Tag: Kannadigaru

  • ದೇಶಕ್ಕೆ ಕನ್ನಡಿಗರ ಕೊಡುಗೆ ಅಪಾರ: ಬೊಮ್ಮಾಯಿ

    ದೇಶಕ್ಕೆ ಕನ್ನಡಿಗರ ಕೊಡುಗೆ ಅಪಾರ: ಬೊಮ್ಮಾಯಿ

    ಬೆಂಗಳೂರು: ಕನ್ನಡಿಗರು ಪ್ರಗತಿಪರ ಚಿಂತಕರು. ಸ್ವಾತಂತ್ರ್ಯ ಪೂರ್ವ ಹಾಗೂ ನಂತರದಲ್ಲಿ ದೇಶಕ್ಕೆ ಕನ್ನಡಿಗರ ಕೊಡುಗೆ ಬಹಳಷ್ಟಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು. ಬೊಮ್ಮಾಯಿ ಅವರು ಇಂದು ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ‘ಅಮೃತ ಭಾರತಿಗೆ ಕನ್ನಡದಾರತಿ ಅಭಿಯಾನ’ವನ್ನು ಉದ್ಘಾಟಿಸಿ ಮಾತನಾಡಿದರು.

    ಕನ್ನಡ ಪರಂಪರೆಯ ಮೂಲಕ ಭಾರತ ಪರಂಪರೆಗೆ ನಾಂದಿ ಹಾಡಬೇಕಿದೆ. ನವಕರ್ನಾಟಕದಿಂದ ನವಭಾರತ ನಿರ್ಮಾಣದ ಚಿಂತನೆಯನ್ನು ಸರ್ಕಾರ ಹೊಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಗುರಿಯಾದ ಭಾರತದ 5 ಟ್ರಿಲಿಯನ್ ಆರ್ಥಿಕತೆಯಲ್ಲಿ ಕರ್ನಾಟಕದ ಕೊಡುಗೆ ದೊಡ್ಡ ಪ್ರಮಾಣದಲ್ಲಿದೆ. ದೂರದೃಷ್ಟಿಯ ಚಿಂತನೆಯಿಂದ ರಾಜ್ಯ ಸರ್ಕಾರ ಕೆಲಸ ಮಾಡಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ನಮ್ಮ ಜನರಿಗೆ ಸಿದ್ದರಾಮಯ್ಯ ಅವಶ್ಯಕತೆ ಇದೆ, ಅವರೇ ಸಿಎಂ ಆಗಬೇಕು: ಬೈರತಿ ಸುರೇಶ್ 

    ಸ್ವಾತಂತ್ರ್ಯ ಹೋರಾಟದಲ್ಲಿ ಕನ್ನಡ ನಾಡಿನ ಅಪೂರ್ವ ಕೊಡುಗೆ
    ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ 75 ವರ್ಷ ಮಹತ್ವದ ಕಾಲಘಟ್ಟ. ಸ್ವಾತಂತ್ರ್ಯ ಪೂರ್ವದಲ್ಲಿ ಹುಟ್ಟಿದವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ ಮಡಿದವರಿದ್ದಾರೆ. ರಾಜರಿಂದ ಪ್ರಾರಂಭವಾದ ಸ್ವಾತಂತ್ರ್ಯ ಹೋರಾಟ ನಂತರದ ದಿನಗಳಲ್ಲಿ ಸ್ವಾತಂತ್ರ್ಯ ಚಳುವಳಿಯ ರೂಪ ಪಡೆಯಿತು.

    1824ರಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ, ಕರ್ನಾಟಕದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡುವ ಎದೆಗಾರಿಕೆ ಇದೆಯೆಂಬುದನ್ನು ನಿರೂಪಿಸಿದ್ದರು. ಸ್ವಾತಂತ್ರ್ಯ ಹೋರಾಟದಲ್ಲಿ ಕನ್ನಡ ನಾಡು ಅಪೂರ್ವ ಕೊಡುಗೆ ನೀಡಿದೆ. ಮೈಲಾರ ಮಾಹದೇವಪ್ಪ, ಸಂಗೊಳ್ಳಿ ರಾಯಣ್ಣ ಸೇರಿದಂತೆ ಹಲವಾರು ಸ್ವಾತಂತ್ರ್ಯ ಹೋರಾಟಗಾರರು ದೇಶಕ್ಕಾಗಿ ತ್ಯಾಗ ಮಾಡಿದ್ದಾರೆ ಎಂದರು.

    ತ್ಯಾಗಬಲಿದಾನಗಳ ನಂತರ ದೊರೆತ ಸ್ವತಂತ್ರ ದೇಶದ ಏಕತೆ, ಅಖಂಡತೆ ಕಾಯ್ದುಕೊಂಡು ಪ್ರಬಲ ಹಾಗೂ ಸಶಕ್ತ ರಾಷ್ಟ್ರ ನಿರ್ಮಾಣದ ಚಿಂತನೆ ಎಲ್ಲ ಭಾರತೀಯರಲ್ಲಿ ಇರಬೇಕು ಎಂದು ಕರೆ ಕೊಟ್ಟರು.

    ಎಲ್ಲರಿಗೂ ಸ್ವಾಭಿಮಾನ, ಸಮಾನತೆಯ ಬದುಕು ನೀಡುವ ಸ್ವತಂತ್ರ ಭಾರತ ವಿಶ್ವಮಾನ್ಯ ರಾಷ್ಟ್ರವಾಗಿದೆ. ಸಾವಿರ ವರ್ಷಗಳಿಂದ ಮೊಘಲರು, ಬ್ರಿಟೀಷರ ಆಕ್ರಮಣದಲ್ಲಿ ಸ್ವಾಭಿಮಾನವನ್ನು ಅದುಮಿಟ್ಟು ಬದುಕುವ ಪರಿಸ್ಥಿತಿಯಿಂದ ಸ್ವಾತಂತ್ರ್ಯ ದೊರಕಿದೆ. ದೇಶದ ಜನರೆಲ್ಲರೂ ಒಗ್ಗಟ್ಟಾಗಬೇಕು. ಮೋದಿ ಅವರು ಬಲಿಷ್ಟ ಭಾರತದ ಕಲ್ಪನೆಯನ್ನು ಸಾಕಾರಗೊಳಿಸುತ್ತಿದ್ದಾರೆ ಎಂದರು.

    ಜನರ ಏಳಿಗೆಗೆ ಕಾರ್ಯಕ್ರಮಗಳನ್ನು ಹಮ್ಮಿಕೊಂಡು 25 ವರ್ಷಗಳ ಅಮೃತ ಕಾಲ ಮಾಡಬೇಕೆಂದು ಕರೆ ನೀಡಿದರು. ಒಬ್ಬ ಮುತ್ಸದ್ದಿಯ ಕಣ್ಣು ಮುಂದಿನ ಜನಾಂಗದ ಮೇಲಿರುತ್ತದೆ. ನಾವು ಹುಟ್ಟಿದ ಜನ್ಮಭೂಮಿ ಶ್ರೇಷ್ಠ ಭಾರತವಾಗಬೇಕೆಂಬ ಗುರಿಯನ್ನು ಹೊಂದಿರುವ ನಾಯಕ ಮೋದಿ ಅವರು ಎಂದು ಪ್ರಶಂಸಿದರು.

    ವೀರ್ ಸಾವರ್ಕರ್ ದಿಟ್ಟ, ಧೀಮಂತ ನಾಯಕ
    ಮೊದಲನೇ ಸ್ವಾತಂತ್ರ್ಯ ಹೋರಾಟವನ್ನು ಲೋಕಮಾನ್ಯ ತಿಲಕ, ವೀರಸಾವರ್ಕರ್ ಅವರಿಂದ ಪ್ರಾರಂಭವಾಯಿತು. ವೀರ್ ಸಾವರ್ಕರ್ 1883ರ ಜೂನ್ 28 ರಲ್ಲಿ ಜನಿಸಿದ್ದು, ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿನ ಕಾರಾಗೃಹದಲ್ಲಿ ಕಾಲಾಪಾನಿ ಶಿಕ್ಷೆಯನ್ನು ಅನುಭವಿಸಿದ್ದರು.

