Tag: Kargil

  • ಕಾರ್ಗಿಲ್ ಯುದ್ಧದಲ್ಲಿ ಸ್ಫೋಟಗೊಳ್ಳದ ಬಾಂಬ್ 24 ವರ್ಷದ ಬಳಿಕ ಬ್ಲ್ಯಾಸ್ಟ್, ಬಾಲಕ ಸಾವು

    ಕಾರ್ಗಿಲ್ ಯುದ್ಧದಲ್ಲಿ ಸ್ಫೋಟಗೊಳ್ಳದ ಬಾಂಬ್ 24 ವರ್ಷದ ಬಳಿಕ ಬ್ಲ್ಯಾಸ್ಟ್, ಬಾಲಕ ಸಾವು

    ಶ್ರೀನಗರ: 1999ರ ಕಾರ್ಗಿಲ್ ಯುದ್ಧದ (1999 Kargil war) ಸಂದರ್ಭದಲ್ಲಿ ಸ್ಫೋಟಗೊಂಡಿರದ ಬಾಂಬ್‌ ಒಂದು ಇತ್ತೀಚೆಗೆ ಸ್ಫೋಟಗೊಂಡ ಪರಿಣಾಮ ಓರ್ವ ಬಾಲಕ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡ ಘಟನೆ ಲಡಾಖ್‍ನ (Ladakh) ಕುರ್ಬಥಾಂಗ್‍ನ (Kurbathang) ಫುಟ್‍ಬಾಲ್ ಮೈದಾನ (Football Ground) ಒಂದರಲ್ಲಿ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

    ಪಾಶ್ಕುಮ್‍ನ (Pashkum) ಖಾರ್ಜಾಂಗ್‍ನ (Kharzong) ನಿವಾಸಿಗಳಾದ ಅಲಿ ನಕಿ, ಮುಂತಜೀರ್ ಮೆಹದಿ ಮತ್ತು ಬಾಕಿರ್ ಎಂಬ ಮೂರು ಬಾಲಕರು ಫುಟ್ಬಾಲ್ ಮೈದಾನಕ್ಕೆ ಹೋಗುತ್ತಿದ್ದರು. ಆ ವೇಳೆ ಓರ್ವ ಬಾಲಕ ಬಾಂಬ್ ಮೇಲೆ ಎಡವಿ ಬಿದ್ದಿದ್ದಾನೆ. ಪರಿಣಾಮ ಬಾಂಬ್ ಸ್ಪೋಟಗೊಂಡು (Bomb Explosion) ಬಾಕಿರ್ ಮೃತಪಟ್ಟಿದ್ದಾನೆ. ಇನ್ನುಳಿದ ಇಬ್ಬರು ಬಾಲಕರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪಾಶ್ಕುಮ್‍ನ ಕೌನ್ಸಿಲರ್ (Councillor) ಕಚೋ ಮೊಹಮ್ಮದ್ ಫಿರೋಜ್ ಹೇಳಿದ್ದಾರೆ. ಇದನ್ನೂ ಓದಿ: ಸೇನಾ ನೆಲೆಯಲ್ಲಿ ಸೈನಿಕರಿಗೆ ಗುಂಡಿಕ್ಕಿ ಹತ್ಯೆ – ಓರ್ವ ಯೋಧನ ಬಂಧನ

    ಗಾಯಗೊಂಡಿರುವ ಮಕ್ಕಳಲ್ಲಿ ಒಬ್ಬ ಅಪಾಯದಿಂದ ಪಾರಾಗಿದ್ದು, ಇನ್ನೊಬ್ಬ ಬದುಕುಳಿಯುವ ಸಾಧ್ಯತೆ ಇದೆ. ಮೃತನ ಕುಟುಂಬಕ್ಕೆ 4 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 1 ಲಕ್ಷ ರೂ. ಪರಿಹಾರ ನೀಡಲಾಗುವುದು. ಹಾಗೂ ಕಾರ್ಗಿಲ್ ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಮದ್ದುಗುಂಡುಗಳನ್ನು ಶೀಘ್ರದಲ್ಲಿ ಬೇರೆಡೆ ಸ್ಥಳಾಂತರಿಸುತ್ತೇವೆ ಎಂದು ಲಡಾಖ್‍ನ ಲೆಫ್ಟಿನೆಂಟ್ ಗವರ್ನರ್ ಬಿ.ಡಿ ಮಿಶ್ರಾ ಹೇಳಿದ್ದಾರೆ.

    ಈ ಘಟನೆಯು ಜನರ ಸುರಕ್ಷತೆಯ ಬಗ್ಗೆ ಕಳವಳವನ್ನು ಹುಟ್ಟುಹಾಕಿದೆ. ಮೈದಾನಗಳಲ್ಲಿ ಆಡುವ ಮಕ್ಕಳ ಸುರಕ್ಷತೆಯ ಬಗ್ಗೆ ಆತಂಕ ಮೂಡುತ್ತಿದೆ. ಸ್ಫೋಟಗೊಳ್ಳದ ಬಾಂಬ್‍ಗಳನ್ನು ತೆರವುಗೊಳಿಸಲು ಮತ್ತು ನಿವಾಸಿಗಳ ಸುರಕ್ಷತೆಗಾಗಿ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಗ್ಯಾಂಗ್‌ಸ್ಟರ್‌ ಅತೀಕ್‌ ಅಹ್ಮದ್‌ ತಲೆಗೆ 1, ದೇಹಕ್ಕೆ 8 ಗುಂಡೇಟು

  • ದೀಪಾವಳಿ ಎಂದರೆ ಭಯೋತ್ಪಾದನೆಯ ಅಂತ್ಯದ ಹಬ್ಬ: ಮೋದಿ

    ದೀಪಾವಳಿ ಎಂದರೆ ಭಯೋತ್ಪಾದನೆಯ ಅಂತ್ಯದ ಹಬ್ಬ: ಮೋದಿ

    ನವದೆಹಲಿ: ದೀಪಾವಳಿ ಎಂದರೆ ಭಯೋತ್ಪಾದನೆಯ ಅಂತ್ಯದ ಹಬ್ಬವಾಗಿದೆ. ಕಾರ್ಗಿಲ್‍ನಲ್ಲಿನ (Kargil) ನಮ್ಮ ಸೇನೆಯು (Soldiers) ಭಯೋತ್ಪಾದನೆಯನ್ನು ನಿಯಂತ್ರಿಸಿದೆ ಪ್ರಧಾನಿ ನರೇಂದ್ರ ಮೋದಿ (Narendra Modi) ಸಂತೋಷ ವ್ಯಕ್ತಪಡಿಸಿದರು.

    ಕಾರ್ಗಿನಲ್ ದೀಪಾವಳಿ (Diwali) ಆಚರಿಸಿದ ಅವರು, ಕಾರ್ಗಿಲ್ ಬಳಿಕ ಪಾಕಿಸ್ತಾನದ (Pakistan) ಜೊತೆಗೆ ಒಂದೇ ಒಂದು ಯುದ್ಧ ನಡೆದಿಲ್ಲ. ಸಶಸ್ತ್ರ ಪಡೆಗಳು ಗಡಿಯನ್ನು ರಕ್ಷಿಸುತ್ತಿರುವುದರಿಂದ ಪ್ರತಿಯೊಬ್ಬ ಪ್ರಜೆ ಶಾಂತಿಯುತವಾಗಿ ಮಲಗುತ್ತಾನೆ. ನಾನು ಭಾರತದ ಸಶಸ್ತ್ರ ಪಡೆಗಳ ಆತ್ಮಕ್ಕೆ ತಲೆಬಾಗುತ್ತೇನೆ. ನಿಮ್ಮ ತ್ಯಾಗ ಯಾವಾಗಲೂ ನಮ್ಮ ದೇಶವನ್ನು ಹೆಮ್ಮೆಪಡುವಂತೆ ಮಾಡಿದೆ ಎಂದು ಹೇಳಿದರು.

    ಉಕ್ರೇನ್ ಯುದ್ಧದ ಸಮಯದಲ್ಲಿ ಅಲ್ಲಿ ಸಿಲುಕಿದ್ದ ನಮ್ಮ ನಾಗರಿಕರಿಗೆ ನಮ್ಮ ರಾಷ್ಟ್ರಧ್ವಜವು ಹೇಗೆ ರಕ್ಷಣೆ ಆಯಿತು ಎಂಬುದನ್ನು ನಾವು ನೋಡಿದ್ದೇವೆ. ಜಗತ್ತಿನಾದ್ಯಂತ ಭಾರತದ ಗೌರವ ಹೆಚ್ಚಿದೆ. ಭಾರತವು ತನ್ನ ಆಂತರಿಕ ಮತ್ತು ಬಾಹ್ಯ ಶತ್ರುಗಳ ವಿರುದ್ಧ ಯಶಸ್ವಿಯಾಗಿ ನಿಂತಿರುವುದರಿಂದ ಇದು ಸಾಧ್ಯವಾಗಿದೆ. ನೀವೆಲ್ಲರೂ ಗಡಿಯಲ್ಲಿ ನಮ್ಮನ್ನು ರಕ್ಷಿಸುತ್ತಿರುವಂತೆಯೇ ನಾವು ದೇಶದೊಳಗೆ ಭಯೋತ್ಪಾದನೆ, ನಕ್ಸಲ್ ವಾದ ಭ್ರಷ್ಟಾಚಾರದ ವಿರುದ್ಧ ಹೋರಾಡಲು ಕೆಲಸ ಮಾಡುತ್ತಿದ್ದೇವೆ. ನಕ್ಸಲ್ ವಾದ ರಾಷ್ಟ್ರದ ಬಹುದೊಡ್ಡ ಭಾಗವನ್ನು ತನ್ನ ಹಿಡಿತಕ್ಕೆ ತೆಗೆದುಕೊಂಡಿತ್ತು. ಆದರೆ ಇಂದು ಅದು ವೇಗವಾಗಿ ಕಡಿಮೆಯಾಗುತ್ತಿದೆ ಎಂದರು.

    ಸೈನಿಕರನ್ನು ಕುಟುಂಬ ಎಂದ ಮೋದಿ, ಸೈನಿಕರಿಲ್ಲದೇ ನಾವು ಅದ್ಧೂರಿಯಾಗಿ ದೀಪಾವಳಿಯನ್ನು ಆಚರಿಸಲು ಸಾಧ್ಯವೇ ಇಲ್ಲ. ದೇಶದ ಸೈನಿಕರು ತಮ್ಮ ಜವಾಬ್ದಾರಿಯನ್ನು ಅರಿತುಕೊಳ್ಳಲು ಅನುಕೂಲವಾಗುವಂತೆ ಗಡಿ ಪ್ರದೇಶಗಳಲ್ಲಿ ತಡೆರಹಿತ ಸಂಪರ್ಕದೊಂದಿಗೆ ಹೈಟೆಕ್ ಮೂಲಸೌಕರ್ಯಗಳನ್ನು ಅಭಿವೃದ್ಧಿ ಪಡಿಸುತ್ತಿದ್ದೇವೆ. ಮಹಿಳಾ ಅಧಿಕಾರಿಗಳ ಸೇರ್ಪಡೆ ನಮ್ಮ ಶಕ್ತಿಯ ಬೆಳವಣಿಗೆಗೆ ಕಾರಣವಾಗುತ್ತದೆ ಎಂದರು. ಇದನ್ನೂ ಓದಿ: ಹಣೆಬರಹ ಸರಿ ಇದ್ದಿದ್ರೆ 2013ರಲ್ಲೇ ಸಿಎಂ ಆಗ್ತಿದ್ದೆ: ಪರಮೇಶ್ವರ್ ಬೇಸರ

    ಬಿಜೆಪಿ ಸರ್ಕಾರ ಯಾವಾಗಲೂ ಯುದ್ಧವನ್ನು ಕೊನೆಯ ಆಯ್ಕೆ ಎಂದು ಪರಿಗಣಿಸುತ್ತದೆ. ಅದು ಲಂಕಾ ಅಥವಾ ಕುರುಕ್ಷೇತ್ರದಲ್ಲಿ ನಡೆಯಲಿ, ಕೊನೆಯವರೆಗೂ ಅದನ್ನು ತಡೆಯಲು ಸಕಲ ಪ್ರಯತ್ನವನ್ನು ಮಾಡಲಾಯಿತು. ಅದೇ ರೀತಿ ನಾವು ಯಾವಾಗಲೂ ವಿಶ್ವ ಶಾಂತಿಯ ಪರವಾಗಿಯೇ ಇದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಕಾರ್ಗಿಲ್ ಯುದ್ಧಭೂಮಿಯಲ್ಲಿ ಯೋಧರೊಂದಿಗೆ ದೀಪಾವಳಿ ಆಚರಿಸಿದ ಮೋದಿ

    Live Tv
    [brid partner=56869869 player=32851 video=960834 autoplay=true]

  • ಕಾರ್ಗಿಲ್ ಯುದ್ಧಭೂಮಿಯಲ್ಲಿ ಯೋಧರೊಂದಿಗೆ ದೀಪಾವಳಿ ಆಚರಿಸಿದ ಮೋದಿ

    ಕಾರ್ಗಿಲ್ ಯುದ್ಧಭೂಮಿಯಲ್ಲಿ ಯೋಧರೊಂದಿಗೆ ದೀಪಾವಳಿ ಆಚರಿಸಿದ ಮೋದಿ

    ನವದೆಹಲಿ: ಇಂದು ಬೆಳ್ಳಂಬೆಳಗ್ಗೆ ಕಾರ್ಗಿಲ್ (Kargil) ಯುದ್ಧಭೂಮಿಗೆ ತೆರಳಿದ ಪ್ರಧಾನಿ ನರೇಂದ್ರ ಮೋದಿ (Naendra Modi) ಯೋಧರೊಂದಿಗೆ ಸಂಭ್ರಮದಿಂದ ದೀಪಾವಳಿ ಆಚರಿಸಿದ್ದಾರೆ.

    2014 ರಲ್ಲಿ ಅಧಿಕಾರಕ್ಕೆ ಬಂದಾಗಿನಿಂದಲೂ ಪ್ರಧಾನಿ (Prime Minister) ನರೇಂದ್ರ ಮೋದಿ (Narendra Modi) ಪ್ರತಿ ವರ್ಷದ ದೀಪಾವಳಿ ಆಚರಣೆಗೆ ವಿವಿಧ ಮಿಲಿಟರಿ ಸೌಲಭ್ಯ ಕೇಂದ್ರಗಳಿಗೆ ಭೇಟಿ ನೀಡುತ್ತಿದ್ದಾರೆ. ಅದರಂತೆ ಇಂದು ಕಾರ್ಗಿಲ್ ಯುದ್ಧಭೂಮಿಗೆ ತೆರಳಿ ಯೋಧರೊಂದಿಗೆ ದೀಪಾವಳಿ ಆಚರಿಸಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಝೈದ್ ಖಾನ್ ನಟನೆಯ ‘ಬನಾರಸ್’ ಸಿನಿಮಾದ ಪ್ರಿರಿಲೀಸ್ ಕಾರ್ಯಕ್ರಮ

    ಬಳಿಕ ದೀಪಾವಳಿ (Diwali) ಸಂದೇಶ ನೀಡಿರುವ ಮೋದಿ ಅವರು, ದೇಶದ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು. ದೀಪಾವಳಿ ಹಬ್ಬ ಕಾಂತಿ ಹಾಗೂ ಹೊಳಪಿಗೆ ಸಂಬಂಧಿಸಿದೆ. ಈ ಪವಿತ್ರ ಹಬ್ಬವು ನಮ್ಮ ಜೀವನದಲ್ಲಿ ಸಂತೋಷ ಮತ್ತು ಯೋಗಕ್ಷೇಮದ ಉತ್ಸಾಹ ಹೆಚ್ಚಿಸಲಿ. ನೀವು ನಿಮ್ಮ ಕುಟುಂಬ, ಸ್ನೇಹಿತರೊಂದಿಗೆ ದೀಪಾವಳಿ ಆಚರಿಸುತ್ತೀರಿ ಎಂದು ನಾನು ಭಾವಿಸುತ್ತೇನೆ ಎಂಬುದಾಗಿ ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಆಶಿಕಿ ನಟ ರಾಹುಲ್ ರಾಯ್‍ಗೆ ಬ್ರೇನ್ ಸ್ಟ್ರೋಕ್

    ಆಶಿಕಿ ನಟ ರಾಹುಲ್ ರಾಯ್‍ಗೆ ಬ್ರೇನ್ ಸ್ಟ್ರೋಕ್

    ಮುಂಬೈ: ಶೂಟಿಂಗ್ ವೇಳೆ ಆಶಿಕಿ ನಟ ರಾಹುಲ್ ರಾಯ್‍ಗೆ ಬ್ರೇನ್ ಸ್ಟ್ರೋಕ್ ಆಗಿ ಮಾತನಾಡುವ ಸಾಮರ್ಥ್ಯ ವನ್ನು ಕಳೆದುಕೊಂಡಿದ್ದಾರೆ.

    ಆಶಿಕಿ ಖ್ಯಾತಿಯ ನಟ ರಾಹುಲ್ ರಾಯ್ ಶೂಟಿಂಗ್ ಸಮಯದಲ್ಲಿ ಬ್ರೇನ್ ಸ್ಟ್ರೋಕ್ ಆಗಿದ್ದು, ಆಸ್ಪತ್ರೆಗೆ ದಾಖಲು ಆಗಿದ್ದಾರೆ. ಅವರು ನಟಿಸುತ್ತಿರುವ 2021ರ ಬಹುನೀರಿಕ್ಷೆಯ ಹೊಸ ಸಿನಿಮಾ ಎಲ್‍ಎಸಿ-ಲಿವ್ ದ ಬ್ಯಾಟಲ್ ಸಿನಿಮಾದ ಶೂಟಿಂಗ್ ವೇಳೆ ಬ್ರೇನ್ ಸ್ಟ್ರೋಕ್ ಸಂಭವಿಸಿದೆ.

    ಕಾರ್ಗಿಲ್‍ನಲ್ಲಿ ಸಿನಿಮಾ ಚಿತ್ರೀಕರಣ ನಡೆಸುತ್ತಿತ್ತು. ಈ ವೇಳೆ ತುಂಬಾ ಚಳಿ ಹಾಗೂ ಹಿಮದ ವಾತಾವರಣ ಇದ್ದ ಕಾರಣ ರಾಹುಲ್ ಬ್ರೇನ್ ಸ್ಟ್ರೋಕ್ ಆಗಿ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಚಿತ್ರತಂಡ ರಾಹುಲ್ ಅವರನ್ನು  ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಈ ದುರ್ಘಟನೆ ಹಿನ್ನೆಲೆಯಲ್ಲಿ ಇಡೀ ಚಿತ್ರತಂಡ ಶ್ರೀನಗರದಿಂದ ಮುಂಬೈಗೆ ಬಂದು ಸರಿಯಾದ ಸಮಯಕ್ಕೆ ಚಿಕಿತ್ಸೆ ಕೊಡಿಸಿದ್ದಾರೆ. ಎರಡು ದಿನಗಳ ಹಿಂದೆಯೇ ಮುಂಬೈನ ನಾನಾವತಿ ಆಸ್ಪತ್ರೆಗ ದಾಖಲಿಸಲಾಗಿದೆ. ರಾಹುಲ್(52)ವರ್ಷವಾಗಿರುವುದರಿಂದ ಕೋವಿಡ್ 19 ಪರೀಕ್ಷೆ ಮಾಡಲಾಗಿತ್ತು. ರಿಪೋರ್ಟ್ ನೆಗೆಟಿವ್ ಬಂದಿದೆ ಎಂದು ರಾಹುಲ್ ಸಹೋದರ ರೋಮಿನ್ ಸೇನ್ ಹೇಳಿದ್ದಾರೆ.

    ರಾಹುಲ್ ಸದ್ಯಕ್ಕೆ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 1990ರ ಹಿಟ್ ಸಿನಿಮಾ ಆಶಿಕಿ ಮೂಲಕ ಬಾಲಿವುಡ್ ಚಿತ್ರರಂರಕ್ಕೆ ಪಾದಾರ್ಪಣೆ ಮಾಡಿದ ರಾಹುಲ್ ರಾಯ್ ಬಹುಬೇಡಿಕೆಯ ನಟನಾಗಿ ಮಿಂಚಿದ್ದಾರೆ. ಮೊದಲ ಸಿನಿಮಾವೇ ಇವರಿಗೆ ದೊಡ್ಡ ಮಟ್ಟದ ಯಶಸ್ಸು ತಂದುಕೊಟ್ಟಿತ್ತು. ಹೊಸ ಸಿನಿಮಾದ ಚಿತ್ರೀಕರಣದ ವೇಳೆ ಈ ಘಟನೆ ಸಂಭವಿಸಿದೆ.

  • ಅದ್ಧೂರಿ ಕಾರ್ಗಿಲ್ ವಿಜಯೋತ್ಸವ- ಎರಡು ಸೇತುವೆ ಲೋಕಾರ್ಪಣೆ

    ಅದ್ಧೂರಿ ಕಾರ್ಗಿಲ್ ವಿಜಯೋತ್ಸವ- ಎರಡು ಸೇತುವೆ ಲೋಕಾರ್ಪಣೆ

    ನವದೆಹಲಿ: ಯೋಧರು ಕಾರ್ಗಿಲ್ ವಿಜಯೋತ್ಸವವವನ್ನು ಅದ್ಧೂರಿಯಾಗಿ ಆಚರಿಸುತ್ತಿದ್ದಾರೆ. ವಿಜಯೋತ್ಸವದ ಅಂಗವಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜಮ್ಮು ಕಾಶ್ಮೀರದ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದ್ದು, ಇದೇ ವೇಳೆ ಪರ್ವತಗಳಿಗೆ ಸಂಪರ್ಕ ಕಲ್ಪಿಸುವ ಎರಡು ಸೇತುವೆಗಳನ್ನು ಉದ್ಘಾಟಿಸಲಿದ್ದಾರೆ.

    ಆಪರೇಷನ್ ವಿಜಯ್‍ನ 20ನೇ ವರ್ಷಾಚರಣೆ ಹಿನ್ನೆಲೆ ಶನಿವಾರ ಜಮ್ಮು ಕಾಶ್ಮೀರದಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ರಾಜನಾಥ್ ಸಿಂಗ್ ಗೌರವ ಸಲ್ಲಿಸಿದರು. 1999ರಲ್ಲಿ ನಡೆದ ಕಾರ್ಗಿಲ್ ಯುದ್ಧದಲ್ಲಿ ಪಾಕ್ ಸೈನಿಕರು ಹಾಗೂ ಉಗ್ರರ ಒಳನುಸುಳುವಿಕೆ ವಿರುದ್ಧ ನಡೆದ ಯುದ್ಧದಲ್ಲಿ ಭಾರತ ಜಯಗಳಿಸಿತ್ತು.

    ಯುದ್ಧ ಸ್ಮಾರಕಕ್ಕೆ ಗೌರವ ಸಲ್ಲಿಸಿದ ನಂತರ ಬಾರ್ಡರ್ ರೋಡ್ಸ್ ಆರ್ಗನೈಸೇಶನ್ ಕಥುವಾ ಜಿಲ್ಲೆಯ ಉಝ್ ಹಾಗೂ ಸಂಬ ಜಿಲ್ಲೆಯ ಬಸಂತರ್‍ನಲ್ಲಿ ನಿರ್ಮಿಸಿರುವ ಎರಡು ಸೇತುವೆಗಳನ್ನು ರಾಷ್ಟ್ರಕ್ಕೆ ಸಮರ್ಪಣೆ ಮಾಡಲಿದ್ದಾರೆ. ಉಝ್ ಸೇತುವೆ 1 ಕಿ.ಮೀ ಉದ್ದವಿದ್ದು, ಬಸಂತರ್ ಸೇತುವೆ 617.4 ಕಿ.ಮೀ.ಉದ್ದವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    1999ರಲ್ಲಿ ಭಾರತೀಯ ಸೇನೆ ಅಕ್ರಮವಾಗಿ ಒಳ ನುಸುಳುತ್ತಿದ್ದ ಪಾಕಿಸ್ತಾನ ಸೈನಿಕರು ಹಾಗೂ ಉಗ್ರರ ವಿರುದ್ಧ ಹೋರಾಡಿ, ಶ್ರೀನಗರದ ಲೇಹ್ ಹೆದ್ದಾರಿಯನ್ನು ಗಮನದಲ್ಲಿರಿಸಿಕೊಂಡು ಪಾಕಿಸ್ತಾನ ಆಕ್ರಮಿಸಿದ್ದ ಹಲವು ಪರ್ವತ ಶಿಖರಗಳನ್ನು ವಶಪಡಿಸಿಕೊಂಡಿತ್ತು.

    ಜು.14ರ ಭಾರತದ ವಿಜಯ ದಿನದಂದು ರಾಜನಾಥ್ ಸಿಂಗ್ ಅವರು ದೆಹಲಿಯ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೆಟಿ ನೀಡಿ, ‘ವಿಜಯ ಜ್ವಾಲೆ’ಯನ್ನು ಹೊತ್ತಿಸಿದ್ದರು. ಜ್ವಾಲೆಯು ಜು.26 ರಂದು ಡ್ರಾಸ್ ತಲುಪಲಿದ್ದು, ಸುಮಾರು 9 ಪಟ್ಟಣಗಳು ಹಾಗೂ ನಗರಗಳನ್ನು ಹಾದು ಹೋಗಲಿದೆ. ನಂತರ ಕಾರ್ಗಿಲ್‍ಗೆ ತಲುಪಿ ಶಾಶ್ವತ ವಿಜಯ ಜ್ವಾಲೆ ಬಳಿ ವಿಲೀನಗೊಳಿಸಲಾಗುತ್ತದೆ.

    ವಿಜಯ ದಿನವನ್ನು ಭಾರತೀಯ ಸೇನೆ ವಿಜೃಂಭಣೆಯಿಂದ ಆಚರಿಸುತ್ತಿದ್ದು, ಈ ಮೂಲಕ ಆಪರೇಷನ್ ವಿಜಯ್‍ನಲ್ಲಿ ಭಾಗವಹಿಸಿದ ಯೋಧರಿಗೆ ನಮನ ಸಲ್ಲಿಸಲಾಗುತ್ತಿದೆ. ಆಪರೇಷನ್ ವಿಜಯ್‍ನ್ನು ‘ರಿಮೆಂಬರ್, ರೀಜಾಯ್ಸ್ ಆಂಡ್ ರಿನ್ಯೂ(ನೆನಪಿಡಿ, ಹೆಮ್ಮೆಪಡಿ ಮತ್ತು ನವೀಕರಿಸಿ)’ ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಅಲ್ಲದೆ, ಸೈನ್ಯದ ಮೂರು ಬೆಟಾಲಿಯನ್‍ಗಳು ಅಸಾಧ್ಯವಾಗದ ಸ್ಥಿಯಲ್ಲಿ ಹೋರಾಡಿದ ಶಿಖರಗಳಿಗೆ ದಂಡಯಾತ್ರೆ ಕೈಗೊಳ್ಳುತ್ತಿವೆ.

    ಕಾರ್ಗಿಲ್ ವಿಜಯ ದಿನದ ಅಂಗವಾಗಿ ಇಂಡೋ ಟಿಬೇಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಮತ್ತು ಬಿಎಸ್‍ಎಫ್ ಯೋಧರ ತಂಡಗಳು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೋಂಡಿದ್ದು, ಸೈನಿಕರು, ಪೊಲೀಸ್ ಹಾಗೂ ಅರೆಸೇನಾ ಪಡೆಗಳ ಧೈರ್ಯದ ಕಥೆಗಳನ್ನು ಪ್ರದರ್ಶಿಸಲಿವೆ. ಹೀಗಾಗಿ ವಿವಿಧ ಕಾರ್ಯಕ್ರಮಗಳನ್ನು ಸೇನೆ ಹಾಕಿಕೊಂಡಿದ್ದು, ಕಾರ್ಗಿಲ್ ವಿಜಯ ದಿನದ ಬಳಿ ಸಾವನ್ನಪ್ಪಿದ ಸೈನಿಕರ ಕುಟುಂಬ ಸದಸ್ಯರನ್ನು ಗೌರವಿಸಲಾಗುತ್ತಿದೆ.

    ಕಾರ್ಯಕ್ರಮಗಳ ಭಾಗವಾಗಿ ರಕ್ತದಾನ ಶಿಬಿರ, ಆರೋಗ್ಯ ಶಿಬಿರ, ಪ್ರೇರಣೆ ನೀಡುವ ಉಪನ್ಯಾಸ, ಶಾಲಾ ಮಕ್ಕಳಿಗೆ ಕಾರ್ಗಿಲ್ ಪ್ರದೇಶದ ಶೈಕ್ಷಣಿ ಪ್ರವಾಸವನ್ನು ಏರ್ಪಡಿಸಲಾಗಿದೆ. ಅಲ್ಲದೆ, ಕಾರ್ಗಿಲ್ ವಿಜಯದ ಕುರಿತು ರಕ್ಷಣಾ ಸಚಿವಾಲಯದಿಂದ ನಿರ್ಮಿಸಿದ 7 ನಿಮಿಷಗಳ ಕಿರು ಚಿತ್ರ, ಫೋಟೊ ಗ್ಯಾಲರಿ, ಸೈನಿಕರ ಶೌರ್ಯ ಬಿಂಬಿಸುವ ಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದೆ. ಈ ಎಲ್ಲ ಕಾರ್ಯಕ್ರಮಗಳು ಜು.27ರ ವರೆಗೆ ನಡೆಯಲಿವೆ ಎಂದು ಇಂಡೋ ಟಿಬೇಟಿಯನ್ ಬಾರ್ಡರ್ ಪೊಲೀಸ್(ಐಟಿಬಿಪಿ) ವಕ್ತಾರ ವಿವೇಕ್ ಪಾಂಡೆ ತಿಳಿಸಿದ್ದಾರೆ.

  • ಕಾರ್ಗಿಲ್ ಯುದ್ಧದಂತಹ ಪ್ರಯತ್ನಕ್ಕೆ ಕೈ ಹಾಕುವ ಧೈರ್ಯ ಪಾಕ್‍ಗೆ ಇಲ್ಲ: ಬಿಪಿನ್ ರಾವತ್

    ಕಾರ್ಗಿಲ್ ಯುದ್ಧದಂತಹ ಪ್ರಯತ್ನಕ್ಕೆ ಕೈ ಹಾಕುವ ಧೈರ್ಯ ಪಾಕ್‍ಗೆ ಇಲ್ಲ: ಬಿಪಿನ್ ರಾವತ್

    ನವದೆಹಲಿ: ಪಾಕಿಸ್ತಾನವು ಮತ್ತೊಮ್ಮೆ 1999ರಲ್ಲಿ ನಡೆದ ಕಾರ್ಗಿಲ್ ಯುದ್ಧದಂತಹ ಪ್ರಯತ್ನ ಮಾಡುವುದಿಲ್ಲ. ಏಕೆಂದರೆ ಪಾಕ್ ಅನೇಕ ಪರಿಣಾಮಗಳನ್ನು ಎದುರಿಸಿದೆ ಎಂದು ಭಾರತೀಯ ಸೇನೆಯ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹೇಳಿದ್ದಾರೆ.

    ಪಾಕಿಸ್ತಾನದ ವಿರುದ್ಧ ಕಾರ್ಗಿಲ್‍ನಲ್ಲಿ ನಡೆದ ಆಪರೇಷನ್ ವಿಜಯ್‍ದಲ್ಲಿ ಭಾರತ ಗೆಲುವು ಸಾಧಿಸಿತ್ತು. ಈ ನೆನಪಿಗಾಗಿ ನಡೆದ ಕಾರ್ಯಕ್ರಮವೊಂದರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಶಸ್ತ್ರ ಪಡೆಗಳು ಗಡಿ ಪ್ರದೇಶಗಳಲ್ಲಿ ಕಟ್ಟುನಿಟ್ಟಾಗಿ ನಿಗಾ ವಹಿಸಿವೆ. ಎಲ್ಲ ಪ್ರದೇಶವನ್ನೂ ರಕ್ಷಿಸುತ್ತೇವೆ. ಸೈನ್ಯದವರು ಕಟ್ಟುನಿಟ್ಟಾಗಿ ಕಾವಲು ಕಾಯುತ್ತಿವೆ ಎಂದು ತಿಳಿಸಿದರು.

    ಪಾಕಿಸ್ತಾನವು ಕಾರ್ಗಿಲ್ ನಂತಹ ಮತ್ತೊಂದು ಯುದ್ಧಕ್ಕೆ ಮುಂದಾಗುವುದಿಲ್ಲ ಎಂದು ಭಾವಿಸಿದ್ದೇನೆ. ಅವರಿಗೆ ಯುದ್ಧದ ಭೀಕರತೆ ಮುಟ್ಟಿದೆ. ಪಾಕಿಸ್ತಾನವು ಮುಂಬರುವ ದಿನಗಳಲ್ಲಿ ಹಾಗೂ ವರ್ಷಗಳಲ್ಲಿ ಒಳನುಸುಳುವಿಕೆಯನ್ನು ಪ್ರಯತ್ನಿಸಲು ಧೈರ್ಯ ಮಾಡುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಇದೇ ವೇಳೆ ಬಾಲಿವುಡ್ ಗೀತರಚನೆಕಾರ ಸಮೀರ್ ಅವರು ಬರೆದ ಕಾರ್ಗಿಲ್ ವೀರರಿಗೆ ಮೀಸಲಾದ ವಿಶೇಷ ಗೌರವದ ಹಾಡಿನ ವಿಡಿಯೋವನ್ನು ಬಿಪಿನ್ ರಾವತ್ ಬಿಡುಗಡೆ ಮಾಡಿದರು. ವಿಡಿಯೋದಲ್ಲಿ ಬಾಲಿವುಡ್‍ನ ಹಿರಿಯ ನಟ ಅಮಿತಾಬ್ ಬಚ್ಚನ್ ಹಾಗೂ ಅನೇಕ ಪ್ರಸಿದ್ಧ ನಟರಿದ್ದಾರೆ.

  • ಕಲ್ಲಿನಿಂದ ಹೊಡೆದು ಕರಡಿಯನ್ನು ನದಿಗೆ ತಳ್ಳಿದ್ರು – ವಿಡಿಯೋ

    ಕಲ್ಲಿನಿಂದ ಹೊಡೆದು ಕರಡಿಯನ್ನು ನದಿಗೆ ತಳ್ಳಿದ್ರು – ವಿಡಿಯೋ

    ಶ್ರೀನಗರ: ಕಲ್ಲಿನಿಂದ ಹೊಡೆದು ಕಂದು ಬಣ್ಣದ ಕರಡಿಯನ್ನು ಕಡಿದಾದ ಪರ್ವತದಿಂದ ನದಿಗೆ ಬೀಳಿಸುತ್ತಿರುವ ಶಾಕಿಂಗ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ಜಮ್ಮು-ಕಾಶ್ಮೀರದ ಕಾರ್ಗಿಲ್ ಜಿಲ್ಲೆಯಲ್ಲಿ ಈ ವಿಲಕ್ಷಣ ಘಟನೆ ನಡೆದಿದೆ. ಕಾಡಿನಿಂದ ತಪ್ಪಿಸಿಕೊಂಡು ನಾಡಿನತ್ತ ಬಂದ ಕರಡಿಯನ್ನು ಜನರು ಕಲ್ಲಿನಿಂದ ಹೊಡೆದಿದ್ದಾರೆ. ಎತ್ತರದ ಶಿಖರದಿಂದ ಕೆಳಗೆ ಬೀಳುತ್ತಿರುವ ವಿಡಿಯೋ ಮಾಡಿ ಮಾನವೀಯತೆಯನ್ನು ಮರೆತಿದ್ದಾರೆ.

    ದಾರಿ ತಪ್ಪಿ ನಾಡಿಗೆ ಬಂದ ಕರಡಿಯನ್ನು ಅಲ್ಲಿನ ಸ್ಥಳೀಯ ಜನರು ಓಡಾಡಿಸಿದ್ದಾರೆ. ಜನರ ಗಲಾಟೆಯಿಂದ ಭಯಗೊಂಡ ಕರಡಿ ಸಮೀಪದ ಎತ್ತರದ ಪ್ರದೇಶ(ಬೆಟ್ಟ)ವೇರಿದೆ. ಕಲ್ಲಿನಿಂದ ಹೊಡೆಯುತ್ತಾ ಜನರು ಕರಡಿಯನ್ನು ಬೆನ್ನತ್ತಿದ್ದಾರೆ. ಎತ್ತರ ಪ್ರದೇಶಕ್ಕೆ ತಲುಪಿದಂತೆ ಸಮತೋಲನ ಕಳೆದುಕೊಂಡು ಆಳವಾದ ಕಂದಕಕ್ಕೆ ಉರುಳಿದೆ. ಪ್ರಾಣ ಉಳಿಸಿಕೊಳ್ಳಲು ಕರಡಿ ಮತ್ತೆ ಮೇಲೆ ಬರಲು ಪ್ರಯತ್ನಿಸಿದೆ.

    ಕರಡಿ ಪ್ರಾಣ ಉಳಿಸಿಕೊಳ್ಳಲು ಮೇಲೆ ಬರುತ್ತಿದ್ದನ್ನು ಕಂಡ ಜನರು ಮತ್ತೆ ಕಲ್ಲಿನ ದಾಳಿ ನಡೆಸಿದ್ದಾರೆ. ಕಲ್ಲಿನ ದಾಳಿಗೆ ಆಯತಪ್ಪಿದ ಕರಡಿ ಕಂದಕದಲ್ಲಿ ಹರಿಯುತ್ತಿರುವ ನದಿಯ ಪಾಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕರಡಿಯ ಸಾವಿಗೆ ಕಾರಣರಾದವರನ್ನು ಕಂಡು ಹಿಡಿದು ಶಿಕ್ಷೆ ನೀಡಬೇಕು ಎಂದು ನೆಟ್ಟಿಗರು ಆಗ್ರಹಿಸಿದ್ದಾರೆ.

    ಕರಡಿಯ ಮೇಲೆ ಕಲ್ಲೆಸೆದವರನ್ನು ಪತ್ತೆ ಹಚ್ಚಿ ಅವರೆಲ್ಲ ವಿರುದ್ಧ ಎಫ್‍ಐಆರ್ ದಾಖಲಿಸಿಕೊಳ್ಳಲಾಗಿದೆ. ನದಿಯಲ್ಲಿ ಬಿದ್ದಿರುವ ಕರಡಿಯ ಪತ್ತೆಗಾಗಿ ವನ್ಯಜೀವಿ ಇಲಾಖೆಯಿಂದ ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಕಾಶ್ಮೀರದ ಹಿರಿಯ ಪೊಲೀಸ್ ಅಧಿಕಾರಿ ಉಲ್-ಹಕ್ ಚೌಧರಿ ಸ್ಪಷ್ಟನೆ ನೀಡಿದ್ದಾರೆ.

    ಈ ವಿಡಿಯೋ ರೀಟ್ವೀಟ್ ಮಾಡಿಕೊಂಡಿರುವ ಮಾಜಿ ಸಿಎಂ ಮೆಹಬೂಬ ಮುಫ್ತಿ, ಇದೊಂದು ಹೃದಯ ವಿದ್ರಾವಕ ಘಟನೆಯಾಗಿದ್ದು, ಅಮಾನವೀಯತೆಯ ಸಾಕ್ಷಿಯಾಗಿದೆ. ಪ್ರಾಣಿಗಳ ವಾಸಸ್ಥಳವನ್ನು ಅತಿಕ್ರಮಣ ಮಾಡಿಕೊಂಡಿದ್ದು ನಮ್ಮ ತಪ್ಪು ಎಂದು ಬರೆದುಕೊಂಡಿದ್ದಾರೆ.

  • ಇಂದು 18ನೇ ಕಾರ್ಗಿಲ್ ವಿಜಯ್ ದಿವಸ್

    ಇಂದು 18ನೇ ಕಾರ್ಗಿಲ್ ವಿಜಯ್ ದಿವಸ್

    ನವದೆಹಲಿ: ಇವತ್ತು ಜುಲೈ 26. ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ವಿಜಯಪತಾಕೆ ಹಾರಿಸಿದ ದಿನ.

    ಭಾರತೀಯ ಸೇನೆ ಇಂದು 18ನೇ ಕಾರ್ಗಿಲ್ ವಿಜಯ ದಿವಸ್ ಆಚರಿಸ್ತಿದೆ. 1999ರ ಜುಲೈ 26ರಂದು 60 ದಿನಗಳ ಕಾರ್ಗಿಲ್ ಕದನ ಅಂತ್ಯವಾಗಿತ್ತು.

    ಹೀಗಾಗಿ ಭಾರತೀಯ ಸೇನೆ ಈ ದಿನವನ್ನು ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರಯೋಧರಿಗೆ ಮತ್ತು ಅವರ ಕುಟುಂಬದವರಿಗೆ ಗೌರವ ಸಲ್ಲಿಸುವ ಮೂಲಕ ಆಚರಿಸುತ್ತಿದೆ.