Tag: Karnataka Election 2018

  • ಕ್ಷೇತ್ರದ ಜನರು ಜಾತಿ, ಧರ್ಮ ನೋಡದೇ ಅಭಿವೃದ್ಧಿಗೆ ಮತ ನೀಡಿದ್ದಾರೆ: ಮುನಿರತ್ನ

    ಕ್ಷೇತ್ರದ ಜನರು ಜಾತಿ, ಧರ್ಮ ನೋಡದೇ ಅಭಿವೃದ್ಧಿಗೆ ಮತ ನೀಡಿದ್ದಾರೆ: ಮುನಿರತ್ನ

    ಬೆಂಗಳೂರು: ರಾಜರಾಜೇಶ್ವರಿ ಚುನಾವಣೆಯ ಫಲಿತಾಂಶ ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ಕಾರಣ ಕ್ಷೇತ್ರದ ಜನರು ಜಾತಿ, ಧರ್ಮ ನೋಡದೇ ಅಭಿವೃದ್ಧಿಗೆ ಮತ ನೀಡಿದ್ದಾರೆ. ಒಳ್ಳೆಯ ಕೆಲಸ ಮಾಡಿದ್ರೆ ಯಾವ ವ್ಯಕ್ತಿಯೂ ಸಾರ್ವಜನಿಕ ಜೀವನದಲ್ಲಿ ಯಶಸ್ವಿಯಾಗಹುಬುದು ಎಂಬುದಕ್ಕೆ ಇಂದು ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರ ಉದಾಹರಣೆಯಾಗಿದೆ ಎಂದು ಕಾಂಗ್ರೆಸ್ ಶಾಸಕ ಮುನಿರತ್ನ ಹೇಳಿದ್ದಾರೆ.

    ಅಭಿವೃದ್ಧಿ ಕೆಲಸಗಳನ್ನು ಗುರುತಿಸಿ ಇವತ್ತು ಮತದಾರರು ನನ್ನ ಕೈ ಹಿಡಿದಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪನವರು ಹಣ ಬಲದಿಂದ ಗೆದ್ದಿದ್ದಾರೆ ಅಂತಾ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿರೋದನ್ನು ನೋಡಿದ್ದೇನೆ. ಜನಾದೇಶವನ್ನು ಹಣದೊಂದಿಗೆ ಹೋಲಿಸಿ ಮತದಾರರನ್ನು ಅವಮಾನಿಸಬೇಡಿ. ತಾವು ಹಿರಿಯರು ಎಚ್ಚರಿಕೆಯಿಂದ ಮಾತನಾಡಬೇಕು. ಒಂದು ಬಾರಿ ನನ್ನ ಕ್ಷೇತ್ರಕ್ಕೆ ಬಂದು ನೋಡಿ ಮುನಿರತ್ನ ಹೇಗೆ ಗೆಲುವು ಕಂಡಿದ್ದು ನಿಮಗೆ ಗೊತ್ತಾಗುತ್ತದೆ ಅಂತಾ ವಾಗ್ದಾಳಿ ನಡೆಸಿದ್ರು.

    ಚುನಾವಣೆ ಮುಂದೂಡಿದ್ದು ನಮಗೆ ಒಳ್ಳೆದಾಯಿತು. ನಕಲಿ ಮತದಾರರನ್ನು ತಡೆದಿದ್ದರಿಂದ ಲಾಭವಾಗಿದೆ. ಆ ಮತಗಳನ್ನು ತಡೆಯದೇ ಇದ್ದಿದ್ರೆ ಇಂದು ನಮಗೆ ತೊಂದರೆ ಆಗುತ್ತಿತ್ತು. ಕ್ಷೇತ್ರದ ಜನರಿಗಾಗಿ ಮುಂದಿನ ದಿನಗಳಲ್ಲಿಯೂ ನನ್ನ ಅಭಿವೃದ್ಧಿ ಕೆಲಸಗಳು ಮುಂದುವರೆಯಲಿವೆ ಅಂತಾ ಹೇಳಿದ್ರು.

    25,492 ಸಾವಿರ ಮತಗಳ ಅಂತರದಿಂದ ಮುನಿರತ್ನ ಗೆಲ್ಲುವ ಮೂಲಕ ಎರಡನೇ ಬಾರಿಗೆ ಶಾಸಕರಾಗಿ ಆಯ್ಕೆ ಆಗಿದ್ದಾರೆ. ಮುನಿರತ್ನ ಅವರಿಗೆ 1,08,064 ಮತಗಳು ಬಿದ್ದರೆ ಬಿಜೆಪಿ ಮುನಿರಾಜು ಗೌಡ ಅವರಿಗೆ 82,572 ಮತಗಳು ಬಿದ್ದಿವೆ. ಜೆಡಿಎಸ್‍ನ ರಾಮಚಂದ್ರ ಅವರಿಗೆ 60,360 ಮತಗಳು ಬಿದ್ದಿವೆ.

  • ಆಗಿದ್ದೆಲ್ಲಾ ಒಳ್ಳೆಯದಕ್ಕೆ ಆಗಿದೆ, ಇಷ್ಟೊಂದು ಲೀಡ್ ಬರುತ್ತೆ ಅಂದ್ಕೊಂಡಿರಲಿಲ್ಲ: ಮುನಿರತ್ನ ಮಗಳು

    ಆಗಿದ್ದೆಲ್ಲಾ ಒಳ್ಳೆಯದಕ್ಕೆ ಆಗಿದೆ, ಇಷ್ಟೊಂದು ಲೀಡ್ ಬರುತ್ತೆ ಅಂದ್ಕೊಂಡಿರಲಿಲ್ಲ: ಮುನಿರತ್ನ ಮಗಳು

    ಬೆಂಗಳೂರು: ರಾಜರಾಜೇಶ್ವರಿ ನಗರದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ನ ಮುನಿರತ್ನ 40 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದಿದ್ದಾರೆ.

    ತಂದೆ ಮುನಿರತ್ನ ಚುನಾವಣೆಯಲ್ಲಿ ಗೆದ್ದ ಖುಷಿಯಲ್ಲಿ ಮಾತನಾಡಿದ ಅವರ ಮಗಳು ಸಿಂಧೂರಿ, “ಇದು ನಮಗೆ ಸಂತೋಷದ ವಿಷಯ. ಚುನಾವಣೆ ಮುಂದೂಡಿದ್ದು, ಒಳೆಯದೇ ಆಯಿತ್ತು. ಆಗುವುದೆಲ್ಲ ಒಳ್ಳೆಯದ್ದಕ್ಕೆ ಆಗುತ್ತದೆ. ನಮ್ಮ ವಿರೋಧ ಪಕ್ಷದವರು ಆಗಲಿ, ಬೇರೆಯವರೇ ಆಗಲಿ ಅವರು ಒಳ್ಳೆಯ ಕೆಲಸವನ್ನೇ ಮಾಡಿದ್ದಾರೆ. ಅವರನ್ನು ನಾನು ಧನ್ಯವಾದ ತಿಳಿಸಬೇಕು” ಎಂದು ಹೇಳಿದರು.

