Tag: Karnataka By Elections

  • SUPER EXCLUSIVE 5

    SUPER EXCLUSIVE 5

    https://www.youtube.com/watch?v=SeeAPEhcKiY

  • ಮಿನಿಸಮರಕ್ಕೆ ಸಿದ್ಧಗೊಂಡ ಪಕ್ಷಗಳು- ಬಿಜೆಪಿ ಅಭ್ಯರ್ಥಿಗಳು ಬಹುತೇಕ ಫೈನಲ್!

    ಮಿನಿಸಮರಕ್ಕೆ ಸಿದ್ಧಗೊಂಡ ಪಕ್ಷಗಳು- ಬಿಜೆಪಿ ಅಭ್ಯರ್ಥಿಗಳು ಬಹುತೇಕ ಫೈನಲ್!

    ಬೆಂಗಳೂರು: ರಾಜ್ಯದಲ್ಲಿ ಎದುರಾಗಿರುವ ಮೂರು ಲೋಕಸಭೆ ಮತ್ತು ಎರಡು ವಿಧಾನಸಭೆ ಕ್ಷೇತ್ರಗಳಲ್ಲಿ ಯಾವ ಅಭ್ಯರ್ಥಿಗಳನ್ನು ಕಣ್ಣಕ್ಕೀಳಿಸಬೇಕೆಂದು ಮೂರು ಪಕ್ಷಗಳು ನಿರ್ಣಯಿಸಿವೆ. ಯಾವ ಕ್ಷೇತ್ರವನ್ನು ಯಾವ ಪಕ್ಷ ಹಂಚಿಕೊಳ್ಳಬೇಕು ಎಂಬುದರ ಕುರಿತಾಗಿ ದೋಸ್ತಿಗಳಲ್ಲಿ ಉಂಟಾಗಿದ್ದ ಗೊಂದಲ ಕೊನೆಗೂ ಬಗೆಹರಿದಿದೆ. ನಿರೀಕ್ಷೆಯಂತೆ ರಾಮನಗರ, ಮಂಡ್ಯ ಜೆಡಿಎಸ್‍ಗೆ ಸಿಕ್ಕಿದ್ದು, ಶಿವಮೊಗ್ಗ, ಬಳ್ಳಾರಿ ಲೋಕಸಭೆ ಕ್ಷೇತ್ರ ಮತ್ತು ಜಮಖಂಡಿ ವಿಧಾನಸಭೆ ಕ್ಷೇತ್ರ ಕಾಂಗ್ರೆಸ್‍ಗೆ ದಕ್ಕಿದೆ.

    ಮಂಗಳವಾರ ಕುಮಾರಕೃಪಾ ಅತಿಥಿ ಗೃಹದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ. ಈ ಮಿನಿ ಸಮರವನ್ನು ಜಂಟಿಯಾಗಿ ಎದುರಿಸಲು ಎರಡು ಪಕ್ಷಗಳು ನಿರ್ಧರಿಸಿವೆ. ಕಾಂಗ್ರೆಸ್-ಜೆಡಿಎಸ್ ಸಭೆ ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ಸಮ್ಮಿಶ್ರ ಸರ್ಕಾರ ಬರುವುದಕ್ಕೂ ಮೊದಲು ಬದ್ಧ ವೈರಿಗಳಂತೆ ಕರೆಯಲ್ಪಡುತ್ತಿದ್ದ, ಒಂದು ಕಾಲದ ಒಡನಾಡಿಗಳೂ ಆದ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅಕ್ಕ ಪಕ್ಕದಲ್ಲೇ ಕುಳಿತು ಪರಸ್ಪರ ಚರ್ಚೆ ನಡೆಸಿದರು.

