Tag: karnataka

  • ಜಾತಿ ಸಮೀಕ್ಷೆಯಲ್ಲಿ ಭಾಗವಹಿಸಲ್ಲ ಎಂದ ಸುಧಾ, ನಾರಾಯಣ ಮೂರ್ತಿ ದಂಪತಿ

    ಜಾತಿ ಸಮೀಕ್ಷೆಯಲ್ಲಿ ಭಾಗವಹಿಸಲ್ಲ ಎಂದ ಸುಧಾ, ನಾರಾಯಣ ಮೂರ್ತಿ ದಂಪತಿ

    ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ (Socio Economic Survey) ಭಾಗವಹಿಸಲು ಇನ್ಫೋಸಿಸ್ ಸಂಸ್ಥಾಪಕ  ನಾರಾಯಣ ಮೂರ್ತಿ (N R Narayana murthy) ಹಾಗೂ ಸುಧಾ ನಾರಾಯಣ ಮೂರ್ತಿ (Sudha Murthy) ನಿರಾಕರಿಸಿದ್ದಾರೆ.

    ನಾವು ಹಿಂದುಳಿದ ವರ್ಗದ ಯಾವ ಜಾತಿಗೂ ಸೇರುವವರಲ್ಲ. ಆದ್ದರಿಂದ ಈ ಸಮೀಕ್ಷೆಯಿಂದ ಸರ್ಕಾರಕ್ಕೆ ಏನೂ ಉಪಯೋಗವಿಲ್ಲ. ಅದ್ದರರಿಂದ ನಾವು ಈ ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲ ಎಂದು ಸ್ವಯಂ ದೃಢೀಕರಣ ಪತ್ರದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ:  ನ.1ರಿಂದ ಬಿ ಖಾತಾದಿಂದ ಎ ಖಾತಾಗೆ ಪರಿವರ್ತನೆ – ನಿವೇಶನಗಳಿಗಷ್ಟೇ ಎ ಖಾತೆ; ಕಟ್ಟಡಗಳ ಸಕ್ರಮ ಇಲ್ಲ

     
    ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಗಳ ಆಯೋಗದ ಮೂಲಕ ನಡೆಯುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ನನ್ನ ಕೆಲವು ವೈಯಕ್ತಿಕ ಕಾರಣಗಳಿಂದ ಮಾಹಿತಿ ನೀಡಲು ನಿರಾಕರಿಸುತ್ತೇವೆ. ನಾನು ಮತ್ತು ನನ್ನ ಕುಟುಂಬ ಈ ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲ ಮತ್ತು ನಮ್ಮ ಮಾಹಿತಿಯನ್ನು ನೀಡಲು ನಿರಾಕರಿಸಿದ್ದೇನೆ ಎಂದು ಈ ಮೂಲಕ ದೃಢೀಕರಿಸುತ್ತೇವೆ ಎಂದು ದಂಪತಿ ತಿಳಿಸಿದ್ದಾರೆ.

  • ಸೇನಾ ಕ್ಯಾಂಟೀನ್ ಮಾದರಿಯಲ್ಲಿ ಸರ್ಕಾರಿ ನೌಕರರಿಗೆ MSIL ಸೂಪರ್‌ ಮಾರ್ಕೆಟ್‌ ಚಿಂತನೆ: ಎಂ ಬಿ ಪಾಟೀಲ್‌

    ಸೇನಾ ಕ್ಯಾಂಟೀನ್ ಮಾದರಿಯಲ್ಲಿ ಸರ್ಕಾರಿ ನೌಕರರಿಗೆ MSIL ಸೂಪರ್‌ ಮಾರ್ಕೆಟ್‌ ಚಿಂತನೆ: ಎಂ ಬಿ ಪಾಟೀಲ್‌

    – ತಿಂಗಳಲ್ಲಿ ಸಾಧ್ಯಾಸಾಧ್ಯತೆ ವರದಿ ಕೊಡಲು ಸೂಚನೆ
    – ಮೊದಲ ಹಂತದಲ್ಲಿ ಬೆಂಗಳೂರಿನಲ್ಲಿ 4-5 ಮಳಿಗೆ

    ಬೆಂಗಳೂರು: ಪೊಲೀಸ್ ಮತ್ತು ಸೇನಾ‌ ಕ್ಯಾಂಟೀನ್ (Army Canteen) ಮಾದರಿಯಲ್ಲೇ ರಾಜ್ಯ ಸರಕಾರಿ ನೌಕರರಿಗೆ ದಿನನಿತ್ಯದ ಬದುಕಿಗೆ ಅಗತ್ಯವಿರುವ ಪ್ರತಿಯೊಂದು ವಸ್ತುವೂ ರಿಯಾಯಿತಿ ದರದಲ್ಲಿ ಸಿಗಬೇಕೆಂಬ ಉದ್ದೇಶದೊಂದಿಗೆ ಸರಕಾರಿ ಸ್ವಾಮ್ಯದ ಎಂಎಸ್‌ಐಎಲ್‌ (MSIL) ವತಿಯಿಂದ ಸೂಪರ್‌ ಮಾರ್ಕೆಟ್‌ (Super Market) ಆರಂಭಿಸುವ ಚಿಂತನೆ ಇದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್‌ (MB Patil) ತಿಳಿಸಿದ್ದಾರೆ.

    ಈ ಸಂಬಂಧ ಅವರು ಖನಿಜ ಭವನದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್‌, ಎಂಎಸ್ಐಎಲ್ ವ್ಯವಸ್ಥಾಪಕ ನಿರ್ದೇಶಕ ಮನೋಜ್‌ ಕುಮಾರ್‌ ಸೇರಿದಂತೆ ಇತರ ಹಿರಿಯ ಅಧಿಕಾರಿಗಳೊಂದಿಗೆ ಬುಧವಾರ ಪ್ರಾಥಮಿಕ ಸುತ್ತಿನ ಸಭೆ ನಡೆಸಿದರು.

    ಬಳಿಕ ಮಾಹಿತಿ ನೀಡಿದ ಅವರು, ರಾಜ್ಯದ ಪೊಲೀಸ್, ಅರೆ ಸೇನಾ ಪಡೆಗಳ ನೌಕರರಿಗೆ ಈ ರೀತಿಯ ಕ್ಯಾಂಟೀನ್‌ ಸೌಲಭ್ಯವಿದೆ. ರಾಜ್ಯದಲ್ಲಿ 6 ಲಕ್ಷ ಸರ್ಕಾರಿ ನೌಕರರಿದ್ದಾರೆ. ಅವರ ಕುಟುಂಬಗಳ ಹಿತದೃಷ್ಟಿಯಿಂದ ಇಂಥದ್ದೊಂದು ಉಪಕ್ರಮ ಆರಂಭಿಸುವುದು ನಮ್ಮ ಚಿಂತನೆಯಾಗಿದೆ. ಇದಕ್ಕೆ ಸಬ್ಸಿಡಿ ಅಥವಾ ತೆರಿಗೆ ವಿನಾಯಿತಿ ಪಡೆದುಕೊಳ್ಳುವುದು ಹೇಗೆಂದು ಆರ್ಥಿಕ ಇಲಾಖೆಯ ಜೊತೆ ಚರ್ಚಿಸಲಾಗುವುದು. ಒಟ್ಟಿನಲ್ಲಿ ಇಂತಹ ಸೂಪರ್‌ ಮಾರ್ಕೆಟ್‌ ಮಳಿಗೆ ಆರಂಭಿಸುವ ಸಾಧ್ಯಾಸಾಧ್ಯತೆ ಕುರಿತು ತಮಗೆ ಒಂದು ತಿಂಗಳಲ್ಲಿ ವಿಸ್ತೃತ ವರದಿ ಸಲ್ಲಿಸುವಂತೆ ಎಂಎಸ್‌ಐಎಲ್‌ಗೆ ಸೂಚಿಸಲಾಗಿದೆ ಎಂದಿದ್ದಾರೆ. ಇದನ್ನೂ ಓದಿ:  ದೀಪಾವಳಿಗೆ ಸಿಹಿ ಸುದ್ದಿ- ರಾಜ್ಯದ ಸರ್ಕಾರಿ ನೌಕರರ DA 2% ಏರಿಕೆ

     

    ಉದ್ದೇಶಿತ ಎಂಎಸ್‌ಐಎಲ್‌ ಸೂಪರ್‌ ಮಾರ್ಕೆಟ್‌ನಲ್ಲಿ ನಮ್ಮ ಸರ್ಕಾರಿ ನೌಕರರ ದಿನನಿತ್ಯದ ಬದುಕಿಗೆ ಬೇಕಾದ ದವಸ-ಧಾನ್ಯದಿಂದ ಹಿಡಿದು ಎಫ್‌ಎಂಸಿಜಿ ವಲಯದಲ್ಲಿ ಬರುವ ಪ್ರತಿಯೊಂದು ಪದಾರ್ಥವೂ ರಿಯಾಯಿತಿ ದರದಲ್ಲಿ ಸಿಗುವಂತಾದರೆ ಚೆನ್ನಾಗಿರುತ್ತದೆ. ಮೊದಲ ಹಂತದಲ್ಲಿ ಬೆಂಗಳೂರಿನಲ್ಲಿ 4-5 ಮಳಿಗೆಗಳನ್ನು ತೆರೆಯುವ ಆಲೋಚನೆ ಇದೆ. ನಂತರದ ದಿನಗಳಲ್ಲಿ ಜಿಲ್ಲಾ ಕೇಂದ್ರಗಳಲ್ಲೂ ಇಂತಹ ಸೌಲಭ್ಯ ವಿಸ್ತರಣೆಗೆ ಮುಂದಾಗಬಹುದು. ಒಟ್ಟಿನಲ್ಲಿ ಅಧ್ಯಯನ ವರದಿ ಬಂದ ನಂತರ ತೀರ್ಮಾನಿಸಲಾಗುವುದು ಎಂದು ಅವರು ಹೇಳಿದ್ದಾರೆ.

    ಇದರಿಂದ ಸರಕಾರಿ ಸ್ವಾಮ್ಯದ ಎಂಎಸ್‌ಐಎಲ್‌ ಚಟುವಟಿಕೆಯೂ ವಿಸ್ತಾರಗೊಂಡು, ಆದಾಯದ ಮೂಲವೊಂದು ಸಿಗಲಿದೆ. ಅಲ್ಲದೇ ಲಕ್ಷಾಂತರ ಸರ್ಕಾರಿ ನೌಕರರ ಕುಟುಂಬಗಳಿಗೂ ಇದರಿಂದ ಪ್ರಯೋಜನವಾಗಲಿದೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರಿ ನೌಕರರ ಸಂಘಟನೆಗಳ ಜತೆ ಮಾತುಕತೆ ನಡೆಸುವಂತೆಯೂ ಅವರು ಸೂಚಿಸಿದ್ದಾರೆ. ಇದನ್ನೂ ಓದಿ:  ಬೆಂಗಳೂರು ನಿವಾಸಿಗಳಿಗೆ ದೀಪಾವಳಿಗೂ ಮೊದಲೇ ಗಿಫ್ಟ್‌; ಬಿ-ಖಾತಾ ಪರಿವರ್ತನೆಗೆ ಹೊಸ ಪೋರ್ಟಲ್‌

    ಎಂಎಸ್‌ಐಎಲ್‌ನ ಚಟುವಟಿಕೆಗಳು ಈಗ ಸೀಮಿತ ಪ್ರಮಾಣದಲ್ಲಿವೆ. ಇದಕ್ಕೆ ಮತ್ತಷ್ಟು ಕಸುವು ತುಂಬಿ, ಆರ್ಥಿಕವಾಗಿ ಮತ್ತಷ್ಟು ಸದೃಢಗೊಳಿಸಬೇಕೆಂಬ ಆಲೋಚನೆ ತಮ್ಮದಾಗಿದೆ. ಇದರಿಂದ ಅಪಾರ ಸಂಖ್ಯೆಯಲ್ಲಿ ಪ್ರತ್ಯಕ್ಷ ಮತ್ತು ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಸಚಿವರ ತಾಂತ್ರಿಕ ಸಲಹೆಗಾರ ಅರವಿಂದ ಗಲಗಲಿ, ಎಂಎಸ್ಐಎಲ್ ನಿರ್ದೇಶಕ ಚಂದ್ರಪ್ಪ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಇದ್ದರು.

  • ದೀಪಾವಳಿಗೆ ಸಿಹಿ ಸುದ್ದಿ- ರಾಜ್ಯದ ಸರ್ಕಾರಿ ನೌಕರರ DA 2% ಏರಿಕೆ

    ದೀಪಾವಳಿಗೆ ಸಿಹಿ ಸುದ್ದಿ- ರಾಜ್ಯದ ಸರ್ಕಾರಿ ನೌಕರರ DA 2% ಏರಿಕೆ

    ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. ತುಟ್ಟಿ ಭತ್ಯೆಯನ್ನು (Dearness Allowance) ಶೇ. 2ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ.

    ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜುಲೈ 2025 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇ.12.25 ರಿಂದ ಶೇ.14.25 ಗೆ ಏರಿಕೆ ಮಾಡಿದೆ.  ಇದನ್ನೂ ಓದಿ:  ಬೆಂಗಳೂರು ನಿವಾಸಿಗಳಿಗೆ ದೀಪಾವಳಿಗೂ ಮೊದಲೇ ಗಿಫ್ಟ್‌; ಬಿ-ಖಾತಾ ಪರಿವರ್ತನೆಗೆ ಹೊಸ ಪೋರ್ಟಲ್‌

    ಕೇಂದ್ರ ಸರ್ಕಾರವು ತನ್ನ ನೌಕರರಿಗೆ ತುಟ್ಟಿ ಭತ್ಯೆ ಘೋಷಿಸಿದ ಬೆನ್ನಲ್ಲೇ ಸಾಮಾನ್ಯವಾಗಿ ರಾಜ್ಯ ಸರ್ಕಾರವೂ ಏರಿಕೆ ಮಾಡುತ್ತದೆ. ವಿಜಯದಶಮಿಯ (Vijayadashami) ಮುನ್ನ ದಿನ ಕೇಂದ್ರ ಸರ್ಕಾರಿ ನೌಕರರಿಗೆ ಮೋದಿ ಸರ್ಕಾರ ಹೆಚ್ಚುವರಿ 3% ತುಟ್ಟಿ ಭತ್ಯೆ ನೀಡಲು ಒಪ್ಪಿಗೆ ನೀಡಿತ್ತು.  ಇದನ್ನೂ ಓದಿ:  ಕೇದಾರನಾಥ ಯಾತ್ರಿಗಳಿಗೆ ಗುಡ್ ನ್ಯೂಸ್ – 12.9 ಕಿಮೀ ರೋಪ್‌ವೇ ನಿರ್ಮಿಸಲಿದೆ ಅದಾನಿ ಕಂಪನಿ

    ಬೆಲೆ ಏರಿಕೆಯನ್ನು ಸರಿದೂಗಿಸಲು, ಕೇಂದ್ರ ಸರ್ಕಾರಿ ನೌಕರರಿಗೆ ಹೆಚ್ಚುವರಿ ಕಂತು ತುಟ್ಟಿ ಭತ್ಯೆ (DA) ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರ (DR) ನೀಡಲು ಅನುಮೋದನೆ ನೀಡಿತ್ತು.

  • ಎಪಿಎಲ್‌ಗೆ ಬದಲಾದ ಅರ್ಹ ಬಿಪಿಎಲ್ ಕಾರ್ಡ್‌ದಾರರಿಗೆ ಗುಡ್‌ನ್ಯೂಸ್; ದಾಖಲೆ ಇದ್ರೆ 45 ದಿನದೊಳಗೆ ಮತ್ತೆ ಬಿಪಿಎಲ್ ಕಾರ್ಡ್ ಭಾಗ್ಯ

    ಎಪಿಎಲ್‌ಗೆ ಬದಲಾದ ಅರ್ಹ ಬಿಪಿಎಲ್ ಕಾರ್ಡ್‌ದಾರರಿಗೆ ಗುಡ್‌ನ್ಯೂಸ್; ದಾಖಲೆ ಇದ್ರೆ 45 ದಿನದೊಳಗೆ ಮತ್ತೆ ಬಿಪಿಎಲ್ ಕಾರ್ಡ್ ಭಾಗ್ಯ

    ಬೆಂಗಳೂರು: ಎಪಿಎಲ್‌ಗೆ (APL) ಬದಲಾದ ಅರ್ಹರಿಗೆ ಮತ್ತೆ ಬಿಪಿಎಲ್‌ ಕಾರ್ಡ್‌ (BPL Card) ಭಾಗ್ಯ ಸಿಗಲಿದೆ. ಹೌದು, ಅನರ್ಹ ಬಿಪಿಎಲ್ ಕಾರ್ಡ್‌ಗಳ ರದ್ದತಿ ಪ್ರಕ್ರಿಯೆ ಮಧ್ಯೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ ಮೂಲಕ ಅರ್ಹತೆ ಇದ್ರೂ ಎಪಿಎಲ್‌ಗೆ ಬದಲಾಗಿ ವಂಚಿತರಾದವರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ‌.

    45 ದಿನಗಳೊಳಗೆ ಅರ್ಹರಿಗೆ ಮತ್ತೆ ಬಿಪಿಎಲ್ ಕಾರ್ಡ್ ವಿತರಿಸಲು ಸರ್ಕಾರ ಆಹಾರ ಇಲಾಖೆಗೆ ಗಡುವು ಕೊಟ್ಟಿದೆ. ಎಪಿಎಲ್‌ಗೆ ಬದಲಾದವರು ಪೂರಕ ದಾಖಲೆ ಇದ್ದರೆ ಮತ್ತೆ ಬಿಪಿಎಲ್ ಕಾರ್ಡ್ ಪಡೆಯಲು ಅವಕಾಶ ಮಾಡಿಕೊಡಲಾಗಿದೆ. ಒಂದು ಕಡೆ ಅನರ್ಹ ಬಿಪಿಎಲ್‌ ಕಾರ್ಡ್‌ದಾರರನ್ನು ಪತ್ತೆ ಮಾಡಿ ಎಪಿಎಲ್‌ ಕಾರ್ಡ್‌ ನೀಡಲು ಆಹಾರ ಇಲಾಖೆ ಮುಂದಾಗಿದೆ. ಇನ್ನೊಂದು ಕಡೆ ಅರ್ಹ ಬಿಪಿಎಲ್‌ ಕಾರ್ಡ್‌ದಾರರು ಎಪಿಎಲ್‌ಗೆ ಬದಲಾಗಿದ್ರೆ ಅಂಥವರಿಗೆ ನ್ಯಾಯ ಕೊಡಲು ಮುಂದಾಗಿದೆ. ಇದನ್ನೂ ಓದಿ: ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ – ಪರಿಶೀಲಿಸಿ ಕ್ರಮಕ್ಕೆ ಸೂಚನೆ: ಪರಮೇಶ್ವರ್

    7,76,206 ಪಡಿತರ ಚೀಟಿಗಳು ರಾಜ್ಯದಲ್ಲಿ ಅನರ್ಹವೆಂದು ಕೇಂದ್ರ ಸರ್ಕಾರ ಗುರುತು ಮಾಡಿದೆ. ಆದರೆ, ರಾಜ್ಯ ಸರ್ಕಾರದ ಲೆಕ್ಕದ ಪ್ರಕಾರ 13,87,651 ಅನರ್ಹ ಪಡಿತರ ಚೀಟಿಗಳಿವೆ. ಇಂತಹ ಅನರ್ಹ ಚೀಟಿಗಳನ್ನು ಬಿಪಿಎಲ್‌ ಬದಲಿಗೆ ಎಪಿಎಲ್‌ ಆಗಿ ಪರಿವರ್ತಿಸುವ ಕೆಲಸ ನಡೀತಿದೆ.‌‌ ಇದರ ಮಧ್ಯೆ ಒಂದು ವೇಳೆ ಅರ್ಹರ ಕಾರ್ಡ್‌ ಎಪಿಎಲ್‌ಗೆ ಬದಲಾಗಿದ್ದಲ್ಲಿ ಅಂಥವರಿಗೆ ಬ್ಯಾಕ್ ಟು ಬಿಪಿಎಲ್‌ ಭಾಗ್ಯವೂ ಸಿಗಲಿದೆ. ಇದಕ್ಕಾಗಿ 45 ದಿನದೊಳಗೆ ಅಗತ್ಯ ದಾಖಲೆ ಸಹಿತ ತಹಶೀಲ್ದಾರ್‌ಗೆ ಮನವಿ ಸಲ್ಲಿಸಬೇಕು. ಅಧಿಕಾರಿಗಳು ಸ್ಥಳ ಪರಿಶೀಲನೆ ಮತ್ತು ದಾಖಲೆಗಳನ್ನು ಪರಿಶೀಲನೆ ಮಾಡಿ ಅರ್ಹರಿದ್ದಲ್ಲಿ ಅಂಥವರಿಗೆ ಬಿಪಿಎಲ್‌ ಕಾರ್ಡ್‌ ನೀಡಲು ಸರ್ಕಾರ ಸೂಚನೆ ಕೊಟ್ಟಿದೆ.

    ಇದೇ ವೇಳೆ ಬಿಎಪಿಎಲ್‌ಗೆ ಅರ್ಜಿ ಸಲ್ಲಿಸಿ ವರ್ಷಗಳಿಂದ ಕಾಯುತ್ತಿರುವವರಿಗೂ ಗುಡ್ ನ್ಯೂಸ್ ಇದೆ. ಹೊಸದಾಗಿ ಪಡಿತರ ಚೀಟಿಗೆ ಈಗಾಗಲೇ 2.96 ಲಕ್ಷ ಅರ್ಜಿ ಸಲ್ಲಿಕೆ ಆಗಿವೆ. ಈ ಅರ್ಜಿಗಳ ವಿಲೇವಾರಿ ಮಾಡುವವರೆಗೆ ಬಿಪಿಎಲ್‌ಗೆ ಹೊಸದಾಗಿ ಅರ್ಜಿ ಆಹ್ವಾನಿಸಬಾರದು ಎಂದು ಸರ್ಕಾರ ನಿರ್ದೇಶಿಸಿದೆ. ಸದ್ಯದಲ್ಲೇ ಹೊಸ ಬಿಪಿಎಲ್ ಕಾರ್ಡ್‌ಗಳ ವಿತರಣೆಗೂ ಕ್ರಮದ ಭರವಸೆ ಕೊಡಲಾಗಿದೆ. ಇದನ್ನೂ ಓದಿ: ನನ್ನ ಮರ್ಯಾದೆ ಉಳಿಸಿಕೊಳ್ಳಲು ಕೆಲವು ಬೆದರಿಕೆ ಕರೆ ವಿಡಿಯೋ ರಿಲೀಸ್ ಮಾಡಿಲ್ಲ: ಪ್ರಿಯಾಂಕ್ ಖರ್ಗೆ

    ಎಪಿಎಲ್‌ಗೆ ಬದಲಾದ ಅರ್ಹರಿಗೆ ಮತ್ತೆ ಬಿಪಿಎಲ್‌ ಕಾರ್ಡ್‌ ಭಾಗ್ಯ!
    * ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
    * ಬಿಪಿಎಲ್ ಕಾರ್ಡ್ ವಂಚಿತ ಅರ್ಹರಿಗೆ ಗುಡ್ ನ್ಯೂಸ್!
    * 45 ದಿನಗಳೊಳಗೆ ಅರ್ಹರಿಗೆ ಮತ್ತೆ ಬಿಪಿಎಲ್ ಕಾರ್ಡ್!
    * ಎಪಿಎಲ್‌ಗೆ ಬದಲಾದವರಿಗೆ ಪೂರಕ ದಾಖಲೆ ಇದ್ದರೆ ಮತ್ತೆ ಬಿಪಿಎಲ್ ಕಾರ್ಡ್
    * ಕೇಂದ್ರದ ಪ್ರಕಾರ ರಾಜ್ಯದಲ್ಲಿ 7,76,206 ಪಡಿತರ ಚೀಟಿಗಳಿವೆ
    * ರಾಜ್ಯ ಸರ್ಕಾರದ ಲೆಕ್ಕದ ಪ್ರಕಾರ 13,87,651 ಅನರ್ಹ ಪಡಿತರ ಚೀಟಿಗಳು
    * 45 ದಿನದೊಳಗೆ ಅಗತ್ಯ ದಾಖಲೆ ಸಹಿತ ತಹಶೀಲ್ದಾರ್‌ಗೆ ಮನವಿ ಸಲ್ಲಿಸಬೇಕು
    * ಅಧಿಕಾರಿಗಳು ಸ್ಥಳ ಪರಿಶೀಲನೆ ಮತ್ತು ದಾಖಲೆ ಪರಿಶೀಲಿಸಿ ಅರ್ಹರಿದ್ದಲ್ಲಿ ಬಿಪಿಎಲ್‌ ಕಾರ್ಡ್
    * ಹೊಸದಾಗಿ ಪಡಿತರ ಚೀಟಿಗೆ ಸಲ್ಲುಸಿರೋ 2.96 ಲಕ್ಷ ಅರ್ಜಿಗಳ ವಿಲೇವಾರಿಗೂ ಕ್ರಮ
    * ಹಳೆಯ ಅರ್ಜಿಗಳ ವಿಲೇವಾರಿವರೆಗೂ ಬಿಪಿಎಲ್‌ಗೆ ಹೊಸಗಿ ಅರ್ಜಿ ಆಹ್ವಾನವಿಲ್ಲ

  • ಭತ್ತ ಸಂಶೋಧನೆ: ಫಿಲಿಪೈನ್ಸ್‌ನೊಂದಿಗೆ ಮಹತ್ವದ ಒಡಂಬಡಿಕೆಗೆ ಚಲುವರಾಯಸ್ವಾಮಿ ಸಹಿ

    ಭತ್ತ ಸಂಶೋಧನೆ: ಫಿಲಿಪೈನ್ಸ್‌ನೊಂದಿಗೆ ಮಹತ್ವದ ಒಡಂಬಡಿಕೆಗೆ ಚಲುವರಾಯಸ್ವಾಮಿ ಸಹಿ

    ಮನಿಲಾ: ರಾಜ್ಯದಲ್ಲಿ ಭತ್ತದ (Paddy) ತಳಿಗಳ ಆಧುನಿಕ ಸಂಶೋಧನೆ ಮತ್ತು ಸಂವರ್ಧನೆಗೆ ನೆರವಾಗುವ ಕುರಿತು ಫಿಲಿಪೈನ್ಸ್‌ನ (Philippines) ಅಂತರಾಷ್ಟ್ರೀಯ ಭತ್ತ ಸಂಶೋಧನಾ ಕೇಂದ್ರದೊಂದಿಗೆ ಮಂಡ್ಯ ಕೃಷಿ ವಿಶ್ವವಿದ್ಯಾಲಯ ಮಹತ್ವದ ಒಡಂಬಡಿಕೆ ಮಾಡಿಕೊಂಡಿದೆ.

    ಫಿಲಿಪೈನ್ಸ್‌ನ ಮನಿಲಾದಲ್ಲಿರುವ ಅಂತರಾಷ್ಟ್ರೀಯ ಭತ್ತ ಸಂಶೋಧನಾ ಕೇಂದ್ರಕ್ಕೆ ಉನ್ನತ ಮಟ್ಟದ ನಿಯೋಗದೊಂದಿಗೆ ತೆರಳಿರುವ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ (N Chaluvarayaswamy) ಅವರು ಒಪ್ಪಂದಕ್ಕೆ ಸಹಿ ಮಾಡಿದರು. ಇದನ್ನೂ ಓದಿ: ನನ್ನ ಮರ್ಯಾದೆ ಉಳಿಸಿಕೊಳ್ಳಲು ಕೆಲವು ಬೆದರಿಕೆ ಕರೆ ವಿಡಿಯೋ ರಿಲೀಸ್ ಮಾಡಿಲ್ಲ: ಪ್ರಿಯಾಂಕ್ ಖರ್ಗೆ

    ರಾಜ್ಯದಲ್ಲಿ ನೆರೆ ಹಾವಳಿ, ಬರ ಪರಿಸ್ಥಿತಿಗಳು ಕರಾವಳಿ, ಮಲೆನಾಡು ಬಯಲು ಸೀಮೆ ವಿಭಿನ್ನ ಭೌಗೋಳಿಕ ಪರಿಸರಕ್ಕೆ ಹೊಂದಾಣಿಕೆಯಾಗುವ ವಿವಿಧ ಜೈವಿಕ, ಅಜೈವಿಕ ಒತ್ತಡಗಳಿಗೆ ನಿರೋಧಕತೆ ಜೊತೆಗೆ ಪೌಷ್ಠಿಕಾಂಶ ಉಳ್ಳ, ಅಧಿಕ ಇಳುವರಿ ತರುವ ಬೇಸಾಯ ಕ್ರಮಗಳು ಮತ್ತು ಭತ್ತದ ತಳಿಗಳ ಸಂಶೋಧನೆಗೆ ಈ ಒಡಂಬಡಿಕೆ ನೆರವಾಗಲಿದೆ. ಇದನ್ನೂ ಓದಿ: ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ: ನಾರಾ ಲೋಕೇಶ್‌ಗೆ ಡಿಕೆಶಿ ತಿರುಗೇಟು

    ಇದೇ ಸಂದರ್ಭದಲ್ಲಿ ಕರ್ನಾಟಕದಲ್ಲಿಯೂ ಅಂತರಾಷ್ಟ್ರೀಯ ಮಟ್ಟದ ಭತ್ತ ಸಂಶೋಧನಾ ಕೇಂದ್ರ ಸ್ಥಾಪನೆ ಬಗ್ಗೆಯೂ ಸಚಿವರು ಮಹತ್ವದ ಚರ್ಚೆ ನಡೆಸಿದರು. ಅಲ್ಲದೇ ಭತ್ತದ ಮಹತ್ವ, ಉಭಯ ದೇಶಗಳು ಅನುಸರಿಸುತ್ತಿರುವ ಬೇಸಾಯ ಕ್ರಮಗಳು, ಮೌಲ್ಯ ವರ್ಧನೆಗೆ ಅನುಸರಿಸಬೇಕಾದ ಮಾರ್ಗೋಪಾಯಗಳ ಬಗ್ಗೆ ಮಾಹಿತಿ ಹಾಗೂ ಅನುಭವಗಳನ್ನು ವಿನಿಮಯ ಮಾಡಿಕೊಳ್ಳಲಾಯಿತು. ಭತ್ತದ ತಳಿಗಳ ಸಂರಕ್ಷಣೆ, ಸಂಶೋಧನೆಗೆ ಕರ್ನಾಟಕ ಸರ್ಕಾರ ತೋರುತ್ತಿರುವ ಕಾಳಜಿ ಮತ್ತು ರೈತಪರ ಯೋಜನೆಗಳ ಬಗ್ಗೆ ಫಿಲಿಪೈನ್ಸ್‌ನ ಅಂತರಾಷ್ಟ್ರೀಯ ಭತ್ತ ಸಂಶೋಧನಾ ಕೇಂದ್ರದ ಅಧಿಕಾರಿಗಳು ಮೆಚ್ಚುಗೆ ಸೂಚಿಸಿ ಇದಕ್ಕೆ ಕಾರಣರಾಗಿರುವ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರಿಗೆ ಅಭಿನಂದನೆ ಸಲ್ಲಿಸಿದರು. 1945ರಿಂದಲೂ ಭಾರತ ಮತ್ತು ಫಿಲಿಪೈನ್ಸ್ ನಡುವೆ ಇರುವ ಬಾಂಧವ್ಯ, ಕೃಷಿ ಕ್ಷೇತ್ರದ ಸಹಕಾರಗಳನ್ನು ಸಹ ಸ್ಮರಿಸಿ ಶ್ಲಾಘಿಸಲಾಯಿತು. ಇದನ್ನೂ ಓದಿ: ಕರ್ನಾಟಕದಲ್ಲಿ ಮೂಲಸೌಕರ್ಯ ಕೆಟ್ಟದಾಗಿದೆ, ಪವರ್‌ ಕಟ್‌ ಸಮಸ್ಯೆಯಿದೆ: ಆಂಧ್ರ ಐಟಿ ಸಚಿವ

    ಅಂತರಾಷ್ಟ್ರೀಯ ಭತ್ತದ ಸಂಶೋಧನಾ ಕೇಂದ್ರದ ಉಪ ಮಹಾನಿರ್ದೇಶಕರಾದ ಜುನೆಲ್ ಸಯಾನೋ , ಡಾ ಸಂಕಲ್ಪ್ ಭೋಸ್ಲೆ, ಮಂಡ್ಯ ಕೃಷಿ ವಿ.ವಿ ವಿಶೇಷಾಧಿಕಾರಿ ಡಾ ಕೆ.ಎಂ ಹರಿಣಿಕುಮಾರ್, ಡಾ ವೇಣು ಪ್ರಸಾದ್, ಡಾ ಮಲ್ಲಿಕಾರ್ಜುನ ಸ್ವಾಮಿ, ಕೃಷಿ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ ಎ.ಬಿ.ಪಾಟೀಲ್ ವಿ.ಸಿ ಫಾರಂನ ಭತ್ತದ ತಳಿ ವಿಜ್ಞಾನಿ ಡಾ ದೀಪಕ್, ರಾಯಚೂರು ಕೃಷಿ ವಿಶ್ವವಿದ್ಯಾಲಯದ ಕೃಷಿ ವಿಜ್ಞಾನಿ ಡಾ ಸುಜಯ್ ಮತ್ತಿತರರು ಉಪಸ್ಥಿತರಿದ್ದರು. ಇದನ್ನೂ ಓದಿ: ಬೆಂಗಳೂರು | ಆರೋಗ್ಯ ಸಮಸ್ಯೆ ಮುಚ್ಚಿಟ್ಟು ಮದುವೆಯಾದ ಪತ್ನಿಗೆ ಇಂಜೆಕ್ಷನ್‌ ಕೊಟ್ಟು ಕೊಂದ ಕಿಲ್ಲರ್‌ ಡಾಕ್ಟರ್‌

