Tag: Kanteerava Stadium

  • ಒಲಿಂಪಿಕ್ಸ್‌ ಪದಕ ವಿಜೇತ ನೀರಜ್ ಚೋಪ್ರಾ ಸನ್ಮಾನಿಸಿದ ಸಿಎಂ

    ಒಲಿಂಪಿಕ್ಸ್‌ ಪದಕ ವಿಜೇತ ನೀರಜ್ ಚೋಪ್ರಾ ಸನ್ಮಾನಿಸಿದ ಸಿಎಂ

    – ʻನೀರಜ್‌ ಚೋಪ್ರಾ ಕ್ಲಾಸಿಕ್‌ʼ ಸ್ಪರ್ಧೆಗೆ ಕಂಠೀರವ ಕ್ರೀಡಾಂಗಣ ಸಜ್ಜು
    – ಯಾವಾಗ ಸ್ಪರ್ಧೆ, ಟಿಕೆಟ್‌ ದರ ಎಷ್ಟು?

    ಬೆಂಗಳೂರು: ಸತತ 2 ಬಾರಿ ಒಲಿಂಪಿಕ್ಸ್‌ನಲ್ಲಿ ಪದಕ ವಿಜೇತ, ವಿಶ್ವದ ನಂ.1 ಜಾವೆಲಿನ್‌ ಪಟು (Javelin Thrower) ನೀರಜ್‌ ಚೋಪ್ರಾ (Neeraj Chopra) ಅವರು ಬೆಂಗಳೂರಿನಲ್ಲಿದ್ದು, ಇಂದು ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಗೆ ಭೇಟಿ ನೀಡಿದ್ದರು.

    ಸಿಎಂ ಸಿದ್ದರಾಮಯ್ಯ (siddaramaiah) ಅವರನ್ನ ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ರು. ಇದೇ ವೇಳೆ ನೀರಜ್ ಚೋಪ್ರಾಗೆ ಹಾರ ಹಾಕಿ, ಶಾಲು ಹೊದಿಸಿ ಮುಖ್ಯಮಂತ್ರಿಗಳು ಸನ್ಮಾನಿಸಿದರು. ಜೊತೆಗೆ ನಮ್ಮ ದೇಶಕ್ಕೆ ಇನ್ನಷ್ಟು ಪದಕಗಳನ್ನು ಗೆದ್ದು ತರುವಂತೆ ಶುಭ ಹಾರೈಸಿದರು.

    ಈ ವೇಳೆ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರೂ ಆದ ವಿಧಾನ‌ ಪರಿಷತ್ ಸದಸ್ಯ ಗೋವಿಂದರಾಜು ಅವರು ಉಪಸ್ಥಿತರಿದ್ದರು. ಅಂದಹಾಗೆ ಜುಲೈ 5ರಂದು ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ನೀರಜ್ ಚೋಪ್ರಾ ಕ್ಲಾಸಿಕ್ (NC Classic 2025) ಜಾವೆಲಿನ್ ಸ್ಪರ್ಧೆಯಲ್ಲಿ ಅವರು ಭಾಗವಹಿಸಲಿದ್ದಾರೆ.

    ಜಾವೆಲಿನ್‌ ಹೀರೋ ಎಸೆತ ವೀಕ್ಷಣೆಗೆ ಬೆಂಗಳೂರು ಸಜ್ಜು
    ಭಾರತದ ಜಾವೆಲಿನ್‌ ತಾರೆ ನೀರಜ್‌ ಚೋಪ್ರಾ ಅವರ ಪ್ರದರ್ಶನಕ್ಕೆ ಕಂಠೀರವ ಕ್ರೀಡಾಂಗಣ (Kanteerava Stadium) ಇದೇ ಮೊದಲ ಸಲ ಸಜ್ಜಾಗಿದೆ. ಜುಲೈ 5ರಂದು ನಡೆಯಲಿರುವ ಜಾಗತಿಕ ಮಟ್ಟದ ನೀರಜ್‌ ಚೋಪ್ರಾ ಕ್ಲಾಸಿಕ್‌ ಸ್ಪರ್ಧೆಗೆ ಕಂಠೀರವ ಕ್ರೀಡಾಂಗಣ ಆತಿಥ್ಯ ವಹಿಸಿದೆ. ನೀರಜ್‌ ಜೊತೆಗೆ ಅಂತಾರಾಷ್ಟ್ರೀಯ ಜಾವೆಲಿನ್‌ ತಾರೆಗಳಾದ ಜೂಲಿಯಸ್‌ ಯೆಗೊ ಮತ್ತು ಥಾಮಸ್‌ ರೋಹ್ಲರ್‌ ಸ್ಪರ್ಧೆಯಲ್ಲಿರುವ ಪ್ರಧಾನ ಆಕರ್ಷಣೆಯಾಗಿದ್ದಾರೆ. ಆದರೆ ಗಾಯದ ಸಮಸ್ಯೆಯಿಂದಾಗಿ ಆ್ಯಂಡರ್ಸನ್‌ ಪೀಟರ್‌ ಹಿಂದೆ ಸರಿದಿದ್ದಾರೆ.

    ಈ ಕೂಟದಲ್ಲಿ ಪಾಕಿಸ್ತಾನದ ಅರ್ಷದ್ ನದೀಂ ಅವರು ಸಹ ಭಾಗವಹಿಸುತ್ತಾರೆಂದು ಈ ಹಿಂದೆ ಹೇಳಲಾಗಿತ್ತು. ಆದರೆ ಪಹಲ್ಗಾಮ್ ಭಯೋತ್ಪಾದಕ ಕೃತ್ಯದ ಬಳಿಕ ಎರಡೂ ದೇಶಗಳ ನಡುವಿನ ಸಂಬಂಧ ಹದಗೆಟ್ಟಿದ್ದರಿಂದ ಅವರ ಆಗಮನಕ್ಕೆ ವಿರೋಧ ವ್ಯಕ್ತವಾಗಿತ್ತು. ಅವರು ಭಾಗವಹಿತ್ತಾರೋ ಅಥವಾ ಇಲ್ಲವೋ ಎಂಬ ಬಗ್ಗೆ ಇನ್ನೂ ಖಚಿತವಾಗಿಲ್ಲ.

    200 ರೂ.ನಿಂದ ಟಿಕೆಟ್‌ ದರ
    ನೀರಜ್‌ ಚೋಪ್ರಾ ಕ್ಲಾಸಿಕ್‌ ಸ್ಪರ್ಧೆ ವೀಕ್ಷಣೆಗೆ 200 ರೂ.ಗಳಿಂದ 6,000 ರೂ. ವರೆಗೂ ಟಿಕೆಟ್‌ ದರವನ್ನು ನಿಗದಿಪಡಿಸಲಾಗಿದೆ. ಸುಮಾರು 30 ಸಾವಿರಕ್ಕೂ ಅಧಿಕ ಆಸನಗಳ ಸಾಮರ್ಥ್ಯವಿದ್ದು, ಸದ್ಯ 6 ಸಾವಿರ ಟಿಕೆಟ್‌ಗಳು ಮಾರಾಟವಾಗಿ ಎಂದು ಮೂಲಗಳು ತಿಳಿಸಿವೆ. ಟಿಕೆಟ್‌ಗಳು ಆನ್‌ಲೈನ್‌ ಜತೆಗೆ ಮೈದಾನದ ಆವರಣದಲ್ಲೂ ಲಭ್ಯವಿವೆ.

  • Bengaluru | ಸ್ಪೋರ್ಟ್ಸ್ ಪ್ರಾಕ್ಟಿಸ್ ನೋಡಲು ಹೋಗಿದ್ದ ವಿದ್ಯಾರ್ಥಿ ನಾಪತ್ತೆ

    Bengaluru | ಸ್ಪೋರ್ಟ್ಸ್ ಪ್ರಾಕ್ಟಿಸ್ ನೋಡಲು ಹೋಗಿದ್ದ ವಿದ್ಯಾರ್ಥಿ ನಾಪತ್ತೆ

    ಬೆಂಗಳೂರು: ಸ್ಪೋರ್ಟ್ಸ್ ಪ್ರಾಕ್ಟಿಸ್ (Sports Practice) ನೋಡಲು ಹೋಗಿದ್ದ ವಿದ್ಯಾರ್ಥಿ ನಾಪತ್ತೆಯಾದ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ.

