Tag: Kannada University

  • ಪಿಎಚ್‌ಡಿ ಪ್ರವೇಶ ಪರೀಕ್ಷೆಯಲ್ಲಿ ಪಾಸಾದ ಪವಿತ್ರಾ ಲೋಕೇಶ್

    ಪಿಎಚ್‌ಡಿ ಪ್ರವೇಶ ಪರೀಕ್ಷೆಯಲ್ಲಿ ಪಾಸಾದ ಪವಿತ್ರಾ ಲೋಕೇಶ್

    ನ್ನಡದ ಖ್ಯಾತ ನಟಿ ಪವಿತ್ರಾ ಲೋಕೇಶ್ (Pavitra Lokesh) ಇತ್ತೀಚೆಗಷ್ಟೇ ಪಿಎಚ್‌ಡಿ (Ph.D)ಮಾಡುವ ಇಂಗಿತವನ್ನು ವ್ಯಕ್ತ ಪಡಿಸಿದ್ದರು. ಕೊನೆಗೂ ಅದನ್ನು ಈಡೇರಿಸಿಕೊಳ್ಳಲು ಮುಂದಾಗಿದ್ದಾರೆ. ಅದಕ್ಕೆ ಸಂಬಂಧಿಸಿದಂತೆ ಪ್ರವೇಶ ಪರೀಕ್ಷೆಯನ್ನು ಅವರು ಬರೆದದ್ದು ಅದರಲ್ಲಿ ಪಾಸ್ ಕೂಡ ಆಗಿದ್ದಾರೆ.

    ಹಂಪಿಯ (Hampi) ಕನ್ನಡ ವಿಶ್ವವಿದ್ಯಾಲಯದ ಪಿಎಚ್‌ಡಿ ಸಾಮಾನ್ಯ ಪ್ರವೇಶ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಬಹುಭಾಷಾ ನಟಿ ಪವಿತ್ರಾ ಲೋಕೇಶ್ ಸೇರಿದಂತೆ 259 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ಕನ್ನಡ ವಿವಿಯಲ್ಲಿ 981 ಜನರು ಸಾಮಾನ್ಯ ಪ್ರವೇಶ ಪರೀಕ್ಷೆ ಎದುರಿಸಿದ್ದರು. ಆ ಪೈಕಿ ಒಟ್ಟು 259 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ವಿವಿ ಪ್ರಕಟಿಸಿದೆ. ಇದನ್ನೂ ಓದಿ:ಮದುವೆಯಾದ ಒಂದೇ ವರ್ಷಕ್ಕೆ ಪತಿಯನ್ನು ಕಳೆದುಕೊಂಡ ನಟಿ ಶ್ರುತಿ

    ಕನ್ನಡ ವಿವಿ (Kannada University) ಕುಲಸಚಿವ ಡಾ.ಸುಬ್ಬಣ್ಣ ರೈ ಈ ಕುರಿತು ಮಾಹಿತಿ ನೀಡಿದ್ದು, ಪವಿತ್ರಾ ಲೋಕೇಶ್ ಭಾಷಾ ನಿಕಾಯದಡಿ ಪ್ರವೇಶ ಪರೀಕ್ಷೆ ಬರೆದಿದ್ದರು. ಬೆಳಗಾವಿ(Belgaum) ವಿಸ್ತರಣಾ ಕೇಂದ್ರದಲ್ಲಿ ಸಂಶೋಧನೆ ಕೈಗೊಳ್ಳಲು ಪರೀಕ್ಷೆ ಬರೆದಿದ್ದರು ಪವಿತ್ರ ಲೋಕೇಶ್. ಕಳೆದ ಮೇ 30ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆದಿತ್ತು.

     

    ಕನ್ನಡ ವಿವಿ ವ್ಯಾಪ್ತಿಯ ಅಧ್ಯಯನ ವಿಭಾಗ, ಮಾನ್ಯತ ಕೇಂದ್ರ, ಹಾಗೂ ವಿಸ್ತರಣಾ ಕೇಂದ್ರಗಳಲ್ಲಿ ಲಭ್ಯವಿರುವ ಸ್ಥಾನ ಮತ್ತು ಮಾರ್ಗದರ್ಶಕರ ಸಂಖ್ಯೆಗೆ ಅನುಗುಣವಾಗಿ ಸೀಟು ಹಂಚಿಕೆ ಮಾಡಲಾಗಿದೆ ಎಂದು ಕುಲಸಚಿವರು ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಂಪಿ ಕನ್ನಡ ವಿವಿಗೆ ಐದು ದಿನಗಳ ಕಾಲ ರಜೆ ಘೋಷಣೆ

    ಹಂಪಿ ಕನ್ನಡ ವಿವಿಗೆ ಐದು ದಿನಗಳ ಕಾಲ ರಜೆ ಘೋಷಣೆ

    ಬಳ್ಳಾರಿ: ಹಂಪಿ ಕನ್ನಡ ವಿಶ್ವವಿದ್ಯಾಲಯದ ಸುತ್ತಮುತ್ತಲು ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿದೆ. ಹೀಗಾಗಿ ಮುಂಜಾಗೃತ ಕ್ರಮವಾಗಿ ಸತತ ಐದು ದಿನಗಳ ಕಾಲ ರಜೆ ಘೋಷಿಸಲಾಗಿದೆ ಎಂದು ಕುಲಸಚಿವ ಪ್ರೊ.ಎ.ಸುಬ್ಬಣ್ಣ ರೈ ತಿಳಿಸಿದ್ದಾರೆ.

    ಇಂದಿನಿಂದ ಆಗಸ್ಟ್ 7ರವರೆಗೆ ಸತತ ಐದು ದಿನಗಳ ಕಾಲ ವಿಶ್ವವಿದ್ಯಾಲಯಕ್ಕೆ ರಜೆ ಘೋಷಿಸಲಾಗಿದೆ. ವಿಶ್ವವಿದ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯ ಹಿತದೃಷ್ಟಿಯಿಂದ ಈ ಕ್ರಮವನ್ನು ಕೈಗೊಳ್ಳಲಾಗಿದೆ. ಈ ರಜಾ ಅವಧಿ ದಿನಗಳಲ್ಲಿ ಆಯಾ ಅಧ್ಯಯನ, ಆಡಳಿತ ವಿಭಾಗದ ಮುಖ್ಯಸ್ಥರು, ನಿರ್ದೇಶಕರು, ಸಂಯೋಜನಾಧಿಕಾರಿ, ನಿಲಯ ಪಾಲಕರು, ಆಸ್ಪತ್ರೆಯ ವೈದ್ಯರು, ಅಧಿಕಾರಿಗಳು ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ದೂರವಾಣಿ ಮತ್ತು ಇ-ಮೇಲ್‍ಗಳ ಮೂಲಕ ಸಂಪರ್ಕಿಸಬೇಕು ಎಂದು ತಿಳಿಸಿದರು.

    ಅಲ್ಲದೇ ಕೇಂದ್ರಸ್ಥಾನವನ್ನು ಬಿಡುವಂತಿಲ್ಲ. ಅಗತ್ಯವಿದ್ದಾಗ ವಿವಿ ಕಡ್ಡಾಯವಾಗಿ ಹಾಜರ್ ಇರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಧ್ಯಯನ ಮತ್ತು ಆಡಳಿತ ಸಿಬ್ಬಂದಿ ಮನೆಯಿಂದಲೇ ಕಾರ್ಯವನ್ನು ನಿರ್ವಹಿಸಬೇಕು. ಅಧ್ಯಯನ ಮತ್ತು ಆಡಳಿತ ಸಿಬ್ಬಂದಿಯ ಕರ್ತವ್ಯ ನಿರತ ರಜೆಯನ್ನು ಪರಿಗಣಿಸಲಾಗುವುದು ಎಂದು ತಿಳಿಸಿದ್ದಾರೆ.