್ಚಿ-ಗಿಲಿಗಿಲಿ ವಿಜೇತ ಚಂದ್ರಪ್ರಭಾ, ಎಂಟನೇ ಸ್ಪರ್ಧಿಯಾಗಿ ಸಿಲ್ಲಿ-ಲಲ್ಲಿ ಧಾರಾವಾಹಿ ಖ್ಯಾತಿಯ ಮಂಜು ಭಾಷಿಣಿ ಕಾಲಿಟ್ಟಿದ್ದಾರೆ.

    ಮುಂದುವರೆದು, `ಮನದ ಕಡಲು’ ಸಿನಿಮಾದ ನಾಯಕಿ ರಾಶಿಕಾ ಶೆಟ್ಟಿ, ಲಕ್ಷಣ ಧಾರಾವಾಹಿಯಲ್ಲಿ ಮೌರ್ಯ ಪಾತ್ರದಲ್ಲಿ ನಟಿಸಿದ್ದ ಅಭಿಷೇಕ್, ಮಾತಿನ ಮೂಲಕವೇ ಎಲ್ಲರ ಮನಗೆದಿದ್ದ ಮಲ್ಲಮ್ಮ, ಮುದ್ದುಲಕ್ಷ್ಮಿ ಧಾರಾವಾಹಿಯ ನಟಿ ಅಶ್ವಿನಿ, ಲವಲವಿಕೆ ಧಾರಾವಾಹಿ ಖ್ಯಾತಿಯ ಮಂಗಳೂರು ಮೂಲದ ಧ್ರುವಂತ್, ಯೂಟ್ಯೂಬರ್ ರಕ್ಷಿತಾ ಶೆಟ್ಟಿ, ಬಾಡಿ ಬಿಲ್ಡರ್ ಕರಿಬಸಪ್ಪ, `ನಾ ಡ್ರೈವರ್, ನನ ಲವ್ವರ್ ಹಾಡಿನ ಗಾಯಕ ಮಾಳು ನಿಪನಾಳ, ನಟಿ ಸ್ಪಂದನ, ಖ್ಯಾತ ನಟಿ ಹಾಗೂ ಕನ್ನಡ ಪರ ಹೋರಾಟಗಾರ್ತಿ ಅಶ್ವಿನಿ ಗೌಡ, ಇನ್ನೂ ಕೊನೆಯ ಸ್ಪರ್ಧಿಯಾಗಿ ಖ್ಯಾತ ಆರ್‌ಜೆ ಅಮಿತ್ ಎಂಟ್ರಿ ಕೊಟ್ಟಿದ್ದಾರೆ.

    ಇನ್ನೂ ಈ ಬಾರಿ ಬಿಗ್‌ಬಾಸ್ ಮನೆಯೂ ಕೂಡ ವಿಭಿನ್ನವಾಗಿದ್ದು, ಕರ್ನಾಟಕದ ಸಂಸ್ಕೃತಿಯನ್ನು ಎತ್ತಿಹಿಡಿಯುವಂತಿದೆ. ಕರ್ನಾಟಕದ ಪ್ರಾದೇಶಿಕತೆ, ಇತಿಹಾಸ, ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತಿದೆ. ಜೊತೆಗೆ ಈ ಬಾರಿ ಮನೆಯೂ ವಿಭಿನ್ನವಾಗಿದ್ದು, ಎರಡು ಬೆಡ್ ರೂಮ್, ಎರಡು ಡೈನಿಂಗ್ ಟೇಬಲ್ ಕಾಣಿಸಿಕೊಂಡಿದೆ. ಅಲ್ಲದೇ ಪ್ರಾರಂಭದಲ್ಲಿಯೇ ಒಂಟಿ-ಜಂಟಿ ಎಂಬ ಆಟ ಇನ್ನಷ್ಟು ಕೂತುಹಲಕ್ಕೆ ಎಡೆಮಾಡಿಕೊಟ್ಟಿದೆ.ಇದನ್ನೂ ಓದಿ: ಒಂಟಿಯಾಗಿ ಬಿಗ್‌ಬಾಸ್ ಮನೆಗೆ ಕಾಲಿಟ್ಟ ನಿರೂಪಕಿ ಜಾನ್ಹವಿ, ಗೀತಾ ಧಾರಾವಾಹಿಯ ಧನುಷ್

