Tag: Karnataka Election 2018

  • ನೀವು ನಿಜಕ್ಕೂ ಕನ್ನಡಿಗರಾ – ಸಿದ್ದರಾಮಯ್ಯರಿಂದ ಮೋದಿಗೆ ಐದು ಸವಾಲು

    ನೀವು ನಿಜಕ್ಕೂ ಕನ್ನಡಿಗರಾ – ಸಿದ್ದರಾಮಯ್ಯರಿಂದ ಮೋದಿಗೆ ಐದು ಸವಾಲು

    ಬೆಂಗಳೂರು: ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಕರ್ನಾಟಕಕ್ಕೆ ಬರುತ್ತಿರುವ ಪ್ರಧಾನಿ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐದು ಸವಾಲ್ ಹಾಕಿದ್ದಾರೆ.

    `ನೀವು ಕನ್ನಡಿಗರಾ’ ಎಂದು ಪ್ರಶ್ನಿಸಿದ ಸಿಎಂ, ಪ್ರಧಾನಿ ಮೋದಿಗೆ ನೀವು ಕನ್ನಡಿಗರಾದರೆ ಈ ಐದು ಕೆಲಸ ಮಾಡಿ ತೋರಿಸಿ ಅಂತ ಸವಾಲೊಡ್ಡಿದ್ದಾರೆ.

    ಸವಾಲ್‍ಗಳೇನು?:
    1. ನಾಡಭಾಷೆ, ನಾಡಧ್ವಜ, ನಾಡಗೀತೆ ಒಪ್ಪಿಕೊಳ್ಳಿ. ನಾಡಧ್ವಜಕ್ಕೆ ಅಂಗೀಕಾರ ನೀಡಿ.
    2. ಹಿಂದಿ ಹೇರಿಕೆ ಕೈ ಬಿಡಿ, ಕನ್ನಡಕ್ಕೆ ಪ್ರಾಮುಖ್ಯತೆ ಕೊಡಿ.
    3. ಮಹದಾಯಿ ಸಮಸ್ಯೆ ಬಗೆಹರಿಸಲು ಮೂರು ರಾಜ್ಯಗಳ ಸಭೆ ಕರೆಯಿರಿ.
    4. ರಾಷ್ಟ್ರೀಕೃತ ಬ್ಯಾಂಕುಗಳ ಪ್ರವೇಶ ಪರೀಕ್ಷೆಯನ್ನು ಕನ್ನಡದಲ್ಲಿ ನಡೆಸಿ.
    5. ಒಬ್ಬನೇ ಒಬ್ಬ ಮುಸ್ಲಿಂ, ಕ್ರಿಶ್ಚಿಯನ್‍ಗೆ ಟಿಕೆಟ್ ನೀಡದೆ ನಿಮಗೆ ನಿಜವಾದ ಕನ್ನಡಿಗರಾಗಲು ಸಾಧ್ಯವೇ?

    ಪ್ರಶ್ನೆ:
    1 ಕನ್ನಡಿಗನಾಗುವುದೆಂದರೆ…
    ಈ ನೆಲದ ಶರಣರು, ಸಂತರು, ದಾಸರು, ಸೂಫಿಗಳು ಹುಟ್ಟುಹಾಕಿದ ಸೌಹಾರ್ದ ಪರಂಪರೆಯನ್ನು ಗೌರವಿಸುವುದು. ಒಬ್ಬನೇ ಒಬ್ಬ ಮುಸ್ಲಿಮ್, ಕ್ರಿಶ್ಚಿಯನ್‍ಗೆ ಚುನಾವಣೆಯಲ್ಲಿ ಟಿಕೆಟ್ ನೀಡದೆ ನಿಮಗೆ ನಿಜವಾದ ಕನ್ನಡಿಗರಾಗಲು ಸಾಧ್ಯವೇ? ಎಂದು ಮೊದಲನೇ ಸವಾಲ್ ಹಾಕಿದ್ದಾರೆ.

    2. ಕನ್ನಡಿಗನಾಗುವುದೆಂದರೆ….
    ಕನ್ನಡ-ಕನ್ನಡಿಗ-ಕರ್ನಾಟಕದ ಹಿತರಕ್ಷಣೆ. ರಾಷ್ಟ್ರೀಕೃತ ಬ್ಯಾಂಕುಗಳ ಪ್ರವೇಶ ಪರೀಕ್ಷೆಯನ್ನು ಕನ್ನಡಿಗರಿಗೆ ಕನ್ನಡದಲ್ಲಿ ಬರೆಯಲು ಅವಕಾಶ ನೀಡಿ ಕನ್ನಡಿಗರಾಗುವಿರಾ?

    3. ಕನ್ನಡಿಗನಾಗುವುದೆಂದರೆ…
    ನೆಲ,ಜಲ,ಭಾಷೆಯ ರಕ್ಷಣೆಗೆ ಬದ್ಧವಾಗಿರುವುದು. ಮಹದಾಯಿ ನೀರು ಹಂಚಿಕೆ ವಿವಾದ ಬಗೆಹರಿಸಲು ಮೂರು ರಾಜ್ಯಗಳ ಸಭೆ ಕರೆದು ಕನ್ನಡಿಗರಾಗುವಿರಾ?

    4. ಕನ್ನಡಿಗನಾಗುವುದೆಂದರೆ…
    ಬಲತ್ಕಾರದ ಹಿಂದಿ ಹೇರಿಕೆಯನ್ನು ಕೈಬಿಡುವುದು, ಕನ್ನಡಕ್ಕೆ ಪ್ರಾಮುಖ್ಯ ಕೊಡುವುದು. ಕನ್ನಡಿಗರಾಗಲು ಸಿದ್ಧರಿದ್ದೀರಾ?

    5. ಕನ್ನಡಿಗನೆಂದು ಘೋಷಿಸಿಕೊಂಡ ಪ್ರಧಾನಿ ಮೋದಿ ಅವರಿಗೆ ಅಭಿನಂದನೆ. ಕನ್ನಡಿಗನಾಗುವುದೆಂದರೆ….
    ನಾಡಭಾಷೆ, ನಾಡಗೀತೆ, ನಾಡಧ್ವಜವನ್ನು ಒಪ್ಪಿಕೊಳ್ಳುವುದು. ಕರ್ನಾಟಕದ ನಾಡಧ್ವಜಕ್ಕೆ ಅಂಗೀಕಾರ ನೀಡಿ, ನಿಜವಾದ ಕನ್ನಡಿಗರಾಗುವಿರಾ? ಎಂದು ಐದು ಸವಾಲ್ ಹಾಕಿದ್ದು, ಪ್ರಶ್ನೆ ಮಾಡಿದ್ದಾರೆ.

    ಈ ರೀತಿ ಸವಾಲ್ ಹಾಕಿ, ಪ್ರಶ್ನಿಸಿ ಪ್ರಧಾನಿ ಮೋದಿ ಅವರಿಗೆ ಟ್ವೀಟ್ ಮಾಡಿದ್ದಾರೆ. ಅಷ್ಟೇ ಅಲ್ಲದೇ ಪ್ರತೀ ಟ್ವೀಟ್ ನಲ್ಲೂ #AnswerMadiModi ಎಂದು ಬರೆದು ಪೋಸ್ಟ್ ಮಾಡಿದ್ದಾರೆ.

  • ಬೆಳ್ಳಂಬೆಳಗ್ಗೆ 85 ಲಕ್ಷ ರೂ. ಹಣ ಜಪ್ತಿ ಮಾಡಿದ ಐಟಿ ಅಧಿಕಾರಿಗಳು

    ಬೆಳ್ಳಂಬೆಳಗ್ಗೆ 85 ಲಕ್ಷ ರೂ. ಹಣ ಜಪ್ತಿ ಮಾಡಿದ ಐಟಿ ಅಧಿಕಾರಿಗಳು

    ಬೆಂಗಳೂರು: ದಾಖಲೆಯಿಲ್ಲದೆ ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 85 ಲಕ್ಷ ಹಣವನ್ನ ಆದಾಯ ತೆರಿಗೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

    ಬೆಂಗಳೂರು ಹೊರವಲಯ ರಾಷ್ಟ್ರೀಯ ಹೆದ್ದಾರಿಯ ನೆಲಮಂಗಲದ ಜಾಸ್ ಟೋಲ್ ಬಳಿ ನಡೆದಿದ್ದು, ಇಂದು ಬೆಳ್ಳಂಬೆಳಗ್ಗೆ ಖಚಿತ ಮಾಹಿತಿಯ ಮೇರೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆಗ ಮಹಿಂದ್ರಾ ಎಕ್ಸ್ ಯುವಿ ಕಾರಿನಲ್ಲಿದ್ದ ಬರೋಬ್ಬರಿ 85 ಲಕ್ಷ ಹಣ ಪತ್ತೆಯಾಗಿದ್ದು, ಅಧಿಕಾರಿಗಳು ಹಣವನ್ನು ವಶಕ್ಕೆ ಪಡೆದಿದ್ದಾರೆ.

    ಬೆಂಗಳೂರು ತುಮಕೂರು ರಾಷ್ಟ್ರೀಯ ಹೆದ್ದಾರಿ ಮಾರ್ಗವಾಗಿ, ಶಿವಮೊಗ್ಗ ಜಿಲ್ಲೆಗೆ ಈ ಕಾರು ಹೋಗುತ್ತಿತ್ತು ಎನ್ನಲಾಗಿದೆ. ಆದಾಯ ತೆರಿಗೆಗೆ ವಂಚಿಸಿ ಹಣ ಸಾಗಾಟ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ. ಸದ್ಯ ಕಾರು ಹಾಗೂ ಚಾಲಕನನ್ನು ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

    ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  • ಲೂಟಿ ಮಾಡೋಕೆ ಬಿಬಿಎಂಪಿಯಲ್ಲಿ ಕಾಂಗ್ರೆಸ್, ಜೆಡಿಎಸ್ ಒಟ್ಟಾಗಿದೆ: ಶೋಭಾ ಕರಂದ್ಲಾಜೆ

    ಲೂಟಿ ಮಾಡೋಕೆ ಬಿಬಿಎಂಪಿಯಲ್ಲಿ ಕಾಂಗ್ರೆಸ್, ಜೆಡಿಎಸ್ ಒಟ್ಟಾಗಿದೆ: ಶೋಭಾ ಕರಂದ್ಲಾಜೆ

    ಬೆಂಗಳೂರು: ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ. ಯಾವ ಆಧಾರದಲ್ಲಿ ನಾವು ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುತ್ತಿದ್ದೇವೆ ಅಂತಾ ಹೇಳುತ್ತಿದ್ದೀರಿ? ಲೂಟಿ ಮಾಡುವುದಕ್ಕೆ ಬಿಬಿಎಂಪಿ ಯಲ್ಲಿ ಜೆಡಿಎಸ್ ಕಾಂಗ್ರೆಸ್ ಒಟ್ಟಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪ ಮಾಡಿದ್ದಾರೆ.

    ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಜೆಡಿಎಸ್ ಬಿಜೆಪಿ ಜೊತೆ ಹೋಗುತ್ತಿದೆ ಅಂತಾ ಹೇಳಿ ಅಲ್ಪಸಂಖ್ಯಾತರ ಓಲೈಕೆಗೆ ಸಿಎಂ ಮುಂದಾಗಿದ್ದಾರೆ. ಇದು ಭಯ ಹುಟ್ಟಿಸುವ ಪ್ರಯತ್ನ. ಬಿಬಿಎಂಪಿ ಯಲ್ಲಿ ಜೆಡಿಎಸ್ ಕಾಂಗ್ರೆಸ್ ಒಟ್ಟಿಗೆ ಇದ್ದು, ಒಟ್ಟಿಗೆ ಬೆಂಗಳೂರು ಹಾಳು ಮಾಡುತ್ತಿದ್ದಾರೆ. ಅಪವಿತ್ರ ಮೈತ್ರಿ ಮಾಡಿಕೊಂಡ ನೀವು ನಮಗೆ ನೈತಿಕತೆ ಪಾಠ ಮಾಡಬೇಕಾಗಿಲ್ಲ ಎಂದು ಕಿಡಿಕಾರಿದರು.

    ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಜೆಡಿಎಸ್ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದಾರೆ ಅಂತಾ ಕಾಂಗ್ರೆಸ್ ಹೇಳುತ್ತಿದೆ. ಅಲ್ಪಸಂಖ್ಯಾತರು ಅರ್ಥ ಮಾಡಿಕೊಳ್ಳಬೇಕು. ಎಸ್‍ಡಿಪಿಐ ಜೊತೆ ಎರಡು ತಿಂಗಳ ಹಿಂದೆಯೇ ಹೊಂದಾಣಿಕೆ ಆಗಿದೆ. ಕೊಲೆ ರಾಜಕಾರಣ ಮಾಡಿದ ಎಸ್‍ಡಿಪಿಐ ಜೊತೆ ಕಾಂಗ್ರೆಸ್ ಹೋಗುತ್ತಿದೆ. ಎಸ್‍ಡಿಪಿಐ ಅಭ್ಯರ್ಥಿಗಳು ಕಾಂಗ್ರೆಸ್ ಗಾಗಿ ನಾಮಪತ್ರ ವಾಪಸ್ ಪಡೆಯುತ್ತಿದ್ದಾರೆ ಅದರ ಅರ್ಥವೇನು? ಎಸ್‍ಡಿಪಿಐ ಜೊತೆ ಏನು ಸಂಬಂಧ ಇದೆ? ಈ ವಿಚಾರವನ್ನು ಬಹಿರಂಗ ಮಾಡಿ ಎಂದು ಸಿಎಂಗೆ ಸವಾಲು ಹಾಕಿದರು.

    ಅಮಿತ್ ಶಾ ಕುಮಾರಸ್ವಾಮಿ ಭೇಟಿ ಆರೋಪ ಕುರಿತು ಪ್ರತಿಕ್ರಿಯಿಸಿ 13ನೇ ತಾರೀಖು ಅಮಿತ್ ಶಾ ಕುಮಾರಸ್ವಾಮಿ ಭೇಟಿ ಮಾಡಿಲ್ಲ. ಆ ದಿನ ಅಮಿತ್ ಶಾ ಗೆ ಪೊಲೀಸರು ರಕ್ಷಣೆ ಕೂಡ ಕೊಟ್ಟಿದ್ದರು. ಕುಮಾರಸ್ವಾಮಿ ಅಮಿತ್ ಶಾ ಭೇಟಿ ಮಾಡಿದ್ದಾರೆ ಎನ್ನಲಾದ ದಿನಾಂಕದಂದು ಶಾ ಕಾರ್ಯಕ್ರಮದ ವಿವರ ಬಿಡುಗಡೆ ಮಾಡಿದ ಅವರು ಗುಪ್ತಚರ ಇಲಾಖೆ ನಿಮ್ಮ ದಾರಿ ತಪ್ಪಿಸಿದೆಯಾ, ಪೊಲೀಸರ ಜೊತೆ ಕೇಳಿ ಎಂದು ಕಾಂಗ್ರೆಸ್ ಗೆ ತಿರುಗೇಟು ನೀಡಿದರು.

    ಚುನಾವಣೆ ಹತ್ತಿರ ಬರುತ್ತಿದ್ದ ಹಾಗೆ ಸಿಎಂ ವಿಲವಿಲನೆ ಒದ್ದಾಡುತ್ತಿದ್ದಾರೆ. ಸಿಎಂಗೆ ಎರಡು ಕ್ಷೇತ್ರದಲ್ಲಿ ಸೋಲುತ್ತೇನೆ ಎಂದು ಭಾವಿಸಿ ಕೀಳು ಮಟ್ಟದ ರಾಜಕೀಯ ಶುರು ಮಾಡಿದ್ದಾರೆ. ಸಿಎಂ ರಕ್ತನೇ ಜನತಾದಳದ ರಕ್ತ. ಯಾವುದೋ ಕಾರಣಕ್ಕೆ ಕಾಂಗ್ರೆಸ್ ಬಂದಿದ್ದಾರೆ. ಬಿಜೆಪಿಗೆ ಈ ಬಾರಿ ಬಹುಮತ ಬರಲಿದೆ. ಯಾವುದೇ ಪಕ್ಷದ ಜೊತೆ ನಾವು ಹೋಗಲ್ಲ, ಯಾವ ಪಕ್ಷದ ಅಗತ್ಯತೆಯೂ ಬಿಜೆಪಿಗೆ ಇಲ್ಲ ಎಂದು ಅವರು ಹೇಳಿದರು.

