Tag: karnataka covid-19

  • ರಾಜ್ಯದಲ್ಲಿಂದು 41,400 ಹೊಸ ಪ್ರಕರಣ: ಸೋಂಕಿತರಿಗಿಂತ ಗುಣಮುಖರಾದವರೇ ಹೆಚ್ಚು

    ರಾಜ್ಯದಲ್ಲಿಂದು 41,400 ಹೊಸ ಪ್ರಕರಣ: ಸೋಂಕಿತರಿಗಿಂತ ಗುಣಮುಖರಾದವರೇ ಹೆಚ್ಚು

    ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಮೂರನೇ ಅಲೆಯ ಏರಿಳಿತ ಆಗುತ್ತಿದೆ. ಇಂದು 41,400 ಹೊಸ ಪ್ರಕರಣಗಳು ದೃಢಪಟ್ಟಿದೆ. ಇದೇ ಮೊದಲ ಬಾರಿಗೆ ಕೊರೊನಾ ಪ್ರಕರಣಗಳಿಗಿಂತ ಗುಣಮುಖರಾಗಿ ಡಿಸ್ಚಾರ್ಜ್‌ ಆದವರ ಸಂಖ್ಯೆಯೇ ಹೆಚ್ಚಾಗಿದೆ.

    ಈ ಕುರಿತು ಆರೋಗ್ಯ ಸಚಿವ ಡಾ. ಕೆ.ಸುಧಾಕರ್‌ ಅವರು ಟ್ವೀಟ್‌ ಮಾಡಿದ್ದಾರೆ. ಇಂದು 53,093 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದಾರೆ. ಸದ್ಯ 3,50,742 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿಂದು 52 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಎಲ್ಲರಿಗೂ ಮಾನಸಿಕ ಆರೋಗ್ಯದ ತಪಾಸಣೆ ಅಗತ್ಯ: ಸುಧಾಕರ್

    ಕಳೆದ 24 ಗಂಟೆಗಳಲ್ಲಿ ಬೆಂಗಳೂರು ನಗರದಲ್ಲಿ 19,105 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, 19 ಮಂದಿ ಸೋಂಕಿನಿಂದ ಕೊನೆಯುಸಿರೆಳೆದಿದ್ದಾರೆ. ನಗರದಲ್ಲಿ 212 ಸಾವಿರ ಸಕ್ರಿಯ ಪ್ರಕರಣಗಳಿವೆ ಎಂದು ಟ್ವಿಟ್ಟರ್‌ನಲ್ಲಿ ವಿವರಿಸಿದ್ದಾರೆ.

    ರಾಜ್ಯದಲ್ಲಿ ಕೋವಿಡ್‌ ಪಾಸಿಟಿವಿಟಿ ದರ ಶೇ.26.70 ಇದೆ. ಕಳೆದ 24 ಗಂಟೆಗಳಲ್ಲಿ 1,55,054 ಮಂದಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: 2-3 ವಾರಗಳಲ್ಲಿ 3ನೇ ಅಲೆ ಕಡಿಮೆಯಾಗುತ್ತೆ: ಸುಧಾಕರ್

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 402, ಬಳ್ಳಾರಿ 775, ಬೆಳಗಾವಿ 977, ಬೆಂಗಳೂರು ಗ್ರಾಮಾಂತರ 958, ಬೆಂಗಳೂರು ನಗರ 19,105, ಬೀದರ್ 403, ಚಾಮರಾಜನಗರ 589, ಚಿಕ್ಕಬಳ್ಳಾಪುರ 915, ಚಿಕ್ಕಮಗಳೂರು 244, ಚಿತ್ರದುರ್ಗ 649, ದಕ್ಷಿಣ ಕನ್ನಡ 667, ದಾವಣಗೆರೆ 403, ಧಾರವಾಡ 1,511, ಗದಗ 168, ಹಾಸನ 1,381, ಹಾವೇರಿ 164, ಕಲಬುರಗಿ 573, ಕೊಡಗು 389, ಕೋಲಾರ 2,185, ಕೊಪ್ಪಳ 310, ಮಂಡ್ಯ 1,495, ಮೈಸೂರು 1,494, ರಾಯಚೂರು 214, ರಾಮನಗರ 242, ಶಿವಮೊಗ್ಗ 494, ತುಮಕೂರು 2,026, ಉಡುಪಿ 1,202, ಉತ್ತರ ಕನ್ನಡ 1,007, ವಿಜಯಪುರ 333 ಮತ್ತು ಯಾದಗಿರಿಯಲ್ಲಿ 125 ಪಾಸಿಟಿವ್ ಪ್ರಕರಣ ದಾಖಲಾಗಿದೆ.

  • ರಾಜ್ಯದಲ್ಲಿಂದು 11,698 ಮಂದಿಗೆ ಕೊರೊನಾ – ಬೆಂಗಳೂರಲ್ಲಿ ಒಂದೇ ದಿನ 146 ಓಮಿಕ್ರಾನ್‌ ಪ್ರಕರಣ ದೃಢ

    ರಾಜ್ಯದಲ್ಲಿಂದು 11,698 ಮಂದಿಗೆ ಕೊರೊನಾ – ಬೆಂಗಳೂರಲ್ಲಿ ಒಂದೇ ದಿನ 146 ಓಮಿಕ್ರಾನ್‌ ಪ್ರಕರಣ ದೃಢ

    ಬೆಂಗಳೂರು: ರಾಜ್ಯದಲ್ಲಿ ಇಂದು 11,698 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಅಲ್ಲದೇ ಬೆಂಗಳೂರಿನಲ್ಲಿ ಒಂದೇ ದಿನದಲ್ಲಿ 146 ಹೊಸ ಓಮಿಕ್ರಾನ್‌ ಪ್ರಕರಣಗಳು ಪತ್ತೆಯಾಗಿವೆ.

    ಆರೋಗ್ಯ ಇಲಾಖೆ ವರದಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 4 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಇಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಇಂದಿನಿಂದ ಬೂಸ್ಟರ್ ಡೋಸ್ – ಯಾರು ಪಡೆಯಬಹುದು? ಅರ್ಹತೆ ಏನು?

    ರಾಜ್ಯಾದ್ಯಂತ ಇಂದು 1,148 ಸೋಂಕಿತರು ಚೇತರಿಸಿಕೊಂಡಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಸದ್ಯ 60,148 ಸಕ್ರಿಯ ಪ್ರಕರಣಗಳಿವೆ. ಇಂದು ಕೋವಿಡ್‌ ಪಾಸಿಟಿವಿಟಿ ದರ ಶೇ.7.77ಕ್ಕೆ ಏರಿದೆ.

    ರಾಜ್ಯದಲ್ಲಿ ಓಮಿಕ್ರಾನ್‌ ಪ್ರಕರಣಗಳ ಕುರಿತು ಟ್ವೀಟ್‌ ಮಾಡಿರುವ ಆರೋಗ್ಯ ಸಚಿವ ಡಾ. ಕೆ.ಸುಧಾಕರ್‌, ಬೆಂಗಳೂರಿನಲ್ಲಿ ಇಂದು 146 ಹೊಸ ಓಮಿಕ್ರಾನ್‌ ಪ್ರಕರಣಗಳು ದೃಢಪಟ್ಟಿವೆ. ರಾಜ್ಯದಲ್ಲಿ ಒಟ್ಟು ಓಮಿಕ್ರಾನ್‌ ಪೀಡಿತರ ಸಂಖ್ಯೆ 479ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ಗೆ ಕೊರೊನಾ ಪಾಸಿಟಿವ್

    ಹೆಲ್ತ್ ಬುಲೆಟಿನ್ ಪ್ರಕಾರ, ಬಾಗಲಕೋಟೆ 7, ಬಳ್ಳಾರಿ 93, ಬೆಳಗಾವಿ 129, ಬೆಂಗಳೂರು ಗ್ರಾಮಾಂತರ 143, ಬೆಂಗಳೂರು ನಗರ 9221, ಬೀದರ್ 37, ಚಾಮರಾಜನಗರ 40, ಚಿಕ್ಕಬಳ್ಳಾಪುರ 53, ಚಿಕ್ಕಮಗಳೂರು 43, ಚಿತ್ರದುರ್ಗ 27, ದಕ್ಷಿಣ ಕನ್ನಡ 176, ದಾವಣಗೆರೆ 22, ಧಾರವಾಡ 144, ಗದಗ 16, ಹಾಸನ 171, ಹಾವೇರಿ 0, ಕಲಬುರಗಿ 88, ಕೊಡಗು 23, ಕೋಲಾರ 65, ಕೊಪ್ಪಳ 7, ಮಂಡ್ಯ 306, ಮೈಸೂರು 309, ರಾಯಚೂರು 4, ರಾಮನಗರ 8, ಶಿವಮೊಗ್ಗ 75, ತುಮಕೂರು 139, ಉಡುಪಿ 219, ಉತ್ತರ ಕನ್ನಡ 100, ವಿಜಯಪುರ 28 ಹಾಗೂ ಯಾದಗಿರಿಯಲ್ಲಿ 5 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ.