Tag: karatagi

  • ಅಬ್ಬರದ ಪ್ರಚಾರದಲ್ಲಿ ಬೊಬ್ಬಿರಿದ ಮಳೆರಾಯ- ಧರೆಗುರುಳಿತು ಶಾಸಕ ಶಿವರಾಜ್ ತಂಗಡಗಿ ಪ್ರಚಾರಕ್ಕಾಗಿ ನಿರ್ಮಿಸಿದ್ದ ಶೆಡ್

    ಅಬ್ಬರದ ಪ್ರಚಾರದಲ್ಲಿ ಬೊಬ್ಬಿರಿದ ಮಳೆರಾಯ- ಧರೆಗುರುಳಿತು ಶಾಸಕ ಶಿವರಾಜ್ ತಂಗಡಗಿ ಪ್ರಚಾರಕ್ಕಾಗಿ ನಿರ್ಮಿಸಿದ್ದ ಶೆಡ್

    ಕೊಪ್ಪಳ: ಜಿಲ್ಲೆಯ ನೂತನ ತಾಲೂಕು ಕಾರಟಗಿಯಲ್ಲಿ ಇಂದು ಬರೋಬ್ಬರಿ 1 ಗಂಟೆಗಳ ಕಾಲ ವರುಣ ಅಬ್ಬರಿಸಿದ್ದಾನೆ. ಕಾರಟಗಿ ನಗರದಲ್ಲಿ ಶಾಸಕ ಶಿವರಾಜ್ ತಂಗಡಿ ಪ್ರಚಾರಕ್ಕಾಗಿ ಮನೆಯ ಮುಂದೆ ಬೃಹತ್ ಶೆಡ್ ನಿರ್ಮಾಣ ಮಾಡಿದ್ದರು. ಮಳೆಯ ಜೊತೆಗೆ ಬಿರುಗಾಳಿ ಬೀಸಿದ್ದರಿಂದ ಶೆಡ್ ಧರೆಗುಳಿದಿದೆ.

    ಶೆಡ್ ಕೆಳಗೆ ನಿಲ್ಲಿಸಿದ್ದ 7 ಕಾರುಗಳು ಸಂಪೂರ್ಣ ಜಖಂಗೊಂಡಿವೆ. ಬಿರುಗಾಳಿ ಸಹಿತ ಮಳೆಯಾಗಿದ್ದರಿಂದ ನಗರದ ಬೃಹತ್ ಮರಗಳು ಅಂಗಡಿ ಮುಂಗಟ್ಟುಗಳ ಮೇಲೆ ಬಿದ್ದು ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ. ಪನ್ನಾಪುರ ಗ್ರಾಮದಲ್ಲಿ ರೈತ ಚನ್ನಬಸಪ್ಪ ನಡವಿ ಎಂಬವರ ಭತ್ತ ತುಂಬಿರುವ ಗೊಡನ್ ಮೇಲೆ ಹಾಕಲಾದ ತಗಡುಗಳು ಬಿರುಗಾಳಿಗೆ ಹಾರಿಹೋಗಿವೆ. ಇದರಿಂದ ಭತ್ತದ ಚೀಲಗಳು ಸಂಪೂರ್ಣ ಮಳೆಗೆ ನೆನೆದು ಕೋಟ್ಯಾಂತರ ರೂಪಾಯಿ ಭತ್ತ ನಷ್ಟವಾಗಿದೆ.

    ಒಂದು ಕಡೆ ಬಿಸಿಲಿನಿಂದ ತತ್ತರಿಸಿದ ಜನರಿಗೆ ಮಳೆರಾಯ ತಂಪೆರೆದ್ರೆ, ಇತ್ತ ವ್ಯಾಪಾರಿಗಳು ಮತ್ತು ರೈತರು ಕಂಗಾಲಾಗಿದ್ದಾರೆ.

