Tag: Kargil Vijay Diwas

  • Kargil Vijay Diwas: ಹುತಾತ್ಮ ಯೋಧರಿಗೆ ರಾಜನಾಥ್‌ ಸಿಂಗ್‌ ನಮನ

    Kargil Vijay Diwas: ಹುತಾತ್ಮ ಯೋಧರಿಗೆ ರಾಜನಾಥ್‌ ಸಿಂಗ್‌ ನಮನ

    ನವದೆಹಲಿ: ಪಾಕ್‌ ವಿರುದ್ಧ 1999ರ ಕಾರ್ಗಿಲ್‌ ಯುದ್ಧದಲ್ಲಿ ಭಾರತದ ವಿಜಯಕ್ಕಾಗಿ ಬಲಿದಾನಗೈದ ಹುತಾತ್ಮ ಯೋಧರಿಗೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ (Rajnath Singh) ನಮನ ಸಲ್ಲಿಸಿದ್ದಾರೆ.

    1999ರ ಜುಲೈ 26 ರಂದು ಲಡಾಖ್‌ನ ಕಾರ್ಗಿಲ್‌ನ ಹಿಮಾವೃತ ಶಿಖರಗಳ ಮೇಲೆ ಸುಮಾರು ಮೂರು ತಿಂಗಳ ಕಾಲ ಪಾಕಿಸ್ತಾನ ಮತ್ತು ಭಾರತದ ನಡುವೆ ಯುದ್ಧ ನಡೆಯಿತು. ಕೊನೆಗೆ ಭಾರತ ಜಯ ಸಾಧಿಸಿತು. ಇದನ್ನೂ ಓದಿ: ರಾಹುಲ್ ಗಾಂಧಿ ಒಬಿಸಿಗಳ ಪಾಲಿನ 2ನೇ ಅಂಬೇಡ್ಕರ್ – `ಕೈʼ ಮುಖಂಡ ಉದಿತ್ ರಾಜ್ ಬಣ್ಣನೆ

    ಪಾಕಿಸ್ತಾನದ ವಿರುದ್ಧ ಭಾರತ ಸಾಧಿಸಿದ ವಿಜಯದ ನೆನಪಿಗಾಗಿ ಈ ದಿನವನ್ನು ‘ಕಾರ್ಗಿಲ್ ವಿಜಯ್ ದಿವಸ್’ (Kargil Vijay Diwas) ಎಂದು ಆಚರಿಸಲಾಗುತ್ತದೆ.

    ಕಾರ್ಗಿಲ್ ವಿಜಯ್ ದಿವಸದಂದು, ನಮ್ಮ ರಾಷ್ಟ್ರದ ಗೌರವವನ್ನು ರಕ್ಷಿಸುವಲ್ಲಿ ಅಸಾಧಾರಣ ಧೈರ್ಯ, ದೃಢನಿಶ್ಚಯ ಪ್ರದರ್ಶಿಸಿದ ನಮ್ಮ ಧೈರ್ಯಶಾಲಿಗಳಿಗೆ ಹೃತ್ಪೂರ್ವಕ ಗೌರವಗಳನ್ನು ಸಲ್ಲಿಸುತ್ತೇನೆ ಎಂದು ರಾಜನಾಥ್‌ ಸಿಂಗ್‌ ತಿಳಿಸಿದ್ದಾರೆ. ಇದನ್ನೂ ಓದಿ: ಸೋನ್‌ಪ್ರಯಾಗ್ ಬಳಿ ಭೂಕುಸಿತ – ಕೇದಾರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

    ಕಾರ್ಗಿಲ್ ಯುದ್ಧದ ಸಮಯದಲ್ಲಿ ಅವರ ಅತ್ಯುನ್ನತ ತ್ಯಾಗವು ನಮ್ಮ ಸಶಸ್ತ್ರ ಪಡೆಗಳ ಅಚಲವಾದ ದೃಢಸಂಕಲ್ಪದ ಶಾಶ್ವತ ಜ್ಞಾಪನೆಯಾಗಿದೆ. ಭಾರತವು ಅವರ ಸೇವೆಗೆ ಸದಾ ಋಣಿಯಾಗಿರುತ್ತದೆ ಎಂದು ಹೇಳಿದ್ದಾರೆ.

  • ಭಾರೀ ಗಾಳಿ ಸಹಿತ ಮಳೆ – ಮನೆ ಕುಸಿದು ಕಾರ್ಮಿಕ ಮಹಿಳೆ ಸಾವು

    ಭಾರೀ ಗಾಳಿ ಸಹಿತ ಮಳೆ – ಮನೆ ಕುಸಿದು ಕಾರ್ಮಿಕ ಮಹಿಳೆ ಸಾವು

    ಮಡಿಕೇರಿ: ಕೊಡಗು (Kodagu) ಜಿಲ್ಲೆಯಾದ್ಯಂತ ಕಳೆದ ರಾತ್ರಿಯಿಂದ ಭಾರೀ ಗಾಳಿ ಸಹಿತ ಮಳೆ ಪ್ರಮಾಣ ಹೆಚ್ಚಾಗಿದ್ದು, ಜಿಲ್ಲೆಯ ನಾನಾ ಭಾಗಗಳಲ್ಲಿ ಮಳೆಯ ಅವಾಂತರಗಳು (Rain Effect) ಮುಂದುವರಿಯುತ್ತಿದೆ.

    ಈ‌ ನಡುವೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಹಾನಗಲ್ ಗ್ರಾಮದಲ್ಲಿಂದು ಬೆಳಗ್ಗೆ 5:30ರ ಸುಮಾರಿಗೆ ಮಳೆ ಗಾಳಿಗೆ ಮನೆ ಕುಸಿದು ಬಿದ್ದು ಕಾರ್ಮಿಕ ಮಹಿಳೆ ಮೃತಪಟ್ಟಿರುವ ಘಟನೆ ನಡೆದಿದೆ. ಇದನ್ನೂ ಓದಿ: ಬಾಗಲಕೋಟೆ | ಬೈಕ್ ತಪ್ಪಿಸಲು ಹೋಗಿ ಕಾರಿನ ಮೇಲೆ ಲಾರಿ ಪಲ್ಟಿ – ಇಬ್ಬರು ದುರ್ಮರಣ

    ಮಹಿಳೆ ಮೃತಪಟ್ಟಿದ್ದು, ಆಕೆಯ ಮಕ್ಕಳು ಹಾಗೂ ಸಹೋದರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಾನಗಲ್‌ ಗ್ರಾಮದ ಗಣಪತಿ ದೇವಸ್ಥಾನದ ಸಮೀಪದಲ್ಲಿರುವ ಸುಷ್ಮಾ (37) ಮೃತ ಮಹಿಳೆ ಆಗಿದ್ದಾರೆ. ಇವರ ಮೂವರು ಮಕ್ಕಳು ಹಾಗೂ ಸಹೋದರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಇದನ್ನೂ ಓದಿ: ಉದಯಪುರದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ – ಶಿಕ್ಷಕರಿಂದ ಕಿರುಕುಳ ಆರೋಪ

