Tag: Karnataka Assembly Budget Session

  • ಬಿಜೆಪಿಯದ್ದು ಸಬ್ ಕಾ ವಿಕಾಸ್ ನಹೀ ಹೇ, ಸಬ್ ಕಾ ಸರ್ವ ನಾಶ್ ಹೇ: ಸಿದ್ದರಾಮಯ್ಯ

    ಬಿಜೆಪಿಯದ್ದು ಸಬ್ ಕಾ ವಿಕಾಸ್ ನಹೀ ಹೇ, ಸಬ್ ಕಾ ಸರ್ವ ನಾಶ್ ಹೇ: ಸಿದ್ದರಾಮಯ್ಯ

    ಬೆಂಗಳೂರು: ವಿಧಾನಸಭೆಯಲ್ಲಿ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಜಟಾಪಟಿ ನಡೆಯಿತು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಬಿಜೆಪಿಯಿಂದ ಸಬ್ ಕಾ ವಿಕಾಸ್ ನಹೀ ಹೇ, ಸಬ್ ಕಾ ಸರ್ವ ನಾಶ್ ಹೇ ಎಂದು ವಾಗ್ದಾಳಿ ನಡೆಸಿದರು.

    ವಿಧಾನಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ದೇಶದಲ್ಲಿ ಮತ್ತು ರಾಜ್ಯದಲ್ಲಿ ಬಡತನ ನಿರ್ಮೂಲನೆ ಎಲ್ಲಿ ಆಗಿದೆ? ಸಬ್ ಕಾ ವಿಕಾಸ್ ನಹೀ ಹೇ, ಸಬ್ ಕಾ ಸರ್ವ ನಾಶ್ ಇದು ಎಂದು ಕಿಡಿಕಾರಿದರು. ಈ ವೇಳೆ ಮಧ್ಯಪ್ರವೇಶ ಮಾಡಿದ ಬಸವರಾಜ ಬೊಮ್ಮಾಯಿ, ಗರೀಬಿ ಹಠಾವೋ ಘೋಷಣೆ ಮಾಡಿ ಎಷ್ಟು ವರ್ಷ ಆಯ್ತು, ಗರೀಬಿ ಹಠಾವೋ ಕಹಾ ಹೇ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ನಿಮಗೆಲ್ಲ ಸ್ವಾತಂತ್ರ್ಯ 1947ರಲ್ಲಿ ಸಿಕ್ಕರೆ ನಮಗೆ 1948ರಲ್ಲಿ ಸಿಕ್ಕಿರೋದು: ರಾಜುಗೌಡ ಆಕ್ರೋಶ

    ವಾಜಪೇಯಿ ಕಂಟ್ರಿ ಶೈನಿಂಗ್ ಅಂದ್ರು, ಎಲ್ಲಿ ಶೈನಿಂಗ್ ಆಯ್ತು? ಎಂದು ಸಿದ್ದರಾಮಯ್ಯ ಮರು ಪ್ರಶ್ನಿಸಿದಾಗ ಚತುಷ್ಪಥ ರಸ್ತೆಗಳಲ್ಲಿ ನೀವು ಓಡಾಡ್ತಿಲ್ಲವಾ? ಅದೇ ಶೈನಿಂಗ್ ಎಂದು ಬೊಮ್ಮಾಯಿ ಉತ್ತರಿಸಿದರು. ರಸ್ತೆ ಶೈನಿಂಗ್ ಆಗಿ, ಬಡತನ ಇರೋದು ಶೈನಿಂಗಾ?. ಅಣೆಕಟ್ಟುಗಳನ್ನು ಕಟ್ಟಿದವರು ಯಾರು? ಮೋದಿ ಕಟ್ಟಿದ್ರಾ? ವಾಜಪೇಯಿ ಕಟ್ಟಿದ್ರಾ? ನಮ್ಮ ಕಾಲದಲ್ಲಿ ಆಗಿದ್ದು ಎಂದು ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದರು.

