Tag: Karan Johar

  • ಬಾಲಿವುಡ್‌ಗೆ ಸಮರ್ಜಿತ್: ಕರಣ್ ಜೋಹರ್ ಸಿನಿಮಾದಲ್ಲಿ ಇಂದ್ರಜಿತ್  ಪುತ್ರ

    ಬಾಲಿವುಡ್‌ಗೆ ಸಮರ್ಜಿತ್: ಕರಣ್ ಜೋಹರ್ ಸಿನಿಮಾದಲ್ಲಿ ಇಂದ್ರಜಿತ್ ಪುತ್ರ

    ಮರ್ಜಿತ್ ಲಂಕೇಶ್ (Samarjit Lankesh) ಗೌರಿ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಕಾಲಿಟ್ಟ ನಟ. ದೊಡ್ಡ ಸ್ಟಾರ್ ಆಗಬೇಕು ಎಂದು ಕನಸನ್ನು ಹೊತ್ತು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿರುವ ಸಮರ್ಜಿತ್ ಮೊದಲ ಸಿನಿಮಾದಲ್ಲೇ ಕನ್ನಡ ಸಿನಿಮಾ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ಅದ್ಭುತ ಅಭಿನಯದ ಮೂಲಕ ಫ್ಯೂಚರ್ ಸ್ಟಾರ್ ಎನ್ನುವ ಭರವಸೆ ಮೂಡಿಸಿರುವ ನಟ ಸಮರ್ಜಿತ್ ಖ್ಯಾತ ನಿರ್ದೇಶಕ, ಪತ್ರಕರ್ತ ಇಂದ್ರಿಜಿತ್ ಲಂಕೇಶ್ ಅವರ ಪುತ್ರ. ಗೌರಿ ಸಿನಿಮಾದ ನಟನೆಗಾಗಿ ಸಮರ್ಜಿತ್ ಅವರಿಗೆ ‘ಲುಮಿಯರ್ ನ್ಯಾಷನಲ್ ಅವಾರ್ಡ್’ ಬಂದಿದೆ.

    ಅವಾರ್ಡ್ ಪಡೆದ ಖುಷಿಯಲ್ಲಿರುವ ಹ್ಯಾಂಡಮ್ ಹಂಕ್ ಸಮರ್ಜಿತ್ ಬಾಲಿವುಡ್‌ಗೆ ಹಾರಲು ಸಜ್ಜಾಗಿದ್ದಾರೆ. ಹಿಂದಿ ಸಿನಿಮಾರಂಗಮಾತ್ರವಲ್ಲ ಪಕ್ಕದ ತೆಲುಗು ಮತ್ತು ತಮಿಳಿನಿಂದನೂ ಆಫರ್‌ಗಳು ಬರುತ್ತಿದ್ದು ಪರಭಾಷೆಯ ಕಡೆ ಸಮರ್ಜಿತ್ ಗಮನ ಹರಿಸುತ್ತಿದ್ದಾರೆ. ಹೌದು, ಸಮರ್ಜಿತ್ ಹಿಂದಿ ಸಿನಿಮಾರಂಗಕ್ಕೆ ಕಾಲಿಡಲು ತಯಾರಾಗಿದ್ದಾರೆ. ಈಗಾಗಲೇ ಹಿಂದಿಯ ದೊಡ್ಡ ಪ್ರೊಡಕ್ಷನ್ ಹೌಸ್ ಸಮರ್ಜಿತ್‌ಗೆ ಸಿನಿಮಾ ಮಾಡಲು ಮುಂದಾಗಿದೆ ಎನ್ನುವ ಸುದ್ದಿ ಕೇಳಿಬಂದಿದೆ. ಬಾಲಿವುಡ್‌ನ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಗಳಲ್ಲಿ ಒಂದಾಗಿರುವ ಕರಣ್ ಜೋಹರ್ ಅವರ ಧರ್ಮ ಪ್ರೊಡಕ್ಷನ್ ಸಮರ್ಜಿತ್ ಜೊತೆ ಸಿನಿಮಾ ಮಾಡಲು ಮುಂದಾಗಿದೆ ಎನ್ನುವ ಮಾಹಿತಿ ಸಿಕ್ಕಿದೆ.

    ಈಗಾಗಲೇ ಧರ್ಮ ಪ್ರೊಡಕ್ಷನ್ ಕಡೆಯಿಂದ ಕರೆ ಬಂದಿದ್ದು ಸಮರ್ಜಿತ್ ಮುಂಬೈಗೆ ಹಾರಿದ್ದಾರೆ. ಕರಣ್ ಜೊಹರ್ ಸಂಸ್ಥೆ ಜೊತೆ ಮಾತುಕತೆ ನಡೆಸಿರುವ ಸಮರ್ಜಿತ್ ಹಿಂದಿಯಲ್ಲಿ ಸಿನಿಮಾ ಮಾಡುವುದು ಬಹುತೇಕ ಖಚಿತವಾಗಿದೆ. ಅಂದಹಾಗೆ ಇತ್ತೀಚಿನ ದಿನಗಳಲ್ಲಿ ಹಿಂದಿ ನಿರ್ಮಾಣ ಸಂಸ್ಥೆಗಳು ಅದರಲ್ಲೂ ಕರಣ್ ಜೋಹರ್ ಸೌತ್ ಸಿನಿಮಾರಂಗದ ಕಡೆ ಹೆಚ್ಚು ಇಂಟ್ರೆಸ್ಟ್ ತೋರಿಸುತ್ತಿದ್ದಾರೆ. ಒಂದುವೇಳೆ ಸಮರ್ಜಿತ್ ಲಂಕೇಶ್ ಅವರಿಗೆ ಸಿನಿಮಾ ನಿರ್ಮಾಣ ಮಾಡಿದರೆ ಮೊದಲ ಬಾರಿಗೆ ಕರಣ್ ಸಂಸ್ಥೆ ಕನ್ನಡ ನಟನ ಜೊತೆ ಸಿನಿಮಾ ಮಾಡಿದಂತೆ ಆಗಲಿದೆ.

    ಇನ್ನೂ ವಿಶೇಷ ಎಂದರೆ ತಮಿಳಿನ ಪ್ರಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಸಂಸ್ಥೆ ಕೂಡ ಸಮರ್ಜಿತ್ ಗೆ ಸಿನಿಮಾ ಮಾಡಲು ಮುಂದಾಗಿರುವ ವಿಚಾರ ಹೊರಬಿದ್ದಿದೆ. ಈಗಾಗಲೇ ಲೈಕಾ ಸಂಸ್ಥೆ ನಿಖಿಲ್ ಸಿನಿಮಾ ಮೂಲಕ ಕನ್ನಡಕ್ಕೆ ಕಾಲಿಟ್ಟಿದೆ. ಆ ಸಿನಿಮಾ ಪೂರ್ಣಗೊಳ್ಳುವ ಮೊದಲೇ ಲೈಕಾ ಸಂಸ್ಥೆ ಕನ್ನಡದ ಮತ್ತೊಬ್ಬ ಸ್ಟಾರ್ ಸಮರ್ಜಿತ್‌ಗೆ ಸಿನಿಮಾ ಮಾಡಲು ನಿರ್ಧರಿಸಿದ್ದು ಈಗಾಗಲೇ ಮಾತುಕತೆ ಹಂತದಲ್ಲಿದೆ ಎನ್ನುವ ಮಾತು ಕೇಳಿಬರುತ್ತಿದೆ.

    ಒಟ್ನಲ್ಲಿ ಕನ್ನಡದ ಯುವ ನಟನೊಬ್ಬನಿಗೆ ಪರಭಾಷಯಿಂದ ಅದರಲ್ಲೂ ದೊಡ್ಡ ದೊಡ್ಡ ಪ್ರೊಡಕ್ಷನ್ ಗಳು ಸಿನಿಮಾ ಮಾಡಲು ಮುಂದಾಗಿರುವುದು ಖುಷಿಯ ವಿಚಾರ. ಸಮರ್ಜಿತ್ ದೊಡ್ಡ ಸ್ಟಾರ್ ಆಗಿ ಮೆರೆಯಲಿ ಎನ್ನುವುದೇ ಅಭಿಮಾನಿಗಳ ಆಶಯ.

  • ಪ್ರಶಾಂತ್ ನೀಲ್ ಚಿತ್ರಕ್ಕೆ ಕರಣ್‍ ಜೋಹಾರ್ ಎಂಟ್ರಿ

    ಪ್ರಶಾಂತ್ ನೀಲ್ ಚಿತ್ರಕ್ಕೆ ಕರಣ್‍ ಜೋಹಾರ್ ಎಂಟ್ರಿ

    ಬಾಲಿವುಡ್‍ ನಟ, ನಿರ್ದೇಶಕ, ನಿರ್ಮಾಪಕ ಕರಣ್ ಜೋಹಾರ್‍  (Karan Johar)ಕನ್ನಡದ ಹೆಸರಾಂತ ನಿರ್ದೇಶಕ ಪ್ರಶಾಂತ್ ನೀಲ್ ಅವರಿಗೆ ಸಹಾಯ ಮಾಡಿದ್ದಾರೆ ಎನ್ನುವ ವಿಚಾರವೊಂದು ದಕ್ಷಿಣದ ಸಿನಿ ರಂಗದಲ್ಲಿ ಕೇಳಿ ಬರುತ್ತಿದೆ. ಪ್ರಶಾಂತ್ ನೀಲ್ ಹೊಸ ಚಿತ್ರಕ್ಕೆ ಕರಣ್ ಜೋಹಾರ್ ಅವರೇ ಟೈಟಲ್‍ ಹೆಸರಿಸಿದ್ದಾರೆ ಎನ್ನೋದು ಅದರ ತಾತ್ಪರ್ಯ.

    ಟಾಲಿವುಡ್ ನಟ ಜ್ಯೂ.ಎನ್‌ಟಿಆರ್- ಪ್ರಶಾಂತ್ ನೀಲ್ (Prashanth Neel) ಕಾಂಬಿನೇಷನ್ ಸಿನಿಮಾದ ಅಪ್‌ಡೇಟ್‌ಗಾಗಿ ಅಭಿಮಾನಿಗಳು ಕಾತರದಿಂದ ಕಾದಿದ್ದರು. ಮೊನ್ನೆಯಿಂದ ಹರಿದಾಡುತ್ತಿರುವ ಸುದ್ದಿಯ ಪ್ರಕಾರ ಈ ಜೋಡಿ ಚಿತ್ರಕ್ಕೆ ಟೈಟಲ್ ಫಿಕ್ಸ್ ಮಾಡಲಾಗಿದೆ. ಹಾಗಂತ ಅನಧಿಕೃತ ಘೋಷಣೆಯಾಗಿದೆ.

    ಜ್ಯೂ.ಎನ್‌ಟಿಆರ್ ಚಿತ್ರಕ್ಕೆ ‌’ಡ್ರ್ಯಾಗನ್’ (Dragon) ಎಂದು ಪ್ರಶಾಂತ್ ನೀಲ್ ಜಬರ್‌ದಸ್ತ್ ಆಗಿರುವ ಟೈಟಲ್ ಇಟ್ಟಿದ್ದಾರೆ. ಈ ಹಿಂದೆ ರಿಲೀಸ್ ಆಗಿರುವ ತಾರಕ್ ಪೋಸ್ಟರ್‌ಗೂ ಇದೀಗ ಇಟ್ಟಿರುವ ‘ಡ್ರ್ಯಾಗನ್’ ಟೈಟಲ್‌ಗೂ ಹೊಂದುವಂತಿದೆ. ಈ ಟೈಟಲ್ ಸೂಚಿಸಿದ್ದು ಕರಣ್ ಜೋಹಾರ್ ಅಂತಿದ್ದಾರೆ. ಆದರೆ ಚಿತ್ರತಂಡದಿಂದ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

    ಸದ್ಯ ಜ್ಯೂ.ಎನ್‌ಟಿಆರ್ ಅವರು ವಾರ್ 2, ದೇವರ ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಈ ಎರಡು ಪ್ರಾಜೆಕ್ಟ್‌ಗಳ ನಂತರ ಪ್ರಶಾಂತ್ ನೀಲ್ ಜೊತೆಗಿನ ಚಿತ್ರವನ್ನು ಕೈಗೆತ್ತಿಕೊಳ್ಳಲಿದ್ದಾರೆ ಜ್ಯೂ.ಎನ್‌ಟಿಆರ್ ಎನ್ನಲಾಗಿದೆ.

     

    ಜ್ಯೂ.ಎನ್‌ಟಿಆರ್ ಇದೇ ಮೇ 20ರಂದು ತಮ್ಮ 1ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ತಿದ್ದಾರೆ. ಈ ವೇಳೆ, ಪ್ರಶಾಂತ್ ನೀಲ್ ಜೊತೆಗಿನ ಸಿನಿಮಾದ ಶೂಟಿಂಗ್ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳಲಿದೆ.

  • ‘ದೇವರ’ ಸಿನಿಮಾಗಾಗಿ ಜ್ಯೂ.ಎನ್‌ಟಿಆರ್‌ಗೆ ಸಾಥ್ ಕೊಟ್ಟ ಕರಣ್ ಜೋಹರ್

    ‘ದೇವರ’ ಸಿನಿಮಾಗಾಗಿ ಜ್ಯೂ.ಎನ್‌ಟಿಆರ್‌ಗೆ ಸಾಥ್ ಕೊಟ್ಟ ಕರಣ್ ಜೋಹರ್

    ಜ್ಯೂ.ಎನ್‌ಟಿಆರ್ (Jr.Ntr) ನಟನೆಯ ಬಹುನಿರೀಕ್ಷಿತ ‘ದೇವರ’ (Devara Film) ಚಿತ್ರಕ್ಕೆ ನಿರ್ಮಾಪಕ ಕರಣ್ ಜೋಹರ್ ಕೈಜೋಡಿಸಿದ್ದಾರೆ. ಬಾಲಿವುಡ್ ಮಾತ್ರವಲ್ಲದೇ ಸೌತ್‌ನಲ್ಲಿಯೂ ಉತ್ತಮ ಒಡನಾಟ ಹೊಂದಿರುವ ಕರಣ್ (Karan Johar) ಇದೀಗ ದೇವರ ಚಿತ್ರವನ್ನು ಉತ್ತರ ಭಾರತದಲ್ಲಿ ರಿಲೀಸ್ ಮಾಡಲು ಮುಂದೆ ಬಂದಿದ್ದಾರೆ.

    ‘ಆರ್‌ಆರ್‌ಆರ್’ (RRR) ಸಿನಿಮಾದ ಸಕ್ಸಸ್ ನಂತರ ‘ದೇವರ’ ಚಿತ್ರದ ಮೇಲೆ ಜ್ಯೂ.ಎನ್‌ಟಿಆರ್ ಫ್ಯಾನ್ಸ್‌ಗೆ ಭಾರೀ ನಿರೀಕ್ಷೆಯಿದೆ. ಈ ನಡುವೆ ದೇವರ ಚಿತ್ರದ ಉತ್ತರ ಭಾರತದ ಹಕ್ಕನ್ನು ಕರಣ್ ಜೋಹರ್ ಖರೀದಿಸಿದ್ದಾರೆ. ಇದನ್ನೂ ಓದಿ:‘ಸಿದ್ಲಿಂಗು 2’ ಸಿನಿಮಾದಲ್ಲಿ ರಮ್ಯಾ ಅತಿಥಿ ಪಾತ್ರ

     

    View this post on Instagram

     

    A post shared by Karan Johar (@karanjohar)

    ‘ಯುವಸುಧಾ ಆರ್ಟ್ಸ್’ ಮತ್ತು ‘ಎನ್‌ಟಿಆರ್ ಆರ್ಟ್ಸ್’ ಸಂಸ್ಥೆಗಳ ಮೂಲಕ ‘ದೇವರ’ ಸಿನಿಮಾ ನಿರ್ಮಾಣ ಆಗುತ್ತಿದೆ. ಈ ಸಂಸ್ಥೆಗಳ ಜೊತೆ ಕರಣ್ ಜೋಹರ್ ಅವರು ಮಾತುಕತೆ ನಡೆಸಿದ್ದಾರೆ. ಈ ವಿಚಾರವನ್ನು ಅವರು ಸೋಶಿಯಲ್ ಮೀಡಿಯಾ ಮೂಲಕ ಖಚಿತಪಡಿಸಿದ್ದಾರೆ. ಜ್ಯೂ.ಎನ್‌ಟಿಆರ್ ಅಭಿನಯದ ‘ದೇವರ’ ಸಿನಿಮಾದ ಭಾಗವಾಗಲು ಸಂತೋಷವಾಗುತ್ತಿದೆ ಎಂದು ಕರಣ್ ಪೋಸ್ಟ್ ಮಾಡಿದ್ದಾರೆ. ತಾರಕ್ ಜೊತೆಗಿನ ಫೋಟೋ ಕೂಡ ಕರಣ್ ಜೋಹರ್ ಶೇರ್ ಮಾಡಿದ್ದಾರೆ.

    ಇದೇ ಅಕ್ಟೋಬರ್ 10ಕ್ಕೆ ಬಹುಭಾಷೆಗಳಲ್ಲಿ ‘ದೇವರ’ ಸಿನಿಮಾ ರಿಲೀಸ್ ಆಗುತ್ತಿದೆ. ತಾರಕ್‌ಗೆ ಜೋಡಿಯಾಗಿ ಬಾಲಿವುಡ್ ಬ್ಯೂಟಿ ಜಾನ್ವಿ ಕಪೂರ್ (Janhavi Kapoor) ನಟಿಸಿದ್ದಾರೆ. ಸೈಫ್ ಅಲಿ ಖಾನ್ ವಿಲನ್ ಆಗಿ ಅಬ್ಬರಿಸಿದ್ದಾರೆ.

  • ಡಿಜಿಟಲ್ ವರ್ಷನ್‌ನಲ್ಲಿ ಬರಲಿದೆ ‘ಸ್ಟುಡೆಂಟ್ ಆಫ್ ದಿ ಇಯರ್ 3’

    ಡಿಜಿಟಲ್ ವರ್ಷನ್‌ನಲ್ಲಿ ಬರಲಿದೆ ‘ಸ್ಟುಡೆಂಟ್ ಆಫ್ ದಿ ಇಯರ್ 3’

    ‘ಸ್ಟುಡೆಂಡ್ ಆಫ್ ದಿ ಇಯರ್’ (Student Of The Year) ಸಿನಿಮಾಗೆ ಇಂದಿಗೂ ಕ್ರೇಜ್ ಇದೆ. ಈ ಚಿತ್ರದ ಬಗ್ಗೆ ಫ್ಯಾನ್ಸ್‌ಗೆ ಗುಡ್ ನ್ಯೂಸ್‌ವೊಂದು ಸಿಕ್ಕಿದೆ. ‘ಸ್ಟುಡೆಂಡ್ ಆಫ್ ದಿ ಇಯರ್’ ಪಾರ್ಟ್ 3 ಅನ್ನು ವೆಬ್ ಸಿರೀಸ್ ಮೂಲಕ ತೋರಿಸಲು ನಿರ್ಮಾಪಕ ಕರಣ್ ಜೋಹರ್ (Karan Johar) ನಿರ್ಧರಿಸಿದ್ದಾರೆ.

    ಈ ವೆಬ್ ಸಿರೀಸ್‌ಗೆ ರೀಮಾ ಮಾಯಾ ಎಂಬುವವರು ನಿರ್ದೇಶನ ಮಾಡಲಿದ್ದಾರೆ. ಇದರ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಕರಣ್ ಜೋಹರ್ ಮಾಹಿತಿ ನೀಡಿದ್ದಾರೆ. ಈಗಾಗಲೇ ‘ಸ್ಟುಡೆಂಡ್ ಆಫ್ ದಿ ಇಯರ್’ ಫ್ರಾಂಚೈಸ್ ಮೂಲಕ ಹಲವು ಸೆಲೆಬ್ರಿಟಿ ಮಕ್ಕಳನ್ನು ಕರಣ್ ಚಿತ್ರರಂಗಕ್ಕೆ ಪರಿಚಯಿಸಿದ್ದಾರೆ. ಇದೀಗ ಈ ಚಿತ್ರದ ಪಾರ್ಟ್ 3 ಮೂಲಕ ಮತ್ತುಷ್ಟು ಸೆಲೆಬ್ರಿಟಿ ಮಕ್ಕಳು ಲಾಂಚ್ ಆಗಲಿದ್ದಾರೆ.

    ‘ಸ್ಟುಡೆಂಡ್ ಆಫ್ ದಿ ಇಯರ್’ ಪಾರ್ಟ್ 1 ಮತ್ತು ಪಾರ್ಟ್ 2 ಕಥೆಗಿಂತ ವಿಭಿನ್ನವಾಗಿ ಪಾರ್ಟ್ 3 ಮೂಡಿ ಬರಬೇಕು ಎಂಬುದು ಚಿತ್ರತಂಡ ಪ್ಲ್ಯಾನ್ ಮಾಡಿದ್ದಾರೆ. ಮುಂದಿನ ವರ್ಷ ಒಟಿಟಿಯಲ್ಲಿ ಈ ಸಿನಿಮಾವನ್ನು ನೋಡಬಹುದಾಗಿದೆ. ಇದನ್ನೂ ಓದಿ:ಆರ್ ಸಿ ಸ್ಟುಡಿಯೋಸ್ ನಿರ್ಮಾಣದ ಆರನೇ ಚಿತ್ರಕ್ಕೆ ಶಿವಣ್ಣ ಹೀರೋ

    ಅಂದಹಾಗೆ, ಆಲಿಯಾ ಭಟ್ (Alia Bhatt), ಸಿದ್ಧಾರ್ಥ್ ಮಲ್ಹೋತ್ರಾ, ವರುಣ್ ಧವನ್ ‘ಸ್ಟುಡೆಂಡ್ ಆಫ್ ದಿ ಇಯರ್’ ಪಾರ್ಟ್ 1 ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು. ಈಗ ಈ ಮೂವರು ಸ್ಟಾರ್‌ಗಳಾಗಿ ಬಾಲಿವುಡ್‌ನಲ್ಲಿ ಗುರುತಿಸಿಕೊಳ್ತಿದ್ದಾರೆ. ಪಾರ್ಟ್ 2ನಲ್ಲಿ ಅನನ್ಯಾ ಪಾಂಡೆ, ತಾರಾ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿರು. ಅವರಿಗೂ ಕೂಡ ಚಿತ್ರರಂಗದಲ್ಲಿ ಡಿಮ್ಯಾಂಡ್‌ ಇದೆ.

  • ಆಕ್ಟಿಂಗ್ ಬೇಕಾದರೆ ಬಿಡ್ತೀನಿ, ಸೆ..* ಬಿಡೋಕೆ ಆಗಲ್ಲ: ಶಾಹಿದ್ ಕಪೂರ್

    ಆಕ್ಟಿಂಗ್ ಬೇಕಾದರೆ ಬಿಡ್ತೀನಿ, ಸೆ..* ಬಿಡೋಕೆ ಆಗಲ್ಲ: ಶಾಹಿದ್ ಕಪೂರ್

    ಬಾಲಿವುಡ್ ಖ್ಯಾತ ನಟ ಶಾಹಿದ್ ಕಪೂರ್ (Shahid Kapoor)  ತಮ್ಮ ಪಕ್ಕದಲ್ಲಿ ಸೋನಾಕ್ಷಿ ಸಿನ್ಹ (Sonakshi Sinha) ಕೂರಿಸಿಕೊಂಡು ಅಚ್ಚರಿ ಎನ್ನುವಂತೆ ಹೇಳಿಕೆ ನೀಡಿದ್ದಾರೆ. ಕಾಫಿ ವಿತ್ ಕರಣ್ ಶೋನಲ್ಲಿ ಅವರು ಖುಲ್ಲಂ ಖುಲ್ಲಾ ಮಾತನಾಡಿದ್ದು, ಕರಣ್ ಜೋಹಾರ್ (Karan Johar) ಕೇಳಿದ ಪ್ರಶ್ನೆಗೆ ಯಾವುದೇ ಮುಜುಗರ ಇಲ್ಲದಂತೆ ಉತ್ತರಿಸಿದ್ದಾರೆ. ಆ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಹರಿದಾಡುತ್ತಿದೆ.

    ಕಾಫಿ ವಿತ್ ಕರಣ್ ಶೋನಲ್ಲಿ ಫಿಲ್ಟರ್ ಇಲ್ಲದ ಪ್ರಶ್ನೆಗಳನ್ನು ಕೇಳುತ್ತಾರೆ ಕರಣ್. ಲವ್, ಸೆಕ್ಸ್, ಬ್ರೇಕ್, ಗಾಸಿಪ್ ಗೆ ಹೆಚ್ಚು ಪ್ರಾಶಸ್ತ್ಯ ನೀಡುತ್ತಾರೆ ಕರಣ್. ಶಾಹಿದ್ ಕಪೂರ್ ಮತ್ತು ಸೋನಾಕ್ಷಿ ಸಿನ್ಹಾ ಅತಿಥಿಯಾಗಿ ಬಂದ ಎಪಿಸೋಡ್ ನಲ್ಲಿ ಕರಣ್, ಶಾಹಿತ್ ಅವರಿಗೆ ಎರಡು ಪ್ರಶ್ನೆಗಳನ್ನು ಇಡುತ್ತಾರೆ. ಆಕ್ಟಿಂಗ್ ಮತ್ತು ಸೆಕ್ಸ್ ಯಾವುದನ್ನು ಬಿಡ್ತೀರಿ ಎಂದು ಕೇಳ್ತಾರೆ.

     

    ಯಾವುದೇ ಅಳುಕಿಲ್ಲದೇ ಆಕ್ಟಿಂಗ್ ಬಿಡ್ತೀನಿ ಎಂದು ಹೇಳುವ ಮೂಲಕ ಅಭಿಮಾನಿಗಳನ್ನು ಹುಬ್ಬೇರಿಸುವಂತೆ ಮಾಡಿದ್ದಾರೆ. ಈ ಉತ್ತರದಿಂದ ಕ್ಷಣಕಾಲ ಸೋನಾಕ್ಷಿ ಕಕ್ಕಾಬಿಕ್ಕಿಯಾಗುತ್ತಾರೆ. ಅದರಲ್ಲಿ ತಪ್ಪೇನಿದೆ ಎನ್ನುವಂತೆ ನೋಡುತ್ತಾರೆ ಶಾಹಿದ್. ಈ ವಿಡಿಯೋ ವೈರಲ್ ಆಗುವುದರ ಜೊತೆಗೆ ಸಾಕಷ್ಟು ಕಾಮೆಂಟ್ ಗಳು ಬಂದಿವೆ.

  • ಶ್ರೀದೇವಿ ಪುತ್ರಿ ಜಾನ್ವಿಗೆ ಅವಕಾಶ ಕೊಟ್ಟ ಕರಣ್ ಜೋಹಾರ್

    ಶ್ರೀದೇವಿ ಪುತ್ರಿ ಜಾನ್ವಿಗೆ ಅವಕಾಶ ಕೊಟ್ಟ ಕರಣ್ ಜೋಹಾರ್

    ಕ್ಷಿಣದಲ್ಲಿ ಹೆಚ್ಚೆಚ್ಚು ಅವಕಾಶಗಳನ್ನು ಗಿಟ್ಟಿಸಿಕೊಳ್ಳುತ್ತಿರುವ ಬಾಲಿವುಡ್ ಖ್ಯಾತ ನಟಿ ಶ್ರೀದೇವಿ ಪುತ್ರಿ ಜಾನ್ವಿ ಕಪೂರ್, ಇದೀಗ ಬಾಲಿವುಡ್ ನಲ್ಲಿ ಮತ್ತೊಂದು ಅವಕಾಶ ಪಡೆದಿದ್ದಾರೆ. ಕರಣ್ ಜೋಹಾರ್ (Karan Johar) ನಿರ್ಮಾಣದಲ್ಲಿ ಮೂಡಿ ಬರಲಿರುವ ಹೊಸ ಚಿತ್ರಕ್ಕೆ ಜಾನ್ವಿ ನಾಯಕಿಯಾಗಿ ಆಯ್ಕೆಯಾಗಿದ್ದಾರಂತೆ. ಶಶಾಂಕ್ ಖೈತಾನ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರಲಿದೆ.

    ಈ ನಡುವೆ ಜಾನ್ವಿ ಕಪೂರ್ ಬಾಲಿವುಡ್ ಗಿಂತಲೂ ದಕ್ಷಿಣದಲ್ಲೇ ನೆಲೆಯೂರುವ ಎಲ್ಲ ಲಕ್ಷಣಗಳು ತೋರುತ್ತಿವೆ. ಈಗಾಗಲೇ ತೆಲುಗಿನಲ್ಲಿ ಅವರು ಜ್ಯೂನಿಯರ್ ಎನ್.ಟಿ.ಆರ್ ಜೊತೆ ತೆರೆ ಹಂಚಿಕೊಂಡಿದ್ದಾರೆ. ಇದೀಗ ತೆಲುಗಿನ ರಾಮ್ ಚರಣ್ ನಟನೆಯ ಹೊಸ ಸಿನಿಮಾಗೂ ಜಾನ್ವಿ ಕಪೂರ್ (Janhvi Kapoor) ನಾಯಕಿ ಎಂದು ಹೇಳಲಾಗುತ್ತಿದೆ.

    ಅಷ್ಟೇ ಅಲ್ಲದೇ, ಸ್ಯಾಂಡಲ್ ವುಡ್ ಖ್ಯಾತ ನಟ ಶಿವರಾಜ್ ಕುಮಾರ್ ಕೂಡ ಈ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನುವ ಮಾಹಿತಿಯೂ ಹರಿದಾಡುತ್ತಿದೆ.

    ಈಗಾಗಲೇ ಎರಡು ತಮಿಳು ಸಿನಿಮಾದಲ್ಲಿ ನಟಿಸಿರುವ ಕನ್ನಡದ ಹೆಸರಾಂತ ನಟ ಶಿವರಾಜ್ ಕುಮಾರ್ (Shivaraj Kumar), ಇದೀಗ ತೆಲುಗು (Telugu) ಚಿತ್ರವೊಂದನ್ನು ಒಪ್ಪಿಕೊಂಡಿದ್ದಾರೆ ಎನ್ನುವ ಸುದ್ದಿ ಹಲವು ದಿನಗಳಿಂದ ಹರಿದಾಡುತ್ತಿತ್ತು.

    ತೆಲುಗಿನ ಹೆಸರಾಂತ ನಟ ರಾಮ್ ಚರಣ್ ನಟನೆಯ ಹೊಸ ಚಿತ್ರದಲ್ಲಿ ಶಿವಣ್ಣ ಪ್ರಮುಖ ಪಾತ್ರ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಈ ಕುರಿತಂತೆ ಸ್ವತಃ ಶಿವರಾಜ್ ಕುಮಾರ್ ಮಾತನಾಡಿದ್ದಾರೆ.

     

    ರಾಮ್ ಚರಣ್ (Ram Charan) ಜೊತೆಗಿನ ಸಿನಿಮಾ ಬಗ್ಗೆ ಮಾತನಾಡಿರುವ ಶಿವರಾಜ್ ಕುಮಾರ್, ‘ತೆಲುಗಿನಲ್ಲಿ ಆಫರ್ ಬಂದಿದ್ದು ನಿಜ. ರಾಮ್ ಚರಣ್ ಅವರ ಚಿತ್ರವನ್ನು ನಿರ್ದೇಶನ ಮಾಡುತ್ತಿರುವ ಬುಚ್ಚಿ ಬಾಬು ನನ್ನನ್ನು ಭೇಟಿ ಮಾಡಿದ್ದಾರೆ. ಅವರೊಂದಿಗೆ ಮಾತನಾಡಿದ್ದೇನೆ. ಆದರೆ, ಆ ಸಿನಿಮಾ ಬಗ್ಗೆ ಸದ್ಯ ಏನೂ ಹೇಳಲಾರೆ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ.

     

  • ನಟರ ಜೊತೆ ಡೇಟ್ ಮಾಡುವುದಿಲ್ಲ: ಜಾಹ್ನವಿ ಶಾಕಿಂಗ್ ಹೇಳಿಕೆ

    ನಟರ ಜೊತೆ ಡೇಟ್ ಮಾಡುವುದಿಲ್ಲ: ಜಾಹ್ನವಿ ಶಾಕಿಂಗ್ ಹೇಳಿಕೆ

    ಬಾಲಿವುಡ್ ಖ್ಯಾತ ನಟಿ ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್ (Jahnavi Kapoor) ಹಿಂದಿನ ಪಾಪ್ಯುಲರ್ ಶೋ ಕಾಫಿ ವಿತ್ ಕರಣ್ (Koffee With Karan) ದಲ್ಲಿ ಭಾಗಿಯಾಗಿದ್ದಾರೆ. ಕರಣ್ ಜೊತೆ ಜಾಹ್ನವಿ ಹಲವಾರು ವಿಷಯಗಳನ್ನು ಹಂಚಿಕೊಂಡಿದ್ದಾರೆ. ಅದರಲ್ಲೂ ಪ್ರಮುಖವಾಗಿ ಡೇಟಿಂಗ್ (Dating) ವಿಚಾರವನ್ನು ಹಂಚಿಕೊಂಡಿದ್ದು, ತಾವು ಯಾವುದೇ ಕಾರಣಕ್ಕೂ ನಟರ ಜೊತೆ ಡೇಟ್ ಮಾಡುವುದಿಲ್ಲವೆಂದು ಅವರು ಹೇಳಿದ್ದಾರೆ.

    ಕಾಫಿ ವಿತ್ ಕರಣ್ ಶೋನಲ್ಲಿ ಇದಷ್ಟೇ ಅಲ್ಲ, ಇನ್ನೂ ಹಲವು ಸಂಗತಿಗಳನ್ನು ಅವರು ನೇರವಾಗಿ ಮಾತನಾಡಿದ್ದಾರೆ. ನಿರೂಪಕ ಕರಣ್ ಜೋಹಾರ್ (Karan Johar) ಕೇಳಿದ ಪ್ರಶ್ನೆಗೆ ಅಷ್ಟೇ ಬೋಲ್ಡ್ ಆಗಿ ಉತ್ತರಿಸಿದ್ದಾರೆ. ಆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

    ಬೋಲ್ಡ್ ಪ್ರಶ್ನೆಗಳನ್ನು ಕೇಳುವುದರಲ್ಲಿ ಕರಣ್ ಜೋಹಾರ್ ಎತ್ತಿದ ಕೈ. ಅದರಲ್ಲೂ ಕಾಂಟ್ರವರ್ಸಿ ಎನ್ನುವಂತಹ ಪ್ರಶ್ನೆಗಳನ್ನೂ ಅವರು ಕೇಳುತ್ತಾರೆ. ಹೆಚ್ಚಾಗಿ ಅವರ ಮಾತುಗಳು ಸೆಕ್ಸ್, ಅಫೇರ್, ಬ್ರೇಕ್ ಅಪ್, ಡೇಟಿಂಗ್ ಇದರ ಸುತ್ತಲೇ ಗಿರಕಿ ಹೊಡೆಯುತ್ತವೆ. ಅದರಲ್ಲೂ ಸೆಕ್ಸ್ ಬಗ್ಗೆ ಕೇಳದೇ ಯಾವ ಎಪಿಸೋಡ್ ಅನ್ನು ಅವರು ಮುಗಿಸೋದಿಲ್ಲ. ಜಾಹ್ನವಿ ಎಪಿಸೋಡ್ ನಲ್ಲಿ ಅವರು ಬೇರೆ ರೀತಿಯಲ್ಲಿ ಕೇಳಿ ಅಚ್ಚರಿ ಮೂಡಿಸಿದ್ದಾರೆ.

    ಜಾಹ್ನವಿ ಕಪೂರ್ ಅವರ ಸಿನಿಮಾ ಕೆರಿಯರ್, ಶೂಟಿಂಗ್, ಫ್ರೆಂಡ್ಸ್ ಹೀಗೆ ಒಂದೊಂದೇ ಪ್ರಶ್ನೆಗಳನ್ನು ಕೇಳುತ್ತಾ ಹೋಗುವ ಕರಣ್ ಜೋಹಾರ್, ಕೊನೆಗೊಂದು ಪ್ರಶ್ನೆ ಮಾಡುತ್ತಾರೆ. ರಾಪಿಡ್ ರೌಂಡ್ ನಲ್ಲಿ ಅವರು, ನಿಮ್ಮನ್ನು ಮೊದಲ ಬಾರಿಗೆ ಹುಡುಗರು ನೋಡಿದಾಗ, ಅವರ ಕಣ್ಣುಗಳು ನಿಮ್ಮಲ್ಲಿ ಏನನ್ನು ನೋಡುತ್ತಿರುತ್ತವೆ ಎಂದು ಕೇಳಿದ್ದಾರೆ. ಈ ಪ್ರಶ್ನೆಗೆ ಅಷ್ಟೇ ಸಖತ್ತಾಗಿ ಆನ್ಸರ್ ಮಾಡಿದ್ದಾರೆ ಜಾಹ್ನವಿ.

     

    ಮೊದಲ ಬಾರಿಗೆ ಹುಡುಗರು ನನ್ನನ್ನು ನೋಡಿದಾಗ, ಅವರು ನನ್ನ ಕಣ್ಣುಗಳನ್ನು ನೋಡುತ್ತಾರೆ ಎಂದುಕೊಂಡಿದ್ದೆ. ಆದರೆ, ಅವರು ಬೇರೆಯದನ್ನೇ ನೋಡ್ತಾ ಇರ್ತಾರೆ ಅನ್ನೋದು ಆಮೇಲೆ ಗೊತ್ತಾಯಿತು ಎಂದು ಹೇಳುವ ಮೂಲಕ ಹುಡುಗರಿಗೆ ಶಾಕ್ ನೀಡಿದ್ದಾರೆ.

  • ಜಾಹ್ನವಿಯಲ್ಲಿ ಹುಡುಗರು ಮೊದಲು ನೋಡೋದೇನು? : ಬೋಲ್ಡ್ ಉತ್ತರ ಕೊಟ್ಟ ನಟಿ

    ಜಾಹ್ನವಿಯಲ್ಲಿ ಹುಡುಗರು ಮೊದಲು ನೋಡೋದೇನು? : ಬೋಲ್ಡ್ ಉತ್ತರ ಕೊಟ್ಟ ನಟಿ

    ಬಾಲಿವುಡ್ ನಟಿ ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್ (Janhvi Kapoor) ಆಡಿದ ಮಾತುಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಕಾಫಿ ವಿತ್ ಕರಣ್ (Koffee With Karan) ಕಾರ್ಯಕ್ರಮದಲ್ಲಿ ಭಾಗಿ ಆಗಿರುವ ಜಾಹ್ನವಿ, ನಿರೂಪಕ ಕರಣ್ ಜೋಹಾರ್ (Karan Johar) ಕೇಳಿದ ಪ್ರಶ್ನೆಗೆ ಅಷ್ಟೇ ಬೋಲ್ಡ್ ಆಗಿ ಉತ್ತರಿಸಿದ್ದಾರೆ. ಆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

    ಬೋಲ್ಡ್ ಪ್ರಶ್ನೆಗಳನ್ನು ಕೇಳುವುದರಲ್ಲಿ ಕರಣ್ ಜೋಹಾರ್ ಎತ್ತಿದ ಕೈ. ಅದರಲ್ಲೂ ಕಾಂಟ್ರವರ್ಸಿ ಎನ್ನುವಂತಹ ಪ್ರಶ್ನೆಗಳನ್ನೂ ಅವರು ಕೇಳುತ್ತಾರೆ. ಹೆಚ್ಚಾಗಿ ಅವರ ಮಾತುಗಳು ಸೆಕ್ಸ್, ಅಫೇರ್, ಬ್ರೇಕ್ ಅಪ್, ಡೇಟಿಂಗ್ ಇದರ ಸುತ್ತಲೇ ಗಿರಕಿ ಹೊಡೆಯುತ್ತವೆ. ಅದರಲ್ಲೂ ಸೆಕ್ಸ್ ಬಗ್ಗೆ ಕೇಳದೇ ಯಾವ ಎಪಿಸೋಡ್ ಅನ್ನು ಅವರು ಮುಗಿಸೋದಿಲ್ಲ. ಜಾಹ್ನವಿ ಎಪಿಸೋಡ್ ನಲ್ಲಿ ಅವರು ಬೇರೆ ರೀತಿಯಲ್ಲಿ ಕೇಳಿ ಅಚ್ಚರಿ ಮೂಡಿಸಿದ್ದಾರೆ.

    ಜಾಹ್ನವಿ ಕಪೂರ್ ಅವರ ಸಿನಿಮಾ ಕೆರಿಯರ್, ಶೂಟಿಂಗ್, ಫ್ರೆಂಡ್ಸ್ ಹೀಗೆ ಒಂದೊಂದೇ ಪ್ರಶ್ನೆಗಳನ್ನು ಕೇಳುತ್ತಾ ಹೋಗುವ ಕರಣ್ ಜೋಹಾರ್, ಕೊನೆಗೊಂದು ಪ್ರಶ್ನೆ ಮಾಡುತ್ತಾರೆ. ರಾಪಿಡ್ ರೌಂಡ್ ನಲ್ಲಿ ಅವರು, ನಿಮ್ಮನ್ನು ಮೊದಲ ಬಾರಿಗೆ ಹುಡುಗರು ನೋಡಿದಾಗ, ಅವರ ಕಣ್ಣುಗಳು ನಿಮ್ಮಲ್ಲಿ ಏನನ್ನು ನೋಡುತ್ತಿರುತ್ತವೆ ಎಂದು ಕೇಳಿದ್ದಾರೆ. ಈ ಪ್ರಶ್ನೆಗೆ ಅಷ್ಟೇ ಸಖತ್ತಾಗಿ ಆನ್ಸರ್ ಮಾಡಿದ್ದಾರೆ ಜಾಹ್ನವಿ.

    ಮೊದಲ ಬಾರಿಗೆ ಹುಡುಗರು ನನ್ನನ್ನು ನೋಡಿದಾಗ, ಅವರು ನನ್ನ ಕಣ್ಣುಗಳನ್ನು ನೋಡುತ್ತಾರೆ ಎಂದುಕೊಂಡಿದ್ದೆ. ಆದರೆ, ಅವರು ಬೇರೆಯದನ್ನೇ ನೋಡ್ತಾ ಇರ್ತಾರೆ ಅನ್ನೋದು ಆಮೇಲೆ ಗೊತ್ತಾಯಿತು ಎಂದು ಹೇಳುವ ಮೂಲಕ ಹುಡುಗರಿಗೆ ಶಾಕ್ ನೀಡಿದ್ದಾರೆ.

  • ಶಾರುಖ್ ಪುತ್ರಿ ಸುಹಾನಾ ಬಾಲಿವುಡ್ ಆಳ್ತಾರೆ: ಹೊಗಳಿದ ಕರಣ್ ಜೋಹಾರ್

    ಶಾರುಖ್ ಪುತ್ರಿ ಸುಹಾನಾ ಬಾಲಿವುಡ್ ಆಳ್ತಾರೆ: ಹೊಗಳಿದ ಕರಣ್ ಜೋಹಾರ್

    ಬಾಲಿವುಡ್ (Bollywood) ನ ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ಕರಣ್ ಜೋಹಾರ್ (Karan Johar) ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಶಾರುಖ್ ಖಾನ್ (Shah Rukh Khan) ಪುತ್ರಿ ಸುಹಾನಾ ಖಾನ್ (Suhana Khan) ಕುರಿತಾಗಿ ಮಾತನಾಡಿರುವ ಕರಣ್, ‘ಮುಂದೊಂದು ದಿನ ಸುಹಾನಾ ಬಾಲಿವುಡ್ ಅನ್ನೇ ಆಳುತ್ತಾರೆ’ ಎಂದು ಹೇಳಿಕೊಂಡಿದ್ದಾರೆ. ಅದಕ್ಕೆ ಅವರು ತಮ್ಮದೇ ಆದ ಕಾರಣಗಳನ್ನೂ ನೀಡಿದ್ದಾರೆ.

    ಸ್ಟಾರ್ಸ್ ಕಿಡ್ಸ್ ಕಂಡರೆ ಕರಣ್ ಗೆ ಎಲ್ಲಿಲ್ಲದ ಅಭಿಮಾನ. ಅದರಲ್ಲೂ ತಮ್ಮ ಬ್ಯಾನರ್ ಮೂಲಕ ಸಾಕಷ್ಟು ಕಲಾವಿದರನ್ನು ಇವರು ಪರಿಚಯ ಮಾಡಿಕೊಟ್ಟಿದ್ದಾರೆ. ಸುಹಾನಾಗಾಗಿ ಪ್ರಾಜೆಕ್ಟ್ ವೊಂದನ್ನು ರೆಡಿ ಕೂಡ ಮಾಡಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಸುಹಾನಾ ಬಗ್ಗೆ ಕರಣ್ ಮೆಚ್ಚುಗೆಯನ್ನು ವ್ಯಕ್ತ ಪಡಿಸಿದ್ದಾರೆ.

    ಸುಹಾನಾ ಖಾನ್ ಇದೀಗ ತಂದೆಯಂತೆಯೇ ನಟನಾ ಕ್ಷೇತ್ರಕ್ಕೆ ಕಾಲಿಟ್ಟಿದ್ದಾರೆ. ಮೊದಲ ಬಾರಿಗೆ ಅವರು ವೆಬ್ ಸೀರಿಸ್ ಒಂದಕ್ಕೆ ಬಣ್ಣ ಹಚ್ಚಿದ್ದು, ಈ ವೆಬ್ ಸೀರಿಸ್ ಶೂಟಿಂಗ್ ಊಟಿಯ ವಿವಿಧ ಸ್ಥಳಗಳಲ್ಲಿ ನಡೆದಿದೆ. ತಮಗೆ ಬೋರು ಆಗಬಾರದು ಎಂದೇ ಫ್ರೆಂಡ್ಸ್ ಅನ್ನೂ ಜೊತೆಗೆ ಅವರು ಕರೆದುಕೊಂಡು ಹೋಗಿದ್ದರು.

    ದಿ ಆರ್ಚೀಸ್ ಹೆಸರಿನಲ್ಲಿ ತಯಾರಾಗುತ್ತಿರುವ ಈ ವೆಬ್ ಸೀರಿಸ್ ನಲ್ಲಿ ಸುಹಾನಾ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ಬಹುತೇಕ ದೃಶ್ಯಗಳಲ್ಲಿ ಇವರೇ ಇರುವುದರಿಂದ ಕಷ್ಟವಾದರೂ ಇಷ್ಟಪಟ್ಟು ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರಂತೆ. ಶೂಟಿಂಗ್ ವೇಳೆಯಲ್ಲಿ ಪದೇ ಪದೇ ಅವರು ತಂದೆಯನ್ನು ನೆನಪಿಸಿಕೊಳ್ಳುತ್ತಿದ್ದಾರಂತೆ.

     

    ಶೂಟಿಂಗ್ ಅಂದರೆ, ಅಲ್ಲಿ ಬಿಂದಾಸ್ ಆಗಿ ಇರಬಹುದು ಎನ್ನುವ ಕಲ್ಪನೆ ನನ್ನಲ್ಲಿತ್ತು. ಈಗ ಅದರ ಕಷ್ಟ ಗೊತ್ತಾಗುತ್ತಿದೆ. ಅಪ್ಪಾಜಿ ಅಷ್ಟೊಂದು ವರ್ಷ ಅದು ಹೇಗೆ ಸಹಿಸಿಕೊಂಡು ಬಂದಿದ್ದಾರೋ ಎಂದು ನಿರ್ದೇಶಕರ ಮುಂದೆ ತಂದೆಯನ್ನು ಹಾಡಿ ಹೊಗಳಿದ್ದಾರಂತೆ. ಅಲ್ಲದೇ ತಮ್ಮೊಂದಿಗೆ ಕೆಲಸ ಮಾಡುತ್ತಿರುವ ಖುಷಿ ಕಪೂರ್ ಮತ್ತು ಜೋಯಾ ಅಖ್ತರ್ ಬಳಿಯೂ ತಮ್ಮ ತಂದೆಯನ್ನು ಗುಣಗಾನ ಮಾಡಿದ್ದಾರಂತೆ ಸುಹಾನಾ.

  • ಕಾರ್ತಿಕ್‌ ಆರ್ಯನ್‌ ಜೊತೆಗಿನ ಬ್ರೇಕಪ್‌ ಬಗ್ಗೆ ಸಾರಾ ರಿಯಾಕ್ಷನ್‌

    ಕಾರ್ತಿಕ್‌ ಆರ್ಯನ್‌ ಜೊತೆಗಿನ ಬ್ರೇಕಪ್‌ ಬಗ್ಗೆ ಸಾರಾ ರಿಯಾಕ್ಷನ್‌

    ಬಾಲಿವುಡ್ ನಟಿ ಸೈಫ್ ಅಲಿ ಖಾನ್ (Sara Ali Khan) ಅವರು ಸಿನಿಮಾ, ಜಾಹೀರಾತುಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ‘ಕಾಫಿ ವಿತ್ ಕರಣ್’ ಸೀಸನ್ 8ರಲ್ಲಿ (Koffe With Karan 8) ಅನನ್ಯಾ ಪಾಂಡೆ (Ananya Panday) ಜೊತೆ ಸಾರಾ ಅತಿಥಿಯಾಗಿ ಭಾಗವಹಿಸಿದ್ದಾರೆ. ಈ ವೇಳೆ, ಕಾರ್ತಿಕ್ ಆರ್ಯನ್ ಜೊತೆಗಿನ ಬ್ರೇಕಪ್ ಬಗ್ಗೆ ನಟಿ ಮೌನ ಮುರಿದಿದ್ದಾರೆ.

    ಅನನ್ಯಾ ಪಾಂಡೆ ಜೊತೆ ಸಾರಾ ಅಲಿ ಖಾನ್, ಕರಣ್ ಜೋಹರ್ (Karan Johar) ಶೋನಲ್ಲಿ ಮುಖ್ಯ ಅತಿಥಿಯಾಗಿ ಬಂದಿದ್ದಾರೆ. ಕಾರ್ತಿಕ್ ಜೊತೆಗಿನ ಲವ್ ಬ್ರೇಕಪ್ ಕೇಳಿದ ಕರಣ್ ಪ್ರಶ್ನೆಗೆ ನಟಿ ತಬ್ಬಿಬ್ಬಾಗಿದ್ದಾರೆ. ಬಳಿಕ ಹೌದು.. ನಾನು ಕಾರ್ತಿಕ್ ಜೊತೆ ಬ್ರೇಕಪ್ ಮಾಡಿಕೊಂಡಿದ್ದೇನೆ. ನಾವಿಬ್ಬರೂ ಈಗ ಬೆಸ್ಟ್ ಫ್ರೆಂಡ್ಸ್, ಪ್ರೇಮಿಗಳಲ್ಲ ಎಂದಿದ್ದಾರೆ ಸಾರಾ.

    ಮತ್ತೆ ಕರಣ್, ಬ್ರೇಕಪ್ ಆದ ಮೇಲೆ ನಿಮಗೆ ಬೇಸರ ಆಗಿಲ್ವಾ? ಎಂದು ಕೇಳಿದ್ದಾರೆ. ಹೌದು ಆಗಿತ್ತು. ತುಂಬಾನೇ ನೋವು ಆಗಿತ್ತು. ಈಗ ಎಲ್ಲವನ್ನೂ ಮರೆಯುತ್ತಿದ್ದೇನೆ. ಯಾವುದೇ ಸಂಬಂಧವಾಗಿರಲಿ ಅವರ ಜೊತೆ ಸಾಕಷ್ಟು ಹಂಚಿಕೊಂಡಿರುತ್ತೇವೆ. ಅಂಥವರ ಜೊತೆ ಸಂಬಂಧ ಮುರಿದುಕೊಂಡಾಗ ಸಹಜವಾಗಿ ಬೇಸರವಾಗುತ್ತದೆ ಎಂದು ಕಾರ್ತಿಕ್ ಜೊತೆಗಿನ ಬ್ರೇಕಪ್ ಬಗ್ಗೆ ಸಾರಾ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ:ಡಿಸೆಂಬರ್ 12ಕ್ಕೆ ರಜನಿ ಹುಟ್ಟು ಹಬ್ಬ: ಲಾಲ್ ಸಲಾಂ ಟೀಸರ್ ರಿಲೀಸ್

    ಇನ್ನೂ ಕರಣ್ ನಿರೂಪಣೆಯ ಕಾರ್ಯಕ್ರಮಕ್ಕೆ ಬರಲು ಹಲವು ಸೆಲೆಬ್ರಿಟಿಗಳು ಹಿಂದೇಟು ಹಾಕುತ್ತಾರೆ, ತೀರಾ ವೈಯಕ್ತಿಕ ವಿಚಾರಗಳ ಕುರಿತು ಪ್ರಶ್ನೆಗಳೇ ಈ ಶೋನಲ್ಲಿ ಇರುತ್ತದೆ. ಇತ್ತೀಚೆಗೆ ದೀಪಿಕಾ ಪಡುಕೋಣೆ- ರಣ್‌ವೀರ್ ಸಿಂಗ್ ಈ ಕಾರ್ಯಕ್ರಮಕ್ಕೆ ಬಂದಿದ್ದರು. ರಣ್‌ವೀರ್ ಜೊತೆ ರಿಲೇಷನ್‌ಶಿಪ್‌ನಲ್ಲಿರುವಾಗಲೇ ಬೇರೆಯವರ ಜೊತೆ ಡೇಟ್ ಮಾಡುತ್ತಿದ್ದೆ ಎಂದು ಮಾತನಾಡಿದ್ದ ದೀಪಿಕಾ ಹೇಳಿಕೆ ಸಖತ್ ಟ್ರೋಲ್ ಆಗಿತ್ತು.