    ಸಭೆ ಬಳಿಕ ಮಾತನಡಿದ ಈ ಬಗ್ಗೆ ಸ್ಪಷ್ಟಪಡಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಒಟ್ಟಿಗೆ ಚುನಾವಣಾ ಪ್ರಚಾರ ಮಾಡೋದಾಗಿ ಹೇಳಿದ್ರು. ಕೊಮುವಾದಿ ಪಕ್ಷವನ್ನ ಮಟ್ಟ ಹಾಕುವುದೇ ನಮ್ಮ ಉದ್ದೇಶ ಅಂತಾ ಹೇಳಿದರು. ಈ ಸಭೆಯಲ್ಲಿ ಜೆಡಿಎಸ್‍ನಿಂದ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಷ್ ಅಲಿ, ಕಾಂಗ್ರೆಸ್‍ನಿಂದ ಮಾಜಿ ಸಿಎಂ ಸಿದ್ದರಾಮಯ್ಯ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತಿತರರು ಭಾಗವಹಿಸಿದ್ದರು.

    ಬಿಜೆಪಿಯಲ್ಲೂ ಅಭ್ಯರ್ಥಿ ಆಯ್ಕೆ ಜೋರಾಗಿದೆ. ಡಾಲರ್ಸ್ ಕಾಲೋನಿಯಾ ಯಡಿಯೂರಪ್ಪ ಅವರ ನಿವಾಸದಲ್ಲಿ ಪಕ್ಷದ ಪ್ರಮುಖರು ಸಭೆ ಸೇರಿದ್ದರು. ಕಾಂಗ್ರೆಸ್ ಸಭೆಯಲ್ಲಿ ರಾಮನಗರದ ಬಗ್ಗೆ ಚರ್ಚೆಯಾದ್ರೆ, ಬಿಜೆಪಿ ಸಭೆಯಲ್ಲಿ ಜಮಖಂಡಿ ಕ್ಷೇತ್ರದ ಅಭ್ಯರ್ಥಿ ವಿಷಯವಾಗಿ ಬಿಸಿಬಿಸಿ ಚರ್ಚೆಯಾಯ್ತು. ಕೊನೆಗೆ ಸಂಧಾನ ಸಮಾಧಾನ ನಡೆದು ಹೆಸರು ಅಂತಿಮವಾಗಿದ್ದು, ಇನ್ಮೂರು ದಿನಗಳಲ್ಲಿ ಘೋಷಿಸಲಿದ್ದಾರೆ.

    ಸಂಭಾವ್ಯ ಬಿಜೆಪಿ ಅಭ್ಯರ್ಥಿಗಳು
    * ರಾಮನಗರ ವಿಧಾನಸಭಾ ಕ್ಷೇತ್ರ – ರುದ್ರೇಶ್
    * ಜಮಖಂಡಿ ವಿಧಾನಸಭಾ ಕ್ಷೇತ್ರ – ಶ್ರೀಕಾಂತ್ ಕುಲಕರ್ಣಿ
    * ಮಂಡ್ಯ ಲೋಕಸಭಾ ಕ್ಷೇತ್ರ – ಅಶ್ವಥ್ ನಾರಾಯಣ್
    * ಶಿವಮೊಗ್ಗ ಲೋಕಸಭಾ ಕ್ಷೇತ್ರ – ಬಿ.ವೈ. ರಾಘವೇಂದ್ರ
    * ಬಳ್ಳಾರಿ ಲೋಕಸಭಾ ಕ್ಷೇತ್ರ – ಜೆ.ಶಾಂತ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪ್ಲೀಸ್, ಶಿವಮೊಗ್ಗ ಟಿಕೆಟ್ ನಮಗೆ ಬೇಡ ಸ್ವಾಮಿ!

    ಪ್ಲೀಸ್, ಶಿವಮೊಗ್ಗ ಟಿಕೆಟ್ ನಮಗೆ ಬೇಡ ಸ್ವಾಮಿ!

    -ಬಿಜೆಪಿಗೆ ಎದುರಾಳಿ ಯಾರಾಗ್ತಾರೆ?

