Tag: Karnatak

  • ರಾಜ್ಯದ ಹವಾಮಾನ ವರದಿ: 20-02-2022

    ರಾಜ್ಯದ ಹವಾಮಾನ ವರದಿ: 20-02-2022

    ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂಜಾನೆ ಚಳಿ ವಾತಾವರಣವಿರಲಿದ್ದು, ಮಧ್ಯಾಹ್ನದ ವೇಳೆ ಕೊಂಚ ಬಿಸಿಲಿನ ತಾಪಮಾನ ಏರಿಯಾಗಲಿದೆ. ಸಂಜೆ ಸ್ವಲ್ಪ ಚಳಿ ಇರಲಿದೆ.

    ಬೆಂಗಳೂರಿನಲ್ಲಿ ಇಂದು ಗರಿಷ್ಟ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಟ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಇರಲಿದೆ. ಕಾರವಾರದಲ್ಲಿ ಇಂದು ಗರಿಷ್ಟ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಟ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಇಂದಿನ ಹವಾಮಾನ ವರದಿ:

    ಬೆಂಗಳೂರು: 31-17.
    ಮಂಗಳೂರು: 32-23.
    ಶಿವಮೊಗ್ಗ: 36-18.
    ಬೆಳಗಾವಿ: 33-18
    ಮೈಸೂರು: 33-18.

    ಮಂಡ್ಯ: 33-18.
    ರಾಮನಗರ: 33-18.
    ಹಾಸನ: 32-17.
    ಚಾಮರಾಜನಗರ: 33-19
    ಚಿಕ್ಕಬಳ್ಳಾಪುರ: 32-17.
    ಕೋಲಾರ: 32-17.

    ತುಮಕೂರು: 32-17.
    ಉಡುಪಿ: 33-23.
    ಕಾರವಾರ: 33-22.
    ಚಿಕ್ಕಮಗಳೂರು: 32-17.
    ದಾವಣಗೆರೆ: 34-18.

    ಚಿತ್ರದುರ್ಗ: 33-18.
    ಹಾವೇರಿ: 35-18
    ಬಳ್ಳಾರಿ: 35-21.
    ಗದಗ: 34-20.
    ಕೊಪ್ಪಳ: 34-20.
    ರಾಯಚೂರು: 35-21

    ಯಾದಗಿರಿ: 36-20
    ವಿಜಯಪುರ: 34-21
    ಬೀದರ್: 33-18
    ಕಲಬುರಗಿ: 35-19
    ಬಾಗಲಕೋಟೆ: 35-20

  • ರಾಜ್ಯದ ಹವಾಮಾನ ವರದಿ: 02-02-2022

    ರಾಜ್ಯದ ಹವಾಮಾನ ವರದಿ: 02-02-2022

    ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಜಾನೆ ಎಂದಿನಂತೆ ಚಳಿ ಇರಲಿದೆ. ಮಧ್ಯಾಹ್ನ ಬಿಸಿಲಿನ ತಾಪಮಾನ ಏರಿಕೆಯಾಗಲಿದ್ದು, ಸಂಜೆ ವೇಳೆ ಮತ್ತೆ ಚಳಿಯ ಅನುಭವ ಸಾಧ್ಯತೆ ಇದೆ.

    ಬೆಂಗಳೂರಿನಲ್ಲಿ ಇಂದು ಗರಿಷ್ಟ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಟ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಜ್ಯದಲ್ಲಿ ಗರಿಷ್ಟ ತಾಪಮಾನ ಶಿವಮೊಗ್ಗ ಜಿಲ್ಲೆಯಲ್ಲಿ 35 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದ್ದು, ಕನಿಷ್ಟ ತಾಪಮಾನ ಬೀದರ್ ಹಾಗೂ ಕೋಲಾರ ಜಿಲ್ಲೆಗಳಲ್ಲಿ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಇಂದಿನ ಹವಾಮಾನ ವರದಿ:
    ಬೆಂಗಳೂರು: 31-17
    ಮಂಗಳೂರು: 32-22
    ಶಿವಮೊಗ್ಗ: 35-18
    ಬೆಳಗಾವಿ: 33-17
    ಮೈಸೂರು: 32-18

