Tag: kannur

  • ವಿಜಯಪುರ | ಹಳೆ ವೈಷಮ್ಯಕ್ಕೆ ಡಬಲ್ ಮರ್ಡರ್ – ಪರಾರಿಯಾಗ್ತಿದ್ದ ಆರೋಪಿ ಕಾಲಿಗೆ ಗುಂಡು ಹಾರಿಸಿ ಅರೆಸ್ಟ್

    ವಿಜಯಪುರ | ಹಳೆ ವೈಷಮ್ಯಕ್ಕೆ ಡಬಲ್ ಮರ್ಡರ್ – ಪರಾರಿಯಾಗ್ತಿದ್ದ ಆರೋಪಿ ಕಾಲಿಗೆ ಗುಂಡು ಹಾರಿಸಿ ಅರೆಸ್ಟ್

    ವಿಜಯಪುರ: ಜಿಲ್ಲೆಯ ಕನ್ನೂರು ಗ್ರಾಮದಲ್ಲಿ ಕಲ್ಲಿನಿಂದ ಜಜ್ಜಿ ಇಬ್ಬರು ಯುವಕರನ್ನ ಬರ್ಬರ ಹತ್ಯೆ ಮಾಡಿದ್ದ ಪ್ರಕರಣದ ಪ್ರಮುಖ ಆರೋಪಿಯನ್ನು ವಿಜಯಪುರ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ.

    ಅಕ್ಷಯ್ ಜುಲಜುಲೆ ಬಂಧಿತ ಆರೋಪಿಯಾಗಿದ್ದು, ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ತಿಳಿದುಬಂದಿದೆ.ಇದನ್ನೂ ಓದಿ: ವಿಜಯಪುರ | ಹಳೆಯ ವೈಷಮ್ಯಕ್ಕೆ ಜೋಡಿ ಕೊಲೆ – ಇಬ್ಬರು ಯುವಕರ ಬರ್ಬರ ಹತ್ಯೆ

    ಭಾನುವಾರ (ಅ.12) ರಾತ್ರಿ ವಿಜಯಪುರ ಜಿಲ್ಲೆಯ ಕನ್ನೂರು ಗ್ರಾಮದಲ್ಲಿ ಸಾಗರ ಬೆಳುಂಡಗಿ (25) ಹಾಗೂ ಇಸಾಕ್ ಖುರೇಷಿ (24) ಎಂಬ ಇಬ್ಬರ ಹತ್ಯೆ ನಡೆದಿತ್ತು. ಈ ಸಂಬಂಧ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಗಿಳಿದ ಪೊಲೀಸರು 5 ಜನ ಆರೋಪಿಗಳನ್ನ ಸೆರೆಹಿಡಿಯಲು ಕನ್ನೂರು ಗ್ರಾಮದ ಹೊರವಲಯಕ್ಕೆ ತೆರಳಿದ್ದರು. ಈ ವೇಳೆ ಪ್ರಕರಣದ ಪ್ರಮುಖ ಆರೋಪಿ ಪರಾರಿಯಾಗಲು ಯತ್ನಿಸಿದ್ದಾನೆ. ಆಗ ಆತನ ಕಾಲಿಗೆ ಪೊಲೀಸರು ಗುಂಡು ಹಾರಿಸಿ, ಅರೆಸ್ಟ್ ಮಾಡಿದ್ದಾರೆ.

    ಈ ವೇಳೆ ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು, ಸದ್ಯ ಆರೋಪಿ ಹಾಗೂ ಸಿಬ್ಬಂದಿಯನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

    ಇನ್ನೂ 2023ರಲ್ಲಿ ಈರಣ್ಣಗೌಡ ಎಂಬಾತನ ಮೇಲೆ ಈಗ ಮೃತ ಸಾಗರ್ ಹಾಗೂ ಇಸಾಕ್ ಟೈಲ್ಸ್‌ನಿಂದ ಹಲ್ಲೆ ನಡೆಸಿದ್ದರು. ಈರಣ್ಣಗೌಡ 8 ತಿಂಗಳುಗಳ ಕಾಲ ಚಿಕಿತ್ಸೆ ಪಡೆದು ನಂತರ ಮೃತಪಟ್ಟಿದ್ದ. ಇದೇ ದ್ವೇಷದಿಂದಲೇ ಸದ್ಯ ಅಕ್ಷಯ್ ಹಾಗೂ ಈರಣ್ಣಗೌಡ ಮಕ್ಕಳು ಸೇರಿ ಸಾಗರ್, ಇಸಾಕ್‌ನ್ನು ಹತ್ಯೆ ಮಾಡಿದ್ದಾರೆ ಎಂದು ತನಿಖೆ ವೇಳೆ ತಿಳಿದುಬಂದಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಸ್ಪಷ್ಟಪಡಿಸಿದ್ದಾರೆ.ಇದನ್ನೂ ಓದಿ: ಮಣ್ಣಲ್ಲಿ ಮಣ್ಣಾದ ಹಾಸ್ಯ ಮಾಂತ್ರಿಕ ರಾಜು ತಾಳಿಕೋಟೆ – ಪಾರ್ಥಿವ ಶರೀರದ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಸಹ ಕಲಾವಿದರು

  • ಕೇರಳದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ – ದಾಸನಿಗೆ ಸಾಥ್ ನೀಡಿದ ಕೊಲೆ ಆರೋಪಿ ಪ್ರಜ್ವಲ್ ರೈ

    ಕೇರಳದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ – ದಾಸನಿಗೆ ಸಾಥ್ ನೀಡಿದ ಕೊಲೆ ಆರೋಪಿ ಪ್ರಜ್ವಲ್ ರೈ

    ಶನಿವಾರ ನಟ ದರ್ಶನ್ (Actor Darshan) ಕೇರಳದ (Kerala) ಕಣ್ಣೂರಿನ (Kannur) ಭಗವತಿ ದೇವಾಲಯದಲ್ಲಿ ಶತ್ರು ಸಂಹಾರ ಹೋಮ ಮಾಡಿಸಿದ್ದಾರೆ. ಈ ವೇಳೆ ದಾಸನ ಜೊತೆ ಕೊಲೆ ಆರೋಪಿ ಪ್ರಜ್ವಲ್ ರೈ (Prajwal Rai) ಕಾಣಿಸಿಕೊಂಡಿರುವುದು ಚರ್ಚೆಗೆ ಗ್ರಾಸವಾಗಿದೆ.ಇದನ್ನೂ ಓದಿ:ನಾರಿಮಣಿಯರಿಗೆ ಸಮ್ಮರ್ ಫ್ಯಾಷನ್ ಟಿಪ್ಸ್

    ಹೌದು, ಪುತ್ತೂರಿನ (Puttur) ಕಾಂಗ್ರೆಸ್ (Congress) ಮುಖಂಡ ಸವಣೂರು ಪ್ರಜ್ವಲ್ ರೈ ಎಂಬಾತ ನಟ ದರ್ಶನ್ ಅನ್ನು ಈ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ ಶತ್ರು ಸಂಹಾರ ಪೂಜೆ ಮಾಡಿಸಿದ್ದಾನೆ. ಆದರೆ ಪ್ರಜ್ವಲ್ ರೈ ಓರ್ವ ಕೊಲೆ ಆರೋಪಿ. 2017ರಲ್ಲಿ ಕರಾವಳಿ ಭಾಗದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಕರೋಪಾಡಿ ಅಬ್ದುಲ್ ಜಲೀಲ್ ಕೊಲೆ ಪ್ರಕರಣದಲ್ಲಿ ಪ್ರಜ್ವಲ್ ರೈ ಆರೋಪಿಯಾಗಿದ್ದು, ಜಾಮೀನಿನ ಮೇಲೆ ಹೊರಗಿದ್ದಾನೆ. ಸದ್ಯ ಈ ಆರೋಪಿ, ದರ್ಶನ್ ಜೊತೆ ಕಾಣಿಸಿಕೊಂಡಿರುವುದು ಚರ್ಚೆಗೆ ಆಸ್ಪದ ನೀಡಿದೆ.

    ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Case) ಆರೋಪಿಯಾಗಿರುವ ದರ್ಶನ್, ಸಂಕಷ್ಟ ನಿವಾರಣೆಗಾಗಿ ಕೇರಳದ ಕಣ್ಣೂರಿನ ಮಾಡಾಯಿಕಾವು ಶ್ರೀ ಭಗವತಿ ದೇವಸ್ಥಾನಕ್ಕೆ ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್ ಹಾಗೂ ನಟ ಧನ್ವೀರ್ ಜೊತೆ ತೆರಳಿ ಶತ್ರು ಸಂಹಾರ ಪೂಜೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಕೊಲೆ ಆರೋಪಿ ಪ್ರಜ್ವಲ್ ರೈ ಕೂಡ ಕಾಣಿಸಿಕೊಂಡಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.ಇದನ್ನೂ ಓದಿ:ಇಶಾನ್ ಕಿಶನ್ ಸ್ಫೋಟಕ ಶತಕ – ರಾಜಸ್ಥಾನ ವಿರುದ್ಧ ಹೈದರಾಬಾದ್‌ಗೆ 44 ರನ್‌ಗಳ ಭರ್ಜರಿ ಜಯ

  • PUBLiC TV Impact; ಸರ್ಕಾರದ ಉಚಿತ ಪುಸ್ತಕಗಳು ಬೀದಿಪಾಲು – ಶಾಲಾ ಮುಖ್ಯೋಪಾಧ್ಯಾಯ ಅಮಾನತು

    PUBLiC TV Impact; ಸರ್ಕಾರದ ಉಚಿತ ಪುಸ್ತಕಗಳು ಬೀದಿಪಾಲು – ಶಾಲಾ ಮುಖ್ಯೋಪಾಧ್ಯಾಯ ಅಮಾನತು

    ವಿಜಯಪುರ: ತಾಲೂಕಿನ ಕನ್ನೂರು (Kannur) ಗ್ರಾಮದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಸರ್ಕಾರದ ಉಚಿತ ಪುಸ್ತಕಗಳನ್ನು ಬೀದಿಪಾಲು ಮಾಡಿ ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯೋಪಾಧ್ಯಾಯರನ್ನು (Headmaster) ಅಮಾನತು ಮಾಡಲಾಗಿದೆ.