  • ಇಂದು ನಿಶ್ಚಿತಾರ್ಥ ಮಾಡಿಕೊಳ್ಳಬೇಕಿದ್ದ ಯುವತಿ ಮನೆಯಿಂದ ನಾಪತ್ತೆ

    ಇಂದು ನಿಶ್ಚಿತಾರ್ಥ ಮಾಡಿಕೊಳ್ಳಬೇಕಿದ್ದ ಯುವತಿ ಮನೆಯಿಂದ ನಾಪತ್ತೆ

    ಕೊಪ್ಪಳ: ಇಂದು ನಿಶ್ಚತಾರ್ಥ ಮಾಡಿಕೊಳ್ಳಬೇಕಿದ್ದ ಯುವತಿ ಮಂಗಳವಾರ ಮಧ್ಯಾಹ್ನ ತನ್ನ ಗೆಳತಿಯರಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಮನೆಯಿಂದ ಹೊರ ಹೋದವಳು ನಾಪತ್ತೆಯಾಗಿದ್ದಾಳೆ.

    ಕವಿತಾ(22) ನಾಪತ್ತೆಯಾಗಿರುವ ಯುವತಿ. ಗಂಗಾವತಿ ತಾಲೂಕಿನ ಯರಡೋಣ ಗ್ರಾಮದ ನಿವಾಸಿಯಾಗಿರುವ ಕವಿತಾ ಜೊತೆ ಇಂದು ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರ ಗ್ರಾಮದ ಯುವಕನೊಂದಿಗೆ ಮದುವೆ ನಿಶ್ಚಯ ಕಾರ್ಯಕ್ರಮ ನಡೆಯಬೇಕಿತ್ತು.

    ಶ್ರೀಕಾಂತ್

    ಪ್ರಿಯಕರನ ಜೊತೆ ಪರಾರಿ?: ಕವಿತಾ ಕಳೆದ 2 ವರ್ಷಗಳಿಂದ ಕಾರಟಗಿ ಗ್ರಾಮದ ಶ್ರೀಕಾಂತ್ ಎಂಬ ಯುವಕನ ಜೊತೆ ಪ್ರೇಮಾಂಕುರವಾಗಿತ್ತು. ಕವಿತಾ ಮತ್ತು ಶ್ರೀಕಾಂತ್ ಜಾತಿ ಬೇರೆಯಾಗಿದ್ದರಿಂದ ಕವಿತಾ ಮನೆಯಲ್ಲಿ ಇಬ್ಬರ ಮದುವೆಗೆ ಒಪ್ಪಿಗೆ ನೀಡಿರಲಿಲ್ಲ. ವಿಷಯ ತಿಳಿದ ಕವಿತಾ ಪಾಲಕರು ತರಾತುರಿಯಲ್ಲಿ ಕವಿತಾಗೆ ಮದುವೆ ನಿಶ್ಚಯಕ್ಕೆ ಮುಂದಾಗಿದ್ದರು.

    ಈ ಮದುವೆ ಇಷ್ಟವಿಲ್ಲದ ಹಿನ್ನೆಲೆಯಲ್ಲಿ ನಿಶ್ಚಿತಾರ್ಥಕ್ಕೆ ಮುನ್ನಾ ದಿನ ಯುವತಿ ಪ್ರಿಯಕರ ಶ್ರೀಕಾಂತ್ ಜೊತೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.

    ಕವಿತಾ ಪಾಲಕರ ಅನುಮಾನಕ್ಕೆ ಪುಷ್ಠಿ ಎನ್ನುವಂತೆ ಶ್ರೀಕಾಂತ್ ಕೂಡ ಗ್ರಾಮದಲ್ಲಿ ಕಾಣಿಸುತ್ತಿಲ್ಲ. ಈ ಬಗ್ಗೆ ಕಾರಟಗಿ ಪೊಲೀಸ್ ಠಾಣೆಯಲ್ಲಿ ಶ್ರೀಕಾಂತ್ ಕವಿತಾರನ್ನು ಅಪಹರಿಸಿದ್ದಾರೆ ಎಂದು ಕವಿತಾ ಪಾಲಕರು ದೂರು ನೀಡಲು ಮುಂದಾಗಿದ್ದಾರೆ.