  • ಬಿಗ್‌ಬಾಸ್ ಸ್ಕ್ರಿಪ್ಟೆಡ್ ಶೋ ಅಲ್ಲ, ಒಂದು ವ್ಯಕ್ತಿತ್ವದ ಆಟ: ಕಾರ್ತಿಕ್ ಮಹೇಶ್

    ಬಿಗ್‌ಬಾಸ್ ಸ್ಕ್ರಿಪ್ಟೆಡ್ ಶೋ ಅಲ್ಲ, ಒಂದು ವ್ಯಕ್ತಿತ್ವದ ಆಟ: ಕಾರ್ತಿಕ್ ಮಹೇಶ್

    ಚಾಮರಾಜನಗರ: ಬಿಗ್‌ಬಾಸ್‌ (Bigg Boss 10) ಸ್ಕ್ರಿಪ್ಟೆಡ್ ಶೋ ಅಲ್ಲ, ಒಂದು ವ್ಯಕ್ತಿತ್ವದ ಆಟ ಎಂದು ಬಿಗ್‌ಬಾಸ್ ಸೀಸನ್ 10ರ ವಿಜೇತ ಕಾರ್ತಿಕ್ ಮಹೇಶ್ (Karthik Mahesh) ತಿಳಿಸಿದ್ದಾರೆ.

    ಇಂದು (ಫೆ.3) ಚಾಮರಾಜನಗರಕ್ಕೆ (Chamarajanagar) ಭೇಟಿ ನೀಡಿದ ಅವರು, ನಗರದ ಸಿದ್ದಮಲ್ಲೇಶ್ವರ ವಿರಕ್ತ ಮಠಕ್ಕೆ ತೆರಳಿ ಸಿದ್ದಬಸವರಾಜಸ್ವಾಮೀಜಿ ಗದ್ದುಗೆ ದರ್ಶನ ಪಡೆದರು. ಇದೇ ವೇಳೆ ಸಂಘ ಸಂಸ್ಥೆ ಹಾಗೂ ಅಭಿಮಾನಿಗಳು ಕಾರ್ತಿಕ್‌ಗೆ ಸನ್ಮಾನಿಸಿ ಅಭಿನಂದಿಸಿದರು. ಈ ವೇಳೆ ಕಾರ್ತಿಕ್ ಜೊತೆ ಸೆಲ್ಫಿ ತೆಗೆದುಕೊಳ್ಳಲು ಯುವಕ, ಯುವತಿಯರು ಮುಗಿಬಿದ್ದರು. ಇದನ್ನೂ ಓದಿ: ಧನ್ವೀರ್ ನಟನೆಯ ‘ಹಯಗ್ರೀವ’ ಸಿನಿಮಾಗೆ ಮೈಸೂರಿನಲ್ಲಿ ಚಾಲನೆ

    ಬಳಿಕ ಮಾತನಾಡಿದ ಕಾರ್ತಿಕ್, ನಾನು ಹುಟ್ಟಿದ್ದು ಚಾಮರಾಜನಗರದ ಹೆಗ್ಗೋಠಾರ ಗ್ರಾಮದಲ್ಲಿ. ಹಾಗಾಗಿ ಬಾಲ್ಯ ಕಳೆಯಲು ಇಲ್ಲಿಗೆ ಬರುತ್ತಿದ್ದೆ. ಇಲ್ಲಿಗೆ ಬಂದರೆ ನನಗೆ ತುಂಬಾ ಖುಷಿಯಾಗುತ್ತದೆ. ನನ್ನ ಗೆಲುವು ನನ್ನ ಕುಟುಂಬ ಹಾಗು ಅಭಿಮಾನಿಗಳಿಂದ ಸಾಧ್ಯವಾಗಿದ್ದು, ಹುಟ್ಟೂರು ಹಾಗೂ ಬೆಳೆದು ಬಂದ ದಾರಿ ಎಂದಿಗೂ ಮರೆಯಬಾರದು. ಬಿಗ್‌ಬಾಸ್ ಗೆದ್ದ ನಂತರ ಒಳ್ಳೆಯ ಆಫರ್‌ಗಳು ಬರುತ್ತಿವೆ. ಮುಂದೆ ದೊಡ್ಡ ಹೆಜ್ಜೆಯಿಡುವ ಯೋಚನೆಯಿದೆ ಎಂದರು. ಇದನ್ನೂ ಓದಿ: ಪ್ರಕೃತಿಯ ದೃಶ್ಯ ವೈಭವದ ಅನುಭೂತಿ ನೀಡಲಿದೆ ‘ನಗುವಿನ ಹೂಗಳ ಮೇಲೆ’ ಚಿತ್ರ