  • ಬಿಎಸ್‍ವೈ ಹುಟ್ಟಿದ್ದಾಗ ಅವರ ನಾಲಿಗೆ ಮೇಲಿಂದ ವಿಷ ತೆಗೆದಿಲ್ಲ: ಖರ್ಗೆ

    ಬಿಎಸ್‍ವೈ ಹುಟ್ಟಿದ್ದಾಗ ಅವರ ನಾಲಿಗೆ ಮೇಲಿಂದ ವಿಷ ತೆಗೆದಿಲ್ಲ: ಖರ್ಗೆ

    ಕಲಬುರಗಿ: ಹುಟ್ಟಿದ ಮಗುವಿಗೆ ಹೊಟ್ಟೆಯೊಳಗೆ ವಿಷ ಹೋಗಬಾರದು ಅಂತಾ ನಾಲಿಗೆ ಮೇಲಿನ ವಿಷ ತೆಗೆಯುತ್ತಾರೆ. ಬಿಎಸ್ ಯಡಿಯೂರಪ್ಪ ಹುಟ್ಟಿದ್ದಾಗ ಅವರ ನಾಲಿಗೆ ಮೇಲಿಂದ ವಿಷ ತೆಗೆದಿರಲಿಕ್ಕಿಲ್ಲ. ಅದಕ್ಕೆ ಹೋದಕಡೆಯಲ್ಲ ಸುಳ್ಳು ಹೇಳುತ್ತಾ ತಿರುಗಾಡುತ್ತಿರುತ್ತಾರೆ ಎಂದು ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ವ್ಯಂಗ್ಯವಾಡಿದ್ದಾರೆ.

    ಅಫಜಲ್ಪುರದಲ್ಲಿ ನಡೆದ ಕಾಂಗ್ರೆಸ್ ಬಹಿರಂಗ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಬಗ್ಗೆ ಬಿಎಸ್‍ವೈ ಕೀಳಾಗಿ ಮಾತನಾಡುತ್ತಾರೆ. ಆರ್ ಎಸ್‍ ಎಸ್ ಹಿನ್ನೆಲೆಯುಳ್ಳವರ ಬಾಯಲ್ಲಿ ಇದೆಂಥ ಮಾತು, ಇದೆನಾ ಶಿಸ್ತಿನ ಪಕ್ಷ ಎಂದು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡರು.

    ಅಹಿಂದ ವರ್ಗದ ಜನರ ಬಗ್ಗೆ ಕಾಳಜಿಯುಳ್ಳ ಏಕೈಕ ಪಕ್ಷ ಕಾಂಗ್ರೆಸ್. ಸಿದ್ದರಾಮಯ್ಯ ಮತ್ತೆ ಸಿಎಂ ಆಗಿ ನಿಮಗೆ ಎಲ್ಲಾ ಸೌಲಭ್ಯ ಕೊಡುತ್ತಾರೆ. ಈಗಿರುವ ಸೌಲಭ್ಯಗಳು ಮುಂದುವರೆಯುತ್ತವೆ. ಮಂತ್ರಿ ಸ್ಥಾನ ಸಿಕ್ಕಿಲ್ಲ ಅಂತಾ ಗುತ್ತೇದಾರ್ ನನ್ನ ಮೇಲೆ ಸಿಟ್ಟು ಮಾಡಿಕೊಂಡರು. ಸಿಎಂ ಸಿದ್ದರಾಮಯ್ಯ ಮೇಲೆ ಯಾಕೆ ಅವರು ಸಿಟ್ಟು ಮಾಡಿಕೊಳ್ಳಬೇಕಿತ್ತು ಎಂದು ಪ್ರಶ್ನಿಸಿದರು.

    ಬಿಜೆಪಿಯವರು ಕುತಂತ್ರ ರಾಜಕಾರಣ ಮಾಡುತ್ತಿದ್ದಾರೆ. ಅಂಬೇಡ್ಕರ್ ನೀಡಿದ ಹಕ್ಕುಗಳನ್ನ ಕಿತ್ತುಕೊಳ್ಳಲು ಬಿಜೆಪಿಯವರು ಹೊರಟಿದ್ದಾರೆ. ಮೋದಿ, ಶಾ ಹೋದ ಕಡೆಯಲ್ಲ ಸುಳ್ಳು ಹೇಳೋದೆ ಮಾಡುತ್ತಿದ್ದಾರೆ. ಹರ್ ಏಕ್ ಜೇಬ್‍ಮೆ ಪಂದ್ರ ಪಂದ್ರ ಲಾಕ್ ಜಮಾ ಕರ್ತೆ ಅಂತಾ ಮೋದಿ ಹೇಳಿದ್ದರು. ಲೇಕಿನ್ ಏಕ್ ಪೈಸೆಬಿ ಜಮಾ ನಹಿ ಹುವಾ ರೈತರಿಗಾಗಿ ಸಿದ್ದರಾಮಯ್ಯ ಸಾಲ ಮನ್ನಾ ಮಾಡಿದ್ದಾರೆ. ಆದರೆ ಕೇಂದ್ರ ಮಾಡಲಿಲ್ಲ ಎಂದು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡರು.

  • ಬಿಜೆಪಿ ಜೊತೆ ಹೋದ್ರೆ ಎಚ್ಡಿಕೆಗೆ ಮನೆಯಿಂದಲೇ ಬಹಿಷ್ಕಾರ- ಎಚ್‍ಡಿ ದೇವೇಗೌಡ

    ಬಿಜೆಪಿ ಜೊತೆ ಹೋದ್ರೆ ಎಚ್ಡಿಕೆಗೆ ಮನೆಯಿಂದಲೇ ಬಹಿಷ್ಕಾರ- ಎಚ್‍ಡಿ ದೇವೇಗೌಡ

    ಬೆಂಗಳೂರು: ಒಂದು ವೇಳೆ ರಾಜ್ಯದಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿ ಕುಮಾರಸ್ವಾಮಿ ಬಿಜೆಪಿ ಜೊತೆ ಹೋದರೆ ಆತನನ್ನು ಮನೆಯಿಂದಲೇ ಬಹಿಷ್ಕಾರ ಹಾಕುತ್ತೇನೆ ಎಂದು ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ಹೇಳಿದ್ದಾರೆ.

