Tag: Kargil Vijay Divas

  • ಪ್ರಧಾನಿ ಮೋದಿಯಿಂದ ಕ್ಷುಲ್ಲಕ ರಾಜಕಾರಣ: ಖರ್ಗೆ ಕಿಡಿ

    ಪ್ರಧಾನಿ ಮೋದಿಯಿಂದ ಕ್ಷುಲ್ಲಕ ರಾಜಕಾರಣ: ಖರ್ಗೆ ಕಿಡಿ

    ನವದೆಹಲಿ: ಕಾರ್ಗಿಲ್ ವಿಜಯ್ ದಿವಸ್‌ (Kargil Vijay Diwas) ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕ್ಷುಲ್ಲಕ ರಾಜಕಾರಣ ಮಾಡುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ವಾಗ್ದಾಳಿ ನಡೆಸಿದ್ದಾರೆ.

    ಶುಕ್ರವಾರ ಡ್ರಾಸ್‌ನಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದ ಬಳಿಕ ಮೋದಿ ಅಗ್ನಿಪಥ್‌ ಯೋಜನೆ ಕುರಿತು ವಿಪಕ್ಷಗಳ ಟೀಕೆಗೆ ಟಾಂಗ್‌ ಕೊಟ್ಟಿದ್ದರು. ಸೇನೆಯನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಮೋದಿ ಹೇಳಿಕೆಗೆ ಖರ್ಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಪಾಕ್ ದುಸ್ಸಾಹಸ ಮೆರೆದಾಗಲೆಲ್ಲಾ ಸೋಲು ಕಂಡಿದೆ: ಕಾರ್ಗಿಲ್‌ನಲ್ಲಿ ಮೋದಿ ಭಾಷಣ

    ಕಾರ್ಗಿಲ್ ವಿಜಯ್ ದಿವಸ್‌ನಲ್ಲಿ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸುವಂತಹ ಸಂದರ್ಭಗಳಲ್ಲಿಯೂ ಪ್ರಧಾನಿ ನರೇಂದ್ರ ಮೋದಿಯವರು ಕ್ಷುಲ್ಲಕ ರಾಜಕಾರಣ ಮಾಡುತ್ತಿರುವುದು ಅತ್ಯಂತ ದುರದೃಷ್ಟಕರ ಮತ್ತು ಶೋಚನೀಯವಾಗಿದೆ ಎಂದು ಖರ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಈ ಹಿಂದೆ ಯಾವ ಪ್ರಧಾನಿಯೂ ಇದನ್ನು ಮಾಡಿಲ್ಲ ಎಂದು ಕುಟುಕಿದ್ದಾರೆ.

    ತಮ್ಮ ಸರ್ಕಾರವು ಸೇನೆಯ ಆಜ್ಞೆಯ ಮೇರೆಗೆ ಅಗ್ನಿಪಥ ಯೋಜನೆಯನ್ನು ಜಾರಿಗೆ ತಂದಿದೆ ಎಂಬ ಪ್ರಧಾನ ಮಂತ್ರಿಯ ಹೇಳಿಕೆಯು ಶುದ್ಧ ಸುಳ್ಳು. ನಮ್ಮ ವೀರ ಸಶಸ್ತ್ರ ಪಡೆಗಳಿಗೆ ಕ್ಷಮಿಸಲಾಗದ ಅವಮಾನ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: Kargil Vijay Diwas: ದೇಶಕ್ಕಾಗಿ ಬಲಿದಾನಗೈದ ಯೋಧರಿಗೆ ಪ್ರಧಾನಿ ಮೋದಿ ನಮನ

    ಮೋದಿ ಜೀ, ನೀವು ಸುಳ್ಳುಗಳನ್ನು ಹಬ್ಬಿಸುತ್ತಿದ್ದೀರಿ! ಮಾಜಿ ಸೇನಾ ಮುಖ್ಯಸ್ಥ (ನಿವೃತ್ತ) ಜನರಲ್ ಎಂಎಂ ನರವಾಣೆ ಅವರು ‘ಅಗ್ನಿಪಥ್‌ ಯೋಜನೆ’ಯಲ್ಲಿ 75% ನೇಮಕಾತಿಗಳನ್ನು ಖಾಯಂಗಾಗಿ ತೆಗೆದುಕೊಳ್ಳಬೇಕಾಗಿತ್ತು. 25% ಜನರನ್ನು 4 ವರ್ಷಗಳ ನಂತರ ಕೈಬಿಡಲಾಯಿತು ಎಂದು ದಾಖಲೆಯಲ್ಲಿ ಹೇಳಿದ್ದಾರೆ. ಆದರೆ ಮೋದಿ ಸರ್ಕಾರ ಇದಕ್ಕೆ ವ್ಯತಿರಿಕ್ತವಾಗಿದೆ. ಬಲವಂತವಾಗಿ ಈ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿತು ಎಂದು ಖರ್ಗೆ ಟೀಕಿಸಿದ್ದಾರೆ.

    ಮಾಜಿ ಸೇನಾ ಮುಖ್ಯಸ್ಥ (ನಿವೃತ್ತ) ಜನರಲ್ ಎಂಎಂ ನರವಾಣೆ ತಮ್ಮ ಪುಸ್ತಕದಲ್ಲಿ, ‘ಅಗ್ನಿಪಥ್ ಯೋಜನೆ’ಯು ಸೇನೆಗೆ ಮತ್ತು ನೌಕಾಪಡೆ ಹಾಗೂ ವಾಯುಸೇನೆಗೆ ಆಘಾತಕಾರಿಯಾಗಿದೆ ಎಂದು ಹೇಳಿರುವುದಾಗಿ ವರದಿಗಳು ಬಂದಿವೆ ಎಂದು ಖರ್ಗೆ ತಿಳಿಸಿದ್ದಾರೆ.

  • Kargil Vijay Diwas: ದೇಶಕ್ಕಾಗಿ ಬಲಿದಾನಗೈದ ಯೋಧರಿಗೆ ಪ್ರಧಾನಿ ಮೋದಿ ನಮನ

    Kargil Vijay Diwas: ದೇಶಕ್ಕಾಗಿ ಬಲಿದಾನಗೈದ ಯೋಧರಿಗೆ ಪ್ರಧಾನಿ ಮೋದಿ ನಮನ

    ನವದೆಹಲಿ: ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಶುಕ್ರವಾರ ಬೆಳಗ್ಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸಿದರು.

    ಕಾರ್ಗಿಲ್‌ ವಿಜಯ ದಿವಸ್‌ನ (Kargil Vijay Diwas) 25ನೇ ವಾರ್ಷಿಕೋತ್ಸವದ ಸ್ಮರಣಾರ್ಥ ಲಡಾಖ್‌ನಲ್ಲಿರುವ ಡ್ರಾಸ್‌ಗೆ ಪ್ರಧಾನಿ ತೆರಳಿದ್ದರು. ಪ್ರಧಾನಿ ಭೇಟಿಗೆ ಮುನ್ನ ದ್ರಾಸ್‌ನಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕದಲ್ಲಿ ಭದ್ರತಾ ಉದ್ದೇಶಗಳಿಗೆ ಅನುಗುಣವಾಗಿ ವ್ಯವಸ್ಥೆಗಳನ್ನು ಮಾಡಲಾಗಿತ್ತು. ಇದನ್ನೂ ಓದಿ: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ – ಆರೋಪಿಗೆ ಗುಂಡೇಟು ಕೊಟ್ಟ ಲೇಡಿ ಪಿಎಸ್‌ಐ

    ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ನಾಯಕರು ಸಹ ಕಾರ್ಗಿಲ್ ಯುದ್ಧದಲ್ಲಿ ಮಡಿದ ಸೈನಿಕರಿಗೆ ಶ್ರದ್ಧಾಂಜಲಿ ಅರ್ಪಿಸಿದರು.

    ಕಾರ್ಗಿಲ್ ಯುದ್ಧವು 25 ವರ್ಷಗಳ ಹಿಂದೆ ಅಂದರೆ 1999 ರ ಜುಲೈ 26 ರಂದು ಅಧಿಕೃತವಾಗಿ ಕೊನೆಗೊಂಡಿತ್ತು. ಈ ದಿನವನ್ನು ಕಾರ್ಗಿಲ್ ವಿಜಯ್ ದಿವಸ್ ಎಂದು ಆಚರಿಸಲಾಗುತ್ತದೆ. ಲಡಾಖ್‌ನ ಕಾರ್ಗಿಲ್ ಜಿಲ್ಲೆಯಲ್ಲಿ ಪಾಕಿಸ್ತಾನದ ವಿರುದ್ಧ ಭಾರತದ ವಿಜಯವನ್ನು ಈ ದಿನ ಸ್ಮರಿಸಲಾಗುತ್ತದೆ. ದೇಶಕ್ಕಾಗಿ ಯೋಧರ ಬಲಿದಾನವನ್ನು ನೆನಪಿಸಿಕೊಳ್ಳಲಾಗುತ್ತದೆ. ಇದನ್ನೂ ಓದಿ: ದರ್ಶನ್ ಬಿಡುಗಡೆಗಾಗಿ ಚಂಡಿಕಾ ಯಾಗ ಮಾಡಿದ ಪತ್ನಿ ವಿಜಯಲಕ್ಷ್ಮಿ

  • ಪಾಕ್ ಆಕ್ರಮಿತ ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿಯೇ ಇರುತ್ತೆ: ರಾಜನಾಥ್ ಸಿಂಗ್

    ಪಾಕ್ ಆಕ್ರಮಿತ ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿಯೇ ಇರುತ್ತೆ: ರಾಜನಾಥ್ ಸಿಂಗ್

    ಶ್ರೀನಗರ: ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ) ಭಾರತದ ಅವಿಭಾಜ್ಯ ಅಂಗವಾಗಿಯೇ ಇರುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದರು.

    ಜಮ್ಮುವಿನಲ್ಲಿ ನಡೆದ ‘ಕಾರ್ಗಿಲ್ ವಿಜಯ್ ದಿವಸ್’ ಕಾರ್ಯಕ್ರಮಕ್ಕೆ ರಾಜನಾಥ್ ಸಿಂಗ್ ಆಗಮಿಸಿದ್ದರು. ಈ ವೇಳೆ ವೇದಿಕೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಿಒಕೆ ಕುರಿತು ಸಂಸತ್ತಿನಲ್ಲಿ ಅಂಗೀಕರಿಸಿದ ನಿರ್ಣಯಕ್ಕೆ ನಾವು ಬದ್ಧರಾಗಿದ್ದೇವೆ. ಪಿಒಕೆ ಭಾರತದ ಅವಿಭಾಜ್ಯ ಅಂಗವಾಗಿದೆ ಮತ್ತು ಅದು ಯಾವಾಗಲೂ ಉಳಿಯುತ್ತದೆ. ಬಾಬಾ ಅಮರನಾಥ(ಶಿವನ ರೂಪ) ಮತ್ತು ಶಾರದಾ ಆರ್ಶಿವಾದ ಭಾರತದ ಮೇಲೆ ಇರಲು ಯಾವ ಶಕ್ತಿ ನಮ್ಮನ್ನು ನಿಯಂತ್ರಣ ಮಾಡಲು ಸಾಧ್ಯ ಎಂದು ಪ್ರಶ್ನೆ ಮಾಡಿದರು. ಇದನ್ನೂ ಓದಿ: ಯಕ್ಷಗಾನದ ಭಾಗವತಿಕೆ ಮೂಲಕ ರಾಷ್ಟ್ರಪತಿಗೆ ಸ್ವಾಗತ ಕೋರಿದ ಬಾಲೆ

    J&K is integral part of India, says Rajnath Singh on 'Kargil Vijay Divas' - The Hindu

    ಸಮರ್ಥ ಮತ್ತು ಆತ್ಮವಿಶ್ವಾಸದ ನವ ಭಾರತದ ಮೇಲೆ ದುಷ್ಟಕಣ್ಣುಗಳನ್ನು ಹಾಕುವ ಯಾರಿಗಾದರೂ ಸೂಕ್ತವಾದ ಪ್ರತ್ಯುತ್ತರವನ್ನು ನೀಡಲು ಸಜ್ಜಾಗುತ್ತಿದೆ. ಭಾರತವನ್ನು ಜಾಗತಿಕ ಮಹಾಶಕ್ತಿಯನ್ನಾಗಿ ಮಾಡುವುದು ಮಡಿದ ನಮ್ಮ ವೀರರಿಗೆ ಸೂಕ್ತವಾದ ಗೌರವವಾಗಿದೆ ಎಂದು ಕರೆ ಕೊಟ್ಟರು.

    ಭಾನುವಾರ ಜಮ್ಮುವಿನಲ್ಲಿ ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ಸ್ಮರಣಾರ್ಥ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ರಾಜನಾಥ್ ಸಿಂಗ್ ಅವರು ಭಾಗಿಯಾಗಿದ್ದು, ಸ್ವಾತಂತ್ರ್ಯದ ನಂತರ ದೇಶ ಸೇವೆಯಲ್ಲಿ ಪ್ರಾಣವನ್ನು ಅರ್ಪಿಸಿದ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಸಶಸ್ತ್ರ ಪಡೆಗಳ ಸಿಬ್ಬಂದಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಇದನ್ನೂ ಓದಿ:  ಬಿಗಿ ಭದ್ರತೆ ನಡೆದ ಮೊದಲ ಅಗ್ನಿಪಥ್ ಏರ್‌ಫೋರ್ಸ್ ನೇಮಕಾತಿ ಪರೀಕ್ಷೆ

    Live Tv
    [brid partner=56869869 player=32851 video=960834 autoplay=true]

  • 8,500 ಅಡಿ ಎತ್ತರದಿಂದ ವಿಂಗ್‍ಸೂಟ್‍ನಲ್ಲಿ ಸ್ಕೈಡೈವಿಂಗ್ – ಭಾರತದ ಮೊದಲ ಐಎಎಫ್ ಪೈಲೆಟ್ ಎಂಬ ಹೆಗ್ಗಳಿಕೆ

    8,500 ಅಡಿ ಎತ್ತರದಿಂದ ವಿಂಗ್‍ಸೂಟ್‍ನಲ್ಲಿ ಸ್ಕೈಡೈವಿಂಗ್ – ಭಾರತದ ಮೊದಲ ಐಎಎಫ್ ಪೈಲೆಟ್ ಎಂಬ ಹೆಗ್ಗಳಿಕೆ

    ನವದೆಹಲಿ: ವಿಂಗ್ ಕಮಾಂಡರ್ ತರುಣ್ ಚೌಧರಿ ಅವರು 8,500 ಅಡಿ ಎತ್ತರದಿಂದ ವಿಂಗ್‍ಸೂಟ್‍ನಲ್ಲಿ ಸ್ಕೈಡೈವಿಂಗ್ ಮಾಡುವ ಮೂಲಕ ಭಾರತದ ಮೊದಲ ವಾಯು ಸೇನಾ ಪೈಲೆಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

    ಜುಲೈ 22ರಿಂದ ಶುರುವಾಗಿದ್ದ ಜೋಧ್‍ಪುರ್ ನಲ್ಲಿ ನಡೆದ ಕಾರ್ಗಿಲ್ ದಿನಾಚರಣೆಯ ಸಂದರ್ಭದಲ್ಲಿ ವಿಂಗ್ ಕಮಾಂಡರ್ ತರುಣ್ ಚೌಧರಿ ಅವರು ವಿಂಗ್‍ಸೂಟ್‍ನಲ್ಲಿ ಮಿಗ್-17 ಹೆಲಿಕಾಪ್ಟರ್ ದಿಂದ 8,500 ಅಡಿ ಎತ್ತರದಿಂದ ಸ್ಕೈಡೈವಿಂಗ್ ಮಾಡಿದ್ದಾರೆ.

    ಈ ಬಗ್ಗೆ ಐಎಎಫ್ ವಿಡಿಯೋವೊಂದನ್ನು ಟ್ವಿಟ್ಟರಿನಲ್ಲಿ ಹಾಕಿ ಅದಕ್ಕೆ, “ವಿಂಗ್ ಕಮಾಂಡರ್ ತರುಣ್ ಚೌಧರಿ ಅವರು ಜುಲೈ 21, 2019ರಂದು ವಿಂಗ್‍ಸೂಟ್ ಧರಿಸಿ ಮಿಗ್-17 ಹೆಲಿಕಾಪ್ಟರ್ ನಿಂದ ಸ್ಕೈಡೈವಿಂಗ್ ಪೂರ್ಣ ಮಾಡುವ ಮೂಲಕ ಮೈಲಿಗಲ್ಲು ಸಾಧಿಸಿದ್ದಾರೆ. ವಿಂಗ್‍ಸೂಟ್ ಧರಿಸಿ ಸ್ಕೈಡೈವಿಂಗ್ ಮಾಡಿದ ಮೊದಲ ಐಎಎಫ್ ಪೈಲೆಟ್ ಹೆಗ್ಗಳಿಕೆಗೆ ಇವರು ಪಾತ್ರರಾಗಿದ್ದಾರೆ” ಎಂದು ಟ್ವೀಟ್ ಮಾಡಿದೆ.

    ಮತ್ತೊಂದು ಟ್ವೀಟ್‍ನಲ್ಲಿ, ತರುಣ್ ಚೌಧರಿ ಅವರು ಮಿಗ್-17 ಹೆಲಿಕಾಪ್ಟರ್‍ನಿಂದ 8500 ಅಡಿ ಎತ್ತರದಿಂದ ಜಿಗಿದಿದ್ದಾರೆ. ಸಂಘಟಿತ ಕೂಟದಲ್ಲಿ ಇದೇ ಮೊದಲ ಫ್ಲೈಯಿಂಗ್ ವಿಂಗ್ ಸೂಟ್‍ನಲ್ಲಿ ಸ್ಕೈಡೈವಿಂಗ್ ಪ್ರದರ್ಶನ ಮಾಡಲಾಗಿದೆ. ಜೋಧಪುರ್‍ನ ಏರ್ ಫೋರ್ಸ್ ಸ್ಟೇಷನ್‍ನಲ್ಲಿ ಜುಲೈ 22ರಿಂದ 28 ರವರೆಗೆ 20ನೇ ಕಾರ್ಗಿಲ್ ವಿಜಯ ದಿನಾಚರಣೆಯನ್ನು ಆಚರಿಸಲಾದ ಸಂದರ್ಭದಲ್ಲಿ ಈ ಜಂಪ್ ಮಾಡಲಾಗಿದೆ” ಎಂದು ಬರೆದುಕೊಂಡಿದೆ.

  • ಕಾರ್ಗಿಲ್ ವಿಜಯೋತ್ಸವ ಆಚರಿಸುತ್ತಾ ಪಾಕಿಗೆ ಖಡಕ್ ಎಚ್ಚರಿಕೆ ಕೊಟ್ಟ ಭಾರತೀಯ ಸೇನೆ

    ಕಾರ್ಗಿಲ್ ವಿಜಯೋತ್ಸವ ಆಚರಿಸುತ್ತಾ ಪಾಕಿಗೆ ಖಡಕ್ ಎಚ್ಚರಿಕೆ ಕೊಟ್ಟ ಭಾರತೀಯ ಸೇನೆ

    ಶ್ರೀನಗರ: ಭಾರತದ ಗಡಿ ನಿಯಂತ್ರಣ ರೇಖೆಯಲ್ಲಿ ಉಗ್ರರು ನುಸುಳಲು ಮುಂದುವರಿಸಿದರೆ ಅದಕ್ಕೆ ತಕ್ಕ ಉತ್ತರ ಕೊಡುತ್ತೇವೆ, ಶವಗಳನ್ನು ವಾಪಸ್ ಪಡೆಯಲು ಸಿದ್ಧರಾಗಿರಿ ಎಂದು ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

    ಕಾರ್ಗಿಲ್ ವಿಜಯ್ ದಿವಸ್ ಹಿನ್ನೆಲೆ ಮಾಧ್ಯಮಗಳ ಜೊತೆ ಮಾತನಾಡಿದ ರಾವತ್ ಅವರು, ಯಾವುದೇ ದುಸ್ಸಾಹಸ ಮಾಡಲು ಪ್ರಯತ್ನಿಸದಿರಿ, ಭಾರತದ ಗಡಿಯೊಳಗೆ ನುಗ್ಗಲು ಪ್ರಯತ್ನಿಸಿದರೆ ಅದಕ್ಕೆ ತಕ್ಕ ಉತ್ತರ ಕೊಡಲು ಗಡಿಯಲ್ಲಿ ನಮ್ಮ ಸೇನೆ ಸದಾ ತಯಾರಾಗಿರುತ್ತದೆ. ಒಂದು ವೇಳೆ ದುಸ್ಸಾಹಸ ಮಾಡಿ, ಗಡಿಯಲ್ಲಿ ನುಸುಳಲು ಯತ್ನಿಸಿದರೆ, ಶವಗಳನ್ನು ಎಣಿಸಿ, ವಾಪಸ್ ನಿಮ್ಮ ದೇಶಕ್ಕೆ ತೆಗೆದುಕೊಂಡು ಹೋಗಬೇಕಾಗುತ್ತೆ ಎಂದು ಪಾಕಿಸ್ತಾನಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಇದನ್ನೂ ಓದಿ:ವಿಶೇಷ ಫೋಟೋ, ವಿಡಿಯೋದೊಂದಿಗೆ ಕಾರ್ಗಿಲ್ ವಿಜಯೋತ್ಸವ ನೆನೆದ ಮೋದಿ

    ಪುಲ್ವಾಮ ದಾಳಿಗೆ ನಾವು ಹೊಣೆಯಲ್ಲ ಎಂಬ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿಕೆಗೆ ತಿರುಗೇಟು ನೀಡಿ, ನಮಗೆ ಸತ್ಯ ಏನೆಂದು ತಿಳಿದಿದೆ. ಹೀಗಾಗಿ ನಾವು ಈ ರೀತಿ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡುವುದಿಲ್ಲ. ನಿಜಾಂಶ ಏನೆಂದು ನಮಗೂ ಹಾಗೂ ನಮ್ಮ ಸಂಸ್ಥೆಗೂ ತಿಳಿದಿದೆ. ಪುಲ್ವಾಮದಲ್ಲಿ ಏನಾಯ್ತು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಮ್ಮ ಗುಪ್ತಚರ ಇಲಾಖೆ ಕಲೆಹಾಕಿದೆ. ಇಷ್ಟನ್ನು ಮಾತ್ರ ನಾನು ಹೇಳಲು ಇಚ್ಛಿಸುತ್ತೇನೆ ಎಂದು ಮಾತಿನ ಚಾಟಿ ಬೀಸಿದ್ದಾರೆ.

    ನೆರೆಯ ಪಾಕಿಸ್ತಾನಕ್ಕೆ ಭಾರತೀಯ ಸೇನೆಯ ಮುಖ್ಯಸ್ಥರು ಎಚ್ಚರಿಕೆ ನೀಡುತ್ತಿರುವುದು ಇದೇ ಮೊದಲ ಬಾರಿ ಅಲ್ಲ. ಈ ಹಿಂದೆ ಕೂಡ ಭಾರತದ ಜೊತಗೆ ದುಸ್ಸಾಹಸ ಮೆರೆಯಲು ಬರಬೇಡಿ ಎಂದು ಎಚ್ಚರಿಕೆ ನೀಡಿದ್ದರು. ಅಲ್ಲದೆ ಪಾಕ್ ತನ್ನ ಹದ್ದುಮೀರಿದರೆ ಅದಕ್ಕೆ ತಕ್ಕ ಪ್ರತ್ಯತ್ತರವನ್ನು ನೀಡಬೇಕಾಗುತ್ತದೆ ಎಂದು ತಿಳಿಸಿದ್ದರು. ಇದನ್ನೂ ಓದಿ:ಕಾರ್ಗಿಲ್ ವಿಜಯೋತ್ಸವ – ದೇಶದೆಲ್ಲೆಡೆ ಮುಗಿಲು ಮುಟ್ಟಲಿದೆ ಸಂಭ್ರಮ

    ನಾವು ಎಚ್ಚರಿಕೆ ನೀಡಿದ್ದರೂ ಪಾಕಿಸ್ತಾನ ಸೈನ್ಯ ಭಾರತದ ಮೇಲೆ ದ್ವೇಷಕಾರುತ್ತ ಯುದ್ಧ, ದಾಳಿಗಳನ್ನು ಮಾಡುವ ಕುತಂತ್ರ ಮಾಡುತ್ತಲೇ ಇದೆ. ಉಗ್ರರಿಗೆ ನೆಲೆ ನೀಡಿ, ಭಾರತದೊಳಗೆ ನುಸುಳಲು, ದುಷ್ಕೃತ್ಯ ಮೆರೆಯಲು ಸಹಾಯ ಮಾಡುತ್ತಿದೆ. ಆದ್ರೆ ನಮ್ಮ ಯೋಧರು ದೇಶ ರಕ್ಷಣೆಗಾಗಿ ದೃಢವಾಗಿ ನಿಂತಿದ್ದಾರೆ. ದುಸ್ಸಾಹಸಕ್ಕೆ ತಕ್ಕ ತಿರುಗೇಟು ನೀಡುವುದಂತೂ ನಿಶ್ಚಿತ, ಅದರಲ್ಲಿ ಯಾವುದೇ ಅನುಮಾನ ಬೇಡ. ಸದ್ಯ ಗಡಿಯಲ್ಲಿ ಯಾರು ಒಳನುಸುಳಲು ಪ್ರಯತ್ನಿಸಿಲ್ಲ. ಎಲ್ಲ ಸರಿಯಾಗಿದೆ ಎಂದು ಹೇಳಿದ್ದಾರೆ.

    ದೇಶದೆಲ್ಲೆಡೆ 20ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಆಚರಿಸಲಾಗುತ್ತಿದೆ. ಈ ಹೆಮ್ಮೆಯ ದಿನವನ್ನು ನೆನೆದು ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ಯೋಧರ ಶೌರ್ಯ, ತ್ಯಾಗ, ಬಲಿದಾನಕ್ಕೆ ಸಲಂ ಎಂದಿದ್ದಾರೆ.

  • ವಿಶೇಷ ಫೋಟೋ, ವಿಡಿಯೋದೊಂದಿಗೆ ಕಾರ್ಗಿಲ್ ವಿಜಯೋತ್ಸವ ನೆನೆದ ಮೋದಿ

    ವಿಶೇಷ ಫೋಟೋ, ವಿಡಿಯೋದೊಂದಿಗೆ ಕಾರ್ಗಿಲ್ ವಿಜಯೋತ್ಸವ ನೆನೆದ ಮೋದಿ

    ನವದೆಹಲಿ: ಇಂದು 20ನೇ ವರ್ಷದ ಕಾರ್ಗಿಲ್ ವಿಜಯೋತ್ಸವವನ್ನು ದೇಶದೆಲ್ಲೆಡೆ ಹೆಮ್ಮೆಯಿಂದ ಆಚರಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ ಫೋಟೋಗಳು ಹಾಗೂ ವಿಡಿಯೋ ಮೂಲಕ ಕಾರ್ಗಿಲ್ ವಿಜಯೋತ್ಸವ ನೆನಪಿಸಿಕೊಂಡು ವೀರಯೋಧರಿಗೆ ನಮನ ಸಲ್ಲಿಸಿದ್ದಾರೆ.

    ದೇಶಕ್ಕಾಗಿ ವೀರ ಯೋಧರ ತ್ಯಾಗ ಮತ್ತು ಬಲಿದಾನ ನೆನೆದು ಅವರಿಗೆ ಅಭಿನಂದನೆ ಸಲ್ಲಿಸುವ ಉದ್ದೇಶದಿಂದ 2 ದಿನ ದೇಶಾದ್ಯಂತ ಕಾರ್ಗಿಲ್ ವಿಜಯೋತ್ಸವವನ್ನು ಆಚರಿಸಲಾಗುತ್ತಿದೆ. ಈ ಹೆಮ್ಮೆಯ ಸಂದರ್ಭದಲ್ಲಿ ಮೋದಿ ಅವರು ತಾವು ಕಾರ್ಗಿಲ್‍ಗೆ ಭೇಟಿ ನೀಡಿ, ಅಲ್ಲಿನ ಯೋಧರ ಜೊತೆ ಕಳೆದ ಕ್ಷಣವನ್ನು ಮರೆಯಲು ಅಸಾಧ್ಯ ಎಂದು ಯೋಧರೊಂದಿಗೆ ಕಳೆದ ಕ್ಷಣದ ಕೆಲವು ವಿಶೇಷ ಫೋಟೋಗಳ ಜೊತೆ ಟ್ವೀಟ್ ಮಾಡಿ ನೆನಪನ್ನು ಹಂಚಿಕೊಂಡಿದ್ದಾರೆ.

    ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತೀಯ ಸೈನಿಕರು ವಿಜಯಪತಾಕೆಯನ್ನು ಹಾರಿಸಿದ ದಿನದವಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಸೈನ್ಯದ ಶೌರ್ಯ, ಸೈನಿಕರ ಸಾಹಸವನ್ನು ಜಗತ್ತಿಗೆ ಪರಿಚಯಿಸಿದ್ದು ಕಾರ್ಗಿಲ್ ಯುದ್ಧದ ವಿಜಯವನ್ನು ಪ್ರತಿ ವರ್ಷ ಜುಲೈ 26ರಂದು ‘ಕಾರ್ಗಿಲ್ ವಿಜಯ್ ದಿವಸ್’ ಎಂದು ಸಂಭ್ರಮದಿಂದ ಭಾರತೀಯರು ಆಚರಿಸುತ್ತಾರೆ.

    ಟ್ವೀಟ್‍ನಲ್ಲಿ ಏನಿದೆ?
    1999ರಲ್ಲಿ ಕಾರ್ಗಿಲ್ ಯುದ್ಧ ನಡೆದ ವೇಳೆ ನನಗೆ ಕಾರ್ಗಿಲ್‍ಗೆ ತೆರೆಳಿ, ಅಲ್ಲಿ ವೀರ ಯೋಧರನ್ನು ಭೇಟಿ ಮಾಡುವ ಅವಕಾಶ ದೊರಕಿತ್ತು. ಆ ವೇಳೆ ನಾನು ಜಮ್ಮು-ಕಾಶ್ಮೀರ ಹಾಗೂ ಹಿಮಾಚಲ ಪ್ರದೇಶದಲ್ಲಿ ನನ್ನ ಪಕ್ಷಕ್ಕಾಗಿ ಕೆಲಸ ಮಾಡುತ್ತಿದ್ದೆನು.

    ಕಾರ್ಗಿಲ್‍ಗೆ ಭೇಟಿ ನೀಡಿದ ಕ್ಷಣ, ಅಲ್ಲಿ ಯೋಧರ ಜೊತೆ ಕಳೆದ ಸಮಯವನ್ನು ನಾನೆಂದೂ ಮರೆಯಲು ಸಾಧ್ಯವಿಲ್ಲ ಎಂದು ಬರೆದು ಯೋಧರ ಜೊತೆ ಕಾರ್ಗಿಲ್‍ನಲ್ಲಿ ತೆಗೆಸಿಕೊಂಡ ಕೆಲ ಫೋಟೋಗಳನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.

    ಇನ್ನೊಂದು ಟ್ವೀಟ್‍ನಲ್ಲಿ, ಕಾರ್ಗಿಲ್ ವಿಜಯ್ ದಿನದಂದು ತಾಯಿ ಭಾರತೀಯಳ ಎಲ್ಲಾ ವೀರ ಪುತ್ರರಿಗೆ ನನ್ನ ಹೃದಯಪೂರ್ವಕ ವಂದನೆ. ಈ ದಿನ ನಮ್ಮ ಸೈನಿಕರ ಧೈರ್ಯ, ಶೌರ್ಯ ಮತ್ತು ಸಮರ್ಪಣೆಯನ್ನು ನೆನಪಿಸುತ್ತದೆ. ಈ ಸಂದರ್ಭದಲ್ಲಿ ಮಾತೃಭೂಮಿಯ ರಕ್ಷಣೆಯಲ್ಲಿ ಒಲವು ತೋರಿದ ಆ ಪ್ರಬಲ ಯೋಧರಿಗೆ ನನ್ನ ವಿನಮ್ರ ಗೌರವ, ಜೈ ಹಿಂದ್ ಎಂದು ‘ಕಾರ್ಗಿಲ್ ವಿಜಯ್ ದಿವಸ್’ ಅನ್ನು ನೆನಪಿಸಿಕೊಂಡಿದ್ದಾರೆ. ಜೊತೆಗೆ ಯೋಧರಿಗಾಗಿ ವಿಶೇಷ ವಿಡಿಯೋವನ್ನು ಕೂಡ ಮೋದಿ ಅವರು ಸಮರ್ಪಿಸಿದ್ದಾರೆ.

  • ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸಿಯೇ ತೀರುತ್ತೇವೆ – ರಾಜನಾಥ್ ಸಿಂಗ್

    ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸಿಯೇ ತೀರುತ್ತೇವೆ – ರಾಜನಾಥ್ ಸಿಂಗ್

    ನವದೆಹಲಿ: ಭಾರತ- ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗಲು ಕಾರಣವಾಗಿರುವ ಕಾಶ್ಮೀರ ವಿವಾದ ಇತ್ಯರ್ಥ ಹಂತವನ್ನು ತಲುಪಿದ್ದು, ಜಗತ್ತಿನ ಯಾವ ಶಕ್ತಿಯಿಂದಲೂ ಈ ವಿಚಾರ ಇತ್ಯರ್ಥ ಆಗುವುದನ್ನು ತಡೆಯಲು ಸಾಧ್ಯವಿಲ್ಲ ಎಂದು ರಕ್ಷಣಾ ಸಚಿವ ರಾಜ್‍ನಾಥ್ ಸಿಂಗ್ ಹೇಳಿದ್ದಾರೆ.

    ಕಾರ್ಗಿಲ್ ವಿಜಯದ 20ನೇ ವರ್ಷಾಚರಣೆಯ ಹಿನ್ನೆಲೆಯಲ್ಲಿ ಶನಿವಾರ ಜಮ್ಮು-ಕಾಶ್ಮೀರದ ದ್ರಾಸ್ ವಲಯದಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ತೆರಳಿ ರಾಜ್‍ನಾಥ್ ಸಿಂಗ್ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದರು. ಬಳಿಕ ಕಠುವಾ ಜಿಲ್ಲೆಯ ಉಜ್ ಮತ್ತು ಸಾಂಬಾ ಜಿಲ್ಲೆಯ ಬಸಂತರ್‍ನಲ್ಲಿ 50 ಕೋಟಿ ರೂ. ಮೊತ್ತದಲ್ಲಿ ನಿರ್ಮಿಸಲಾಗಿರುವ ಎರಡು ಸೇತುವೆಗಳನ್ನು ಉದ್ಘಾಟನೆ ಮಾಡಿದರು.

    ಈ ವೇಳೆ ಮಾತನಾಡುತ್ತ ಕಾಶ್ಮೀರದ ವಿವಾದದ ಬಗ್ಗೆ ಪ್ರಸ್ತಾಪಿಸಿ, ಕಾಶ್ಮೀರ ನನ್ನ ಹೃದಯದಲ್ಲಿದೆ. ಅಲ್ಲದೆ ಸರ್ಕಾರ ಕಾಶ್ಮೀರವನ್ನು ಕೇವಲ ಭಾರತದ ಸ್ವರ್ಗವನ್ನಾಗಿ ಅಷ್ಟೇ ಇರಿಸಿದೆ. ಜಾಗತಿಕ ಮಟ್ಟದಲ್ಲಿ ಕಾಶ್ಮೀರವನ್ನು ಪ್ರವಾಸಿಗರ ಸ್ವರ್ಗವನ್ನಾಗಿಸಲು ಪ್ರಯತ್ನಿಸುತ್ತಿದೆ. ಕಾಶ್ಮೀರದಲ್ಲಿ ಅಭಿವೃದ್ಧಿ ಕಾರ್ಯಗಳು ತ್ವರಿತಗತಿಯಲ್ಲಿ ಸಾಗಲು ಸರ್ಕಾರ ಹೆಚ್ಚಿನ ಶ್ರಮವಹಿಸುತ್ತಿದೆ ಎಂದು ಸಚಿವರು ತಿಳಿಸಿದರು.

    ನಮ್ಮ ಸರ್ಕಾರ ಕಾಶ್ಮೀರ ವಿವಾದವನ್ನು ಬಗೆಹರಿಸಲಿದೆ. ಮಾತುಕತೆಯ ಮೂಲಕ ಬಗೆಹರಿಯದಿದ್ದರೆ ಯಾವ ತಂತ್ರವನ್ನು ಬಳಸಬೇಕು ಎಂಬುದು ನಮಗೆ ಗೊತ್ತಿದೆ. ಈ ಭೂಮಿ ಮೇಲಿನ ಯಾವ ಶಕ್ತಿಯೂ ಕಾಶ್ಮೀರ ವಿವಾದ ಇತ್ಯರ್ಥವಾಗುವುದನ್ನು ತಡೆಯಲು ಸಾಧ್ಯವಿಲ್ಲ. ಇದನ್ನು ನಾವು ಬಗೆಹರಿಸಿಯೇ ತೀರುತ್ತೇವೆ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.

    1999ರಲ್ಲಿ ಭಾರತೀಯ ಸೇನೆಯು ಅಕ್ರಮವಾಗಿ ಒಳ ನುಸುಳುತ್ತಿದ್ದ ಪಾಕಿಸ್ತಾನ ಸೈನಿಕರು ಹಾಗೂ ಉಗ್ರರ ವಿರುದ್ಧ ಹೋರಾಡಿ, ಶ್ರೀನಗರದ ಲೇಹ್ ಹೆದ್ದಾರಿಯನ್ನು ಗಮನದಲ್ಲಿರಿಸಿಕೊಂಡು ಪಾಕಿಸ್ತಾನ ಆಕ್ರಮಿಸಿದ್ದ ಹಲವು ಪರ್ವತ ಶಿಖರಗಳನ್ನು ವಶಪಡಿಸಿಕೊಂಡಿತ್ತು.

    ಜು.14ರ ಭಾರತದ ವಿಜಯ ದಿನದಂದು ರಾಜ್‍ನಾಥ್ ಸಿಂಗ್ ಅವರು ದೆಹಲಿಯ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ, `ವಿಜಯ ಜ್ವಾಲೆ’ಯನ್ನು ಹೊತ್ತಿಸಿದ್ದರು. ಜ್ವಾಲೆಯು ಜು.26 ರಂದು ದ್ರಾಸ್ ತಲುಪಲಿದ್ದು, ಸುಮಾರು 9 ಪಟ್ಟಣಗಳು ಹಾಗೂ ನಗರಗಳನ್ನು ಹಾದು ಹೋಗಲಿದೆ. ನಂತರ ಕಾರ್ಗಿಲ್‍ಗೆ ತಲುಪಿ ಶಾಶ್ವತ ವಿಜಯ ಜ್ವಾಲೆ ಬಳಿ ವಿಲೀನಗೊಳಿಸಲಾಗುತ್ತದೆ.

    ವಿಜಯ ದಿನವನ್ನು ಭಾರತೀಯ ಸೇನೆ ವಿಜೃಂಭಣೆಯಿಂದ ಆಚರಿಸಿದೆ. ಈ ಮೂಲಕ ಆಪರೇಷನ್ ವಿಜಯ್‍ನಲ್ಲಿ ಭಾಗವಹಿಸಿದ ಯೋಧರಿಗೆ ನಮನ ಸಲ್ಲಿಸಲಾಯಿತು. ಆಪರೇಷನ್ ವಿಜಯ್‍ನ್ನು `ರಿಮೆಂಬರ್, ರೀಜಾಯ್ಸ್ ಆಂಡ್ ರಿನ್ಯೂ(ನೆನಪಿಡಿ, ಹೆಮ್ಮೆಪಡಿ ಮತ್ತು ನವೀಕರಿಸಿ)’ ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಯಿತು. ಅಲ್ಲದೆ, ಸೈನ್ಯದ ಮೂರು ಬೆಟಾಲಿಯನ್‍ಗಳು ಅಸಾಧ್ಯವಾಗದ ಸ್ಥಿಯಲ್ಲಿ ಹೋರಾಡಿದ ಶಿಖರಗಳಿಗೆ ದಂಡಯಾತ್ರೆ ಕೈಗೊಳ್ಳಲಾಗಿದೆ.

    ಕಾರ್ಗಿಲ್ ವಿಜಯ ದಿನದ ಅಂಗವಾಗಿ ಇಂಡೋ ಟಿಬೇಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಮತ್ತು ಬಿಎಸ್‍ಎಫ್ ಯೋಧರ ತಂಡಗಳು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ಸೈನಿಕರು, ಪೊಲೀಸ್ ಹಾಗೂ ಅರೆಸೇನಾ ಪಡೆಗಳ ಧೈರ್ಯದ ಕಥೆಗಳನ್ನು ಪ್ರದರ್ಶಿಸಿತು. ಅಲ್ಲದೆ ವಿವಿಧ ಕಾರ್ಯಕ್ರಮಗಳನ್ನು ಸೇನೆ ಏರ್ಪಡಿಸಿದ್ದು, ಕಾರ್ಗಿಲ್ ವಿಜಯ ದಿನದ ಹಿನ್ನೆಲೆ ಯುದ್ಧದಲ್ಲಿ ಸಾವನ್ನಪ್ಪಿದ ಸೈನಿಕರ ಕುಟುಂಬ ಸದಸ್ಯರನ್ನು ಗೌರವಿಸಲಾಯಿತು.

  • ದೇಶಕ್ಕೆ ಪಾಕಿಸ್ತಾನಕ್ಕಿಂತ ಬುದ್ಧಿಜೀವಿಗಳಿಂದಲೇ ಅಪಾಯ: ಶಾಸಕ ಯತ್ನಾಳ್

    ದೇಶಕ್ಕೆ ಪಾಕಿಸ್ತಾನಕ್ಕಿಂತ ಬುದ್ಧಿಜೀವಿಗಳಿಂದಲೇ ಅಪಾಯ: ಶಾಸಕ ಯತ್ನಾಳ್

    ವಿಜಯಪುರ: ನಮ್ಮ ದೇಶಕ್ಕೆ ಪಾಕಿಸ್ತಾನಕ್ಕಿಂತ ಅಪಾಯ ಇರುವುದು ದೇಶದ ಬುದ್ಧಿಜೀವಿಗಳಿಂದ. ಅವರಿಂದ ದೇಶ ಹಾಳಾಗಿದ್ದು ನಾನು ಗೃಹ ಮಂತ್ರಿಯಾದರೆ ಅವರಿಗೆ ಗುಂಡು ಹಾರಿಸಿ ಅಂತಾ ಆದೇಶ ನೀಡುತ್ತಿದ್ದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ನಗರದ ಕನ್ನಡ ಸಾಹಿತ್ಯ ಪರಿಷತ್‍ನಲ್ಲಿ ಆಯೋಜಿಸಿದ್ದ ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮ ಉದ್ಘಾಟನೆ ನಂತರ ಮಾತನಾಡಿದ ಶಾಸಕರು, ಜಮ್ಮು ಮತ್ತು ಕಾಶ್ಮೀರ ಜನರು ನಮ್ಮ ದೇಶದ ಗಾಳಿ, ನೀರು, ಅನ್ನ ಸೇವಿಸುತ್ತಾರೆ. ನಾವು ಕಟ್ಟುವ ತೆರಿಗೆಯ ಹಣದಲ್ಲಿ ಹೆಚ್ಚಿನ ಪ್ರಮಾಣವನ್ನು ಅವರಿಗೆ ಖರ್ಚು ಮಾಡಲಾಗುತ್ತದೆ. ಆದರೆ ಬುದ್ಧಿಜೀವಿಗಳು ದೇಶದ ವಿರುದ್ಧ ಘೋಷಣೆ ಕೂಗುತ್ತಾರೆ, ಸೈನಿಕರ ಮೇಲೆ ಕಲ್ಲು ಎಸೆಯುತ್ತಾರೆ ಎಂದು ಹೇಳಿ ವಾಗ್ದಾಳಿ ನಡೆಸಿದರು.

    ದೇಶ ವಿರೋಧಿ ಜಟುವಟಿಕೆ ಮಾಡುವವರ ಮೇಲೆ ಹಲ್ಲೆ ಮಾಡಿದಾಗ ಮಾನವ ಹಕ್ಕು ಸಮಿತಿ ಮಧ್ಯೆ ಪ್ರವೇಶಿಸಿ ಅವರನ್ನು ರಕ್ಷಿಸುತ್ತಾರೆ. ಹಾಗಾದರೆ ಸೈನಿಕರ ಮೇಲೆ ಆಗುವ ಷೋಷಣೆಯನ್ನು ತಡೆಯಲು ಯಾವುದೇ ಸಮಿತಿ ಮುಂದೆ ಬರುವುದಿಲ್ಲ. ಒಂದು ವೇಳೆ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಇದ್ದಿದ್ದರೆ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನದ 370ನೇ ವಿಧಿ ಜಾರಿ ಆಗುತ್ತಿರಲಿಲ್ಲ. ಪ್ರಧಾನಿ ನರೇಂದ್ರ ಮೋದಿ ಈ ವಿಧಿಯನ್ನು ತೆಗೆದು ಹಾಕಲಿದ್ದಾರೆ. ಪಾಕಿಸ್ತಾನ ಭಾರತದ ವಿರುದ್ಧ ಎಂದಿಗೂ ಗೆಲ್ಲುವುದಿಲ್ಲ ಎಂದು ನುಡಿದರು.

    ಯೋಧರು -60 ಡಿಗ್ರಿ ಸೆಲ್ಸಿಯಸ್ ನಲ್ಲಿ ಕೆಲಸ ಮಾಡುತ್ತಾರೆ. ಆದರೆ ನಾವು 3 ಕಿ.ಮೀ. ಹೋಗುವುದಕ್ಕೆ ಪರದಾಡುತ್ತೇವೆ. ಇದು ನಮ್ಮ ದೇಶದ ದುರಂತವಾಗಿದೆ. ಇಸ್ರೇಲ್ ನಲ್ಲಿ ಹುಟ್ಟಿದ ಮಗುವು ಕಡ್ಡಾಯವಾಗಿ ಸೇನೆಯಲ್ಲಿ ಸೇವೆ ಸಲ್ಲಿಸಬೇಕು. ಇಂತಹ ವ್ಯವಸ್ಥೆ ನಮ್ಮ ದೇಶದಲ್ಲಿ ಬರಬೇಕು ಎಂದ ಶಾಸಕರು, ಪಾಕಿಸ್ತಾನ ಭೂಪಟದಲ್ಲಿ ಇಲ್ಲದಂತೆ ಮಾಡುವ ಶಕ್ತಿ ನಮ್ಮ ಸೈನ್ಯಕ್ಕಿದೆ. ಪಾಕಿಸ್ತಾನ ಸೈನಿಕರು ಏನೂ ಗೆಲ್ಲದೆ ಎದೆಯ ಮೇಲೆ ಮೆಡಲ್‍ಗಳನ್ನ ಹಾಕಿಕೊಳ್ಳುತ್ತಾರೆ ಎಂದು ವ್ಯಂಗ್ಯವಾಡಿದರು.

    ಸೈನಿಕರು ಸಾಯುವುದಕ್ಕೆ ಗಡಿಗೆ ಹೋಗುತ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರರಾಗಿದ್ದ ದಿನೇಶ್ ಅಮಿನ್ ಮಟ್ಟು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ತಮ್ಮ ಮನೆಯಲ್ಲಿ ದೀಪಾವಳಿ ಆಚರಿಸದೆ, ಭಾರತದ ಗಡಿಗೆ ಭೇಟಿ ನೀಡಿ ಹಬ್ಬ ಆಚರಿಸುತ್ತಾರೆ ಎಂದು ಹೇಳಿದರು.

  • 800 ಅಡಿ ಉದ್ದದ ರಾಷ್ಟ್ರಧ್ವಜ ಹಿಡಿದು ವಿದ್ಯಾರ್ಥಿಗಳ ಮೆರವಣಿಗೆ

    800 ಅಡಿ ಉದ್ದದ ರಾಷ್ಟ್ರಧ್ವಜ ಹಿಡಿದು ವಿದ್ಯಾರ್ಥಿಗಳ ಮೆರವಣಿಗೆ

    ಚಿಕ್ಕಮಗಳೂರು: ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ಜಿಲ್ಲೆಯ ವಿದ್ಯಾರ್ಥಿಗಳು ಸುಮಾರು 800 ಅಡಿ ಉದ್ದದ ಧ್ವಜವನ್ನು ಹಿಡಿದು ನಗರದಾದ್ಯಂತ ಮೆರವಣಿಗೆ ನಡೆಸಿದ್ದಾರೆ.

    ಇಂದು ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ಜಿಲ್ಲೆಯ ವಿವಿಧ ಕಾಲೇಜಿನ ವಿದ್ಯಾರ್ಥಿಗಳು 800 ಅಡಿ ಉದ್ದದ ಧ್ವಜವನ್ನ ಮೆರವಣಿಗೆ ಮಾಡಿದ್ದಾರೆ. ನಗರದ ಹನುಮಂತಪ್ಪ ವೃತ್ತದಿಂದ ಮೆರವಣೆಗೆ ಹೊರಟ ವಿದ್ಯಾರ್ಥಿಗಳು ಎಂ.ಜಿ.ರಸ್ತೆ ಹಾಗೂ ಐ.ಜಿ. ರಸ್ತೆ ಮೂಲಕ ಸಾಗಿ ಕುವೆಂಪು ಕಲಾಮಂದಿರದವರೆಗೂ ಮೆರವಣಿಗೆ ನಡೆಸಿದ್ದಾರೆ.

    ಮೆರವಣಿಗೆಯುದ್ದಕ್ಕೂ ಸೈನಿಕರ ಪರ ಘೋಷಣೆ ಕೂಗಿದ ವಿದ್ಯಾರ್ಥಿಗಳು, ಮೆರವಣಿಗೆಯ ಬಳಿಕ ಕುವೆಂಪು ಕಲಾಮಂದಿರದಲ್ಲಿ ಮಾಜಿ ಸೈನಿಕರಿಗೆ ಸನ್ಮಾನ ಮಾಡಿದ್ದಾರೆ. ಸಮಾರಂಭದಲ್ಲಿ ಸೈನಿಕರು ತಮ್ಮ ವೃತ್ತಿ ಜೀವನದ ರೋಚಕ ಮಾಹಿತಿಗಳನ್ನು ವಿದ್ಯಾರ್ಥಿಗಳ ಬಳಿ ಹಂಚಿಕೊಂಡಿದ್ದಾರೆ.

  • 19ನೇ ವರ್ಷದ ಕಾರ್ಗಿಲ್ ವಿಜಯ್ ದಿವಸ್ ಆಚರಣೆ

    19ನೇ ವರ್ಷದ ಕಾರ್ಗಿಲ್ ವಿಜಯ್ ದಿವಸ್ ಆಚರಣೆ

    ಬೆಂಗಳೂರು: ಇಂದು ದೇಶಾದ್ಯಂತ ಕಾರ್ಗಿಲ್ ವಿಜಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಕಾರ್ಗಿಲ್ ಯುದ್ಧದಲ್ಲಿ ಮಡಿದ ಸೈನಿಕರಿಗೆ ಭಾರತೀಯರು ಗೌರವ ಸಲ್ಲಿಸುತ್ತಿದ್ದಾರೆ.

    ಜುಲೈ 26 ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತೀಯ ಸೈನಿಕರು ವಿಜಯಪತಾಕೆಯನ್ನು ಹಾರಿಸಿದ ದಿನವಾಗಿದೆ. ಪಾಕ್ ಮೇಲೆ ಭಾರತೀಯ ಯೋಧರು ವಿಜಯ ಸಾಧಿಸಿದ ಸ್ಮರಣಾರ್ಥ ಇಂದು ದೇಶದೆಲ್ಲೆಡೆ `ಕಾರ್ಗಿಲ್ ವಿಜಯ್ ದಿವಸ್’ ಆಚರಣೆಮಾಡಲಾಗುತ್ತಿದೆ.

    ಭಾರತೀಯ ಸೈನ್ಯದ ಶೌರ್ಯ, ಸೈನಿಕರ ಸಾಹಸವನ್ನು ಜಗತ್ತಿಗೆ ಪರಿಚಯಿಸಿದ್ದು ಕಾರ್ಗಿಲ್ ಯುದ್ಧ, ಹೀಗಾಗಿ ಪ್ರತಿ ವರ್ಷ ಜುಲೈ 26ರಂದು ಸಂಭ್ರಮದಿಂದ ಭಾರತೀಯರು ಆಚರಿಸುತ್ತಾರೆ.

    ಭಾರತ ಸರ್ಕಾರ ಕಾರ್ಗಿಲ್ ಯುದ್ಧದಲ್ಲಿ ಕೆಚ್ಚೆದೆಯ ಹೋರಾಟ, ಧೈರ್ಯ ಮತ್ತು ಸಾಹಸಗಳಿಂದ `ಆಪರೇಷನ್ ವಿಜಯ್’ಗೆ ಯಶಸ್ವಿಗೊಳಿಸಿದ, ರೈಫಲ್ ಮ್ಯಾನ್ ಸಂಜಯ್ ಕುಮಾರ್, ನಯಿಬ್ ಸುಬೇದಾರ್ ಯೋಗೇಂದ್ರ ಸಿಂಗ್ ಯಾದವ್, ಲೆಫ್ಟಿನೆಂಟ್ ಮನೋಜ್ ಕುಮಾರ್ ಪಾಂಡೆ ಮತ್ತು ವಿಕ್ರಮ್ ಬಾತ್ರಾರವರಿಗೆ ಸೇನೆಯ ಅತ್ಯುನ್ನತ ಪ್ರಶಸ್ತಿಯಾದ ಪರಮವೀರ ಚಕ್ರ ಪುರಸ್ಕಾರವನ್ನು ನೀಡಿ ಗೌರವಿಸಿತ್ತು.

    ಏನಿದು ಕಾರ್ಗಿಲ್ ವಿಜಯ್ ದಿವಸ್?
    1999ರ ಮೇ ಮತ್ತು ಜುಲೈನ 2 ತಿಂಗಳುಗಳ ನಡುವೆ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಯುದ್ಧವೇ ಕಾರ್ಗಿಲ್ ಯುದ್ಧ. ಈ ಯುದ್ಧದಲ್ಲಿ ಪಾಕಿಸ್ತಾನದ ಸೈನಿಕರು ಅಕ್ರಮವಾಗಿ ಕಾಶ್ಮೀರದ ಕಾರ್ಗಿಲ್ ಸೇರಿದಂತೆ ಬಹುತೇಕ ಅಂತರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯ ಭಾಗಗಳನ್ನು ಆಕ್ರಮಿಸಿಕೊಂಡಿದ್ದರು.

    ಪಾಕ್ ಸೈನಿಕರು ಅಕ್ರಮವಾಗಿ ಆಕ್ರಮಿಸಿಕೊಂಡಿದ್ದ ಕಾರ್ಗಿಲ್ ವಿಭಾಗವನ್ನು ಪುನಃ ಕೈವಶ ಮಾಡಿಕೊಳ್ಳಲು ಭಾರತ `ಆಪರೇಷನ್ ವಿಜಯ’ ಎಂಬ ಕಾರ್ಯಾಚರಣೆಯನ್ನು ನಡೆಸಿ ಜುಲೈನ 26ರಂದು ಯಶಸ್ವಿಯಾಗಿ ತನ್ನ ತೆಕ್ಕೆಗೆ ತೆಗೆದುಕೊಂಡಿತ್ತು. ಕಾರ್ಗಿಲ್ ಯುದ್ಧದಲ್ಲಿ ಸುಮಾರು 527 ಸೈನಿಕರು ದೇಶಕ್ಕಾಗಿ ತಮ್ಮ ಬಲಿದಾನವನ್ನೇ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅಂದಿನಿಂದ ಜುಲೈ 26ರಂದು ಕಾರ್ಗಿಲ್ ಹೋರಾಟದಲ್ಲಿ ವೀರಮರಣನ್ನಪ್ಪಿದ ಯೋಧರಿಗೆ ಗೌರವ ಸಲ್ಲಿಸಲು ಈ ವಿಜಯ್ ದಿವಸ್ ಅನ್ನು ಆಚರಣೆ ಮಾಡಿಕೊಳ್ಳುತ್ತಾ ಸೇನೆ ಬರುತ್ತಿದೆ.

    ಇಂದು ಜಮ್ಮು-ಕಾಶ್ಮೀರದ ದ್ರಾಸ್‍ನಲ್ಲಿ ಕಾರ್ಗಿಲ್ ಯುದ್ಧದಲ್ಲಿ ಮಡಿದ ವೀರಯೋಧರ ಸ್ಮರಣಾರ್ಥ ನಿರ್ಮಿಸಿರುವ ಸ್ಮಾರಕದಲ್ಲಿ ಅಂದು ಭಾರತೀಯ ಸೈನಿಕರು ಯುದ್ಧಕ್ಕೆ ಬಳಸಿದ್ದ ಶಸ್ತ್ರಾಸ್ತ್ರಗಳನ್ನು ಪ್ರದರ್ಶನ ಮಾಡಲಾಗುತ್ತದೆ.