Tag: Kantirava Studio

  • ಪುನೀತ್ ರಾಜ್‌ಕುಮಾರ್ 50ನೇ ಹುಟ್ಟುಹಬ್ಬ – ಅಪ್ಪು ಸಮಾಧಿ ಬಳಿ ಅಭಿಮಾನಿಗಳ ಸಂಭ್ರಮಾಚರಣೆ

    ಪುನೀತ್ ರಾಜ್‌ಕುಮಾರ್ 50ನೇ ಹುಟ್ಟುಹಬ್ಬ – ಅಪ್ಪು ಸಮಾಧಿ ಬಳಿ ಅಭಿಮಾನಿಗಳ ಸಂಭ್ರಮಾಚರಣೆ

    ಬೆಂಗಳೂರು: ಅಭಿಮಾನಿಗಳ ಆರಾಧ್ಯ ದೈವ ಪುನೀತ್ ರಾಜ್‌ಕುಮಾರ್‌ಗೆ (Punith Rajkumar) 50ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಬಾರದ ಲೋಕಕ್ಕೆ ಹೋಗಿದ್ದರೂ ಅಪ್ಪು ಅಭಿಮಾನಿಗಳ ಪ್ರೀತಿ, ವಿಶ್ವಾಸ, ಹುಟ್ಟುಹಬ್ಬ ಆಚರಿಸುವ ಉತ್ಸಾಹ ಕಿಂಚಿತ್ತೂ ಕಮ್ಮಿಯಾಗಿಲ್ಲ. ಜೊತೆಗಿರದ ಜೀವವನ್ನು ಜೀವಂತವಾಗಿಸಿಕೊಂಡ ಅಭಿಮಾನಿಗಳು ರಾತ್ರಿಯಿಂದಲೇ ಕಂಠೀರವ ಸ್ಟುಡಿಯೋದಲ್ಲಿರುವ ಅಪ್ಪು ಸಮಾಧಿ ಬಳಿ ಹುಟ್ಟುಹಬ್ಬ ಆಚರಣೆಯಲ್ಲಿ ತೊಡಗಿದ್ದಾರೆ.

    ಅದೆಷ್ಟು ವರ್ಷ ಕಳೆದರೂ ಸಹ ಅಪ್ಪು ಇಲ್ಲ ಎನ್ನುವುದನ್ನು ಅಭಿಮಾನಿಗಳು ಜೀರ್ಣಿಸಿಕೊಳ್ಳಲಾರರು. ಅಂದು ಕಣ್ಮುಂದಿದ್ದ ಅಪ್ಪು, ಈಗ ಕಣ್ಮುಂದಿನ ದೇವರಾಗಿದ್ದಾರೆ ಎಂಬುದು ಅಭಿಮಾನಿಗಳ ನಂಬಿಕೆಯಾಗಿದೆ. ಅದರಂತೆ ಅವರ 50ನೇ ವರ್ಷದ ಹುಟ್ಟುಹಬ್ಬವನ್ನ ಅಭಿಮಾನಿಗಳು ಭಾರೀ ಅದ್ದೂರಿಯಾಗಿ ಆಚರಿಸುತ್ತಿದ್ದಾರೆ. ಅಪ್ಪು ಸಮಾಧಿ ಬಳಿ ಜಾತ್ರೆಯ ವಾತಾವರಣ ನಿರ್ಮಾಣವಾಗಿದೆ. ಇದನ್ನೂ ಓದಿ: 59 ಬಾರಿ ಡ್ರಗ್ಸ್‌ ಸಾಗಾಟ ಮಾಡಿದ್ರೂ ವಿಮಾನ ನಿಲ್ದಾಣ ಸಿಕ್ಕಿ ಬಿದ್ದಿಲ್ಲ ಹೇಗೆ?

    ಕಂಠೀರವ ಸ್ಟುಡಿಯೋದಲ್ಲಿ ಇಂದು (ಮಾ.17) ಬೆಳಗ್ಗೆ 9 ಗಂಟೆ ಸುಮಾರಿಗೆ ಅಭಿಮಾನಿಗಳ ಸಮ್ಮುಖದಲ್ಲೇ ಅಪ್ಪು ಕುಟುಂಬಸ್ಥರು ಪೂಜೆ ಮಾಡಲಿದ್ದಾರೆ. ಬಳಿಕ ಸಮಾಧಿಯ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಇರುತ್ತದೆ. ನಾನಾ ಊರುಗಳಿಂದ ಸಾವಿರಾರು ಅಪ್ಪು ಅಭಿಮಾನಿಗಳು ಭೇಟಿ ಕೊಡುವ ನಿರೀಕ್ಷೆ ಇದೆ. ತಡರಾತ್ರಿ 12 ಗಂಟೆಯಿಂದ ಶುರುವಾದ ಅಪ್ಪು ಹುಟ್ಟುಹಬ್ಬ ಆಚರಣೆಯ£ನ್ನು ಇಂದು ಇಡೀ ದಿನ ಅಭಿಮಾನಿಗಳು ಹಬ್ಬದಂತೆ ಆಚರಿಸಲಿದ್ದಾರೆ.

    ಪುನೀತ್ ರಾಜ್‌ಕುಮಾರ್ ಹುಟ್ಟುಹಬ್ಬದ ದಿನವನ್ನು ಸ್ಫೂರ್ತಿ ದಿನ ಎಂದು ಸರ್ಕಾರ ಘೋಷಿಸಿದೆ. ಅದರಂತೆ ಸ್ಫೂರ್ತಿಯ ಚಿಲುಮೆ ಅಪ್ಪು ನೆನಪಲ್ಲಿ ರಾಜ್ಯದೆಲ್ಲೆಡೆ ಅಭಿಮಾನಿಗಳು ತಮ್ಮಿಷ್ಟ ಬಂದಂತೆ ಹುಟ್ಟುಹಬ್ಬ ಆಚರಿಸುತ್ತಿದ್ದಾರೆ. ಜೊತೆಗೆ ಕಂಠೀರವ ಸ್ಟುಡಿಯೋದಲ್ಲಂತೂ ಜಾತ್ರೆಯೇ ನಡೆಯಲಿದ್ದು ಅನ್ನದಾನ, ಉಚಿತ ಆರೊಗ್ಯ ತಪಾಸಣೆ, ರಕ್ತದಾನ ಶಿಬಿರ, ವ್ಯಾಪಾರ ವಹಿವಾಟು ಸೇರಿದಂತೆ ಅನೇಕ ಕಾರ್ಯಕ್ರಮಗಳು ನಡೆಯಲಿದೆ. ಇದನ್ನೂ ಓದಿ: 5 ವರ್ಷದಲ್ಲಿ ರಾಮ ಜನ್ಮಭೂಮಿ ಟ್ರಸ್ಟ್‌ನಿಂದ 400 ಕೋಟಿ ರೂ. ತೆರಿಗೆ ಪಾವತಿ!

    ಪುನೀತ್ ರಾಜ್‌ಕುಮಾರ್ ಇದ್ದಿದ್ದರೇ ಹೇಗೆಲ್ಲಾ ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಬೇಕು ಎಂದು ಫ್ಯಾನ್ಸ್ ಅಂದುಕೊಂಡಿದ್ದರೋ ಅದರಂತೆಯೇ ಅದ್ದೂರಿಯಾಗಿಯೇ ಆಚರಿಸಲಾಗುತ್ತಿದೆ. ಅಪ್ಪು ಕುಟುಂಬಸ್ಥರ ಜೊತೆ ಆಪ್ತರು ನಟ-ನಟಿಯರು ನಗುಮೊಗದ ಅರಸನ ಹುಟ್ಟುಹಬ್ಬಕ್ಕೆ ಕಳೆ ತುಂಬಲಿದ್ದಾರೆ. ಜೊತೆಗಿರದ ಈ ಯುವರತ್ನನನ್ನು ಕರುನಾಡು ಎಂದೆಂದಿಂಗೂ ಜೀವಂತವಾಗಿಸಿಕೊಂಡಿದೆ.

  • ಅಂಬರೀಶ್ ಹೆಸರಲ್ಲಿ ಏನೂ ಮಾಡಿಲ್ಲ ಅನ್ನೋ ಬೇಸರ ಅಭಿಮಾನಿಗಳಲ್ಲಿದೆ: ಸುಮಲತಾ

    ಅಂಬರೀಶ್ ಹೆಸರಲ್ಲಿ ಏನೂ ಮಾಡಿಲ್ಲ ಅನ್ನೋ ಬೇಸರ ಅಭಿಮಾನಿಗಳಲ್ಲಿದೆ: ಸುಮಲತಾ

    ಬೆಂಗಳೂರು: ಚಂದನವನದ ಹಿರಿಯ ನಟ ಅಂಬರೀಶ್ ಹೆಸರಲ್ಲಿ ಏನೂ ಮಾಡಿಲ್ಲ ಅನ್ನೋ ಬೇಸರ ಅಭಿಮಾನಿಗಳಲ್ಲಿದೆ ಎಂದು ಸಂಸದೆ ಸುಮಲತಾ ಅಂಬರೀಶ್ ಬೇಸರ ವ್ಯಕ್ತಪಡಿಸಿದರು.