    ಎನ್‍ಡಿ ಟಿವಿ ಮುಖ್ಯಸ್ಥ ಪ್ರಣಯ್ ರಾಯ್ ನಡೆಸಿದ ಸಂದರ್ಶನದಲ್ಲಿ ಅವರು, 2006ರಲ್ಲಿ ಬಿಜೆಪಿ ಜೊತೆ ಸರ್ಕಾರ ನಡೆಸಿದ ತಪ್ಪಿನಿಂದ ಕುಮಾರಸ್ವಾಮಿ ಪಾಠ ಕಲಿತಿದ್ದಾನೆ. ಸಾರ್ವಜನಿಕ ಭಾಷಣದಲ್ಲೂ ಈ ಬಗ್ಗೆ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾನೆ. ನಾನು ತಪ್ಪು ಮಾಡಿದೆ, ನನ್ನ ತಂದೆ ಆರೋಗ್ಯ ಕೂಡಾ ಹಾಳಾಯ್ತು, ಅವರು ಸಂಕಟ ಅನುಭವಿಸಿದ್ರು. ನಾನು ಮತ್ತೆ ಆ ತಪ್ಪು ಮಾಡಲ್ಲ ಅಂತ ಹೇಳಿದ್ದಾನೆ ಎಂದು ಎಚ್‍ಡಿಡಿ ತಿಳಿಸಿದರು.

    ಕಾಂಗ್ರೆಸ್ ಈಗಿನ ಚುನಾವಣಾ ವಾತಾವರಣವನ್ನು ಹಾಳು ಮಾಡಲು ಯತ್ನಿಸುತ್ತಿದೆ. ಎರಡೂ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಪ್ರಾದೇಶಿಕ ಪಕ್ಷವನ್ನು ಬಳಸಿ ಎಸೆಯುತ್ತಿವೆ. ಶಿವಸೇನೆ ಯಾಕೆ ಹೊರಬಂತು. ಚಂದ್ರಬಾಬು ನಾಯ್ಡು ಯಾಕೆ ಹೊರಬಂದರು. ಬಿಜೆಪಿಯಿಂದ ಬೆಂಬಲ ಪಡೆಯುವ ಪರಿಸ್ಥಿತಿ ಬರಲ್ಲ. ಕುಮಾರಸ್ವಾಮಿಗೆ ತಂದೆಯ ಆರೋಗ್ಯ ಎಲ್ಲಕ್ಕಿಂತ ಮುಖ್ಯವಾಗಿದೆ ಎಂದ್ರು.

    ಒಂದು ವೇಳೆ ಬಿಜೆಪಿ ಜೊತೆ ಕುಮಾರಸ್ವಾಮಿ ಹೋದರೆ ಅವನು ನನ್ನ ಮಗನೇ ಅಲ್ಲ. ನಮ್ಮ ಕುಟುಂಬದಿಂದಲೇ ಕುಮಾರಸ್ವಾಮಿಗೆ ಬಹಿಷ್ಕಾರ ಹಾಕುತ್ತೇನೆ. ನನ್ನ ಅನುಮತಿ ಇಲ್ಲದೇ ಕಾಂಗ್ರೆಸ್ ಜೊತೆಗೂ ಹೋಗುವಂತಿಲ್ಲ ಎಂದು ಎಚ್.ಡಿ. ದೇವೇಗೌಡ ಖಡಕ್ ಮಾತನ್ನು ಆಡಿದ್ದಾರೆ.

  • ಸಿಎಂ ಹೇಳಿಕೆ 9ನೇ ಅದ್ಭುತ, ಸಿದ್ದರಾಮಯ್ಯಗೆ ಚಳಿ ಜ್ವರ ಶುರುವಾಗಿದೆ: ಎಚ್‍ಡಿಕೆ

    ಸಿಎಂ ಹೇಳಿಕೆ 9ನೇ ಅದ್ಭುತ, ಸಿದ್ದರಾಮಯ್ಯಗೆ ಚಳಿ ಜ್ವರ ಶುರುವಾಗಿದೆ: ಎಚ್‍ಡಿಕೆ

    ಚಿಕ್ಕಮಗಳೂರು: ಅಮಿತ್ ಶಾ ಕುಮಾರಸ್ವಾಮಿ ಭೇಟಿಯಾಗಿದ್ದಾರೆ ಎನ್ನುವ ಸಿಎಂ ಹೇಳಿಕೆ ಒಂಭತ್ತನೇ ಅದ್ಭುತ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ವ್ಯಂಗ್ಯವಾಡಿದ್ದಾರೆ.

    ಸಿದ್ದರಾಮಯ್ಯ ಅವರಿಗೆ ಚಳಿ ಜ್ವರ ಶುರುವಾಗಿದೆ. ಜೆಡಿಎಸ್ ಬಗ್ಗೆ ಮಾತನಾಡೋದಕ್ಕೆ ಅವರ ಬಳಿ ವಿಷಯವಿಲ್ಲ. ಅಮಿತ್ ಶಾ ಕಟ್ಟಿಕೊಂಡು ನನಗೇನು ಆಗಬೇಕು. ಅವರು ಹೇಳಿರುವ ಸಮಯದಲ್ಲಿ ನಾನು ಮಹಾಲಕ್ಷ್ಮಿ ಲೇಔಟ್ ನಲ್ಲಿ ಪ್ರಚಾರ ಮಾಡುತ್ತಿದ್ದೆ. ವಿಶೇಷ ವಿಮಾನದಲ್ಲಿ ದೆಹಲಿಗೆ ಹೋಗಿ ವಾಪಸ್ ಬಂದಿದ್ದಾರೆ ಎಂಬುದು ಸುಳ್ಳು ಸುದ್ದಿ ಎಂದು ಸ್ಪಷ್ಟೀಕರಣಕೊಟ್ಟರು. ಇದನ್ನೂ ಓದಿ:ನನಗೆ ಮರಾಠಿ ಬರಲ್ಲ ಕ್ಷಮಿಸಿ ಅನ್ನೋದ್ರಲ್ಲಿ ತಪ್ಪೇನಿದೆ: ಸಿಎಂ ಪ್ರಶ್ನೆ

