Tag: Karnataka Band

  • ಒಂದು ದಿನದ ಬಂದ್ ಮಾಡಿದ್ರೆ ತಪ್ಪೇನು ಆಗಲ್ಲ: ಎಚ್‍ಕೆ ಕುಮಾರಸ್ವಾಮಿ

    ಒಂದು ದಿನದ ಬಂದ್ ಮಾಡಿದ್ರೆ ತಪ್ಪೇನು ಆಗಲ್ಲ: ಎಚ್‍ಕೆ ಕುಮಾರಸ್ವಾಮಿ

    – ಬಂದ್‍ನಿಂದ ಕನ್ನಡಿಗರಿಗೆ ಕಷ್ಟ ಆಗುತ್ತದೆ ಎಂದಿದ್ದ ಎಚ್‍ಡಿಕೆ
    – ಮಹಾರಾಷ್ಟ್ರಕ್ಕೆ ಎಚ್ಚರಿಕೆ ಕೊಡುವ ದೃಷ್ಟಿಯಿಂದ ಬಂದ್ ಅಗತ್ಯವಿದೆ

    ಹಾಸನ: ಮಾಜಿ ಸಿಎಂ ಕುಮಾರಸ್ವಾಮಿ ಬಂದ್‍ನಿಂದ ಕನ್ನಡಿಗರಿಗೆ ಕಷ್ಟ ಆಗುತ್ತದೆ ಎಂದು ಹೇಳಿದರೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಒಂದು ದಿನ ತೀವ್ರ ತರವಾದ ಬಂದ್ ಮಾಡಿದರೆ ತಪ್ಪೇನು ಆಗಲ್ಲ ಎಂದು ಹೇಳುವ ಮೂಲಕ ಕರ್ನಾಟಕ ಬಂದ್‍ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

    ಡಿ.31 ಕರ್ನಾಟಕ ಬಂದ್ ಹಿನ್ನೆಲೆ ಪ್ರತಿಕ್ರಿಯಿಸಿದ ಅವರು, ಕನ್ನಡಪರ ಚಳುವಳಿಗಾರರು ಬಂದ್‍ಗೆ ಕರೆ ಕೊಟ್ಟಿದ್ದಾರೆ. ಅದು ಒಂದು ದಿನ ತೀವ್ರ ತರವಾದ ಬಂದ್ ಮಾಡಿದರೆ ತಪ್ಪೇನು ಆಗಲ್ಲ. ಏಕೆಂದರೆ ನಾವು ಪ್ರತಿದಿನ ಏನು ಬಂದ್ ಮಾಡಲ್ಲ ಎಂದು ಉತ್ತರಿಸಿದ ಅವರು, ಎಂಇಎಸ್, ಮಹಾರಾಷ್ಟ್ರಕ್ಕೆ ಎಚ್ಚರಿಕೆ ಕೊಡುವ ದೃಷ್ಟಿಯಿಂದ ಬಂದ್ ಅಗತ್ಯವಿದೆ. ಬಂದ್‍ಗೆ ಜೆಡಿಎಸ್ ಬೆಂಬಲವಿದೆ ಎಂದು ತಿಳಿಸಿದರು. ಇದನ್ನೂ ಓದಿ: ಡಿಸೆಂಬರ್ 31ರ ಕರ್ನಾಟಕ ಬಂದ್ ಗೆ ಬೆಳಗಾವಿಯಲ್ಲೇ ಬೆಂಬಲ ಇಲ್ಲ: ಅಶೋಕ್ ಚಂದರಗಿ

    ಶನಿವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಎಚ್‍ಡಿಕೆ, ಡಿ. 31ಕ್ಕೆ ಕರ್ನಾಟಕ ಬಂದ್ ಮಾಡುವುದಕ್ಕೆ ವಿವಿಧ ಸಂಘಟನೆಗಳು ಕರೆ ನೀಡಿದೆ. ಈ ಬಂದ್ ಕರೆಯಿಂದ ಮಹಾರಾಷ್ಟ್ರಕ್ಕೆ ತೊಂದರೆ ಇಲ್ಲ. ರಾಜ್ಯದ ಜನರಿಗೆ ತೊಂದರೆ ಆಗುತ್ತದೆ. ಸಣ್ಣಪುಟ್ಟ ವ್ಯಾಪಾರಿಗಳಿಗೆ, ಕೂಲಿ ಕೆಲಸದವರಿಗೆ ಆಗುವ ಕಷ್ಟದ ಬಗ್ಗೆ ಚಿಂತಿಸಬೇಕು. ಬಂದ್‍ಗೆ ಕರೆ ನೀಡಿದವರು ಕೂಡ ಈ ಬಗ್ಗೆ ಯೋಚಿಸಬೇಕು ಎಂದಿದ್ದರು.

    ಡಿ.28 ರಿಂದ ಹತ್ತು ದಿನಗಳ ಕಾಲ ರಾಜ್ಯದಲ್ಲಿ ನೈಟ್ ಕಫ್ರ್ಯೂ ಜಾರಿ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಎಚ್‍ಕೆ ಕುಮಾರಸ್ವಾಮಿ, ಜನರು ಇನ್ನೂ ಕೂಡ ಜಾಗೃತರಾಗಿಲ್ಲ. ಕೊರೊನಾ ಅನೇಕ ರೂಪಾಂತರಿಗಳನ್ನು ಹೊಂದಿದೆ. ಈಗ ಓಮಿಕ್ರಾನ್ ಬಂದಿದ್ದು, ಹೆಚ್ಚಾಗುತ್ತಿದೆ. ಸರ್ಕಾರದ ಕಾನೂನುಗಳನ್ನು ಜನರು ಪಾಲಿಸಬೇಕು. ಒಂದಿಷ್ಟು ಜನ ಸೇರಬಹುದು ಎಂದು ಮಾಡಿರುವುದು ತಪ್ಪು. ಮೊದಲಿನಂತೆ ಬಿಗಿಯಾಗಬೇಕು. ಜನರ ದಿನಚರಿಗೆ ತೊಂದರೆಯಾಗದಂತೆ ನಿಯಮಗಳನ್ನು ತರಬೇಕು ಎಂದರು. ಇದನ್ನೂ ಓದಿ: ಕರ್ನಾಟಕ ಬಂದ್‌ನಿಂದ ಕನ್ನಡಿಗರಿಗೆ ಕಷ್ಟ: ಎಚ್‌ಡಿಕೆ

    ಮತಾಂತರ ನಿಷೇಧ ಕಾಯ್ದೆ ವಿಚಾರವಾಗಿ ಅವರು, ಮತಾಂತರ ನಿಷೇಧ ಕಾಯ್ದೆಯನ್ನು ವಿರೋಧ ಮಾಡಿದ್ದೇವೆ. ದೇಶದಲ್ಲಿ ಎಲ್ಲರೂ ಕೂಡ ಒಂದೇ, ಯಾವುದೇ ಧರ್ಮ ಅನುಸರಿಸಲಿ ಎಲ್ಲ ಕೂಡ ಒಂದೇ. ಮಹಾತ್ಮ, ಬಾಬಾ ಸಾಹೇಬ್ ಅಂಬೇಡ್ಕರ್ ಅವರೇ ಮತಾಂತರವಾಗಿದ್ರು. ಅದು ಅವರವರ ಇಚ್ಛೇ. ಆದರೆ ಬಲವಂತದ ಮತಾಂತರಕ್ಕೆ ನಮ್ಮ ವಿರೋಧವಿದೆ. ಈಗಾಗಲೇ ಸಂವಿಧಾನದಲ್ಲಿ ಅವಕಾಶವಿದೆ, ಆದ್ದರಿಂದ ಇವೆಲ್ಲವನ್ನೂ ತರುವ ಅಗತ್ಯವಿಲ್ಲ. ಭಾವನಾತ್ಮಕ ವಿಚಾರಗಳನ್ನು ತಂದು ಪಕ್ಷಕ್ಕೆ ಅನೂಕೂಲ ಮಾಡಿಕೊಳ್ಳುವ ದೃಷ್ಟಿಯಿಂದ ಬಿಜೆಪಿ ಸರ್ಕಾರ ಈ ರೀತಿ ಮಾಡಿದೆ. ನಾವು ವಿರೋಧ ಮಾಡಿದ್ದೀವಿ, ಕಾಂಗ್ರೆಸ್ ವಿರೋಧ ಮಾಡಿದೆ, ಜನಸಾಮಾನ್ಯರು ವಿರೋಧ ಮಾಡಿದ್ದಾರೆ ಎಂದು ಹೇಳಿದರು.

  • ಡಿಸೆಂಬರ್ 31ರ ಕರ್ನಾಟಕ ಬಂದ್ ಗೆ ಬೆಳಗಾವಿಯಲ್ಲೇ ಬೆಂಬಲ ಇಲ್ಲ: ಅಶೋಕ್ ಚಂದರಗಿ

    ಡಿಸೆಂಬರ್ 31ರ ಕರ್ನಾಟಕ ಬಂದ್ ಗೆ ಬೆಳಗಾವಿಯಲ್ಲೇ ಬೆಂಬಲ ಇಲ್ಲ: ಅಶೋಕ್ ಚಂದರಗಿ

    ಬೆಳಗಾವಿ: ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಡಿ.31 ರಂದು ಕರ್ನಾಟಕ ಬಂದ್ ಗೆ ಕರೆ ವಿಚಾರವಾಗಿ, ಬಂದ್ ಬೆಂಬಲಿಸದಿರಲು ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ನಿರ್ಧರಿಸಿದೆ ಎಂದು ಕನ್ನಡ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ್ ಚಂದರಗಿ ತಿಳಿಸಿದರು.

    ಬಂದ್ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಸಂಬಂಧ ಮಂಗಳವಾರದಂದು ಬೆಳಗಾವಿ ಜಿಲ್ಲಾ ಕನ್ನಡಪರ ಸಂಘಟನೆಗಳು ಸಭೆ ನಡೆಸಲಿವೆ ಎಂದು ತಿಳಿಸಿ ವಾಟಾಳ್ ನಾಗರಾಜ್ ನಿರ್ಧಾರಕ್ಕೆ ಅಸಮಾಧಾನ ಹೊರಹಾಕಿದರು. ಇದನ್ನೂ ಓದಿ: ಅಂಕಲ್ ಅಂದಿದ್ದೆ ತಪ್ಪಾಯ್ತು – ಯುವತಿಗೆ ಹಿಗ್ಗಾಮುಗ್ಗಾ ಥಳಿಸಿದ ಅಂಗಡಿ ಮಾಲೀಕ

    ಎಂಇಎಸ್ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿ ಕಠೋರ ಮತ್ತು ಐತಿಹಾಸಿಕ ನಿರ್ಧಾರ ಕೈಗೊಂಡಿದ್ದಾರೆ. ದೇಶದ್ರೋಹ, ಗೂಂಡಾ ಕಾಯ್ದೆ ಕ್ರಮ ಕೈಗೊಂಡಿದ್ದಾರೆ. ಈ ಹಿಂದೆ ಸಾಮಾನ್ಯ ಐಪಿಸಿ ಸೆಕ್ಷನ್ ಅಡಿ ಕೇಸ್ ಹಾಕ್ತಿದ್ರು. ಅವರು ಜಾಮೀನು ಪಡೀತಿದ್ರು, ಈಗ ಎಷ್ಟೋ ಎಂಇಎಸ್ ಗೂಂಡಾಗಳು ಹೆದರಿ ಊರು ಬಿಟ್ಟಿದ್ದಾರೆ ಎಂದು ತಿಳಿಸಿದರು.


    ಎಂಇಎಸ್ ನಿಷೇಧಿಸಲು ಕಾನೂನು ರೀತಿ ಕ್ರಮ ಕೈಗೊಳ್ಳಬೇಕಿದೆ. ವಾಟಾಳ್ ನಾಗರಾಜ್ ಅವರು ಬೆಂಗಳೂರಿನಲ್ಲಿ ಕುಳಿತು ಕರ್ನಾಟಕ ಬಂದ್ ಅಂದರೆ ಹೇಗೆ? ಇದರಿಂದ ಜನ ಸಾಮಾನ್ಯರಿಗೆ ತೊಂದರೆ ಆಗುತ್ತದೆ. ಕೋವಿಡ್‍ನಿಂದ ಜನ ಸಾಕಷ್ಟು ಸಂಕಷ್ಟದಲ್ಲಿದ್ದಾರೆ. ಹೀಗಾಗಿ ನಾವು ಕರ್ನಾಟಕ ಬಂದ್ ಒಪೋದಿಲ್ಲ ಎಂದು ವಿರೋಧ ವ್ಯಕ್ತಪಡಿಸಿದರು. ಇದನ್ನೂ ಓದಿ:  ತನ್ನ ಬರ್ತ್‌ಡೇ ಪಾರ್ಟಿ ಸಿದ್ಧತೆಗೆ ಫಾರ್ಮ್‌ಹೌಸ್‌ಗೆ ಹೋಗಿದ್ದ ಸಲ್ಲುಗೆ ಹಾವು ಕಡಿತ!

    ರಾಜ್ಯದ 38 ಸಂಸದರು ಎಂಇಎಸ್ ವಿರುದ್ಧ ಕ್ರಮಕ್ಕೆ ಕೇಂದ್ರ ಸರ್ಕಾರವನ್ನು ಆಗ್ರಹಿಸಬೇಕು. ಇಲ್ಲವಾದ್ರೆ ಮುಂದಿನ ದಿನಗಳಲ್ಲಿ ಸಂಸದರ ಮನೆ, ಕಚೇರಿ ಎದುರು ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

  • ಕರ್ನಾಟಕ ಬಂದ್‌ನಿಂದ ಕನ್ನಡಿಗರಿಗೆ ಕಷ್ಟ: ಎಚ್‌ಡಿಕೆ

    ಕರ್ನಾಟಕ ಬಂದ್‌ನಿಂದ ಕನ್ನಡಿಗರಿಗೆ ಕಷ್ಟ: ಎಚ್‌ಡಿಕೆ

    ರಾಮನಗರ: ಬೆಳಗಾವಿಯಲ್ಲಿ ಪುಂಡಾಟಿಕೆ ನಡೆಸಿದ ಎಂಇಎಸ್ ಸಂಘಟನೆ ನಿಷೇಧಕ್ಕೆ ವಿವಿಧ ಸಂಘಟನೆಗಳು ಕರೆ ನೀಡಿದ ಕರ್ನಾಟಕ ಬಂದ್‌ನಿಂದ ರಾಜ್ಯದ ಜನತೆಗೆ ತೊಂದರೆ ಆಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ. 31ಕ್ಕೆ ಕರ್ನಾಟಕ ಬಂದ್ ಮಾಡುವುದಕ್ಕೆ ವಿವಿಧ ಸಂಘಟನೆಗಳು ಕರೆ ನೀಡಿದೆ. ಈ ಬಂದ್ ಕರೆಯಿಂದ ಮಹಾರಾಷ್ಟ್ರಕ್ಕೆ ತೊಂದರೆ ಇಲ್ಲ. ರಾಜ್ಯದ ಜನರಿಗೆ ತೊಂದರೆ ಆಗುತ್ತದೆ ಎಂದು ತಿಳಿಸಿದರು.

    ಎಂಇಎಸ್ ಸೇರಿದಂತೆ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ರಾಜ್ಯ ಸರಕಾರ ಮುಲಾಜಿಲ್ಲದೆ ಮುಂದಾಗಬೇಕು. ಕಠಿಣ ಕ್ರಮ ತೆಗೆದುಕೊಳ್ಳುವುದು ಸರ್ಕಾರದ ಜವಾಬ್ದಾರಿಯಾಗಿದೆ. ಆದ್ದರಿಂದ ಕಾನೂನು ವ್ಯಾಪ್ತಿಯಲ್ಲಿ ಕ್ರಮಕ್ಕೆ ಸರ್ಕಾರ ಮೀನಮೇಷ ಇಲ್ಲದೇ ಮುಂದಾಗಬೇಕು. ಬಂದ್ ಘೋಷಣೆಯಿಂದ ನಮ್ಮ ಜನರಿಗೆ ತೊಂದರೆ ಆಗುತ್ತದೆ. ಸಣ್ಣಪುಟ್ಟ ವ್ಯಾಪಾರಿಗಳಿಗೆ, ಕೂಲಿ ಕೆಲಸದವರಿಗೆ ಆಗುವ ಕಷ್ಟದ ಬಗ್ಗೆ ಚಿಂತಿಸಬೇಕು. ಬಂದ್‌ಗೆ ಕರೆ ನೀಡಿದವರು ಕೂಡ ಈ ಬಗ್ಗೆ ಯೋಚಿಸಬೇಕು ಎಂದರು.

    ಬಂದ್‌ನಿಂದ ಕನ್ನಡಿಗರಿಗೆ ಬಹಳ ಅನಾನುಕೂಲವೇ ಆಗುತ್ತದೆ. ಹೋರಾಟಗಾರರು ಸರ್ಕಾರದ ಮೇಲೆ ಒತ್ತಡ ಹೇರಬೇಕು. ಕನ್ನಡ ದ್ರೋಹಿಗಳನ್ನು ಹತ್ತಿಕ್ಕಲು ಏನು ಬೇಕೋ ಆ ಕ್ರಮ ಕೈಗೊಳ್ಳಲು ಒತ್ತಡ ಹೇರಬೇಕು ಎಂದು ಸಲಹೆ ಮಾಡಿದರು.

    ಎಂಇಎಸ್ ಸಂಘಟನೆಯನ್ನು ಕಾನೂನಾತ್ಮಕವಾಗಿ ನಿಷೇಧ ಮಾಡಬೇಕು. ಸರಿಯಾದ ತೀರ್ಮಾನ ಮಾಡಬೇಕು. ಕೋರ್ಟ್ ಗೆ ಹೋಗಿ ತಡೆ ತರುವಂತೆ ನಿಷೇಧ ಹೇರಬಾರದು. ಸರ್ಕಾರ ಈ ಬಗ್ಗೆ ಯೋಚಿಸಿ ತೀರ್ಮಾನ ತೆಗೆದುಕೊಳ್ಳಲಿ ಎಂದು ಅವರು ಸರಕಾರಕ್ಕೆ ಕಿವಿಮಾತು ಹೇಳಿದರು. ಇದನ್ನೂ ಓದಿ: ಜಾತ್ರೆ ಮಾಡೋಕೆ ಅಧಿವೇಶನ ಮಾಡುವುದು ಬೇಡ: ಯತ್ನಾಳ್

    ಪಕ್ಷದ ಯುವ ಜನತಾದಳದ ಅಧ್ಯಕ್ಷರಾದ ನಿಖಿಲ್ ಸಹ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಬಂದ್‌ನಿಂದ ಏನು ಪ್ರಯೋಜನ ಎಂದು ಪ್ರಶ್ನೆ ಮಾಡಿದ್ದಾರೆ. ಹೋರಾಟಗಾರರು ಒಮ್ಮೆ ಈ ಬಗ್ಗೆ ಆಲೋಚನೆ ಮಾಡಲಿ ಎಂದರು.

    ಬೆಳಗಾವಿ ಕಲಾಪ ವ್ಯರ್ಥವಾಗಿದೆ: ನಾಡಿನ ಜನ ಎದುರಿಸುತ್ತಿರುವ ಸಮಸ್ಯೆಗಳು ಸೇರಿದಂತೆ ಉತ್ತರ ಕರ್ನಾಟಕದ ಜನ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಚರ್ಚೆ ನಡೆಯಲಿಲ್ಲ. ಸದನ ಕಲಾಪವನ್ನು ಸಂಪೂರ್ಣ ವ್ಯರ್ಥ ಮಾಡಿದ್ದಾರೆ. ಅದರಲ್ಲೂ ಮೊದಲ 5 ದಿನದ ಕಲಾಪ ಸಂಪೂರ್ಣ ವ್ಯರ್ಥವಾಗಿದೆ ಎಂದು ಕಿಡಿ ಕಾರಿದರು. ಇದನ್ನೂ ಓದಿ: ಕರ್ನಾಟಕದಲ್ಲಿ ಮತ್ತೆ ನೈಟ್ ಕರ್ಫ್ಯೂಗೆ ಚಿಂತನೆ

    ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಿಲ್ಲ. ಉತ್ತರ ಕರ್ನಾಟಕ ಸಮಸ್ಯೆ ಬಗ್ಗೆಯೂ ಚರ್ಚಿಸಿಲ್ಲ. ಸಂಡೂರು ತಹಶೀಲ್ದಾರ್, ಬೈರತಿ ಬಸವರಾಜ್ ಪ್ರಕರಣಗಳ ಬಗ್ಗೆ ವೃಥಾ ಚರ್ಚೆ ನಡೆಸಿದ್ದಾರೆ. ಯಾವುದಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿತ್ತೋ ಅದಕ್ಕೆ ಪ್ರಾರಂಭಿಕ ಹಂತದಲ್ಲಿ ನೀಡಿಲ್ಲ. ಕೊನೆಯ ಎರಡು ದಿನವೆಂದು ಆಗ ಕೂಡ ಸರಿಯಾದ ಚರ್ಚೆ ನಡೆಯಲಿಲ್ಲ. ಇದನ್ನೂ ಓದಿ: ವಾಜಪೇಯಿ ಜನ್ಮ ದಿನಾಚರಣೆ ಆಚರಿಸಿದ ರಮೇಶ್ ಜಾರಕಿಹೊಳಿ

    ಸರ್ಕಾರದವರು ಕೊನೆಯಲ್ಲಿ ಮತಾಂತರ ವಿಚಾರ ತಂದರು. ಸದನದ ಕಲಾಪ ನಡೆಯಬೇಕೆಂಬ ಆಶಯ ಈಡೇರಲಿಲ್ಲ. ಕೆಲವರು ಈ ನಿಟ್ಟಿನಲ್ಲಿ ಯೋಚಿಸುತ್ತಾರೆ. ಆದರೆ ಅವರ ಆಶಯ ಈಡೇರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ:  ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘಕ್ಕೆ ಸಂಪೂರ್ಣ ಸಹಕಾರ ನೀಡುವೆ: ಸಿಎಂ

  • ಬಂದ್‍ಗೆ ಕೈಜೋಡಿಸದಿದ್ರೆ ನಟರ ಮನೆ ಮುಂದೆಯೇ ಪ್ರತಿಭಟನೆ ಮಾಡ್ತೇವೆ – ಕನ್ನಡ ಹೋರಾಟಗಾರರು

    ಬಂದ್‍ಗೆ ಕೈಜೋಡಿಸದಿದ್ರೆ ನಟರ ಮನೆ ಮುಂದೆಯೇ ಪ್ರತಿಭಟನೆ ಮಾಡ್ತೇವೆ – ಕನ್ನಡ ಹೋರಾಟಗಾರರು

    ಬೆಂಗಳೂರು: ಕನ್ನಡ ಪರ ಹೋರಾಟಕ್ಕೆ ಕೈಜೋಡಿಸದೇ ಇದ್ದರೆ ನಿಮ್ಮ ಮನೆಗಳ ಮುಂದೆಯೇ ಪ್ರತಿಭಟನೆ ಮಾಡುತ್ತೇವೆ ಎಂದು ಕರುನಾಡ ಸೇನೆ ರಾಜ್ಯಾಧ್ಯಕ್ಷ ಕುಮಾರ್ ಹೇಳಿದ್ದಾರೆ.

    ಕರ್ನಾಟಕ ಬಂದ್‍ಗೆ ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿ ನೈತಿಕ ಬೆಂಬಲ ನೀಡಿರುವುದನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳು ಚಲನಚಿತ್ರ ವಾಣಿಜ್ಯ ಮಂಡಳಿ ವಿರುದ್ಧ ತಿರುಗಿ ಬಿದ್ದಿವೆ.

    ಈ ಬಗ್ಗೆ ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ ಕರುನಾಡ ಸೇನೆ ರಾಜ್ಯಾಧ್ಯಕ್ಷ ಕುಮಾರ್, ಡಿಸೆಂಬರ್ 31ರ ಕರ್ನಾಟಕ ಬಂದ್‍ಗೆ ನಮಗೆ ನೈತಿಕ ಬೆಂಬಲ ಬೇಡ, ಬಾಹ್ಯ ಬೆಂಬಲ ನೀಡಿ. ಕೊರೊನಾ ಬಂದಾಗ ತಿಂಗಳುಗಳ ಗಟ್ಟಲೆ ಎಲ್ಲವನ್ನು ಬಂದ್ ಮಾಡಿದ್ದೀರಾ. ಈಗ ಒಂದು ದಿನ ನಡೆಯುವ ಬಂದ್ ನಿಂದ ಆಗುವ ನಷ್ಟದ ಬಗ್ಗೆ ಮಾತನಾಡುತ್ತಿದ್ದೀರಾ. ಚಿತ್ರರಂಗಕ್ಕಾಗಿ ಬಂದ್ ಮುಂಚಿತವಾಗಿ ಮಾಡಲು ಸಾಧ್ಯವಿಲ್ಲ. ಹೇಳಿಕೆಯಂತೆ ಡಿಸೆಂಬರ್ 31 ಕ್ಕೆ ಬಂದ್ ಮಾಡಲಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಬಳ್ಳಾರಿಯಲ್ಲಿ ಸರಣಿ ಸರಕಳ್ಳತನ – ತಾಯಿ, ಮಗಳು ಬಂಧನ

    ಚಿತ್ರರಂಗದವರೇ ಒಂದು ದಿನ ಚಿತ್ರ ಬಿಡುಗಡೆ ಮುಂದೂಡಲಿ. ರಾಜ್ಯ, ಭಾಷೆ ಅಂತ ಬಂದಾಗ ಈ ರೀತಿ ನಡೆದುಕೊಳ್ಳುವುದು ಸರಿಯಲ್ಲ. ಚಿತ್ರ ನಟರು, ಪದಾಧಿಕಾರಿಗಳು ಕನ್ನಡ ಪರ ಹೋರಾಟಕ್ಕೆ ಕೈಜೋಡಿಸದೇ ಇದ್ದರೆ ನಿಮ್ಮ ಮನೆಗಳ ಮುಂದೆಯೇ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ವಾಹನವನ್ನು ಓವರ್ ಟೇಕ್ ಮಾಡಿದ್ದಕ್ಕೆ ಕೆಎಸ್‌ಆರ್‌ಟಿಸಿ ಚಾಲಕ, ಕಂಡಕ್ಟರ್ ಮೇಲೆ ಹಲ್ಲೆ!

  • ನಾಡು, ನುಡಿ ವಿಚಾರಕ್ಕೆ ಬಂದ್ರೆ ನಾನು ಜೊತೆಯಾಗಿರುತ್ತೇನೆ: ನಿಖಿಲ್ ಕುಮಾರಸ್ವಾಮಿ

    ನಾಡು, ನುಡಿ ವಿಚಾರಕ್ಕೆ ಬಂದ್ರೆ ನಾನು ಜೊತೆಯಾಗಿರುತ್ತೇನೆ: ನಿಖಿಲ್ ಕುಮಾರಸ್ವಾಮಿ

    ಬೆಂಗಳೂರು: ನಾಡು-ನುಡಿ ವಿಚಾರಕ್ಕೆ ಸಂಬಂಧಿಸಿದ ವಿಷಯಕ್ಕೆ ನಾನು ಜೊತೆಯಾಗಿರುತ್ತೇನೆ ಎಂದು ಸ್ಯಾಂಡಲ್‌ವುಡ್ ಯುವರಾಜ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

    ಕನ್ನಡಿಗರನ್ನು ಕೆಣಕಿದ ಎಂಇಎಸ್ ಪುಂಡರ ಕೃತ್ಯವನ್ನು ಖಂಡಿಸಿ ಕನ್ನಡಪರ ಸಂಘಟನೆಗಳು ಡಿಸೆಂಬರ್ 31 ರಂದು ಕರ್ನಾಟಕ ಬಂದ್‍ಗೆ ಕರೆ ನೀಡಿದ್ದು, ಈ ಬಂದ್‍ಗೆ ಸ್ಯಾಂಡಲ್‍ವುಡ್ ನಟ, ನಟಿಯರು ಸಹ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.

    ಈ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಅವರು, ಕನ್ನಡಪರ ಸಂಘಟನೆಗಳು ಕರೆ ಕೊಟ್ಟಿರುವ ಬಂದ್‍ಗೆ ನನ್ನ ಬೆಂಬಲವಿದೆ. ನಾಡು-ನುಡಿ ವಿಚಾರಕ್ಕೆ ಸಂಬಂಧಿಸಿದ ವಿಷಯಕ್ಕೆ ನಾನು ಜೊತೆಯಾಗಿರುತ್ತೇನೆ. ಆ ಘಟನೆಗಳು ಮತ್ತೆ ಮರುಕಳಿಸದಂತೆ ಸರ್ಕಾರ ನೋಡಿಕೊಳ್ಳಬೇಕು. ಚಿತ್ರರಂಗ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ. ಒಂದು ದಿನ ಬಂದ್ ಮಾಡುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಆದರೆ ಬಂದ್ ಮಾಡುವುದಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನನ್ನ ನೃತ್ಯಕ್ಕೆ ಸ್ಪೂರ್ತಿ ಪುನೀತ್ ರಾಜಕುಮಾರ್: ನಿಖಿಲ್ ಕುಮಾರಸ್ವಾಮಿ

    ಮತ್ತೊಂದೆಡೆ ಡಿಂಪಲ್ ಕ್ವೀನ್ ರಚಿತಾ ರಾಮ್, ನಮ್ಮ ರಾಜ್ಯಕ್ಕಾಗಿ ಒಳ್ಳೆ ಉದ್ದೇಶದಿಂದ ಮಾಡುವ ಬಂದ್‍ಗೆ ನನ್ನ ಬೆಂಬಲವಿದೆ. ನನ್ನ ಸಿನಿಮಾ ರಿಲೀಸ್ ಕೂಡ ಮುಂದೂಡಿದರು ಸಮಸ್ಯೆಯಿಲ್ಲ. ಪದೇ ಪದೇ ಕನ್ನಡಿಗರ ಮೇಲೆ ಆಗುತ್ತಿರುವ ಅನ್ಯಾಯ ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

    ಈ ಮುನ್ನ ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಅವರು, ನಾನು ಹುಟ್ಟಿದ್ದು ಚೆನ್ನೈನಲ್ಲಿ. ತಮಿಳನ್ನು ಮೂರನೇ ಭಾಷೆಯಾಗಿ ಕಲಿತಿದ್ದೇನೆ. ತಮಿಳು ಸ್ನೇಹಿತರ ಜೊತೆ ತಮಿಳಿನಲ್ಲಿ ಮಾತನಾಡುತ್ತೇನೆ. ತಮಿಳು, ತೆಲುಗು, ಮಲಯಾಳಂ, ಹಿಂದಿ, ಗುಜರಾತಿ, ಪಂಜಾಬಿ, ಮರಾಠಿ ಸೇರಿದಂತೆ ಎಲ್ಲ ಭಾಷೆಯ ಸಿನಿಮಾ ನೋಡುತ್ತೇನೆ. ಕರ್ನಾಟಕದಲ್ಲಿ ಇದ್ದಾಗ ಕನ್ನಡವನ್ನು ಪ್ರೀತಿಸಬೇಕು. ನಮ್ಮ ಮೇಲೆ ದಬ್ಬಾಳಿಕೆ ಮಾಡಬೇಡಿ. ನಾವು ಸುಮ್ಮನಿದ್ದೇವೆ ಎಂದರೆ ನಮಗೆ ಶಕ್ತಿ ಇಲ್ಲ ಅಂತ ಅಲ್ಲ. ಮನುಷ್ಯನಿಗೆ ಕೋಪ ಬಂದರೆ ಯಾವ ಮಟ್ಟಕ್ಕೆ ಬೇಕಾದರೂ ಹೋಗುತ್ತದೆ. ಸರ್ಕಾರದವರು ಇದಕ್ಕಾಗಿ ಫೈಟ್ ಮಾಡಬೇಕು. ಕನ್ನಡಕ್ಕಾಗಿ ಪ್ರಾಣ ನೀಡಲು ಸಹ ಸಿದ್ಧನಾಗಿದ್ದೇನೆ ಎಂದು ಹೇಳಿದ್ದರು. ಇದನ್ನೂ ಓದಿ: ಹೆರಿಗೆ ನಂತರ ತೂಕ ಇಳಿಸಿಕೊಳ್ಳೋದು ಸುಲಭ ಅಲ್ಲ: ಯುವರತ್ನ ನಟಿ

  • ಕರ್ನಾಟಕ ಬಂದ್‍ಗೆ ನೈತಿಕತೆ ಬೆಂಬಲ ಕೊಡಿ: ಕೋಡಿಹಳ್ಳಿ ಚಂದ್ರಶೇಖರ್

    ಕರ್ನಾಟಕ ಬಂದ್‍ಗೆ ನೈತಿಕತೆ ಬೆಂಬಲ ಕೊಡಿ: ಕೋಡಿಹಳ್ಳಿ ಚಂದ್ರಶೇಖರ್

    ಬೆಂಗಳೂರು: ಸೋಮವಾರ ಭಾರತ್ ಬಂದ್‍ಗೆ ರೈತ ಸಂಘಟನೆಗಳು ಕರೆ ನೀಡಿದೆ. ಕೇಂದ್ರ ಸರ್ಕಾರದ ಖಾಸಗೀಕರಣದ ನೀತಿ ರೈತರಿಗೆ ಮಾತ್ರವಲ್ಲ ಇಡೀ ಭಾರತೀಯರಿಗೆ ಅನ್ಯಾಯವಾಗಲಿದೆ ಎಂದು ಆರೋಪಿಸಿ ಭಾರತ್ ಬಂದ್ ನಡೆಯುತ್ತಿದೆ. ಇದನ್ನೂ ಓದಿ: ಖಾದಿ ಉತ್ಪನ್ನ ಖರೀದಿಸುವಂತೆ ಮುಖ್ಯಮಂತ್ರಿ, ಸಚಿವರು, ಶಾಸಕರಿಗೆ ಎಂಟಿಬಿ ನಾಗರಾಜ್ ಮನವಿ

     kodihalli chandrashekar

    ಕರ್ನಾಟಕದಲ್ಲೂ ರೈತ ನಾಯಕರು ಬಂದ್‍ಗೆ ಬೆಂಬಲ ಸೂಚಿಸಿದ್ದು, ಸೋಮವಾರ ಸಂಪೂರ್ಣ ಬಂದ್ ಮಾಡಲು ಸಜ್ಜಾಗಿದ್ದಾರೆ. ಆದರೇ ರಾಜ್ಯದಲ್ಲಿ ಸಾಕಷ್ಟು ಸಂಘ ಸಂಸ್ಥೆಗಳು ಬಂದ್‍ಗೆ ನೈತಿಕ ಬೆಂಬಲವನ್ನು ಸೂಚಿಸಿದ್ದಾರೆ. ನೈತಿಕ ಬೆಂಬಲದಿಂದ ಬಂದ್ ಯಶಸ್ವಿಯಾಗುವುದಿಲ್ಲ ಅಂತ ಮನಗಂಡ ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಇಂದು ಬೆಂಗಳೂರಿನ ನಾನಾ ಕಡೆ ಭೇಟಿ ನೀಡಿ ಬಂದ್‍ಗೆ ಬೆಂಬಲ ನೀಡಿ ಎಂದು ಮನವಿ ಮಾಡುತ್ತಿದ್ದಾರೆ. ಇದನ್ನೂ ಓದಿ: 90 ವರ್ಷದ ಅಜ್ಜಿ ಕಾರ್ ಡ್ರೈವಿಂಗ್ -ಪ್ರಯತ್ನ ಶ್ಲಾಘಿಸಿದ ಸಿಎಂ

     kodihalli chandrashekar

    ಬೆಳ್ಳಂಬೆಳಗ್ಗೆಯೇ ಕೆಆರ್ ಪುರಂನ ಮಾರುಕಟ್ಟೆಗೆ ಭೇಟಿ ನೀಡಿದ ಕೋಡಿ ಹಳ್ಳಿ ಚಂದ್ರಶೇಖರ್ ಅವರು, ಅಲ್ಲಿನ ವ್ಯಾಪರಿಗಳೊಂದಿಗೆ ಸಭೆ ಮಾಡಿ ಬಂದ್ ಮಾಡುತ್ತಿರುವ ಉದ್ದೇಶವೇನು ಎಂಬುವುದರ ಬಗ್ಗೆ ತಿಳಿಸಿದ್ದಾರೆ. ಜೊತೆಗೆ ನೈತಿಕ ಬೆಂಬಲ ಆಗುವುದಿಲ್ಲ. ನೈತಿಕತೆಯ ಬೆಂಬಲ ಬೇಕು. ಎಲ್ಲರೂ ಸೋಮವಾರ ಬಂದ್‍ಗೆ ಸಹಕಾರ ನೀಡಬೇಕು, ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಹೋರಾಟದಲ್ಲಿ ಭಾಗಿಯಾಗಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

  • ನಾಳೆ ಖಾಸಗಿ ಆಸ್ಪತ್ರೆಗಳ ಓಪಿಡಿ ಬಂದ್ – ವೈದ್ಯಲೋಕದ ಬಂದ್ ಯಾಕೆ?

    ನಾಳೆ ಖಾಸಗಿ ಆಸ್ಪತ್ರೆಗಳ ಓಪಿಡಿ ಬಂದ್ – ವೈದ್ಯಲೋಕದ ಬಂದ್ ಯಾಕೆ?

    ಬೆಂಗಳೂರು: ನಾಳೆ ಆಸ್ಪತ್ರೆಗೆ ಹೋಗಬೇಕು ಅಂತಾ ಪ್ಲಾನ್ ಮಾಡಿಕೊಂಡಿದ್ದರೆ ಅದನ್ನ ಒಂದು ದಿನ ಮುಂದಕ್ಕೆ ಹಾಕಿಕೊಳ್ಳಿ. ಎಮರ್ಜೆನ್ಸಿ ಹೊರತು ಉಳಿದ ಕಾಯಿಲೆಗಳಿಗೆ ನಾಳೆ ಚಿಕಿತ್ಸೆ ಸಿಗಲ್ಲ. ಶುಕ್ರವಾರ ಖಾಸಗಿ ಆಸ್ಪತ್ರೆಗಳ ಎಲ್ಲಾ ಓಪಿಡಿ (ಹೊರ ರೋಗಿಗಳ ವಿಭಾಗ)ಗಳು ಬಂದ್ ಆಗಲಿದೆ. ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲು ವೈದ್ಯರು ನಾಳೆ ಬಂದ್ ಮಾಡ್ತಿದ್ದಾರೆ.

    ಕಳೆದ ಶನಿವಾರವಷ್ಟೇ ಕನ್ನಡ ಸಂಘಟನೆಗಳ ಬಂದ್ ಮಾಡಿದ್ದರು. ರೈತ ಸಂಘಟನೆಗಳಂತೂ 4 ದಿನಗಳಿಂದ ಬಂದ್, ಪ್ರತಿಭಟನೆ ನಡೆಸುತ್ತಿದ್ದಾರೆ ಇದೇ ಸಮಯ ಅಂತ ಇವತ್ತು ಸಾರಿಗೆ ನೌಕರರು ಕೂಡ ರೈತರ ಜೊತೆ ಸೇರ್ಕೊಂಡು ಬೀದಿಗಿಳಿದಿದ್ದರು. ಈ ಬೆನ್ನಿಗೆ ಖಾಸಗಿ ಆಸ್ಪತ್ರೆ ವೈದ್ಯರು ಮುಷ್ಕರಕ್ಕೆ ಮುಂದಾಗಿದ್ದಾರೆ. ಕೇಂದ್ರ ಸರ್ಕಾರದ ಮತ್ತೊಂದು ಗೆಜೆಟ್ ನೋಟಿಫಿಕೇಶನ್ ವಿರುದ್ಧ ವೈದ್ಯರು ಸಿಡಿದೆದ್ದಿದ್ದಾರೆ. ನಾಳೆ ದೇಶವ್ಯಾಪಿ ಓಪಿಡಿ ಬಂದ್ ಮಾಡೋ ಮೂಲಕ ಪ್ರತಿಭಟನೆ ಮಾಡಲು ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಕರೆ ನೀಡಿದೆ.

    ವೈದ್ಯಲೋಕದ ಬಂದ್ ಯಾಕೆ?: ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಮೂಲಕ ಆಯುರ್ವೇದಿಕ್ ವ್ಯಾಸಂಗ ಮಾಡಿದ ವೈದ್ಯರು, ಅಲೋಪತಿ ವೈದ್ಯರು ಮಾಡುವ ಅನೇಕ ಶಸ್ತ್ರಚಿಕಿತ್ಸೆಯನ್ನು ಮಾಡಬಹುದೆಂದು ಆದೇಶ ಹೊರಡಿಸಿದೆ. ಇದನ್ನು ವಿರೋಧಿಸಿ ಖಾಸಗಿ ಆಸ್ಪತ್ರೆ ವೈದ್ಯರು ಮುಷ್ಕರ ಮಾಡಲು ಮುಂದಾಗಿದ್ದಾರೆ. ಆಯುರ್ವೇದ ವೈದ್ಯರಿಗೆ ಸರ್ಜರಿ ಮಾಡಲು ಅವಕಾಶ ಕೊಡಬಾರದು. ಆ ಅಧಿಸೂಚನೆಯನ್ನ ತಿದ್ದುಪಡಿ ಮಾಡಬೇಕು ಎಂದು ಒತ್ತಡ ಹಾಕಲು ನಾಳೆ ಬೆಳಗ್ಗೆ 6 ರಿಂದ ಸಂಜೆ 6ರ ವರೆಗೆ ಓಪಿಡಿ ಬಂದ್ ಮಾಡುತ್ತಿದ್ದಾರೆ.

    ಕೇಂದ್ರ ಸರ್ಕಾರದ ನೋಟಿಫಿಕೇಶನ್‍ಲ್ಲಿ ಈ ವರ್ಷದ ಪಿಜಿ ಕೋರ್ಸ್‍ಗಳಲ್ಲಿ 39 ಜನರಲ್ ಸರ್ಜರಿ ಮತ್ತು 19 ಸ್ಪೆಷಲ್ ಸರ್ಜರಿ ತರಬೇತಿಗೆ ಅವಕಾಶ ಮಾಡಿಕೊಟ್ಟಿದೆ. ಸೆಂಟ್ರಲ್ ಕೌನ್ಸಿಲ್ ಆಫ್ ಇಂಡಿಯನ್ ಮೆಡಿಸಿನ್‍ನ ಇತ್ತೀಚಿನ ನಡೆಯಿಂದಾಗಿ ಇಡೀ ದೇಶದ ಆಧುನಿಕ ವೈದ್ಯಕೀಯ ವೃತ್ತಿಯು ಕಷ್ಟಕ್ಕೆ ಸಿಲುಕಿದೆ ಅನ್ನೋದು ವೈದ್ಯರ ಅಭಿಪ್ರಾಯವಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ರೋಗಿಗಳಿಗೂ ಸಮಸ್ಯೆ ಆಗಲಿದೆ ಅನ್ನೋದು ವೈದ್ಯರ ಆತಂಕ.

    ನಾಳೆ ನಡೆಯಲಿರುವ ಬಂದ್‍ನಿಂದ ಹೊರರೋಗಿಗಳಿಗೆ ಸಮಸ್ಯೆ ಆಗಲಿದೆ. ತುರ್ತು ಸೇವೆ ಮತ್ತು ಕೋವಿಡ್ ಸೇವೆ ಎಂದಿನಂತೆ ಇರಲಿದೆ. ಆದರೆ ಕೆಮ್ಮು, ನೆಗಡಿ, ಜ್ವರ, ರೆಗ್ಯೂಲರ್ ಚೆಕ್‍ಪ್ ಹೋಗುವವರಿಗೆ ಓಪಿಡಿ ಸೇವೆ ಅಲಭ್ಯವಾಗಲಿದೆ. ಐಎಂಎ ನೀಡಿರುವ ಬಂದ್ ಕರೆಗೆ ಫನಾ ಸೇರಿದಂತೆ ಹಲವು ಸಂಘಟನೆಗಳು ಸಾಥ್ ನೀಡಿದ್ದಾರೆ.

    ಸರ್ಕಾರಿ ವೈದ್ಯರ ರಜೆ ರದ್ದು: ಖಾಸಗಿ ವೈದ್ಯರ ಮುಷ್ಕರಕ್ಕೆ ಎಚ್ಚೆತ್ತ ಸರ್ಕಾರ, ಸರ್ಕಾರಿ ಆಸ್ಪತ್ರೆಯ ಎಲ್ಲಾ ವೈದ್ಯಕೀಯ ಸಿಬ್ಬಂದಿಗೆ ನಾಳೆ ರಜೆ ರದ್ದು ಮಾಡಿದೆ. ಕಡ್ಡಾಯವಾಗಿ ಸೇವೆಗೆ ಬರುವಂತೆ ಸೂಚಿಸಿದ್ದು, ಸಾರ್ವಜನಿಕರಿಗೆ ತೊಂದರೆ ಆಗದಂತೆ ಕ್ರಮವಹಿಸಿದೆ.

  • ನ್ಯೂ ಇಯರ್ ನೈಟ್ ಕರ್ಫ್ಯೂ ಇರಲ್ಲ: ಬೊಮ್ಮಾಯಿ

    ನ್ಯೂ ಇಯರ್ ನೈಟ್ ಕರ್ಫ್ಯೂ ಇರಲ್ಲ: ಬೊಮ್ಮಾಯಿ

    – ಕರ್ನಾಟಕ ಬಂದ್‍ಗೆ ಅವಕಾಶ ಇಲ್ಲ

    ಉಡುಪಿ: ಸುಪ್ರೀಂ ಕೋರ್ಟ್ ಆದೇಶದ ಅನುಸಾರ ಡಿ.5 ಕರ್ನಾಟಕ ಬಂದ್ ನಡೆಸಲು ಅವಕಾಶವಿಲ್ಲ. ಆ ದಿನ ಎಲ್ಲಾ ಸರ್ಕಾರಿ ಕಚೇರಿಗಳು ದಿನನಿತ್ಯದಂತೆ ನಡೆಯುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಬಂದ್ ಮಾಡಿದ್ರೆ ಸುಪ್ರೀಂ ಆದೇಶ ಉಲ್ಲಂಘನೆ ಆಗುತ್ತೆ. ಬಂದ್ ಮಾಡಬೇಡಿ ಎಂದು ಸಿಎಂ ಜೊತೆ ನಾನೂ ಮನವಿ ಮಾಡ್ತೇನೆ ಎಂದರು.

    ಹೊಸ ವರ್ಷಾಚರಣೆ ಮತ್ತು ನೈಟ್ ಕರ್ಫ್ಯೂ ಕುರಿತು ಮಾತನಾಡಿದ ಸಚಿವರು, ನೈಟ್ ಕರ್ಫ್ಯೂ ಬಗ್ಗೆ ಯಾವುದೇ ಸಭೆ ಕರೆದಿಲ್ಲ. ಆದರೆ ಜನ ಸೇರದಂತೆ ನೋಡಿಕೊಳ್ಳಬೇಕು ಎಂದು ತಜ್ಞರು ಹೇಳಿದ್ದಾರೆ. ಇವತ್ತು ಅಥವಾ ನಾಳೆ ಸರ್ಕಾರ ಒಂದು ತೀರ್ಮಾನ ಮಾಡ್ತೇವೆ. ನೈಟ್ ಕರ್ಫ್ಯೂ ಬಗ್ಗೆ ಯಾವುದೇ ಚಿಂತನೆ ಇಲ್ಲ. ಹೊಸ ವರ್ಷಾಚರಣೆಯಲ್ಲಿ ಜನಸಂದಣಿ ಆಗದಂತೆ ನೋಡಿಕೊಳ್ಳುವ ಜವಾಬ್ದಾರಿ ಇದೆ. ನೈಟ್ ಕರ್ಫ್ಯೂ ಹೊರತಾಗಿಯೂ ಕ್ರಮ ಕೈಗೊಳ್ಳಬಹುದಾಗಿದೆ ಎಂದರು.

    ಶಾಲೆಗಳು ಓಪನ್ ಮಾಡುವಂತೆ ಪೋಷಕರಿಂದ ಒತ್ತಾಯ ವಿಚಾರವಾಗಿ ಮಾತನಾಡಿ, ಕೊರೊನಾ ಸ್ಥಿತಿಗತಿಯನ್ನು ನೋಡಿಕೊಂಡು ಎಲ್ಲ ನಿರ್ಧಾರ ಆಗುತ್ತೆ, ಮೇಲ್ಮನೆ ಸದಸ್ಯರು ಒತ್ತಡ ಹಾಕುವುದು ಸಹಜ. ಕಾಲಕಾಲಕ್ಕೆ ಶಿಕ್ಷಣ ಸಚಿವರು ಎಲ್ಲಾ ವಿಭಾಗಗಳ ಜೊತೆ ಚರ್ಚೆ ನಡೆಸುತ್ತಿದ್ದಾರೆ ಎಂದರು.

    ಸಂಪುಟ ವಿಸ್ತರಣೆ ಹೈಕಮಾಂಡಿಗೆ ಬಿಟ್ಟ ವಿಚಾರ. ಬಿಜೆಪಿಯಲ್ಲಿ ಯಾವುದೇ ಒಳಜಗಳ ಗುಂಪುಗಾರಿಕೆ ತಿಕ್ಕಾಟ ಇಲ್ಲ. ಹೈಕಮಾಂಡ್ ಪ್ರಧಾನಿ ಮುಖ್ಯಮಂತ್ರಿಗಳು ಪಕ್ಷ ತೀರ್ಮಾನಿಸಿದಂತೆ ಎಲ್ಲವೂ ನಡೆಯುತ್ತದೆ ಎಂದರು.

  • ಯಡಿಯೂರಪ್ಪ ನನ್ನ ಹೆದರಿಸ್ಬೇಡಿ, ನೀವು ನನಗಿಂತ ವಿಧಾನಸಭೆಗೆ ಜ್ಯೂನಿಯರ್: ವಾಟಾಳ್

    ಯಡಿಯೂರಪ್ಪ ನನ್ನ ಹೆದರಿಸ್ಬೇಡಿ, ನೀವು ನನಗಿಂತ ವಿಧಾನಸಭೆಗೆ ಜ್ಯೂನಿಯರ್: ವಾಟಾಳ್

    – ಕರ್ನಾಟಕದಲ್ಲಿ ವಿರೋಧ ಪಕ್ಷವೇ ಇಲ್ಲ, ಇಲ್ಲಿ ಬಿಎಸ್‍ವೈ ಪಕ್ಷ ಅಷ್ಟೇ

    ಬೆಂಗಳೂರು: ಯಡಿಯೂರಪ್ಪ ನನ್ನನ್ನು ಹೆದರಿಸಬೇಡಿ, ನೀವು ನನಗಿಂತ ವಿಧಾನಸಭೆಗೆ ಜ್ಯೂನಿಯರ್ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.

    ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ಮಾಡಲು 50 ಕೋಟಿ ಮೀಸಲಿಟ್ಟಿರುವುದಕ್ಕೆ, ಕನ್ನಡಿಗರು ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಕನ್ನಡಪರ ಹೋರಾಟಗಾರರು ಸರ್ಕಾರದ ಈ ತೀರ್ಮಾನವನ್ನು ವಿರೋಧಿಸಿ ಡಿಸೆಂಬರ್ 5ರಂದು ಕರ್ನಾಟಕ ಬಂದ್ ಮಾಡಲು ತೀರ್ಮಾನ ಮಾಡಿದ್ದು ಇಂದು ಈ ವಿಚಾರವಾಗಿ ಸಭೆ ನಡೆಯಿತು.

    ಈ ಸಭೆಯ ನಂತರ ಮಾತನಾಡಿದ ವಾಟಾಳ್ ನಾಗರಾಜ್ ಅವರು, ಯಾರು ಏನ್ ಬೇಕಾದರೂ ಕಠಿಣ ಕ್ರಮಕೈಗೊಳ್ಳಲಿ. ನಾವಂತೂ ಬಂದ್ ಮಾಡೇ ಮಾಡುತ್ತೇವೆ. ಡಿಸೆಂಬರ್ 5ರಂದು ಬಂದ್ ನಡೆದೇ ನಡೆಯುತ್ತದೆ. ಮರಾಠಿ ಪ್ರಾಧಿಕಾರ ಮಾಡಿದರೆ ಯಡಿಯೂರಪ್ಪನವರ ರಾಜೀನಾಮೆಗೆ ಆಗ್ರಹಿಸಿ ಅಖಿಲ ಕರ್ನಾಟಕ ಬಂದ್ ಮಾಡುತ್ತೇವೆ. ಕಠಿಣ ಕ್ರಮ ಏನ್ರೀ ಮಾಡುತ್ತೀರಾ ಯಡಿಯೂರಪ್ಪ? ನಾವು ಕರ್ನಾಟಕದ ಜನ ನಿಮ್ಮ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

    ಇದೇ ವೇಳೆ ವಿರೋಧ ಪಕ್ಷದ ಬಗ್ಗೆ ಮಾತನಾಡಿ, ಕರ್ನಾಟಕದಲ್ಲಿ ವಿರೋಧ ಪಕ್ಷವೇ ಇಲ್ಲ. ಇಲ್ಲಿ ಯಡಿಯೂರಪ್ಪನ ಪಕ್ಷ ಅಷ್ಟೇ. ವಿರೋಧ ಪಕ್ಷದವರು ಈ ಪ್ರಾಧಿಕಾರದ ವಿರುದ್ಧ ಮಾತಾನಾಡದೇ ಮನೆಯಲ್ಲಿ ಸೇರಿಕೊಂಡಿದ್ದಾರೆ. ಈಗ ಮರಾಠಿಯವರನ್ನು ಎದುರು ಹಾಕೊಂಡರೆ ವೋಟು ಸಿಗಲ್ಲ ಎಂದು ಕಾಂಗ್ರೆಸ್‍ಗೆ ಭಯ ಎಂದರು.

  • ರೈತ ವಿರೋಧಿ ಮಸೂದೆ ವಿರುದ್ಧ ಭುಗಿಲೆದ್ದ ಆಕ್ರೋಶ- ಶುಕ್ರವಾರ ಕರ್ನಾಟಕ ಬಂದ್ ಸಾಧ್ಯತೆ

    ರೈತ ವಿರೋಧಿ ಮಸೂದೆ ವಿರುದ್ಧ ಭುಗಿಲೆದ್ದ ಆಕ್ರೋಶ- ಶುಕ್ರವಾರ ಕರ್ನಾಟಕ ಬಂದ್ ಸಾಧ್ಯತೆ

    ಬೆಂಗಳೂರು: ಸೆಪ್ಟೆಂಬರ್ 25ರಂದು ಕರ್ನಾಟಕವೇ ಬಂದ್ ಆಗುವ ಸಾಧ್ಯತೆ ಇದ್ದು, ಕೇಂದ್ರ ಸರ್ಕಾರದ ರೈತ ವಿರೋಧಿ ಮಸೂದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಶುಕ್ರವಾರ ರಾಜ್ಯಾದ್ಯಂತ ಬಂದ್ ಆಚರಿಸುವ ನಿರೀಕ್ಷೆ ಇದೆ.

    ಈ ಸಂಬಂಧ ಇವತ್ತು ಬೆಳಗ್ಗೆ 11 ಗಂಟೆಗೆ ಅಧಿಕೃತ ಘೋಷಣೆ ಆಗಲಿದೆ. ಬಂದ್‍ಗೆ 32ಕ್ಕೂ ಹೆಚ್ಚು ಸಂಘಟನೆಗಳು ಕೈಜೋಡಿಸಲಿವೆ. ರೈತ ಸಂಘಟನೆಗಳು ಮಾತ್ರವಲ್ಲದೇ ನಾರಾಯಣಗೌಡ ನೇತೃತ್ವದ ಕರವೇ, ಕಾರ್ಮಿಕ ಸಂಘಟನೆಗಳು, ದಲಿತ ಸಂಘಟನೆಗಳು, ಓಲಾ-ಉಬರ್, ಆಟೋ, ಟ್ಯಾಕ್ಸಿ ಸಂಘಟನೆಗಳು ಬೆಂಬಲ ಘೋಷಿಸಲಿವೆ. ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳನ್ನ ಬಂದ್ ಮಾಡಿ ಪ್ರತಿಭಟಿಸಲು ರೈತ ಸಂಘಟನೆಗಳು ತೀರ್ಮಾನಿಸಿವೆ.

    ಬೆಂಗಳೂರಲ್ಲಿ ನಡೆಯುತ್ತಿರುವ ಪ್ರತಿಭಟನೆ 2ನೇ ದಿನಕ್ಕೆ ಕಾಲಿಟ್ಟಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ ಮತ್ತು ಮೌರ್ಯ ಸರ್ಕಲ್ ಎದುರು ರೈತರು ಅಹೋರಾತ್ರಿ ಧರಣಿ ಮುಂದುವರೆಸಿದ್ದಾರೆ. ನಿನ್ನೆಯಿಂದ ವಿಧಾನಮಂಡಲದ ಅಧಿವೇಶನ ಆರಂಭ ಆಗಿದ್ದು, ಅಧಿವೇಶನದ ಮೊದಲ ದಿನವೇ ರಾಜಧಾನಿಯಲ್ಲಿ ರೈತರು ಹೋರಾಟಕ್ಕಿಳಿದಿದ್ದರು. ಈ ವೇಳೆ ಮಾತನಾಡಿದ್ದ ಕುರುಬೂರು ಶಾಂತಕುಮಾರ್, ಭೂಮಿ ತಾಯಿ ಮಾರಾಟಕ್ಕೆ ಮುಂದಾದ ಸರ್ಕಾರಕ್ಕೆ ತಕ್ಕ ಪಾಠ ಕಲಿಸ್ತೇವೆ. ದೇಶಾದ್ಯಂತ ರೈತರು ದಂಗೆ ಏಳುವ ಮುನ್ನ ಎಚ್ಚೆತುಕೊಳ್ಳಬೇಕು ಎಂದು ಎಚ್ಚರಿಕೆ ನೀಡಿದರು. ಇದು ರೈತ ವಿರೋಧಿ ಕೆಲಸ. ರೈತನ ಮಗನಾಗಿದ್ದರೇ ಈ ರೀತಿ ಮಾಡುತ್ತಿರಲಿಲ್ಲ. ಮೋದಿ ಮಾತನ್ನು ಯಾರು ನಂಬಬೇಡಿ ಎಂದು ಕೋಡಿಹಳ್ಳಿ ಚಂದ್ರಶೇಖರ್ ಆಕ್ರೋಶ ಹೊರಹಾಕಿದ್ದರು.

    ಕೃಷಿ ಬಿಲ್ ವಿರೋಧಿಸಿ ಪಂಜಾಬ್‍ನಲ್ಲಿ ಸೆಪ್ಟೆಂಬರ್ 25ಕ್ಕೆ ಬಂದ್‍ಗೆ ಕರೆ ನೀಡಲಾಗಿದೆ. ಇದನ್ನು ಅಖಿಲ ಭಾರತ ಮಟ್ಟದಲ್ಲಿ ಮಾಡಲು ಕಿಸಾನ್ ಸಭಾ ಚಿಂತನೆ ನಡೆಸುತ್ತಿದೆ. ಇದರ ನಡುವೆಯೇ ಕೃಷಿ ಮಸೂದೆ ಸಂಬಂಧ ಪ್ರಧಾನಿ ಮೋದಿ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದು, ರೈತರ ಶ್ರೇಯಸ್ಸಿಗಾಗಿಯೇ ಕೃಷಿ ಬಿಲ್ ತರಲಾಗುತ್ತಿದೆ. ಆದರೆ ಈ ಬಗ್ಗೆ ವಿಪಕ್ಷಗಳು ರೈತರನ್ನು ತಪ್ಪು ದಾರಿಗೆ ಎಳೆಯುತ್ತಿವೆ ಎಂದು ಆರೋಪಿಸಿದ್ದರು. ಕೃಷಿ ಮಸೂದೆಗಳು ಯಾವುದೇ ಕಾರಣಕ್ಕೂ ರೈತ ವಿರೋಧಿ ಅಲ್ಲ. ಇವುಗಳಿಂದ ಕೃಷಿ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆ ಆಗಲಿವೆ. ಈ ಮಸೂದೆಗಳಿಂದಾಗಿ ಬೆಳೆಗಳಿಗೆ ಬೆಂಬಲ ಬೆಲೆಯೂ ರದ್ದಾಗಲ್ಲ. ಬೆಂಬಲ ಬೆಲೆ ಮುಂದುವರೆಯಲಿದೆ ಎಂದು ಈ ಮೂಲಕ ರೈತರಿಗೆ ಭರವಸೆ ನೀಡುತ್ತಿದ್ದೇನೆ. ನೂತನ ಕೃಷಿ ಮಸೂದೆಯಿಂದಾಗಿ ರೈತರು ಎಲ್ಲಿ ಬೇಕಾದ್ರೂ ತಮ್ಮ ಉತ್ಪನ್ನಗಳನ್ನು ಮಾರಬಹುದು. ದೇಶದ ಯಾವುದೇ ಮಂಡಿಯನ್ನು ಮುಚ್ಚುವುದಿಲ್ಲ ಎಂದು ಮೋದಿ ಸ್ಪಷ್ಟಪಡಿಸಿದ್ದರು.