    ಗೊರಗುಂಟೆಪಾಳ್ಯ (Goraguntepalya) ನಿವಾಸಿ ಡಿಮನ್ ರಾಜ್ ನಾಪತ್ತೆಯಾದ ವಿದ್ಯಾರ್ಥಿ. ಏಳನೇ ತರಗತಿ ಓದುತ್ತಿದ್ದ ಡಿಮನ್ ರಾಜ್ ಎಂದಿನಂತೆ ಬೆಳಗ್ಗೆ ಮನೆಯಿಂದ ಟ್ಯೂಷನ್‌ಗೆ ಹೋಗಿದ್ದ. ಆದರೆ ಟ್ಯೂಷನ್‌ಗೆ ಹೋಗದೇ ಕಂಠೀರವ ಸ್ಟೇಡಿಯಂಗೆ (Kanteerava Stadium) ಬಂದಿದ್ದ. ಕಂಠೀರವ ಸ್ಟೇಡಿಯಂನಲ್ಲಿ ಜಾವೆಲಿನ್ ಥ್ರೋ ಪ್ರಾಕ್ಟಿಸ್ ನೋಡಲು ಬಂದಿದ್ದ ಡಿಮನ್ ರಾಜ್ ಸ್ಟೇಡಿಯಂನಲ್ಲಿ ನೀರಜ್ ಚೋಪ್ರಾ ಜೊತೆ ಪೋಟೋ ತೆಗೆಸಿಕೊಂಡಿದ್ದ. ಬಳಿಕ ಅಲ್ಲಿದ್ದ ವ್ಯಕ್ತಿಯೊಬ್ಬರ ಮೂಲಕ ಪೋಟೋವನ್ನ ತನ್ನ ತಾಯಿಗೆ ಕಳುಹಿಸಿದ್ದ. ಅನಂತರ ಯಾರ ಸಂಪರ್ಕಕ್ಕೂ ಸಿಗದೆ ನಾಪತ್ತೆಯಾಗಿದ್ದಾನೆ. ಇದನ್ನೂ ಓದಿ: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬೆಂಕಿ ಅವಘಡ – ಡ್ಯೂಟಿ ಡಾಕ್ಟರ್ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

    ವಿದ್ಯಾರ್ಥಿ ನಾಪತ್ತೆ ಬಗ್ಗೆ ನಂದಿನಿ ಲೇಔಟ್ ಪೊಲೀಸರಿಗೆ ದೂರು ನೀಡಿದ್ದು, ಪೋಷಕರು ರಾತ್ರಿಯಿಡೀ ಹುಡುಕಾಟ ನಡೆಸಿದ್ದಾರೆ. ಮೆಜೆಸ್ಟಿಕ್, ಮಲ್ಲೇಶ್ವರಂ, ಕಂಠೀರವ ಸ್ಟೇಡಿಯಂ, ಮಾರ್ಕೆಟ್ ಸೇರಿದಂತೆ ಹಲವೆಡೆ ಹುಡುಕಾಟ ನಡೆಸಲಾಗಿದೆ. ಸಿಸಿಟಿವಿ ದೃಶ್ಯಾವಳಿ ಸಂಗ್ರಹಿಸಿ ಪೋಷಕರು ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಸರ್ಕಾರಿ ನೌಕರಿ ಕೊಡಿಸುವುದಾಗಿ 200 ರೂ. ವಂಚನೆ; 30 ವರ್ಷದ ನಂತರ ಬಂಧನ

  • ಕನ್ನಡ, ಕನ್ನಡಿಗರನ್ನು ನಿಂದಿಸುವವರ ವಿರುದ್ಧ ಕಠಿಣ ಕ್ರಮ – ಸಿಎಂ ಎಚ್ಚರಿಕೆ

    ಕನ್ನಡ, ಕನ್ನಡಿಗರನ್ನು ನಿಂದಿಸುವವರ ವಿರುದ್ಧ ಕಠಿಣ ಕ್ರಮ – ಸಿಎಂ ಎಚ್ಚರಿಕೆ

    ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ ಮತ್ತು ಕನ್ನಡಿಗರನ್ನು ಹೀಯಾಳಿಸುವ ಕೆಲಸ ಆಗುತ್ತಿದೆ. ಇನ್ನೂ ಮುಂದೆ ಯಾರಾದರೂ ನಿಂದಿಸಿದ್ದಲ್ಲಿ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಎಚ್ಚರಿಕೆ ನೀಡಿದರು.

    ಬೆಂಗಳೂರಿನ (Bengaluru) ಕಂಠೀರವ ಸ್ಟೇಡಿಯಂನಲ್ಲಿ (Kanteerava Stadium) ನಡೆದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರೆಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಸರ್ಕಾರದ ಕಾರ್ಯದರ್ಶಿ ಶಾಲಿನಿ ರಜನೀಶ್, ಶಿಕ್ಷಣ ಸಚಿವ ಮಧುಬಂಗಾರಪ್ಪ ಭಾಗಿಯಾಗಿದ್ದರು.ಇದನ್ನೂ ಓದಿ: ವಕ್ಫ್ ಆಸ್ತಿಯನ್ನು ರಾಷ್ಟ್ರೀಯ ಸಂಪತ್ತನ್ನಾಗಿ ಘೋಷಿಸಿ – ಪ್ರಧಾನಿ ಮೋದಿಗೆ ಯತ್ನಾಳ್ ಪತ್ರ

    ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಎಲ್ಲರಲ್ಲಿಯೂ ಕನ್ನಡ ಅಭಿಮಾನ ಇರಲಿ, ದುರಭಿಮಾನ ಬೇಡ. ಅಭಿಮಾನವಿದ್ದರೆ ಮಾತ್ರ ಕನ್ನಡ ಬೆಳೆಯುತ್ತದೆ. ಕನ್ನಡ ಬಾರದವರ ಜೊತೆಯಲ್ಲಿಯೂ ಕನ್ನಡದಲ್ಲಿಯೇ ಮಾತನಾಡಿ. ಕನ್ನಡ ಬಾರದವರಿಗೆ ಕನ್ನಡ ಕಲಿಸಬೇಕು, ಆಗ ಕನ್ನಡದ ವಾತಾವರಣ ನಿರ್ಮಾಣವಾಗುತ್ತದೆ. ಎಲ್ಲರೂ ಈ ಪ್ರತಿಜ್ಞೆಯನ್ನು ತೆಗೆದುಕೊಳ್ಳಬೇಕು. ಇನ್ನೂ ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ, ಕನ್ನಡಿಗರನ್ನು ಹೀಯಾಳಿಸುವ ಪ್ರವೃತ್ತಿ ಬೆಳೆಯುತ್ತಿದೆ. ಇದು ನಾಡದ್ರೋಹ, ಅಂತಹವರ ವಿರುದ್ಧ ಸರ್ಕಾರ ಮುಲಾಜಿಲ್ಲದೇ ಕಠಿಣ ಕ್ರಮ ತಗೊಳ್ಳುತ್ತದೆ. ನಾವು ಕನ್ನಡಿಗರಾಗಿರುತ್ತೇವೆ. ಬೇರೆಯವರನ್ನೂ ಕನ್ನಡಿಗರಾಗಿ ಮಾಡುತ್ತೇವೆ. ವ್ಯವಹಾರದಲ್ಲೂ ಕನ್ನಡ ಬಳಸುತ್ತೇವೆ ಎಂದು ಶಪಥ ಮಾಡೋಣ ಎಂದು ತಿಳಿಸಿದರು.

    ರಾಜ್ಯದ ಎಲ್ಲ 57 ಲಕ್ಷ ಶಾಲಾ ಮಕ್ಕಳಿಗೆ ವಾರದ ಆರು ದಿನ ಮೊಟ್ಟೆ ಕೊಡುತ್ತಿದ್ದೇವೆ. ಈಗ ಮಕ್ಕಳಿಗೆ ಹಾಲಿನ ಜೊತೆಗೆ ರಾಗಿ ಮಾಲ್ಟ್ ಕೊಡುತ್ತಿದ್ದೇವೆ. ಅಸಮಾನತೆ, ಅಪೌಷ್ಟಿಕತೆಯನ್ನು ಹೊಡೆದೊಡಿಸಲು ಹಾಗೂ ಗುಣಮಟ್ಟದ ಶಿಕ್ಷಣ ಕೊಡುವ ಸಲುವಾಗಿ ಈ ಯೋಜನೆಗಳನ್ನು ಮಾಡುತ್ತಿದ್ದೇವೆ. ಕನ್ನಡದ ಅಭಿಮಾನವಿರಲಿ. ಬೇರೆ ಭಾಷಿಕರಿಗೂ ಕನ್ನಡ ಕಲಿಸುವ ಕೆಲಸ ಮಾಡಬೇಕು. ಯಾವುದೇ ಧರ್ಮ, ಭಾಷೆ, ಪ್ರಾಂತ್ಯದವರು ಇರಲಿ ಕರ್ನಾಟಕದಲ್ಲಿ ಇರುವವರೆಲ್ಲ ಕನ್ನಡಿಗರೇ. ಈ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸ ಇದೆ. ಕನ್ನಡ ಶಾಸ್ತ್ರೀಯ ಭಾಷೆ. ನಾವು ನಮ್ಮ ಭಾಷೆಯನ್ನು ಯಾವುದೇ ಕಾರಣಕ್ಕೂ ಬಲಿ ಕೊಟ್ಟು ಉದಾರಿಗಳಾಗಬಾರದು. ಭಾಷೆ ವ್ಯಾಮೋಹವೂ ಅತಿಯಾಗಿರಬಾರದು, ಆದರೆ ಕನ್ನಡ ಅಭಿಮಾನ ಬಿಟ್ಟುಕೊಡಬಾರದು. ಬೇರೆ ಭಾಷೆ ಕಲಿಯಿರಿ, ಆದರೆ ಕನ್ನಡ ಮರೆಯಬೇಡಿ ಎಂದು ಹೇಳಿದರು.

    ರಾಜ್ಯಗಳ ಏಕೀಕರಣ ಆಗಿ 68 ವರ್ಷಗಳು ತುಂಬಿದ್ದು 69ಕ್ಕೆ ಕಾಲಿಟ್ಟಿದ್ದೀವಿ. 1953ರಲ್ಲಿ ಫಜಲ್ ಅಲಿ ನೇತೃತ್ವದಲ್ಲಿ ರಾಜ್ಯಗಳ ಪುನರ್ವಿಂಗಡಣೆ ಸಮಿತಿ ರಚಿಸಲಾಯಿತು. ಇವರು ಕೊಟ್ಟ ವರದಿ ಆಧಾರದಲ್ಲಿ ಭಾಷಾವಾರು ರಾಜ್ಯಗಳ ವಿಂಗಡಣೆ ಆಯಿತು. ಆ ದಿನವನ್ನು ನಾವೆಲ್ಲರೂ ಇಡೀ ದೇಶದಲ್ಲಿ ರಾಜ್ಯಗಳ ಏಕೀಕರಣ ದಿನವಾಗಿ ಆಚರಿಸುತ್ತಿದ್ದೇವೆ. 1973ರವರೆಗೆ ಕರ್ನಾಟಕ ರಾಜ್ಯ ಆಗಿರಲಿಲ್ಲ, ಮೈಸೂರು ರಾಜ್ಯ ಆಗಿತ್ತು. ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು 1973 ನವೆಂಬರ್ 1 ರಂದು ಹೆಸರು ಇಡಲಾಯಿತು. ನಾಮಕರಣ ಆಗಿ 51 ವರ್ಷ ತುಂಬುತ್ತಿದೆ. 50 ವರ್ಷವಾದಾಗ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿತ್ತು. ಆದರೆ ಅವರು 50ನೇ ವರ್ಷದ ಆಚರಣೆ ಮಾಡಲಿಲ್ಲ. ನಾವು ಬಂದ ಮೇಲೆ ಇಡೀ ವರ್ಷ ಸಂಭ್ರಮದಿಂದ ಆಚರಣೆ ಮಾಡಿದೆವು ಎಂದರು.

    ರಾಜ್ಯಕ್ಕೆ ತೆರಿಗೆ ಅನ್ಯಾಯದ ವಿಚಾರ:
    ಕರ್ನಾಟಕಕ್ಕೆ ಇವತ್ತು ದೊಡ್ಡ ಅನ್ಯಾಯ ಆಗುತ್ತಿದೆ. ಮಹಾರಾಷ್ಟ್ರ ಬಿಟ್ಟರೆ ಅತೀ ಹೆಚ್ಚು ತೆರಿಗೆ ಕಟ್ಟುವ ರಾಜ್ಯ ನಮ್ಮದು. ನಾವು 4 ಲಕ್ಷ ಕೋಟಿ ರೂ.ಗೂ ಹೆಚ್ಚು ತೆರಿಗೆ ಕಟ್ಟಿದ್ದರೂ ವಾಪಸ್ ಪಡೆಯುತ್ತಿರುವುದು 50-60 ಸಾವಿರ ರೂ. ಕೋಟಿ ಮಾತ್ರ. 1 ರೂ.ಯಲ್ಲಿ 14-15 ಪೈಸೆ ಮಾತ್ರ ನಮಗೆ ವಾಪಸ್ ಕೊಡುತ್ತಿದ್ದಾರೆ. ನಾವು ಮುಂದುವರೆದ ರಾಜ್ಯ ಎಂದು ತೆರಿಗೆ ಪಾಲಿನಲ್ಲಿ ಅನ್ಯಾಯ ಆಗುತ್ತಿದೆ. ಹಸು ಹಾಲು ಕೊಡುತ್ತದೆ ಎಂದು ಕರುವಿಗೆ ಹಾಲು ಕೊಡದಿದ್ದರೆ ಆ ಕರು ದುರ್ಬಲ ಆಗುತ್ತದೆ. ನಾವು ಕೊಡುವ ತೆರಿಗೆ, ನಮ್ಮ ತೆರಿಗೆ ಪಾಲು ಸರಿಯಾಗಿ ಕೊಡಿ ಎಂದರೆ ಅದಕ್ಕೆ ರಾಜಕೀಯ ಬಣ್ಣ ಹಚ್ಚುತ್ತಾರೆ. ಇದನ್ನು ನಾವೆಲ್ಲ ಕನ್ನಡಿಗರೂ ಅರ್ಥ ಮಾಡಿಕೊಳ್ಳಬೇಕು. ನಮ್ಮ ಹಕ್ಕು ನಾವು ಕೇಳಬೇಕು. ಎಲ್ಲ ಸಂಸದರೂ ಲೋಕಸಭೆಯಲ್ಲಿ ಪ್ರತಿಭಟಿಸಿ, ತಮ್ಮ ದನಿಯನ್ನು ಲೋಕಸಭೆಯಲ್ಲಿ ಎತ್ತಬೇಕು ಆಗ ಮಾತ್ರ ನಮಗೆ ನ್ಯಾಯ ಸಿಗುತ್ತದೆ. ಸಂಸದರಿಗೆ ನಮ್ಮ ಅನ್ಯಾಯ ಪ್ರಸ್ತಾಪಿಸಿ, ಸರಿಪಡಿಸುವ ಶಕ್ತಿ ಬರಲಿ. ಹಿಂದೆಯಿದ್ದ ಬಿಜೆಪಿ ನಮಗೆ ಬರಬೇಕಾದ ತೆರಿಗೆ ಪಾಲು ಕೇಳುವ ಕೆಲಸ ಮಾಡಲಿಲ್ಲ ಎಂದು ಕಿಡಿಕಾರಿದರು.ಇದನ್ನೂ ಓದಿ: ಸಕ್ಕರೆ ನಾಡಿಗೂ ಕಾಲಿಟ್ಟ ವಕ್ಫ್‌ ವಿವಾದ – ಮಂಡ್ಯದಲ್ಲಿ ದೇವಸ್ಥಾನವೇ ವಕ್ಫ್ ಆಸ್ತಿ

     

  • ಕಂಠೀರವದಲ್ಲಿ ಅಥ್ಲಿಟ್ ನಿಂದನೆ – ಕೋಚ್, ಪತ್ನಿ ವಿರುದ್ಧ ಎಫ್‌ಐಆರ್

    ಕಂಠೀರವದಲ್ಲಿ ಅಥ್ಲಿಟ್ ನಿಂದನೆ – ಕೋಚ್, ಪತ್ನಿ ವಿರುದ್ಧ ಎಫ್‌ಐಆರ್

    ಬೆಂಗಳೂರು: ಸಣ್ಣ ವಿಚಾರಕ್ಕೆ ಕೋಚ್ (Coach) ಪತ್ನಿ ಹಾಗೂ ಅಥ್ಲಿಟ್ (Athlete) ನಡುವೆ ಕಂಠೀರವ ಕ್ರೀಡಾಂಗಣದಲ್ಲಿ ಗಲಾಟೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಚ್ ಯತೀಶ್ ಹಾಗೂ ಪತ್ನಿ ಶ್ವೇತಾ ವಿರುದ್ಧ ಎಫ್‌ಐಆರ್ (FIR) ದಾಖಲಿಸಲಾಗಿದೆ.

    ಸಂಪಂಗಿ ರಾಮನಗರ (Sampangi Ramanagara) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೋಮವಾರ ಬೆಂಗಳೂರಿನ (Bengaluru) ಕಂಠೀರವ ಸ್ಟೇಡಿಯಂನಲ್ಲಿ (Kanteerava Stadium) ಬಿಂದುರಾಣಿ ಹಾಗೂ ಶ್ವೇತಾ ಮಧ್ಯೆ ಖೇಲ್‌ರತ್ನ ಪ್ರಶಸ್ತಿ ಕುರಿತ ವಿಡಿಯೋವೊಂದರ ಕುರಿತು ಜಗಳ ನಡೆದಿತ್ತು. ಕಳೆದ ಶುಕ್ರವಾರ ಅಥ್ಲಿಟ್ ಬಿಂದುರಾಣಿ ಟೆಡೆಕ್ಸ್ ಕಾರ್ಯಕ್ರಮದಲ್ಲಿ ತನ್ನ ಸಾಧನೆ ಬಗ್ಗೆ ಮಾತನಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಂಡಿದ್ದರು. ಬಿಂದು ಸೋಶಿಯಲ್ ಮೀಡಿಯಾ ಮಾಹಿತಿಯಲ್ಲಿ ಖೇಲ್‌ರತ್ನ ಪ್ರಶಸ್ತಿ ಬಗ್ಗೆ ಪ್ರಸ್ತಾಪ ಮಾಡಿಕೊಂಡಿದ್ದರ ಕುರಿತು ಕೋಚ್ ಯತೀಶ್ ವಾಟ್ಸಪ್‌ನ ಕೋಚ್ ಗ್ರೂಪ್‌ನಲ್ಲಿ ನಿಮಗೆ ಯಾವಾಗ ಖೇಲ್‌ರತ್ನ ಪ್ರಶಸ್ತಿ ಬಂದಿದೆ ಎನ್ನುವ ರೀತಿಯಲ್ಲಿ ಬಿಂದುರಾಣಿಗೆ ಪ್ರಶ್ನೆ ಮಾಡಿದ್ದರು. ಇದನ್ನೂ ಓದಿ: ರಸ್ತೆ ಬದಿ ಸೊಪ್ಪು ಮಾರೋ ವೃದ್ಧೆ ತಲೆಗೆ ಮಚ್ಚಿನಿಂದ ಹಲ್ಲೆ

    ಈ ಕುರಿತು ಬಿಂದುರಾಣಿ ಗ್ರೂಪ್‌ನಲ್ಲಿ ಉತ್ತರಿಸದೇ ಗಂಡನ ಕಡೆಯಿಂದ ಕಾಲ್ ಮಾಡಿಸಿದ್ದಾರೆ. ಯತೀಶ್ ಸರಿಯಾಗಿ ರೆಸ್ಪಾನ್ಸ್ ಮಾಡದೇ ಹೋಗಿದ್ದಕ್ಕೆ ಬಿಂದು ಯತೀಶ್ ಅವರಿಗೆ ಮತ್ತೆ ಕಾಲ್ ಮಾಡಿದಾಗ ಕೋಚ್ ಪತ್ನಿ ಶ್ವೇತಾ ಜಿ.ಕೆ ಉತ್ತರಿಸಿದ್ದಾರೆ. ಈ ವೇಳೆ ಇಬ್ಬರ ನಡುವೆ ಒಂದಷ್ಟು ವಾಗ್ವಾದ ನಡೆದಿದೆ. ಆ ವಿಚಾರವಾಗಿ ಶ್ವೇತಾ ಸ್ಟೇಡಿಯಂಗೆ ಬಂದು ಬಿಂದುರಾಣಿ ಜೊತೆ ಗಲಾಟೆ ಮಾಡಿಕೊಂಡಿದ್ದಲ್ಲದೆ ಬಿಂದು ಅವರನ್ನು ನಿಂದಿಸಿ ಅವರ ಮೇಲೆ ಹಲ್ಲೆಗೆ ಪ್ರಯತ್ನಿಸಿದ್ದರು. ಇದನ್ನೂ ಓದಿ: ಕೋಚ್ ಪತ್ನಿಯಿಂದ ಅಥ್ಲಿಟ್ ಮೇಲೆ ಹಲ್ಲೆ- ವೀಡಿಯೋ ವೈರಲ್

    ಘಟನೆ ಸಂಬಂಧ ಬಿಂದುರಾಣಿ ಸಂಪಂಗಿ ರಾಮ ನಗರ ಪೊಲೀಸ್ ಠಾಣೆಯಲ್ಲಿ ಶ್ವೇತಾ.ಜಿ.ಕೆ ಹಾಗೂ ಅವರ ಪತಿ ಯತೀಶ್ ವಿರುದ್ಧ ಮಾನಹಾನಿ ಹಾಗೂ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ್ದಾರೆಂದು ದೂರು ನೀಡಿದ್ದಾರೆ. ಬಿಂದುರಾಣಿ ಕೊಟ್ಟ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲು ಮಾಡಿಕೊಂಡಿರುವ ಸಂಪಂಗಿ ರಾಮನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಲವರ್ ಜೊತೆ ಸೇರಿ ಗಂಡನನ್ನೇ ಕೊಲೆ ಮಾಡಿದ್ಳು – ಪತ್ನಿ ಸೇರಿ ಐವರು ಅರೆಸ್ಟ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೋಚ್ ಪತ್ನಿಯಿಂದ ಅಥ್ಲಿಟ್ ಮೇಲೆ ಹಲ್ಲೆ- ವೀಡಿಯೋ ವೈರಲ್

    ಕೋಚ್ ಪತ್ನಿಯಿಂದ ಅಥ್ಲಿಟ್ ಮೇಲೆ ಹಲ್ಲೆ- ವೀಡಿಯೋ ವೈರಲ್

    ಬೆಂಗಳೂರು: ಖಾಸಗಿ ಕಾರ್ಯಕ್ರಮವೊಂದರ ವೀಡಿಯೋ ವಾಟ್ಸಪ್‌ನಲ್ಲಿ ಹಂಚಿಕೊಂಡ ಕುರಿತಾಗಿ ಕೋಚ್ ಪತ್ನಿ ಮತ್ತು ಅಥ್ಲಿಟ್ (Athlete) ಮಧ್ಯೆ ವಾಗ್ವಾದ ಶುರುವಾಗಿದ್ದು, ಕೋಚ್ (Coach) ಪತ್ನಿ ಅಥ್ಲಿಟ್ ಮೇಲೆ ಹಲ್ಲೆ ಮಾಡಿರುವ ವೀಡಿಯೋ ಎಲ್ಲೆಡೆ ವೈರಲ್ ಆಗಿದೆ.