    ಮಂಡ್ಯ: 33-18
    ರಾಮನಗರ: 33-18
    ಹಾಸನ: 32-17
    ಚಾಮರಾಜನಗರ: 33-18
    ಚಿಕ್ಕಬಳ್ಳಾಪುರ: 31-17
    ಕೋಲಾರ: 30-16

    weather

    ತುಮಕೂರು: 32-17
    ಉಡುಪಿ: 32-23
    ಕಾರವಾರ: 32-21
    ಚಿಕ್ಕಮಗಳೂರು: 32-16
    ದಾವಣಗೆರೆ: 34-17

    ಚಿತ್ರದುರ್ಗ: 33-17
    ಹಾವೇರಿ: 34-17
    ಬಳ್ಳಾರಿ: 34-19
    ಗದಗ: 34-17
    ಕೊಪ್ಪಳ: 33-18

    ರಾಯಚೂರು: 34-19
    ಯಾದಗಿರಿ: 34-18
    ವಿಜಯಪುರ: 34-18
    ಬೀದರ್: 32-16
    ಕಲಬುರಗಿ: 34-17
    ಬಾಗಲಕೋಟೆ: 34-17

  • ಕರ್ನಾಟಕ ಸರ್ಕಾರದ ಎಸ್‍ಸಿ, ಎಸ್‍ಟಿ ನೌಕರರ ಬಡ್ತಿ ಮೀಸಲಾತಿ ಸಾಂವಿಧಾನಿಕ: ಸುಪ್ರೀಂ ಕೋರ್ಟ್

    ಕರ್ನಾಟಕ ಸರ್ಕಾರದ ಎಸ್‍ಸಿ, ಎಸ್‍ಟಿ ನೌಕರರ ಬಡ್ತಿ ಮೀಸಲಾತಿ ಸಾಂವಿಧಾನಿಕ: ಸುಪ್ರೀಂ ಕೋರ್ಟ್

    ನವದೆಹಲಿ: ಎಸ್‍ಸಿ, ಎಸ್‍ಟಿ ನೌಕರರ ಬಡ್ತಿ ಮೀಸಲಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಜಾರಿ ತಂದಿದ್ದ ತತ್ಪರಿಣಾಮ ಜೇಷ್ಠತಾ ಮೀಸಲಾತಿ ಕಾನೂನು ಸಾಂವಿಧಾನಿಕ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.

    ಕಾಯ್ದೆಯ ಸಿಂಧುತ್ವವನ್ನು ಪ್ರಶ್ನಿಸಿ ಬಿ.ಕೆ. ಪವಿತ್ರ ಮತ್ತಿತರರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿಗಳಾದ ಯು. ಯು. ಲಲಿತ್ ಹಾಗೂ ಡಿ.ವೈ. ಚಂದ್ರಚೂಡ್ ಅವರಿದ್ದ ಪೀಠವು ಇಂದು ತೀರ್ಪು ಪ್ರಕಟಿಸಿದೆ.

    ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ಶಾಸನಸಭೆಯು ರೂಪಿಸಿರುವ ನೂತನ ಕಾಯ್ದೆಗೆ ರಾಷ್ಟ್ರಪತಿಯವರು ಅಂಕಿತ ದೊರೆತಿದ್ದು, ಅದರ ಸಿಂಧುತ್ವಕ್ಕೆ ಪೂರಕ ಎಂದು ಅಭಿಪ್ರಾಯಪಟ್ಟರು.