    ನಾನು ಈಗ ತಾನೇ ನನ್ನ ತಂದೆ ಜೊತೆ ಮಾತನಾಡಿಕೊಂಡು ಬಂದಿದ್ದೇನೆ. ಕೆಟ್ಟ ವಿಚಾರಕ್ಕಾಗಿ ಇಡೀ ದೇಶ ಆರ್.ಆರ್ ನಗರದತ್ತ ತಿರುಗಿ ನೋಡಿದೆ. ಈಗ ಒಳ್ಳೆಯ ವಿಚಾರಕ್ಕಾಗಿ ದೇಶ ಆರ್.ಆರ್ ನಗರದತ್ತ ತಿರುಗಿ ನೋಡಬೇಕು. ಆರ್ ಆರ್ ನಗರವನ್ನು ನೀವು ಆ ರೀತಿ ಮಾಡಬೇಕೆಂದು ನಾನು ನನ್ನ ತಂದೆಯ ಹತ್ತಿರ ಹೇಳಿದ್ದೇನೆ. ನನ್ನ ತಂದೆಯ ಮೇಲೆ ನನಗೆ ನಂಬಿಕೆ ಇದೆ. ಅವರು ಈ ಕೆಲಸವನ್ನು ಮಾಡುತ್ತಾರೆ ಎಂದು ಸಿಂಧೂರಿ ತಿಳಿಸಿದ್ದಾರೆ.

    2013ರ ಚುನಾವಣೆಯಲ್ಲಿ ಮುನಿರತ್ನ 18,813 ಮತಗಳ ಅಂತರದಿಂದ ಗೆದ್ದಿದ್ದರು. ಮುನಿರತ್ನ 71,064 ಮತಗಳನ್ನು ಪಡೆದಿದ್ದರೆ, ಜೆಡಿಎಸ್ ತಿಮ್ಮನಂಜಯ್ಯ 51,251 ಮತಗಳನ್ನು ಪಡೆದಿದ್ದರು. ಬಿಜೆಪಿಯ ಎಂ ಶ್ರೀನಿವಾಸ್ ಗೆ 50,726 ಮತಗಳು ಬಿದ್ದಿತ್ತು.

  • ಕರ್ನಾಟಕ ಕೊನೆಗೂ ಕೇಸರಿಮಯ ಆಗಲಿಲ್ಲ: ಪ್ರಕಾಶ್ ರೈ

    ಕರ್ನಾಟಕ ಕೊನೆಗೂ ಕೇಸರಿಮಯ ಆಗಲಿಲ್ಲ: ಪ್ರಕಾಶ್ ರೈ

    ಬೆಂಗಳೂರು: ಕರ್ನಾಟಕವು ಕೊನೆಗೂ ಕೇಸರಿಮಯ ಆಗಲಿಲ್ಲ. ಅದು ವರ್ಣರಂಜಿತವಾಗಿ ಮುಂದುವರೆಯುತ್ತಿದೆ ಎಂದು ಚಿತ್ರನಟ ಪ್ರಕಾಶ್ ರೈ ಟ್ವೀಟ್ ಮಾಡಿದ್ದಾರೆ.

    55 ಗಂಟೆಗಳ ಹಿಂದೆ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದನ್ನು ಮರೆತುಬಿಡಿ 56ನೇ ಗಂಟೆಯಿಂದ ಹೊಸ ಮುಖ್ಯಮಂತ್ರಿ ಬರುತ್ತಿದ್ದಾರೆ ನೀವು ಚಿಂತಿಸಬೇಡಿ ಎಂದು ಜನರಿಗೆ ರೈ ಹೇಳಿದ್ದಾರೆ.

    ಇದಕ್ಕೆ ಪ್ರತಿಕ್ರಿಯೆ ನೀಡಿರುವ ಶಿಲ್ಪಾ ಗಣೇಶ್, ಕೊಂಕಣ ಸುತ್ತಿ ಮೈಲಾರಕ್ಕೆ ಯಾಕೆ ಬರುತ್ತೀರಿ, ನೇರವಾಗಿ ನಿಮ್ಮ ಗಂಜಿ ಕೇಂದ್ರದ ಬಾಗಿಲು ಮತ್ತೊಮ್ಮೆ ತೆರೆಯಿತು ಎಂದು ನೇರವಾಗಿ ಹೇಳಬಹುದಿತ್ತಲ್ಲ ಪ್ರಕಾಶ್ ರಾಜ್ ಅವರೇ ಎಂದಿದ್ದಾರೆ.

    ಈ ಹಿಂದೆ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ಪ್ರಕಾಶ್ ರೈ ಹಾಗೂ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರು ಭೇಟಿ ನೀಡಿದ್ದರು. ಈ ವೇಳೆ ಯಾವುದೇ ಕಾರಣಕ್ಕೂ ಕೋಮುವಾದಿಗಳ ಜೊತೆ ಕೈ ಜೋಡಿಸಬೇಡಿ ಎಂದು ಮನವಿ ಮಾಡಿದ್ದರು.

  • ಬಿಜೆಪಿ ಎಡವಿದ್ದು ಎಲ್ಲಿ? ಪಕ್ಷದ ಮುಂದಿನ ನಡೆ ಏನು?

    ಬಿಜೆಪಿ ಎಡವಿದ್ದು ಎಲ್ಲಿ? ಪಕ್ಷದ ಮುಂದಿನ ನಡೆ ಏನು?

    ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರ ಬಂತು. ಆದ್ರೆ ಸರ್ಕಾರ ರಚಿಸುವಷ್ಟು ಬಹುಮತ ಮಾತ್ರ ಪಡೆಯಲು ಸಾಧ್ಯವಾಗಲಿಲ್ಲ. ಆದ್ರು ಸರ್ಕಾರ ರಚನೆಗಾಗಿ ರಾಜ್ಯಪಾಲರಿಂದ ಅನುಮತಿ ಪಡೆದುಕೊಂಡು ಮೇ 17ರಂದು ಬಿ.ಎಸ್.ಯಡಿಯೂರಪ್ಪ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನವನ್ನು ಸ್ವೀಕರಿಸಿದ್ರು. ಇಂದು ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತು ಪಡಿಸುವ ಮುನ್ನವೇ ಸೋಲೊಪ್ಪಿಕೊಂಡ ನೂತನ ಸಿಎಂ ವಿದಾಯದ ಭಾಷಣ ಮಾಡಿ ರಾಜಿನಾಮೆ ಸಲ್ಲಿಸಿದ್ರು.

    ಈ ಎಲ್ಲ ಬೆಳವಣಿಗೆಗಳ ನಡುವೆ ದೊಡ್ಡ ಪಕ್ಷವಾಗಿದ್ದ ಬಿಜೆಪಿ ಸೋತಿದ್ದು ಎಲ್ಲಿ ಎಂಬುದರ ಬಗ್ಗೆ ಚರ್ಚೆಗಳು ಆರಂಭವಾಗಿದೆ.

    * ಬಿಜೆಪಿ ಎಡವಿದ್ದು ಎಲ್ಲಿ…?
    > ಮೈತ್ರಿಯ ಸೂಕ್ಷ್ಮತೆಯನ್ನು ಅರಿಯದೇ ಹೋಗಿದ್ದು
    > ಜೆಡಿಎಸ್, ದೇವೇಗೌಡರ ನಡೆಯ ಬಗ್ಗೆ ಗೊಂದಲಕ್ಕೀಡಾಗಿದ್ದು
    > ರಾಜ್ಯ ಬಿಜೆಪಿ ನಾಯಕರು ಬಿಎಸ್‍ವೈ ಅವರನ್ನ ಒಂಟಿಯಾಗಿಸಿದ್ದು
    > ಅನಂತಕುಮಾರ್, ಡಿವಿಎಸ್, ಈಶ್ವರಪ್ಪ, ಅಶೋಕ್ ಕೈಕಟ್ಟಿ ಕುಳಿತಿದ್ದು
    > ರಾಮುಲು, ಉಮೇಶ್ ಕತ್ತಿ, ಶೋಭಾ ಕರಂದ್ಲಾಜೆ ಮಾತ್ರ ಕಸರತ್ತು ಮಾಡಿದ್ದು
    > ಬಿಜೆಪಿ ರಾಷ್ಟ್ರೀಯ ನಾಯಕರು ಲೇಟ್ ಆಗಿ ಎಂಟ್ರಿ ಕೊಟ್ಟಿದ್ದು
    > ಬಹುಮತ ಸಾಬೀತಿಗೆ 7 ದಿನ ಸಮಯವನ್ನ ಕೇಳದೆ ಹೋಗಿದ್ದು
    > ಅಗತ್ಯ ದಾರಿಗಳ ಬಗ್ಗೆ ಎಚ್ಚರಿಕೆ ಹೆಜ್ಜೆ ಇಡದೇ ಹೋಗಿದ್ದು

    ಇತ್ತ ಯಡಿಯೂರಪ್ಪರ ರಾಜಿನಾಮೆ ಬಳಿಕ ಕಾಂಗ್ರೆಸ್-ಜೆಡಿಎಸ್ ಮೈತ್ರಿ ರಚಿಸಿಕೊಂಡು ಸರ್ಕಾರ ರಚನೆಗೆ ಮುಂದಾಗಿವೆ. ಸೋಮವಾರ ಮಧ್ಯಾಹ್ನ 12.30ಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸರ್ಕಾರ ರಚಿಸಲು ವಿಫಲವಾದ ಬಿಜೆಪಿಯ ಮುಂದಿನ ನಡೆ ಏನು ಎಂಬುದು ಈ ಕೆಳಗಿನಂತಿದೆ.

    * ಬಿಜೆಪಿ ಮುಂದೇನು…?
    > ಬಹುಮತ ಸಾಬೀತು ವೇಳೆ ಕಾಂಗ್ರೆಸ್, ಜೆಡಿಎಸ್ ಶಾಸಕರನ್ನ ದೂರ ಇರುವಂತೆ ನೋಡಿಕೊಳ್ಳುವುದು
    > ಕಾಂಗ್ರೆಸ್, ಜೆಡಿಎಸ್ ವಿರುದ್ಧ ರಾಜ್ಯದಲ್ಲಿ ರಾಜಕೀಯ ಹೋರಾಟ ನಡೆಸುವುದು.
    > ಲಿಂಗಾಯತ ನಾಯಕನನ್ನು ಸಿಎಂ ಆಗಲು ಬಿಡಲಿಲ್ಲ ಅಂತಾ ಬಿಂಬಿಸೋದು.
    > ಸಿಎಂ ಸ್ಥಾನ ತಪ್ಪಿದ ಅನುಕಂಪವನ್ನ ವೋಟ್ ಬ್ಯಾಂಕ್ ಆಗಿ ಪರಿವರ್ತಿಸಲು ಪ್ರಯತ್ನ.
    > ಲೋಕಸಭಾ ಚುನಾವಣೆಗೆ ತಯಾರಾಗೋದು, ಹೆಚ್ಚು ಸ್ಥಾನ ಗೆಲ್ಲಲು ಪ್ಲಾನ್ ಮಾಡೋದು.
    > ಯಾವಾಗ ಬೇಕಾದ್ರೂ ಚುನಾವಣೆ ನಡೆಯಬಹುದು ಅಂತೇಳಿ ಎಲೆಕ್ಷನ್‍ಗೆ ಸಿದ್ಧವಾಗೋದು.
    > ಬಿಎಸ್‍ವೈ ನೇತೃತ್ವದಲ್ಲೇ ರಾಜ್ಯದಲ್ಲಿ ಪ್ರವಾಸ ಮಾಡೋದು, ಪಕ್ಷ ಸಂಘಟನೆ ಮಾಡೋದು.

  • ಕೊನೆಯುಸಿರು ಇರೋವರೆಗೂ ನಾನು ರೈತರಿಗಾಗಿ ಹೋರಾಡ್ತೀನಿ: ಬಿಎಸ್‍ವೈ ವಿದಾಯ ಭಾಷಣ

    ಕೊನೆಯುಸಿರು ಇರೋವರೆಗೂ ನಾನು ರೈತರಿಗಾಗಿ ಹೋರಾಡ್ತೀನಿ: ಬಿಎಸ್‍ವೈ ವಿದಾಯ ಭಾಷಣ

    ಬೆಂಗಳೂರು: 56 ಗಂಟೆಗಳ ಕಾಲ ಕರುನಾಡಿನ ರಾಜನಾಗಿದ್ದ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

    104 ಸದಸ್ಯರ ಹೊಂದಿ ಈ ಬಾರಿ ಅಧಿಕಾರವನ್ನೇ ನಡೆಸಿಯೇ ತೀರುತ್ತೇವೆ ಎಂದಿದ್ದ ಬಿಎಸ್ ಯಡಿಯೂರಪ್ಪ ವಿಶ್ವಾಸ ಮತಯಾಚನೆ ನಡೆಸದೇ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡಿದ್ದಾರೆ.

    ವಿಶ್ವಾಸಮತ ಯಾಚನೆಗೂ ಮುನ್ನವೇ ಯಡಿಯೂರಪ್ಪನವರು ತಮ್ಮ ಸೋಲನ್ನು ಒಪ್ಪಿಕೊಂಡರು. ರಾಜೀನಾಮೆ ನೀಡುವ ಮುನ್ನ ಭಾಷಣ ಮಾಡಿದ ಬಿಎಸ್‍ವೈ, ಏಪ್ರಿಲ್ 14 2016ರಂದು ರಾಜ್ಯಾಧ್ಯಕ್ಷ ಮತ್ತು ಸಿಎಂ ಅಭ್ಯರ್ಥಿಯಾಗಿ ಪ್ರಧಾನಿ ಮೋದಿ ಮತ್ತು ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಘೋಷಣೆ ಮಾಡಿದರು. ಪರಿವರ್ತನಾ ಯಾತ್ರೆಯಲ್ಲಿ ಜನರ ಪ್ರೀತಿ ವಿಶ್ವಾಸ ಸಿಕ್ಕಿದ್ದು, ಅಂದು ಸಿಕ್ಕಿರುವ ಬೆಂಬಲವನ್ನು ನಾನು ಜೀವನ ಪೂರ್ತಿ ಮರೆಯುವುದಿಲ್ಲ. ಜನರು ನಮಗೆ 104 ಕ್ಷೇತ್ರಗಳಲ್ಲಿ ಗೆಲ್ಲಿಸಿ ಅಭೂತಪೂರ್ವ ಬೆಂಬಲ ನೀಡಿ, ಕಾಂಗ್ರೆಸ್ ಮತ್ತು ಜೆಡಿಎಸ್ ನ್ನು ತಿರಸ್ಕರಿಸಿದ್ದಾರೆ ಅಂತಾ ಭಾಷಣದ ಆರಂಭದಲ್ಲಿಯೇ ಎರಡೂ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ರು.

    ಚುನಾವಣಾ ಪ್ರಚಾರದಲ್ಲಿ ಅವರಪ್ಪಾಣೆ, ನಿಮ್ಮಪ್ಪರಾಣೆ ಸಿಎಂ ಆಗಲ್ಲ ಅಂತಾ ಒಬ್ಬರ ಮೇಲೊಬ್ಬರು ಆರೋಪ ಪ್ರತ್ಯಾರೋಪಗಳನ್ನು ಮಾಡುತ್ತಾ ಬಂದವರು ಇಂದು ಒಂದಾಗಿದ್ದಾರೆ. ಹಿಂದಿನ ಸರ್ಕಾರದ ವೈಫಲ್ಯತೆಯಿಂದಾಗಿ ಕರುನಾಡ ಜನರು ಕಾಂಗ್ರೆಸ್‍ನ್ನು ತಿರಸ್ಕರಿಸಿದ್ದಾರೆ. ಜನಾದೇಶದ ವಿರುದ್ಧ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ನನ್ನ ಕೊನೆಯುಸಿರು ಇರೋವರೆಗೂ ನಾನು ರೈತರಿಗಾಗಿ ಹೋರಾಡುತ್ತಿರುತ್ತೇನೆ. ರಾಜ್ಯದಲ್ಲಿಯ ಜನರು ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ರೈತರಿಗೆ ಸ್ವಾಭಿಮಾನದ ಬದುಕನ್ನು ಕಟ್ಟಿಕೊಡಲು ನಾನು ತೀರ್ಮಾನಿಸಿದ್ದೆ. ಕಳೆದ 5 ವರ್ಷಗಳಲ್ಲಿ ನಾನು ರಾಜಕೀಯ ಏಳು ಬೀಳುಗಳನ್ನು ಕಂಡಿದ್ದೇನೆ ಅಂತಾ ಹೇಳುವ ಮೂಲಕ ಭಾವುಕರಾದರು.

    ಯಾರ ಹಿಂದೆಯೋ ನಾನು ರಾಜಕೀಯ ಮಾಡಿಲ್ಲ. ರಾಜ್ಯದ ಜನರ ಸೇವೆ ಮಾಡ್ಬೇಕು, ರೈತರನ್ನು ಉಳಿಸಬೇಕು ಎಂಬ ಹಂಬಲ ನನ್ನಲಿದೆ. ಮುಂದಿನ ದಿನಗಳಲ್ಲಿಯೂ ನನ್ನ ಹೋರಾಟ ಮುಂದುವರೆಯುತ್ತದೆ. ನಮ್ಮ ರಾಜ್ಯದಲ್ಲಿ ಎಲ್ಲ ಸಂಪನ್ಮೂಲಗಳು ನಮ್ಮಲಿವೆ. ಆದ್ರೆ ಸದುಪಯೋಗ ಮಾಡಿಕೊಳ್ಳುವರ ಇಲ್ಲ. ಇಂದು ನನ್ನ ಪಾಲಿಗೆ ಅಗ್ನಿ ಪರೀಕ್ಷೆ ಇದ್ದಂತೆ ಕಾಣುತ್ತಿದೆ. ನಾನು ನನ್ನ ಜೀವನದುದ್ದಕ್ಕೂ ಹಲವ ಅಗ್ನಿ ಪರೀಕ್ಷೆಗಳನ್ನು ಎದುರಿಸಿದ್ದೇನೆ ಎಂದರು.

    ರಾಜ್ಯದ ಜನರು 113 ಸ್ಥಾನಗಳನ್ನು ನಿಮಗೆ ನೀಡಿದ್ರೆ ಇಡೀ ಕರ್ನಾಟಕದ ಚಿತ್ರಣವೇ ಬದಲಾಗುತ್ತಿತ್ತು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ 28ಕ್ಕೆ 28 ಸ್ಥಾನಗಳನ್ನು ಗೆಲ್ಲಿಸಿಕೊಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೊಡುಗೆಯನ್ನು ನೀಡುತ್ತೇವೆ. ಮುಂಬರುವ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೆ ಬಿಜೆಪಿ ಅಧಿಕಾರಕ್ಕೆ ಏರಲಿದೆ. ಅಧಿಕಾರದಲ್ಲಿ ಇರಲಿ ಅಥವಾ ವಿರೋಧ ಪಕ್ಷದಲ್ಲಿರಲಿ ಜನರ ಸೇವೆ ಮಾಡುತ್ತೇನೆ. ರಾಜಭವನಕ್ಕೆ ತೆರಳಿ ನನ್ನ ರಾಜಿನಾಮೆ ಸಲ್ಲಿಸುತ್ತೇನೆ. ಮುಂದಿನ 5 ವರ್ಷಗಳಲ್ಲಿ ಹೋರಾಟ ಮಾಡುತ್ತೇನೆ ಎಂದು ಹೇಳಿದರು.

  • ಖಾಸಗಿ ಹೋಟೆಲ್‍ನಲ್ಲಿ ಜೆಡಿಎಸ್ ತುರ್ತು ಸಭೆ

    ಖಾಸಗಿ ಹೋಟೆಲ್‍ನಲ್ಲಿ ಜೆಡಿಎಸ್ ತುರ್ತು ಸಭೆ

    ಬೆಂಗಳೂರು: ಹೈದರಾಬಾದ್‍ನಿಂದ ಆಗಮಿಸಿದ್ದ ಕಾಂಗ್ರೆಸ್ ಶಾಸಕರು ಕೆಜೆ ಜಾರ್ಜ್ ಒಡೆತನದ ಎಂಬೆಸಿ ಗಾಲ್ಫ್ ಬಿಸಿನೆಸ್ ಹೋಟೆಲ್ ನಲ್ಲಿ ತಂಗಿದ್ದರೆ, ಜೆಡಿಎಸ್ ಶಾಸಕರು ಲೆ ಮೆರಿಡಿಯನ್ ಹೋಟೆಲ್ ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

    ಈ ಹೋಟೆಲ್ ನಲ್ಲಿ ಜೆಡಿಎಸ್ ತುರ್ತು ಸಭೆಯಲ್ಲಿ ಕರೆದಿದ್ದು, ಶಾಸಕಾಂಗ ಪಕ್ಷದ ನಾಯಕ ಹೆಚ್‍ಡಿ ಕುಮಾರಸ್ವಾಮಿ ನಾಯಕರ ಜೊತೆ ಮಾತನಾಡಿದ್ದಾರೆ.

    ಬೆಳಿಗ್ಗೆ 11 ಗಂಟೆಗೆ ಬಸ್ ನಲ್ಲಿ ವಿಧಾನ ಸೌಧಕ್ಕೆ ಹೋಗೋಣ. ಯಾವುದೇ ಕಾರಣಕ್ಕೂ ಅಡ್ಡ ಮತದಾನಕ್ಕೆ ಅವಕಾಶವಿಲ್ಲ. ಸದನದಲ್ಲಿ ಗದ್ದಲ ಗಲಾಟೆ ಮಾಡದೇ ನಾವು ಬಹುಮತವನ್ನು ಸಾಬೀತು ಪಡಿಸೋಣ. ಬಿಜೆಪಿಯವರು ಸ್ವಲ್ಪ ಮಾತನಾಡಿ ರಾಜೀನಾಮೆ ಕೊಡುವುದಷ್ಟೆ ಅವರಿಗೆ ಉಳಿದಿರುವ ವಿಚಾರ ಎಂದು ಎಚ್‍ಡಿಕೆ ಸಭೆಯಲ್ಲಿ ಹೇಳಿದ್ದಾರೆ ಎನ್ನಲಾಗಿದೆ.

    ಧಾರವಾಡ ನವಲಗುಂದ ಕ್ಷೇತ್ರದಲ್ಲಿ ಸ್ಪರ್ಧಿಸಿ ಪರಾಜಿತಗೊಂಡ ಜೆಡಿಎಸ್ ಅಭ್ಯರ್ಥಿ ಕೋನರೆಡ್ಡಿ ಪ್ರತಿಕ್ರಿಯಿಸಿ, ಜೆಡಿಎಸ್ ಶಾಸಕರು ನಮ್ಮ ಜೊತೆಯಲ್ಲಿದ್ದಾರೆ. ಯಾರೂ ಬಿಟ್ಟು ಹೋಗಲ್ಲ. ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗುವುದು ಖಚಿತ. ಯಾರೂ ನಮ್ಮನ್ನು ಬಿಟ್ಟು ಹೋಗುವುದಿಲ್ಲ. ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿ ಸುಳ್ಳು ಎಂದು ಪ್ರತಿಕ್ರಿಯಿಸಿದ್ದಾರೆ.

  • ಮಾರ್ಗ ಮಧ್ಯೆ ಪ್ಲಾನ್ ಚೇಂಜ್: ನಮ್ಮ ಹೋಟೆಲ್‍ಗೆ ಬನ್ನಿ ಎಂದ ಜಾರ್ಜ್

    ಮಾರ್ಗ ಮಧ್ಯೆ ಪ್ಲಾನ್ ಚೇಂಜ್: ನಮ್ಮ ಹೋಟೆಲ್‍ಗೆ ಬನ್ನಿ ಎಂದ ಜಾರ್ಜ್

    ಬೆಂಗಳೂರು: ಹೈದರಾಬಾದ್ ನಿಂದ ಆಗಮಿಸಿದ ಕಾಂಗ್ರೆಸ್ ಶಾಸಕರು ಇಂದಿರಾನಗರದ 100 ಫೀಟ್ ಎಂಬೆಸಿ ಗಾಲ್ಫ್ ಬುಸಿನೆಸ್ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ.

    ಬಸ್ ರೆಸಾರ್ಟ್ ಗೆ ತೆರಳಲಿದೆ ಎಂದು ಆರಂಭದಲ್ಲಿ ಮಾಹಿತಿ ಸಿಕ್ಕಿತ್ತು. ಆದರೆ ಕೊನೆ ಕ್ಷಣದಲ್ಲಿ ಪ್ಲಾನ್ ಬದಲಾಗಿದ್ದು ಜಾರ್ಜ್ ಅವರು ರೆಸಾರ್ಟ್ ಬೇಡ ನಮ್ಮ ಹೋಟೆಲ್ ಗೆ ಬನ್ನಿ ಎಂದು ಡಿ.ಕೆ ಶಿವಕುಮಾರ್ ಮತ್ತು ಬೈರತಿ ಬಸವರಾಜ್ ಸಹೋದರರಿಗೆ ಸೂಚನೆ ನೀಡಿದ್ದರು.

    ಈ ಸೂಚನೆಯ ಹಿನ್ನೆಲೆಯಲ್ಲಿ ಶಾಸಕರ ಬಸ್ ಈಗ ಜಾರ್ಜ್ ಒಡೆತನದ ಎಂಬೆಸಿ ಗಾಲ್ಫ್ ಹೋಟೆಲ್‍ಗೆ ಆಗಮಿಸಿದ್ದು, ಹೋಟೆಲ್ ನಲ್ಲಿ ಶಾಸಕರು ವಿಶ್ರಾಂತಿ ಪಡೆಯುತ್ತಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕರು ಈ ಹೋಟೆಲ್‍ಗೆ ಭೇಟಿ ನೀಡಲಿದ್ದು, ಬಳಿಕ ನೇರವಾಗಿ ಇಲ್ಲಿಂದಲೇ ವಿಧಾನ ಸೌಧಕ್ಕೆ ಶಾಸಕರು ತೆರಳಲಿದ್ದಾರೆ.

    ಹೈದರಾಬಾದ್‍ಗೆ ತೆರಳುವ ಮುನ್ನ ಬಿಡದಿಯ ಈಗಲ್ ಟನ್ ರೆಸಾರ್ಟ್ ನಲ್ಲಿ ಕಾಂಗ್ರೆಸ್ ಶಾಸಕರು ಉಳಿದುಕೊಂಡಿದ್ದರು. ಹೀಗಾಗಿ ಇಲ್ಲಿಗೆ ಆಗಮಿಸಬಹುದು ಎನ್ನುವ ನಿರೀಕ್ಷೆ ಇತ್ತು. ಆದರೆ ಬಿಡದಿಯಿಂದ ವಿಧಾನಸೌಧಕ್ಕೆ 40 ಕಿ.ಮೀ ದೂರ ಇರುವ ಕಾರಣ ಎಂಬೆಸಿ ಗಾಲ್ಫ್ ಗೆ ತೆರಳುವ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.

  • ಬಿಎಸ್‍ವೈಗೆ ಮಾನ ಮರ್ಯಾದೆ ಇದ್ರೆ, ರಾಜಿನಾಮೆ ಕೊಟ್ಟು ಹೋಗ್ಬೇಕು: ರಾಮಲಿಂಗಾ ರೆಡ್ಡಿ

    ಬಿಎಸ್‍ವೈಗೆ ಮಾನ ಮರ್ಯಾದೆ ಇದ್ರೆ, ರಾಜಿನಾಮೆ ಕೊಟ್ಟು ಹೋಗ್ಬೇಕು: ರಾಮಲಿಂಗಾ ರೆಡ್ಡಿ

    ಬೆಂಗಳೂರು: ನೂತನ ಸಿಎಂ ಬಿ.ಎಸ್.ಯಡಿಯೂರಪ್ಪ ಅವ್ರಿಗೆ ಮಾನ ಮರ್ಯಾದೆ ಇದ್ರೆ ರಾಜಿನಾಮೆ ಕೊಟ್ಟು ಹೋಗಬೇಕು ಅಂತಾ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.

    ರಾಜಭವನ ಚಲೋ ಪ್ರತಿಭಟನೆ ವೇಳೆಯಲ್ಲಿ ಭಾಗಿಯಾಗಿದ್ದ ವೇಳೆ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಮಾಜಿ ಸಚಿವರು, ಈಗಾಗಲೇ ಸುಪ್ರೀಂ ಕೋರ್ಟ್ ಶನಿವಾರ ಸಂಜೆ 4 ಗಂಟೆಯೊಳಗೆ ವಿಶ್ವಾಸಮತ ಸಾಬೀತು ಮಾಡುವಂತೆ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ನಾವು ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತು ಮಾಡುತ್ತೇವೆ. ನಮ್ಮ ಪಕ್ಷ ಹಾಗು ಜೆಡಿಎಸ್ ನಿಂದ ಟಿಕೆಟ್ ಪಡೆದು ಗೆಲುವು ಸಾಧಿಸಿರುವ ನಮ್ಮ ಶಾಸಕರು ಬಿಜೆಪಿಗೆ ಹೋಗಲ್ಲ ಅಂತಾ ಆತ್ಮ ವಿಶ್ವಾಸ ವ್ಯಕ್ತಪಡಿಸಿದ್ರು.

    ಬಿಜೆಪಿಗೆ ಸರ್ಕಾರ ರಚಿಸಲು ರಾಜ್ಯಪಾಲರ ನಡೆಯನ್ನು ಪ್ರಶ್ನಿಸಿ ಇಂದು ಕಾಂಗ್ರೆಸ್ ನಾಯಕರು ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಮುಂದಾಗಿದೆ. ಬೆಂಗಳೂರಿನಲ್ಲಿ ಕಾಂಗ್ರೆಸ್‍ನ ರಾಜ್ಯ ಹಾಗು ಕೇಂದ್ರದ ನಾಯಕರು ರಾಜಭವನ ಚಲೋ ಚಳುವಳಿಗೆ ಚಾಲನೆ ಕೊಟ್ಟಿದ್ದಾರೆ. ಪ್ರತಿಭಟನೆಯಲ್ಲಿ ಕಾಂಗ್ರೆಸ್‍ನ ಕೇಂದ್ರ ನಾಯಕರಾದ ಗುಲಾಂನಬೀ ಆಜಾದ್, ಮಲ್ಲಿಕಾರ್ಜುನ್ ಖರ್ಗೆ, ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಸೇರಿದಂತೆ ಎಲ್ಲ ನಾಯಕರು ಮುಂದಾಗಿದ್ದಾರೆ.

    ಸುಪ್ರೀಂ ಕೋರ್ಟ್ ನ ತ್ರಿಸದ್ಯ ಪೀಠದಲ್ಲಿ ನಡೆದ ವಿಚಾರಣೆಯಲ್ಲಿ ಶನಿವಾರ 4 ಗಂಟೆಯ ಒಳಗಡೆ ಬಹುಮತವನ್ನು ಸಾಬೀತುಪಡಿಸಬೇಕು. ಅಷ್ಟೇ ಅಲ್ಲದೇ ಅಂಗ್ಲೋ ಇಂಡಿಯನ್ ನೇಮಕ ಮಾಡುವಂತಿಲ್ಲ. ಇದರ ಜೊತೆಯಲ್ಲಿ ಬಹುಮತ ಸಾಬೀತುಪಡೆಸುವ ವರೆಗೂ ಯಾವುದೇ ಆಡಳಿತಾತ್ಮಕ ನಿರ್ಧಾರವನ್ನು ಬಿಎಸ್ ಯಡಿಯೂರಪ್ಪನವರನ್ನು ಪ್ರಕಟಿಸುವಂತಿಲ್ಲ ಎಂದು ಆದೇಶಿಸಿದೆ.

    ಸುಪ್ರೀಂ ಆದೇಶವನ್ನು ಬಿಜೆಪಿ ಸ್ವಾಗತಿಸಿದ್ದು, ನಮಗೆ ಸಂಖ್ಯಾಬಲವಿದ್ದು ಬಹುಮತವನ್ನು ಸಾಬೀತು ಪಡಿಸುತ್ತೇವೆ ಎಂದು ನೂತನ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

  • ಸಿಎಂ ಬಿಎಸ್‍ವೈಗೆ ಅಗ್ನಿ ಪರೀಕ್ಷೆ-ಸುಪ್ರೀಂಕೋರ್ಟ್ ನಲ್ಲಿ ಇಂದು ಏನಾಗಬಹುದು?

    ಸಿಎಂ ಬಿಎಸ್‍ವೈಗೆ ಅಗ್ನಿ ಪರೀಕ್ಷೆ-ಸುಪ್ರೀಂಕೋರ್ಟ್ ನಲ್ಲಿ ಇಂದು ಏನಾಗಬಹುದು?

    ಬೆಂಗಳೂರು: ನಾಟಕೀಯ ತಿರುವುಗಳು, ಕಾನೂನು ಹೋರಾಟಗಳ ಆತಂಕದ ಮಧ್ಯೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಿ.ಎಸ್.ಯಡಿಯೂರಪ್ಪ ಅವ್ರಿಗೆ ಬಹುಮತ ಸಾಬೀತುಪಡಿಸುವ ಮುನ್ನವೇ ಸುಪ್ರೀಂ ಪರೀಕ್ಷೆ ಎದುರಾಗಿದೆ.

    ಜೆಡಿಎಸ್ ಮತ್ತು ಕಾಂಗ್ರೆಸ್ ಸಲ್ಲಿಸಿರೋ ಅರ್ಜಿಯ ವಿಚಾರಣೆ ಇಂದು ಕೂಡ ಮುಂದುವರೆಯಲಿದೆ. ಸುಪ್ರೀಂಕೋರ್ಟ್ ನ ತ್ರಿಸದಸ್ಯಪೀಠ ಗುರುವಾರ ಸೂಚಿಸಿದ್ದ ಪ್ರಕಾರ, ರಾಜ್ಯಪಾಲರಿಗೆ ಸಲ್ಲಿಸಲಾದ ಶಾಸಕರ ಬೆಂಬಲ ಪತ್ರವನ್ನು ಬಿಎಸ್‍ವೈ ಇಂದು ಹಾಜರುಪಡಿಸಬೇಕಿದೆ. ಮಂಗಳವಾರ ಮತ್ತು ಬುಧವಾರ ಯಡಿಯೂರಪ್ಪ ಸರ್ಕಾರ ರಚೆನೆಗೆ ಅವಕಾಶ ಕೋರಿ ರಾಜ್ಯಪಾಲರಿಗೆ ಎರಡು ಪತ್ರಗಳನ್ನು ನೀಡಿದ್ದರು. ಬಿಎಸ್‍ವೈ ಸಲ್ಲಿಸುವ ಈ ಬೆಂಬಲ ಪತ್ರಗಳಲ್ಲಿ ಕಂಟೆಂಟ್ ಆಧಾರದ ಮೇಲೆ ಇವತ್ತು ವಿಚಾರಣೆ ನಡೆಯೋ ಸಾಧ್ಯತೆಗಳಿವೆ.

    ಕಾಂಗ್ರೆಸ್ ಪರ ಅಭಿಷೇಕ್ ಮನು ಸಿಂಘ್ವಿ, ಕೇಂದ್ರ ಸರ್ಕಾರದ ಪರ ಅಟಾರ್ನಿ ಜನರಲ್, ಬಿಎಸ್‍ವೈ ಪರ ಮುಕುಲ್ ರೊಹ್ಟಗಿ ವಾದ ಮಂಡಿಸಲಿದ್ದಾರೆ. ವೈಯಕ್ತಿಕ ನೆಲೆಯಲ್ಲಿ ರಾಜ್ಯಪಾಲರ ನಡೆ ಪ್ರಶ್ನಿಸಿದ ಜೇಠ್ಮಲಾನಿ ಕೂಡ ತಮ್ಮ ವಾದ ಮಂಡಿಸುವ ಸಾಧ್ಯತೆಗಳಿವೆ. ಈ ನಡುವೆ ಬಿಜೆಪಿಗೆ ಅನುಕೂಲ ಮಾಡಿಕೊಡಲು ರಾಜ್ಯಪಾಲರು ಆಂಗ್ಲೋ ಇಂಡಿಯನ್ ಶಾಸಕರಾಗಿ ವಿನಿಶಾ ನಿರೋರಾ ನಾಮನಿರ್ದೇಶನಕ್ಕೆ ರಾಜ್ಯಪಾಲರು ತರಾತುರಿಯಲ್ಲಿ ಅಂಕಿತ ಹಾಕಿದ್ದಾರೆ ಆರೋಪಿಸಿ ಕಾಂಗ್ರೆಸ್-ಜೆಡಿಎಸ್ ಜಂಟಿಯಾಗಿ ಮತ್ತೊಂದು ಅರ್ಜಿ ಸಲ್ಲಿಸಿದೆ. ಈ ಅರ್ಜಿಯೂ ಇಂದೇ ವಿಚಾರಣೆಗೆ ಬರುವ ಸಾಧ್ಯತೆ ಇದೆ.

    ಸುಪ್ರೀಂಕೋರ್ಟ್ ನಲ್ಲಿ ಇಂದು ಏನಾಗಬಹುದು..?
    * 104 ಶಾಸಕರನ್ನು ಹೊರತುಪಡಿಸಿ ನಿಮ್ಮ ಬೆಂಬಲಕ್ಕಿರುವ ಶಾಸಕರು ಯಾರು ಎಂದು ಪ್ರಶ್ನಿಸಬಹುದು.
    * 104 ಶಾಸಕರಷ್ಟೇ ನಿಮ್ಮ ಬಳಿ ಇದ್ದಾರೆ.. ಬಹುಮತ ಹೇಗೆ ಸಾಬೀತುಪಡಿಸುವಿರಿ ಎಂದು ಪ್ರಶ್ನೆ ಮಾಡಬಹುದು.
    * ಬಹುಮತ ಸಾಬೀತಿಗೆ ನೀಡಲಾದ ಕಾಲಾವಕಾಶವನ್ನು ಕಡಿಮೆ ಮಾಡಬಹುದು.
    * ವಿಶ್ವಾಸಮತ ಸಾಬೀತುಪಡಿಸುವಂತೆ ಸಿಎಂ ಬಿಎಸ್‍ವೈಗೆ ಸೂಚಿಸಬಹುದು.
    * ಶಾಸಕರ ಪ್ರಮಾಣ ಸ್ವೀಕಾರಕ್ಕೆ ಮುನ್ನ ಅನ್ವಯ ಆಗಲ್ಲವೇ.. ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಆಗಲ್ಲವೇ ಎಂಬ ಬಗ್ಗೆ ಚರ್ಚೆ ನಡೆಯಬಹುದು.

    ಗುರುವಾರ ವಿಚಾರಣೆ ವೇಳೆ ಅಟಾರ್ನಿ ಜನರಲ್ ಜನಪ್ರತಿನಿಧಿಗಳು ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕವಷ್ಟೇ ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಆಗುತ್ತದೆ ಎಂದು ಹೇಳಿದ್ದರು.

  • ರಾತ್ರಿಯಿಡೀ ಖಾಸಗಿ ಹೋಟೆಲ್‍ನಲ್ಲಿ ಬಿಎಸ್‍ವೈ ಮೀಟಿಂಗ್-ಬಹುಮತ ಹೇಗೆ ಸಾಬೀತು ಮಾಡ್ತಾರೆ?

    ರಾತ್ರಿಯಿಡೀ ಖಾಸಗಿ ಹೋಟೆಲ್‍ನಲ್ಲಿ ಬಿಎಸ್‍ವೈ ಮೀಟಿಂಗ್-ಬಹುಮತ ಹೇಗೆ ಸಾಬೀತು ಮಾಡ್ತಾರೆ?

    ಬೆಂಗಳೂರು: ಇಂದು ಸುಪ್ರೀಂಕೋರ್ಟ್ ಮುಂದೆ ನೂತನ ಸಿಎಂ ಬಿ.ಎಸ್.ಯಡಿಯೂರಪ್ಪ ಬಹುಮತ ಸಾಬೀತುಪಡಿಸಬೇಕಿದೆ. ಇತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ಹೈಡ್ರಾಮಗಳ ಬಹುಮತ ಸಾಬೀತುಪಡಿಸಲು ಅಗತ್ಯವಿರುವ ಸಂಖ್ಯಾಬಲವನ್ನು ಹೊಂದಿಸೋ ಬಗ್ಗೆ ಹಾಗು ಮುಂದಿನ ರಣತಂತ್ರಗಳ ಬಗ್ಗೆ ರಾತ್ರಿಯಿಡೀ ಬಿಜೆಪಿ ನಾಯಕರು ಚರ್ಚೆ ನಡೆಸಿದ್ದಾರೆ.

    ನಗರದ ಖಾಸಗಿ ಹೋಟೆಲ್‍ನಲ್ಲಿ ನಡೆದ ಸಭೆಯಲ್ಲಿ ಸಿಎಂ ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಕಾಶ್ ಜಾವ್ಡೇಕರ್, ಜೆಪಿ ನಡ್ಡಾ, ಧಮೇಂದ್ರ ಪ್ರಧಾನ್ ಮತ್ತು ಅನಂತ್ ಕುಮಾರ್ ಸೇರಿದಂತೆ ಹಲವರು ಪಾಲ್ಗೊಂಡಿದ್ರು.

    ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ರಾಜ್ಯದ ಬಾರ್ಡರ್ ದಾಟಿದ್ದು ಬಿಎಸ್‍ವೈಗೆ ಫುಲ್ ಟೆನ್ಶನ್ ತರಿಸಿದೆ. ರಾತ್ರಿ ಮನೆಗೆ ಕೂಡ ಹೋಗದೇ ಮುಂದೇನು ಮಾಡಬೇಕು ಅನ್ನೋ ಬಗ್ಗೆ ತಲೆಕೆಡಿಸಿಕೊಂಡು ಕುಳಿತಿದ್ರು ಅಂತಾ ಎನ್ನಲಾಗಿದೆ. ಕೆಲವೇ ಕ್ಷಣಗಳ ಹಿಂದೆ ಬಿಎಸ್‍ವೈ ಮನೆಗೆ ಹಿಂದಿರುಗಿದ್ದಾರೆ. ಈ ನಡುವೆ ನೇರವಾಗಿ ಎಲ್ಲೂ ಕಾಣಿಸಿಕೊಳ್ಳದಿರಲು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮತ್ತು ಪ್ರಧಾನಿ ಮೋದಿ ನಿರ್ಧರಿಸಿದ್ದಾರೆ ಎನ್ನಲಾಗಿದೆ.

    ಬಹುಮತ ಹೇಗೆ ಸಾಬೀತು ಮಾಡಬಹುದು ಯಡಿಯೂರಪ್ಪ ಅನ್ನೋದನ್ನು ನೋಡೋದಾದ್ರೆ:
    * ಶಾಸಕರು ಪ್ರಮಾಣ ಸ್ವೀಕಾರ ಬಳಿಕ ಕಾಂಗ್ರೆಸ್ ಮತ್ತು ಜೆಡಿಎಸ್‍ನ ಕೆಲವರನ್ನು ಸೆಳೆದು ರಾಜೀನಾಮೆ ಕೊಡಿಸಬಹುದು.
    * ಒಂದು ಪಕ್ಷದ ಒಟ್ಟು ಸಂಖ್ಯೆಯ 3ನೇ 2ರಷ್ಟು ಶಾಸಕರನ್ನು ಬಿಜೆಪಿಗೆ ಬರುವಂತೆ ಮಾಡುವುದು.
    * ಕಾನೂನಿನ ರಿಸ್ಕ್ ತೆಗೆದುಕೊಂಡು ಶಾಸಕರಿಂದ ಅಡ್ಡ ಮತದಾನ ಮಾಡಿಸಬಹುದು.
    * ಚುನಾಯಿತ ಸದಸ್ಯರನ್ನು ಪ್ರಮಾಣ ವಚನದಿಂದ ದೂರ ಉಳಿಸಿ ಸದನದ ಸಂಖ್ಯಾಬಲ ಕುಗ್ಗಿಸಬಹುದು.
    * ಬಹುಮತ ಸಾಬೀತಿನ ಬಳಿಕ ಆ ಪ್ರತಿನಿಧಿಗಳನ್ನ ಶಪಥ ಸ್ವೀಕರಿಸುವಂತೆ ಮಾಡಬಹುದು.
    * ಜೆಡಿಎಸ್ ಬೆಂಬಲ ಪಡೆಯಲು ಮತ್ತೊಂದು ಸುತ್ತು ಮಾತುಕತೆಗೆ ಮುಂದಾಗಬಹುದು.
    * ಕಾಂಗ್ರೆಸ್ ರೀತಿಯಲ್ಲಿ ಭೇಷರತ್ ಬೆಂಬಲವನ್ನು ಜೆಡಿಎಸ್‍ಗೆ ಬಿಜೆಪಿಯೂ ನೀಡಬಹುದು.

    ರಾಜ್ಯಪಾಲರಿಗೆ ಸರ್ಕಾರ ರಚನೆ ವಿಚಾರವಾಗಿ ಬಿಎಸ್ ಯಡಿಯೂರಪ್ಪ ಬರೆದಿರುವ ಪತ್ರದಲ್ಲಿ ಏನಿದೆ? ಬಹುಮತ ಸಾಬೀತಿಗೆ ಬೇಕಾದ ಬೆಂಬಲ ಯಾರು ನೀಡ್ತಾರೆ? ಎಂಬೆಲ್ಲ ಮಾಹಿತಿ ಆಧರಿಸಿ ವಿಚಾರಣೆ ನಡೆಯಲಿದೆ. ಇದರ ಜೊತೆಗೆ ಹಿರಿಯ ವಕೀಲ ರಾಮ್ ಜೇಠ್ಮಾಲಾನಿ ಕೂಡಾ ರಾಜ್ಯಪಾಲರ ನಡೆಯನ್ನು ಪ್ರಶ್ನಿಸಿದ್ದು, ಯಾವ ಆಯಾಮದಲ್ಲಿ ವಾದ ಮಂಡಸಿಲಿದ್ದಾರೆ ಎಂಬ ಕುತೂಹಲ ಮೂಡಿದೆ.

    ಈ ಎಲ್ಲ ಅರ್ಜಿಯ ಜೊತೆಗೆ ಆಂಗ್ಲೋ ಇಂಡಿಯನ್ ಶಾಸಕರನ್ನು ತರಾತುರಿಯಲ್ಲಿ ರಾಜ್ಯಪಾಲರು ನೇಮಕ ಮಾಡಿದ್ದಾರೆ ಅಂತಾ ಆರೋಪಿಸಿರುವ ಕಾಂಗ್ರೆಸ್ ಜೆಡಿಎಸ್ ಜಂಟಿಯಾಗಿ ಮತ್ತೊಂದು ಅರ್ಜಿಯೊಂದನ್ನ ಸುಪ್ರಿಂಕೊರ್ಟ್ ಗೆ ಸಲ್ಲಿಸಿದ್ದು, ಒಟ್ಟು ನಾಲ್ಕು ಅರ್ಜಿಗಳು ಏಕ ಕಾಲದಲ್ಲಿ ವಿಚಾರಣೆಗೆ ಬರಲಿದೆ. ಒಟ್ಟಿನಲ್ಲಿ ಇಂದು ಬಿಎಸ್‍ವೈ ಭವಿಷ್ಯ ನಿರ್ಧರವಾಗಿದೆ.