    ದೇಶಕ್ಕಾಗಿ ತ್ಯಾಗ ಮಾಡಲು ಸಿದ್ಧರಾಗಿದ್ದ ವೀರ್ ಸಾವರ್ಕರ್ ಅವರು ದಿಟ್ಟ, ಧೀಮಂತ ನಾಯಕರಾಗಿದ್ದರು. ಸ್ವಾತಂತ್ರ್ಯ ನನ್ನ ಜನ್ಮಸಿದ್ಧ ಹಕ್ಕು ಎಂದ ಲೋಕಮಾನ್ಯ ತಿಲಕರ ಚಿಂತನೆ, ಯೋಚನಾಶಕ್ತಿ ವಿಶಿಷ್ಟವಾದುದಾಗಿತ್ತು. ಸ್ವಾತಂತ್ರ್ಯ ಹೊರತುಪಡಿಸಿ, ಮಿಕ್ಕೆಲ್ಲವೂ ನಗಣ್ಯ ಎಂದ ಈ ಎಲ್ಲ ಸ್ವಾತಂತ್ರ್ಯ ಹೋರಾಟಗಾರರಿಗೆ ನನ್ನ ಪ್ರಥಮ ನಮಸ್ಕಾರಗಳು ಎಂದು ನಮಿಸಿದರು. ಇದನ್ನೂ ಓದಿ:  ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ ಚುನಾವಣೆ ಸಮಿತಿ ಇದೆಯೇ? – ಡಿಕೆಶಿಗೆ ಪತ್ರ ಬರೆದ ಸ್ಥಾನ ವಂಚಿತರು 

    ಮಹನೀಯರ ಚಿಂತನೆ, ತ್ಯಾಗದ ಫಲವಾಗಿ ಸ್ವಾತಂತ್ರ್ಯ ಲಭಿಸಿದೆ
    ಲಾಹೋರ್‌ನಲ್ಲಿ ಲಾಲ್ ಲಜಪತ್ ರಾಯ್ ನೇತೃತ್ವದಲ್ಲಿ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಕ್ಕೆ ವೇಗ ದೊರಕಿತು. ಇದೇ ಹಾದಿಯಲ್ಲಿ ಭಗತ್ ಸಿಂಗ್, ಚಂದ್ರಶೇಖರ್ ಅಜಾದ್ ನಡೆದರು. ಈ ಹೋರಾಟಕ್ಕೆ ಅಂತರರಾಷ್ಟ್ರೀಯ ಸ್ವರೂಪವನ್ನು ಸುಭಾಷ್ ಚಂದ್ರ ಬೋಸರು ನೀಡಿದರು. ಈ ಎಲ್ಲ ಹೋರಾಟಕ್ಕೆ ಆಧ್ಯಾತ್ಮಿಕ ಶಕ್ತಿಯನ್ನು ಸ್ವಾಮಿ ವಿವೇಕಾನಂದರು ತುಂಬಿದರು ಎಂದು ಸ್ಪೂರ್ತಿ ತುಂಬಿ ಮಾತನಾಡಿದರು.

    ಹಲವಾರು ಮಹನೀಯರ ಚಿಂತನೆ, ಹೋರಾಟ ತ್ಯಾಗದ ಫಲವಾಗಿ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದೆ. ಮಹಾತ್ಮಾ ಗಾಂಧಿ ಅವರಿಂದ ಸ್ಪೂರ್ತಿ ಹೊಂದಿ ಸಹಸ್ರಾರು ದೇಶಭಕ್ತರು ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು ತಮ್ಮ ಸರ್ವಸ್ವವನ್ನು ದೇಶಕ್ಕಾಗಿ ತ್ಯಾಗ ಮಾಡಿದ್ದಾರೆ. ಇಂತಹ ಅನೇಕ ಮಹನೀಯರು ದೇಶಕ್ಕಾಗಿ ತ್ಯಾಗ ಮಾಡಿದವರಿಗೆ ನನ್ನ ನಮಸ್ಕಾರಗಳು ಎಂದರು.

    ಬ್ರಿಟಿಷರು ವಿರುದ್ಧ ದುಡಿಯುವ ವರ್ಗದ ಹೋರಾಟ
    ಮಹಾತ್ಮಾಗಾಂಧಿ ಅವರ ಸ್ವದೇಶಿ ಚಳುವಳಿಯಲ್ಲಿ ಮಹಿಳೆಯರೂ ಪಾಲ್ಗೊಂಡರು. ಕ್ವಿಟ್ ಇಂಡಿಯಾ ಚಳುವಳಿ, ಬಾರ್ಡೋಲಿಯಲ್ಲಿ ರೈತರ ಸತ್ಯಾಗ್ರಹ, ಪಶ್ಚಿಮ ಬಂಗಾಳದಲ್ಲಿ ಇಂಡಿಗೋ ಚಳವಳಿಗಳ ಮೂಲಕ ದುಡಿಯುವ ವರ್ಗ ಬ್ರಿಟಿಷರು ವಿರುದ್ಧ ನಡೆಸಿದ ಹೋರಾಟವನ್ನು ಸಿಎಂ ಸ್ಮರಿಸಿದರು.

  • ಮಧ್ಯೆ ಕೆಟ್ಟು ನಿಂತ ಬಸ್ – ರೊಮೆನಿಯಾ ತಲುಪದ 37 ಕನ್ನಡಿಗರು

    ಮಧ್ಯೆ ಕೆಟ್ಟು ನಿಂತ ಬಸ್ – ರೊಮೆನಿಯಾ ತಲುಪದ 37 ಕನ್ನಡಿಗರು

    ಬೀದರ್: ರಸ್ತೆ ಮಧ್ಯೆ ಬಸ್ ಕೆಟ್ಟು ನಿಂತ ಪರಿಣಾಮ 37 ಮಂದಿ ಕನ್ನಡಿಗರು ತಡವಾಗಿ ರೊಮೆನಿಯಾ ತಲಪಲಿದ್ದಾರೆ.

    ಉಕ್ರೇನ್‍ನಿಂದ ಹೊರಟಿದ್ದ ಬಸ್ ರೊಮೆನಿಯಾ ಗಡಿಯಿಂದ 100 ಕಿ.ಮೀ ದೂರದಲ್ಲಿ ಹಾಳಾಗಿತ್ತು. ಕೆಟ್ಟು ನಿಂತಿದ್ದ ಬಸ್ ರಿಪೇರಿಯಾಗಿದ್ದು ಮತ್ತೆ ರೊಮೆನಿಯಾ ಕಡೆಗೆ ಕನ್ನಡಿಗರು ಪ್ರಯಾಣ ಹೊರಟಿದ್ದಾರೆ. ಇದನ್ನೂ ಓದಿ: ಉಕ್ರೇನ್‌ ದೇಶವಾಗಿ ಉಳಿಯುವುದೇ ಅನುಮಾನ: ಪುಟಿನ್‌ ನೇರ ಎಚ್ಚರಿಕೆ

    ಬೀದರ್ ಮೂಲದ ಶಶಾಂಕ್ ಮತ್ತು ವಿವೇಕ್ ಸೇರಿದಂತೆ 37 ಕನ್ನಡಿಗರು ಒಂದೇ ಬಸ್‍ನಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಉಳಿದ ನಾಲ್ಕು ಬಸ್‍ಗಳು ಈಗಾಗಲೇ ರೊಮೆನಿಯಾ ತಲುಪಿದ್ದು ಕನ್ನಡಿಗರು ಕೆಲವೇ ಗಂಟೆಯಲ್ಲಿ ರೊಮೆನಿಯಾ ತಲುಪುವ ಸಾಧ್ಯತೆಯಿದೆ. ಇದನ್ನೂ ಓದಿ: ಉಕ್ರೇನ್‍ನಿಂದ ಮರಳಿದ ವಿದ್ಯಾರ್ಥಿಗಳಿಗೆ ಸೀಟ್ ನೀಡಿ ಶುಲ್ಕವನ್ನು ಸರ್ಕಾರವೇ ಭರಿಸಲಿ: ದಿಗ್ವಿಜಯ್ ಸಿಂಗ್

    ಖಾರ್ಕಿವ್‍ನ ಪಿಶಾಚಿನ್‍ನಿಂದನಿಂದ ಸತತ 40 ಗಂಟೆಗಳ ಕಾಲ ವಿದ್ಯಾರ್ಥಿಗಳು ಪ್ರಯಾಣ ಮಾಡಿ ರೊಮೆನಿಯಾ ತಲುಪಲಿದ್ದಾರೆ.

