ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ದಾಂಡೇಲಿ ಮತ್ತು ಜೋಯಿಡಾ ತಾಲೂಕುಗಳ ಅಂಗನವಾಡಿ ಹಾಗೂ ಶಾಲೆಗಳಿಗೆ ಗುರುವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶ ನೀಡಿದ್ದಾರೆ.
ಜಿಲ್ಲೆಯಲ್ಲಿ ಗಾಳಿ ಸಹಿತ ಹೆಚ್ಚಿನ ಮಳೆಯಾಗುತಿದ್ದು, ಗುರುವಾರ ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆಯ ಜೊತೆಗೆ ಗಾಳಿಯ ರಭಸವೂ ಹೆಚ್ಚಿರಲಿದೆ. ಈ ಹಿನ್ನಲೆಯಲ್ಲಿ ಸಾಂಪ್ರದಾಯಿಕ ಮೀನುಗಾರಿಕೆಗೂ ಕೂಡ ನಿರ್ಬಂಧ ಹೇರಲಾಗಿದೆ. ಅಲ್ಲದೇ ಜಿಲ್ಲೆಯ ಜಲಪಾತಗಳು ಹಾಗೂ ಕಡಲತೀರ ಪ್ರದೇಶಗಳಿಗೆ ಪ್ರವಾಸಿಗರಿಗೆ ನಿರ್ಬಂಧ ಮುಂದುವರೆದಿದೆ. ಇದನ್ನೂ ಓದಿ: 9 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಮುಂದಾದ ಮೈಕ್ರೋಸಾಫ್ಟ್
ಕೊಡಗು (Kodagu) ಜಿಲ್ಲೆಯಲ್ಲಿ ಮಳೆ ಮುಂದುವರೆದಿರುವ ಹಿನ್ನೆಲೆ ಗುರುವಾರ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟರಾಜ ಅವರು ಆದೇಶಿಸಿದ್ದಾರೆ
– ಕರಾವಳಿ ಗ್ರಾಮದ ಗದ್ದೆಗಳಲ್ಲಿ ಉಪ್ಪು ಮಿಶ್ರಿತ ನೀರು – ಸಾವಿರಾರು ಎಕ್ರೆ ರೈತರ ಭೂಮಿ ಜಲಾವೃತ
ಕಾರವಾರ: ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು ಬಿಸಿ ಗಾಳಿ ಬೀಸತೊಡಗಿದೆ. ಈ ಮಧ್ಯೆ ಕಳೆದ ಮೂರು ದಿನದಿಂದ ಕಾರವಾರದ(Karawara) ಕಿನ್ನರ ಗ್ರಾಮದ ಗದ್ದೆಗಳಿಗೆ ಏಕಾಏಕಿ ಕಾಳಿ ನದಿಯ (Kali River) ಉಪ್ಪು ಮಿಶ್ರಿತ ನೀರು ಬಂದು ಸೇರುತ್ತಿದ್ದು ಕೃತಕ ಪ್ರವಾಹವನ್ನೇ ಸೃಷ್ಟಿಸಿದೆ.
ಸಾವಿರಾರು ಎಕರೆ ಕೃಷಿ ಭೂಮಿ ಇದೀಗ ಕಾಳಿ ನದಿಯ ಉಪ್ಪು ಮಿಶ್ರಿತ ನೀರಿನಿಂದ ಹಾನಿಯಾಗಿದ್ದು ರೈತ ಬೆಳೆದ ತರಕಾರಿ, ಭತ್ತಗಳು ನೀರುಪಾಲಾಗಿದ್ದರೆ ಕುಡಿಯಲು ಬಳಸುವ ಬಾವಿ ನೀರು ಸಹ ಉಪ್ಪು ಮಿಶ್ರಿತವಾಗಿ ಕುಡಿಯಲು ಈಗ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಪಬ್ಲಿಕ್ ಟಿವಿಗೆ ಕಾರವಾರದ ಕಡಲ ಜೀವಶಾಸ್ತ್ರಜ್ಞ ಜಗನ್ನಾಥ್ ರಾಥೋಡ್ ಪ್ರತಿಕ್ರಿಯಿಸಿ, ಪ್ರತಿ ಬಾರಿ ಸಮುದ್ರದಲ್ಲಿ ಭರತ-ಇಳಿತ ಎಂಬ ನೈಸರ್ಗಿಕ ಕ್ರಿಯೆ ನಡೆಯುತ್ತದೆ. ಅಮಾವಾಸ್ಯೆ, ಹುಣ್ಣಿಮೆ ಸಂದರ್ಭದಲ್ಲಿ ಭೂಮಿಗೆ ಚಂದ್ರ ಹತ್ತಿರವಾಗುತ್ತಾನೆ. ಆಗ ಗುರುತ್ವಾಕರ್ಷಣೆ ಹೆಚ್ಚಿರುತ್ತದೆ. ಈ ಸಂದರ್ಭದಲ್ಲಿ ಭರತ – ಇಳಿತ ಎಂಬ ನೈಸರ್ಗಿಕ ಪ್ರಕ್ರಿಯೆ ಸಮುದ್ರದಲ್ಲಿ ನಡೆಯುತ್ತದೆ. ಮೊನ್ನೆ ಶಿವರಾತ್ರಿ ಸಂದರ್ಭದಲ್ಲಿ ಅಮವ್ಯಾಸೆ ಬಂದಿತ್ತು. ಅಂದಿನಿಂದ ಭರತದ ಪ್ರಮಾಣ ಗಣನೀಯ ಏರಿಕೆ ಕಂಡಿದೆ. ಮಾರ್ಚ್ 1 ಮತ್ತು 2 ರಂದು ಸಮುದ್ರದ ಅಲೆಯ ಪ್ರಮಾಣ 3 ಮೀಟರ್ಗಿಂತಲೂ ಹೆಚ್ಚಾಗಿತ್ತು. ಇದರಿಂದ ಸಮುದ್ರದ ನೀರು ನದಿ ನೀರಿಗೆ ಹೆಚ್ಚಿನ ಪ್ರಮಾಣದಲ್ಲಿ ಸೇರಿ ತಗ್ಗು ಪ್ರದೇಶಕ್ಕೆ ನೀರು ನುಗ್ಗಿದೆ ಎಂದು ತಿಳಿಸಿದರು.
ಏಕಾಏಕಿ ಕೃಷಿ ಭೂಮಿಗೆ ನೀರು ನುಗ್ಗಿದ್ದರಿಂದ ಸಣ್ಣನೀರಾವರಿ ಇಲಾಖೆ ಅಧಿಕಾರಿಗಳು ಸಹ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಮುದ್ರದ ನೀರು ಹೆಚ್ಚಾಗಿ ಕಾಳಿ ನದಿಗೆ ಸೇರಿದ್ದರಿಂದ ನದಿ ಪಾತ್ರದ ಸುತ್ತಮುತ್ತ ಪ್ರದೇಶಕ್ಕೆ ನೀರು ನುಗ್ಗಿದ್ದು ಯಾವುದೇ ಸಮಸ್ಯೆಯಾಗದು ಎಂದು ಸಣ್ಣ ನೀರಾವರಿ ಇಲಾಖೆ ಅಧಿಕಾರಿ ಪೂರ್ಣಿಮಾ ಹೇಳಿದ್ದಾರೆ.
ಎಲ್ಲೆಲ್ಲಿ ನೀರು ನುಗ್ಗಿದೆ?
ಕೇವಲ ಕಿನ್ನರ ಗ್ರಾಮದಲ್ಲಿ ಅಲ್ಲದೇ ಸಮುದ್ರ ತೀರಭಾಗದ ಚಂಡಿಯಾ, ಚಿತ್ತಾಕುಲ, ಅಮದಳ್ಳಿಯಲ್ಲಿ ಅಲ್ಲದೇ ಕುಮಟ, ಅಂಕೋಲ ತಾಲೂಕಿನ ಭಾಗದಲ್ಲೂ ಇದೇ ಪರಿಸ್ಥಿತಿ ನಿರ್ಮಾಣವಾಗಿದೆ.
ಒಟ್ಟಿನಲ್ಲಿ ಬಿಸಿಲ ಬೇಗೆಯಲ್ಲಿ ಕರಾವಳಿಯ ಜನ ಬೆಂದಿರುವಾಗಲೇ ಮಳೆ, ಗಾಳಿ ಇಲ್ಲದೇ ಕಾಳಿ ನದಿ ಪ್ರವಾಹ ಜನರನ್ನು ಬೆಚ್ಚು ಬೀಳಿಸಿದೆ. ಆರು ವರ್ಷಗಳ ನಂತರ ಇದೀಗ ಸಮುದ್ರದ ನೈಸರ್ಗಿಕ ಪ್ರಕ್ರಿಯೆಯ ಪರಿಣಾಮ ಕರಾವಳಿ ಗ್ರಾಮದಲ್ಲಿ ರೈತರು ಬೆಳೆದ ಬೆಳೆ ನದಿಪಾಲಾಗಿದೆ.
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕದಂಬ ನೌಕಾನೆಲೆಯ (Kadamba Naval Base) ಭಾಗದಲ್ಲಿ ರಾತ್ರಿ ಅಪರಿಚಿತ ಡ್ರೋನ್ ಕ್ಯಾಮೆರಾ (Drone Camera) ಹಾರಿಸಲಾಗಿದೆ.
ನೌಕಾನೆಲೆಯ ಸರಹದ್ದಿನ ಭಾಗದಲ್ಲಿ ನಿಷೇಧವಿದ್ದರೂ ಡ್ರೋನ್ ಹಾರಿಸಿರುವುದು ಹಲವು ಅನುಮಾನ ಮೂಡಿಸಿದೆ.
ಇತ್ತೀಚೆಗೆ ಹನಿಟ್ರಾಪ್ (Honey Trap) ಮೂಲಕ ಕದಂಬ ನೌಕಾನೆಲೆಯ ಫೋಟೋ ಮತ್ತು ಮಾಹಿತಿಯನ್ನು ಹೊರ ದೇಶದ ಗುಪ್ತಚರ ಸಂಸ್ಥೆಗೆ ನೀಡಿರುವ ಆರೋಪದಡಿ ರಾಷ್ಟ್ರೀಯ ತನಿಖಾ ದಳ(NIA) ಮೂವರನ್ನು ವಶಕ್ಕೆ ಪಡೆದು ತನಿಖೆ ನಡೆಸಿತ್ತು. ಇದರ ಬೆನ್ನಲ್ಲೇ ವಕ್ಕನಳ್ಳಿ ಭಾಗದಿಂದ ಐಎನ್ಎಸ್ ಪತಾಂಜಲಿ ಆಸ್ಪತ್ರೆ ಹಿಂಬದಿಯಿಂದ ಬಿಣಗಾ ಚತುಷ್ಪಥ ಹೆದ್ದಾರಿಯ ಸುರಂಗ ಮಾರ್ಗದವರೆಗೂ ಡ್ರೋನ್ ಹಾರಿದ್ದು ಬೈಕ್ ಅಥವಾ ಸನ್ ರೂಫ್ ಕಾರಿನ ಮೂಲಕ ತೆರಳುತ್ತಾ ಈ ಡ್ರೋನ್ ನಿಯಂತ್ರಣ ಮಾಡಿರುವ ಸಂಶಯ ವ್ಯಕ್ತವಾಗಿದೆ.
ಹೆಚ್ಚಿನದಾಗಿ 600 ಮೀ. ಅಥವಾ 1,200 ಮೀ. ದೂರದವರೆಗೆ ಹಾರಾಡುವ ಸಾಮರ್ಥ್ಯದ ಡ್ರೋನ್ ಸ್ಥಳೀಯವಾಗಿ ಬಳಕೆಯಾಗುವುದು ಸಾಮಾನ್ಯ. ಆದರೆ ಈ ಡ್ರೋನ್ ಸುಮಾರು 3 ಕಿ.ಮೀ.ಗೂ ಹೆಚ್ಚು ದೂರ ಹಾರಿದ್ದು ನೌಕಾದಳ ಅಧಿಕಾರಿಗಳು, ಸ್ಥಳೀಯ ಪೊಲಿಸರು ಹಾಗೂ ಗುಪ್ತಚರ ಸಂಸ್ಥೆ ತನಿಖೆಗಿಳಿದಿದೆ.
ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ಹಾಗೂ ನೌಕಾದಳದ ಅಧಿಕಾರಿಗಳು ಅರಣ್ಯ ಇಲಾಖೆ, ಹೆದ್ದಾರಿ ಕಾಮಗಾರಿ ನಡೆಸುತ್ತಿರುವ ಐಆರ್ಬಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವನ್ನು ಸಂಪರ್ಕಿಸಿದಾಗ ನಾವು ಡ್ರೋನ್ ಬಳಸಿಲ್ಲ ಎಂದು ಹೇಳಿವೆ. ಹೀಗಾಗಿ ಈಗ ನೈಟ್ ವಿಷನ್ ಡ್ರೋನ್ ಬಳಸಿದವರು ಯಾರು ಎನ್ನುವ ಬಗ್ಗೆ ತನಿಖೆ ಆರಂಭಿಸಲಾಗಿದೆ.
ನೌಕಾದಳದ 3ನೇ ಹಂತದ ಕಾಮಗಾರಿ ಮುಗಿಯುವ ಹಂತದಲ್ಲಿದ್ದು, ಈಗ ನಿಷೇಧಿತ ಪ್ರದೇಶದಲ್ಲಿ ಡ್ರೋನ್ ಹಾರಿರುವುದು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.
ಕಾರವಾರ: ಕಾಳಿ ನದಿಗೆ (Kali River) ಅಡ್ಡಲಾಗಿ ಕಟ್ಟಿದ್ದ ಸೇತುವೆ ಕುಸಿತಗೊಂಡ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ರಾಷ್ಟ್ರೀಯ ಹೆದ್ದಾರಿ (National Highway) 66 ರ ಗೋವಾ- ಕಾರವಾರ (Goa-Karawara) ಸಂಚಾರವನ್ನು ತಾತ್ಕಾಲಿಕ ನಿಷೇಧಿಸಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾರವರು ಆದೇಶಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಐಆರ್ಬಿ ಕಂಪನಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ಕಾಮಗಾರಿ ನಡೆಸುತ್ತಿದೆ. ಕಾಳಿ ನದಿಯಲ್ಲಿ ಒಂದು ಹೊಸ ಸೇತುವೆ ನಿರ್ಮಿಸಿದೆ. ಆದರೆ ಇನ್ನೊಂದು ಬದಿಯಲ್ಲಿ ಹಳೇಯ ಸೇತುವೆಯ ಮೇಲೆ ಸಂಚಾರಕ್ಕೆ ಅನುಮತಿ ನೀಡಿತ್ತು.
ನಿಯಮದ ಪ್ರಕಾರ ಐಆರ್ಬಿ ಎರಡು ಹೊಸ ಸೇತುವೆಗಳನ್ನು ನಿರ್ಮಾಣ ಮಾಡಬೇಕಿತ್ತು. ಆದರೆ 41 ವರ್ಷದ ಸೇತುವೆಯ ಮೇಲೆ ಸಂಚಾರಕ್ಕೆ ಅನುಮತಿ ನೀಡಿದ ಪರಿಣಾಮ ಈ ದುರಂತ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಕಾರವಾರ ನಗರ ಠಾಣೆಯಲ್ಲಿ ಬಿಎನ್ಎಸ್ ಕಲಂ 110, 125, 285 ಅಡಿ ಐಆರ್ಬಿ ಕಂಪನಿ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
ಹಬ್ಬುವಾಡ ರಸ್ತೆಯಲ್ಲಿ ಡಿಪೋ ಇದ್ದು ಬಸ್ಸುಗಳನ್ನು ಹೊರ ತೆಗೆಯಲು ಚಾಲಕರು ಹರಸಾಹಸ ಪಡುತ್ತಿದ್ದಾರೆ. ಮೂರು ದಿನಗಳಿಂದ ಬಿಟ್ಟು ಬಿಡದೇ ಮಳೆ ಸುರಿಯುತ್ತಿದ್ದು, ಚರಂಡಿ ನೀರು ಡಿಪೋಗೆ ನುಗ್ಗಿದ ಪರಿಣಾಮ ಸಮಸ್ಯೆಯಾಗಿದೆ.
ಹೊನ್ನಾವರ ಭಾಸ್ಕೇರಿ ವರ್ನಕೇರಿ ಬಳಿ ಮತ್ತೆ ಗುಡ್ಡ ಕುಸಿತವಾಗಿದ್ದು ರಾಷ್ಟ್ರೀಯ ಹೆದ್ದಾರಿ 69 ಸಂಚಾರ ತಾತ್ಕಾಲಿಕ ಬಂದ್ ಆಗಿತ್ತು. ಹೊನ್ನಾವರ -ಬೆಂಗಳೂರು ರಸ್ತೆಯಲ್ಲಿ ನೂರಾರು ವಾಹನಗಳು ಬೆಳಗ್ಗೆ ನಿಂತಿದ್ದವು. ಗುಡ್ಡ ತೆರವು ಮಾಡಿದ ಬಳಿಕ ಈಗ ವಾಹನಗಳು ಸಂಚರಿಸುತ್ತಿವೆ.
ಕಾರವಾರ: ಉತ್ತರ ಕನ್ನಡ (Utttara Kannada) ಜಿಲ್ಲೆಯಾದ್ಯಂತ ಭಾರೀ ಮಳೆ (Rain) ಸುರಿಯುತ್ತಿದ್ದು ಹೊನ್ನಾವರದ (Honnavara) ಭಾಸ್ಕೇರಿ ಬಳಿ ಗುಡ್ಡ ಕುಸಿದಿದೆ. ದೊಡ್ಡ ಕಲ್ಲುಬಂಡೆ ಹೆದ್ದಾರಿಗೆ ಉರುಳಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 206 (National Highway 206) ಸಂಚಾರ ಬಂದ್ ಆಗಿದೆ.
ಸದ್ಯ ಹೆದ್ದಾರಿಗೆ ಬಿದ್ದ ಕಲ್ಲುಬಂಡೆಯನ್ನು ತೆರವುಗೊಳಿಸಲು ತಡವಾಗುತ್ತಿದ್ದು ಕಾರ್ಯಾಚರಣೆ ಇನ್ನೂ ಪ್ರಾರಂಭವಾಗಬೇಕಿದೆ. ಮತ್ತಷ್ಟು ಗುಡ್ಡ ಕುಸಿಯುವ ಸಾಧ್ಯತೆ ಇದ್ದು ಕಾರ್ಯಾಚರಣೆ ಅಡ್ಡಿಯಾಗುವ ಸಾಧ್ಯತೆಯಿದೆ.
ಕಾರವಾರ: ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ (Gokarna Mahabaleshwara Temple) ಪೂಜೆಯ ಹಕ್ಕಿಗಾಗಿ ಅರ್ಚಕರ ನಡುವೆ ಗಲಾಟೆ ನಡೆದಿದೆ. ದೇವಸ್ಥಾನದ ಗರ್ಭಗುಡಿಯಲ್ಲಿ ಭಕ್ತರಿಗೆ ದೇವರ ದರ್ಶನಕ್ಕೂ ಬಿಡದೇ ಪ್ರತಿಭಟನೆ ನಡೆಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ದೇವಾಲಯದಲ್ಲಿ ಈ ಘಟನೆ ನಡೆದಿದೆ. ನಂದಿ ಮಂಟಪದಲ್ಲಿ ತೀರ್ಥ ನೀಡುವ ಬಾರಿಗಾಗಿ ಎರಡು ಕುಟುಂಬದವರು ಕಾದಾಡಿದ್ದಾರೆ. ಜಂಬೆ ಕುಟುಂಬ ಹಾಗೂ ಗೋಪಿ ಕುಟುಂಬ ಹಕ್ಕಿಗಾಗಿ ಕೋರ್ಟ್ ಮೊರೆ ಹೋಗಿದ್ದವು. ಇದನ್ನೂ ಓದಿ: SSLCಯಲ್ಲಿ ರಾಜ್ಯಕ್ಕೆ ಪ್ರಥಮ ಬಂದ ಅಂಕಿತಾಗೆ ಜಿ.ಪಂ ಸಿಇಓ ಅಭಿನಂದನೆ
ಕಳೆದ ಕೆಲವು ತಿಂಗಳಿಂದ ನಂದಿ ಮಂಟಪದಲ್ಲಿ ಜಂಬೆ ಕುಟುಂಬ ತೀರ್ಥ ನೀಡುತ್ತಿದೆ. ಇಂದಿನಿಂದ ನಂದಿ ಮಂಟಪದಲ್ಲಿ ತೀರ್ಥ ನೀಡುವ ಹಕ್ಕು ನಮ್ಮ ಬಾರಿ ಎಂದು ದೇವಸ್ಥಾನದ ಗರ್ಭಗುಡಿಯಲ್ಲಿ ಗೋಪಿ ಕುಟುಂಬ ತಗಾದೆ ತೆಗೆದಿದೆ.
ಕಾರವಾರ: ಗೋಕರ್ಣದಿಂದ ನಾಪತ್ತೆಯಾಗಿದ್ದ ಜಪಾನ್ (Japan Women) ದೇಶದ ಪ್ರವಾಸಿ ಮಹಿಳೆ ಕೇರಳದಲ್ಲಿ ಪತ್ತೆಯಾಗಿದ್ದು, ಗೋಕರ್ಣ ಪೊಲೀಸರ ತಂಡ ಆಕೆಯನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದೆ.
ಕಾಣೆಯಾಗಿದ್ದ ಎಮಿ ಯಮಾಝಕಿ ಆನ್ಲೈನ್ನಲ್ಲಿ ಇರುವ ಕುರಿತು ಪತ್ತೆ ನಡೆಸಿದ ಪೊಲೀಸರು ಕೇರಳದ ಸ್ಥಳ ಟ್ರ್ಯಾಕ್ ಮಾಡಿದ್ದರು. ನಂತರ ಅಲ್ಲಿಗೆ ತೆರಳಿದ್ದಾಗ ಆಕೆ ಪತ್ತೆಯಾಗಿದ್ದು, ಇದೀಗ ಗೋಕರ್ಣಕ್ಕೆ ಕರೆತರುತ್ತಿದ್ದಾರೆ.
ಪತಿಯ ಮೇಲಿನ ಕೋಪ ಪೊಲೀಸರಿಗೆ ತಂದ ಪಜೀತಿ
ಫೆ.4 ರಂದು ಗೋಕರ್ಣದ ಬಂಗ್ಲೆಗುಡ್ಡದ ನೇಚರ್ ಕಾಟೇಜ್ನಲ್ಲಿ ತನ್ನ ಪತಿಯ ಜತೆ ತಂಗಿದ್ದ ಮಹಿಳೆ ಯಾವುದೋ ವಿಷಯಕ್ಕೆ ಗಲಾಟೆ ಮಾಡಿಕೊಂಡಿದ್ದಳು. ನಂತರ ಪತಿಯ ಮೇಲಿನ ಸಿಟ್ಟಿನಿಂದ ಮುಂಜಾನೆ ಎದ್ದು ಹೋದ ಮಹಿಳೆ ಗೋಕರ್ಣದ ರೈಲ್ವೆ ನಿಲ್ದಾಣಕ್ಕೆ ತೆರಳಿ ಹಿಂದೆ ಭೇಟಿ ನೀಡಿದ್ದ ಕೇರಳಕ್ಕೆ ತೆರಳಿದ್ದಾಳೆ. ಈ ವೇಳೆ ಆನ್ಲೈನ್ನಲ್ಲಿ ಸಕ್ರಿಯವಾಗಿದ್ದರಿಂದ ಪತ್ತೆಹಚ್ಚುವಲ್ಲಿ ಪೊಲೀಸರಿಗೂ ಸಹಾಯವಾಗಿದ್ದು, ಸ್ಥಳಕ್ಕೆ ತೆರಳಿ ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಮಂಡ್ಯ ಸಂಸದೆ ಸುಮಲತಾ ಕಾಂಗ್ರೆಸ್ ಸೇರ್ತಾರೆ – ಜಿ.ಟಿ ದೇವೇಗೌಡ ಹೊಸ ಬಾಂಬ್!
ಕಾರವಾರ: ಕುಡಿದ ಮತ್ತಿನಲ್ಲಿ ಕರ್ತವ್ಯ ನಿರತ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ಮತ್ತು ಹಣದ ವಂಚನೆಯ ಪ್ರಕರಣದಲ್ಲಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ (Congress) ಮಾಜಿ ಶಾಸಕ ವಿ.ಎಸ್ ಪಾಟೀಲ್ ಅವರ ಪುತ್ರನನ್ನು ಶನಿವಾರ ರಾತ್ರಿ ಬೆಂಗಳೂರಿನಲ್ಲಿ ಮುಂಡಗೋಡು ಪೊಲೀಸರು (Mundgod Police) ಬಂಧಿಸಿದ್ದಾರೆ.
ಬಾಪುಗೌಡ ಪಾಟೀಲ್ (Bapugouda Patil) ಬಂಧಿತ ಆರೋಪಿ. 2011ರಲ್ಲಿ ಮುಂಡಗೋಡ ಅರಣ್ಯ ಇಲಾಖೆಯ ಐಬಿಯಲ್ಲಿ ಕುಡಿದ ಮತ್ತಿನಲ್ಲಿ15 ಜನರ ಜೊತೆ ಸೇರಿ ಎಎಸ್ಐ ಬಾಲಕೃಷ್ಣ ಪಾಲೇಕರ್ ಮೇಲೆ ಹಲ್ಲೆ ನಡೆಸಿದ್ದರು. ಇದಲ್ಲದೇ ಎರಡು ಚೆಕ್ ಬೌನ್ಸ್ ಪ್ರಕರಣ ಸೇರಿ ಬಾಪು ಗೌಡ ಪಾಟೀಲ್ ವಿರುದ್ಧ ಸೆಕ್ಷನ್ 353, 141,143, 147, 323, 353, 504, 506,149 ಅಡಿ ಪ್ರಕರಣ ಸಹ ದಾಖಲಾಗಿತ್ತು.
ನ್ಯಾಯಾಲಯಕ್ಕೆ ಹಾಜರಾಗದೇ ಕಳೆದ ಆರು ತಿಂಗಳಿಂದ ತಲೆಮರೆಸಿಕೊಂಡಿದ್ದ ಬಾಪುಗೌಡ ಪಾಟೀಲ್ನನ್ನು ಪೊಲೀಸರು ಶನಿವಾರ ಬಂಧಿಸಿ ಇಂದು ಮುಂಜಾನೆ ಮುಂಡಗೋಡಿನಲ್ಲಿ ನ್ಯಾಯಾಧೀಶರ ಮುಂದೆ ಹಾಜುರುಪಡಿಸಿದ್ದರು. ನ್ಯಾಯಾಧೀಶರು ನ್ಯಾಯಾಂಗ ಬಂಧನ ವಿಧಿಸಿದ್ದಾರೆ. ಆರೋಪಿಯನ್ನು ಶಿರಸಿ ಜೈಲಿಗೆ ಕಳುಹಿಸಲಾಗಿದೆ.
ಕಾರವಾರ: ಫಕೀರರ ವೇಷ ಧರಿಸಿಕೊಂಡು ಜನರನ್ನು ಮೋಸ ಮಾಡುತ್ತಿದ್ದ ಯುವಕರಿಬ್ಬರನ್ನು ಜನರೇ ಪೊಲೀಸರಿಗೆ (Police) ಹಿಡಿದುಕೊಟ್ಟ ಘಟನೆ ಉತ್ತರಕನ್ನಡ ಜಿಲ್ಲೆಯ ದಾಂಡೇಲಿಯ ಗಾಂಧಿನಗರದಲ್ಲಿ ನಡೆದಿದೆ.
ಯುವಕರ ಮೇಲೆ ಸಂಶಯಗೊಂಡ ದಾಂಡೇಲಿಯ ದಾದಾ ಪೀರ್ ನದಿಮುಲ್ಲಾ ಎಂಬುವವರು ಇಬ್ಬರನ್ನೂ ವಿಚಾರಣೆ ನಡೆಸಿದಾಗ ನೈಜ ವಿಚಾರ ಹೊರಕ್ಕೆ ಬಂದಿದೆ. ಕೂಡಲೇ ದಾಂಡೇಲಿ ಪೊಲೀಸರನ್ನು ಸ್ಥಳಕ್ಕೆ ಕರೆಯಿಸಿದ್ದು, ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ಮುಂದುವರಿಸಿದ್ದಾರೆ.