    ಡ್ರೋನ್ ಪ್ರತಾಪ್ ರನ್ನರ್ ಅಪ್ ಆಗಿರೋದು ಖುಷಿಯಾಗಿದೆ. ಅದಕ್ಕೆ ಅವರು ಆರ್ಹರಾಗಿದ್ದಾರೆ. ವಿನಯ್ ನನ್ನ ಜೊತೆಗೆ ಫೈನಲ್‌ನಲ್ಲಿ ಇರ್ತಾರೆ ಎಂಬ ಆಸೆಯಿತ್ತು. ಆದರೆ ಅವರು ಫೈನಲ್‌ಗೆ ಬರಲಿಲ್ಲ. ಆ ಬಗ್ಗೆ ಬೇಜಾರಿಲ್ಲ. ಜನರು ವೋಟ್ ಹಾಕಿದ್ರಿಂದ ಡ್ರೋನ್ ಪ್ರತಾಪ್ ರನ್ನರ್ ಆಗಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಪೂನಂ ಅರೆಸ್ಟ್ ಮಾಡಿ: ‘ಬಾಯ್ಕಾಟ್‌ ಪಾಂಡೆ’ ಟ್ರೆಂಡ್ ಶುರು

    ಸಂಗೀತಾ ಶೃಂಗೇರಿ ಜೊತೆಗೆ ಸ್ನೇಹ ಮುಂದುವರಿಸುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಗ್‌ಬಾಸ್‌ನಲ್ಲಿ ನಡೆದಿದ್ದು ಗೇಮ್‌ಗೋಸ್ಕರ. ಹೊರಗಡೆ ಬಂದ ಬಳಿಕ ಮುಖಾಮುಖಿ ಭೇಟಿಯಾಗಿಲ್ಲ. ಅವಕಾಶ ಸಿಕ್ಕಿದ್ರೆ ಅವರ ಜೊತೆ ಮಾತನಾಡುತ್ತೇನೆ. ಯಾರ ಮೇಲೆ ದ್ವೇಷ ಕಟ್ಟಿಕೊಂಡು ಏನಾಗಬೇಕು ಎಂದರು. ಇನ್ನು ನಮ್ರತಾ ಜೊತೆಗೆ ನೆಗೆಟಿವ್ ಟ್ರೋಲ್ ವಿಚಾರದ ಬಗ್ಗೆ ಮಾತನಾಡಿ, ನಂಗೆನೂ ಅದು ನೆಗೆಟಿವ್ ಅನ್ಸಲ್ಲ. ಮಾತಾಡುವವರಿಗೆ ಹೊಟ್ಟೆ ತುಂಬೋದಾದ್ರೆ ಮಾತನಾಡಿಕೊಳ್ಳಲಿ. ನಮ್ಮ ಕೆಲಸ ನಾವು ಮಾಡಿಕೊಂಡು ಹೋಗುತ್ತೇವೆ ಎಂದರು. ಇದನ್ನೂ ಓದಿ: ‘ರವಿಕೆ ಪ್ರಸಂಗ’ಕ್ಕೆ ಸೆನ್ಸಾರ್: ಫೆಬ್ರವರಿ 16ಕ್ಕೆ ರಿಲೀಸ್

  • ದಿವ್ಯಾ ಸುರೇಶ್ ಬಗ್ಗೆ ಲ್ಯಾಗ್ ಮಂಜು ಹೇಳಿದ್ದೇನು?

    ದಿವ್ಯಾ ಸುರೇಶ್ ಬಗ್ಗೆ ಲ್ಯಾಗ್ ಮಂಜು ಹೇಳಿದ್ದೇನು?

    – ಶುಭಾ, ನಿಧಿ ಕುರಿತು ವಿನ್ನರ್ ಮಾತು

    ಬೆಂಗಳೂರು: ಬಿಗ್ ಬಾಸ್ ಸೀಸನ್ 8ರ ಆರಂಭದಲ್ಲಿ ದಿವ್ಯಾ ಉರುಡುಗ ಹಾಗೂ ಅರವಿಂದ್ ಕೆಪಿ ಒಂದು ಜೋಡಿಯಾಗಿದ್ದರೆ, ಮಂಜು ಪಾವಗಡ ಹಾಗೂ ದಿವ್ಯಾ ಸುರೇಶ್ ಇನ್ನೊಂದು ಜೋಡಿಯಾಗಿ ವೀಕ್ಷಕರ ಗಮನ ಸೆಳೆದಿದ್ದರು. ಇದೀಗ ವಿನ್ನರ್ ಆದ ಬಳಿಕ ಮಂಜು ಅವರು ದಿವ್ಯಾ ಸುರೇಶ್ ಬಗ್ಗೆ ಮಾತನಾಡಿದ್ದಾರೆ. ಇದನ್ನೂ ಓದಿ: ಏನಪ್ಪಾ ಇದು ವೈಭೋಗ, ನನ್ನ ಜಾತಕದಲ್ಲಿ ಇದೆಲ್ಲಾ ಇದೆ ಅಂತ ಗೊತ್ತಿರಲಿಲ್ಲ: ಮಂಜು