    ಇದೇ ವೇಳೆ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಅಧಿಕಾರಿಗಳ ತಂಡದೊಂದಿಗೆ ಅಂತರಾಷ್ಟ್ರೀಯ ಭತ್ತದ ಸಂಶೋಧನಾ ಕೇಂದ್ರದ ಜೀನ್ ಬ್ಯಾಂಕ್ ಒಳಗೊಂಡಂತೆ ವಿವಿಧ ಪ್ರಯೋಗಾಲಯಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಇದನ್ನೂ ಓದಿ: ಮಹಾಭಾರತದ ‘ಕರ್ಣ’ ಪಂಕಜ್ ಧೀರ್ ನಿಧನ – ಕ್ಯಾನ್ಸರ್‌ನಿಂದ ಬಳಲುತ್ತಿದ್ದ ನಟ

  • ಕರ್ನಾಟಕದಲ್ಲಿ ಮೂಲಸೌಕರ್ಯ ಕೆಟ್ಟದಾಗಿದೆ, ಪವರ್‌ ಕಟ್‌ ಸಮಸ್ಯೆಯಿದೆ: ಆಂಧ್ರ ಐಟಿ ಸಚಿವ

    ಕರ್ನಾಟಕದಲ್ಲಿ ಮೂಲಸೌಕರ್ಯ ಕೆಟ್ಟದಾಗಿದೆ, ಪವರ್‌ ಕಟ್‌ ಸಮಸ್ಯೆಯಿದೆ: ಆಂಧ್ರ ಐಟಿ ಸಚಿವ

    – ರಾಜ್ಯದ ಉದ್ಯಮಿಗಳ ಹೇಳಿಕೆಯನ್ನು ಉಲ್ಲೇಖಿಸಿ ಟಾಂಗ್‌ ನೀಡಿದ ನಾರಾ ಲೋಕೇಶ್‌
    – ಕರ್ನಾಟಕ ಮೊದಲು ಈ ಸಮಸ್ಯೆ ಸರಿಮಾಡಬೇಕು

    ಹೈದರಾಬಾದ್‌: ಕರ್ನಾಟಕದ ಕೈಗಾರಿಕೋದ್ಯಮಿಗಳು ರಾಜ್ಯದಲ್ಲಿ ಮೂಲಸೌಕರ್ಯ ಕೆಟ್ಟದಾಗಿದೆ, ವಿದ್ಯುತ್ ಕಡಿತವಿದೆ ಎಂದು ಹೇಳುತ್ತಾರೆ. ಕರ್ನಾಟಕ ಮೊದಲು ಆ ಸಮಸ್ಯೆಗಳನ್ನು ಸರಿಪಡಿಸಬೇಕು ಎಂದು ಆಂಧ್ರಪ್ರದೇಶದ ಐಟಿ ಸಚಿವ ನಾರಾ ಲೋಕೇಶ್ ಹೇಳಿದ್ದಾರೆ.

    ವಿಶಾಖಪಟ್ಟಣದಲ್ಲಿ ಗೂಗಲ್‌ ಎಐ ಕೇಂದ್ರ ತೆರೆಯುವ ಸಂಬಂಧ ಮಾಡಿಕೊಂಡ ಒಪ್ಪಂದಕ್ಕೆ ಕರ್ನಾಟಕ ನಾಯಕರು ಪ್ರಶ್ನೆ ಮಾಡಿದ್ದಕ್ಕೆ ಸಂಬಂಧಿಸಿದಂತೆ ಕೇಳಲಾದ ಪ್ರಶ್ನೆಗೆ ಸುದ್ದಿಗೋಷ್ಠಿಯಲ್ಲಿ ಅವರು ಉತ್ತರ ನೀಡಿದರು.

    ಕಂಪನಿಗಳನ್ನು ಸೆಳೆಯಲು ಅವರು ಅಸಮರ್ಥರಾಗಿದ್ದರೆ ನಾನು ಏನು ಮಾಡಲು ಸಾಧ್ಯವಿಲ್ಲ. ಗೂಗಲ್‌ ಜೊತೆ ಸಹಿ ಹಾಕುವ ಒಂದು ದಿನದ ಮೊದಲು ಹಲವು ರಾಜ್ಯಗಳು ತಮ್ಮ ರಾಜ್ಯಕ್ಕೆ ಬರುವಂತೆ ಪ್ರಯತ್ನ ಮಾಡಿದ್ದವು. ನಾವು ಕೈಗಾರಿಕೆಗಳಿಗೆ ಪ್ರೋತ್ಸಾಹ ನೀಡುತ್ತೇವೆ. ವಿಶಾಖಪಟ್ಟಣದಲ್ಲಿ ಗೂಗಲ್‌ ಕೇಂದ್ರ ತೆರೆಯಲು ನಾವು ಹಲವಾರು ಸಭೆಗಳನ್ನು ನಡೆಸಿದ್ದೇವೆ. ಏನೇನು ಸಮಸ್ಯೆಯಾಗಿತ್ತು ಅವುಗಳನ್ನು ನಾವು ಪರಿಹರಿಸಿಕೊಟ್ಟಿದ್ದೇವೆ ಎಂದರು.

    ರಾಜ್ಯ ರಾಜ್ಯಗಳ ಮಧ್ಯೆ ಈ ರೀತಿಯ ಸ್ಪರ್ಧೆ ಇರಬೇಕು. ಸ್ಪರ್ಧೆ ಇದ್ದರೆ ಅಂತಿಮವಾಗಿ ಲಾಭ ಭಾರತಕ್ಕೆ ಆಗಲಿದೆ. ಕಂಪ್ಯೂಟರ್‌ ಕ್ರಾಂತಿಯಾಗುವ ಸಂದರ್ಭದಲ್ಲಿ ಹಲವು ಮಂದಿ ಕಂಪ್ಯೂಟರ್‌ ಆಹಾರ ನೀಡುತ್ತಾ ಎಂದು ಪ್ರಶ್ನಿಸಿದ್ದರು. ಆದರೆ ನಮ್ಮ ಮುಖ್ಯಮಂತ್ರಿಗಳಾದ ಚಂದ್ರಬಾಬು ನಾಯ್ಡು ಅವರು  ಅಂದು ಕಂಪನಿಗಳಿಗೆ ಪ್ರೋತ್ಸಾಹ ನೀಡಿದ್ದರಿಂದ ಹೈದರಾಬಾದ್‌ ಇಂದು ಟೆಕ್‌ ಸಿಟಿಯಾಗಿದೆ. ಲಕ್ಷಾಂತರ ಮಂದಿಗೆ ಉದ್ಯೋಗ ನೀಡಿದೆ ಎಂದು ತಿಳಿಸಿದರು.

    ಗೂಗಲ್‌ ಆಂಧ್ರಕ್ಕೆ ಹೋಗಿದ್ದಕ್ಕೆ ಬಿಜೆಪಿ ಮತ್ತು ಜೆಡಿಎಸ್‌ ಕರ್ನಾಟಕ ಸರ್ಕಾರದ ವಿರುದ್ಧ ಕಿಡಿಕಾರಿವೆ. ಉದ್ಯಮಿಗಳಿಗೆ ಬೆದರಿಕೆ ಹಾಕುವುದು, ಮೂಲಸೌಕರ್ಯ ಅಭಿವೃದ್ಧಿ ಮಾಡದೇ ಇರುವ ಕಾರಣ ಕಂಪನಿಗಳು ರಾಜ್ಯವನ್ನು ತೊರೆಯುತ್ತಿವೆ ಎಂದು ದೂರಿವೆ.  ಇದನ್ನೂ ಓದಿ:  ಟ್ರಂಪ್‌ಗೆ ಗೂಗಲ್‌ ಟಕ್ಕರ್‌| ವಿಶಾಖಪಟ್ಟಣದಲ್ಲಿ ಎಐ-ಹಬ್‌ಗಾಗಿ 1500 ಕೋಟಿ ಡಾಲರ್‌ ಹೂಡಿಕೆ, 1 ಲಕ್ಷ ಉದ್ಯೋಗ ಸೃಷ್ಟಿ

    ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿಗೆ ಇದ್ದ ಘನತೆ, ಆಕರ್ಷಣೆ ಕಾಂಗ್ರೆಸ್‌ ಸರ್ಕಾರದ ಆಡಳಿತದಲ್ಲಿ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಲಕ್ಷಾಂತರ ವಿದ್ಯಾವಂತ ನಿರುದ್ಯೋಗಿಗಳ ಉದ್ಯೋಗ ಸೃಷ್ಟಿಯ ಬೆಟ್ಟ ಕರಗುತ್ತಿದೆ, ಯುವ ಜನರು ಆತಂಕ ಪಡುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಎಲ್ಲೆಂದರಲ್ಲಿ ಗುಂಡಿ ಬಿದ್ದ ರಾಜಧಾನಿಯ ಪರಿಸ್ಥಿತಿಗೆ ‘ಅಂತರಾಷ್ಟ್ರೀಯ ಉದ್ಯಮಗಳು ಬೆಂಗಳೂರಿನಿಂದ ವಿಮುಖವಾಗುತ್ತಿವೆ’. ರಾಜ್ಯಕ್ಕೆ ಬರಬೇಕಿದ್ದ ಜಾಗತಿಕ ದಿಗ್ಗಜ ಗೂಗಲ್‌ ಸಂಸ್ಥೆಯ ಬರೋಬ್ಬರಿ 30,000 ಉದ್ಯೋಗ ಸೃಷ್ಟಿಯ ಗುರಿ ಹೊಂದಿರುವ 1.3 ಲಕ್ಷ ಕೋಟಿ ರೂ ಹೂಡಿಕೆ ನೆರೆ ರಾಜ್ಯ ಆಂಧ್ರ ಪ್ರದೇಶದ ಪಾಲಾಗಿದೆ.

    ವಿಶ್ವದ ಜನರನ್ನು ಸೆಳೆಯುತ್ತಿದ್ದ ಬೆಂಗಳೂರನ್ನು ‘ಗುಂಡಿಗಳ ಬೆಂಗಳೂರು’ ಎಂಬ ಅಪಖ್ಯಾತಿ ಅಂಟಿಸಿರುವ ಈ ಸರ್ಕಾರದ ನಡೆಯಿಂದಾಗಿ ಹಾಗೂ ಬೆಂಗಳೂರು ಉಸ್ತುವಾರಿ ಹೊತ್ತ ಡಿಕೆ ಶಿವಕುಮಾರ್‌ ಅವರ ಇಚ್ಚಾಶಕ್ತಿ ಹಾಗೂ ವೈಫಲ್ಯದ ಕಾರಣದಿಂದಾಗಿ ಕನ್ನಡಿಗರಿಗೆ ಸಿಗಬೇಕಿದ್ದ ಸಾವಿರಾರು ಉದ್ಯೋಗಗಳು ನೆರೆ ರಾಜ್ಯದ ಪಾಲಾಗುತ್ತಿವೆ.  ಅಭಿವೃದ್ಧಿಯನ್ನು ಸಂಪೂರ್ಣ ಮರೆತ ಕಾಂಗ್ರೆಸ್ ಸರ್ಕಾರ ಕನಿಷ್ಠ ಬಂಡವಾಳ ಹೂಡುವ ಉದ್ಯಮ ಕ್ಷೇತ್ರವನ್ನೂ ಹಿಡಿದಿಟ್ಟುಕೊಳ್ಳುವ ಪ್ರಾಮಾಣಿಕ ಕಾಳಜಿಯ ಪ್ರತೀಕವಾಗಿ, ಮೂಲಭೂತ ಸೌಕರ್ಯಗಳನ್ನೂ ಕಲ್ಪಿಸುವಲ್ಲಿಯೂ ವಿಫಲವಾಗಿರುವುದು ಕರ್ನಾಟಕ ರಾಜ್ಯದ ದುರಂತವೇ ಸರಿ ಎಂದು ಸಿಟ್ಟು ಹೊರಹಾಕಿವೆ.

  • ರಾಜ್ಯದಲ್ಲಿ ಅ.18ರವರೆಗೆ ಭಾರೀ ಮಳೆ – ಇಂದು ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ರಾಜ್ಯದಲ್ಲಿ ಅ.18ರವರೆಗೆ ಭಾರೀ ಮಳೆ – ಇಂದು ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಬೆಂಗಳೂರು: ಬಂಗಾಳ ಉಪಮಹಾಸಾಗರದಲ್ಲಿ (Bay of Bengal) ನೈರುತ್ಯ ಮಳೆಯ ಮಾರುತ ಚುರುಕು ಹಿನ್ನೆಲೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಕ್ಟೋಬರ್ 18ರವರೆಗೆ ಭಾರೀ ಮಳೆಯಾಗುವ (Rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ.

    ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಎಲ್ಲಾ ಜಿಲ್ಲೆಗೂ ಇಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: 1 ರೂಪಾಯಿ ಬಡ್ಡಿಗೆ ಲೋನ್‌ ಕೊಡಿಸ್ತೀವಿ ಅಂತ ಬರ್ತಾರೆ ಹುಷಾರ್‌ – ಬೆಂಗಳೂರಲ್ಲೊಂದು ಖತರ್ನಾಕ್ ಲೇಡಿ ಗ್ಯಾಂಗ್

     

    ಸಂಜೆ ವೇಳೆಗೆ ಬೆಂಗಳೂರಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನೆಲೆ ಬೆಂಗಳೂರಿಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಇರಲಿದ್ದು, ಈ ಅವಧಿಯಲ್ಲಿ ಸಿಡಿಲು ಉಂಟಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಇದನ್ನೂ ಓದಿ: ನೂರಾರು ಶವಗಳ ಹೂತಿಟ್ಟ ಕೇಸ್ – ಕೋರ್ಟ್‌ನಲ್ಲಿ ಹೊಸ ಕಥೆ ಬಿಚ್ಚಿಟ್ಟ `ಬುರುಡೆ’ ಚಿನ್ನಯ್ಯ

  • ರಾಜ್ಯದ ಹವಾಮಾನ ವರದಿ 15-10-2025

    ರಾಜ್ಯದ ಹವಾಮಾನ ವರದಿ 15-10-2025

    ರಾಜ್ಯದ ಹಲವೆಡೆ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಅ.15ರವರೆಗೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ದಕ್ಷಿಣ ಕನ್ನಡ, ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರು, ಕೋಲಾರ, ಮೈಸೂರು, ರಾಮನಗರದ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ವರದಿ ಮಾಡಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 27-22
    ಮಂಗಳೂರು: 30-25
    ಶಿವಮೊಗ್ಗ: 30-22
    ಬೆಳಗಾವಿ: 28-21
    ಮೈಸೂರು: 29-22

    ಮಂಡ್ಯ: 29-22
    ಮಡಿಕೇರಿ: 27-21
    ರಾಮನಗರ: 28-22
    ಹಾಸನ: 28-21
    ಚಾಮರಾಜನಗರ: 28-22
    ಚಿಕ್ಕಬಳ್ಳಾಪುರ: 26-21

    ಕೋಲಾರ: 26-21
    ತುಮಕೂರು: 28-21
    ಉಡುಪಿ: 30-25
    ಕಾರವಾರ: 32-26
    ಚಿಕ್ಕಮಗಳೂರು: 26-19
    ದಾವಣಗೆರೆ: 29-22

    ಹುಬ್ಬಳ್ಳಿ: 32-20
    ಚಿತ್ರದುರ್ಗ: 29-21
    ಹಾವೇರಿ: 32-21
    ಬಳ್ಳಾರಿ: 32-21
    ಗದಗ: 32-21
    ಕೊಪ್ಪಳ: 32-21

    ರಾಯಚೂರು: 29-22
    ಯಾದಗಿರಿ: 29-23
    ವಿಜಯಪುರ: 29-22
    ಬೀದರ್: 28-22
    ಕಲಬುರಗಿ: 28-23
    ಬಾಗಲಕೋಟೆ: 29-23

  • ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ‘ಲೋಕಾ’ ದಾಳಿ – ಅಪಾರ ಪ್ರಮಾಣದ ಚಿನ್ನ, ಬೆಳ್ಳಿ, ನಗದು, ಆಸ್ತಿ ಪತ್ತೆ

    ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ‘ಲೋಕಾ’ ದಾಳಿ – ಅಪಾರ ಪ್ರಮಾಣದ ಚಿನ್ನ, ಬೆಳ್ಳಿ, ನಗದು, ಆಸ್ತಿ ಪತ್ತೆ

    – ಬೆಂಗಳೂರಿನ ಮೂವರು ಸೇರಿ ರಾಜ್ಯಾದ್ಯಂತ 12 ಅಧಿಕಾರಿಗಳಿಗೆ ಶಾಕ್‌

    ಬೆಂಗಳೂರು: ಭ್ರಷ್ಟ ಅಧಿಕಾರಿಗಳ ಮನೆಗಳು ಹಾಗೂ ಕಚೇರಿಗಳ ಮೇಲಿನ ದಾಳಿಯನ್ನು ಲೋಕಾಯುಕ್ತ ಮುಕ್ತಾಯಗೊಳಿಸಿದೆ. ದಾಳಿಯಲ್ಲಿ ಅಪಾರ ಪ್ರಮಾಣದ ಚಿನ್ನ, ಬೆಳ್ಳಿ, ನಗದು, ಆಸ್ತಿ ಪತ್ತೆಯಾಗಿದೆ.

    ಬೆಂಗಳೂರು ಸೇರಿ 48 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ ಮಾಡಿದೆ. ಆ ಮೂಲಕ ಒಟ್ಟು 12 ಅಧಿಕಾರಿಗಳಿಗೆ ಶಾಕ್‌ ನೀಡಿದೆ.

    1. ಮಂಜುನಾಥ. ಜಿ. ವೈದ್ಯಾಧಿಕಾರಿಗಳು, ಹೆರಿಗೆ ಆಸ್ಪತ್ರೆ, ಮಲ್ಲಸಂದ್ರ, ಬೆಂಗಳೂರು
    – ಮಂಜುನಾಥ್ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 4 ಸ್ಥಳಗಳಲ್ಲಿ ರೇಡ್
    – ದಾಳಿ ವೇಳೆ 3,24,13,240 ರೂ. ಸ್ಥಿರ ಹಾಗೂ ಚರ ಆಸ್ತಿ ಪತ್ತೆ
    – 1 ಸೈಟ್, 1 ವಾಸದ ಮನೆ, 1 ಪ್ಲಾಟ್ ಸೇರಿ 1.85 ಕೋಟಿ ಸ್ಥಿರ ಆಸ್ತಿ ಪತ್ತೆ
    – 10 ಲಕ್ಷ ನಗದು, ವಾಹನ, ಗೃಹೋಪಯೋಗಿ ವಸ್ತು ಸೇರಿ 1.39 ಕೋಟಿ ಚರ ಆಸ್ತಿ ಪತ್ತೆ

    2. ವಿ.ಸುಮಂಗಳ, ನಿರ್ದೇಶಕರು, ರಾಜ್ಯ ಶಾಲಾ ಶಿಕ್ಷಣ, ಸಂಶೋಧನೆ ಮತ್ತು ತರಬೇತಿ, ಬೆಂಗಳೂರು
    – ಸುಮಂಗಳಗೆ ಸೇರಿದ ಒಟ್ಟು 6 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ
    – ಸುಮಂಗಳ ಬಳಿ 7,32,50,000 ರೂ. ಮೌಲ್ಯದ ಚರ ಹಾಗೂ ಸ್ಥಿರ ಆಸ್ತಿ ಪತ್ತೆ
    – 4 ಸೈಟ್, 5 ಮನೆಗಳು, 19 ಎಕರೆ ಕೃಷಿ ಜಮೀನು ಸೇರಿ 5,08,42,000 ರೂ. ಮೌಲ್ಯದ ಸ್ಥಿರ ಆಸ್ತಿ ಪತ್ತೆ
    – 1 ಕೋಟಿ ಮೌಲ್ಯದ ಚಿನ್ನಾಭರಣಗಳು, ವಾಹನ ಸೇರಿ 2,24,08,000 ರೂ. ಚರ ಆಸ್ತಿ ಪತ್ತೆ

    3. ಎನ್. ಕೆ. ಗಂಗಮರಿಗೌಡ, ಸರ್ವೆಯರ್, ಕೆ.ಐ.ಎ.ಡಿ.ಬಿ. ಬೆಂಗಳೂರು
    – ಗಂಗಮರಿಗೌಡಗೆ ಸೇರಿದ ಒಟ್ಟು 5 ಸ್ಥಳಗಳಲ್ಲಿ ಶೋಧನಾ ಕಾರ್ಯ
    – ಗಂಗಮರಿಗೌಡ ಬಳಿ 4,66,55,512 ರೂ. ಮೌಲ್ಯದ ಆಸ್ತಿ ಪತ್ತೆ
    – 2 ನಿವೇಶನಗಳು, 2 ಮನೆ, 2 ಎಕರೆ ಕೃಷಿ ಜಮೀನು ಸೇರಿ 3.58 ಕೋಟಿ ಸ್ಥಿರ ಆಸ್ತಿ ಪತ್ತೆ
    – 1,08,40,000 ರೂ. ಮೌಲ್ಯದ ಚರ ಆಸ್ತಿ ಪತ್ತೆ

    4. ಎನ್. ಚಂದ್ರಶೇಖರ್, ಕೃಷಿ ಸಹಾಯಕ ನಿರ್ದೇಶಕರು, ಹೊಳಲಕೆರೆ, ಚಿತ್ರದುರ್ಗ
    – ಚಂದ್ರಶೇಖರ್ ಗೆ ಸೇರಿದ ಒಟ್ಟು 3 ಸ್ಥಳಗಳಲ್ಲಿ ಲೋಕಾಯುಕ್ತ ರೇಡ್
    – ದಾಳಿ ವೇಳೆ 5,14,15,742 ರೂ. ಮೌಲ್ಯದ ಚರ ಹಾಗೂ ಸ್ಥಿರ ಆಸ್ತಿ ಪತ್ತೆ
    – 4.02 ಕೋಟಿ ಮೌಲ್ಯದ ಸ್ಥಿರ ಆಸ್ತಿಯ ಪತ್ತೆ
    – 1,12,15,742 ರೂ. ಮೌಲ್ಯದ ಚರ ಆಸ್ತಿ ಪತ್ತೆ

    5. ಜಗದೀಶ್ ನಾಯ್ಕ. ಕೆ. ಹೆಚ್. ಸಹಾಯಕ ಅಭಿಯಂತರರು. ಕೆ.ಆರ್.ಐ.ಡಿ.ಎಲ್. ದಾವಣಗೆರೆ
    – ಜಗದೀಶ್‌ಗೆ ಸೇರಿದ ಒಟ್ಟು 5 ಸ್ಥಳಗಳಲ್ಲಿ ಲೋಕಾಯುಕ್ತ ರೇಡ್
    – ಚರ ಹಾಗೂ ಸ್ಥಿರ ಆಸ್ತಿ ಒಟ್ಟು ಮೌಲ್ಯ 2,04,54,125 ರೂ.
    – ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 1,55,71,500 ರೂ.
    – ಚರ ಆಸ್ತಿಯ ಒಟ್ಟು ಮೌಲ್ಯ 48,82,625 ರೂ.

    6. ಬಿ. ಎಸ್. ನಡುವಿನ ಮನೆ, ಕಿರಿಯ ಸಹಾಯಕ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ, ದಾವಣಗೆರೆ
    – ಒಟ್ಟು 7 ಸ್ಥಳಗಳಲ್ಲಿ ಶೋಧನಾ ಕಾರ್ಯ ಮಾಡಿದ್ದ ಲೋಕಾಯುಕ್ತ
    – ಚರ ಆಸ್ತಿ ಹಾಗೂ ಸ್ಥಿರ ಆಸ್ತಿ ಒಟ್ಟು ಮೌಲ್ಯ 2,30,54,684 ರೂ.
    – ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 1,70,79,000 ರೂ.
    – ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ 59,75,684 ರೂ.

    7. ಬಸವೇಶ ಶಿವಪ್ಪ ಶಿಡೆನೂರ, ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿ, ಸವಣೂರು ತಾಲ್ಲೂಕು ಪಂಚಾಯಿತಿ, ಹಾವೇರಿ
    – ಒಟ್ಟು 2 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿದೆ.
    – ಚರ ಆಸ್ತಿ ಹಾಗೂ ಸ್ಥಿರ ಆಸ್ತಿ ಅಂದಾಜು ಮೌಲ್ಯ 1,67,18,729 ರೂ.
    – ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 65,07,000 ರೂ.
    – ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- 1,02,11,729 ರೂ.

    8. ಅಶೋಕ್ ಶಂಕರಪ್ಪ ಅರಳೇಶ್ವರ್, ರಾಜಸ್ವ ನಿರೀಕ್ಷಕರು, ರಾಣಿಬೆನ್ನೂರು ತಾಲ್ಲೂಕು, ಹಾವೇರಿ
    – ಒಟ್ಟು 3 ಸ್ಥಳಗಳಲ್ಲಿ ಶೋಧನಾ ಕಾರ್ಯ
    – ಚರ ಆಸ್ತಿ ಹಾಗೂ ಸ್ಥಿರ ಆಸ್ತಿ ಅಂದಾಜು ಮೌಲ್ಯ- 2,25,96,462 ರೂ.
    – ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 1,26,06,000 ರೂ.
    – ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- 99,90,462 ರೂ.

    9. ಧೂಳಪ್ಪ, ಸಹಾಯಕ ನಿರ್ದೇಶಕರು, ತೋಟಗಾರಿಕೆ ಇಲಾಖೆ, ಔರದ್, ಬೀದರ್ ಜಿಲ್ಲೆ
    – ಒಟ್ಟು 4 ಸ್ಥಳಗಳಲ್ಲಿ ಶೋಧನಾ ಕಾರ್ಯ
    – ಚರ ಆಸ್ತಿ ಹಾಗೂ ಸ್ಥಿರ ಆಸ್ತಿಯ ಒಟ್ಟು ಮೌಲ್ಯ 3,39,35,500 ರೂ.
    – ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ 1,82,87,000 ರೂ.
    – ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- 1,56,48,500 ರೂ.

    10. ಲಕ್ಷ್ಮಿನಾರಾಯಣ.ಪಿ. ನಾಯಕ್, ಆರ್.ಟಿ.ಓ ಉಡುಪಿ
    – ಒಟ್ಟು 5 ಸ್ಥಳಗಳಲ್ಲಿ ಶೋಧನಾ ಕಾರ್ಯ
    – ಒಟ್ಟು ಚರ ಆಸ್ತಿ ಹಾಗೂ ಸ್ಥಿರ ಆಸ್ತಿಯ ಅಂದಾಜು ಮೌಲ್ಯ 2,21,14,234 ರೂ.
    – ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 47,50,000 ರೂ.
    – ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- 1,73,64,234 ರೂ.

    11. ಚೇತನ್, ಕಿರಿಯ ಅಭಿಯಂತರರು ಕೆ.ಬಿ.ಜೆ.ಎನ್.ಎಲ್, ಎ.ಆರ್.ಬಿ.ಸಿ, ವಿಭಾಗ-2, ಕಮಟಗಿ, ಬಾಗಲಕೋಟೆ
    – ಒಟ್ಟು 2 ಸ್ಥಳಗಳಲ್ಲಿ ಶೋಧನಾ ಕಾರ್ಯ
    – ಚರ ಆಸ್ತಿ ಹಾಗೂ ಸ್ಥಿರ ಆಸ್ತಿಯ ಅಂದಾಜು ಮೌಲ್ಯ 1,67,28,741 ರೂ.
    – ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ 1,20,000 ರೂ.
    – ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- 47,28,774 ರೂ.

    12. ಜ್ಯೋತಿ ಮೇರಿ, ಪ್ರಥಮ ದರ್ಜೆ ಸಹಾಯಕರು, ಅಕೌಂಟ್ ಶಾಖೆ, ಆರೋಗ್ಯ ಇಲಾಖೆ, ಹಾಸನ
    – ಒಟ್ಟು 4 ಸ್ಥಳಗಳಲ್ಲಿ ಶೋಧನಾ ಕಾರ್ಯ
    – ಚರ ಆಸ್ತಿ ಹಾಗೂ ಸ್ಥಿರ ಆಸ್ತಿ ಮೌಲ್ಯ 2,17,47,763 ರೂ.
    – ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 1,12,53,425 ರೂ.
    – ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- 1,04,94,338 ರೂ.

  • ಬೆಂಗಳೂರಿನ 1200 ಚದರಡಿ ವ್ಯಾಪ್ತಿ ವಿಸ್ತೀರ್ಣದ ಕಟ್ಟಡಗಳಿಗೆ ಓಸಿ ವಿನಾಯಿತಿ: ಸರ್ಕಾರದಿಂದ ಆದೇಶ ಪ್ರಕಟ

    ಬೆಂಗಳೂರಿನ 1200 ಚದರಡಿ ವ್ಯಾಪ್ತಿ ವಿಸ್ತೀರ್ಣದ ಕಟ್ಟಡಗಳಿಗೆ ಓಸಿ ವಿನಾಯಿತಿ: ಸರ್ಕಾರದಿಂದ ಆದೇಶ ಪ್ರಕಟ

    ಬೆಂಗಳೂರು: ಗ್ರೇಟರ್‌ ಬೆಂಗಳೂರು ಆಡಳಿತ (GBA) ವ್ಯಾಪ್ತಿಯಲ್ಲಿ 1200 ಚದರಡಿ(30*40 ಸೈಟ್‌) ವ್ಯಾಪ್ತಿಯ ವಿಸ್ತೀರ್ಣದಲ್ಲಿ ನಿರ್ಮಾಣಗೊಂಡಿರುವ ಕಟ್ಟಡಗಳಿಗೆ ಸ್ವಾಧೀನಾನುಭವ ಪತ್ರ (Occupational Certificate) ಪಡೆಯುವುದರಿಂದ ವಿನಾಯಿತಿ ನೀಡಿ ರಾಜ್ಯ ಸರ್ಕಾರ (Karnataka Government) ಅಧಿಕೃತ ಆದೇಶ ಪ್ರಕಟಿಸಿದೆ.

    ಅ.9 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿತ್ತು. ಈ ನಿರ್ಧಾರದ ಅನ್ವಯ ಜಿಬಿಎ ವ್ಯಾಪ್ತಿಯ ಐದು ಪಾಲಿಕೆಗಳ 1200 ಚದರ ಅಡಿ ಜಾಗದಲ್ಲಿ ನಿರ್ಮಾಣಗೊಂಡಿರುವ ನೆಲ+2 ಅಂತಸ್ತು ಅಥವಾ ಸ್ಟಿಲ್ಟ್‌(ಬೇಸ್‌ಮೆಂಟ್‌ ಪಾರ್ಕಿಂಗ್‌)+3 ಅಂತಸ್ತುಗಳವರೆಗಿನ ವಸತಿ ಕಟ್ಟಡಗಳಿಗೆ ಓಸಿ ಪಡೆಯುವುದರಿಂದ ವಿನಾಯಿತಿ ನೀಡಿ ಆದೇಶಿಸಿದೆ.  ಇದನ್ನೂ ಓದಿ:  ನೀವು ಬೆಂಗಳೂರಿಗೆ ಹೋದರೆ, ಕನ್ನಡ ಕಲಿಯಿರಿ: ಝೋಹೊ ಸಂಸ್ಥಾಪಕ ಶ್ರೀಧರ್ ವೆಂಬು

     

    ಸುಪ್ರೀಂ ಕೋರ್ಟ್‌ ಆದೇಶದ ಅನ್ವಯ ಎಸ್ಕಾಂಗಳು ವಿದ್ಯುತ್‌ ಸಂಪರ್ಕ ಪಡೆಯಲು ಓಸಿ ಕಡ್ಡಾಯ ಮಾಡಿದ್ದವು. ಆದರೆ ನಕ್ಷೆ ಮಂಜೂರಾತಿ ಇಲ್ಲದೆ ಓಸಿ ನೀಡಲು ಅವಕಾಶವಿರಲಿಲ್ಲ. ಹೀಗಾಗಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ 3.30 ಲಕ್ಷ ಕಟ್ಟಡಗಳು ನಿರ್ಮಾಣ ಪೂರ್ಣಗೊಂಡರೂ ಓಸಿ ಇಲ್ಲದೆ ವಿದ್ಯುತ್‌ ಸಂಪರ್ಕ ನೀಡಿರಲಿಲ್ಲ. ಇದನ್ನೂ ಓದಿ:  ಟ್ರಂಪ್‌ಗೆ ಗೂಗಲ್‌ ಟಕ್ಕರ್‌| ವಿಶಾಖಪಟ್ಟಣದಲ್ಲಿ ಎಐ-ಹಬ್‌ಗಾಗಿ 1500 ಕೋಟಿ ಡಾಲರ್‌ ಹೂಡಿಕೆ, 1 ಲಕ್ಷ ಉದ್ಯೋಗ ಸೃಷ್ಟಿ

    ಈ ಹಿಂದೆಯೇ 1,200 ಚದರ ಅಡಿ ನಿವೇಶನಗಳಿಗೆ ರಾಜ್ಯ ಸರ್ಕಾರ ಓಸಿ ವಿನಾಯಿತಿ ನೀಡಿ ಆದೇಶ ಮಾಡಿತ್ತು. ಈಗ ಮತ್ತಷ್ಟು ಕಾನೂನು ಸಲಹೆ ಪಡೆದುಕೊಂಡು ಸಂಪೂರ್ಣ ಮಾಹಿತಿ ಆಧರಿಸಿ ಓಸಿ ವಿನಾಯಿತಿಗೆ ಸರ್ಕಾರ ಆದೇಶ ಮಾಡಿದೆ. ಮುಂದಿನ ಕ್ಯಾಬಿನೆಟ್ ನಲ್ಲಿ 2,400 ಚದರ ಅಡಿ ನಿವೇಶನಗಳಿಗೆ ವಿನಾಯಿತಿ ಸಿಗುವ ಸಾಧ್ಯತೆಯಿದೆ ಎಂದು ನಗರಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.