    ಎಲ್ಲವನ್ನೂ ಮಾರಾಟ ಮಾಡಿದವರು ನೀವು ಬಿಜೆಪಿಯವರು, ದೇಶ ಸರ್ವನಾಶ ಮಾಡ್ತಿರೋದು ನೀವು. ಲೂಟಿ ಮಾಡಿದ್ದು ನಿಮ್ಮ ಸಾಧನೆ, ಎಲ್ಲ ಖಾಸಗೀಕರಣ ಮಾಡಿ ಸರ್ವನಾಶ ಮಾಡ್ತಿದ್ದೀರಿ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ವಿಧಾನಸಭೆಗೆ ಕುದುರೆ ಏರಿ ಬಂದ ಕಾಂಗ್ರೆಸ್ ಶಾಸಕಿ ಅಂಬಾ ಪ್ರಸಾದ್

    ಸಾಲ ಆಗುವುದಕ್ಕೆ ಕಾಂಗ್ರೆಸ್ ಕಾರಣ. ಎಲ್ಲವೂ ನಿಮ್ಮ ಕಾಲದಲ್ಲಿಯೇ ಆಗ್ತಿರುವುದು ನಾವು ಏನನ್ನೂ ಮಾರಾಟ ಮಾಡಿಲ್ಲ, ಎಲ್ಲ ಮಾಡಿದ್ದು ನೀವು ಎಂದು ಬಸವರಾಜ ಬೊಮ್ಮಾಯಿ ಗುಡುಗಿದರು. ಈ ಸಂದರ್ಭ ಕಳೆದ ಎರಡು ವರ್ಷಗಳಲ್ಲಿ ನಾಲ್ಕೂವರೆ ಕೋಟಿ ಜನ ಉದ್ಯೋಗ ಕಳೆದುಕೊಂಡಿದ್ದಾರೆ. ಡಬ್ಲೂಎಚ್‍ಓ ಒಪ್ಪಂದ ಮಾಡಿದ್ದು ಯಾರು? ಎಂದು ಸಿದ್ದರಾಮಯ್ಯ, ಬೊಮ್ಮಾಯಿಗೆ ಮತ್ತೆ ಪ್ರಶ್ನೆ ಮಾಡಿದರು.

  • ನಿಮಗೆಲ್ಲ ಸ್ವಾತಂತ್ರ್ಯ 1947ರಲ್ಲಿ ಸಿಕ್ಕರೆ ನಮಗೆ 1948ರಲ್ಲಿ ಸಿಕ್ಕಿರೋದು: ರಾಜುಗೌಡ ಆಕ್ರೋಶ

    ನಿಮಗೆಲ್ಲ ಸ್ವಾತಂತ್ರ್ಯ 1947ರಲ್ಲಿ ಸಿಕ್ಕರೆ ನಮಗೆ 1948ರಲ್ಲಿ ಸಿಕ್ಕಿರೋದು: ರಾಜುಗೌಡ ಆಕ್ರೋಶ

    ಬೆಂಗಳೂರು: ರಾಯಚೂರಿನ ನವೋದಯ ಮೆಡಿಕಲ್ ಕಾಲೇಜಿನಲ್ಲಿ 371ಜೆ ಪ್ರಕಾರ ವಿದ್ಯಾರ್ಥಿಗಳಿಗೆ ಮೀಸಲಾತಿ ನೀಡದ ವಿಚಾರವಾಗಿ ನಿಮಗೆಲ್ಲ ಸ್ವಾತಂತ್ರ್ಯ 1947ರಲ್ಲಿ ಸಿಕ್ಕರೆ ನಮಗೆ 1948ರಲ್ಲಿ ಸಿಕ್ಕಿರೋದು ಎಂದು ವಿಧಾನಸಭೆಯಲ್ಲಿ ಶಾಸಕ ರಾಜುಗೌಡ ಆಕ್ರೋಶ ಹೊರಹಾಕಿದ್ದಾರೆ.

    ರಾಯಚೂರಿನ ನವೋದಯ ಮೆಡಿಕಲ್ ಕಾಲೇಜಿನಲ್ಲಿ 371ಜೆ ಪ್ರಕಾರ ಮೀಸಲಾತಿ ನೀಡದ ವಿಚಾರವಾಗಿ ಶೂನ್ಯವೇಳೆಯಲ್ಲಿ ಶಿವರಾಜ್ ಪಾಟೀಲ್ ಪ್ರಸ್ತಾಪ ಮಾಡಿದರು. ರಾಯಚೂರು ನವೋದಯ ವೈದ್ಯಕೀಯ ಕಾಲೇಜು ಮಂಡಳಿ 371-ಜೆ ಕುತ್ತು ತರುವಂತೆ ನಡೆದುಕೊಂಡಿದೆ. ಹೈದರಾಬಾದ್ ಕರ್ನಾಟಕಕ್ಕೆ ಪ್ರತ್ಯೇಕ ಮೀಸಲಾತಿ ಕೊಡುವುದಕ್ಕೆ ಆಗಲ್ಲ ಎಂದು ಕೋರ್ಟ್‍ನಿಂದ ತಡೆಯಾಜ್ಞೆ ತಂದಿದ್ದಾರೆ. ಹಾಗಾಗಿ ವಿದ್ಯಾರ್ಥಿಗಳ ಹಿತ ಕಾಪಾಡಬೇಕೆಂದು ಆಗ್ರಹಿಸಿದರು. ಈ ವೇಳೆ ಧ್ವನಿಗೂಡಿಸಿದ ಶಾಸಕ ರಾಜುಗೌಡ, ನಿಮಗೆಲ್ಲ ಸ್ವಾತಂತ್ರ್ಯ 1947ರಲ್ಲಿ ಸಿಕ್ಕರೆ ನಮಗೆ 1948ರಲ್ಲಿ ಸಿಕ್ಕಿರೋದು 371ಜೆ ನಮಗೆ ಹೋರಾಟದಿಂದ ಬಂದಿರುವುದು, ಇದನ್ನು ಪಡೆದುಕೊಳ್ಳಲು ಬಲಿದಾನ ಆಗಿದೆ ನಮ್ಮ ಸೌಲಭ್ಯ ತೆಗೆದುಕೊಂಡು ನಮ್ಮ ಮಕ್ಕಳಿಗೆ ಮೀಸಲಾತಿ ಕೊಡಲ್ಲ ಅಂದ್ರೆ ಹೇಗೆ? ಪ್ರಶ್ನಿಸಿದರು. ಇದನ್ನೂ ಓದಿ: ಜನ ಆಡಳಿತ ಪಕ್ಷದಲ್ಲಿ ಏನಾಗ್ತಿದೆ ಅಂತ ನೋಡ್ತಿದ್ದಾರೆ: ಯುಟಿ ಖಾದರ್

    ನಮ್ಮ ಕ್ಷೇತ್ರದಲ್ಲಿ ನಾವು ಜನರ ಮುಂದೆ ಹೇಗೆ ಮುಖ ತೋರಿಸುವುದು? ಸರ್ಕಾರದ ವಕೀಲರು ಕೋರ್ಟ್‍ನಲ್ಲಿ ಸಮರ್ಥವಾಗಿ ವಾದ ಮಂಡನೆ ಮಾಡಬೇಕು. ಈ ಬಗ್ಗೆ ಸದನ ಸಮಿತಿ ರಚನೆ ಮಾಡಿ ಎಂದು ರಾಜುಗೌಡ ಆಗ್ರಹಿಸಿದರು.  ಇದನ್ನೂ ಓದಿ: ಫಲಿತಾಂಶಕ್ಕೂ ಮೊದಲೇ ಕಾಂಗ್ರೆಸ್ ಹೈಕಮಾಂಡ್‍ನಿಂದ ಡಿಕೆಶಿಗೆ ಟಾಸ್ಕ್

    ಇದಕ್ಕೆ ಉತ್ತರಿಸಿದ ಸಚಿವ ಡಾ.ಸುಧಾಕರ್, ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದೆ. ಈಗಾಗಲೇ ವಿಧ್ಯಾರ್ಥಿಗಳು ಪ್ರತಿಭಟನೆ ಮಾಡಿದ ಬಳಿಕ ಪ್ರವೇಶಾತಿ ಮಾಡಿಸಿಕೊಂಡಿದ್ದಾರೆ. ಇಂದು ಕೋರ್ಟ್‍ಲ್ಲಿ ಕೇಸ್ ಸಹ ಇದೆ. ಅಡ್ವೋಕೇಟ್ ಜನರಲ್ ಖುದ್ದು ಇಂದು ಕೋರ್ಟ್‍ಲ್ಲಿ ಇದ್ದಾರೆ. ಯಾವುದೇ ಕಾರಣಕ್ಕೂ ಹೈದ್ರಾಬಾದ್ ಕರ್ನಾಟಕಕ್ಕೆ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಸದನಕ್ಕೆ ಭರವಸೆ ನೀಡಿದರು.