    ಬೆಂಗಳೂರಿನ (Bengaluru) ಕಂಠೀರವ ಮೈದಾನದಲ್ಲಿ (Kanteerava Stadium) ಘಟನೆ ನಡೆದಿದ್ದು, ಬಿಂದುರಾಣಿ ಎಂಬ ಅಥ್ಲಿಟ್ ಬೆಳಗ್ಗೆ ಪ್ರಾಕ್ಟಿಸ್‌ಗೆಂದು ಹೋದ ವೇಳೆ ಶ್ವೇತಾ ಎಂಬ ಮಹಿಳೆ ಆಕೆಯನ್ನು ನಿಂದನೆ ಮಾಡಿ ಹಲ್ಲೆಗೆ ಯತ್ನಿಸಿದ್ದಾರೆ. ಈ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅಥ್ಲಿಟ್ ಬಿಂದುರಾಣಿ, ಖಾಸಗಿ ಕಾರ್ಯಕ್ರಮವೊಂದರ ವೀಡಿಯೋವೊಂದನ್ನು ಕೋಚ್‌ಗಳ ವಾಟ್ಸಪ್ ಗ್ರೂಪ್‌ನಲ್ಲಿ ಶೇರ್ ಮಾಡಿದ್ದೆ. ಆ ವಿಡಿಯೋದಲ್ಲಿ ತಪ್ಪು ಮಾಹಿತಿ ನೀಡಿದ್ದೀಯಾ ಎಂದು ಕೋಚ್ ಯತೀಶ್ ಎಂಬವರ ಪತ್ನಿ ಹಲ್ಲೆಗೆ ಯತ್ನಿಸಿದ್ದಾರೆ ಎಂದರು. ಇದನ್ನೂ ಓದಿ: ಶಾಸಕ ಸತೀಶ್ ರೆಡ್ಡಿಗೆ ಮಾತೃವಿಯೋಗ

    ತಪ್ಪು ಮಾಹಿತಿ ನೀಡಿದ್ದೀಯಾ ಎಂದು ಕೋಚ್ ಗ್ರೂಪ್‌ನಲ್ಲಿ ಪ್ರಶ್ನೆ ಮಾಡಿದ್ದರು. ಈ ಕುರಿತು ಗ್ರೂಪ್‌ನಲ್ಲಿ ಸ್ಪಷ್ಟನೆ ಕೊಡದೆ ನೇರವಾಗಿ ಕಾಲ್ ಮಾಡಿದೆ. ಕೆಲವೇ ನಿಮಿಷದಲ್ಲಿ ಕಾಲ್ ಕಟ್ ಆಯಿತು. ನಾನು ಅಲ್ಲಿಗೆ ಸುಮ್ಮನಾದೆ. ಆ ಘಟನೆ ಆದ ಬಳಿಕ ಇಂದು ಬೆಳಗ್ಗೆ ಕೋಚ್ ಯತೀಶ್ ಅವರ ಪತ್ನಿ ಬಂದು ಗಲಾಟೆ ಮಾಡಿದ್ದಾರೆ. ನಾನು ವಿಷಯ ದೊಡ್ಡದು ಮಾಡುವುದು ಬೇಡವೆಂದು ಸುಮ್ಮನಾದೆ. ಘಟನೆಯ ಸಂಬಂಧ ಅಥ್ಲೆಟಿಕ್ ಅಸೋಸಿಯೇಷನ್‌ಗೆ ದೂರು ನೀಡುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: 20 ಬಾಕ್ಸ್ ಟೊಮೆಟೋ 58 ಸಾವಿರಕ್ಕೆ ಮಾರಾಟ- ರೈತ ಫುಲ್ ಖುಷ್

    ಬಿಂದುರಾಣಿ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾದ ಶ್ವೇತಾ ಜಿ.ಕೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದು, ಖೇಲ್‌ರತ್ನ ಪ್ರಶಸ್ತಿ ಸಂಬಂಧ ಪೋಸ್ಟ್ ಮಾಡಿಕೊಂಡಿದ್ದಕ್ಕೆ ನನ್ನ ಗಂಡ ಯತೀಶ್ ಬಿಂದುಗೆ ಗ್ರೂಪ್‌ನಲ್ಲಿಯೇ ಪ್ರಶ್ನೆ ಮಾಡಿದ್ದರು. ಕೋಚ್‌ಗ್ರೂಪ್‌ನಲ್ಲಿ ಉತ್ತರ ಕೊಡಬೇಕಿದ್ದ ಬಿಂದುರಾಣಿ, ರಾತ್ರಿ 10 ಗಂಟೆಗೆ ಆಕೆಯ ಗಂಡನ ಕಡೆಯಿಂದ ನನ್ನ ಪತಿ ಯತೀಶ್‌ಗೆ ಕಾಲ್ ಮಾಡಿಸಿ ಬೆದರಿಕೆ ಹಾಕಿಸಿದ್ದಾಳೆ. ನನ್ನ ಪತಿ ಕಾಲ್ ಕಟ್ ಮಾಡಿದ ನಂತರ ಕಾಲು ಗಂಟೆಯಲ್ಲಿ ಮತ್ತೊಮ್ಮೆ ಕರೆ ಮಾಡಿದ್ದಾರೆ. ಈ ವೇಳೆ ನಾನು ಕಾಲ್ ರಿಸೀವ್ ಮಾಡಿ ಮಾತನಾಡುವಾಗ, ನನಗೆ ದೊಡ್ಡವರು ಗೊತ್ತು. ನಿಮ್ಮನ್ನು ಸ್ಟೇಡಿಯಂನಿಂದಲೇ ಹೊರಹಾಕಿಸುತ್ತೇನೆ ಎಂದು ಹೇಳಿದ್ದಾಳೆ. ಆ ಕಾರಣಕ್ಕಾಗಿ ಶನಿವಾರವೇ ಹೋಗಿದ್ದೆ. ಆದರೆ ಸಿಗಲಿಲ್ಲ. ಹಾಗಾಗಿ ಇವತ್ತು ಹೋಗಿ ಮಾತನಾಡಿದೆ ಎಂದರು. ಇದನ್ನೂ ಓದಿ: ಡಿಪೋ ಆವರಣದಲ್ಲಿ ನೇಣಿಗೆ ಶರಣಾದ ಸಾರಿಗೆ ನೌಕರ

    ಬಿಂದು ನಾನು ಮೊದಲಿನಿಂದಲೇ ಒಟ್ಟಿಗೆ ಅಭ್ಯಾಸ ಮಾಡಿದ ಪರಿಚಯ ಇದ್ದ ಕಾರಣ ಏರುಧ್ವನಿಯಲ್ಲಿ ಮಾತನಾಡಿದ್ದು ನಿಜ. ಬಿಂದುರಾಣಿ ಗಂಡನ ಕಡೆಯಿಂದ ಕಾಲ್ ಮಾಡಿಸಿದ್ದಕ್ಕೆ ನಾನು ನನ್ನ ಗಂಡನ ಪರವಾಗಿ ಹೋಗಿ ಮಾತನಾಡಿದ್ದೇನೆ. ಬಿಂದುರಾಣಿ ಈ ಹಿಂದೆ ನಮ್ಮ ಬಾಕ್ಸ್‌ನಿಂದ ಒಂದು ಲಕ್ಷ ಕಳ್ಳತನ ಮಾಡಿದ್ದಳು. ಹಿರಿಯರು ಮಧ್ಯಪ್ರವೇಶ ಮಾಡಿದ್ದರಿಂದ ದೂರು ಕೊಟ್ಟಿರಲಿಲ್ಲ. ಅವಳು ಕಾನೂನಾತ್ಮಕವಾಗಿ ಹೋದರೆ ನಾನೂ ಕಾನೂನಾತ್ಮಕವಾಗಿ ಹೋಗುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಎಲ್ಲಾ ರೀತಿಯಲ್ಲೂ ಬಳಸಿಕೊಂಡು ಮದುವೆ ನಿರಾಕರಣೆ- ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ದುರ್ಮರಣ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪದಗ್ರಹಣ ಕಾರ್ಯಕ್ರಮಕ್ಕೆ ಆಗಮಿಸಿದ ಅಭಿಮಾನಿಗಳಿಂದ ನೂಕುನುಗ್ಗಲು- ಇಬ್ಬರಿಗೆ ಗಾಯ

    ಪದಗ್ರಹಣ ಕಾರ್ಯಕ್ರಮಕ್ಕೆ ಆಗಮಿಸಿದ ಅಭಿಮಾನಿಗಳಿಂದ ನೂಕುನುಗ್ಗಲು- ಇಬ್ಬರಿಗೆ ಗಾಯ

    ಬೆಂಗಳೂರು: ನಗರದ ಕಂಠೀರವ ಸ್ಟೇಡಿಯಂ (Kanteerava Stadium) ನಲ್ಲಿ ನಡೆಯಲಿರುವ ಪದಗ್ರಹಣ (Oath) ಕಾರ್ಯಕ್ರಮಕ್ಕೆ ಈಗಾಗಲೇ ಅಭಿಮಾನಿಗಳ ದಂಡು ಆಗಮಿಸಿದ್ದು, ನೂಕುನುಗ್ಗಲು ಕೂಡ ಉಂಟಾಗಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ.

    ಹೌದು. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Siddaramaiah) ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಜೊತೆ 8 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಮಧ್ಯಾಹ್ನ 12.30ರ ಸುಮಾರಿಗೆ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದ್ದು, ಈಗಾಗಲೇ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳ ದಂಡು ಹರಿದುಬಂದಿದೆ.

    ಸದ್ಯ ಸ್ಟೇಡಿಯಂನ ಪ್ರವೇಶ ದ್ವಾರವನ್ನು ಸಾರ್ವಜನಿಕರಿಗಾಗಿ ಓಪನ್ ಮಾಡಲಾಗಿದ್ದು, ಸಾವಿರಾರು ಸಂಖ್ಯೆಯಲ್ಲಿ ಜನ ಒಳಗಡೆ ನುಗ್ಗಿದ್ದಾರೆ. ಸಾರ್ವಜನಿಕರನ್ನು ಕಂಟ್ರೋಲ್ ಮಾಡಲು ಪೊಲೀಸರ ಸಾಹಸಪಡಬೇಕಾಯಿತು. ತಳ್ಳಾಟದಲ್ಲಿ ಒಬ್ಬರು ಅಸ್ವಸ್ಥರಾಗಿ ಕೆಳಗಡೆ ಬಿದ್ದ ಪ್ರಸಂಗ ನಡೆದಿದೆ. ಓರ್ವ ಪೊಲೀಸ್‍ಗೂ ಗಾಯಗಳಾಗಿದೆ. ಕೂಡಲೇ ಪೊಲೀಸರು ಗಾಯಾಳುಗಳನ್ನು ಎತ್ತಿಕೊಂಡು ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಇನ್ನು ಕಂಠೀರವ ಸ್ಟೇಡಿಯಂ ಹೊರಭಾಗದಲ್ಲಿ ಅಭಿಮಾನಿ, ಕಾರ್ಯಕರ್ತರು ಸಿದ್ದರಾಮಯ್ಯ ಅವರಿಗೆ ಜೈಕಾರ ಹಾಕಿ ಸಂಭ್ರಮ ಪಡುತ್ತಿದ್ದಾರೆ. ಕುಣಿದು ಕುಪ್ಪಳಿಸುತ್ತಿದ್ದಾರೆ. ಕಂಠೀರವ ರಸ್ತೆ ಫುಲ್ ಫ್ಲೆಕ್ಸ್ ಮಯವಾಗಿದ್ದು, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸಿದ್ದರಾಮಯ್ಯ ಹಾಗೂ ಡಿಕೆಶಿಯ ಆಳೆತ್ತರದ ಕಟೌಟ್ ಹಾಕಿದ್ದಾರೆ. ಇಡೀ ರಸ್ತೆಯಲ್ಲಿ ನಾಯಕರಿಗೆ ಶುಭಾಶಯ ಕೋರಿ ಫ್ಲೆಕ್ಸ್ ಅಳವಡಿಕೆ ಮಾಡಲಾಗಿದೆ. ರಕ್ಷಾ ರಾಮಯ್ಯ ಹಾಗೂ ನಲಪಾಡ್ ಟೀಂ ನಿಂದ ಇಡೀ ರಸ್ತೆಯಲ್ಲಿ ಫ್ಲೆಕ್ಸ್ ಹಾಕಿ ಶುಭಾಶಯ ಕೋರಲಾಗಿದೆ.

     

  • ನಾಳೆ ಪುನೀತ್ ಸಮಾಧಿಗೆ ಕುಟುಂಬಸ್ಥರಿಂದ ಹಾಲು ತುಪ್ಪ ಕಾರ್ಯ – ಕಂಠೀರವ ಸ್ಟುಡಿಯೋ ಬಳಿ ಪೊಲೀಸರ ಸರ್ಪಗಾವಲು

    ನಾಳೆ ಪುನೀತ್ ಸಮಾಧಿಗೆ ಕುಟುಂಬಸ್ಥರಿಂದ ಹಾಲು ತುಪ್ಪ ಕಾರ್ಯ – ಕಂಠೀರವ ಸ್ಟುಡಿಯೋ ಬಳಿ ಪೊಲೀಸರ ಸರ್ಪಗಾವಲು

    ಬೆಂಗಳೂರು: ಪುನೀತ್ ರಾಜ್‍ಕುಮಾರ್ ಅಗಲಿ ಇಂದಿಗೆ ನಾಲ್ಕು ದಿನ ಕಳೆದಿದ್ದು, 5ನೇ ದಿನದ ಹಾಲು ತುಪ್ಪ ಕಾರ್ಯ ಮುಗಿಯುವವರೆಗೂ ಸಮಾಧಿ ವೀಕ್ಷಣೆಗೆ ಸಾರ್ವಜನಿಕರನ್ನು ನಿರ್ಬಂಧಿಸಲಾಗಿದೆ. ನಾಳೆ ಸಮಾಧಿ ವೀಕ್ಷಣೆಗಾಗಿ ಹೆಚ್ಚು ಸಂಖ್ಯೆಯಲ್ಲಿ ಅಭಿಮಾನಿಗಳು ಬರುವ ಸಾಧ್ಯತೆ ಇರುವ ಕಾರಣ ಸದ್ಯ ಕಂಠೀರವ ಸ್ಟೂಡಿಯೋ ಬಳಿ ಪೊಲೀಸರು ಬಿಗಿ ಭದ್ರತೆಗೊಳಿಸಿದ್ದಾರೆ.

    ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಮಣ್ಣಲ್ಲಿ ಮಣ್ಣಾಗಿ ಒಂದು ದಿನ ಕಳೆದಿದ್ದು, ಇಂದು ಮತ್ತು ನಾಳೆ ಸಾರ್ವಜನಿಕರಿಗೆ ಕಂಠೀರವ ಸ್ಟುಡಿಯೋ ಪ್ರವೇಶವನ್ನು ನಿಷೇಧಿಸಲಾಗಿದೆ. ಈಗಾಗಲೇ ಪುನೀತ್ ಅವರ ಅನೇಕ ಅಭಿಮಾನಿಗಳು ಕಂಠೀರವ ಸ್ಟುಡಿಯೋಸ್ ಬಳಿ ಬಂದು ವಾಪಾಸ್ ಆಗುತ್ತಿದ್ದಾರೆ. ಇದನ್ನೂ ಓದಿ: ಅಪ್ಪುರನ್ನು ಪ್ರತಿ ದಿನವೂ ಆರಾಧಿಸೋಣ: ರಮ್ಯಾ