    ಕೊಪ್ಪದಲ್ಲಿ ಇಂದು ಭಾಷಣ ಮಾಡುತ್ತಿರುವ ವೇಳೆ ಆಜಾನ್ ಧ್ವನಿ ಕೇಳಿದ ಹಿನ್ನೆಲೆಯಲ್ಲಿ ಎಚ್‍ಡಿಕೆ ಭಾಷಣ ನಿಲ್ಲಿಸಿದರು. ಆಜಾನ್ ಮುಗಿದ ಎರಡು ನಿಮಿಷದ ಬಳಿಕ ಎಚ್‍ಡಿಕೆ ಜೆಡಿಎಸ್ ಅಭ್ಯರ್ಥಿ ವೆಂಕಟೇಶ್ ಪರ ಪ್ರಚಾರ ಭಾಷಣ ಮಾಡಿದರು.

  • ನನಗೆ ಮರಾಠಿ ಬರಲ್ಲ ಕ್ಷಮಿಸಿ ಅನ್ನೋದ್ರಲ್ಲಿ ತಪ್ಪೇನಿದೆ: ಸಿಎಂ ಪ್ರಶ್ನೆ

    ನನಗೆ ಮರಾಠಿ ಬರಲ್ಲ ಕ್ಷಮಿಸಿ ಅನ್ನೋದ್ರಲ್ಲಿ ತಪ್ಪೇನಿದೆ: ಸಿಎಂ ಪ್ರಶ್ನೆ

    ವಿಜಯಪುರ: ನನಗೆ ಮರಾಠಿ ಬರಲ್ಲ ಕ್ಷಮಿಸಿ ಎಂದು ಬೆಳಗಾವಿಯ ಮಹಾರಾಷ್ಟ್ರದ ಗಡಿ ಭಾಗದ ಪ್ರಚಾರದ ಸಂದರ್ಭದಲ್ಲಿ ಹೇಳಿದ್ದೇನೆ. ಅದರಲ್ಲಿ ತಪ್ಪೇನಿದೆ ಎಂದು ವಿವಾದ ಸೃಷ್ಟಿ ಮಾಡುತ್ತಿರುವವರಿಗೆ ಸಿಎಂ ಸಿದ್ದರಾಮಯ್ಯನವರು ಪ್ರಶ್ನಿಸಿ ತಿರುಗೇಟು ನೀಡಿದ್ದಾರೆ.

    ನಾನು ಕನ್ನಡಿಗ, ಕನ್ನಡಕ್ಕೆ ಬದ್ಧತೆ ಇಟ್ಟುಕೊಂಡಿರುವ ನಾಯಕ, ನನ್ನಂತಹ ಬದ್ಧತೆ ಇರುವ ನಾಯಕ ಸಿಗುವುದು ಕಷ್ಟ. ನನ್ನ ಬದ್ಧತೆ ಬಗ್ಗೆ ಮಾತನಾಡುವವರು, ಅವರು ಹಿಂದಿ ವಿರೋಧಿ ಅಂತಾ ಹೇಳಲಿ. ಇಂತಹ ನಾಟಕಗಳನ್ನು ಆಡಬಾರದು ಎಂದು ಸಂಸದ ಪ್ರತಾಪ್ ಸಿಂಹ ಅವರಿಗೆ ಸಿಎಂ ತಿರುಗೇಟು ನೀಡಿದರು. ಇದನ್ನೂ ಓದಿ:ಮರಾಠಿ ಬರೋಲ್ಲ ಕ್ಷಮಿಸಿ ಅಂತ ಸಿಎಂ ಕನ್ನಡಿಗರಿಗೆ ಅವಮಾನ ಮಾಡಿದ್ದಾರೆ: ಪ್ರತಾಪ್ ಸಿಂಹ ಕಿಡಿ

    ಅಮಿತ್ ಶಾ ಜೈನ್ ಆಗಿದ್ದು ಹಿಂದೂ ಎಂದು ಹೇಳುತ್ತಾರೆ. ಬಿಜೆಪಿಯವರು ಸತ್ಯವನ್ನು ಒಪ್ಪಿಕೊಳ್ಳುವುದಿಲ್ಲ. ಬಿಜೆಪಿ, ಜೆಡಿಎಸ್ ಈ ಬಾರಿ ಗೆಲ್ಲುವುದಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಮತ್ತೊಮ್ಮೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಸಿಎಂ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲ್ಲುವುದಿಲ್ಲ ಎಂಬ ಅಮಿತ್ ಶಾ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಚಾಮುಂಡೇಶ್ವರಿಯಲ್ಲಿ ಐದು ಬಾರಿ ಗೆದ್ದಾಗ ಅಮಿತ್ ಶಾ ಬಂದಿದ್ದರಾ ಎಂದು ಪ್ರಶ್ನೆ ಮಾಡಿದರು.

    ಲಿಂಗಾಯತ ಪ್ರತ್ಯೆಕ ಧರ್ಮದ ವಿಚಾರ ಒಂದು ಸಮಸ್ಯೆ ಅಲ್ಲ. ಅನಂತಕುಮಾರ್ ಸೇರಿದಂತೆ ಇತರರು ಯಡಿಯೂರಪ್ಪ ಅವರ ಮಗನಿಗೆ ಟಿಕೆಟ್ ತಪ್ಪಿಸಿದ್ದಾರೆ. ಬಿಜೆಪಿ ಅವರು ಕಾಂಗ್ರೆಸ್ ಬಗ್ಗೆ ಅಪಪ್ರಚಾರ ಮಾಡುವುದು ಬಿಟ್ಟರೆ ಬೇರೇನು ಇಲ್ಲ ಎಂದು ಟೀಕಿಸಿದರು.

    ಅಮಿತ್ ಶಾ ಕುಮಾರಸ್ವಾಮಿ ಭೇಟಿ ವಿಚಾರ ಕುರಿತು ಪ್ರತಿಕ್ರಿಯಿಸಿ ನನಗೆ ಬಂದ ಮಾಹಿತಿ ಪ್ರಕಾರ ಶಾ ಹಾಗೂ ಕುಮಾರಸ್ವಾಮಿ ದೆಹಲಿಯಲ್ಲಿ ಭೇಟಿ ಆಗಿದ್ದಾರೆ. ನಾನು ಹಾಗೂ ಜಮೀರ್ ಅಹ್ಮದ್ ಎಲ್ಲಿಯೂ ಹೋಗಿಲ್ಲ ಸುಳ್ಳು ಆರೋಪ ಮಾಡುತ್ತಿದ್ದಾರೆ. ಪಾಕಿಸ್ತಾನಕ್ಕೆ ಹೋಗಬೇಕಾದ್ರೆ ವೀಸಾ ಬೇಕು. ವೀಸಾ ಇಲ್ಲದೇ ಪಾಕಿಸ್ತಾನಕ್ಕೆ ಹೋಗಲಿಕ್ಕೆ ಆಗಲ್ಲ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ:ಕನ್ನಡದ ಕಂದ ಸಿದ್ದರಾಮಯ್ಯ ಮರಾಠಿ ಜಪ – ಬೆಳಗಾವಿಯಲ್ಲಿ ಭಾಷೆ ಬರಲ್ಲ ಎಂದು ಕ್ಷಮೆಯಾಚನೆ

  • ವೋಟ್ ಹಾಕಿ ಅಂತ ಬಿಕ್ಕಳಿಸಿ ಅತ್ತ ಕೈ ಅಭ್ಯರ್ಥಿ ಕೆ.ಬಿ.ಚಂದ್ರಶೇಖರ್ -ವಿಡಿಯೋ

    ವೋಟ್ ಹಾಕಿ ಅಂತ ಬಿಕ್ಕಳಿಸಿ ಅತ್ತ ಕೈ ಅಭ್ಯರ್ಥಿ ಕೆ.ಬಿ.ಚಂದ್ರಶೇಖರ್ -ವಿಡಿಯೋ

    ಮಂಡ್ಯ: ಕೆಟ್ಟ ರಾಜಕಾರಣವನ್ನು ಹೋಗಲಾಡಿಸಲು ನನಗೆ ಮತ ನೀಡಿ ಗೆಲ್ಲಿಸಿ ಎಂದು ಕಾಂಗ್ರೆಸ್ ಕೆ.ಆರ್. ಪೇಟೆ ಅಭ್ಯರ್ಥಿ ಕೆ.ಬಿ.ಚಂದ್ರಶೇಖರ್ ಕಣ್ಣೀರಿಟ್ಟಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

    ಜಿಲ್ಲೆಯ ಕೆ.ಆರ್. ಪೇಟೆ ಕ್ಷೇತ್ರದ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಮತದಾರರೆದುರು ಬಿಕ್ಕಳಿಸಿ ಅತ್ತಿದ್ದಾರೆ. ಕೆ.ಬಿ.ಚಂದ್ರಶೇಖರ್ ಹೆಮ್ಮನಹಳ್ಳಿ ಗ್ರಾಮಕ್ಕೆ ಪ್ರಚಾರಕ್ಕೆ ಹೋಗಿದ್ದರು. ಈ ವೇಳೆ ಪ್ರಚಾರ ಭಾಷಣದಲ್ಲಿ ಮಾತನಾಡುತ್ತ, ಈ ತಾಲೂಕಿನಲ್ಲಿ ಕೆಟ್ಟ ರಾಜಕಾರಣ ಹೋಗಲಾಡಿಸಬೇಕಾದರೆ, ನಾನು ನಿಮ್ಮೂರಿನ ಮಗನಾದ ನನಗೆ ಶಕ್ತಿಕೊಡಿ. ನಿಮ್ಮ ಋಣ ತೀರಿಸ್ತೀನಿ. ಈ ಬಾರಿ ನನಗೆ ಮತ ನೀಡಿ ಗೆಲ್ಲಿಸಿ ಎಂದು ಬಿಕ್ಕಳಿಸಿ ಅತ್ತಿದ್ದಾರೆ.

    ಇದು ನಾನು ಹುಟ್ಟಿ ಬೆಳೆದಂತ ಗ್ರಾಮ ಇದು. ನನಗೆ ನೀವು ಎಲ್ಲರೂ ಒಟ್ಟಾಗಿ ಸೇರಿ ಇಡೀ ಗ್ರಾಮ ಸಹಾಯ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಅವರ ಅಳುವನ್ನು ನೋಡಿ ಏನು ಹೇಳಬೇಕೆಂದು ತಿಳಿಯದ ಗ್ರಾಮಸ್ಥರು ಅಳಬೇಡಿ ಎಂದು ಸಮಾಧಾನ ಮಾಡಿದ್ದಾರೆ.

    https://www.youtube.com/watch?v=nMommiJVZQk&feature=youtu.be

  • ಕಮೀಷನ್ ಪಡೆದು ಜೈಲಿಗೆ ಹೋದವರು ಅಮಿತ್ ಶಾ ಸಂಗಾತಿಗಳು: ಆಂಜನೇಯ

    ಕಮೀಷನ್ ಪಡೆದು ಜೈಲಿಗೆ ಹೋದವರು ಅಮಿತ್ ಶಾ ಸಂಗಾತಿಗಳು: ಆಂಜನೇಯ

    ಚಿತ್ರದುರ್ಗ: ಕಮೀಷನ್ ಪಡೆದು ಜೈಲಿಗೆ ಹೋದವರೆಲ್ಲಾ ಅಮಿತ್ ಶಾ ಸಂಗಾತಿಗಳು ಎಂದು ಸಮಾಜ ಕಲ್ಯಾಣ ಸಚಿವ ಆಂಜನೇಯ ಹೇಳಿದ್ದಾರೆ.

    ಸಿಎಂ ಸಿದ್ದರಾಮಯ್ಯಗೆ ಯಾರೋ ಸ್ನೇಹಿತರು ಕೊಟ್ಟ ವಾಚ್ ಅದು. ಅದನ್ನ ಈಗ ವಿಧಾನಸೌಧದಲ್ಲಿ ಬಿಸಾಕಿದ್ದಾರೆ. ಜನರನ್ನು ತಪ್ಪು ದಾರಿಗೆಳೆಯಲು ಬಿಜೆಪಿಯ ತಂತ್ರವಿದು. ಬಿಜೆಪಿಯವರು ಗೆಲ್ಲುವುದಕ್ಕೆ ಆಗದೇ ಈ ರೀತಿ ಬಯ್ಯುತ್ತಾ ಜನರನ್ನು ಪ್ರಚೋದನೆ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ನಮ್ಮನ್ನು ತೇಜೋವಧೆ ಮಾಡುತ್ತಾ, ಅವಹೇಳನಕಾರಿ ಮಾತುಗಳನ್ನಾಡುವ ಮೂಲಕ ಬಿಜೆಪಿಯರು ಜನರ ಗಮನ ಸೆಳೆಯುತ್ತಿದ್ದಾರೆ. ಆದರೆ ಗೆಲ್ಲುವುದು ಕಾಂಗ್ರೆಸ್. ಅನಂತಕುಮಾರ್ ಹೆಗ್ಡೆ ಮಾತಿಗೆ ನಾವು ಉತ್ತರಿಸಬಾರದು. ಆತನ ಮಾತುಗಳನ್ನು ನಿರ್ಲಕ್ಷಿಸಬೇಕು. ಆತನ ಬಗ್ಗೆ ಮಾತನಾಡಲೇ ಬಾರದು ಎಂದು ಚುನಾವಣಾ ಪ್ರಚಾರಕ್ಕೆ ತೆರಳುವ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.

  • ಇಡೀ ಕರ್ನಾಟಕದಲ್ಲಿ ಜೆಡಿಎಸ್ ಪರವಾಗಿ ಪ್ರಚಾರ ಮಾಡ್ತೀನಿ- ಪೂಜಾ ಗಾಂಧಿ

    ಇಡೀ ಕರ್ನಾಟಕದಲ್ಲಿ ಜೆಡಿಎಸ್ ಪರವಾಗಿ ಪ್ರಚಾರ ಮಾಡ್ತೀನಿ- ಪೂಜಾ ಗಾಂಧಿ

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪರವಾಗಿ ನಟಿ ಪೂಜಾ ಗಾಂಧಿ ಮತ ಪ್ರಚಾರ ನಡೆಸಿದ್ದರು. ನಗರದ ಅಂಬೇಡ್ಕರ್ ವೃತ್ತದ ಬಳಿ ಆಗಮಿಸಿದ ನಟಿ ಪೂಜಾ ಗಾಂಧಿ ತಮ್ಮ ಸಿನಿಮಾದ ಹಾಡನ್ನು ಹಾಡುವ ಮೂಲಕ ಕಾರ್ಯಕರ್ತರನ್ನು ಹುರಿದುಂಬಿಸಿದ್ರು.

    ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ನಟಿ ಪೂಜಾ ಗಾಂಧಿ, ರಾಜ್ಯದಲ್ಲಿ ಸಾಕಷ್ಟು ಸಮಸ್ಯೆಗಳಿದ್ದು, ರಾಷ್ಟ್ರೀಯ ಪಕ್ಷಗಳು ಪರಿಹರಿಸುವಲ್ಲಿ ಸೋತಿದೆ. ಹೀಗಾಗಿ ಪ್ರಾದೇಶಿಕ ಪಕ್ಷವನ್ನು ಅಧಿಕಾರಕ್ಕೆ ತರಬೇಕಿದೆ ಅಂತಾ ಅಂದ್ರು.

    ಕಾರವಾರ ತಾಲೂಕಿನಲ್ಲಿ ಮೀನುಗಾರರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಸರ್ಕಾರ ಪ್ರವಾಸೋದ್ಯಮ ಅಭಿವೃದ್ಧಿ ಹೆಸರಿನಲ್ಲಿ ಮೀನುಗಾರರನ್ನು ಬೀದಿಗೆ ತಂದಿದೆ. ಕಾರವಾರದ ಜನರು ಉದ್ಯೋಗಕ್ಕಾಗಿ ಗೋವಾವನ್ನು ಅವಲಂಭಿಸುವಂತಾಗಿದೆ ಎಂದು ರಾಜ್ಯ ಸರ್ಕಾರವನ್ನು ಟೀಕಿಸಿದರು.

    ಈ ತಿಂಗಳ 11ನೇ ತಾರೀಖಿನವರೆಗೆ ಇಡೀ ಕರ್ನಾಟಕದಲ್ಲಿ ಜೆಡಿಎಸ್ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ಪೂಜಾ ಗಾಂಧಿ ತಿಳಿಸಿದ್ದಾರೆ.