    ಘಟನೆಯ ಬಗ್ಗೆ ನಿಮ್ಮ ‘ಪಬ್ಲಿಕ್ ಟಿವಿ’ ವಿಸ್ತೃತ ವರದಿಯನ್ನು ಬಿತ್ತರಿಸಿತ್ತು. ವರದಿಯ 12 ಗಂಟೆಯಲ್ಲೇ ಶಾಲೆಯ ಮುಖ್ಯೋಪಾಧ್ಯಾಯ ವಿಜಯಕುಮಾರ ಅವತಾಡೆಯನ್ನು ಅಮಾನತು ಮಾಡಲು ಡಿಡಿಪಿಐ ಟಿಎಸ್ ಕೋಲಾರ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಚಾಮುಂಡಿ ಬೆಟ್ಟದಲ್ಲಿ ನಿಯಂತ್ರಣಕ್ಕೆ ಬಂದ ಕಾಡ್ಗಿಚ್ಚು

    ಇನ್ನು ಪಬ್ಲಿಕ್ ಟಿವಿ ವರದಿ ಆಧರಿಸಿ ವಿಜಯಕುಮಾರ ಅಮಾನತು ಎಂದು ಆದೇಶದಲ್ಲಿ ನಮೂದಿಸಲಾಗಿದೆ. ನಿರ್ಲಕ್ಷತೆ ಹಾಗೂ ಕರ್ತವ್ಯಲೋಪ ಹಿನ್ನೆಲೆ ಅಮಾನತುಗೊಳಿಸಲಾಗಿದೆ. ಇದನ್ನೂ ಓದಿ: ಬೌಂಡರಿ ಚಚ್ಚಿ ಆರ್‌ಸಿಬಿ ಗೆಲುವು ಕಸಿದ 16ರ ಹುಡುಗಿ – ಯಾರು ಈ ಕಮಲಿನಿ? ಮುಂಬೈ 1.6 ಕೋಟಿ ನೀಡಿದ್ದು ಯಾಕೆ?

  • Kerala | ಕಾರ್ಯಕ್ರಮದಲ್ಲಿ ಬಹಿರಂಗ ಟೀಕೆ- ಒಂದು ದಿನದ ಬಳಿಕ ಶವವಾಗಿ ಪತ್ತೆಯಾದ ಅಧಿಕಾರಿ

    Kerala | ಕಾರ್ಯಕ್ರಮದಲ್ಲಿ ಬಹಿರಂಗ ಟೀಕೆ- ಒಂದು ದಿನದ ಬಳಿಕ ಶವವಾಗಿ ಪತ್ತೆಯಾದ ಅಧಿಕಾರಿ

    ತಿರುವನಂತಪುರಂ: ಕೇರಳದ ಕಣ್ಣೂರು ಜಿಲ್ಲೆಯ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ (ADM) ನವೀನ್ ಬಾಬು (Naveen Babu) ತಮ್ಮ ಪಲ್ಲಿಕುನ್ನುನಲ್ಲಿರುವ ಮನೆಯಲ್ಲಿ ಮಂಗಳವಾರ (ಅ.15) ಶವವಾಗಿ ಪತ್ತೆಯಾಗಿದ್ದಾರೆ.

    ತಮ್ಮ ತವರೂರು ಪತ್ತನಂತಿಟ್ಟದಲ್ಲಿ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಗಿ ಅಧಿಕಾರ ಸ್ವೀಕರಿಸಬೇಕಿದ್ದ ಹಿಂದಿನ ದಿನ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.ಇದನ್ನೂ ಓದಿ: ಬೆಂಗಳೂರಿನಲ್ಲಿ ಭಾರೀ ಮಳೆ – ಜನಜೀವನ ಅಸ್ತವ್ಯಸ್ತ, ಎಲ್ಲಿ ಏನಾಗಿದೆ?

    ಘಟನೆಯ ಹಿಂದಿನ ದಿನ ಮೃತ ನವೀನ್ ಬಾಬು ಅವರಿಗೆ ಸಹೋದ್ಯೋಗಿಗಳು ಬೀಳ್ಕೊಡುಗೆ ಸಮಾರಂಭ ಏರ್ಪಡಿಸಿದ್ದರು. ಈ ವೇಳೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಹಾಗೂ ಸಿಪಿಎಂ ನಾಯಕಿ ಪಿಪಿ ದಿವ್ಯಾ (PP Divya) ಆಹ್ವಾನವಿಲ್ಲದೇ ದಿಢೀರ್ ಕಾರ್ಯಕ್ರಮಕ್ಕೆ ಆಗಮಿಸಿದ್ದರು.

    ಈ ವೇಳೆ ಮಾತನಾಡಿದ ದಿವ್ಯಾ, ನವೀನ್ ಬಾಬು ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದರು. ಜೊತೆಗೆ ಹಲವು ತಿಂಗಳುಗಳಿಂದ ಚೆಂಗಲೈ ಪೆಟ್ರೋಲ್ ಪಂಪ್‌ಗೆ ಅನುಮತಿ ನೀಡಲು ಎಡಿಎಮ್ ಅವರು ವಿಳಂಬ ಮಾಡುತ್ತಿದ್ದಾರೆ ಎಂದು ಟೀಕಿಸಿ, ಬಹಿರಂಗವಾಗಿ ಮಾತನಾಡಿದ್ದರು.

    ಎಡಿಎಮ್ ಅವರ ದಿಢೀರ್ ವರ್ಗಾವಣೆ ಹಿಂದಿನ ಕಾರಣ ನನಗೆ ಗೊತ್ತಿದೆ. ಎರಡು ದಿನಗಳ ನಂತರ ಇನ್ನುಳಿದ ಮಾಹಿತಿಯನ್ನು ನೀಡುತ್ತೇನೆ ಎಂದು ಸುಳಿವು ನೀಡಿದ್ದರು. ಇದಾದ ಮಾರನೇ ದಿನ ನೇಣು ಬಿಗಿದ ಸ್ಥಿತಿಯಲ್ಲಿ ನವೀನ್ ಬಾಬು ಅವರ ಶವವಾಗಿ ಪತ್ತೆಯಾಗಿದ್ದು, ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

    ಸಿಪಿಎಂ ಸ್ಥಳೀಯ ಮುಖಂಡ ಮಲಯಾಳಪುಳ ಮೋಹನ್ ಸುದ್ದಿಗಾರರೊಂದಿಗೆ ಮಾತನಾಡಿ, ಬಾಬು ಅವರ ಕುಟುಂಬವು ಸಾಂಪ್ರದಾಯಿಕ ಕುಟುಂಬವಾಗಿದ್ದು, ಬಾಬು ಕುರಿತು ನನಗೆ ಬಹಳ ಹಿಂದಿನಿಂದಲೂ ತಿಳಿದಿದೆ. ಬಾಬು ಒಬ್ಬ ಪ್ರಾಮಾಣಿಕ ಅಧಿಕಾರಿಯಾಗಿದ್ದರು. ದಿವ್ಯಾ ಅವರ ಬಹಿರಂಗ ಟೀಕೆಯು ಬಾಬು ಅವರ ಸಾವಿಗೆ ಕಾರಣವಾಗಿದ್ದರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.ಇದನ್ನೂ ಓದಿ: ಸೈನ್ಯಕ್ಕೆ ಪ್ರಬಲ ಅಸ್ತ್ರ – ಅಮೆರಿಕದ MQ-9B ಪ್ರಿಡೆಟರ್ ಡ್ರೋನ್ ಒಪ್ಪಂದಕ್ಕೆ ಸಹಿ ಹಾಕಿದ ಭಾರತ

    ಸದ್ಯ ಈ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ.

  • ಹಲ್ಲೆಗೊಳಗಾದ ವಲಸೆ ಕಾರ್ಮಿಕ ಬಾಲಕನನ್ನು ಐಷಾರಾಮಿ ಕಾರಿನಲ್ಲಿ ಜಾಲಿ ರೈಡ್ ಮಾಡಿಸಿದ ಚಿನ್ನದಂಗಡಿ ಮಾಲೀಕ

    ಹಲ್ಲೆಗೊಳಗಾದ ವಲಸೆ ಕಾರ್ಮಿಕ ಬಾಲಕನನ್ನು ಐಷಾರಾಮಿ ಕಾರಿನಲ್ಲಿ ಜಾಲಿ ರೈಡ್ ಮಾಡಿಸಿದ ಚಿನ್ನದಂಗಡಿ ಮಾಲೀಕ

    ತಿರುವನಂತಪುರಂ: ಕಳೆದ ತಿಂಗಳು ಕೇರಳದ (Kerala) ಕಣ್ಣೂರಿನಲ್ಲಿ (Kannur) ವ್ಯಕ್ತಿಯೊಬ್ಬನಿಂದ ಹಲ್ಲೆಗೊಳಗಾದ 6 ವರ್ಷದ ಬಾಲಕ (Boy) ಮತ್ತು ಆತನ ಕುಟುಂಬವನ್ನು ಚಿನ್ನದಂಗಡಿಯ ಮಾಲೀಕನೊಬ್ಬ (Gold Shop Owner) ತನ್ನ ಐಷಾರಾಮಿ ಕಾರಿನಲ್ಲಿ (luxury car) ಜಾಲಿ ರೈಡ್ ಹಾಗೂ ಶಾಪಿಂಗ್‌ಗೆ ಕರೆದುಕೊಂಡು ಹೋಗಿದ್ದಾರೆ. ಈ ಮೂಲಕ ಚಿನ್ನದಂಗಡಿ ಮಾಲೀಕ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

    ಕೊಟ್ಟಾಯಂ ಮೂಲದ ಜುವೆಲ್ಲರಿ ಗ್ರೂಪ್‌ನ ಆಚಾಯನ್ಸ್ ಗೋಲ್ಡ್‌ನ ಮಾಲೀಕ ಟೋನಿ ವರ್ಕಿಚನ್ ರಾಜಸ್ಥಾನ ಮೂಲದ ವಲಸೆ ಕಾರ್ಮಿಕ ಕುಟುಂಬದ 6 ವರ್ಷದ ಬಾಲಕ ಗಣೇಶ್‌ನನ್ನು ಆತನ ಕುಟುಂಬದ ಜೊತೆಗೆ ಕೋಝಿಕ್ಕೋಡ್‌ನಾದ್ಯಂತ ನಗರದಲ್ಲಿ ಜಾಲಿ ರೈಡ್ ಕರೆದುಕೊಂಡು ಹೋಗಿದ್ದಾರೆ. ಮಾತ್ರವಲ್ಲದೇ ಬಾಲಕನಿಗೆ ಬೇಕೆನಿಸಿದ್ದನ್ನೆಲ್ಲವನ್ನೂ ತೆಗೆಸಿ ಕೊಟ್ಟಿದ್ದಾರೆ.