    ಬೆಂಗಳೂರು: ಚುನಾವಣೆಗೆ ಸ್ಪರ್ಧಿಸಲು ಪಕ್ಷ ಟಿಕೆಟ್ ನೀಡಿದ್ರೆ ಸಾಕು ಅನ್ನುತ್ತಿದ್ದ ಅಭ್ಯರ್ಥಿಗಳು ಈಗ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ನಾವು ನಿಲ್ಲಲ್ಲ ಅನ್ನುತ್ತದ್ದಾರಂತೆ. ಮೈತ್ರಿ ಸರ್ಕಾರದ ನಾಯಕರು ಟಿಕೆಟ್ ನೀಡಲು ಮುಂದಾದ್ರೂ ಸ್ವಾಮಿ ನಮ್ಮನ್ನು ಬಿಟ್ಟುಬಿಡಿ ಅಂತಿದ್ದಾರಂತೆ. ಇತ್ತ ಬಿಜೆಪಿ ಬಿ.ವೈ.ರಾಘವೇಂದ್ರ ಅವರನ್ನು ಶಿವಮೊಗ್ಗದ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ.

    ಕಾಂಗ್ರೆಸ್‍ನಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಉಪ ಚುನಾವಣೆ ಸ್ಪರ್ಧೆ ಮಾಡುವುದಿಲ್ಲ ಅಂತಾ ವರಿಷ್ಠರಿಗೆ ಸಂದೇಶ ರವಾನಿಸಿದ್ದಾರೆ ಎನ್ನಲಾಗುತ್ತಿದೆ. ಮಂಜುನಾಥ್ ಭಂಡಾರಿ, ಕಿಮ್ಮನೆ ರತ್ನಾಕರ್ ಅವರು ಹೆಸರುಗಳು ಸದ್ಯ ಮುಂಚೂಣಿಯಲ್ಲಿವೆ. ಆದ್ರೆ ಕಾಂಗ್ರೆಸ್ ನಾಯಕರು ಚುನಾವಣೆಗೆ ಸ್ಪರ್ಧಿಗಳು ಆಸಕ್ತಿ ತೋರಿಸುತ್ತಿಲ್ಲ. ಹಾಗಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಲು ಕಾಂಗ್ರೆಸ್ ಮುಂದಾಗುವ ಸಾಧ್ಯತೆಗಳಿವೆ.

    ಮೈತ್ರಿ ಸರ್ಕಾರ ಮಾತ್ರ ಇನ್ನು ಅಭ್ಯರ್ಥಿಗಳ ಹುಡುಕಾಟದಲ್ಲಿ ನಿರತವಾಗಿದೆ. ಕೈ ನಾಯಕರು ಜೆಡಿಎಸ್ ನವರು ಸ್ಪರ್ಧೆ ಮಾಡಿದರೆ ನಾವು ಸಂಪೂರ್ಣ ಬೆಂಬಲ ನೀಡುತ್ತೇವೆ ಅಂತಾ ಹೇಳುತ್ತಿದ್ದಾರೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಸ್ವಕ್ಷೇತ್ರದಲ್ಲಿ ಕಟ್ಟಿಹಾಕಬೇಕು ಎಂಬುವುದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಮಹದಾಸೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ನಿಂದಲೇ ಅಭ್ಯರ್ಥಿಗಳನ್ನು ಕಣಕ್ಕೀಳಿಸಲು ಯೋಚಿಸುತ್ತಿದ್ದಾರೆ ಎನ್ನಲಾಗಿದೆ.