  • ಜನತೆಯ ಹಿತದೃಷ್ಟಿಯಿಂದ ಕಠಿಣ ಕ್ರಮ: ಸುಧಾಕರ್ ಸಮರ್ಥನೆ

    ಜನತೆಯ ಹಿತದೃಷ್ಟಿಯಿಂದ ಕಠಿಣ ಕ್ರಮ: ಸುಧಾಕರ್ ಸಮರ್ಥನೆ

    ಬೆಂಗಳೂರು: ಜನತೆಯ ಹಿತದೃಷ್ಟಿಯಿಂದ ಕೆಲವು ಸಂದರ್ಭದಲ್ಲಿ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

    ನೈಟ್ ಕಫ್ರ್ಯೂ ಬಗ್ಗೆ ಜನರಿಗೆ ಅಸಮಾಧಾನವಾಗುತ್ತಿರುವ ಹಿನ್ನೆಲೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೈಟ್ ಕಫ್ರ್ಯೂ ಕೇವಲ ಹತ್ತು ದಿನಗಳ ಕಾಲ ಮಾತ್ರ. ಈ ರೀತಿ ಕ್ರಮಗಳನ್ನು ತೆಗೆದುಕೊಳ್ಳಲು ನಮಗೇನು ಖುಷಿ ಇಲ್ಲ. ಜನತೆಯ ಹಿತದೃಷ್ಟಿಯಿಂದ ಕೆಲವು ಸಂದರ್ಭದಲ್ಲಿ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತೆ. ತಾಂತ್ರಿಕ ಸಲಹಾ ಸಮಿತಿ ಕೊಟ್ಟ ಸಲಹೆಗಳ ಪ್ರಕಾರ ಕ್ರಮ ತೆಗೆದುಕೊಂಡಿದ್ದೇವೆ. ಜನತೆ ದಯಮಾಡಿ ಸಹಕಾರ ಮಾಡಬೇಕು. ಹದಿನಾಲ್ಕು ದಿನಗಳ ಕಾಲ ಆದ ನಂತರ ಪರಿಸ್ಥಿತಿ ನೋಡಿ ಕ್ರಮ ಕೈಗೊಳ್ತೀವಿ ಎಂದು ಮನವಿ ಮಾಡಿಕೊಂಡರು. ಇದನ್ನೂ ಓದಿ: ಓಮಿಕ್ರಾನ್ ವೈರಸ್‍ಗೆ ಬೆಚ್ಚಿಬಿದ್ದ ಜನ – ಡಿಸೆಂಬರ್‌ನಲ್ಲಿ ಹೆಚ್ಚು ವ್ಯಾಕ್ಸಿನೇಷನ್

    night curfew

    ಬಳ್ಳಾರಿ, ವಿಜಯನಗರ ಜಿಲ್ಲೆಯಲ್ಲಿ ಶಿಶುಗಳ ಮರಣ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಬಳ್ಳಾರಿ ಜಿಲ್ಲೆಯ ಡಿಎಚ್‍ಓ ಜೊತೆ ದೂರವಾಣಿ ಕರೆ ಮಾಡಿ ಮಾತನಾಡಿದ್ದೇನೆ. ಈ ಕುರಿತು ಮಾಹಿತಿಯನ್ನು ತಿಳಿದುಕೊಂಡಿದ್ದೇನೆ. ಕೂಡಲೇ ಸೂಕ್ತ ಕ್ರಮ ತೆಗೆದುಕೊಳ್ಳಿ ಎಂದು ಆದೇಶವನ್ನು ಹೊರಡಿಸಲಾಗಿದೆ ಎಂದು ತಿಳಿಸಿದರು.

    ಸಂಕ್ರಾಂತಿ ನಂತರ ರಾಜಕೀಯದಲ್ಲಿ ಕೆಲ ಬದಲಾವಣೆ ವಿಚಾರವಾಗಿ, ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಎಲ್ಲ ಕೆಲಸಗಳು ಆಗ್ತಿವೆ. ಸರ್ಕಾರ ಉತ್ತಮವಾಗಿ ನಡೆಯುತ್ತಿದೆ. ಇದು ಇನ್ನಷ್ಟು ಗಟ್ಟಿ ಆಗುತ್ತದೆ. ವಿರೋಧ ಪಕ್ಷಗಳು ಕೂಡಾ ನಮ್ಮ ಅಭಿವೃದ್ಧಿ ಕೆಲಸಗಳನ್ನು ನೋಡಿ ಹತಾಶರಾಗ್ತಾರೆ. ಸಚಿವರ ಬದಲಾವಣೆ ವಿಚಾರ ಸಿಎಂ ವಿವೇಚನೆಗೆ ಬಿಟ್ಟದ್ದು. ಯಾರು ತಂಡದಲ್ಲಿ ಇರಬೇಕು, ಯಾರು ಇರಬಾರದು ಅನ್ನೋದನ್ನು ಸಿಎಂ ನಿರ್ಧಾರ ಮಾಡ್ತಾರೆ ಎಂದರು. ಇದನ್ನೂ ಓದಿ: ಕ್ರಿಸ್‍ಮಸ್ ದಿನ ಬಡ ಮಕ್ಕಳೊಂದಿಗೆ ಕಾಲಕಳೆದ ಶ್ವೇತಾ ಶ್ರೀವಾತ್ಸವ್

  • ಚಲನಚಿತ್ರ ವಾಣಿಜ್ಯ ಮಂಡಳಿ ಕೈಗೊಳ್ಳುವ ನಿರ್ಧಾರಕ್ಕೆ ನಾವು ಬದ್ಧ: ಶಿವಣ್ಣ

    ಚಲನಚಿತ್ರ ವಾಣಿಜ್ಯ ಮಂಡಳಿ ಕೈಗೊಳ್ಳುವ ನಿರ್ಧಾರಕ್ಕೆ ನಾವು ಬದ್ಧ: ಶಿವಣ್ಣ

    ಮೈಸೂರು: ಚಲನಚಿತ್ರ ವಾಣಿಜ್ಯ ಮಂಡಳಿ ಕೈಗೊಳ್ಳುವ ನಿರ್ಧಾರಕ್ಕೆ ನಾವು ಬದ್ಧ ಎಂದು ನಟ ಶಿವರಾಜ್‍ಕುಮಾರ್ ತಿಳಿಸಿದರು.

    ಡಿ.31ರಂದು ನಡೆಯುವ ಬಂದ್ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು ಯಾವತ್ತಿದ್ದರೂ ಕನ್ನಡ ನೆಲ, ಜಲ, ಭಾಷೆಯ ರಕ್ಷಣೆ ಮಾಡಲು ಬದ್ಧರಾಗಿರುತ್ತೇವೆ. ಅದು ಅಲ್ಲದೇ ಈ ಕುರಿತು ಸರ್ಕಾರ ತೀರ್ಮಾನ ತೆಗೆದುಕೊಂಡಿರುವುದು ನಮಗೆ ಸಂತಸ ತಂದಿದೆ ಎಂದರು.

    ಚೇಂಬರ್ ಏನು ಹೇಳುತ್ತೆ ಅದೇ ರೀತಿ ನಾವು ನಡೆದುಕೊಳ್ಳುತ್ತೇವೆ. ನಾವು ಯೋಚಿಸಿ ನಿರ್ಧಾರವನ್ನು ತೆಗೆದುಕೊಳ್ಳಬೇಕು. ಡಿ.31 ಅಲ್ಲಿ ನಮ್ಮ ಕನ್ನಡದಲ್ಲಿ ಮೂರು ಸಿನಿಮಾಗಳು ಬಿಡುಗಡೆಯಾಗುತ್ತಿದೆ. ಅದಕ್ಕೆ ನಮ್ಮ ಕನ್ನಡ ಸಿನಿಮಾಗಳಿಗೆ ಯಾವ ರೀತಿಯ ದ್ರೋಹ ಆಗಬಾರದು. ಈ ಒಂದು ಸಮಸ್ಯೆಯನ್ನು ನಾವು ಬಹಳ ಬುದ್ಧಿವಂತಿಕೆಯಿಂದ ಸರಿ ಮಾಡಿಕೊಳ್ಳಬೇಕು ಎಂದು ತಿಳಿಸಿದರು. ಇದನ್ನೂ ಓದಿ:  ನಮಗೆ ನಷ್ಟ ಮಾಡಿಕೊಂಡು, ಇನ್ನೊಬ್ಬರ ಮೇಲೆ ಪ್ರತಿಭಟನೆ ಮಾಡಬಾರದು: ಯಶ್

    ಈ ಕುರಿತು ಜವಾಬ್ದಾರಿಯನ್ನು ತೆಗೆದುಕೊಳ್ಳುವವರು ತುಂಬಾ ಜನ ಇದ್ದಾರೆ. ಈ ಕುರಿತು ಅವರು ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ. ಎಲ್ಲರಿಗೂ ಅವರ ಭಾಷೆ, ನಾಡಿನ ಮೇಲೆ ಪ್ರೀತಿ, ಗೌರವ ಇದ್ದೇ ಇರುತ್ತೆ. ನಾವೆಲ್ಲರೂ ಕನ್ನಡಿಗರು ಎಂದರು.

  • ಅನಿವಾಸಿ ಭಾರತೀಯ ಸಮಿತಿಗೆ ಉಪಾಧ್ಯಕ್ಷರನ್ನ ನೇಮಿಸಿ: ಅನಿವಾಸಿ ಕನ್ನಡಿಗರು

    ಅನಿವಾಸಿ ಭಾರತೀಯ ಸಮಿತಿಗೆ ಉಪಾಧ್ಯಕ್ಷರನ್ನ ನೇಮಿಸಿ: ಅನಿವಾಸಿ ಕನ್ನಡಿಗರು

    -ಅನಿವಾಸಿ ಕನ್ನಡಿಗರ ಸಹಾಯಕ್ಕೆ ರಾಜ್ಯ ಸರ್ಕಾರ ಮುಂದೆ ಬರಲಿ

    ಬೆಂಗಳೂರು: ಅನಿವಾಸಿ ಕನ್ನಡಿಗರ ಸಹಾಯಕ್ಕೆ ರಾಜ್ಯ ಸರ್ಕಾರ ಮುಂದಾಗಬೇಕು ಮತ್ತು ಕಳೆದ ಮೂರು ವರ್ಷಗಳಿಂದ ಖಾಲಿ ಇರುವ ಅನಿವಾಸಿ ಭಾರತೀಯ ಸಮಿತಿಗೆ ಕನ್ನಡಿಗರನ್ನ ನೇಮಿಸಬೇಕೆಂದು ದುಬೈನಲ್ಲಿರುವ ಕನ್ನಡಿಗರು ಒತ್ತಾಯಿಸಿದ್ದಾರೆ. ಅನಿವಾಸಿ ಭಾರತೀಯ ಸಮಿತಿಗೆ ಓರ್ವ ಕನ್ನಡಿಗ ಸದಸ್ಯರನ್ನ ನೇಮಿಸಿದ್ರೆ, ಕೆಲಸ ಅರಸಿ ವಿದೇಶದಲ್ಲಿರುವ ಕನ್ನಡಿಗರಿಗೆ ಸಹಾಯವಾಗಲಿದೆ ಎಂದು ಎನ್‍ಆರ್‍ಐಗಳು ರಾಜ್ಯ ಸರ್ಕಾರಕ್ಕೆ ಸಾಮಾಜಿಕ ಜಾಲತಾಣಗಳ ಮೂಲಕ ಮನವಿ ಸಲ್ಲಿಸುತ್ತಿದ್ದಾರೆ.

    ದುಬೈನ ಕನ್ನಡಿಗಾಸ್ ಫೆಡರೇಷನ್ ಸಂಚಾಲಕರಾಗಿರುವ ಹಿದಾಯತ್ ಅಡ್ಡೂರು, ಅನಿವಾಸಿ ಭಾರತೀಯ ಸಮಿತಿಗೆ ಪ್ರವೀಣ್ ಶೆಟ್ಟಿಯವರ ಹೆಸರನ್ನು ಸೂಚಿಸಿದ್ದಾರೆ. ಟ್ವಿಟ್ಟರ್ ನಲ್ಲಿ #ಪ್ರವೀಣ್‍ಶೆಟ್ಟಿಫಾರ್‍ಎನ್‍ಆರ್‍ಐ ಎಂಬ ಹ್ಯಾಶ್ ಟ್ಯಾಗ್ ಬಳಸಿ ಅನಿವಾಸಿ ಕನ್ನಡಿಗರು ಟ್ವೀಟ್ ಮಾಡುತ್ತಿದ್ದಾರೆ. ಇತ್ತ ಹಿದಾಯತ್ ಅಡ್ಡೂರ್ ಸಾಲು ಸಾಲು ಟ್ವೀಟ್ ಮೂಲಕ ವಿದೇಶದಲ್ಲಿರುವ ಕನ್ನಡಿಗರ ಸಹಾಯಕ್ಕೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

    ಟ್ವೀಟ್: ಎಲ್ಲೇ ಇರು ಹೇಗೇ ಇರು ಎಂದೆಂದಿಗೂ ನೀ ಕನ್ನಡವಾಗಿರು, ಕುವೆಂಪು ಬರೆದ ಸಾಲನ್ನು ನಾವು ಅನಿವಾಸಿಗಳು ಅಕ್ಷರಶಃ ಪಾಲಿಸುತ್ತಿದ್ದೇವೆ, ಆದರೆ ಈ ಅನಿವಾಸಿಗಳ ನಿರೀಕ್ಷೆಯನ್ನು ರಾಜ್ಯ ಸರ್ಕಾರ ಈಡೇರಿಸುವುದೇ? ಅನಿವಾಸಿ ಭಾರತೀಯ ಸಮಿತಿಗೆ ಪ್ರವೀಣ್ ಶೆಟ್ಟಿಯವರನ್ನು ಉಪಾಧ್ಯಕ್ಷರಾಗಿ ನೇಮಿಸಿದರೆ ಪ್ರಪಂಚದಾದ್ಯಂತ ವಿವಿಧ ದೇಶಗಳಲ್ಲಿ ಇರುವ ಅನಿವಾಸಿ ಕನ್ನಡಿಗರಿಗೆ ಉಪಕಾರಿಯಾಗಲಿದೆ, ನಮ್ಮ ಬೇಡಿಕೆಯನ್ನು ಕಡೆಗಣಿಸಬೇಡಿ.

    ಜನರ ನಡುವೆ ಇದ್ದು ಜನರ ಧ್ವನಿಯಾಗುವವರು ನಮ್ಮ ಜನಪ್ರತಿನಿಧಿಯಾಗಬೇಕು ಎಂದೇ ಎಲ್ಲರೂ ನಿರೀಕ್ಷಿಸುವುದು, ಅನಿವಾಸಿ ಕನ್ನಡಿಗರ ಧ್ವನಿ, ಸಮರ್ಥ ಪ್ರತಿನಿಧಿ ಪ್ರವೀಣ್ ಶೆಟ್ಟಿ. ಸಾವಿರಾರು ಅನಿವಾಸಿ ಕನ್ನಡಿಗರಿಗೆ ಉದ್ಯೋಗ ನೀಡಿ, ನೂರಾರು ಕನ್ನಡ ಪರ ಸಂಘಟನೆಗಳಿಗೆ ತನು ಮನ ಧನದಿಂದ ಸಹಾಯಹಸ್ತ ಚಾಚಿ, ಕನ್ನಡಿಗರ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತಾ ಅನಿವಾಸಿ ಕನ್ನಡಿಗರ ಮನಗೆದ್ದ ಪ್ರವೀಣ್ ಶೆಟ್ಟಿ ಅನಿವಾಸಿ ಭಾರತೀಯ ಸಮಿತಿಗೆ ಸೂಕ್ತ ಆಯ್ಕೆ.

    ಮುಖ್ಯಮಂತ್ರಿ ಯಡಿಯುರಪ್ಪನವರೇ, ಬಹಳಷ್ಟು ನಿರೀಕ್ಷೆಯೊಂದಿಗೆ ಅನಿವಾಸಿಗಳು ನಿಮ್ಮ ಮುಂದೆ ಬೇಡಿಕೆ ಇಡುತ್ತಿದ್ದೇವೆ, ತಕ್ಷಣವೇ ಅನಿವಾಸಿ ಭಾರತೀಯ ಸಮಿತಿಗೆ ಉಪಾಧ್ಯಕ್ಷರನ್ನಾಗಿ ಪ್ರವೀಣ್ ಶೆಟ್ಟಿಯವರನ್ನು ನೇಮಿಸುವಿರೆಂಬ ಆಶಯದಲ್ಲಿದ್ದೇವೆ. ನಮ್ಮ ರಾಜ್ಯ ಸರ್ಕಾರವನ್ನು ನೆರೆಯ ಕೇರಳ ಸರ್ಕಾರದೊಂದಿಗೆ ತುಲನೆ ಮಾಡಲು ನಮಗೆ ಇಚ್ಚೆಯಿಲ್ಲ, ಆದರೂ ಅವರ ಸರ್ಕಾರ ಅನಿವಾಸಿಗಳಿಗೆ ನೀಡುವ ಮಾನ್ಯತೆ ನಮ್ಮ ಸರ್ಕಾರದ ನಿರ್ಲಕ್ಷ್ಯತೆಯನ್ನು ಎತ್ತಿ ತೋರಿಸುತ್ತೆ, ನಮ್ಮ ಬೇಡಿಕೆಯನ್ನು ಕೂಡಲೇ ಈಡೇರಿಸಿ.

  • ಜಂಟಲ್‍ಮನ್ ಹಿಂಗೇ ಹೋದ್ರೆ ಪಾಂಡವಪುರ ಬರುತ್ತಾ?

    ಜಂಟಲ್‍ಮನ್ ಹಿಂಗೇ ಹೋದ್ರೆ ಪಾಂಡವಪುರ ಬರುತ್ತಾ?

    – ಸ್ಟಾರ್ ಸ್ಪೋರ್ಟ್ಸ್ ಕನ್ನಡ ಟ್ವೀಟ್‍ಗೆ ಕನ್ನಡಿಗರು ಫಿದಾ

    ಬೆಂಗಳೂರು: ಸ್ಟಾರ್ ಸ್ಪೋರ್ಟ್ಸ್ ಕನ್ನಡ ವಾಹಿನಿ ದಿನ ದಿನ ಹೊಸ ಕನ್ನಡ ಟ್ವೀಟ್‍ಗಳನ್ನು ಮಾಡುತ್ತಾ ಕನ್ನಡಿಗರ ಹೃದಯವನ್ನು ಗೆಲ್ಲುವಲ್ಲಿ ಯಶಸ್ವಿಯಾಗುತ್ತಿದೆ.

    ಸ್ಟಾರ್ ಸ್ಪೋರ್ಟ್ಸ್ ವಾಹಿನಿಯೂ ಪ್ರಾದೇಶಿಕ ಭಾಷೆಯಲ್ಲಿ ಕ್ರೀಡೆಯನ್ನು ತೋರಿಸುವ ಮೂಲಕ ಭಾರತದಲ್ಲಿ ಜನಮನ್ನಣೆಗೆ ಪಾತ್ರವಾಗಿದೆ. ಈಗಾಗಲೇ ಕನ್ನಡ, ತಮಿಳು ಮುಂತಾದ ರಾಜ್ಯದ ಸ್ಥಳೀಯ ಭಾಷೆಯಲ್ಲಿ ಕ್ರೀಡೆಯನ್ನು ಪ್ರಸಾರ ಮಾಡುತ್ತಿದೆ. ಅಂತಯೇ ಸ್ಟಾರ್ ಸ್ಪೋರ್ಟ್ಸ್ ಕನ್ನಡ ಮಾಧ್ಯಮ ಕನ್ನಡದಲ್ಲೇ ಕ್ರೀಡೆಯನ್ನು ತೋರಿಸುವ ಮೂಲಕ ಎಲ್ಲರ ಮನಗೆದ್ದಿದೆ.

    ಈಗ ಮತ್ತೆ ಕನ್ನಡಿಗೆ ಮನಸ್ಸುನ್ನು ಗೆದ್ದಿರುವ ಸ್ಟಾರ್ ಕನ್ನಡ ವಾಹಿನಿ, ನಿನ್ನೆ ನಡೆದ ರಾಜಸ್ಥಾನ್ ರಾಯಲ್ಸ್ ಮತ್ತು ಕೋಲ್ಕತ್ತಾ ನಡುವಿನ ಪಂದ್ಯದ ಫೋಟೋ ಹಂಚಿಕೊಂಡು ಜಂಟಲ್‍ಮನ್ ಹಿಂಗೇ ಹೋದ್ರೆ ಪಾಂಡವಪುರ ಬರುತ್ತಾ ಎಂದು ಬರೆದು ರಾಜಸ್ಥಾನ್ ತಂಡದ ನಾಯಕ ಸ್ಟೀವ್ ಸ್ಮಿತ್ ಮತ್ತು ತೆವಾಟಿಯಾ ಅವರ ಫೋಟೋವನ್ನು ಶೇರ್ ಮಾಡಿದೆ. ಈ ಡೈಲಾಗ್ ಕನ್ನಡ ಸೂಪರ್ ಹಿಟ್ ಸಿನಿಮಾ ಸೂರ್ಯವಂಶ ಚಿತ್ರದ್ದಾಗಿದ್ದು, ಈ ದೃಶ್ಯದಲ್ಲಿ ಮುಖ್ಯಮಂತ್ರಿ ಚಂದ್ರು ಮತ್ತು ದೊಡ್ಡಣ್ಣ ಅಭಿನಯಿಸಿದ್ದಾರೆ.

    ಜಂಟಲ್‍ಮನ್ ಹಿಂಗೇ ಹೋದ್ರೆ ಪಾಂಡವಪುರ ಬರುತ್ತಾ ಎಂಬ ಟ್ವೀಟ್ ನೋಡಿ ಫುಲ್ ಖುಷಿಯಾದ ಕನ್ನಡಿಗರು, ಹಿಂಗೇ ಹೋದ್ರೆ ಪಾಂಡವಪುರ ಬರಲ್ಲ ಕೈ ನೋವು ಬರುತ್ತೆ ಎಂದು ಕಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು ಕಮೆಂಟ್ ಮಾಡಿ ಪಾಂಡವಪುರ ಯಾಕೆ ಬರುತ್ತದೆ. ಪಾಂಡವಪುರ ಚಕ್ರ ಇದೆಯಾ ಎಂದು ಹಾಸ್ಯಚಟಕಿ ಹಾರಿಸಿದ್ದಾರೆ. ಪಾಂಡವಪುರದವರು ಕಮೆಂಟ್ ಮಾಡಿ ಬನ್ನಿ ನಿಮ್ಮನ್ನು ಪಾಂಡವಪುರ ಸ್ವಾಗತಿಸುತ್ತೇವೆ ಎಂದಿದ್ದಾರೆ.

    ಈ ಹಿಂದೆಯೂ ಕೂಡ ಕನ್ನಡಿಗರ ಮೆಚ್ಚುಗೆಗೆ ಪಾತ್ರವಾಗಿದ್ದ ವಾಹಿನಿ, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಪೂರನ್ ಅವರ ಫೀಲ್ಡಿಂಗ್ ಮಾಡುತ್ತಿರುವ ಫೋಟೋವನ್ನು ಹಾಕಿ ನನ್ನ ಜೀವಮಾನದಲ್ಲೇ ನೋಡಿದ ಅತ್ಯುತ್ತಮ ಸೇವ್ ಎಂದು ಟ್ವೀಟ್ ಮಾಡಿದ್ದರು. ಈ ಟ್ವೀಟ್ ಅನ್ನು ರೀ ಟ್ವೀಟ್ ಮಾಡಿದ ಸ್ಟಾರ್ ಕನ್ನಡ ವಾಹಿನಿ, ಶೇ.. ಎಂಚಿನ ಫೀಲ್ಡಿಂಗ್ ಮಾರ್ರೆ (ಶೇ ಎಂಥ ಫೀಲ್ಡಿಂಗ್ ಮಾರಾಯರೇ) ಎಂದು ತುಳುವಿನಲ್ಲಿ ಬರೆದು ಟ್ವೀಟ್ ಮಾಡಿತ್ತು.

  • ಕನ್ನಡಿಗರ ನೆರವಿಗೆ ನಿಂತ ಕೇಂದ್ರ- ವಿಶೇಷ ವಿಮಾನ, ರೈಲು ವ್ಯವಸ್ಥೆ

    ಕನ್ನಡಿಗರ ನೆರವಿಗೆ ನಿಂತ ಕೇಂದ್ರ- ವಿಶೇಷ ವಿಮಾನ, ರೈಲು ವ್ಯವಸ್ಥೆ

    ನವದೆಹಲಿ: ಕೊರೊನಾ ಲಾಕ್‍ಡೌನ್‍ನಿಂದಾಗಿ ಉತ್ತರ ಭಾರತದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರ ರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ದೆಹಲಿಯಿಂದ ಕರ್ನಾಟಕಕ್ಕೆ ಇನ್ನೆರಡು ದಿನಗಳಲ್ಲಿ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗುವುದು ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ತಿಳಿಸಿದ್ದಾರೆ.

    ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಉತ್ತರ ಭಾರತದಲ್ಲಿ ಸಿಲುಕಿರುವ ಕನ್ನಡಿಗರು ರಾಜ್ಯಕ್ಕೆ ಮರಳುವುದಕ್ಕಾಗಿ ವಿಶೇಷ ರೈಲೊಂದನ್ನು ಓಡಿಸಲು ರೈಲ್ವೆ ಇಲಾಖೆಯು ಒಪ್ಪಿಗೆ ನೀಡಿದೆ. ಈ ಸಂಬಂಧ ರೈಲ್ವೆ ಸಚಿವ ಪಿಯುಶ್ ಗೋಯಲ್ ಜೊತೆಗೆ ನಡೆಸಿದ ಮಾತುಕತೆ ಯಶಸ್ವಿಯಾಗಿದೆ. ಒಂದೆರಡು ದಿನದಲ್ಲಿ ದೆಹಲಿಯಿಂದ ಬೆಂಗಳೂರಿಗೆ ವಿಶೇಷ ರೈಲು ಸಂಚರಿಸಲಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಅನಿವಾಸಿ ಭಾರತೀಯರನ್ನ ಕರೆ ತರಲು ಮುಂದಾದ ಕೇಂದ್ರ- ಹೊರ ರಾಜ್ಯದ ಕನ್ನಡಿಗರನ್ನ ಮರೆತ ರಾಜ್ಯ ಸರ್ಕಾರ

    ದೆಹಲಿಯ ಹೊರತಾಗಿ ಹರ್ಯಾಣ, ಪಂಜಾಬ್ ಮತ್ತಿತರ ಸಮೀಪದ ಸ್ಥಳಗಳಿಂದಲೂ ಜನರು ರಾಜ್ಯಕ್ಕೆ ವಾಪಸ್ ಆಗಬಹುದಾಗಿದೆ. ಈ ನಿಟ್ಟಿನಲ್ಲಿ ದೆಹಲಿಯ ಸುತ್ತ ಬೇರೆ ನೇರ ಪ್ರದೇಶಗಳಲ್ಲಿರುವ ಕನ್ನಡಿಗರನ್ನು ಕೂಡಲೇ ದೆಹಲಿಗೆ ಕರೆಸಿಕೊಂಡು ಅವರನ್ನೂ ಇದೇ ರೈಲಿನಲ್ಲಿ ಕರ್ನಾಟಕಕ್ಕೆ ಕಳುಹಿಸಿಕೊಡಲು ಕೇಂದ್ರ ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ದೆಹಲಿ ಮತ್ತಿತರ ಸ್ಥಳಗಳಿಂದ ತಮ್ಮ ಸ್ವಂತ ವಾಹನದಲ್ಲಿ ಕರ್ನಾಟಕಕ್ಕೆ ಮರಳಲು ಇಚ್ಛಿಸಿದ ಅನೇಕ ದೆಹಲಿ ಕನ್ನಡಿಗರು ಹಾಗೂ ಯಾತ್ರಾರ್ಥಿಗಳಿಗೂ ಅಗತ್ಯ ಪರವಾನಿಗೆ ನೀಡಲಾಗುತ್ತಿದೆ.

    ದುಬೈನಿಂದ 2 ವಿಶೇಷ ವಿಮಾನ:
    ಅರಬ್ ದೇಶಗಳಲ್ಲಿರುವ ಕನ್ನಡಿಗರು ಸ್ವದೇಶಕ್ಕೆ ಮರಳಲು ಎರಡು ವಿಶೇಷ ವಿಮಾನಗಳ ವ್ಯವಸ್ಥೆ ಮಾಡಲಾಗಿದ್ದು, ಮೇ 12ರಂದು ಯುಎಇನಿಂದ ಮಂಗಳೂರಿಗೆ ವಿಮಾನ ಸಂಚರಿಸುವುದನ್ನು ವಿದೇಶಾಂಗ ಸಚಿವರು ಖಚಿತಪಡಿಸಿದ್ದಾರೆ. ಇನ್ನೊಂದು ವಿಮಾನ ಬೆಂಗಳೂರಿಗೆ ಬರಲಿದ್ದು, ಅದರ ವೇಳಾಪಟ್ಟಿ ಪ್ರಕಟವಾಗಬೇಕಿದೆ ಎಂದು ಸದಾನಂದಗೌಡ ಅವರು ತಿಳಿಸಿದ್ದಾರೆ.

  • ಅನಿವಾಸಿ ಭಾರತೀಯರನ್ನ ಕರೆ ತರಲು ಮುಂದಾದ ಕೇಂದ್ರ- ಹೊರ ರಾಜ್ಯದ ಕನ್ನಡಿಗರನ್ನ ಮರೆತ ರಾಜ್ಯ ಸರ್ಕಾರ

    ಅನಿವಾಸಿ ಭಾರತೀಯರನ್ನ ಕರೆ ತರಲು ಮುಂದಾದ ಕೇಂದ್ರ- ಹೊರ ರಾಜ್ಯದ ಕನ್ನಡಿಗರನ್ನ ಮರೆತ ರಾಜ್ಯ ಸರ್ಕಾರ

    ನವದೆಹಲಿ: ಕೇಂದ್ರ ಸರ್ಕಾರವು ಇಂದಿನಿಂದ ಆಪರೇಷನ್ ಏರ್ ಲಿಫ್ಟ್ ಮತ್ತು ಸಮುದ್ರ ಸೇತು ಹೆಸರಿನಲ್ಲಿ ವಿದೇಶಗಳಲ್ಲಿರುವ ಅನಿವಾಸಿ ಭಾರತೀಯರನ್ನು ಕರೆತರುವ ಕೆಲಸ ಮಾಡುತ್ತಿದೆ. ಆದರೆ ರಾಜ್ಯ ಸರ್ಕಾರ ಮಾತ್ರ ಹೊರ ರಾಜ್ಯಗಳಲ್ಲಿರುವ ಕನ್ನಡಗರನ್ನು ಮರೆತಂತೆ ಭಾಸವಾಗುತ್ತಿದೆ.

    ಕೊರೊನಾ ಲಾಕ್‍ಡೌನ್‍ನಿಂದ ಅನ್ಯ ರಾಜ್ಯಗಳಲ್ಲಿ ಕನ್ನಡಿಗರು ಸಂಕಷ್ಟದಲ್ಲಿದ್ದು ದೆಹಲಿ, ಪಂಜಾಬ್, ಚಂಡೀಗಢ್, ಹರ್ಯಾಣ, ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಕನ್ನಡಿಗರು ಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಅವರನ್ನು ವಾಪಸ್ ಕರೆತರುವ ಬಗ್ಗೆ ಸರ್ಕಾರ ಇನ್ನೂ ಯಾವುದೇ ಕ್ರಮ ತಡಗೆದುಕೊಂಡಿಲ್ಲ.

    ದೆಹಲಿವೊಂದರಲ್ಲೇ ಯುಪಿಎಸ್‍ಸಿ ಅಧ್ಯಯನಕ್ಕೆ ಬಂದ ವಿದ್ಯಾರ್ಥಿಗಳು, ದೆಹಲಿಯಲ್ಲಿ ವಾಸ್ತವ್ಯ ಹೂಡಿರುವ ಕುಟುಂಬಗಳು, ಪ್ರವಾಸಿಗರು ಸೇರಿ ಸಾವಿರಕ್ಕೂ ಅಧಿಕ ಕನ್ನಡಿಗರು ಸಂಕಷ್ಟದಲ್ಲಿದ್ದಾರೆ. ಸೇವಾ ಸಿಂಧು ವೆಬ್‍ಸೈಟ್ ನಲ್ಲಿ ನೋಂದಣಿ ಮಾಡಿಕೊಂಡಿದ್ದರೂ ರಾಜ್ಯ ಸರ್ಕಾರ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ರಾಜ್ಯದಲ್ಲಿರುವ ಹಲವು ಅಧಿಕಾರಿಗಳು, ದೆಹಲಿ ಕರ್ನಾಟಕ ಭವನದಲ್ಲಿರುವ ನೋಡೆಲ್ ಅಧಿಕಾರಿಗಳನ್ನು ಸಂಪರ್ಕಿಸಿದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಆರಂಭದಲ್ಲಿ ರೈಲ್ವೆ ವ್ಯವಸ್ಥೆ ಮಾಡುವ ಭರವಸೆ ನೀಡಿದ್ದ ಅಧಿಕಾರಿಗಳು ಈಗ ಸರಿಯಾದ ಸ್ಪಂದನೆ ನೀಡುತ್ತಿಲ್ಲ ಎಂದು ದೆಹಲಿ ಕನ್ನಡಿಗರು ಆರೋಪಿಸಿದ್ದಾರೆ.

    ಅನಿವಾಸಿ ಭಾರತೀಯರಿಗೆ ಸಿಗುವ ಸೌಲಭ್ಯ ನಮ್ಮಗ್ಯಾಕಿಲ್ಲ? ನಾವು ಬೆಂಗಳೂರಿಗೆ ಬರಬೇಕು ಅವಕಾಶ ಕೋಡಿ. ಹಣ ಕೊಟ್ಟು ಪ್ರಯಾಣಿಸಲು ನಾವು ಸಿದ್ಧ, ರೈಲು ಬಿಡಿ ಇಲ್ಲ ಸಂಚಾರಕ್ಕೆ ಬಸ್ಸು ಕೊಡಿ ಎಂದು ದೆಹಲಿಯಲ್ಲಿರುವ ಕನ್ನಡಿಗರು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ವಿಶೇಷ ರೈಲು ಅಥಾವ ಬಸ್ ವ್ಯವಸ್ಥೆ ಮಾಡುವಂತೆ ಮನವಿ ಮಾಡುತ್ತಿದ್ದಾರೆ.

    ರಾಜ್ಯ ಸರ್ಕಾರ ಹೊರ ರಾಜ್ಯದ ಕನ್ನಡಿಗರ ಮಾಹಿತಿ ಪಡೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿತ್ತು. ಅದರಂತೆ ವ್ಯಾಟ್ಸಪ್ ಇತರೆ ಹಲವು ಮಾರ್ಗಗಳ ಮೂಲಕ ರಾಜ್ಯಕ್ಕೆ ವಾಪಸ್ ಆಗಲು ಸಿದ್ಧವಾಗಿರುವ ಕನ್ನಡಿಗರ ಪಟ್ಟಿಯನ್ನು ನೋಡೆಲ್ ಅಧಿಕಾರಿಗಳು ಸಿದ್ಧಪಡಿಸಿದ್ದಾರೆ. ಆದರೆ ಮುಂದೆ ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕು ಎನ್ನುವುದರ ಬಗ್ಗೆ ರಾಜ್ಯ ಸರ್ಕಾರ ಯಾವುದೇ ಸ್ಪಷ್ಟನೆ ನೀಡಿಲ್ಲ. ಬಸ್ ಅಥಾವ ರೈಲು ಮಾರ್ಗವಾಗಿ ವಾಪಸ್ ಕರೆ ತರುವ ಬಗ್ಗೆ ಇನ್ನೂ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮೂಲಗಳ ತಿಳಿಸಿವೆ.

    ಈ ನಡುವೆ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ರಾಜ್ಯಕ್ಕೆ ರೈಲು ಬಿಡುವ ಬಗ್ಗೆ ರೈಲ್ವೆ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿದ್ದು ಕರ್ನಾಟಕ ಭವನದ ನಿವಾಸಿ ಆಯುಕ್ತರ ಜೊತೆಗೆ ಚರ್ಚೆ ಮಾಡಿದ್ದಾರೆ. ಆದರೆ ಈವರೆಗೂ ದೆಹಲಿ ಮತ್ತು ಇತರೆ ರಾಜ್ಯಗಳಲ್ಲಿರುವ ಕನ್ನಡಿಗರನ್ನು ಕರೆತರುವ ಬಗ್ಗೆ ಬಿಎಸ್‍ವೈ ನೇತೃತ್ವದ ಸರ್ಕಾರ ಅಂತಿಮ ಕ್ರಮಗಳನ್ನು ತೆಗೆದುಕೊಂಡಿಲ್ಲ.

  • ಗುರೂಜಿಯಾಗಲ್ಲ ಕನ್ನಡಿಗನಾಗಿ ಧರಣಿಗೆ ಬಂದಿದ್ದೇನೆ: ವಿನಯ್ ಗುರೂಜಿ

    ಗುರೂಜಿಯಾಗಲ್ಲ ಕನ್ನಡಿಗನಾಗಿ ಧರಣಿಗೆ ಬಂದಿದ್ದೇನೆ: ವಿನಯ್ ಗುರೂಜಿ

    -100ನೇ ದಿನಕ್ಕೆ ಕಾಲಿಟ್ಟ ಸರೋಜಿನಿ ಮಹಿಷಿ ಧರಣಿ

    ಬೆಂಗಳೂರು: ಕನ್ನಡಿಗರಿಗೆ ಕರ್ನಾಟಕದ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡಿ ಎಂದು ಕನ್ನಡ ಪರ ಸಂಘಟನೆಗಳು ಮಾಡುತ್ತಿರುವ ಧರಣಿ 100ನೇ ದಿನಕ್ಕೆ ಕಾಲಿಟ್ಟಿದೆ.

    ಸರೋಜಿನಿ ಮಹಿಷಿ ವರದಿ ಜಾರಿಗಾಗಿ ಆಗ್ರಹಿಸಿ ನಡೆಯುತ್ತಿರುವ ಹೋರಾಟಕ್ಕೆ ವಿನಯ್ ಗುರೂಜಿ ಮತ್ತು ಮಾಜಿ ಸಚಿವ ಯು.ಟಿ ಖಾದರ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಮೌರ್ಯ ಸರ್ಕಲ್‍ನಲ್ಲಿ ನಡೆಯುತ್ತಿರುವ ಧರಣಿ ಸ್ಥಳಕ್ಕೆ ಆಗಮಿಸಿ, 100 ದಿನದ ಹೋರಾಟವನ್ನ ದೀಪ ಬೆಳಗುವುದರ ಮೂಲಕ ಬೆಂಬಲ ವ್ಯಕ್ತಪಡಿಸಿದರು.

    ಈ ಬಗ್ಗೆ ಮಾತನಾಡಿದ ವಿನಯ್ ಗುರೂಜಿ, ಕರ್ನಾಟಕದಲ್ಲಿ ಕನ್ನಡಿಗರು ವಿಷ ಕುಡಿಯೋಕೆ ಅವಕಾಶ ಸರ್ಕಾರ ಮಾಡಿಕೊಡಬಾರದು. ಬೇರೆ ರಾಜ್ಯದವರಿಗೆ ಕೆಲಸ ಕೊಡೋದಲ್ಲ ನಮ್ಮ ರಾಜ್ಯದವರಿಗೆ ಕೆಲಸ ಕೊಡಿ. ನಮ್ಮ ಮನೆ ಪೈಂಟ್ ಮೊದಲು ಮಾಡಿ ಆ ಮೇಲೆ ಬೇರೆ ಮನೆ ಪೈಂಟ್ ಮಾಡಿ. ನಾನು ತನು, ಮನ, ಧನ ಎಲ್ಲಾ ಮರೆತು ಇದಕ್ಕೆ ಕೆಲಸ ಮಾಡುತ್ತೇನೆ. ಸಿಎಂ ಯಡಿಯೂರಪ್ಪನವರ ಜೊತೆ ಮಾತನಾಡುತ್ತೇನೆ ಎಂದರು.