    ಕಳೆದ ತಿಂಗಳು ವಲಸೆ ಕಾರ್ಮಿಕ ಕುಟುಂಬದ ಬಾಲಕ ಕಣ್ಣೂರಿನಲ್ಲಿ ಕಾರೊಂದಕ್ಕೆ ಒರಗಿ ನಿಂತಿದ್ದಕ್ಕಾಗಿ ಕಾರ್‌ನ ಮಾಲೀಕ ಕೋಪಗೊಂಡು ಬಾಲಕನಿಗೆ ಕಾಲಿನಿಂದ ಒದ್ದಿದ್ದ. ಈ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆರೋಪಿ ಶಿಹಸಾದ್‌ನನ್ನು ಪೊಲೀಸರು ಬಂಧಿಸಿದ್ದರು. ಈ ಘಟನೆಯ ಬಳಿಕ ರಾಜ್ಯಾದ್ಯಂತ ವಲಸೆ ಕಾರ್ಮಿಕರ ಬಗ್ಗೆ ಹಲವರು ಅನುಕಂಪ ತೋರಿ ಅತಿಥಿ ಕೆಲಸಗಾರರು ಎಂದು ಸಂಬೋಧಿಸಿದರು. ಇದನ್ನೂ ಓದಿ: ಕಾಂತಾರ ಚಿತ್ರ ವೀಕ್ಷಿಸಲು ಥಿಯೇಟರ್‌ಗೆ ಬಂದ ಜೋಡಿ ಮೇಲೆ ಹಲ್ಲೆ

    ಈ ಘಟನೆ ನಡೆದ 1 ತಿಂಗಳ ಬಳಿಕ ಟೋನಿ ಅವರು ಹಲ್ಲೆಗೊಳಗಾದ ಬಾಲಕನನ್ನು ಗುರುತಿಸಿ, ಆತನಿಗೆ ಹಾಗೂ ಆತನ ಕುಟುಂಬದವರಿಗೆ ಜಾಲಿ ರೈಡ್ ಹಾಗೂ ಶಾಪಿಂಗ್ ಕರೆದುಕೊಂಡು ಹೋಗಲು ಮುಂದಾದರು. ಬಾಲಕನ ಕುಟುಂಬಕ್ಕೆ ಟೋನಿ 3 ತಿಂಗಳ ಕಾಲ ಆರ್ಥಿಕ ಸಹಾಯ ಮಾಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಶ್ರದ್ಧಾ ವಾಕರ್ ಹತ್ಯೆ ಕೇಸ್- ಪೀಸ್ ಪೀಸ್ ಪ್ರೇಮಿಗೆ ಜೈಲು ಅವಧಿ ವಿಸ್ತರಣೆ

    Live Tv
    [brid partner=56869869 player=32851 video=960834 autoplay=true]

  • ಏರ್ ಇಂಡಿಯಾ ವಿಮಾನಕ್ಕೆ ಬಡಿದ ಪಕ್ಷಿ – ಕಣ್ಣೂರಿನಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್

    ಏರ್ ಇಂಡಿಯಾ ವಿಮಾನಕ್ಕೆ ಬಡಿದ ಪಕ್ಷಿ – ಕಣ್ಣೂರಿನಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್

    ತಿರುವನಂತಪುರಂ: 135 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ (Air India Flight) ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಹಕ್ಕಿಯೊಂದು (Bird) ಬಡಿದ ಹಿನ್ನೆಲೆ ತುರ್ತು ಭೂಸ್ಪರ್ಶ (Emergency Landing) ಮಾಡಿರುವ ಘಟನೆ ಕೇರಳದ (Kerala) ಕಣ್ಣೂರಿನಲ್ಲಿ (Kannur) ಸೋಮವಾರ ನಡೆದಿದೆ.

    ಕೋಝಿಕ್ಕೋಡ್‌ನಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಅದಕ್ಕೆ ಹಕ್ಕಿಯೊಂದು ಬಡಿದಿದೆ. ವಿಮಾನದಲ್ಲಿ 135 ಪ್ರಯಾಣಿಕರಿದ್ದು, ಘಟನೆಯ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಏರ್ ಇಂಡಿಯಾದ ವಕ್ತಾರರು ತಿಳಿಸಿದ್ದಾರೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಗಗನಸಖಿ ಮೇಲೆ ಒಂದು ತಿಂಗಳಿಂದ ಅತ್ಯಾಚಾರ

    ವಿಮಾನದಲ್ಲಿದ್ದ 135 ಪ್ರಯಾಣಿಕರಲ್ಲಿ 85 ಜನ ಕೋಝಿಕ್ಕೋಡ್ ಹಾಗೂ 50 ಮಂದಿ ಕಣ್ಣೂರಿನವರಾಗಿದ್ದಾರೆ. ಸದ್ಯ ಎಲ್ಲರೂ ಸುರಕ್ಷಿತರಾಗಿದ್ದಾರೆ. ವಿದೇಶಕ್ಕೆ ಹೋಗುವ ಪ್ರಯಾಣಿಕರಿಗೆ ಇತರ ವಿಮಾನಗಳಲ್ಲಿ ವ್ಯವಸ್ಥೆ ಮಾಡಲಾಗಿದ್ದು, ದೆಹಲಿಗೆ ಹೋಗುವ ಪ್ರಯಾಣಿಕರನ್ನು ಕಣ್ಣೂರಿನ ಹೋಟೆಲ್‌ಗಳಲ್ಲಿ ಇರಿಸಲಾಗಿದೆ. ಮಂಗಳವಾರ ಅವರಿಗೆ ಪ್ರತ್ಯೇಕ ವಿಮಾನದ ವ್ಯವಸ್ಥೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ದಸರಾ ವೇಳೆ RSS, BJP ನಾಯಕರ ಮೇಲೆ ದಾಳಿಗೆ PFI ಸಂಚು

    Live Tv
    [brid partner=56869869 player=32851 video=960834 autoplay=true]

  • ಕೇರಳದಲ್ಲಿ ಮಂಕಿಪಾಕ್ಸ್ 2ನೇ ಕೇಸ್ ದೃಢ – ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ವ್ಯಕಿ!

