Tag: Karan Bhushan Singh

  • ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಪುತ್ರನ ಬೆಂಗಾವಲು ವಾಹನ ಬೈಕ್‌ಗೆ ಡಿಕ್ಕಿ – ಇಬ್ಬರು ಯುವಕರ ದುರ್ಮರಣ

    ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಪುತ್ರನ ಬೆಂಗಾವಲು ವಾಹನ ಬೈಕ್‌ಗೆ ಡಿಕ್ಕಿ – ಇಬ್ಬರು ಯುವಕರ ದುರ್ಮರಣ

    ಲಕ್ನೋ: ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಅವರ ಪುತ್ರ ಕರಣ್‌ ಭೂಷಣ್‌ ಸಿಂಗ್‌ (Karan Bhushan Singh) ಅವರ ಬೆಂಗಾವಲು ಪಡೆಗೆ ಸೇರಿದ ಟೊಯೊಟಾ ಫಾರ್ಚುನರ್ ಎಸ್‌ಯುವಿ (Toyota Fortuner SUV) ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 17 ವರ್ಷದ ಓರ್ವ ಸೇರಿದಂತೆ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಗೋಂಡಾದಲ್ಲಿ ನಡೆದಿದೆ.

    ಬುಧವಾರ (ಇಂದು) ಬೆಳಗ್ಗೆ 9 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ರೇಹಾನ್‌ (17) ಮತ್ತು ಶಹಜಾನ್‌ (24) ಎಂಬ ಯುವಕರು ಔಷಧಿ ಖರೀದಿಸಲು ಬೈಕ್‌ ನಲ್ಲಿ ಹೋಗುತ್ತಿದ್ದರು. ಈ ವೇಳೆ ಎದುರಿನಿಂದ ವೇಗವಾಗಿ ಬಂದ ಎಸ್‌ಯುವಿ ಡಿಕ್ಕಿ ಹೊಡೆದಿದೆ. ಬಳಿಕ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತ ಸಂಭವಿಸಿದ ಕೂಡಲೇ ಜನರು ಜಮಾಯಿಸಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಮೃತರ ತಾಯಿ ಚಂದಾ ಬೇಗಂ ಎಂಬವರು ದೂರು ದಾಖಲಿಸಿದ್ದು, ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.

    ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು (UP Police) ಚಾಲಕನನ್ನ ಬಂಧಿಸಿ, ಎಸ್‌ಯುವಿ ಅನ್ನು ವಶಪಡಿಸಿಕೊಂಡಿದ್ದಾರೆ. ಆದ್ರೆ ಅಪಘಾತ ಸಂದರ್ಭದಲ್ಲಿ ಕರಣ್‌ ಭೂಷಣ್‌ ಸಿಂಗ್‌ ಪ್ರಯಾಣಿಸುತ್ತಿದ್ದರೇ ಅನ್ನೂ ಬಗ್ಗೆ ಸ್ಪಷ್ಟನೆ ಇಲ್ಲ. ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ರಾಧೇಶ್ಯಾಮ್ ರೈ ತಿಳಿಸಿದ್ದಾರೆ. ಇದನ್ನೂ ಓದಿ: ಬಸವಕಲ್ಯಾಣ ತೆಗೆದು ಎಲ್ಲಾ ಬಸ್‌ಗಳ ಮೇಲೆ ಕ್ರೈಸ್ತ ಕಲ್ಯಾಣ ಅಂತಾ ಮಾಡುತ್ತೇನೆ: ಯಾದಗಿರಿಯಲ್ಲಿ ವ್ಯಕ್ತಿ ಕಿರಿಕ್‌

    ಬ್ರಿಜ್‌ ಭೂಷಣ್‌ ವಿರುದ್ಧ ಮಹಿಳೆ ಕುಸ್ತಿಪಟುಗಳಿಂದ ಲೈಂಗಿಕ ಕಿರುಕುಳ ಆರೋಪದ ಕೇಳಿಬಂದ ಬಳಿಕ ಅವರನ್ನ ಅವರನ್ನ ಡಬ್ಲ್ಯೂಎಫ್‌ಒ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲಾಗಿತ್ತು. ಅವರ ವಿರುದ್ಧ ಚಾರ್ಜ್‌ ಶೀಟ್‌ ಸಲ್ಲಿಸಲು ದೆಹಲಿ ಕೋರ್ಟ್‌ ಪೊಲೀಸರಿಗೆ ಆದೇಶಿಸಿತ್ತು. ಈ ಬೆಳವಣಿಗೆ ನಂತರ ಬ್ರಿಜ್‌ ಭೂಷಣ್‌ ಅವರಿಗೆ ಬಿಜೆಪಿ ಟಿಕೆಟ್‌ ಸಹ ನಿರಾಕರಿಸಿತು, ಅವರ ಪುತ್ರ ಕರಣ್‌ ಭೂಷಣ್‌ ಸಿಂಗ್‌ನನ್ನ ಕಣಿಕ್ಕಿಳಿತು. ಬ್ರಿಜ್‌ ಭೂಷಣ್‌ ಅವರ ಮತ್ತೋಬ್ಬ ಪುತ್ರ ಪ್ರತೀಕ್ ಭೂಷಣ್ ಸಿಂಗ್ ಗೊಂಡಾ ಕ್ಷೇತ್ರದಿಂದ ಶಾಸಕರಾಗಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ಸಲೂನ್‌ಗೆ ಹೋಗಿ ಕ್ಲೀನ್ ಆಗಿ ಬಂದಿದ್ದಾರೆ, ಇದಕ್ಕೆ ಅಮಿತ್ ಶಾ ಡೈರೆಕ್ಟರ್: ಪ್ರಿಯಾಂಕ್‌ ಖರ್ಗೆ ವಾಗ್ದಾಳಿ 

  • ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಬ್ರಿಜ್‌ಭೂಷಣ್‌ಗೆ ಟಿಕೆಟ್‌ ಇಲ್ಲ – ಪುತ್ರನಿಗೆ ಬಿಜೆಪಿ ಮಣೆ

    ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಬ್ರಿಜ್‌ಭೂಷಣ್‌ಗೆ ಟಿಕೆಟ್‌ ಇಲ್ಲ – ಪುತ್ರನಿಗೆ ಬಿಜೆಪಿ ಮಣೆ

    – ಕಾಂಗ್ರೆಸ್‌ ಭದ್ರಕೋಟೆ ರಾಯ್‌ಬರೇಲಿಗೆ ಪ್ರತಾಪ್ ಸಿಂಗ್ ಬಿಜೆಪಿ ಅಭ್ಯರ್ಥಿ

    ನವದೆಹಲಿ: ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಸಂಸದ ಹಾಗೂ ಡಬ್ಲ್ಯೂಎಫ್‌ಐ ಮಾಜಿ ಅಧ್ಯಕ್ಷ ಬ್ರಿಜ್‌ ಭೂಷಣ್‌ ಸಿಂಗ್‌ (Brij Bhushan Sharan Singh) ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಬದಲಿಗೆ ಅವರ ಪುತ್ರನಿಗೆ ಬಿಜೆಪಿ (BJP) ಟಿಕೆಟ್‌ ನೀಡಿದೆ.

    ಉತ್ತರ ಪ್ರದೇಶದ ಕೈಸರ್‌ಗಂಜ್‌ನಿಂದ (Kaiserganj) ಬಿಜೆಪಿ ಅಭ್ಯರ್ಥಿಯಾಗಿ ಅವರ ಪುತ್ರ ಕರಣ್ ಭೂಷಣ್ ಸಿಂಗ್ ಅವರನ್ನು ಕಣಕ್ಕಿಳಿಸಿದೆ. ಬ್ರಿಜ್‌ ಭೂಷಣ್‌ ಹಿರಿಯ ಪುತ್ರ ಪ್ರತೀಕ್ ಭೂಷಣ್ ಸಿಂಗ್ ಶಾಸಕರಾಗಿದ್ದಾರೆ. ಕರಣ್ ಭೂಷಣ್ ಸಿಂಗ್ ಪ್ರಸ್ತುತ ಉತ್ತರ ಪ್ರದೇಶದ ಕುಸ್ತಿ ಸಂಸ್ಥೆಯ ಮುಖ್ಯಸ್ಥರಾಗಿದ್ದಾರೆ. ಇದನ್ನೂ ಓದಿ: 2024ರ ಲೋಕಸಭಾ ಚುನಾವಣೆಗೆ ಮಾಡಲು ಸಾಕಷ್ಟು ಕೆಲಸಗಳಿವೆ: ಕುಸ್ತಿ ಫೆಡರೇಷನ್‌ನಿಂದ ಬ್ರಿಜ್‌ ಭೂಷಣ್‌ ‘ಸನ್ಯಾಸತ್ವ’

    ಕರಣ್ ಭೂಷಣ್ ಸಿಂಗ್ (Karan Bhushan Singh) ಹೆಸರನ್ನು ಘೋಷಿಸುವುದರ ಜೊತೆಗೆ, ಬಿಜೆಪಿಯು ಕಾಂಗ್ರೆಸ್ ಭದ್ರಕೋಟೆಯಾದ ರಾಯ್ ಬರೇಲಿಯಿಂದ ಪ್ರತಾಪ್ ಸಿಂಗ್ ಅವರನ್ನು ತನ್ನ ಅಭ್ಯರ್ಥಿಯನ್ನಾಗಿ ಹೆಸರಿಸಿದೆ. ಹಾಲಿ ಸಂಸದರಾಗಿ ಸೋನಿಯಾ ಗಾಂಧಿ ಪ್ರತಿನಿಧಿಸಿದ್ದ ಕ್ಷೇತ್ರಕ್ಕೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಇನ್ನೂ ಘೋಷಿಸಿಲ್ಲ.

    ಆರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ತಮ್ಮ ವಿರುದ್ಧದ ಲೈಂಗಿಕ ಕಿರುಕುಳದ ಆರೋಪಗಳಿಂದಾಗಿ ಭಾರೀ ರಾಜಕೀಯ ಹಿನ್ನಡೆ ಅನುಭವಿಸಿದರು. ಇವರ ವಿರುದ್ಧ ದೇಶದ ಕೆಲ ಪ್ರಮುಖ ಕುಸ್ತಿಪಟುಗಳು ಬೀದಿಗಿಳಿದು ಹೋರಾಟ ನಡೆಸಿದ್ದರು. ಇದನ್ನೂ ಓದಿ: ಬ್ರಿಜ್‌ ಭೂಷಣ್‌ ಆಪ್ತನಿಗೆ ಕುಸ್ತಿ ಅಧ್ಯಕ್ಷ ಪಟ್ಟ – ವಿರೋಧಿಸಿ ಪದ್ಮಶ್ರೀ ಪ್ರಶಸ್ತಿ ಹಿಂದಿರುಗಿಸಿದ ಕುಸ್ತಿಪಟು ಬಜರಂಗ್‌ ಪುನಿಯಾ

    ಸಿಂಗ್‌ ಮೇಲಿರುವ ಗಂಭೀರ ಆರೋಪಗಳ ಕಾರಣದಿಂದಾಗಿ ಕ್ಷೇತ್ರದಲ್ಲಿ ಬಿಜೆಪಿ ಬೇರೊಬ್ಬರ ಆಯ್ಕೆ ಮಾಡಲು ತೀರ್ಮಾನಿಸಿತು. ಆದರೆ ಈ ಭಾಗದಲ್ಲಿ ಬ್ರಿಜ್‌ ಭೂಷಣ್‌ ಸಿಂಗ್‌ ಹೊಂದಿರುವ ರಾಜಕೀಯ ಪ್ರಭಾವ ಪಕ್ಷಕ್ಕೆ ತಿಳಿದಿದೆ. ಹೀಗಾಗಿ ಅವರ ಸ್ಥಾನಕ್ಕೆ ಮಗನನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ.

    ಕೈಸರ್‌ಗಂಜ್ ಕ್ಷೇತ್ರಕ್ಕೆ ಲೋಕಸಭೆ ಚುನಾವಣೆಯ ಐದನೇ ಹಂತದಲ್ಲಿ ಮೇ 20 ರಂದು ಮತದಾನ ನಡೆಯಲಿದೆ. ನಾಳೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಇದನ್ನೂ ಓದಿ: ಬ್ರಿಜ್‌ ಭೂಷಣ್‌ ಆಪ್ತ ಕುಸ್ತಿ ಅಧ್ಯಕ್ಷ: ಶೂ ಬಿಚ್ಚಿಟ್ಟು‌, ಕಣ್ಣೀರಿಡುತ್ತಾ ಕುಸ್ತಿಗೆ ವಿದಾಯ ಹೇಳಿದ ಸಾಕ್ಷಿ ಮಲಿಕ್!