    ಯಾವುದೇ ಗುರೂಜಿಯಾಗಿ ನಾನಿಲ್ಲಿ ಬಂದಿಲ್ಲ. ಸಾಮಾನ್ಯ ಕನ್ನಡಿಗನಾಗಿ ಇಲ್ಲಿಗೆ ಬಂದಿದ್ದೇನೆ. ಇಲ್ಲಿ ಕುಳಿತಿರುವ ಎಲ್ಲರು ಕನ್ನಡಿಗರೇ, ಕನ್ನಡಿಗರ ವೋಟಿನಿಂದ ಸರ್ಕಾರ ಇದೆ. ನಾನೊಬ್ಬ ಗುರೂಜಿಯಾಗಲ್ಲ ಕನ್ನಡಿಗನಾಗಿ ಯಡಿಯೂರಪ್ಪನವರ ಜೊತೆ ಮಾತನಾಡುತ್ತೇನೆ. ಇದು ಭರವಸೆ ಅಲ್ಲ ಇದು ನನ್ನ ಕರ್ತವ್ಯ. ಈ ಹೋರಾಟಕ್ಕೋಸ್ಕರ ನಾನು ಇವತ್ತು ಒಂದು ಹೊತ್ತಿನ ಊಟ ಬಿಡುತ್ತಿದ್ದೀನಿ. ಎಲ್ಲರಿಗೂ ಇದು ಮಾದರಿಯಾಗಬೇಕು ಹೋರಾಟ ಮುಂದುವರೆಯಲಿ ಎಂದು ಹೇಳಿದರು.

    ಕಳೆದ ನವಂಬರ್ 1ರಿಂದ ಕನ್ನಡ ಸಂಘಟನೆಗಳ ಒಕ್ಕೂಟದ ವತಿಯಿಂದ ಅನಿರ್ಧಿಷ್ಟ ಅವದಿ ಪ್ರತಿಭಟನೆ ಬೆಂಗಳೂರಿನ ಮೌರ್ಯ ಸರ್ಕಲ್ ನಲ್ಲಿ ಪ್ರಾರಂಭವಾಗಿದ್ದು, ಇಂದಿಗೆ 100ನೇ ದಿನಕ್ಕೆ ಕಾಲಿಟ್ಟಿದೆ.

    100 ದಿನ ಧರಣಿ ಮಾಡಿದರೂ ಸರ್ಕಾರದಿಂದ ಡಾ. ಸರೋಜಿನಿ ಮಹಿಷಿ ವರದಿಯನ್ನ ಅನುಷ್ಠಾನಗೊಳಿಸುವ ಯಾವುದೇ ರೀತಿಯ ಭರವಸೆಗಳು ಸಿಕ್ಕಿಲ್ಲ. ಡಾ. ಸರೋಜಿನಿ ಮಹಿಷಿ ವರದಿಯನ್ನ ಜಾರಿಗೆ ತಂದರೆ ಕನ್ನಡಿಗರಿಗೆ ಉದ್ಯೋಗಾವಕಾಶಗಳು ಹೆಚ್ಚಾಗುತ್ತದೆ. ಈ ಹಿನ್ನೆಲೆಯಲ್ಲಿ ಕನ್ನಡ ಪರ ಸಂಘಟನೆಗಳು ರಾಜ್ಯೋತ್ಸವದ ದಿನದಿಂದ ಹೋರಾಟವನ್ನ ಮಾಡಿಕೊಂಡು ಬಂದಿದೆ.

  • ಲಾಠಿ ಹಿಡಿದು ತಮಿಳರ ವಿರುದ್ಧ ಕನ್ನಡಿಗರ ಪ್ರತಿಭಟನೆ

    ಲಾಠಿ ಹಿಡಿದು ತಮಿಳರ ವಿರುದ್ಧ ಕನ್ನಡಿಗರ ಪ್ರತಿಭಟನೆ

    ಚಾಮರಾಜನಗರ: ಇತ್ತೀಚೆಗೆ ತಮಿಳುನಾಡಿನಲ್ಲಿ ಪಾರ್ಕಿಂಗ್ ಕುರಿತು ನಮ್ಮ ರಾಜ್ಯದ ಬಸ್ ತಡೆದು ಗಲಾಟೆ ಮಾಡಿದ್ದ ಪ್ರಕರಣದ ಬೆನ್ನಲ್ಲೇ ಕನ್ನಡ ಪರ ಸಂಘಟನೆಗಳು ಎಚ್ಚೆತ್ತುಕೊಂಡಿವೆ. ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ನಡೆಯುತ್ತಿರುವ ಹಲ್ಲೆ ಖಂಡಿಸಿ, ಲಾಠಿ ಹಿಡಿದು ಪ್ರತಿಭಟನೆ ನಡೆಸಿದರು.

    ಚಾಮರಾಜನಗರದ ಚಾಮರಾಜೇಶ್ವರ ಪಾರ್ಕ್ ಮುಂಭಾಗದಿಂದ ಭುವನೇಶ್ವರಿ ವೃತ್ತದವರೆಗೆ ಮೆರವಣಿಗೆ ನಡೆಸಿ, ಲಾಠಿ ಹಿಡಿದು ಪ್ರತಿಭಟನೆ ನಡೆಸಿದರು. ಪ್ರವಾಸಕ್ಕೆಂದು ತೆರಳುವ ಕನ್ನಡಿಗರ ಮೇಲೆ ತಮಿಳುನಾಡಿನಲ್ಲಿ ಹಲ್ಲೆ ನಡೆಯುತ್ತಿರುವುದು ಖಂಡನಾರ್ಹ. ಇದನ್ನು ಕನ್ನಡಿಗರು ಸಹಿಸುವುದಿಲ್ಲ ಎಂದು ಕನ್ನಡ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

    ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ ಮುಂದುವರಿಸಿದರೆ ರಾಜ್ಯದಲ್ಲಿ ನಾವು ಕೈಕಟ್ಟಿ ಕೂರುವುದಿಲ್ಲ. ತಮಿಳುನಾಡು ಸರ್ಕಾರ ಅಲ್ಲಿರುವ ಕನ್ನಡಿಗರಿಗೆ ಹಾಗೂ ಕರ್ನಾಟಕದಿಂದ ತೆರಳುವ ಪ್ರವಾಸಿಗರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.

    ಇತ್ತೀಚೆಗೆ ರಾಜ್ಯದ ಬಸ್ ತಮಿಳುನಾಡು ಪ್ರವಾಸಕ್ಕೆ ತೆರಳಿದಾಗ ಪಾರ್ಕಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆಯಾಗಿತ್ತು. ಅಲ್ಲದೆ ಬಸ್ ಮೇಲೆ ಕನ್ನಡದ ಬಾವುಟ ಇದ್ದಿದ್ದಕ್ಕೆ ತಮಿಳಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಕೇರಳದಲ್ಲಿಯೂ ಇದೇ ರೀತಿಯ ಪ್ರಕರಣ ನಡೆದಿತ್ತು. ಕನ್ನಡ ಬಾವುಟ ಇದ್ದಿದ್ದಕ್ಕೆ ರಾಜ್ಯದೊಳಗೆ ವಾಹನ ಬಿಡುವುದಿಲ್ಲ ಎಂದು ಕೇರಳ ಪೊಲೀಸರು ವಾಹನ ತಡೆದಿದ್ದರು. ಇದಾದ ನಂತರ ಎಲ್ಲ ಟ್ರಾವೆಲ್ಸ್ ವಾಹನಗಳಿಗೂ ಕನ್ನಡ ಬಾವುಟ ಕಟ್ಟಿ ಕೇರಳ ಪ್ರವೇಶಿಸುವ ಮೂಲಕ ಚಾಲಕರು ಕ್ರಾಂತಿ ಎಬ್ಬಿಸಿದ್ದರು. ಇದು ರಾಜ್ಯದಲ್ಲಿ ತೀವ್ರ ಸಂಚಲನವನ್ನು ಸೃಷ್ಟಿಸಿತ್ತು. ಆಗಿನಿಂದ ಕನ್ನಡಪರ ಸಂಘಟನೆಗಳು ಎಚ್ಚೆತ್ತುಕೊಂಡು ರಾಜ್ಯದಲ್ಲಿ ಪ್ರತಿಭಟನೆ ನಡೆಸುತ್ತಿವೆ.