    ಕೆನೆ ಪದರದ ತತ್ವವೂ ಸಹ ಈ ಕಾಯ್ದೆಯ ಜಾರಿಯಲ್ಲಿ ಅನ್ವಯವಾಗದು. ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿರುವ ಗ್ರೂಪ್ ಡಿ ಹಂತದ ಸಿಬ್ಬಂದಿಗೆ ಮೀಸಲಾತಿ ನೀಡುವಾಗ ಮಾತ್ರ ಈ ತತ್ವ ಅನ್ವಯಿಸಬಹುದು. ಆದರೆ, ತತ್ಪರಿಣಾಮದ ಜ್ಯೇಷ್ಠತೆ ವಿಸ್ತರಿಸುವ ಕಾಯ್ದೆ ಆಗಿರುವುದರಿಂದ ಕೇವಲ ಉನ್ನತ ಮಟ್ಟದ ಅಧಿಕಾರಿಗಳು ಇದರ ಲಾಭ ಪಡೆಯುವುದರಿಂದ ಕಾಯ್ದೆಯನ್ನು ಮಾನ್ಯ ಮಾಡಲಾಗಿದೆ ನ್ಯಾಯಮೂರ್ತಿ ಚಂದ್ರಚೂಡ್ ತೀರ್ಪಿನಲ್ಲಿ ಉಲ್ಲೇಖಿದ್ದಾರೆ.

    ಸುಪ್ರೀಂಕೋರ್ಟ್ ತೀರ್ಪಿನಿಂದ ಸುಮಾರು ಮೂರು ಸಾವಿರಕ್ಕೂ ಅಧಿಕ ಎಸ್‍ಸಿ, ಎಸ್‍ಟಿ ನೌಕಕರಿಗೆ ಲಾಭ ಆಗಲಿದ್ದು ಹಿಂಬಡ್ತಿ ಹೊಂದುವ ಭಯದಲ್ಲಿದ್ದ ನೌಕರರು ನಿರಾಳರಾಗಿದ್ದಾರೆ. ಇನ್ನು ತೀರ್ಪುನಿಂದ ಅರ್ಜಿದಾರ ಬಿ.ಕೆ ಪವಿತ್ರ ಅವರಿಗೆ ಹಿನ್ನೆಡೆಯಾಗಿದ್ದು ಮರುಪರಿಶೀಲನಾ ಅರ್ಜಿ ಸಲ್ಲಿಸುವ ಕುರಿತು ಯೋಚಿಸಿದ್ದಾರೆ.

    ಏನಿದು ಪ್ರಕರಣ?’
    ಸರ್ಕಾರಿ ನೌಕರರ ಬಡ್ತಿಯಲ್ಲಿ ಮೀಸಲಾತಿ ವಿಧಾನ ಅನುಸರಿಸುವ ರಾಜ್ಯ ಸರ್ಕಾರದ 2002ರ ಕಾಯ್ದೆ ಯನ್ನು ರದ್ದುಪಡಿಸಿ ಸಿದ್ದರಾಮಯ್ಯ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ನೌಕರರ ಹಿತಾಸಕ್ತಿ ಕಾಪಾಡಲು ಹೊಸ ಕಾಯ್ದೆ ರೂಪಿಸಿತ್ತು. ಈ ನೂತನ ಕಾಯ್ದೆಗೆ ರಾಷ್ಟ್ರಪತಿಯವರ ಅಂಕಿತ ದೊರೆತಿತ್ತು. ಈ ಕಾಯ್ದೆಯ ಸಿಂಧುತ್ವ ಪ್ರಶ್ನಿಸಿ ಬಿ.ಕೆ. ಪವಿತ್ರ ಮತ್ತಿತರರು ಮೇಲ್ಮನವಿ ಸಲ್ಲಿಸಿದ್ದರು. 2018ರ ಅಕ್ಟೋಬರ್ 23ರಿಂದ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿ ಕಳೆದ ಮಾರ್ಚ್ 6 ರಂದು ಸುಪ್ರೀಂ ಕೋರ್ಟ್ ತೀರ್ಪು ಕಾದಿರಿಸಿತ್ತು.