    ಈ ಬಾರಿ ಮಾಜಿ ಸಿಎಂ ದಿ.ಬಂಗಾರಪ್ಪ ಕುಟುಂಬದಿಂದ ಲೋಕಸಭಾ ಉಪಚುನಾವಣೆ ಸ್ಪರ್ಧೆ ಅನುಮಾನವಾಗಿದೆ. ಮಧು ಬಂಗಾರಪ್ಪ ಅಥವಾ ಗೀತಾ ಶಿವರಾಜ್‍ಕುಮಾರ್ ಆಗಲಿ ಸ್ಪರ್ಧೆಗೆ ಆಸಕ್ತಿ ತೋರಿಸುತ್ತಿಲ್ಲ. ಚುನಾವಣೆ ಘೋಷಣೆಗೂ ಮುನ್ನ ಲಂಡನ್ ಪ್ರವಾಸಕ್ಕೆ ತೆರಳಿರುವ ಮಧು ಬಂಗಾರಪ್ಪ ಅಕ್ಟೋಬರ್ 16ರ ನಂತರ ಹಿಂದಿರುಗಲಿದ್ದಾರೆ. ಇತ್ತ ಅಕ್ಟೋಬರ್ 16 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಹೀಗಾಗಿ ಜೆಡಿಎಸ್ ಹೊಸ ಅಭ್ಯರ್ಥಿಯನ್ನು ಚುನಾವಣೆಗೆ ಇಳಿಸುತ್ತಾ ಅಥವಾ ಮಧು ಬಂಗಾರಪ್ಪರನ್ನು ಪ್ರವಾಸ ರದ್ದುಗೊಳಿಸಿ ಹಿಂದಿರುಗಿ ಬರುವಂತೆ ಸೂಚಿಸುತ್ತಾ ಎಂಬುವುದು ಮುಂದಿನ ದಿನಗಳಲ್ಲಿ ತಿಳಿಯಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕರ್ನಾಟಕ ಉಪ ಚುನಾವಣೆ-ಆಪರೇಷನ್ ಮಾಡೋರಿಗೆ ಆಪರೇಷನ್ ಭೀತಿ!

    ಕರ್ನಾಟಕ ಉಪ ಚುನಾವಣೆ-ಆಪರೇಷನ್ ಮಾಡೋರಿಗೆ ಆಪರೇಷನ್ ಭೀತಿ!

    -ಬಳ್ಳಾರಿ ಗೆಲುವು ಸಾಧಿಸಲು ‘ಕೈ’ ರಣತಂತ್ರ

    ಬಳ್ಳಾರಿ: ಶಾಸಕ ಶ್ರೀರಾಮುಲು ರಾಜೀನಾಮೆಯಿಂದ ತೆರವಾಗಿರುವ ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆಯ ದಿನಾಂಕ ಘೋಷಣೆಯಾಗಿದೆ. ಈ ಬೆನ್ನಲ್ಲೇ ಬಿಜೆಪಿ ತೆಕ್ಕೆಯಲ್ಲಿರುವ ಲೋಕಸಭಾ ಕ್ಷೇತ್ರವನ್ನ ಕಸಿದುಕೊಳ್ಳಲು ಕಾಂಗ್ರೆಸ್ ತಂತ್ರವೊಂದನ್ನ ರೂಪಿಸಿದೆ.

    ಮೈತ್ರಿಕೂಟ ಸರ್ಕಾರ ಕೆಡವಲು ಆಪರೇಷನ್ ಕಮಲಕ್ಕೆ ಕೈ ಹಾಕಿದ್ದ ರೆಡ್ಡಿ-ರಾಮುಲುಗೆ ಲೋಕಸಭೆಯ ಉಪ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲು ಕೈ ನಾಯಕರು ಸೆಚ್ಕ್ ಹಾಕಿದ್ದಾರಂತೆ. ಬಿಜೆಪಿಯಿಂದ ಲೋಕಸಭೆಯ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಉತ್ಸುಕತೆ ತೋರುತ್ತಿರುವ ಅಭ್ಯರ್ಥಿಗಳನ್ನೆ ಪಕ್ಷಕ್ಕೆ ಸೆಳೆದು ಅವರನ್ನೇ ಅಭ್ಯರ್ಥಿಯಾಗಿ ಮಾಡುವ ಆಲೋಚನೆ ಕೈ ನಾಯಕರದ್ದಾಗಿದೆ. ಈ ಮೂಲಕ ಆಪರೇಷನ್ ಕಮಲಕ್ಕೆ ಕೈ ಹಾಕಿದವರಿಗೆ ಆಪರೇಷನ್ ಭೀತಿ ಹುಟ್ಟಿಸಲು ಕೈ ನಾಯಕರು ರಣತಂತ್ರ ರೂಪಿಸಿದ್ದಾರೆ ಎಂಬ ಮಾಹಿತಿಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿವೆ.