    ಹೌದು. ಬಿಗ್ ಬಸಸ್ ಮನೆಯಲ್ಲಿ ದಿವ್ಯಾ ಜೊತೆಗಿನ ಗೆಳೆತನದ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮನಬಿಚ್ಚಿ ಮಾತನಾಡಿದ ಮಂಜು, ದಿವ್ಯಾ ಸುರೇಶ್ ನನ್ನ ಬೆಸ್ಟ್ ಫ್ರೆಂಡ್. ಬಿಗ್ ಬಾಸ್ ಮನೆಯೊಳಗಡೆ ಹೋದಾಗ ಅಲ್ಲಿ ನಮ್ಮವರು ಅಂತ ಯಾರೂ ಇರಲ್ಲ. ಆಗ ಹೇಳಿಕೊಳ್ಳೋಕೆ ಒಬ್ಬರು ಬೇಕು ಅನಿಸುತ್ತದೆ. ಆಗ ನಮ್ಮ ಮೆಂಟಾಲಿಟಿಗೆ ಮ್ಯಾಚ್ ಆಗೋರು ಒಬ್ಬರು ಸಿಗುತ್ತಾರೆ. ಹೀಗೆ ನನಗೆ ದಿವ್ಯಾ ಸುರೇಶ್ ಸಿಕ್ಕಿದ್ದಾಳೆ. ತುಂಬಾ ಸಪೋರ್ಟ್ ಮಾಡುತ್ತಿದ್ದಳು. ಹಾಗೆಯೇ ಒಳ್ಳೆಯ ಸ್ಪರ್ಧಿ ಕೂಡ. ಒಟ್ಟಿನಲ್ಲಿ ನಾವಿಬ್ಬರೂ ಒಳ್ಳೆಯ ಫ್ರೆಂಡ್ಸ್ ಅಂದ್ರು. ಇದನ್ನೂ ಓದಿ: ಇಷ್ಟೊಂದು ದೊಡ್ಡ ಮೊತ್ತವನ್ನು ಜೀವನದಲ್ಲೇ ನೋಡಿಲ್ಲ: ಮಂಜು

    ಮನೆಯೊಳಗಡೆ ಹೋದಾಗ ಸೆಲೆಬ್ರಿಗಳಾದ ನಿಧಿ, ಶುಭಾ ಹಾಗೂ ಶಂಕರ್ ಅಶ್ವಥ್ ನೋಡಿ ಹೆಂಗಪ್ಪಾ ಇಲ್ಲಿ ಇರೋದು ಅಂದುಕೊಂಡಿದ್ದೆ. ಆದರೆ ಹೋಗ್ತಾ ಹೋಗ್ತಾ ಎಲ್ಲರೂ ನನಗೆ ಕ್ಲೋಸ್ ಆದ್ರು. ಶುಭಾ ಅಂತೂ ಈಗ ನನಗೆ ಪ್ರೀತಿಯ ಗುಂಡಮ್ಮ ಆಗಿದ್ದಾಳೆ. ಇನ್ನು ಬಾಲಿವುಡ್ ನಲ್ಲಿ ಸಿನಿಮಾ ಮಾಡಿರುವ ನಿಧಿಸುಬ್ಬಯ್ಯ ಅವರನ್ನು ನಿಧಿ, ಪಿಪಿಇ ಕಿಟ್ ಅಂತೆಲ್ಲಾ ಕರೆಯೋಕೆ ಆರಂಭಿಸಿದೆ. ಇತ್ತ ಶಂಕರ್ ಅಣ್ಣನನ್ನೂ ರೇಗಿಸ್ತೀನಿ. ಒಟ್ಟಿನಲ್ಲಿ ಸದ್ಯ ದೊಡ್ಡ ದೊಡ್ಡವರ ಜೊತೆ ಇದ್ದು ಇಂದು ನಾನು ಗೆದ್ದಿರೋದು ತುಂಬಾನೆ ಖುಷಿ ಇದೆ ಎಂದು ಮಂಜು ಹೇಳಿದರು. ಇದನ್ನೂ ಓದಿ: ಪುಟ್ಟ ಕಲಾವಿದನನ್ನು ಫಿನಾಲೆವರೆಗೆ ತಲುಪಿಸಿ ವಿನ್ನರ್ ಮಾಡಿದ್ದಕ್ಕೆ ತುಂಬಾ ಥ್ಯಾಂಕ್ಸ್: ಮಂಜು

    ಒಟ್ಟಿನಲ್ಲಿ ಮನರಂಜನೆ ಹಾಗೂ ಉತ್ತಮ ಸ್ಪರ್ಧೆಯಿಂದಲೇ ವೀಕ್ಷಕರ ಗಮನ ಸೆಳೆಯುವ ಮೂಲಕ ಲ್ಯಾಗ್ ಮಂಜು ಅವರು ವಿನ್ನರ್ ಆಗಿ ಬಿಗ್ ಬಾಸ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿದ್ದಾರೆ. ನಿನ್ನೆ ನಡೆದ ಗ್ರ್ಯಾಂಡ್ ಫಿನಾಲೆಯಲ್ಲಿ ಸುದೀಪ್ ಅವರು ಮಂಜು ಕೈ ಮೇಲೆ ಎತ್ತುವ ಮೂಲಕವಾಗಿ ವಿನ್ನರ್ ಯಾರು ಎಂದು ಘೋಷಣೆ ಮಾಡಿದರು. ಬಿಗ್‍ಬಾಸ್ ವಿನ್ನರ್ ಪಟ್ಟದ ಜೊತೆಗೆ ಮಂಜು ಅವರಿಗೆ 53 ಲಕ್ಷ ರೂ. ಹಣವನ್ನು ಮಂಜುಗೆ ನೀಡಲಾಗಿದೆ. ರನ್ನರ್ ಅಪ್ ಅರವಿಂದ್‍ಗೆ 11 ಲಕ್ಷ ರೂಪಾಯಿ ಹಣವನ್ನು ನೀಡಲಾಗಿದೆ. ಇದನ್ನೂ ಓದಿ: ಮಂಜುಗೆ ಒಲಿದ ದೊಡ್ಮನೆ ಕಿರೀಟ – ಬಿಗ್‍ಬಾಸ್ ವಿನ್ನರ್‌ಗೆ ಅದ್ಧೂರಿ ಸ್ವಾಗತ

  • ಪ್ಲೀಸ್ ಚಿನ್ನಿಬಾಂಬ್ ಅನ್ನುತ್ತಲೇ ಬಿಗ್ ಮನೆಗೆ ಎಂಟ್ರಿ ಕೊಡಲು ಶುಭಾ ರೆಡಿ

    ಪ್ಲೀಸ್ ಚಿನ್ನಿಬಾಂಬ್ ಅನ್ನುತ್ತಲೇ ಬಿಗ್ ಮನೆಗೆ ಎಂಟ್ರಿ ಕೊಡಲು ಶುಭಾ ರೆಡಿ

    ಹಾಮಾರಿ ಕೊರೊನಾ ವೈರಸ್ ನಿಂದಾಗಿ ಕನ್ನಡದ ಮೋಸ್ಟ್ ರಿಯಾಲಿಟಿ ಶೋ ಬಿಗ್ ಬಾಸ್ ಅರ್ಧಕ್ಕೆ ನಿಂತಿತ್ತು. ಆದರೆ ಇದೀಗ ಈ ಕಾರ್ಯಕ್ರಮ ಮತ್ತೆ ಆರಂಭವಾಗುತ್ತಿದ್ದು, ವೀಕ್ಷಕರು ಹಾಗೂ ಅಭಿಮಾನಿಗಳಲ್ಲಿ ಸಂತಸ ತಂದಿದೆ.

    ಹೌದು. ಕೊರೊನಾದಿಂದ ಅರ್ಧಕ್ಕೆ ನಿಂತಿರುವ ಬಿಗ್‍ಬಾಸ್ ರಿಯಾಲಿಟಿ ಶೋ ಜೂನ್ 21 ರಿಂದ ಮತ್ತೆ ಪ್ರಾರಂಭವಾಗುತ್ತಿದೆ. ಸ್ಪರ್ಧಿಗಳು ಈಗಾಗಲೇ ಮತ್ತೆ ಬಿಗ್ ಮನೆಯ ಒಳಗಡೆ ಬರಲು ಕಾತುರದಿಂದ ಕಾಯುತ್ತಿದ್ದಾರೆ. ಅಂತೆಯೇ ಇದೀಗ ನಟಿ ಶುಭಾ ಪೂಂಜಾ ಅವರು ಬಿಗ್ ಮನೆಯ ಒಳಗಡೆ ಗ್ರ್ಯಾಂಡ್ ಆಗಿ ಎಂಟ್ರಿ ಕೊಡಲು ಸಿದ್ಧರಾಗಿದ್ದಾರೆ.