    ಮಳೆಯಲ್ಲೇ ಕೊಡಗಿನಲ್ಲಿ ಕಾರ್ಗಿಲ್‌ ವಿಜಯೋತ್ಸವ
    ಇನ್ನೂ ಸೇನಾನಾಡು ಕೊಡಗಿನಲ್ಲಿ ಕಾರ್ಗಿಲ್‌ ವಿಜಯೋತ್ಸವವನ್ನ (Kargil Vijay Diwas) ಸಂಭ್ರಮದಿಂದ ಆಚರಿಸಲಾಯಿತು. ಮಳೆಯನ್ನು ಲೆಕ್ಕಿಸದೇ ಭಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್‌ನಿಂದ ಮಡಿಕೇರಿ ನಗರದ ಯುದ್ಧ ಸ್ಮಾರಕ ಬಳಿ ಪುಷ್ಪ ನಮನ ಸಲ್ಲಿಸುವ ಮೂಲಕ ಯೋಧರಿಗೆ ಗೌರವ ಸಲ್ಲಿಲಾಯಿತು. ಇದನ್ನೂ ಓದಿ: ರಾಧಾನಗರಿ ಜಲಾಶಯದಿಂದ 4 ಗೇಟ್‌ಗಳ ಮೂಲಕ ನೀರು ಬಿಡುಗಡೆ – ದೂದ್‌ಗಂಗಾ ನದಿ ತೀರದಲ್ಲಿ ಹೈಅಲರ್ಟ್

    ನೂರಾರೂ ಮಂದಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ಅಗಲಿದ ವೀರ ಸೇನಾನಿಗಳನ್ನ ಸ್ಮರಿಸಿದರು. ಅಲ್ಲದೇ ಅಂದಿನ ದಿನದಲ್ಲಿ ಸೈನಿಕರು ಹಾಗೂ ಅವರ ಕುಟುಂಬಸ್ಥರು ಯಾವ ರೀತಿಯ ನೋವು ಅನುಭವಿಸುತ್ತಿದ್ದರು, ಇಂದಿನ ದಿನಗಳಲ್ಲಿ ಸೈನಿಕರ ಕುಟುಂಬಗಳನ್ನ ಸರ್ಕಾರಿ ಅಧಿಕಾರಿಗಳು ಹೇಗೆ ನೋಡ್ತಿದ್ದಾರೆ ಅಂತ ಕೆಲ ಸೈನಿಕರು ನೋವು ಹಂಚಿಕೊಂಡರು. ಈ ಸಂದರ್ಭದಲ್ಲಿ ಹಿಂದೂ ಪರ ಕಾರ್ಯಕರ್ತರು ಸಿಹಿ ಹಂಚಿ ಕಾರ್ಗಿಲ್‌ ವಿಜಯೋತ್ಸವವನ್ನು ಸಂಭ್ರಮಿಸಿದರು.

  • ಕಾರ್ಗಿಲ್ ವಿಜಯೋತ್ಸವ: ವಿಜಯ್ ದಿವಸದ ಬಗ್ಗೆ ನೀವು ತಿಳಿಯಬೇಕಾದ 10 ಪ್ರಮುಖ ವಿಷಯಗಳು

    ಕಾರ್ಗಿಲ್ ವಿಜಯೋತ್ಸವ: ವಿಜಯ್ ದಿವಸದ ಬಗ್ಗೆ ನೀವು ತಿಳಿಯಬೇಕಾದ 10 ಪ್ರಮುಖ ವಿಷಯಗಳು

    ಪಾಕಿಸ್ತಾನದ ವಿರುದ್ಧ ಕಾರ್ಗಿಲ್ ಯುದ್ಧ ಗೆದ್ದು ಇಂದಿಗೆ 23 ವರ್ಷವಾಗಿದೆ. 1999ರ ಮೇ 3ರಂದು ಅಂದಿನ ಪಾಕ್ ಸೇನಾ ಮುಖ್ಯಸ್ಥ ಪರ್ವೇಜ್ ಮುಷರ್ರಫ್ ಕುತಂತ್ರದಿಂದ ಕಾರ್ಗಿಲ್‍ಗೆ 5000 ಯೋಧರನ್ನು ನುಗ್ಗಿಸಿದ್ದ. ಕುರಿಗಾಹಿಗಳ ಸುಳಿವಿನ ಮೂಲಕ ಮಾಹಿತಿ ಪಡೆದ ಭಾರತದ 20,000 ಯೋಧರು ಮುಗಿಬಿದ್ದು ಕಪಟಿ ಪಾಕಿಸ್ತಾನವನ್ನು ಒದ್ದೋಡಿಸಿದರು. ಈ ಹೋರಾಟದಲ್ಲಿ 700ಕ್ಕೂ ಹೆಚ್ಚು ಯೋಧರು ಹುತಾತ್ಮರಾದರು. ಅವರ ತ್ಯಾಗ ಬಲಿದಾನ ಸ್ಮರಿಸುತ್ತಾ ಜುಲೈ 26ರನ್ನು ಭಾರತ ಕಾರ್ಗಿಲ್ ವಿಜಯ ದಿವಸ್ ಆಚರಿಸುತ್ತಿದೆ. ಸ್ವಾತಂತ್ರ್ಯ ದಿನಾಚರಣೆ 75ನೇ ವರ್ಷದ ಸಂದರ್ಭದಲ್ಲಿ ಈ ವಿಶಿಷ್ಟ ದಿನವನ್ನು ದೇಶದ್ಯಾಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಕಾರ್ಗಿಲ್ ವಿಜಯೋತ್ಸವದ ಬಗ್ಗೆ ಕುತೂಹಲ ಮೂಡಿಸುವ 10 ವಿಷಯಗಳನ್ನು ಇಲ್ಲಿ ನೀಡಲಾಗಿದೆ.

    * ಪಾಕಿಸ್ತಾನವು ತನ್ನ ಪಡೆಗಳನ್ನು ಮತ್ತು ಅರೆಸೈನಿಕ ಪಡೆಗಳನ್ನು ಆಪರೇಷನ್ ಬದ್ರ್ ಅಡಿಯಲ್ಲಿ ಎಲ್‍ಒಸಿಯ(ಗಡಿ ನಿಯಂತ್ರಣ ರೇಖೆ) ಭಾರತದ ಕಾರ್ಗಿಲ್ ಎನ್ನುವ ಸ್ಥಳಕ್ಕೆ ರಹಸ್ಯವಾಗಿ ಕಳುಹಿಸಿತ್ತು. ನಂತರ ಪಾಕಿಸ್ತಾನವು ಈ ಕಾರ್ಗಿಲ್‍ನ 130 ರಿಂದ 200 ಚದರ ಕಿ.ಮೀ ನಡುವಿನ ಪ್ರದೇಶವನ್ನು ಆಕ್ರಮಿಸಿಕೊಂಡಿತ್ತು.

    * ಕಾಶ್ಮೀರದಿಂದ ಲಡಾಖ್‍ಗಿದ್ದ ಸಂಪರ್ಕವನ್ನು ಕಡಿತಗೊಳಿಸುವುದು ಹಾಗೂ ಸಿಯಾಚಿನ್ ಕಣಿವೆಯಲ್ಲಿರುವ ಜನರನ್ನು ಹಸಿವಿನಿಂದ ಸಾಯಿಸುವುದು ಪಾಕಿಸ್ತಾನದ ಯೋಜನೆಯಾಗಿತ್ತು. ಅಷ್ಟೇ ಅಲ್ಲದೇ ಭಾರತ ಹಾಗೂ ಪಾಕ್‍ನ ವೈರತ್ವಕ್ಕೆ ಮುಖ್ಯ ಬುನಾದಿ ಆಗಿರುವ ಕಾಶ್ಮೀರ ಸಮಸ್ಯೆಯಲ್ಲಿ ಭಾರತಕ್ಕೆ ಕೆಲವು ಷರತ್ತುಗಳನ್ನು ಒಪ್ಪಿಕೊಳ್ಳುವಂತೆ ಮಾಡುವುದು ಈ ಕುತಂತ್ರದ ಭಾಗವಾಗಿತ್ತು.

    * ಕಾರ್ಗಿಲ್ ಬೆಟ್ಟದ ಎತ್ತರದ ಪ್ರದೇಶದಲ್ಲಿ ಪಾಕ್ ಸೈನಿಕರು ಅವಿತಿದ್ದರೆ ಭಾರತದ ಸೈನಿಕರು ಕೆಳಗಡೆ ಇದ್ದರು. ಭಾರತ ಸೈನಿಕರ ಚಲನವಲನಗಳನ್ನು ತಿಳಿದುಕೊಳ್ಳುತ್ತಿದ್ದ ಪಾಕ್ ಸೈನಿಕರು ಸುಲಭವಾಗಿ ದಾಳಿ ಮಾಡುತ್ತಿದ್ದರು. ಪರಿಸ್ಥಿತಿ ಕಠಿಣವಾಗಿದ್ದರೂ ಕಾರ್ಗಿಲ್‍ನ್ನು ರಕ್ಷಿಸಲು ಭಾರತ ವಿಶೇಷ ಪಡೆಗಳೊಂದಿಗೆ ಸುಮಾರು 30,000 ಸೈನಿಕರನ್ನು ಕಾರ್ಗಿಲ್ ದ್ರಾಸ್ ಪ್ರದೇಶಕ್ಕೆ ಕಳುಹಿಸಿತ್ತು. ಅಲ್ಲಿ 527ಕ್ಕೂ ಹೆಚ್ಚು ಸೈನಿಕರು ಅಲ್ಲಿ ತಮ್ಮ ಪ್ರಾಣವನ್ನು ಕಳೆದುಕೊಂಡರು.

    * ಮೇಲಿನಿಂದ ದಾಳಿಯಾಗುತ್ತಿದ್ದರೂ ಎದೆಗುಂದದ ನಮ್ಮ ಸೈನಿಕರು ವಿಶ್ವವೇ ನಿಬ್ಬೆರಾಗುವಂತೆ ಸಾಹಸ ಪ್ರದರ್ಶನ ತೋರಿದ್ದರು.ಬೋಫೋರ್ಸ್ ಗನ್ ಮೂಲಕ ಸೈನಿಕರು ಪಾಕಿಸ್ತಾನದ ಸೇನಾ ಬಂಕರ್‍ಗಳನ್ನೇ ಧ್ವಂಸ ಮಾಡಿದ್ದರು. ಕಾರ್ಗಿಲ್‍ನ ಮೇಲ್ಭಾಗಕ್ಕೆ ಭಾರತೀಯ ವಾಯುಪಡೆ ನುಗ್ಗಿ ಯಶಸ್ವಿಯಾಗಿ ಪಾಕ್ ಸೈನಿಕರನ್ನು ಓಡಿಸಿತ್ತು.

    * ಪಾಕಿಸ್ತಾನದ ವಾಯುಪಡೆಯ ನಿವೃತ್ತ ಕಮಾಂಡರ್ ಕೈಸರ್ ತುಫೈಲ್ ಅವರು ಯುದ್ಧದ ಬಳಿ ಪಾಕಿಸ್ತಾನದ ಯೋಜನೆಗಳನ್ನು ಭಾರತೀಯ ವಾಯುಯಾನ ಮತ್ತು ರಕ್ಷಣಾ ನಿಯತಕಾಲಿಕೆಗೆ ಬಹಿರಂಗಪಡಿಸಿದರು.

    * ಕಾರ್ಗಿಲ್‍ನ ಅಕ್ರಮವಾಗಿ ಪಾಕಿಸ್ತಾನವು ಹೊಂಚು ಹಾಕಿದ್ದರ ಹಿಂದಿನ ಮಾಸ್ಟರ್‌ ಮೈಂಡ್‌ ಪಾಕಿಸ್ತಾನದ ಆಗಿನ ಆರ್ಮಿ ಜನರಲ್ ಪರ್ವೇಜ್ ಮುಷರಫ್, ಪಾಕಿಸ್ತಾನ್ ಎಕ್ಸ್ ಕಾರ್ಪ್ಸ್ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಮಹ್ಮದ್ ಅಹ್ಮದ್, ಮೇಜರ್ ಜನರಲ್ ಜಾವೇದ್ ಹಸನ್, ಪಾಕಿಸ್ತಾನದ ಸೇನೆಯ ಮೇಜರ್ ಜನರಲ್ ಅಶ್ರಫ್ ರಶೀದ್ ಆಗಿದ್ದರು.

    * ಕುತೂಹಲ ವಿಷಯ ಏನೆಂದರೆ ನಾವು ಭಾರತದ ಮೇಲೆ ದಾಳಿ ಮಾಡುತ್ತಿದ್ದೇವೆ ಎಂಬ ವಿಚಾರ ಪಾಕಿಸ್ತಾನದ ಅಂದಿನ ಪ್ರಧಾನಿ ನವಾಜ್ ಷರೀಫ್ ಅವರಿಗೆ ತಿಳಿದಿರಲಿಲ್ಲ.

    * 1999ರ ಮೇ 3ರಂದು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿದ್ದ ಪಾಕ್ ಸೇನೆ ಜುಲೈ ಮೊದಲ ವಾರದಲ್ಲಿ ಸೋಲನ್ನು ಒಪ್ಪಿಕೊಂಡಿತು. ಜುಲೈ 26ರಂದು ಆಕ್ರಮಿತ ಭಾರತೀಯ ಪ್ರದೇಶಗಳನ್ನು ತೊರೆಯುವಂತೆ ಪಾಕಿಸ್ತಾನಿ ಪಡೆಗಳಿಗೆ ಸೂಚಿಸುವ ಮೂಲಕ ಯುದ್ಧ ಕೊನೆಗೊಂಡಿತು. ಈ ಯುದ್ಧವಲ್ಲಿ ಭಾರತ ವಿಜಯ ಸಾಧಿಸಿದ್ದು ಇತಿಹಾಸ ಪುಟದಲ್ಲಿ ದಾಖಲಾಗಿದೆ.

    * ಕಾರ್ಗಿಲ್ ವಿಜೋತ್ಸವದ ನೆನಪಿಗಾಗಿ ಪ್ರತಿ ವರ್ಷ ಜುಲೈ 26ರಂದು ಪ್ರಧಾನಿ ಆದವರು ಹುತಾತ್ಮ ಯೋಧರಿಗೆ ಗೌರವ ಸಲ್ಲಿಸುತ್ತಾರೆ. ಇದನ್ನೂ ಓದಿ: ಭಾರತೀಯರು, ಸಿಖ್ ದೇಶಬಾಂಧವರು ಆಫ್ಘಾನ್‍ಗೆ ಮರಳಿ: ತಾಲಿಬಾನ್

    * ಕಾರ್ಗಿಲ್‍ನ್ನು ರಕ್ಷಿಸಲು ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದ ಕ್ಯಾಪ್ಟನ್ ಮನೋಜ್ ಕುಮಾರ್ ಪಾಂಡೆ, ಕ್ಯಾಪ್ಟನ್ ವಿಕ್ರಮ್ ಬಾತ್ರಾ ಮತ್ತು ಕ್ಯಾಪ್ಟನ್ ಕೀಶಿಂಗ್ ಕ್ಲಿಫರ್ಡ್ ನೋಂಗ್ರಮ್ ಅವರಿಗೆ ಮರಣೋತ್ತರವಾಗಿ ಪರಮವೀರ ಚಕ್ರ ಹಾಗೂ ಮಹಾವೀರ ಚಕ್ರವನ್ನು ಭಾರತ ಸರ್ಕಾರ ನೀಡಿ ಹುತಾತ್ಮ ಯೋಧರನ್ನು ಗೌರವಿಸಿದೆ.

    Live Tv
    [brid partner=56869869 player=32851 video=960834 autoplay=true]

  • ದೇಶ ರಕ್ಷಣೆ ಮಾಡಿದ ಯೋಧರ ಸಾಹಸಗಾಥೆ ಯುವ ಪೀಳಿಗೆಗೆ ಸ್ಪೂರ್ತಿ – ಕಾರ್ಗಿಲ್ ಹುತಾತ್ಮರಿಗೆ ಸಿಎಂ ನಮನ

    ದೇಶ ರಕ್ಷಣೆ ಮಾಡಿದ ಯೋಧರ ಸಾಹಸಗಾಥೆ ಯುವ ಪೀಳಿಗೆಗೆ ಸ್ಪೂರ್ತಿ – ಕಾರ್ಗಿಲ್ ಹುತಾತ್ಮರಿಗೆ ಸಿಎಂ ನಮನ

    ಬೆಂಗಳೂರು: ಇಡೀ ದೇಶ ರಕ್ಷಣೆ ಮಾಡಿದ ಯೋಧರ ಸಾಹಸಗಾಥೆ ಯುವ ಪೀಳಿಗೆಗೆ ಎಂದಿಗೂ ಸ್ಪೂರ್ತಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಕಾರ್ಗಿಲ್ ಹುತಾತ್ಮರಿಗೆ ನಮನ ಸಲ್ಲಿಸಿದ್ದಾರೆ.

    ಇಂದು ಕಾರ್ಗಿಲ್ ವಿಜಯ್ ದಿವಸ್. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಿಲಿಟರಿ ಸ್ಮಾರಕದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಕಾರ್ಗಿಲ್ ಹುತಾತ್ಮರಿಗೆ ನಮನ ಸಲ್ಲಿಸಿದ್ದಾರೆ. ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಕಾರ್ಗಿಲ್ ವಿಜಯ್ ದಿವಸ್ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಿಎಂ ಯಡಿಯೂರಪ್ಪ ಅವರಿಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸಾಥ್ ನೀಡಿದ್ದರು.

    ಕಾರ್ಗಿಲ್ ವಿಜಯ್ ದಿವಸ್ ಉದ್ದೇಶಿಸಿ ಮಾತನಾಡಿದ ಸಿಎಂ ಯಡಿಯೂರಪ್ಪ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಆಯೋಜಿಸಿರುವ ಕಾರ್ಗಿಲ್ ವಿಜಯ್ ದಿವಸ್‍ನಲ್ಲಿ ಹೆಮ್ಮೆಯಿಂದ ಪಾಲ್ಗೊಂಡಿದ್ದೇನೆ. ಭಾರತ ಮಾತೆಯ ರಕ್ಷಣೆಗಾಗಿ ತಮ್ಮ ಜೀವವನ್ನೇ ಸಮರ್ಪಿಸಿಕೊಂಡ ಭಾರತೀಯ ಯೋಧರ ಶೌರ್ಯ ಮತ್ತು ತ್ಯಾಗಕ್ಕೆ ಸದಾ ಕೃತಜ್ಞರಾಗಿದ್ದೇವೆ ಎಂದರು.

    ನಮ್ಮ ದೇಶದ ಅವಿಭಾಜ್ಯ ಅಂಗವಾದ ಜಮ್ಮು ಮತ್ತು ಕಾಶ್ಮೀರದಲ್ಲಿನ ಕಾರ್ಗಿಲ್ ಪ್ರದೇಶವನ್ನು ಪಾಕಿಸ್ತಾನದ ಸೇನಾ ಪಡೆಗಳು 1999ರಲ್ಲಿ ಆಕ್ರಮಿಸಿಕೊಂಡಿದ್ದವು. ಆಗ ನಮ್ಮ ಯೋಧರು 1999 ರ ಮೇ 5 ರಿಂದ ಜುಲೈ 26 ವರೆಗೆ ಸತತ ಹೋರಾಟ ನಡೆಸಿ ಈ ಪ್ರದೇಶವನ್ನು ವಶಪಡಿಸಿಕೊಂಡರು. ಕೊನೆಗೆ ಶತ್ರುಗಳನ್ನು ಹಿಮ್ಮೆಟ್ಟಿಸಿ ನಮ್ಮ ಯೋಧರು ವಿಜಯಿಯಾದರು ಎಂದು ಕಾರ್ಗಿಲ್ ಯುದ್ಧದ ಬಗ್ಗೆ ಮಾತನಾಡಿದರು.

    ಕರ್ನಾಟಕದ 16 ಸೈನಿಕರು ಸೇರಿದಂತೆ ಒಟ್ಟು 527 ಸೈನಿಕರು ತಮ್ಮ ಪ್ರಾಣವನ್ನು ಬಲಿಕೊಟ್ಟಿದ್ದಾರೆ. ಇಡೀ ದೇಶ ರಕ್ಷಣೆ ಮಾಡಿದ ಯೋಧರ ಸಾಹಸಗಾಥೆ ಯುವ ಪೀಳಿಗೆಗೆ ಎಂದಿಗೂ ಸ್ಪೂರ್ತಿ. ಪ್ರವಾಹ, ಭೂಕಂಪ, ಸುನಾಮಿಯಂತ ವಿಪತ್ತಿನಲ್ಲಿ ನಾಡಿನ ರಕ್ಷಣೆಗೆ ಧಾವಿಸುವ ಯೋಧರ ಸಾಹಸ ಅನುಕರಣೀಯ. ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರ ಕುಟುಂಬದೊಂದಿಗೆ ನಾವಿದ್ದೇವೆ. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಕೆಚ್ಚೆದೆಯ ಯೋಧರ ಪರಂಪರೆಯನ್ನು ಮುಂದುವರಿಸುವ ಪಣ ತೊಡೋಣ ಎಂದು ಸಿಎಂ ಯಡಿಯೂರಪ್ಪ ಹೇಳಿದರು.

  • 21ನೇ ವರ್ಷದ ಕಾರ್ಗಿಲ್ ವಿಜಯ್ ದಿವಸ್ ಆಚರಣೆ

    21ನೇ ವರ್ಷದ ಕಾರ್ಗಿಲ್ ವಿಜಯ್ ದಿವಸ್ ಆಚರಣೆ

    ನವದೆಹಲಿ: ಇಂದು ದೇಶಾದ್ಯಂತ ಕಾರ್ಗಿಲ್ ವಿಜಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಕಾರ್ಗಿಲ್ ಯುದ್ಧದಲ್ಲಿ ಮಡಿದ ಸೈನಿಕರಿಗೆ ಭಾರತೀಯರು ಗೌರವ ಸಲ್ಲಿಸುತ್ತಿದ್ದಾರೆ.

    ಜುಲೈ 26 ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತೀಯ ಸೈನಿಕರು ವಿಜಯಪತಾಕೆಯನ್ನು ಹಾರಿಸಿದ ದಿನವಾಗಿದೆ. ಅಂದರೆ 1999ರ ಜುಲೈ 26ರಂದು 60 ದಿನಗಳ ಕಾರ್ಗಿಲ್ ಕದನ ಅಂತ್ಯವಾಗಿತ್ತು. ಪಾಕ್ ಮೇಲೆ ಭಾರತೀಯ ಯೋಧರು ವಿಜಯ ಸಾಧಿಸಿದ ಸ್ಮರಣಾರ್ಥ ಇಂದು ದೇಶದೆಲ್ಲೆಡೆ ‘ಕಾರ್ಗಿಲ್ ವಿಜಯ್ ದಿವಸ್’ ಆಚರಣೆ ಮಾಡಲಾಗುತ್ತಿದೆ.

    https://twitter.com/adgpi/status/1287199749561409536

    ಭಾರತೀಯ ಸೈನ್ಯದ ಶೌರ್ಯ, ಸೈನಿಕರ ಸಾಹಸವನ್ನು ಜಗತ್ತಿಗೆ ಪರಿಚಯಿಸಿದ್ದು, ಕಾರ್ಗಿಲ್ ಯುದ್ಧ. ಹೀಗಾಗಿ ಪ್ರತಿ ವರ್ಷ ಜುಲೈ 26ರಂದು ಸಂಭ್ರಮದಿಂದ ಭಾರತೀಯರು ಆಚರಿಸುತ್ತಾರೆ. ಭಾರತೀಯರು ಸೋಶಿಯಲ್ ಮೀಡಿಯಾದ ಮೂಲಕ ಕಾರ್ಗಿಲ್ ಯುದ್ಧದಲ್ಲಿ ಮಡಿದ ಸೈನಿಕರಿಗೆ ಗೌರವ ಸಲ್ಲಿಸುತ್ತಿದ್ದಾರೆ.

    ಏನಿದು ಕಾರ್ಗಿಲ್ ವಿಜಯ್ ದಿವಸ್?
    1999ರ ಮೇ ಮತ್ತು ಜುಲೈನ 2 ತಿಂಗಳುಗಳ ನಡುವೆ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಯುದ್ಧವೇ ಕಾರ್ಗಿಲ್ ಯುದ್ಧ. ಈ ಯುದ್ಧದಲ್ಲಿ ಪಾಕಿಸ್ತಾನದ ಸೈನಿಕರು ಅಕ್ರಮವಾಗಿ ಕಾಶ್ಮೀರದ ಕಾರ್ಗಿಲ್ ಸೇರಿದಂತೆ ಬಹುತೇಕ ಅಂತರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯ ಭಾಗಗಳನ್ನು ಆಕ್ರಮಿಸಿಕೊಂಡಿದ್ದರು.

    ಪಾಕ್ ಸೈನಿಕರು ಅಕ್ರಮವಾಗಿ ಆಕ್ರಮಿಸಿಕೊಂಡಿದ್ದ ಕಾರ್ಗಿಲ್ ವಿಭಾಗವನ್ನು ಪುನಃ ಕೈವಶ ಮಾಡಿಕೊಳ್ಳಲು ಭಾರತ ‘ಆಪರೇಷನ್ ವಿಜಯ’ ಎಂಬ ಕಾರ್ಯಾಚರಣೆಯನ್ನು ನಡೆಸಿ ಜುಲೈನ 26ರಂದು ಯಶಸ್ವಿಯಾಗಿ ತನ್ನ ತೆಕ್ಕೆಗೆ ತೆಗೆದುಕೊಂಡಿತ್ತು. ಕಾರ್ಗಿಲ್ ಯುದ್ಧದಲ್ಲಿ ಸುಮಾರು 527 ಸೈನಿಕರು ದೇಶಕ್ಕಾಗಿ ತಮ್ಮ ಬಲಿದಾನವನ್ನೇ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅಂದಿನಿಂದ ಜುಲೈ 26ರಂದು ಕಾರ್ಗಿಲ್ ಹೋರಾಟದಲ್ಲಿ ವೀರಮರಣನ್ನಪ್ಪಿದ ಯೋಧರಿಗೆ ಗೌರವ ಸಲ್ಲಿಸಲು ಈ ವಿಜಯ್ ದಿವಸ್ ಅನ್ನು ಆಚರಣೆ ಮಾಡುತ್ತಾ ಸೇನೆ ಬರುತ್ತಿದೆ.

  • ಕಾರ್ಗಿಲ್ ವಿಜಯೋತ್ಸವ – ದೇಶದೆಲ್ಲೆಡೆ ಮುಗಿಲು ಮುಟ್ಟಲಿದೆ ಸಂಭ್ರಮ

    ಕಾರ್ಗಿಲ್ ವಿಜಯೋತ್ಸವ – ದೇಶದೆಲ್ಲೆಡೆ ಮುಗಿಲು ಮುಟ್ಟಲಿದೆ ಸಂಭ್ರಮ

    ನವದೆಹಲಿ: ದೇಶಾದ್ಯಂತ ಇಂದು 20ನೇ ವರ್ಷದ ಕಾರ್ಗಿಲ್ ವಿಜಯೋತ್ಸವವನ್ನು ಆಚರಿಸಲಾಗುತ್ತಿದೆ. ವೀರ ಸೈನಿಕರ ತ್ಯಾಗ ಮತ್ತು ಬಲಿದಾನ ನೆನಪಿಸುವುದರ ಜೊತೆಗೆ ಅಭಿನಂದನೆ ಸಲ್ಲಿಸುವ ಉದ್ದೇಶದಿಂದ 2 ದಿನ ದೇಶಾದ್ಯಂತ ಕಾರ್ಗಿಲ್ ವಿಜಯೋತ್ಸವವನ್ನು ಆಚರಿಸಲಾಗುತ್ತಿದೆ.

    ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತೀಯ ಸೈನಿಕರು ವಿಜಯಪತಾಕೆಯನ್ನು ಹಾರಿಸಿದ ದಿನವಾಗಿದೆ. ಪಾಕ್ ಮೇಲೆ ಭಾರತೀಯ ಯೋಧರು ವಿಜಯ ಸಾಧಿಸಿದ ಸ್ಮರಣಾರ್ಥ ಇಂದು ದೇಶದೆಲ್ಲೆಡೆ `ಕಾರ್ಗಿಲ್ ವಿಜಯ್ ದಿವಸ್’ ಆಚರಣೆ ಮಾಡಲಾಗುತ್ತಿದೆ. ಭಾರತೀಯ ಸೈನ್ಯದ ಶೌರ್ಯ, ಸೈನಿಕರ ಸಾಹಸವನ್ನು ಜಗತ್ತಿಗೆ ಪರಿಚಯಿಸಿದ್ದು ಕಾರ್ಗಿಲ್ ಯುದ್ಧ, ಹೀಗಾಗಿ ಪ್ರತಿ ವರ್ಷ ಜುಲೈ 26ರಂದು ಸಂಭ್ರಮದಿಂದ ಭಾರತೀಯರು ಆಚರಿಸುತ್ತಾರೆ.

    ಜುಲೈ 14ರಂದು ದೆಹಲಿಯ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು `ವಿಕ್ಟರ್ ಫ್ಲೇಮ್’ ಅನ್ನು ಬೆಳಗಿಸಿದ್ದರು. ಈ ಜ್ಯೋತಿ ದೇಶದ ಪ್ರಮುಖ ನಗರಗಳಲ್ಲಿ ಸಂಚರಿಸಿದೆ. ಸುಮಾರು 25 ದಿನಗಳ ಕಾಲ ನಡೆದಿದ್ದ ಯುದ್ಧದಲ್ಲಿ ಪಾಕ್ ಸೇನಾಪಡೆ ಹಾಗೂ ಉಗ್ರವಾದಿಗಳನ್ನು ನಮ್ಮ ಸಿಪಾಯಿಗಳು ಹಿಮ್ಮೆಟ್ಟಿಸಿದ್ದರು. ಇದಕ್ಕೆ ಆಪರೇಷನ್ ವಿಜಯ್ ಅಂತ ಹೆಸರಿಡಲಾಗಿತ್ತು.

    ಉರಿ ರಿಲೀಸ್:
    ಕಾರ್ಗಿಲ್ ವಿಜಯ್ ದಿವಸ್ ಹಿನ್ನೆಲೆಯಲ್ಲಿ ‘ಉರಿ ದಿ ಸರ್ಜಿಕಲ್ ಸ್ಟೈಕ್’ ಚಿತ್ರ ಮರು ಬಿಡುಗಡೆಯಾಗುತ್ತಿದೆ. ಜನವರಿ 11ರಂದು ಬಿಡುಗಡೆಯಾಗಿದ್ದ ಚಿತ್ರ ಬಾಕ್ಸ್ ಆಫೀಸ್‍ನಲ್ಲಿ 200 ಕೋಟಿ ರೂಪಾಯಿ ಕ್ಲಬ್ ಸೇರಿತ್ತು. ಈಗ ಕಾರ್ಗಿಲ್ ವಿಜಯ್ ದಿವಸ್ ಹಿನ್ನೆಲೆಯಲ್ಲಿ ಈ ಚಿತ್ರ ಮತ್ತೆ ಬಿಡುಗಡೆಗೆ ಸಿದ್ಧವಾಗಿದೆ. 2019ರ ಹೊಸ ವರ್ಷವನ್ನು ಬಾಲಿವುಡ್ ‘ಉರಿ ದಿ ಸರ್ಜಿಕಲ್ ಸ್ಟ್ರೈಕ್’ ಸಿನಿಮಾದ ಮೂಲಕ ಬರಮಾಡಿಕೊಂಡಿತ್ತು.

    ಯುದ್ಧ ನಡೆದಿದ್ದು ಯಾವಾಗ..?
    1999ರ ಮೇ ಮತ್ತು ಜುಲೈ ಈ 2 ತಿಂಗಳ ನಡುವೆ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಯುದ್ಧವೇ ಕಾರ್ಗಿಲ್ ಯುದ್ಧ. ಈ ಯುದ್ಧದಲ್ಲಿ ಪಾಕಿಸ್ತಾನದ ಸೈನಿಕರು ಅಕ್ರಮವಾಗಿ ಕಾಶ್ಮೀರದ ಕಾರ್ಗಿಲ್ ಸೇರಿದಂತೆ ಬಹುತೇಕ ಅಂತರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯ ಭಾಗಗಳನ್ನು ಆಕ್ರಮಿಸಿಕೊಂಡಿದ್ದರು. ಪಾಕ್ ಸೈನಿಕರು ಅಕ್ರಮವಾಗಿ ಆಕ್ರಮಿಸಿಕೊಂಡಿದ್ದ ಕಾರ್ಗಿಲ್ ವಿಭಾಗವನ್ನು ಪುನಃ ಕೈವಶ ಮಾಡಿಕೊಳ್ಳಲು ಭಾರತ `ಆಪರೇಷನ್ ವಿಜಯ’ ಎಂಬ ಕಾರ್ಯಾಚರಣೆಯನ್ನು ನಡೆಸಿ ಜುಲೈನ 26ರಂದು ಯಶಸ್ವಿಯಾಗಿ ತನ್ನ ತೆಕ್ಕೆಗೆ ತೆಗೆದುಕೊಂಡಿತ್ತು.

    ಕಾರ್ಗಿಲ್ ಯುದ್ಧದಲ್ಲಿ ಭಾರತದ 600ಕ್ಕೂ ಅಧಿಕ ವೀರ ಸೈನಿಕರು ಹುತಾತ್ಮರಾಗಿ, 1200ಕ್ಕೂ ಹೆಚ್ಚು ಮಂದಿ ಅಂಗವಿಕಲರಾಗಿದ್ದರು. ಈ ಹಿನ್ನೆಲೆಯಲ್ಲಿ ಅಂದಿನಿಂದ ಜುಲೈ 26ರಂದು ಕಾರ್ಗಿಲ್ ಹೋರಾಟದಲ್ಲಿ ವೀರಮರಣನ್ನಪ್ಪಿದ ಯೋಧರಿಗೆ ಗೌರವ ಸಲ್ಲಿಸಲು ಈ ವಿಜಯ್ ದಿವಸ್ ಅನ್ನು ಆಚರಣೆ ಮಾಡಿಕೊಳ್ಳುತ್ತಾ ಸೇನೆ ಬರುತ್ತಿದೆ.

  • ಅದ್ಧೂರಿ ಕಾರ್ಗಿಲ್ ವಿಜಯೋತ್ಸವ- ಎರಡು ಸೇತುವೆ ಲೋಕಾರ್ಪಣೆ

    ಅದ್ಧೂರಿ ಕಾರ್ಗಿಲ್ ವಿಜಯೋತ್ಸವ- ಎರಡು ಸೇತುವೆ ಲೋಕಾರ್ಪಣೆ

    ನವದೆಹಲಿ: ಯೋಧರು ಕಾರ್ಗಿಲ್ ವಿಜಯೋತ್ಸವವವನ್ನು ಅದ್ಧೂರಿಯಾಗಿ ಆಚರಿಸುತ್ತಿದ್ದಾರೆ. ವಿಜಯೋತ್ಸವದ ಅಂಗವಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜಮ್ಮು ಕಾಶ್ಮೀರದ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದ್ದು, ಇದೇ ವೇಳೆ ಪರ್ವತಗಳಿಗೆ ಸಂಪರ್ಕ ಕಲ್ಪಿಸುವ ಎರಡು ಸೇತುವೆಗಳನ್ನು ಉದ್ಘಾಟಿಸಲಿದ್ದಾರೆ.

    ಆಪರೇಷನ್ ವಿಜಯ್‍ನ 20ನೇ ವರ್ಷಾಚರಣೆ ಹಿನ್ನೆಲೆ ಶನಿವಾರ ಜಮ್ಮು ಕಾಶ್ಮೀರದಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ರಾಜನಾಥ್ ಸಿಂಗ್ ಗೌರವ ಸಲ್ಲಿಸಿದರು. 1999ರಲ್ಲಿ ನಡೆದ ಕಾರ್ಗಿಲ್ ಯುದ್ಧದಲ್ಲಿ ಪಾಕ್ ಸೈನಿಕರು ಹಾಗೂ ಉಗ್ರರ ಒಳನುಸುಳುವಿಕೆ ವಿರುದ್ಧ ನಡೆದ ಯುದ್ಧದಲ್ಲಿ ಭಾರತ ಜಯಗಳಿಸಿತ್ತು.

    ಯುದ್ಧ ಸ್ಮಾರಕಕ್ಕೆ ಗೌರವ ಸಲ್ಲಿಸಿದ ನಂತರ ಬಾರ್ಡರ್ ರೋಡ್ಸ್ ಆರ್ಗನೈಸೇಶನ್ ಕಥುವಾ ಜಿಲ್ಲೆಯ ಉಝ್ ಹಾಗೂ ಸಂಬ ಜಿಲ್ಲೆಯ ಬಸಂತರ್‍ನಲ್ಲಿ ನಿರ್ಮಿಸಿರುವ ಎರಡು ಸೇತುವೆಗಳನ್ನು ರಾಷ್ಟ್ರಕ್ಕೆ ಸಮರ್ಪಣೆ ಮಾಡಲಿದ್ದಾರೆ. ಉಝ್ ಸೇತುವೆ 1 ಕಿ.ಮೀ ಉದ್ದವಿದ್ದು, ಬಸಂತರ್ ಸೇತುವೆ 617.4 ಕಿ.ಮೀ.ಉದ್ದವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    1999ರಲ್ಲಿ ಭಾರತೀಯ ಸೇನೆ ಅಕ್ರಮವಾಗಿ ಒಳ ನುಸುಳುತ್ತಿದ್ದ ಪಾಕಿಸ್ತಾನ ಸೈನಿಕರು ಹಾಗೂ ಉಗ್ರರ ವಿರುದ್ಧ ಹೋರಾಡಿ, ಶ್ರೀನಗರದ ಲೇಹ್ ಹೆದ್ದಾರಿಯನ್ನು ಗಮನದಲ್ಲಿರಿಸಿಕೊಂಡು ಪಾಕಿಸ್ತಾನ ಆಕ್ರಮಿಸಿದ್ದ ಹಲವು ಪರ್ವತ ಶಿಖರಗಳನ್ನು ವಶಪಡಿಸಿಕೊಂಡಿತ್ತು.

    ಜು.14ರ ಭಾರತದ ವಿಜಯ ದಿನದಂದು ರಾಜನಾಥ್ ಸಿಂಗ್ ಅವರು ದೆಹಲಿಯ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೆಟಿ ನೀಡಿ, ‘ವಿಜಯ ಜ್ವಾಲೆ’ಯನ್ನು ಹೊತ್ತಿಸಿದ್ದರು. ಜ್ವಾಲೆಯು ಜು.26 ರಂದು ಡ್ರಾಸ್ ತಲುಪಲಿದ್ದು, ಸುಮಾರು 9 ಪಟ್ಟಣಗಳು ಹಾಗೂ ನಗರಗಳನ್ನು ಹಾದು ಹೋಗಲಿದೆ. ನಂತರ ಕಾರ್ಗಿಲ್‍ಗೆ ತಲುಪಿ ಶಾಶ್ವತ ವಿಜಯ ಜ್ವಾಲೆ ಬಳಿ ವಿಲೀನಗೊಳಿಸಲಾಗುತ್ತದೆ.

    ವಿಜಯ ದಿನವನ್ನು ಭಾರತೀಯ ಸೇನೆ ವಿಜೃಂಭಣೆಯಿಂದ ಆಚರಿಸುತ್ತಿದ್ದು, ಈ ಮೂಲಕ ಆಪರೇಷನ್ ವಿಜಯ್‍ನಲ್ಲಿ ಭಾಗವಹಿಸಿದ ಯೋಧರಿಗೆ ನಮನ ಸಲ್ಲಿಸಲಾಗುತ್ತಿದೆ. ಆಪರೇಷನ್ ವಿಜಯ್‍ನ್ನು ‘ರಿಮೆಂಬರ್, ರೀಜಾಯ್ಸ್ ಆಂಡ್ ರಿನ್ಯೂ(ನೆನಪಿಡಿ, ಹೆಮ್ಮೆಪಡಿ ಮತ್ತು ನವೀಕರಿಸಿ)’ ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಅಲ್ಲದೆ, ಸೈನ್ಯದ ಮೂರು ಬೆಟಾಲಿಯನ್‍ಗಳು ಅಸಾಧ್ಯವಾಗದ ಸ್ಥಿಯಲ್ಲಿ ಹೋರಾಡಿದ ಶಿಖರಗಳಿಗೆ ದಂಡಯಾತ್ರೆ ಕೈಗೊಳ್ಳುತ್ತಿವೆ.

    ಕಾರ್ಗಿಲ್ ವಿಜಯ ದಿನದ ಅಂಗವಾಗಿ ಇಂಡೋ ಟಿಬೇಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಮತ್ತು ಬಿಎಸ್‍ಎಫ್ ಯೋಧರ ತಂಡಗಳು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೋಂಡಿದ್ದು, ಸೈನಿಕರು, ಪೊಲೀಸ್ ಹಾಗೂ ಅರೆಸೇನಾ ಪಡೆಗಳ ಧೈರ್ಯದ ಕಥೆಗಳನ್ನು ಪ್ರದರ್ಶಿಸಲಿವೆ. ಹೀಗಾಗಿ ವಿವಿಧ ಕಾರ್ಯಕ್ರಮಗಳನ್ನು ಸೇನೆ ಹಾಕಿಕೊಂಡಿದ್ದು, ಕಾರ್ಗಿಲ್ ವಿಜಯ ದಿನದ ಬಳಿ ಸಾವನ್ನಪ್ಪಿದ ಸೈನಿಕರ ಕುಟುಂಬ ಸದಸ್ಯರನ್ನು ಗೌರವಿಸಲಾಗುತ್ತಿದೆ.

    ಕಾರ್ಯಕ್ರಮಗಳ ಭಾಗವಾಗಿ ರಕ್ತದಾನ ಶಿಬಿರ, ಆರೋಗ್ಯ ಶಿಬಿರ, ಪ್ರೇರಣೆ ನೀಡುವ ಉಪನ್ಯಾಸ, ಶಾಲಾ ಮಕ್ಕಳಿಗೆ ಕಾರ್ಗಿಲ್ ಪ್ರದೇಶದ ಶೈಕ್ಷಣಿ ಪ್ರವಾಸವನ್ನು ಏರ್ಪಡಿಸಲಾಗಿದೆ. ಅಲ್ಲದೆ, ಕಾರ್ಗಿಲ್ ವಿಜಯದ ಕುರಿತು ರಕ್ಷಣಾ ಸಚಿವಾಲಯದಿಂದ ನಿರ್ಮಿಸಿದ 7 ನಿಮಿಷಗಳ ಕಿರು ಚಿತ್ರ, ಫೋಟೊ ಗ್ಯಾಲರಿ, ಸೈನಿಕರ ಶೌರ್ಯ ಬಿಂಬಿಸುವ ಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದೆ. ಈ ಎಲ್ಲ ಕಾರ್ಯಕ್ರಮಗಳು ಜು.27ರ ವರೆಗೆ ನಡೆಯಲಿವೆ ಎಂದು ಇಂಡೋ ಟಿಬೇಟಿಯನ್ ಬಾರ್ಡರ್ ಪೊಲೀಸ್(ಐಟಿಬಿಪಿ) ವಕ್ತಾರ ವಿವೇಕ್ ಪಾಂಡೆ ತಿಳಿಸಿದ್ದಾರೆ.

  • ಕಾರ್ಗಿಲ್ ವಿಜಯ್ ದಿವಸ್ – ಏಷ್ಯಾದ ಅತಿದೊಡ್ಡ ನೌಕೆ ವೀಕ್ಷಿಸಿದ ವಿದ್ಯಾರ್ಥಿಗಳು

    ಕಾರ್ಗಿಲ್ ವಿಜಯ್ ದಿವಸ್ – ಏಷ್ಯಾದ ಅತಿದೊಡ್ಡ ನೌಕೆ ವೀಕ್ಷಿಸಿದ ವಿದ್ಯಾರ್ಥಿಗಳು

    ಕಾರವಾರ: ಕಾರ್ಗಿಲ್ ವಿಜಯ್ ದಿವಸದ ಆಚರಣೆಯ ಅಂಗವಾಗಿ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಅರಗಾದಲ್ಲಿರುವ ಕದಂಬ ನೌಕಾನೆಲೆಯಲ್ಲಿ ಇಂದು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ನೌಕ ಹಡಗುಗಳನ್ನು ವೀಕ್ಷಿಸಲು ಅವಕಾಶ ಮಾಡಿಕೊಡಲಾಯಿತು.

    ಜಿಲ್ಲೆಯ ಜನರಲ್ಲದೇ ಹೊರರಾಜ್ಯದ ಜನರು ಇಂದು ಕಾರವಾರದ ಕದಂಬ ನೌಕಾನೆಲೆಗೆ ಆಗಮಿಸಿ ಐ.ಎನ್.ಎಸ್. ವಿಕ್ರಮಾದಿತ್ಯ ಹಾಗೂ ಸುವರ್ಣ ಯುದ್ಧ ನೌಕೆಯನ್ನು ವೀಕ್ಷಿಸುವ ಮೂಲಕ ಕಣ್ತುಬಿಂಕೊಂಡರು.

    ಪ್ರತಿ ವರ್ಷದಲ್ಲಿ ಒಂದು ಬಾರಿ ಮಾತ್ರ ಸಾರ್ವಜನಿಕರಿಗೆ ಏಷ್ಯಾದ ಅತಿದೊಡ್ಡ ಹಡಗು ವಿಕ್ರಮಾದಿತ್ಯ ಹಾಗೂ ನೌಕಾನೆಲೆಯನ್ನು ನೋಡಲು ಅವಕಾಶ ಕಲ್ಪಿಸಲಾಗುತ್ತದೆ. ಇಂದು ಒಂದೇ ದಿನದಲ್ಲಿ 15 ಸಾವಿರಕ್ಕೂ ಹೆಚ್ಚು ಜನರು ನೌಕಾನೆಲೆಗೆ ಭೇಟಿ ನೀಡಿದರು.