    ತಿರುವನಂತಪುರಂ: ದೇಶದ 2ನೇ ಮಂಕಿಪಾಕ್ಸ್ ಪ್ರಕರಣ ಕೇರಳದ ಕಣ್ಣೂರಿನಲ್ಲಿ ದೃಢವಾಗಿದೆ. 31 ವರ್ಷದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಗುಣಲಕ್ಷಣಗಳು ಕಂಡುಬಂದಿದ್ದು, ಇದೀಗ ಸೋಂಕು ದೃಢವಾಗಿದೆ.

    ಕೇರಳದ ಕಣ್ಣೂರು ಜಿಲ್ಲೆಯ ವ್ಯಕ್ತಿ ಜುಲೈ 13 ರಂದು ದುಬೈನಿಂದ ಕರ್ನಾಟಕದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದರು. ಬಳಿಕ ರೋಗದ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ರಕ್ತದ ಮಾದರಿಗಳನ್ನು ಪುಣೆಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ(ಎನ್‌ಐವಿ)ಗೆ ಕಳುಹಿಸಲಾಗಿತ್ತು. ಇದೀಗ ಅವರಿಗೆ ಮಂಕಿಪಾಕ್ಸ್ ಸೋಕು ಇರುವುದು ದೃಢವಾಗಿದೆ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ – ಮೊದಲ ಬಾರಿ ಸಾರ್ವಜನಿಕವಾಗಿ ವ್ಹೀಲ್ ಚೇರ್‌ನಲ್ಲಿ ಕಾಣಿಸಿಕೊಂಡ ಹೆಚ್‌ಡಿಡಿ

    MONKEY

    ಸದ್ಯ ಕಣ್ಣೂರಿನ ಪರಿಯಾರಂ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಯ ಸ್ಥಿತಿ ಸ್ಥಿರವಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ದೃಢಪಡಿಸಿದೆ. ಆದರೂ ನೆರೆಯ ಕೇರಳದಲ್ಲಿ ಮಂಕಿಪಾಕ್ಸ್ ಪ್ರಕರಣಗಳು ದೃಢವಾಗುತ್ತಿರುವುದು ಕಾರ್ನಾಟಕದಲ್ಲೂ ಭೀತಿ ಹುಟ್ಟಿಸಿದೆ. ಇದನ್ನೂ ಓದಿ: ಮಹದಾಯಿ ವಿಚಾರದಲ್ಲಿ ಸರ್ಕಾರ ನಿರ್ಲಕ್ಷ್ಯ- ಸಾಲ ಮರುಪಾವತಿ ಮಾಡಲ್ಲ ಎಂದ ರೈತರು

    ಪಶ್ಚಿಮ ಹಾಗೂ ಮಧ್ಯ ಆಫ್ರಿಕಾ ದೇಶಗಳಲ್ಲಿ ಮಂಕಿಪಾಕ್ಸ್ ದೀರ್ಘಕಾಲದಿಂದ ಕಂಡುಬಂದಿದ್ದು, ಈ ವರ್ಷದ ಮೇ ತಿಂಗಳಿನಿಂದ ಇತರ ದೇಶಗಳಲ್ಲೂ ಕಂಡುಬರಲು ಪ್ರಾರಂಭವಾಯಿತು. ಅತಿಯಾದ ಜ್ವರ ಹಾಗೂ ಚಿಕನ್‌ಪಾಕ್ಸ್ನಂತಹ ಗುಳ್ಳೆಗಳು ದೇಹದಲ್ಲಿ ಕಾಣಿಸಿಕೊಳ್ಳುವುದು ಮಂಕಿಪಾಕ್ಸ್‌ನ ಸಾಮಾನ್ಯ ಆರಂಭಿಕ ಲಕ್ಷಣಗಳು.

    Live Tv
    [brid partner=56869869 player=32851 video=960834 autoplay=true]

  • ಜೀನ್ಸ್ ಪ್ಯಾಂಟ್‍ಗೆ ಪೇಂಟ್ ನಂತೆ ಚಿನ್ನದ ಲೇಪನ- ಕಳ್ಳನ ಮಾಸ್ಟರ್ ಪ್ಲ್ಯಾನ್

    ಜೀನ್ಸ್ ಪ್ಯಾಂಟ್‍ಗೆ ಪೇಂಟ್ ನಂತೆ ಚಿನ್ನದ ಲೇಪನ- ಕಳ್ಳನ ಮಾಸ್ಟರ್ ಪ್ಲ್ಯಾನ್

    ತಿರುವನಂತಪುರಂ: ಜೀನ್ಸ್ ಪ್ಯಾಂಟ್ ಮೇಲೆ ಪೇಂಟ್ ಅಂತೆ ಚಿನ್ನದ ಲೇಪನ ಮಾಡಿಕೊಂಡು ಚಿನ್ನ ಸಾಗಣೆ ಮಾಡುತ್ತಿದ್ದ ವ್ಯಕ್ತಿಯ ತಂತ್ರ ಇದೀಗ ಕೇರಳದಲ್ಲಿ ಬಯಲಾಗಿದೆ.  

    ಕೇರಳದ ಕಣ್ಣೂರು ಏರ್​ಪೋರ್ಟ್​ನಲ್ಲಿ ಪ್ರಯಾಣಿಕನಿಂದ 302 ಗ್ರಾಂ ಚಿನ್ನವನ್ನು ಅಧಿಕಾರಿಗಳು ಇಂದು ವಶಪಡಿಸಿಕೊಂಡಿದ್ದಾರೆ. ಏರ್ ಇಂಟೆಲಿಜೆನ್ಸ್ ಯುನಿಟ್ ಮತ್ತು ಕಸ್ಟಮ್ ಅಧಿಕಾರಿಗಳು ಪ್ರಯಾಣಿಕನಿಂದ ಸುಮಾರು 14 ಲಕ್ಷ ರೂಪಾಯಿ ಬೆಲೆ ಬಾಳುವ ಚಿನ್ನ ಪ್ರಯಾಣಿಕನಿಂದ ವಶವಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಭತ್ತದ ಗದ್ದೆಯಲ್ಲಿ ಬೇಸಾಯ ಮಾಡಿದ ನಟ ನಿರ್ದೇಶಕ ರಿಷಬ್ ಶೆಟ್ಟಿ

    ಚಿನ್ನವನ್ನು ಪೇಸ್ಟ್ ರೂಪದಲ್ಲಿ ಜೀನ್ಸ್ ಪ್ಯಾಂಟ್‍ಗೆ ಹಚ್ಚಲಾಗಿತ್ತು. ನೋಡಲು ಹಳದಿ ಬಣ್ಣದ ಪೇಂಟ್‍ನಂತೆ ಗೋಚರವಾಗುತ್ತಿತ್ತು. ಎರಡು ಲೇಯರ್ ಹೊಂದಿರುವ ಜೀನ್ಸ್ ಪ್ಯಾಂಟ್ ಧರಿಸಿದ ಪ್ರಯಾಣಿಕ ಚಿನ್ನದ ಪೇಸ್ಟ್‌ನ್ನು ಹಚ್ಚಿಕೊಂಡಿದ್ದನು ಎಂಬುದು ತಿಳಿದು ಬಂದಿದೆ. ಜೀನ್ಸ್ ಪ್ಯಾಂಟ್‍ನ ಫೋಟೋ ಇದೀಗ ಫುಲ್ ವೈರಲ್ ಆಗಿದೆ.

    ಡಬಲ್ ಲೇಯರ್ ಪ್ಯಾಂಟ್‍ನಲ್ಲಿ ಚಿನ್ನದ ಪೇಸ್ಟ್‌ನ್ನು ತೆಳುವಾಗಿ ಹಚ್ಚಲಾಗಿದೆ ಎಂದು ಏರ್ ಇಂಟಲಿಜೆನ್ಸ್ ಯೂನಿಟ್ಸ್ ಅಧಿಕಾರಿಯೋರ್ವರು ಮಾಹಿತಿ ಹಂಚಿಕೊಂಡಿದ್ದಾರೆ. ಇದು 302 ಗ್ರಾಂ ಗೋಲ್ಡ್, ತೆಳುವಾದ ಪೇಸ್ಟ್ ತಯಾರಿಸಿ ಪೇಂಟ್‍ನಂತೆ ಹಚ್ಚಲಾಗಿದೆ ಎಂದು ಹೇಳಿದ್ದಾರೆ.

  • ಮದ್ವೆ ಪ್ರಸ್ತಾಪ ತಡೆಯುತ್ತಿದ್ದ ವ್ಯಕ್ತಿಯ ಅಂಗಡಿ ಧ್ವಂಸಗೊಳಿಸಿದ ಯುವಕ

    ಮದ್ವೆ ಪ್ರಸ್ತಾಪ ತಡೆಯುತ್ತಿದ್ದ ವ್ಯಕ್ತಿಯ ಅಂಗಡಿ ಧ್ವಂಸಗೊಳಿಸಿದ ಯುವಕ

    – ವೀಡಿಯೋ ವೈರಲ್, ಯುವಕನ ಬಂಧನ

    ತಿರುವನಂತಪುರ: ಮದುವೆ ಪ್ರಸ್ತಾಪ ತಡೆದಿದ್ದಕ್ಕೆ ಕೋಪಗೊಂಡ ಯುವಕ ಅಂಗಡಿಯನ್ನ ಧ್ವಂಸಗೊಳಿಸಿರುವ ಘಟನೆ ಕೇರಳದ ಕನ್ನೂರು ಜಿಲ್ಲೆಯ ಚೆರೂಪುಜಾ ಎಂಬಲ್ಲಿ ನಡೆದಿದೆ.

    30 ವರ್ಷದ ಅಲ್ಬಮಿನ್ ನೆರೆಮನೆ ವ್ಯಕ್ತಿಯ ಅಂಗಡಿಯನ್ನ ಜೆಸಿಬಿ ಮೂಲಕ ಧ್ವಂಸಗೊಳಿಸಿದ್ದಾನೆ. ಅಂಗಡಿ ಮಾಲೀಕ ನೀಡಿದ ದೂರಿನ ಅನ್ವಯ ಪೊಲೀಸರು ಯುವಕನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಅಂಗಡಿ ಧ್ವಂಸಕ್ಕೂ ಮುನ್ನ ಫೇಸ್‍ಬುಕ್ ನಲ್ಲಿ ಅಲ್ಬಮಿನ್ ವೀಡಿಯೋ ಶೇರ್ ಮಾಡಿಕೊಂಡಿದ್ದನು.

    ವೀಡಿಯೋದಲ್ಲಿ ಏನಿದೆ?: ಈ ಅಂಗಡಿಯಲ್ಲಿ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿವೆ. ಜೂಜಾಟ ಮತ್ತು ಮದ್ಯ ಮಾರಾಟ ಸೇರಿದಂತೆ ಚಟುವಟಿಕೆಗಳನ್ನ ಅಂಗಡಿಯಲ್ಲಿ ನಡೆಯುತ್ತಿದ್ದು, ಯುವಕರು ಇದರಿಂದ ಬೇಸತ್ತಿದ್ದಾರೆ. ನಾವು ಪೊಲೀಸ್, ಗ್ರಾಮಸ್ಥರು ಮತ್ತು ಅಧಿಕಾರಿಗಳಿಗೆ ತಿಳಿಸಿದ್ರೂ ಸಕಾರಾತ್ಮಕ ಉತ್ತರ ಸಿಗಲಿಲ್ಲ. ಈ ಹಿನ್ನೆಲೆ ಅಂಗಡಿಯನ್ನ ಧ್ವಂಸಗೊಳಿಸುತ್ತೇನೆ ಎಂದು ಹೇಳಿದ್ದಾನೆ.

    ಯುವಕ ಅಂಗಡಿಗೆ ಹಾನಿ ಮಾಡಿದ್ದು ತಪ್ಪು. ಅಂಗಡಿಯಲ್ಲಿ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿದ್ದವು ಎಂದು ಬಂಧಿತ ಯುವಕ ಆರೋಪಿಸಿದ್ದಾನೆ. ಆದ್ರೆ ಅಂಗಡಿ ಮಾಲೀಕ ಅಲ್ಬಮಿನ್ ಗೆ ಬರುತ್ತಿದ್ದ ಮದುವೆ ಪ್ರಸ್ತಾಪಗಳನ್ನು ತಡೆಯುತ್ತಿದ್ದರಿಂದ ಅಲ್ಬಮಿನ್ ಈ ರೀತಿ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಎಲ್ಲ ಆಯಾಮದಲ್ಲಿಯೂ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

     

  • ಸರಗಳ ಮಧ್ಯೆ ಹೆಬ್ಬಾವು- ಜ್ಯುವೆಲ್ಲರಿ ಶಾಪ್ ತೆರೆದ ಮಾಲೀಕನಿಗೆ ಶಾಕ್

    ಸರಗಳ ಮಧ್ಯೆ ಹೆಬ್ಬಾವು- ಜ್ಯುವೆಲ್ಲರಿ ಶಾಪ್ ತೆರೆದ ಮಾಲೀಕನಿಗೆ ಶಾಕ್

    ತಿರುವನಂತಪುರ: ಕೊರೊನಾ ವೈರಸ್ ಹರಡುವುದನ್ನು ತಪ್ಪಿಸಲು ಇಡೀ ದೇಶವನ್ನೇ ಲಾಕ್ ಡೌನ್ ಮಾಡಲಾಗಿದ್ದು, ಇದೀಗ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಶಾಪ್ ಗಳು ಓಪನ್ ಆಗುತ್ತಿವೆ. ಹಾಗೆಯೇ ಜ್ಯುವೆಲ್ಲರಿ ಶಾಪ್ ಮಾಲೀಕ ತನ್ನ ಅಂಗಡಿಯ ಬಾಗಿಲು ತೆರೆದಾಗ ಶಾಕ್ ಒಂದು ಕಾದಿತ್ತು.

    ಈ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದ್ದು, ಮಾಲೀಕ ತನ್ನ ಅಂಗಡಿಯನ್ನು ಕ್ಲೀನ್ ಮಾಡಲೆಂದು ಬಾಗಿಲು ತೆರೆದಾಗ ಈ ಅಚ್ಚರಿಯ ಘಟನೆ ಬೆಳಕಿಗೆ ಬಂದಿದೆ.

    ಲಾಕ್ ಡೌನ್ ಮುಗಿಸಿ ತಿಂಗಳ ಬಳಿಕ ಶಾಪ್ ಬಾಗಿಲು ಓಪನ್ ಮಾಡುತ್ತಿದ್ದಂತೆಯೇ ಸರಗಳ ಮಧ್ಯೆ ಹೆಬ್ಬಾವು ಕಾಣಿಸಿಕೊಂಡಿದೆ. ಅಲ್ಲದೆ ಶಾಪ್ ಒಳಗಡೆ ಹೆಬ್ಬಾವು ಬರೋಬ್ಬರಿ 22 ಮೊಟ್ಟೆಗಳನ್ನು ಕೂಡ ಇಟ್ಟಿರುವುದನ್ನು ಕಂಡು ಮಾಲೀಕ ಅಚ್ಚರಿಗೊಂಡಿದ್ದಾರೆ. ಕೂಡಲೇ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಅಂಗಡಿ ಮಾಲೀಕ ಮಾಹಿತಿ ನೀಡಿದ್ದಾರೆ. ತಕ್ಷಣವೇ ಅಧಿಕಾರಿಗಳು ಕೂಡ ಸ್ಥಳಕ್ಕೆ ದೌಡಾಯಿಸಿ ಹೆಬ್ಬಾವು ಹಾಗೂ ಮೊಟ್ಟೆಗಳನ್ನು ರಕ್ಷಣೆ ಮಾಡಿದ್ದಾರೆ.