    ಈ ಸಂಬಂಧ ವಾಹಿನಿ ಈಗಾಗಲೇ ಶುಭಾ ಪ್ರೋಮೋ ಬಿಡುಗಡೆ ಮಾಡಿದೆ. ಅದರಲ್ಲಿ ಶುಭಾ, ಪ್ಲೀಸ್ ಚಿನ್ನಿಬಾಂಬ್ ನಾನು ಹೋಗಲ್ಲ.. ನಿನ್ನನ್ನು ಬಿಟ್ಟು ಹೋಗಲು ನನಗೆ ಇಷ್ಟ ಇಲ್ಲ ಎಂದು ಹೇಳುತ್ತಾರೆ. ಕೂಡಲೇ ಸಲ್ವಾರ್ ತಗೊಳ್ಳಾ, ಜೀನ್ಸ್ ತಗೊಳ್ಳಾ ಎಂದು ಕೇಳುತ್ತಾ ನಿಜ ಹೇಳಬೇಕಂದ್ರೆ ನನಗೆ ಬಿಗ್ ಬಾಸ್ ಮನೆಗೆ ಹೋಗಲು ತುಂಬಾ ಇಷ್ಟ ಎಂದು ಹೇಳುತ್ತಾ ಖುಷಿ ಪಟ್ಟಿದ್ದಾರೆ. ಇದನ್ನೂ ಓದಿ: ಈಗ ಅಧಿಕೃತ, ಬಿಗ್ ಬಾಸ್ ಶೋ ಮತ್ತೆ ಆರಂಭ

    ಒಟ್ಟಿನಲ್ಲಿ ಬಿಗ್‍ಬಾಸ್ 8ನೇ ಆವೃತ್ತಿ ಕೊರೊನಾ ಸಂಕಷ್ಟಕ್ಕೆ ಸಿಲುಕಿ 72 ದಿನಗಳಿಗೆ ಮೊಟಕುಗೊಳಿಸಲಾಗಿತ್ತು. ಇದೀಗ ಅರ್ಧದಲ್ಲೇ ನಿಂತಿದ್ದ ಬಿಗ್‍ಬಾಸ್ ಮತ್ತೆ ಪ್ರಾರಂಭವಾಗಲಿದೆ. ಈ ವಿಚಾರದ ಕುರಿತು ಬಿಗ್‍ಬಾಸ್ ಪ್ರಸಾರವಾಗುವ ಖಾಸಗಿ ವಾಹಿನಿಯ ಬ್ಯುಸಿನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ಅಧಿಕೃತವಾಗಿ ಮಾಹಿತಿ ನೀಡಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

    ಊರು ಸೇರಿದಾಗಲೇ ದಾರಿ ಮುಗಿಯುವುದು. ಮನೆ ಸೇರಿದಾಗಲೇ ಹಾದಿಯಲ್ಲಿ ಕಷ್ಟಪಟ್ಟಿದ್ದು ಸಾರ್ಥಕ ಅನಿಸೋದು. ಅರ್ಧದಲ್ಲಿಯೇ ನಿಲ್ಲಿಸಿದ್ದ ಪ್ರಯಾಣವನ್ನು ಈಗ ಪುನಃ ಅದೇ ಹನ್ನೆರಡು ಜನರೊಂದಿಗೆ ಶುರು ಮಾಡುವ ಸಮಯವಾಗಿದೆ ಎಂದು ತಿಳಿಸುವ ಮೂಲಕ ಮತ್ತೆ ಆರಂಭವಾಗುವ ಕುರಿತು ಹಂಚಿಕೊಂಡಿದ್ದಾರೆ.

  • ಕೊರೊನಾ ವಾರಿಯರ್ಸ್ ಆಗಿ ಕೆಲಸ ಮಾಡಲಿರುವ ಬಿಗ್‍ಬಾಸ್ ಸ್ಪರ್ಧಿಗಳು

    ಕೊರೊನಾ ವಾರಿಯರ್ಸ್ ಆಗಿ ಕೆಲಸ ಮಾಡಲಿರುವ ಬಿಗ್‍ಬಾಸ್ ಸ್ಪರ್ಧಿಗಳು

    ಕೊರೊನಾ ವೈರಸ್ ಸೋಂಕಿನ ಎರಡನೇ ಅಲೆಯ ವಾಸ್ತವ ದರ್ಶನ ಮಾಡಿಸಿದ ಬಳಿಕ ಬಿಗ್ ಬಾಸ್ ಕಾರ್ಯಕ್ರಮ ರದ್ದಾಗುತ್ತಿರುವ ವಿಚಾರವನ್ನು ಸ್ಪರ್ಧಿಗಳಿಗೆ ತಿಳಿಸಲಾಯಿತು. ಲಾಕ್‍ಡೌನ್ ಹೇರಿಕೆಯಿಂದಾಗಿ ಬಿಗ್‍ಬಾಸ್ ಕನ್ನಡ 8 ಕಾರ್ಯಕ್ರಮ ಸ್ಥಗಿತಗೊಂಡಿದೆ.