    ಶ್ರೀರಾಮುಲುಗೆ ಸೆಡ್ಡು ಹೊಡೆದ ಡಿಕೆಶಿ: ಬಳ್ಳಾರಿ ಲೋಕಸಭಾ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿಯಿಂದ 6 ರಿಂದ 7 ಮಂದಿ ಆಕ್ಷಾಂಕಿಗಳು ಸಜ್ಜಾಗಿ ನಿಂತಿದ್ದಾರೆ. ಆದರೆ ಬಿಜೆಪಿ ಮಾತ್ರ ಇದೂವರೆಗೂ ಅಭ್ಯರ್ಥಿಯನ್ನ ಘೋಷಣೆ ಮಾಡಲು ಹಿಂದೆ ಮುಂದೆ ನೋಡುತ್ತಿದೆ. ಹೀಗಾಗಿ ಬಳ್ಳಾರಿ ಬೈ ಎಲೆಕ್ಷನ್ ಉಸ್ತುವಾರಿ ವಹಿಸಿಕೊಂಡಿರುವ ಸಚಿವ ಡಿಕೆ ಶಿವಕುಮಾರ್ ಈ ಚುನಾವಣೆಯಲ್ಲಿ ರೆಡ್ಡಿ- ರಾಮುಲುಗೆ ಬಿಸಿ ಮುಟ್ಟಿಸಲು ಆಪರೇಷನ್ ಹಸ್ತ ಮಾಡೋ ಪ್ಲಾನ್ ಮಾಡಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.

    ಬಿಜೆಪಿಯಿಂದ ಟಿಕೇಟ್ ವಂಚಿತರಾದವರನ್ನೆ ಪಕ್ಷಕ್ಕೆ ಕರೆತಂದು ಕಾಂಗ್ರೆಸ್ ಅಭ್ಯರ್ಥಿಯಾಗಿ ನಿಲ್ಲಿಸಿ ರೆಡ್ಡಿ-ರಾಮುಲುಗೆ ಬಿಸಿ ಮುಟ್ಟಿಸಲು ಡಿ.ಕೆ.ಶಿವಕುಮಾರ್ ಸಜ್ಜಾಗಿದ್ದಾರೆ ಅನ್ನೋ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿವೆ. ಹೀಗಾಗೇ ಮಾಜಿ ಸಂಸದ, ಶಾಸಕರಾಗಿರುವ ರಾಜ್ಯ ಬಿಜೆಪಿ ಉಪಾಧ್ಯಕ್ಷ ಶ್ರೀರಾಮುಲು ಬಳ್ಳಾರಿ ಕ್ಷೇತ್ರದ ಅಭ್ಯರ್ಥಿ ಹೆಸರನ್ನ ಘೋಷಣೆ ಮಾಡಲು ಹಿಂದೆ ಮುಂದೆ ನೋಡ್ತಿದ್ದಾರೆ. ಒಟ್ಟಾರೆ ಬಳ್ಳಾರಿ ಲೋಕಸಭಾ ಉಪ ಚುನಾವಣೆಯಲ್ಲಿ ಆಪರೇಷನ್ ಕಮಲಕ್ಕೆ ಕೈ ಹಾಕಿದವರಿಗೆ ಜಯವಾಗುತ್ತೋ ಅಥವಾ ಕಾಂಗ್ರೆಸ್ ನಾಯಕರ ರಣತಂತ್ರ ಯಶ್ವಸಿಯಾಗುತ್ತೋ ಅನ್ನೋದು ಇದೀಗ ಎಲ್ಲರ ಕುತೂಹಲ ಕೆರಳಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮಹಾ ಸಮರಕ್ಕೆ ಮುನ್ನವೇ ದೋಸ್ತಿ ಕೂಟದಲ್ಲಿ ಬಿಕ್ಕಟ್ಟು – ರಾಮನಗರ, ಶಿವಮೊಗ್ಗ ಇನ್ನು ಕಗ್ಗಂಟು

    ಮಹಾ ಸಮರಕ್ಕೆ ಮುನ್ನವೇ ದೋಸ್ತಿ ಕೂಟದಲ್ಲಿ ಬಿಕ್ಕಟ್ಟು – ರಾಮನಗರ, ಶಿವಮೊಗ್ಗ ಇನ್ನು ಕಗ್ಗಂಟು

    ಬೆಂಗಳೂರು: ಬೈ ಎಲೆಕ್ಷನ್ ಬ್ಯಾಟೆಲ್‍ಗೆ ಎರಡು ರಾಷ್ಟ್ರೀಯ ಪಕ್ಷಗಳು ಇಂದು ಅಭ್ಯರ್ಥಿಗಳನ್ನ ಅಂತಿಮಗೊಳಿಸುವ ಸಾಧ್ಯತೆ ಇದೆ.

    ಎರಡು ವಿಧಾನಸಭಾ, ಮೂರು ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನ ಕಣಕ್ಕಿಳಿಸೋದು ಪಕ್ಕಾ ಆಗಿದೆ. ಜಮಖಂಡಿ ಮತ್ತು ಬಳ್ಳಾರಿ ಕ್ಷೇತ್ರದಲ್ಲಿ ಕಾಂಗ್ರೆಸ್, ರಾಮನಗರ ಹಾಗು ಮಂಡ್ಯ ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ ಮಾಡುವ ಸಾಧ್ಯತೆಗಳಿವೆ. ಆದರೆ ಶಿವಮೊಗ್ಗದಲ್ಲಿ ಬಿಜೆಪಿ ಎದುರಾಳಿ ಯಾರಾಗಬೇಕು ಅನ್ನೋದರ ಬಗ್ಗೆ ಮೈತ್ರಿ ಮಾತುಕತೆ ಅಂತಿಮವಾಗಿಲ್ಲ.

    ಈ ನಡುವೆ ಇವತ್ತು ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗಪಾಲ್ ನೇತೃತ್ವದಲ್ಲಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ಉಪಚುನಾವಣೆ ನಡೆಯುವ ಕ್ಷೇತ್ರಗಳ ಮುಖಂಡರ ಸಭೆ ನಡೆಯಲಿದೆ. ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ವಿಚಾರ, ಮೈತ್ರಿ ವಿಚಾರ ಪ್ರಸ್ತಾಪವಾಗಲಿದೆ. ಇನ್ನೊಂದೆಡೆ ಬಿಜೆಪಿ ಕೂಡ ಇವತ್ತೇ ಅಭ್ಯರ್ಥಿಗಳನ್ನ ಅಂತಿಮಗೊಳಿಸುವ ಸಾಧ್ಯತೆ ಇದೆ.

    ಇಂದು ಸಂಜೆ ನಾಲ್ಕು ಗಂಟೆಗೆ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಕೋರ್‍ಕಮಿಟಿ ಸಭೆ ನಡೆಯಲಿದೆ. ಬಿಎಸ್ ಯಡಿಯೂರಪ್ಪವರ ನೇತೃತ್ವದಲ್ಲಿ ನಡೆಯುವ ಕೋರ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳನ್ನ ಅಂತಿಮಗೊಳಿಸಿ ಹೈಕಮಾಂಡ್‍ಗೆ ಹೆಸರುಗಳನ್ನ ಶಿಫಾರಸ್ಸು ಮಾಡಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮೈತ್ರಿ ಸರ್ಕಾರದ ಬೈ ಎಲೆಕ್ಷನ್ ಚಕ್ರವ್ಯೂಹ ಭೇದಿಸಲು ಬಿಜೆಪಿ ಪ್ಲಾನ್-ಹೈಕಮಾಂಡ್‍ನಿಂದ 2+1 ಫಾರ್ಮುಲಾ

    ಮೈತ್ರಿ ಸರ್ಕಾರದ ಬೈ ಎಲೆಕ್ಷನ್ ಚಕ್ರವ್ಯೂಹ ಭೇದಿಸಲು ಬಿಜೆಪಿ ಪ್ಲಾನ್-ಹೈಕಮಾಂಡ್‍ನಿಂದ 2+1 ಫಾರ್ಮುಲಾ

    ಬೆಂಗಳೂರು: ಕರ್ನಾಟಕದ ಎರಡು ವಿಧಾನಸಭೆ ಮತ್ತು ಮೂರು ಲೋಕಸಭಾ ಕ್ಷೇತ್ರಗಳ ಉಪ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ರಾಜಕೀಯ ಪಕ್ಷಗಳು ಗೆಲುವಿನ ಲೆಕ್ಕಾಚಾರದಲ್ಲಿ ನಿರತವಾಗಿವೆ. ವಿಧಾನಸಭಾ ಚುನಾವಣೆಯಲ್ಲಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಬಿಜೆಪಿ ಸರ್ಕಾರ ರಚಿಸುವಲ್ಲಿ ವಿಫಲವಾಯಿತು. ಈ ಹಿನ್ನೆಲೆಯಲ್ಲಿ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಮೈತ್ರಿ ಸರ್ಕಾರಕ್ಕೆ ತಿರುಗೇಟು ನೀಡಲು ಉಪಕದನದ ರಣತಂತ್ರಗಳನ್ನು ರಚಿಸಲು ಬಿಜೆಪಿ ಮುಂದಾಗಿದೆ.

    ಹೀಗಾಗಿ ಬಿಜೆಪಿ ಹೈಕಮಾಂಡ್ ಈಗಾಗಲೇ ರಾಜ್ಯ ನಾಯಕರಿಗೆ 2+1 ಫಾರ್ಮುಲಾ ಅನುಸರಿಸುವಂತೆ ಸೂಚಿಸಿದೆ. ಉಪ ಚುನಾವಣೆ ಇಷ್ಟವಿಲ್ಲದಿದ್ದರೂ ಬಿಜೆಪಿಗೆ ಬೈ ಎಲೆಕ್ಷನ್ ನಲ್ಲಿ ಗೆಲ್ಲುವುದು ಅನಿವಾರ್ಯವಾಗಿದೆ. 3 ಕ್ಷೇತ್ರಗಳ ಲೋಕಸಭೆ ಉಪಚುನಾವಣೆಯಲ್ಲಿ ಎರಡು ಕ್ಷೇತ್ರ ಗೆಲ್ಲೋದು, ಎರಡು ಕ್ಷೇತ್ರಗಳ ವಿಧಾನಸಭೆ ಚುನಾವಣೆಯಲ್ಲಿ 1 ಕ್ಷೇತ್ರ ಗೆಲ್ಲೋದು ಬಿಜೆಪಿಯ 2+1 ಫಾರ್ಮುಲಾ. ಚುನಾವಣೆಯ 5 ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲು ಬಿಜೆಪಿ 5 ತಂಡಗಳನ್ನು ರಚಿಸಿದೆಯಂತೆ. ಈ ಎಲ್ಲ ಟೀಂಗಳು ಪಕ್ಷದ ಅಭ್ಯರ್ಥಿಯ ಪರ ಪ್ರಚಾರ ಮಾಡಲಿದೆ ಎಂಬ ಮಾಹಿತಿಗಳು ಲಭ್ಯವಾಗಿವೆ.

    2+1 ಬಿಜೆಪಿ ಟಾಸ್ಕ್

    ಟೀಂ ನಂಬರ್ 1:
    ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಶಿವಮೊಗ್ಗ ಉಸ್ತುವಾರಿ
    ಯಡಿಯೂರಪ್ಪರಿಗೆ ಈಶ್ವರಪ್ಪ, ವಿಜಯೇಂದ್ರ ಸಾಥ್
    ಒಟ್ಟು ಮೂವರ ನೇತೃತ್ವದ ಟೀಂಗೆ ಸಾಥ್ ನೀಡಲು 10 ಶಾಸಕರು ಉಸ್ತುವಾರಿಗಳು

    ಟೀಂ ನಂಬರ್ 2:
    ಶಾಸಕ ಶ್ರೀ ರಾಮುಲು ನೇತೃತ್ವದಲ್ಲಿ ಬಳ್ಳಾರಿ ಉಸ್ತುವಾರಿ
    ರಾಮುಲು ಅವರಿಗೆ ಸಂಸದೆ ಶೋಭಾ, ಶಾಸಕ ಸೋಮಶೇಖರ್ ರೆಡ್ಡಿ ಸಾಥ್
    ಮೂವರ ನೇತೃತ್ವದ ಟೀಂಗೆ ಸಾಥ್ ನೀಡಲು 10 ಶಾಸಕರು ಉಸ್ತುವಾರಿಗಳು

    ಟೀಂ ನಂಬರ್ 2:
    ಮಾಜಿ ಡಿಸಿಎಂ ಆರ್.ಅಶೋಕ್ ನೇತೃತ್ವದಲ್ಲಿ ಮಂಡ್ಯ ಉಸ್ತುವಾರಿ
    ಅಶೋಕ್ ಗೆ ಪ್ರತಾಪ್ ಸಿಂಹ, ಸಿ.ಟಿ.ರವಿ ಸಾಥ್
    ಮೂವರ ಟೀಂಗೆ ಸಾಥ್ ನೀಡಲು 8 ಶಾಸಕರುಗಳ ಉಸ್ತುವಾರಿ

    ಟೀಂ ನಂಬರ್ 4:
    ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ನೇತೃತ್ವದಲ್ಲಿ ರಾಮನಗರ ವಿಧಾನಸಭಾ ಕ್ಷೇತ್ರದ ಉಸ್ತುವಾರಿ
    ಯೋಗೇಶ್ವರ್ ಅವರಿಗೆ ಪರಿಷತ್ ಸದಸ್ಯರಾದ ರವಿಕುಮಾರ್, ತೇಜಸ್ವಿನಿ ಗೌಡ ಸಾಥ್
    ಮೂವರ ಟೀಂಗೆ 5 ಮಂದಿ ಹಾಲಿ ಶಾಸಕರು, 3 ಮಂದಿ ಮಾಜಿ ಶಾಸಕರುಗಳ ಉಸ್ತುವಾರಿ

    ಟೀಂ ನಂಬರ್ 5:
    ಮಾಜಿ ಸಿಎಂ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಜಮಖಂಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿ
    ಶೆಟ್ಟರ್ ಅವರಿಗೆ ಶಾಸಕರಾದ ಗೋವಿಂದ ಕಾರಜೋಳ, ಮುರುಗೇಶ್ ನಿರಾಣಿ ಸಾಥ್
    ಮೂವರ ಟೀಂಗೆ 10 ಮಂದಿ ಶಾಸಕರುಗಳ ಉಸ್ತುವಾರಿ

    ಇತ್ತ ಬಳ್ಳಾರಿ ಮತ್ತು ಶಿವಮೊಗ್ಗ ಎರಡು ಕ್ಷೇತ್ರಗಳು ಬಿಜೆಪಿ ಭದ್ರಕೋಟೆ ಎಂದು ಕರೆಸಿಕೊಳ್ಳುತ್ತಿವೆ. ಹೀಗಾಗಿ ಉಪ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಕಾಂಗ್ರೆಸ್-ಜೆಡಿಎಸ್ ಸರ್ಕಾರ ನಿರ್ಧರಿಸಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಯಡಿಯೂರಪ್ಪ ಪುತ್ರ ಬಿ.ವೈ. ರಾಘವೇಂದ್ರ ಸ್ಪರ್ಧಿಸುವುದು ಖಚಿತವಾಗಿದೆ. ಬಳ್ಳಾರಿಯಲ್ಲಿ ಏಳೆಂಟು ಜನ ಆಕಾಂಕ್ಷಿಗಳಿದ್ದಾರೆ ಅಂತಾ ಶಾಸಕ ಶ್ರೀರಾಮುಲು ಹೇಳಿಕೊಂಡಿದ್ದಾರೆ. ಹಾಗಾಗಿ ಬಳ್ಳಾರಿಯಲ್ಲಿ ಯಾರಿಗೆ ಬಿಜೆಪಿ ಟಿಕೆಟ್ ಸಿಗುತ್ತೆ ಅನ್ನೋ ಕುತೂಹಲ ಮನೆ ಮಾಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv