Tag: karipur

  • ವಿಮಾನ ದುರಂತ- ಮೃತಪಟ್ಟವರಲ್ಲಿ ಓರ್ವನಿಗೆ ಕೊರೊನಾ ಪಾಸಿಟಿವ್

    ವಿಮಾನ ದುರಂತ- ಮೃತಪಟ್ಟವರಲ್ಲಿ ಓರ್ವನಿಗೆ ಕೊರೊನಾ ಪಾಸಿಟಿವ್

    – ಗಾಯಾಳುಗಳನ್ನು ನೋಡಲು ಆಸ್ಪತ್ರೆಗೆ ಧಾವಿಸ್ಬೇಡಿ
    – ಸಿಎಂ ಪಿಣರಾಯಿ ನಿಯೋಗ ಆಸ್ಪತ್ರೆಗೆ ಭೇಟಿ

    ತಿರುವನಂತಪುರಂ: ಕೋಯಿಕ್ಕೋಡ್ ಕರಿಪುರ ವಿಮಾನ ನಿಲ್ದಾಣದಲ್ಲಿ ನಡೆದ ದುರಂತದಲ್ಲಿ ಸಾವನ್ನಪ್ಪಿದವರಲ್ಲಿ ಓರ್ವನಿಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ.

    ಪ್ರಯಾಣಿಕ ದುಬೈನಿಂದ ಭಾರತಕ್ಕೆ ವಂದೆ ಭಾರತ್ ಮಿಷನ್ ಅಡಿ ಟಿಕೆಟ್ ಪಡೆದು ಶುಕ್ರವಾರ ರಾತ್ರಿ ವಿಮಾನ ಹತ್ತಿದ್ದರು. ಆದರೆ ಕರಿಪುರ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಅವಘಡ ಸಂಭವಿಸಿದ್ದು, ಏರ್ ಇಂಡಿಯಾ ವಿಮಾನ ಇಬ್ಭಾಗವಾಗಿತ್ತು. ಈ ದುರಂತದಲ್ಲಿ ಸಾವನ್ನಪ್ಪಿದವರ ಕೊರೊನಾ ಟೆಸ್ಟ್ ಮಾಡಿದಾಗ ಓರ್ವನಿಗೆ ಕೊರೊನಾ ಪಾಸಿಟಿವ್ ಇರುವುದು ವರದಿಯಾಗಿದೆ.

    ದುಬೈಯಿಂದ 184 ಪ್ರಯಾಣಿಕರನ್ನು ಕರೆತರುತ್ತಿದ್ದ ಏರ್‍ಇಂಡಿಯಾ ಎಕ್ಸ್ ಪ್ರೆಸ್ ವಿಮಾನವನ್ನು ದೀಪಕ್ ವಸಂತ ಸಾಠೆ ಎರಡು ಬಾರಿ ವಿಮಾನ ನಿಲ್ದಾಣಕ್ಕೆ ಸುತ್ತು ಹೊಡೆಸಿದ್ದರು. ಆದರೆ ಪ್ರತಿಕೂಲ ಹವಾಮಾನದ ಸಮಸ್ಯೆಯ ಮಧ್ಯೆಯೂ ವಿಮಾನವನ್ನು ಟೇಬಲ್ ಟಾಪ್ ರನ್‍ವೇಯಲ್ಲಿ ಇಳಿಸಿದರೂ ಅದು 35 ಅಡಿ ಕಂದಕಕ್ಕೆ ಜಾರಿ ಬಿದ್ದು ಗೋಡೆಗೆ ಡಿಕ್ಕಿ ಹೊಡೆದು ಇಬ್ಭಾಗವಾಗಿದೆ. ಇದನ್ನೂ ಓದಿ: ಏರ್ ಇಂಡಿಯಾ ವಿಮಾನ ಇಬ್ಭಾಗವಾದ್ರೂ ಬದುಕುಳಿದ ಪುಟ್ಟ ಕಂದಮ್ಮ

    ದುರ್ಘಟನೆ ನಡೆಯುತ್ತಿದ್ದಂತೆ ಅಧಿಕಾರಿಗಳು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯ ಸಹಕಾರದಿಂದ ಗಾಯಗೊಂಡ 149 ಮಂದಿಯನ್ನು ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಘಟನೆಯಲ್ಲಿ 18 ಮಂದಿ ಸಾವನ್ನಪ್ಪಿದ್ದು, 22 ಮಂದಿಯ ಸ್ಥಿತಿ ಗಂಭೀರವಾಗಿದೆ. 22 ಮಂದಿ ಈಗಾಗಲೇ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಮಲಪ್ಪುರಂ ಕಲೆಕ್ಟರ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಯುದ್ಧವಿಮಾನವನ್ನು ಹಾರಿಸಿದ್ದ ಪೈಲಟ್‌ ಸಾಠೆ 2 ಬಾರಿ ಲ್ಯಾಂಡಿಗ್‌ಗೆ ಪ್ರಯತ್ನಿಸಿದ್ರು

    ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಯಾರೂ ಭೇಟಿ ಮಾಡಬೇಡಿ ಎಂದು ಅಲ್ಲಿನ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. ಇಂದು ಘಟನಾ ಸ್ಥಳಕ್ಕೆ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ 10 ವರ್ಷಗಳ ಹಿಂದೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕೂಡ ಇಂತದ್ದೇ ದುರಂತ ಸಂಭವಿಸಿತ್ತು ಎಂದು ಮೆಲುಕು ಹಾಕಿಕೊಂಡರು. ಇದನ್ನೂ ಓದಿ: ಮರಳಿ ಮನೆಗೆ – ಟೇಕಾಫ್‌ ಮೊದಲು ಕುಟುಂಬದೊಂದಿಗೆ ಫೇಸ್‌ಶೀಲ್ಡ್‌ ಹಾಕಿ ಸೆಲ್ಫಿ, ಪ್ರಯಾಣಿಕ ಸಾವು 

    ರಾಜ್ಯಪಾಲ, ಸಿಎಂ ನಿಯೋಗ ಭೇಟಿ:
    ಕೋಯಿಕ್ಕೋಡ್ ನಲ್ಲಿರುವ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ವಿಮಾನ ದುರಂತದಲ್ಲಿ ಮೃತಪಟ್ಟವರ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಅವರ ನಿಯೋಗ ತಿರುವನಂಪುರದಿಂದ ಕೋಯಿಕ್ಕೋಡ್ ಏರ್ ಇಂಡಿಯಾ ವಿಶೇಷ ವಿಮಾನದಲ್ಲಿ ಕೋಯಿಕ್ಕೋಡ್ ನಲ್ಲಿರುವ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಭೇಟಿ ನೀಡಿದೆ. ಇದನ್ನೂ ಓದಿ: ಅಜ್ಜಿ ಮನೆ ನೋಡುವ ಮುನ್ನವೇ ಕಣ್ಣು ಮುಚ್ಚಿದ 1 ವರ್ಷದ ಕಂದಮ್ಮ

    ವಿಮಾನ ಅಪಘಾತಕ್ಕೆ ಕಾರಣವೇನು ಎಂಬುದರ ಬಗ್ಗೆ ಈಗಾಗಲೇ ತನಿಖೆ ಆರಂಭವಾಗಿದೆ. ಈ ತನಿಖೆ ಬಳಿಕ ಮುಂದಿನ ಕ್ರಮ ಏನು ಅಂತ ಹೇಳುವುದಾಗಿ ಇದೇ ವೇಳೆ ಸಿಎಂ ಪಿಣರಾಯಿ ಅವರು ತಿಳಿಸಿದರು. ನಿಯೋಗದಲ್ಲಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಸ್ಪೀಕರ್ ಪಿ. ವಿಶ್ವಾಸ್ ಮೆಹ್ತಾ ಹಾಗೂ ರಾಜ್ಯ ಪೊಲೀಸ್ ಮುಖ್ಯಸ್ಥ ಲೋಕನಾಥ್ ಬೆಹ್ರಾ ಪ್ರಮುಖರಾಗಿದ್ದರು.

  • ನಮ್ಮನ್ನು ಬದುಕಿಸಿ ಅವರು ಪ್ರಾಣ ತ್ಯಾಗ ಮಾಡಿದರು- ಪೈಲಟ್ ಶ್ಲಾಘಿಸಿದ ಪ್ರಯಾಣಿಕರು

    ನಮ್ಮನ್ನು ಬದುಕಿಸಿ ಅವರು ಪ್ರಾಣ ತ್ಯಾಗ ಮಾಡಿದರು- ಪೈಲಟ್ ಶ್ಲಾಘಿಸಿದ ಪ್ರಯಾಣಿಕರು

    ತಿರುವನಂತಪುರಂ: ಕೇರಳದ ಕೋಯಿಕ್ಕೋಡ್ ಕರಿಪುರ ವಿಮಾನ ನಿಲ್ದಾಣದಲ್ಲಿ ನಡೆದ ದುರಂತದಲ್ಲಿ ಬದುಕುಳಿದ ಪ್ರಯಾಣಿಕರು ಪೈಲಟ್ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ.

    ಶುಕ್ರವಾರ ರಾತ್ರಿ ನಡೆದ ಈ ದುರ್ಘಟನೆಯಲ್ಲಿ ಪೈಲಟ್ ಸಮಯ ಪ್ರಜ್ಞೆಯಿಂದ ನಮ್ಮ ಜೀವಗಳನ್ನು ಕಾಪಾಡಿದರು. ವಿಮಾನ ಅಪಘಾತಕ್ಕೀಡಾಗುತ್ತಿದ್ದಂತೆಯೇ ಆಗುವ ಅನಾಹುತ ತಪ್ಪಿಸಿ ನಮ್ಮನ್ನು ಉಳಿಸುವ ಮೂಲಕ ತಮ್ಮ ಪ್ರಾಣ ತ್ಯಾಗ ಮಾಡಿದರು ಎಂದು ಏರ್ ಇಂಡಿಯಾ ಪ್ರಯಾಣಿಕರು ಪೈಲಟ್ ಅನ್ನು ಶ್ಲಾಫಿಸಿದರು.

    ಧೈರ್ಯಶಾಲಿ ಪೈಲಟ್ ಹಾಗೂ ಸ್ಥಳೀಯ ನಿವಾಸಿಗಳು ನಡೆಯುತ್ತಿದ್ದ ಭಾರೀ ದುರಂತವನ್ನು ತಪ್ಪಿಸಿದ್ದಾರೆ. ವಿಮಾನ ಅಪಘಾತಕ್ಕೀಡಾದ ಕೂಡಲೇ ಜನರು ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ದುರಂತದಲ್ಲಿ ಬದುಕುಳಿದವರು ತಿಳಿಸಿದ್ದಾರೆ. ಇದನ್ನೂ ಓದಿ: ಏರ್ ಇಂಡಿಯಾ ವಿಮಾನ ಇಬ್ಭಾಗವಾದ್ರೂ ಬದುಕುಳಿದ ಪುಟ್ಟ ಕಂದಮ್ಮ

    ಭಾರೀ ಮಳೆಯಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಹವಾಮಾನ ಕೆಟ್ಟದಾಗಿದೆ ಎಂದು ಪೈಲಟ್ ವಿಮಾನವನ್ನು ಇಳಿಸುವ ಮೊದಲೇ ಎಚ್ಚರಿಕೆ ನೀಡಿದ್ದರು. ಅಲ್ಲದೆ ಎರಡು ಬಾರಿ ಸುರಕ್ಷಿತವಾಗಿ ವಿಮಾನವನ್ನು ಇಳಿಸಲು ಪ್ರಯತ್ನಿಸಿದರೂ ನಿಯಂತ್ರಣ ಕಳೆದುಕೊಂಡರು. ಪರಿಣಾಮ ರನ್ ವೇ ಯಿಂದ ಜಾರಿ 33 ಅಡಿ ಕಂದಕಕ್ಕೆ ಜಾರಿ ಎರಡು ಭಾಗವಾಯಿತು ಎಂದು ದುರಂತದಲ್ಲಿ ಸಣ್ಣಪುಟ್ಟ ಗಾಯಗೊಂಡವರು ತಿಳಿಸಿದರು.

    ಘಟನೆಯಲ್ಲಿ ಇಬ್ಬರು ಪೈಲಟ್ ಸೇರಿ ಕನಿಷ್ಠ 20 ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಪ್ರಯಾಣಿಕರೆಲ್ಲರೂ ಕೊರೊನಾ ವೈರಸ್‍ನಿಂದಾಗಿ ದುಬೈನಲ್ಲಿ ಸಿಲುಕಿದವರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರನ್ನು ಹೊತ್ತು ಏರ್ ಇಂಡಿಯಾ ವಿಮಾನ ಕರಿಪುರ ವಿಮಾನ ನಿಲ್ದಾಣ ತಲುಪುತ್ತಿದ್ದಂತೆಯೇ ರನ್ ವೇಯಿಂದ ಜಾರಿ 33 ಅಡಿ ಕಂದಕಕ್ಕೆ ಬಿದ್ದು ಗೋಡೆಗೆ ಡಿಕ್ಕಿ ಹೊಡೆದು ಇಬ್ಭಾಗವಾಗಿದೆ.

    1981ರಲ್ಲಿ ವಾಯಪಡೆಗೆ ಸೇರಿದ್ದ ಪೈಲಟ್ ದೀಪಕ್ ವಸಂತ್ ಸಾಠೆ(59) 22 ವರ್ಷಗಳ ಕಾಲ ವಾಯುಸೇನೆಯಲ್ಲಿ ಸೇವೆ ಸಲ್ಲಿಸಿದ್ದರು. ಬೆಂಗಳೂರಿನ ಎಚ್‍ಎಎಲ್‍ನಲ್ಲಿ ಇರುವ ಏರ್ ಏರ್ ಫೋರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ತರಬೇತಿ ನೀಡುತ್ತಿದ್ದರು. ಸ್ಕ್ವಾಡ್ರನ್ ಲೀಡರ್ ಆಗಿ ನಿವೃತ್ತಿ ಪಡೆದ ಬಳಿಕ ನಾಗರಿಕ ವಿಮಾನ ಸೇವೆಗೆ ಸೇರ್ಪಡೆಯಾಗಿದ್ದರು. ಇದನ್ನೂ ಓದಿ: ಯುದ್ಧವಿಮಾನವನ್ನು ಹಾರಿಸಿದ್ದ ಪೈಲಟ್‌ ಸಾಠೆ 2 ಬಾರಿ ಲ್ಯಾಂಡಿಗ್‌ಗೆ ಪ್ರಯತ್ನಿಸಿದ್ರು

    ಸುತ್ತಲೂ ಆಳ ಕಣಿವೆ ಇದ್ದು, ಬೆಟ್ಟದ ತುದಿಯಲ್ಲಿ ರನ್ ವೇ ಇರುವ ನಿಲ್ದಾಣಗಳನ್ನು ಟೇಬಲ್ ಟಾಪ್ ವಿಮಾನ ನಿಲ್ದಾಣ ಎಂದು ಗುರುತಿಸಲಾಗುತ್ತದೆ. 2010ರಲ್ಲಿ ಮಂಗಳೂರಿನಲ್ಲಿ ಕೂಡ ಇದೇ ರೀತಿ ವಿಮಾನ ದುರಂತ ಸಂಭವಿಸಿದ 158 ಮಂದಿ ಮೃತಪಟ್ಟಿದ್ದರು. ಈ ಮೂಲಕ ಇದೀಗ ಟೇಬಲ್ ಟಾಪ್ ವಿಮಾನ ನಿಲ್ದಾಣದಲ್ಲಿ ನಡೆದ ಎರಡನೇ ದುರಂತ ಇದಾಗಿದೆ.