    ಕೊರೊನಾ ವೈರಸ್ ಸೋಂಕಿನ ಎರಡನೇ ಅಲೆಯ ಭೀಕರತೆ ಬಗ್ಗೆ ಮನದಟ್ಟಾದ ಬಳಿಕ, ನಮ್ಮೆಲ್ಲರ ಸುರಕ್ಷತೆಗಾಗಿ ಈ ಶೋ ಎಂಡ್ ಮಾಡುತ್ತಿದ್ದೀರಾ. ನಿಮಗೆ ಸಾಷ್ಟಾಂಗ ನಮಸ್ಕಾರಗಳು. ನೀವು ಸರಿಯಾದ ನಿರ್ಧಾರ ತೆಗೆದುಕೊಂಡಿದ್ದೀರಾ ಎಂದು ಸ್ಪರ್ಧಿಗಳೆಲ್ಲಾ ಬಿಗ್ ಬಾಸ್‍ಗೆ ಧನ್ಯವಾದ ಅರ್ಪಿಸಿದರು.

    ಬಳಿಕ ಕೋವಿಡ್ ಕಾರಣದಿಂದ ಸಂಕಷ್ಟದಲ್ಲಿ ಸಿಲುಕಿರುವ ಅನೇಕರಿಗೆ ಸಹಾಯ ಮಾಡುವುದಾಗಿಯೂ ಬಿಗ್ ಬಾಸ್ ಸ್ಪರ್ಧಿಗಳು ಭರವಸೆ ನೀಡಿದರು. ನಾವೆಲ್ಲ ಕೊರೊನಾ ವಾರಿಯರ್ ಆಗಿ ಕೆಲಸ ಮಾಡ್ತೇವೆ. ನಮ್ಮ ಕೈಲಾದ ಸಹಾಯ ಮಾಡುತ್ತೇವೆ ಎಂದು ನಟಿ ಶುಭಾ ಪೂಂಜಾ, ಚಕ್ರವರ್ತಿ ಚಂದ್ರಚೂಡ್, ಪ್ರಶಾಂತ್ ಸಂಬರಗಿ ಹಾಗೂ ಅರವಿಂದ್ ಹೇಳಿದರು.

    17 ಸ್ಪರ್ಧಿಗಳು ಕೂಡ ಕೊರೊನಾ ವಾರಿಯರ್ ಆಗುತ್ತೇವೆ ಎಂದು ಸ್ಪರ್ಧಿಗಳು ಬಿಗ್ ಬಾಸ್‍ಗೆ ತಿಳಿಸಿದರು. ನಾನು ಮುಂಚೆಯೂ ಈ ಬಗ್ಗೆ ಕೆಲಸ ಮಾಡಿದ್ದೆ. ಈಗಲೂ ಕೆಲಸ ಮಾಡುತ್ತೇನೆ. ಜನರಿಗೆ ಸಹಾಯ ಮಾಡುತ್ತೇನೆ ಅಂತ ಚಕ್ರವರ್ತಿ ಚಂದ್ರಚೂಡ್ ಹೇಳಿದರು. ಬಿಗ್ ಬಾಸ್ ಕಾರ್ಯಕ್ರಮ ಸ್ಥಗಿತಗೊಂಡ ಬಳಿಕ ಸ್ಪರ್ಧಿಗಳೆಲ್ಲಾ ತಮ್ಮ ತಮ್ಮ ನಿವಾಸಗಳಿಗೆ ಹಿಂದಿರುಗಿದ್ದಾರೆ.

  • ಬಿಗ್‍ಬಾಸ್‍ಗೆ ಸಾಷ್ಟಾಂಗ ನಮಸ್ಕಾರ ಹಾಕಿದ ಸ್ಪರ್ಧಿಗಳು..!

    ಬಿಗ್‍ಬಾಸ್‍ಗೆ ಸಾಷ್ಟಾಂಗ ನಮಸ್ಕಾರ ಹಾಕಿದ ಸ್ಪರ್ಧಿಗಳು..!

    ಹಾಮಾರಿ ಕೊರೊನಾ ವೈರಸ್ ಎರಡನೇ ಅಲೆಯಿಂದ ದೇಶ ಹಾಗೂ ರಾಜ್ಯದ ಜನ ಕಂಗೆಟ್ಟಿದ್ದು, ದಿನಕ್ಕೊಂದು ಹೊಸ ಸಮಸ್ಯೆಗಳು ತಲೆದೋರುತ್ತಿವೆ. ಈ ಹಿನ್ನೆಲೆಯಲ್ಲಿ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ಕಾರ್ಯಕ್ರಮವನ್ನು 72 ದಿನಕ್ಕೆ ಮುಕ್ತಾಯಗೊಳಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಇಷ್ಟು ದಿನ ಹೊರ ಜಗತ್ತಿನಲ್ಲಿ ಏನು ನಡೆಯುತ್ತಿದೆ ಎಂಬುದನ್ನೇ ಅರಿಯದ ಸ್ಪರ್ಧಿಗಳಿಗೆ ದೊಡ್ಡ ಶಾಕ್ ಉಂಟಾಗಿದೆ.

    ಹೌದು. ಸ್ಪರ್ಧಿಗಳಿಗೆ ಶೋ ನಿಲ್ಲಿಸುವ ಮಾಹಿತಿಯನ್ನು ಬಿಗ್ ಬಾಸ್ ನೀಡಿದ್ದಾರೆ. ಮಾಧ್ಯಮದಲ್ಲಿ ಪ್ರಸಾರವಾದ ಕೊರೊನಾ ಮಾಹಿತಿ ಹಾಗೂ ಲಾಕ್ ಡೌನ್ ಹೇರಿರುವ ತುಣುಕನ್ನು ಬಿಗ್ ಬಾಸ್ ಮನೆಯ ಒಳಗಡೆ ಪ್ರಸಾರ ಮಾಡಲಾಯಿತು. ಈ ವಿಚಾರ ತಿಳಿಯುತ್ತಿದ್ದಂತೆಯೇ ಸ್ಪರ್ಧಿಗಳಲ್ಲಿ ಅಚ್ಚರಿ ಜೊತೆ ದುಃಖದ ಕಟ್ಟೆಯೊಡೆದಿದೆ.

    ಇದರ ಪ್ರೋಮೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅದರಲ್ಲಿ ಬಿಗ್ ಬಾಸ್ ಶೋ ಮುಗಿಯುತ್ತಿದೆ ಎಂಬುದನ್ನು ಸ್ಪರ್ಧಿಗಳ ಕೈಯಲ್ಲಿ ಅರಗಿಸಿಕೊಳ್ಳಲು ಸಾಧ್ಯವಾಗದೇ ಇರುವುದನ್ನು ನಾವು ಗಮನಿಸಬಹುದಾಗಿದೆ. ಈ ವೇಳೆ ಚಕ್ರವರ್ತಿ, ವ್ಯವಸ್ಥೆಯಲ್ಲಿ ದೊಡ್ಡ ಪ್ರಾಬ್ಲಂ ಆಗಿದೆ. ಇದಕ್ಕೆ ವ್ಯವಸ್ಥೆಯೇ ಕಾರಣ ಅಂತ ಹೇಳಿಲ್ವಾ ಎಂದು ಹೇಳಿದ್ದಾರೆ. ಕೆಲವರು ಸಖತ್ ಭಯ ಆಗ್ತಿದೆ ಎಂದು ಕಣ್ಣೀರು ಹಾಕಿದರೆ, ಇನ್ನೂ ಕೆಲವರು ಈವಾಗ ಗೊತ್ತಾಗ್ತಾ ಇದೆ, ಪ್ರಾಪರ್ಟಿಯನ್ನ ಯಾಕೆ ಮುಟ್ಟಬೇಡಿ ಅಂತ ಹೇಳ್ತಾ ಇದ್ದರು ಅಂತ. ಆದರೆ ಈ ಮನೆಯನ್ನ ತುಂಬ ಮಿಸ್ ಮಾಡಿಕೊಳ್ಳುತ್ತೇನೆ ಎಂದು ರಘು ಜೊತೆ ಶಮಂತ್ ಕಣ್ಣೀರು ಹಾಕಿದ್ದಾರೆ.

    ಒಟ್ಟಿನಲ್ಲಿ ಕಳೆದ ಭಾನುವಾರವೇ ಶೋ ಮುಗಿದಿದೆ. ಆದರೆ ವಿದಾಯದ ಎಪಿಸೋಡ್ ಇನ್ನೂ ಪ್ರಸಾರವಾಗಿಲ್ಲ. ಸ್ಪರ್ಧಿಗಳೆಲ್ಲ ಕಣ್ಮಣಿ ಜೊತೆಗೆ ಚರ್ಚೆ ಮಾಡುತ್ತಾ ಸಂತೋಷದಿಂದಲೇ ಸಮಯ ಕಳೆದಿದ್ದಾರೆ. ಇಂದು ಮತ್ತು ನಾಳೆ ರಾತ್ರಿ 7.30 ಕೊನೆಯ ಕ್ಷಣಗಳ ಸಂಚಿಕೆಗಳು ಪ್ರಸಾರವಾಗಲಿವೆ. ಈಗಾಗಲೇ ರಿಲೀಸ್ ಆಗಿರುವ ಪ್ರೋಮೋದಲ್ಲಿ ಪ್ರಶಾಂತ್ ಸಂಬರಗಿ ಅವರು, ನಮ್ಮ ಸುರಕ್ಷತೆಗಾಗಿ ಶೋ ಎಂಡ್ ಮಾಡ್ತಿದ್ದೀರಾ, ಬಿಗ್ ಬಾಸ್ ನಿಮಗೆ ಸಾಷ್ಟಾಂಗ ನಮಸ್ಕಾರಗಳು ಎಂದು ಹೇಳಿದ್ದಾರೆ.