  • ಕರ್ನಾಟಕ ಚುನಾವಣೆಯಲ್ಲಿ ಯಾರಿಗೂ ಬಹುಮತ ಸಿಗಲ್ಲ, ಸಮ್ಮಿಶ್ರ ಸರ್ಕಾರ ವರ್ಷದೊಳಗೆ ಬಿದ್ದೋಗುತ್ತೆ: ಉಡುಪಿ ಜ್ಯೋತಿಷಿ

    ಕರ್ನಾಟಕ ಚುನಾವಣೆಯಲ್ಲಿ ಯಾರಿಗೂ ಬಹುಮತ ಸಿಗಲ್ಲ, ಸಮ್ಮಿಶ್ರ ಸರ್ಕಾರ ವರ್ಷದೊಳಗೆ ಬಿದ್ದೋಗುತ್ತೆ: ಉಡುಪಿ ಜ್ಯೋತಿಷಿ

    ಉಡುಪಿ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಯಾರಿಗೂ ಬಹುಮತ ಇಲ್ಲ. ಎರಡು ಪಕ್ಷಗಳು ಒಂದಾದ್ರೆ ವರ್ಷದೊಳಗೆ ದೋಸ್ತಿ ಕಡಿದು ಬೀಳುವುದು ಖಂಡಿತ. ಹೇವಿಳಂಬಿ ಸಂವತ್ಸರದಲ್ಲಿ ಕರ್ನಾಟಕ ಮತ್ತೊಂದು ಗೋದ್ರಾವಾಗುತ್ತೆ, ನಾಯಕರೆಲ್ಲ ಸೈಲೆಂಟಾಗಿದ್ರೆ ಬಚಾವ್. ಇನ್ನು ಏಳು ವರ್ಷ ನರೇಂದ್ರ ಮೋದಿಯನ್ನು ಮುಟ್ಟೋದಕ್ಕೂ ಆಗೋದಿಲ್ಲ. ರಾಹುಲ್ ಗಾಂಧಿ ಪ್ರಧಾನಿಯಾಗೋ ಕನಸು ಕಾಣೋದನ್ನು ಬಿಟ್ಟು ಬಿಡಿ ಎಂದು ಗುಜರತಾ ಫಲಿತಾಂಶ ಪ್ರಕಟವಾಘುವ ಮುನ್ನ ನಿಖರ ಭವಿಷ್ಯ ನುಡಿದಿದ್ದ ಉಡುಪಿಯ ಜ್ಯೋತಿರ್ವಿಜ್ಞಾನಿ ಪ್ರಕಾಶ್ ಅಮ್ಮಣ್ಣಾಯ ಭವಿಷ್ಯ ನುಡಿದಿದ್ದಾರೆ.

    ಸಿಎಂ ಮತ್ತು ಬಿಜೆಪಿಯ ಜಟಾಪಟಿಗಳ ಬಗ್ಗೆ ಶಾಸ್ತ್ರದ ಪ್ರಕಾರ ಮಾತನಾಡಿದ್ದಾರೆ. ಜೆಡಿಎಸ್ ಪಾತ್ರ ಬಿಚ್ಚಿಟ್ಟಿದ್ದಾರೆ. ಮೋದಿಯನ್ನು 7 ವರ್ಷ ಅಲುಗಾಡಿಸಲು ಅಸಾಧ್ಯ. ಮಣ್ಣಿನ ವಾಸನೆಗೆ ವಿರುದ್ಧವಾದ ಪಕ್ಷ ಮತ್ತೊಂದು ರೈತರ ಪರವಾದ ಪಕ್ಷ ರಾಜ್ಯದಲ್ಲಿ ಸಮ್ಮಿಶ್ರವಾಗಿ ಸರ್ಕಾರ ರಚಿಸುತ್ತದೆ. ಆದರೆ ಆ ಸರ್ಕಾರ ವರ್ಷದೊಳಗೆ ಕುಸಿದು ಬೀಳುತ್ತದೆ. ಭಾರತದಲ್ಲಿ ಹಿಂದುತ್ವಕ್ಕೆ ಬೆಲೆಕೊಡುವ ಪಕ್ಷಕ್ಕೆ ಭವಿಷ್ಯವಿದೆ. ರಾಜಕೀಯ ವಿಶ್ಲೇಷಕರು ರಾಜಕಾರಣಿಗಳಿಗೆ ಕಿವಿಮಾತು ಹೇಳಬೇಕು. ಹಿಂದೂಸ್ಥಾನದಲ್ಲಿ ಹಿಂದೂಗಳಿಗೆ ಬೆಲೆ ಸಿಗದಿದ್ದರೆ ಬಹುಸಂಖ್ಯಾತರು ಒಂದಲ್ಲ ಒಂದು ದಿನ ತಿರುಗಿ ಬೀಳದೆ ಸುಮ್ಮನೆ ಕುಳಿತುಕೊಳ್ಳುವುದಿಲ್ಲ ಎಂದು ಪ್ರಕಾಶ್ ಅಮ್ಮಣ್ಣಾಯ ಹೇಳಿದ್ದಾರೆ.

    ರಾಜ್ಯದಲ್ಲಿ ಸಣ್ಣ ಘಟನೆಗಳು ಆದಾಗ ಅದಕ್ಕೆ ಸರ್ಕಾರ ಒಂದು ಕೋಮಿಗೆ ಬೆಂಬಲ ಕೊಡುತ್ತದೆ. ಇದೇ ದೊಡ್ಡಮಟ್ಟದ ಗಲಾಟೆಗೆ ಕಾರಣವಾಗುತ್ತದೆ. ರಾಜ್ಯ ಸರ್ಕಾರ ಮಾಡಿದ ಕೆಲಸವನ್ನು ನನ್ನ ಕಾಲಾವಧಿಯಲ್ಲಿ ಆಯ್ತು ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೊಂಡು ಬೀಗುತಿದ್ದಾರೆ. ಒಂದು ಧರ್ಮದ ಬಗ್ಗೆ ತುಷ್ಟೀಕರಣ ಮಾಡುತ್ತಿದ್ದಾರೆ. ಪ್ರೀತಿಸುವ- ಗೆಳೆತನದಿಂದ ಇರುವ ಮುಸ್ಲಿಮರನ್ನು ದ್ವೇಷಿಸುವ ಮಟ್ಟಿಗೆ ತಂದಿದ್ದು ಸಿಎಂ ಸಿದ್ದರಾಮಯ್ಯ. ಅವರಿಂದಲೇ ಸಮಾಜದ ವಿಭಜನೆ ಆಗುತ್ತಿದೆ. ಕರ್ನಾಟಕ ಮತ್ತೊಂದು ಗೋದ್ರಾ ಆದ್ರೆ ಅದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಕಾರಣ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಹೆಚ್‍ಡಿಡಿ ವಿರುದ್ಧ ರಫ್&ಟಫ್ ವರ್ತನೆ ಬೇಡ- ಬಿಜೆಪಿ ನಾಯಕರಿಗೆ ಹೈಕಮಾಂಡ್ ಸೂಚನೆ

    ಮಹಾದಾಯಿ ವಿಚಾರದಲ್ಲಿ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜವಾಬ್ದಾರಿ ಇಲ್ವಾ? ಮಹಾದಾಯಿ ವಿಚಾರದಲ್ಲಿ ಬಿಜೆಪಿ ಅವಸರ ಮಾಡಿದೆ. ಒಳ್ಳೆಯ ವಾತಾವರಣವನ್ನು ಯಡಿಯೂರಪ್ಪ ಹಾಳು ಮಾಡಿಕೊಂಡಿದ್ದಾರೆ. ಈ ಎಲ್ಲಾ ರಾಜಕೀಯ ಏರುಪೇರುಗಳಿಗೆ ಕಾರಣ ವಿಳಂಬಿ ಸಂವತ್ಸರ. ಎಲ್ಲಾ ರಾಜಕೀಯ ನಾಯಕರು ಚುನಾವಣೆಗಾಗಿ- ಅಧಿಕಾರಕ್ಕಾಗಿ ಪರಿಸ್ಥಿತಿಯನ್ನು ಉಪಯೋಗ ಮಾಡಿಕೊಳ್ಳಬಾರದು. ಅದರಿಂದ ದುಷ್ಪರಿಣಾಮವೇ ಹೆಚ್ಚು. ಜನ ಬುದ್ಧಿವಂತರು ಅಂತಾ ಅಂದ್ರು. ಇದನ್ನೂ ಓದಿ: ಗುಜರಾತ್ ಭವಿಷ್ಯ 20 ಗಂಟೆ ಮೊದಲೇ ಬರೆದಿದ್ದ ಉಡುಪಿ ಜ್ಯೋತಿಷಿ

