Tag: Kari Haida Koragajja

  • ಕರಿಹೈದ ಕೊರಗಜ್ಜ: ನಿರ್ಮಾಪಕ ತ್ರಿವಿಕ್ರಮ ಸಾಫಲ್ಯ ಬದುಕಿನ ಹಾದಿ

    ಕರಿಹೈದ ಕೊರಗಜ್ಜ: ನಿರ್ಮಾಪಕ ತ್ರಿವಿಕ್ರಮ ಸಾಫಲ್ಯ ಬದುಕಿನ ಹಾದಿ

    ಸಿನಿಮಾರಂಗದಲ್ಲಿ ನಾನಾ ಬಗೆಯ ಪ್ರಯೋಗಗಳು ಮತ್ತು ನವೀನ ಕಥಾನಕದ ಚಿತ್ರಗಳು ವ್ಯಾಪಕವಾಗಿ ರೂಪುಗೊಳ್ಳುತ್ತಿವೆ. ಆ ಸಾಲಿಗೆ ಸೇರ್ಪಡೆಗೊಳ್ಳುವ ಎಲ್ಲಾ ಲಕ್ಷಣಗಳನ್ನೂ ಒಳಗೊಂಡಿರುವ ಚಿತ್ರ ಅಂದರೆ ‘ಕರಿಹೈದ ಕೊರಗಜ್ಜ'(Kari Haida Koragajja). ಸುಧೀರ್ ಅತ್ತಾವರ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರ ಸದ್ಯದ ಬಹುನಿರೀಕ್ಷಿತ ಚಿತ್ರಗಳ ಸಾಲಿನಲ್ಲಿ ಮುಂಚೂಣಿಯಲ್ಲಿದೆ. ಇದಕ್ಕೆ ಕಾರಣವಾಗಿರೋದು ಅಂದರೆ ಕಥೆ ಮತ್ತು ಒಟ್ಟಾರೆ ಸಿನಿಮಾ ಸಿದ್ದಗೊಂಡಿರುವ ರೀತಿ.

     

    ತ್ರಿವಿಕ್ರಮ ಸಾಫಲ್ಯ ನಿರ್ಮಾಣ ಮಾಡಿರುವ ಈ ಚಿತ್ರವೀಗ ಎಲ್ಲರ ನಿರೀಕ್ಷೆಗೆ ಕಾರಣವಾಗಿದೆ. ಅಷ್ಟಕ್ಕೂ ಇದೀಗ ಎಲ್ಲೆಡೆ ತುಳುನಾಡ ದೈವವಾದ ಕೊರಗಜ್ಜನ ಕಾರಣೀಕಗಳ ಪ್ರಭೆ ಹಬ್ಬಿಕೊಂಡಿದೆ. ತುಳುನಾಡಿನ ಗಡಿ ದಾಟಿ ಕೊರಗಜ್ಜನ ಪವಾಡಗಳು ಪಸರಿಸಿಕೊಂಡು, ಎಲ್ಲಾ ಭೂ ಭಾಗಗಳಲ್ಲಿ ಯೂ ಕೊರಗಜ್ಜನಿಗೆ ಭಕ್ತಗಣ ಸೃಷ್ಟಿಯಾಗಿದೆ. ಇಂಥಾ ಶಕ್ತಿ ಹೊಂದಿರುವ ಕೊರಗಜ್ಜನ ನಿಖರವಾದ ಕಥೆ ಹೊಂದಿರೋ ಈ ಚಿತ್ರ ತಯಾರುಗೊಂಡಿದ್ದರ ಹಿಂದೆ ನಿರ್ಮಾಪಕ ತ್ರಿವಿಕ್ರಮ ಸಾಫಲ್ಯರ ಶ್ರಮ ದೊಡ್ಡದಿದೆ. ಇದನ್ನೂ ಓದಿ:‘ಪೊನ್ನಿಯನ್ ಸೆಲ್ವನ್ 2’ ಸಕ್ಸಸ್ ಬಳಿಕ ನಯನತಾರಾ ಜೊತೆಯಾದ ಜಯಂರವಿ

    ತ್ರಿವಿಕ್ರಮ ಸಾಫಲ್ಯ (Trivikram Sapalya) ಕನ್ನಡ ಚಿತ್ರರಂಗಕ್ಕೆ ಹೊಸಬರೇನಲ್ಲ. ಯಶಸ್ವಿ ಉದ್ಯಮಿಯಾಗಿದ್ದರೂ ಸಿನಿಮಾ ಪ್ರೇಮವನ್ನು ಸದಾ ಕಾಯ್ದುಕೊಂಡಿದ್ದ ಅವರು ದಶಕಗಳಷ್ಟು ಕಾಲದಿಂದ ನಿರ್ಮಾಪಕರಾಗಿ (Producer) ಗುರುತಿಸಿಕೊಂಡಿದ್ದಾರೆ. 2012ರಲ್ಲಿ ‘ಪರಿ’ ಎಂಬ ಸಿನಿಮಾವನ್ನು ತ್ರಿವಿಕ್ರಮ ನಿರ್ಮಾಣ ಮಾಡಿದ್ದರು. ರಾಕೇಶ್ ಅಡಿಗ, ಹರ್ಷಿಕಾ ಪೂಣಚ್ಚ ಮುಂತಾದವರು ನಟಿಸಿದ್ದ ಆ ಚಿತ್ರ ಒಂದು ಮಟ್ಟಿಗೆ ಗೆಲುವು ದಾಖಲಿಸಿತ್ತು. ಆ ನಂತರದಲ್ಲಿ ಸಾಫಲ್ಯ ನಿರ್ಮಾಣ ಮಾಡಿದ್ದದ್ದು ‘ಸೀಜರ್’ ಎಂಬ ಚಿತ್ರವನ್ನು. ವಿನಯ್ ನಿರ್ದೇಶನ ಮಾಡಿದ್ದ ಈ ಚಿತ್ರದಲ್ಲಿ ಚಿರಂಜೀವಿ ಸರ್ಜಾ (Chiranjeevi Sarja) ನಾಯಕನಾಗಿ ನಟಿಸಿದ್ದರು. ರವಿಚಂದ್ರನ್ ಮತ್ತು ಪ್ರಕಾಶ್ ರಾಜ್ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದ ಈ ಚಿತ್ರ 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಗೊಂದಿತ್ತು. ಸಂಪೂರ್ಣ ಆಕ್ಷನ್ ಅಂಶಗಳೊಂದಿಗೆ ಮೂಡಿ ಬಂದಿದ್ದ ಈ ಚಿತ್ರ ದೊಡ್ಡ ಮಟ್ಟದಲ್ಲಿ ಗೆಲುವು ದಾಖಲಿಸಿತ್ತು. ಬೆಸ್ಟ್ ಆಕ್ಷನ್ ಚಿತ್ರವಾಗಿ ದೊಡ್ಡ ಮೊತ್ತಕ್ಕೆ ಮಾರಾಟವಾಗಿತ್ತು. ಇದನ್ನೂ ಓದಿ:ಮೆಗಾ ಪ್ರಿನ್ಸ್ ವರುಣ್ ತೇಜ್- ಲಾವಣ್ಯ ತ್ರಿಪಾಠಿ ಗ್ರ್ಯಾಂಡ್‌ ಎಂಗೇಜ್‌ಮೆಂಟ್

    ಗ್ಯಾಪ್‌ನ ನಂತರ ಇದೀಗ ತ್ರಿವಿಕ್ರಮ್ ಸಾಫಲ್ಯ ನಿರ್ಮಾಣ ಮಾಡಿರುವ ಚಿತ್ರ ‘ಕರಿಹೈದ ಕೊರಗಜ್ಜ’. ಸುಧೀರ್ ಅತ್ತಾವರ್ ನಿರ್ದೇಶನ ಮಾಡಿರುವ ಈ ಚಿತ್ರ ಕೊರಗಜ್ಜನ ರೋಚಕ ಜೀವನಗಾಥೆಯನ್ನೊಳಗೊಂಡಿದೆ. ಕೊರಗ ಸಮುದಾಯದ ಒಪ್ಪಿಗೆ ಪಡೆದೇ, ಕೊರಗಜ್ಜನ ಅಧಿಕೃತ ಕಥೆಗೆ ಸಿನಿಮಾ ಫ್ರೇಮು ತೊಡಿಸಲಾಗಿದೆಯಂತೆ. ಈ ಚಿತ್ರದಲ್ಲಿ ಘಟನುಘಟಿ ಕಲಾವಿದರ ದಂಡೇ ಇದೆ. ಬಾಲಿವುಡ್ ಖ್ಯಾತ ನಟ ಕಬೀರ್ ಬೇಡಿ ರಾಜನಾಗಿ ನಟಿಸಿದ್ದಾರೆ. ಭವ್ಯ, ಶ್ರುತಿ ಮುಖ್ಯ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ. ಪ್ರತಿಭಾವಂತ ಯುವ ನಟ ಭರತ್ ಕೊರಗಜ್ಜನಾಗಿ ಕಾಣಿಸಿಕೊಂಡಿದ್ದಾರೆ. ಬಾಲಿವುಡ್ ನಾ ಖ್ಯಾತ ಕೊರಿಗ್ರಾಫರ್ ಸೋಫಾರ್ಕರ್ ಗುಳಿಗನ ಪಾತ್ರ ಮಾಡಿದ್ದಾರೆ. ಸಿನಿಮಾ ಸದ್ಯದಲ್ಲೇ ತೆರೆಗೆ ಬರಲಿದೆ.

    ಇಂಥದೊಂದು ಅಪರೂಪದ ಸಿನಿಮಾವನ್ನು ಸಾಧ್ಯವಾಗಿಸಿರುವ ತ್ರಿವಿಕ್ರಮ್ ಸಾಫಲ್ಯ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯವರು. ಅಲ್ಲಿಯೇ ಓದು ಮುಗಿಸಿ, ಆ ನಂತರ ಕಷ್ಟದಿಂದಲೇ ಬದುಕು ಕಟ್ಟಿಕೊಂಡಿರುವ ಸಾಫಲ್ಯ ಯಶಶ್ವಿ ಉದ್ಯಮಿಯಾಗಿ ನೆಲೆ ಕಂದುಕೊಂಡಿದ್ದರ ಹಿಂದೆ ಎಲ್ಲರಿಗೂ ಸ್ಫೂರ್ತಿಯಾಗುವಂಥ ಕಥನವಿದೆ. ಟ್ರಾನ್ಸ್ಫರ್ಮೆರ್ ತಯಾರಿಸುವ ಬಹು ದೊಡ್ಡ ಉದ್ದಿಮೆ ನಡೆಸುವ ತ್ರಿವಿಕ್ರಮ ಅವರು ಇದೀಗ ನಿರ್ಮಾಪಕರಾಗಿಯೂ ನೆಲೆ ಕಂಡುಕೊಂಡಿದ್ದಾರೆ. ಕೊರಗಜ್ಜ ಚಿತ್ರದ ಜೊತೆಗೇ ಮತ್ತೊಂದಷ್ಟು ಸಿನಿಮಾಗಳ ನಿರ್ಮಾಣ ಕಾರ್ಯದಲ್ಲಿಯೂ ಬ್ಯುಸಿಯಾಗಿದ್ದಾರೆ. ರಾಜಕುಮಾರ್, ವಿಷ್ಣುವರ್ಧನ್ ಸಿನಿಮಾಗಳನ್ನು ನೋಡಿಕೊಂಡು ಬೆಳೆದು, ಅಪಾರವಾದ ಸಿನಿಮಾಶಕ್ತಿ ರೂಢಿಸಿಕೊಂಡಿರುವ ತ್ರಿವಿಕ್ರಮ ಸಾಫಲ್ಯ ಕನ್ನಡ ಚಿತ್ರರಂಗದಲ್ಲಿ ಯಶಸ್ವಿ ನಿರ್ಮಾಪಕರಾಗಿ ಮುಂಚೂಣಿಯಲ್ಲಿದ್ದಾರೆ.

  • ಗುಳಿಗ ದೈವಕ್ಕೆ ಕ್ಷೇತ್ರ ನಿರ್ಮಾಣ, ಅದ್ದೂರಿ ಕೋಲ ಸೇವೆ ಮಾಡಿಸಿದ ಡೈರೆಕ್ಟರ್

    ಗುಳಿಗ ದೈವಕ್ಕೆ ಕ್ಷೇತ್ರ ನಿರ್ಮಾಣ, ಅದ್ದೂರಿ ಕೋಲ ಸೇವೆ ಮಾಡಿಸಿದ ಡೈರೆಕ್ಟರ್

    ‘ಕರಿ ಹೈದ ಕೊರಗಜ್ಜ’ (Kari Haida Koragajja) ಚಿತ್ರೀಕರಣದ ವೇಳೆ ಅನೇಕ ಪವಾಡಗಳು ಗೋಚರಕ್ಕೆ ಬಂದ ವಿಷಯವನ್ನು  ಕಲಾವಿದರಾದ ಕಬೀರ್ ಬೇಡಿ (Kabir Bedi), ಶ್ರುತಿ, ಭವ್ಯ ಹಾಗೂ ಚಿತ್ರ ತಂಡದ ಸದಸ್ಯರು ಈಗಾಗಲೇ ತಮ್ಮ ಅನುಭವವನ್ನು ಹಂಚಿಕೊಂಡಿದ್ದರು.  ಆದರೆ ಮತ್ತೊಂದು ಕುತೂಹಲ ದ ವಿಚಾರವು ಇದುವರೆಗೂ ನಿಗೂಢವಾಗಿತ್ತು. ಇದು ಘಟಿಸಿದ್ದು  ಚಿತ್ರೀಕರಣದ ಆರಂಭಕ್ಕೂ ಮೊದಲು ಪುತ್ತೂರಿನಲ್ಲಿ ಸೆಟ್ ವಿರ್ಮಾಣದ ವೇಳೆ. ಸೆಟ್ ಕೆಲಸಗಾರರು ಸೆಟ್ ನಿರ್ಮಾಣದ ವೇಳೆ ಯಾವುದೋ ಆವೇಶ ಬಂದಂತವರಾಗಿ ಅಲ್ಲಲ್ಲೇ ಮೂರ್ಛೆ ಹೋಗತೊಡಗಿದರು. ಸ್ಥಳಿಯರು ಅರಶಿನ ನೀರನ್ನು ಪ್ರೋಕ್ಷಿಸಿ , ಕೆಲವರನ್ನು ಅಲ್ಲಿನ ಆಸ್ಪತ್ರೆಗೂ ಸೇರಿಸಲಾಯಿತು. ನಂತರ ಆ ಪ್ರದೇಶದಲ್ಲಿ ಯಾರೂ ಸೆಟ್ ಕೆಲಸ ಮಾಡಲು ಮುಂದೆ ಬರಲಿಲ್ಲ. ಸೆಟ್ ಹಾಕಲಿದ್ದ ಆ ಜಾಗವು ಕರಾವಳಿಯ ಉಗ್ರ ರೂಪದ ದೈವ ಗುಳಿಗನ ಸ್ಥಳ ವೆಂದು ಸ್ಥಳಿಯರು ತಿಳಿಸಿದರು. ದೈವದ ಮೇಲಿನ ಗೌರವ-ಭಕ್ತಿಯಿಂದ  ಪುತ್ತೂರಿನಿಂದ ಬೆಳ್ತಂಗಡಿಯ ಅರಣ್ಯ ಪ್ರದೇಶದಲ್ಲಿ ಸೆಟ್ ಕೆಲಸವನ್ನು  ಸ್ಥಳಾಂತರ ಗೊಳಿಸಲಾಯಿತು.

    ಚಿತ್ರದಲ್ಲಿ ಗುಳಿಗ ದೈವದ ಪಾತ್ರವನ್ನು ಹಾಲಿವುಡ್- ಫ಼್ರೆಂಚ್- ಬಾಲಿವುಡ್ ನಟ ಹಾಗೂ ಕೊರಿಯೋಗ್ರಾಫರ್ ಸಂದೀಪ್ ಸೋಪರ್ಕರ್ ಅಭಿನಯಿಸಿದ್ದು, ಮಂಗಳೂರಿನ ಸೋಮೆಶ್ವರ ಸಮುದ್ರ ಕಿನಾರೆಯಲ್ಲಿ ಗುಳಿಗ ದೈವದ ಚಿತ್ರೀಕರಣವನ್ನು ನಡೆಸುತ್ತಿದ್ದಾಗಲೂ, ತಂಡಕ್ಕೆ ಹಲವಾರು ರೀತಿಯ ಅಡೆತಡೆಗಳು ಎದುರಾಯಿತು.  ಈ ಬಗ್ಗೆ ತಿಳಿದವರಲ್ಲಿ ಚಿಂತನ -ಮಂಥನ ನಡೆಸಿದಾಗ ನಿರ್ದೇಶಕ ಸುಧೀರ್ ಅತ್ತಾವರ್ ರವರ ಹಿರಿಯರಿದ್ದ ಮನೆಯಲ್ಲಿ ಗುಳಿಗ ದೈವದ ಸಾನಿಧ್ಯವಿದ್ದು, ಹಲವಾರು ವರ್ಷಗಳಿಂದ ಆ ಮನೆಯಲ್ಲಿ  ಯಾರೂ ವಾಸವಿರದೆ, ಪಾಳು ಬಿದ್ದಕಾರಣ  ದೈವಕ್ಕೆ  ಪೂಜೆ ಪುರಸ್ಕಾರಗಳು ನಡೆಯದಿರುವ ವಿಚಾರ ಗೋಚರಿಸಿತು. ಇದನ್ನೂ ಓದಿ:ಆರ್.ಎಲ್ ಜಾಲಪ್ಪ ವಿರುದ್ಧ ಸ್ಪರ್ಧಿಸಿ ಸೋತಿದ್ದರು ಹಿರಿಯ ನಟ ಶ್ರೀನಿವಾಸ್ ಮೂರ್ತಿ

    ಕೂಡಲೇ ನಿರ್ದೇಶಕರು ದೈವಕ್ಕೆ ಗುಡಿ ನಿರ್ಮಾಣ ಮಾಡುವ ಕಾರ್ಯಕ್ಕೆ ಮುಂದಾಗಿ, ಚಿತ್ರದ ಎಡಿಟಿಂಗ್ ಕೆಲಸ ಮುಗಿದ ಕೂಡಲೇ, ದೈವಸ್ಥಾನದ ಕಾರ್ಯ ಮುಗಿಸಿ, ಗುಳಿಗ ಹಾಗೂ ಕಲ್ಲುರ್ಟಿ ದೈವಗಳಿಗೆ ಅದ್ದೂರಿಯ ಕೋಲ ಸೇವೆಯನ್ನು  ನಡೆಸಿದರು. ಈ ಸಮಯದಲ್ಲಿ ಹಿರಿಯ ನಟಿ ಭವ್ಯ, ನಿರ್ಮಾಪಕರಾದ ತ್ರಿವಿಕ್ರಮ ಸಾಫಲ್ಯ, ಕಾರ್ಯಕಾರಿ ನಿರ್ಮಾಪಕ  ವಿದ್ಯಾಧರ್ ಶೆಟ್ಟಿ, ಕಲಾವಿದರಾದ ಭರತ್ ಸೂರ್ಯ, ರಿತಿಕ ಹಾಗೂ ಹಲವು ತಂತ್ರಜ್ಞರು ಅಹೋರಾತ್ರಿ ವಿಜೃಂಭಣೆಯಿಂದ ನಡೆದ ಕೋಲಸೇವೆಯಲ್ಲಿ ಪಾಲ್ಗೊಂಡಿದ್ದರು. ಇದಕ್ಕೂ ಮುನ್ನ ಚಿತ್ರತಂಡವು ಚಿತ್ರೀಕರಣ ಮುಗಿದ ಕೂಡಲೇ ಕೊರಗಜ್ಜನಿಗೂ ಕೋಲಸೇವೆಯನ್ನು ಅದ್ದೂರಿಯಾಗಿ ನೆರವೇರಿಸಿತ್ತು.

    ಕೊರಗಜ್ಜನ ಕುರಿತಾದ ಸಿನಿಮಾ ಮಾಡಬೇಕೆಂದು ಹಲವಾರು ನಿರ್ಮಾಪಕರು ಕಳೆದ ಕೆಲವು ವರ್ಷಗಳಿಂದ ಪ್ರಯತ್ನಿಸುತ್ತಿದ್ದರು. ಆದರೆ ನಿರ್ಮಾಪಕ ತ್ರಿವಿಕ್ರಮ ರವರು ಬಿಗ್ ಬಜೆಟ್ ನಲ್ಲಿ ಈ ಚಿತ್ರವನ್ನು ನಿರ್ಮಿಸಿದ್ದು, ಆಗಸ್ಟ್ ತಿಂಗಳಲ್ಲಿ ಬಿಡುಗಡೆ ಮಾಡುವ ಯೋಜನೆ ಹಾಕಿಕೊಂಡಿದ್ದಾರೆ.