    ಇಂದು ಅಂಬರೀಶ್ ಅವರ ಮೂರನೇ ವರ್ಷದ ಪುಣ್ಯತಿಥಿ ಹಿನ್ನೆಲೆ ಮಾಧ್ಯಮಗಳೊಂದಿಗೆ ಮಾತನಾಡಿದ ಪತ್ನಿ ಸುಮಲತಾ ಅಂಬರೀಶ್ ಅವರು, ಅಂಬರೀಶ್ ಇಲ್ಲವಾಗಿ 3 ವರ್ಷವಾಗಿದೆ. ಅವರ ಹೆಸರಲ್ಲಿ ಏನೂ ಮಾಡಿಲ್ಲ ಎನ್ನುವ ಬೇಸರ ಅಭಿಮಾನಿಗಳಲ್ಲಿದೆ. ಸ್ಮಾರಕ ಸೇರಿ ಎಲ್ಲೂ ಅಂಬರೀಶ್ ಅವರ ಹೆಸರು ಕೇಳಿಬಂದಿಲ್ಲ ಎಂದು ಅಭಿಮಾನಿಗಳ ಬೇಸರದ ಬಗ್ಗೆ ಹೇಳಿದರು. ಇದನ್ನೂ ಓದಿ: ಕಾವೇರಿದ ಮಂಡ್ಯ ಎಂಎಲ್‍ಸಿ ಚುನಾವಣೆ – ಯಾರಿಗೆ ಸಿಗುತ್ತೆ ಸುಮಲತಾ ಬೆಂಬಲ?

    ಅಭಿಮಾನಿಗಳಿಗೆ ಈ ಬಗ್ಗೆ ನೋವಿದೆ. ಅದಕ್ಕೆ ಹೋರಾಟ ಮಾಡ್ತೀವಿ ಅಂತಿದ್ದಾರೆ. ಆದರೆ ಹೋರಾಟದ ಸಮಯ ಇದಲ್ಲ ಎಂದು ಹೇಳಿದ್ದೀನಿ. ಅಪ್ಪು ಅಗಲಿಕೆಯ ನೋವು ಎಲ್ಲರನ್ನೂ ಕಾಡಿದೆ. ಈ ಸಮಯದಲ್ಲಿ ಹೋರಾಟ ಮಾಡಬಾರದು ಎಂದಿದ್ದೇನೆ ಎಂದು ತಿಳಿಸಿದರು.

    ಅಂಬರೀಶ್ ಅವರು ಯಾವ ಪ್ರಶಸ್ತಿ, ಹೆಸರನ್ನು ಕೇಳಿ ಪಡೆದಿರಲಿಲ್ಲ. ನಾವೂ ಸಹ ಅಂಬರೀಶ್ ಅವರಿಗೆ ಪ್ರಶಸ್ತಿ ಕೊಡಿ, ಅದು ಮಾಡಿ, ಇದು ಮಾಡಿ ಎಂದು ಕೇಳಲ್ಲ. ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಅಂಬಿ ತುಂಬಾ ಒಳ್ಳೇಯ ಸ್ನೇಹಿತರಾಗಿದ್ದರು. ಈಗ ಅವರೇ ಸಿಎಂ ಆಗಿರೋದ್ರಿಂದ ಮಾಡ್ತಾರೆ ಅನ್ನೋ ನಿರೀಕ್ಷೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಭಾರತದಲ್ಲಿ ಮೂರನೇ ಅಲೆ ಸಾಧ್ಯತೆ ಕಡಿಮೆ: ಗುಲೇರಿಯಾ

    ಮಗ ಅಭಿಷೇಕ್ ಹಾಗೂ ಸುಮಲತಾ ಅಂಬರೀಶ್ ಅಂಬರೀಶ್ 3ನೇ ಪುಣ್ಯತಿಥಿ ಹಿನ್ನೆಲೆ ಕಂಠೀರವ ಸ್ಟುಡಿಯೋಗೆ ಬಂದಿದ್ದಾರೆ.

  • ಅಪ್ಪು ಸಮಾಧಿ ಬಳಿ ನೃತ್ಯ ನಮನ ಸಲ್ಲಿಸಿದ ಪುಟಾಣಿಗಳು

    ಅಪ್ಪು ಸಮಾಧಿ ಬಳಿ ನೃತ್ಯ ನಮನ ಸಲ್ಲಿಸಿದ ಪುಟಾಣಿಗಳು

    ಬೆಂಗಳೂರು: ಕಂಠೀರವ ಸ್ಟುಡಿಯೋದಲ್ಲಿ ಅಪ್ಪು ಸಮಾಧಿ ಎದುರು ಇರುವ ಅವರ ಭಾವಚಿತ್ರದ ಮುಂದೆ ಪುಟಾಣಿಗಳು ಇಂದು ನೃತ್ಯ ನಮನ ಸಲ್ಲಿಸಿದ್ದಾರೆ.

    ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅದ್ಭುತ ನಟ ಮಾತ್ರ ಅಲ್ಲ, ಅದ್ಭುತ ಡ್ಯಾನ್ಸರ್ ಎನ್ನುವುದು ಎಲ್ಲರಿಗೂ ತಿಳಿದ ವಿಷಯ. ಅವರಿಗೆ ನಟನೆ ಎಷ್ಟು ಅಚ್ಚುಮೆಚ್ಚೋ ಅಷ್ಟೇ ಡ್ಯಾನ್ಸ್ ಕೂಡ ಇಷ್ಟ. ಅಪ್ಪು ಅವರನ್ನು ಹಲವು ಜನ ನೃತ್ಯದಿಂದಲೇ ಇಷ್ಟ ಪಡುತ್ತಾರೆ. ಇದನ್ನೂ ಓದಿ: ಅವನು ಇನ್ನೂ ನನ್ನ ಮಡಿಲಲ್ಲಿ, ಆಲೋಚನೆಗಳಲ್ಲಿ ಶಾಶ್ವತವಾಗಿದ್ದಾನೆ: ರಾಘವೇಂದ್ರ ರಾಜ್‍ಕುಮಾರ್

    ಅಪ್ಪುಗೆ ಡ್ಯಾನ್ಸ್ ಮಾಡುವುದು ಮತ್ತು ಡ್ಯಾನ್ಸ್ ಮಾಡುವವರನ್ನು ಪ್ರೋತ್ಸಾಹಿಸುವುದು ಇಷ್ಟ. ಅದರಂತೆ ಅಪ್ಪು ಕೆಂಗೇರಿಯ ನಾಟ್ಯಲೋಕ ಡಾನ್ಸ್ ಗ್ರೂಪಿನ ಡ್ಯಾನ್ಸ್ ನೋಡಿ ಭೇಷ್ ಎಂದಿದ್ದರು.

    ಪ್ರಸ್ತುತ ಅಪ್ಪು ನಮ್ಮೊಂದಿಗೆ ದೈಹಿಕವಾಗಿ ಇಲ್ಲ. ಈ ಹಿನ್ನೆಲೆ ಕೊರಿಯೋಗ್ರಾಫರ್ ಆನಂದ್ ಅವರ ವಿದ್ಯಾರ್ಥಿಗಳಾದ ಗಾನಿಕ, ಸಂಸ್ಕøತಿ, ವಂಶಿ, ತೇಜಸ್ವಿನಿ ಅಪ್ಪು ಹಾಡುಗಳಿಗೆ ಡಾನ್ಸ್ ಮಾಡುವುದರ ಮೂಲಕ ಅವರಿಗೆ ವಿಶೇಷ ನಮನ ಸಲ್ಲಿಸಿದ್ದಾರೆ. ಇದನ್ನೂ ಓದಿ: ಸೋಲು ಗೆಲುವನ್ನು ಸಮವಾಗಿ ಸ್ವೀಕರಿಸುವ ದೃಷ್ಟಿಕೋನ ನಮ್ಮದು: ಬೊಮ್ಮಾಯಿ

    ಕಾರ್ಯಕ್ರಮವೊಂದರಲ್ಲಿ ಅಪ್ಪು ಎದುರು ಈ ಪುಟಾಣಿಗಳು ಡ್ಯಾನ್ಸ್ ಮಾಡಿದ್ದು, ಅವರ ಕೈಯಿಂದ ಬಹುಮಾನ ಪಡೆದುಕೊಂಡಿದ್ದರು. ಅಪ್ಪು ಅವರನ್ನು ನೋಡುತ್ತಾ ಡ್ಯಾನ್ಸ್ ಆಸಕ್ತಿ ಬೆಳೆಸಿಕೊಂಡಿದ್ದರು. ಈಗ ಈ ಪುಟಾಣಿ ಅಭಿಮಾನಿಗಳು ಅಪ್ಪು ಸಮಾಧಿಗೆ ಭೇಟಿ ಕೊಟ್ಟು ಡಾನ್ಸ್ ಮಾಡುವುದರ ಮೂಲಕವೇ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.