    ರಾಜಕೀಯ ಪಕ್ಷಗಳು ನಮ್ಮ ರಾಜ್ಯವನ್ನು ಮೂರು ವಿಭಾಗ ಮಾಡಿ ಜನರನ್ನು ಒಲಿಸಲು ಪ್ರಯತ್ನ ಮಾಡಬೇಕು. ಕರಾವಳಿ ಹಿಂದುತ್ವ ವಿರುದ್ಧ ಹೋಗದೆ ಸಮಸ್ಯೆಗಳ ಪರಿಹಾರ ಮಾಡಬೇಕು. ಉತ್ತರ ಕರ್ನಾಟಕದ ಲಿಂಗಾಯತ- ಮಹಾದಾಯಿ- ಗಡಿ ಸಮಸ್ಯೆ ಬಗ್ಗೆ, ಮಧ್ಯೆ ಕರ್ನಾಟಕದ ಕನ್ನಡ ಪ್ರೇಮಿಗಳು. ರೈತರು ಸ್ವಾಭಿಮಾನಿಗಳು ಹೀಗಾಗಿ ಆಯಾಯ ಭಾಗಕ್ಕೆ ತಕ್ಕುದಾದಂತೆ ಸಮಸ್ಯೆ ಬಗೆಹರಿಸಿದರೆ ಜನ ಹರಸುತ್ತಾರೆ. ಅದಕ್ಕೆ ವಿರುದ್ಧವಾಗಿ ನಡೆದರೆ ತಕ್ಕ ಪಾಠಕಲಿಸುತ್ತಾರೆ ಅಂತಾ ತಿಳಿಸಿದ್ದಾರೆ.

    ನಿಖರ ಭವಿಷ್ಯ ಹೇಳಿದ್ರು:
    ನಾಳೆಯ ಗುಜರಾತಿನಲ್ಲಿ 7.17 ಕ್ಕೆ ಧನುರ್ಲಗ್ನದಲ್ಲಿ ಸೂರ್ಯೋದಯ ಆಗಲಿದೆ. ಲಗ್ನಾಧಿಪತಿ ಲಾಭಸ್ಥಾನದಲ್ಲಿ ಪಂಚಮಾಧಿಪತಿ ಜತೆಗೆ. ಆದರೆ ಲಗ್ನದಲ್ಲಿ ರವಿ ಶನಿ ಗ್ರಹ ಯುದ್ಧ ಸ್ಥಿತಿ. ಪರಿಣಾಮ- ಬಹಳ ಯುದ್ಧಸ್ಥಿತಿ ಸುಮಾರು ಹತ್ತುಗಂಟೆಯ ವರೆಗಿದೆ. ಬಿಜೆಪಿಯ ಹಿನ್ನಡೆಗಳೇ ಎದ್ದು ಕಾಣಬಹುದು. ಹತ್ತುಗಂಟೆ ನಂತರ ಎಲ್ಲಾ ಮಾಧ್ಯಮಗಳ ಲೆಕ್ಕಾಚಾರ ಬುಡಮೇಲಾಗಬಹುದು. ಪೊರಕೆಗಳಿಗೆ ಡಿಮಾಂಡ್ ಹೆಚ್ಚಾದೀತು. ಕೊನೆಗೆ ಬಿಜೆಪಿಗೆ ಗೆಲುವು ಸಿಗಲಿದೆ ಎಂದು ಬರೆದು ಡಿಸೆಂಬರ್ 17 ರ 7 ಗಂಟೆ 59 ನಿಮಿಷಕ್ಕೆ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ರು.

    https://youtu.be/c3mf0ZAIGVM

    https://youtu.be/SJA_KziC9i4