    ನಾಳೆ ಅಪ್ಪು ಸಮಾಧಿಗೆ ಕುಟುಂಬಸ್ಥರು ಹಾಲುತುಪ್ಪ ಕಾರ್ಯನೆರವೇರಿಸಲಿದ್ದು, ಕೇವಲ ವಿಐಪಿಗಳು ಹಾಗೂ ಕುಟುಂಬ ಸದಸ್ಯರನ್ನ ಹೊರತುಪಡಿಸಿ ಬೇರೆ ಯಾರೂ ಸಹ ಕಂಠೀರವ ಸ್ಟುಡಿಯೋ ಒಳಗೆ ಬರುವಂತಿಲ್ಲ. ಹೀಗಾಗಿ ಕಂಠೀರವ ಸ್ಟುಡಿಯೋ ಬಳಿ ಸಂಪೂರ್ಣ ಬ್ಯಾರಿಗೇಡ್ ಹಾಕಿ ಆರ್‌ಎಎಫ್ ಕಮಾಂಡೋ ಪಡೆ, ಎರಡು ಕೆಎಸ್‌ಆರ್‌ಪಿ ತುಕಡಿಯನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ಉಪ್ಪಿನಲ್ಲಿ ಚಿತ್ರ ಬಿಡಿಸಿ ಅಪ್ಪುಗೆ ವಿಶೇಷ ವಿದಾಯ ಹೇಳಿದ ತೆಲುಗು ಅಭಿಮಾನಿ

    ಈ ಮಧ್ಯೆ ಅಭಿಮಾನಿಯೊಬ್ಬರು ದಿವಂಗತ ಪುನೀತ್ ರಾಜ್ ಕುಮಾರ್ ಸಮಾಧಿಗೆ ಹಾಕಲು ಸುಗಂಧರಾಜ ಹಾಗೂ ಚೆಂಡುಹೂವಿನ ಹಾರವನ್ನು ತಂದಿದ್ದಾರೆ. ಆದರೆ ಒಳಗೆ ಹೋಗಲು ಅವಕಾಶ ಇಲ್ಲದ ಹಿನ್ನೆಲೆ ಪೋಲಿಸ್ ಸಿಬ್ಬಂದಿಗೆ ಹೂ ಕೊಟ್ಟು ಹೋಗಿದ್ದಾರೆ.

  • ಭಾನುವಾರ ಬೆಳಗ್ಗೆ 5:30ರಿಂದ ಪುನೀತ್ ರಾಜ್‍ಕುಮಾರ್ ಅಂತಿಮಯಾತ್ರೆ

    ಭಾನುವಾರ ಬೆಳಗ್ಗೆ 5:30ರಿಂದ ಪುನೀತ್ ರಾಜ್‍ಕುಮಾರ್ ಅಂತಿಮಯಾತ್ರೆ

    ಬೆಂಗಳೂರು: ಸ್ಯಾಂಡಲ್‍ವುಡ್ ರಾಜಕುಮಾರ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ನಾಳೆ ನಡೆಯಲಿದ್ದು, ಭಾನುವಾರ ಬೆಳಗ್ಗೆ 5:30 ಗಂಟೆಯಿಂದ 6:30 ಗಂಟೆವರೆಗೆ ಅಂತಿಮಯಾತ್ರೆ ನಡೆಯಲಿದೆ. ಕಂಠೀರವ ಸ್ಟೇಡಿಯಂನಿಂದ ಅಂತ್ಯಕ್ರಿಯೆ ನಡೆಯುವ ಕಂಠೀರವ ಸ್ಟುಡಿಯೋಗೆ ನಟ ಪುನೀತ್ ರಾಜ್‍ಕುಮಾರ್ ಪಾರ್ಥಿವ ಶರೀರ ಕೊಂಡೊಯ್ಯಲು ರಾಜ್ಯ ಸರ್ಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.

    PUNEET

    ಅಪ್ಪ-ಅಮ್ಮನ ಸಮಾಧಿ ಪಕ್ಕದಲ್ಲೇ ಅಪ್ಪು ಅಂತ್ಯಕ್ರಿಯೆ ನಡೆಯಲಿದೆ. ಭಾನುವಾರ ಬೆಳಗ್ಗೆ 11 ಗಂಟೆಹೊತ್ತಿಗೆ ಅಂತಿಮ ವಿಧಿ ವಿಧಾನ ಮುಗಿಸಲು ಸರ್ಕಾರ ಸಿದ್ಧತೆ ಮಾಡಿಕೊಂಡಿದ್ದು, ಶನಿವಾರವೇ ಅಂತ್ಯಕ್ರಿಯೆಯ ಸ್ಥಳ ನಿಗದಿ ಮಾಡಿ ಗುಂಡಿ ಕೂಡ ಅಗೆಯಲಾಗಿದೆ. ಸಚಿವರಾದ ಮುನಿರತ್ನ, ಗೋಪಾಲಯ್ಯ, ಆರಗ ಜ್ಞಾನೇಂದ್ರ ಅಂತ್ಯಕ್ರಿಯೆಯ ಸ್ಥಳವನ್ನು ಪರಿಶೀಲಿಸಿದ್ದು, ನಾಳೆ ರಾಘವೇಂದ್ರ ರಾಜ್‍ಕುಮಾರ್ ಪುತ್ರ ವಿನಯ್ ರಾಜ್‍ಕುಮಾರ್ ಅಂತಿಮ ವಿಧಿವಿಧಾನ ನೆರವೇರಿಸುವ ಸಾಧ್ಯತೆಗಳಿವೆ. ಇದನ್ನೂ ಓದಿ: ತಂದೆ ಅಂತಿಮ ದರ್ಶನ ಪಡೆದ ಪುತ್ರಿ ಧೃತಿ

    ಮಾರ್ಗ ಯಾವುದು?
    ಪಾರ್ಥಿವ ಶರೀರ ಸಾಗುವ ರೂಟ್ ಮ್ಯಾಪನ್ನು ಸಿದ್ಧಪಡಿಸಲಾಗಿದೆ. ಆರ್‌ಆರ್‌ಎಂಆರ್‌ ರೋಡ್, ಹಡ್ಸನ್ ಸರ್ಕಲ್, ಕೆಜಿ ರೋಡ್, ಮೈಸೂರು ಬ್ಯಾಂಕ್ ಸರ್ಕಲ್, ಪೋಸ್ಟ್ ಆಫೀಸ್ ರಸ್ತೆ, ಕೆಆರ್ ಸರ್ಕಲ್ ಎಡ ತಿರುವು, ಶೇಷಾದ್ರಿ ರಸ್ತೆ, ಮಹಾರಾಣಿ ಮೇಲ್ಸೇತುವೆ, ಸಿಐಡಿ ಜಂಕ್ಷನ್, ಚಾಲುಕ್ಯ ವೃತ್ತ, ಹಳೆ ಹೈಗ್ರೌಂಡ್ಸ್ ಜಂಕ್ಷನ್, ಟಿ ಚೌಡಯ್ಯ ರಸ್ತೆ, ವಿಂಡ್ಸರ್ ಮ್ಯಾನರ್ ಜಂಕ್ಷನ್, ಪಿಜಿ ಹಳ್ಳಿ ಕ್ರಾಸ್, ಕಾವೇರಿ ಜಂಕ್ಷನ್, ಭಾಷ್ಯಂ ಸರ್ಕಲ್, ಸ್ಯಾಂಕಿ ರೋಡ್, ಮಲ್ಲೇಶ್ವರಂ 18ನೇ ಕ್ರಾಸ್, ಮಾರಮ್ಮ ಸರ್ಕಲ್, ಬಿಹೆಚ್‍ಇಎಲ್ ಸರ್ಕಲ್, ಯಶವಂತಪುರ ಸರ್ಕಲ್, ಗೋವರ್ಧನ್ ಥಿಯೇಟರ್, ಗೊರಗುಂಟೆ ಪಾಳ್ಯ ಮಾರ್ಗವಾಗಿ ಕಂಠೀರವ ಸ್ಟುಡಿಯೋ ತಲುಪಲಿದೆ. ಯಾವ ಸ್ವಾಮೀಜಿ ನೇತೃತ್ವದಲ್ಲಿಯೂ ವಿಶೇಷ ಪೂಜೆಗಳು ಇರುವುದಿಲ್ಲ. ಈಡಿಗ ಸಂಪ್ರದಾಯದಂತೆ ನಾವೇ ಎಲ್ಲಾ ವಿಧಿವಿಧಾನ ಪೂರೈಸುತ್ತೇವೆ ಎಂದು ಪುನೀತ್ ಮಾವ, ನಿರ್ಮಾಪಕ ಚಿನ್ನೇಗೌಡ ತಿಳಿಸಿದ್ದಾರೆ. ಇದನ್ನೂ ಓದಿ: ಪತಿ ನಿಧನದ ಸುದ್ದಿ ಕೇಳ್ತಿದ್ದಂತೆ ಕಣ್ಣೀರಿಡುತ್ತಲೇ ಮೌನಕ್ಕೆ ಶರಣಾದ ಪತ್ನಿ ಅಶ್ವಿನಿ

  • ಇಂದು ಸಂಜೆಯೇ ನಟ  ಪುನೀತ್ ಅಂತ್ಯಕ್ರಿಯೆ

    ಇಂದು ಸಂಜೆಯೇ ನಟ  ಪುನೀತ್ ಅಂತ್ಯಕ್ರಿಯೆ

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪುನೀತ್ ರಾಜ್‍ಕುಮಾರ್ ಅವರು ಶುಕ್ರವಾರ ಹೃದಯಘಾತದಿಂದ ನಿಧನರಾಗಿದ್ದಾರೆ. ಇದೀಗ ಇಂದು ಸಂಜೆಯೇ ಪುನೀತ್ ಅವರ ಅಂತ್ಯಕ್ರಿಯೆಯನ್ನು ಕಂಠೀರವ ಸ್ಟೇಡಿಯಂನಲ್ಲಿ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.

    ಚಂದನವನದ ದೊಡ್ಮನೆ ಹುಡುಗ ಪುನೀತ್ ರಾಜ್‍ಕುಮಾರ್ ಅವರು ಶುಕ್ರವಾರ ಬೆಳಗ್ಗೆ ಸಾವನ್ನಪ್ಪಿದ್ದು, ಅವರ ಅಂತ್ಯಕ್ರಿಯೆಯನ್ನು ಇಂದು ಸಂಜೆ 5.30ರ ಸುಮಾರಿಗೆ ನಡೆಸಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ. ನೆಚ್ಚಿನ ನಟನ ಅಂತಿಮ ದರ್ಶನವನ್ನು ಪಡೆಯಲು ಅಭಿಮಾನಿಗಳಿಗೆ ಇಂದು ಮಧ್ಯಾಹ್ನ 3 ಗಂಟೆಯವರಿಗೂ ವ್ಯವಸ್ಥೆಗೊಳಿಸಲಾಗಿದ್ದು, ನಂತರ ಕಂಠೀರವ ಸ್ಟುಡಿಯೋದವರೆಗೂ ಮೆರವಣಿಗೆ ನಡೆಸಲಾಗುತ್ತದೆ.  ಇದನ್ನೂ ಓದಿ:   ಪತಿ ನಿಧನದ ಸುದ್ದಿ ಕೇಳ್ತಿದ್ದಂತೆ ಕಣ್ಣೀರಿಡುತ್ತಲೇ ಮೌನಕ್ಕೆ ಶರಣಾದ ಪತ್ನಿ ಅಶ್ವಿನಿ

    ಹೀಗಾಗಿ ಕುಟುಂಬಸ್ಥರು 3 ಗಂಟೆಯ ಬಳಿಕ ಅಭಿಮಾನಿಗಳು ಕಂಠೀರವ ಸ್ಟುಡಿಯೋ ಬರದಂತೆ ಮನವಿ ಮಾಡಿದ್ದಾರೆ. ಪುನೀತ್ ಪುತ್ರಿ ಧ್ರುತಿ ನ್ಯೂಯಾರ್ಕ್‍ನಿಂದ ದೆಹಲಿಗೆ ಆಗಮಿಸಿ, ಅಲ್ಲಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಸಂಜೆ 4.15ಕ್ಕೆ ಆಗಮಿಸಲಿದ್ದಾರೆ. ಧ್ರುತಿ ಅವರು ಬಂದ ನಂತರ ಸಕಲ ಸರ್ಕಾರಿ ಗೌರವಗಳೊಂದಿಗೆ ಪುನೀತ್ ಅಂತ್ಯಕ್ರಿಯೆ ನಡೆಸಲಾಗುತ್ತದೆ. ಇನ್ನೂ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಕೇವಲ ಆಪ್ತವಲಯಕ್ಕಷ್ಟೇ ಅವಕಾಶ ಕಲ್ಪಿಸಿಕೊಡಲಾಗಿದೆ. ಇದನ್ನೂ ಓದಿ: ಅಪ್ಪು ಅಗಲಿಕೆಗೆ ಮಂತ್ರಾಲಯ ಶ್ರೀಗಳಿಂದ ಸಂತಾಪ

  • ಬೆಸ್ಕಾಂನಿಂದ ವಾಕ್ ಥಾನ್ – ಡಿಕೆಶಿ ಸೇರಿದಂತೆ ಕಿರುತೆರೆ ನಟಿಯರು ಭಾಗಿ

    ಬೆಸ್ಕಾಂನಿಂದ ವಾಕ್ ಥಾನ್ – ಡಿಕೆಶಿ ಸೇರಿದಂತೆ ಕಿರುತೆರೆ ನಟಿಯರು ಭಾಗಿ

    ಬೆಂಗಳೂರು: ವಿದ್ಯುತ್ ಉಳಿತಾಯದ ಸಂದೇಶ ಸಾರುವ ಉದ್ದೇಶದಿಂದ ಬೆಸ್ಕಾಂನಿಂದ ನಗರದಲ್ಲಿ ವಾಕ್ ಥಾನ್ ಹಮ್ಮಿಕೊಳ್ಳಲಾಗಿತ್ತು.

    ಇಂಧನ ಸಚಿವ ಡಿಕೆ ಶಿವಕುಮಾರ್, ನಟಿ ಮಯೂರಿ ಮತ್ತು ಪುಟ್ಟಗೌರಿ ಖ್ಯಾತಿ ರಂಜಿನಿ ಸೇರಿದಂತೆ ಹಲವು ಕಿರುತೆರೆ ನಟಿಯರು ವಾಕ್ ಥಾನ್‍ನಲ್ಲಿ ಪಾಲ್ಗೊಂಡಿದ್ದರು. ಕಂಠೀರವ ಸ್ಟೇಡಿಯಂನಿಂದ ಕಬ್ಬನ್‍ಪಾರ್ಕ್ ವರೆಗೆ ಜಾಗೃತಿ ಜಾಥ ನಡೆದಿದ್ದು, ವಿದ್ಯುತ್ ಉಳಿತಾಯ ಸಂದೇಶವನ್ನು ನೀಡಿದ್ದಾರೆ.

    ಕರ್ನಾಟಕ ರಾಜ್ಯದಲ್ಲಿ ವಿದ್ಯುತ್ ಉಳಿತಾಯ ಮಾಡಬೇಕು. ವಿದ್ಯುತ್ ನ ಒಂದು ಯುನಿಟ್ ಉಳಿಸಿದರೆ, ನಾವು ಒಂದು ಯುನಿಟ್ ಸಂಪಾದನೆ ಮಾಡಿದಂತೆ ಆಗುತ್ತದೆ. ನಾವು ಇವತ್ತು ನೂರಾರು ಸೈಕಲ್ ಇಟ್ಟಿದ್ದೇವೆ. ಆ ಸೈಕಲಿನಲ್ಲಿ ವಿದ್ಯುತ್ ಜನರೇಟ್ ಮಾಡಬಹುದು. ಈ ರೀತಿ ಸೈಕಲ್ ನನ್ನು ಮನೆಯಲ್ಲಿ, ಜಿಮ್‍ಗಳಲ್ಲಿ ತುಳಿದರೆ ವಿದ್ಯುತ್ ಜನರೇಟ್ ಆಗುತ್ತದೆ. ನಮ್ಮ ಜನರಿಗೆ ಹಾಗೂ ಯುವ ಪೀಳಿಗೆಗೆ ಜಾಗೃತಿ ಮೂಡಿಸುವ ಸಲುವಾಗಿ ಈ ರೀತಿಯ ಒಂದು ಪ್ರಯೋಗ ಮಾಡುತ್ತಿದ್ದೇವೆ ಎಂದು ಡಿಕೆ ಶಿವಕುಮಾರ್ ಹೇಳಿದರು.